RTE Application 2024 : ಆರ್‌ಟಿಇ ಪ್ರವೇಶಕ್ಕೆ ಆಹ್ವಾನ; ಅರ್ಜಿ ಸಲ್ಲಿಕೆಗೆ ಏ.22 ಕೊನೆ ದಿನ - Vistara News

ಶಿಕ್ಷಣ

RTE Application 2024 : ಆರ್‌ಟಿಇ ಪ್ರವೇಶಕ್ಕೆ ಆಹ್ವಾನ; ಅರ್ಜಿ ಸಲ್ಲಿಕೆಗೆ ಏ.22 ಕೊನೆ ದಿನ

RTE Application 2024 : ಆರ್‌ಟಿಇ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದ್ದು, ಏಪ್ರಿಲ್‌ 22ರಂದು ಕೊನೆ ದಿನವಾಗಿದೆ.

VISTARANEWS.COM


on

Applications invited for RTE admissions
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ(RTE) ಅಡಿ ಆರ್‌ಟಿಇ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ಶಾಲಾ ಶಿಕ್ಷಣ ಇಲಾಖೆ ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡಲು ಲಿಂಕ್ ಬಿಡುಗಡೆ (RTE Application 2024) ಮಾಡಲಾಗಿದೆ.

ಏಪ್ರಿಲ್ 22 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮಾ.23 ರಿಂದ ಏ.24ರವರೆಗೆ ಇಐಡಿ ಅರ್ಜಿಗಳ ಸಲ್ಲಿಕೆ ಮತ್ತು ಡೇಟಾ ಪರಿಶೀಲನೆ ಮಾಡಲಾಗುತ್ತದೆ. ಏಪ್ರಿಲ್ 26ರಿಂದ ಅರ್ಜಿ ಪರಿಶೀಲನೆ ಬಳಿಕ ಲಾಟರಿ ಪ್ರಕ್ರಿಯೆಯಲ್ಲಿ ಅರ್ಹರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. 30ರಂದು ಅನ್ಸನ್ ಮೂಲಕ ಮೊದಲ ಸುತ್ತಿನ ಸೀಟು ಹಂಚಿಕೆ ನಡೆಯಲಿದ್ದು, ಮೇ 13 ರೊಳಗೆ ಮೊದಲ ಸುತ್ತಿನಲ್ಲಿ ಸೀಟು ಪಡೆದವರು ಶಾಲೆಗಳಲ್ಲಿ ದಾಖಲಾತಿ ಮಾಡಿಕೊಳ್ಳಬೇಕಿದೆ.

1-8ನೇ ತರಗತಿ ಪ್ರವೇಶಕ್ಕೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಮಕ್ಕಳನ್ನು ಸೇರಿಸಲು ಬಯಸುವ ಪೋಷಕರು ಆರ್‌ಟಿಇ ಕಾಯ್ದೆಯಡಿ ಅರ್ಜಿ ಸಲ್ಲಿಸಬಹುದು. ಇನ್ನೂ ಎಲ್‌ಕೆಜಿಗೆ ಪ್ರವೇಶ ಪಡೆಯುವ ಮಕ್ಕಳಿಗೆ ಕನಿಷ್ಠ ನಾಲ್ಕು ವರ್ಷ ಆಗಿರಬೇಕು. ಒಂದನೇ ತರಗತಿಗೆ ಸೇರಿಸುವ ಮಕ್ಕಳಿಗೆ ಕನಿಷ್ಠ 5 ವರ್ಷ, 5 ತಿಂಗಳು ಹಾಗೂ ಗರಿಷ್ಠ 7 ವರ್ಷ ನಿಗದಿಪಡಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

NEET UG Result 2024 : ಮೊದಲ ರ‍್ಯಾಂಕ್‌ ಪಡೆದ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ಮಂದಿ ನೀಟ್‌ ಟಾಪರ್ಸ್‌

NEET UG result 2024: ಜೂನ್‌ 4ರಂದು ನೀಟ್‌ ಯುಜಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಮೊದಲ ರ‍್ಯಾಂಕ್‌ ಪಡೆದ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ಮಂದಿ ನೀಟ್‌ ಟಾಪರ್ಸ್‌ ಆಗಿದ್ದಾರೆ.

VISTARANEWS.COM


on

By

NEET UG Result 2024
Koo

ಬೆಂಗಳೂರು/ನವದೆಹಲಿ: ಮೇ 5ರಂದು ನಡೆದಿದ್ದ ನೀಟ್‌ ಪರೀಕ್ಷೆಯ (NEET UG 2024) ಫಲಿತಾಂಶ ಜೂ.4ರಂದು ಪ್ರಕಟಗೊಂಡಿದೆ. ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸಿದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಕರ್ನಾಟಕದ ಆರು ವಿದ್ಯಾರ್ಥಿಗಳು ಮೊದಲ ರ‍್ಯಾಂಕ್‌ ಪಡೆದಿದ್ದಾರೆ.

ದೇಶದಲ್ಲಿ ಮೊದಲ ರ‍್ಯಾಂಕ್‌ ಪಡೆದ ಟಾಪ್ 100 ವಿದ್ಯಾರ್ಥಿಗಳ ಪಟ್ಟಿಯಲ್ಲಿ 6 ವಿದ್ಯಾರ್ಥಿಗಳು ಮೊದಲ ಸ್ಥಾನವನ್ನು ಪಡೆದಿದ್ದಾರೆ. ಕರ್ನಾಟಕದ ವಿ.ಕಲ್ಯಾಣ್, ಶ್ಯಾಮ್ ಶ್ರೇಯಸ್ ಜೋಸೆಫ್‌, ಅರ್ಜುನ್ ಕಿಶೋರ್, ಪದ್ಮನಾಭ್ ಮೆನನ್, ಪ್ರಜ್ಞಾ ಪಿ.ಶೆಟ್ಟಿ, ಖುಷಿ ಮಗನೂರ್ ಎಂಬ ವಿದ್ಯಾರ್ಥಿಗಳು ಶೇ.99.98 ಅಂಕಗಳನ್ನು ಗಳಿಸುವ ಮೂಲಕ ಟಾಪರ್ ಸ್ಥಾನದಲ್ಲಿದ್ದಾರೆ.

NEET UG Result 2024 Out of the 100 students who secured the first rank six from Karnataka are NEET toppers
NEET UG Result 2024 Out of the 100 students who secured the first rank six from Karnataka are NEET toppers
NEET UG Result 2024 Out of the 100 students who secured the first rank six from Karnataka are NEET toppers

ಅಂದಹಾಗೇ, ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ಇದನ್ನೂ ಓದಿ: NEET UG Results 2024: ನೀಟ್‌ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಹೀಗೆ ಮಾಡಿ

ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದಿದ್ದ ನೀಟ್ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ಉತ್ತರ ಪತ್ರಿಕೆಗಳ ಮರುಪರಿಶೀಲನೆ ಅಥವಾ ಮರುಮೌಲ್ಯಮಾಪನಕ್ಕೆ ಅವಕಾಶವಿಲ್ಲ ಎನ್ನಲಾಗಿದೆ. ಇನ್ನೂ ನೀಟ್‌ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಮೇ 29 ರಂದು ಬಿಡುಗಡೆ ಮಾಡಲಾಗಿತ್ತು. ಇದಕ್ಕೆ ಆಕ್ಷೇಪಣೆ ಸಲ್ಲಿಸಿದ ಬಳಿಕ ಅಂತಿಮ ಕೀ ಉತ್ತರಗಳನ್ನು ಜೂನ್ 3 ರಂದು ಬಿಡುಗಡೆ ಮಾಡಲಾಗಿತ್ತು. ಈಗಾಗಲೇ ಬಿಡುಗಡೆಯಾಗಿರುವ ಅಂತಿಮ ಕೀ ಉತ್ತರಗಳ ಆಧಾರದ ಮೇಲೆ ನೀಟ್ ಯುಜಿ 2024ರ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

NEET UG Results 2024: ನೀಟ್‌ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಹೀಗೆ ಮಾಡಿ

NEET UG Results 2024 : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದಿದ್ದ ನೀಟ್ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದೆ. ರಿಸ್ಟಲ್‌ ನೋಡಲು ಈ ಲಿಂಕ್‌ ಕ್ಲಿಕ್‌ ಮಾಡಿ.

VISTARANEWS.COM


on

By

NEET UG Results 2024
ಸಾಂದರ್ಭಿಕ ಚಿತ್ರ
Koo

ಬೆಂಗಳೂರು/ನವದೆಹಲಿ: ಈ ಬಾರಿಯ ನೀಟ್‌ ಪರೀಕ್ಷೆಯ (NEET UG 2024) ಫಲಿತಾಂಶ ಜೂ.4ರಂದು ಪ್ರಕಟಗೊಂಡಿದೆ. ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮೇ 5ರಂದು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು ನಡೆಸಿತ್ತು.

ದೇಶದಲ್ಲಿ ಮೊದಲ ರ‍್ಯಾಂಕ್‌ ಪಡೆದ ಟಾಪ್ 100 ವಿದ್ಯಾರ್ಥಿಗಳ ಪಟ್ಟಿಯಲ್ಲಿ 6 ವಿದ್ಯಾರ್ಥಿಗಳು ಮೊದಲ ಸ್ಥಾನವನ್ನು ಪಡೆದಿದ್ದಾರೆ. ಕರ್ನಾಟಕದ ವಿ.ಕಲ್ಯಾಣ್, ಶ್ಯಾಮ್ ಶ್ರೇಯಸ್ ಜೋಸೆಫ್‌, ಅರ್ಜುನ್ ಕಿಶೋರ್, ಪದ್ಮನಾಭ್ ಮೆನನ್, ಪ್ರಜ್ಞಾ ಪಿ.ಶೆಟ್ಟಿ, ಖುಷಿ ಮಗನೂರ್ ಎಂಬ ವಿದ್ಯಾರ್ಥಿಗಳು ಶೇ.99.98 ಅಂಕಗಳನ್ನು ಗಳಿಸುವ ಮೂಲಕ ಟಾಪರ್ ಸ್ಥಾನದಲ್ಲಿದ್ದಾರೆ.

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದಿದ್ದ ನೀಟ್ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ಉತ್ತರ ಪತ್ರಿಕೆಗಳ ಮರುಪರಿಶೀಲನೆ ಅಥವಾ ಮರುಮೌಲ್ಯಮಾಪನಕ್ಕೆ ಅವಕಾಶವಿಲ್ಲ ಎನ್ನಲಾಗಿದೆ. ಇನ್ನೂ ನೀಟ್‌ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಮೇ 29 ರಂದು ಬಿಡುಗಡೆ ಮಾಡಲಾಗಿತ್ತು. ಇದಕ್ಕೆ ಆಕ್ಷೇಪಣೆ ಸಲ್ಲಿಸಿದ ಬಳಿಕ ಅಂತಿಮ ಕೀ ಉತ್ತರಗಳನ್ನು ಜೂನ್ 3 ರಂದು ಬಿಡುಗಡೆ ಮಾಡಲಾಗಿತ್ತು. ಈಗಾಗಲೇ ಬಿಡುಗಡೆಯಾಗಿರುವ ಅಂತಿಮ ಕೀ ಉತ್ತರಗಳ ಆಧಾರದ ಮೇಲೆ ನೀಟ್ ಯುಜಿ 2024ರ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ರಿಸಲ್ಟ್‌ ನೋಡಲು ಹೀಗೆ ಮಾಡಿ

-‌ NTA ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
-ಮುಖಪುಟದಲ್ಲಿ ಲಭ್ಯವಿರುವ ನೀಟ್ ಯುಜಿ ಫಲಿತಾಂಶ 2024 ಲಿಂಕ್ ಅನ್ನು ಕ್ಲಿಕ್ ಮಾಡಿ.
-ಲಾಗಿನ್ ವಿವರಗಳನ್ನು ನಮೂದಿಸಿ ಮತ್ತು ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ.
-ನಿಮ್ಮ ಫಲಿತಾಂಶವನ್ನು ಪರಿಶೀಲಿಸಿ ಮತ್ತು ಪುಟವನ್ನು ಡೌನ್‌ಲೋಡ್‌ ಮಾಡಿಕೊಳ್ಳಿ. ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಇರಿಸಿಕೊಳ್ಳಿ

ಇದನ್ನೂ ಓದಿ: UGCET 2024: ಸಿಇಟಿ ಅಪ್‌ಡೇಟ್‌; ಜೂ.10ರಿಂದ ವಿಕಲಚೇತನ ಅಭ್ಯರ್ಥಿಗಳಿಗೆ ವೈದ್ಯಕೀಯ ತಪಾಸಣೆ

ನೀಟ್ ಫಲಿತಾಂಶದ ಬಳಿಕ ಎಂಜಿನಿಯರ್ ಸೀಟು ಹಂಚಿಕೆ; 1.24 ಲಕ್ಷ ಸೀಟುಗಳು ಲಭ್ಯ, ಆನ್ ಲೈನ್ ಪ್ರಕ್ರಿಯೆ

ಬೆಂಗಳೂರು: ನೀಟ್‌ ಪರೀಕ್ಷೆಯ ಫಲಿತಾಂಶದ ಬಳಿಕವೇ ಎಂಜಿನಿಯರ್‌ ಸೀಟು ಹಂಚಿಕೆ ಮಾಡಲಾಗುವುದು ಎಂದು ಕೆಇಎ ಕಾರ್ಯ ನಿವಾರ್ಹಕ ನಿರ್ದೇಶಕ ಪ್ರಸನ್ನ (Education News) ತಿಳಿಸಿದ್ದಾರೆ. ನೀಟ್ ಫಲಿತಾಂಶಕ್ಕೂ ಮುನ್ನವೇ ಎಂಜಿನಿಯರಿಂಗ್ ಸೀಟ್ ಹಂಚಿಕೆ ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಹೀಗಾಗಿ ಮೊದಲು ಮೆಡಿಕಲ್ ಸೀಟ್ ಹಂಚಿಕೆ ಮಾಡಿ ನಂತರ ಎಂಜಿನಿಯರಿಂಗ್ ಸೀಟ್ ಹಂಚಿಕೆ ಮಾಡಲಾಗುವುದು ಎಂದರು.

ಬೇರೆ ಬೇರೆ ಕಾಲೇಜಿನಲ್ಲಿ ಈಗಾಗಲೇ ದಾಖಲಾತಿ ಪ್ರಕ್ರಿಯೆ ಆರಂಭವಾಗಿದೆ ಎಂಬ ದೂರಿನ ಕುರಿತು ಪ್ರತಿಕ್ರಿಯಿಸಿದ ಅವರು, ಸಿಇಟಿ ಪರೀಕ್ಷೆಯಲ್ಲಿ ಒಳ್ಳೆಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸೀಟ್ ಸಿಗುತ್ತದೆ. ಸೀಟ್ ಸಿಗುವುದಿಲ್ಲ ಎಂಬ ಆತಂಕದಲ್ಲಿ ಡೋನೇಷನ್ ಕೊಟ್ಟು ಅಡ್ಮಿಶನ್ ಮಾಡಿಸಬೇಡಿ. ಒಳ್ಳೆಯ ರ‍್ಯಾಂಕ್‌ ಪಡೆದವರಿಗೆ ಒಳ್ಳೆಯ ಕಾಲೇಜು ಸಿಗುತ್ತದೆ ಎಂದರು.

ಮತ್ತೊಂದು ಅವಕಾಶ


ನೀಟ್‌ ಪರೀಕ್ಷೆ ತೆಗೆದುಕೊಂಡಿದ್ದರೂ ರಾಜ್ಯದ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಬೇಕಾದರೆ ಕೆಇಎಗೆ ಅರ್ಜಿ ಸಲ್ಲಿಸುವುದು ಕಡ್ಡಾಯ. ಆದರೆ, ಕೆಲವರು ಈ ರೀತಿ ಅರ್ಜಿ ಸಲ್ಲಿಸಿಲ್ಲ ಎಂದು ಹೇಳುತ್ತಿದ್ದು, ಅಂತಹವರಿಗೆ ಅನುಕೂಲ ಮಾಡಲು ನೀಟ್‌ ಫಲಿತಾಂಶದ ನಂತರ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದರು.

ಇದನ್ನೂ ಓದಿ: KCET Result 2024: ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಲಿಂಕ್‌ ಇಲ್ಲಿದೆ

1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯ

ಇನ್ನೂ ರಾಜ್ಯದಲ್ಲಿ 1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯವಿದೆ. ರ‍್ಯಾಂಕ್‌ ಆಧಾರದ ಮೇಲೆ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ. ಇನ್ನೂ ಕಾಲೇಜು ಶುಲ್ಕವನ್ನು ನಿಗದಿ ಮಾಡಿಲ್ಲ. ಕಳೆದ ವರ್ಷ 40,110 ರೂಪಾಯಿ ಶುಲ್ಕ ಸರ್ಕಾರಿ ಕಾಲೇಜುಗಳಿಗೆ ಇತ್ತು. ಪ್ರಸಕ್ತ ಸಾಲಿನ ಸೀಟ್ ಮ್ಯಾಟ್ರಿಕ್ ಇನ್ನೂ ಸರ್ಕಾರದಿಂದ ಬಂದಿಲ್ಲ. ಬಂದ ನಂತರ ಕಾಲೇಜು/ಕೋರ್ಸ್ ವಾರ ಸೀಟ್ ಮ್ಯಾಟ್ರಿಕ್ಸ್ ಅನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು. ಅದೇ ರೀತಿ ಕೋರ್ಸ್ ಗಳ ಶುಲ್ಕ ನಿಗದಿ ಸಂಬಂಧ ಒಂದು ಸಭೆ ನಡೆದಿದ್ದು, ಸದ್ಯದಲ್ಲೇ ಆ ಕುರಿತು ಸರ್ಕಾರದ ಮಟ್ಟದಲ್ಲಿ ತೀರ್ಮಾನವಾಗಲಿದೆ ಎಂದರು.

ವೃತ್ತಿಪರ ಕೋರ್ಸ್‌ಗಳಲ್ಲಿ ಸರ್ಕಾರಿ ಕೋಟಾದ ಸೀಟುಗಳನ್ನು ಕೆಇಎ ಮೂಲಕವೇ ಹಂಚಿಕೆ ಮಾಡಲಾಗುತ್ತದೆ. ಈ ವಿಷಯದಲ್ಲಿ ಗೊಂದಲ ಬೇಡ. ಫಲಿತಾಂಶ ತಡ ಆಯಿತು, ಹೀಗಾಗಿ ಎಲ್ಲ ಸೀಟುಗಳನ್ನು ಖಾಸಗಿ ಕಾಲೇಜು ಆಡಳಿತ ಮಂಡಳಿಗಳು ಹೆಚ್ಚಿನ ಡೊನೇಷ್‌ ಪಡೆದು ಭರ್ತಿ ಮಾಡಿಕೊಳ್ಳುತ್ತಿವೆ ಎಂದು ಕೆಲವರು ಗೊಂದಲ ಸೃಷ್ಟಿಸುತ್ತಿದ್ದು, ಅಂತಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಪ್ರಸನ್ನ ಮನವಿ ಮಾಡಿದರು. ಕೆಇಎ ಮೂಲಕವೇ ಮೆರಿಟ್‌ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುತ್ತದೆ. ಹೀಗಾಗಿ ಇಂತಹ ಸುಳ್ಳುಸುದ್ದಿಗಳಿಗೆ ಪೋಷಕರಾಗಲಿ/ ವಿದ್ಯಾರ್ಥಿಗಳಾಗಲಿ ಗಮನ ನೀಡಬಾರದು ಎಂದು ಅವರು ಹೇಳಿದರು.

ಆನ್‌ಲೈನ್‌ನಲ್ಲೇ ವೆರಿಫಿಕೇಶನ್‌

ಈ ಬಾರಿ ವಿಶೇಷ ಮಕ್ಕಳ ವೈದ್ಯಕೀಯ ತಪಾಸಣೆ ಬಿಟ್ಟರೆ ಬಹುತೇಕ ಎಲ್ಲ ದಾಖಲೆಗಳ ಪರಿಶೀಲನೆ ಆನ್ ಲೈನ್ ನಲ್ಲಿ ನಡೆಯುತ್ತದೆ. ಯಾರೂ ಕೆಇಎ ಕಚೇರಿಗೆ ಬರುವ ಅಗತ್ಯ ಇರುವುದಿಲ್ಲ. ಎಲ್ಲ ಪ್ರಕ್ರಿಯೆಗಳು ಆನ್ ಲೈನ್‌ನಲ್ಲೆ ನಡೆಯಲಿದೆ. ಶೇ.100 ರಷ್ಟು ಡಾಕ್ಯುಮೆಂಟ್ ಪರಿಶೀಲನೆ ಆನ್‌ಲೈನ್‌ನಲ್ಲಿ ಮಾಡಲಾಗುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳು ಕೆಇಎ ಮುಂದೆ ಬಂದು ಕ್ಯೂ ನಿಲ್ಲುವ ಅವಶ್ಯಕತೆ ಇಲ್ಲ. ಎಲ್ಲಾ ದಾಖಲಾತಿಗಳನ್ನು ಆನ್‌ಲೈನ್‌ನಲ್ಲೇ ಪರಿಶೀಲನೆ ನಡೆಯಲಿದೆ ಎಂದರು. ನಿನ್ನೆ ಶನಿವಾರ (ಜೂ.1) ಸಂಜೆ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಹಠಾತ್ ಪ್ರಕಟಿಸಿದ ಬೆನ್ನಲ್ಲೇ ಭಾನುವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನ ಸುದ್ದಿಗೋಷ್ಠಿ ನಡೆಸಿ ಎಲ್ಲ ಮಾಹಿತಿಯನ್ನು ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

UGCET 2024: ಸಿಇಟಿ ಅಪ್‌ಡೇಟ್‌; ಜೂ.10ರಿಂದ ವಿಕಲಚೇತನ ಅಭ್ಯರ್ಥಿಗಳಿಗೆ ವೈದ್ಯಕೀಯ ತಪಾಸಣೆ

UGCET 2024 ಸಿಇಟಿ ವಿಕಲಚೇತನ ಅಭ್ಯರ್ಥಿಗಳಿಗೆ ಜೂ 10 ರಿಂದ ವೈದ್ಯಕೀಯ ತಪಾಸಣೆ ನಡೆಯಲಿದೆ. ಅಭ್ಯರ್ಥಿಗಳು ತಮಗೆ ನಿಗದಿ ಮಾಡಿದ ದಿನದಂದು ಬಂದು ತಪಾಸಣೆಗೆ ಒಳಪಡಬೇಕಿದೆ. ಇನ್ನೂ ವೈದ್ಯಕೀಯ ಸಮಿತಿಯು ಪರಿಶೀಲಿಸಿ ನೀಡುವ ವಿಕಲಚೇತನರ ಅರ್ಹತೆಯು ವೈದ್ಯಕೀಯ ಸಮಿತಿಯ ನಿರ್ಧಾರವೇ ಅಂತಿಮವಾಗಿರಲಿದೆ.

VISTARANEWS.COM


on

By

UGCET 2024
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್‌ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳಿಗೆ ವಿಕಲಚೇತನಾ ಕೋಟಾದಲ್ಲಿ ಮೀಸಲಾತಿ ಕ್ಲೇಮ್‌ ಮಾಡಿರುವ ಅಭ್ಯರ್ಥಿಗಳಿಗೆ (UGCET 2024) ಜೂನ್‌ 10 ರಿಂದ 12ರವರೆಗೆ ವೈದ್ಯಕೀಯ ತಪಾಸಣೆಯನ್ನು (Medical Test) ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಆಯೋಜಿಸಿದೆ. ಅಭ್ಯರ್ಥಿಗಳು ಬೆಳಗ್ಗೆ 9:30ಕ್ಕೆ ವರದಿ ಮಾಡಿಕೊಳ್ಳಬೇಕು. 10 ಗಂಟೆಯಿಂದ ವೈದ್ಯಕೀಯ ತಪಾಸಣೆ ನಡೆಯಲಿದೆ.

ಬೆಂಗಳೂರಿನ ಮಲ್ಲೇಶ್ವರದ ಕೆಇಎ ಕಚೇರಿಯಲ್ಲಿ ತಜ್ಞ ವೈದ್ಯರು ಅಭ್ಯರ್ಥಿಗಳನ್ನು ತಪಾಸಣೆ ಮಾಡಲಿದ್ದಾರೆ. ಸಿಇಟಿಗೆ ಅರ್ಜಿ ಸಲ್ಲಿಸುವಾಗ ಒಟ್ಟು 783 ಮಂದಿ ವಿಕಲಚೇತನರ ಕೋಟಾದಲ್ಲಿ ಮೀಸಲಾತಿ ಕ್ಲೇಮ್‌ ಮಾಡಿದ್ದು, ಅಷ್ಟೂ ಮಂದಿಗೆ ಮೂರು ದಿನಗಳ ಕಾಲ ತಪಾಸಣೆ ನಡೆಸಲಾಗುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್‌.ಪ್ರಸನ್ನ ತಿಳಿಸಿದ್ದಾರೆ.

ತಪಾಸಣೆಗೆ ಹಾಜರಾಗಬೇಕಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ತಮಗೆ ಸೂಚಿಸಿದ ದಿನಾಂಕಗಳಂದು ಖುದ್ದು ವೈದ್ಯಕೀಯ ತಪಾಸಣೆಗೆ ಬರಬೇಕು. ವೈದ್ಯಕೀಯ ಸಮಿತಿಯು ಪರಿಶೀಲಿಸಿ ನೀಡುವ ವಿಕಲಚೇತನರ ಅರ್ಹತೆ ವಿಷಯದಲ್ಲಿ ವೈದ್ಯಕೀಯ ಸಮಿತಿಯ ನಿರ್ಧಾರವೇ ಅಂತಿಮವಾಗಿರಲಿದೆ.

UGCET 2024

ತಪಾಸಣೆ ವೇಳೆ ಅಭ್ಯರ್ಥಿಗಳು ಏನೆಲ್ಲ ತರಬೇಕು?

ಯುಜಿಸಿಇಟಿ ಅರ್ಜಿಯ ಪ್ರತಿ, ಪ್ರವೇಶ ಪತ್ರ, ಅಭ್ಯರ್ಥಿಯ ಭಾವಚಿತ್ರ ಇರುವ ಗುರುತಿನ ಚೀಟಿ, ವೈದ್ಯಕೀಯ ಪ್ರಮಾಣಪತ್ರ, ಕಿವುಡುತನದ ಸಮಸ್ಯೆ ಇರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಅಖಿಲ ಭಾರತ ವಾಕ್‌ ಮತ್ತು ಶ್ರವಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರಗಳನ್ನು ತಪಾಸಣೆ ಸಂದರ್ಭದಲ್ಲಿ ತಂದಿರಬೇಕು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Uttara Kannada News: ವಿಶ್ವದರ್ಶನ ಕಾಲೇಜಿನಲ್ಲಿ ಪ್ರಥಮ ಪಿಯು ತರಗತಿ ಪ್ರಾರಂಭೋತ್ಸವ

Uttara Kannada News: ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಕಾಲೇಜಿನಲ್ಲಿ ಪ್ರಥಮ ಪಿಯು ತರಗತಿ ಪ್ರಾರಂಭೋತ್ಸವ ಕಾರ್ಯಕ್ರಮ ಸೋಮವಾರ ನಡೆಯಿತು.

VISTARANEWS.COM


on

First PU Class Commencement Programme at Vishwadarshana College
Koo

ಯಲ್ಲಾಪುರ: ಪಟ್ಟಣದ ವಿಶ್ವದರ್ಶನ ಕಾಲೇಜಿನಲ್ಲಿ ಪ್ರಥಮ ಪಿಯು ತರಗತಿ ಪ್ರಾರಂಭೋತ್ಸವ ಕಾರ್ಯಕ್ರಮ ಸೋಮವಾರ (Uttara Kannada News) ನಡೆಯಿತು.

ವಿಶ್ವದರ್ಶನ ಶಿಕ್ಷಣ ಸಮೂಹದ ಸಿಇಒ ಅಜಯ್ ಭಾರತೀಯ ಕಾರ್ಯಕ್ರಮದಲ್ಲಿ ಮಾತನಾಡಿ, ನಾವು ಮಾಡುವ ಕಾರ್ಯ ಸ್ವಹಿತದ ಜತೆಗೆ ದೇಶದ ಹಿತವನ್ನು ಸಾಧಿಸುವಂತಿರಬೇಕು. ಶಿಕ್ಷಣ ನೀಡಬೇಕಾದ, ಪಡೆಯಬೇಕಾದ ಎಲ್ಲರೂ ರಾಷ್ಟ್ರದ ಘನತೆ, ಗೌರವವನ್ನು ಕಾಪಾಡುವ ಆಲೋಚನೆಯನ್ನು ಸದಾ ಮಾಡುತ್ತಿರಬೇಕು ಎಂದು ಹೇಳಿದರು.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಜೂ. 5ರಂದು ಗ್ರಂಥ ಲೋಕಾರ್ಪಣೆ, ಪ್ರಶಸ್ತಿ ಪ್ರದಾನ

ಕಾಲೇಜಿನ ಪ್ರಾಚಾರ್ಯ ಡಿ.ಕೆ. ಗಾಂವ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳಿಗಾಗಿ ಸಂಪತ್ತು ಮಾಡುವುದಕ್ಕಿಂತ ಮಕ್ಕಳನ್ನೇ ಸಂಪತ್ತಾಗಿಸುವುದು ಸೂಕ್ತ. ಜ್ಞಾನ ಸಂಪತ್ತಿನಿಂದ ಮಕ್ಕಳನ್ನು ಶ್ರೀಮಂತರಾಗಿಸುವ ಮಾರ್ಗವೇ ಶ್ರೇಷ್ಠವಾದದ್ದು ಆ ಕಾರ್ಯವನ್ನು ವಿಶ್ವದರ್ಶನ ಮಾಡುತ್ತಿದೆ‌ ಎಂದರು.

ಅದಕ್ಕಾಗಿ ನಮ್ಮ ಪಿಯು ಕಾಲೇಜು ಉತ್ತಮ ಮೂಲಸೌಕರ್ಯ ಮತ್ತು ನುರಿತ ಉಪನ್ಯಾಸಕ ವರ್ಗವನ್ನು ಹೊಂದಿದೆ ಎಂದು ಹೇಳಿದರಲ್ಲದೇ, ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಕಾಲೇಜಿನ ಉಪನ್ಯಾಸಕ ವರ್ಗವನ್ನು ಪರಿಚಯಿಸಿ, ಕಾಲೇಜಿನ ವಿಶೇಷತೆಗಳ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ಮಾಜಿ ವಿದ್ಯಾರ್ಥಿಗಳಾದ ಅಪೂರ್ವ ಹಾಗೂ ಶ್ರೀಗೌರಿ ಭಟ್, ಕಾಲೇಜಿನಲ್ಲಿ ತಮ್ಮ ಅನುಭವ ಜೀವನಪೂರ್ತಿ ಸ್ಮರಿಸುವಂತದ್ದು ಎಂದು ಅನಿಸಿಕೆ ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 42 ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ, ಗೌರವಿಸಲಾಯಿತು.

ಇದನ್ನೂ ಓದಿ: Samsung: ಸ್ಯಾಮ್‌ಸಂಗ್‌ನ ʼಬಿಗ್‌ ಟಿವಿ ಡೇಸ್‌ʼ ಸೇಲ್‌; ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್‌!

ಶ್ರಾವ್ಯ ಪ್ರಾರ್ಥಿಸಿದಳು. ಉಪನ್ಯಾಸಕ ಗುರುರಾಜ್ ಭಟ್ ನಿರ್ವಹಿಸಿದರು. ಉಪ ಪ್ರಾಂಶುಪಾಲ ನಾಗರಾಜ ಹೆಗಡೆ ವಂದಿಸಿದರು.

Continue Reading
Advertisement
Anna Lezhneva
ರಾಜಕೀಯ2 hours ago

Anna Lezhneva: ಚುನಾವಣೆ ಗೆದ್ದು ಬಂದ ಪವನ್‌ಗೆ ತಿಲಕವಿಟ್ಟು ಸ್ವಾಗತಿಸಿದ ಈ ವಿದೇಶಿ ಮಹಿಳೆ ಯಾರು?

BJP celebration about lok sabha election results
ಕರ್ನಾಟಕ2 hours ago

R Ashok: ಸೋಲಿನ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್‌. ಅಶೋಕ್‌ ಆಗ್ರಹ

MLC TA Sharavana latest statement about lok sabha election results 2024
ಕರ್ನಾಟಕ2 hours ago

TA Sharavana: ಫಲಿತಾಂಶದಿಂದ ಬಲಿಷ್ಠವಾದ ಜೆಡಿಎಸ್‌: ಟಿ.ಎ.ಶರವಣ

Election Results 2024
ಪ್ರಮುಖ ಸುದ್ದಿ2 hours ago

Election Results 2024: ಬಿಜೆಪಿ ಹಿನ್ನಡೆ ನಡುವೆಯೂ ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಧಾನಿ ಆಗುವುದು ಖಚಿತ!

Election Results 2024
ಪ್ರಮುಖ ಸುದ್ದಿ2 hours ago

Election Results 2024: ಲೋಕಸಭೆ ಚುನಾವಣೆಯ ರಾಜ್ಯವಾರು ಬಲಾಬಲ ಹೀಗಿದೆ

Assault Case
ಕರ್ನಾಟಕ3 hours ago

Assault Case: ಬೆಳ್ತಂಗಡಿಯಲ್ಲಿ ಬಿಜೆಪಿ ಮುಖಂಡನ ಮೇಲೆ ತಲ್ವಾರ್‌ನಿಂದ ಹಲ್ಲೆ; ಸುರಪುರದಲ್ಲಿ ರಾಜುಗೌಡ ಅಳಿಯನ ಕಾರಿನ ಮೇಲೆ ಕಲ್ಲೆಸೆತ

Narendra Modi Election
ದೇಶ3 hours ago

Narendra Modi Election: ಚುನಾವಣೆ ಫಲಿತಾಂಶದ ಬಳಿಕ ತಾಯಿಯ ನೆನೆದು ಭಾವುಕರಾದ ಮೋದಿ

Karnataka Election Results 2024
ಕರ್ನಾಟಕ3 hours ago

Karnataka Election Results 2024: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿ ಆಗಿದ್ರೆ ಕಾಂಗ್ರೆಸ್‌ ಅಧಿಕಾರಕ್ಕೆ ಬರ್ತಿರಲಿಲ್ಲ: ಎಚ್‌ಡಿಕೆ

Novak Djokovic
ಕ್ರೀಡೆ3 hours ago

Novak Djokovic: ಫ್ರೆಂಚ್ ಓಪನ್‌ ಟೂರ್ನಿಯಿಂದ ಹಿಂದೆ ಸರಿದ ಜೊಕೊವಿಕ್

Election Results 2024
Lok Sabha Election 20244 hours ago

Election Results 2024: ತ.ನಾಡಿನಲ್ಲಿ ಪೈಪೋಟಿ ನೀಡಿ ಸೋತ ಅಣ್ಣಾಮಲೈ; ಬಿಜೆಪಿ ಮತ ಪ್ರಮಾಣ ಶೇ. 3.57ರಿಂದ 11.04ಕ್ಕೆ ಜಿಗಿತ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ18 hours ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 day ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು3 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌