SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ - Vistara News

ಶಿಕ್ಷಣ

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Result 2024: ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್‌ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ವಿದ್ಯಾರ್ಥಿ ಹಿತದೃಷ್ಟಿಯಿಂದ ಗ್ರೇಸ್‌ ಮಾರ್ಕ್ಸ್‌ ನೀಡಿದೆ ಎನ್ನಲಾಗಿದೆ. ಒಟ್ಟು 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್‌ ಸಿಕ್ಕಿದೆ. ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. ಉಡುಪಿ ಜಿಲ್ಲೆ ಕಳೆದ ಬಾರಿ 14ಕ್ಕೆ ಸ್ಥಾನದಲ್ಲಿತ್ತು, ಆದರೆ, ಈ ಬಾರಿ ಶೇ.94ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನವನ್ನು ಗಳಿಸಿದೆ. ದಕ್ಷಿಣ ಕನ್ನಡ ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಗಳಿಸಿದೆ. ಉಡುಪಿ ಜಿಲ್ಲೆ ಕಳೆದ ಬಾರಿ 14ಕ್ಕೆ ಸ್ಥಾನದಲ್ಲಿತ್ತು, ಆದರೆ, ಈ ಬಾರಿ ಶೇ.94ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನವನ್ನು ಗಳಿಸಿದೆ. ದಕ್ಷಿಣ ಕನ್ನಡ ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಗಳಿಸಿದೆ.

VISTARANEWS.COM


on

SSLC Result 2024 SSLC students get 20 percent grace marks but result is very poor
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಶಿಕ್ಷಣ ಇಲಾಖೆ ಈ ಬಾರಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟಿದೆ. ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಡಲಾಗಿದೆ.

ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್‌ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ವಿದ್ಯಾರ್ಥಿ ಹಿತದೃಷ್ಟಿಯಿಂದ ಗ್ರೇಸ್‌ ಮಾರ್ಕ್ಸ್‌ ನೀಡಿದೆ ಎನ್ನಲಾಗಿದೆ. ಒಟ್ಟು 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್‌ ಸಿಕ್ಕಿದೆ.

ವೆಬ್‌ ಕಾಸ್ಟಿಂಗ್‌ನಲ್ಲಿ ನಡೆದ ಪರೀಕ್ಷೆ

ಪ್ರಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿದೆ. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಆದರೆ, ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. ಮೊದಲ ಬಾರಿಗೆ ವೆಬ್‌ ಕಾಸ್ಟಿಂಗ್ ವಿಧಾನವನ್ನು ಪರಿಚಯಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಡಿಮೆಯಾಗಿರುವ ಫಲಿತಾಂಶವನ್ನು ಉತ್ತಮ ಪಡಿಸಲು ಸರ್ಕಾರ ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ, ಒಂದು ಬಾರಿಯ ಕ್ರಮವಾಗಿ, 2024ರ ಎಲ್ಲ 3 ಎಸ್ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಎಲ್ಲ ವಿಷಯಗಳಲ್ಲಿ ನೀಡುವ ಕೃಪಾಂಕಗಳನ್ನು ಆಕರ್ಷಿಸಲು ಪಡೆಯಬೇಕಾದ ಅರ್ಹ ಅಂಕಗಳನ್ನು ಶೇ. 35 ರಿಂದ ಶೇ. 25ಕ್ಕೆ ಇಳಿಸಲಾಗಿದೆ ಮತ್ತು ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು, ಮೇಲಿನ ಕೋಷ್ಟಕದಲ್ಲಿನಂತೆ, 73.40% ಆಗಿದೆ. ಮುಂಬರುವ ವರ್ಷಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೂತನ ವ್ಯವಸ್ಥೆಗೆ ಉತ್ತಮವಾಗಿ ಹೊಂದಿಕೊಳ್ಳುವುದರಿಂದ ಫಲಿತಾಂಶ ವೃದ್ಧಿಯ ಅಗತ್ಯವಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿದೆ.

ಫಸ್ಟ್‌ ಬೆಂಚ್‌ಗೆ ಬಂದ ಉಡುಪಿ; ಲಾಸ್ಟ್‌ ಬೆಂಚ್‌ನಲ್ಲೇ ಉಳಿದ ಯಾದಗಿರಿ!

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49% ರಷ್ಟು ಫಲಿತಾಂಶ ಕುಸಿತವಾಗಿದೆ. ಕಳೆದ ವರ್ಷ ಮೊದಲ ಸ್ಥಾನವನ್ನು ಚಿತ್ರದುರ್ಗ, ಎರಡನೇ ಸ್ಥಾನವನ್ನು ಮಂಡ್ಯ , ಮೂರನೇ ಸ್ಥಾನವನ್ನು ಹಾಸನ ಹಾಗೂ ಕೊನೆ ಸ್ಥಾನವನ್ನು ಯಾದಗಿರಿ ಪಡೆದಿತ್ತು. ಈ ವರ್ಷವೂ ಫಲಿತಾಂಶದಲ್ಲಿ ಯಾದಗಿರಿಯು ಕೊನೆ ಸ್ಥಾನವನ್ನೇ ಗಳಿಸಿದ್ದು, ಶೇಕಡಾವಾರು 50.59ರಷ್ಟು ಫಲಿತಾಂಶ ಬಂದಿದೆ. ಇನ್ನೂ ಉಡುಪಿ ಜಿಲ್ಲೆ ಕಳೆದ ಬಾರಿ 14ಕ್ಕೆ ಸ್ಥಾನದಲ್ಲಿತ್ತು, ಆದರೆ, ಈ ಬಾರಿ ಶೇ.94ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನವನ್ನು ಗಳಿಸಿದೆ. ದಕ್ಷಿಣ ಕನ್ನಡ ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಗಳಿಸಿದೆ.

ಜಿಲ್ಲೆಗಳ ಶೇಕಡಾವಾರು ಫಲಿತಾಂಶ ಇಂತಿದೆ

1) ಉಡುಪಿ- 94%
2) ದಕ್ಷಿಣ ಕನ್ನಡ-92.12%
3) ಶಿವಮೊಗ್ಗ -88.67%
4) ಕೊಡಗು- 88.67%
5) ಉತ್ತರ ಕನ್ನಡ-86.54%
6) ಹಾಸನ-86.28%
7) ಮೈಸೂರು-85.5%
8) ಶಿರಸಿ-84.64%
9)ಬೆಂಗಳೂರು ಗ್ರಾಮಾಂತರ-83.67%
10) ಚಿಕ್ಕಮಗಳೂರು-83.39%
11) ವಿಜಯಪುರ- 79.82%
12) ಬೆಂಗಳೂರು ದಕ್ಷಿಣ-79%
13) ಬಾಗಲಕೋಟೆ-77.92%
14)ಬೆಂಗಳೂರು ಉತ್ತರ- 77.09%
15) ಹಾವೇರಿ-75.85%
16) ತುಮಕೂರು-75.16%
17)ಗದಗ- 74.76%
18)ಚಿಕ್ಕಬಳ್ಳಾಪುರ- 73.61%
19)ಮಂಡ್ಯ-73.59%
20) ಕೋಲಾರ-73.57%
21)ಚಿತ್ರದುರ್ಗ-72.85%
22) ಧಾರವಾಡ-72.67%
23) ದಾವಣಗೆರೆ- 72.48%
24) ಚಾಮರಾಜನಗರ-71.59%
25) ಚಿಕ್ಕೋಡಿ-69.82%
26) ರಾಮನಗರ-69.53%
27) ವಿಜಯನಗರ-65.61%
28) ಬಳ್ಳಾರಿ-64.99%
29) ಬೆಳಗಾವಿ-64.93%
30) ಮಧುಗಿರಿ-62.44%
31) ರಾಯಚೂರು- 61.2%
32) ಕೊಪ್ಪಳ- 61.16%
33) ಬೀದರ್‌- 57.52%
34) ಕಲಬುರಗಿ- 53.04%
35) ಯಾದಗಿರಿ- 50.59%

ಮಾಧ್ಯಮವಾರು ಫಲಿತಾಂಶ

ಕನ್ನಡ – 69.34%
ಆಂಗ್ಲ – 88.29%
ಉರ್ದು – 63.49%
ಮರಾಠಿ – 69.32%
ತೆಲುಗು – 75.59%

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ವಿವರ

625ಕ್ಕೆ 625 ಅಂಕವನ್ನು ಒಬ್ಬ ವಿದ್ಯಾರ್ಥಿ ಮಾತ್ರ ಪಡೆದುಕೊಂಡಿದ್ದಾರೆ. 624 ಅಂಕಗಳನ್ನು 7 ಮಂದಿ, 623 ಅಂಕಗಳನ್ನು 14 ಮಂದಿ ಹಾಗೂ 622 ಅಂಕಗಳನ್ನು 21 ಮಂದಿ, 621 ಅಂಕಗಳನ್ನು 44 ಮಂದಿ, 620 ಅಂಕಗಳನ್ನು 64 ಮಂದಿ ಅಂಕಗಳನ್ನು ಪಡೆದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ನೀಟ್‌ ಪರೀಕ್ಷೆ ರದ್ದು: ಕೇಂದ್ರ ಸರ್ಕಾರವೇ ಹೊಣೆ- ಡಾ.ಎಂ.ಸಿ.ಸುಧಾಕರ್‌

VISTARANEWS.COM


on

ನೀಟ್ ಪರೀಕ್ಷೆ ರದ್ದು ವಿಚಾರದಲ್ಲಿ ಕೇಂದ್ರ ಸರ್ಕಾರವೇ ಹೊಣೆ ಹೊರಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್‌ ಕಿಡಿಕಾರಿದ್ದಾರೆ.

ಶ್ರಮವಹಿಸಿ ವಿದ್ಯಾರ್ಥಿಗಳು ಬರೆದಿದ್ದ ನೀಟ್‌ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ. ಇದರ ಸಂಪೂರ್ಣ ಹೊರೆಯನ್ನು ನೇರವಾಗಿ ಕೇಂದ್ರ ಸರ್ಕಾರ ಹೊರಬೇಕು ಎಂದಿದ್ದಾರೆ.
ವಿದ್ಯಾರ್ಥಿಗಳು ಕಷ್ಟಪಟ್ಟು ಪರೀಕ್ಷೆ ಬರೆದಿದ್ದು, ಅವರ ಬಾಳಲ್ಲಿ ಯಾರೂ ಚೆಲ್ಲಾಟವಾಡಬಾರದು. ನೀಟ್‌ ಪರೀಕ್ಷೆ ವೈಫಲ್ಯದ ಕುರಿತು ಬಿಜೆಪಿ ನಾಯಕರು ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.
ಎನ್‌ಟಿಎ ಸಾಕಷ್ಟು ಬಾರಿ ನೀಟ್‌ ಪರೀಕ್ಷೆ ನಡೆಸಲು ವಿಫಲವಾಗಿದ್ದು, ಅಯಾ ರಾಜ್ಯಗಳಿಗೆ ವೈದ್ಯಕೀಯ ಪ್ರವೇಶ ಪರೀಕ್ಷೆ ‌ನಡೆಸಲು ಅವಕಾಶ ‌ಮಾಡಿಕೊಡಬೇಕು. ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರ ಭವಿಷ್ಯದ ಜೊತೆ ಚೆಲ್ಲಾಟವಾಡಬಾರದು. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರು, ಸಂಸದ ತೇಜಸ್ವಿ ಸೂರ್ಯ ಈ ಬಗ್ಗೆ ಮಾತನಾಡಬೇಕು. ಜೊತೆಗೆ, ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಸಚಿವ ಸುಧಾಕರ್ ಆಗ್ರಹಿಸಿದ್ದಾರೆ.

Continue Reading

Latest

ಪ್ರಶ್ನೆ ಪತ್ರಿಕೆ ಸೋರಿಕೆ : ನೀಟ್‌ ಪರೀಕ್ಷೆ ರದ್ದು, ಮರುಪರೀಕ್ಷೆಗೆ ಆದೇಶ

VISTARANEWS.COM


on

ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ NTA 2026ನೇ ಸಾಲಿನ ನೀಟ್‌-ಯುಜಿ, ಪರೀಕ್ಷೆಯನ್ನು ರದ್ದುಗೊಳಿಸಿದೆ.
ಮೇ ಮೂರರಂದು ದೇಶಾದ್ಯಂತ ನೀಟ್‌ ಪರೀಕ್ಷೆ ನಡೆದಿತ್ತು. ರಾಜಾಸ್ಥಾನದಲ್ಲಿ ನೀಟ್‌ ಪ್ರಶ್ನೆ ಪತ್ರಿಕೆಗಳು ಲೀಕ್‌ ಆದ ಹಿನ್ನೆಲೆಯಲ್ಲಿ ಎನ್‌ಟಿಎ ಈ ಆದೇಶ ಹೊರಡಿಸಿದೆ. ಪ್ರಶ್ನೆ ಪತ್ರಿಕೆ ಲೀಕ್‌ ಆಗಿರುವುದನ್ನು ಎನ್‌ಟಿಎ ಸೇರಿ ವಿವಿಧ ಏಜೆನ್ಸಿಗಳು ದೃಢಪಡಿಸಿರುವ ಹಿನ್ನೆಲೆಯಲ್ಲಿ ಎನ್‌ಟಿಎ ನೀಟ್‌-ಯುಜಿ ಪರೀಕ್ಷೆಯನ್ನು ರದ್ದು ಪಡಿಸಿದೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ – ಎನ್‌ಟಿಎ ಮತ್ತೊಮ್ಮೆ ನೀಟ್‌ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದು, ಸದ್ಯದಲ್ಲೇ ಅದರ ದಿನಾಂಕ ಪ್ರಕಟಿಸಲಿದೆ. ಇದೇ ವೇಳೆ, ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರನ್ನು ಪತ್ತೆ ಹಚ್ಚಲು ಸರ್ಕಾರ ನಿರ್ಧರಿಸಿದೆ. ಹಾಗಾಗಿ, ಸಿಬಿಐ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸಲಿದೆ.
ಮೇ 3ರಂದು ದೇಶವ್ಯಾಪಿ ನಡೆದಿದ್ದ ನೀಟ್‌ ಪರೀಕ್ಷೆಯಲ್ಲಿ 22.79 ಲಕ್ಷ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಏನಿದು ಪ್ರಕರಣ?:
ಮೇ ಮೂರರ ನೀಟ್‌ ಪರೀಕ್ಷೆಯಲ್ಲಿ ರಾಜಾಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ವರದಿಗಳು ಹರಿದಾಡಿದ್ದವು. ರಾಜಸ್ಥಾನ ಸ್ಪೆಷಲ್‌ ಆಪರೇಷನ್‌ ಗ್ರೂಪ್‌ ಸಂಸ್ಥೆ ಈ ಪ್ರಕರಣದ ತನಿಖೆ ನಡೆಸುತ್ತಿದೆ. ತನಿಖೆ ವೇಳೆ ಅಸಲಿ ನೀಟ್‌ ಪರೀಕ್ಷೆಯ 120 ಪ್ರಶ್ನೆಗಳು ಸಲಹೆ ಪತ್ರಿಕೆ ಅಂದರೆ ಸಜೆಶನ್‌ ಪೇಪರ್‌ನ ಪ್ರಶ್ನೆಗಳ ಜೊತೆ ತಾಳೆಯಾಗಿದ್ದುದ್ದು ಬಹಿರಂಗವಾಗಿತ್ತು. ಹಾಗಾಗಿ, ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂಬ ಅನುಮಾನ ದೃಢಪಟ್ಟಿತ್ತು. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾದ ಕಾರಣ, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ, ಸಿಬಿಐ ತನಿಖೆಗೆ ಆದೇಶಿಸಿದೆ.

Continue Reading

Latest

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಮತ್ತೆ ವಿವಾದ: ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ; ಕಾಲೇಜು ಆಡಳಿತ ಮಂಡಳಿ ವಿರುದ್ಧ ಪೋಷಕರ ಆಕ್ರೋಶ

VISTARANEWS.COM


on

ರಾಜ್ಯಾದ್ಯಂತ ಸಿಇಟಿ ಪರೀಕ್ಷೆಗಳು ಆರಂಭವಾಗುತ್ತಿದ್ದಂತೆಯೇ ಮತ್ತೆ ಹಳೆಯ ವಿವಾದವೊಂದು ಮುನ್ನೆಲೆಗೆ ಬಂದಿದೆ. ಬೆಂಗಳೂರಿನ ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿಗಳು ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ನಡೆದಿದೆ. ತಪಾಸಣೆ ನೆಪದಲ್ಲಿ ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಡೆದ ಸಿಬ್ಬಂದಿ, “ಜನಿವಾರ ತೆಗೆಯದಿದ್ದರೆ ಪರೀಕ್ಷಾ ಕೇಂದ್ರದಿಂದ ಹೊರಹೋಗಿ” ಎಂದು ಧಮ್ಕಿ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪೋಷಕರೇ ಮನನೊಂದು ಜನಿವಾರ ತೆಗೆಸಿ ಮಕ್ಕಳನ್ನು ಪರೀಕ್ಷೆಗೆ ಕಳುಹಿಸುವಂತಾಯಿತು.

ಈ ವಿಚಾರ ಕಾಡ್ಗಿಚ್ಚಿನಂತೆ ಹರಡುತ್ತಿದ್ದಂತೆಯೇ ಶಿಕ್ಷಣ ಇಲಾಖೆ ಮತ್ತು ಸಿಇಟಿ ಸೆಲ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂಲಗಳ ಪ್ರಕಾರ, ಈ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ ಅಧಿಕಾರಿಗಳು, ಪೋಷಕರಿಂದ “ದೂರು ನೀಡುವುದಿಲ್ಲ” ಎಂಬ ಪತ್ರ ಬರೆಸಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ, ಈ ವರ್ತನೆಯು ಧಾರ್ಮಿಕ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಪೋಷಕರು ಮತ್ತು ಧಾರ್ಮಿಕ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರೀಕ್ಷಾ ನಿಯಮಗಳ ಹೆಸರಿನಲ್ಲಿ ಅನಗತ್ಯವಾಗಿ ಧಾರ್ಮಿಕ ಸಂಕೇತಗಳನ್ನು ಗುರಿ ಮಾಡಲಾಗುತ್ತಿದೆ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಗಳು ಶುರುವಾಗಿವೆ.

ಇದೇ ವೇಳೆ ಚಿಕ್ಕಮಗಳೂರಿನ ಎಂಇಎಸ್ (MES) ಕಾಲೇಜಿನಲ್ಲೂ ಪರೀಕ್ಷಾ ಸಿಬ್ಬಂದಿಗಳ ಕಟ್ಟುನಿಟ್ಟಿನ ಕ್ರಮ ವಿದ್ಯಾರ್ಥಿನಿಯರಿಗೆ ಸಂಕಷ್ಟ ತಂದೊಡ್ಡಿದೆ. ಪರೀಕ್ಷಾ ಕೇಂದ್ರಕ್ಕೆ ಮೆಟಲ್ ವಸ್ತುಗಳನ್ನು ಧರಿಸಿ ಬರುವಂತಿಲ್ಲ ಎಂಬ ನಿಯಮವಿದ್ದ ಕಾರಣ, ಮೂಗುತಿ ಧರಿಸಿದ್ದ ವಿದ್ಯಾರ್ಥಿನಿಯರನ್ನು ಗೇಟ್‌ನಲ್ಲೇ ತಡೆಹಿಡಿಯಲಾಗಿತ್ತು. ಕೊನೆಗೆ ಸಿಬ್ಬಂದಿಗಳು ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದರು. ಒಟ್ಟಾರೆಯಾಗಿ ಸಿಇಟಿ ಪರೀಕ್ಷೆಯ ಮೊದಲ ದಿನವೇ ಪರೀಕ್ಷಾ ಕೇಂದ್ರಗಳಲ್ಲಿ ನಿಯಮಗಳ ಹೆಸರಿನಲ್ಲಿ ನಡೆದ ಇಂತಹ ಕಿರಿಕ್‌ಗಳು ವಿದ್ಯಾರ್ಥಿಗಳು ಮತ್ತು ಪೋಷಕರ ಆತಂಕಕ್ಕೆ ಕಾರಣವಾಗಿವೆ.

Continue Reading

Latest

ಎಸ್‌ಎಸ್‌ಎಲ್‌ಸಿ ಮರುಪರೀಕ್ಷೆ ದಿನಾಂಕ ಪ್ರಕಟ: ಅನುತ್ತೀರ್ಣರಾದವರಿಗೆ ಉಚಿತವಾಗಿ ಪರೀಕ್ಷೆ ಬರೆಯಲು ಅವಕಾಶ

VISTARANEWS.COM


on

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಬಾರಿ ರಾಜ್ಯದಲ್ಲಿ ಶೇ. 94.10 ರಷ್ಟು ದಾಖಲೆ ಪ್ರಮಾಣದ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶದಲ್ಲಿ ಹಿನ್ನಡೆ ಅನುಭವಿಸಿದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಭರ್ಜರಿ ಸಮಾಧಾನಕರ ಸುದ್ದಿಯೊಂದನ್ನು ನೀಡಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ನಡೆಸಲಾಗುವ ‘ಪರೀಕ್ಷೆ-2’ (ಮರುಪರೀಕ್ಷೆ) ದಿನಾಂಕಗಳನ್ನು ಘೋಷಿಸಲಾಗಿದ್ದು, ಮೇ 18ರಿಂದ ಮೇ 25, 2026ರವರೆಗೆ ಪರೀಕ್ಷೆಗಳು ಜರುಗಲಿವೆ. ವಿಶೇಷವೆಂದರೆ, ಈ ಬಾರಿ ವಿದ್ಯಾರ್ಥಿಗಳಿಂದ ಯಾವುದೇ ರೀತಿಯ ಪರೀಕ್ಷಾ ಶುಲ್ಕವನ್ನು ವಸೂಲಿ ಮಾಡದಿರಲು ಸರ್ಕಾರ ನಿರ್ಧರಿಸಿದೆ.

ಕಳೆದ ವರ್ಷಗಳಲ್ಲಿ ಪ್ರತಿ ವಿಷಯಕ್ಕೆ ₹250 ಶುಲ್ಕವನ್ನು ನಿಗದಿಪಡಿಸಲಾಗುತ್ತಿತ್ತು, ಆದರೆ ಈ ಬಾರಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಸಂಪೂರ್ಣ ಉಚಿತಗೊಳಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ನಿಗದಿತ ಅವಧಿಯೊಳಗೆ ಮರುಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬೇಕಿದೆ. ಗಮನಿಸಬೇಕಾದ ಮತ್ತೊಂದು ಮುಖ್ಯ ಅಂಶವೆಂದರೆ, ಈ ವರ್ಷ ಮಂಡಳಿಯು ಕೇವಲ ಎರಡು ಪರೀಕ್ಷೆಗಳಿಗೆ ಮಾತ್ರ ಅವಕಾಶ ನೀಡುತ್ತಿದ್ದು, ಈ ಹಿಂದೆ ಇದ್ದಂತೆ ‘ಮೂರನೇ ಪರೀಕ್ಷೆ’ (Exam-3) ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಹೀಗಾಗಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಇದು ಈ ಸಾಲಿನ ಅಂತಿಮ ಅವಕಾಶವಾಗಲಿದೆ.

ಇನ್ನು ತಮ್ಮ ಫಲಿತಾಂಶದಲ್ಲಿ ಅಂಕಗಳ ವ್ಯತ್ಯಯವಾಗಿದೆ ಎಂದು ಭಾವಿಸುವ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನ (Revaluation) ಮತ್ತು ಅಂಕಗಳ ಮರುಎಣಿಕೆಗೆ (Re-totalling) ಅವಕಾಶ ಕಲ್ಪಿಸಲಾಗಿದೆ. ಫಲಿತಾಂಶ ಪ್ರಕಟವಾದ ದಿನದಿಂದ 15 ದಿನಗಳ ಒಳಗಾಗಿ ಆಸಕ್ತ ವಿದ್ಯಾರ್ಥಿಗಳು kseab.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ದಾಖಲೆ ಮಟ್ಟದ ಫಲಿತಾಂಶ ಬಂದಿದ್ದರೂ, ಒಂದು ವೇಳೆ ಅಂಕಗಳಲ್ಲಿ ಅಸಮಾಧಾನವಿದ್ದರೆ ಈ ತಾಂತ್ರಿಕ ಸೌಲಭ್ಯವನ್ನು ಬಳಸಿಕೊಳ್ಳಲು ಮಂಡಳಿ ಸೂಚಿಸಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

Continue Reading
Advertisement
Latest14 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest16 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest18 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest19 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ2 days ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest2 days ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest4 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest4 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest4 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest4 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌