Public Exam Big Breaking : 5,8,9ನೇ ಕ್ಲಾಸ್‌ ಪಬ್ಲಿಕ್‌ ಪರೀಕ್ಷೆಗೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ, ಎಕ್ಸಾಂ ಮುಂದಕ್ಕೆ - Vistara News

ಶಿಕ್ಷಣ

Public Exam Big Breaking : 5,8,9ನೇ ಕ್ಲಾಸ್‌ ಪಬ್ಲಿಕ್‌ ಪರೀಕ್ಷೆಗೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ, ಎಕ್ಸಾಂ ಮುಂದಕ್ಕೆ

Public Exam Big Breaking : ರಾಜ್ಯದಲ್ಲಿ ನಡೆಯುತ್ತಿದ್ದ 5,8,9ನೇ ತರಗತಿಯ ಪಬ್ಲಿಕ್‌ ಪರೀಕ್ಷೆಗೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ. ಹಾಗಿದ್ದರೆ ಮುಂದೇನು?

VISTARANEWS.COM


on

Supreme Court board Exam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ‌ ಮಾರ್ಚ್‌ 11ರಂದು ಆರಂಭವಾಗಿರುವ 5,8 ಮತ್ತು 9ನೇ ತರಗತಿ ಪಬ್ಲಿಕ್‌ ಪರೀಕ್ಷೆಗೆ (Public Exam Big Breaking) ಮತ್ತೆ ಕಂಟಕ ಎದುರಾಗಿದೆ. ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (Education Department) ನಡೆಸುತ್ತಿರುವ ಈ ಪರೀಕ್ಷೆಯನ್ನು ತಕ್ಷಣವೇ ಮುಂದೂಡುವಂತೆ (Order to Postpone Exam) ಸುಪ್ರೀಂಕೋರ್ಟ್‌ (Supreme court Order) ಶಾಲೆಗಳಿಗೆ ಸೂಚಿಸಿದೆ. ಶಿಕ್ಷಣ ಇಲಾಖೆ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಕಾನೂನು ಹೋರಾಟದ ಫಲವಾಗಿ ಈಗ ವಿದ್ಯಾರ್ಥಿಗಳಿಗೆ ಬಿಕ್ಕಟ್ಟಿನ ಪರಿಸ್ಥಿತಿ ನಿರ್ಮಾಣವಾಗಿದೆ.

ಏನಿದು ಪಬ್ಲಿಕ್‌ ಪರೀಕ್ಷೆ ಮತ್ತು ಕಾನೂನು ಹೋರಾಟ?

ಮೊದಲ ಹಂತ: ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (Education department) ಮತ್ತು ಸರ್ಕಾರ ಜಂಟಿಯಾಗಿ 5,8,9 ಮತ್ತು 11ನೇ ತರಗತಿಗೆ ಈ ಬಾರಿ ಪಬ್ಲಿಕ್‌ ಪರೀಕ್ಷೆ ನಡೆಸಲು 2023ರ ಡಿಸೆಂಬರ್‌ನಲ್ಲಿ ಸುತ್ತೋಲೆ ಹೊರಡಿಸಿದ್ದವು.

ಎರಡನೇ ಹಂತ : ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು.

ಮೂರನೇ ಹಂತ: ಖಾಸಗಿ ಶಾಲೆಗಳ ಸಂಘಟನೆಯ ವಾದವನ್ನು ಆಲಿಸಿದ ಹೈಕೋರ್ಟ್‌ನ ಏಕಸದಸ್ಯ ಪೀಠ ಸರ್ಕಾರ ಸುತ್ತೋಲೆ ರದ್ದುಗೊಳಿಸಿ ಆದೇಶಿಸಿತ್ತು. ಅಂದರೆ ಪಬ್ಲಿಕ್‌ ಪರೀಕ್ಷೆ ನಡೆಸದಂತೆ ಸೂಚನೆ ನೀಡಿತ್ತು.

ನಾಲ್ಕನೇ ಹಂತ: ಪಬ್ಲಿಕ್‌ ಪರೀಕ್ಷೆಗೆ ತಡೆ ನೀಡಿದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತು. ಮಾರ್ಚ್‌ 9ರಂದು ಮೇಲ್ಮನವಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠವು ಏಕಸದಸ್ಯ ಪೀಠವು ವಿಧಿಸಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿತು. ಅಂದರೆ ಮಾರ್ಚ್‌ 11ರಂದು ಆರಂಭವಾಗುವ 5,8,9ನೇ ತರಗತಿಯ ಪರೀಕ್ಷೆಗಳು ಯಥಾವತ್ತಾಗಿ ನಡೆಯಲಿದೆ ಎಂದು ತಿಳಿಸಲಾಗಿತ್ತು.

ಐದನೇ ಹಂತ: 11ನೇ ತರಗತಿ ಪರೀಕ್ಷೆಗಳು ಆಗಲೇ ನಡೆದು ಮುಕ್ತಾಯವಾಗಿವೆ. 5,8,9ನೇ ತರಗತಿ ಪರೀಕ್ಷೆಗಳು ಮಾರ್ಚ್‌ 11ರಂದು ಆರಂಭವಾಗಿ ಆಗಲೇ ಎರಡು ಪರೀಕ್ಷೆಗಳು ಮುಗಿದಿವೆ.

ಆರನೇ ಹಂತ: ಖಾಸಗಿ ಶಿಕ್ಷಣ ಸಂಸ್ಥೆಗಳು ಯಥಾವತ್ತಾಗಿ ಪರೀಕ್ಷೆ ನಡೆಸಲು ಅವಕಾಶ ನೀಡಿದ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲು ಹತ್ತಿವೆ. ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸಿದ ಸುಪ್ರೀಂಕೋರ್ಟ್‌ ಮಂಗಳವಾರ (ಮಾರ್ಚ್‌ 12) ಪರೀಕ್ಷೆಗಳಿಗೆ ತಡೆಯಾಜ್ಞೆ ನೀಡಿದೆ.

ಅಂದರೆ ಮುಂದೇನಾಗುತ್ತದೆ?

  1. ಸದ್ಯದ ಸೂಚನೆ ಪ್ರಕಾರ, ಈಗ ನಡೆಯುತ್ತಿರುವ ಪರೀಕ್ಷೆಯನ್ನು ಮುಂದೂಡುವಂತೆ ಸುಪ್ರೀಂಕೋರ್ಟ್‌ ಸೂಚಿಸಿದೆ.
  2. ಮುಂದಿನ ಆದೇಶದ ವರೆಗೆ ಪರೀಕ್ಷೆಗಳನ್ನು ಮುಂದೂಡುವಂತೆ ಶಾಲೆಗಳಿಗೆ ಸೂಚನೆ ನೀಡಲಾಗಿದೆ.
  3. ರಾಜ್ಯ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದ ಮಧ್ಯಂತರ ಆದೇಶದ ಬಗ್ಗೆ ತ್ವರಿತ ವಿಚಾರಣೆ ನಡೆಸಿ ತೀರ್ಪು ನೀಡುವಂತೆ ಹೈಕೋರ್ಟ್‌ಗೆ ಸೂಚಿಸಿದೆ.
  4. ಹೈಕೋರ್ಟ್‌ ವಿಚಾರಣೆಯ ವೇಳೆ ಹೈಕೋರ್ಟ್‌ ಸ್ವಂತ ವಿವೇಚನೆಯನ್ನು ಬಳಸಲಿ ಮತ್ತು ಸುಪ್ರೀಂಕೋರ್ಟ್‌ನ ಅಭಿಪ್ರಾಯಗಳಿಂದ ಪ್ರಭಾವಿತವಾಗದಿರಲಿ ಎಂದು ಹೇಳಿದೆ.
  5. ಅಂದರೆ ಹೈಕೋರ್ಟ್‌ನ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಿ ತನ್ನ ತೀರ್ಪನ್ನು ನೀಡಬಹುದಾಗಿದೆ. ಮತ್ತು ಇದು ಅಂತಿಮವಾಗಿರುವ ಸಾಧ್ಯತೆ ಇದೆ.

ಇದನ್ನೂ ಓದಿ : Public Exam : ತಡೆಯಾಜ್ಞೆ ತೆರವು; 5,8,9 ಮತ್ತು11ನೇ ತರಗತಿ ಪಬ್ಲಿಕ್‌ ಪರೀಕ್ಷೆ ಯಥಾವತ್‌

ಪಬ್ಲಿಕ್‌ ಪರೀಕ್ಷೆ ಮತ್ತು ಅದರ ಸುತ್ತಲಿನ ಖಟ್ಲೆಯ ವಿವರ ಇಲ್ಲಿದೆ: ನಡೆದುಬಂದ ದಾರಿ

ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5. 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನ ನಡೆಸುವ ಸಂಬಂಧ ಘನ ಉಚ್ಚ ನ್ಯಾಯಾಲಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ದಿ:6-10-2023 ಮತ್ತು 9-10-2023ರ ಅಧಿಸೂಚನೆಗಳನ್ನು ಏಕ ಸದಸ್ಯ ಪೀಠದಲ್ಲಿ ರದ್ದು(Quash) ಮಾಡಲಾಗಿರುತ್ತದೆ.

ಸದರಿ ತೀರ್ಪಿನ ವಿರುದ್ಧ ಸರ್ಕಾರವು ದಿನಾಂಕ: 7-3-2024 ರಂದು ಘನ ಉಚ್ಚನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಘನ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠವು ಪ್ರಕರಣವನ್ನು ಆಲಿಸಿ ಸದರಿ 5. 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಂಕನ ಕಾರ್ಯವನ್ನು ಮುಂದುವರೆಸಲು ಮಧ್ಯಂತರ ತೀರ್ಪು ನೀಡಲಾಗಿರುತ್ತದೆ. ಅದರಂತೆ ದಿನಾಂಕ: 11-03-2024ರಿಂದ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಂಕನ ಕಾರ್ಯವನ್ನು ಪ್ರಾರಂಭಿಸಲಾಗಿರುತ್ತದೆ.

ತದನಂತರ ರಾಜ್ಯ ಘನ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠದ ಮಧ್ಯಂತರ ತೀರ್ಪನ್ನು ಪ್ರಶ್ನಿಸಿ. ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಎಸ್.ಎಲ್.ಪಿ ಸಂಖ್ಯೆ: 6256/2024, ಎಸ್.ಎಲ್.ಪಿ ಸಂಖ್ಯೆ: 6257/2024 ಮತ್ತು ಡೈರಿ ಸಂಖ್ಯೆ: 11192/2024 ದಾವೆಗಳನ್ನು ಹೂಡಿದ್ದು, ಸದರಿ ದಾವೆಗಳನ್ನು ವಿಚಾರಣೆ ನಡೆಸಿದ್ದು, ಈ ದಿನದ ಆದೇಶದಲ್ಲಿ ಸದರಿ ಮಧ್ಯಂತರ ತೀರ್ಪನ್ನು ರದ್ದುಪಡಿಸಿರುತ್ತದೆ ಮತ್ತು ಪ್ರಕರಣವನ್ನು ವಿಭಾಗೀಯ ಪೀಠಕ್ಕೆ ರವಾನಿಸಿರುತ್ತದೆ. ಈ ಹಿನ್ನೆಲೆಯಲ್ಲಿ ದಿನಾಂಕ: 13-3-2024ರಿಂದ ನಡೆಯಬೇಕಾಗಿದ್ದ 5. 8 ಮತ್ತು 9ನೇ ತರಗತಿಗಳ SA-2 ಮೌಲ್ಯಾಂಕನವನ್ನು ಮುಂದಿನ ಆದೇಶದವರೆಗೆ ಮುಂದೂಡುವಂತೆ ಶಾಲೆಗಳಿಗೆ ಸೂಚಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

2nd PUC Exam 3: ದ್ವಿತೀಯ ಪಿಯುಸಿ ಪರೀಕ್ಷೆ-3ರ ದಂಡಸಹಿತ ಶುಲ್ಕ ಪಾವತಿಗೆ ಇಂದೇ ಕೊನೇ ದಿನ

2nd PUC Exam 3 : 2024ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿತ್ತು. ದಂಡ ಸಹಿತ ಶುಲ್ಕ ಪಾವತಿಸಲು ಇಂದೇ ಕೊನೆಯ ದಿನವಾಗಿದೆ.

VISTARANEWS.COM


on

By

2nd Puc Exam 3
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಜೂನ್‌ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3ರ (2nd PUC Exam 3) ಶುಲ್ಕ ಪಾವತಿಸಲು ಇಂದೇ (ಜೂ.3) ಕೊನೆ ದಿನವಾಗಿದೆ. ವಿದ್ಯಾರ್ಥಿಗಳು ದಂಡಸಹಿತ ಶುಲ್ಕ ಪಾವತಿ ಮಾಡಬೇಕಾಗಿದ್ದು, ದಿನಕ್ಕೆ 50 ರೂ.ಅಂತೆ ಪಾವತಿಸಬೇಕಾಗಿದೆ.

ಈ ಹಿಂದೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಮೇ 28ಕ್ಕೆ ಕೊನೆ ದಿನವಾಗಿತ್ತು. ಆದರೆ ಪೋಷಕರು ಹಾಗೂ ವಿದಾರ್ಥಿಗಳ ದೂರವಾಣಿ ಕರೆಗಳ ಮೇರೆಗೆ ಪರೀಕ್ಷೆಗೆ ಶುಲ್ಕ ಪಾವತಿಸುವ ದಿನಾಂಕವನ್ನು ವಿಸ್ತರಿಸಿ ಆದೇಶಿಸಲಾಗಿತ್ತು. ಇದು ವಿದ್ಯಾರ್ಥಿಗಳಿಗೆ ಅಂತಿಮ ಅವಕಾಶವಾಗಿದ್ದು, ಮುಂದೆ ಯಾವುದೇ ಕಾರಣಕ್ಕೂ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂದು ಶಾಲಾ ಶಿಕ್ಷಿಣ ಇಲಾಖೆ ಸೂಚನೆ ನೀಡಿತ್ತು.

ಅದರಂತೆ ವಿದ್ಯಾರ್ಥಿಗಳು ತಮ್ಮ ಕಾಲೇಜು ಅಥವಾ KSEAB ಪೋರ್ಟಲ್‌ನಲ್ಲಿ ಆನ್‌ಲೈನ್‌ ಮುಖಾಂತರ ನೋಂದಾಯಿಸಿಕೊಳ್ಳಬಹುದು. 2023-24ನೇ ಸಾಲಿನ ಫಲಿತಾಂಶ ಪೂರ್ಣಗೊಂಡಿರದ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ಹೊಸಬರು ಮತ್ತು ಖಾಸಗಿಯಾಗಿ ನೋಂದಾವಣೆಯಾದ ವಿದ್ಯಾರ್ಥಿಗಳು ಮಂಡಲಿಯ ವೆಬ್‌ಸೈಟ್‌ ಮೂಲಕ ನೇರವಾಗಿ ಪರೀಕ್ಷೆ 3ಕ್ಕೆ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

2nd Puc Exam 3

ಈ ಮೊದಲು ಮೇ 23ರಿಂದ 28ರವರಗೆ ದಂಡ ರಹಿತ ನೋಂದಣಿ ಮಾಡಿಕೊಳ್ಳಬಹುದಿತ್ತು. ಒಂದು ವೇಳೆ ಮೇ 28ರೊಳಗೆ ಅರ್ಜಿ ಸಲ್ಲಿಸದೇ ಹೋದರೆ ಮೇ 29ರಿಂದ 30ರವರೆಗೆ ದಂಡ ಸಹಿತ ನೋಂದಣಿ ಮಾಡಿಕೊಳ್ಳಬೇಕಾಗಿತ್ತು. ಆದರೆ ವಿದ್ಯಾರ್ಥಿಗಳ ಮನವಿ ಮೇರೆಗೆ ದಿನಾಂಕವನ್ನು ವಿಸ್ತರಿಸಲಾಗಿತ್ತು. ಸದ್ಯ ಜೂನ್‌ 3ರಂದು ದಂಡ ಸಹಿತ ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ. ಅಂದಹಾಗೇ ವಿದ್ಯಾರ್ಥಿಗಳು ಕಾಲೇಜಿಗೆ ಪರೀಕ್ಷಾ ಶುಲ್ಕ ಪಾವತಿಸಲು ಮೇ 31 ದಂಡರಹಿತ ಕೊನೆ ದಿನವಾಗಿತ್ತು. ದಂಡ ಸಹಿತ ಜೂ. 1 ರಿಂದ 3 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಪರೀಕ್ಷೆ 3ಕ್ಕೆ ಪರೀಕ್ಷಾ ಶುಲ್ಕ ಪಾವತಿಸಲು ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು ಫಲಿತಾಂಶ ಉತ್ತಮ ಪಡಿಸಿಕೊಳ್ಳುವ ವಿದ್ಯಾರ್ಥಿಗಳ ಮಾಹಿತಿಯನ್ನು ಪ್ರಾಂಶುಪಾಲರು ಕೆಎಸ್‌ಇಎಬಿ ತಂತ್ರಾಂಶದಲ್ಲಿ ಸಲ್ಲಿಸಬೇಕು. ಇದಕ್ಕೆ ದಂಡ ರಹಿತ ಜೂ.3ರಂದು ಕೊನೆ ದಿನವಾದರೆ, ದಂಡಸಹಿತ ಜೂ.5ರಂದು ನಿಗಧಿ ಮಾಡಲಾಗಿದೆ.

2024ರ ಪರೀಕ್ಷೆ 3ಕ್ಕೆ ಪರೀಕ್ಷಾ ಶುಲ್ಕವನ್ನು ನಿಗಧಿಸಲಾಗಿದೆ. ಒಂದು ವಿಷಯಕ್ಕೆ 140 ರೂ ಹಾಗೂ ಎರಡು ವಿಷಯಕ್ಕೆ 270 ರೂ., ಮೂರು ಅಥವಾ ಹೆಚ್ಚಿನ ವಿಷಯಗಳಿಗೆ 400 ರೂ. ನಿಗದಿ ಮಾಡಲಾಗಿದೆ. ಇನ್ನೂ ಫಲಿತಾಂಶ ತಿರಸ್ಕರಣಾ ಪದ್ಧತಿಯನ್ನು ರದ್ದುಪಡಿಸಲಾಗಿದೆ. 2023ರ ನಂತರ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು 2024ರ ದ್ವಿತೀಯ ಪಿಯುಸಿ ಪರೀಕ್ಷೆ 3ರಲ್ಲಿ ಹಾಜರಾಗಬೇಕಾದರೆ ಮಂಡಲಿಯು ಒದಗಿಸಿದ ಫಲಿತಾಂಶದ ಪಟ್ಟಿಯ ಆಧಾರದ ಮೇಲೆ ಶುಲ್ಕವನ್ನು ಭರಿಸಬೇಕಾಗುತ್ತದೆ.

ಇದನ್ನೂ ಓದಿ: Stock Market News: ಮೋದಿ ಸರಕಾರ ಪುನರಾಗಮನಕ್ಕೆ ಷೇರು ಮಾರುಕಟ್ಟೆ ಹರ್ಷ, ಸೆನ್ಸೆಕ್ಸ್‌- ನಿಫ್ಟಿ ದಾಖಲೆ ಏರಿಕೆ

ದ್ವಿತೀಯ ಪಿಯುಸಿ ಪರೀಕ್ಷೆ -3ರ ವೇಳಾಪಟ್ಟಿ ಹೀಗಿದೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ (2nd PUC Exam) 3ನೇ ಪೂರಕ ಪರೀಕ್ಷೆಯು ನಡೆಯಲಿದ್ದು, ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಜೂನ್‌ 24 ರಿಂದ ಜುಲೈ 5ರವರೆಗೆ ಪರೀಕ್ಷೆಯು ನಡೆಯಲಿದೆ. ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30 ಹಾಗೂ ಮಧ್ಯಾಹ್ನ 2:15ರಿಂದ 4:30 ಪರೀಕ್ಷೆಯ ಸಮಯವಾಗಿದೆ.

ದಿನಾಂಕ- ವಿಷಯ
ಜೂನ್‌ 24- ಕನ್ನಡ, ಅರೇಬಿಕ್
ಜೂನ್‌ 25- ಇಂಗ್ಲೀಷ್‌
ಜೂನ್‌ 26- ಸಮಾಜಶಾಸ್ತ್ರ , ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಜೂನ್‌ 27- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
ಜೂನ್‌ 28- ಅರ್ಥಶಾಸ್ತ್ರ, ರಸಾಯನಶಾಸ್ತ್ರ
ಜೂನ್‌ 29 – ಇತಿಹಾಸ, ಭೌತಶಾಸ್ತ್ರ
ಜುಲೈ 1 – ಗೃಹ ವಿಜ್ಞಾನ, ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ
ಜುಲೈ 2 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ
ಜುಲೈ 3 – ಭೂಗೋಳಶಾಸ್ತ್ರ, ಮನಃಶಾಸ್ತ್ರ, ಮೂಲಗಣಿತ
ಜುಲೈ 4- ಹಿಂದಿ
ಜುಲೈ 5- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಹಾಗೂ ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ,ರೀಟೈಲ್‌, ಆಟೋ ಮೊಬೈಲ್‌, ಬ್ಯೂಟಿ ಮತ್ತು ವೆಲ್‌ನೆಸ್‌

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

CET Ranking : ಸಿಇಟಿ ರ‍್ಯಾಂಕಿಂಗ್‌ನಲ್ಲಿ ಎಂಜಿನಿಯರಿಂಗ್‌ನ 10 ಟಾಪರ್ಸ್‌ಗಳು ಬೆಂಗಳೂರಿನ ವಿದ್ಯಾರ್ಥಿಗಳು!

CET Ranking : ರಾಜ್ಯಾದ್ಯಂತ ನಡೆದ ಸಿಇಟಿ ಪರೀಕ್ಷೆಯ ಫಲಿತಾಂಶವು ಶನಿವಾರ ಪ್ರಕಟಗೊಂಡಿದೆ. ವಿವಿಧ ಕೋರ್ಸ್‌ಗಳಲ್ಲಿ ಹೆಚ್ಚು ರ‍್ಯಾಂಕ್‌ಗಳನ್ನು ಬೆಂಗಳೂರಿನ ಅಭ್ಯರ್ಥಿಗಳೇ ಪಡೆದಿದ್ದಾರೆ. ಎಂಜಿನಿಯರಿಂಗ್‌ನ ಟಾಪ್‌ 10ನಲ್ಲಿ ಹತ್ತು ಟಾಪರ್ಸ್‌ಗಳು ಬೆಂಗಳೂರಿಗರೇ ಆಗಿದ್ದಾರೆ.

VISTARANEWS.COM


on

By

CET Ranking
ಸಿಇಟಿ ಟಾಪರ್ಸ್‌
Koo

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗಾಗಿ ನಡೆದಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶದಲ್ಲಿ ಬೆಂಗಳೂರಿನ ವಿದ್ಯಾರ್ಥಿಗಳೇ ಹೆಚ್ಚು ರ‍್ಯಾಂಕ್‌ (CET Ranking) ಪಡೆದಿದ್ದಾರೆ. ಎಂಜಿನಿಯರಿಂಗ್‌ನಲ್ಲಿ ಹತ್ತಕ್ಕೆ ಹತ್ತು ಟಾಪರ್ಸ್‌ಗಳು ಬೆಂಗಳೂರಿನವರೇ ಆಗಿದ್ದಾರೆ. ಅದರಲ್ಲೂ ಇಂಜಿನಿಯರಿಂಗ್ ರ‍್ಯಾಂಕ್‌ನ 10ರಲ್ಲಿ ಟಾಪ್ 9 ಬಾಲಕರೇ ಇದ್ದಾರೆ. ಇನ್ನೂ ವಿವಿಧ ಕೋರ್ಸ್‌ಗಳಲ್ಲಿ 45 ಮಂದಿ ಬೆಂಗಳೂರಿನವರೇ ಟಾಪರ್ಸ್‌ ಆಗಿದ್ದಾರೆ.

ಎಂಜಿನಿಯರಿಂಗ್‌ನಲ್ಲಿ ಬೆಂಗಳೂರಿನ ಸಹಕಾರ ನಗರದ ನಾರಾಯಣ ಒಲಿಂಪಿಯಾಡ್‌ ಶಾಲೆಯ ಹರ್ಷ ಕಾರ್ತಿಕೇಯ ವುಟುಕುರಿ ಮೊದಲ ರ‍್ಯಾಂಕ್‌ ಪಡೆದಿದ್ದಾನೆ. ಜತೆಗೆ ಬಿ.ಫಾರ್ಮಾ ಹಾಗೂ ಫಾರ್ಮ್ ಡಿಯಲ್ಲೂ 2ನೇ ರ‍್ಯಾಂಕ್‌ ಪಡೆದಿದ್ದಾನೆ.

ಇವ್ರೇ ಎಂಜಿನಿಯರಿಂಗ್‌ನಲ್ಲಿ ಟಾಪರ್ಸ್‌

1) ಹರ್ಷ ಕಾರ್ತಿಕೇಯ ವುಟುಕುರಿ – ನಾರಾಯಣ ಒಲಿಂಪಿಯಾಡ್ ಶಾಲೆ
2) ಮನೋಜ್ ಸೋಹನ್ ಗಜುಲಾ- ಶ್ರೀ ಚೈತನ್ಯ ಟೆಕ್ನೋ ಸ್ಕೂಲ್
3) ಅಭಿನವ್ ಪಿ.ಜೆ -ನೆಹರು ಸ್ಮಾರಕ ವಿದ್ಯಾಲಯ’
4)ಸನಾ ತಬಸ್ಸುಮ್- ನಾರಾಯಣ ಪಿಯು ಕಾಲೇಜು
5) ಅನಿಮೇಶ್ ಸಿಂಗ್ ರಾಥೋಡ್- ಶ್ರೀ ಚೈತನ್ಯ ಟೆಕ್ನೋ ಶಾಲೆ
6)ಪ್ರಭಾವ್ ಪಿ- ಆರ್ ವಿ ಪಿಯು ಕಾಲೇಜು
7)ವಿದೀಪ್ ರೆಡ್ಡಿ ಜಲಪಲ್ಲಿ-ದೆಹಲಿ ಪಬ್ಲಿಕ್ ಸ್ಕೂಲ್
8) ಶಾನ್ ಥಾಮಸ್ ಕೋಶಿ- ಗೇರ್ ಇನ್ನೋವೇಟಿವ್‌ ಇಂಟರ್‌ನ್ಯಾಷನಲ್
9) ವಾರಣಾಸಿ ಕಾರ್ತಿಕೇಯ ಶ್ರೀರಾಮ್- ಎಚ್ಎಂಆರ್ ನ್ಯಾಷನಲ್ ಪಿಯು
ಕಾಲೇಜು
10) ಸಾಗರ್ – ಡೆಲ್ಲಿ ಪಬ್ಲಿಕ್ ಸ್ಕೂಲ್

ಇದನ್ನೂ ಓದಿ: CET Ranking : 3 ಸಾವಿರ ಅಭ್ಯರ್ಥಿಗಳಿಗೆ ಸಿಕ್ಕಿಲ್ಲ ಸಿಇಟಿ ರ‍್ಯಾಂಕ್‌! ಮುಂದೇನು ಮಾಡ್ಬೇಕು?

ಬ್ಯಾಚುಲರ್ ಆಫ್ ನ್ಯಾಚುರೋಪತಿ & ಯೋಗ ಸೈನ್ಸಸ್

ಟಾಪ್‌ 3 ಪ್ರೀತಂ ರಾವಳಪ್ಪ ಪನಸುದಕರ್- ಶೇಷಾದ್ರಿಪುರಂ ಕಾಂಪ್ ಪಿಯು
ಟಾಪ್‌ 4 ವಜ್ರಕಾಂತ್ ಮಿರಗಿ – ನಾರಾಯಣ ಪಿಯು ಕಾಲೇಜು
ಟಾಪ್‌ 5 ಸ್ನೇಹಾ ಎದಾಯತ್ -ಕೇಂದ್ರೀಯ ವಿದ್ಯಾಲಯ
ಟಾಪ್‌ 7 ನೈತಿಕ್ ಜೈನ್-ಆರ್ ವಿ ಪಿಯು ಕಾಲೇಜು
ಟಾಪ್‌ 8 ಸುಷ್ಮಾ ಅಮರೇಶ- ಜಿ ಆರ್ ಪಿ ಯು ಕಾಲೇಜು
ಟಾಪ್‌ 9 ಶಶಾಂಕ್ ಎ. ವಿದ್ಯಾಮಂದಿರ್ ಪಿಯು ಕಾಲೇಜು

ಬಿಎಸ್ಸಿ (ಕೃಷಿ)

  • ಟಾಪ್‌ 3 ಅನಿಮೇಶ್ ಸಿಂಗ್ ರಾಥೋಡ್-ಶ್ರೀ ಚೈತನ್ಯ ಟೆಕ್ನೋ ಶಾಲೆ
  • ಟಾಪ್‌ 6 ಆದಿತ್ಯ ಎ-ಶ್ರೀ ಚೈತನ್ಯ ಟೆಕ್ನೋ ಶಾಲೆ
  • ಟಾಪ್‌ 10 ಸ್ಕಂದ ಪಿ -ದೀಕ್ಷಾ ಸಿಎಫ್‌ಎಲ್ ಪಿಯು ಕಾಲೇಜು

ವೆಟರ್ನರಿ

ಟಾಪ್‌ 1 ಕಲ್ಯಾಣ್ ವಿ- ಶ್ರೀ ಚೈತನ್ಯ ಟೆಕ್ನೋ ಸ್ಕೂಲ್
ಟಾಪ್‌ 2 ಡಿ ಎನ್ ನಿತಿನ್ – ನಾರಾಯಣ ಇ ಟೆಕ್ನೋ ಶಾಲೆ
ಟಾಪ್‌ 4 ಧ್ರುವ ಅವಸ್ಥಿ- ನಾರಾಯಣ ಇ ಟೆಕ್ನೋ ಶಾಲೆ
ಟಾಪ್‌ 5 ಸ್ನೇಹಾ ಎದಾಯತ್ -ಕೇಂದ್ರೀಯ ವಿದ್ಯಾಲಯ
ಟಾಪ್‌ 7 ವಜ್ರಕಾಂತ್ ಮಿರಗಿ – ನಾರಾಯಣ ಪಿಯು ಕಾಲೇಜು
ಟಾಪ್‌ 10 ಅಕ್ಷತ್ ಮಿಶ್ರಾ- ನಾರಾಯಣ ಇ ಟೆಕ್ನೋ ಶಾಲೆ

ಇದನ್ನೂ ಓದಿ: ನೀಟ್ ಫಲಿತಾಂಶದ ಬಳಿಕ ಎಂಜಿನಿಯರ್ ಸೀಟು ಹಂಚಿಕೆ; 1.24 ಲಕ್ಷ ಸೀಟುಗಳು ಲಭ್ಯ, ಆನ್ ಲೈನ್ ಪ್ರಕ್ರಿಯೆ

ಬಿ.ಫಾರ್ಮಾ

ಟಾಪ್‌ 1 ಕಲ್ಯಾಣ್ ವಿ- ಶ್ರೀ ಚೈತನ್ಯ ಟೆಕ್ನೋ ಸ್ಕೂಲ್
ಟಾಪ್‌ 2 ಹರ್ಷ ಕಾರ್ತಿಕೇಯ ವುಟುಕುರಿ – ನಾರಾಯಣ ಒಲಿಂಪಿಯಾಡ್ ಶಾಲೆ
ಟಾಪ್‌ 3 ಡಿ ಎನ್ ನಿತಿನ್ – ನಾರಾಯಣ ಇ ಟೆಕ್ನೋ ಶಾಲೆ
ಟಾಪ್‌ 4 ಸ್ನೇಹಾ ಎದಾಯತ್ -ಕೇಂದ್ರೀಯ ವಿದ್ಯಾಲಯ
ಟಾಪ್‌ 6 ಧ್ರುವ ಅವಸ್ಥಿ- ನಾರಾಯಣ ಇ ಟೆಕ್ನೋ ಶಾಲೆ
ಟಾಪ್‌ 7 ಮನೋಜ್ ಸೋಹನ್ ಗಜುಲಾ- ಶ್ರೀ ಚೈತನ್ಯ ಟೆಕ್ನೋ ಸ್ಕೂಲ್
ಟಾಪ್‌ 9 ವಜ್ರಕಾಂತ್ ಮಿರಗಿ – ನಾರಾಯಣ ಪಿಯು ಕಾಲೇಜು

ಫಾರ್ಮ್.ಡಿ

ಟಾಪ್‌ 1 ಕಲ್ಯಾಣ್ ವಿ- ಶ್ರೀ ಚೈತನ್ಯ ಟೆಕ್ನೋ ಸ್ಕೂಲ್
ಟಾಪ್‌ 2 ಹರ್ಷ ಕಾರ್ತಿಕೇಯ ವುಟುಕುರಿ – ನಾರಾಯಣ ಒಲಿಂಪಿಯಾಡ್ ಶಾಲೆ
ಟಾಪ್‌ 3 ಡಿ ಎನ್ ನಿತಿನ್ – ನಾರಾಯಣ ಇ ಟೆಕ್ನೋ ಶಾಲೆ
ಟಾಪ್‌ 4 ಸ್ನೇಹಾ ಎದಾಯತ್ -ಕೇಂದ್ರೀಯ ವಿದ್ಯಾಲಯ
ಟಾಪ್‌ 6 ಧ್ರುವ ಅವಸ್ಥಿ- ನಾರಾಯಣ ಇ ಟೆಕ್ನೋ ಶಾಲೆ
ಟಾಪ್‌ 7 ಮನೋಜ್ ಸೋಹನ್ ಗಜುಲಾ- ಶ್ರೀ ಚೈತನ್ಯ ಟೆಕ್ನೋ ಸ್ಕೂಲ್
ಟಾಪ್‌ 9 ವಜ್ರಕಾಂತ್ ಮಿರಗಿ – ನಾರಾಯಣ ಪಿಯು ಕಾಲೇಜು

ಬಿಎಸ್ಸಿ ನರ್ಸಿಂಗ್

ಟಾಪ್‌ 1 ಕಲ್ಯಾಣ್ ವಿ- ಶ್ರೀ ಚೈತನ್ಯ ಟೆಕ್ನೋ ಸ್ಕೂಲ್
ಟಾಪ್‌ 2 ಡಿ ಎನ್ ನಿತಿನ್ – ನಾರಾಯಣ ಇ ಟೆಕ್ನೋ ಶಾಲೆ
ಟಾಪ್‌ 4 ಧ್ರುವ ಅವಸ್ಥಿ- ನಾರಾಯಣ ಇ ಟೆಕ್ನೋ ಶಾಲೆ
ಟಾಪ್‌ 5 ಸ್ನೇಹಾ ಎದಾಯತ್ -ಕೇಂದ್ರೀಯ ವಿದ್ಯಾಲಯ
ಟಾಪ್‌ 7 ವಜ್ರಕಾಂತ್ ಮಿರಗಿ – ನಾರಾಯಣ ಪಿಯು ಕಾಲೇಜು
ಟಾಪ್‌ 10 ಅಕ್ಷತ್ ಮಿಶ್ರಾ- ನಾರಾಯಣ ಇ ಟೆಕ್ನೋ ಶಾಲೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

CET Ranking : 3 ಸಾವಿರ ಅಭ್ಯರ್ಥಿಗಳಿಗೆ ಸಿಕ್ಕಿಲ್ಲ ಸಿಇಟಿ ರ‍್ಯಾಂಕ್‌! ಮುಂದೇನು ಮಾಡ್ಬೇಕು?

CET Ranking : ವೃತ್ತಿಪರ ಕೋರ್ಸ್‌ಗಳಿಗಾಗಿ ನಡೆದಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶವು ಜೂ 1ರಂದು ಪ್ರಕಟಗೊಂಡಿತ್ತು. ಇದರಲ್ಲಿ ಸುಮಾರು ಮೂರು ಸಾವಿರ ಅಭ್ಯರ್ಥಿಗಳ ಸಿಇಟಿ ರ‍್ಯಾಂಕ್‌ ತಡೆಹಿಡಿಯಲಾಗಿದೆ. ಸಿಇಟಿಗೆ ಅರ್ಜಿ ಸಲ್ಲಿಸುವಾಗ ಕೆಲವರು ತಪ್ಪಾಗಿ ನಮೂದಿಸಿದ್ದ ಪಕ್ಷದಲ್ಲಿ ರ‍್ಯಾಂಕ್‌ ಪ್ರಕಟವಾಗಿರುವುದಿಲ್ಲ.

VISTARANEWS.COM


on

By

CET Ranking
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಿದ ಸಿಇಟಿ ಪರೀಕ್ಷೆಯ ಫಲಿತಾಂಶದಲ್ಲಿ ರ‍್ಯಾಂಕ್‌ (CET Ranking) ತಡೆಹಿಡಿದಿರುವ ಅಥವಾ ರ‍್ಯಾಂಕ್‌ ನೀಡದೇ ಇರುವ ಅಭ್ಯರ್ಥಿಗಳು ಆತಂಕಪಡುವ ಅಗತ್ಯ ಇಲ್ಲ. ಅಂತಹವರು ಜೂನ್‌ 3ರ ಸೋಮವಾರದಿಂದ ಕೆಇಎ (KEA) ಬಿಡುಗಡೆ ಮಾಡುವ ಪೋರ್ಟಲ್‌ನಲ್ಲಿ ತಮ್ಮ ಅಂಕಗಳನ್ನು ದಾಖಲಿಸಿ ರ‍್ಯಾಂಕ್‌ ಪಡೆಯಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಪಿಯುಸಿಯಲ್ಲಿ ನೀಡಿದ್ದ ಯೂನಿಕ್‌ ಸಂಖ್ಯೆಯನ್ನು ಸಿಇಟಿಗೆ ಅರ್ಜಿ ಸಲ್ಲಿಸುವಾಗ ಕೆಲವರು ತಪ್ಪಾಗಿ ನಮೂದಿಸಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ತಪ್ಪಾಗಿ ನಮೂದಿಸಿದ ಪಕ್ಷದಲ್ಲಿ ರ‍್ಯಾಂಕ್‌ ಪ್ರಕಟಣೆ ಆಗಿರುವುದಿಲ್ಲ. ಅಂತಹ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಸರಿ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತಿದೆ.

ಈ ರೀತಿ ರ‍್ಯಾಂಕ್‌ ತಡೆಹಿಡಿದಿರುವ ಸುಮಾರು ಮೂರು ಸಾವಿರ ಅಭ್ಯರ್ಥಿಗಳು ಇದ್ದಾರೆ. ಅಂತಹವರಿಗೆ ಈ ತೀರ್ಮಾನದಿಂದ ಅನುಕೂಲ ಆಗಲಿದೆ. ಪ್ರತಿ ಬಾರಿಯೂ ಈ ರೀತಿಯ ಒಂದಷ್ಟು ಮಂದಿ ತಪ್ಪುಗಳನ್ನು ಮಾಡುವ ಕಾರಣ ಹಾಗೆ ಆಗಿದೆ ಎಂದು ಪ್ರಸನ್ನ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: KCET Result 2024: ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಲಿಂಕ್‌ ಇಲ್ಲಿದೆ

ನೀಟ್ ಪರೀಕ್ಷೆ ಬಳಿಕ ಎಂಜಿನಿಯರ್ ಸೀಟು ಹಂಚಿಕೆ; 1.24 ಲಕ್ಷ ಸೀಟುಗಳು ಲಭ್ಯ, ಆನ್ ಲೈನ್ ಪ್ರಕ್ರಿಯೆ

ಬೆಂಗಳೂರು: ನೀಟ್‌ ಪರೀಕ್ಷೆ ಬಳಿಕವೇ ಎಂಜಿನಿಯರ್‌ ಸೀಟು ಹಂಚಿಕೆ ಮಾಡಲಾಗುವುದು ಎಂದು ಕೆಇಎ ಕಾರ್ಯ ನಿವಾರ್ಹಕ ನಿರ್ದೇಶಕ ಪ್ರಸನ್ನ (Education News) ತಿಳಿಸಿದ್ದಾರೆ. ನೀಟ್ ಫಲಿತಾಂಶಕ್ಕೂ ಮುನ್ನವೇ ಎಂಜಿನಿಯರಿಂಗ್ ಸೀಟ್ ಹಂಚಿಕೆ ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಹೀಗಾಗಿ ಮೊದಲು ಮೆಡಿಕಲ್ ಸೀಟ್ ಹಂಚಿಕೆ ಮಾಡಿ ನಂತರ ಎಂಜಿನಿಯರಿಂಗ್ ಸೀಟ್ ಹಂಚಿಕೆ ಮಾಡಲಾಗುವುದು ಎಂದರು.

ಬೇರೆ ಬೇರೆ ಕಾಲೇಜಿನಲ್ಲಿ ಈಗಾಗಲೇ ದಾಖಲಾತಿ ಪ್ರಕ್ರಿಯೆ ಆರಂಭವಾಗಿದೆ ಎಂಬ ದೂರಿನ ಕುರಿತು ಪ್ರತಿಕ್ರಿಯಿಸಿದ ಅವರು, ಸಿಇಟಿ ಪರೀಕ್ಷೆಯಲ್ಲಿ ಒಳ್ಳೆಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸೀಟ್ ಸಿಗುತ್ತದೆ. ಸೀಟ್ ಸಿಗುವುದಿಲ್ಲ ಎಂಬ ಆತಂಕದಲ್ಲಿ ಡೋನೇಷನ್ ಕೊಟ್ಟು ಅಡ್ಮಿಶನ್ ಮಾಡಿಸಬೇಡಿ. ಒಳ್ಳೆಯ ರ‍್ಯಾಂಕ್‌ ಪಡೆದವರಿಗೆ ಒಳ್ಳೆಯ ಕಾಲೇಜು ಸಿಗುತ್ತದೆ ಎಂದರು.

ಮತ್ತೊಂದು ಅವಕಾಶ


ನೀಟ್‌ ಪರೀಕ್ಷೆ ತೆಗೆದುಕೊಂಡಿದ್ದರೂ ರಾಜ್ಯದ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಬೇಕಾದರೆ ಕೆಇಎಗೆ ಅರ್ಜಿ ಸಲ್ಲಿಸುವುದು ಕಡ್ಡಾಯ. ಆದರೆ, ಕೆಲವರು ಈ ರೀತಿ ಅರ್ಜಿ ಸಲ್ಲಿಸಿಲ್ಲ ಎಂದು ಹೇಳುತ್ತಿದ್ದು, ಅಂತಹವರಿಗೆ ಅನುಕೂಲ ಮಾಡಲು ನೀಟ್‌ ಫಲಿತಾಂಶದ ನಂತರ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದರು.

1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯ

ಇನ್ನೂ ರಾಜ್ಯದಲ್ಲಿ 1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯವಿದೆ. ರ‍್ಯಾಂಕ್‌ ಆಧಾರದ ಮೇಲೆ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ. ಇನ್ನೂ ಕಾಲೇಜು ಶುಲ್ಕವನ್ನು ನಿಗದಿ ಮಾಡಿಲ್ಲ. ಕಳೆದ ವರ್ಷ 40,110 ರೂಪಾಯಿ ಶುಲ್ಕ ಸರ್ಕಾರಿ ಕಾಲೇಜುಗಳಿಗೆ ಇತ್ತು. ಪ್ರಸಕ್ತ ಸಾಲಿನ ಸೀಟ್ ಮ್ಯಾಟ್ರಿಕ್ ಇನ್ನೂ ಸರ್ಕಾರದಿಂದ ಬಂದಿಲ್ಲ. ಬಂದ ನಂತರ ಕಾಲೇಜು/ಕೋರ್ಸ್ ವಾರ ಸೀಟ್ ಮ್ಯಾಟ್ರಿಕ್ಸ್ ಅನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು. ಅದೇ ರೀತಿ ಕೋರ್ಸ್ ಗಳ ಶುಲ್ಕ ನಿಗದಿ ಸಂಬಂಧ ಒಂದು ಸಭೆ ನಡೆದಿದ್ದು, ಸದ್ಯದಲ್ಲೇ ಆ ಕುರಿತು ಸರ್ಕಾರದ ಮಟ್ಟದಲ್ಲಿ ತೀರ್ಮಾನವಾಗಲಿದೆ ಎಂದರು.

ವೃತ್ತಿಪರ ಕೋರ್ಸ್‌ಗಳಲ್ಲಿ ಸರ್ಕಾರಿ ಕೋಟಾದ ಸೀಟುಗಳನ್ನು ಕೆಇಎ ಮೂಲಕವೇ ಹಂಚಿಕೆ ಮಾಡಲಾಗುತ್ತದೆ. ಈ ವಿಷಯದಲ್ಲಿ ಗೊಂದಲ ಬೇಡ. ಫಲಿತಾಂಶ ತಡ ಆಯಿತು, ಹೀಗಾಗಿ ಎಲ್ಲ ಸೀಟುಗಳನ್ನು ಖಾಸಗಿ ಕಾಲೇಜು ಆಡಳಿತ ಮಂಡಳಿಗಳು ಹೆಚ್ಚಿನ ಡೊನೇಷ್‌ ಪಡೆದು ಭರ್ತಿ ಮಾಡಿಕೊಳ್ಳುತ್ತಿವೆ ಎಂದು ಕೆಲವರು ಗೊಂದಲ ಸೃಷ್ಟಿಸುತ್ತಿದ್ದು, ಅಂತಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಪ್ರಸನ್ನ ಮನವಿ ಮಾಡಿದರು. ಕೆಇಎ ಮೂಲಕವೇ ಮೆರಿಟ್‌ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುತ್ತದೆ. ಹೀಗಾಗಿ ಇಂತಹ ಸುಳ್ಳುಸುದ್ದಿಗಳಿಗೆ ಪೋಷಕರಾಗಲಿ/ ವಿದ್ಯಾರ್ಥಿಗಳಾಗಲಿ ಗಮನ ನೀಡಬಾರದು ಎಂದು ಅವರು ಹೇಳಿದರು.

ಆನ್‌ಲೈನ್‌ನಲ್ಲೇ ವೆರಿಫಿಕೇಶನ್‌

ಈ ಬಾರಿ ವಿಶೇಷ ಮಕ್ಕಳ ವೈದ್ಯಕೀಯ ತಪಾಸಣೆ ಬಿಟ್ಟರೆ ಬಹುತೇಕ ಎಲ್ಲ ದಾಖಲೆಗಳ ಪರಿಶೀಲನೆ ಆನ್ ಲೈನ್ ನಲ್ಲಿ ನಡೆಯುತ್ತದೆ. ಯಾರೂ ಕೆಇಎ ಕಚೇರಿಗೆ ಬರುವ ಅಗತ್ಯ ಇರುವುದಿಲ್ಲ. ಎಲ್ಲ ಪ್ರಕ್ರಿಯೆಗಳು ಆನ್ ಲೈನ್‌ನಲ್ಲೆ ನಡೆಯಲಿದೆ. ಶೇ.100 ರಷ್ಟು ಡಾಕ್ಯುಮೆಂಟ್ ಪರಿಶೀಲನೆ ಆನ್‌ಲೈನ್‌ನಲ್ಲಿ ಮಾಡಲಾಗುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳು ಕೆಇಎ ಮುಂದೆ ಬಂದು ಕ್ಯೂ ನಿಲ್ಲುವ ಅವಶ್ಯಕತೆ ಇಲ್ಲ. ಎಲ್ಲಾ ದಾಖಲಾತಿಗಳನ್ನು ಆನ್‌ಲೈನ್‌ನಲ್ಲೇ ಪರಿಶೀಲನೆ ನಡೆಯಲಿದೆ ಎಂದರು. ನಿನ್ನೆ ಶನಿವಾರ (ಜೂ.1) ಸಂಜೆ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಹಠಾತ್ ಪ್ರಕಟಿಸಿದ ಬೆನ್ನಲ್ಲೇ ಭಾನುವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನ ಸುದ್ದಿಗೋಷ್ಠಿ ನಡೆಸಿ ಎಲ್ಲ ಮಾಹಿತಿಯನ್ನು ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Education News : ನೀಟ್ ಫಲಿತಾಂಶದ ಬಳಿಕ ಎಂಜಿನಿಯರ್ ಸೀಟು ಹಂಚಿಕೆ; 1.24 ಲಕ್ಷ ಸೀಟುಗಳು ಲಭ್ಯ, ಆನ್ ಲೈನ್ ಪ್ರಕ್ರಿಯೆ

Education News : ರಾಜ್ಯದಲ್ಲಿ 1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯವಿದ್ದು, ರ‍್ಯಾಂಕ್‌ ಆಧಾರದ ಮೇಲೆ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ. ಆದರೆ ನೀಟ್ ಪರೀಕ್ಷೆಯ ಫಲಿತಾಂಶದ ಬಳಿಕವೇ ಎಂಜಿನಿಯರ್ ಸೀಟು ಹಂಚಿಕೆ ಮಾಡಲಾಗುವುದು ಎಂದು ಕೆಇಎ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

VISTARANEWS.COM


on

By

education News
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೀಟ್‌ ಪರೀಕ್ಷೆಯ ಫಲಿತಾಂಶದ ಬಳಿಕವೇ ಎಂಜಿನಿಯರ್‌ ಸೀಟು ಹಂಚಿಕೆ ಮಾಡಲಾಗುವುದು ಎಂದು ಕೆಇಎ ಕಾರ್ಯ ನಿವಾರ್ಹಕ ನಿರ್ದೇಶಕ ಪ್ರಸನ್ನ (Education News) ತಿಳಿಸಿದ್ದಾರೆ. ನೀಟ್ ಫಲಿತಾಂಶಕ್ಕೂ ಮುನ್ನವೇ ಎಂಜಿನಿಯರಿಂಗ್ ಸೀಟ್ ಹಂಚಿಕೆ ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಹೀಗಾಗಿ ಮೊದಲು ಮೆಡಿಕಲ್ ಸೀಟ್ ಹಂಚಿಕೆ ಮಾಡಿ ನಂತರ ಎಂಜಿನಿಯರಿಂಗ್ ಸೀಟ್ ಹಂಚಿಕೆ ಮಾಡಲಾಗುವುದು ಎಂದರು.

ಬೇರೆ ಬೇರೆ ಕಾಲೇಜಿನಲ್ಲಿ ಈಗಾಗಲೇ ದಾಖಲಾತಿ ಪ್ರಕ್ರಿಯೆ ಆರಂಭವಾಗಿದೆ ಎಂಬ ದೂರಿನ ಕುರಿತು ಪ್ರತಿಕ್ರಿಯಿಸಿದ ಅವರು, ಸಿಇಟಿ ಪರೀಕ್ಷೆಯಲ್ಲಿ ಒಳ್ಳೆಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸೀಟ್ ಸಿಗುತ್ತದೆ. ಸೀಟ್ ಸಿಗುವುದಿಲ್ಲ ಎಂಬ ಆತಂಕದಲ್ಲಿ ಡೋನೇಷನ್ ಕೊಟ್ಟು ಅಡ್ಮಿಶನ್ ಮಾಡಿಸಬೇಡಿ. ಒಳ್ಳೆಯ ರ‍್ಯಾಂಕ್‌ ಪಡೆದವರಿಗೆ ಒಳ್ಳೆಯ ಕಾಲೇಜು ಸಿಗುತ್ತದೆ ಎಂದರು.

ಮತ್ತೊಂದು ಅವಕಾಶ


ನೀಟ್‌ ಪರೀಕ್ಷೆ ತೆಗೆದುಕೊಂಡಿದ್ದರೂ ರಾಜ್ಯದ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಬೇಕಾದರೆ ಕೆಇಎಗೆ ಅರ್ಜಿ ಸಲ್ಲಿಸುವುದು ಕಡ್ಡಾಯ. ಆದರೆ, ಕೆಲವರು ಈ ರೀತಿ ಅರ್ಜಿ ಸಲ್ಲಿಸಿಲ್ಲ ಎಂದು ಹೇಳುತ್ತಿದ್ದು, ಅಂತಹವರಿಗೆ ಅನುಕೂಲ ಮಾಡಲು ನೀಟ್‌ ಫಲಿತಾಂಶದ ನಂತರ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದರು.

ಇದನ್ನೂ ಓದಿ: KCET Result 2024: ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಲಿಂಕ್‌ ಇಲ್ಲಿದೆ

1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯ

ಇನ್ನೂ ರಾಜ್ಯದಲ್ಲಿ 1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯವಿದೆ. ರ‍್ಯಾಂಕ್‌ ಆಧಾರದ ಮೇಲೆ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ. ಇನ್ನೂ ಕಾಲೇಜು ಶುಲ್ಕವನ್ನು ನಿಗದಿ ಮಾಡಿಲ್ಲ. ಕಳೆದ ವರ್ಷ 40,110 ರೂಪಾಯಿ ಶುಲ್ಕ ಸರ್ಕಾರಿ ಕಾಲೇಜುಗಳಿಗೆ ಇತ್ತು. ಪ್ರಸಕ್ತ ಸಾಲಿನ ಸೀಟ್ ಮ್ಯಾಟ್ರಿಕ್ ಇನ್ನೂ ಸರ್ಕಾರದಿಂದ ಬಂದಿಲ್ಲ. ಬಂದ ನಂತರ ಕಾಲೇಜು/ಕೋರ್ಸ್ ವಾರ ಸೀಟ್ ಮ್ಯಾಟ್ರಿಕ್ಸ್ ಅನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು. ಅದೇ ರೀತಿ ಕೋರ್ಸ್ ಗಳ ಶುಲ್ಕ ನಿಗದಿ ಸಂಬಂಧ ಒಂದು ಸಭೆ ನಡೆದಿದ್ದು, ಸದ್ಯದಲ್ಲೇ ಆ ಕುರಿತು ಸರ್ಕಾರದ ಮಟ್ಟದಲ್ಲಿ ತೀರ್ಮಾನವಾಗಲಿದೆ ಎಂದರು.

ವೃತ್ತಿಪರ ಕೋರ್ಸ್‌ಗಳಲ್ಲಿ ಸರ್ಕಾರಿ ಕೋಟಾದ ಸೀಟುಗಳನ್ನು ಕೆಇಎ ಮೂಲಕವೇ ಹಂಚಿಕೆ ಮಾಡಲಾಗುತ್ತದೆ. ಈ ವಿಷಯದಲ್ಲಿ ಗೊಂದಲ ಬೇಡ. ಫಲಿತಾಂಶ ತಡ ಆಯಿತು, ಹೀಗಾಗಿ ಎಲ್ಲ ಸೀಟುಗಳನ್ನು ಖಾಸಗಿ ಕಾಲೇಜು ಆಡಳಿತ ಮಂಡಳಿಗಳು ಹೆಚ್ಚಿನ ಡೊನೇಷ್‌ ಪಡೆದು ಭರ್ತಿ ಮಾಡಿಕೊಳ್ಳುತ್ತಿವೆ ಎಂದು ಕೆಲವರು ಗೊಂದಲ ಸೃಷ್ಟಿಸುತ್ತಿದ್ದು, ಅಂತಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಪ್ರಸನ್ನ ಮನವಿ ಮಾಡಿದರು. ಕೆಇಎ ಮೂಲಕವೇ ಮೆರಿಟ್‌ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುತ್ತದೆ. ಹೀಗಾಗಿ ಇಂತಹ ಸುಳ್ಳುಸುದ್ದಿಗಳಿಗೆ ಪೋಷಕರಾಗಲಿ/ ವಿದ್ಯಾರ್ಥಿಗಳಾಗಲಿ ಗಮನ ನೀಡಬಾರದು ಎಂದು ಅವರು ಹೇಳಿದರು.

ಆನ್‌ಲೈನ್‌ನಲ್ಲೇ ವೆರಿಫಿಕೇಶನ್‌

ಈ ಬಾರಿ ವಿಶೇಷ ಮಕ್ಕಳ ವೈದ್ಯಕೀಯ ತಪಾಸಣೆ ಬಿಟ್ಟರೆ ಬಹುತೇಕ ಎಲ್ಲ ದಾಖಲೆಗಳ ಪರಿಶೀಲನೆ ಆನ್ ಲೈನ್ ನಲ್ಲಿ ನಡೆಯುತ್ತದೆ. ಯಾರೂ ಕೆಇಎ ಕಚೇರಿಗೆ ಬರುವ ಅಗತ್ಯ ಇರುವುದಿಲ್ಲ. ಎಲ್ಲ ಪ್ರಕ್ರಿಯೆಗಳು ಆನ್ ಲೈನ್‌ನಲ್ಲೆ ನಡೆಯಲಿದೆ. ಶೇ.100 ರಷ್ಟು ಡಾಕ್ಯುಮೆಂಟ್ ಪರಿಶೀಲನೆ ಆನ್‌ಲೈನ್‌ನಲ್ಲಿ ಮಾಡಲಾಗುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳು ಕೆಇಎ ಮುಂದೆ ಬಂದು ಕ್ಯೂ ನಿಲ್ಲುವ ಅವಶ್ಯಕತೆ ಇಲ್ಲ. ಎಲ್ಲಾ ದಾಖಲಾತಿಗಳನ್ನು ಆನ್‌ಲೈನ್‌ನಲ್ಲೇ ಪರಿಶೀಲನೆ ನಡೆಯಲಿದೆ ಎಂದರು. ನಿನ್ನೆ ಶನಿವಾರ (ಜೂ.1) ಸಂಜೆ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಹಠಾತ್ ಪ್ರಕಟಿಸಿದ ಬೆನ್ನಲ್ಲೇ ಭಾನುವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನ ಸುದ್ದಿಗೋಷ್ಠಿ ನಡೆಸಿ ಎಲ್ಲ ಮಾಹಿತಿಯನ್ನು ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
IND vs PAK
ಕ್ರಿಕೆಟ್6 mins ago

IND vs PAK: ಭಾರತ ವಿರುದ್ಧ ಶಾಂತ ಚಿತ್ತರಾಗಿ ಆಡುವ ಉಪಾಯ ಮಾಡಿದ ಕುತಂತ್ರಿ ಪಾಕ್​

Bangalore Rain
ಪ್ರಮುಖ ಸುದ್ದಿ13 mins ago

Bangalore Rain: ರಾಜಕಾಲುವೆ ಒತ್ತುವರಿ; ಮುಲಾಜಿಲ್ಲದೆ ತೆರವು ಮಾಡಲು ಡಿಕೆಶಿ ಸೂಚನೆ

Stock Market
ವಾಣಿಜ್ಯ24 mins ago

Stock Market: ಮತ್ತೊಮ್ಮೆ ಮೋದಿ ಸರ್ಕಾರದ ನಿರೀಕ್ಷೆ; ಸೆನ್ಸೆಕ್ಸ್ 2,600 ಪಾಯಿಂಟ್ಸ್‌ ಏರಿಕೆ

Dharwad Lok Sabha Constituency
ಧಾರವಾಡ32 mins ago

Dharwad Lok Sabha Constituency: ಜೋಶಿ vs ಅಸೂಟಿ; ಯಾವ ಅಭ್ಯರ್ಥಿಗೆ ಧಾರವಾಡ ಪೇಡಾ?

Anant Ambani Radhika Merchant Pre Wedding
ಫ್ಯಾಷನ್46 mins ago

Anant Ambani Radhika Merchant Pre Wedding: ಅಂಬಾನಿ ಫ್ಯಾಮಿಲಿಯ ಕ್ರ್ಯೂಸ್ ಟೂರ್‌ನಲ್ಲಿ ಸ್ಟಾರ್‌ಗಳ ಮಕ್ಕಳ ಲುಕ್‌ ಹೇಗಿದೆ ನೋಡಿ!

Vijaypur Lok Sabha Constituency
ವಿಜಯಪುರ52 mins ago

Vijaypur Lok Sabha Constituency: ವಿಜಯಪುರದಲ್ಲಿ ಅಧಿಕಾರದ ‘ಗೋಲ ಗುಮ್ಮಟ’ ಯಾರಿಗೆ?

IND vs PAK
ಕ್ರಿಕೆಟ್1 hour ago

IND vs PAK: ಸ್ನೈಪರ್ ಗನ್​ ಕಣ್ಗಾವಲಿನಲ್ಲಿ ಭಾರತ-ಪಾಕ್ ಟಿ20​ ವಿಶ್ವಕಪ್​ ಪಂದ್ಯ

Lok Sabha Election Result 2024
ದೇಶ1 hour ago

Lok Sabha Election Result 2024: ನಾಳೆ ಲೋಕಸಭೆ ಚುನಾವಣೆ ಫಲಿತಾಂಶ; ಯಾರಿಗೆ ಅಧಿಕಾರ? ನಿಮ್ಮ ಅಭಿಪ್ರಾಯ ತಿಳಿಸಿ

Maldives
ವಿದೇಶ1 hour ago

Maldives: ಇಸ್ರೇಲಿಗರ ಪ್ರವೇಶವನ್ನು ನಿಷೇಧಿಸಿದ ಮಾಲ್ಡೀವ್ಸ್‌; ಭಾರತದ ಬೀಚ್‌ಗೆ ತೆರಳಿ ಎಂದು ತಿರುಗೇಟು ನೀಡಿದ ಇಸ್ರೇಲ್‌

Cow including lineman dies of electric shock
ಉಡುಪಿ2 hours ago

Electric shock : ಪ್ರತ್ಯೇಕ ಕಡೆ‌ ಕರೆಂಟ್‌ ಶಾಕ್‌ಗೆ ಲೈನ್‌ಮ್ಯಾನ್‌ ಸೇರಿ ಹಸು ಬಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌