Teachers Day | ನಿರ್ಗತಿಕ ಹೆಣ್ಣುಮಕ್ಕಳಿಗೆ ಆಶ್ರಯ ನೀಡಿ ಗುರು ಹುದ್ದೆಗೆ ಗೌರವ ತಂದ ಗುರವ! - Vistara News

ಶಿಕ್ಷಕರ ದಿನ

Teachers Day | ನಿರ್ಗತಿಕ ಹೆಣ್ಣುಮಕ್ಕಳಿಗೆ ಆಶ್ರಯ ನೀಡಿ ಗುರು ಹುದ್ದೆಗೆ ಗೌರವ ತಂದ ಗುರವ!

ಬೆಳಗಾವಿಯ ವಡಗಾವಿ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕಿ ಸುಶೀಲಾ ಗುರವ ಕೇವಲ ಶಾಲೆಯಲ್ಲಿ ಮಾತ್ರ ಶಿಕ್ಷಕಿಯಾಗಿರದೆ ಸಮಾಜಕ್ಕೂ ಶಿಕ್ಷಕರಾದವರು. ರಾಜ್ಯ ಮಟ್ಟದ ಪ್ರಶಸ್ತಿಗೆ ಪಾತ್ರರಾದ ಅವರ ಸಾಧನೆಯ ಮಾಹಿತಿ ಇಲ್ಲಿದೆ. ಇದು ಶಿಕ್ಷಕರ ದಿನಾಚರಣೆಯ (Teacher’s Day) ವಿಶೇಷ.

VISTARANEWS.COM


on

Teacher's Day
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Teacher's Day

ಅನಿಲ್‌ ಕಾಜಗಾರ
ಬೆಳಗಾವಿ: “ಢಣಢಣ ಗಂಟೆ ಬಾರಿಸಿತು. ಶಾಲೆಗೆ ಹೋಗೋಣ, ಪಾಠ ಹೇಳೋಣ, ಮನೆಗೆ ಬರೋಣ!ʼʼ ಎಂಬ ಸಾಂಪ್ರದಾಯಿಕ ಶಿಸ್ತು ರೂಢಿಸಿಕೊಂಡ ಲಕ್ಷಾಂತರ ಶಿಕ್ಷಕರು ಸಿಗುತ್ತಾರೆ. ಆದರೆ “ಮಕ್ಕಳಿಗೆ ತಾಯಿಯೂ ಆಗೋಣ, ಶಾಲೆಗೆ ಕಾವಲಾಗೋಣ, ಸಮಾಜಕ್ಕೆ ಕನ್ನಡಿಯಾಗೋಣʼʼ ಎಂದು ನಿಲ್ಲುವವರು ವಿರಳ. ಇಂಥವರ ಸಾಲಿನಲ್ಲಿ ಬೆಳಗಾವಿಯ ವಡಗಾವಿ ಸರ್ಕಾರಿ ಪ್ರಾಥಮಿಕ ಶಾಲೆ (ನಂ.15) ಶಿಕ್ಷಕಿ ಸುಶೀಲಾ ಗುರವ ಕೂಡ ಒಬ್ಬರು.

ತಮ್ಮೊಳಗಿನ ಕಾಳಜಿ, ಕಕ್ಕುಲಾತಿಯಿಂದಲೇ ಹೆಸರಾದವರು ಇವರು. ನಾಲ್ಕು ಗೋಡೆಗಳ ಆಚೆಗೆ ಸಮಾಜಕ್ಕೂ ಶಿಕ್ಷಕರಾದವರು. ಗುರು ಎಂಬ ಹುದ್ದೆಗೇ ಗೌರವ ತಂದವರು. ಇಂಥ ಶಿಕ್ಷಕಿಯನ್ನು ಗುರುತಿಸಿರುವ ರಾಜ್ಯ ಸರ್ಕಾರ ರಾಜ್ಯಮಟ್ಟದ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಎಂಎ, ಬಿಇಡಿ ಪದವೀಧರೆ ಆಗಿರುವ ಸುಶೀಲಾ ಲಕ್ಷ್ಮಿಕಾಂತ ಗುರವ ಸದ್ಯ ಸರ್ಕಾರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Teacher's Day
ಸುಶೀಲಾ ಗುರವ

ನಿರ್ಗತಿಕ ಹೆಣ್ಣು ಮಗಳಿಗೆ ಶಿಕ್ಷಣ
ಈ ಮೊದಲು ಸುಶೀಲಾ ಗುರವ ಬೆಳಗಾವಿ ತಾಲೂಕಿನ ಬಡಸ್ ಗ್ರಾಮದ‌ ಸರ್ಕಾರಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ತಾಯಿ ಮುಖವನ್ನೇ ನೋಡದ ನಿರ್ಗತಿಕ ವಿದ್ಯಾರ್ಥಿನಿ ಸಂಗೀತಾ ಸುಣಗಾರಗೆ ಆಸರೆ ಕೊಟ್ಟು ಸಲುಹಿ 6 ನೇ ತರಗತಿಯಿಂದ ಉನ್ನತ ಹಂತದವರೆಗೆ ಶಿಕ್ಷಣ ಕೊಡಿಸಿದ್ದಾರೆ. ಆ ವಿದ್ಯಾರ್ಥಿನಿ ಈಗ ಅತಿಥಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾಳೆ!

ಶಾಲಾ ಆಸ್ತಿಯ ರಕ್ಷಣೆ
2010 ರಿಂದ 2013 ರ ಅವಧಿಯಲ್ಲಿ ಸುಶೀಲಾ ಗುರವ ವಡಗಾವಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಪ್ರಭಾರಿ ಪ್ರಧಾನ ಗುರುಮಾತೆ ಆಗಿಯೂ ಕಾರ್ಯನಿರ್ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಆವರಣದಲ್ಲಿಯೇ ಸ್ಥಳೀಯರು ಮಂದಿರಗಳನ್ನು ನಿರ್ಮಿಸಿದ್ದರು. ಆಗ ಎಸ್‌ಡಿಎಂಸಿ ಸಹಕಾರ ಪಡೆದ ಶಿಕ್ಷಕಿ ಗುರವ ಕೋರ್ಟ್ ಮೆಟ್ಟಿಲೇರಿ, ಶಾಲೆಯ ಜಾಗ ಉಳಿಸಿಕೊಳ್ಳಲು ಹೋರಾಟ ನಡೆಸಿದ್ದರು.

ಕೊನೆಗೆ ಶಾಲಾ ಆವರಣದಲ್ಲಿರುವ ಮಂದಿರಗಳ ತೆರವುಗೊಳಿಸುವಂತೆ ಕೋರ್ಟ್ ಆದೇಶ ಹೊರಡಿಸಿತ್ತು. ಕೊಠಡಿಗಳ ಸಮಸ್ಯೆ ಇದ್ದ ಕಾರಣಕ್ಕೆ ಇಲಾಖೆಯಿಂದ ಎರಡು ಹೊಸ ಕೊಠಡಿಗಳನ್ನು ಮಂಜೂರಾತಿ ಮಾಡಿಸಿ ನಿರ್ಮಿಸಲಾಯಿತು. ಆರನೇ ತರಗತಿಯವರೆಗೆ ಮಾತ್ರ ನಡೆಯುತ್ತಿದ್ದ ವರ್ಗಗಳನ್ನು ಉನ್ನತೀಕರಿಸಿ ಏಳನೇ ತರಗತಿಯನ್ನು 2011-12 ನೇ ಸಾಲಿನಲ್ಲಿ ಪ್ರಾರಂಭಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

Teacher's Day

ವೇತನದಲ್ಲೇ ಮಕ್ಕಳ ಕಲಿಕಾ ಸಾಮಗ್ರಿ!
ಕೋವಿಡ್ ಕಾರಣಕ್ಕೆ ರಾಜ್ಯ ಸರ್ಕಾರ ಶಾಲೆಗಳಿಗೆ ರಜೆ ಘೋಷಣೆ ಮಾಡಿತ್ತು. 2020-21 ನೇ ಶೈಕ್ಷಣಿಕ ವರ್ಷದಲ್ಲಿ ವಿದ್ಯಾಗಮ ಯೋಜನೆ ಜಾರಿಗೆ ತಂದಿತ್ತು. ಇವರ ವರ್ಗಕ್ಕೆ ಸಂಬಂಧಿಸಿದ ಮಕ್ಕಳು ಕೋವಿಡ್ ವೇಳೆ ಮನೆಯಲ್ಲಿ ಅಭ್ಯಾಸದಲ್ಲಿ ತೊಡಗುವಂತೆ ಒಂದು ತಿಂಗಳ ವೇತನವನ್ನು ವ್ಯಯಿಸಿ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ಒದಗಿಸಿದ್ದರು.

ಮಕ್ಕಳು ಕಲಿಕೆಯಲ್ಲಿ ತೊಡಗುವಂತೆ ನೋಡಿಕೊಂಡಿದ್ದರು. ಈ ಒಂದು ವಿಶೇಷ ಕಾರ್ಯ ಇಲಾಖೆ ಅಧಿಕಾರಿಗಳ‌ ಪ್ರಶಂಸೆಗೆ ಕಾರಣವಾಗಿತ್ತು. ಕೋವಿಡ್ 19 ಸಮಯದಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಒಳಗೊಂಡ ವಿದ್ಯಾಗಮ 2020 ಭೂಮಿಗೆ ಪುಸ್ತಕ ಹೊರತಂದಿದ್ದಾರೆ. ಪ್ರತಿ ವರ್ಷ ಇವರ ವರ್ಗದ ಮಕ್ಕಳಿಗೆ ಅವಶ್ಯಕ ಪಠ್ಯ ಸಲಕರಣೆ ಒದಗಿಸುತ್ತಾ ಬಂದಿದ್ದಾರೆ. 7ನೇ ತರಗತಿಯ ಮಕ್ಕಳ ಬೀಳ್ಕೊಡುಗೆ ಸಮಾರಂಭದಲ್ಲಿ ಎಲ್ಲ ಮಕ್ಕಳಿಗೂ ಪದಕೋಶ, ಕಂಪಾಸ್ ಬಾಕ್ಸ್ ನೀಡುತ್ತ ಬಂದಿದ್ದಾರೆ. “ಟಂಕಾಸಿರಿʼʼ ಹೆಸರಿನ ಕೃತಿಯನ್ನು ಇವರು ರಚಿಸಿದ್ದಾರೆ.

Teacher's Day

ಗುರುವ ಅವರನ್ನು ಅರಸಿ ಬಂದ ಪ್ರಶಸ್ತಿಗಳು
ಸುಶೀಲಾ ಗುರವ ಅವರ ಶೈಕ್ಷಣಿಕ ಸಾಧನೆ ಮೆಚ್ಚಿ ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ, ಡಾ. ಸ. ಜ ನಾಗಲೋಟಿಮಠ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ, ಸಾವಿತ್ರಿಬಾಯಿಪುಲೆ ಜಿಲ್ಲಾ ಪ್ರಶಸ್ತಿ, ವಿದ್ಯಾವಾರಿಧಿ ಪ್ರಶಸ್ತಿ, ಕಾಯಕಶ್ರೀ ಪ್ರಶಸ್ತಿ, ಹೆಣ್ಣು ಜಗದ ಕಣ್ಣು ವೇದಿಕೆಯಿಂದ ಶ್ರೇಷ್ಠ ಶಿಕ್ಷಣ ರತ್ನ ಪ್ರಶಸ್ತಿ, ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್ತಿನಿಂದ ಜಿಲ್ಲಾ ಗಡಿನಾಡ ಸಾಧಕ ರತ್ನ ಪ್ರಶಸ್ತಿ, ನವದೆಹಲಿಯ ಡಾಕ್ಟರ್ ಪುಟ್ಟರಾಜ ಸೇವಾ ಸಮಿತಿಯಿಂದ ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ, ಹುಬ್ಬಳ್ಳಿಯ ಕರ್ನಾಟಕ ಸೋಶಿಯಲ್ ಕ್ಲಬ್ ವತಿಯಿಂದ ಸಾವಿತ್ರಿಬಾಯಿ ಪುಲೆ ರಾಷ್ಟ್ರೀಯ ಪ್ರಶಸ್ತಿ, ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ವತಿಯಿಂದ ಡಾ. ಎಸ್ ರಾಧಾಕೃಷ್ಣನ್ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ, ಮ್ಯಾಕ್ಸ್ ಇನ್ಸೂರೆನ್ಸ್‌ನಿಂದ ಶಿಕ್ಷಾ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇದನ್ನೂ ಓದಿ | Teacher’s Day | ಪಾಳುಬಿದ್ದಿದ್ದ ಕಟ್ಟಡವನ್ನು ಮಾದರಿ ಶಾಲೆಯಾಗಿಸಿದ ಚಿಕ್ಕಬಳ್ಳಾಪುರದ ಶಿಕ್ಷಕ ಚಂದ್ರಶೇಖರ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

Raja Marga Column : ಕುರುಡಿ, ಕಿವುಡಿ ಶಿಷ್ಯೆ ಮತ್ತು ಕುರುಡಿ ಟೀಚರ್! ; ಇದು ಜಗತ್ತಿನ ಬೆಸ್ಟ್‌ ಶಿಕ್ಷಕಿಯ ಕತೆ

Raja Marga Column : ನೀವು ನಂಬಲೇಬೇಕು. ಆಕೆಗೆ ಕಣ್ಣೇ ಕಾಣಿಸುತ್ತಿರಲಿಲ್ಲ. ಆದರೆ ಆಕೆ ಕಣ್ಣೇ ಕಾಣದ, ಕಿವಿಯೂ ಕೇಳದ ಒಬ್ಬ ಹುಡುಗಿಯನ್ನು ನೆರಳಿನಂತೆ ಕಾಪಾಡಿ ಜಗತ್ತಿನ ಶ್ರೇಷ್ಠ ಲೇಖಕಿಯಾಗಿ ರೂಪಿಸುತ್ತಾರೆ. ಇದು ಪ್ರತಿಯೊಬ್ಬ ಶಿಕ್ಷಕ ಹೆಮ್ಮೆ ಪಡಬಹುದಾದ ಕಥೆ. ಜಗತ್ತಿನ ಬೆಸ್ಟ್‌ ಟೀಚರ್‌ ಕಥೆ.

VISTARANEWS.COM


on

Anne Sullivan and Helen keller
ಆನ್ನಿ ಸುಲೈವಾನ್‌ ಮತ್ತು ಹೆಲೆನ್‌ ಕೆಲ್ಲರ್‌ ಕತೆ- ಚಿತ್ರ ಪ್ರಾತಿನಿಧಿಕ
Koo
RAJAMARGA

ಇಂದು ನಾನು ನಿಮಗೆ ಜಗತ್ತಿನ ಅತಿ ಅದ್ಭುತವಾದ ಒಂದು ಗುರು ಹಾಗೂ ಶಿಷ್ಯೆಯರ ಸಂಬಂಧದ ಕಥೆ ಹೇಳಬೇಕು (Raja Marga Column). ಆಕೆ ಆನ್ನಿ ಸುಲೈವಾನ್ (Anne Sullivan, American teacher). ಹುಟ್ಟಿದ್ದು ಅಮೆರಿಕಾದ ಬೋಸ್ಟನ್ ನಗರದಲ್ಲಿ. ಬಡತನದ ಕುಟುಂಬ ಆಕೆಯದ್ದು. ತಂದೆಗೆ ಸಂಸಾರದ ಜವಾಬ್ದಾರಿ ಕಡಿಮೆ ಇತ್ತು. ತಾಯಿಗೆ ನಿರಂತರ ಕಾಯಿಲೆ. ಐದು ಮಕ್ಕಳು ಹುಟ್ಟಿದರೂ ಉಳಿದದ್ದು ಎರಡೇ ಎರಡು! ಅದರಲ್ಲಿ ಒಬ್ಬಳು ಆನ್ನಿ.

ಎಂತಹ ದುರದೃಷ್ಟ ಆಕೆಯದ್ದು ನೋಡಿ. ಆಕೆಗೆ ಐದನೇ ವರ್ಷಕ್ಕೆ ಟ್ರಕೋಮಾ (Trachoma) ಎಂಬ ಕಣ್ಣಿನ ಕಾಯಿಲೆ ಬಂದು ದೃಷ್ಟಿ ಮಂದ ಆಯಿತು. ಕ್ರಮೇಣ ದೃಷ್ಟಿಯು ಹತ್ತು ಶೇಕಡಾ ಮಾತ್ರ ಉಳಿಯಿತು! ಎಂಟನೆಯ ವರ್ಷಕ್ಕೆ ಅಮ್ಮ ತೀರಿಹೋದರು.

ಎರಡು ಮಕ್ಕಳನ್ನು ನೋಡಿಕೊಳ್ಳುವುದು ಅಸಾಧ್ಯ ಎಂದು ಭಾವಿಸಿದ ಅಪ್ಪ ಅವರನ್ನು ಅನಾಥಾಶ್ರಮಕ್ಕೆ ಸೇರಿಸಿ ಕೈ ತೊಳೆದುಕೊಂಡ! ಹಾಗೆ ಆನ್ನಿ ಮತ್ತು ಆಕೆಯ ಸೋದರ ಜಿಮ್ಮಿ ಇಬ್ಬರೂ ಅನಾಥ ಮಕ್ಕಳ ಜೊತೆಗೆ ತಮ್ಮ ಬಾಲ್ಯ ಕಳೆಯಬೇಕಾಯಿತು.

ಆ ಆಶ್ರಮದಲ್ಲಿ ತೀವ್ರ ಅನಾರೋಗ್ಯಕರವಾದ ವಾತಾವರಣ ಇತ್ತು. ಮಿತಿಗಿಂತ ಹೆಚ್ಚು ಮಕ್ಕಳನ್ನು ತುಂಬಿದ್ದರು. ಹಳಸಿದ ಅಂಬಲಿ ಕುಡಿದು ಬದುಕುವ ಅನಿವಾರ್ಯತೆ ಇತ್ತು. ಕೆಲವೇ ತಿಂಗಳಲ್ಲಿ ಸೋದರ ಜಿಮ್ಮಿ ತೀರಿ ಹೋದಾಗ ಆನ್ನಿ ಮತ್ತೆ ಒಬ್ಬಂಟಿ ಆದಳು.

Anne Sullivan and Helen keller

ಹೇಗಾದರೂ ಶಿಕ್ಷಣವನ್ನು ಪಡೆದು ಸ್ವಂತ ಕಾಲಿನ ಮೇಲೆ ನಿಲ್ಲಬೇಕು ಎಂಬ ತುಡಿತ ಹೆಚ್ಚಾದಾಗ ಆಕೆ ಕುರುಡು ಮಕ್ಕಳ ಪರ್ಕಿನ್ ಎಂಬ ಶಾಲೆಗೆ ಸೇರಿದರು. ಅಲ್ಲಿಯು ಕೂಡ ಬೇರೆ ಮಕ್ಕಳಿಂದ ಹಿಂಸೆ, ಅಪಮಾನ ಆಕೆ ಎದುರಿಸಬೇಕಾಯಿತು.

ಶಾಲೆಯ ಫೀಸ್ ಕಟ್ಟಲು ಕಷ್ಟ ಆದ ಕಾರಣ ಅಲ್ಲಿ ತಾರತಮ್ಯ ನೀತಿ ತೊಂದರೆ ಕೊಟ್ಟಿತು. ಆದರೆ ಕಲಿಯುವ ಗಟ್ಟಿ ಸಂಕಲ್ಪ ಇದೆಯಲ್ಲ ಅದು ನಿಜಕ್ಕೂ ಶ್ಲಾಘನೀಯವೇ ಆಗಿತ್ತು! ಕಣ್ಣಿನ ದೃಷ್ಟಿಯು ಪೂರ್ತಿ ಹೊರಟುಹೋದ ಕಾರಣ ಆಕೆ ಬ್ರೈಲ್ ಲಿಪಿಯಲ್ಲಿ ಅಕ್ಷರಗಳನ್ನು ಓದಲು ಮತ್ತು ಬರೆಯಲು ಕಲಿಯಬೇಕಾಯಿತು.

ಆಕೆ 20 ವರ್ಷ ಪ್ರಾಯಕ್ಕೆ ಬಂದಾಗ ಆಕೆಯ ಬದುಕಿನಲ್ಲಿ ಒಂದು ಅತ್ಯಂತ ಮಹತ್ವದ ತಿರುವು ಬಂದೇ ಬಿಟ್ಟಿತು. ಅದೇ ನಗರದಲ್ಲಿ ವಾಸಿಸುತ್ತಿದ್ದ ಕೆಲ್ಲರ್ ಕುಟುಂಬವು ಆಕೆಯನ್ನು ಸಂಪರ್ಕ ಮಾಡಿ ಒಂದು ವಿನಂತಿ ಮಾಡಿತು.

Anne Sullivan and Helen keller

ಕೆಲ್ಲರ್ ಕುಟುಂಬದ ಅತ್ಯಂತ ಪ್ರೀತಿಯ ಕುಡಿಯಾದ ಹೆಲೆನ್ ಕೆಲ್ಲರ್ ಅವಳನ್ನು ಓದಿಸಿ, ಬರೆಸುವ ಜವಾಬ್ದಾರಿ ಹೊರಲು ಸಾಧ್ಯವೇ ಎಂದು ಕೇಳಿದಾಗ ಆಕೆ ಖುಷಿಯಿಂದ ಒಪ್ಪಿದಳು. ನಮಗೆಲ್ಲರಿಗೂ ಗೊತ್ತಿರುವಂತೆ ಹೆಲೆನ್ ಕೆಲ್ಲರ್ ಸಂಪೂರ್ಣ ಕುರುಡಿ ಮತ್ತು ಕಿವುಡಿ! ಮಾತು ಕೂಡ ತೊದಲು ಆಗಿತ್ತು. ಹೆಲೆನ್ ಕೆಲ್ಲರ್ ಅತ್ಯಂತ ಸುಂದರಿಯಾದ ಗೊಂಬೆಯೇ ಆಗಿದ್ದಳು.

ಆಗ ಆನ್ನಿಗೆ 20ರ ಹರೆಯ. ಆದರೆ ಆಕೆಗೆ ತನ್ನ ಪ್ರಾಯಕ್ಕೆ ಮೀರಿದ ಪ್ರಬುದ್ಧತೆ, ಜಾಣ್ಮೆ ಹಾಗೂ ತಾಳ್ಮೆ ಇತ್ತು. ಹೆಲೆನ್ ಕೆಲ್ಲರ್ ಕೂಡ ತುಂಬಾ ಬುದ್ಧಿವಂತೆ. ಆದರೆ ಕುರುಡುತನ ಹಾಗೂ ಕಿವುಡುತನ ಅಡ್ಡಿ ಆಗಿದ್ದವು. ಆದರೆ ಆನ್ನಿ ಒಳ್ಳೆಯ ಗುರುವಾಗಿ, ಗೆಳತಿ ಆಗಿ, ತಾಯಿ ಆಗಿ ತನ್ನ ಶಿಷ್ಯೆಯನ್ನು ತಿದ್ದಿ ತೀಡಿದಳು.

ಆನ್ನಿಯು ತನ್ನ ಶಿಷ್ಯೆಯಾದ ಹೆಲೆನ್ ಕೆಲ್ಲರ್‌ ಒಂದೊಂದೇ ಅಕ್ಷರಗಳನ್ನು ಬ್ರೈಲ್ ಲಿಪಿಯ ಮೂಲಕ ಬರೆಯುವುದನ್ನು ಮತ್ತು ಓದುವುದನ್ನು ಕಲಿಸಿದರು. ವಸ್ತುಗಳ ಸ್ಪರ್ಶದಿಂದ ಅನುಭವವನ್ನು ಮತ್ತು ಲೋಕ ಜ್ಞಾನವನ್ನು ಕೊಟ್ಟರು. ಗಣಿತದ ಸಂಖ್ಯೆಗಳನ್ನು ಕೂಡಿಸು, ಕಳೆ, ಗುಣಿಸು, ಭಾಗಿಸು ಮಾಡುವುದನ್ನು ಕಲಿಸಿದರು.

Anne sullivan- Helen keller

ಜಗತ್ತಿನ ಅತೀ ಉತ್ತಮವಾದ ಪುಸ್ತಕಗಳನ್ನು ಓದಿಸಿದರು. ಆತ್ಮವಿಶ್ವಾಸವನ್ನು ತುಂಬಿದರು. ಶ್ರೇಷ್ಠ ಮೌಲ್ಯಗಳನ್ನು ತುಂಬಿದರು. ಸಂವಹನ ಕಲೆಯನ್ನು ಕಲಿಸಿದರು. ಬಹಳ ವೇದಿಕೆಯಲ್ಲಿ ಭಾಷಣಗಳನ್ನು ಮಾಡಲು ಕಲಿಸಿದರು. ನೂರಾರು ನಗರಗಳಿಗೆ ಆಕೆಯನ್ನು ಸ್ವತಃ ಕರೆದುಕೊಂಡು ಹೋಗಿ ಭಾಷಣಗಳನ್ನು ಮಾಡಿಸಿದರು. ಆಕೆಯಿಂದ ಹಲವು ಪುಸ್ತಕಗಳನ್ನು ಬರೆಸಿದರು.

ಪರಿಣಾಮವಾಗಿ ಹೆಲೆನ್ ಕೆಲ್ಲರ್ ರೆಡ್ ಕ್ಲಿಫ್ ಕಾಲೇಜಿನ ಮೊದಲ ಕುರುಡಿ ಮತ್ತು ಕಿವುಡಿ ಹುಡುಗಿಯಾಗಿ ಪದವಿ ಪಡೆದು ಹೊರಬಂದರು! ಆಕೆಯ ವ್ಯಕ್ತಿತ್ವವನ್ನು ವಿಶ್ವ ಮಟ್ಟಕ್ಕೆ ತಲುಪಿಸಿದ ಕೀರ್ತಿಯು ಖಂಡಿತವಾಗಿ ಆನ್ನಿಗೆ ದೊರೆಯಬೇಕು.

ಆನ್ನಿ ಮುಂದೆ ಹೆಲೆನ್‌ಗೆ ಆ ಕಾಲದ ಖ್ಯಾತ ವಿಜ್ಞಾನಿಗಳಾದ ಥಾಮಸ್ ಆಲ್ವಾ ಎಡಿಸನ್, ಅಲೆಕ್ಸಾಂಡರ್ ಗ್ರಹಾಂ ಬೆಲ್, ಪ್ರಸಿದ್ಧ ತತ್ವಜ್ಞಾನಿ ಮಾರ್ಕ್ ಟ್ವೈನ್ ಮೊದಲಾದವರನ್ನು ಭೇಟಿ ಮಾಡಿಸುತ್ತಾರೆ. ಹಲವು ತಾತ್ವಿಕ ನಾಟಕಗಳನ್ನು ಬರೆಯುತ್ತಾರೆ. ಮುಂದೆ ಹೆಲೆನ್ ಕೆಲ್ಲರ್ ತನ್ನ ಆತ್ಮಚರಿತ್ರೆ ಬರೆಯಲು ಸಹಾಯ ಮಾಡುತ್ತಾರೆ.

Anne sullivan

ಒಂದು ಅರ್ಧ ಕ್ಷಣ ಕೂಡ ತನ್ನ ಶಿಷ್ಯೆಯನ್ನು ಬಿಟ್ಟು ಇರದೆ ಆಕೆಯ ಬೆಂಬಲಕ್ಕೆ ನಿಲ್ಲುತ್ತಾರೆ. ತನ್ನ ಶಿಷ್ಯೆಯ ಭವಿಷ್ಯಕ್ಕಾಗಿ ತನ್ನ ಖಾಸಗಿ ಜೀವನದ ಮಧುರವಾದ ಕ್ಷಣಗಳನ್ನು ಕೂಡ ಮರೆಯುತ್ತಾರೆ! ಪರಿಣಾಮವಾಗಿ ಆಕೆ ಮದುವೆ ಆದ ಜಾನ್ ಮಾಕಿ ಅವರು ಆನ್ನಿಯನ್ನು ಬಿಟ್ಟು ಹೋಗುತ್ತಾರೆ.

ಇದನ್ನೂ ಓದಿ : Raja Marga Column : ಗೋ ಗೋ ಗೋವಾ!; ಒಂದು ಕಾಲದ ಕುಡುಕರ ರಾಜ್ಯ ಈಗ ಸಾಂಸ್ಕೃತಿಕ ರಾಜಧಾನಿ ಆಗಿದ್ದು ಹೇಗೆ?

ಆದರೆ ಗುರು ಶಿಷ್ಯೆಯರ ಪ್ರೀತಿಯ ಮಧುರ ಸಂಬಂಧವು ಕೊನೆಯವರೆಗೂ ಹಾಗೆಯೇ ಉಳಿಯುತ್ತದೆ. ಮುಂದೆ ಹೆಲೆನ್ ಕೆಲ್ಲರ್ ವಿಶ್ವಮಟ್ಟದ ಐಕಾನ್ ಆಗುತ್ತಾರೆ. ಜಗತ್ತಿನಾದ್ಯಂತ ಪ್ರವಾಸ ಹೋಗುತ್ತಾರೆ. ಆಕೆ ಹೋದಲ್ಲೆಲ್ಲ ಆನ್ನಿ ತನ್ನ ಶಿಷ್ಯೆಯ ನೆರಳಾಗಿ ಹೋಗುತ್ತಾಳೆ. ಆಕೆಯಿಂದ ಸ್ಫೂರ್ತಿ ಪಡೆದು ಹೆಲೆನ್ ಕೆಲ್ಲರ್ ಅಂಧರ ಸ್ಫೂರ್ತಿ ದೇವತೆ ಆಗುತ್ತಾರೆ. ಜಾಗತಿಕ ಲಯನ್ಸ್ ಸಂಸ್ಥೆ ಅವರನ್ನು ತನ್ನ ಐಕಾನ್ ಆಗಿ ಸ್ವೀಕಾರ ಮಾಡಿತು.
ಹೆಲೆನ್ ಕೆಲ್ಲರ್ ಅವರ ಸಾಧನೆಯ ಯಾವ ಪುಟವನ್ನು ಓದಿದರೂ ಅವರ ಗುರುವಾದ ಆನ್ನಿ ಸುಲೈವಾನ್ ಉಲ್ಲೇಖ ಮಾಡದೆ ಅದು ಪೂರ್ತಿ ಆಗುವುದಿಲ್ಲ!

Continue Reading

ಉತ್ತರ ಕನ್ನಡ

Teachers Day: ಶಿಕ್ಷಕ ನಾರಾಯಣ ಭಾಗ್ವತ್‌ಗೆ ರಾಷ್ಟ್ರಮಟ್ಟದ ಅತ್ಯುತ್ತಮ‌ ಶಿಕ್ಷಕ ಪ್ರಶಸ್ತಿ

Teachers Da : ಶಿರಸಿಯ ಮಾರಿಕಾಂಬಾ ಪ್ರೌಢಶಾಲೆಯ ಕನ್ನಡ‌ ಶಿಕ್ಷಕ, ರಂಗಭೂಮಿ ಕಲಾವಿದ ನಾರಾಯಣ ಭಾಗ್ವತ್ ಅವರಿಗೆ ನವ ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ‌ ಮುರ್ಮು ಅವರು ಮಂಗಳವಾರ ರಾಷ್ಟ್ರಮಟ್ಟದ ಅತ್ಯುತ್ತಮ‌ ಶಿಕ್ಷಕ ಪ್ರಶಸ್ತಿ‌ ಪ್ರದಾನ ಮಾಡಿದರು.

VISTARANEWS.COM


on

Sirsi Kannada Teacher Narayan Bhagwat was awarded the national level best teacher award
ಶಿರಸಿಯ ಮಾರಿಕಾಂಬಾ ಪ್ರೌಢಶಾಲೆಯ ಕನ್ನಡ‌ ಶಿಕ್ಷಕ ನಾರಾಯಣ ಭಾಗ್ವತ್ ಅವರಿಗೆ ನವದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ‌ ಮುರ್ಮು ಅವರು ಮಂಗಳವಾರ ರಾಷ್ಟ್ರಮಟ್ಟದ ಅತ್ಯುತ್ತಮ‌ ಶಿಕ್ಷಕ ಪ್ರಶಸ್ತಿ‌ ಪ್ರದಾನ ಮಾಡಿದರು.
Koo

ಶಿರಸಿ: ಇಲ್ಲಿನ ಮಾರಿಕಾಂಬಾ ಪ್ರೌಢಶಾಲೆಯ ಕನ್ನಡ‌ ಶಿಕ್ಷಕ (Kannada Teacher), ರಂಗಭೂಮಿ ಕಲಾವಿದ (Theater Artist) ನಾರಾಯಣ ಭಾಗ್ವತ್ ಅವರಿಗೆ ನವದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ‌ ಮುರ್ಮು ಅವರು ಮಂಗಳವಾರ ರಾಷ್ಟ್ರಮಟ್ಟದ (Teachers Day 2023) ಅತ್ಯುತ್ತಮ‌ ಶಿಕ್ಷಕ ಪ್ರಶಸ್ತಿ‌ (Best Teacher Award) ಪ್ರದಾನ ಮಾಡಿದರು.‌

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹಂದಿಗೋಣದ ನಾರಾಯಣ ಭಾಗ್ವತ್ ಅವರು ಕತೆ-ಕವನ-ನಾಟಕ ರಚನೆ , ಚಿತ್ರಕಲೆ , ಸಂಗೀತ , ನಾಟಕ ನಿರ್ದೇಶನ ಮತ್ತು ಅಭಿನಯ , ಉಪನ್ಯಾಸ , ರಜಾ ಶಿಬಿರಗಳ ಸಂಘಟನೆ , ಪೇಪರ್ ಕ್ರಾಫ್ಟ್ , ಹಾರ್ಮೋನಿಯಂ ವಾದನ , ನಾಟಕದ ವೇಷಭೂಷಣ ಮತ್ತು ವರ್ಣಾಲಂಕಾರ , ಯಕ್ಷಗಾನ , ಕರಕುಶಲ ಕಲೆ , ವಾಸ್ತು ಜ್ಞಾನ ಹೀಗೆ ಬಹುಮುಖಿ ಪ್ರತಿಭೆ ಉಳ್ಳವರು.

ಇದನ್ನೂ ಓದಿ: National Nutrition Week 2023: ಸಿರಿಧಾನ್ಯ ಸೇವನೆಯಿಂದ ಎಷ್ಟೊಂದು ಪ್ರಯೋಜನ! ಸೈಡ್‌ ಎಫೆಕ್ಟ್‌ ಇದೆಯಾ?

ಈಗಾಗಲೆ ರಾಷ್ಟ್ರಪತಿಗಳ ಬೆಳ್ಳಿ ಪದಕ , ಕನ್ನಡ ರತ್ನ ಶಿಕ್ಷಕ ಪ್ರಶಸ್ತಿ , ಸುವರ್ಣ ಸಂಭ್ರಮ ಶಿಕ್ಷಕ ಪ್ರಶಸ್ತಿ , ಅತ್ಯುತ್ತಮ ಮಕ್ಕಳ ನಾಟಕ ನಿರ್ದೇಶಕ ಪ್ರಶಸ್ತಿ , ಅತ್ಯುತ್ತಮ ನಟ ,ತಾಲೂಕು ಮತ್ತು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ , ರಾಜ್ಯ ಜ್ಞಾನ ಸಿಂಧು ಪ್ರಶಸ್ತಿ , ನೇಶನ್ ಬ್ಯುಲ್ಡರ್ ಪ್ರಶಸ್ತಿ , ಕ.ಸಾ.ಪ. ತಾಲೂಕು ಪ್ರಶಸ್ತಿ , ರಾಜ್ಯ ಸಿರಿ ಕನ್ನಡ ನುಡಿ ಪ್ರಶಸ್ತಿ , ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ , ರಾಷ್ಟ್ರಮಟ್ಟದ ಉತ್ತಮ ನಾಟಕ ನಿರ್ದೇಶಕ ಪ್ರಶಸ್ತಿಯೂ ಸೇರಿದಂತೆ ಹತ್ತಾರು ಪ್ರಶಸ್ತಿ – ಪುರಸ್ಕಾರಗಳನ್ನು ನೀಡಿ ಈಗಾಗಲೇ ಗೌರವಿಸಲಾಗಿದೆ‌. ಕನ್ನಡ ಭಾಷಾ ಶಿಕ್ಷಕರಾಗಿ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡು ಪ್ರಶಸ್ತಿ ಪಡೆದಿರುವುದೂ ವಿಶೇಷವಾಗಿದೆ.

Continue Reading

ಚಿತ್ರದುರ್ಗ

ಮಲ್ಲಾಡಿಹಳ್ಳಿ ಕಾಲೇಜು ಹಳೆಯ ವಿದ್ಯಾರ್ಥಿಗಳಿಂದ ಗುರುವಂದನೆ: 35 ವರ್ಷದ ಹಿಂದಿನ ಶಿಕ್ಷಣಾರ್ಥಿಗಳ ಸಮ್ಮಿಲನ

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಪಾರ ಸೇವಾ ಚಟುವಟಿಕೆಗಳು ಸಾಗುತ್ತಿವೆ.

VISTARANEWS.COM


on

Koo

ಬೆಂಗಳೂರು: ಶಿಕ್ಷಣ ನೀಡಿದ ಗುರುಗಳನ್ನು ಎಂದಿಗೂ ಮರೆಯಬಾರದು ಎನ್ನುವುದನ್ನು ಪಾಲಿಸುತ್ತಿರುವ ಮೂವತ್ತೈದು ವರ್ಷದ ಹಿಂದಿನ ವಿದ್ಯಾರ್ಥಿಗಳ ಗುಂಪು, ಅಂದಿನ ಗುರುಗಳ ಬಳಿಗೆ ಸಾಗಿ ವಂದನೆ ಸಲ್ಲಿಸಿದೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಪಾರ ಸೇವಾ ಚಟುವಟಿಕೆಗಳು ಸಾಗುತ್ತಿವೆ. ಅನಾಥ ಸೇವಾಶ್ರಮದ ಅದೀನದಲ್ಲಿನ ʼಸರ್ವ ಸೇವಾ ಬೋಧಕ ಶಿಕ್ಷಣಾಲಯ (ಎಸ್‌ಎಸ್‌ಬಿಎಸ್‌) TCH Collegeನಿಂದ ಅನೇಕ ಉತ್ತಮ ಶಿಕ್ಷಕರನ್ನು ರೂಪಿಸಲಾಗಿದೆ.

ಉತ್ತಮ ಶಿಕ್ಷಣ ಸೇವೆ ಹಾಗೂ ಸಂಸ್ಕಾರ ಕಲಿಸುವ ಕೇಂದ್ರವಾಗಿದ್ದ ವಿದ್ಯಾಲಯದಲ್ಲಿ ಅಧೀಕ್ಷಕರಾಗಿದ್ದವರು ಬಿ.ಎಸ್‌. ವತ್ಸನ್‌ ಅವರು. ಈಗ 90 ವರ್ಷದವರಾದ ವತ್ಸನ್‌ ಅವರು ಬೆಂಗಳೂರಿನ ಬನಶಂಕರಿಯಲ್ಲಿ ವಾಸವಿದ್ದಾರೆ. ವತ್ಸನ್‌ ಅವರಿಂದ ಶಿಕ್ಷಣ ಕಲಿತ ಶಿಕ್ಷಣಾರ್ಥಿಗಳು ಇತ್ತೀಚೆಗೆ ಒಟ್ಟಾಗಿ ಸೇರಿ ಗುರುವಂದನೆ ಸಲ್ಲಿಸಿದರು.

1983-87ನೇ ಬ್ಯಾಚ್ ಪ್ರಶಿಕ್ಷಣಾರ್ಥಿಗಳು ವತ್ಸನ್ ಅವರಿಗೆ ಗುರುವಂದನೆ ಸಲ್ಲಿಸಿ ಅವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ತಮ್ಮ ಜೀವನ ವೃತ್ತಾಂತವನ್ನು ವತ್ಸನ್‌ ಅವರು ನೆನೆದರು. ಗೋಕರ್ಣದಲ್ಲಿ ಶಿಕ್ಷಕನಾಗಿ ಕೆಲಸಕ್ಕೆ ಸೇರಿದ್ದು, ನಂತರ ಅಲ್ಲಿ ಸಮಾಧಾನವಾಗದೆ ಮೈಸೂರಿಗೆ ವಾಪಸಾದದ್ದು, ಹಾಸನದಲ್ಲಿ ತಿಪ್ಪೇಸ್ವಾಮಿ ಎಂಬ ಡಿಸಿಯವರ ಸಲಹೆ ಮೇರೆಗೆ ಮತ್ತೊಂದು ಕೆಲಸಕ್ಕೆ ಸೇರಿದ್ದು, ಅದನ್ನೂ ತ್ಯಜಿಸಿದ್ದ ಸಂದರ್ಭದಲ್ಲಿ ರಾಘವೇಂದ್ರ ಸ್ವಾಮಿಗಳ ಭೇಟಿಯಾಗಿ ಮಲ್ಲಾಡಿಹಳ್ಳಿಗೆ ಆಗಮಿಸಿದ್ದನ್ನು ಸ್ಮರಿಸಿದರು.

ಇದನ್ನೂ ಓದಿ | ರಾಜ ಮಾರ್ಗ ಅಂಕಣ |ಮೌಲ್ಯಗಳನ್ನು ಬೋಧನೆ ಮಾಡದೆ ಅವುಗಳನ್ನೇ ಬದುಕಿದ ಮಹಾ ಗುರು ಪ್ರೊ. ಎಚ್.‌ ನರಸಿಂಹಯ್ಯ

Continue Reading

ಕರ್ನಾಟಕ

Teachers Day | ಗುರುಗಳಿಂದ ಚಾರಿತ್ರ್ಯ ನಿರ್ಮಾಣ ಕಾರ್ಯ: ಸಿಎಂ ಬಸವರಾಜ ಬೊಮ್ಮಾಯಿ

ವಿಧಾನಸೌಧದಲ್ಲಿ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

VISTARANEWS.COM


on

Teachers Day
Koo

ಬೆಂಗಳೂರು: ಶಿಕ್ಷಕರ ಕೆಲಸ ಅತ್ಯಂತ ಕಠಿಣವಾದ ಕೆಲಸ. ಈ ವೃತ್ತಿಗೆ ಗೌರವ ಬರಬೇಕು, ಸಮಾಜದಲ್ಲಿ ತನ್ನದೇ ಆದ ಸ್ಥಾನ ಬರಬೇಕು. ದೇಶಕ್ಕೆ ದೊಡ್ಡ ಚರಿತ್ರೆ ಇದೆ. ನಾವು ಏನಾದರೂ ತಪ್ಪು ಮಾಡಿದರೆ ಮೊದಲು ತಾಯಿ ತಿದ್ದುತ್ತಾಳೆ, ನಂತರ ಗುರುಗಳು ತಿದ್ದುತ್ತಾರೆ. ಚಾರಿತ್ರ್ಯ ನಿರ್ಮಾಣ ಮಾಡುವ ಕೆಲಸವನ್ನು ಗುರುಗಳು (Teachers Day) ಮಾಡುತ್ತಾರೆ. ಪ್ರತಿಯೊಬ್ಬ ಗುರುವೂ ವಿದ್ಯಾರ್ಥಿಗಳನ್ನು ಸುಚಾರಿತ್ರ್ಯವಂತರನ್ನಾಗಿ ನಿರ್ಮಾಣ ಮಾಡಬೇಕು. ಬೆಳೆಯುವ ಸಸಿಯಲ್ಲಿಯೇ ಆಚರಣೆಯನ್ನು ರೂಢಿ ಮಾಡಿದರೆ ಆ ಮಗು ಸಮಾಜಕ್ಕೆ ಕೊಡುಗೆ ನೀಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸೌಧದಲ್ಲಿ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಸಮಗ್ರ ಶಿಕ್ಷಣ ಇಲಾಖೆ ವತಿಯಿಂದ ಸೋಮವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ಇದನ್ನೂ ಓದಿ | Teachers Day | ವಿಜ್ಞಾನ ಪ್ರಯೋಗಾಲಯ ರೂಪಿಸಿ ರಾಜ್ಯಕ್ಕೇ ಮಾದರಿಯಾದ ಕೊಡಗಿನ ಇಬ್ರಾಹಿಂ

ಪಠ್ಯ ಪುಸ್ತಕ ಪರಿಷ್ಕರಣೆ ಕುರಿತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪರ-ವಿರೋಧ ಅಭಿಪ್ರಾಯ ಇರುತ್ತದೆ. ಆದರೆ, ಚಾರಿತ್ರ್ಯ ಬೆಳೆಸುವುದು, ನಿರ್ಮಾಣ ಮಾಡುವುದು ಬಹಳ ಮುಖ್ಯ. ಹೀಗಾಗಿ ಇದರಲ್ಲಿ ಯಾವುದೇ ರಾಜೀ ಇಲ್ಲ. ನಾನು ನಿಮ್ಮ ಜತೆ ಶಿಕ್ಷಕರಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದೇನೆ. ದಿನ ನಿತ್ಯ ಕಲಿತಿದ್ದೇನೆ, ಕಲಿಸುತ್ತಿದ್ದೇನೆ. ರಾಜ್ಯದಲ್ಲಿ ಒಳ್ಳೆಯ ಆಡಳಿತ ಕೊಡಲು ನಾನು ನನ್ನ ಪ್ರಯತ್ನಗಳನ್ನು ಮಾಡುತ್ತಿದ್ದೇನೆ ಎಂದು ಹೇಳಿದರು.

ಮನುಷ್ಯನ ಬುದ್ಧಿಯಿಂದ ಜ್ಞಾನ, ಜ್ಞಾನದಿಂದ ಭಾಷೆ, ಭಾಷೆಯಿಂದ ಅಕ್ಷರ ಸೃಷ್ಟಿಯಾಗುತ್ತದೆ. ಭಾಷೆಯಿಂದ ಜ್ಞಾನವೃದ್ಧಿ, ಜ್ಞಾನದಿಂದ ವಿಜ್ಞಾನ, ವಿಜ್ಞಾನದಿಂದ ತಂತ್ರಜ್ಞಾನ ಬೆಳವಣಿಗೆಯಾಗಿದೆ. ಶಿಕ್ಷಣದ ಜೀವಾಳ ಶಿಕ್ಷಕರು. ಶಿಕ್ಷಕರಿಲ್ಲದ ಶಿಕ್ಷಣವನ್ನು ಊಹಿಸಲಾಗದು. ಅನಾದಿಕಾಲದಿಂದಲೂ ಗುರುಗಳಿದ್ದಾರೆ. ಬದುಕಿನಲ್ಲಿ ಎಲ್ಲ ಹಂತದಲ್ಲೂ ನಾವು ಕಲಿಯಲು ಸಾಧ್ಯವಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಶಿಕ್ಷಣ ತಜ್ಞ ದೊರೆಸ್ವಾಮಿ, ವಿಧಾನಪರಿಷತ್ ಸದಸ್ಯರಾದ ಪುಟ್ಟಣ್ಣ, ಶಾಂತಾರಾಂ ಸಿದ್ದಿ, ಅರುಣ್ ಕುಮಾರ್ ಭಾಗಿಯಾಗಿದ್ದರು.

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ
ಕರ್ನಾಟಕ ಶಿಕ್ಷಣ ಇಲಾಖೆಯಿಂದ ಕಾರ್ಯಕ್ರಮದಲ್ಲಿ 2022-23ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. 20 ಪ್ರಾಥಮಿಕ ಮತ್ತು 11 ಪ್ರೌಢಶಾಲಾ ಶಿಕ್ಷಕರಿಗೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಿಕ್ಷಕಿಯರಿಗೆ ಅಕ್ಷರ ಮಾತೆ “ಸಾವಿತ್ರಿಬಾಯಿ ಫುಲೆ” ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರತಿ ಶಿಕ್ಷಕರಿಗೆ 10 ಸಾವಿರ ರೂ. ನಗದು ಬಹುಮಾನ ನೀಡಲಾಗಿದೆ.

ನಾನು ಕೂಡ ಬ್ಯಾಕ್‌ ಬೆಂಚ್‌ ಸ್ಟುಡೆಂಟ್‌

ಮನುಷ್ಯನಿಗೆ ಎರಡು ವಿಚಾರದಲ್ಲಿ ಬಹಳ ಸವಾಲು ಇರುತ್ತದೆ. ನಾವು ಹುಟ್ಟಿದಾಗಿನಿಂದ ಇಲ್ಲಿವರಗೆ ಹೋಲಿಕೆ ಮಾಡಿದರೆ ನಾವು ಮುಗ್ಧತೆ ಕಳೆದುಕೊಂಡಿರುತ್ತೇವೆ. ಮಕ್ಕಳಲ್ಲಿ ಮಾತ್ರ ಆ ಮುಗ್ಧತೆ ಇರುತ್ತದೆ, ಆ ಮುಗ್ಧತೆಯನ್ನು ಜೀವಾಂತವಾಗಿ ಇಡುವವರು ಶಿಕ್ಷಕರು, ನಾನು ಕೂಡ ವಿದ್ಯಾರ್ಥಿಯಾಗಿದ್ದವ, ಬ್ಯಾಂಕ್ ಬೆಂಚ್‌ನಲ್ಲಿ ನಾನು ಕೂತಿದ್ದೇನೆ ಎಂದು ಹೇಳಿದರು.

ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಯಾವುದಾದರೂ ವಿಚಾರದಲ್ಲಿ ಪ್ರಶ್ನೆ ಹಾಕಿ ಅದಕ್ಕೆ ಉತ್ತರಿಸದಿದ್ದಾಗ ಮಕ್ಕಳ ತಲೆಗೆ ಹೊಡೆಯಬೇಡಿ. ಪ್ರಶ್ನೆ ಕೇಳುವ ಹಕ್ಕು ಆ ಮಕ್ಕಳಿಗೆ ಇರುತ್ತದೆ ಎಂದು ಹೇಳಿದರು.

ತಮ್ಮ ಕಾಲೇಜು ಜೀವನದ ಪ್ರಿನ್ಸಿಪಲ್ ಚಂದ್ರೇಶೇಖರ್ ಬೆಲ್ಲದ್ ಅವರನ್ನು ಸ್ಮರಿಸಿದ ಸಿಎಂ, ಪ್ರಾಂಶುಪಾಲರು ತುಂಬಾ ಬುದ್ಧಿವಂತರಾಗಿದ್ದರು. ಗಣಿತ ವಿಷಯದಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದರು. ಹಾಸ್ಯಭರಿತ ಮಾತುಗಳಿಂದ ವಿದ್ಯಾರ್ಥಿಗಳ ಗಮನವನ್ನು ಪಾಠದತ್ತ ಸೆಳೆಯುತ್ತಿದ್ದರು ಎಂದರು.

ಶಿಕ್ಷಕರ ಜತೆಗೆ ಬುದ್ಧಿವಂತಿಕೆಯಲ್ಲಿ ನಾನು ಪೈಪೋಟಿ ಮಾಡಲ್ಲ. ಆದರೆ, ಹೃದಯದಿಂದ ಮಾತನಾಡುತ್ತೇನೆ. ನಿಮ್ಮನ್ನೆಲ್ಲ ನೋಡಿದರೆ ನನಗೆ ಕಾಲೇಜು ದಿನಗಳು ನೆನಪಾಗುತ್ತವೆ. ನೀವು ಕಾಲೇಜು ಕ್ಯಾಂಪಸ್‌ನಲ್ಲಿದ್ದರೆ, ನಾವು ಬದುಕಿನ ಕ್ಯಾಂಪಸ್‌ನಲ್ಲಿ ಇದ್ದೇವೆ. ಯಾವುದೇ ವ್ಯಕ್ತಿಗೆ ಒಂದು ಸ್ಥಾನಮಾನ ಸಿಕ್ಕಿದೆ ಎಂದರೆ‌ ಅದು‌ ಜಗತ್ತಿನಲ್ಲಿ ಇರುವ ಗುರುಗಳಿಂದ ಮಾತ್ರ ಎಂದರು.

ಸಮಾರಂಭದಲ್ಲಿ ಸಚಿವರಾದ ಅಶ್ವತ್ಥನಾರಾಯಣ್, ಬೈರತಿ ಬಸವರಾಜ್ ಸೇರಿದಂತೆ ಆರು ಜಿಲ್ಲೆಗಳ ಉಪನ್ಯಾಸಕರು ಉಪಸ್ಥಿತರಿದ್ದರು.

ಇದನ್ನೂ ಓದಿ | Death News | ಶಿಕ್ಷಕರ ದಿನದಂದೇ ನಿವೃತ್ತ ಶಿಕ್ಷಕ, ಮಾಜಿ ಸಚಿವ ಪ್ರಭಾಕರ ರಾಣೆ ನಿಧನ

Continue Reading
Advertisement
Chikkaballapur Lok Sabha Constituency Congress candidate Raksha Ramaiah election campaign in Yalahanka
ಬೆಂಗಳೂರು11 mins ago

Lok Sabha Election 2024: ಬಿಜೆಪಿ ಆಡಳಿತದಲ್ಲಿ ಶೇ. 5ರಷ್ಟೂ ಉದ್ಯೋಗ ಸೃಷ್ಟಿಯಾಗಿಲ್ಲ: ರಕ್ಷಾ ರಾಮಯ್ಯ

kaalnadige Jatha programme in Uttara kannada
ಉತ್ತರ ಕನ್ನಡ35 mins ago

Lok Sabha Election 2024: ಉ.ಕ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಮತದಾನದ ಗುರಿ; ಡಿಸಿ

Bangalore Rural Lok Sabha Constituency Congress candidate D K Suresh Election campaign
ಬೆಂಗಳೂರು ಗ್ರಾಮಾಂತರ37 mins ago

Lok Sabha Election 2024: ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿ: ಡಿ.ಕೆ. ಸುರೇಶ್

Neha Murder Case
ಕರ್ನಾಟಕ37 mins ago

Neha Murder Case: ನನ್ನ ಮಗನಿಗೆ ಶಿಕ್ಷೆ ಆಗಬೇಕು; ಯಾರೂ ಇಂಥ ಕೃತ್ಯ ಎಸಗಬೇಡಿ ಎಂದು ಫಯಾಜ್‌ ತಂದೆ ಕಣ್ಣೀರು

IPL 2024
ಪ್ರಮುಖ ಸುದ್ದಿ41 mins ago

IPL 2024 : ಇಂಪ್ಯಾಕ್ಟ್​ ಪ್ಲೇಯರ್ ನಿಯಮಕ್ಕೆ ಆಕ್ಷೇಪ ಎತ್ತಿದ ರಿಕಿ ಪಾಂಟಿಂಗ್​

Lok Sabha Election 2024
Lok Sabha Election 202443 mins ago

Lok Sabha Election 2024: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ; ಕಾರಣ ಇದು

Day 2 of CET 2024 Exam 26 out of syllabus question KEA asks to raise objections by April 27
ಶಿಕ್ಷಣ1 hour ago

CET 2024 Exam: ಸಿಇಟಿ ಪರೀಕ್ಷೆಯ 2ನೇ ದಿನವೂ 26 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ! ಏ.27ರೊಳಗೆ ಆಕ್ಷೇಪಣೆ ಸಲ್ಲಿಸಲು KEA ಸೂಚನೆ

Maldives Tourism
ವಿದೇಶ1 hour ago

Maldives Tourism: ಪರಿಣಾಮ ಬೀರಿದ ಮಾಲ್ಡೀವ್ಸ್ ಬಹಿಷ್ಕಾರದ ಕೂಗು; ಭೇಟಿ ನೀಡುವ ಭಾರತೀಯರ ಸಂಖ್ಯೆಯಲ್ಲಿ ಭಾರೀ ಕುಸಿತ

IPL 2024
ಕ್ರೀಡೆ1 hour ago

IPL 2024 : ಪಾಂಡ್ಯ ಅಂದ್ರೆ ಡೋಂಟ್​ ಕೇರ್​, ರೋಹಿತ್​ಗೆ ಫುಲ್​ ರೆಸ್ಪೆಕ್ಟ್​; ಯುವ ಬೌಲರ್​ನ ನಡೆ ಫುಲ್ ವೈರಲ್​

Party symbols
ರಾಜಕೀಯ2 hours ago

Party Symbols: ವಿವಿಧ ಪಕ್ಷಗಳ ಚುನಾವಣಾ ಚಿಹ್ನೆ ಹಿಂದೆ ಹೇಗಿತ್ತು, ಈಗ ಏನಾಗಿದೆ? ಸಂಗ್ರಹಯೋಗ್ಯ ಮಾಹಿತಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ6 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ17 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌