UPSC: ಐಇಎಸ್‌ / ಐಎಸ್‌ಎಸ್‌ಇ 2024 ಪರೀಕ್ಷೆಯ ದಿನಾಂಕ ಪ್ರಕಟ: ಇಲ್ಲಿದೆ ವೇಳಾಪಟ್ಟಿ - Vistara News

ಶಿಕ್ಷಣ

UPSC: ಐಇಎಸ್‌ / ಐಎಸ್‌ಎಸ್‌ಇ 2024 ಪರೀಕ್ಷೆಯ ದಿನಾಂಕ ಪ್ರಕಟ: ಇಲ್ಲಿದೆ ವೇಳಾಪಟ್ಟಿ

UPSC: ಕೇಂದ್ರ ಲೋಕ ಸೇವಾ ಆಯೋಗವು 2024ನೇ ಸಾಲಿನ ಇಂಡಿಯನ್ ಎಕನಾಮಿಕ್ ಸರ್ವಿಸ್ ಮತ್ತು ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್ ಎಕ್ಸಾಮಿನೇಷನ್ನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಯುಪಿಎಸ್‌ಸಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಟೈಮ್‌ ಟೇಬಲ್‌ ಪ್ರಕಟಿಸಿದ್ದು, ಈ ಬಗ್ಗೆ ವಿವರ ಇಲ್ಲಿದೆ.

VISTARANEWS.COM


on

UPSC
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC)ವು 2024ನೇ ಸಾಲಿನ ಇಂಡಿಯನ್ ಎಕನಾಮಿಕ್ ಸರ್ವಿಸ್ (Indian Economic Service-IES) / ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್ ಎಕ್ಸಾಮಿನೇಷನ್ (Indian Statistical Service Examination-ISSE)ನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಯುಪಿಎಸ್‌ಸಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಟೈಮ್‌ ಟೇಬಲ್‌ ಪ್ರಕಟಿಸಿದ್ದು, ಈ ಬಗ್ಗೆ ವಿವರ ಇಲ್ಲಿದೆ.

ಯಾವಾಗ, ಯಾವ ಪರೀಕ್ಷೆ?

ಯುಪಿಎಸ್‌ಸಿ ಐಇಎಸ್ / ಐಎಸ್ಎಸ್ಇ 2024 ಪರೀಕ್ಷೆಗಳು ಜೂನ್ 21ರಂದು ಆರಂಭವಾಗಲಿದ್ದು, 22, 23ರಂದು ನಡೆಯಲಿದೆ. ಈ ಪರೀಕ್ಷೆ ಸಾಮಾನ್ಯ ಇಂಗ್ಲಿಷ್, ಸಾಮಾನ್ಯ ಅಧ್ಯಯನ, ಸಾಮಾನ್ಯ ಅರ್ಥಶಾಸ್ತ್ರ, ಸಂಖ್ಯಾಶಾಸ್ತ್ರ ಮತ್ತು ಭಾರತೀಯ ಅರ್ಥಶಾಸ್ತ್ರ ಸೇರಿದಂತೆ ವಿವಿಧ ವಿಷಯಗಳಲ್ಲಿ ನಡೆಯಲಿದೆ. ಆರ್ಥಿಕ ಮತ್ತು ಸಂಖ್ಯಾಶಾಸ್ತ್ರೀಯ ಕ್ಷೇತ್ರಗಳಲ್ಲಿ ವೃತ್ತಿ ಜೀವನದ ನಡೆಸಲು ಬಯಸುವವರು ಈ ಪ್ರತಿಷ್ಠಿತ ಪರೀಕ್ಷೆಯ ವೇಳಾಪಟ್ಟಿಯನ್ನು ಎಚ್ಚರಿಕೆಯಿಂದ ಗಮನಿಸುವಂತೆ ಪ್ರಕಟಣೆ ತಿಳಿಸಿದೆ. ಪ್ರಶ್ನೆ ಪತ್ರಿಕೆ ವಸ್ತುನಿಷ್ಠ ಪ್ರಶ್ನೆಗಳು ಮತ್ತು ವಿವರಣಾತ್ಮಕ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.

ಜೂನ್‌ 21ರಂದು ಬೆಳಿಗ್ಗೆ 9 ಗಂಟೆಗೆ ಸಾಮಾನ್ಯ ಇಂಗ್ಲಿಷ್‌ ಮತ್ತು ಅಪರಾಹ್ನ 2.30ಕ್ಕೆ ಸಾಮಾನ್ಯ ಅಧ್ಯಯನ ಪರೀಕ್ಷೆ ನಡೆಯಲಿದೆ. ಜೂನ್‌ 22ರಂದು ಬೆಳಿಗ್ಗೆ 9 ಗಂಟೆಗೆ ಸಾಮಾನ್ಯ ಅರ್ಥಶಾಸ್ತ್ರ-I, ಸ್ಟ್ಯಾಟಿಸ್ಟಿಕ್ಸ್‌-I ಮತ್ತು ಅಪರಾಹ್ನ 2.30ರಿಂದ ಸಾಮಾನ್ಯ ಅರ್ಥಶಾಸ್ತ್ರ-II ಹಾಗೂ ಸ್ಟ್ಯಾಟಿಸ್ಟಿಕ್ಸ್‌-II ಎಕ್ಸಾಂ ಆಯೋಜಿಸಲಾಗಿದೆ. ಇನ್ನು ಜೂನ್‌ 23ರಂದು ಬೆಳಿಗ್ಗೆ 9 ಗಂಟೆಯಿಂದ ಸಾಮಾನ್ಯ ಅರ್ಥಶಾಸ್ತ್ರ-III ಮತ್ತು ಸ್ಟ್ಯಾಟಿಸ್ಟಿಕ್ಸ್‌-III ಹಾಗೂ ಅಪರಾಹ್ನ 2.30ರಿಂದ ಭಾರತೀಯ ಅರ್ಥಶಾಸ್ತ್ರ ಹಾಗೂ ಸ್ಟ್ಯಾಟಿಸ್ಟಿಕ್ಸ್‌-IV ಪರೀಕ್ಷೆ ನಡೆಯಲಿದೆ.

ವೇಳಾಪಟ್ಟಿ ವೀಕ್ಷಿಸಲು ಹೀಗೆ ಮಾಡಿ

  • ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://upsc.gov.in/ಗೆ ಭೇಟಿ ನೀಡಿ.
  • ಬಲಭಾಗದಲ್ಲಿ ಕಾಣಿಸುವ What’s New ಆಯ್ಕೆಯ ಕೆಳಗೆ ಕಂಡು ಬರುವ Examination Time Table: Indian Economic Service – Indian Statistical Service Examination, 2024 ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ಈಗ ತೆರೆದುಕೊಳ್ಳುವ ಪುಟದಲ್ಲಿನ Document ಆಪ್ಶನ್‌ ಆಯ್ಕೆ ಮಾಡಿದರೆ ವೇಳಾಪಟ್ಟಿ ತೆರೆದುಕೊಳ್ಳುತ್ತದೆ.

Indian Economic Service – Indian Statistical Service Examinationನ ಟೈಮ್‌ ಟೇಬಲ್‌ ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ.

ಹಾಲ್‌ ಟಿಕೆಟ್‌ ಯಾವಾಗ?

ಈ ಪರೀಕ್ಷೆಗೆ 2024ರ ಏಪ್ರಿಲ್ 10ರಿಂದ 30ರವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಲಿಖಿತ ಪರೀಕ್ಷೆಯು ಗರಿಷ್ಠ 1,000 ಅಂಕಗಳನ್ನು ಹೊಂದಿದೆ. ಪ್ರವೇಶ ಪತ್ರ (Hall Ticket)ವನ್ನು ಪರೀಕ್ಷೆಯ ಏಳು ದಿನಗಳ ಮೊದಲು ಬಿಡುಗಡೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಬಹುದು. ಈ ಪರೀಕ್ಷೆಯ ಮೂಲಕ ಆಯ್ಕೆಯಾದ ಅಧಿಕಾರಿಗಳನ್ನು ಆರ್ಥಿಕ ನೀತಿಗಳನ್ನು ರೂಪಿಸುವಲ್ಲಿ ಹಾಗೂ ಕಾರ್ಯಗತಗೊಳಿಸುವಲ್ಲಿ ಮತ್ತು ಸರ್ಕಾರದ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡಲು ನೇಮಿಸಲಾಗುತ್ತದೆ.

ಇದನ್ನೂ ಓದಿ: UPSC EXAM-2023: ಯುಪಿಎಸ್‌ಸಿ ಟಾಪರ್ ವಾಸಿಸುತ್ತಿದ್ದುದು ಮನೆಯಲ್ಲಲ್ಲ, ಈ ಜೋಪಡಿಯಲ್ಲಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

NEET UG ROW : ಎನ್​ಟಿಎ ಕಾರ್ಯನಿರ್ವಹಣೆ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ ಸರ್ಕಾರ

NEET UG ROW : ನೀಟ್ ಪರೀಕ್ಷೆಯ ಬಗ್ಗೆ ನಾವು ಬಿಹಾರ ಸರ್ಕಾರದಿಂದ ಮಾಹಿತಿ ಪಡೆದಿದ್ದೇವೆ. ಪಾಟ್ನಾ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಮತ್ತು ಅವರು ಶೀಘ್ರದಲ್ಲೇ ಭಾರತ ಸರ್ಕಾರಕ್ಕೆ ವಿವರ ವರದಿಯನ್ನು ಕಳುಹಿಸಲಿದ್ದಾರೆ. ಪ್ರಾಥಮಿಕ ಮಾಹಿತಿಯು ಸಮಸ್ಯೆ ನಿರ್ದಿಷ್ಟ ಪ್ರದೇಶಕ್ಕೆ ಸೀಮಿತವಾಗಿವೆ ಎಂದು ಸೂಚಿಸುತ್ತದೆ ಎಂದು ಪ್ರಧಾನ್ ಹೇಳಿದರು.

VISTARANEWS.COM


on

NEET UG ROW
Koo

ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ನಲ್ಲಿ (NEET UG ROW) ಅಕ್ರಮಗಳು ನಡೆದಿವೆ ಎಂಬ ಆರೋಪದ ಮಧ್ಯೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಕಾರ್ಯನಿರ್ವಹಣೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಗುರುವಾರ ಉನ್ನತ ಮಟ್ಟದ ಸಮಿತಿಯೊದನ್ನು ರಚಿಸಿದೆ. “ಯಾವುದೇ ದೋಷಗಳು ಇಲ್ಲದೆ ಪರೀಕ್ಷೆಗಳನ್ನು ನಡೆಸಲು ನಾವು ಬದ್ಧರಾಗಿದ್ದೇವೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಕಾರ್ಯಚಟುವಟಿಕೆಯನ್ನು ಸುಧಾರಿಸಲು ಉನ್ನತ ಮಟ್ಟದ ಸಮಿತಿ ರಚಿಸಲಾಗುತ್ತಿದೆ” ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಎನ್​ಟಿಎ ಅದರ ರಚನೆ, ಕಾರ್ಯನಿರ್ವಹಣೆ, ಪರೀಕ್ಷಾ ಪ್ರಕ್ರಿಯೆ, ಪಾರದರ್ಶಕತೆ ಮತ್ತು ಡೇಟಾ ಭದ್ರತಾ ಪ್ರೋಟೋಕಾಲ್ ಅನ್ನು ಮತ್ತಷ್ಟು ಸುಧಾರಿಸಲು ಉನ್ನತ ಮಟ್ಟದ ಸಮಿತಿಯಿಂದ ಶಿಫಾರಸುಗಳನ್ನು ನಿರೀಕ್ಷಿಸಲಾಗುವುದು. ತಪ್ಪಿತಸ್ಥರೆಂದು ಕಂಡುಬಂದ ಎನ್​ಟಿಎಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದರು.

ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದೆ ಎಂದು ನಾನು ಎಲ್ಲರಿಗೂ ಭರವಸೆ ನೀಡಲು ಬಯಸುತ್ತೇನೆ. ನಾವು ಪಾರದರ್ಶಕತೆಯೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸಚಿವರ ಭರವಸೆ ನೀಡಿದರು.

“ನೀಟ್ ಪರೀಕ್ಷೆಯ ಬಗ್ಗೆ ನಾವು ಬಿಹಾರ ಸರ್ಕಾರದಿಂದ ಮಾಹಿತಿ ಪಡೆದಿದ್ದೇವೆ. ಪಾಟ್ನಾ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಮತ್ತು ಅವರು ಶೀಘ್ರದಲ್ಲೇ ಭಾರತ ಸರ್ಕಾರಕ್ಕೆ ವಿವರ ವರದಿಯನ್ನು ಕಳುಹಿಸಲಿದ್ದಾರೆ. ಪ್ರಾಥಮಿಕ ಮಾಹಿತಿಯು ಸಮಸ್ಯೆ ನಿರ್ದಿಷ್ಟ ಪ್ರದೇಶಕ್ಕೆ ಸೀಮಿತವಾಗಿವೆ ಎಂದು ಸೂಚಿಸುತ್ತದೆ ಎಂದು ಪ್ರಧಾನ್ ಹೇಳಿದರು.

ಇದನ್ನೂ ಓದಿ: NEET UG : ಫಿಸಿಕ್ಸ್​ನಲ್ಲಿ 85, ಕೆಮೆಸ್ಟ್ರಿಯಲ್ಲಿ 5! ನೀಟ್ ಆಕಾಂಕ್ಷಿಯ ಸ್ಕೋರ್ ಕಾರ್ಡ್ ಸೋರಿಕೆ, ಆರೋಪಿ ಸೆರೆ

ನಮ್ಮ ವ್ಯವಸ್ಥೆಗಳಲ್ಲಿ ನಮಗೆ ನಂಬಿಕೆ ಇರಲಿ. ಯಾವುದೇ ಅಕ್ರಮಗಳು ಅಥವಾ ದುಷ್ಕೃತ್ಯಗಳನ್ನು ಸರ್ಕಾರ ಸಹಿಸುವುದಿಲ್ಲ. ನಾವು ಜವಾಬ್ದಾರಿ ತೆಗೆದುಕೊಳ್ಳುತ್ತೇವೆ, ವ್ಯವಸ್ಥೆ ಸರಿಪಡಿಸಬೇಕಾಗಿದೆ” ಎಂದು ಸಚಿವರು ಹೇಳಿದರು.

ಭಾರತದ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಎಂಬಿಬಿಎಸ್, ಬಿಡಿಎಸ್, ಆಯುಷ್ ಮತ್ತು ಇತರ ಸಂಬಂಧಿತ ಕೋರ್ಸ್​ಗಳ ಪ್ರವೇಶಕ್ಕಾಗಿ ಎನ್​ಟಿಎ ನಡೆಸಿದ ನೀಟ್ ಪರೀಕ್ಷೆ ವಿವಾದದಲ್ಲಿ ಸಿಲುಕಿದೆ. ಮೇ 5 ರಂದು 4,750 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಸುಮಾರು 24 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು. ಜೂನ್ 14 ರಂದು ಫಲಿತಾಂಶಗಳನ್ನು ಘೋಷಿಸುವ ನಿರೀಕ್ಷೆಯಿತ್ತು. ಆದರೆ ಜೂನ್ 4 ರಂದು ಘೋಷಿಸಲಾಯಿತು. ಉತ್ತರ ಪತ್ರಿಕೆಗಳ ಮೌಲ್ಯಮಾಪನವು ಮೊದಲೇ ಪೂರ್ಣಗೊಂಡಿದೆ ಎಂದು ಹೇಳಿದರು.

ಕನಿಷ್ಠ 67 ವಿದ್ಯಾರ್ಥಿಗಳು ಪರಿಪೂರ್ಣ 720 ಅಂಕಗಳನ್ನು ಗಳಿಸಿದ್ದರು ಇದು ಎನ್​ಟಿಎ ಇತಿಹಾಸದಲ್ಲಿ ಅಭೂತಪೂರ್ವ. ವಹರಿಯಾಣದ ಫರಿದಾಬಾದ್​ನ ಕೇಂದ್ರದ ಆರು ವಿದ್ಯಾರ್ಥಿಗಳು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇದು ಅಕ್ರಮಗಳ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ. ಗ್ರೇಸ್ ಅಂಕಗಳು 67 ವಿದ್ಯಾರ್ಥಿಗಳು ಉನ್ನತ ರ್ಯಾಂಕ್​ ಹಂಚಿಕೊಂಡಿದ್ದರು.

ನೀಟ್-ಯುಜಿ 2024 ರಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯ ತನಿಖೆಯ ಭಾಗವಾಗಿ ಬಿಹಾರ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯೂ) ಕಳೆದ ತಿಂಗಳು 13 ಜನರನ್ನು ಬಂಧಿಸಿತ್ತು. ಬಂಧಿತ ಆರೋಪಿಗಳಲ್ಲಿ ಪರೀಕ್ಷಾರ್ಥಿಗಳು, ಅವರ ಪೋಷಕರು ಮತ್ತು ಮಾಸ್ಟರ್ ಮೈಂಡ್ ಸಿಕಂದರ್ ಪ್ರಸಾದ್ ಯಡ್ವೇಂದು ಸೇರಿದ್ದಾರೆ.

Continue Reading

ಪ್ರಮುಖ ಸುದ್ದಿ

NEET UG : ಫಿಸಿಕ್ಸ್​ನಲ್ಲಿ 85, ಕೆಮೆಸ್ಟ್ರಿಯಲ್ಲಿ 5! ನೀಟ್ ಆಕಾಂಕ್ಷಿಯ ಸ್ಕೋರ್ ಕಾರ್ಡ್ ಸೋರಿಕೆ, ಆರೋಪಿ ಸೆರೆ

NEET UG : ಎಂಬಿಬಿಎಸ್, ಬಿಡಿಎಸ್ ಮತ್ತು ಆಯುಷ್ ಕೋರ್ಸ್ಗಳ ಪ್ರವೇಶಕ್ಕಾಗಿ ಅಖಿಲ ಭಾರತ ಪರೀಕ್ಷೆಯ ಫಲಿತಾಂಶಗಳನ್ನು ಜೂನ್ 4 ರಂದು ಘೋಷಿಸಿದಾಗಿನಿಂದ ಅನೇಕ ಅಕ್ರಮಗಳು ಬೆಳಕಿಗೆ ಬಂದಿವೆ. 67 ವಿದ್ಯಾರ್ಥಿಗಳು 720ಕ್ಕೆ720 ಅಂಕಗಳನ್ನು ಗಳಿಸಿದ್ದಾರೆ. ಅವರಲ್ಲಿ ಆರು ವಿದ್ಯಾರ್ಥಿಗಳು ಹರಿಯಾಣದ ಒಂದೇ ಕೋಚಿಂಗ್​ ಸೆಂಟರ್​ನವರು. ಈ ಅಕ್ರಮದ ಕುರಿತು ರಾಷ್ಟ್ರಿಯ ಮಟ್ಟದಲ್ಲಿ ಪ್ರತಿಭಟನೆಗಳು ನಡೆದಿದ್ದವು.

VISTARANEWS.COM


on

NEET UG
Koo

ಪಾಟ್ನಾ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET UG) ಸುತ್ತ ಭಾರಿ ವಿವಾದದ ಮಧ್ಯೆ ಬಿಹಾರದ ನಾಲ್ವರು ವಿದ್ಯಾರ್ಥಿಗಳ ಅಂಕಪಟ್ಟಿಗಳು ಮಾಧ್ಯಮಗಳಿಗೆ ದೊರಕಿವೆ. ಈ ಎರಡು ಸ್ಕೋರ್ ಕಾರ್ಡ್​ಗಳು ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಾಕ್ಷಿಯಾಗಿದೆ. ಬಂಧಿತರಾದ ನಾಲ್ವರಲ್ಲಿ ಒಬ್ಬರಾದ ಅನುರಾಗ್ ಯಾದವ್ ನಡೆದ ಘಟನೆಯನ್ನು ವಿವರಿಸಿದ್ದಾನೆ. ಕೋಚಿಂಗ್ ಹಬ್ ಕೋಟಾದಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಆತನನ್ನು ಚಿಕ್ಕಪ್ಪ ಸಿಕಂದರ್ ಅವರು ಸಂಪರ್ಕಿಸಿ ಸಮಸ್ತಿಪುರಕ್ಕೆ ಹೋಗುವಂತೆ ಹೇಳಿದ್ದರು. ಸಿಕಂದರ್ ಕೂಡ ಈಗ ಈ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ. ಅಂತೆಯೇ ಪರೀಕ್ಷೆಯ ಹಿಂದಿನ ರಾತ್ರಿ ಕೆಲವು ಪ್ರಶ್ನೆಗಳು ಮತ್ತು ಅವುಗಳ ಉತ್ತರಗಳನ್ನು ಅನುರಾಗ್​ಗೆ ನೀಡಲಾಗಿತ್ತು. ಈ ಪ್ರಶ್ನೆಗಳು ಮರುದಿನ ಪರೀಕ್ಷೆಯಲ್ಲಿ ಬಂದಿತ್ತು ಎಂದು ಅವರು ಹೇಳಿದ್ದಾರೆ.

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಬಿಡುಗಡೆ ಮಾಡಿದ ಅನುರಾಗ್ ಅವರ ಸ್ಕೋರ್ ಕಾರ್ಡ್​ನಲ್ಲಿ 720 ರಲ್ಲಿ 185 ಅಂಕಗಳನ್ನು ಗಳಿಸಿದ್ದಾರೆ. ಅವರ ಒಟ್ಟು ಶೇಕಡಾವಾರು ಸ್ಕೋರ್ 54.84 (ರೌಂಡ್ ಆಫ್). ಆದರೆ ಪ್ರತ್ಯೇಕ ವಿಷಗಯಳಲ್ಲಿ ಆತನ ಅಂಕಗಳು ಒಂದಕ್ಕೊಂದು ಹೊಂದಿಕೆಯಾಗುತ್ತಿರಲಿಲ್ಲ. ಅನುರಾಗ್ ಭೌತಶಾಸ್ತ್ರದಲ್ಲಿ 85.8 ಪ್ರತಿಶತ ಮತ್ತು ಜೀವಶಾಸ್ತ್ರದಲ್ಲಿ 51 ಪ್ರತಿಶತ ಅಂಕಗಳನ್ನು ಗಳಿಸಿದ್ದಾರೆ. ಆದರೆ ಅವನ ರಸಾಯನಶಾಸ್ತ್ರದ ಅಂಕವು ಶೇಕಡಾ 5 ಮಾತ್ರ! ಪರೀಕ್ಷೆಗೆ ಒಂದು ದಿನ ಮುಂಚಿತವಾಗಿ ತನಗೆ ಪ್ರಶ್ನೆಗಳು ಬಂದಿವೆ ಎಂದು ಹೇಳಿದರೂ 22 ವರ್ಷದ ವಿದ್ಯಾರ್ಥಿಗೆ ರಸಾಯನಶಾಸ್ತ್ರದಲ್ಲಿ ಸೂಕ್ತ ಪ್ರಮಾಣದಲ್ಲಿ ಅಂಕಗಳು ಸಿಗದೇ ಹೋಗಿರುವುದು ಅಚ್ಚರಿಗೆ ಕಾರಣವಾಗಿದೆ.

ಅನುರಾಗ್ ಅವರ ರಾಷ್ಟ್ರಿಯ ಮಟ್ಟದ ರ್ಯಾಂಕ್​ 10,51,525 ಎಂದು ಉಲ್ಲೇಖಿಸಲಾಗಿದೆ ಮತ್ತು ಒಬಿಸಿ ಅಭ್ಯರ್ಥಿಯಾಗಿ ಅವರ ವರ್ಗದ ಶ್ರೇಯಾಂಕ 4,67,824 ಆಗಿದೆ. ಅನುರಾಗ್ ಅವರನ್ನು ಬಂಧಿಸಲಾಗಿದ್ದು, ಇತರ ಮೂವರನ್ನು ಪ್ರಶ್ನಿಸಲಾಗಿದೆ. ಈ ಮೂವರೂ ಒಬಿಸಿ ವರ್ಗಕ್ಕೆ ಸೇರಿದವರು. ಅವರಲ್ಲಿ ಒಬ್ಬರು ಪರೀಕ್ಷೆಯಲ್ಲಿ 720 ರಲ್ಲಿ 300 ಅಂಕಗಳನ್ನು ಗಳಿಸಿದ್ದಾರೆ ಮತ್ತು ಶೇಕಡಾವಾರು 73.37 (ರೌಂಡ್-ಆಫ್) ಆಗಿದೆ. ಇಲ್ಲಿಯೂ ಪ್ರತ್ಯಕೇ ವಿಷಯಗಳ ಅಂಕಗಳು ಪ್ರಶ್ನೆಗಳನ್ನು ಹುಟ್ಟುಹಾಕುತ್ತವೆ. ಜೀವಶಾಸ್ತ್ರದಲ್ಲಿ ಶೇ.87.8, ಭೌತಶಾಸ್ತ್ರದಲ್ಲಿ ಶೇ.15.5 ಹಾಗೂ ರಸಾಯನಶಾಸ್ತ್ರದಲ್ಲಿ ಶೇ.15.3 ಅಂಕಗಳನ್ನು ಗಳಿಸಿದ್ದಾರೆ. ಇತರ ಇಬ್ಬರು ವಿದ್ಯಾರ್ಥಿಗಳ ಸ್ಕೋರ್ ಕಾರ್ಡ್ ಗಳು ಎಲ್ಲಾ ಮೂರು ವಿಷಯಗಳಲ್ಲಿ ಉತ್ತಮವಾಗಿದೆ. ಅವರಲ್ಲಿ ಒಬ್ಬರು 720 ರಲ್ಲಿ 581 ಮತ್ತು ಇನ್ನೊಬ್ಬರು 483 ಅಂಕಗಳನ್ನು ಗಳಿಸಿದ್ದಾರೆ.

ಇದನ್ನೂ ಓದಿ: 7th Pay Commission: ಸರ್ಕಾರಿ ನೌಕರರ ಸಂಬಳ 27% ಹೆಚ್ಚಿಸಿದರೆ ಒಟ್ಟು ಏರಿಕೆ ಎಷ್ಟಾಗಲಿದೆ? ಇಲ್ಲಿದೆ ಲೆಕ್ಕಾಚಾರ

ಪ್ರಶ್ನೆ ಪತ್ರಿಕೆಗಳಿಗಾಗಿ ಅಮಿತ್ ಆನಂದ್ ಮತ್ತು ನಿತೀಶ್ ಕುಮಾರ್ ಅವರೊಂದಿಗೆ ನಾಲ್ವರು ವಿದ್ಯಾರ್ಥಿಗಳು ಸಂಪರ್ಕದಲ್ಲಿದ್ದರು ಎಂದು ಅನುರಾಗ್​ ಅವರ ಚಿಕ್ಕಪ್ಪ ಸಿಕಂದರ್ ಯಡವೇಂದು ಪೊಲೀಸರಿಗೆ ತಿಳಿಸಿದ್ದಾರೆ. ಅಮಿತ್ ಮತ್ತು ನಿತೀಶ್ ಪ್ರತಿ ವಿದ್ಯಾರ್ಥಿಗೆ 30-32 ಲಕ್ಷ ರೂಪಾಯಿಗಳನ್ನು ಕೇಳಿದ್ದಾರೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.

ಎಂಬಿಬಿಎಸ್, ಬಿಡಿಎಸ್ ಮತ್ತು ಆಯುಷ್ ಕೋರ್ಸ್ಗಳ ಪ್ರವೇಶಕ್ಕಾಗಿ ಅಖಿಲ ಭಾರತ ಪರೀಕ್ಷೆಯ ಫಲಿತಾಂಶಗಳನ್ನು ಜೂನ್ 4 ರಂದು ಘೋಷಿಸಿದಾಗಿನಿಂದ ಅನೇಕ ಅಕ್ರಮಗಳು ಬೆಳಕಿಗೆ ಬಂದಿವೆ. 67 ವಿದ್ಯಾರ್ಥಿಗಳು 720ಕ್ಕೆ720 ಅಂಕಗಳನ್ನು ಗಳಿಸಿದ್ದಾರೆ. ಅವರಲ್ಲಿ ಆರು ವಿದ್ಯಾರ್ಥಿಗಳು ಹರಿಯಾಣದ ಒಂದೇ ಕೋಚಿಂಗ್​ ಸೆಂಟರ್​ನವರು. ಈ ಅಕ್ರಮದ ಕುರಿತು ರಾಷ್ಟ್ರಿಯ ಮಟ್ಟದಲ್ಲಿ ಪ್ರತಿಭಟನೆಗಳು ನಡೆದಿದ್ದವು.

Continue Reading

Latest

IIT Bombay: ಹಿಂದೂ ದೇವರ ಅವಹೇಳನಕಾರಿ ನಾಟಕ; ಐಐಟಿ ವಿದ್ಯಾರ್ಥಿಗಳಿಗೆ ದಂಡ

IIT Bombay: ಧರ್ಮ ಹಾಗೂ ದೇವರುಗಳ ವಿಷಯ ತುಂಬಾ ಸೂಕ್ಷ್ಮವಾದದ್ದು. ಇದನನು ಕೆದಕಿದರೆ ದೇಶದಲ್ಲಿನ ಶಾಂತಿ ಕದಡಿದ ಹಾಗೆ.ಅದರಲ್ಲೂ ದೇಶದ ಪ್ರಜೆಗಳಾದ ವಿದ್ಯಾರ್ಥಿಗಳು ಈ ವಿಷಯದ ಕುರಿತು ಹೆಚ್ಚಿನ ನಿಗಾವಹಿಸಬೇಕು. ಐಐಟಿ ಬಾಂಬೆಯ ಬಯಲು ರಂಗಮಂದಿರದಲ್ಲಿ ನಡೆದ ಇನ್ ಸ್ಟಿಟ್ಯೂಟ್ ನ ಪರ್ಫಾರ್ಮಿಂಗ್ ಆರ್ಟ್ಸ್ ಫೆಸ್ಟಿವಲ್ ನಲ್ಲಿ “ರಾಹೋವನ್” ಶೀರ್ಷಿಕೆಯ ನಾಟಕವಾಡಿದ ವಿದ್ಯಾರ್ಥಿಗಳು ಇದರಲ್ಲಿ ಹಿಂದೂ ಧರ್ಮಕ್ಕೆ ಅಗೌರವ ತೋರಿದಲ್ಲದೇ ರಾಮ ಮತ್ತು ಸೀತೆಯನ್ನು ಅವಹೇಳನ ಮಾಡಿದ್ದರು. ಇದಕ್ಕೆ ತೀವ್ರವಾದ ವಿರೋಧ ವ್ಯಕ್ತಗೊಂಡ ಹಿನ್ನೆಲೆಯಲ್ಲಿ ಐಐಟಿ ವಿದ್ಯಾರ್ಥಿಗಳಿಗೆ ದಂಡ ವಿಧಿಸಿದೆ.

VISTARANEWS.COM


on

IIT Bombay
Koo

ಮುಂಬೈ : ರಾಮ ಮತ್ತು ಸೀತೆ ಹಿಂದೂ(Hindu)ಗಳ ಆರಾಧ್ಯ ದೇವರು. ಹಾಗಾಗಿ ಈ ದೇವರ ಹೆಸರಿಗೆ ಅವಮಾನ ಮಾಡಿದರೆ ಯಾರೂ ಸುಮ್ಮನೆ ಇರುವುದಿಲ್ಲ. ಆದರೆ ಇದೀಗ ಐಐಟಿ ಬಾಂಬೆಯಲ್ಲಿ (IIT Bombay) ಹಿಂದೂ ದೇವರಿಗೆ ಅವಹೇಳನ ಮಾಡುವಂತಹ ನಾಟಕವಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ (Student) ದಂಡ ವಿಧಿಸಲಾಗಿದೆ.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ) ಬಾಂಬೆಯ ಬಯಲು ರಂಗಮಂದಿರದಲ್ಲಿ ಈ ವರ್ಷ ಮಾರ್ಚ್ 31ರಂದು ನಡೆದ ಇನ್‌ಸ್ಟಿಟ್ಯೂಟ್‌ನ ಪರ್ಫಾರ್ಮಿಂಗ್ ಆರ್ಟ್ಸ್ ಫೆಸ್ಟಿವಲ್‌ನಲ್ಲಿ “ರಾಹೋವನ್” ಶೀರ್ಷಿಕೆಯ ನಾಟಕದಲ್ಲಿ ವಿದ್ಯಾರ್ಥಿಗಳು ರಾಮಾಯಣದ ಕಥಾ ಹಂದರವನ್ನು ಹೊಂದಿರುವ ನಾಟಕವಾಡಿದ್ದರು. ಇದರಲ್ಲಿ ಹಿಂದೂ ಧರ್ಮಕ್ಕೆ ಅಗೌರವ ತೋರಿದಲ್ಲದೇ ರಾಮ ಮತ್ತು ಸೀತೆಯನ್ನು ಅವಹೇಳನ ಮಾಡಿದ್ದರು.

ಈ ನಾಟಕವನ್ನು ವಿರೋಧಿಸಿ ಕಾಲೇಜಿನ ಒಂದು ವಿಭಾಗ ಪ್ರತಿಭಟನೆ ಮಾಡಿತ್ತು. ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್ ಎಕ್ಸ್‌ನಲ್ಲಿನ ‘ಐಐಟಿ ಬಿ ಫಾರ್ ಭಾರತ್’ ಹ್ಯಾಂಡಲ್‌ನಲ್ಲಿ ಈ ನಾಟಕವನ್ನು ಖಂಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಐಐಟಿ ವಿದ್ಯಾರ್ಥಿಯೊಬ್ಬನಿಗೆ 1.2 ಲಕ್ಷ ರೂ. ದಂಡ ವಿಧಿಸಿದೆ. ಇತರ ಏಳು ವಿದ್ಯಾರ್ಥಿಗಳಿಗೆ ತಲಾ 40,000 ರೂ. ದಂಡ ವಿಧಿಸಲಾಗಿದೆ.

ಇದನ್ನೂ ಓದಿ: Murder Case: ಅಶ್ಲೀಲ ವಿಡಿಯೊ ಚಟ; ಮಗಳನ್ನೇ ಲೈಂಗಿಕಕ್ರಿಯೆಗೆ ಒತ್ತಾಯಿಸಿ ಕೊಂದ ಪಾಪಿ ತಂದೆ

ಅಲ್ಲದೇ ನಾಟಕಕ್ಕೆ ಸಂಬಂಧಿಸಿದ ದೂರುಗಳ ಪರಿಹಾರಕ್ಕೆ ಶಿಸ್ತು ಸಭೆ ಕರೆದ ಐಐಟಿ ಅಲ್ಲಿನ ಚರ್ಚೆಗಳ ಆಧಾರದ ಮೇಲೆ ಶಿಕ್ಷಾರ್ಹ ಕ್ರಮಗಳನ್ನು ಶಿಫಾರಸು ಮಾಡಿದೆ. ಅದರಂತೆ ಜುಲೈ 20, 2024ರಂದು ವಿದ್ಯಾರ್ಥಿ ವ್ಯವಹಾರ ಡೀನ್ ಕಚೇರಿ ಯಲ್ಲಿ ರೂ. 1.2ಲಕ್ಷ ದಂಡವನ್ನು ಪಾವತಿಸಬೇಕಾಗಿ ಹೇಳಿದೆ. ಮತ್ತು ಸಂಸ್ಥೆಯ ಜಿಮ್ಖಾನಾ ಪ್ರಶಸ್ತಿಗಳಿಂದ ಯಾವುದೇ ಮಾನ್ಯತೆ ಪಡೆಯದಂತೆ ನಿರ್ಬಂಧ ಹೇರಿದರೆ ಕಿರಿಯ ಏಳು ವಿದ್ಯಾರ್ಥಿಗಳಿಗೆ 40,000 ದಂಡದ ಜೊತೆಗೆ ಹಾಸ್ಟೆಲ್ ಸೌಲಭ್ಯದಿಂದ ಅಮಾನತುಗೊಳಿಸಲಾಗಿದೆ. ಒಂದು ವೇಳೆ ದಂಡವನ್ನು ತಪ್ಪಿಸಿದರೆ ಮತ್ತಷ್ಟು ನಿರ್ಬಂಧಕ್ಕೆ ಒಳಪಡಿಸುವುದಾಗಿ ತಿಳಿಸಿದೆ.

Continue Reading

ದೇಶ

NEET 2024: ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಗೆ 30-32 ಲಕ್ಷ ರೂ. ಡೀಲ್‌; ತಪ್ಪೊಪ್ಪಿಕೊಂಡ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌

NEET 2024: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ತಪ್ಪೊಪ್ಪಿಕೊಂಡಿದ್ದಾನೆ. ಪ್ರಶ್ನೆ ಪ್ರತಿಕೆ ಸೋರಿಕೆಗೆ 30-32 ಲಕ್ಷ ರೂ. ಒಪ್ಪಂದ ನಡೆದಿರುವುದಾಗಿ ಹೇಳಿದ್ದಾನೆ. ʼʼನೀಟ್‌ ಪರೀಕ್ಷೆಯ ಹಿಂದಿನ ದಿನ ಅಭ್ಯರ್ಥಿಗಳಿಗೆ ಪ್ರಶ್ನೆ ಮತ್ತು ಉತ್ತರವನ್ನು ಹಂಚಿಕೆ ಮಾಡಿ ಉತ್ತರವನ್ನು ಕಂಠಪಾಠ ಮಾಡಲು ಸೂಚಿಸಲಾಗಿತ್ತುʼʼ ಎಂದಿದ್ದಾನೆ.

VISTARANEWS.COM


on

NEET 2024
Koo

ನವದೆಹಲಿ: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET 2024)ನ ವಿವಾದ ದಿನ ಕಳೆದಂತೆ ಹೊಸ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದನ್ನು ವಿರೋಧಿಸಿ ಅಭ್ಯರ್ಥಿಗಳು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ಮಹತ್ವದ ಬೆಳವಣಿಗೆಯೊಂದರಲ್ಲಿ ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿದ ನಾಲ್ವರನ್ನು ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ. ಪ್ರಶ್ನೆ ಪ್ರತಿಕೆ ಸೋರಿಕೆಗೆ 30-32 ಲಕ್ಷ ರೂ. ಒಪ್ಪಂದ ನಡೆದಿರುವುದಾಗಿಯೂ ಪ್ರಕರಣದ ಮಾಸ್ಟರ್‌ ಅಮಿತ್‌ ಆನಂದ್‌ (Amit Anand) ಒಪ್ಪಿಕೊಂಡಿದ್ದಾನೆ.

1,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಿರುವುದನ್ನು ವಿರೋಧಿಸಿ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಇತ್ತೀಚೆಗೆ ಗ್ರೇಸ್ ಅಂಕಗಳನ್ನು ರದ್ದುಗೊಳಿಸಿ ಅಂತಹ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಿಗದಿಪಡಿಸಲಾಗಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಸಂಬಂಧ ಮತ್ತೆ ನಾಲ್ವರನ್ನು ಬಂಧಿಸಲಾಗಿದೆ. ಬಿಹಾರದಿಂದ ಬಂಧಿಸಲ್ಪಟ್ಟ ನಾಲ್ವರನ್ನು ಅನುರಾಗ್ ಯಾದವ್, ನಿತೀಶ್ ಕುಮಾರ್, ಅಮಿತ್ ಆನಂದ್ ಮತ್ತು ದಾನಾಪುರ ಮುನ್ಸಿಪಲ್ ಕೌನ್ಸಿಲ್‌ನ ಕಿರಿಯ ಎಂಜಿನಿಯರ್ ಸಿಕಂದರ್ ಯದವೇಂದು ಎಂದು ಗುರುತಿಸಲಾಗಿದೆ. ಪರೀಕ್ಷೆಯ ಹಿಂದಿನ ದಿನ ಪ್ರಶ್ನೆ ಪತ್ರಿಕೆಯನ್ನು ಹಂಚಲಾಗಿದೆ ಎಂದು ಬಂಧಿತರು ಒಪ್ಪಿಕೊಂಡಿದ್ದಾರೆ. ಇದರೊಂದಿಗೆ ಬಂಧಿತರ ಒಟ್ಟು ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ಪ್ರಶ್ನೆ ಪತ್ರಿಕೆ ಸೋರಿಕೆಗೆ 30 ಲಕ್ಷ ರೂ. ಚಾರ್ಜ್‌

ಇದೀಗ ಬಂಧಿತರ ಪೈಕಿ ಅಮಿತ್ ಆನಂದ್ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಗೆ 30-32 ಲಕ್ಷ ರೂ. ಡೀಲ್‌ ನಡೆದಿದ್ದಾಗಿ ಒಪ್ಪಿಕೊಂಡಿದ್ದಾನೆ. ʼʼನೀಟ್‌ ಪರೀಕ್ಷೆಯ ಹಿಂದಿನ ದಿನ ಅಭ್ಯರ್ಥಿಗಳಿಗೆ ಪ್ರಶ್ನೆ ಮತ್ತು ಉತ್ತರವನ್ನು ಹಂಚಿಕೆ ಮಾಡಿ ಉತ್ತರವನ್ನು ಕಂಠಪಾಠ ಮಾಡಲು ಸೂಚಿಸಲಾಗಿತ್ತು. ಪ್ರಶ್ನೆ ಪತ್ರಿಕೆ ಸೋರಿಕೆಗೆ 30-32 ಲಕ್ಷ ರೂ. ಒಪ್ಪಂದ ನಡೆದಿತ್ತುʼʼ ಎಂದು ಬಾಯ್ಬಿಟ್ಟಿದ್ದಾನೆ.

ʼʼಬಿಹಾರದ ಪಾಟ್ನಾದ ಶಾಸ್ತ್ರಿನಗರ ಪೊಲೀಸ್ ಠಾಣೆಯಲ್ಲಿ ಅಮಿತ್ ಆನಂದ್ ವಿರುದ್ಧ ಪ್ರಕರಣ ದಾಖಲಾಗಿದೆ. ವಿಚಾರಣೆಯ ಸಮಯದಲ್ಲಿ ಅವನು ತನ್ನ ಅಪರಾಧಗಳನ್ನು ಒಪ್ಪಿಕೊಂಡಿದ್ದಾನೆ. ಅಮಿತ್ ಬಿಹಾರದ ಮುಂಗೇರ್ ಜಿಲ್ಲೆಯವನು. ಆತ ಪಾಟ್ನಾದ ಎಜಿ ಕಾಲೋನಿಯಲ್ಲಿ ಬಾಡಿಗೆ ಫ್ಲ್ಯಾಟ್‌ನಲ್ಲಿ ವಾಸಿಸುತ್ತಿದ್ದʼʼ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

“ನಾನು ವೈಯಕ್ತಿಕ ಕೆಲಸಕ್ಕಾಗಿ ಒಮ್ಮೆ ದಾನಾಪುರ ಮುನ್ಸಿಪಲ್ ಕಾರ್ಪೊರೇಷನ್ ಕಚೇರಿಯ ಕಿರಿಯ ಎಂಜಿನಿಯರ್ ಸಿಕಂದರ್‌ನನ್ನು ಭೇಟಿಯಾಗಿದ್ದೆ. ಈ ವೇಳೆ ನಾನು ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಬಹುದು ಎಂದು ಹೇಳಿದ್ದೆ. ನಂತರ ಸಿಕಂದರ್ ನೀಟ್‌ ಪರೀಕ್ಷೆಗೆ ತಯಾರಿ ನಡೆಸುತ್ತಿರುವ 4-5 ಅಭ್ಯರ್ಥಿಗಳು ಇದ್ದಾರೆ ಎಂದು ಹೇಳಿ ಅವರಿಗೆ ಸಹಾಯ ಮಾಡುವಂತೆ ಸೂಚಿಸಿದ್ದ. ಆಗ 30-32 ಲಕ್ಷ ರೂ. ವ್ಯವಹಾರ ಕುದುರಿಸಲಾಯಿತು” ಎಂದು ಅಮಿತ್ ಆನಂದ್‌ ತಿಳಿಸಿದ್ದಾನೆ.

2024ರ ಮೇ 5ರಂದು 14 ಅಂತಾರಾಷ್ಟ್ರೀಯ ಸ್ಥಳಗಳು ಸೇರಿದಂತೆ 571 ನಗರಗಳಲ್ಲಿ, 4,750 ಕೇಂದ್ರಗಳಲ್ಲಿ 24 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಿದ್ದರು. ಜೂನ್ 4ರಂದು ಫಲಿತಾಂಶವನ್ನು ಪ್ರಕಟವಾಗಿತ್ತು. ಇದೀಗ ಪ್ರಕರಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಇದನ್ನೂ ಓದಿ: NEET UG Result 2024: ಏನಿದು ನೀಟ್‌ ವಿವಾದ? ಗ್ರೇಸ್‌ ಅಂಕ ಕೊಟ್ಟಿದ್ಯಾಕೆ? ಮರು ಪರೀಕ್ಷೆ ಮಾಡೋದ್ಯಾಕೆ?

Continue Reading
Advertisement
assault Case
ಕ್ರೈಂ3 mins ago

Assault Case: 3 ವರ್ಷದ ಮಗಳ ಗುಪ್ತಾಂಗ ಕಚ್ಚಿ ಮಲತಂದೆಯ ಕ್ರೌರ್ಯ; ಸಿಗರೇಟ್‌ನಿಂದ ಸುಟ್ಟು ವಿಕೃತಿ

ram mohan raju actor darshan
ಪ್ರಮುಖ ಸುದ್ದಿ7 mins ago

Actor Darshan: ದರ್ಶನ್‌ಗೆ 40 ಲಕ್ಷ ರೂ ನೀಡಿದ ವ್ಯಕ್ತಿ ಈಗ ನಾಪತ್ತೆ! ಯಾರೀ ಆಸಾಮಿ?

Darshan Arrested in IT trouble! Is the money paid to a MLA's friend
ಸ್ಯಾಂಡಲ್ ವುಡ್11 mins ago

Darshan Arrested: ದರ್ಶನ್‌ಗೆ ಕೊಲೆ ಆರೋಪದ ಜತೆಗೆ ಐಟಿ ಸಂಕಷ್ಟ! ಹಣ ಸಂದಾಯ ಮಾಡಿದ್ರಾ ಶಾಸಕರೊಬ್ಬರ ಆಪ್ತ?

IRCTC Ticket Booking
Latest26 mins ago

IRCTC Ticket Booking: ರೈಲ್ವೆ ಟಿಕೆಟ್ ಈ ರೀತಿ ಬುಕ್ ಮಾಡಿದರೆ ಜೈಲೂಟ ಗ್ಯಾರಂಟಿ!

Viral Video
Latest29 mins ago

Viral Video : ಇನ್‌ಸ್ಟಾಗ್ರಾಂ ರೀಲ್ಸ್ ಕ್ರೇಜ್‌; ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡಿದ ಹುಡುಗಿ!

Israel-Hamas Conflict
ವಿದೇಶ34 mins ago

Israel-Hamas Conflict: ಇಸ್ರೇಲ್‌ ಏರ್‌ಸ್ಟ್ರೈಕ್- ಹಮಾಸ್‌ ಕಮಾಂಡರ್‌ ಹತ್ಯೆ

Actor Darshan case sanjana galrani Reaction about ramya statement
ಸ್ಯಾಂಡಲ್ ವುಡ್1 hour ago

Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ!

Liquor Price Karnataka
ಪ್ರಮುಖ ಸುದ್ದಿ1 hour ago

Liquor Price Karnataka: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ನ್ಯೂಸ್‌; ಜುಲೈ 1ರಿಂದ ಬೆಲೆ ಇಳಿಕೆ

Pakistan Violence
ವಿದೇಶ2 hours ago

Pakistan Violence: ಕುರಾನ್‌ಗೆ ಅಪಮಾನ; ಪೊಲೀಸ್‌ ಸ್ಟೇಶನ್‌ಗೆ ಬೆಂಕಿ..ಠಾಣೆಯೊಳಗೇ ಆರೋಪಿಯ ಬರ್ಬರ ಕೊಲೆ

Actor Darshan was careful at every step to escape from Renuka case
ಸ್ಯಾಂಡಲ್ ವುಡ್2 hours ago

Actor Darshan: ಕೇಸ್‌ನಿಂದ ತಪ್ಪಿಸಿಕೊಳ್ಳೋಕೆ ಪ್ರತಿ ಹಂತದಲ್ಲೂ ಎಚ್ಚರವಹಿಸಿದ್ದ ದರ್ಶನ್; ಬೇಟೆಯ ಹಿಂದೆ ಭರ್ಜರಿ ಮಾಸ್ಟರ್‌ ಪ್ಲ್ಯಾನ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ17 hours ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು4 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು4 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ5 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ5 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ6 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ7 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಟ್ರೆಂಡಿಂಗ್‌