Most Expensive Insect: ಈ ಕೀಟ ನಿಮ್ಮ ಬಳಿ ಇದ್ದರೆ 75 ಲಕ್ಷ ರೂ. ಸಿಗಬಹುದು! - Vistara News

ಪರಿಸರ

Most Expensive Insect: ಈ ಕೀಟ ನಿಮ್ಮ ಬಳಿ ಇದ್ದರೆ 75 ಲಕ್ಷ ರೂ. ಸಿಗಬಹುದು!

ವಿಶ್ವದಲ್ಲಿ ಅತ್ಯಂತ ಬೆಲೆಬಾಳುವ (Most Expensive Insect) ಕೀಟವೊಂದಿದೆ ಎಂದು ಕೇಳಿದರೆ ಆಶ್ಚರ್ಯವಾಗಬಹುದು. ಆದರೆ ಇದರ ಬೆಲೆ ಕೇಳಿದರೆ ಎಲ್ಲರೂ ದಂಗಾಗುವುದು ಖಚಿತ. ಅಂತಹ ವಿಶೇಷ ಏನಿದೆ ಈ ಕೀಟದಲ್ಲಿ, ಇದು ಎಲ್ಲಿರುತ್ತೆ, ಹೇಗಿರುತ್ತೆ ಎಂದು ತಿಳಿಯುವ ಕುತೂಹಲ ಈಗಾಗಲೇ ಮನದಲ್ಲಿ ಮೂಡಿರಬಹುದು. ಆ ಕೀಟದ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

Most Expensive Insect
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಒಂದೇ ಒಂದು ಪುಟ್ಟ ಕೀಟದ ಬೆಲೆ (Most Expensive Insect) ಬರೋಬ್ಬರಿ 75 ಲಕ್ಷ ರೂ. ಎಂದರೆ ಯಾರಿಗಾದರೂ ಆಶ್ಚರ್ಯವಾಗಬಹುದು. ಹೌದು ಇದು ವಿಶ್ವದ (world) ಅತ್ಯಂತ ಬೆಲೆಬಾಳುವ ಕೀಟಗಳಲ್ಲಿ ಒಂದು. ಇದನ್ನು ‘ಸ್ಟಾಗ್ ಬೀಟಲ್’ (stag beetle) ಅಥವಾ ಸಾರಂಗ ಜೀರುಂಡೆ ಎಂದು ಕರೆಯುತ್ತಾರೆ. ಈ ಕೀಟ ಇಷ್ಟು ದುಬಾರಿ ಯಾಕೆಂದರೆ ಅದರ ಕುರಿತಾದ ವಿಶೇಷ ನಂಬಿಕೆಯಿಂದ.

ಸಾರಂಗ ಜೀರುಂಡೆಯ ವಿಶೇಷ ಏನೆಂದರೆ ಅದನ್ನು ಅದೃಷ್ಟದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಹೀಗಾಗಿ ಸಾರಂಗ ಜೀರುಂಡೆಗಳು ತುಂಬಾ ದುಬಾರಿಯಾಗಿವೆ. ಸಾರಂಗ ಜೀರುಂಡೆಯನ್ನು ಹೊಂದಿದ್ದರೆ ಬಹುಬೇಗನೆ ಶ್ರೀಮಂತಿಕೆ ನಿಮ್ಮನ್ನು ಅರಸಿಕೊಂಡು ಬರುತ್ತದೆ ಎಂದೇ ಕೆಲವರು ನಂಬುತ್ತಾರೆ.

ಸೈಂಟಿಫಿಕ್ ಡೇಟಾ ಜರ್ನಲ್‌ನಲ್ಲಿ ಪ್ರಕಟವಾದ ಇತ್ತೀಚಿನ ಅಧ್ಯಯನದ ಪ್ರಕಾರ, ಈ ಕೀಟಗಳು ಅರಣ್ಯ ಪರಿಸರ ವ್ಯವಸ್ಥೆಗಳಲ್ಲಿ ಗಮನಾರ್ಹವಾದ ಸ್ಯಾಪ್ರೊಕ್ಸಿಲಿಕ್ ಸಂಯೋಜನೆಯನ್ನು ರೂಪಿಸುತ್ತವೆ. ಅವುಗಳ ವಿಸ್ತರಿಸಿದ ದವಡೆಗಳು ಪುರುಷ ಜಾತಿಯಲ್ಲಿ ಬಹುರೂಪತೆಗೆ ಹೆಸರುವಾಸಿಯಾಗಿದೆ.


ಎಲ್ಲಿ ಕಾಣಬಹುದು?

ಸಾರಂಗ ಜೀರುಂಡೆಗಳು ಶೀತ ತಾಪಮಾನದಿಂದ ದೂರವಿರುತ್ತವೆ. ಅವುಗಳು ಬೆಚ್ಚಗಿನ, ಉಷ್ಣವಲಯದ ಹವಾಮಾನದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ. ಸ್ವಭಾವತಃ ಕಾಡುಪ್ರದೇಶಗಳಲ್ಲಿ ಕಾಣಸಿಗುತ್ತವೆ. ಆದರೆ ಅವುಗಳನ್ನು ಕೆಲವೊಂದು ಉದ್ಯಾನವನಗಳಲ್ಲಿ ಕಾಣಬಹುದು. ಸತ್ತ ಮರ, ಮುಳ್ಳುಗಿಡಗಳು ಮತ್ತು ಸಾಂಪ್ರದಾಯಿಕ ತೋಟಗಳು ಅವುಗಳ ಆಶ್ರಯತಾಣವಾಗಿರುತ್ತದೆ.

ಏನು ತಿನ್ನುತ್ತದೆ?

ಸಾರಂಗ ಜೀರುಂಡೆಗಳಿಗೆ ಮುಖ್ಯ ಆಹಾರ ಮೂಲವೆಂದರೆ ಸಿಹಿ ದ್ರವಗಳು. ಉದಾಹರಣೆಗೆ ಮರದ ರಸ ಮತ್ತು ಕೊಳೆಯುತ್ತಿರುವ ಹಣ್ಣಿನ ರಸ. ಅದರ ಪ್ರಾಥಮಿಕ ಶಕ್ತಿಯ ಮೂಲವೆಂದರೆ ಅದು ಲಾರ್ವಾಗಳಾಗಿದ್ದಾಗ ಸಂಗ್ರಹಿಸಿದ ಶಕ್ತಿಯೇ ಆಗಿರುತ್ತದೆ. ಸಾರಂಗ ಜೀರುಂಡೆಗಳು ಆರೋಗ್ಯಕರ ಸಸ್ಯಗಳಿಗೆ ಏನೂ ಮಾಡುವುದಿಲ್ಲ. ಯಾಕೆಂದರೆ ಅವು ಸತ್ತ ಮರವನ್ನು ಮಾತ್ರ ತಿನ್ನುತ್ತವೆ.


ಇದನ್ನೂ ಓದಿ: Indian Origin Crow: ಭಾರತೀಯ ಮೂಲದ 10 ಲಕ್ಷ ಕಾಗೆಗಳನ್ನು ಕೊಲ್ಲಲು ಕೀನ್ಯಾ ನಿರ್ಧರಿಸಿದ್ದೇಕೆ?

ಆಯಸ್ಸು

ಲಂಡನ್‌ನಲ್ಲಿರುವ ನ್ಯಾಚುರಲ್ ಹಿಸ್ಟರಿ ಮ್ಯೂಸಿಯಂ ಪ್ರಕಾರ, ಈ ಕೀಟಗಳು ಸಾಮಾನ್ಯವಾಗಿ 2 ರಿಂದ 6 ಗ್ರಾಂ ತೂಕವಿರುತ್ತವೆ. ಸರಾಸರಿ 3 ರಿಂದ 7 ವರ್ಷಗಳವರೆಗೆ ಬದುಕುತ್ತವೆ. ಹೆಣ್ಣು 30- 50 ಮಿಮೀ ಉದ್ದವಿದ್ದರೆ, ಗಂಡು 35- 75 ಮಿಮೀ ಉದ್ದವಿರುತ್ತದೆ.

ಕೊಂಬನ್ನು ಹೋಲುವ ಗಂಡು ಸಾರಂಗ ಜೀರುಂಡೆಯ ವೈಶಿಷ್ಟ್ರ್ಯವೆಂದರೆ ಅದರ ದವಡೆಗಳು. ಸಂತಾನೋತ್ಪತ್ತಿ ಅವಧಿಯಲ್ಲಿ ಗಂಡು ಸಾರಂಗ ಜೀರುಂಡೆಗಳು ತಮ್ಮ ವಿಶಿಷ್ಟವಾದ ಕೊಂಬಿನಂತಹ ದವಡೆಗಳನ್ನು ಬಳಸಿಕೊಂಡು ಹೆಣ್ಣು ಸಂಗಾತಿಯಾಗುವ ಅವಕಾಶಕ್ಕಾಗಿ ಪರಸ್ಪರ ಸ್ಪರ್ಧಿಸುತ್ತವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Mosquito Repellent Plants: ನಿಮಗೆ ಗೊತ್ತೆ? ಈ 5 ಬಗೆಯ ಗಿಡಗಳು ಸೊಳ್ಳೆಗಳನ್ನು ಓಡಿಸುತ್ತವೆ!

Mosquito Repellent Plants: ಸೊಳ್ಳೆಗಳನ್ನು ದೂರ ಮಾಡಲು ಎಂಥಾ ಸರ್ಕಸ್‌ ಮಾಡಿದರೂ ನಷ್ಟವಿಲ್ಲ ಎಂಬಂತಾಗಿದೆ ಈ ಮಳೆಗಾಲದಲ್ಲಿ. ನೈಸರ್ಗಿಕ ಪರಿಮಳದ ತೈಲಗಳು ಅಥವಾ ರಿಪೆಲ್ಲೆಂಟ್‌ಗಳನ್ನು ಹಚ್ಚಿಕೊಂಡರೆ, ಸೊಳ್ಳೆಗಳನ್ನು ಓಡಿಸಬಹುದು. ಜೊತೆಗೆ, ಮನೆಯ ಒಳ-ಹೊರಗೆ ಕೆಲವು ಬಗೆಯ ಗಿಡಗಳನ್ನು ಬೆಳೆಸುವುದು ಸಹ ಈ ಕೆಲಸದಲ್ಲಿ ಉಪಯೋಗಕ್ಕೆ ಬರುತ್ತದೆ.

VISTARANEWS.COM


on

Mosquito Repellent Plants
Koo

ಮಳೆಗಾಲವೆಂದರೆ ಸೊಳ್ಳೆಗಳ (Mosquito Repellent Plants) ಕಾಲವೆಂಬ ಭಾವನೆ ಬಂದರೆ ಅಚ್ಚರಿಯಿಲ್ಲ. ಬರೀ ಸೊಳ್ಳೆ ಕಚ್ಚುವುದು ಸಮಸ್ಯೆಯಲ್ಲ, ಅದರೊಂದಿಗೆ ಬರುವ ಮಲೇರಿಯ, ಡೆಂಗ್ಯೂ, ಜೀಕಾ ಮುಂತಾದ ವೈರಸ್‌ಗಳು ಭೀತಿ ಮೂಡಿಸುತ್ತಿವೆ. ಮನೆಯ ಸುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಿದರೂ, ಮನೆಯೆದುರಿನ ರಸ್ತೆಯಲ್ಲೋ ಚರಂಡಿಯಲ್ಲೋ ನೀರು ನಿಲ್ಲುತ್ತಿದ್ದರೆ ಎಷ್ಟೆಂದು ಒದ್ದಾಡುವುದಕ್ಕೆ ಸಾಧ್ಯ? ಕಿಟಕಿಗಳಿಗೆಲ್ಲ ಸೊಳ್ಳೆ ಪರದೆ ಹಾಕಿದ್ದಾಗಿದೆ, ಆದರೂ ಬಾಗಿಲು ತೆರೆದಾಗ ನಮಗಿಂತ ಮೊದಲು ಸೊಳ್ಳೆಗಳು ನುಗ್ಗುತ್ತವೆ. ರಾತ್ರಿ ಮಲಗುವಾಗಲೂ ಪರದೆಯೊಳಗೇ ಮಲಗುತ್ತೇವೆ, ಹಗಲೆಲ್ಲ ಸೊಳ್ಳೆ ಪರದೆ ಸುತ್ತಿಕೊಂಡು ಓಡಾಡಲು ಸಾಧ್ಯವೇ?
ಈ ಕ್ರಮಗಳೆಲ್ಲ ಒಳ್ಳೆಯದೇ. ಅಗತ್ಯವಾಗಿ ಬೇಕಾಗಿದ್ದು ಸಹ ಹೌದು. ಜೊತೆಗೆ ಕೆಲವು ನೈಸರ್ಗಿಕ ಪರಿಮಳದ ತೈಲಗಳು ಅಥವಾ ರಿಪೆಲ್ಲೆಂಟ್‌ಗಳನ್ನು ಹಚ್ಚಿಕೊಂಡರೆ, ಸೊಳ್ಳೆಗಳು ಹತ್ತಿರ ಬಾರದಂತೆ ಕಾಪಾಡಿಕೊಳ್ಳಬಹುದು. ಜೊತೆಗೆ, ಮನೆಯ ಸುತ್ತಮುತ್ತ ಕೆಲವು ಒಳಾಂಗಣ/ಹೊರಾಂಗಣದ ಗಿಡಗಳನ್ನು ಬೆಳೆಸುವುದು ಸಹ ಈ ಕೆಲಸದಲ್ಲಿ ಉಪಯೋಗಕ್ಕೆ ಬರುತ್ತದೆ. ಸೊಳ್ಳೆಗಳನ್ನು ದೂರ ಓಡಿಸುವಂಥ ಗುಣವನ್ನುಳ್ಳ ಐದು ಗಿಡಗಳ ಬಗ್ಗೆ ಇಲ್ಲಿ ವಿವರಿಸಲಾಗಿದೆ.

citronella

ಸಿಟ್ರೋನೆಲ್ಲ

ಲೆಮೆನ್‌ಗ್ರಾಸ್‌, ನಿಂಬೆ ಹುಲ್ಲು ಎಂದೆಲ್ಲಾ ಈ ಗಿಡವನ್ನು/ಹುಲ್ಲನ್ನು ಕರೆಯಲಾಗುತ್ತದೆ. ಸೊಳ್ಳೆಯನ್ನು ದೂರ ಅಟ್ಟುವ ವಿಷಯದಲ್ಲಿ ವಿಶೇಷ ಪರಿಣತಿ ಹೊಂದಿರುವ ಈ ಗಿಡದ ಸಾರವನ್ನು ಸ್ಪ್ರೇ, ಕ್ರೀಮ್‌, ಲೋಶನ್‌, ತೈಲ, ಮೋಂಬತ್ತಿಗಳು ಮುಂತಾದ ಹಲವು ರೀತಿಯ ಉತ್ಪನ್ನಗಳಲ್ಲಿ ಉಪಯೋಗಿಸಲಾಗುತ್ತದೆ. ಇದಕ್ಕಿರುವ ನಿಂಬೆಯ ಗಾಢವಾದ ಸುಗಂಧವೇ ಸೊಳ್ಳೆಯನ್ನು ದೂರ ಇರಿಸುತ್ತದೆ. ಮನೆಯ ಸುತ್ತಮುತ್ತಲಿನ ಭಾಗದಲ್ಲಿ ಅಥವಾ ಬಾಲ್ಕನಿಯ ಕುಂಡಗಳಲ್ಲಾದರೂ ಸರಿ, ಬೆಳೆಸಿ. ಇದು ಹಲವು ಔಷಧೀಯ ಉಪಯೋಗಗಳನ್ನೂ ಹೊಂದಿದ್ದು, ಸೊಳ್ಳೆ ಬಾರದಂತೆ ತಡೆಯಲೂ ನೆರವಾಗುತ್ತದೆ. ಆದರೆ ಈ ಹುಲ್ಲಿನ ಅಂಚು ಹರಿತವಾಗಿರುವುದರಿಂದ, ನೇರವಾಗಿ ಕೈ-ಕಾಲುಗಳ ಮೇಲೆ ಉಜ್ಜಿಕೊಳ್ಳಲು ಯತ್ನಿಸಬೇಡಿ, ಗಾಯವಾದೀತು.

Lavender Fragrant Flowers

ಲಾವೆಂಡರ್

ಇದರ ಹೂವುಗಳು ನಿಮ್ಮ ಬಾಲ್ಕನಿ ಮತ್ತು ಮನೆಯೊಳಗಿನ ಜಾಗವನ್ನು ಸುಂದರಗೊಳಿಸುವುದು ಮಾತ್ರವಲ್ಲ, ಆಹ್ಲಾದಕರ ಪರಿಮಳವು ಸೊಳ್ಳೆಗಳನ್ನು ದೂರ ಓಡಿಸುತ್ತದೆ. ಇದರ ಘಮ ಮನುಷ್ಯರಿಗೆ ಆಪ್ಯಾಯಮಾನವೇ ಹೊರತು ಸೊಳ್ಳೆ ಅಥವಾ ಇತರ ಕೀಟಗಳಿಗಲ್ಲ. ಬಿಸಿಲು ಬರುವಂಥ ಜಾಗದಲ್ಲಿ ಇದನ್ನು ಕುಂಡಗಳಲ್ಲಿ ಬೆಳೆಯಬಹುದು. ಈ ಹೂವನ್ನು ಒಣಗಿಸಿ ಅದನ್ನು ಪುಟ್ಟ ಸ್ಯಾಶೆಗಳಲ್ಲಿ ತುಂಬಿ ಮನೆಯಲ್ಲೆಲ್ಲಾ ಇರಿಸಿಕೊಳ್ಳಬಹುದು. ಲ್ಯಾವೆಂಡರ್‌ ತೈಲವನ್ನೂ ಇತರ ಎಣ್ಣೆಯೊಂದಿಗೆ ಸೇರಿಸಿ ಚರ್ಮಕ್ಕೆ ಲೇಪಿಸಿಕೊಳ್ಳಬಹುದು. ಇದನ್ನು ಹಚ್ಚಿಕೊಳ್ಳುವುದರಿಂದ ಚರ್ಮಕ್ಕೆ ಹಲವು ರೀತಿಯಲ್ಲಿ ಅನುಕೂಲಗಳಿವೆ.

Marigold

ಮಾರಿಗೋಲ್ಡ್‌

ಚೆಂಡು ಹೂವು ಎಂದೇ ಇವು ಪ್ರಸಿದ್ಧ. ಮಳೆಗಾಲದ ಈ ಹೊತ್ತಿನಲ್ಲಿ ಮೇಲೇಳುವ ಚೆಂಡು ಹೂವಿನ ಗಿಡಗಳು, ನವರಾತ್ರಿ-ದೀಪಾವಳಿಯ ಆಸುಪಾಸಿನಲ್ಲಿ ಇಡೀ ಗಿಡ ತುಂಬುವಷ್ಟು ಹೂ ಬಿಡುತ್ತವೆ. ಇವೂ ಸಹ ಸೊಳ್ಳೆ ಓಡಿಸುವಲ್ಲಿ ಸಹಕಾರ ನೀಡುವಂಥವು. ಬಾಲ್ಕನಿಯಲ್ಲಿ, ಬಾಗಿಲು-ಕಿಟಕಿಗಳ ಬಳಿ, ಅಂದರೆ ಸೊಳ್ಳೆ ಒಳ ಪ್ರದೇಶ ಮಾಡುವ ಜಾಗಗಳಲ್ಲಿ ಇದನ್ನು ಕುಂಡದಲ್ಲಿ ಇರಿಸಿಕೊಳ್ಳುವುದು ಒಳ್ಳೆಯ ಉಪಾಯ. ಇದರ ಹೂವುಗಳನ್ನು ಗೊಂಚಲು ಮಾಡಿ, ಹೂದಾನಿಗಳಲ್ಲಿ ಮನೆಯೊಳಗೆ ಇರಿಸಿಕೊಳ್ಳಬಹುದು. ಹೂವನ್ನು ಒಣಗಿಸಿಟ್ಟುಕೊಂಡರೆ ಸೊಳ್ಳೆ ಓಡಿಸುವಲ್ಲಿ ಇನ್ನಷ್ಟು ನೆರವು ದೊರೆಯುತ್ತದೆ.

Basil

ಬೆಸಿಲ್

ಇದು ಕೇವಲ ಸೊಳ್ಳೆ ಓಡಿಸುವುದಕ್ಕೆ ಮಾತ್ರವಲ್ಲ, ರುಚಿಕಟ್ಟಾದ ಅಡುಗೆಗೂ ಉಪಯೋಗವಾಗುತ್ತದೆ. ಇದರ ತೀಕ್ಷ್ಣವಾದ ಪರಿಮಳವು ಸೊಳ್ಳೆಗಳನ್ನು ಹತ್ತಿರ ಸುಳಿಯಗೊಡುವುದಿಲ್ಲ. ಹಾಗಾಗಿ ಸೊಳ್ಳೆ ಓಡಿಸುವ ಉಪಾಯಗಳಲ್ಲಿ ಇದನ್ನು ಸಹ ಅಳವಡಿಸಿಕೊಳ್ಳಬಹುದು. ಸಾಕಷ್ಟು ಗಾಳಿ-ಬೆಳಕು ಇರುವಂಥ ಜಾಗದಲ್ಲಿ ಇದನ್ನು ಕುಂಡಗಳಲ್ಲಿ ಬೆಳೆಸಬಹುದು. ಇದರ ಎಲೆಗಳನ್ನು ಕಿವುಚಿ ಮೈ-ಕೈಗೆಲ್ಲ ರಸ ಲೇಪಿಸಿಕೊಂಡರೂ ಸೊಳ್ಳೆ ಹತ್ತಿರ ಸುಳಿಯುವುದಿಲ್ಲ. ಇದರ ಕುಂಡಗಳನ್ನು ಸೊಳ್ಳೆಯ ಪ್ರವೇಶ ದ್ವಾರಗಳಲ್ಲಿ ಇರಿಸಿಕೊಂಡರೆ, ಸೊಳ್ಳೆಯ ಉಪಟಳಕ್ಕೆ ಬಾಗಿಲು ತೆರೆಯಲೂ ಅಳುಕುವ ಸ್ಥಿತಿ ತೊಲಗುತ್ತದೆ.

Lemon balm

ಲೆಮೆನ್‌ ಬಾಮ್‌

ಪುದೀನಾ ಜಾತಿಗೆ ಸೇರಿದ ಸಸ್ಯವಿದು. ಇದರ ಕಟುವಾದ ಘಮ ಸೊಳ್ಳೆ ಓಡಿಸುವಲ್ಲಿ ನೆರವಾಗುತ್ತದೆ. ಯಾವುದೇ ಕೈತೋಟ ಅಥವಾ ಬಾಲ್ಕನಿಗಳಲ್ಲಿ ಇವುಗಳನ್ನು ಸುಲಭವಾಗಿ ಬೆಳೆಯಬಹುದು. ಇದರ ಗಾಢವಾದ ನಿಂಬೆಯಂಥ ಪರಿಮಳ ನಮಗೆ ಹಿತವೆನಿಸಿದರೂ ಸೊಳ್ಳೆಗಳಿಗೆ ಆಗದು. ಮನಸ್ಸನ್ನು ಶಾಂತಗೊಳಿಸುವ ಗುಣಗಳು ಇದಕ್ಕಿರುವುದರಿಂದ, ಈ ಮೂಲಿಕೆಯ ಎಲೆಗಳನ್ನು ಚಹಾ ಮಾಡಿ ಕುಡಿಯುವವರಿದ್ದಾರೆ.

ಇದನ್ನೂ ಓದಿ: Head Massage Tips: ತಲೆಯ ಮಸಾಜ್‌ನಿಂದ ಮಾನಸಿಕ ಒತ್ತಡ ನಿವಾರಿಸಲು ಸಾಧ್ಯ! ಹಾಗಂತ ಬೇಕಾಬಿಟ್ಟಿ ಮಸಾಜ್‌ ಮಾಡಬೇಡಿ

Continue Reading

ತುಮಕೂರು

Shira News: ಶಿರಾದಲ್ಲಿ ʼಪರೋಪಕಾರಂʼ ಸೇವಾ ಸಂಸ್ಥೆಯಿಂದ ಸ್ವಚ್ಛತಾ ಅಭಿಯಾನ

Shira News: ಶಿರಾ ನಗರದ ಸಾರ್ವಜನಿಕ ಆರೋಗ್ಯ ಕೇಂದ್ರದ ಆವರಣದಲ್ಲಿ “ಪರೋಪಕಾರಂ” ಸೇವಾ ಸಂಸ್ಥೆಯ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಜರುಗಿತು.

VISTARANEWS.COM


on

Cleanliness programme in Shira Public Health Center premises
Koo

ಶಿರಾ: ಪ್ರತಿಯೊಬ್ಬರೂ ಮನೆ, ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರ ಮೂಲಕ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ನಗರಸಭೆಯ ಪೌರಾಯುಕ್ತ ರುದ್ರೇಶ್ (Shira News) ತಿಳಿಸಿದರು.

ನಗರದ ಸಾರ್ವಜನಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಭಾನುವಾರ “ಪರೋಪಕಾರಂ” ಸೇವಾ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನುಷ್ಯ ತನ್ನ ನಿತ್ಯ ಜೀವನ ನಿರ್ವಹಣೆಯ ಜತೆಗೆ ಸಮಾಜದಲ್ಲಿ ಇತರರಿಗೂ ಸಹಾಯ ಮಾಡುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು.

ಪರೋಪಕಾರಂ ಸೇವಾ ಸಂಸ್ಥೆಯ ವತಿಯಿಂದ ಶಿರಾ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿರಂತರವಾಗಿ ಸ್ವಚ್ಛತೆ, ಜಲ, ಪರಿಸರ ಸಂರಕ್ಷಣೆಗಳಂತಹ ಮಾದರಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿರುವುದು ಎಲ್ಲರಿಗೂ ಮಾದರಿಯಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: One Nation One Rate: ಚಿನ್ನಕ್ಕೆ ದೇಶಾದ್ಯಂತ ಒಂದೇ ದರ! ಹೊಸ ನಿಯಮ ಶೀಘ್ರ ಜಾರಿ ಸಾಧ್ಯತೆ

ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಶ್ರೀನಾಥ್‌ ಮಾತನಾಡಿ, ಎಲ್ಲರೂ ಸ್ವಚ್ಛತೆಯನ್ನು ಕಾಪಾಡುವುದರಿಂದ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಲು ಸಹಕಾರಿಯಾಗುತ್ತದೆ. ಸ್ವಚ್ಛತೆ ಇರುವ ಕಡೆ ಸಾಂಕ್ರಾಮಿಕ ಕಾಯಿಲೆಗಳು ಹರಡದಂತೆ ತಡೆಗಟ್ಟಬಹುದಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Healthy Heart Tips: ನಿಮ್ಮ ಹೃದಯ ಆರೋಗ್ಯವಾಗಿರಬೇಕೆ? ಮಳೆಗಾಲದಲ್ಲಿ ಈ ಏಳು ಆಹಾರಗಳಿಂದ ದೂರವಿರಿ!

ಸ್ವಚ್ಛತಾ ಕಾರ್ಯಕ್ರಮದಲ್ಲಿ ಶಿರಾದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ಅಧಿಕಾರಿ ಡಾ. ಡಿ.ಎಂ. ಗೌಡ, ನಗರಸಭೆಯ ಸದಸ್ಯರಾದ ಉಮಾ ವಿಜಯರಾಜ್, ರಾಧಾಕೃಷ್ಣ, ಸಮಾಜ ಸೇವಕ ಡೈರಿ ಕುಮಾರ್ ಸೇರಿದಂತೆ ಇತರೆ ಅಧಿಕಾರಿಗಳು, ಸಿಬ್ಬಂದಿ ಮತ್ತು ಇತರರು ಪಾಲ್ಗೊಂಡಿದ್ದರು.

Continue Reading

ತುಮಕೂರು

Shira News: ಶಿರಾದಲ್ಲಿ ವನಮಹೋತ್ಸವ ಕಾರ್ಯಕ್ರಮಕ್ಕೆ ಶಾಸಕ ಟಿ.ಬಿ.ಜಯಚಂದ್ರ ಚಾಲನೆ

Shira News: ಶಿರಾ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ಶನಿವಾರ ಅರಣ್ಯ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವನಮಹೋತ್ಸವ ಕಾರ್ಯಕ್ರಮಕ್ಕೆ ಶಿರಾ ಶಾಸಕ ಟಿ.ಬಿ. ಜಯಚಂದ್ರ ಚಾಲನೆ ನೀಡಿದರು.

VISTARANEWS.COM


on

Vanamahotsava Programme at Shira
Koo

ಶಿರಾ: ಅರಣ್ಯ ಇಲಾಖೆಯ ವತಿಯಿಂದ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಶನಿವಾರ (Shira News) ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಶಿರಾ ಶಾಸಕ ಹಾಗೂ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ರಕೃತಿ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಎಂಬ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ವ್ಯಾಪಕವಾಗಬೇಕು ಎಂದು ತಿಳಿಸಿದರು.

ಸುಂದರ ಪರಿಸರವನ್ನು ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡುವುದು ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯ ಎಂದು ಹೇಳಿದರು.

ಇದನ್ನೂ ಓದಿ: Foreign Investment: ರಾಜ್ಯದಲ್ಲಿ ಸ್ಮಾರ್ಟ್ ಫೋನ್ ಕ್ಯಾಮೆರಾ ಬಿಡಿಭಾಗ ತಯಾರಿಕೆ ಘಟಕ; ದ.ಕೊರಿಯಾ ಜತೆ ಕರ್ನಾಟಕ ಒಪ್ಪಂದ

ಗಿಡ ಮರಗಳು ಮಾನವನ ಜೀವನಾಡಿಗಳು. ನಾವೆಲ್ಲರೂ ಗಿಡಗಳನ್ನು ನೆಟ್ಟು ಪೋಷಿಸುವುದರ ಮೂಲಕ ಪರಿಸರ ಜಾಗೃತಿ ಮೂಡಿಸಬೇಕು. ಪರಿಸರ ಅಸಮತೋಲನ ತಪ್ಪಿಸಲು ಹೆಚ್ಚು ಗಿಡಮರಗಳನ್ನು ಬೆಳೆಸಿ, ಕಾಡುಗಳನ್ನು ಸಂರಕ್ಷಿಸಿದರೆ ಮಾತ್ರ ಭವಿಷ್ಯದಲ್ಲಿ ಎಲ್ಲರೂ ಸಮೃದ್ಧ ಜೀವನ ನಡೆಸಲು ಸಾಧ್ಯ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

ಈ ಸಂದರ್ಭದಲ್ಲಿ ತಹಸೀಲ್ದಾರ್ ದತ್ತಾತ್ರೇಯ ಜೆ. ಗಾದ, ಆರ್‌ಎಫ್‌ಒ ನವನೀತ್, ಕೃಷಿ ಇಲಾಖೆ ಸಹಾಯ ನಿರ್ದೇಶಕ ನಾಗರಾಜ್ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಮುಖಂಡರು ಉಪಸ್ಥಿತರಿದ್ದರು.

Continue Reading

ಪರಿಸರ

Cheetah Safari: ಬನ್ನೇರುಘಟ್ಟದಲ್ಲಿ ʻಚಿರತೆ ಸಫಾರಿʼ ಶುರು; ಚಿರತೆಗಳನ್ನು ಕಾಡೊಳಗೇ ನೋಡಿ ಆನಂದಿಸಿ!

Cheetah Safari: ಬೆಂಗಳೂರಿನಲ್ಲೇ ಇರುವ, ಆದರೆ ವನ್ಯಮೃಗಗಳನ್ನು ಅವುಗಳ ಆವಾಸಸ್ಥಾನದಲ್ಲೇ ನೋಡಿ ಬರಬಹುದಾದ ಸಫಾರಿಯೂ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವುದು ವಿಶೇಷ. ಈಗ ವನ್ಯಜೀವಿ ಪ್ರಿಯರಿಗೆ ಇನ್ನೂ ಒಂದು ಹೊಸ ಖುಷಿಯ ಸುದ್ದಿಯನ್ನು ಬನ್ನೇರುಘಟ್ಟ ನೀಡಿದೆ. ಇದೇ ಮೊದಲ ಬಾರಿಗೆ ʻಚಿರತೆ ಸಫಾರಿʼಯನ್ನೂ ಆರಂಭಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Cheetah Safari
Koo

ಬೆಂಗಳೂರು ಆಧುನಿಕ ಪ್ರವಾಸಿಗರ ಸ್ವರ್ಗ. ಇಲ್ಲೇ ಸುತ್ತಾಡಿದರೂ ಮುಗಿಯದಷ್ಟು ಸ್ಥಳಗಳಿವೆ. ಎಲ್ಲ ಬಗೆಯ ಪ್ರವಾಸಿಗರಿಗೂ ಖುಷಿಯಿಂದ ಕಾಲ ಕಳೆಯಬಹುದಾದಂತಹ ಜಾಗಗಳಿವೆ. ಇಂತಹ ಜಾಗಗಳ ಪೈಕಿ ಮಕ್ಕಳಾದಿಯಾಗಿ ಮುದುಕರವರೆಗೂ ನೋಡಬಹುದಾದ ತಾಣ ಎಂದರೆ ಅದು ಬನ್ನೇರುಘಟ್ಟ. ಬೆಂಗಳೂರಿನಲ್ಲೇ ಇರುವ ಆದರೆ ವನ್ಯಮೃಗಗಳನ್ನು ಅವುಗಳ ಆವಾಸಸ್ಥಾನದಲ್ಲೇ ನೋಡಿ ಬರಬಹುದಾದ ಸಫಾರಿಯೂ ಬನ್ನೇರುಘಟ್ಟದಲ್ಲಿರುವುದು ವಿಶೇಷ. ಈಗ ವನ್ಯಜೀವಿ ಪ್ರಿಯರಿಗೆ ಇನ್ನೂ ಒಂದು ಹೊಸ ಖುಷಿಯ ಸುದ್ದಿಯನ್ನು ಬನ್ನೇರುಘಟ್ಟ ನೀಡಿದೆ. ಇದೇ ಮೊದಲ ಬಾರಿಗೆ ʻಚಿರತೆ ಸಫಾರಿʼಯನ್ನೂ (Cheetah Safari) ಆರಂಭಿಸಿದೆ.

Cheetah

ದಕ್ಷಿಣ ಭಾರತದಲ್ಲೇ ಮೊದಲು

ದಕ್ಷಿಣ ಭಾರತದಲ್ಲೇ ಇದು ಮೊದಲನೆಯದಾಗಿದ್ದು, ನಮ್ಮ ಬಾರತದ ಅತ್ಯಂತ ದೊಡ್ಡ ಚಿರತೆ ಸಫಾರಿ ಇದಾಗಿದೆ. 20 ಹೆಕ್ಟೇರ್‌ ಕಾಡಿನಲ್ಲಿ ಈ ಸಫಾರಿಗೆ ಅವಕಾಶ ಮಾಡಿಕೊಡಲಾಗಿದ್ದು, ಇದರಲ್ಲಿ ಚಿರತೆ ವೀಕ್ಷಣೆಯ ಸಾಧ್ಯತೆ ಅತ್ಯಂತ ಹೆಚ್ಚಿದೆ. ರಕ್ಷಣೆಗಾಗಿ, ಎಲ್ಲ ಸುರಕ್ಷತಾ ಕ್ರಮಗಳನ್ನು ಬನ್ನೇರುಘಟ್ಟ ವನ್ಯಜೀವಿಧಾಮ ಕೈಗೊಂಡಿದ್ದು, ಸುರಕ್ಷತಾ ಬೇಲಿಗಳನ್ನು ಎಲ್ಲಡೆ ಹಾಕಲಾಗಿದೆ. ಹಾಗೂ ಯಾವುದೇ ತೊಂದರೆಯಾಗದಂತೆ ಸಫಾರಿಯನ್ನು ಮಾಡಿ ಬರಲು ಅನುಕೂಲಕರ ಸೌಲಭ್ಯಗಳನ್ನು ಇಲ್ಲಿ ಒದಗಿಸಲಾಗುತ್ತದೆ.
ಬೆಂಗಳೂರಿನ ಹೊರವಲಯಗಳಲ್ಲಿ ಅನೇಕ ಕಡೆ, ಚಿರತೆಗಳ ಸಂಚಾರ ಸಾಮಾನ್ಯವಾಗಿದ್ದರೂ, ಚಿರತೆಗಳನ್ನು ಅವುಗಳ ಆವಾಸ ಸ್ಥಾನದಲ್ಲೇ ನೋಡುವ ರೋಮಾಂಚನ ವನ್ಯಜೀವಿ ಪ್ರಿಯರಿಗಷ್ಟೇ ಗೊತ್ತು. ಇದನ್ನು ಗಮನದಲ್ಲಿಟ್ಟುಕೊಂಡು ಚಿರತೆಗಳ ದರ್ಶನಕ್ಕಾಗಿಯೇ ವಿಶೇಷವಾಗಿ ಈ ಸಫಾರಿ ಆಯೋಜಿಸಲಾಗಿದೆ. ತುಂಬ ಹತ್ತಿರದಿಂದ ಚಿರತೆಗಳನ್ನು ಕಾಣುವ ಸೌಭಾಗ್ಯ ಈ ಸಫಾರಿಯಲ್ಲಿ ಎಲ್ಲರಿಗೂ ಲಭ್ಯವಾಗಲಿದೆ.

ಇದನ್ನು ಓದಿ: Wildlife Sanctuaries: ಮಳೆ ಬರುವ ಮುನ್ನ ಈ ವನ್ಯಜೀವಿಧಾಮಗಳನ್ನು ನೋಡಲು ಪ್ರಯತ್ನಿಸಿ

ಚಿರತೆ ಸಂತತಿ ಹೇರಳ

ಬನ್ನೇರುಘಟ್ಟದ ಈ ಭಾಗದಲ್ಲಿ ಚಿರತೆಗಳ ಸಂತತಿ ಹೇರಳಾಗಿದ್ದು, ಹಲವು ವರ್ಷಗಳಿಂದ ಇದು ಸಮತೋಲನವನ್ನು ಕಾಯ್ದುಕೊಂಡಿದೆ. ಬೆಂಗಳೂರು ಸುತ್ತಮುತ್ತಲ ಹಳ್ಳಿಗಳಿಗೆ ದಾಳಿ ಮಾಡುತ್ತಿದ್ದ ಚಿರತೆಗಳನ್ನು ರಕ್ಷಿಸಿ ಇಲ್ಲಿಗೆ ತರಲಾಗಿದ್ದು ಈ ಸಂಖ್ಯೆ ಇದೀಗ ವೃದ್ಧಿಸಿದೆ. ಹಾಗೂ ಬನ್ನೇರುಘಟ್ಟದ ಈ ವ್ಯಾಪ್ತಿಯ ನೈಸರ್ಗಿಕ ಪರಿಸರದಲ್ಲಿ ಓಡಾಡಿಕೊಂಡಿದ್ದು, ತಮ್ಮ ಎಂದಿನ ಶೈಲಿಯ ಬದುಕನ್ನು ಕಾಣುತ್ತಿವೆ. ಹೀಗಾಗಿ, ಅವುಗಳ ನೈಸರ್ಗಿಕವಾದ ಸಹಜ ಬದುಕನ್ನು ಹತ್ತಿರದಿಂದ ಕಾಣಲು ಈ ಸಫಾರಿ ಅತ್ಯಂತ ಸೂಕ್ತವಾದ ಮಾಧ್ಯಮವಾಗಿದೆ.
ಬನ್ನೇರುಘಟ್ಟದಲ್ಲಿ ಮೃಗಾಲಯವೂ ಇದ್ದು, ಅಲ್ಲಿ ಬಗೆಬಗೆಯ ಪ್ರಾಣಿ ಪಕ್ಷಿಗಳನ್ನು ನೋಡಬಹುದಾದರೂ, ಈ ಸಫಾರಿಯಲ್ಲಿ, ಅವುಗಳ ನೈಸರ್ಗಿಕ ಪರಿಸರದಲ್ಲೇ ವೀಕ್ಷಿಸಲು ಸಾಧ್ಯವಾಗುವುದು ವಿಶೇಷ.
ಬನ್ನೇರುಘಟ್ಟ ರಾಷ್ಟೀಯ ಉದ್ಯಾನದ ಇನ್ನೊಂದು ಬಹುಮುಖ್ಯ ವಿಶೇಷತೆ ಎಂದರೆ ಇಲ್ಲಿನ ಚಿಟ್ಟೆ ಪಾರ್ಕ್‌. ಸುಮಾರು 7.5 ಎಕರೆ ಪ್ರದೇಶದವನ್ನು ಚಿಟ್ಟೆ ಪಾರ್ಕ್‌ ಆಗಿ ಅಭಿವೃದ್ಧಿಗೊಳಿಸಲಾಗಿದ್ದು, ಇಲ್ಲಿ ನಾನಾ ಬಗೆಯ ಚಿಟ್ಟೆಗಳನ್ನು ವೀಕ್ಷಿಸಬಹುದು. ಬನ್ನೇರುಘಟ್ಟದಲ್ಲಿಯೇ ರಾತ್ರಿ ಕಳೆಯಬೇಕೆಂದರೆ, ಇಲ್ಲಿ ಟೆಂಟೆಡ್‌ ಕಾಟೇಜ್‌, ಹಟ್‌ಗಳ ಸೌಲಭ್ಯಗಳೂ ಇವೆ. ಸದ್ಯದಲ್ಲೇ ಬನ್ನೇರುಘಟ್ಟದ ಜೀವವೈವಿಧ್ಯದ ವಿಶೇಷ ವೀಕ್ಷಣೆಗಾಗಿ ಸ್ಕೈವಾಕ್‌ ಅನ್ನೂ ಅಭಿವೃದ್ಧಿ ಪಡಿಸಲಾಗುತ್ತಿದೆ.
ಪ್ರತಿ ಮಂಗಳವಾರ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ಮುಚ್ಚಿರುತ್ತದೆ. ಇದನ್ನು ಹೊರತುಪಡಿಸಿ ಪ್ರತಿದಿನ 9.30ರಿಂದ ಸಂಜೆ 5ರವರೆಗೆ ಪ್ರವಾಸಿಗರಿಗಾಗಿ ಇದು ತೆರೆದಿರುತ್ತದೆ.

Continue Reading
Advertisement
BMTC staff commits suicide at headquarters
ಬೆಂಗಳೂರು8 mins ago

BMTC staff : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆ

ಪ್ರಮುಖ ಸುದ್ದಿ14 mins ago

Uttara Kannada Rain: ಭಾರಿ ಮಳೆಗೆ ತತ್ತರಿಸಿದ ಉತ್ತರ ಕನ್ನಡ; ಭೂಕುಸಿತಕ್ಕೆ 11 ಸಾವು, ರಸ್ತೆಗಳೇ ಮಾಯ, ತೋಟ ಗದ್ದೆ ಮುಳುಗಡೆ

Pooja Khedkar
ಪ್ರಮುಖ ಸುದ್ದಿ14 mins ago

Pooja Khedkar: ಐಎಎಸ್‌ಗಾಗಿ ನಕಲಿ ಜಾತಿ, ಕಡಿಮೆ ವಯಸ್ಸು, ದರ್ಪ; ಪೂಜಾ ಖೇಡ್ಕರ್‌ ಕಳ್ಳಾಟ ಒಂದೆರಡಲ್ಲ!

Viral Video
Latest20 mins ago

Viral Video : ಡ್ಯಾನ್ಸ್‌ ಆಯ್ತು, ಹೊಡೆದಾಟವಾಯ್ತು, ಈಗ ಹುಡುಗಿಯರ ಮೇಕಪ್‌ಗೂ ಸಾಕ್ಷಿಯಾಯ್ತು ದೆಹಲಿ ಮೆಟ್ರೊ! ವಿಡಿಯೊ ನೋಡಿ

Rajnath Singh
ದೇಶ24 mins ago

Kashmir Encounter: ಸೇನಾ ಮುಖ್ಯಸ್ಥರ ಜೊತೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಮಾತುಕತೆ; ಸೇನೆಗೆ ಸಂಪೂರ್ಣ ಅಧಿಕಾರ

Model Arrest
Latest30 mins ago

Model Arrest: ತನ್ನ ಫಾಲೋವರ್ಸ್‌ಗಳನ್ನೇ ವೇಶ್ಯಾವಾಟಿಕೆಯಲ್ಲಿ ತೊಡಗಿಸುತ್ತಿದ್ದ ಖ್ಯಾತ ಮಾಡೆಲ್‌ಗೆ ಜೈಲು ಶಿಕ್ಷೆ!

Manorathangal Trailer
ಸಿನಿಮಾ36 mins ago

Manorathangal Trailer: ಗಮನ ಸೆಳೆದ ʼಮನೋರಥಂಗಳ್‌ʼ ಟ್ರೈಲರ್‌; 8 ನಿರ್ದೇಶಕರ 9 ಎಪಿಸೋಡ್‌ನಲ್ಲಿ ಸ್ಟಾರ್‌ಗಳ ಸಮಾಗಮ

CM Siddaramaiah
ಕರ್ನಾಟಕ42 mins ago

CM Siddaramaiah: ಆಸ್ತಿ ಬಗ್ಗೆ ತಪ್ಪು ಮಾಹಿತಿ; ಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ಮತ್ತೆರಡು ದೂರು

Viral News
Latest1 hour ago

Viral News: ಬಾಸ್‌ ಜತೆ ಚಕ್ಕಂದವಾಡುತ್ತಿದ್ದ ಕಿಲಾಡಿ ಪತ್ನಿ; ಡ್ರೋನ್‌ ಬಳಸಿ ಪತ್ತೆ ಹಚ್ಚಿದ ಚಾಲಾಕಿ ಗಂಡ!

Rishabh Pant
ಕ್ರಿಕೆಟ್1 hour ago

Rishabh Pant: ಸಹ ಆಟಗಾರ ಖಲೀಲ್​ ಅಹ್ಮದ್​ರನ್ನು ಸ್ವಿಮ್ಮಿಂಗ್ ಪೂಲ್‌​ಗೆ ತಳ್ಳಿ ಹಾಕಿದ ಪಂತ್​; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ22 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌