Site icon Vistara News

Electoral Bonds: ಚುನಾವಣಾ ಬಾಂಡ್‌ ಯೋಜನೆ ರದ್ದು ಏಕೆ? ಸುಪ್ರೀಂ ಹೇಳಿದ್ದೇನು?

Supreme Court

Supreme Court Strikes Down Electoral Bonds Scheme: What Are The Reasons? What is the Scheme?

ನವದೆಹಲಿ: ಚುನಾವಣಾ ಬಾಂಡ್‌ ಯೋಜನೆ ಕುರಿತು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಬಾಂಡ್‌ ಯೋಜನೆಯನ್ನು (Electoral Bonds) ಸುಪ್ರೀಂ ಕೋರ್ಟ್‌ (Supreme Court) ರದ್ದುಗೊಳಿಸಿದ್ದು, ಕೇಂದ್ರ ಸರ್ಕಾರಕ್ಕೆ (Central Government) ಭಾರಿ ಹಿನ್ನಡೆಯಾದಂತಾಗಿದೆ. ಹಾಗಾದರೆ, ಏನಿದು ಚುನಾವಣೆ ಬಾಂಡ್‌ ಯೋಜನೆ? ಇದನ್ನು ರದ್ದುಗೊಳಿಸಲು ಕಾರಣಗಳೇನು? ಸುಪ್ರೀಂ ಕೋರ್ಟ್‌ ಹೇಳಿದ್ದೇನು ಎಂಬುದರ ಮಾಹಿತಿಯನ್ನು ಸಂಕ್ಷಿಪ್ತವಾಗಿ ಇಲ್ಲಿ ವಿವರಿಸಲಾಗಿದೆ.

ಯೋಜನೆಯಲ್ಲಿರುವುದು ಏನೇನು?


ಸುಪ್ರೀಂ ಕೋರ್ಟ್‌ ಹೇಳಿದ್ದೇನು?

ಇದನ್ನೂ ಓದಿ: Electoral Bonds: ಚುನಾವಣಾ ಬಾಂಡ್‌ ಯೋಜನೆ ಅಸಾಂವಿಧಾನಿಕ; ಸುಪ್ರೀಂ ತೀರ್ಪು, ಕೇಂದ್ರಕ್ಕೆ ಹಿನ್ನಡೆ

ಯೋಜನೆ ಜಾರಿಯಾಗಿದ್ದು ಯಾವಾಗ?

ಚುನಾವಣಾ ಬಾಂಡ್‌ ಯೋಜನೆಯನ್ನು 2017ರಲ್ಲಿ ಆಗಿನ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು ಬಜೆಟ್‌ ಅಧಿವೇಶನದಲ್ಲಿ ಮೊದಲು ಪ್ರಸ್ತಾಪಿಸಿದರು. ಹಣಕಾಸು ಕಾಯ್ದೆ ಹಾಗೂ ಪ್ರಜಾಪ್ರತಿನಿಧಿ ಕಾಯ್ದೆಗಳಿಗೆ ತಿದ್ದುಪಡಿ ತಂದು 2018ರ ಜನವರಿಯಲ್ಲಿ ಚುನಾವಣಾ ಬಾಂಡ್‌ ಯೋಜನೆ ಜಾರಿ ಕುರಿತು ಅಧಿಸೂಚನೆ ಹೊರಡಿಸಲಾಯಿತು. ಆ ಮೂಲಕ ಚುನಾವಣಾ ಬಾಂಡ್‌ ಯೋಜನೆ ಜಾರಿಗೊಳಿಸಲಾಯಿತು.

ಬಿಜೆಪಿಗೆ ಹೆಚ್ಚು ದೇಣಿಗೆ

ಚುನಾವಣಾ ಬಾಂಡ್‌ ಯೋಜನೆ ಜಾರಿಯಾದ ಬಳಿಕ ಬಿಜೆಪಿಗೆ ಹೆಚ್ಚುಗೆ ದೇಣಿಗೆ ಸಂದಾಯವಾಗಿದೆ. ಆಡಳಿತಾರೂಢ ಪಕ್ಷವಾದ ಕಾರಣ ಹೆಚ್ಚು ದೇಣಿಗೆ ಸಂಗ್ರಹಿಸಿದೆ. 2022-23ನೇ ಸಾಲಿನಲ್ಲಿ ಬಿಜೆಪಿಗೆ ಚುನಾವಣಾ ಬಾಂಡ್‌ಗಳ ಮೂಲಕವೇ ಸುಮಾರು 1,300 ಕೋಟಿ ರೂ. ದೇಣಿಗೆ ಸಂಗ್ರಹವಾಗಿದೆ. ಇದು ಕಾಂಗ್ರೆಸ್‌ಗಿಂತ ಎಂಟು ಪಟ್ಟು ಹೆಚ್ಚಿನ ಮೊತ್ತವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version