ವಿಸ್ತಾರ Explainer: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಏನಾಗುತ್ತಿದೆ? ಯಾರಿವನು ಶೇಖ್‌ ಶಹಜಹಾನ್‌? - Vistara News

EXPLAINER

ವಿಸ್ತಾರ Explainer: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಏನಾಗುತ್ತಿದೆ? ಯಾರಿವನು ಶೇಖ್‌ ಶಹಜಹಾನ್‌?

ವಿಸ್ತಾರ Explainer: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿ ಹಿಂಸಾಚಾರಕ್ಕೆ (Sandeshkhali Violence) ಕಾರಣನಾಗಿರುವ ಶೇಖ್‌ ಶಹಜಹಾನ್‌ ಎಂಬ ಕ್ರೂರಿ ಸದ್ಯ ಸಿಬಿಐ ಬಂಧನದಲ್ಲಿದ್ದಾನೆ.

VISTARANEWS.COM


on

sandeshkhali sheik shahjahan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಸ್ತಾರ Explainer: ಪಶ್ಚಿಮ ಬಂಗಾಳ (West Bengal) ರಾಜ್ಯದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿ (Sandeshkhali) ಎಂಬ ಗ್ರಾಮ ಕಳೆದ ಎರಡು ತಿಂಗಳುಗಳಿಂದ ದೇಶವ್ಯಾಪಿ ಸುದ್ದಿಯಾಗುತ್ತಿದೆ. ಸುಮಾರು ಒಂದು ತಿಂಗಳಿನಿಂದ ಹಿಂಸಾಚಾರ (Sandeshkhali violence) ರಾಜಕೀಯ ಬಿರುಗಾಳಿ, ಅಭೂತಪೂರ್ವ ಪ್ರತಿಭಟನೆಗಳಿಗೆ ಸಾಕ್ಷಿಯಾಗಿದೆ. ಸ್ಥಳೀಯ ತೃಣಮೂಲ ಕಾಂಗ್ರೆಸ್‌ (Trinamool Congress) ನಾಯಕ ಶೇಖ್‌ ಶಹಜಹಾನ್‌ (Sheikh Shahjahan) ಎಂಬಾತ ಇಲ್ಲಿನ ಹಲವಾರು ಮಹಿಳೆಯರ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯವೇ (Physical Abuse) ಈ ಪ್ರಕರಣದ ಕೇಂದ್ರಬಿಂದು. ಆದರೆ ಬಹುಕೋಟಿ ಪಡಿತರ ಹಗರಣ, ಇಡಿ ಅಧಿಕಾರಿಗಳ ಮೇಲಿನ ದಾಳಿ, ತೃಣಮೂಲ ಕಾಂಗ್ರೆಸ್‌ನ ಪ್ರತಿಷ್ಠೆ, ಬಿಜೆಪಿಯ ಪ್ರತಿಭಟನೆ, ಸುಪ್ರೀಂ ಕೋರ್ಟ್‌ (Supreme court) ಆದೇಶ ಎಲ್ಲವೂ ಸೇರಿಕೊಂಡು ಬೃಹತ್‌ ಪ್ರಮಾಣಕ್ಕೆ ಬೆಳೆದಿದೆ.

ಎಲ್ಲಿಂದ ಆರಂಭ?

ಪ್ರಕರಣ ಬಿಗಡಾಯಿಸಲು ಆರಂಭಿಸಿದ್ದು ಜನವರಿ 5ರಂದು ಮುಂಜಾನೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಸಂದೇಶ್‌ಖಾಲಿಯಲ್ಲಿರುವ ಆರೋಪಿ ಶೇಖ್‌ ಶಹಜಹಾನ್‌ ನಿವಾಸಕ್ಕೆ ದಾಳಿ ನಡೆಸಲು ಬಂದಾಗ. ಬಹುಕೋಟಿ ಪಡಿತರ ವಿತರಣೆ ಹಗರಣದಲ್ಲಿ ತಲೆಮರೆಸಿಕೊಂಡಿದ್ದ ಟಿಎಂಸಿಯ ಪ್ರಭಾವಶಾಲಿ ನಾಯಕ, ಜಿಲ್ಲಾ ಪರಿಷತ್‌ ಸದಸ್ಯನೂ ಆಗಿರುವ ಶೇಖ್‌ ಶಹಜಹಾನ್ ಮನೆಗೆ ಇಡಿ ಅಧಿಕಾರಿಗಳು ದಾಳಿಯಿಟ್ಟರು. ಆದರೆ ಕೂಡಲೇ ಅಲ್ಲಿ ಶಹಜಹಾನ್‌ನ ಬೆಂಬಲಿಗರು ಸೇರಿ ಇಡಿ ಅಧಿಕಾರಿಗಳನ್ನು ತಡೆದದ್ದಲ್ಲದೆ, ಹಲ್ಲೆ ನಡೆಸಿದರು. ಅಧಿಕಾರಿಗಳು ಹೇಗೋ ಜೀವ ಉಳಿಸಿಕೊಂಡು ಅಲ್ಲಿಂದ ಪರಾರಿಯಾಗಬೇಕಾಯಿತು. ಇದಾದ ಬಳಿಕ ಶಹಜಹಾನ್‌ ಅಲ್ಲಿಂದಲೂ ನಾಪತ್ತೆಯಾದ.

ಇಡಿ ಅಧಿಕಾರಿಗಳ ಮೇಲೆ ದಾಳಿ ನಡೆದದ್ದು ದೇಶಾದ್ಯಂತ ಸುದ್ದಿಯಾಯಿತು. ಬಿಜೆಒಇ ಹಾಗೂ ರಾಜ್ಯ ವಿಪಕ್ಷಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ದನಿಯೆತ್ತಿದವು. ಇದರಿಂದ ದೌರ್ಜನ್ಯಕ್ಕೊಳಗಾಗಿದ್ದ ಸ್ಥಲೀಯ ಮಹಿಳೆಯರಿಗೂ ಧ್ವನಿ ಬಂದಂತಾಯಿತು. ಸಂತ್ರಸ್ತ ಮಹಿಳೆಯರು ಒಟ್ಟು ಸೇರಿದರು. ಶಹಜಹಾನ್‌ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡರು. ಕೂಡಲೇ ರಾಷ್ಟ್ರೀಯ ಮಾಧ್ಯಮದ ಗಮನ ಈ ಮಹಿಳೆಯರ ಕಡೆಗೆ ತಿರುಗಿತು. ಈ ಮಹಿಲೆಯರು ಶೇಖ್‌ ಶಹಜಹಾನ್‌ ಹಾಗೂ ಆತನ ಬೆಂಬಲಿಗರು, ತೃಣಮೂಲ ಕಾರ್ಯಕರ್ತರು ಸಂದೇಶ್‌ಖಾಲಿಯಲ್ಲಿ ನಡೆಸುತ್ತಿದ್ದ ಬರ್ಬರ ದೌರ್ಜನ್ಯವನ್ನು ಎಳೆಎಳೆಯಾಗಿ ಬಿಚ್ಚಿಟ್ಟರು.

Sheikh Shahjahan

ಬರ್ಬರ ಲೈಂಗಿಕ ದೌರ್ಜನ್ಯ

“ಶಹಜಹಾನ್‌ ಹಾಗೂ ಆತನ ಜನ ನಮ್ಮ ಭೂಮಿಯನ್ನು ಅವರ ಸಿಗಡಿ ಕೃಷಿಗಾಗಿ ಬಲವಂತವಾಗಿ ವಶಪಡಿಸಿಕೊಂಡಿದ್ದಾರೆ. ಹಲವಾರು ವರ್ಷಗಳಿಂದ ನಮ್ಮನ್ನು ಹಿಂಸಿಸಿದ್ದಾರೆ. ಲೈಂಗಿಕ ಕಿರುಕುಳ ನೀಡಿದ್ದಾರೆ” ಎಂದರು. “ಟಿಎಂಸಿ ಪಕ್ಷದ ಪುಂಡರು ಇಲ್ಲಿನ ಪ್ರತಿ ಮನೆಯನ್ನೂ ಗುಪ್ತವಾಗಿ ಸಮೀಕ್ಷೆ ಮಾಡುತ್ತಾರೆ. ಯಾವುದೇ ಸುಂದರ ಮಹಿಳೆ, ಯುವತಿ ಇದ್ದರೆ, ಅವಳನ್ನು ಪಕ್ಷದ ಕಚೇರಿಗೆ ಕರೆದೊಯ್ಯುತ್ತಾರೆ. ಆಕೆಯನ್ನು ರಾತ್ರಿಯಿಡೀ ಅಥವಾ ತಮಗೆ ತೃಪ್ತಿಯಾಗುವವರೆಗೂ ಅಲ್ಲಿಯೇ ಇರಿಸಿಕೊಳ್ಳುತ್ತಾರೆ” ಎಂದು ಈ ಪ್ರತಿಭಟನೆ ನಡೆಸಿದ ಮಹಿಳೆಯರು ಆರೋಪಿಸಿದರು.

ಶಹಜಹಾನ್‌ ವಿರುದ್ಧ ತನಿಖೆ ಸಂಸ್ಥೆಗಳು ಈಗ ಕ್ರಮಕ್ಕೆ ಮುಂದಾಗಿರುವುದು ತಮಗೆ ಮಾತನಾಡಲು ಧೈರ್ಯವನ್ನು ನೀಡಿದೆ ಎಂದರು ಈ ಸಂತ್ರಸ್ತ ಸ್ತ್ರೀಯರು. ಉತ್ತಮ್ ಸರ್ದಾರ್ ಮತ್ತು ಶಿಬಾಪ್ರಸಾದ್ ಹಜರಾ ಎಂಬ ಶಹಜಹಾನ್‌ನ ಇಬ್ಬರು ಸಹಚರರ ಮೇಲೆ ಆರೋಪ ಮಾಡಿದರು. “ನಮ್ಮ ಗಂಡಂದಿರಿಗೆ ನಮ್ಮ ಮೇಲೆ ಹಕ್ಕು ಇಲ್ಲದಂತೆ ಮಾಡಲಾಗಿದೆ. ಇವರ ದಬ್ಬಾಳಿಕೆಗೆ ಆತ ಹೆಂಡತಿಯನ್ನೂ ಬಿಟ್ಟು ಕೊಡಬೇಕಾಗುತ್ತಿದೆ. ನಮಗೆ ಇಲ್ಲಿ ವಾಸಿಸಲು ಸಾಧ್ಯವಾಗುತ್ತಿಲ್ಲ. ಹಿಂಸೆ ಅಥವಾ ಲೈಂಗಿಕ ಕಿರುಕುಳದ ಭಯ ಯಾವಾಗಲೂ ಇರುತ್ತದೆ. ನಮಗೆ ಸುರಕ್ಷತೆ ಬೇಕು. ನಮ್ಮ ಬಹುತೇಕ ಪುರುಷರು ಗ್ರಾಮ ತೊರೆದು ಬೇರೆ ರಾಜ್ಯಗಳಲ್ಲಿ ಕೆಲಸ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಸಂತ್ರಸ್ತ ಮಹಿಳೆಯರು ಬಿದಿರಿನ ಕೋಲು, ಪೊರಕೆ ಹಿಡಿದು ಪ್ರತಿಭಟನೆ ನಡೆಸಿ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಘೇರಾವ್ ಹಾಕಿದರು. ಉದ್ರಿಕ್ತರಾದ ಈ ಪ್ರತಿಭಟನಾನಿರತ ಮಹಿಳೆಯರು ಶಹಜಹಾನ್‌ ಒಡೆತನದ ಮೂರು ಕೋಳಿ ಫಾರಂಗಳನ್ನು ಸುಟ್ಟುಹಾಕಿದರು.

ತೃಣಮೂಲ ಕಾಂಗ್ರೆಸ್‌ನ ರಕ್ಷಣೆ

ಇಷ್ಟಾದರೂ ಆಡಳಿತದಲ್ಲಿರುವ ತೃಣಮೂಲ ಕಾಂಗ್ರೆಸ್‌ ಮಾತ್ರ ಕಮಕ್‌ ಕಿಮಕ್‌ ಎನ್ನಲಿಲ್ಲ. ಬಿಜೆಪಿ ಮತ್ತಿತರ ವಿಪಕ್ಷಗಳು ಪ್ರತಿಭಟನೆಯನ್ನು ಜೋರಾಗಿಸಿದವು. ಆಡಳಿತಾರೂಢ ಟಿಎಂಸಿ ಆರೋಪಿಗೆ ರಕ್ಷಣೆ ನೀಡುತ್ತಿದೆ ಎಂದು ಬಿಜೆಪಿ, ಸಿಪಿ(ಐಎಂ) ಮತ್ತು ಕಾಂಗ್ರೆಸ್ ಆರೋಪಿಸಿದವು. ಮಹಿಳೆಯರ ಪ್ರತಿಭಟನೆಯ ಪರಿಣಾಮ ಸಂದೇಶಖಾಲಿಯಲ್ಲಿ ಪರಿಸ್ಥಿತಿ ಅವಲೋಕಿಸಲು ಬಂಗಾಳದ ಗವರ್ನರ್ ಸಿವಿ ಆನಂದ ಬೋಸ್ ಅಲ್ಲಿಗೆ ಆಗಮಿಸಿದರು. ಅಲ್ಲಿದ್ದ ಮಹಿಳೆಯರೊಂದಿಗೆ ಮಾತನಾಡಿದ ನಂತರ ಬೋಸ್, “ಇದು ಘೋರ, ಆಘಾತಕಾರಿ, ಮನಸ್ಸನ್ನು ಛಿದ್ರಗೊಳಿಸುವ ಸಂಗತಿಯಾಗಿದೆ. ಮಾಡಬಾರದಂತಹದನ್ನು ಮಾಡಲಾಗಿದೆ. ಕೇಳಬಾರದ ಅನೇಕ ವಿಷಯಗಳನ್ನು ನಾನು ಕೇಳಿದ್ದೇನೆ. ಇದು ನಾಗರಿಕ ಸಮಾಜಕ್ಕೆ ನಾಚಿಕೆಗೇಡಿನ ಸಂಗತಿ” ಎಂದು ಹೇಳಿಕೆ ನೀಡಿದರು. ಬೋಸ್ ಅವರು ಗೃಹ ಸಚಿವಾಲಯಕ್ಕೆ ವರದಿ ಸಲ್ಲಿಸಿದರು.

ಪೊಲೀಸರು ಸಂದೇಶ್‌ಖಾಲಿಯ ಮಾಜಿ ಸಿಪಿಎಂ ಶಾಸಕ ನಿರಪದಾ ಸರ್ದಾರ್‌, ಸ್ಥಳೀಯ ಬಿಜೆಪಿ ನಾಯಕ ವಿಕಾಸ್‌ ಸಿಂಗ್‌ ಎಂಬವರನ್ನು ಆಳುವ ಸರ್ಕಾರದ ಸೂಚನೆಯಂತೆ ಬಂಧಿಸಿದರು. ಆರೋಪಿಗಳನ್ನು ಮುಟ್ಟದೆ ಬೇರೆಯವರನ್ನು ಬಂಧಿಸಿದ ಕ್ರಮವನ್ನು ಪ್ರತಿಭಟಿಸಲಾಯಿತು. ಸಂದೇಶ್‌ಖಾಲಿಗೆ ಹೋಗಲು ಹೊರಟ ಬಿಜೆಪಿ ನಿಯೋಗವನ್ನು ಅರ್ಧ ದಾರಿಯಲ್ಲೇ ಪೊಲೀಸರು ತಡೆದು ವಾಪಸ್‌ ಕಳಿಸಿದರು. ಈ ಸಂದರ್ಭದಲ್ಲಿ ನಡೆದ ಗಲಭೆಯಲ್ಲಿ ರಾಜ್ಯದ ಬಿಜೆಪಿ ಅಧ್ಯಕ್ಷಷ ಸುಕಾಂತ ಮುಜುಂದಾರ್‌ ಗಾಯಗೊಂಡರು. ರಾಷ್ಟ್ರೀಯ ಮಹಿಲೆ ಆಯೋಗ, ರಾಷ್ಟ್ರೀಯ ಬುಡಕಟ್ಟು ಜಾತಿಗಳ ಆಯೋಗದ ಸಂದೇಶ್‌ಖಾಲಿಗೆ ಹೋಗಲು ಮುಂದಾದಾಗಲೂ ತಡೆಯಲಾಯಿತು.

ಹೈಕೋರ್ಟ್‌ ಕಿಡಿಕಿಡಿ

ಶಹಜಹಾನ್‌ ಶೇಖ್‌ ಪರಾರಿಯಾಗುತ್ತಲೇ ಕೋಲ್ಕೊತಾ ಹೈಕೋರ್ಟ್‌ ಸುಮೋಟೊ ಕೇಸ್‌ ದಾಖಲಿಸಿಕೊಂಡಿತು. ಶಹಜಹಾನ್‌ ಶೇಖನನ್ನು ಬಂಧಿಸಲೇಬೇಕು ಎಂದು ಕೋರ್ಟ್‌ ಆದೇಶ ನೀಡಿತು. ನಂತರ ಆತನನ್ನು ಬಂಧಿಸಲಾಯಿತು. ಆತನ ಬಂಧನ ಆದ ಬಳಿಕವೇ ನಿರ್ವಾಹವಿಲ್ಲದೆ ತೃಣಮೂಲ ಕಾಂಗ್ರೆಸ್‌ ಆತನನ್ನು ಪಕ್ಷದಿಂದ ಉಚ್ಛಾಟಿಸಿತು. ಪ್ರಕರಣದಲ್ಲಿ ಶಹಜಹಾನ್‌ ಶೇಖ್‌ ಪರ ವಕೀಲರ ವಾದ ಆಲಿಸಿದ ನ್ಯಾಯಾಲಯವು, “ಟಿಎಂಸಿ ನಾಯಕನಿಗೆ ಯಾವುದೇ ಕರುಣೆ, ದಯೆ ತೋರುವುದಿಲ್ಲ” ಎಂದು ಖಡಕ್‌ ಆಗಿ ಹೇಳಿತು. ಇಡಿ ಅಧಿಕಾರಿಗಳ ಮೇಲಿನ ದಾಳಿ ಸೇರಿ ಎಲ್ಲ ಪ್ರಕರಣಗಳನ್ನು ಸಿಬಿಐಗೆ ನೀಡಿ ಆದೇಶ ಹೊರಡಿಸಿದ್ದಲ್ಲದೆ, ಅವುಗಳ ದಾಖಲೆಯನ್ನು ಸಿಬಿಐಗೆ ನೀಡಬೇಕು ಎಂದು ಹೈಕೋರ್ಟ್‌ ಆದೇಶಿಸಿತು.

ಆದರೆ, ಶೇಖ್‌ ಶಹಜಹಾನ್‌ನನ್ನು ಸಿಬಿಐಗೆ ವಹಿಸಲು ಪಶ್ಚಿಮ ಬಂಗಾಳ ಸರ್ಕಾರ ನಿರಾಕರಿಸಿತು. ಅಷ್ಟೇ ಅಲ್ಲ, ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತು. ಆದರೆ, ಕೋಲ್ಕೊತಾ ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿತು. ಹೈಕೋರ್ಟ್‌ ಮತ್ತೆ ಆದೇಶ ಹೊರಡಿಸಿ, ಸಿಬಿಐಗೆ ಒಪ್ಪಿಸಲು ತಿಳಿಸಿತು. ಅದರಂತೆ ಶಹಜಹಾನ್‌ನನ್ನು ಸಿಬಿಐ ವಶಕ್ಕೆ ಮನಸ್ಸಿಲ್ಲದ ಮನಸ್ಸಿನಿಂದ ರಾಜ್ಯ ಪೊಲೀಸರು ನೀಡಿದ್ದಾರೆ.

ಶಹಜಹಾನ್‌ ಶೇಖ್‌ಗೆ ಸಂಬಂಧಿಸಿದ 12.78 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಸಂದೇಶ್‌ಖಾಲಿಯಲ್ಲಿರುವ ಕೃಷಿ ಭೂಮಿ, ಕೋಲ್ಕೊತಾದಲ್ಲಿರುವ ಅಪಾರ್ಟ್‌ಮೆಂಟ್‌, ಬ್ಯಾಂಕ್‌ ಠೇವಣಿ ಸೇರಿ ಹಲವು ಆಸ್ತಿಗಳನ್ನು ಇ.ಡಿ ಜಪ್ತಿ ಮಾಡಿದೆ.

Sandeshkhali Violence

ಯಾರಿವನು ಶೇಖ್‌ ಶಹಜಹಾನ್?‌

55 ದಿನಗಳ ಕಾಲ ಅಧಿಕಾರಿಗಳಿಂದ ತಪ್ಪಿಸಿಕೊಂಡಿದ್ದ ಶೇಖ್, ಸಂದೇಶ್‌ಖಾಲಿ ಪ್ರದೇಶದಲ್ಲಿ ಲೈಂಗಿಕ ಕಿರುಕುಳದ ಆರೋಪ, ಪಡಿತರ ವಿತರಣೆ ಹಗರಣದ ಆರೋಪಿಯಾಗಿದ್ದಾನೆ. ಜೊತೆಗೆ 10,000 ಕೋಟಿ ರೂ.ಮೌಲ್ಯದ ಭೂಕಬಳಿಕೆ ಆರೋಪವನ್ನೂ ಹೊತ್ತಿದ್ದಾನೆ. ಈತ ಬಾಂಗ್ಲಾ ದೇಶದಿಂದ ಪಶ್ಚಿಮ ಬಂಗಾಳಕ್ಕೆ ಬಂದ ನಿರಾಶ್ರಿತ. ಆರಂಭದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ. ವಂಚನೆ, ಸುಲಿಗೆಯಿಂದ ಬಹಳ ಬೇಗ ಸಾಕಷ್ಟು ಸಂಪತ್ತು ಗಳಿಸಿದ. ಸಂದೇಶ್‌ಖಾಲಿಯನ್ನಿಡೀ ಹೆದರಿಸಿ ಬೆದರಿಸಿ ಹದ್ದಬಸ್ತಿನಲ್ಲಿ ಇಟ್ಟ.

ಪಡಿತರ ಹಗರಣದಲ್ಲಿ ಈಗಾಗಲೇ ಬಂಧಿತರಾಗಿರುವ ಮಾಜಿ ಸಚಿವ ಜ್ಯೋತಿಪ್ರಿಯೋ ಮಲ್ಲಿಕ್ ಅವರ ನಿಕಟವರ್ತಿ ಈ ಶೇಖ್. ಉತ್ತರ 24 ಪರಗಣ ಜಿಲ್ಲೆಯ ಬಾಂಗ್ಲಾ ದೇಶದ ಗಡಿಯ ಸಮೀಪದಲ್ಲಿರುವ ಸಂದೇಶ್‌ಖಾಲಿ ಅವನ ಭದ್ರಕೋಟೆಯಾಗಿದೆ. ಆರಂಭದಲ್ಲಿ ಗದ್ದೆ ಮತ್ತು ಇಟ್ಟಿಗೆ ಗೂಡುಗಳಲ್ಲಿ ಕೆಲಸ ಮಾಡುತ್ತಿದ್ದ ಶೇಖ್ ಕಾರ್ಮಿಕರನ್ನು ಸಂಘಟಿಸಿ ಒಕ್ಕೂಟವನ್ನು ಕಟ್ಟಿದ. ನಂತರ ರಾಜಕೀಯಕ್ಕೆ ಪ್ರವೇಶಿಸಿದ. ಮಲ್ಲಿಕ್ ಬೆಂಬಲದೊಂದಿಗೆ ಎಡಪಕ್ಷಕ್ಕೆ ಪ್ರವೇಶ ಪಡೆದ. ಬಂಗಾಳದಲ್ಲಿ ರಾಜಕೀಯ ಬದಲಾವಣೆಯ ಅಲೆಯೊಂದಿಗೆ ಶೇಖ್ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡ.

ಸ್ಥಳೀಯ ಮೀನುಗಾರಿಕೆ ಹಾಗೂ ಸಿಗಡಿ ಕೃಷಿಯನ್ನು ಈತ ತನ್ನ ನಿಯಂತ್ರಣದಲ್ಲಿಟ್ಟುಕೊಂಡಿದ್ದ, ಇದಕ್ಕೆ ಬೇಕಾದ ಜಮೀನನ್ನು ಸ್ಥಳಿಯರಿಂದ ಬಲವಂತವಾಗಿ ಕಿತ್ತುಕೊಂಡು, ಅವರನ್ನು ಹಣ ಕೊಡದೇ ಹೊರದಬ್ಬುತ್ತಿದ್ದ. ಸ್ಥಳೀಯ ಪೊಲೀಸರು ಇವನ ಲಂಚಕ್ಕೆ ಬಾಯಿ ಒಡ್ಡಿ ಸುಮ್ಮನಿದ್ದರು. ಹೀಗಾಗಿ ಇವನು ಆಡಿದ್ದೇ ಆಟವಾಗಿತ್ತು. ಈತನಿಂದ ನೊಂದ ಹಲವು ಮಹಿಳೆಯರು, ಪುರುಷರು ಇಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವನನ್ನು ವಿರೋಧಿಸಿದ ಹಲವು ಮಂದಿ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಆದರೆ ಯಾವ ಪ್ರಕರಣವೂ ಈತನ ವಿರುದ್ಧ ಸಾಬೀತಾಗಿಲ್ಲ.

ಇದನ್ನೂ ಓದಿ: ED Raids: ಸಂದೇಶಖಾಲಿಯ ವಿವಿಧೆಡೆ ಇ.ಡಿ ದಾಳಿ; ಶೇಖ್ ಶಹಜಹಾನ್‌ನ ಸಹಚರರ ನಿವಾಸಗಳಲ್ಲಿ ಶೋಧ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

 Ayushman Bharat Yojana: ಆಪತ್ಕಾಲದಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Ayushman Bharat Yojana: ಆಯುಷ್ಮಾನ್ ಭಾರತ್ ಯೋಜನೆಯು ಭಾರತದಲ್ಲಿ ಸಾರ್ವತ್ರಿಕ ಆರೋಗ್ಯ ರಕ್ಷಣೆಯತ್ತ ಮಹತ್ವದ ಹೆಜ್ಜೆ. ದುರ್ಬಲ ಕುಟುಂಬಗಳಿಗೆ ಹೆಚ್ಚು ಅಗತ್ಯವಿರುವ ಆರ್ಥಿಕ ರಕ್ಷಣೆಯನ್ನು ನೀಡುತ್ತದೆ. ಇದರ ನೋಂದಣಿ ಪ್ರಕ್ರಿಯೆ ಹೇಗಿರುತ್ತದೆ, ಇದರಿಂದ ಸಿಗುವ ಪ್ರಯೋಜನಗಳ ಮಾಹಿತಿ ಇಲ್ಲಿದೆ.

VISTARANEWS.COM


on

By

Ayushman Bharat Yojana
Koo

ಲಕ್ಷಾಂತರ ಭಾರತೀಯರಿಗೆ (indian) ಆರೋಗ್ಯ (health) ಸೇವೆಯನ್ನು (service) ಹೆಚ್ಚು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವ ಗುರಿ ಹೊಂದಿರುವ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ (Ayushman Bharat Yojana) ಪ್ರಯೋಜನ ಪಡೆಯುವುದು ಇನ್ನೂ ಹಲವಾರು ಮಂದಿಗೆ ಸವಾಲಾಗಿ ಪರಿಣಮಿಸಿದೆ. 2018ರಲ್ಲಿ ಜಾರಿಯಾಗಿರುವ ಆಯುಷ್ಮಾನ್ ಯೋಜನೆ ಇನ್ನೂ ಹಲವು ಮಂದಿಗೆ ಸರಿಯಾಗಿ ಅರ್ಥವೇ ಆಗಿಲ್ಲ. ಇದರಿಂದ ಸಾಕಷ್ಟು ಪರಿಣಾಮಕಾರಿಯಾಗಿ ಎಲ್ಲರನ್ನು ತಲುಪುವುದು ಸಾಧ್ಯವಾಗಿಲ್ಲ. ಭಾರತದಂತಹ ವಿಶಾಲ ಮತ್ತು ವೈವಿಧ್ಯಮಯವಾದ ದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವುದು ಸವಾಲಾಗಿದೆ. ಇದನ್ನು ಗುರುತಿಸಿ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಿತು. ಆಯುಷ್ಮಾನ್ ಭಾರತ್ ಯೋಜನೆಯು ಏನನ್ನು ಒಳಗೊಳ್ಳುತ್ತದೆ, ಆಯುಷ್ಮಾನ್ ಕಾರ್ಡ್ ಸೇರಿದಂತೆ ಅದರ ಪ್ರಯೋಜನಗಳಿಗಾಗಿ ಹೇಗೆ ನೋಂದಾಯಿಸಿಕೊಳ್ಳುವುದು ಎಂಬುದರ ಮಾಹಿತಿ ಇಲ್ಲಿದೆ.


ಏನಿದು ಆಯುಷ್ಮಾನ್ ಭಾರತ್ ಯೋಜನೆ?

ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (PMJAY) ಎಂದು ಕರೆಯಲ್ಪಡುವ ಆಯುಷ್ಮಾನ್ ಭಾರತ್ ಯೋಜನೆಯು ಭಾರತ ಸರ್ಕಾರವು ಪರಿಚಯಿಸಿದ ಪ್ರಮುಖ ಆರೋಗ್ಯ ಯೋಜನೆಯಾಗಿದೆ. ದುರಂತದ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಆರ್ಥಿಕ ರಕ್ಷಣೆ ನೀಡುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ, ಅರ್ಹ ಫಲಾನುಭವಿಗಳು ನಿಗದಿತ ಆಸ್ಪತ್ರೆಗಳಲ್ಲಿ ನಿರ್ದಿಷ್ಟ ಮೊತ್ತದವರೆಗೆ ನಗದು ರಹಿತ ಆರೋಗ್ಯ ಸೇವೆಗಳನ್ನು ಪಡೆಯಬಹುದು.

ಇದನ್ನೂ ಓದಿ: ORS: ಒಆರ್‌ಎಸ್‌ ಜೀವಜಲ; ಯಾರು, ಎಷ್ಟು ಪ್ರಮಾಣದಲ್ಲಿ ಸೇವಿಸಬಹುದು?

ನೋಂದಣಿ ಹೇಗೆ?

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಾಯಿಸಲು ಮೊದಲು ಅದರ ಬಗ್ಗೆ ತಿಳಿದುಕೊಳ್ಳಿ.

ಅರ್ಹತೆಯನ್ನು ಪರಿಶೀಲಿಸಿ

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಣಿ ನಡೆಸುವ ಮೊದಲು ಆಯುಷ್ಮಾನ್ ಭಾರತ್ ಯೋಜನೆ ಪಡೆಯುವ ಅರ್ಹತೆ ನಿಮಗಿದೆಯೇ ಎಂಬುದನ್ನು ತಿಳಿದುಕೊಳ್ಳಿ. ಇದು ಪ್ರಾಥಮಿಕವಾಗಿ ಸಾಮಾಜಿಕ ಆರ್ಥಿಕ ಅಂಶಗಳು ಮತ್ತು ಮನೆಯ ಆದಾಯವನ್ನು ಆಧರಿಸಿರುತ್ತದೆ.


ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರ

ಆಯುಷ್ಮಾನ್ ಭಾರತ್ ಯೋಜನೆಗಾಗಿ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸಲು ಸಾಮಾನ್ಯ ಸೇವಾ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ. ನಿಮ್ಮ ಪ್ರದೇಶದಲ್ಲಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರಗಳನ್ನು ಪತ್ತೆ ಮಾಡಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಲ್ಲಿಗೆ ಭೇಟಿ ಮಾಡಿ.

ಅಗತ್ಯ ದಾಖಲೆಗಳನ್ನು ಒದಗಿಸಿ

ನೋಂದಣಿ ಪ್ರಕ್ರಿಯೆಯಲ್ಲಿ ನಿಮ್ಮ ಅರ್ಹತೆಯನ್ನು ಸ್ಥಾಪಿಸಲು ನೀವು ಕೆಲವು ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಇವುಗಳು ಗುರುತಿನ ಪುರಾವೆ, ವಿಳಾಸ ಪುರಾವೆ ಮತ್ತು ಆದಾಯ ಪ್ರಮಾಣಪತ್ರವನ್ನು ಒಳಗೊಂಡಿರುತ್ತದೆ.

ಸಂಪೂರ್ಣ ನೋಂದಣಿ ಅರ್ಜಿ

ಒದಗಿಸಿದ ಮಾಹಿತಿಯ ನಿಖರತೆ ಮತ್ತು ಸಂಪೂರ್ಣತೆಯನ್ನು ಖಚಿತಪಡಿಸಿಕೊಳ್ಳಲು ಸಾಮಾನ್ಯ ಸೇವಾ ಕೇಂದ್ರದಲ್ಲಿ ಒದಗಿಸಲಾದ ನೋಂದಣಿ ಫಾರ್ಮ್ ಅನ್ನು ಭರ್ತಿ ಮಾಡಿ. ನಿಮ್ಮ ಕುಟುಂಬದ ಸದಸ್ಯರು, ಆದಾಯ ಮತ್ತು ಇತರ ಸಂಬಂಧಿತ ಮಾಹಿತಿಯ ಕುರಿತು ವಿವರಗಳನ್ನು ಒದಗಿಸಿ.

ಪರಿಶೀಲನೆ ಪ್ರಕ್ರಿಯೆ

ನೋಂದಣಿ ಫಾರ್ಮ್ ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಅನಂತರ ಅಧಿಕಾರಿಗಳು ಆಯುಷ್ಮಾನ್ ಭಾರತ್ ಯೋಜನೆಗೆ ನಿಮ್ಮ ಅರ್ಹತೆಯನ್ನು ಪರಿಶೀಲಿಸುತ್ತಾರೆ. ಈ ಪರಿಶೀಲನಾ ಪ್ರಕ್ರಿಯೆಯು ಸರ್ಕಾರಿ ಡೇಟಾಬೇಸ್‌ಗಳೊಂದಿಗೆ ಒದಗಿಸಲಾದ ಮಾಹಿತಿಯನ್ನು ಕ್ರಾಸ್-ಚೆಕ್ ಮಾಡುವುದನ್ನು ಒಳಗೊಂಡಿರುತ್ತದೆ.

ಆಯುಷ್ಮಾನ್ ಕಾರ್ಡ್ ಸ್ವೀಕರಿಸಿ

ಅರ್ಹತೆಯ ಯಶಸ್ವಿ ಪರಿಶೀಲನೆಯ ಅನಂತರ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಹೊಂದಿರುವ ಆಯುಷ್ಮಾನ್ ಕಾರ್ಡ್ ಅನ್ನು ನಿಮಗೆ ನೀಡಲಾಗುತ್ತದೆ. ಈ ಕಾರ್ಡ್ ಯೋಜನೆಯಲ್ಲಿ ನಿಮ್ಮ ದಾಖಲಾತಿಗೆ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಎಂಪನೆಲ್ಡ್ ಆಸ್ಪತ್ರೆಗಳಲ್ಲಿ ನಗದು ರಹಿತ ಆರೋಗ್ಯ ಸೇವೆಗಳನ್ನು ಪ್ರವೇಶಿಸಲು ಅನುಮತಿ ನೀಡುತ್ತದೆ.

doctor

ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳಿ

ಆಯುಷ್ಮಾನ್ ಕಾರ್ಡ್‌ನೊಂದಿಗೆ ನೀವು ಇದೀಗ ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಯಾವುದೇ ಎಂಪನೆಲ್ ಮಾಡಲಾದ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳನ್ನು ಪಡೆಯಬಹುದು. ನಗದು ರಹಿತ ಚಿಕಿತ್ಸಾ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಿಮ್ಮ ಕಾರ್ಡ್ ಅನ್ನು ಆಸ್ಪತ್ರೆಯ ಸ್ವಾಗತ ವಿಭಾಗದಲ್ಲಿ ನೀಡಿ.

ಪ್ರಯೋಜನಗಳು ಏನೇನು?

ಆಯುಷ್ಮಾನ್ ಕಾರ್ಡ್‌ ಹೊಂದಿರುವುದರಿಂದ ಪ್ರಮುಖ ಪ್ರಯೋಜನಗಳು ಇಂತಿವೆ.

ದುರ್ಬಲ ಕುಟುಂಬಗಳಿಗೆ ರಕ್ಷಣೆ

ಆಯುಷ್ಮಾನ್ ಭಾರತ್ ಯೋಜನೆಯು ಭಾರತದಾದ್ಯಂತ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹೆಚ್ಚಿನ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕ ರಕ್ಷಣೆ ನೀಡುತ್ತದೆ.

ನಗದು ರಹಿತ ಚಿಕಿತ್ಸೆ

ಯೋಜನೆಯ ಫಲಾನುಭವಿಗಳು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿ ನಿಗದಿತ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದು.

ವ್ಯಾಪಕ ಆಸ್ಪತ್ರೆ ನೆಟ್‌ವರ್ಕ್

ಅಯುಷ್ಮಾನ್ ಯೋಜನೆಯು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳನ್ನು ಒಳಗೊಂಡಂತೆ ನಿಗದಿತ ಆಸ್ಪತ್ರೆಗಳ ವ್ಯಾಪಕ ಜಾಲವನ್ನು ಹೊಂದಿದೆ. ಇದು ದೇಶದಾದ್ಯಂತ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಪಡೆಯಲು ಸಹಕರಿಸುತ್ತದೆ.

Ayushman Card

ಆಯುಷ್ಮಾನ್ ಕಾರ್ಡಗೆ ಅಗತ್ಯವಿರುವ ದಾಖಲೆಗಳು

1. ನಿವಾಸದ ಗುರುತು ಪತ್ರ
2. ವಯಸ್ಸು ಮತ್ತು ಗುರುತಿನ ಪುರಾವೆ- ಉದಾಹರಣೆಗೆ ಆಧಾರ್ ಕಾರ್ಡ್ ಅಥವಾ ಪ್ಯಾನ್ ಕಾರ್ಡ್
3. ಜಾತಿ ಪ್ರಮಾಣಪತ್ರ
4. ಸಂಪರ್ಕ ಮಾಹಿತಿ- ಮೊಬೈಲ್ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ
5. ಆದಾಯ ಪ್ರಮಾಣ ಪತ್ರ
6. ಪ್ರಸ್ತುತ ಕುಟುಂಬದ ಸ್ಥಿತಿಯನ್ನು ಸೂಚಿಸುವ ದಾಖಲೆಗಳು

Continue Reading

ವಾಣಿಜ್ಯ

Donkey milk: ಕತ್ತೆ ಹಾಲು ಲೀಟರ್‌ಗೆ 7000 ರೂ! ಈ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌?

Donkey milk: ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ. ಗುಜರಾತ್‌ನಲ್ಲಿ ಧೀರೇನ್ ಸೋಲಂಕಿ ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇಷ್ಟಕ್ಕೂ ಈ ಕತ್ತೆ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌? ಇದರ ಹಿನ್ನೆಲೆ ಏನು? ಇಲ್ಲಿದೆ ಕುತೂಹಲಕರ ಮಾಹಿತಿ.

VISTARANEWS.COM


on

By

donkey milk
Koo

ಹಾಲು (milk) ಮಾರಾಟ ಮಾಡಿ ತಿಂಗಳಿಗೊಂದು ಎಷ್ಟು ಆದಾಯ ಗಳಿಸಬಹುದು? ಅಬ್ಬಬ್ಬಾ ಎಂದರೆ 10 ಸಾವಿರ ರೂ. ಗಡಿ ದಾಟಿದರೆ ಬಹುದೊಡ್ಡದು. ಆದರೆ ಇಲ್ಲೊಬ್ಬರು ಹಾಲು ಮಾರಾಟದಿಂದಲೇ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಆದರೆ ಇವರು ಮಾರುತ್ತಿರುವ ಹಾಲು ಹಸುವಿನದಲ್ಲ (cow) ಕತ್ತೆಯದ್ದು (Donkey milk).

ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ (white gold). ಗುಜರಾತ್‌ನಲ್ಲಿ (gujarat) ಧೀರೇನ್ ಸೋಲಂಕಿ ( Dhiren Solanki) ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.

ಪಟಾನ್ ಜಿಲ್ಲೆಯಲ್ಲಿ 42 ಕತ್ತೆಗಳಿರುವ ಫಾರ್ಮ್ ಹೊಂದಿರುವ ಧೀರೇನ್ ಸೋಲಂಕಿ, ದಕ್ಷಿಣ ಪ್ರದೇಶಗಳಲ್ಲಿನ ಗ್ರಾಹಕರಿಗೆ ಬೆಲೆಬಾಳುವ ಹಾಲನ್ನು ಮಾರಾಟ ಮಾಡುವ ಮೂಲಕ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ.

ಇದನ್ನೂ ಓದಿ: Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

ಸುಮಾರು ಎಂಟು ತಿಂಗಳ ಹಿಂದೆ ಕೇವಲ 20 ಕತ್ತೆಗಳೊಂದಿಗೆ 22 ಲಕ್ಷ ರೂ.ಗಳ ಆರಂಭಿಕ ಹೂಡಿಕೆ ಮಾಡಿರುವ ಸೋಲಂಕಿ ಈಗ ಕೋಟ್ಯಂತರ ಮೌಲ್ಯದ ಹಾಲು ವ್ಯಾಪಾರ ನಡೆಸುತ್ತಿದ್ದಾರೆ.

ಪ್ರಾರಂಭದಲ್ಲಿ ಸವಾಲು

ಗುಜರಾತ್‌ ನಲ್ಲಿ ಕತ್ತೆ ಹಾಲಿಗೆ ಹೆಚ್ಚು ಬೇಡಿಕೆ ಇಲ್ಲದ ಕಾರಣ ಪ್ರಾರಂಭಿಸಿದ ಐದು ತಿಂಗಳು ಸೋಲಂಕಿ ಅವರು ತುಂಬಾ ಕಷ್ಟ ಪಟ್ಟಿದ್ದರು. ಅದರ ಅನಂತರ ಅವರು ದಕ್ಷಿಣ ಭಾರತದಲ್ಲಿ ಕತ್ತೆ ಹಾಲಿನ ಹೆಚ್ಚಿನ ಅಗತ್ಯತೆ ಇರುವಲ್ಲಿ ತಮ್ಮ ವ್ಯಾಪ್ತಿಯನ್ನು ಬೆಳೆಸುವ ನಿರ್ಧಾರವನ್ನು ಮಾಡಿದರು.

ಪ್ರಸ್ತುತ ಅವರು ಕತ್ತೆ ಹಾಲನ್ನು ಹೆಚ್ಚಾಗಿ ಕರ್ನಾಟಕ ಮತ್ತು ಕೇರಳ ರಾಜ್ಯಗಳಿಗೆ ಒದಗಿಸುತ್ತಿದ್ದಾರೆ. ಅವರ ಕೆಲವು ಗ್ರಾಹಕರು ಕತ್ತೆಗಳ ಹಾಲನ್ನು ಬಳಸುವ ಸೌಂದರ್ಯವರ್ಧಕ ಸಂಸ್ಥೆಗಳಾಗಿವೆ.


ಲೀಟರ್‌ಗೆ 5ರಿಂದ 7 ಸಾವಿರ ರೂ.

ಸೋಲಂಕಿ ಪ್ರಕಾರ ಕತ್ತೆ ಹಾಲು ಮಾರುಕಟ್ಟೆಯಲ್ಲಿ ಪ್ರತಿ ಲೀಟರ್‌ಗೆ 5,000 ರಿಂದ 7,000 ರೂ. ಗೆ ಮಾರಾಟವಾಗುತ್ತಿದೆ. ಹಸುವಿನ ಹಾಲಿಗೆ ಹೋಲಿಸಿದರೆ ಲೀಟರ್‌ಗೆ 65 ರೂ. ಗೆ ಮಾರಾಟವಾಗುತ್ತದೆ. ಹಾಲಿನ ತಾಜಾತನವನ್ನು ಕಾಪಾಡಲು ರೆಫ್ರಿಜರೇಟರ್‌ಗಳಲ್ಲಿ ಇರಿಸಲಾಗುತ್ತದೆ.

ದುಬಾರಿಯಾಗಲು ಕಾರಣ

ಕತ್ತೆಯ ಹಾಲಿನ ಬಗ್ಗೆ ಜನಪ್ರಿಯತೆ ಈಗಷ್ಟೇ ಬೆಳೆಯುತ್ತಿದೆ. ಬಹುತೇಕ ಫಾರ್ಮ್‌ಗಳು ಚಿಕ್ಕದಾಗಿದ್ದು, ಐದರಿಂದ 30 ಹಾಲು ಕರೆಯುವ ಕತ್ತೆಗಳನ್ನು ಒಳಗೊಂಡಿರುತ್ತದೆ. ಪ್ರತಿ ದಿನವೂ ಸರಿಸುಮಾರು ನಾಲ್ಕು ಕಪ್ ಅಂದರೆ ಒಂದು ಲೀಟರ್ ಹಾಲನ್ನು ಮಾತ್ರ ಉತ್ಪಾದಿಸಲಾಗುತ್ತದೆ. ಹೀಗಾಗಿ ಹಾಲು ಸ್ವಲ್ಪ ದುಬಾರಿಯಾಗಿದೆ ಮತ್ತು ಪಡೆಯುವುದು ಕಷ್ಟವಾಗುತ್ತದೆ.

ಕತ್ತೆ ಹಾಲಿನ ಪ್ರಯೋಜನಗಳು

ಕತ್ತೆ ಹಾಲಿನ ಬಳಕೆ ಸುಮಾರು 10 ಸಾವಿರ ವರ್ಷಗಳಿಂದಲೂ ಇದೆ. ಅದರ ಪೌಷ್ಟಿಕಾಂಶ ದಿಂದಾಗಿ ಸೌಂದರ್ಯವರ್ಧಕಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಹಲವಾರು ಆರೋಗ್ಯ ಪ್ರಯೋಜನಗಳಿಂದಾಗಿ ಇದು ಇತ್ತೀಚಿನ ದಿನಗಳಲ್ಲಿ ಇದಕ್ಕೆ ಮತ್ತೆ ಬೇಡಿಕೆ ಹೆಚ್ಚಾಗುತ್ತಿದೆ.

ಕತ್ತೆ ಹಾಲಿನ ಇತಿಹಾಸ

ಹಿಂದಿನ ಕಾಲದಲ್ಲಿ ಶಿಶುಗಳ ಆಹಾರಕ್ಕಾಗಿ ಕತ್ತೆ ಹಾಲನ್ನು ಬಳಸುವುದು ಸಾಮಾನ್ಯವಾಗಿತ್ತು. ಈಜಿಪ್ಟಿನ ರಾಣಿ ಕ್ಲಿಯೋಪಾತ್ರ ಕೂಡ ಅದನ್ನು ಇಷ್ಟಪಟ್ಟಿದ್ದಳು. ಅವಳು ತನ್ನ ಚರ್ಮದ ಕಾಂತಿಯನ್ನು ಕಾಪಾಡಿಕೊಳ್ಳಲು ಕತ್ತೆ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದಳು. ದಂತಕಥೆಯ ಪ್ರಕಾರ ಅವಳಿಗೆ ನಿತ್ಯ ಅಗತ್ಯವಾದ ಹಾಲು ಒದಗಿಸಲು ಸುಮಾರು 700 ಕತ್ತೆಗಳು ಬೇಕಾಗಿದ್ದವು ಎನ್ನಲಾಗುತ್ತದೆ.

ಕತ್ತೆ ಹಾಲು ಮುಖದ ಚರ್ಮದಿಂದ ಸುಕ್ಕುಗಳನ್ನು ನಿವಾರಿಸುತ್ತದೆ. ಚರ್ಮವನ್ನು ಮೃದು ಮತ್ತು ಬಿಳಿಯನ್ನಾಗಿ ಮಾಡುತ್ತದೆ ಎಂದು ನಂಬಲಾಗಿದೆ. ರೋಮನ್ ಚಕ್ರವರ್ತಿ ನೀರೋನ ಹೆಂಡತಿ ಪೊಪ್ಪಿಯಾ ಸ್ನಾನಕ್ಕೂ ಸಹ ಕತ್ತೆ ಬಳಸುತ್ತಿದ್ದಳು. ಈ ಕಾರಣಕ್ಕಾಗಿ, ಅವಳು ಪ್ರಯಾಣ ಮಾಡುವಾಗ ಕತ್ತೆಗಳ ಹಿಂಡುಗಳನ್ನು ಜೊತೆಗೆ ಕೊಂಡೊಯ್ಯುತ್ತಿದ್ದಳು.

ಕತ್ತೆ ಹಾಲಿನ ವಿಶೇಷತೆ

ಕತ್ತೆ ಹಾಲು ಹಸುವಿನ ಹಾಲು ಮತ್ತು ಮಾನವ ಎದೆ ಹಾಲು ಹಲವಾರು ಪೌಷ್ಟಿಕಾಂಶಗಳನ್ನು ಹೊಂದಿದೆ. ಪ್ರೋಟೀನ್ ಜೊತೆಗೆ ಇದು ಜೀವಸತ್ವ, ವಿಶೇಷವಾಗಿ ವಿಟಮಿನ್ ಡಿ ಮತ್ತು ಖನಿಜಗಳನ್ನು ಒಳಗೊಂಡಿರುತ್ತದೆ. ಕತ್ತೆ ಹಾಲು ಕಡಿಮೆ ಕೊಬ್ಬು ಮತ್ತು ಕ್ಯಾಲೋರಿಗಳನ್ನು ಹೊಂದಿದ್ದು, ಇವುಗಳಲ್ಲಿ ಹೆಚ್ಚಿನವು ಕಾರ್ಬೋಹೈಡ್ರೇಟ್‌ಗಳಿಂದ ಲ್ಯಾಕ್ಟೋಸ್ ಹಾಲಿನಲ್ಲಿರುವ ಸಕ್ಕರೆಯ ರೂಪದಲ್ಲಿರುತ್ತದೆ.

ಹಸುವಿನ ಹಾಲಿನ ಪ್ರೋಟೀನ್ ಅಲರ್ಜಿಯನ್ನು ಹೊಂದಿರುವ ಅನೇಕ ಜನರು ಕತ್ತೆ ಹಾಲನ್ನು ಅದರ ಕಡಿಮೆ ಕ್ಯಾಸೀನ್ ಮಟ್ಟದಿಂದ ಸೇವಿಸಬಹುದು. ಏಕೆಂದರೆ ಕತ್ತೆ ಹಾಲು ಅಲರ್ಜಿಯ ಪ್ರತಿಕ್ರಿಯೆಯನ್ನು ಉಂಟುಮಾಡುವುದಿಲ್ಲ.


ಕತ್ತೆ ಹಾಲಿನಲ್ಲಿ ಲ್ಯಾಕ್ಟೋಸ್, ಕ್ಯಾಲ್ಸಿಯಂ ಅನ್ನು ಒಳಗೊಂಡಿದ್ದು, ಬಲವಾದ ಮೂಳೆಗಳಿಗೆ ಅಗತ್ಯವಾದ ಖನಿಜಾಂಶವನ್ನು ಇದು ಒಳಗೊಂಡಿದೆ.

2010ರ ಪ್ರಯೋಗಾಲಯದ ಅಧ್ಯಯನದ ಪ್ರಕಾರ ಕತ್ತೆ ಹಾಲು ಸೈಟೊಕಿನ್‌ಗಳ ಬಿಡುಗಡೆಯನ್ನು ಹೆಚ್ಚಿಸುತ್ತದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುವ ಪ್ರೋಟೀನ್‌ಗಳಾಗಿವೆ. ಹಾಲು ನೈಟ್ರಿಕ್ ಆಕ್ಸೈಡ್ ಅನ್ನು ಉತ್ಪಾದಿಸಲು ಜೀವಕೋಶಗಳಿಗೆ ಕಾರಣವಾಗುತ್ತದೆ. ಇದು ರಕ್ತನಾಳಗಳನ್ನು ಹಿಗ್ಗಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಿ ರಕ್ತದ ಹರಿವನ್ನು ಸುಧಾರಿಸುತ್ತದೆ.

Continue Reading

EXPLAINER

ಚುನಾವಣೆ ಫಲಿತಾಂಶದ ಬಳಿಕ ಅಭ್ಯರ್ಥಿಗೆ ಇವಿಎಂ ಪರಿಶೀಲನೆ ಅವಕಾಶ; ಏನಿದು ಸುಪ್ರೀಂ ಆದೇಶ?

ದೇಶದಲ್ಲಿ ಬ್ಯಾಲಟ್‌ ಪೇಪರ್‌ ಮತದಾನ ವ್ಯವಸ್ಥೆಗೆ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಇವಿಎಂನಲ್ಲಿ ದಾಖಲಾದ ಎಲ್ಲ ಮತಗಳನ್ನು ವಿವಿಪ್ಯಾಟ್‌ ಜತೆ ತಾಳೆ ಮಾಡಬೇಕು ಎಂಬ ಅರ್ಜಿಯನ್ನೂ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಆದರೆ, ಚುನಾವಣೆ ಫಲಿತಾಂಶದ ಬಳಿಕ ಅಭ್ಯರ್ಥಿಗೆ ಗೊಂದಲ, ಅನುಮಾನ ಇದ್ದರೆ, ಆತನು ಮತಯಂತ್ರಗಳನ್ನು ಪರಿಶೀಲನೆ ಮಾಡಿಸುವ ಅವಕಾಶವನ್ನು ಸುಪ್ರೀಂ ಕೋರ್ಟ್‌ ನೀಡಿದೆ. ಇದು ಮಹತ್ವದ ಆದೇಶ ಎನಿಸಿದೆ.

VISTARANEWS.COM


on

VVPAT Verification
Koo

ನವದೆಹಲಿ: ಚುನಾವಣೆ ಮತಯಂತ್ರಗಳ (EVM) ಬದಲು ಬ್ಯಾಲಟ್‌ ಪೇಪರ್‌ ಮತದಾನ ವ್ಯವಸ್ಥೆ ಜಾರಿಯಾಗಬೇಕು, ಇವಿಎಂ ಹ್ಯಾಕ್‌ ಮಾಡಲಾಗುತ್ತಿದೆ, ಇವಿಎಂ-ವಿವಿಪ್ಯಾಟ್‌ ತಾಳೆಯಾಗಬೇಕು ಎಂದು ವಾದಿಸುತ್ತಿದ್ದವರಿಗೆ ಸುಪ್ರೀಂ ಕೋರ್ಟ್‌ ತೀರ್ಪು ಕಹಿಯಾಗಿದೆ. ಬ್ಯಾಲಟ್‌ ಪೇಪರ್‌ ಮತದಾನ ವ್ಯವಸ್ಥೆ ಜಾರಿಗೆ ಬರಬೇಕು, ಇವಿಎಂನಲ್ಲಿ ದಾಖಲಾದ ಎಲ್ಲ ಮತಗಳನ್ನು ತಾಳೆ (EVM VVPAT Verification) ಹಾಕಬೇಕು ಎಂಬುದಾಗಿ ಸಲ್ಲಿಸಿದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ (Supreme Court) ಶುಕ್ರವಾರ (ಏಪ್ರಿಲ್‌ 26) ತಿರಸ್ಕರಿಸಿದೆ. ಇದರ ಜತೆಗೆ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶವೊಂದನ್ನು ನೀಡಿದೆ. ಚುನಾವಣೆ ಫಲಿತಾಂಶದ ಬಳಿಕ ಗೊಂದಲ ಇದ್ದರೆ ಆ ಅಭ್ಯರ್ಥಿಗಳು ಮತಯಂತ್ರ ಪರಿಶೀಲನೆಯ ಸೌಲಭ್ಯ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್‌ ಆದೇಶಿಸಿದೆ.

ಏನಿದು ಹೊಸ ತಂತ್ರಜ್ಞಾನ?

“ದೇಶದಲ್ಲಿ ಚುನಾವಣೆ ವೇಳೆ ಪ್ರತಿಯೊಂದು ಮತಯಂತ್ರಗಳಿಗೂ ಮೈಕ್ರೋ ಕಂಟ್ರೋಲರ್‌ ಪ್ರೋಗ್ರಾಮ್‌ಗಳನ್ನು ಅಳವಡಿಸಬೇಕು. ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ಮೈಕ್ರೋಕಂಟ್ರೋಲರ್‌ ಪ್ರೋಗ್ರಾಮ್‌ ಸೌಲಭ್ಯ ನೀಡಬೇಕು. ಅಂದರೆ, ಚುನಾವಣೆ ಫಲಿತಾಂಶದ ಬಳಿಕ ಯಾವುದೇ ಗೊಂದಲ ಇದ್ದರೆ, ಆ ಕ್ಷೇತ್ರದ ವ್ಯಾಪ್ತಿಯ ಚುನಾವಣಾ ಮತಯಂತ್ರಗಳನ್ನು ಎಂಜಿಯನಿಯರ್‌ಗಳ ತಂಡವು ಪರಿಶೀಲನೆ ಮಾಡಬೇಕು. ಚುನಾವಣೆ ಫಲಿತಾಂಶ ಪ್ರಕಟವಾದ ಏಳು ದಿನಗಳ ಒಳಗೆ ಈ ಕುರಿತು ಅಭ್ಯರ್ಥಿಯು ಮನವಿ ಮಾಡಿದರೆ ಮಾತ್ರ ಮತಯಂತ್ರಗಳ ಪರಿಶೀಲನೆ ಮಾಡಬಹುದು” ಎಂದು ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

ಇದು ಮತಯಂತ್ರಗಳ ದಕ್ಷತೆ ಪ್ರಶ್ನಿಸುವವರಿಗೆ ಒಳ್ಳೆಯ ಅವಕಾಶ ಸಿಕ್ಕಂತಾಗಿದೆ. ಯಾವುದೇ ಗೊಂದಲ, ಅನುಮಾನ ಇದ್ದರೆ ಅಭ್ಯರ್ಥಿಯು ಇನ್ನುಮುಂದೆ ತಜ್ಞರ ನೆರವು ಪಡೆಯಬಹುದಾಗಿದೆ. ಇದಲ್ಲದೆ, ಸಿಂಬಲ್‌ ಲೋಡಿಂಗ್‌ ಪ್ರಕ್ರಿಯೆ ಮುಗಿದ ಬಳಿಕ ಸಿಂಬಲ್‌ ಲೋಡಿಂಗ್‌ ಯುನಿಟ್‌ಗಳನ್ನು (SLU) ಸೀಲ್‌ ಮಾಡಿ, 45 ದಿನ ಸಂಗ್ರಹಿಸಬೇಕು ಎಂಬುದು ಸುಪ್ರೀಂ ಕೋರ್ಟ್‌ನ ಮತ್ತೊಂದು ಆದೇಶವಾಗಿದೆ. ಇದರಿಂದ ಇವಿಎಂ ಡೇಟಾ ಚುನಾವಣೆ ಮುಗಿದ 45 ದಿನಗಳವರೆಗೆ ಸಂಗ್ರಹಿಸಿಡಲು ಸಾಧ್ಯವಾಗಲಿದೆ.

ಬ್ಯಾಲಟ್‌ ಪೇಪರ್‌ ಬೇಕಾಗಿಲ್ಲ

ಅರ್ಜಿದಾರರ ವಾದ-ಪ್ರತಿವಾದವನ್ನು ಆಲಿಸಿದ್ದ, ಚುನಾವಣೆ ಆಯೋಗದ ಮಾಹಿತಿಯನ್ನೂ ಪಡೆದಿದ್ದ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಾಂಕರ್‌ ದತ್ತ ಅವರು, ಎಲ್ಲ ಅರ್ಜಿಗಳನ್ನು ತಿರಸ್ಕರಿಸಿದರು. “ನಾವು ತಾಂತ್ರಿಕ ವಿಭಾಗದ ಎಲ್ಲ ಮಾಹಿತಿಯನ್ನು ಗಮನಿಸಿದ್ದೇವೆ. ಹಾಗಾಗಿ, ಇವಿಎಂ ಮತಗಳನ್ನು ವಿವಿಪ್ಯಾಟ್‌ ಜತೆ ತಾಳೆ ಮಾಡುವ ಅವಶ್ಯಕತೆ ಇಲ್ಲ. ದೇಶದಲ್ಲಿ ಬ್ಯಾಲಟ್‌ ಪೇಪರ್‌ ವ್ಯವಸ್ಥೆಯೂ ಬೇಕಾಗಿಲ್ಲ ಹಾಗಾಗಿ, ಎಲ್ಲ ಅರ್ಜಿಗಳನ್ನು ತಿರಸ್ಕರಿಸಿದ್ದೇವೆ. ” ಎಂದು ನ್ಯಾಯಮೂರ್ತಿಗಳು ತಿಳಿಸಿದರು.

ಏನಿದು ಪ್ರಕರಣ?

ಚುನಾವಣಾ ಮತಯಂತ್ರಗಳಲ್ಲಿ ದಾಖಲಾದ ಎಲ್ಲ ಮತಗಳನ್ನು ವಿವಿಪ್ಯಾಟ್‌ ಯಂತ್ರಗಳ ಜತೆ ತಾಳೆ ಹಾಕಬೇಕು ಎಂಬುದಾಗಿ ನಿರ್ದೇಶನ ನೀಡುವಂತೆ ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ ಸಂಸ್ಥೆ ಸೇರಿ ಹಲವರು ಅರ್ಜಿ ಸಲ್ಲಿಸಿದ್ದಾರೆ. ಈಗ ಪ್ರತಿ ಕ್ಷೇತ್ರದಲ್ಲಿ ಐದು ಮತಯಂತ್ರಗಳನ್ನು ವಿವಿಪ್ಯಾಟ್‌ಗಳ ಜತೆ ತಾಳೆ ಮಾಡಲಾಗುತ್ತದೆ. ಶೇ.100ರಷ್ಟು ಇವಿಎಂಗಳನ್ನು ವಿವಿಪ್ಯಾಟ್‌ಗಳ ಜತೆ ತಾಳೆ ಮಾಡಲು ಆದೇಶ ನೀಡಬೇಕು ಎಂಬುದು ಅರ್ಜಿದಾರರ ವಾದವಾಗಿತ್ತು.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ತಾಳೆ ಹೇಗೆ ಮಾಡಲಾಗುತ್ತದೆ?

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಚುನಾವಣೆ ಆಯೋಗದ ವಾದ ಏನು?

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ. ಇವಿಎಂ ಸ್ವಯಂ ರೋಗನಿರ್ಣಯಕ್ಕೆ ಸಮರ್ಥವಾಗಿದೆ ಮತ್ತು ಸ್ವತಂತ್ರವಾಗಿದೆ.

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

ಇದನ್ನೂ ಓದಿ: VVPAT Verification: ಬ್ಯಾಲಟ್‌ ಪೇಪರ್‌ ಬೇಕಿಲ್ಲ, ವಿವಿಪ್ಯಾಟ್‌ 100% ತಾಳೆಯೂ ಬೇಡ ಎಂದ ಸುಪ್ರೀಂ; ಇವಿಎಂ ವಿರೋಧಿಗಳಿಗೆ ಹಿನ್ನಡೆ

Continue Reading

ಪ್ರಮುಖ ಸುದ್ದಿ

ವಿಸ್ತಾರ Explainer: Wealth redistribution: ನಿಮ್ಮ ಆಸ್ತಿಯನ್ನು ಸರ್ಕಾರ ವಶಪಡಿಸಿಕೊಳ್ಳಬಹುದಾ? ಸುಪ್ರೀಂ ಕೋರ್ಟ್ ಮುಂದಿದೆ ಕೇಸ್‌

wealth redistribution: ಮೂರು ದಶಕಗಳಷ್ಟು ಹಳೆಯ ಪ್ರಕರಣವನ್ನು ಸುಪ್ರೀಂ ಕೋರ್ಟ್‌ (Supreme Court) ಪೀಠ ಮರಳಿ ಕೈಗೆತ್ತಿಕೊಂಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (CJI DY Chandrachud) ನೇತೃತ್ವದ ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಾಧೀಶರ ಪೀಠವು (nine judges bench) ಇಂದಿನಿಂದ ಈ ಪ್ರಕರಣದ ವಿಚಾರಣೆ ನಡೆಸಲಿದೆ.

VISTARANEWS.COM


on

supreme court wealth redistribution
Koo

ಹೊಸದಿಲ್ಲಿ: “ಸಂಪತ್ತು ಮರುಹಂಚಿಕೆ” (Wealth redistribution) ಕುರಿತ ವಿವಾದ (controversy) ರಾಷ್ಟ್ರ ರಾಜಕೀಯದಲ್ಲಿ ಜೋರಾಗುತ್ತಿರುವಂತೆ, ವ್ಯಕ್ತಿಯ ಖಾಸಗಿ ಒಡೆತನದ (Private property) ಆಸ್ತಿಯನ್ನು “ಸಮುದಾಯದ ವಸ್ತು ಸಂಪನ್ಮೂಲ” (community property) ಎಂದು ಪರಿಗಣಿಸಬಹುದೇ ಎಂದು ನಿರ್ಧರಿಸಲು ಮೂರು ದಶಕಗಳಷ್ಟು ಹಳೆಯ ಪ್ರಕರಣವನ್ನು ಸುಪ್ರೀಂ ಕೋರ್ಟ್‌ (Supreme Court) ಪೀಠ ಮರಳಿ ಕೈಗೆತ್ತಿಕೊಂಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (CJI DY Chandrachud) ನೇತೃತ್ವದ ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಾಧೀಶರ ಪೀಠವು (nine judges bench) ಇಂದಿನಿಂದ ಈ ಪ್ರಕರಣದ ವಿಚಾರಣೆ ನಡೆಸಲಿದೆ.

ವಿವಾದವೇನು?

ಬಿರುಸಿನ ಲೋಕಸಭೆ ಚುನಾವಣೆ (lok Sabha Election 2024) ಪ್ರಚಾರ ನಡೆಯುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇದ್ದ ಒಂದು ಉಲ್ಲೇಖವನ್ನು ಎತ್ತಿ ಆಡಿದ್ದ ಪ್ರಧಾನಿ ನರೇಂದ್ರ ಮೋದಿ (PM Narendra Modi), “ಸಂಪತ್ತು ಪುನರ್ ವಿತರಣಾ ಯೋಜನೆಯ ಭಾಗವಾಗಿ ಮನೆ, ಚಿನ್ನ, ವಾಹನ ಸೇರಿದಂತೆ ಖಾಸಗಿ ಆಸ್ತಿಯನ್ನು ಕಿತ್ತುಕೊಳ್ಳುವುದಾಗಿ ಕಾಂಗ್ರೆಸ್ (Congress) ತನ್ನ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿದೆ” ಎಂದಿದ್ದರು. ಇದು ರಾಜಕೀಯ ಬಿರುಗಾಳಿ ಎಬ್ಬಿಸಿತ್ತು.

ಅಂತಹ ಯಾವುದೇ ಯೋಜನೆಯನ್ನು ಕಾಂಗ್ರೆಸ್ ನಿರಾಕರಿಸಿದೆ. ಪ್ರಧಾನಿ ಜನರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದೆ. ಕಾಂಗ್ರೆಸ್ ಆಯ್ಕೆಯಾದರೆ ರಾಷ್ಟ್ರವ್ಯಾಪಿ ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿ ನಡೆಸಲಿದೆ ಎಂದು ಅದರ ಪ್ರಣಾಳಿಕೆ ಹೇಳುತ್ತದೆ. “ಜಾತಿಗಳು ಮತ್ತು ಉಪ-ಜಾತಿಗಳು ಮತ್ತು ಅವರ ಸಾಮಾಜಿಕ-ಆರ್ಥಿಕ ಪರಿಸ್ಥಿತಿಗಳನ್ನು ಎಣಿಸಲು ಕಾಂಗ್ರೆಸ್ ರಾಷ್ಟ್ರವ್ಯಾಪಿ ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಯನ್ನು ನಡೆಸುತ್ತದೆ. ದತ್ತಾಂಶದ ಆಧಾರದ ಮೇಲೆ, ನಾವು ಸಕಾರಾತ್ಮಕ ಕ್ರಮಕ್ಕಾಗಿ ಕಾರ್ಯಸೂಚಿಯನ್ನು ಬಲಪಡಿಸುತ್ತೇವೆ.” ಖಾಸಗಿ ಆಸ್ತಿ ಮರುಹಂಚಿಕೆ ಯೋಜನೆ ಬಗ್ಗೆ ಪ್ರಣಾಳಿಕೆಯಲ್ಲಿ ಹೇಳಿಲ್ಲ.

Narendra Modi

ಕೋರ್ಟ್‌ ಮುಂದಿರುವ ಪ್ರಕರಣ ಮತ್ತು ಅದರ ಇತಿಹಾಸ

ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಾಧೀಶರ ಪೀಠದ ಮುಂದಿರುವ ಪ್ರಕರಣವು 1986ರ ಹಿಂದಿನದು. ಮಹಾರಾಷ್ಟ್ರ ಸರ್ಕಾರವು ಮಹಾರಾಷ್ಟ್ರ ವಸತಿ ಮತ್ತು ಪ್ರದೇಶಾಭಿವೃದ್ಧಿ ಕಾಯಿದೆ- 1976 (MHADA) ಇದನ್ನು ತಿದ್ದುಪಡಿ ಮಾಡಿತ್ತು. 70 ಪ್ರತಿಶತ ನಿವಾಸಿಗಳ ಒಪ್ಪಿಗೆಯಿದ್ದರೆ ಮರುಸ್ಥಾಪನೆ ಉದ್ದೇಶಗಳಿಗಾಗಿ ಕೆಲವು “ಸೆಸ್ಡ್ ಆಸ್ತಿಗಳನ್ನು” ಸ್ವಾಧೀನಪಡಿಸಿಕೊಳ್ಳಬಹುದು ಎಂಬ ಅಧಿಕಾರವನ್ನು ಇದು ಮುಂಬೈ ಕಟ್ಟಡ ದುರಸ್ತಿ ಮತ್ತು ಪುನರ್ನಿರ್ಮಾಣ ಮಂಡಳಿಗೆ ಹೊಂದಲು ಅವಕಾಶ ಮಾಡಿಕೊಟ್ಟಿತು. ತಿದ್ದುಪಡಿಯು ಸಂವಿಧಾನದ 39(ಬಿ) ವಿಧಿಯನ್ನು ಉಲ್ಲೇಖಿಸಿದೆ. ಅದು “ಸಮುದಾಯದ ವಸ್ತು ಸಂಪನ್ಮೂಲಗಳ ಮಾಲೀಕತ್ವ ಮತ್ತು ನಿಯಂತ್ರಣವನ್ನು ಸಾಮಾನ್ಯ ಒಳಿತಿಗಾಗಿ ಉತ್ತಮ ರೀತಿಯಲ್ಲಿ ವಿತರಿಸಲಾಗುವುದು” ಎಂದು ಹೇಳುತ್ತದೆ.

ಮುಂಬೈನಲ್ಲಿರುವ 20,000ಕ್ಕೂ ಹೆಚ್ಚು ಭೂಮಾಲೀಕರನ್ನು ಪ್ರತಿನಿಧಿಸುವ ಆಸ್ತಿ ಮಾಲೀಕರ ಸಂಘ (POA) ಈ ತಿದ್ದುಪಡಿಯನ್ನು ಪ್ರಶ್ನಿಸಿದೆ ಮತ್ತು ವಸತಿ ಸಂಕೀರ್ಣಗಳನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲು ಮಂಡಳಿಗೆ ಇದು ಅನಿಯಂತ್ರಿತ ಅಧಿಕಾರವನ್ನು ನೀಡಿದೆ ಎಂದು ವಾದಿಸಿದೆ. ಡಿಸೆಂಬರ್ 1991ರಲ್ಲಿ, ಬಾಂಬೆ ಉಚ್ಚ ನ್ಯಾಯಾಲಯವು, “ಸಾಮಾನ್ಯ ಜನರಿಗೆ ಆಶ್ರಯ ನೀಡುವುದು ಸರ್ಕಾರವು ಕರ್ತವ್ಯವಾಗಿದೆ” ಎಂಬ ಕಾರಣಕ್ಕಾಗಿ ಅರ್ಜಿಗಳನ್ನು ರದ್ದುಗೊಳಿಸಿತು.

ಪಿಒಎ ಮತ್ತು ಇತರ ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಅವರ ಅರ್ಜಿಯನ್ನು ಇನ್ನೆರಡು ಪ್ರಕರಣಗಳಿಗೆ ಜೋಡಿಸಲಾಗಿದೆ. ಅವು ಶಿವರಾಮ ರಾಮಯ್ಯ ಯೆರಾಳ ವರ್ಸಸ್‌ ಮಹಾರಾಷ್ಟ್ರ ಸರ್ಕಾರ ಪ್ರಕರಣ ಹಾಗೂ ಬಾಂಬೆಯ ಪ್ರಮೀಳಾ ಚಿಂತಾಮಣಿ ಮೋಹನ್‌ದಾಸ್ ವರ್ಸಸ್‌ ಮಹಾರಾಷ್ಟ್ರ ರಾಜ್ಯ ಸರ್ಕಾರ. ಇವು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿರುವ ಅತ್ಯಂತ ಹಳೆಯ ಪ್ರಕರಣಗಳಾಗಿವೆ. ಸುಪ್ರೀಂ ಕೋರ್ಟ್ ಪೀಠವು ಇವನ್ನು ಐದು ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ವರ್ಗಾಯಿಸಿತ್ತು. ಅದು ಇವನ್ನು ಏಳು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಿತು. 2002ರಲ್ಲಿ, ಆಗಿನ ಮುಖ್ಯ ನ್ಯಾಯಮೂರ್ತಿ ಎಸ್‌ಪಿ ಭರೂಚಾ ನೇತೃತ್ವದ ಏಳು ನ್ಯಾಯಾಧೀಶರ ಪೀಠವು ಈ ವಿಷಯವನ್ನು ಒಂಬತ್ತು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಿತು.

2019ರಲ್ಲಿ, ಮತ್ತೊಂದು ಪ್ರಮುಖ ಬೆಳವಣಿಗೆ ನಡೆಯಿತು. ಮಹಾರಾಷ್ಟ್ರ ಸರ್ಕಾರ ಮತ್ತೆ ಕಾನೂನನ್ನು ತಿದ್ದುಪಡಿ ಮಾಡಿತು. ಹೊಸ ತಿದ್ದುಪಡಿಯ ಪ್ರಕಾರ, ಗಡುವಿನೊಳಗೆ ಆಸ್ತಿ ಮರುಸ್ಥಾಪಿಸಲು ಭೂಮಾಲೀಕರು ವಿಫಲವಾದರೆ, ರಾಜ್ಯ ಸರ್ಕಾರವು ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಬಹುದಿತ್ತು. ಇದು ಕಲ್ಯಾಣ ಶಾಸನ ಎಂದು ರಾಜ್ಯ ಸರ್ಕಾರ ಒತ್ತಿಹೇಳಿತು. ಆದರೆ ಆಸ್ತಿಯನ್ನು ಕಡಿಮೆ ಬೆಲೆಗೆ ಕಿತ್ತುಕೊಂಡು ಗುತ್ತಿಗೆದಾರರಿಗೆ ಹಸ್ತಾಂತರಿಸುವ ಯೋಜನೆ ಇದು ಎಂದು ಭೂಮಾಲೀಕರು ಆರೋಪಿಸಿದರು.

ಕಳೆದ ವರ್ಷ, ವಿಚಾರಣೆಗೆ ಬಾಕಿ ಇರುವ ಒಂಬತ್ತು ನ್ಯಾಯಾಧೀಶರ ಪೀಠದ ಪ್ರಕರಣಗಳನ್ನು ಪಟ್ಟಿ ಮಾಡುವುದಾಗಿ ಸುಪ್ರೀಂ ಕೋರ್ಟ್ ಹೇಳಿತ್ತು. ಈ ಪ್ರಕರಣದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ನಿನ್ನೆ ನಡೆಸಿತು. ನ್ಯಾಯಮೂರ್ತಿ ಹೃಷಿಕೇಶ್ ರಾಯ್, ನ್ಯಾಯಮೂರ್ತಿ ಬಿವಿ ನಾಗರತ್ನ, ನ್ಯಾಯಮೂರ್ತಿ ಸುಧಾಂಶು ಧುಲಿಯಾ, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ, ನ್ಯಾಯಮೂರ್ತಿ ಮನೋಜ್ ಮಿಶ್ರಾ, ನ್ಯಾಯಮೂರ್ತಿ ರಾಜೇಶ್ ಬಿಂದಾಲ್, ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಸಿಹ್ ಅವರು ಪೀಠದಲ್ಲಿರುವ ಇತರ ಎಂಟು ನ್ಯಾಯಾಧೀಶರು. ಒಟ್ಟು 16 ಅರ್ಜಿಗಳು ನ್ಯಾಯಾಲಯದ ಮುಂದಿವೆ.

ನಿರ್ಣಾಯಕ ಪ್ರಶ್ನೆ

ನ್ಯಾಯಾಲಯದ ಮುಂದಿರುವ ಪ್ರಮುಖ ಸಮಸ್ಯೆಯು ಸಂವಿಧಾನದಲ್ಲಿನ ಎರಡು ನಿಬಂಧನೆಗಳಿಗೆ ಸಂಬಂಧಿಸಿದೆ- ಆರ್ಟಿಕಲ್ 31 ಸಿ ಮತ್ತು ಆರ್ಟಿಕಲ್ 39 (ಬಿ). ಇವುಗಳು ರಾಜ್ಯ ನೀತಿಯ ಡೈರೆಕ್ಟಿವ್ ಪ್ರಿನ್ಸಿಪಲ್ಸ್‌ಗೆ ಸಂಬಂಧಿಸಿವೆ. ಈ ತತ್ವಗಳು ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡುವುದಿಲ್ಲ. ಆದರೆ ದೇಶದ ಆಡಳಿತಕ್ಕೆ ಇವು ಮೂಲಭೂತವಾಗಿವೆ. ಕಾನೂನುಗಳನ್ನು ರಚಿಸುವಾಗ ಈ ತತ್ವಗಳನ್ನು ಅನ್ವಯಿಸುವುದು ರಾಜ್ಯದ ಕರ್ತವ್ಯ ಎಂದು ಸಂವಿಧಾನ ಹೇಳುತ್ತದೆ.

ಆರ್ಟಿಕಲ್ 39(ಬಿ) ಹೇಳುವಂತೆ, ಸಮುದಾಯದ ವಸ್ತು ಸಂಪನ್ಮೂಲಗಳ ಮಾಲೀಕತ್ವ ಮತ್ತು ನಿಯಂತ್ರಣವನ್ನು ಸಾಮಾನ್ಯ ಒಳಿತಿಗಾಗಿ ಉತ್ತಮ ರೀತಿಯಲ್ಲಿ ವಿತರಿಸಬಹುದು. ಆರ್ಟಿಕಲ್ 31(ಸಿ) ಕೆಲವು ನಿರ್ದೇಶನ ತತ್ವಗಳನ್ನು ಜಾರಿಗೆ ತರುವ ಕಾನೂನುಗಳನ್ನು ರಕ್ಷಿಸುತ್ತದೆ. ಇದರ ಅರ್ಥವೇನೆಂದರೆ, ನಿರ್ದೇಶನದ ತತ್ವಗಳ ಅಡಿಯಲ್ಲಿ ರಾಜ್ಯವು ಜಾರಿಗೊಳಿಸಿದ ಯಾವುದೇ ಕಾನೂನನ್ನು ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಹಕ್ಕು ಸೇರಿದಂತೆ ಮೂಲಭೂತ ಹಕ್ಕುಗಳೊಂದಿಗೆ ವ್ಯವಹರಿಸುವ ಸಂವಿಧಾನದ ಆರ್ಟಿಕಲ್ 14 ಮತ್ತು ಆರ್ಟಿಕಲ್ 19ನ್ನು ಮುಂದಿಟ್ಟುಕೊಂಡು ಕೂಡ ಪ್ರತಿಭಟಿಸಲು ಸಾಧ್ಯವಿಲ್ಲ.

supreme court CJI DY chandrachud

ನಿರ್ದೇಶನದ ತತ್ವಗಳಲ್ಲಿ ರಾಜ್ಯವು “ಆದಾಯದಲ್ಲಿನ ಅಸಮಾನತೆಗಳನ್ನು ಕಡಿಮೆ ಮಾಡಲು ಶ್ರಮಿಸಬೇಕು ಮತ್ತು ವ್ಯಕ್ತಿಗಳ ನಡುವೆ ಮಾತ್ರವಲ್ಲದೆ ವಿವಿಧ ಪ್ರದೇಶಗಳಲ್ಲಿ ವಾಸಿಸುವ ಅಥವಾ ವಿವಿಧ ಕೆಲಸಗಳಲ್ಲಿ ತೊಡಗಿರುವ ಜನರ ಗುಂಪುಗಳ ನಡುವೆಯೂ ಸಹ ಸ್ಥಾನಮಾನ, ಸೌಲಭ್ಯಗಳು ಮತ್ತು ಅವಕಾಶಗಳಲ್ಲಿನ ಅಸಮಾನತೆಗಳನ್ನು ತೊಡೆದುಹಾಕಲು ಪ್ರಯತ್ನಿಸಬೇಕು” ಎಂದು ಹೇಳುತ್ತದೆ.

ಹಾಗಾಗಿ ಖಾಸಗಿ ಆಸ್ತಿಯನ್ನು ʼಸಮುದಾಯದ ವಸ್ತು ಸಂಪನ್ಮೂಲಗಳು’ ಎಂದು ಪರಿಗಣಿಸಬಹುದೇ ಮತ್ತು ಸಾಮಾನ್ಯ ಒಳಿತಿಗಾಗಿ ರಾಜ್ಯವು ಸ್ವಾಧೀನಪಡಿಸಿಕೊಳ್ಳಬಹುದೇ ಎಂಬುದು ನ್ಯಾಯಾಲಯದ ಮುಂದಿರುವ ಪ್ರಮುಖ ಪ್ರಶ್ನೆಯಾಗಿದೆ.

ಪ್ರಮುಖ ಅವಲೋಕನಗಳು

ನಿನ್ನೆ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಗಳು ಕೆಲವು ಪ್ರಮುಖ ಅವಲೋಕನಗಳನ್ನು ಮಾಡಿದರು. “ನೀವು ಆಸ್ತಿಯ ಬಂಡವಾಳಶಾಹಿ ಪರಿಕಲ್ಪನೆಯನ್ನು ನೋಡಿದರೆ, ಅದು ಆಸ್ತಿಗೆ ಪ್ರತ್ಯೇಕತೆಯ ಭಾವನೆಯನ್ನು, ಇದು ಪ್ರತ್ಯೇಕವಾಗಿ ನನ್ನದು ಎಂಬ ಭಾವನೆಯನ್ನು ಆರೋಪಿಸುತ್ತದೆ. ಆಸ್ತಿಯ ಸಮಾಜವಾದಿ ಪರಿಕಲ್ಪನೆಯು ಕನ್ನಡಿ ಪ್ರತಿಬಿಂಬವಾಗಿದೆ. ಇದು ಆಸ್ತಿಗೆ ಸಾಮಾನ್ಯತೆಯ ಕಲ್ಪನೆಯನ್ನು ಸೂಚಿಸುತ್ತದೆ. ಯಾವುದೂ ವ್ಯಕ್ತಿಗೆ ಪ್ರತ್ಯೇಕವಾಗಿಲ್ಲ. ಎಲ್ಲಾ ಆಸ್ತಿಯೂ ಸಮುದಾಯಕ್ಕೆ ಸಾಮಾನ್ಯವಾಗಿದೆ. ಇದು ತೀವ್ರ ಸಮಾಜವಾದಿ ದೃಷ್ಟಿಕೋನ” ಎಂದು ಹೇಳಿದರು.

“ಭಾರತದ ರಾಜ್ಯ ನೀತಿಯ ನಿರ್ದೇಶನ ತತ್ವಗಳು ಗಾಂಧಿ ತತ್ವ ಮತ್ತು ಸಿದ್ಧಾಂತಕ್ಕೆ ಅನುಗುಣವಾಗಿವೆ. ಆ ತತ್ವಗಳೇನು? ನಮ್ಮ ನೀತಿಯು ನಂಬಿಕೆಯ ಆಸ್ತಿಯನ್ನು ಪರಿಗಣಿಸುತ್ತದೆ. ಖಾಸಗಿ ಆಸ್ತಿ ಇಲ್ಲ ಎಂಬುದಕ್ಕಾಗಿ ನಾವು ಸಮಾಜವಾದಿ ಮಾದರಿಯನ್ನು ಅಳವಡಿಸಿಕೊಳ್ಳಲು ಹೋಗಿಲ್ಲ. ಆದರೆ ಖಾಸಗಿ ಆಸ್ತಿ ಇದೆ” ಎಂದವರು ಗಮನಿಸಿದರು.

“ನಮ್ಮ ಆಸ್ತಿಯ ಪರಿಕಲ್ಪನೆಯು ತೀವ್ರ ಬಂಡವಾಳಶಾಹಿ ದೃಷ್ಟಿಕೋನದಿಂದ ಅಥವಾ ತೀವ್ರ ಸಮಾಜವಾದಿ ದೃಷ್ಟಿಕೋನದಿಂದ ಅತ್ಯಂತ ವಿಭಿನ್ನವಾದ, ಅತ್ಯಂತ ಸೂಕ್ಷ್ಮವಾದ ಬದಲಾವಣೆ ಹೊಂದಿದೆ. ನಾವು ಆಸ್ತಿಯನ್ನು ನಂಬುವ ವಿಷಯವೆಂದು ಪರಿಗಣಿಸುತ್ತೇವೆ. ನಾವು ಕುಟುಂಬದಲ್ಲಿ ಮುಂದಿನ ಪೀಳಿಗೆಗೆ ಆಸ್ತಿಯನ್ನು ನೀಡುವ ನಂಬಿಕೆಯನ್ನು ಇರಿಸಿದ್ದೇವೆ. ಆದರೆ ವಿಶಾಲವಾಗಿ ನಾವು ಆಸ್ತಿಯನ್ನು ವಿಶಾಲ ಸಮುದಾಯದ ವಿಶ್ವಾಸದಲ್ಲಿರಿಸುತ್ತೇವೆ. ಅದು ಸುಸ್ಥಿರ ಅಭಿವೃದ್ಧಿಯ ಸಂಪೂರ್ಣ ಪರಿಕಲ್ಪನೆಯಾಗಿದೆ. ಅದನ್ನೇ ನಾವು ಇಂಟರ್‌ಜೆನೆರೇಶನಲ್ ಇಕ್ವಿಟಿ ಎಂದು ಕರೆಯುತ್ತೇವೆ,” ಎಂದು ಅವರು ಹೇಳಿದರು.

“ಸಮುದಾಯದ ವಸ್ತು ಸಂಪನ್ಮೂಲಗಳು ಎಂದರೆ ಸಾರ್ವಜನಿಕ ಸಂಪನ್ಮೂಲಗಳು ಮತ್ತು ನಾವು ವ್ಯಕ್ತಿಯ ಖಾಸಗಿ ಆಸ್ತಿಯಲ್ಲಿ ಅದಿಲ್ಲ ಎಂದು ಸೂಚಿಸುವುದು ಸ್ವಲ್ಪ ವಿಪರೀತ. ಆ ದೃಷ್ಟಿಕೋನವನ್ನು ತೆಗೆದುಕೊಳ್ಳುವುದು ಏಕೆ ಅಪಾಯಕಾರಿ ಎಂದು ನಾನು ಹೇಳುತ್ತೇನೆ. ಗಣಿಗಳು ಮತ್ತು ಖಾಸಗಿ ಅರಣ್ಯಗಳಂತಹ ಸರಳ ವಿಷಯಗಳನ್ನು ತೆಗೆದುಕೊಳ್ಳಿ. ಉದಾಹರಣೆಗೆ, 39 (ಬಿ) ಅಡಿಯಲ್ಲಿ ಖಾಸಗಿ ಅರಣ್ಯಗಳಿಗೆ ಸರ್ಕಾರಿ ನೀತಿ ಅನ್ವಯಿಸುವುದಿಲ್ಲ ಎಂದು ನಾವು ಹೇಳುತ್ತೇವೆ. ಆದ್ದರಿಂದ ಪ್ರತಿಪಾದನೆಯಾಗಿ ಅತ್ಯಂತ ಅಪಾಯಕಾರಿ,” ಅವರು ಹೇಳಿದರು.

ಸಂವಿಧಾನ ರಚನೆಯಾದ 1950ರ ಪರಿಸ್ಥಿತಿಯನ್ನು ಉಲ್ಲೇಖಿಸಿದ ಮುಖ್ಯ ನ್ಯಾಯಮೂರ್ತಿಗಳು, “ಸಂವಿಧಾನವು ಸಾಮಾಜಿಕ ಪರಿವರ್ತನೆಯನ್ನು ತರಲು ಉದ್ದೇಶಿಸಲಾಗಿತ್ತು. ಆಸ್ತಿಯನ್ನು ಖಾಸಗಿಯಾಗಿ ಹೊಂದಿರುವ ನಂತರ 39 (ಬಿ) ವಿಧಿಗೆ ಯಾವುದೇ ಅನ್ವಯವಿಲ್ಲ ಎಂದು ನಾವು ಹೇಳಲು ಸಾಧ್ಯವಿಲ್ಲ.” ಎಂದರು.

ಆದಾಗ್ಯೂ, ಮಹಾರಾಷ್ಟ್ರದ ಕಾನೂನು ಶಿಥಿಲಗೊಂಡ ಕಟ್ಟಡಗಳನ್ನು ಸ್ವಾಧೀನಪಡಿಸಿಕೊಳ್ಳಲು ಅಧಿಕಾರಿಗಳಿಗೆ ಅಧಿಕಾರ ನೀಡಿದೆಯೇ ಎಂಬುದು ವಿಭಿನ್ನ ವಿಷಯವಾಗಿದೆ ಮತ್ತು ಅದನ್ನು ಸ್ವತಂತ್ರವಾಗಿ ನಿರ್ಧರಿಸಲಾಗುತ್ತದೆ ಎಂದು ಅದು ಒತ್ತಿಹೇಳಿತು. ‘ಜಮೀಂದಾರಿ’ ಪದ್ಧತಿಯ ರದ್ದತಿಯನ್ನೂ ಮುಖ್ಯ ನ್ಯಾಯಮೂರ್ತಿ ಉಲ್ಲೇಖಿಸಿದರು. “ಸಂವಿಧಾನವು ಸಾಮಾಜಿಕ ಪರಿವರ್ತನೆಯನ್ನು ತರಲು ಉದ್ದೇಶಿಸಿರುವುದರಿಂದ ಸಂವಿಧಾನದಲ್ಲಿ 39 (ಬಿ) ವಿಧವನ್ನು ನಿರ್ದಿಷ್ಟ ರೀತಿಯಲ್ಲಿ ರಚಿಸಲಾಗಿದೆ ಎಂದು ನೀವು ಅರ್ಥಮಾಡಿಕೊಳ್ಳಬೇಕು. ಆದ್ದರಿಂದ ನಾವು ಖಾಸಗಿ ಆಸ್ತಿಯನ್ನು ಖಾಸಗಿ ಆಸ್ತಿ ಎಂದು ಹೇಳಿದಾಗ ಆರ್ಟಿಕಲ್ 39 (ಬಿ) ಯಾವುದೇ ಅನ್ವಯವನ್ನು ಹೊಂದಿರುವುದಿಲ್ಲ” ಎಂದು ಅವರು ಹೇಳಿದರು. ಇಂದು ಮತ್ತೆ ಪ್ರಕರಣದ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ: Wealth Redistribution: ಸಂಪತ್ತು ಮರು ಹಂಚಿಕೆ ವಿವಾದದ ಬೆಂಕಿಗೆ ತುಪ್ಪ ಸುರಿದ ಸ್ಯಾಮ್ ಪಿತ್ರೊಡಾ; ಕಾಂಗ್ರೆಸ್‌ಗೆ ಫಜೀತಿ!

Continue Reading
Advertisement
Vampire Facial
ಆರೋಗ್ಯ2 mins ago

Vampire Facial: ಹೆಣ್ಣುಮಕ್ಕಳೇ ಎಚ್ಚರ; ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ!

Yogi Adithyanatha
ಪ್ರಮುಖ ಸುದ್ದಿ4 mins ago

Yogi Adityanath: “ಗೋಮಾಂಸ ಸೇವಿಸುವ ಹಕ್ಕು….” ಕಾಂಗ್ರೆಸ್‌ ವಿರುದ್ಧ ಯೋಗಿ ಇನ್ನೊಂದು ಆರೋಪ

Road Accident in Bengaluru
ಬೆಂಗಳೂರು20 mins ago

Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ ಆಂಬ್ಯುಲೆನ್ಸ್‌ ಚಾಲಕ; ಸರಣಿ ಅಪಘಾತಕ್ಕೆ ಕಾರುಗಳು ಜಖಂ, ಗರ್ಭಿಣಿ ಸೇಫ್

Dhanush Gowda Wedding With Sanjana Photos
ಕಿರುತೆರೆ26 mins ago

Dhanush Gowda:  ವೈವಾಹಿಕ ಜೀವನಕ್ಕೆ ಕಾಲಿಟ್ಟ ʻಗೀತಾʼ ಧಾರಾವಾಹಿ ನಟ

ಕರ್ನಾಟಕ38 mins ago

Parkinson’s disease: ಪಾರ್ಕಿನ್ಸನ್ ರೋಗಿಗಳಲ್ಲಿ ಡಿಬಿಎಸ್ ಚಿಕಿತ್ಸೆಗಾಗಿ ಹೊಸ ತಂತ್ರಜ್ಞಾನ- ಇದು ದೇಶದಲ್ಲೇ ಮೊದಲು

Drought Relief
ಕರ್ನಾಟಕ42 mins ago

Drought Relief: ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

IRCTC Jyotirlinga Yatra
ಪ್ರವಾಸ43 mins ago

IRCTC Jyotirlinga Yatra: ರೈಲ್ವೆ ಇಲಾಖೆಯಿಂದ ಏಳು ಜ್ಯೋತಿರ್ಲಿಂಗ ವೀಕ್ಷಣೆ ಪ್ರವಾಸ; ದರ ವಿವರ ಇಲ್ಲಿದೆ

Viral Video
ವೈರಲ್ ನ್ಯೂಸ್44 mins ago

Fact Check: ಓವೈಸಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಮಹಿಳೆ ಅಲ್ಲವೆ?

Road Accident in kalaburagi
ಕಲಬುರಗಿ45 mins ago

Road Accident : ಲಾರಿ- ಬೈಕ್‌ ಅಪಘಾತ; ಪತ್ನಿ ಕಣ್ಣೇದುರೇ ಒದ್ದಾಡಿ ಪ್ರಾಣಬಿಟ್ಟ ಪತಿ

food poisoning raichur news
ಕ್ರೈಂ47 mins ago

Food Poisoning: ಹಾಸ್ಟೆಲ್‌ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ24 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

ಟ್ರೆಂಡಿಂಗ್‌