ವಿಸ್ತಾರ Explainer: ಕೆನಡಾದ ಜಸ್ಟಿನ್‌ ಟ್ರುಡೋ ಸರ್ಕಾರ ಖಲಿಸ್ತಾನಿಗಳಿಗೆ ಬೆಂಬಲ ನೀಡುತ್ತಿರುವುದೇಕೆ? ಇಲ್ಲಿದೆ ಇನ್‌ಸೈಡ್‌ ಸ್ಟೋರಿ! Vistara News

EXPLAINER

ವಿಸ್ತಾರ Explainer: ಕೆನಡಾದ ಜಸ್ಟಿನ್‌ ಟ್ರುಡೋ ಸರ್ಕಾರ ಖಲಿಸ್ತಾನಿಗಳಿಗೆ ಬೆಂಬಲ ನೀಡುತ್ತಿರುವುದೇಕೆ? ಇಲ್ಲಿದೆ ಇನ್‌ಸೈಡ್‌ ಸ್ಟೋರಿ!

ವಿಸ್ತಾರ Explainer: ಭಾರತ ಹಾಗೂ ಕೆನಡಾ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ತಾರಕಕ್ಕೇರಿದೆ. ಭಾರತದ ವಿರುದ್ಧ ಕೆನಡಾ ಆರೋಪ ಮಾಡುವುದು, ಭಾರತದ ರಾಯಭಾರಿಯನ್ನು ಉಚ್ಚಾಟಿಸುವುದು ಸೇರಿ ಹಲವು ಉದ್ಧಟತನ ಮಾಡುತ್ತಿದೆ. ಇದಕ್ಕೆ ಭಾರತವೂ ತಕ್ಕ ತಿರುಗೇಟು ನೀಡುತ್ತಿದೆ. ಆದರೆ, ಬಿಕ್ಕಟ್ಟಿನ ಹಿಂದೆ ಏನಿದೆ ಕಾರಣ?

VISTARANEWS.COM


on

Narendra Modi Justin Turdeau And Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

“ಕೆನಡಾದಲ್ಲಿರುವ ಭಾರತ ವಿರೋಧಿ ಚಟುವಟಿಕೆಗಳನ್ನು ನಿಗ್ರಹಿಸಿ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳವವರೆಗೆ ಭಾರತ ಹಾಗೂ ಕೆನಡಾ ಮಧ್ಯೆ ಎಲ್ಲವೂ ಚೆನ್ನಾಗಿತ್ತು. ಖುಷಿಯಿಂದಲೇ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಭಾರತದ ಆತಿಥ್ಯ ಸ್ವೀಕರಿಸಿದ್ದರು. ಆದರೆ, ಯಾವಾಗ ಮೋದಿ ಅವರು ಭಾರತ ವಿರೋಧಿ ಚಟುವಟಿಕೆಗಳು ಎಂದರೋ, ಆಗ ಜಸ್ಟಿನ್‌ ಟ್ರುಡೋ ವಿಚಲಿತರಾದರು. ವಿಮಾನ ಕೆಟ್ಟು ನಿಂತಾಗ ಭಾರತದ ವಿಐಪಿ ಕೋಣೆಗಳಲ್ಲಿ ಇರಿ ಎಂದರೆ ಒಲ್ಲೆ ಎಂದರು. ನಮ್ಮದೇ ದೇಶದ ವಿಮಾನದಲ್ಲಿ (ಏರ್‌ ಇಂಡಿಯಾ ಒನ್)‌ ಕೆನಡಾಗೆ ತೆರಳಿ ಎಂದಾಗಲೂ ಜಸ್ಟಿನ್‌ ಟ್ರುಡೋ ಬೇಡ ಎಂದು ತಲೆ (ವಿಸ್ತಾರ Explainer) ಅಲ್ಲಾಡಿಸಿದರು.

ಭಾರವಾದ ಮನಸ್ಸಿನಿಂದ ಭಾರತದಿಂದ ಹಿಂತಿರುಗಿದ ಕೆಲವೇ ದಿನಗಳಲ್ಲಿ ಭಾರತದ ಜತೆ ನಡೆಯಬೇಕಿದ್ದ ವ್ಯಾಪಾರ ಒಪ್ಪಂದವನ್ನು ಕೆನಡಾ ರದ್ದುಪಡಿಸಿತು. ಕೆನಡಾದಲ್ಲಿರುವ ಭಾರತದ ರಾಯಭಾರಿಯನ್ನು ಉಚ್ಚಾಟಿಸಿತು. ಭಾರತದ ವಿರುದ್ಧ ಹಲವು ಆರೋಪ ಮಾಡಿತು. ಜಮ್ಮು-ಕಾಶ್ಮೀರ, ಮಣಿಪುರದಲ್ಲಿ ಹಿಂಸೆ ನಡೆಯುತ್ತಿದೆ, ಅಲ್ಲಿಗೆ ತೆರಳಬೇಡಿ ಎಂದು ಭಾರತದಲ್ಲಿರುವ ಕೆನಡಾ ನಾಗರಿಕರಿಗೆ ಸೂಚಿಸಿತು. ಹಾಗಾದರೆ, ಭಾರತದ ಮೇಲೆ ಕೆನಡಾ ಇಷ್ಟೊಂದು ಮುರಕೊಂಡು ಬೀಳಲು ಕಾರಣವೇನು? ನರೇಂದ್ರ ಮೋದಿ ಅವರು “ಭಾರತ ವಿರೋಧಿ ಚಟುವಟಿಕೆ” ಎಂದು ಹೇಳಿದ್ದು ಜಸ್ಟಿನ್‌ ಟ್ರುಡೋ ಅವರಿಗೇಕೆ ಅಷ್ಟೊಂದು ಆಳವಾಗಿ ನಾಟಿತು? ಜಸ್ಟಿನ್‌ ಟ್ರುಡೋ ಅವರೇಕೆ ಖಲಿಸ್ತಾನಿಗಳ ಪರ ನಿಲ್ಲುತ್ತಿದ್ದಾರೆ? ಅವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಪರೋಕ್ಷವಾಗಿ ಸೂಚಿಸಿದರೂ ಏಕೆ ಜಸ್ಟಿನ್‌ ಟ್ರುಡೋ ಕೆರಳಿ ಕೆಂಡವಾಗಿದ್ದಾರೆ? ಇದರ ಹಿಂದೆ ಯಾವ ರಾಜಕೀಯ, ಅಧಿಕಾರದ ದಾಹ ಅಡಗಿದೆ? ಅಷ್ಟಕ್ಕೂ, ಖಲಿಸ್ತಾನಿಗಳ ಬೆಂಬಲ ಇಲ್ಲದಿದ್ದರೆ ಜಸ್ಟಿನ್‌ ಟ್ರುಡೋ ಅಧಿಕಾರವನ್ನೇ ಕಳೆದುಕೊಳ್ಳಲಿದ್ದಾರೆಯೇ? ಇಲ್ಲಿದೆ ಮಾಹಿತಿ.

ಖಲಿಸ್ತಾನಿ ಪಕ್ಷದ ಬೆಂಬಲವೇ ಜಸ್ಟಿನ್‌ ಟ್ರುಡೋ ಬಲ

ಒಂದೇ ಮಾತಿನಲ್ಲಿ ಹೇಳುವುದಾದರೆ, ಜಸ್ಟಿನ್‌ ಟ್ರುಡೋ ಸರ್ಕಾರ ನಿಂತಿರುವುದೇ ಖಲಿಸ್ತಾನಿಗಳ ಪರವಾಗಿರುವ ಪಕ್ಷದ ಬೆಂಬಲದ ಮೇಲೆ. ಹೌದು, 2021ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಜಸ್ಟಿನ್‌ ಟ್ರುಡೋ ಅವರ ಲಿಬರಲ್‌ ಪಕ್ಷವು ಬಹುಮತ ಪಡೆದು ಅಧಿಕಾರ ಪಡೆದಿಲ್ಲ. ಮ್ಯಾಜಿಕ್‌ ನಂಬರ್‌ ಆದ 170 ಸೀಟುಗಳ ಬದಲು ಜಸ್ಟಿನ್‌ ಟ್ರುಡೋ ಅವರ ಪಕ್ಷವು 157 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಆಗ, ಖಲಿಸ್ತಾನಿಗಳ ಪರ ಒಲವಿರುವ, ಜಗಮೀತ್‌ ಸಿಂಗ್‌ ನೇತೃತ್ವದ ನ್ಯೂ ಡೆಮಾಕ್ರಟಿಕ್‌ ಪಕ್ಷವು ಜಸ್ಟಿನ್‌ ಟ್ರುಡೋ ಅವರಿಗೆ ಬೆಂಬಲ ಸೂಚಿಸಿತು. ಜಗಮೀತ್‌ ಸಿಂಗ್‌ ತನ್ನ ಪಕ್ಷದ 25 ಸಂಸದರ ಬೆಂಬಲವನ್ನು ಜಸ್ಟಿನ್‌ ಟ್ರುಡೋ ಅವರಿಗೆ ಘೋಷಿಸಿದ. 182 ಸಂಸದರ ಬಲದೊಂದಿಗೆ ಜಸ್ಟಿನ್‌ ಟ್ರುಡೋ ಕೆನಡಾ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡರು. ಈಗ ನರೇಂದ್ರ ಮೋದಿ ಅವರ ಕರೆಗೆ ಓಗೊಟ್ಟು ಕೆನಡಾದಲ್ಲಿರುವ ಖಲಿಸ್ತಾನಗಳ ವಿರುದ್ಧ ಕ್ರಮ ತೆಗೆದುಕೊಂಡರೆ, ಖಲಿಸ್ತಾನ ಚಳವಳಿ ಹಿನ್ನೆಲೆಯ ಜಗಮೀತ್‌ ಸಿಂಗ್‌ ಪಕ್ಷವು ಬೆಂಬಲ ವಾಪಸ್‌ ಪಡೆಯುತ್ತದೆ. ಆಗ, ಜಸ್ಟಿನ್‌ ಟ್ರುಡೋ ಅಧಿಕಾರ ಕಳೆದುಕೊಳ್ಳುತ್ತಾರೆ.

ಯಾರು ಈ ಜಗಮೀತ್‌ ಸಿಂಗ್?‌

ಪಂಜಾಬ್‌ ಮೂಲದ ದಂಪತಿಗೆ ಕೆನಡಾದ ಒಂಟಾರಿಯೋದ ಸ್ಕಾರ್‌ಬೊರಫ್‌ನಲ್ಲಿ 1979ರಲ್ಲಿ ಜನಿಸಿದ ಜಗಮೀತ್‌ ಸಿಂಗ್‌ ಈಗ ಕೆನಡಾದ ಮೂರನೇ ಅತಿದೊಡ್ಡ ಪಕ್ಷದ ನಾಯಕನಾಗಿದ್ದಾನೆ. ವಕೀಲನಾಗಿ ವೃತ್ತಿ ಆರಂಭಿಸಿ, ಕೆನಡಾದಲ್ಲಿರುವ ಸಿಖ್‌ ಸಮುದಾಯದ ನಾಯಕನಾಗಿ, ಶಾಸಕನಾಗಿ, ಸಂಸದನಾಗಿ, ಖಲಿಸ್ತಾನ ಪರ ಹೋರಾಟಕ್ಕೆ ಬೆಂಬಲ ಸೂಚಿಸಿ ಈಗ ಸರ್ಕಾರದ ಭಾಗವೇ ಆಗಿದ್ದಾನೆ. ಅಷ್ಟೇ ಅಲ್ಲ, ಜಸ್ಟಿನ್‌ ಟ್ರುಡೋ ಅವರಿಗೇ ಆಗಾಗ ತನ್ನ ಬೇಡಿಕೆಗಳನ್ನು ಇಡುತ್ತ, ಅವುಗಳನ್ನು ಈಡೇರಿಸಿಕೊಳ್ಳುತ್ತ, ಪರೋಕ್ಷವಾಗಿ ಖಲಿಸ್ತಾನಿಗಳಿಗೆ ಬೆಂಬಲಿಸುತ್ತ ‘ಪವರ್‌ ಕಂಟ್ರೋಲರ್’‌ ಆಗಿ ಹೊರಹೊಮ್ಮಿದ್ದಾನೆ.

ಭಾರತದಲ್ಲಿ ಖಲಿಸ್ತಾನ ವಿಷ ಬೀಜ ಬಿತ್ತಿದ ಭಿಂದ್ರನ್‌ವಾಲೆಯ ಪೋಸ್ಟರ್‌ಗಳುಳ್ಳ ಖಲಿಸ್ತಾನಿ ಹೋರಾಟದಲ್ಲಿ ಜಗಮೀತ್‌ ಸಿಂಗ್‌ ಭಾಗವಹಿಸುತ್ತಾನೆ. ಆ ಮೂಲಕ ಖಲಿಸ್ತಾನಿ ಹೋರಾಟಕ್ಕೆ ಬೆಂಬಲ ಸೂಚಿಸುತ್ತಾನೆ. ಕೃಷಿ ಕಾಯ್ದೆಗಳ ವಿರುದ್ಧ ಭಾರತದಲ್ಲಿ ನಡೆದ ಪ್ರತಿಭಟನೆಯ ಹಿಂದೆ ಖಲಿಸ್ತಾನಿಗಳ ಕೈವಾಡ ಇದೆ ಎಂಬ ಮಾಹಿತಿ ಹರಿದಾಡುತ್ತಲೇ, ಭಾರತದ ರೈತರ ಪರ ಕಾಳಜಿ ತೋರುತ್ತಾನೆ. ಅವಕಾಶ ಸಿಕ್ಕಾಗಲೆಲ್ಲ ಭಾರತ ವಿರೋಧಿ ಮನಸ್ಥಿತಿ ತೋರುತ್ತಾನೆ. ಅಷ್ಟೇ ಏಕೆ, 2013ರಲ್ಲಿ ಈತ ಪಂಜಾಬ್‌ಗೆ ಆಗಮಿಸುತ್ತಾನೆ ಎಂದಾಗ ಆಗಿನ ಯುಪಿಎ ಸರ್ಕಾರವು ಈತನಿಗೆ ವೀಸಾ ನೀಡಿರಲಿಲ್ಲ.

ಜಸ್ಟಿನ್‌ ಟ್ರುಡೋ ಹಾಗೂ ಜಗಮೀತ್‌ ಸಿಂಗ್

ಇದನ್ನೂ ಓದಿ: India Canada Row: ಏಟಿಗೆ ಎದುರೇಟು; ಕೆನಡಾದಲ್ಲಿರುವ ಭಾರತೀಯರಿಗೆ ಕೇಂದ್ರ ಅಡ್ವೈಸರಿ

ಜಸ್ಟಿನ್‌ ಟ್ರುಡೋಗೆ ಅಧಿಕಾರವೇ ಮುಖ್ಯ

ತಂದೆಯ (ಪಿಯರ್‌ ಟ್ರುಡೋ) ಕಾಲದಿಂದಲೂ ಕೆನಡಾ ಅಧಿಕಾರದ ಪಡಸಾಲೆಯಲ್ಲಿ ಓಡಾಡಿಕೊಂಡಿರುವ ಜಸ್ಟಿನ್‌ ಟ್ರುಡೋ ಅವರಿಗೆ ಈಗ ಅಧಿಕಾರವೇ ಮುಖ್ಯ. ಯಾವುದೇ ಪಕ್ಷಕ್ಕೆ ಅಧಿಕಾರವೇ ಮುಖ್ಯವಾದರೂ, ಆ ಪಕ್ಷ ಯಾವ ನೀತಿಗಳ ಆಧಾರದ ಮೇಲೆ ನಿಲ್ಲುತ್ತದೆ ಎಂಬುದು ಮುಖ್ಯವಾಗುತ್ತದೆ. ಆದರೆ, ಖಲಿಸ್ತಾನಿಗಳಿಗೆ ಬೆಂಬಲ ನೀಡುವುದು ಪಿಯರ್‌ ಟ್ರುಡೋ ಕಾಲದಿಂದಲೂ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ. ಈ ಸಂಪ್ರದಾಯವನ್ನು ಮುರಿಯುವುದು, ಮುರಿದು ಅಧಿಕಾರ ಕಳೆದುಕೊಳ್ಳುವುದು ಜಸ್ಟಿನ್‌ ಟ್ರುಡೋ ಅವರಿಗೆ ಸುತಾರಾಂ ಇಷ್ಟವಿಲ್ಲ. ಹಾಗಾಗಿಯೇ, ಜೂನ್‌ನಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಗೀಡಾಗಿದ್ದಕ್ಕೆ ಸೆಪ್ಟೆಂಬರ್‌ನಲ್ಲಿ ಭಾರತದ ವಿರುದ್ಧ ಮಾತನಾಡಿದರು. ಭಾರತ ವಿರೋಧಿ ಚಟುವಟಿಕೆ ನಿಯಂತ್ರಿಸಿ ಎಂದಿದ್ದಕ್ಕೇ ಭಾರತದ ರಾಯಭಾರಿಯನ್ನು ವಜಾಗೊಳಿಸಿದರು. ಈಗ ಭಾರತದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನೆನಪಿರಲಿ, 1982ರಲ್ಲಿ ಕೆನಡಾ ಪ್ರಧಾನಿಯಾಗಿದ್ದ ಪಿಯರ್‌ ಟ್ರುಡೋ, ಉಗ್ರ ತಲವಿಂದರ್‌ ಪಾರ್ಮರ್‌ನನ್ನು ಭಾರತಕ್ಕೆ ಹಸ್ತಾಂತರಿಸಲು ಒಪ್ಪಿರಲಿಲ್ಲ.

ಭಾರತ ವಿರುದ್ಧ ಜಸ್ಟಿನ್‌ ಟ್ರುಡೋ ಆರೋಪ

ಇದನ್ನೂ ಓದಿ: India Canada Row: ಕೆನಡಾಗೆ ಭಾರತ ಮತ್ತೊಂದು ಗುದ್ದು; ವೀಸಾ ಸೇವೆಯೇ ರದ್ದು

ಹೇಗಿದೆ ಭಾರತ-ಕೆನಡಾ ಸಂಬಂಧ?

ಕೆನಡಾದಲ್ಲಿ ಭಾರತೀಯ ಮೂಲದ 14 ಲಕ್ಷ ಜನ ವಾಸಿಸುತ್ತಿದ್ದಾರೆ. ಸುಮಾರು 2.26 ಲಕ್ಷ ವಿದ್ಯಾರ್ಥಿಗಳು ಕೆನಡಾದಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ಭಾರತ ಹಾಗೂ ಕೆನಡಾ ಮಧ್ಯೆ 8 ಶತಕೋಟಿಗೂ ಅಧಿಕ ಡಾಲರ್‌ ಮೊತ್ತದ ವ್ಯಾಪಾರ ಇದೆ. ಭಾರತವು 4 ಶತಕೋಟಿ ಡಾಲರ್‌ ಮೊತ್ತದ ಉತ್ಪನ್ನಗಳನ್ನು ಕೆನಡಾಗೆ ರಫ್ತು ಮಾಡುತ್ತದೆ. ಕೆನಡಾ ಭಾರತಕ್ಕೆ 4 ಶತಕೋಟಿ ಡಾಲರ್‌ ಮೊತ್ತದ ಉತ್ಪನ್ನಗಳನ್ನು ರಫ್ತು ಮಾಡುತ್ತದೆ. ಇಷ್ಟಿದ್ದರೂ 2010ಕ್ಕಿಂತ ಮೊದಲಿನಿಂದಲೂ ಭಾರತ ಹಾಗೂ ಕೆನಡಾ ವ್ಯಾಪಾರ ಸಂಬಂಧವು ಅಷ್ಟಕ್ಕಷ್ಟೇ ಇದೆ. 2010ರಿಂದಲೂ ಬೃಹತ್‌ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಮಾತುಕತೆ ನಡೆಸಲಾಗುತ್ತಿದೆ. ಆದರೆ, ಇತ್ತೀಚೆಗೆ ಒಪ್ಪಂದ ಮಾಡಿಕೊಳ್ಳಲು ಎರಡೂ ದೇಶ ಒಪ್ಪಿಕೊಂಡಿದ್ದವು. ಈಗ ಜಸ್ಟಿನ್‌ ಟ್ರುಡೋ ಅವರ ಅಧಿಕಾರದ ದಾಹದಿಂದಾಗಿ ಒಪ್ಪಂದವನ್ನು ಮುಂದೂಡಲಾಗಿದೆ. ಭಾರತ ಕೂಡ ಸರಿಯಾಗಿಯೇ ತಿರುಗೇಟು ನೀಡಿರುವುದರಿಂದ ಶೀಘ್ರದಲ್ಲಿ ಒಪ್ಪಂದ ಮಾಡಿಕೊಳ್ಳುವ ಲಕ್ಷಣಗಳೂ ಕಾಣಿಸುತ್ತಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

EXPLAINER

ಚುನಾವಣೆಯಲ್ಲಿ ಹೆಣ್ಣುಮಕ್ಕಳ ಮತಗಳನ್ನು ಸೆಳೆದ ಬಿಜೆಪಿ; ‘ಕ್ವೀನ್ಸ್’‌ ಕಿಂಗ್‌ಮೇಕರ್ಸ್‌ ಆಗಿದ್ದು ಹೇಗೆ?

ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲು ಚುನಾವಣೆಗೂ ಮುನ್ನ ಘೋಷಿಸಿದ ಮಹಿಳಾ ಕೇಂದ್ರಿತ ಯೋಜನೆಗಳ ಪಾಲು ಕೂಡ ಜಾಸ್ತಿ ಇದೆ. ಇದರಿಂದ ಹೆಣ್ಣುಮಕ್ಕಳು ಬಿಜೆಪಿ ಪರ ವಾಲಲು ಸಾಧ್ಯವಾಯಿತು ಎಂದು ವಿಶ್ಲೇಷಿಸಲಾಗಿದೆ.

VISTARANEWS.COM


on

Narendra Modi With Women
ಸಾಂದರ್ಭಿಕ ಚಿತ್ರ.
Koo

ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ (Assembly Election Results 2023) ಪ್ರಕಟವಾಗಿದ್ದು, ತೆಲಂಗಾಣ ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಭರಪೂರ ಉಚಿತ ಕೊಡುಗೆಗಳ ‘ಗ್ಯಾರಂಟಿ’ ನೀಡಿದ್ದರೂ ಜನ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಬಿಜೆಪಿ ಮೂರೂ ರಾಜ್ಯಗಳಲ್ಲಿ ಗೆಲುವು ಸಾಧಿಸಲು ನಾನಾ ಕಾರಣಗಳಿದ್ದರೂ, ಹೆಣ್ಣುಮಕ್ಕಳ ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿರುವುದು ಪ್ರಮುಖ ಕಾರಣವಾಗಿದೆ. ವಿಶೇಷವಾಗಿ ಗೃಹಿಣಿಯರು ಹೆಚ್ಚಿನ ಪ್ರಮಾಣದಲ್ಲಿ ಬಿಜೆಪಿಗೆ ಮತ ನೀಡಿದ್ದು ಚುನಾವಣೆಯಲ್ಲಿ ಟರ್ನಿಂಗ್‌ ಪಾಯಿಂಟ್‌ ಆಗಿದೆ ಎಂದು ವಿಶ್ಲೇಷಿಸಲಾಗಿದೆ. ಹಾಗಾದರೆ, ಮೂರೂ ರಾಜ್ಯಗಳಲ್ಲಿ ಬಿಜೆಪಿಯು ಹೆಣ್ಣುಮಕ್ಕಳನ್ನು ಸೆಳೆದಿದ್ದು ಹೇಗೆ? ಯಾವ ಯೋಜನೆಗಳು ಸ್ತ್ರೀಯರ ಮತಗಳನ್ನು ವಾಲಿಸಿದವು ಎಂಬುದರ ಕಿರು ಮಾಹಿತಿ ಇಲ್ಲಿದೆ.

ಲಾಡ್ಲಿ ಬೆಹ್ನಾ ಯೋಜನೆ

ಮಧ್ಯಪ್ರದೇಶದಲ್ಲಿ ಬಡ ಹೆಣ್ಣುಮಕ್ಕಳಿಗೆ ಮಾಸಿಕ 1 ಸಾವಿರ ರೂ. ಸಹಾಯ ಧನ ನೀಡುವುದೇ ಲಾಡ್ಲಿ ಬೆಹನಾ ಯೋಜನೆಯಾಗಿದೆ. ಕಾಂಗ್ರೆಸ್‌ ಉಚಿತ ಕೊಡುಗೆಗಳ ಘೋಷಣೆಯನ್ನು ಮೊದಲೇ ಅರಿತಿದ್ದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು 2023ರ ಮಾರ್ಚ್‌ನಲ್ಲಿಯೇ ಲಾಡ್ಲಿ ಬೆಹನಾ ಯೋಜನೆಯನ್ನು ಜಾರಿಗೆ ತಂದರು. ಯೋಜನೆ ಜಾರಿಗೆ ತಂದು, ಬಡ ಹೆಣ್ಣುಮಕ್ಕಳ ಖಾತೆಗಳಿಗೆ ಮಾಸಿಕ 1 ಸಾವಿರ ರೂ. ಜಮೆ ಮಾಡಿಸಿದರು. ಆ ಮೂಲಕ ಸರ್ಕಾರವು ಮಹಿಳೆಯರ ಪರ ಇದೆ ಎಂಬ ಸಂದೇಶ ರವಾನಿಸಿದರು. ಅಲ್ಲದೆ, ಹೆಣ್ಣುಮಕ್ಕಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.35ರಷ್ಟು ಮೀಸಲಾತಿ ಘೋಷಿಸಿದರು. 450 ರೂ.ಗೆ ಅಡುಗೆ ಅನಿಲ ಸಿಲಿಂಡರ್‌ ನೀಡಿದರು. ಇದು ಮಧ್ಯಪ್ರದೇಶದಲ್ಲಿ ಹೆಣ್ಣುಮಕ್ಕಳು ಬಜೆಪಿ ಪರ ವಾಲಲು ಸಾಧ್ಯವಾಯಿತು ಎಂದು ವಿಶ್ಲೇಷಿಸಲಾಗಿದೆ.

Shivraj Singh Chouhan

ರಾಜಸ್ಥಾನದಲ್ಲಿ ಕೈ ಹಿಡಿದ ಭರವಸೆ

ರಾಜಸ್ಥಾನದಲ್ಲಿ ಹೆಣ್ಣುಮಕ್ಕಳ ಸಮಸ್ಯೆಗಳನ್ನು, ಆ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಸರ್ಕಾರ ವಿಫಲವಾಗಿದ್ದನ್ನು ಪ್ರಚಾರದ ಅಸ್ತ್ರವಾಗಿಸಿಕೊಂಡ ಬಿಜೆಪಿಯು, ಚುನಾವಣೆ ಪ್ರಣಾಳಿಕೆಯಲ್ಲಿ ಹಲವು ಭರವಸೆಗಳನ್ನೂ ನೀಡಿತು. ಇದು ಚುನಾವಣೆಯಲ್ಲಿ ಹೆಣ್ಣುಮಕ್ಕಳು ಬಿಜೆಪಿಗೆ ಮತ ಹಾಕಲು ಸಾಧ್ಯವಾಯಿತು. ಪ್ರಣಾಳಿಕೆಯಲ್ಲಿ ಬಿಜೆಪಿಯು, ಹೆಣ್ಣು ಮಕ್ಕಳಿಗಾಗಿ ಲಾಡೋ ಪ್ರೋತ್ಸಾಹ್ ಯೋಜನೆಯನ್ನು ಪರಿಚಯಿಸುವುದಾಗಿ ತಿಳಿಸಿತು. ಇದರ ಅಡಿಯಲ್ಲಿ ಮಧ್ಯಪ್ರದೇಶದ ಲಾಡ್ಲಿ ಲಕ್ಷ್ಮಿ ಯೋಜನೆಯಂತೆಯೇ ಪ್ರತಿ ಹೆಣ್ಣು ಮಗುವಿನ ಹೆಸರಿನಲ್ಲಿ 2 ಲಕ್ಷ ರೂ. ಉಳಿತಾಯ ಬಾಂಡ್ ನೀಡಲಾಗುವುದು ಎಂದು ಹೇಳಿತು.

ಇನ್ನು ಗ್ರಾಮೀಣ ಪ್ರದೇಶದ ಮಹಿಳೆಯರನ್ನು ಸ್ವಾವಲಂಬಿ ಮಾಡುವುದಕ್ಕಾಗಿ ಬಿಜೆಪಿಯು ಸುಮಾರು 6 ಲಕ್ಷ ಮಹಿಳೆಯರಿಗೆ ಲಕಪತಿ ದೀದಿ ಸ್ಕೀಮ್‌ನಲ್ಲಿ ತರಬೇತಿ ಮತ್ತು ಆರ್ಥಿಕ ಬೆಂಬಲ ನೀಡುವುದಾಗಿ ಘೋಷಿಸಿತು. ಅಲ್ಲದೆ, ಉಜ್ವಲಾ ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಮೇಲೆ 450 ರೂ. ಸಬ್ಸಿಡಿ ನೀಡಲಾಗುವುದು. ಮಾತೃ ವಂದನಾ ಯೋಜನೆಯ ಮೊತ್ತವನ್ನು 5000 ರೂ.ನಿಂದ 8000 ರೂ.ವರೆಗೆ ಹೆಚ್ಚಿಸಲಾಗುವುದು ಎಂದು ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದ ಬಿಜೆಪಿಗೆ ವರದಾನವಾಯಿತು. ಕಾಂಗ್ರೆಸ್‌ ಕೂಡ ಇಂತಹ ಉಚಿತ ಕೊಡುಗೆಗಳ ಭರವಸೆ ನೀಡಿದರೂ ಆಡಳಿತ ವಿರೋಧಿ ಅಲೆಯು ಆ ಪಕ್ಷಕ್ಕೆ ಮುಳುವಾಯಿತು.

ಛತ್ತೀಸ್‌ಗಢದಲ್ಲೂ ನಾರಿ ಶಕ್ತಿ ಬಲ

ಕರ್ನಾಟಕದಲ್ಲಿ ಹೆಣ್ಣುಮಕ್ಕಳಿಗೆ ಭರವಸೆ ನೀಡಿ ಕಾಂಗ್ರೆಸ್‌ ಮೇಲುಗೈ ಸಾಧಿಸಿದ್ದನ್ನು ಮನಗಂಡಿದ್ದ ಬಿಜೆಪಿಯು ಛತ್ತೀಸ್‌ಗಢದಲ್ಲೂ ಮಹಿಳಾ ಕೇಂದ್ರಿತವಾಗಿಯೇ ಭರವಸೆಗಳನ್ನು ನೀಡಿತು. ವಿವಾಹಿತ ಮಹಿಳೆಯರಿಗೆ ವರ್ಷಕ್ಕೆ 12 ಸಾವಿರ ರೂ. ಆರ್ಥಿಕ ನೆರವು, ಗ್ಯಾಸ್‌ ಸಬ್ಸಿಡಿ ಸೇರಿ ಹಲವು ಘೋಷಣೆ ಮಾಡಲಾಯಿತು. ಚುನಾವಣೆಯಲ್ಲಿ ಇವುಗಳ ಕುರಿತು ಭಾರಿ ಪ್ರಚಾರ ನಡೆಸಲಾಯಿತು. ಸಾಮಾಜಿಕ ಜಾಲತಾಣಗಳನ್ನೂ ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಯಿತು. ಇದು ಬಿಜೆಪಿಯು ಹೆಣ್ಣುಮಕ್ಕಳ ಮತಗಳನ್ನು ಪಡೆಯುವಲ್ಲಿ, ಆ ಮೂಲಕ ರಾಜ್ಯದಲ್ಲಿ ಪಕ್ಷವು ಅಧಿಕಾರಕ್ಕೆ ಬರುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿತು.

ಇದನ್ನೂ ಓದಿ: ತೆಲಂಗಾಣದಲ್ಲಿ ಹಾಲಿ, ಭಾವಿ ಸಿಎಂಗಳನ್ನೇ ಸೋಲಿಸಿದ ಬಿಜೆಪಿಯ ವೆಂಕಟರಮಣ ರೆಡ್ಡಿ; ಯಾರಿವರು?

ಛತ್ತೀಸ್‌ಗಢದಲ್ಲಿ ಮೋದಿ ಸರ್ಕಾರ ಬುಡಕಟ್ಟು ಸಮುದಾಯದ ಅಭಿವೃದ್ಧಿಗಾಗಿ ತೆಗೆದುಕೊಂಡ ಕ್ರಮಗಳು ಕೂಡ ಅವರ ಒಲವು ಗಳಿಸಲು ನೆರವಾಗಿವೆ. ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿಯೇ (ನ.15ರಂದು) ಪ್ರಧಾನಿ ಮೋದಿ, ʼವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪುಗಳʼ (particularly vulnerable tribal groups – PVTG) ಅಭಿವೃದ್ಧಿಗಾಗಿ ನೂತನ ಕಾರ್ಯಕ್ರಮವೊಂದನ್ನು ಘೋಷಿಸಿದ್ದರು. ಈ ಯೋಜನೆಯು 24,000 ಕೋಟಿ ರೂ. ವೆಚ್ಚದಲ್ಲಿ ಅಂಚಿನಲ್ಲಿರುವ ಬುಡಕಟ್ಟು ಸಮುದಾಯಗಳವರಿಗೆ ತಲುಪುವಂಥ ರಸ್ತೆ, ಟೆಲಿಕಾಂ ಸಂಪರ್ಕ, ಶಿಕ್ಷಣ, ಆರೋಗಹ್ಯ ಸೇವೆ, ಪೌಷ್ಟಿಕತೆಯ ಮತ್ತಿತ ಸೌಲಭ್ಯಗಳನ್ನು ತಲುಪಿಸುವ ಕಾರ್ಯಕ್ರಮವಾಗಿದೆ. ಇದು ಕೂಡ ಚುನಾವಣೆಯಲ್ಲಿ ಮತಗಳನ್ನು ಸೆಳೆಯಲು ಸಾಧ್ಯವಾಯಿತು ಎಂದು ಹೇಳಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

EXPLAINER

Vistara Explainer: ಹುಸಿ ಬೆದರಿಕೆಯ ಇಮೇಲ್‌; ಶಾಲೆಗಳಿಗೆ ಬೇಕು ಉತ್ತಮ ಸುರಕ್ಷಾ ಕ್ರಮಗಳು

Vistara Explainer: ಇತ್ತೀಚಿನ ದಿನಗಳಲ್ಲಿ, ಬೆಂಗಳೂರು ನಗರದಲ್ಲಿ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಹುಸಿ ಇಮೇಲ್‌ಗಳ ಪ್ರಮಾಣ ದಿನೇ ದಿನೇ ಹೆಚ್ಚತೊಡಗಿದೆ. ಈ ಹಿನ್ನಲೆಯಲ್ಲಿ ಯಾವೆಲ್ಲ ಸುರಕ್ಷಿತಾ ಕ್ರಮಗಳನ್ನು ಕೈಗೊಳ್ಳಬಹುದು ಎನ್ನುವುದರ ವಿವರ ಇಲ್ಲಿದೆ.

VISTARANEWS.COM


on

bomb threat
Koo

| ಗಿರೀಶ್ ಲಿಂಗಣ್ಣ, ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕರು

ಗುರುವಾರ, ಡಿಸೆಂಬರ್ 1ರಂದು ಬೆಂಗಳೂರಿನ ವಿವಿಧ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ (Bomb Threat) ಎಂಬ ಹುಸಿ ಇಮೇಲ್ ಬೆದರಿಕೆ ನಗರದಾದ್ಯಂತ ಭಯ, ಆತಂಕಗಳನ್ನು ಉಂಟು ಮಾಡಿತು. ಈ ಇಮೇಲ್ ಅನ್ನು ಐಪಿ ಅಡ್ರೆಸ್ ಬಚ್ಚಿಟ್ಟಿದ್ದ, ಇನ್ನೂ ಗುರುತಿಸಲಾಗಿರದ ವ್ಯಕ್ತಿ ಕಳುಹಿಸಿದ್ದ. ಪೊಲೀಸರು ಈ ಪ್ರಕರಣದ ಹಿಂದೆ ಬಿದ್ದಿದ್ದು, ಸಂದೇಶ ಕಳುಹಿಸಿದ ವ್ಯಕ್ತಿಯನ್ನು ಪತ್ತೆಹಚ್ಚಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ (Vistara Explainer).

ಇತ್ತೀಚಿನ ದಿನಗಳಲ್ಲಿ, ಬೆಂಗಳೂರು ನಗರದಲ್ಲಿ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಹುಸಿ ಇಮೇಲ್‌ಗಳ ಪ್ರಮಾಣ ದಿನೇ ದಿನೇ ಹೆಚ್ಚತೊಡಗಿದೆ. ಈ ದುರುದ್ದೇಶಪೂರಿತ ಸಂದೇಶಗಳು ಹೆತ್ತವರಲ್ಲಿ ಗಂಭೀರ ಚಿಂತೆ ಉಂಟುಮಾಡಿದ್ದು, ಮಕ್ಕಳಲ್ಲಿ ಮತ್ತು ಹಿರಿಯರಲ್ಲಿ ಸಮಾನವಾಗಿ ಭಯ ಮತ್ತು ಆತಂಕಕ್ಕೆ ದಾರಿ ಮಾಡಿವೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಈ ಸಂದೇಶಗಳ ಹಿಂದಿರುವ ಮೂಲ ಮತ್ತು ಅವರ ಉದ್ದೇಶಗಳನ್ನು ಪತ್ತೆಹಚ್ಚಿ, ಶಾಲೆಗಳು ಮತ್ತು ಸಾರ್ವಜನಿಕರ ಸುರಕ್ಷತೆಗೆ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಈ ಅಂಕಣದಲ್ಲಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಇರುವ ಸವಾಲುಗಳು ಮತ್ತು ಈ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಎದುರಿಸುವ ಬಗೆಯನ್ನು ಗಮನಿಸೋಣ.

ಸಂದೇಶದ ಮೂಲ ಪತ್ತೆಹಚ್ಚುವುದು, ಸೈಬರ್ ಭದ್ರತೆ ಹೆಚ್ಚಿಸುವುದು

ಇಂತಹ ಹುಸಿ ಬೆದರಿಕೆ ಒಡ್ಡುವ ಇಮೇಲ್‌ಗಳ ವಿರುದ್ಧ ಹೋರಾಡಲು ಇಡಬೇಕಾದ ಪ್ರಮುಖ ಹೆಜ್ಜೆಯೆಂದರೆ ಸೈಬರ್ ಸೆಕ್ಯುರಿಟಿ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಿ, ಇಮೇಲ್ ಮತ್ತು ಅಂತರ್ಜಾಲ ಸೇವಾ ಪೂರೈಕೆದಾರರ ಮೇಲೆ ಹೆಚ್ಚಿನ ನಿಗಾ ಇಡುವುದು. ಐಪಿ ವಿಳಾಸವನ್ನು ಪತ್ತೆ ಹಚ್ಚುವುದರಿಂದ ಮತ್ತು ದುರುದ್ದೇಶ ಪೂರ್ವಕ ಸಂದೇಶ ಕಳುಹಿಸಿದವರನ್ನು ಪತ್ತೆಹಚ್ಚುವ ಮೂಲಕ ಪೊಲೀಸರು ಈ ಅಪರಾಧಿಗಳನ್ನು ಗುರುತಿಸಿ, ಅವರಿಗೆ ಶಿಕ್ಷೆ ವಿಧಿಸಬಹುದು. ತಂತ್ರಜ್ಞಾನ ತಜ್ಞರು ಮತ್ತು ಗುಪ್ತಚರ ಸಂಸ್ಥೆಗಳೊಡನೆ ಸಹಯೋಗ ಹೊಂದುವ ಮೂಲಕ, ಇಂತಹ ಕುಕೃತ್ಯಗಳನ್ನು ನಡೆಸುವವರನ್ನು ಪತ್ತೆಹಚ್ಚಿ, ಸೆರೆಹಿಡಿಯಲು, ಇದರ ಹಿಂದಿರುವ ಸಂಕೀರ್ಣ ಜಾಲವನ್ನು ಅಸ್ಥಿರಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು.

ಶಾಲೆಗಳು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳೊಡನೆ ಸಮನ್ವಯ ಸಾಧಿಸುವುದು

ಪೊಲೀಸ್ ಇಲಾಖೆ ಶಾಲೆಗಳು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳೊಡನೆ ಉತ್ತಮ ಸಮನ್ವಯ ಸಾಧಿಸಿ, ಇಂತಹ ಸನ್ನಿವೇಶಗಳನ್ನು ಎದುರಿಸಲು ಸೂಕ್ತ ಮಾರ್ಗಸೂಚಿಗಳು ಮತ್ತು ನಿಯಮಾವಳಿಗಳನ್ನು ಸಿದ್ಧಪಡಿಸಬೇಕು. ಶಾಲೆಗಳಲ್ಲೂ ತುರ್ತು ಪ್ರತಿಕ್ರಿಯಾ ತಂಡವನ್ನು ನಿರ್ಮಿಸಿ, ಅವರಿಗೆ ಸಂಭಾವ್ಯ ಹುಸಿ ಬೆದರಿಕೆಯನ್ನು ಗುರುತಿಸುವುದು ಹೇಗೆ ಎಂಬ ತರಬೇತಿ ನೀಡುವುದರಿಂದ, ಸರಿಯಾದ ಸಮಯದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ. ಬರುವ ಇಮೇಲ್‌ಗಳ ಅಧಿಕೃತತೆಯನ್ನು ಗುರುತಿಸುವುದು, ಕಾನೂನು ಜಾರಿ ಸಂಸ್ಥೆಗಳಿಗೆ ವಿವರವನ್ನು ತಲುಪಿಸುವುದು, ಹಾಗೂ ಅಗತ್ಯ ಬಿದ್ದರೆ ಬೆದರಿಕೆ ಇರುವ ಸ್ಥಳವನ್ನು ಜನರಹಿತವನ್ನಾಗಿಸುವ ಕ್ರಮಗಳನ್ನು ಕೈಗೊಳ್ಳುವುದರಿಂದ, ಅಪಾಯದ ಸಾಧ್ಯತೆಗಳನ್ನು ಕಡಿಮೆಗೊಳಿಸಿ, ಮಕ್ಕಳು ಮತ್ತು ಪೋಷಕರಿಗೆ ಧೈರ್ಯ ತುಂಬಲು ಸಾಧ್ಯವಾಗುತ್ತದೆ. ನಿರಂತರವಾಗಿ ಅಣಕು ಕಾರ್ಯಾಚರಣೆಗಳನ್ನು ನಡೆಸುವುದರಿಂದ, ಶಾಲಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳಿಗೆ ತುರ್ತು ಪರಿಸ್ಥಿತಿಯಲ್ಲಿ ಹೇಗೆ ವರ್ತಿಸಬೇಕೆಂಬುದು ಅರಿವಿಗೆ ಬರುತ್ತದೆ.

ಸಾರ್ವಜನಿಕರಲ್ಲಿ ಎಚ್ಚರಿಕೆ, ಅರಿವು ಮೂಡಿಸುವುದು

ಹುಸಿ ಇಮೇಲ್ ಬೆದರಿಕೆಗಳು ಮತ್ತೆ ಮತ್ತೆ ಮರುಕಳಿಸದಂತೆ ಮಾಡಲು ಸಾರ್ವಜನಿಕರಲ್ಲಿ ಈ ಕುರಿತು ಹೆಚ್ಚಿನ ಜಾಗೃತಿ ಮತ್ತು ಅರಿವು ರೂಪಿಸುವ ಅವಶ್ಯಕತೆಯಿದೆ. ಪೊಲೀಸ್ ಇಲಾಖೆ ಮತ್ತು ಶಿಕ್ಷಣ ಸಂಸ್ಥೆಗಳು ಕೈಜೋಡಿಸಿ, ವಿದ್ಯಾರ್ಥಿಗಳಲ್ಲಿ ಇಂತಹ ಕೆಟ್ಟ ಹುಸಿ ಬೆದರಿಕೆಗಳ ಗಂಭೀರತೆಯ ಕುರಿತು ಅರಿವು ಮೂಡಿಸಬೇಕಿದೆ. ಇಂತಹ ಕುಕೃತ್ಯಗಳನ್ನು ನಡೆಸುವುದರಿಂದ, ಅದು ಸಾರ್ವಜನಿಕರ ಮೇಲೆ, ಸಮಾಜದ ಮೇಲೆ ಬೀರುವ ಪರಿಣಾಮಗಳನ್ನು ವಿದ್ಯಾರ್ಥಿಗಳಿಗೆ ಅರ್ಥ ಮಾಡಿಸುವುದರಿಂದ, ಅವರು ಇಂತಹ ಕೃತ್ಯಗಳಲ್ಲಿ ತೊಡಗದಂತೆ ತಡೆಯಬಹುದು. ಜಾಗೃತಿ ಅಭಿಯಾನಗಳನ್ನು ಆಯೋಜಿಸುವುದು, ಕಾರ್ಯಾಗಾರಗಳನ್ನು ನಡೆಸುವುದು, ವಿಚಾರ ಸಂಕಿರಣಗಳನ್ನು ನಡೆಸುವುದರಿಂದ ಈ ಕುರಿತು ಹೆಚ್ಚಿನ ಅರಿವು, ಮಾಹಿತಿ ಮೂಡಿಸಲು ಸಾಧ್ಯವಾಗುತ್ತದೆ.

ಕಾನೂನು ಕ್ರಮಗಳು ಮತ್ತು ಶಿಕ್ಷೆ

ಸಂಭಾವ್ಯ ಅಪರಾಧಿಗಳು ಇಂತಹ ಕೃತ್ಯಗಳನ್ನು ನಡೆಸದಂತೆ ತಡೆಗಟ್ಟುವ ಸಲುವಾಗಿ ಇಂತಹ ಹುಸಿ ಇಮೇಲ್ ಬೆದರಿಕೆಗಳನ್ನು ಹಂಚಿಕೊಳ್ಳುವವರ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸಬೇಕು. ಇಂತಹ ಕೆಲಸಗಳಿಂದ ಸಾರ್ವಜನಿಕರ ಜೀವನಕ್ಕೆ ತೊಂದರೆ ನೀಡಿ, ಜೀವಕ್ಕೆ ಅಪಾಯ ಉಂಟಾಗುವಂತೆ ಮಾಡುವವರಿಗೆ ಕಠಿಣ ದಂಡನೆ ವಿಧಿಸಬೇಕು. ಇಂತಹ ದಂಡನೆಗಳ ಮೂಲಕ, ಕಾನೂನು ಇಲಾಖೆ ಇಂತಹ ಸಮಾಜ ವಿರೋಧಿ ಕೃತ್ಯಗಳಲ್ಲಿ ತೊಡಗುವವರನ್ನು ಭಯಪಡಿಸಿ, ಶಿಕ್ಷಣ ಸಂಸ್ಥೆಗಳ ಪಾವಿತ್ರ್ಯತೆ ರಕ್ಷಿಸಬಹುದು. ಪೊಲೀಸ್ ಇಲಾಖೆ, ಕಾನೂನು ಇಲಾಖೆ, ಮತ್ತು ಈ ಕುರಿತು ಜ್ಞಾನ ಹೊಂದಿರುವವರ ನಡುವೆ ಸಹಯೋಗ ಸಾಧಿಸುವುದರಿಂದ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬಹುದು.

ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಸದ್ಬಳಕೆ

ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯನ್ನು (ಆರ್ಟಿಫಿಶಿಯಲ್ ಇಂಟಲಿಜೆನ್ಸ್ – ಎಐ) ಬಳಸಿಕೊಳ್ಳುವುದು ಇಂತಹ ಹುಸಿ ಬೆದರಿಕೆಗಳ ಸವಾಲು ಎದುರಿಸಲು ನೆರವು ನೀಡಬಲ್ಲದು. ಆಧುನಿಕ ಫಿಲ್ಟರಿಂಗ್ ವ್ಯವಸ್ಥೆಗಳನ್ನು ಅಳವಡಿಸಿ, ಅನುಮಾನಸ್ಪದ ಮಾದರಿಗಳು ಮತ್ತು ಕೀವರ್ಡ್‌ಗಳನ್ನು ಗುರುತಿಸಲು ಸಾಧ್ಯವಾಗುವುದರಿಂದ ಇಂತಹ ಹುಸಿ ಬೆದರಿಕೆಗಳ ಸಂದೇಶ ಹರಡದಂತೆ ತಡೆಯಲು ಸಾಧ್ಯವಾಗುತ್ತದೆ. ಅದರೊಡನೆ, ಮೆಷಿನ್ ಲರ್ನಿಂಗ್ ಆಲ್ಗಾರಿತಂಗಳನ್ನು ಬಳಸುವ ಮೂಲಕ ಹುಸಿ ಬೆದರಿಕೆ ಇಮೇಲ್‌‌ಗಳ ಅಪಾಯವನ್ನು ತಡೆಗಟ್ಟಲು, ಅದು ಮರುಕಳಿಸದಂತೆ ತಡೆಯಲು ಸಾಧ್ಯವಾಗುತ್ತದೆ.

ಸಮುದಾಯದ ಪಾಲ್ಗೊಳ್ಳುವಿಕೆ

ಒಂದು ಉತ್ತಮ, ಸದೃಢ, ಸುರಕ್ಷಿತ ಸಮಾಜವನ್ನು ನಿರ್ಮಿಸಲು ಸಾರ್ವಜನಿಕರ ಸಕ್ರಿಯ ಪಾಲ್ಗೊಳ್ಳುವಿಕೆ ಅತ್ಯಂತ ಮುಖ್ಯವಾಗಿರುತ್ತದೆ. ಇಂತಹ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಅಥವಾ ಇಮೇಲ್‌ಗಳನ್ನು ಗುರುತಿಸಿ, ಪೊಲೀಸರಿಗೆ ವರದಿ ಮಾಡುವಂತೆ ಉತ್ತೇಜಿಸುವುದರಿಂದ ಇಂತಹ ಸನ್ನಿವೇಶಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ. ನಮ್ಮ ನೆರೆಹೊರೆಯನ್ನು ಗಮನಿಸುವಂತಹ ಸಾರ್ವಜನಿಕ ಕಾರ್ಯಕ್ರಮಗಳನ್ನು ರೂಪಿಸುವುದರಿಂದ, ಒಟ್ಟಾರೆ ಸಮಾಜದ ಎಲ್ಲ ಸಾರ್ವಜನಿಕರಲ್ಲೂ ಜವಾಬ್ದಾರಿಯ ಭಾವನೆ ಹೆಚ್ಚಿಸಿ, ಸಂಭಾವ್ಯ ಅಪಾಯಗಳನ್ನು ಗುರುತಿಸುವಂತೆ ಮಾಡಬಹುದು. ಸಾರ್ವಜನಿಕರು ಮತ್ತು ಪೊಲೀಸರು ಪರಸ್ಪರ ಸಹಕಾರ ನೀಡಿದರೆ, ಇಂತಹ ಹುಸಿ ಬೆದರಿಕೆ ಇಮೇಲ್‌ಗಳು ಹರಡುವುದನ್ನು ಸಂಪೂರ್ಣವಾಗಿ ನಿಲ್ಲಿಸಬಹುದು.

ದುರದೃಷ್ಟವಶಾತ್, ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆಯ ಹುಸಿ ಇಮೇಲ್‌ಗಳು ದಿನೇ ದಿನೇ ಹೆಚ್ಚುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ಇದನ್ನು ತಡೆಗಟ್ಟಲು ಪೊಲೀಸರು ಮತ್ತು ಸಂಬಂಧಪಟ್ಟ ಇಲಾಖೆ ಕ್ಷಿಪ್ರ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ. ಸೈಬರ್ ಸುರಕ್ಷತಾ ಕ್ರಮಗಳಿಗೆ ಆದ್ಯತೆ ನೀಡಿ, ಶಾಲೆಗಳೊಡನೆ ಸಮನ್ವಯ ಸಾಧಿಸಿ, ಜನರಲ್ಲಿ ಜಾಗೃತಿ ಮೂಡಿಸಿ, ಕಠಿಣ ದಂಡಗಳನ್ನು ವಿಧಿಸಿ, ಮತ್ತು ನೂತನ ತಂತ್ರಜ್ಞಾನಗಳನ್ನು ಸಮರ್ಪಕವಾಗಿ ಬಳಕೆಗೆ ತರುವುದರಿಂದ ಅಧಿಕಾರಿಗಳು ಈ ಸಮಸ್ಯೆಯನ್ನು ಕೊನೆಗೊಳಿಸಬಹುದು. ಪೋಷಕರು ಮತ್ತು ಮಕ್ಕಳು ಎದುರಿಸುವ ಒತ್ತಡ, ಆತಂಕಗಳನ್ನು ನಿವಾರಿಸುವ ನಿಟ್ಟಿನಲ್ಲಿ, ಶಿಕ್ಷಣ ಸಂಸ್ಥೆಗಳಲ್ಲಿ ಸುರಕ್ಷಿತ ಮತ್ತು ಭದ್ರತೆಯ ವಾತಾವರಣ ಮೂಡಿಸುವುದು ಅತ್ಯಂತ ಮುಖ್ಯವಾಗಿದೆ. ಜನರೆಲ್ಲ ಜವಾಬ್ದಾರಿಯುತವಾಗಿ, ಒಗ್ಗಟ್ಟಿನಿಂದ ಕಾರ್ಯಾಚರಿಸಿದರಷ್ಟೇ ನಾವು ನಮ್ಮ ಶಿಕ್ಷಣ ಸಂಸ್ಥೆಗಳನ್ನು, ಸಮಾಜವನ್ನು ಇಂತಹ ಹುಸಿ ಬೆದರಿಕೆಗಳ ದಾಳಿಯಿಂದ ರಕ್ಷಿಸಿಕೊಳ್ಳಲು ಸಾಧ್ಯ.

ಇದನ್ನೂ ಓದಿ: Bomb Threat : 48 ಶಾಲೆಗಳಿಗೆ ಬಂದ ಬೆದರಿಕೆ EMail ಮೂಲ ಪತ್ತೆ, ಏನಿದು ಜರ್ಮನಿ ಕನೆಕ್ಷನ್?‌

Continue Reading

EXPLAINER

ಮತಗಟ್ಟೆ ಸಮೀಕ್ಷೆ; ಇದಕ್ಕೂ ಮೊದಲಿನ ಸಮೀಕ್ಷೆಗಳು ಏನು ಹೇಳಿದ್ದವು? ಫಲಿತಾಂಶ ಏನಾಗಿತ್ತು?

Exit Poll Results 2023: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮುಕ್ತಾಯಗೊಂಡಿದ್ದು, ಮತಗಟ್ಟೆ ಸಮೀಕ್ಷೆಗಳ ಕುರಿತ ಚರ್ಚೆ ಜೋರಾಗಿದೆ. ಇದಕ್ಕೂ ಮೊದಲಿನ ಚುನಾವಣೆಯಲ್ಲಿ ಮತಗಟ್ಟೆ ಸಮೀಕ್ಷೆ ಏನು ಹೇಳಿದ್ದವು, ಫಲಿತಾಂಶ ಏನಾಗಿತ್ತು ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Exit Poll Results 2023
Koo

ನವದೆಹಲಿ: 2024ರಲ್ಲಿ ನಡೆಯುವ ಲೋಕಸಭೆ ಚುನಾವಣೆಯ (Lok Sabha Election 2023) ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮುಕ್ತಾಯಗೊಂಡಿದೆ. ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ಹಾಗೂ ಮಿಜೋರಾಂನಲ್ಲಿ ಚುನಾವಣೆ ಮುಗಿಯುತ್ತಲೇ ಮತಗಟ್ಟೆ ಸಮೀಕ್ಷಾ ವರದಿಗಳು (Exit Polls Result 2023) ಲಭ್ಯವಾಗಿವೆ. ಮತಗಟ್ಟೆ ಸಮೀಕ್ಷೆಗಳ ಕುರಿತು ಚರ್ಚೆಯೂ ಜೋರಾಗಿ ನಡೆಯುತ್ತಿದೆ. ಹಾಗಾದರೆ, ಇದಕ್ಕೂ ಮೊದಲು ನಡೆದ ಪ್ರಮುಖ ಚುನಾವಣೆಗಳಲ್ಲಿ ಮತಗಟ್ಟೆ ಸಮೀಕ್ಷೆ ಏನು ಹೇಳಿದ್ದವು? ಮತಗಟ್ಟೆ ಸಮೀಕ್ಷೆಗೂ, ಚುನಾವಣೆ ಫಲಿತಾಂಶಕ್ಕೂ ಏನು ವ್ಯತ್ಯಾಸವಾಗಿತ್ತು ಎಂಬುದರ ಕಿರು ಮಾಹಿತಿ ಇಲ್ಲಿದೆ.

2019ರ ಲೋಕಸಭೆ ಚುನಾವಣೆ

ದೇಶವೇ ಕುತೂಹಲದಿಂದ ಎದುರು ನೋಡುತ್ತಿದ್ದ 2019ರ ಲೋಕಸಭೆ ಚುನಾವಣೆ ಬಳಿಕ ಬಹಿರಂಗವಾಗಿದ್ದ ಮತಗಟ್ಟೆ ಸಮೀಕ್ಷೆಗಳು ಬಹುತೇಕ ನಿಜವಾಗಿದ್ದವು. ಟೈಮ್ಸ್‌ ನೌ, ಚಾಣಕ್ಯ, ಇಂಡಿಯಾ ಟುಡೇ, ನ್ಯೂಸ್‌ 18 ಹಾಗೂ ಜನ್‌ ಕೀ ಬಾತ್‌ ಸಮೀಕ್ಷೆಗಳ ಪ್ರಕಾರ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 300ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತದೆ ಎಂದು ತಿಳಿಸಿದ್ದವು. ಯಾವೊಂದು ಸಮೀಕ್ಷೆಯೂ ಕಾಂಗ್ರೆಸ್‌ ಗೆಲುವು ಸಾಧಿಸುತ್ತದೆ ಎಂದು ತಿಳಿಸಿರಲಿಲ್ಲ.

ಚುನಾವಣೆ ಫಲಿತಾಂಶ ಪ್ರಕಟವಾದಾಗ ಎನ್‌ಡಿಎ 353 (ಬಿಜೆಪಿ 303) ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತು. ಇನ್ನು ಕಾಂಗ್ರೆಸ್‌ 52 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿತು. ಕಾಂಗ್ರೆಸ್‌ ಸರಾಸರಿ 100-120 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂದು ಬಹುತೇಕ ಸಮೀಕ್ಷೆಗಳು ತಿಳಿಸಿದ್ದವು. ಆದರೆ, ಸಮೀಕ್ಷಾ ವರದಿ ತಿಳಿಸಿದ ಅರ್ಧದಷ್ಟು ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್‌ ಜಯಿಸಿತ್ತು.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ 2022

2022ರಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ವಿಧಾನಸಭೆ ಚುನಾವಣೆ ಬಳಿಕ ಸಮೀಕ್ಷಾ ವರದಿಗಳ ಅಂದಾಜೇ ನಿಜವಾಗಿತ್ತು. ಬಹುತೇಕ ಸಮೀಕ್ಷೆಗಳು ಬಿಜೆಪಿಯೇ ರಾಜ್ಯದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರಲಿದೆ ಎಂದು ತಿಳಿಸಿದ್ದವು. ಬಿಜೆಪಿ 288-326 ಕ್ಷೇತ್ರ, ಎಸ್‌ಪಿ 71-101, ಕಾಂಗ್ರೆಸ್‌ 1-3 ಕ್ಷೇತ್ರಗಳಲ್ಲಿ ಎಂದು ಇಂಡಿಯಾ ಟುಡೇ, ಬಿಜೆಪಿ 225, ಎಸ್‌ಪಿ 151, ಕಾಂಗ್ರೆಸ್‌ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಟೈಮ್ಸ್‌ ನೌ ಮತಗಟ್ಟೆ ಸಮೀಕ್ಷೆ ತಿಳಿಸಿತ್ತು. ಬಹುತೇಕ ಸಮೀಕ್ಷೆಗಳು ಇದನ್ನೇ ನುಡಿದಿದ್ದವು.

ಉತ್ತರ ಪ್ರದೇಶದಲ್ಲಿ ಚುನಾವಣೆ ಫಲಿತಾಂಶ ಪ್ರಕಟವಾದಾಗ ಬಿಜೆಪಿ 255 ಕ್ಷೇತ್ರಗಳಲ್ಲಿ, ಸಮಾಜವಾದಿ ಪಕ್ಷ 111, ಕಾಂಗ್ರೆಸ್‌ 2, ಬಿಎಸ್‌ಪಿ 1 ಹಾಗೂ ಸ್ವತಂತ್ರ ಅಭ್ಯರ್ಥಿಗಳು 34 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು. ಇದರೊಂದಿಗೆ ಯೋಗಿ ಆದಿತ್ಯನಾಥ್‌ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಆಯ್ಕೆಯಾದರು.

ಪಂಜಾಬ್‌ ವಿಧಾನಸಭೆ ಚುನಾವಣೆ 2022

2022ರಲ್ಲಿ ವಿಧಾನಸಭೆ ಚುನಾವಣೆ ಬಳಿಕ ಮತಗಟ್ಟೆ ಸಮೀಕ್ಷೆಗಳ ವರದಿಯು ಭಾಗಶಃ ನಿಜವಾಗಿತ್ತು. ಇಂಡಿಯಾ ಟುಡೇ-ಆ್ಯಕ್ಸಿಸ್‌ ಮೈ ಇಂಡಿಯಾ ಮತಗಟ್ಟೆ ಸಮೀಕ್ಷೆಯು ಆಮ್‌ ಆದ್ಮಿ ಪಕ್ಷ 76-90 ಸೀಟು ಗೆಲ್ಲಲಿದೆ ಎಂದು ತಿಳಿಸಿತ್ತು. ಆಪ್‌ 62-70, ಕಾಂಗ್ರೆಸ್‌ 21-31, ಅಕಾಲಿ ದಳ 16-24 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ರಿಪಬ್ಲಿಕ್-‌ಪಿ ಮಾರ್ಕ್‌ ಮತಗಟ್ಟೆ ಸಮೀಕ್ಷೆ ತಿಳಿಸಿತ್ತು.

ಪಂಜಾಬ್‌ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದಾಗ ಆಮ್‌ ಆದ್ಮಿ ಪಕ್ಷವು ನಿರೀಕ್ಷೆಗೂ ಮೀರಿ ಗೆಲುವು ಸಾಧಿಸಿತ್ತು. ಒಟ್ಟು 117 ಕ್ಷೇತ್ರಗಳ ಪೈಕಿ 92 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್‌ 18 ಕ್ಷೇತ್ರಗಳಲ್ಲಿ ಹಾಗೂ ಭಾರಿ ಪ್ರಯೋಗಕ್ಕೆ ಮುಂದಾಗಿದ್ದ ಬಿಜೆಪಿ ಕೇವಲ 2 ಕ್ಷೇತ್ರಗಳಲ್ಲಿ ಜಯಿಸಿತ್ತು.

ಗುಜರಾತ್‌ ವಿಧಾನಸಭೆ ಚುನಾವಣೆ 2022

ದೇಶದ ಗಮನ ಸೆಳೆದಿದ್ದ 2022ರ ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲೂ ಮತಗಟ್ಟೆ ಸಮೀಕ್ಷೆಗಳ ವರದಿಗಳೇ ನಿಜವಾಗಿದ್ದವು. ಟೈಮ್ಸ್‌ ನೌ-ಇಟಿಜಿಯು ಬಿಜೆಪಿ 131, ಕಾಂಗ್ರೆಸ್‌ 41 ಹಾಗೂ ಆಪ್‌ 6 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂದು ಹೇಳಿತ್ತು. ಸಿ ವೋಟರ್‌ ಕೂಡ ಬಿಜೆಪಿ 134, ಕಾಂಗ್ರೆಸ್‌ 37 ಹಾಗೂ ಆಪ್‌ 7 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿತ್ತು. ಇನ್ನು ಗುಜರಾತ್‌ನಲ್ಲಿ ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಂತೆ ಬಿಜೆಪಿ 156 ಕ್ಷೇತ್ರ, ಆಪ್‌ 5 ಹಾಗೂ ಕಾಂಗ್ರೆಸ್‌ 17 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ, ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆ ಹಿಡಿದಿತ್ತು.

ಕರ್ನಾಟಕ ವಿಧಾನಸಭೆ ಚುನಾವಣೆ 2023

ದೇಶದ ಗಮನ ಸೆಳೆದಿದ್ದ ಕರ್ನಾಟಕ ವಿಧಾನಸಭೆ ಚುನಾವಣೆ ಬಳಿಕ ಪ್ರಕಟವಾದ ಮತಗಟ್ಟೆ ಸಮೀಕ್ಷೆ ವರದಿಗಳನ್ನು ಮೀರಿ ಫಲಿತಾಂಶ ಪ್ರಕಟವಾಗಿತ್ತು. ಕಾಂಗ್ರೆಸ್‌ ಮುನ್ನಡೆ ಸಾಧಿಸಿದರೂ ಸುಲಭವಾಗಿ ಬಹುಮತ ಸಿಗುವುದಿಲ್ಲ ಎಂದೇ ಬಹುತೇಕ ಸಮೀಕ್ಷೆಗಳು ತಿಳಿಸಿದ್ದವು. ಬಿಜೆಪಿಯು 83-95, ಕಾಂಗ್ರೆಸ್‌ 100-112, ಜೆಡಿಎಸ್‌ 21-29 ಹಾಗೂ ಪಕ್ಷೇತರರು 02-06 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಟಿವಿ 9 ಸಿ ವೋಟರ್‌ ಸಮೀಕ್ಷೆ ತಿಳಿಸಿತ್ತು. ಬಿಜೆಪಿಯು 94-117, ಕಾಂಗ್ರೆಸ್‌ 91-106, ಜೆಡಿಎಸ್‌ 14-24 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಜನ್‌ ಕೀ ಬಾತ್‌ ಸಮೀಕ್ಷೆ ತಿಳಿಸಿತ್ತು.

ಇದನ್ನೂ ಓದಿ: Assembly Elections: ‘ಉಚಿತ ಗ್ಯಾರಂಟಿ’ಗಿಂತ 4 ರಾಜ್ಯಗಳ ಚುನಾವಣೆಯಲ್ಲಿ ಜಾತಿ ಮತಗಳೇ ನಿರ್ಣಾಯಕ!

ಚುನಾವಣೆ ಫಲಿತಾಂಶವು ಬಿಜೆಪಿ, ಜೆಡಿಎಸ್‌ ಬಿಡಿ, ಖುದ್ದು ಕಾಂಗ್ರೆಸ್‌ಗೇ ಅಚ್ಚರಿ ಮೂಡಿಸಿತ್ತು. ಕಾಂಗ್ರೆಸ್‌ ನಿರೀಕ್ಷೆಗೂ ಮೀರಿ ಕಾಂಗ್ರೆಸ್‌ 135 ಸ್ಥಾನಗಳನ್ನು ಗೆದ್ದರೆ, ಬಿಜೆಪಿ ಕೇವಲ 66 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿತ್ತು. ಜೆಡಿಎಸ್‌ ಕೇವಲ 19 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿತ್ತು. ಮತಗಟ್ಟೆ ಸಮೀಕ್ಷೆಯ ಅಂದಾಜನ್ನೂ ಮೀರಿ ಫಲಿತಾಂಶ ಪ್ರಕಟವಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

EXPLAINER

150 ಮೀಟರ್‌ ಸುರಂಗ ಕುಸಿತ, 57 ಮೀಟರ್‌ ಕೊರೆತ! 41 ಕಾರ್ಮಿಕರನ್ನು ರಕ್ಷಿಸಿದ್ದು ಹೇಗೆ?

12 ದಿನಗಳವರೆಗೆ ಸತತವಾಗಿ ಕಾರ್ಯಾಚರಣೆ ನಡೆಸಿ ಸುರಂಗದಲ್ಲಿ ಸಿಲುಕಿದ 41 ಕಾರ್ಮಿಕರನ್ನು ರಕ್ಷಿಸಲಾಗಿದೆ. ಹಾಗಾದರೆ, ಇದುವರೆಗೆ ನಡೆದ ಕಾರ್ಯಾಚರಣೆ ಹೇಗಿತ್ತು? ಯಾವ ಸವಾಲುಗಳು ಎದುರಾದವು? ಆದರೂ ಮುನ್ನಡೆ ಸಾಧಿಸಿದ್ದು ಹೇಗೆ ಎಂಬುದರ ಕಿರು ಮಾಹಿತಿ ಇಲ್ಲಿದೆ.

VISTARANEWS.COM


on

Uttarakhand Tunnel Collapse
Koo

ಡೆಹ್ರಾಡೂನ್:‌ ‌ಉತ್ತರಾಖಂಡದ ಉತ್ತರಕಾಶಿ (Uttarkashi Tunnel Collapse)ಜಿಲ್ಲೆಯಲ್ಲಿ ಸುರಂಗ ಕುಸಿದು ಅಪಾಯಕ್ಕೆ ಸಿಲುಕಿದ್ದ 41 ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ(Uttarkashi Tunnel Rescue). ನವೆಂಬರ್‌ 12ರಂದೇ ಸುರಂಗ ಕುಸಿದಿದ್ದು, ಸತತವಾಗಿ 17 ದಿನ ಕಾರ್ಯಾಚರಣೆ (Rescue Operation) ಕೈಗೊಂಡು ಜನರನ್ನು ರಕ್ಷಣೆ ಮಾಡಲಾಗಿದೆ. ಹಾಗಂತ ಈ 17 ದಿನಗಳ ರಕ್ಷಣಾ ಕಾರ್ಯಾಚರಣೆಯು ಸುಲಭವಾಗಿರಲಿಲ್ಲ. ಭೂಕುಸಿತ, ರಕ್ಷಣೆಗೆ ಬಳಸಿದ ಪೈಪ್‌ಗಳು ಕತ್ತರಿಸುವುದು ಸೇರಿ ಹಲವು ಸವಾಲುಗಳು ಎದುರಾದವು. ಹಾಗಾದರೆ, 17 ದಿನಗಳ ಕಾರ್ಯಾಚರಣೆ ಹೇಗಿತ್ತು? ಇಲ್ಲಿದೆ ಮಾಹಿತಿ.

ಇಲಿ ಬಿಲ ಗಣಿಗಾರಿಕೆ ತಂತ್ರದಿಂದಲೇ ಸಕ್ಸೆಸ್

56 ಮೀಟರ್ ಉದ್ದ ಅವಶೇಷಗಳ ನಡುವೆ ಡ್ರಿಲಿಂಗ್ ಮಾಡಲು ಆಗರ್ ಯಂತ್ರ ಪ್ರಯತ್ನಿಸಿದು. ಆದರೆ, ಇನ್ನು 20 ಮೀಟರ್ ಬಾಕಿ ಇದೆ ಎನ್ನುವಾಗಲೇ ಆ ಡ್ರಿಲಿಂಗ್ ಯಂತ್ರ ಕೈಕೊಟ್ಟಿತು. ಆಗ ರಕ್ಷಣಾ ಸಂಸ್ಥೆಗಳು ರೂಪಿಸಿದ್ದೇ ‘ರ‍್ಯಾಟ್‌ ಹೋಲ್’‌ ಮೈನಿಂಗ್‌. ಅಂತಿಮವಾಗಿ ಇಲಿ ಬಿಲ ಮೈನಿಂಗ್ ತಂತ್ರದ ಮೂಲಕವೇ ಸಿಲುಕಿದ್ದ ಕಾರ್ಮಿಕರನ್ನು ತಲುಪಲು ಸಾಧ್ಯವಾಯಿತು ಮತ್ತು ಮಂಗಳವಾರ 8 ಗಂಟೆ ಹೊತ್ತಿಗೆ ಎಲ್ಲ 41 ಕಾರ್ಮಿಕರನ್ನು ರಕ್ಷಣೆ ಮಾಡಲು ಸಾಧ್ಯವಾಯಿತು.

ರ‍್ಯಾಟ್‌ ಹೋಲ್‌ ಮೈನಿಂಗ್‌ ಎಂದರೆ, ಇಲಿಯಂತೆಯೇ ಚಿಕ್ಕದಾದ ರಂಧ್ರಗಳನ್ನು ಕೊರೆಯುವುದು. ಮನುಷ್ಯರು ಸುಲಭವಾಗಿ ಆ ರಂಧ್ರದಿಂದ ಹೊರಬರಲು ಈ ರೀತಿಯ ರಂಧ್ರಗಳನ್ನು ಕೊರೆಯುತ್ತಾರೆ. ಉತ್ತರಕಾಶಿ ಸುರಂಗದಲ್ಲಿ ಯಂತ್ರಗಳಿಂದಲೂ ಕೊರೆಯಲು ಸಾಧ್ಯವಾಗದ ಕಾರಣ ಈ ಪ್ಲಾನ್‌ ರೂಪಿಸಿ ಯಶಸ್ಸು ಕಾಣಲಾಗಿದೆ. ಇದಕ್ಕೂ ಮೊದಲು ಲಂಬವಾಗಿ 86 ಮೀಟರ್‌ ಕೊರೆಯುವ ಪ್ಲ್ಯಾನ್ ಕೂಡ ಜಾರಿ ಮಾಡಲಾಗಿತ್ತು. ಅಲ್ಲದೇ ಲಂಬವಾಗಿ 36 ಮೀಟರ್‌ ಕೂಡ ಕೊರೆಯಲಾಗಿತ್ತು. ಬಳಿಕ ರ‍್ಯಾಟ್‌ ಹೋಲ್‌ ಮೈನಿಂಗ್‌ ತಂತ್ರದ ಮೂಲಕ ಕೊರೆಯುವ ಕೆಲಸ ಆರಂಭಿಸಲಾಯಿತು. ಅಂತಿಮವಾಗಿ ಮಂಗಳವಾರ ಸಕ್ಸೆಸ್ ದೊರೆಯಿತು.

57 ಮೀಟರ್‌ ಸುರಂಗ ಕೊರೆತ

41 ಕಾರ್ಮಿಕರನ್ನು ಸುರಂಗದಿಂದ ರಕ್ಷಿಸಲು 17 ದಿನಗಳಲ್ಲಿ 57 ಮೀಟರ್‌ ಸುರಂಗವನ್ನು ಕೊರೆಯಲಾಗಿದೆ. ಜೆಸಿಬಿ, ಅತ್ಯಾಧುನಿಕ ಡ್ರಿಲ್ಲಿಂಗ್‌ ಯಂತ್ರಗಳು, ನುರಿತ ಸಿಬ್ಬಂದಿಯು ಇಷ್ಟು ಮೀಟರ್‌ ಸುರಂಗ ಕೊರೆದು, ಅದರ ಅವಶೇಷಗಳನ್ನು ಹೊರಗೆ ಹಾಕಿ, ಕೊನೆಗೂ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಸುಮಾರು 150 ಮೀಟರ್‌ ಸುರಂಗ ಕುಸಿದಿತ್ತು. ಇಷ್ಟೂ ಮೀಟರ್‌ ಸುರಂಗ ಕೊರೆಯಲು ಸಾಧ್ಯವಾಗದ ಕಾರಣ ಉಪಾಯ ಮಾಡಿ, ಕೇವಲ 57 ಮೀಟರ್‌ ಸುರಂಗವನ್ನಷ್ಟೇ ಕೊರೆದು ಜನರನ್ನು ರಕ್ಷಣೆ ಮಾಡಲಾಗಿದೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ ಏಜೆನ್ಸಿಗಳು

ಸುರಂಗದಲ್ಲಿ ಡ್ರಿಲ್ಲಿಂಗ್‌, ವರ್ಟಿಕಲ್‌ ಡ್ರಿಲ್ಲಿಂಗ್‌ ಸೇರಿ ಹಲವು ರೀತಿಯಲ್ಲಿ ಕಾರ್ಯಾಚರಣೆ ನಡೆಸಲು ದೇಶದ ಐದು ಏಜೆನ್ಸಿಗಳು ಭಾಗಿಯಾದವು. ಆಯಿಲ್‌ ಆ್ಯಂಡ್‌ ನ್ಯಾಚುರಲ್‌ ಗ್ಯಾಸ್‌ ಕಾರ್ಪೊರೇಷನ್‌ (ONGC), ಸತ್ಲುಜ್‌ ಜಲ ವಿದ್ಯುತ್‌ ನಿಗಮ (SJVNL), ರೈಲ್‌ ವಿಕಾಸ ನಿಗಮ ಲಿಮಿಟೆಡ್‌ (RVNL), ನ್ಯಾಷನಲ್‌ ಹೈವೇಸ್‌ ಆ್ಯಂಡ್‌ ಇನ್‌ಫ್ರಾಸ್ಟ್ರಕ್ಚರ್‌ ಡೆವಲಪ್‌ಮೆಂಟ್‌ ಕಾರ್ಪೊರೇಷನ್‌ ಲಿಮಿಟೆಡ್‌ (NHIDCL) ಹಾಗೂ ಟೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೊರೇಷನ್‌ ಲಿಮಿಟೆಡ್‌ (THDCL) ಏಜೆನ್ಸಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸಿದವು.

ವಿದೇಶಿ ತಜ್ಞರ ಎಂಟ್ರಿ

ಭೂಕುಸಿತ, ಅವಶೇಷಗಳ ಪ್ರಮಾಣ ಜಾಸ್ತಿ ಇರುವುದು ಸೇರಿ ಹಲವು ಸವಾಲುಗಳು ಎದುರಾದ ಕಾರಣ ವಿದೇಶಿ ತಜ್ಞರನ್ನು ಕರೆಸಲಾಯಿತು. ಇಂಟರ್‌ನ್ಯಾಷನಲ್‌ ಟನೆಲಿಂಗ್‌ ಅಂಡರ್‌ಗ್ರೌಂಡ್‌ ಸ್ಪೇಸ್‌ ಪ್ರೊಫೆಸರ್‌ ಸಂಸ್ಥೆಯ ಅಧ್ಯಕ್ಷ ಅರ್ನಾಲ್ಡ್‌ ಡಿಕ್ಸ್‌ ಅವರ ತಂಡವು ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಿತು. ಇನ್ನು ಅಮೆರಿಕದಲ್ಲಿ ತಯಾರಾದ ಯಂತ್ರಗಳು, ಡ್ರಿಲ್ಲಿಂಗ್‌ ಮಷೀನ್‌ಗಳು, ಪುಶ್‌ ಇನ್‌ ಪೈಪ್‌ಗಳು ಸೇರಿ ಹಲವು ಅತ್ಯಾಧುನಿಕ ಉಪಕರಣಗಳನ್ನು ಬಳಸಲಾಯಿತು.

ಕಾರ್ಯಾಚರಣೆಗೆ ಮುನ್ನಡೆ ಸಿಕ್ಕಿದ್ದು ಎಲ್ಲಿ?

ಸುರಂಗ ಕುಸಿಯುತ್ತಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿ, ಕಾರ್ಮಿಕರು ಯಾವ ಜಾಗದಲ್ಲಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ, ಪೈಪ್‌ ಮೂಲಕ ಅವರನ್ನು ಸಂಪರ್ಕಿಸಿದ್ದೇ ಕಾರ್ಯಾಚರಣೆಗೆ ಸಿಕ್ಕ ಬಹುದೊಡ್ಡ ಮುನ್ನಡೆ ಎಂದು ತಿಳಿದುಬಂದಿದೆ. ಕ್ಷಿಪ್ರವಾಗಿ ಕಾರ್ಮಿಕರಿದ್ದ ಸ್ಥಳವನ್ನು ಗುರುತಿಸಿದ್ದು, ಅವರ ಜತೆ ಸಂಪರ್ಕ ಸಾಧಿಸಿದ ಕಾರಣ ಅವರಿಗೆ ಆಹಾರ ಸೇರಿ ಅಗತ್ಯ ಮೂಲ ಸೌಕರ್ಯಗಳನ್ನು ನೀಡಲು ಸಾಧ್ಯವಾಯಿತು. ಅವರಿಗೆ ಧೈರ್ಯ ತುಂಬಿ, ಯೋಗ ಮಾಡಲು ಸಲಹೆ ಕೊಟ್ಟು, ಒತ್ತಡ ನಿರೋಧಕ ಮಾತ್ರೆಗಳನ್ನು ಪೂರೈಸಿ 12 ದಿನವೂ ಅವರು ಯಾವುದೇ ಒತ್ತಡಕ್ಕೆ ಸಿಲುಕದಂತೆ ನೋಡಿಕೊಳ್ಳಲಾಯಿತು. ಇದು ಕಾರ್ಯಾಚರಣೆಗೆ ಸಿಕ್ಕ ಬಹುದೊಡ್ಡ ಮುನ್ನಡೆ ಎನ್ನಲಾಗಿದೆ.

ಉತ್ತರಕಾಶಿ ಜಿಲ್ಲೆಯ ಸಿಲ್‌ಕ್ಯಾರ ಹಾಗೂ ದಂಡಲ್‌ಗಾಂವ್‌ಗೆ ಸಂಪರ್ಕ ಕಲ್ಪಿಸಲು ಚಾರ್‌ ಧಾಮ್‌ ರಸ್ತೆ ಯೋಜನೆ ಅಡಿಯಲ್ಲಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದೆ. ಸುಮಾರು 4.5 ಕಿಲೋ ಮೀಟರ್‌ ದೂರದ ಸುರಂಗ ನಿರ್ಮಾಣದ ವೇಳೆ ಸುಮಾರು 150 ಮೀಟರ್‌ ಉದ್ದದ ಸುರಂಗ ಕುಸಿದಿತ್ತು. ನವೆಂಬರ್‌ 12ರಂದು ಜಾವ 4 ಗಂಟೆ ಸುಮಾರಿಗೆ ಸುರಂಗ ಕುಸಿದಿದ್ದು, ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿತ್ತು. ಇಷ್ಟಾದರೂ ಕ್ಷಿಪ್ರವಾಗಿ ಕಾರ್ಮಿಕರನ್ನು ರಕ್ಷಣೆ ಮಾಡಲು ಆಗಿರಲಿಲ್ಲ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಬೃಹತ್ ಕಾಮಗಾರಿ ವೇಳೆ ಕಾರ್ಮಿಕರ ಸುರಕ್ಷತೆ ಖಾತರಿಪಡಿಸಿ

ಉತ್ತರಕಾಶಿಯಿಂದ ಯಮುನೋತ್ರಿಗೆ 26 ಕಿಲೋಮೀಟರ್‌ ಸಂಚರಿಸುವುದನ್ನು ಕಡಿಮೆಗೊಳಿಸಲು ಸುರಂಗ ನಿರ್ಮಿಸಲಾಗುತ್ತಿದೆ. ಸುರಂಗ ಕುಸಿಯುತ್ತಲೇ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರು ಒಳಗೆ ಸಿಲುಕಿದ್ದರು. ಏಕಾಏಕಿ ಸುರಂಗ ಕುಸಿದ ಕಾರಣ ಒಬ್ಬ ಕಾರ್ಮಿಕರೂ ಹೊರಗೆ ಬರಲು ಸಾಧ್ಯವಾಗಿರಲಿಲ್ಲ. ಉತ್ತರಾಖಂಡ ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ. ಭೂಕುಸಿತ, ಡ್ರಿಲ್ಲಿಂಗ್‌ ಯಂತ್ರಗಳು ಕೈಕೊಟ್ಟಿರುವುದು ಸೇರಿ ಹಲವು ಕಾರಣಗಳಿಂದಾಗಿ ಕಾರ್ಮಿಕರ ರಕ್ಷಣೆಯು ಕಷ್ಟವಾಗಿತ್ತು. ವಿದೇಶಿ ತಜ್ಞರನ್ನೂ ಜನರ ರಕ್ಷಣೆಗೆ ಕರೆಸಲಾಗಿತ್ತು. ಈಗ ಕೊನೆಗೆ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Snehith Gowda
ಕಿರುತೆರೆ36 seconds ago

BBK SEASON 10: ಬಿಗ್ ಬಾಸ್ ಮನೆಯಿಂದ ಸ್ನೇಹಿತ್ ಔಟ್; ಕಣ್ಣೀರಿಟ್ಟ ನಮ್ರತಾ

Congress Mp old tweet resurfaces about black money
ದೇಶ16 mins ago

ಇಷ್ಟೊಂದು ಕಪ್ಪು ಹಣ ಎಲ್ಲಿಡುತ್ತಾರೋ ಎಂದು ಕೇಳಿದ್ದ ಕೈ ಸಂಸದನ ಬಳಿ 300 ಕೋಟಿ ರೂ. ಬ್ಲ್ಯಾಕ್ ಮನಿ!

pro kabaddi
ಕ್ರೀಡೆ20 mins ago

Pro Kabaddi: ಜಿದ್ದಾಜಿದ್ದಿನ ಪಂದ್ಯದಲ್ಲಿ ಬೆಂಗಾಲ್​, ಹರ್ಯಾಣಗೆ ಒಲಿದ ಗೆಲುವು

Nagamurthy Swamy
ಕರ್ನಾಟಕ43 mins ago

Ayodhya Ram Mandir: ರಾಮಮಂದಿರ ನಿರ್ಮಾಣಕ್ಕೆ ತೆರಳಿದ ಗದಗದ ಯುವ ಶಿಲ್ಪಿ

Saika Ishaque ran through the England middle order
ಕ್ರಿಕೆಟ್56 mins ago

ENGW vs INDW; ಅಂತಿಮ ಪಂದ್ಯದಲ್ಲಿ ಗೆದ್ದು ನಿಟ್ಟುಸಿರು ಬಿಟ್ಟ ಭಾರತ ಮಹಿಳಾ ಕ್ರಿಕೆಟ್​ ತಂಡ

CLAT Result 2024 announced
ದೇಶ58 mins ago

CLAT Result 2024: ಕಾನೂನು ಪ್ರವೇಶ ಪರೀಕ್ಷೆ ಸಿಎಲ್ಎಟಿ ರಿಸಲ್ಟ್ ಪ್ರಕಟ

girl students fall ill
ಕರ್ನಾಟಕ2 hours ago

Raichur News: ಮಾನ್ವಿ ಹಾಸ್ಟೆಲ್‌ನಲ್ಲಿ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥ

Fans brave the dampness, waiting for India's tour of South Africa to kick off
ಕ್ರಿಕೆಟ್2 hours ago

IND vs SA: ಮಳೆಗೆ ಕೊಚ್ಚಿ ಹೋದ ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ

Gautam Gambhir
ಕ್ರಿಕೆಟ್2 hours ago

Gautam Gambhir: ಮತ್ತೆ ಪಾಕ್​ ಆಟಗಾರನ ಬೆಂಬಲಕ್ಕೆ ನಿಂತ ಗೌತಮ್​ ಗಂಭೀರ್

Shakti Scheme
ಕರ್ನಾಟಕ2 hours ago

Shakti Scheme: ಒಂದೇ ಆಧಾರ್‌ ಕಾರ್ಡ್‌ ಬಳಸಿ ಇಬ್ಬರ ಪ್ರಯಾಣ; ಸಿಕ್ಕಿಬಿದ್ದ ಬುರ್ಕಾಧಾರಿ ಮಹಿಳೆಯರು!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Actor Shivarajkumar rejects DKS offer
ಕರ್ನಾಟಕ8 hours ago

Shiva Rajkumar: ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

HD Kumaraswamy attack on congress
ಕರ್ನಾಟಕ11 hours ago

HD Kumaraswamy: ಬಿಜೆಪಿಗೆ ‌50 ಶಾಸಕರ ಕರ್ಕೊಂಡು ಬರ್ತೇವೆ ಎಂದಿರುವ ಕಾಂಗ್ರೆಸ್‌ ನಾಯಕ!

Dina Bhavishya
ಪ್ರಮುಖ ಸುದ್ದಿ19 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ2 days ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema2 days ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema2 days ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಟ್ರೆಂಡಿಂಗ್‌