Fact Check | ಕ್ಯಾಮೆರಾ ಲೆನ್ಸ್‌ ಮುಚ್ಚಳ ತೆಗೆಯದೆಯೇ ಚೀತಾ ಫೋಟೊ ಕ್ಲಿಕ್ಕಿಸಿದರೇ ನರೇಂದ್ರ ಮೋದಿ? - Vistara News

ಫ್ಯಾಕ್ಟ್ ಚೆಕ

Fact Check | ಕ್ಯಾಮೆರಾ ಲೆನ್ಸ್‌ ಮುಚ್ಚಳ ತೆಗೆಯದೆಯೇ ಚೀತಾ ಫೋಟೊ ಕ್ಲಿಕ್ಕಿಸಿದರೇ ನರೇಂದ್ರ ಮೋದಿ?

ನರೇಂದ್ರ ಮೋದಿ ಅವರು ಕಳೆದ ವಾರ ಮಧ್ಯಪ್ರದೇಶದ ಕುನೊ ನ್ಯಾಷನಲ್‌ ಪಾರ್ಕ್‌ನಲ್ಲಿ ಕ್ಯಾಮೆರಾ ಲೆನ್ಸ್‌ನ ಮುಚ್ಚಳ ತೆಗೆಯದೆಯೇ ಫೋಟೊ ಕ್ಲಿಕ್ಕಿಸಿದರು ಎಂಬ ಆರೋಪ ಕೇಳಿಬಂದಿದೆ. ಅದರ ಫ್ಯಾಕ್ಟ್‌ ಚೆಕ್‌ (Fact Check) ಇಲ್ಲಿದೆ.

VISTARANEWS.COM


on

PHoto
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಎಷ್ಟು ಜನ ಎಷ್ಟಪಡುತ್ತಾರೋ, ಅಷ್ಟೇ ಜನ ವಿರೋಧಿಸುತ್ತಾರೆ. ಹಾಗೆಯೇ, ವ್ಯಂಗ್ಯ, ವಿಡಂಬನೆ, ಮೀಮ್‌, ಟ್ರೋಲ್‌ಗಳ ಮೂಲಕ ಕಾಲೆಳೆಯುತ್ತಾರೆ. ಇದರ ಬೆನ್ನಲ್ಲೇ, ನರೇಂದ್ರ ಮೋದಿ ಅವರು ಕಳೆದ ವಾರ ಮಧ್ಯಪ್ರದೇಶದ ಕುನೊ ನ್ಯಾಷನಲ್‌ ಪಾರ್ಕ್‌ಗೆ ನಮೀಬಿಯಾದಿಂದ ತಂದ ಎಂಟು ಚೀತಾಗಳನ್ನು ಬಿಡುಗಡೆ ಮಾಡಿದ ಬಳಿಕ, ಚೀತಾಗಳ ಫೋಟೊವನ್ನು ಕ್ಯಾಮೆರಾದ ಲೆನ್ಸ್‌ ಮುಚ್ಚಳ ತೆಗೆಯದೆ ಕ್ಲಿಕ್ಕಿಸಿದ್ದಾರೆ (Fact Check) ಎಂಬ ಆರೋಪ ಕೇಳಿಬಂದಿದೆ.

ನರೇಂದ್ರ ಮೋದಿ ಅವರಿಗೆ ಕ್ಯಾಮೆರಾ ಹಿಡಿಯಲು ಸಹ ಬರುವುದಿಲ್ಲ. ಅವರಿಗೆ ಕ್ಯಾಮೆರಾ ನಿರ್ವಹಿಸುವುದು ಗೊತ್ತಿಲ್ಲ. ಕ್ಯಾಮೆರಾಗೆ ಪೋಸ್‌ ಕೊಡುವುದು ಗೊತ್ತೇ ಹೊರತು, ಕ್ಲಿಕ್ಕಿಸಲು ಬರುವುದಿಲ್ಲ. ಹಾಗಾಗಿಯೇ, ಕುನೊ ಅರಣ್ಯದಲ್ಲಿ ಕ್ಯಾಮೆರಾದ ಲೆನ್ಸ್‌ ಮುಚ್ಚಳ ತೆಗೆಯದೆಯೇ ಫೋಟೊ ಕ್ಲಿಕ್ಕಿಸಿದ್ದಾರೆ ಎಂದು ಜನ ಟೀಕಿಸಿದ್ದಾರೆ. ಹಾಗೆಯೇ, ಲೆನ್ಸ್‌ನ ಕ್ಯಾಪ್‌ ಮುಚ್ಚಿರುವ ಫೋಟೊ ಒಂದನ್ನು ಸಹ ಪೋಸ್ಟ್‌ ಮಾಡಿದ್ದಾರೆ.

ನಿಜಾಂಶ ಏನು?

ನರೇಂದ್ರ ಮೋದಿ ಅವರು ಕ್ಯಾಮೆರಾ ಹಿಡಿದು ಕ್ಲಿಕ್ಕಿಸುತ್ತಿರುವ ಚಿತ್ರಗಳು ಹಾಗೂ ಜಾಲತಾಣದಲ್ಲಿ ಎಡಿಟ್‌ ಮಾಡಲಾದ ಫೋಟೊಗಳನ್ನು ಗಮನಿಸಿದರೆ, ಇದು ತಿರುಚಿದ ಫೋಟೊ ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ. ಮೋದಿ ಅವರು ನಿಕಾನ್‌ ಕ್ಯಾಮೆರಾ ಹಿಡಿದು ಫೋಟೊ ಕ್ಲಿಕ್ಕಿಸಿದ್ದರು. ಆದರೆ, ಜಾಲತಾಣದಲ್ಲಿ ಕಿಡಿಗೇಡಿಗಳು ಎಡಿಟ್‌ ಮಾಡುವಾಗ ಕೆನಾನ್‌ ಕ್ಯಾಮೆರಾದ ಕ್ಯಾಪ್‌ಅನ್ನು ಮೋದಿ ಹಿಡಿದ ಕ್ಯಾಮೆರಾದ ಚಿತ್ರಕ್ಕೆ ಅಳವಡಿಸಿದ್ದಾರೆ. ವಿಡಿಯೊ, ಫೋಟೊಗಳಿಂದಲೂ ಮೋದಿ ಅವರು ಕ್ಯಾಮೆರಾ ಲೆನ್ಸ್‌ ಮುಚ್ಚಳ ತೆಗೆದೇ ಫೋಟೊ ಕ್ಲಿಕ್ಕಿಸಿದರು ಎಂಬುದು ತಿಳಿಯುತ್ತದೆ. ಆದರೆ, ಇದಾವುದನ್ನೂ ಪರಿಶೀಲಿಸದ, ಕಾಂಗ್ರೆಸ್‌ನ ಕೆಲವು ನಾಯಕರು ತಿರುಚಿದ ಫೋಟೊಗಳನ್ನೇ ಟ್ವೀಟ್‌ ಮಾಡಿ ಮುಜುಗರ ಅನುಭವಿಸಿದರು.

ಇದನ್ನೂ ಓದಿ | Cheetah In India | ಎಂಟು ಚೀತಾಗಳಲ್ಲಿ ಒಂದಕ್ಕೆ ನರೇಂದ್ರ ಮೋದಿ ಇಟ್ಟ ಹೆಸರೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Fact Check

Fact Check: ಬೈಕ್ ಕದ್ದು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರೆ ಪಂಜಾಬ್ ಸಿಎಂ ಭಗವಂತ್ ಮಾನ್?

Viral news: ಹತ್ತು ವರ್ಷಗಳ ಹಿಂದೆ ಬೈಕ್ ದರೋಡೆ ಪ್ರಕರಣದಲ್ಲಿ ಮಾನ್ ಅವರು ಬಂಧನಕ್ಕೊಳಗಾದ ಛಾಯಾ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದು ನಿಜವೇ ?

VISTARANEWS.COM


on

By

Viral news
Koo

ಪಂಜಾಬ್: ನಿರಂತರ ಒಂದಲ್ಲ ಒಂದು (Fact Check) ಕಾರಣದಿಂದ ಸುದ್ದಿಯಲ್ಲಿರುವ ಹೊಸದಾಗಿ ಚುನಾಯಿತರಾದ ಪಂಜಾಬ್ (Punjab) ಮುಖ್ಯಮಂತ್ರಿ (Chief Minister) ಭಗವಂತ್ ಮಾನ್ (Bhagwant Mann) ಅವರನ್ನು ಈ ಹಿಂದೆ ಬೈಕ್ ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಧನಕ್ಕೆ ಒಳಪಡಿಸಲಾಗಿತ್ತು ಎನ್ನುವ ಫೋಟೋ ಸಹಿತ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral news) ಆಗಿದೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ವಿವಾದಗಳಿಗೆ ಹೊಸದೇನಲ್ಲ. ರಾಜ್ಯದ ಅತ್ಯುನ್ನತ ಹುದ್ದೆಗೇರಿದ ಬಳಿಕ ಅವರ ಕುರಿತು ಜನರು ತಮ್ಮ ಅಭಿಪ್ರಾಯಗಳನ್ನು ಮತ್ತು ಹಳೆಯ ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದನ್ನು ಸಾಕಷ್ಟು ಮಂದಿ ವೀಕ್ಷಿಸುತ್ತಿದ್ದಾರೆ.

ಇದೀಗ ಸುಮಾರು ಒಂದು ದಶಕದ ಹಿಂದೆ ಬೈಕ್ ದರೋಡೆ ಪ್ರಕರಣದಲ್ಲಿ ಮಾನ್ ಬಂಧನಕ್ಕೊಳಗಾದ ಛಾಯಾ ಚಿತ್ರ ಎಂದು ಹೇಳುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾನ್ ಅವರು ಇತರ ಮೂವರೊಂದಿಗೆ ನೆಲದ ಮೇಲೆ ಕುಳಿತಿರುವ ಈ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಮಂದಿ ವೀಕ್ಷಿಸಿದ್ದಾರೆ.

ಇದನ್ನೂ ಓದಿ: Video Viral: ಜಲ ತರಂಗ್‌ನಲ್ಲಿ ಮಹಿಳೆ ನುಡಿಸಿದ ಐಗಿರಿ ನಂದಿನಿ ವಿಡಿಯೋ ವೈರಲ್

ಈ ಫೋಟೋ ದ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಿದ ನ್ಯೂಸ್‌ಚೆಕರ್ ಇದು ಸುಳ್ಳೆಂದು ತಿಳಿಸಿದೆ. ಆದರೂ ಈ ಚಿತ್ರವನ್ನು ಟ್ವಿಟರ್‌ನಲ್ಲಿ ಸಾಕಷ್ಟು ಮಂದಿ ವೀಕ್ಷಿಸುತ್ತಿದ್ದಾರೆ ಮತ್ತು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಭಗವಂತ್ ಮಾನ್ ಅವರು 2022ರ ಮಾರ್ಚ್ 16ರಂದು ಪಂಜಾಬ್ ನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಮಾಜಿ ಶಾಸಕರಿಗೆ ಪಿಂಚಣಿ ಪಾವತಿ, ಶಿಕ್ಷಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಅವರ ಸರ್ಕಾರದ ‘ದೊಡ್ಡ’ ನಿರ್ಧಾರಗಳಿಗಾಗಿ ಅವರು ನಿರಂತರ ಸುದ್ದಿಯಲ್ಲಿದ್ದಾರೆ.


ಮಾನ್ ಅವರನ್ನು ಪಂಜಾಬ್‌ನಲ್ಲಿ ಎಎಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದಾಗಿನಿಂದ ಹಾಸ್ಯನಟ-ರಾಜಕಾರಣಿ ಮಾನ್ ಅವರನ್ನು ಪದೇ ಪದೇ ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಮಾಡಲಾಗುತ್ತಿದೆ. ಪಂಜಾಬ್ ಸಿಎಂ ಬಗೆಗಿನ ಹಲವಾರು ಸುಳ್ಳು ಮಾಹಿತಿಗಳನ್ನು ನ್ಯೂಸ್‌ಕೆಕರ್ ತನಿಖೆ ನಡೆಸಿದೆ.

ಇದೀಗ ವೈರಲ್ ಆಗಿರುವ ಚಿತ್ರದ ಹುಡುಕಾಟ ನಡೆಸಿದಾಗ ಪಂಜಾಬಿ ಗಾಯಕ ಮತ್ತು ನಟ ಕರಮ್‌ಜಿತ್ ಅನ್ಮೋಲ್ ಅವರು ಮ್ಯಾಚ್ 18ರಂದು ಫೇಸ್‌ಬುಕ್ ನಲ್ಲಿ ಮಾಡಿರುವ ಪೋಸ್ಟ್ ಸಿಕ್ಕಿದೆ. ಅದರಲ್ಲಿ ಅವರು ಭಗವಂತ್ ಮಾನ್ ಮತ್ತು ಮಂಜಿತ್ ಸಿಧು ಅವರೊಂದಿಗೆ ಹೋಳಿ ನೆನಪುಗಳು ಎಂಬ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಬೈಕ್ ಕಳ್ಳತನ ಪ್ರಕರಣದಲ್ಲಿ ಮಾನ್ ಬಂಧನ ಎಂಬಂತೆ ಬಿಂಬಿಸಿರುವ ಈ ಚಿತ್ರ ದ ಹೇಳಿಕೆಯನ್ನು ಮಂಜಿತ್ ಸಿಧು ಅವರು ತಳ್ಳಿಹಾಕಿದ್ದಾರೆ. ಇದು ನಕಲಿ ಸುದ್ದಿ ಎಂದು ಹೇಳಿದ್ದಾರೆ.


ಈ ಚಿತ್ರವನ್ನು 1994 ಅಥವಾ 1995 ರಲ್ಲಿ ಕೆನಡಾದ ಗಾಯಕ ಹರ್ಭಜನ್ ಮಾನ್ ಭಾರತಕ್ಕೆ ಬಂದಾಗ ಪಟಿಯಾಲದಲ್ಲಿ ತೆಗೆದಿದ್ದಾರೆ. ಹೋಳಿ ಹಬ್ಬದಂದು ಹರ್ಭಜನ್ ಮಾನ್ ಅವರ ಮನೆಯ ಟೆರೇಸ್‌ನಲ್ಲಿ ಚಿತ್ರ ತೆಗೆಯಲಾಗಿದೆ. ಭಗವಂತ್ ಮಾನ್, ಕರಮ್ಜಿತ್ ಅನ್ಮೋಲ್ ಮತ್ತು ಹರ್ಭಜನ್ ಮಾನ್ ಕೂಡ ಅಲ್ಲಿ ಹಾಜರಿದ್ದರು. ಭಗವಂತ್ ಮಾನ್ ಮತ್ತು ನಾನು ಕಾಲೇಜು ದಿನಗಳಿಂದಲೂ ಸ್ನೇಹಿತರಾಗಿದ್ದೇವೆ ಎಂದು ಸಿಧು ತಿಳಿಸಿದ್ದಾರೆ.

ಈ ಕುರಿತು ಮತ್ತಷ್ಟು ಸ್ಪಷ್ಟಿಕರಣಕ್ಕಾಗಿ ಮಾನ್ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ ಅನ್ನು ಪರಿಶೀಲಿಸಲಾಗಿದೆ. ಆದರೆ ಯಾವುದೇ ಅಪರಾಧ ಪ್ರಕರಣದಲ್ಲಿ ಅವರು ಭಾಗಿಯಾಗಿರುವ ಬಗ್ಗೆ ಅದರಲ್ಲಿ ಯಾವುದೇ ಉಲ್ಲೇಖವಿಲ್ಲ ಎಂದು ತಿಳಿದು ಬಂದಿದೆ.

Continue Reading

ವೈರಲ್ ನ್ಯೂಸ್

Viral news: ಚುನಾವಣೆಗೆ ಮೊದಲೇ 19 ಲಕ್ಷ ಇವಿಎಂ ಕಾಣೆಯಾಗಿದ್ದು ನಿಜವೇ? ಏನಿದರ ಅಸಲಿಯತ್ತು ?

Viral news: ಲೋಕಸಭೆ ಚುನಾವಣೆಗೂ ಮುನ್ನ 1.9 ಮಿಲಿಯನ್ ಇವಿಎಂಗಳನ್ನು ಕಳವು ಮಾಡಲಾಗಿದೆ ಎನ್ನುವ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕಳವಾಗಿರುವ ಇವಿಎಂ ಗಳು ಎಲ್ಲಿ ಹೋಗಿವೆ ? ಈ ಸುದ್ದಿ ಎಲ್ಲಿಂದ ಬಂತು ಗೊತ್ತೇ ?

VISTARANEWS.COM


on

By

Viral news
Koo

ನವದೆಹಲಿ: ಲೋಕಸಭಾ ಚುನಾವಣೆ- 2024ರ (Lok sabha election-2024) ಮೊದಲ ಹಂತದ ಮತದಾನ ಪ್ರಕ್ರಿಯೆಗಳು ಶುಕ್ರವಾರ ದೇಶದ ವಿವಿಧ ಭಾಗಗಳಲ್ಲಿ ನಡೆದಿದೆ. ಮತದಾನ ಪ್ರಾರಂಭಕ್ಕೂ ಮೊದಲು 1.9 ಮಿಲಿಯನ್ ಎಲೆಕ್ಟ್ರಾನಿಕ್ ಮತಯಂತ್ರಗಳು (EVM) ಕಾಣೆಯಾಗಿವೆ ಎನ್ನುವ ಕುರಿತು ಸಾಮಾಜಿಕ ಜಾಲತಾಣದಲ್ಲಿ (social media) ಸಂದೇಶ ಹರಡಿದ್ದು (viral news) ಇದು ಸುಳ್ಳು ಎಂದು ತಿಳಿದು ಬಂದಿದೆ.

ಏಪ್ರಿಲ್ 19ರಂದು 2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಾರಂಭವಾಗುವ ಮೊದಲು ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರಲು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯನ್ನು ಹಂಚಿಕೊಳ್ಳಲಾಗಿತ್ತು. ಇದರಲ್ಲಿ 1.9 ಮಿಲಿಯನ್ ಎಲೆಕ್ಟ್ರಾನಿಕ್ ಮತಯಂತ್ರಗಳು ಕಾಣೆಯಾಗಿದೆ ಎಂದು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅನೇಕ ಬಳಕೆದಾರರು ಹೇಳಿಕೊಂಡಿದ್ದರು.

ಈ ಕುರಿತು ತನಿಖೆ ನಡೆಸಿದ ವಿಶ್ವಸ್ ನ್ಯೂಸ್ ಈ ಹೇಳಿಕೆ ಸುಳ್ಳು ಎಂದು ಪತ್ತೆ ಹಚ್ಚಿದೆ. ಚುನಾವಣಾ ಆಯೋಗವೂ ಕೂಡ ಇದೊಂದು ನಕಲಿ ಸುದ್ದಿ ಎಂದು ಹೇಳಿದೆ. ಈ ವರ್ಷದ ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್ ಕೂಡ ಇವಿಎಂ ನಾಪತ್ತೆಯಾಗಿರುವ ಆರೋಪಗಳನ್ನು ತಳ್ಳಿಹಾಕಿತ್ತು.

ಇದನ್ನೂ ಓದಿ: Viral Video: 7 ಮಕ್ಕಳನ್ನು ದೇವರು ಕೊಟ್ಟಿದ್ದಾದರೆ ಬಡತನಕ್ಕೆ ಮೋದಿ ಹೇಗೆ ಕಾರಣ? ಮುಸ್ಲಿಂ ಮಹಿಳೆಗೆ ತರಾಟೆ!


ಸುಳ್ಳು ಸುದ್ದಿ

ಸಾಮಾಜಿಕ ಮಾಧ್ಯಮ ಬಳಕೆದಾರ ನಿಹಾಲ್ ಸಿಂಗ್ ನಿಗಮ್ ಅವರು, 1.9 ಮಿಲಿಯನ್ ಇವಿಎಂ ಯಂತ್ರಗಳನ್ನು ಕಳವು ಮಾಡಲಾಗಿದೆ ಮತ್ತು ಈ ಬಗ್ಗೆ ಯಾವುದೇ ಕುರುಹು ಕಂಡು ಬಂದಿಲ್ಲ ಎನ್ನುವ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಅಂದಿನಿಂದ ಈ ಪೋಸ್ಟ್ ಭಾರೀ ವೈರಲ್ ಆಗಿದೆ. ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಲವಾರು ಬಳಕೆದಾರರು ಇದನ್ನು ಹಂಚಿಕೊಂಡಿದ್ದಾರೆ.


ತನಿಖೆಯಲ್ಲೇನಿದೆ?

ದಿ ಎಕನಾಮಿಕ್ ಟೈಮ್ಸ್ ನ ಮಾರ್ಚ್ 15 ವರದಿಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರಲು 2016 ಮತ್ತು 2019 ರ ನಡುವೆ ಚುನಾವಣಾ ಆಯೋಗದ ಮೇಲ್ವಿಚಾರಣೆಯಲ್ಲಿ 1.9 ಮಿಲಿಯನ್ ಇವಿಎಂಗಳು ನಾಪತ್ತೆಯಾಗಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಶುಕ್ರವಾರ ಅರ್ಜಿಯನ್ನು ವಜಾಗೊಳಿಸಿತ್ತು. 1.9 ಮಿಲಿಯನ್ ಇವಿಎಂಗಳು ಕಾಣೆಯಾಗಿದೆ ಎಂದು ಐಎನ್‌ಸಿ ಹೇಳಿರುವುದು ಸಂಪೂರ್ಣವಾಗಿ ಆಧಾರ ರಹಿತವಾಗಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

2019ರಲ್ಲಿಯೂ ನಾಪತ್ತೆಯಾದ ಇವಿಎಂಗಳ ವರದಿಗಳು ಬಂದಿದ್ದವು. ಫ್ರಂಟ್‌ಲೈನ್ ಮತ್ತು ಟಿವಿ9 ಭಾರತ ವರ್ಷ್ ಈ ಕುರಿತು ವರದಿಗಳನ್ನು ಪ್ರಕಟಿಸಿತ್ತು. ಇದನ್ನೂಚುನಾವಣಾ ಆಯೋಗವು ಆಧಾರ ರಹಿತ ಎಂದು ಹೇಳಿ ಟ್ವಿಟ್ ಮಾಡಿದೆ.

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿರುವ FAQ ವಿಭಾಗದಲ್ಲಿಯೂ ಈ ಸಮಸ್ಯೆಯನ್ನು ಉಲ್ಲೇಖಿಸಲಾಗಿದೆ. ವೈರಲ್ ಹಕ್ಕು ಕುರಿತು ಚುನಾವಣಾ ಆಯೋಗದ ಅಧಿಕಾರಿಗಳನ್ನು ಸಂಪರ್ಕಿಸಿರುವ ವಿಶ್ವಸ್ ನ್ಯೂಸ್ ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಷಯದ ಕುರಿತು ಸ್ಪಷ್ಟೀಕರಣವನ್ನು ನೀಡಲಾಗಿದೆ ಎಂದು ತಿಳಿಸಿರುವುದಾಗಿ ತಿಳಿದು ಬಂದಿದೆ.

Continue Reading

ದೇಶ

Lok Sabha Election: ಏ.19ರವರೆಗೆ ಲೋಕಸಭೆ ಚುನಾವಣೆ; ಮೇ 22ಕ್ಕೆ ರಿಸಲ್ಟ್?

Lok Sabha Election: ಮಾರ್ಚ್ 12ರಂದು ಲೋಕಸಭಾ ಚುನಾವಣಾ ಪ್ರಕ್ರಿಯೆ ಆರಂಭವಾಗಿ, ಏಪ್ರಿಲ್ 19ರಂದು ಮತದಾನ ನಡೆಯಲಿದೆ ಮತ್ತು ಮೇ 22ರಂದು ಫಲಿತಾಂಶ ಪ್ರಕಟವಾಗಲಿದೆ ಎಂಬ ವಾಟ್ಸಾಪ್ ಮೆಸೇಜ್ ಭಾರೀ ವೈರಲ್ ಆಗಿದೆ. ಅಸಲಿ ಸಂಗತಿ ಏನು?

VISTARANEWS.COM


on

Lok Sabha Election on April 19 and Result on May 22
Koo

ನವದೆಹಲಿ: ಲೋಕಸಭೆ ಚುನಾವಣಾ (Lok Sabha Election) ವೇಳಾ ಪಟ್ಟಿ ಕುರಿತು ಎಲ್ಲರಲ್ಲೂ ಕುತೂಹಲವಿದೆ(Election Schedule). ಯಾವಾಗ ದಿನಾಂಕ ಪ್ರಕಟವಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಈ ಮಧ್ಯೆ, ಏಪ್ರಿಲ್ 19ರಂದು ಚುನಾವಣೆ ನಡೆದು, ಮೇ 22ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ವಾಟ್ಸಾಪ್‌ ಮೆಸೇಜ್‌ವೊಂದು ಭಾರೀ ವೈರಲ್ ಆಗಿದೆ(WhatsApp Message Viral). ಈ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಚುನಾವಣಾ ಆಯೋಗವು(Election Commission of India), ಲೋಕಸಭಾ ಚುನಾವಣಾ ವೇಳಾಪಟ್ಟಿಯನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಲಾಗುತ್ತದೆಯೇ ಹೊರತು, ಪಠ್ಯ ಅಥವಾ ವಾಟ್ಸಾಪ್ ಮೆಸೇಜ್ ಮೂಲಕ ಅಲ್ಲ. ಹಾಗಾಗಿ ಇದೊಂದು ಫೇಕ್ ನ್ಯೂಸ್ (Fake News) ಎಂದು ಕೇಂದ್ರ ಚುನಾವಣಾ ಆಯೋಗವು ಸ್ಪಷ್ಟಪಡಿಸಿದೆ.

ಸಾರ್ವತ್ರಿಕ ಚುನಾವಣೆಯ ಸಂಪೂರ್ಣ ವೇಳಾಪಟ್ಟಿಯ ನಕಲಿ ಸಂದೇಶವೊಂದು ಹರಿದಾಡುತ್ತಿದೆ. ಮಾದರಿ ನೀತಿ ಸಂಹಿತೆ ಜಾರಿಗೆ ತರುವ ಮೂಲಕ ಮಾರ್ಚ್ 12 ರಂದು ಚುನಾವಣೆಯನ್ನು ಅಧಿಸೂಚಿಸಲಾಗುವುದು ಎಂದು ಅದರಲ್ಲಿ ತಿಳಿಸಲಾಗಿದೆ. ನಾಮಪತ್ರ ಸಲ್ಲಿಸಲು ಮಾರ್ಚ್ 28 ಕೊನೆಯ ದಿನಾಂಕ ಮತ್ತು ಏಪ್ರಿಲ್ 19 ಮತದಾನ ಮತ್ತು ಮೇ 22ರಂದು ಫಲಿತಾಂಶ ನಡೆಯಲಿದೆ ಎಂದು ನಕಲಿ ಸುದ್ದಿಯಲ್ಲಿ ತಿಳಿಸಲಾಗಿದೆ.

ಚುನಾವಣಾ ಆಯೋಗದ ಲೆಟರ್‌ಹೆಡ್‌‌ನಲ್ಲಿ ನಕಲಿ ಸಂದೇಶವು ವಾಟ್ಸಾಪ್ ಗ್ರೂಪ್‌ಗಳಲ್ಲಿ ಹರಿದಾಡಲು ಪ್ರಾರಂಭಿಸಿತು. ಸಾರ್ವತ್ರಿಕ ಚುನಾವಣೆಯನ್ನು ಒಂದೇ ಹಂತದಲ್ಲಿ ನಡೆಸುವುದು ಹೇಗೆ ಎಂಬ ಪ್ರಶ್ನೆಯನ್ನು ಹಲವರು ಎತ್ತಿದ್ದಾರೆ.

ಈ ಗೊಂದಲದ ನಡುವೆಯೇ ನಿನ್ನೆ ಚುನಾವಣಾ ಆಯೋಗ ವೈರಲ್ ಸಂದೇಶ ನಕಲಿ ಎಂದು ಸ್ಪಷ್ಟಪಡಿಸಿದೆ. ಲೋಕಸಭಾ ಚುನಾವಣೆಯ ವೇಳಾಪಟ್ಟಿಯ ಕುರಿತು ವಾಟ್ಸಾಪ್‌ ಅಪ್ಲಿಕೇಶನ್‌ನಲ್ಲಿ ನಕಲಿ ಸಂದೇಶವನ್ನು ಹಂಚಿಕೊಳ್ಳಲಾಗುತ್ತಿದೆ. ಈ ಸಂದೇಶವು ನಕಲಿಯಾಗಿದೆ. ಆಯೋಗವು ಇಲ್ಲಿಯವರೆಗೆ ಯಾವುದೇ ದಿನಾಂಕಗಳನ್ನು ಘೋಷಿಸಿಲ್ಲ ಎಂದು ಎಕ್ಸ್ ವೇದಿಕೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಪೋಸ್ಟ್ ಮಾಡಿದೆ.

ಎಲೆಕ್ಷನ್ ವೇಳಾಪಟ್ಟಿಯನ್ನು ಆಯೋಗವು ಸುದ್ದಿಗೋಷ್ಠಿಯಲ್ಲಿ ಘೋಷಣೆ ಮಾಡುತ್ತದೆ. #VerifyBeforeYouAmplify ಎಂಬ ಹ್ಯಾಷ್ ಟ್ಯಾಗ್ ಬಳಸಿರುವ ಆಯೋಗವು, ವಾಟ್ಸಾಪ್ ಸಂದೇಶಗಳನ್ನು ಫಾರ್ವರ್ಡ್ ಮಾಡುವಾಗ ದೃಢೀಕರಿಸಬೇಕು ಎಂದು ಹೇಳಿದೆ.

ದೆಹಲಿಯ ಮುಖ್ಯ ಚುನಾವಣಾ ಅಧಿಕಾರಿಯ ಕಚೇರಿಯಿಂದ ಪ್ರಸಾರವಾದ ಆಂತರಿಕ ಟಿಪ್ಪಣಿ ಗೊಂದಲಕ್ಕೆ ಕಾರಣವಾದ ಒಂದು ತಿಂಗಳ ಬಳಿಕ ಈ ನಕಲಿ ಸಂದೇಶವೂ ವೈರಲ್ ಆಗಿದೆ. ಈ ಆಂತರಿಕ ಟಿಪ್ಪಣಿಯಲ್ಲಿ ಏಪ್ರಿಲ್ 16 ಅನ್ನು ತಾತ್ಕಾಲಿಕ “ಚುನಾವಣೆ ದಿನಾಂಕ” ಎಂದು ಉಲ್ಲೇಖಿಸಲಾಗಿದ್ದು ಮತ್ತು ಅಧಿಕಾರಿಗಳಿಗೆ ಸಿದ್ಧತೆಗಳನ್ನು ವೇಗಗೊಳಿಸಲು ಸಹಾಯ ಮಾಡುತ್ತದೆ ಎಂದು ಹೇಳಿತ್ತು.

ಈ ಸುದ್ದಿಯನ್ನೂ ಓದಿ: Lok Sabha Election: ಈ ದಿನಾಂಕದಂದು ಲೋಕಸಭೆ ಚುನಾವಣಾ ವೇಳಾಪಟ್ಟಿ ಪ್ರಕಟ

Continue Reading

ದೇಶ

Fact Check: ಅಮುಲ್‌ನಿಂದ ʼಶರಮ್‌ʼ ಹೆಸರಿನ ಚೀಸ್ ಬಿಡುಗಡೆ?

Fact Check: ಇತ್ತೀಚೆಗೆ ಅಮುಲ್‌ ಶರಮ್‌ ಹೆಸರಿನ ಚೀಸ್‌ ಬಿಡುಗಡೆ ಮಾಡಿದೆ ಎನ್ನುವ ಸುದ್ದಿ ವೈರಲ್‌ ಆಗಿತ್ತು. ಆದರೆ ಇದೀಗ ಕಂಪೆನಿ ಸ್ಪಷ್ಟನೆ ನೀಡಿ, ಇದು ನಕಲಿ ಸುದ್ದಿ ಎಂದು ಎಚ್ಚರಿಸಿದೆ.

VISTARANEWS.COM


on

amul
Koo

ನವದೆಹಲಿ: ಇತ್ತೀಚೆಗೆ ಶರಮ್ (Sharam) ಹೆಸರಿನ ಅಮುಲ್ ಚೀಸ್ (Amul cheese) ಪ್ಯಾಕೆಟ್‌ನ ಪೋಸ್ಟ್ ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. ಇದನ್ನು ʼಶರಮ್ ನಾಮ್ ಕಿ ಚೀಜ್ ಭಿ ಹೋತಿ ಹೈʼ (Sharam naam ki cheez bhi hoti hai) ಎಂಬ ಹಿಂದಿ ನುಡಿಗಟ್ಟನ್ನು ಆಧರಿಸಿ ಪೋಸ್ಟ್‌ ಮಾಡಲಾಗಿತ್ತು. ನಾಚಿಕೆಯಿಲ್ಲದ ಯಾರಾದರೂ ವರ್ತಿಸುವಾಗ ಸಾಮಾನ್ಯವಾಗಿ ಈ ನುಡಿಗಟ್ಟನ್ನು ಬಳಸಲಾಗುತ್ತದೆ. ವೈರಲ್ ಪೋಸ್ಟ್‌ನಲ್ಲಿ ಹಿಂದಿಯ ʼಚೀಜ್ʼ ಅನ್ನು ಇಂಗ್ಲಿಷ್‌ನ ʼಚೀಸ್‌ʼ ಆಗಿ ಅನುವಾದಿಸಲಾಗಿದೆ. ಈ ವೈರಲ್‌ ಪೋಸ್ಟ್‌ನಲ್ಲಿ ಚೀಸ್ ತುಂಡಿನ ಚಿತ್ರವನ್ನು ಪ್ಯಾಕೆಟ್ ಮೇಲೆ ಮುದ್ರಿಸಿರುವುದು ಕಂಡು ಬಂದಿದೆ. ಈ ಕುರಿತು ಸ್ಪಷ್ಟನೆ ನೀಡಿದ ಅಮುಲ್‌, ʼʼಕಂಪನಿ ಇಂತಹ ಯಾವುದೇ ಉತ್ಪನ್ನ ಹೊರ ತಂದಿಲ್ಲʼʼ ಎಂದು (Fact Check) ಸ್ಪಷ್ಟಪಡಿಸಿದೆ.

ಅಮುಲ್‌ ಹೇಳಿದ್ದೇನು?

ಅಮುಲ್ ಇದಕ್ಕೆ ಪ್ರತಿಕ್ರಿಯಿಸಿ, ಇದು ನಮ್ಮ ಉತ್ಪನ್ನವಲ್ಲ ಮತ್ತು ಕೃತಕ ಬುದ್ಧಿಮತ್ತೆ (Artificial intelligence) ತಂತ್ರಜ್ಞಾನವನ್ನು ಬಳಸಿಕೊಂಡು ಚಿತ್ರವನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದೆ. ಅಲ್ಲದೆ ಬ್ರ್ಯಾಂಡ್‌ನ ಅನುಮತಿಯಿಲ್ಲದೆ ಪೋಸ್ಟ್‌ ರಚಿಸಿ ಪೋಸ್ಟ್ ಹರಿಯಬಿಡಲಾಗಿದೆ. ಇಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಮುಲ್‌ ಸ್ಪಷ್ಟಪಡಿಸಿದೆ.

“ಹೊಸ ರೀತಿಯ ಅಮುಲ್ ಚೀಸ್‌ಗೆ ಸಂಬಂಧಿಸಿದಂತೆ ವಾಟ್ಸ್‌ಆ್ಯಪ್‌ ಮತ್ತು ಸೋಷಿಯಲ್‌ ಮೀಡಿಯಾಗಳಲ್ಲಿ ನಕಲಿ ಸಂದೇಶವನ್ನು ಫಾರ್ವರ್ಡ್ ಮಾಡಲಾಗುತ್ತಿದೆ. ಪೋಸ್ಟ್‌ನ ಸೃಷ್ಟಿಕರ್ತರು ನಮ್ಮಿಂದ ಯಾವುದೇ ಅನುಮತಿಯಿಲ್ಲದೆ ಇದನ್ನು ಪೋಸ್ಟ್ ಮಾಡಿದ್ದಾರೆ. ಈ ಪ್ಯಾಕ್ ಅನ್ನು ಎಐ ತಂತ್ರಜ್ಞಾನ ಬಳಸಿ ಅಭಿವೃದ್ಧಿಪಡಿಸಲಾಗಿದೆ. ಈ ಮೂಲಕ ಅಮುಲ್ ಬ್ರ್ಯಾಂಡ್‌ ಅನ್ನು ಕಳಪೆಯಂತೆ ಚಿತ್ರಿಸಲಾಗಿದೆʼʼ ಎಂದು ಕಂಪನಿ ಹೇಳಿದೆ.

“ಈ ಪೋಸ್ಟ್‌ನಲ್ಲಿ ತೋರಿಸಿರುವ ಪ್ಯಾಕ್ ಅಮುಲ್ ಚೀಸ್ ಅಲ್ಲ ಎನ್ನುವುದನ್ನು ಸ್ಪಷ್ಟಪಡಿಸುತ್ತೇವೆ. ಈ ಪೋಸ್ಟ್ ಅನ್ನು ತಪ್ಪು ಮಾಹಿತಿಯನ್ನು ಹರಡಲು ಮತ್ತು ಗ್ರಾಹಕರಲ್ಲಿ ಅನಗತ್ಯ ಭಯ ಹಾಗೂ ಗೊಂದಲವನ್ನು ಮೂಡಿಸಲು ಬಳಸಲಾಗಿದೆ. ದಯವಿಟ್ಟು ನಮ್ಮ ಈ ಸಂದೇಶವನ್ನು ನಿಮ್ಮ ಕುಟುಂಬ ಮತ್ತು ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಅಮುಲ್ ಎಂದಿಗೂ ಅತ್ಯುತ್ತಮ ಉತ್ಪನ್ನಗಳನ್ನು ಒದಗಿಸುವ ಭರವಸೆ ನೀಡುತ್ತದೆʼʼ ಎಂದು ಕಂಪನಿ ಹೇಳಿದೆ.

ಹಿಂದೆಯೂ ಸುಳ್ಳು ಸುದ್ದಿ ಹರಡಿತ್ತು

ಅಮುಲ್‌ ಉತ್ಪನ್ನಗಳ ವಿರುದ್ಧ ಹಿಂದೆಯೂ ಪಿತೂರಿ ನಡೆದಿತ್ತು. ಅಮುಲ್ ಬೆಣ್ಣೆಯನ್ನು ಚೀನಾದಲ್ಲಿ ಪ್ಯಾಕ್ ಮಾಡಲಾಗುತ್ತಿದೆ ಎಂದು ಕಳೆದ ವರ್ಷ ಫೆಬ್ರವರಿಯಲ್ಲಿ ನಕಲಿ ಸಂದೇಶ ಪ್ರಸಾರವಾಗಿತ್ತು. ಕೂಡಲೇ ಎಚ್ಚೆತ್ತ ಕಂಪನಿಯು ಇದು ನಕಲಿ ಸಂದೇಶ ಎಂದು ಸ್ಪಷ್ಟನೆ ನೀಡಿತ್ತು. ಸುಳ್ಳು ಸುದ್ದಿ ಹಬ್ಬಿಸುವವರಿಗೆ ನೋಟಿಸ್ ರವಾನಿಸಿ, ಸೋಷಿಯಲ್‌ ಮೀಡಿಯಾದಲ್ಲಿ ಈ ಬಗ್ಗೆ ಎಚ್ಚರಿಕೆಯನ್ನೂ ನೀಡಿತ್ತು.

ನಕಲಿ ಉತ್ಪನ್ನ ಮತ್ತು ಕಂಪನಿಯ ನಿಜವಾದ ಉತ್ಪನ್ನಗಳನ್ನು ಹೋಲಿಕೆ ಮಾಡುವ ವಿಡಿಯೊವನ್ನು ಪೋಸ್ಟ್‌ ಮಾಡಿ, ತಪ್ಪು ಮಾಹಿತಿಯನ್ನು ಸೃಷ್ಟಿಸಿ ಗ್ರಾಹಕರಲ್ಲಿ ಭಯ ಮತ್ತು ಗೊಂದಲ ಮೂಡಲು ಬಳಸಲಾಗಿದೆ ಎಂದು ಹೇಳಿತ್ತು. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಸೂಚನೆಯ ಪ್ರಕಾರ, ಎಲ್ಲ ಹಾಲಿನ ಉತ್ಪನ್ನಗಳು ಪ್ಯಾಕ್‌ನ ಮುಂಭಾಗದಲ್ಲಿ ವೆಜ್ ಲೋಗೋವನ್ನು ತೋರಿಸುವುದು ಕಡ್ಡಾಯ ಅದನ್ನೂ ಗಮನಿಸುವಂತೆ ಹೇಳಿತ್ತು.

ಇದನ್ನೂ ಓದಿ: Fact Check: ಸ್ಟಾರ್ ಗುರುತಿರುವ 500 ರೂಪಾಯಿ ನೋಟು ನಕಲಿಯೇ?

Continue Reading
Advertisement
Madhuri Dixit birthday extend wishes
ಬಾಲಿವುಡ್2 mins ago

Madhuri Dixit: ಮಾಧುರಿ ದೀಕ್ಷಿತ್‌ಗೆ ಇಂದು ಜನುಮದಿನ ಸಂಭ್ರಮ; ಅವರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

Prajwal Revanna Case Can women trust your government Writers open letter to Siddaramaiah
ರಾಜಕೀಯ10 mins ago

Prajwal Revanna Case: ನಿಮ್ಮ ಸರ್ಕಾರದ ಮೇಲೆ ಮಹಿಳೆಯರು ವಿಶ್ವಾಸ ಇಡಬಹುದೇ? ಸಿದ್ದರಾಮಯ್ಯಗೆ ಸಾಹಿತಿಗಳ ಬಹಿರಂಗ ಪತ್ರ!

Acharya Shankara Jayanthyutsava programme at Ranebennur
ಹಾವೇರಿ16 mins ago

Ranebennur News: ಆಧುನಿಕ ವಿಜ್ಞಾನಕ್ಕೆ ಶಂಕರಾಚಾರ್ಯರು ನೀಡಿದ ಕೊಡುಗೆ ಅಪಾರ; ವಿ. ನವೀನಶಾಸ್ತ್ರಿ ರಾ. ಪುರಾಣಿಕ

Miyazaki Mango
ಪ್ರಮುಖ ಸುದ್ದಿ57 mins ago

Miyazaki Mango: ಧಾರವಾಡಕ್ಕೆ ಬಂತು 2.7 ಲಕ್ಷ ರೂ. ಬೆಲೆಯ ಮಾವು!

Bomb Threat
ದೇಶ1 hour ago

Bomb Threat: ದೆಹಲಿ, ಅಹಮದಾಬಾದ್‌ ಬಳಿಕ ಕಾನ್ಪುರ ಶಾಲೆಗಳಿಗೂ ಬಾಂಬ್‌ ಬೆದರಿಕೆ; ಇಮೇಲ್‌ ಮೂಲಕ ಸಂದೇಶ

M‌ine Lift Collapse
ದೇಶ1 hour ago

M‌ine Lift Collapse: ರಾಜಸ್ಥಾನ ಲಿಫ್ಟ್‌ ದುರಂತ: ಟ್ರ್ಯಾಪ್‌ ಆಗಿದ್ದ 14 ಮಂದಿ ರಕ್ಷಣೆ; ಒಬ್ಬ ಅಧಿಕಾರಿ ದಾರುಣ ಸಾವು

Cannes 2024 seven Indian Films To Be Screened
ಸಿನಿಮಾ1 hour ago

Cannes 2024: ʻಕಾನ್ ಫಿಲ್ಮ್ ಫೆಸ್ಟಿವಲ್‌ʼನಲ್ಲಿ ಪ್ರದರ್ಶನ ಕಾಣಲಿರುವ ಭಾರತೀಯ ಸಿನಿಮಾಗಳಿವು

pes university student self harming
ಕ್ರೈಂ1 hour ago

Student Self Harming: ಪ್ರತಿಷ್ಠಿತ ಕಾಲೇಜು ಕಟ್ಟಡದಿಂದ ಜಿಗಿದು ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

Prajwal Revanna Case Prajwal case controlled by Congress government says R Ashok
ರಾಜಕೀಯ2 hours ago

Prajwal Revanna Case: ಕಾಂಗ್ರೆಸ್‌ ಸರ್ಕಾರದಿಂದ ಪ್ರಜ್ವಲ್‌ ಕೇಸ್‌ ನಿಯಂತ್ರಣ; ಡೈವರ್ಟ್‌ ಮಾಡಲು ಬಿಜೆಪಿಗರ ಮೇಲೆ ದಾಳಿ ಎಂದ ಅಶೋಕ್‌!

Himanta Biswa Sarma
ರಾಜಕೀಯ2 hours ago

Himanta Biswa Sarma: ಬಿಜೆಪಿಗೆ ಏಕೆ 400 ಸೀಟುಗಳು ಬೇಕೇಬೇಕು? ಹಿಮಂತ ಬಿಸ್ವ ಶರ್ಮಾ ಉತ್ತರ ಹೀಗಿದೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ7 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ9 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ19 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202422 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌