Fact Check: ಕೇರಳ ಯೋಧನ ಮೇಲೆ ಪಿಎಫ್ಐ ದಾಳಿ! ಪ್ರಸಿದ್ಧಿಗಾಗಿ ‘ಫೇಕ್’ ಅಟ್ಯಾಕ್ ಕತೆ ಕಟ್ಟಿದ್ನಾ ಸೈನಿಕ? Vistara News

Fact Check

Fact Check: ಕೇರಳ ಯೋಧನ ಮೇಲೆ ಪಿಎಫ್ಐ ದಾಳಿ! ಪ್ರಸಿದ್ಧಿಗಾಗಿ ‘ಫೇಕ್’ ಅಟ್ಯಾಕ್ ಕತೆ ಕಟ್ಟಿದ್ನಾ ಸೈನಿಕ?

Fact Check: ಆರು ಜನರು ತನ್ನ ಮೇಲೆ ದಾಳಿ ನಡೆಸಿ, ಬೆನ್ನ ಮೇಲೆ ಪಿಎಫ್ಐ ಎಂದು ಬರೆದಿದ್ದಾರೆಂದು ಭಾರತೀಯ ಸೇನೆಯ ಯೋಧ ಕೇರಳ ಪೊಲೀಸರಿಗೆ ದೂರು ನೀಡಿದ್ದ. ವಿಚಾರಣೆ ನಡೆಸಿದಾಗ ಪಿಎಫ್ಐ ಫೇಕ್ ಅಟ್ಯಾಕ್ ಕತೆ ಬಯಲಾಗಿದೆ.

VISTARANEWS.COM


on

Fact Check, PFI Attack on Soldier is Fake Says Kerala Police
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕೇರಳದಲ್ಲಿ ನಿಷೇಧಿತ ಪಿಎಫ್ಐ ಭಾರತೀಯ ಸೇನಾ ಯೋಧನ ಮೇಲೆ ದಾಳಿ (PFI Attack) ನಡೆಸಿದ ಸುದ್ದಿ ಎರಡ್ಮೂರು ದಿನಗಳಿಂದ ಭಾರೀ ವೈರಲ್ ಆಗಿತ್ತು. ಆದರೆ, ಅದು ಫೇಕ್ ಘಟನೆ ಎಂದು ಸಾಬೀತಾಗಿದ್ದು, ಕೇರಳ ಪೊಲೀಸರು (Kerala Police) ‘ಸಂತ್ರಸ್ತ’ ಯೋಧ ಹಾಗೂ ಆತನ ಸ್ನೇಹಿತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ‘ಸಂತ್ರಸ್ತ’ ಯೋಧ (Indian Army Soldier) ತನ್ನ ಮನೆಯ ಸಮೀಪ ಆರು ಮಂದಿ ಹಲ್ಲೆ ನಡೆಸಿದ್ದಾರೆ ಮತ್ತು ತನ್ನ ಬೆನ್ನ ಮೇಲೆ ‘ಪಿಎಫ್‌ಐ’ ಎಂದು ಬರೆಯಲಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದ. ಈ ಕುರಿತು ವಿಚಾರಣ ನಡೆದಾಗ, ದಿಢೀರ್ ಖ್ಯಾತಿ ಗಳಿಸಲು ಯೋಧನೇ ಈ ರೀತಿಯ ಫೇಕ್ ಪಿಎಫ್ಐ ದಾಳಿ ಘಟನೆ ರೂಪಿಸಿದ್ದು ಬಹಿರಂಗವಾಗಿದೆ(Fact Check).

ಕೇರಳದ ಕೊಲ್ಲಮ್ ಜಿಲ್ಲೆ ಹಿರಿಯ ಪೊಲೀಸ್ ಅಧಿಕಾರಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಅರೆಸ್ಟ್ ಮಾಡಿಲ್ಲ. ಆದರೆ, ಯೋಧ ಶೈನ್ ಕುಮಾರ್ ಮತ್ತು ಆತನ ಗೆಳೆಯನನ್ನು ವಶಕ್ಕೆ ಪಡೆದುಕೊಂಡು ಹೇಳಿಕೆಯನ್ನು ದಾಖಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಅವರ ಹೇಳಿಕೆಗಳನ್ನು, ವಿಷಯಗಳನ್ನು ಪರಿಶೀಲಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ದಿಢೀರ್ ಪ್ರಸಿದ್ಧಿಯನ್ನು ಪಡೆಯುವುದಕ್ಕಾಗಿ ಶೈನ್ ಕುಮಾರ್ ಪ್ರಸಿದ್ಧರಾಗಲು ಬಯಸಿದ್ದರು. ಅದಕ್ಕಾಗಿಯೇ ಈ ಪಿಎಫ್ಐ ದಾಳಿಯ ಫೇಕ್ ಕೃತ್ಯವನ್ನು ಮಾಡಿದ್ದರು ಎಂದು ಯೋಧನ ಸ್ನೇಹಿತ ಹೇಳಿದ್ದಾನೆ. ಆತನ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ.

ಯೋಧ ಶೈನ್ ಕುಮಾರ್ ಅವರು ಕಡಕ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನಿಖೆ ನಡೆಸಿದಾಗ ಅವರ ದೂರು ಸುಳ್ಳು ಎಂದು ತಿಳಿದುಬಂದಿದೆ. ಅದರ ಆಧಾರದ ಮೇಲೆ ಈಗ ಯೋಧ ಹಾಗೂ ಆತನ ಸ್ನೇಹಿತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಘಟನೆಯಿಂದ ದೇಶದ ಗಮನ ಸೆಳೆಯಲು ತನಗೆ ಬೇಕಾದ ಪೋಸ್ಟಿಂಗ್ ಪಡೆಯಲು ಶೈನ್ ಕುಮಾರ್ ಮುಂದಾಗಿದ್ದ ಎಂದು ಪೊಲೀಸ್ ವಿಚಾರಣೆ ವೇಳೆ ಗೊತ್ತಾಗಿದೆ ಎಂದು ಕೊಲ್ಲಮ್ ಗ್ರಾಮಾಂತರದ ಹೆಚ್ಚುವರಿ ಎಸ್‌ಪಿ ಆರ್ ಪ್ರತಾಪನ್ ನಾಯರ್ ಹೇಳಿದ್ದಾರೆ.

ಈ ಕೃತ್ಯಕ್ಕೆ ಬಳಸಲಾದ ಹಸಿರು ಪೇಂಟ್, ಬ್ರಷ್ ಮತ್ತು ಟೇಪ್ ಅನ್ನು ಶೈನ್ ಕುಮಾರ್ ಸ್ನೇಹಿತನ ಮನೆಯಿಂದ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ಪಿಎಎಫ್ ದಾಳಿ ನಡದೆ ರೀತಿ ಹೇಗೆ?

ಶೈನ್ ಕುಮಾರ್ ಅವರು ಹೇಗೆ ಪಿಎಫ್ಐ ನಕಲಿ ದಾಳಿಯ ಕೃತ್ಯವನ್ನು ಜಾರಿಗೆ ತಂದರು ಕತೆಯನ್ನು ಆತನ ಸ್ನೇಹಿತ ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾನೆ. “ನಾನು ಕುಡಿದಿದ್ದೆ, ಆದ್ದರಿಂದ ನಾನು ಆರಂಭದಲ್ಲಿ ಡಿಎಫ್‌ಐ ಅನ್ನು ಬರೆದ. ಆದರೆ ಅವನು (ಕುಮಾರ್) ಪಿಎಫ್‌ಐ ಬರೆಯಲು ಹೇಳಿದ. ಹಾಗಾಗಿ ನಾನು ಅದನ್ನು ಪಿಎಫ್‌ಐ ಮಾಡಿದೆ. ನಂತರ ಅವನು ನನ್ನನ್ನು ಹೊಡೆಯಲು ಕೇಳಿದ. ಆದರೆ ನಾನು ಕುಡಿದಿದ್ದರಿಂದ ನನಗೆ ಸಾಧ್ಯವಿಲ್ಲ ಎಂದೆ. ಆಗ ಅವನು ನೆಲದ ಮೇಲೆ ಎಳೆದುಕೊಂಡು ಹೋಗಲು ಹೇಳಿದನು. ಆದರೆ ನನ್ನ ಅಮಲಿನಲ್ಲಿದ್ದೆ ಅದು ನನಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಅವನು ತನ್ನ ಬಾಯಿ ಮತ್ತು ಕೈಗಳನ್ನು ಟೇಪ್‌ನಿಂದ ಬಂಧಿಸಿ ಹೊಗುವಂತೆ ತಿಳಿಸಿದ. ನಾನು ಹಾಗೆ ಮಾಡಿದೆ ಎಂದು ಆರೋಪಿಯ ಸ್ನೇಹಿತ ಹೇಳಿದ್ದಾನೆ.

ಈ ಸುದ್ದಿಯನ್ನೂ ಓದಿ: Army Jawan: ಯೋಧನ ಮೇಲೆ ಹಲ್ಲೆ ನಡೆಸಿ, ಬೆನ್ನಿನ ಮೇಲೆ ‘ಪಿಎಫ್‌ಐ’ ಎಂದು ಬರೆದ ದುರುಳರು!

ಭಾನುವಾರ ರಾತ್ರಿ ತನ್ನ ಮನೆಯ ಬಳಿ ಆರು ಜನರಿಂದ ಥಳಿಸಿದರು ಮತ್ತು ತನ್ನ ಬೆನ್ನಿನ ಮೇಲೆ ಹಸಿರು ಬಣ್ಣದಿಂದ ‘ಪಿಎಫ್‌ಐ’ ಎಂದು ಬರೆದಿದ್ದಾರೆ ಎಂದು ಸೈನಿಕನು ತನ್ನ ದೂರಿನಲ್ಲಿ ತಿಳಿಸಿದ್ದ. ಕೇರಳದ ಕಡಕ್ಕಲ್‌ನಲ್ಲಿರುವ ಅವರ ಮನೆಯ ಸಮೀಪವೇ ಈ ಘಟನೆ ನಡೆದಿದೆ ಎಂದು ಹೇಳಿಕೊಂಡಿದ್ದ. ಈ ವಿಷಯವು ಭಾರೀ ಗಮನ ಸೆಳೆದಿತ್ತು. ಆದರೆ, ಕೇರಳ ಪೊಲೀಸರು ವಿಚಾರಣೆ ನಡೆಸಿದಾಗ ಇಡೀ ಘಟನೆ ನಕಲಿ ಎಂದು ಗೊತ್ತಾಗಿದ್ದು, ಕೇವಲ ಪ್ರಚಾರಕ್ಕಾಗಿ ಭಾರತೀಯ ಸೇನೆಯ ಯೋಧ ಫೇಕ್ ಪಿಎಫ್ಐ ದಾಳಿಯನ್ನು ರೂಪಿಸಿದ್ದ ಎಂದು ಗೊತ್ತಾಗಿದೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Fact check: ಹುತಾತ್ಮ ಮಗನ ಕುರಿತು ಭಾವಪೂರ್ಣ ಕವಿತೆ ಬರೆದರೆ ಪ್ರಾಂಜಲ್‌ ತಾಯಿ?

Fact Check: ರಜೌರಿ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಕರುನಾಡಿನ ವೀರ ಯೋಧ ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್‌ ಅವರ ಕುರಿತಂತೆ ಭಾವುಕ ಕವನವೊಂದು ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಅದನ್ನು ಅವರ ತಾಯಿಯೇ ಬರೆದರಾ?

VISTARANEWS.COM


on

Captain pranjal mother poem fact check
Koo

ನಮ್ಮ ಕಣ್ಣೆದುರೇ ಬೆಳೆದ ಈ ಕಂದ ಪ್ರಾಂಜಲನ
ಜೀವ ಕಸಿಯುವ ಹಕ್ಕ ನಿಮಗೆ ನೀಡಿದವರಾರು?
ಕೇಳಿಸದೇ ನಿಮಗೆ ಹೊತ್ತು ಹೆತ್ತ ತಾಯಿಯ ಆಕ್ರಂದನ?
ಕಾಣಿಸದೇ, ದುಃಖವ ನುಂಗಿ ಕಣ್ಣೀರು ತಡೆದುಕೊಂಡ ತಂದೆಯ ದುಮ್ಮಾನ?
ಅನಿಸುವುದಿಲ್ಲವೇ, ಕೈಹಿಡಿದ ಬಾಳ ಸಂಗಾತಿಯ ಎಣೆಯಿಲ್ಲದ ಗೋಳು?
– ಇದು ಜಮ್ಮು-ಕಾಶ್ಮೀರದ ರಜೌರಿಯ ಕಾಡಿನಲ್ಲಿ (Rajouri Encounter) ಅಡಗಿಕೊಂಡಿದ್ದ ಉಗ್ರಗಾಮಿಗಳ ಹುಟ್ಟಡಗಿಸಲು ಮುನ್ನುಗ್ಗುವ ವೇಳೆ ಹುತಾತ್ಮರಾದ ಕ್ಯಾಪ್ಟನ್‌ ಎಂ.ವಿ ಪ್ರಾಂಜಲ್‌ (Captain MV Pranjal) ಅವರ ಬಗ್ಗೆ ಬರೆಯಲಾದ ಭಾವುಕ ಕವನವೊಂದರ (Emotional Poem) ಕೆಲವು ಸಾಲು (Fact Check).

ಕಳೆದ ನವೆಂಬರ್‌ 22ರಂದು ರಜೌರಿ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಈ 29 ವರ್ಷದ ತರುಣನಿಗೆ ಇಡೀ ಕನ್ನಡ ನಾಡು ಅಶ್ರುತರ್ಪಣ ಸಲ್ಲಿಸಿದೆ. ಬೆಂಗಳೂರಂತೂ ವೀರ ಯೋಧನಿಗೆ ಸೆಲ್ಯೂಟ್‌ ಹೊಡೆದು, ಪುಷ್ಟಾಂಜಲಿ ಸಲ್ಲಿಸಿ ಕಳುಹಿಸಿಕೊಟ್ಟಿದೆ. ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಆಡಳಿತ ನಿರ್ದೇಶಕರಾಗಿದ್ದ ಎಂ.ವೆಂಕಟೇಶ್‌ (Pranjal Father M Venkatesh) ಮತ್ತು ಅನುರಾಧಾ ವೆಂಕಟೇಶ್‌ (Pranjal Mother Anuradha Venkatesh) ದಂಪತಿಯ ಏಕೈಕ ಪುತ್ರ ಪ್ರಾಂಜಲ್‌. ಸಣ್ಣ ವಯಸ್ಸಿನಲ್ಲೇ ಸೈನಿಕನಾಗುವ ಹಂಬಲ ಹೊತ್ತು ಅದನ್ನು ಸಾಕಾರಗೊಳಿಸಿಕೊಂಡಿದ್ದ ಎಲ್ಲರ ಮೆಚ್ಚಿನ ಅಕ್ಕರೆಯ ಹುಡುಗ. ಎರಡು ವರ್ಷದ ಹಿಂದೆ ಅದಿತಿ ಅವರನ್ನು ಕೈ ಹಿಡಿದು ಹೊಸ ಬಾಳಿನ ಹೊಸಿಲೂ ತುಳಿದಿದ್ದರು.

Family of Captain MV Pranjal
ಕ್ಯಾಪ್ಟನ್‌ ಫ್ಯಾಮಿಲಿ ಕ್ಯಾ ಪ್ರಾಂಜಲ್‌ ಅದಿತಿ ಪ್ರಾಂಜಲ್‌ ಅನುರಾಧಾ ವೆಂಕಟೇಶ್‌ ಎಂ ವೆಂಕಟೇಶ್‌

ಅವರು ಹುತಾತ್ಮರಾಗಿದ್ದಾರೆಂಬ ಸುದ್ದಿಯನ್ನು ಕೇಳುತ್ತಲೇ ಕುಟುಂಬ ವರ್ಗ, ಸ್ನೇಹಿತರು, ಶಿಕ್ಷಕರು ಕಣ್ಣೀರು ಹಾಕಿದ್ದರು. ಆದರೆ, ತಂದೆ ಎಂ.ವೆಂಕಟೇಶ್‌, ತಾಯಿ ಅನುರಾಧಾ ಮತ್ತು ಪತ್ನಿ ಅದಿತಿ ಮಾತ್ರ ಉಕ್ಕಿ ಬರುವ ಅಳುವನ್ನು ಗಂಟಲಲ್ಲೇ ಕಟ್ಟಿಕೊಂಡು ಸೈನಿಕನ ಮನೆಯವರು ತಾವು ಎಂಬುದನ್ನು ತೋರಿಸುವ ಸ್ಥಿತಪ್ರಜ್ಞತೆಯನ್ನು ಮೆರೆದಿದ್ದರು.

Family of Captain MV Pranjal
ಕ್ಯಾಪ್ಟನ್‌ ಗೆ ಅಂತಿಮ ನಮನ ಇದು ಕುಟುಂಬಕ್ಕೆ ಭಾವುಕ ಕ್ಷಣ

ಇದೀಗ ಎಲ್ಲ ಮುಗಿದು ಒಂದು ನೀರವ ಮೌನವಷ್ಟೇ ಉಳಿದೆ. ಬಹುಶಃ ಮನೆಯಲ್ಲಿ ಪ್ರಾಂಜಲ ನೆನಪುಗಳು ಹರಿದಾಡುತ್ತಿರಬಹುದು. ಒಬ್ಬನೇ ಮಗನನ್ನು ಕಳೆದುಕೊಂಡ ನೋವಿಗೆ ಪರಸ್ಪರ ಸಾಂತ್ವನ ಹೇಳುತ್ತಿರಬಹುದು. ಇದರ ನಡುವೆಯೇ ಆಕ್ರೋಶ, ಸಂಕಟಗಳು ನಾನಾ ರೂಪದಲ್ಲಿ ಪ್ರಕಟಗೊಳ್ಳುತ್ತಿರಬಹುದು.

ಇಂಥ ಹೊತ್ತಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಒಂದು ಭಾವಪೂರ್ಣ ಕವನ ಎಲ್ಲರ ಮನಸ್ಸನ್ನು ಹಿಂಡುತ್ತಿದೆ, ಉಗ್ರರ ಮೇಲೆ ಆಕ್ರೋಶ ಹೆಚ್ಚಿಸುತ್ತಿದೆ.

Captain pranjal mother poem fact check

ಆ ಕವನ ಹೀಗಿದೆ..

ಓ ಪ್ರಕೃತಿಯೇ ಹಣ್ಣೆಲೆಗಳು ಸರದಿಯಲ್ಲಿರುವಾಗ
ನೀನೇಕೆ ಎಳೆ ಚಿಗುರ ಕಸಿದುಕೊಂಡೆ?
ಬೆಳೆದು ಹೆಮ್ಮರವಾಗಬೇಕಾದ ಚಿಕ್ಕ ಗಿಡವ
ಚಿವುಟಿ ನೀನೇನ ಪಡೆದುಕೊಂಡೆ?

ಓ ರಕ್ತ ಪಿಪಾಸು ಉಗ್ರಗಾಮಿಗಳೇ…..
ನಿಮಗೇಕೆ ಈ ಕೊನೆಯಿಲ್ಲದ ದಾಹ?
ಎಂದೆಂದಿಗೂ ಸಾಧಿಸಲಾಗದ, ನಿಮಗೆಂದಿಗೂ ದೊರಕದ
ನಮ್ಮೀ ಮಾತೃಭೂಮಿಯ ಮೇಲೆ ಏಕೀ ವ್ಯಾಮೋಹ?

ನಿಮ್ಮನು ಪ್ರಚೋದಿಸಿ ಕಳುಹಿಸಿದ ಸ್ವಾರ್ಥಿಗಳಿಗೆ
ಎಂದು ಆಗುವುದು ಜ್ಞಾನೋದಯ?
ಎಲ್ಲರಿಗೂ ಬದುಕುವ ಹಕ್ಕು ಪ್ರಕೃತಿಯು ನೀಡಿರುವಾಗ
ನಿಮಗೇಕೆ ಅತಿಕ್ರಮಿಸುವ ಈ ದುಷ್ಟ ಸಂಪ್ರದಾಯ?

ನಮ್ಮ ಕಣ್ಣೆದುರೇ ಬೆಳೆದ ಈ ಕಂದ ಪ್ರಾಂಜಲನ
ಜೀವ ಕಸಿಯುವ ಹಕ್ಕ ನಿಮಗೆ ನೀಡಿದವರಾರು?
ಕೇಳಿಸದೇ ನಿಮಗೆ ಹೊತ್ತು ಹೆತ್ತ ತಾಯಿಯ ಆಕ್ರಂದನ?
ಕಾಣಿಸದೇ, ದುಃಖವ ನುಂಗಿ ಕಣ್ಣೀರು ತಡೆದುಕೊಂಡ ತಂದೆಯ ದುಮ್ಮಾನ?
ಅನಿಸುವುದಿಲ್ಲವೇ, ಕೈಹಿಡಿದ ಬಾಳ ಸಂಗಾತಿಯ ಎಣೆಯಿಲ್ಲದ ಗೋಳು?

-ಇದು ತಾಯಿ ಹೃದಯವೊಂದರ ಸಂಕಟದಂತೆ ಕಾಣುತ್ತಿದೆ. ಉಗ್ರರನ್ನು ರಕ್ತಪಿಪಾಸುಗಳೆಂದು ಕರೆದ ಈ ಕವನ, ನಿಮಗೆಂದೂ ದೊರಕದ ನಮ್ಮೀ ಮಾತೃಭೂಮಿಯ ಮೇಲೆ ಯಾಕೆ ವ್ಯಾಮೋಹ ಎಂದು ಕೇಳುತ್ತದೆ. ಕೊನೆಗೆ ಮನೆಯವರ ಸಂಕಟ ನಿಮಗೆ ಅರ್ಥವಾಗುವುದಿಲ್ಲವೇ ಎಂದು ಕೇಳಲಾಗಿದೆ.

ಹಾಗಿದ್ದರೆ ಈ ಕವನ ಬರೆದವರು ಯಾರು?

ಸಾಮಾಜಿಕ ಜಾಲತಾಣದಲ್ಲಿ ಈ ಕವನವನ್ನು ಓದಿದಾಗ ಮೂಡುವ ಭಾವವೇನೆಂದರೆ, ಇದು ತಾಯಿ ಕರುಳಿನ ರೋದನ ಮತ್ತು ಆಕ್ರೋಶ. ಈ ಕವನವನ್ನು ಪ್ರಾಂಜಲ್‌ ಅವರ ತಾಯಿ ಅನುರಾಧಾ ವೆಂಕಟೇಶ್‌ ಅವರು ಷೇರ್‌ ಮಾಡಿಕೊಂಡಿದ್ದಾರೆ. ಹೀಗಾಗಿ ಅವರೇ ಬರೆದಿದ್ದಾರೆ ಎಂದು ಹೆಚ್ಚಿನ ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ, ಪ್ರಾಂಜಲ್‌ ಅವರ ತಾಯಿ ಇದು ತಾನು ಬರೆದಿದ್ದಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Raja Marga Column : ಕ್ಯಾ. ಪ್ರಾಂಜಲ್‌ ಮಾತ್ರವಲ್ಲ ಅವರ ಹೆತ್ತವರು, ಪತ್ನಿ ಕೂಡಾ ವೀರ ಯೋಧರೆ!

ಪ್ರಾಂಜಲ್‌ ತಾಯಿ ವಿಸ್ತಾರ ನ್ಯೂಸ್‌ಗೆ ಹೇಳಿದ್ದೇನು?

ನಮ್ಮ ಮಗ ಪ್ರಾಂಜಲ್‌ ಕುರಿತು ಯಾರೋ ಬರೆದ ಭಾವಪೂರ್ಣ ಕವಿತೆಯನ್ನು ಓದಿರುವೆ. ಅದು ಖಂಡಿತವಾಗಿಯೂ ನಾನು ಬರೆದಿದ್ದಲ್ಲ. ಆದರೆ ಸೋಷಿಯಲ್‌ ಮೀಡಿಯಾಗಳಲ್ಲಿ ಈ ಕವನ ನಾನೇ ಬರೆದಿದ್ದು ಎಂಬಂತೆ ನನ್ನ ಹೆಸರಲ್ಲಿ ಪ್ರಸಾರ ಮಾಡುತ್ತಿದ್ದಾರೆ. ಹೀಗೆ ಮಾಡುವುದು ಸರಿಯಲ್ಲ ಎಂದು ಪ್ರಾಂಜಲ್‌ ಅವರ ತಾಯಿ ಅನುರಾಧಾ ಅವರು ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯಿಸಿದ್ದಾರೆ.

ಈ ಕವಿತೆಯ ಭಾವಾರ್ಥ ಚೆನ್ನಾಗಿದೆ. ಹಾಗಾಗಿ ನಾನು ಇದನ್ನು ನನ್ನ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಶೇರ್‌ ಮಾಡಿದ್ದೆ ಅಷ್ಟೆ. ಇದನ್ನು ಬರೆದ ಕವಿಗೆ ಕೃತಜ್ಞತೆ ಸಲ್ಲಿಸುವೆ. ಆದರೆ ಈ ಕವನದ ಕುರಿತು ಸೋಷಿಯಲ್‌ ಮೀಡಿಯಾಗಳಲ್ಲಿ ತಪ್ಪು ಮಾಹಿತಿ ಕೊಡುವುದು ಸರಿಯಲ್ಲ ಎಂದು ಅವರು ಹೇಳಿದರು.

ಇದು ಮಗನ ಕುರಿತು ಪ್ರಾಂಜಲ್‌ ತಾಯಿ ಬರೆದ ಭಾವಪೂರ್ಣ ಕವಿತೆ ಎಂದು ಪೇಸ್‌ಬುಕ್‌, ವಾಟ್ಸ್‌ಆಪ್‌ ಇತ್ಯಾದಿ ಕಡೆ ಪ್ರಸಾರ ಆಗುತ್ತಿರುವುದನ್ನು ಕಂಡು ನನಗೆ ಬೇಸರವಾಗಿದೆ. ನನ್ನ ಮಗನ ಕುರಿತು ಇರುವ ಜನರ ಅಭಿಮಾನಕ್ಕೆ ನಾವು ಚಿರಋಣಿ. ಆದರೆ ದಯವಿಟ್ಟು ಯಾರೂ ಯಾವುದೇ ರೀತಿಯ ತಪ್ಪು ಮಾಹಿತಿ ಹರಡಬೇಡಿ ಎಂದು ಅನುರಾಧಾ ಅವರು ಸಾರ್ವಜನಿಕರಲ್ಲಿ ವಿನಂತಿ ಮಾಡಿದರು.

Continue Reading

Fact Check

Fact Check: ಪವಿತ್ರ ಗಂಗಾಜಲಕ್ಕೂ 18% ಜಿಎಸ್‌ಟಿ? ಖರ್ಗೆ ಆರೋಪ ಎಷ್ಟು ಸತ್ಯ? ಇಲ್ಲಿದೆ ವಾಸ್ತವ

Fact Check: ಕೇಂದ್ರ ಸರ್ಕಾರವು ಗಂಗಾಜಲಕ್ಕೂ ಶೇ.18ರಷ್ಟು ಜಿಎಸ್‌ಟಿ ವಿಧಿಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟ್ವೀಟ್‌ ಮಾಡಿದ್ದಾರೆ. ಆದರೆ, ಇದರ ವಾಸ್ತವ ಎಷ್ಟು ಎಂಬುದರ ಮಾಹಿತಿ ಹೀಗಿದೆ.

VISTARANEWS.COM


on

Mallikarjun Kharge On GST
Koo

ನವದೆಹಲಿ: ಇದೇನಿದ್ದರೂ ಸಾಮಾಜಿಕ ಜಾಲತಾಣಗಳ ಯುಗ. ಒಂದೇ ಒಂದು ಮಾಹಿತಿಯನ್ನು ಫೇಸ್‌ಬುಕ್‌, ಟ್ವಿಟರ್‌ ಸೇರಿ ಯಾವುದೇ ಜಾಲತಾಣಗಳಲ್ಲಿ ಹಂಚಿಕೊಂಡರೆ ಸಾಕು, ಲಕ್ಷಾಂತರ ಜನರಿಗೆ ಅದು ಕ್ಷಣಮಾತ್ರದಲ್ಲಿ ತಲುಪುತ್ತದೆ. ಅದರಲ್ಲೂ, ರಾಜಕಾರಣಿಗಳು, ಗಣ್ಯರು ಸೇರಿ ಲಕ್ಷಾಂತರ ಫಾಲೋವರ್‌ಗಳನ್ನು ಹೊಂದಿದವರು ಒಂದು ಮಾಹಿತಿ ಹಂಚಿಕೊಂಡರೆ, ಅದರ ರೀಚ್‌ ದೊಡ್ಡ ಮಟ್ಟದಲ್ಲಿ ಇರುತ್ತದೆ. ಇದೇ ಕಾರಣಕ್ಕೆ ಜಾಲತಾಣಗಳನ್ನು ಈಗ ನಕಲಿ ಸುದ್ದಿ ಹರಡಿಸಲು ಅಸ್ತ್ರವನ್ನಾಗಿ ಮಾಡಿಕೊಳ್ಳಲಾಗುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು, ಕೇಂದ್ರ ಸರ್ಕಾರವು ಪವಿತ್ರ ಗಂಗಾಜಲಕ್ಕೂ (Gangajal) ಶೇ.18ರಷ್ಟು ಜಿಎಸ್‌ಟಿ ವಿಧಿಸಿದೆ ಎಂದು ಟ್ವೀಟ್‌ ಮಾಡಿದ್ದು, ಇವರ ಮಾಹಿತಿ ಎಷ್ಟು ಸತ್ಯದಿಂದ (Fact Check) ಕೂಡಿದೆ ಎಂಬುದು ಬಯಲಾಗಿದೆ.

ಖರ್ಗೆ ಮಾಡಿದ ಆರೋಪವೇನು?

“ನರೇಂದ್ರ ಮೋದಿ ಅವರೇ, ಗಂಗಾ ಮಾತೆಯನ್ನು ಮೋಕ್ಷ ನೀಡುವ ಕಾರಣಕ್ಕಾಗಿ ಹೆಚ್ಚು ಪ್ರಾಮುಖ್ಯತೆಯಿಂದ ನೋಡಲಾಗುತ್ತದೆ. ಪ್ರತಿಯೊಬ್ಬರೂ ಹುಟ್ಟಿನಿಂದ ಸಾವಿನವರೆಗೆ ಗಂಗೆಯನ್ನು ಗೌರವಿಸುತ್ತಾರೆ. ಆದರೆ, ನೀವು ಇಂದು ಉತ್ತರಾಖಂಡಕ್ಕೆ ತೆರಳಿದ್ದೀರಿ. ಇಂತಹ ಹೊತ್ತಿನಲ್ಲಿಯೇ ನಿಮ್ಮ ಸರ್ಕಾರವು ಪವಿತ್ರ ಗಂಗಾ ಜಲಕ್ಕೆ ಶೇ.18ರಷ್ಟು ಜಿಎಸ್‌ಟಿ ವಿಧಿಸಿದೆ. ಮನೆಗಳಲ್ಲಿ ಗಂಗಾ ನದಿ ನೀರು ಇಟ್ಟುಕೊಳ್ಳುವವರನ್ನೂ ನೀವು ಬಿಡುತ್ತಿಲ್ಲ. ನಿಮ್ಮ ಸರ್ಕಾರ ಅವರಿಗೂ ಜಿಎಸ್‌ಟಿ ವಿಧಿಸಿ, ಹಣವನ್ನು ಲೂಟಿ ಮಾಡುತ್ತಿದೆ” ಎಂದು ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ ಪೋಸ್ಟ್‌ ಮಾಡಿದ್ದಾರೆ.

ಅಷ್ಟಕ್ಕೂ ವಾಸ್ತವ ಏನು?

ಮಲ್ಲಿಕಾರ್ಜುನ ಖರ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಗಂಗಾಜಲಕ್ಕೆ ಜಿಎಸ್‌ಟಿ ವಿಧಿಸಿರುವ ಕುರಿತು ಪೋಸ್ಟ್‌ ಮಾಡುತ್ತಲೇ ಕೇಂದ್ರೀಯ ಪರೋಕ್ಷ ತೆರಿಗೆಗಳು ಹಾಗೂ ಕಸ್ಟಮ್ಸ್‌ ಮಂಡಳಿಯು (CBIC) ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದೆ. “ಗಂಗಾಜಲಕ್ಕೆ ಯಾವುದೇ ಜಿಎಸ್‌ಟಿ ವಿಧಿಸಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಮಾಹಿತಿ ಹರಡುತ್ತಿರುವ ಕಾರಣ ಸ್ಪಷ್ಟನೆ ನೀಡಲಾಗುತ್ತಿದೆ” ಎಂದು ತಿಳಿಸಿದೆ.

ಇದನ್ನೂ ಓದಿ: Fact Check: ಕೇರಳ ಯೋಧನ ಮೇಲೆ ಪಿಎಫ್ಐ ದಾಳಿ! ಪ್ರಸಿದ್ಧಿಗಾಗಿ ‘ಫೇಕ್’ ಅಟ್ಯಾಕ್ ಕತೆ ಕಟ್ಟಿದ್ನಾ ಸೈನಿಕ?

“ದೇಶಾದ್ಯಂತ ಗಂಗಾಜಲವನ್ನು ಪೂಜೆಯ ವೇಳೆ ಬಳಸುತ್ತಾರೆ. ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ಗಂಗಾಜಲವನ್ನು ಇಟ್ಟುಕೊಳ್ಳುತ್ತಾರೆ. ಹಾಗೆಯೇ, ದೇಶದಲ್ಲಿ ಪೂಜಾ ಸಾಮಗ್ರಿಗಳನ್ನು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡಲಾಗಿದೆ. 2017ರ ಮೇ 18, 19 ಹಾಗೂ 2017ರ ಜೂನ್‌ 3ರಂದು ನಡೆದ ಜಿಎಸ್‌ಟಿ ಸಭೆಗಳಲ್ಲಿ ಈ ಕುರಿತು ವಿಸ್ತೃತವಾಗಿ ಚರ್ಚಿಸಲಾಗಿದೆ. ಇದಾದ ಬಳಿಕವೇ ಪೂಜಾ ಸಾಮಗ್ರಿಗಳನ್ನು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡಲಾಗಿದೆ” ಎಂದು ಸ್ಪಷ್ಟನೆ ನೀಡಿದೆ. ಹಾಗಾಗಿ, ಮಲ್ಲಿಕಾರ್ಜುನ ಖರ್ಗೆ ಅವರು ಮಾಡಿದ ಪೋಸ್ಟ್‌ ಸತ್ಯಕ್ಕೆ ದೂರವಾಗಿದೆ.

Continue Reading

Fact Check

Fact Check: ಕೆನಡಾ ಆರೋಪದ ಬಳಿಕ ರಾಷ್ಟ್ರಪತಿ ಭವನದ ಸಿಖ್‌ ಭದ್ರತಾ ಸಿಬ್ಬಂದಿಗೆ ಕೊಕ್?‌

Fact Check: ಭಾರತೀಯ ಸೇನೆಯಲ್ಲಿ ಸಿಖ್ಖರನ್ನು ತುಚ್ಚವಾಗಿ ನಡೆಸಿಕೊಳ್ಳಲಾಗುತ್ತಿದೆ, ಅವರಿಗೆ ರಜೆ ಕೊಡುತ್ತಿಲ್ಲ ಎಂಬೆಲ್ಲ ವದಂತಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಕೆಲವು ಪಾಕಿಸ್ತಾನಿಯರೂ ಇದರಲ್ಲಿ ಶಾಮೀಲಾಗಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Fact Check
Koo

ನವದೆಹಲಿ: ಕೆನಡಾದಲ್ಲಿ ಖಲಿಸ್ತಾನಿಗಳ ನಾಯಕ ಹರ್ದೀಪ್‌ ಸಿಂಗ್‌ ನಿಜ್ಜರ್‌ನನ್ನು (Hardeep Singh Nijjar) ಹತ್ಯೆ ಮಾಡಿದ್ದರ ಹಿಂದೆ ಭಾರತ ಸರ್ಕಾರದ ಕೈವಾಡವಿದೆ ಎಂದು ಪ್ರಧಾನಿ ಜಸ್ಟಿನ್‌ ಟ್ರುಡೋ (Justin Trudeau) ಆರೋಪಿಸಿದ ಬಳಿಕ ಭಾರತದಲ್ಲಿ ಸಿಖ್‌ ಸಮುದಾಯದವರ ಕುರಿತು ವದಂತಿ ಹರಡಿಸಲಾಗುತ್ತಿದೆ. ಸಿಖ್‌ ಸಮುದಾಯದವರ ಮೇಲೆ ಕೇಂದ್ರ ಸರ್ಕಾರ ದೌರ್ಜನ್ಯ ಎಸಗುತ್ತಿದೆ ಎಂಬೆಲ್ಲ ಆರೋಪಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಮಾಡಲಾಗುತ್ತಿದೆ. ಆದರೆ, ಪಿಐಬಿ ಫ್ಯಾಕ್ಟ್‌ಚೆಕ್‌ ಘಟಕವು (Fact Check) ಎಲ್ಲ ಆರೋಪಗಳನ್ನು ತಿರಸ್ಕರಿಸಿದೆ. ಸೇನೆಯೂ ವದಂತಿಗಳನ್ನು ಅಲ್ಲಗಳೆದಿದೆ.

ಏನಿದು ವದಂತಿ?

ಹರ್ದೀಪ್‌ ಸಿಂಗ್‌ ನಿಜ್ಜರ್‌ ಕೊಲೆಯ ಕೈವಾಡದ ಕುರಿತು ಜಸ್ಟಿನ್‌ ಟ್ರುಡೋ ಆರೋಪಿಸುತ್ತಲೇ ಭಾರತದಲ್ಲಿ ಸಿಖ್ಖರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ. ರಾಷ್ಟ್ರಪತಿ ಭವನ ಹಾಗೂ ರಾಷ್ಟ್ರಪತಿಯವರ ಅಧಿಕೃತ ನಿವಾಸದಿಂದ ಸಿಖ್‌ ಸಮುದಾಯದ ಸಿಬ್ಬಂದಿಯನ್ನು ತೆಗೆಯಲಾಗಿದೆ. ಅವರನ್ನು ಬೇರೆಡೆ ನಿಯೋಜಿಸಲಾಗಿದೆ. ಅಷ್ಟೇ ಅಲ್ಲ, ಭಾರತೀಯ ಸೇನೆಯಲ್ಲಿರುವ ಸಿಖ್‌ ಸಮುದಾಯದವರಿಗೆ ರಜೆಗಳನ್ನು ನೀಡುತ್ತಿಲ್ಲ. ಅವರ ರಜೆಯನ್ನು ರದ್ದುಗೊಳಿಸಲಾಗಿದೆ. ಇಂದಿರಾ ಗಾಂಧಿ ಅವರನ್ನು ಹತ್ಯೆಗೈದಂತೆ ನನ್ನನ್ನೂ ಹತ್ಯೆ ಮಾಡಲಾಗುತ್ತದೆ ಎಂಬ ಭಯ ಮೋದಿ ಅವರನ್ನು ಕಾಡುತ್ತಿದೆ ಎಂದೆಲ್ಲ ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹರಡಿಸಲಾಗಿದೆ. ಕೆಲವರು ಪಾಕಿಸ್ತಾನದಿಂದ ಇಂತಹ ವದಂತಿ ಹರಡಿಸಲಾಗಿದೆ ಎಂದು ತಿಳಿದುಬಂದಿದೆ.

ವಾಸ್ತವಾಂಶ ಏನು?

ನಕಲಿ ಸುದ್ದಿಗಳನ್ನು ಪರಿಶೀಲಿಸಿ, ವಾಸ್ತವವನ್ನು ಜನರಿಗೆ ತಿಳಿಸುವ ಪಿಐಬಿ ಫ್ಯಾಕ್ಟ್‌ಚೆಕ್‌ ಘಟಕವು ಈ ವದಂತಿಗಳನ್ನು ಅಲ್ಲಗಳೆದಿದೆ. “ರಾಷ್ಟ್ರಪತಿ ಭವನದಿಂದ ಸಿಖ್‌ ಭದ್ರತಾ ಸಿಬ್ಬಂದಿಯನ್ನು ತೆರವುಗೊಳಿಸಲಾಗಿದೆ ಹಾಗೂ ಸೇನೆಯಲ್ಲಿರುವ ಸಿಖ್‌ ಯೋಧರಿಗೆ ರಜೆಗಳನ್ನು ನೀಡುತ್ತಿಲ್ಲ ಎಂಬ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪಸರಿಸಿರುವ ಮಾಹಿತಿಯು ಸತ್ಯಕ್ಕೆ ದೂರವಾಗಿದೆ. ಇಂತಹ ಯಾವುದೇ ಆದೇಶ ಹೊರಡಿಸಿಲ್ಲ” ಎಂದು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: India Canada Row: ಮಣಿಪುರ, ಕಾಶ್ಮೀರಕ್ಕೆ ಹೋಗದಿರಿ; ಕೆನಡಾ ಮತ್ತೊಂದು ಉದ್ಧಟತನ

ಭಾರತೀಯ ಸೇನೆಯೂ ಇಂತಹ ವದಂತಿಗಳ ಕುರಿತು ಸ್ಪಷ್ಟನೆ ನೀಡಿದೆ. “ಭಾರತೀಯ ಸೇನೆಯ ಕುರಿತ ಯಾವುದೇ ನಕಲಿ ಮಾಹಿತಿಯನ್ನು, ದ್ವೇಷ ಹರಡುವ ಪೋಸ್ಟ್‌ಗಳನ್ನು ನಂಬದಿರಿ” ಎಂದು ಆರೋಪಗಳನ್ನು ಅಲ್ಲಗಳೆದಿದೆ. ಕೆನಡಾದಲ್ಲಿರುವ ಭಾರತೀಯರ ರಕ್ಷಣೆ ಮಾಡಬೇಕು ಹಾಗೂ ಭಾರತ ವಿರೋಧಿ ಚಟುವಟಿಕೆಗಳನ್ನು ನಿಗ್ರಹಿಸಬೇಕು ಎಂದು ನರೇಂದ್ರ ಮೋದಿ ಅವರು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಅವರಿಗೆ ಸೂಚಿಸಿದ ಬಳಿಕ ಎರಡೂ ದೇಶಗಳ ಸಂಬಂಧದ ಮಧ್ಯೆ ಬಿರುಕು ಬಿಟ್ಟಿದೆ. ಇದು ಈಗ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸುದ್ದಿ ಹರಡಿಸುವ, ಭಾರತದ ವಿರುದ್ಧ ಷಡ್ಯಂತ್ರ ಮಾಡುವತನಕ ಮುಂದುವರಿದಿದೆ.

Continue Reading

Fact Check

Fact Check: ಸೌದಿ ಅರೇಬಿಯಾದಲ್ಲಿ ನರೇಂದ್ರ ಮೋದಿ ಚಿನ್ನದ ಪುತ್ಥಳಿ ಕೆತ್ತನೆ ಮಾಡಲಾಗಿದೆಯೇ?

Fact Check: ಪ್ರಧಾನಿ ನರೇಂದ್ರ ಮೋದಿ ಅವರ ಚಿನ್ನದ ಪುತ್ಥಳಿಯನ್ನು ಸೌದಿ ಅರೇಬಿಯಾದಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಆದರೆ, ಈ ಸುದ್ದಿ ಎಷ್ಟು ನಿಜ?

VISTARANEWS.COM


on

Narendra Modi Gold Bust
Koo

ನವದೆಹಲಿ: ಸಾಮಾಜಿಕ ಜಾಲತಾಣವು ಸಕಲ ಮಾಹಿತಿಯ ಕಣಜ ಆಗಿದೆ. ಎಲ್ಲರಿಗೂ ಈಗ ಸಾಮಾಜಿಕ ಜಾಲತಾಣಗಳು ಅವಿಭಾಜ್ಯವಾಗಿವೆ. ಸಮಾಜದ ಮೇಲೆ, ಸರ್ಕಾರದ ಮೇಲೆ ಪರಿಣಾಮ ಬೀರುವಷ್ಟು ಸಾಮಾಜಿಕ ಜಾಲತಾಣಗಳು ಪ್ರಬಲವಾಗಿವೆ. ಹಾಗೆಯೇ, ನಕಲಿ ಸುದ್ದಿಗಳ ಹರಡುವಿಕೆಯ ಫ್ಯಾಕ್ಟರಿಗಳಾಗಿಯೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳಲಾಗುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಸೌದಿ ಅರೇಬಿಯಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚಿನ್ನದ ಪುತ್ಥಳಿಯನ್ನು (Narendra Modi Gold Bust) ಕೆತ್ತಲಾಗಿದೆ ಎಂಬ ಸುದ್ದಿ ಹರಡಿದೆ. ಆದರೆ ಈ ಸುದ್ದಿ ವಾಸ್ತವಕ್ಕೆ ಹತ್ತಿರವಾಗಿಲ್ಲ ಎಂಬುದು ಮಹತ್ವದ (Fact Check) ಸಂಗತಿಯಾಗಿದೆ.

ಏನಿದು ವದಂತಿ?

ಸೌದಿ ಅರೇಬಿಯಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚಿನ್ನದ ಮೂರ್ತಿಯನ್ನು ಕೆತ್ತಲಾಗಿದೆ. ಇದು 156 ಗ್ರಾಂ ಇದೆ ಎಂಬ ಫೋಟೊ ಹಾಗೂ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗಿದೆ. ಕೆಲ ದಿನಗಳ ಹಿಂದಷ್ಟೇ ಸೌದಿ ಅರೇಬಿಯಾ ರಾಜ ಮೊಹಮ್ಮದ್‌ ಬಿನ್‌ ಸಲ್ಮಾನ್‌ ಅವರು ದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಗೆ ಬಂದು, ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಇದರ ಬೆನ್ನಲ್ಲೇ, ಭಾರತ ಹಾಗೂ ಸೌದಿ ಅರೇಬಿಯಾ ಸಂಬಂಧದ ಪ್ರತೀಕವಾಗಿ ಮೋದಿ ಚಿನ್ನದ ಪುತ್ಥಳಿ ಕೆತ್ತಲಾಗಿದೆ ಎಂಬ ವದಂತಿ ಹರಡಿಸಲಾಗಿದೆ.

ವಾಸ್ತವ ಏನು?

ಸೂರತ್​: 2022ರ ಡಿಸೆಂಬರ್​​ನಲ್ಲಿ ನಡೆದಿದ್ದ ಗುಜರಾತ್ ವಿಧಾನಸಭಾ​​ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ್ದಕ್ಕೆ ಫುಲ್​ ಖುಷಿಯಾದ ಸೂರತ್​​ನ ಆಭರಣ ವ್ಯಾಪಾರಿಯೊಬ್ಬರು, 18 ಕ್ಯಾರೆಟ್​ ಚಿನ್ನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪುತ್ಥಳಿಯನ್ನು ಕೆತ್ತನೆ ಮಾಡಿಸಿದ್ದಾರೆ. ಆದರೆ ಈ ವಿಡಿಯೊವನ್ನು ಸೌದಿ ಅರೇಬಿಯಾದಲ್ಲಿ ಮೋದಿ ಚಿನ್ನದ ಮೂರ್ತಿಯನ್ನು ಕೆತ್ತಲಾಗಿದೆ ಎಂದು ಸುಳ್ಳು ಹರಡಿಸಲಾಗಿದೆ ಎಂದು ಹಲವು ಮಾಧ್ಯಮ ಸಂಸ್ಥೆಗಳು ನಡೆಸಿದ ಫ್ಯಾಕ್ಟ್‌ಚೆಕ್‌ನಲ್ಲಿ ಗೊತ್ತಾಗಿದೆ.

8 ತಿಂಗಳ ಹಿಂದಿನ ವಿಡಿಯೊ

ಇದನ್ನೂ ಓದಿ: Fact Check: ಜಿ20 ಸಭೆಗೂ ಮುನ್ನ ಮೋದಿಯ ಬೃಹತ್‌ ಕಟೌಟ್‌ ಫೋಟೊ ವೈರಲ್;‌ ಈ ಸುದ್ದಿ ನಿಜವೇ?

ಸೂರತ್​ನ ಚಿನ್ನಾಭರಣ ಉದ್ಯಮಿಯಾದ, ರಾಧಿಕಾ ಚೈನ್ಸ್​​ನ ಮಾಲೀಕ ಬಸಂತ್​ ಬೋಹ್ರಾ ಎಂಬುವರು ಈಗ ಪ್ರಧಾನಿ ನರೇಂದ್ರ ಮೋದಿಯವರ ಚಿನ್ನದ ಪ್ರತಿಮೆ ಕೆತ್ತನೆ ಮಾಡಿಸಿ ಸುದ್ದಿಯಾಗಿದ್ದರು. ಗುಜರಾತ್​​ನ​​ 182 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 156 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಮಟ್ಟದ ಗೆಲವು ಸಾಧಿಸಿದೆ. ಹಾಗಾಗಿ ಈ ಪ್ರತಿಮೆಯನ್ನು ಕೂಡ 156 ಗ್ರಾಂಗಳಷ್ಟು ಚಿನ್ನದಲ್ಲಿಯೇ ನಿರ್ಮಿಸಲಾಗಿದೆ.

Continue Reading
Advertisement
Narendra Modi And Rahul Gandhi
ದೇಶ27 mins ago

Election Results 2023: ವಿಧಾನಸಭೆ ಚುನಾವಣೆಗಳು ಲೋಕಸಭೆಯ ಸೆಮಿಫೈನಲ್‌ ಏಕೆ?

Rain disrupted for two more days
ಉಡುಪಿ47 mins ago

Karnataka Weather: ಟಿ-20 ಕ್ರಿಕೆಟ್‌ ಪಂದ್ಯದಲ್ಲಿ ಮಳೆಯಾಟ!

Healthy relationship
ಅಂಕಣ52 mins ago

Raja Marga Column : ಚೆನ್ನಾಗಿದ್ದ ಸಂಬಂಧಗಳು ಕೆಡೋದ್ಯಾಕೆ? ಇಲ್ಲಿವೆ 12 ಕಾರಣಗಳು

Exit Poll_Vist
ದೇಶ1 hour ago

Assembly Election Result 2023: ಮತಗಟ್ಟೆ ಸಮೀಕ್ಷೆಗಳು ಹೇಳಿದ್ದೇನು?

Assembly Election Results 2023 Live
ದೇಶ1 hour ago

Election Results 2023: ನಾಲ್ಕೂ ರಾಜ್ಯಗಳಲ್ಲಿ ಪೈಪೋಟಿ ಹೇಗಿದೆ? ಯಾರಿಗೆ ವಿಜಯಮಾಲೆ?

Girl Child
ಕರ್ನಾಟಕ2 hours ago

ವಿಸ್ತಾರ ಸಂಪಾದಕೀಯ: ಭ್ರೂಣ ಹತ್ಯೆ ಜಾಲ ಆಘಾತಕಾರಿ

Dina Bhavihsya
ಪ್ರಮುಖ ಸುದ್ದಿ2 hours ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Sphoorti Salu
ಸುವಚನ3 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Assembly Election Results 2023
Live News8 hours ago

Election Results 2023 Live: ಕೆಲವೇ ಕ್ಷಣಗಳಲ್ಲಿ 4 ರಾಜ್ಯಗಳ ಚುನಾವಣೆ ಫಲಿತಾಂಶ; ಇಲ್ಲಿದೆ ಕ್ಷಣಕ್ಷಣದ ಅಪ್‌ಡೇಟ್ಸ್

Kapil Sharma And Sunil Grover
ಕಿರುತೆರೆ/ಒಟಿಟಿ8 hours ago

Kapil Sharma: 6 ವರ್ಷದ ಮುನಿಸು ಮರೆತು ಒಂದಾದ ಕಪಿಲ್‌ ಶರ್ಮಾ, ಸುನಿಲ್‌ ಗ್ರೋವರ್;‌ ಬರ್ತಿದೆ ಶೋ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Dina Bhavihsya
ಪ್ರಮುಖ ಸುದ್ದಿ2 hours ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ15 hours ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ2 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ2 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ3 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ3 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ5 days ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

ಟ್ರೆಂಡಿಂಗ್‌