Gold Price Outlook : ಚಿನ್ನದ ದರ 2023-24ರಲ್ಲಿ 68,000 ರೂ.ಗೆ ಏರಿಕೆಯಾಗುವ ಸಾಧ್ಯತೆ - Vistara News

ಚಿನ್ನದ ದರ

Gold Price Outlook : ಚಿನ್ನದ ದರ 2023-24ರಲ್ಲಿ 68,000 ರೂ.ಗೆ ಏರಿಕೆಯಾಗುವ ಸಾಧ್ಯತೆ

ಬಂಗಾರದ ದರ 2023-24ರಲ್ಲಿ ಹತ್ತು ಗ್ರಾಮ್‌ಗೆ 68,000 ರೂ.ಗೆ ಏರಿಕೆಯಾದರೂ ಆಶ್ಚರ್ಯ ಇಲ್ಲ ಎಂದು (Gold Price Outlook) ಮಾರುಕಟ್ಟೆ ತಜ್ಞರು ಹೇಳಿದ್ದಾರೆ? ಏಕೆ? ಇಲ್ಲಿದೆ ವಿವರ.

VISTARANEWS.COM


on

gold rate gold price increased by 110 rupees
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಬಂಗಾರದ ದರ 2023ರಲ್ಲಿ ನಾಗಾಲೋಟದಲ್ಲಿದ್ದು, 2023-24ರಲ್ಲಿ ದರ 68,000 ರೂ.ಗೆ ಜಿಗಿಯುವ ಸಾಧ್ಯತೆ ಇದೆ ಎಂದು ತಜ್ಞರು ಅಂದಾಜಿಸಿದ್ದಾರೆ. ಜಾಗತಿಕ ಮಟ್ಟದಲ್ಲಿ ಹಣದುಬ್ಬರದ ಪರಿಣಾಮ ಬಂಗಾರದ ಮೇಲಿನ ಹೂಡಿಕೆಗೆ 10-15% ಆದಾಯ ಸಿಗುವ ಸಾಧ್ಯತೆ ಇದೆ ಎಂದು ಎಲ್‌ಕೆಪಿ ಸೆಕ್ಯುರಿಟೀಸ್‌ನ ಉಪಾಧ್ಯಕ್ಷ ಜತೀನ್‌ ತ್ರಿವೇದಿ (Gold Price Outlook) ತಿಳಿಸಿದ್ದಾರೆ.

ಒಂದು ವೇಳೆ ಬಂಗಾರದ ದರ 15-20% ಪ್ರಮಾಣದಲ್ಲಿ ಏರಿಕೆಯಾದರೆ 64,500 ರೂ. ಮತ್ತು 66,800 ರೂ. ಶ್ರೇಣಿಯಲ್ಲಿ ಏರಿಕೆಯಾಗಲಿದೆ. 2024ರಲ್ಲಿ 68,000 ರೂ. ತನಕ ಹಚ್ಚಳವಾಗಬಹುದು ಎಂದು ತಜ್ಞರು ತಿಳಿಸಿದ್ದಾರೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರತಿ ಔನ್ಸ್‌ (28 ಗ್ರಾಮ್)‌ ಬಂಗಾರದ ದರ 1636 ಡಾಲರ್‌ಗೆ ಕುಸಿದಿತ್ತು. ಆದರೆ ಈಗ 1869 ಡಾಲರ್‌ಗಳ ಎತ್ತರಕ್ಕೆ ಜಿಗಿದಿದೆ. 2,000 ಡಾಲರ್‌ಗೆ ಏರಿದರೂ ಅಚ್ಚರಿ ಇಲ್ಲ ಎಂದು ವರದಿಯಾಗಿದೆ. ಕೆಲ ವರದಿಗಳ ಪ್ರಕಾರ 2,078 ಡಾಲರ್‌ಗಳ ದಾಖಲೆಯ ಎತ್ತರಕ್ಕೆ ಏರಲಿದೆ. ಹೀಗಾಗಿ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರ 68,000 ರೂ. ತನಕ ಏರಿಕೆಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ತಜ್ಞರು.

ಅಮೆರಿಕ ಮತ್ತು ಯುರೋಪ್‌ನಲ್ಲಿ ಆರ್ಥಿಕ ಹಿಂಜರಿತದ ಭೀತಿ ಹಿನ್ನೆಲೆಯಲ್ಲಿ ಸ್ವರ್ಣ ದರ ಜಿಗಿದಿದೆ. ಸಾಮಾನ್ಯವಾಗಿ ಆರ್ಥಿಕ ವಿಪತ್ತಿನ ಸಂದರ್ಭ ಬಂಗಾರದ ದರ ಏರುಗತಿ ಪಡೆಯುತ್ತದೆ ಎನ್ನುತ್ತಾರೆ ಕೋಟಕ್‌ ಸೆಕ್ಯುರಿಟೀಸ್‌ನ ತಜ್ಞ ರವೀಂದ್ರ ರಾವ್.‌ 1973ರಿಂದೀಚೆಗೆ 7 ಮಹಾ ಆರ್ಥಿಕ ಹಿಂಜರಿತದ ಸಂದರ್ಭ 5 ಸಲ ಬಂಗಾರದ ದರ ಜಿಗಿದಿತ್ತು. ‌

ಚಿನ್ನದ ಆಮದು ದರ ಇಳಿಕೆಗೆ ಒತ್ತಾಯ:

ಬಂಗಾರದ ದರ ದಾಖಲೆಯ ಏರಿಕೆ ಹಿನ್ನೆಲೆಯಲ್ಲಿ ಆಮದು ಸುಂಕವನ್ನು ತಗ್ಗಿಸಬೇಕು ಎಂದು ಜ್ಯುವೆಲ್ಲರಿ ವಲಯದ ತಜ್ಞರು ಒತ್ತಾಯಿಸಿದ್ದಾರೆ. ದರ ಹೆಚ್ಚಳದ ಪರಿಣಾಮ ಬಂಗಾರಕ್ಕೆ ಬೇಡಿಕೆ ತಾತ್ಕಾಲಿಕವಾಗಿ ಇಳಿಕೆಯಾಗುವ ಸಾಧ್ಯತೆ ಇದೆ. ಆಮದು ಸುಂಕ ಈಗ 15% ಇದೆ.‌

gold

ಭಾರತ ವಿಶ್ವದಲ್ಲಿಯೇ ಎರಡನೆಯ ಅತಿ ದೊಡ್ಡ ಬಂಗಾರದ ( Gold rate ) ಮಾರುಕಟ್ಟೆಯಾಗಿದೆ. ಚೀನಾ ಬಿಟ್ಟರೆ ಅತಿ ಹೆಚ್ಚು ಚಿನ್ನ ಕೊಳ್ಳುವ ದೇಶ ಜಗತ್ತಿನಲ್ಲಿ ಯಾವುದಾದರೂ ಇದ್ದರೆ ಅದು ಭಾರತ ಮಾತ್ರ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಜನ ಸಂಖ್ಯೆಯ ಹೆಚ್ಚಳ, ವಿವಾಹ ಸಮಾರಂಭಗಳ ಏರಿಕೆ, ಹಬ್ಬಗಳ ಸಂಭ್ರಮ, ಜನರ ಆದಾಯದಲ್ಲಿ ಏರಿಕೆ, ನಗರೀಕರಣ ಮೊದಲಾದ ಕಾರಣಗಳಿಂದ ಚಿನ್ನದ ಖರೀದಿ ಗಣನೀಯ ಏರಿಕೆಯಾಗುತ್ತಿದೆ. ಈ ಟ್ರೆಂಡ್‌ ಮತ್ತಷ್ಟು ಹೆಚ್ಚಳವಾಗಲಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ತನ್ನ ವರದಿಯಲ್ಲಿ ತಿಳಿಸಿದೆ. ಈ ವರದಿ ಹಲವು ಸ್ವಾರಸ್ಯಕರ ಅಂಶಗಳನ್ನು ಬಹಿರಂಗಪಡಿಸಿದೆ.

ಮದುವೆಗಳು ಮತ್ತು ಹಬ್ಬಗಳಲ್ಲಿ ಚಿನ್ನದ ಖರೀದಿ ಹೆಚ್ಚು: ಭಾರತದಲ್ಲಿ ಮದುವೆ ಹಾಗೂ ಹಬ್ಬಗಳ ಸಂದರ್ಭ ಚಿನ್ನದ ಖರೀದಿ ಹೆಚ್ಚು.ಮಾರುಕಟ್ಟೆಯಲ್ಲಿ ಅರ್ಧದಷ್ಟು ಪಾಲನ್ನು ವಧುವಿನ ಆಭರಣಗಳು ಮತ್ತು ಹಬ್ಬಗಳ ಸಂದರ್ಭ ಕೊಳ್ಳುವ ಒಡವೆಗಳೇ ವಹಿಸುತ್ತಿವೆ. ಭಾರತದಲ್ಲಿ ಚಿನ್ನದ ಖರೀದಿ ಹೊಸತೇನಲ್ಲ, ಹೀಗಿದ್ದರೂ ಮುಂಬರುವ ವರ್ಷಗಳಲ್ಲಿ ಶಾಪಿಂಗ್‌ ಗಣನೀಯ ಹೆಚ್ಚಲಿದೆ ಎನ್ನಲು ಕಾರಣಗಳನ್ನು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ಮುಂದಿಟ್ಟಿದೆ.

ಆರ್ಥಿಕ ಬೆಳವಣಿಗೆ, ಸಂಪತ್ತಿನ ವಿತರಣೆ, ನಗರೀಕರಣ ಎಫೆಕ್ಟ್: ಭಾರತದಲ್ಲಿ ಉಂಟಾಗುತ್ತಿರುವ ಆರ್ಥಿಕ ಬೆಳವಣಿಗೆ, ಸಂಪತ್ತಿನ ವಿತರಣೆ, ನಗರೀಕರಣದ ಪರಿಣಾಮ ಬಂಗಾರದ ಖರೀದಿಯ ಪ್ರವೃತ್ತಿ ಗಣನೀಯ ಹೆಚ್ಚಳವಾಗಲಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ.

ಜ್ಯುವೆಲ್ಲರಿ ರಫ್ತು: ಭಾರತದಿಂದ ಇತ್ತೀಚಿನ ವರ್ಷಗಳಲ್ಲಿ ಜ್ಯುವೆಲ್ಲರಿ ರಫ್ತು ಕೂಡ ಗಣನೀಯ ಏರಿಕೆಯಾಗುತ್ತಿದೆ. 2015ರಲ್ಲಿ 7.6 ಶತಕೋಟಿ ಡಾಲರ್‌ನಷ್ಟಿದ್ದ ಜ್ಯುವೆಲ್ಲರಿ ರಫ್ತು 2020ರಲ್ಲಿ ಕೋವಿಡ್-‌19 ಬರುವುದಕ್ಕೆ ಮುನ್ನ ೧೨.೪ ಶತಕೋಟಿ ಡಾಲರ್‌ಗೆ ಏರಿಕೆಯಾಗಿತ್ತು. ಭಾರತೀಯ ಜ್ಯುವೆಲ್ಲರಿಗಳನ್ನು ಹೊಸ ಮಾರುಕಟ್ಟೆಗೆ ರಫ್ತು ಮಾಡಬೇಕಾದ ಅಗತ್ಯವೂ ಇದೆ. ಈಗ ಜ್ಯುವೆಲ್ಲರಿ ರಫ್ತಿನ 90% ಪಾಲು ಕೂಡ ಕೇವಲ ಐದು ದೇಶಗಳಿಗೆ ಹೋಗುತ್ತಿದೆ.

ವಧುವಿನ ಆಭರಣಕ್ಕಾಗಿ ಖರೀದಿಯ ಪ್ರಾಬಲ್ಯ: ಶತಶತಮಾನಗಳಿಂದಲೂ ಭಾರತೀಯ ಸಂಸ್ಕೃತಿಯಲ್ಲಿ ಚಿನ್ನಕ್ಕೆ ಎಲ್ಲಿಲ್ಲದ ಪ್ರಾಧಾನ್ಯತೆ ಇದೆ. ಅದಕ್ಕೆ ಧಾರ್ಮಿಕ ನಂಬಿಕೆಗಳೂ ಬೆಸೆದುಕೊಂಡಿದೆ. ಹೀಗಾಗಿ ವಧುವಿನ ಆಭರಣಗಳಿಗೆ ಚಿನ್ನದ ಒಡವೆಗಳನ್ನು ಖರೀದಿಸುವುದು ವಾಡಿಕೆ. ಮಾಂಗಲ್ಯ ಸೂತ್ರಕ್ಕೆ ಜನ ಬಂಗಾರವನ್ನು ಕೊಳ್ಳುತ್ತಾರೆ. ಅದೊಂದೇ ಅಲ್ಲದೆ, ವಧುವಿನ ಅಂದ ಚಂದ ಹೆಚ್ಚಿಸಲು, ಗಮನ ಸೆಳೆಯಲು ಆಭರಣಗಳನ್ನು ಧರಿಸುತ್ತಾರೆ. ದೇಶದಲ್ಲಿ ಪ್ರತಿ ವರ್ಷ 1.1 ಕೋಟಿಗೂ ಹೆಚ್ಚು ಮದುವೆ ಕಾರ್ಯಕ್ರಮಗಳು ನಡೆಯುತ್ತವೆ. ಈ ಟ್ರೆಂಡ್‌ ದೀರ್ಘಕಾಲೀನವಾಗಿ ಮುಂದುವರಿಯಲಿದೆ. ವಧುವಿಗೆ ನೀಡುವ ಆಭರಣಗಳು ಅವಳದ್ದೇ ಆಸ್ತಿಯಾಗಿ ಇರುವುದರಿಂದ ಹಾಗೂ ಆರ್ಥಿಕ ಭದ್ರತೆಯ ದೃಷ್ಟಿಯಿಂದ ಮಹತ್ವದ್ದಾಗಿರುವುದರಿಂದ ಬಂಗಾರಕ್ಕೆ ಮದುವೆ ಸಂದರ್ಭ ಬೇಡಿಕೆ ಹೆಚ್ಚುತ್ತದೆ. ಕೃಷಿ ಕೂಡ ಚಿನ್ನಕ್ಕೆ ಬೇಡಿಕೆ ಸೃಷ್ಟಿಸಿದೆ. ಹೂಡಿಕೆಯ ಸಾಧನವಾಗಿಯೂ ಚಿನ್ನ ಬೇಡಿಕೆ ಉಳಿಸಿಕೊಂಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ವ್ಯವಸಾಯದ ಅಭಿವೃದ್ಧಿ, ಮಳೆ-ಬೆಳೆಯನ್ನು ಆಧರಿಸಿ ಚಿನ್ನಕ್ಕೆ ಬೇಡಿಕೆಯಲ್ಲಿ ವ್ಯತ್ಯಾಸವಾಗುತ್ತದೆ. ಮಳೆ-ಬೆಳೆ ಚೆನ್ನಾಗಿದ್ದಾಗ ಚಿನ್ನದ ಖರೀದಿ ಹೆಚ್ಚುತ್ತದೆ. ಕೃಷಿ ಕಡಿಮೆಯಾದಾಗ ಬಂಗಾರಕ್ಕೆ ಬೇಡಿಕೆ ಕಡಿಮೆಯಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ಮತ್ತೆ ಏರಿಕೆಯ ಹಾದಿಯಲ್ಲಿ ಚಿನ್ನದ ಬೆಲೆ; ಆಭರಣ ಖರೀದಿಯ ಮುನ್ನ ಇಂದಿನ ದರ ಗಮನಿಸಿ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ (ಜೂನ್‌ 15) ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಸತತ ಎರಡು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಬಂಗಾರದ ದರ ಶುಕ್ರವಾರ ಕೊಂಚ ಇಳಿದಿತ್ತು. ಇಂದು ಮತ್ತೆ ಏರಿಕೆಯಾಗಿದೆ. ಶನಿವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹ 60 ಮತ್ತು ₹ 66 ಏರಿಕೆಯಾಗಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ (ಜೂನ್‌ 15) ಚಿನ್ನದ ಬೆಲೆಯಲ್ಲಿ (Gold Rate Today) ಮತ್ತೆ ಏರಿಕೆಯಾಗಿದೆ. ಸತತ ಎರಡು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಬಂಗಾರದ ದರ ಶುಕ್ರವಾರ ಕೊಂಚ ಇಳಿದಿತ್ತು. ಇಂದು ಮತ್ತೆ ಏರಿಕೆಯಾಗಿದೆ. ಶನಿವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹ 60 ಮತ್ತು ₹ 66 ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,650 ಆದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,255 ತಲುಪಿದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 53,200 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,500 ಮತ್ತು ₹ 6,65,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 58,040 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,550 ಮತ್ತು ₹ 7,25,500 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,665 ₹ 7,270
ಮುಂಬೈ₹ 6,650 ₹ 7,255
ಬೆಂಗಳೂರು₹ 6,650₹ 7,255
ಚೆನ್ನೈ₹ 6,705 ₹ 7,315

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ಗ್ರಾಂಗೆ ಅಲ್ಪ ಇಳಿಕೆಯಾಗಿದೆ. ಒಂದು ಗ್ರಾಂಗೆ ₹ 90.30 ಹಾಗೂ 8 ಗ್ರಾಂಗೆ ₹ 722.40 ಇದೆ. 10 ಗ್ರಾಂಗೆ ₹ 903 ಹಾಗೂ 1 ಕಿಲೋಗ್ರಾಂಗೆ ₹ 90,300 ಬೆಲೆ ಬಾಳುತ್ತದೆ.

ಚಿನ್ನ ಯಾಕೆ ದುಬಾರಿಯಾಗುತ್ತಿದೆ?

ಚಿನ್ನದಲ್ಲಿ ಹೂಡಿಕೆ ಸುರಕ್ಷಿತವಾಗಿರುವುದರಿಂದಲೇ ಚಿನ್ನ ಹೆಚ್ಚು ದುಬಾರಿಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆ, ಭೌಗೋಳಿಕ, ರಾಜಕೀಯ ಪ್ರಕ್ಷುಬ್ಧತೆಯ ಅವಧಿಯಲ್ಲಿ ಸ್ಥಿರತೆಯನ್ನು ಬಯಸುವ ಹೂಡಿಕೆದಾರರಿಗೆ ಚಿನ್ನದ ಮೇಲಿನ ಹೂಡಿಕೆಯು ಹೆಚ್ಚು ಸುರಕ್ಷಿತವಾಗಿ ಕಾಣುತ್ತಿದೆ. ಹೀಗಾಗಿಯೇ ಚಿನ್ನದ ದರ ಗಗನಕ್ಕೇರುತ್ತಿದೆ.

ಹಣದುಬ್ಬರ

ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೂಡಿಕೆ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ ತೆಗೆದಿರುಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ. ಈ ಮೂಲಕ ದೇಶದಲ್ಲಿ ಕರೆನ್ಸಿಗಳ ಮೌಲ್ಯ ಕಾಪಾಡಿಕೊಳ್ಳಬಹುದು.

ಜಾಗತಿಕ ಉದ್ವಿಗ್ನತೆಗಳು

ಇತ್ತೀಚಿನ ದಿನಗಳಲ್ಲಿ ಭೌಗೋಳಿಕ, ರಾಜಕೀಯ ಘರ್ಷಣೆಗಳು ಮಾರುಕಟ್ಟೆಯ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ. ಇದು ಹೂಡಿಕೆದಾರರಿಗೆ ಚಿನ್ನದಂತಹ ಸುರಕ್ಷಿತ ಸ್ವತ್ತುಗಳನ್ನು ಖರೀದಿಸಲು ಪ್ರೇರೇಪಿಸುತ್ತದೆ. ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಸಮಯದಲ್ಲಿ ಅದು ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಉಕ್ರೇನ್‌ ಯುದ್ಧ ಮುಂದುವರಿಯುತ್ತಿರುವಾಗಲೇ ಈಗ ಇರಾನ್‌-ಇಸ್ರೇಲ್‌ ಯುದ್ಧದ ಛಾಯೆ ಆವರಿಸಿದೆ. ಇಂಥ ಸನ್ನಿವೇಶದಲ್ಲಿ ಸಹಜವಾಗಿಯೇ ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತದೆ. ಆಗ ದರ ಏರಿಕೆಯಾಗುತ್ತದೆ.

ಚೀನಾದ ಪ್ರಭಾವ

ಇತ್ತೀಚೆಗೆ ಚೀನಾದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿದೆ. ಚೀನಾದ ಸೆಂಟ್ರಲ್ ಬ್ಯಾಂಕ್ ತನ್ನ ಸಂಗ್ರಹಕ್ಕೆ ಗಣನೀಯ ಪ್ರಮಾಣದ ಚಿನ್ನವನ್ನು ಸೇರಿಸುತ್ತಿದೆ. ಇದು ಅಮೆರಿಕ ಮತ್ತು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.

ಕಡಿಮೆ ಬಡ್ಡಿ ದರಗಳು

    ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಹೆಚ್ಚಿನ ಬೇಡಿಕೆ ಮತ್ತು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತದೆ.

    ಹೂಡಿಕೆ ಮಾಡಬಹುದೆ?

    ಚಿನ್ನದ ಬೆಲೆಗಳು ಹೆಚ್ಚಾದಾಗ ಸಾಮಾನ್ಯವಾಗಿ ಇದು ಗ್ರಾಹಕರ ಖರೀದಿ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮೊದಲೇ ಚಿನ್ನದ ಮೇಲೆ ಹೂಡಿಕೆ ಮಾಡಬೇಕು. ಇದರಿಂದ ಮಾರುಕಟ್ಟೆಯಲ್ಲಿ ಏರಿಳಿತದ ಅಪಾಯ ಕೊಂಚ ಕಡಿಮೆಯಾಗುತ್ತದೆ. ಹೂಡಿಕೆಯ ಉದ್ದೇಶವನ್ನು ಮೊದಲೇ ನಿರ್ಣಯಿಸುವುದು ಮತ್ತು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸುವುದು ಕೂಡ ಬಹಳ ಮುಖ್ಯ. ಉದಾಹರಣೆಗೆ ಮದುವೆ ಅಥವಾ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಚಿನ್ನವನ್ನು ಖರೀದಿಸುವ ಉದ್ದೇಶ ಮೊದಲೇ ಇರುತ್ತದೆ. ಇದಕ್ಕೆ ಮುಂಚಿತವಾಗಿ ಹೂಡಿಕೆ ಮಾಡಬಹುದು. ಇದರಿಂದ ಬೆಲೆಗಳು ಸ್ಥಿರವಾಗಿದ್ದಾಗ ತಕ್ಷಣ ಖರೀದಿ ಮಾಡಬಹುದು.

    ಇದನ್ನೂ ಓದಿ: RBI Penalty: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ 1.45 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ; ಕಾರಣ ಏನು?

    Continue Reading

    ಚಿನ್ನದ ದರ

    Gold Rate Today: ಆಭರಣ ಖರೀದಿಸಲು ಇದು ಸಕಾಲ; ಚಿನ್ನದ ಬೆಲೆ ಇಳಿಕೆ

    Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ (ಜೂನ್‌ 14) ಚಿನ್ನದ ಬೆಲೆಯಲ್ಲ ಇಳಿಮುಖವಾಗಿದೆ. ಸತತ ಎರಡು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಬಂಗಾರದ ದರ ಕೊಂಚ ಇಳಿದಿದೆ. ಶುಕ್ರವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹ 25 ಮತ್ತು ₹ 27 ಇಳಿಕೆಯಾಗಿದೆ.

    VISTARANEWS.COM


    on

    Gold Rate Today
    Koo

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ (ಜೂನ್‌ 14) ಚಿನ್ನದ ಬೆಲೆಯಲ್ಲಿ (Gold Rate Today) ಇಳಿಮುಖವಾಗಿದೆ. ಸತತ ಎರಡು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಬಂಗಾರದ ದರ ಕೊಂಚ ಇಳಿದಿದೆ. ಶುಕ್ರವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹ 25 ಮತ್ತು ₹ 27 ಇಳಿಕೆಯಾಗಿದೆ.

    ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,590 ಆದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,189 ತಲುಪಿದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 52,720 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 65,900 ಮತ್ತು ₹ 6,659,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,512 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 71,890 ಮತ್ತು ₹ 7,18,900 ವೆಚ್ಚವಾಗಲಿದೆ.

    ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
    ದಿಲ್ಲಿ₹ 6,605 ₹ 7,204
    ಮುಂಬೈ₹ 6,590₹ 7,189
    ಬೆಂಗಳೂರು₹ 6,590₹ 7,189
    ಚೆನ್ನೈ₹ 6,650 ₹ 7,255

    ಬೆಳ್ಳಿ ಧಾರಣೆ

    ಬೆಳ್ಳಿಯ ಬೆಲೆ ಗ್ರಾಂಗೆ ಅಲ್ಪ ಇಳಿಕೆಯಾಗಿದೆ. ಒಂದು ಗ್ರಾಂಗೆ ₹ 90.40 ಹಾಗೂ 8 ಗ್ರಾಂಗೆ ₹ 723.20 ಇದೆ. 10 ಗ್ರಾಂಗೆ ₹ 904 ಹಾಗೂ 1 ಕಿಲೋಗ್ರಾಂಗೆ ₹ 90,400 ಬೆಲೆ ಬಾಳುತ್ತದೆ.

    ಚಿನ್ನ ಖರೀದಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

    ಮೇಕಿಂಗ್‌ ಚಾರ್ಜಸ್‌

    ಚಿನ್ನಾಭರಣ ಬೆಲೆಯಲ್ಲಿ ಮೇಕಿಂಗ್‌ ಚಾರ್ಜಸ್‌ (Making Charges) ಪ್ರಧಾನ ಪಾತ್ರ ವಹಿಸುತ್ತದೆ. ಚಿನ್ನದ ತೂಕ ಮತ್ತು ಪರಿಶುದ್ಧತೆಯ ಜತೆಗೆ ಆಭರಣಗಳನ್ನು ತಯಾರಿಸುವ ಶುಲ್ಕವನ್ನೂ ಖರೀದಿ ಸಂದರ್ಭದಲ್ಲಿ ವಿಧಿಸಲಾಗುತ್ತದೆ. ಇದನ್ನು ಮೇಕಿಂಗ್‌ ಚಾರ್ಜಸ್‌ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಚಿನ್ನದ ಬೆಲೆಯನ್ನು ಆಧರಿಸಿ ತಯಾರಿಕಾ ಶುಲ್ಕವನ್ನು ನಿರ್ಧರಿಸಲಾಗುತ್ತದೆ. ತಯಾರಿಕಾ ಶುಲ್ಕಗಳಲ್ಲಿ ಹಣವನ್ನು ಉಳಿಸಲು ಅವುಗಳನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಉದಾಹರಣೆಗೆ 8 ಗ್ರಾಂ ಚಿನ್ನದ ಸರದ ಬೆಲೆ 40,000 ರೂ. ಎಂದಿಟ್ಟುಕೊಳ್ಳೋಣ. ಪ್ರತಿ ಗ್ರಾಂಗೆ 300 ರೂ. ಫ್ಲಾಟ್ ದರದಲ್ಲಿ ತಯಾರಿಕಾ ಶುಲ್ಕವು 2,400 ರೂ. ಆಗಿರುತ್ತದೆ. 12%ದಂತೆ ಲೆಕ್ಕ ಹಾಕಿದರೆ ಇದು ಗರಿಷ್ಠ 4,800 ರೂ.ವರೆಗೆ ಹೆಚ್ಚಾಗುತ್ತದೆ.

    ಬೆಲೆ ಲೆಕ್ಕ ಹಾಕಿ

    ಚಿನ್ನದ ದರ ಅದರ ಶುದ್ಧತೆಯ ಮೇಲೆ ನಿರ್ಧಾರವಾಗುತ್ತದೆ. ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಚಿನ್ನದ ಬೆಲೆ ಪ್ರತಿದಿನ ಬದಲಾಗುತ್ತಿರುತ್ತದೆ. ಜ್ಯುವೆಲ್ಲರಿಗಳು ದಿನಂಪ್ರತಿ ಆಯಾ ದಿನದ ಬೆಲೆ ಪ್ರದರ್ಶಿಸುತ್ತವೆ. ಇದನ್ನು ಗಮನಿಸಿ. ಆಭರಣದ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶ. ಹೀಗಾಗಿ ಖರೀದಿಗೆ ತೆರಳುವ ಮುನ್ನ ಈ ಎಲ್ಲ ಅಂಶಗಳತ್ತ ಗಮನ ಹರಿಸುವುದು ಮುಖ್ಯ.

    ಬೆಲೆಗಳನ್ನು ಹೋಲಿಸಿ

    ಮೊದಲೇ ಹೇಳಿದಂತೆ ಆಭರಣದ ಬೆಲೆಯಲ್ಲಿ ತಯಾರಿಕಾ ವೆಚ್ಚವೂ ಸೇರಿರುತ್ತದೆ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರ ವರೆಗೆ ಇದೆ. ಆದ್ದರಿಂದ ವಿವಿಧ ಹಂತಗಳಲ್ಲಿನ ಶುಲ್ಕಗಳನ್ನು ಹೋಲಿಸಿ ಎನ್ನುವುದು ತಜ್ಞರು ನೀಡುವ ಟಿಪ್ಸ್‌.

    ಇದನ್ನೂ ಓದಿ: ATM Cash Withdrawal Fee: ಎಟಿಎಂ ನಗದು ಹಿಂಪಡೆಯುವಿಕೆ ಶುಲ್ಕ 21 ರೂ.ಗೆ ಏರಿಕೆ?

    Continue Reading

    ಚಿನ್ನದ ದರ

    Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ; ಇಂದಿನ ದರ ಚೆಕ್‌ ಮಾಡಿ

    Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ (ಜೂನ್‌ 13) ಚಿನ್ನದ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಬುಧವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹ 46 ಮತ್ತು ₹ 50 ಏರಿಕೆಯಾಗಿತ್ತು. ಇಂದು ಅದೇ ಬೆಲೆ ಮುಂದುವರಿದಿದೆ.

    VISTARANEWS.COM


    on

    Gold Rate Today
    Koo

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ (ಜೂನ್‌ 13) ಚಿನ್ನದ ಬೆಲೆಯಲ್ಲಿ (Gold Rate Today) ಯಾವುದೇ ಏರಿಳಿತ ಕಂಡು ಬಂದಿಲ್ಲ. ಬುಧವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹ 46 ಮತ್ತು ₹ 50 ಏರಿಕೆಯಾಗಿತ್ತು. ಇಂದು ಅದೇ ಬೆಲೆ ಮುಂದುವರಿದಿದೆ.

    ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,615 ರೂ. ಆದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,216 ರೂ.ಗೆ ತಲುಪಿದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 52,920 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,150 ಮತ್ತು ₹ 6,61,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 57,728 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,160 ಮತ್ತು ₹ 7,21,600 ವೆಚ್ಚವಾಗಲಿದೆ.

    ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
    ದಿಲ್ಲಿ₹ 6,625₹ 7,231
    ಮುಂಬೈ₹ 6,615₹ 7,216
    ಬೆಂಗಳೂರು₹ 6,615₹ 7,216
    ಚೆನ್ನೈ₹ 6,660₹ 7,266

    ಬೆಳ್ಳಿ ಧಾರಣೆ

    ಬೆಳ್ಳಿಯ ಬೆಲೆ ಗ್ರಾಂಗೆ ಅಲ್ಪ ಏರಿಕೆಯಾಗಿದೆ. ಒಂದು ಗ್ರಾಂಗೆ ₹ 90.85 ಹಾಗೂ 8 ಗ್ರಾಂಗೆ ₹ 726.80 ಇದೆ. 10 ಗ್ರಾಂಗೆ ₹ 908.50 ಹಾಗೂ 1 ಕಿಲೋಗ್ರಾಂಗೆ ₹ 90,850 ಬೆಲೆ ಬಾಳುತ್ತದೆ.

    ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

    ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

    ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

    ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

    ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

    ಇದನ್ನೂ ಓದಿ: Gold Rate Today: ಚಿನ್ನದ ದರ ಮತ್ತೆ ಗಗನಮುಖಿ; ಇಂದಿನ ಬೆಲೆ ಇಷ್ಟಿದೆ

    Continue Reading

    ಚಿನ್ನದ ದರ

    Gold Rate Today: ಚಿನ್ನದ ದರ ಮತ್ತೆ ಗಗನಮುಖಿ; ಇಂದಿನ ಬೆಲೆ ಇಷ್ಟಿದೆ

    Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ (ಜೂನ್‌ 12) ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಬುಧವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹ 46 ಮತ್ತು ₹ 50 ಏರಿಕೆಯಾಗಿದೆ.

    VISTARANEWS.COM


    on

    Gold Rate Today
    Koo

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ (ಜೂನ್‌ 12) ಚಿನ್ನದ ಬೆಲೆಯಲ್ಲಿ (Gold Rate Today) ಏರಿಕೆಯಾಗಿದೆ. ಬುಧವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹ 46 ಮತ್ತು ₹ 50 ಏರಿಕೆಯಾಗಿದೆ.

    ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,615 ರೂ. ಆದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,216 ರೂ.ಗೆ ತಲುಪಿದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 52,920 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,150 ಮತ್ತು ₹ 6,61,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಎಂಟು ಗ್ರಾಂ ಬೆಲೆ ₹ 57,728 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,160 ಮತ್ತು ₹ 7,21,600 ವೆಚ್ಚವಾಗಲಿದೆ.

    ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
    ದಿಲ್ಲಿ₹ 6,630₹ 7,231
    ಮುಂಬೈ₹ 6,615₹ 7,216
    ಬೆಂಗಳೂರು₹ 6,615₹ 7,216
    ಚೆನ್ನೈ₹ 6,680₹ 7,287

    ಬೆಳ್ಳಿ ಧಾರಣೆ

    ಬೆಳ್ಳಿಯ ಬೆಲೆ ಗ್ರಾಂಗೆ ಅಲ್ಪ ಇಳಿಕೆಯಾಗಿದೆ. ಒಂದು ಗ್ರಾಂಗೆ ₹ 90.15 ಹಾಗೂ 8 ಗ್ರಾಂಗೆ ₹ 721.2 ಇದೆ. 10 ಗ್ರಾಂಗೆ ₹ 901.5 ಹಾಗೂ 1 ಕಿಲೋಗ್ರಾಂಗೆ ₹ 90,150 ಬೆಲೆ ಬಾಳುತ್ತದೆ.

    ಚಿನ್ನದ ಕ್ಯಾರಟ್‌ ಎಂದರೇನು?

    ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

    24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರೆಟ್ ಚಿನ್ನದಿಂದ ಖರೀದಿಸಲಾಗುತ್ತದೆ.

    24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

    22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

    18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

    ಇದನ್ನೂ ಓದಿ: Tata Motors: ಟಾಟಾ ಮೋಟಾರ್ಸ್‌ನಿಂದ ʼಆಲ್ಟ್ರೋಜ್ ರೇಸರ್ʼ ಬಿಡುಗಡೆ; ದರ ಎಷ್ಟು?

    Continue Reading
    Advertisement
    Teachers Transfer
    ಪ್ರಮುಖ ಸುದ್ದಿ3 hours ago

    Teachers Transfer: ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ; ಕಡ್ಡಾಯ, ಹೆಚ್ಚುವರಿ‌ ಟ್ರಾನ್ಸ್‌ಫರ್ ಇಲ್ಲ, ಕೋರಿಕೆ ವರ್ಗ ಮಾತ್ರ

    T20 World Cup 2024
    T20 ವಿಶ್ವಕಪ್4 hours ago

    T20 World Cup 2024: ಭಾರತ-ಕೆನಡಾ ಪಂದ್ಯ ಮಳೆಯಿಂದ ರದ್ದು; ಅಗ್ರಸ್ಥಾನಿಯಾಗಿ ರೋಹಿತ್‌ ಪಡೆ ಸೂಪರ್‌ 8ಕ್ಕೆ ಎಂಟ್ರಿ

    Hiriya vidwamsa Sagri Raghavendra Upadhyaya passed away
    ಶ್ರದ್ಧಾಂಜಲಿ5 hours ago

    Sagri Raghavendra Upadhyaya: ಹಿರಿಯ ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ ನಿಧನ

    Government has no money to clean tankers no ability to provide clean drinking water says R Ashok
    ಪ್ರಮುಖ ಸುದ್ದಿ5 hours ago

    R Ashok: ಟ್ಯಾಂಕರ್ ಸ್ವಚ್ಛಗೊಳಿಸಲೂ ಸಿದ್ದು ಸರ್ಕಾರದ ಬಳಿ ಹಣವಿಲ್ಲ; ಆರ್. ಅಶೋಕ್‌ ಆಕ್ರೋಶ

    Union Minister Pralhad Joshi statement about increase in petrol and diesel prices in the state
    ಕರ್ನಾಟಕ5 hours ago

    Pralhad Joshi: ತೈಲ ಬೆಲೆ ಏರಿಸಿ ಕರ್ನಾಟಕದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟ ಕಾಂಗ್ರೆಸ್: ಪ್ರಲ್ಹಾದ್‌ ಜೋಶಿ

    Bribe Case
    ಕ್ರೈಂ5 hours ago

    Bribe Case: ಕಸ ಗುಡಿಸುತ್ತಲೇ ಉನ್ನತ ಹುದ್ದೆಗೇರಿದ್ದ ಮಹಿಳೆ ಕಸ ಗುಡಿಸುವವರಿಂದಲೇ ಲಂಚ ಸ್ವೀಕರಿಸುವಾಗ ಬಂಧನ!

    Minister dr G Parameshwar inaugurated the hasiru grama programme in Koratagere
    ತುಮಕೂರು6 hours ago

    Koratagere News: ಹಸಿರೇ ಉಸಿರು, ಹಸಿರಿದ್ದೆಡೆ ಮಾನವನ ಸರ್ವಾಂಗಿಣ ಪ್ರಗತಿ: ಸಚಿವ ಜಿ. ಪರಮೇಶ್ವರ್‌

    Giorgia Meloni
    ವಿದೇಶ6 hours ago

    Giorgia Meloni: ಇಟಲಿ ಪ್ರಧಾನಿ ಮೆಲೋನಿ ಕಾರ್ಮಿಕ ಮಹಿಳೆಯ ಮಗಳು! ಅವರ ಕುರಿತ ಕುತೂಹಲಕರ ಸಂಗತಿಗಳಿವು

    Sapthami Gowda
    ಪ್ರಮುಖ ಸುದ್ದಿ6 hours ago

    Sapthami Gowda: ಯುವ ಪತ್ನಿ ವಿರುದ್ಧ ಸಪ್ತಮಿಗೌಡ ಮಾನಹಾನಿ ಕೇಸ್; ನಟಿ ಹೆಸರು ಎಲ್ಲಿಯೂ ಬಳಸದಂತೆ ಕೋರ್ಟ್ ಆದೇಶ

    Gold Heist
    ವಿದೇಶ6 hours ago

    Gold Heist: ಜ್ಯುವೆಲರಿ ಶಾಪ್‌ಗೆ ನುಗ್ಗಿ ಚಿನ್ನ ಕದ್ದ 20 ಕಳ್ಳರು; ಸಿನಿಮಾ ಸ್ಟೈಲಲ್ಲೇ ದರೋಡೆ ಮಾಡಿದ ವಿಡಿಯೊ ಇಲ್ಲಿದೆ!

    Sharmitha Gowda in bikini
    ಕಿರುತೆರೆ8 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ8 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ8 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ7 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ9 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ8 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ8 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ6 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ7 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    Actor Darshan
    ಯಾದಗಿರಿ12 hours ago

    Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

    Karnataka Weather Forecast
    ಮಳೆ1 day ago

    Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

    Actor Darshan
    ಬೆಂಗಳೂರು1 day ago

    Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

    actor Darshan
    ಬೆಂಗಳೂರು1 day ago

    Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

    Actor Darshan
    ಸಿನಿಮಾ1 day ago

    Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

    karnataka weather Forecast
    ಮಳೆ4 days ago

    Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

    actor Darshan
    ಚಿತ್ರದುರ್ಗ4 days ago

    Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

    Actor Darshan gets a series of questions from the police
    ಸಿನಿಮಾ4 days ago

    Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

    Actor Darshan
    ಸಿನಿಮಾ5 days ago

    Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

    Saptami Gowda
    ಸಿನಿಮಾ5 days ago

    Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

    ಟ್ರೆಂಡಿಂಗ್‌