7th pay commission arranged special meeting with nps employees association7th Pay Commission : ಎನ್‌ಪಿಎಸ್‌ ನೌಕರರ ಬೇಡಿಕೆ ಕುರಿತು ಚರ್ಚಿಸಲು ಆಯೋಗದಿಂದ ಮಹತ್ವದ ಸಭೆ Vistara News

ನೌಕರರ ಕಾರ್ನರ್

7th Pay Commission : ಎನ್‌ಪಿಎಸ್‌ ನೌಕರರ ಬೇಡಿಕೆ ಕುರಿತು ಚರ್ಚಿಸಲು ಆಯೋಗದಿಂದ ಮಹತ್ವದ ಸಭೆ

7ನೇ ವೇತನ ಆಯೋಗವು (7th Pay Commission) ಎನ್‌ಪಿಎಸ್‌ ನೌಕರರ ಬೇಡಿಕೆ ಕುರಿತು ಚರ್ಚಿಸಲು ನೌಕರರ ಸಂಘದೊಂದಿಗೆ ಸಭೆ ನಡೆಸುತ್ತಿದ್ದು, ಎನ್‌ಪಿಎಸ್‌ ನೌಕರರಲ್ಲಿ ಹೊಸ ಭರವಸೆ ಮೂಡಿಸಿದೆ.

VISTARANEWS.COM


on

nps employees 7th Pay Commission
ವೇತನ ಆಯೋಗದ ಅಧ್ಯಕ್ಷರೊಂದಿಗೆ ಎನ್‌ಪಿಎಸ್‌ ನೌಕರರು.- ಫೈಲ್‌ ಫೋಟೊ
Follow us on
Koo

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಮತ್ತು ಸೌಲಭ್ಯಗಳ ಪರಿಷ್ಕರಣೆಗಾಗಿ ರಚಿಸಲ್ಪಟ್ಟಿರುವ 7ನೇ ವೇತನ ಆಯೋಗವು (7th Pay Commission) ಈಗಾಗಲೇ ಸರ್ಕಾರಿ ನೌಕರರಿಂದ ಮತ್ತು ಸಾರ್ವಜನಿಕರಿಂದ ಪ್ರಶ್ನೋತ್ತರ ಮಾದರಿಯಲ್ಲಿ ಅಭಿಪ್ರಾಯ, ಬೇಡಿಕೆಗಳ ಕುರಿತು ಮಾಹಿತಿ ಪಡೆದುಕೊಂಡಿದ್ದು, ಈಗ ಓಪಿಎಸ್‌ ಜಾರಿಗಾಗಿ ಹೋರಾಟ ನಡೆಸುತ್ತಿರುವ ರಾಜ್ಯ ಸರ್ಕಾರದ ಎನ್‌ಪಿಎಸ್‌ ನೌಕರರ ಸಂಘದೊಂದಿಗೆ (NPS News) ವಿಶೇಷ ಸಭೆ ಆಯೋಜಿಸಿದೆ.

ಇದಕ್ಕಾಗಿ ಆಯೋಗವು ಜೂನ್‌ 27 ರಂದು ವಿಶೇಷ ಸಭೆ ಕರೆದಿದ್ದು, ಬೆಳಗ್ಗೆ 11.30 ಕ್ಕೆ ಆಯೋಗದ ಕಚೇರಿಯಲ್ಲಿ ಈ ಸಭೆ ನಡೆಯಲಿದೆ. ಅಗತ್ಯ ಎಲ್ಲ ಮಾಹಿತಿಯೊಂದಿಗೆ ಸಭೆಗೆ ಆಗಮಿಸಬೇಕೆಂದು ಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷರಿಗೆ ಆಯೋಗದ ಕಾರ್ಯದರ್ಶಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಪತ್ರ ಬರೆದಿದ್ದಾರೆ.

NPS news
7th pay commission letter
ಆಯೋಗದ ಪತ್ರ

ಈ ಸಭೆಯಲ್ಲಿ ಸಂಘದ ಬೇಡಿಕೆಗಳ ಕುರಿತು ಚರ್ಚಿಸಲಾಗುತ್ತದೆ. ತಮ್ಮ ಬೇಡಿಕೆಗಳ ಕುರಿತು ಪಿಪಿಟಿಯೊಂದಿಗೆ ಬನ್ನಿ. ಪಿಪಿಟಿಯಲ್ಲಿ ಪ್ರಶ್ನಾವಳಿಯ ಉತ್ತರಗಳು, ಬೇಡಿಕೆಗಳು ಮತ್ತು ಇತರೆ ವಿಷಯಗಳ ಸಂಕ್ಷಿಪ್ತ ಮಾಹಿತಿ ಇರಬೇಕು. ಮಾಹಿತಿಯು ವಸ್ತುನಿಷ್ಠ ಹಾಗು ನಿರ್ದಿಷ್ಟವಾಗಿರಬೇಕು ಹಾಗೂ ಹತ್ತು ಸ್ಲೈಡ್‌ಗಳಿಗೆ ಸೀಮಿತವಾಗಿರಬೇಕು. ಮಾಹಿತಿಯು ಸ್ಲೈಡ್‌ಗಳಲ್ಲಿ ಪುನರಾವರ್ತನೆಯಾಗಬಾರದು ಎಂದು ಸೂಚಿಸಲಾಗಿದೆ.

ಈಗಾಗಲೇ ಸರ್ಕಾರಿ ನೌಕರರ ಸಂಘದೊಂದಿಗೆ ಆಯೋಗವು ಇದೇ ರೀತಿಯಾಗಿ ಚರ್ಚೆ ನಡೆಸಿತ್ತು. ಈ ಸಭೆಯಲ್ಲಿ ಮುಖ್ಯವಾಗಿ ಓಪಿಎಸ್‌ ಮತ್ತು ಎನ್‌ಪಿಎಸ್‌ ಕುರಿತ ವಿಷಯಗಳು ಚರ್ಚೆಗೆ ಬರಲಿದೆ. ಈಗಾಗಲೇ ಎನ್‌ಪಿಎಸ್‌ ನೌಕರರ ಸಂಘ ಓಪಿಎಸ್‌ ಜಾರಿಗೆ ಸಬಂಧಿಸಿದಂತೆ ಎಲ್ಲ ಮಾಹಿತಿಯನ್ನೂ ಆಯೋಗಕ್ಕೆ ಸಲ್ಲಿಸಿದೆ. ಎನ್‌ಪಿಎಸ್‌ ರದ್ದುಪಡಿಸಿ, ಓಪಿಎಸ್‌ ಜಾರಿಗೆ ಶಿಫಾರಸು ಮಾಡಬೇಕೆಂದು ಮತ್ತೊಮ್ಮೆ ಎಲ್ಲ ಮಾಹಿತಿಗಳೊಂದಿಗೆ ಮನವಿ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷ ಶಾಂತರಾಮ ಹೇಳಿದ್ದಾರೆ.

ನೂತನ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿ ಉಮಾ ಕೆ. ಅವರು ಏಳನೇ ವೇತನ ಆಯೋಗಕ್ಕೆ ತನ್ನ ಕಾರ್ಯ ಕಲಾಪಗಳನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಅನುಕೂಲವಾಗುವಂತೆ ಆಯೋಗದ ಕಾಲಾವಧಿಯನ್ನು ಮೇ 19ರಿಂದ 6 ತಿಂಗಳ ಕಾಲ ವಿಸ್ತರಿಸಿ ಆದೇಶ ಹೊರಡಿಸಿದ್ದರು. ಈ ಆಯೋಗವನ್ನು ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್‌ ಅಧ್ಯಕ್ಷತೆಯಲ್ಲಿ 2022ರ ನವೆಂಬರ್‌ 19 ರಂದು ರಚಿಸಲಾಗಿತ್ತು. ಆಯೋಗಕ್ಕೆ 6 ತಿಂಗಳ ಕಾಲಾವಕಾಶ ನೀಡಲಾಗಿತ್ತು. ಈ ಅವಧಿಯು ಮೇ. 19 ರಂದು ಅಂತ್ಯಗೊಳ್ಳಲಿದ್ದ ಹಿನ್ನೆಲೆಯಲ್ಲಿ ಅವಧಿಯನ್ನು ವಿಸ್ತರಿಸಲಾಗಿತ್ತು.

ರಾಜ್ಯದಲ್ಲಿ ಚುನಾವಣೆಯ ಚಟುವಟಿಕೆಗಳು ನಡೆಯುತ್ತಿದ್ದುದ್ದರಿಂದ ಮತ್ತು ನೀತಿ ಸಂಹಿತೆ ಜಾರಿಯಲ್ಲಿದ್ದುದ್ದರಿಂದ ಆಯೋಗಕ್ಕೆ ನಿಗಿದಿತ ಅವಧಿಯಲ್ಲಿ ವರದಿ ಸಿದ್ಧಪಡಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಹೆಚ್ಚಿನ ಕಾಲಾವಕಾಶವನ್ನು ಕೋರಿ ಆಯೋಗ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಅದರಂತೆ ಆಯೋಗದ ಅವಧಿಯನ್ನು ವಿಸ್ತರಿಸಲಾಗಿತ್ತು.

ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ.

NPS ನೌಕರರ ವಾದವೇನು?

ನೂತನ ಪಿಂಚಣಿ ವ್ಯವಸ್ಥೆಯು ಸರ್ಕಾರ ಹಾಗೂ ಸರ್ಕಾರಿ ನೌಕರರ ನಡುವೆ ಇರುವ ಸಂಬಂಧವನ್ನು ದೂರ ಮಾಡುತ್ತಿದೆ. ಈ ಅವೈಜ್ಞಾನಿಕವಾದ ಯೋಜನೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿರುವ ಎನ್‌ಪಿಎಸ್‌ ನೌಕರರ ಸಂಘ, ಈಗಾಗಲೇ ರಾಜಸ್ಥಾನ, ಛತ್ತೀಸ್‌ಗಢ, ಜಾರ್ಖಂಡ್‌, ಪಂಚಾಬ್‌ ಮತ್ತು ಹಿಮಾಚಲ ಪ್ರದೇಶ ಸರ್ಕಾರಗಳು ಎನ್‌ಪಿಎಸ್‌ ಯೋಜನೆಯನ್ನು ರದ್ದು ಪಡಿಸಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಲು ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಶಿಫಾರಸು ಮಾಡಿ ಎಂದು ಎನ್‌ಪಿಎಸ್‌ ನೌಕರರ ಸಂಘ ಈಗಾಗಲೇ ಆಯೋಗಕ್ಕೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿದೆ.

ಹಲವು ದೇಶಗಳಲ್ಲಿ ಎನ್‌ಪಿಎಸ್‌ ವಿಫಲ

ಈ ಯೋಜನೆಯು ಪ್ರಪಂಚದ ಅನೇಕ ದೇಶಗಳಲ್ಲಿ ವಿಫಲಗೊಂಡಿರುವ ಪಿಂಚಣಿ ಯೋಜನೆಯಾಗಿದ್ದು, ಫ್ರಾನ್ಸ್‌, ಸ್ಪೇನ್‌, ಗ್ರೀಸ್‌, ಡೆನ್ಮಾರ್ಕ್‌, ಅಮೆರಿಕ ಮತ್ತು ಬ್ರಿಟನ್‌ನಲ್ಲಿ ಈ ಯೋಜನೆಯಡಿ ಹೂಡಿರುವ ನೌಕರರ ಹಣವು 2008 ರಲ್ಲಿ ಉಂಟಾದ ಷೇರು ಮಾರುಕಟ್ಟೆ ಕುಸಿತದಿಂದ ಸಂಪೂರ್ಣ ನಷ್ಟ ಹೊಂದಿರುತ್ತವೆ. ನೌಕರರ ಹಾಗೂ ಜನಸಾಮಾನ್ಯರ ಹಣವನ್ನು ಹೂಡಿಕೆ ಮಾಡಿದ್ದ ಕಂಪನಿಗಳು ದಿವಾಳಿಯಾಗಿವೆ. (ಉದಾ: ಅಮೆರಿಕದ ಜನರಲ್‌ ಇನ್ಸೂರೆನ್ಸ್‌ ಕಂಪನಿ ಲಿಮಿಟೆಡ್‌) ಇದರಿಂದಾಗಿ ಅಲ್ಲಿನ ನೌಕರರು ಪಿಂಚಣಿ ಹಣ, ವಿಮೆ ಹಣ ಹಾಗೂ ಉಳಿತಾಯದ ಹಣವನ್ನು ಸಂಪೂರ್ಣವಾಗಿ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ ಎಂದು ಸಂಘವು ಮನವಿಯಲ್ಲಿ ಹೇಳಿದೆ.

ನಮ್ಮ ದೇಶದ ಜಿಡಿಪಿಯ ಬಹುಪಾಲು ಹಣ ನೌಕರರಿಗೆ ನೀಡುವ ವೇತನ ಮತ್ತು ಪಿಂಚಣಿಗೆ ಹೋಗುತ್ತದೆ ಎಂಬ ಅಂಶವನ್ನೇ ಆಧಾರವಾಗಿಟ್ಟು, ಎನ್‌ಪಿಎಸ್‌ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಹೇಳಲಾಗುತ್ತದೆ. ಆದರೆ ವಾಸ್ತವವಾಗಿ ಇದು ಸತ್ಯಕ್ಕೆ ದೂರವಾದ ಮಾತಾಗಿದೆ. ವಿವಿಧ ರಾಷ್ಟಗಳಲ್ಲಿ ನೌಕರರಿಗೆ ನೀಡುವ ವೇತನ ಮತ್ತು ಪಿಂಚಣಿಗೆ ಜಿಡಿಪಿಯ ಪಾಲು ಇಂತಿದೆ; ಬ್ರೆಜಿಲ್‌ ಶೇ. 5, ಚೀನಾ ಶೇ. 10.6, ಇಟಲಿ ಶೇ.14.2, ಉಕ್ರೇನ್‌ ಶೇ. 15.4, ಅಮೇರಿಕದಲ್ಲಿ ಶೇ. 33 ರಷ್ಟಾಗಿದ್ದು, ಇಲ್ಲಿ ವೃದ್ಯಾಪ್ಯ ಸಂಬಂಧಿ ಸಾಮಾಜಿಕ ಆರ್ಥಿಕ ಭದ್ರತೆಗಾಗಿ ಇದನ್ನು ಮೀಸಲಿರಿಸಲಾಗಿದೆ. ಆದರೆ ಭಾರತ ಶೇ.0.93 ಮಾತ್ರ. ಸರ್ಕಾರವು ವೇತನ ಹಾಗೂ ಪಿಂಚಣಿಗಾಗಿ ವೆಚ್ಚ ಮಾಡುವ ಒಟ್ಟು ಮೊತ್ತದಲ್ಲಿ ಸರ್ಕಾರದ ವಿಧಾನಮಂಡಲ ಸದಸ್ಯರ ಹಾಗೂ ಕೇಂದ್ರ ಸೇವೆಗೆ ಸೇರಿರುವ ಅಧಿಕಾರಿಗಳ (ಐಎಎಸ್‌, ಐಪಿಎಸ್‌) ವೇತನ ಹಾಗೂ ಪಿಂಚಣಿಯು ಸೇರಿರುತ್ತದೆ ಎಂದು ಎನ್‌ಪಿಎಸ್‌ ನೌಕರರ ಸಂಘವು ಆಯೋಗದ ಗಮನ ಸೆಳೆದಿದೆ.

ಸರ್ಕಾರಕ್ಕೆ ಹೊರೆಯ ಮಾತೇ ಇಲ್ಲ

ಎನ್‌ಪಿಎಸ್‌ ಯೋಜನೆಯನ್ನು ರದ್ದುಪಡಿಸಿ, ಓಪಿಎಸ್‌ ಜಾರಿಗೆ ತರುವುದರಿಂದ ತಕ್ಷಣಕ್ಕೆ ರಾಜ್ಯ ಸರ್ಕಾರದ ಮೇಲೆ ಆರ್ಥಿಕ ಹೊರೆಯಾಗುತ್ತದೆ ಎಂಬ ಅಭಿಪ್ರಾಯವಿದೆ. ಆದರೆ ಈ ಯೋಜನೆಯಿಂದ ಸರ್ಕಾರಕ್ಕೆ ಯಾವುದೇ ಆರ್ಥಿಕ ಪ್ರಯೋಜನವಾಗಿರುವುದಿಲ್ಲ ಎಂದು ವಾದಿಸಿರುವ ನೌಕರರ ಸಂಘ ಇದನ್ನು ಹೀಗೆ ಸಮರ್ಥಿಸಿಕೊಂಡಿದೆ.

  • ಪ್ರಸ್ತುತ ದಿನಾಂಕ:01/04/2006ರ ಹಿಂದೆ ನಿವೃತ್ತರಾದ ನೌಕರರಿಗೆ ಪಿಂಚಣಿಯನ್ನು ಒದಗಿಸುವುದರ ಜೊತೆಗೆ ದಿನಾಂಕ 01/04/2006ರ ನಂತರ ಸೇವೆಗೆ ಸೇರಿರುವ ಸುಮಾರು 2,98,717 ನೇರ ಸರ್ಕಾರಿ ನೌಕರರಿಗೆ ಹಾಗೂ ವಿವಿಧ ನಿಗಮ ಮಂಡಳಿ, ಸ್ವಾಯತ್ತ ಸಂಸ್ಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 3,50,000 ನೌಕರರಿಗೆ ಸರ್ಕಾರ ತನ್ನ ಪಾಲಿನ ವಂತಿಗೆಯಾಗಿ ಶೇ.14 ರಷ್ಟನ್ನು ಪಾವತಿಸಬೇಕಾದ ಅನಿವಾರ್ಯತೆ ಉಂಟಾಗಿದೆ. ವಾರ್ಷಿಕ ಮೊತ್ತವು ಸುಮಾರು ರೂ. 3,000 ಕೋಟಿ ಆಗಲಿದೆ.
  • ದಿನಾಂಕ:01/04/2006 ರಿಂದ 10.12.2022 ರವರೆಗೆ ಸರ್ಕಾರವು ತನ್ನ ಪಾಲಿನ ವಂತಿಗೆಯಾಗಿ ನೇರ ಸರ್ಕಾರಿ ನೌಕರರಿಗೆ ಸುಮಾರು ರೂ.10,000/- ಕೋಟಿಗಳನ್ನು 150(ಗೆ ಪಾವತಿಸಿರುತ್ತದೆ.
  • ಜೊತೆಗೆ ಸರ್ಕಾರವು ಎನ್‌ಎಸ್‌ಡಿಎಲ್‌-ಸಿಎಆರ್‌ಗೆ ಈ ಯೋಜನೆಯ ನಿರ್ವಹಣೆಗೆ ಸೇವಾ ಶುಲ್ಕವಾಗಿ ಸುಮಾರು 68 ಕೋಟಿಗಳನ್ನು ಪಾವತಿಸಿರುತ್ತದೆ.
  • ಎನ್‌ಪಿಎಸ್‌ ಯೋಜನೆ ದಿನಾಂಕ: 01.04.2006 ರಲ್ಲಿ ಇದ್ದ ಮಾದರಿಯಲ್ಲಿ ಈಗ ಇಲ್ಲ.
  • ಸರ್ಕಾರದ ವಂತಿಗೆ-ನೌಕರರ ವಂತಿಗೆ ಕ್ರಮವಾಗಿ ಶೇ.10 ಇದ್ದದ್ದು, ಪ್ರಸ್ತುತ ಕ್ರಮವಾಗಿ ಶೇ.14.10 ಆಗಿದೆ.
  • ಸರ್ಕಾರದ ಆದೇಶ ಸಂಖ್ಯೆ: ಆಇ-ಪಿಇಎನ್‌/149/2022, ದಿನಾಂಕ:19.10.2022 ರನ್ವಯ ಮರಣ ಮತ್ತು ನಿವೃತ್ತಿ ಉಪಧನ (ಡಿಸಿಆರ್‌ಜಿ) ವನ್ನು ದಿನಾಂಕ:01.04.2006 ರಿಂದ ಪೂರ್ವನ್ವಯವಾಗುವಂತೆ ಮರುಸ್ಥಾಪಿಸಲಾಗಿದೆ.
  • ಮರಣ ಹೊಂದಿರುವ ನೌಕರರ ಅವಲಂಬಿತರಿಗೆ ಓಪಿಎಸ್‌ ನೌಕರರಂತೆ ಕುಟುಂಬ ಪಿಂಚಣಿ ಜಾರಿಗೊಳಿಸಲಾಗಿದೆ. ಎನ್‌ಪಿಎಸ್‌ ವಂತಿಗೆ ಹಣವನ್ನು ಕ್ರಮವಾಗಿ ಸರ್ಕಾರ ಮತ್ತು ಅವಲಂಬಿತರಿಗೆ ಹಿಂದಿರುಗಿಸಲಾಗುತ್ತಿದೆ.
  • ಈ ಅಂಶಗಳ ಹಿನ್ನೆಲೆಯಲ್ಲಿ ಪ್ರಸ್ತುತ ಸರ್ಕಾರಕ್ಕೆ ಎನ್‌ಪಿಎಸ್‌ ಯೋಜನೆಯಿಂದ ಯಾವುದೇ ತರಹದ ಆರ್ಥಿಕ ಪ್ರಯೋಜನವಾಗಿರುವುದಿಲ್ಲ. ಬದಲಾಗಿ ಈ ಯೋಜನೆಯನ್ನು ರದ್ದುಗೊಳಿಸುವುದರಿ೦ದ ಸರ್ಕಾರದ ವಂತಿಗೆ ರೂ. 9,500 ಕೋಟಿ ಸರ್ಕಾರದ ಅಭಿವೃದ್ದಿ ಯೋಜನೆಗಳಿಗೆ ಲಭ್ಯವಾಗುತ್ತದೆ.
  • ಜೊತೆಗೆ ನೌಕರರ ಪಾಲಿನ ವಂತಿಗೆ ರೂ.8,500 ಕೋಟಿಗಳನ್ನು ನೌಕರರ ಜಿಪಿಎಫ್‌ ಖಾತೆಗೆ ವರ್ಗಾಯಿಸಿದಲ್ಲಿ; ಈ ಹಣವು ಕೂಡ ಸರ್ಕಾರದ ಅಭಿವೃದ್ದಿ ಕಾರ್ಯಗಳಿಗೆ ಪರೋಕ್ಷವಾಗಿ ಲಭ್ಯವಾಗಲಿದೆ (ಈಗಾಗಲೇ ಎನ್‌ಪಿಎಸ್‌ ಯೋಜನೆಯನ್ನು ರದ್ದುಗೊಳಿಸಿರುವ ರಾಜಸ್ಥಾನ ಸರ್ಕಾರವು ಈ ಮಾದರಿಯನ್ನು ಅನುಸರಿಸಿದೆ).

ಇದನ್ನೂ ಓದಿ : NPS News : ಸರ್ಕಾರಿ ನೌಕರರಿಗೆ ಕನಿಷ್ಠ ಪಿಂಚಣಿ ಜಾರಿ ವರದಿ; ವಿತ್ತ ಸಚಿವಾಲಯ ಸ್ಪಷ್ಟನೆ ಏನು?

ರಾಜ್ಯ ಸರ್ಕಾರಕ್ಕಿದೆ ರದ್ದಿನ ಅಧಿಕಾರ

ಪಿಎಫಆರ್‌ಡಿಎ ಕಾಯ್ದೆಯ ಕಲಂ 12(5) ರಲ್ಲಿ ಎನ್‌ಪಿಎಸ್‌ ಯೋಜನೆಯನ್ನು ಅಳವಡಿಸಿಕೊಳ್ಳುವ ಅಥವಾ
ಬಿಡುವ ಸಂಪೂರ್ಣ ಅಧಿಕಾರವನ್ನು ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟಿರುತ್ತದೆ. ಜೊತೆಗೆ ಕೇಂದ್ರ ಸರ್ಕಾರವು ಸಂಘದ ಮನವಿಗೆ ನೀಡಿರುವ ಸೃಷ್ಟೀಕರಣದಲ್ಲಿ ಇದೆ ಅಭಿಪ್ರಾಯವನ್ನು ಕೂಡ ವ್ಯಕ್ತಪಡಿಸಿದೆ ಎಂದು ಎನ್‌ಪಿಎಸ್‌ ನೌಕರರ ಸಂಘ ದಾಖಲೆ ಒದಗಿಸಿದೆ.

ಈ ಯೋಜನೆಯು ನೌಕರರ ಸಂಧ್ಯಾಕಾಲದ ಬದುಕಿಗೆ ಸಾಮಾಜಿಕ ಆರ್ಥಿಕ ಭದ್ರತೆಯನ್ನು ನೀಡದೇ ಇರುವುದರಿಂದ ಈ ಯೋಜನೆಯನ್ನು ರದ್ದುಗೊಳಿಸುವಂತೆ ನಿರಂತರ ಹೋರಾಟವನ್ನು ನಡೆಸಲಾಗಿದೆ ಎಂದು ಎನ್‌ಪಿಎಸ್‌ ನೌಕರರ ಸಂಘವು ತಾನು ಇದುವರೆಗೆ ನಡೆಸಿದ ಹೋರಾಟದ ಕುರಿತು ಆಯೋಗಕ್ಕೆ ವಿವರಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Old Pension Scheme : ಸರ್ಕಾರಿ ನೌಕರರಿಗೆ Good News; ಶೀಘ್ರವೇ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಎಂದ ಮಧು ಬಂಗಾರಪ್ಪ

Old Pension Scheme : ರಾಜ್ಯದಲ್ಲೇ ಸದ್ಯವೇ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಹೇಳುವ ಮೂಲಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ ನೀಡಿದ್ದಾರೆ.

VISTARANEWS.COM


on

Old Pension Scheme Madhu Bangarappa
Koo

ಮೈಸೂರು: ರಾಜ್ಯದಲ್ಲಿ ಶೀಘ್ರವೇ ಹಳೆ ಪಿಂಚಣಿ ವ್ಯವಸ್ಥೆ (Old Pension Scheme) ಜಾರಿಯಾಗಲಿದೆ. ಈ ಮೂಲಕ ಸದ್ಯವೇ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ (Good News for Govt Employees) ಸಿಗಲಿದೆ ಎಂದು ಶಿಕ್ಷಣ ಸಚಿವ (Education Minister) ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ (Congress manifesto) ಹಳೆ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿ ಮಾಡುವುದಾಗಿ ಹೇಳಿತ್ತು. ಅದರಂತೆ ನಡೆದುಕೊಳ್ಳಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಹೊಸ ಪಿಂಚಣಿ ವ್ಯವಸ್ಥೆಯ (New Pension Scheme) ವಿರುದ್ಧ ದೊಡ್ಡ ಮಟ್ಟದ ಆಕ್ರೋಶವಿದೆ. ಹಳೆಯ ಪಿಂಚಣಿ ಜಾರಿಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರು ಆಗಾಗ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ. ಕಳೆದ ಚುನಾವಣೆಯ ಸಂದರ್ಭದಲ್ಲೇ ರಾಜ್ಯ ಸರ್ಕಾರಿ ನೌಕರರು ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯ ಮಂಡಿಸಿದ್ದರು. ಬಿಜೆಪಿ ಈ ವಿಚಾರದಲ್ಲಿ ಯಾವುದೇ ಸ್ಪಷ್ಟ ನಿಲುವನ್ನು ತಳೆದಿರಲಿಲ್ಲ. ಆದರೆ, ಕಾಂಗ್ರೆಸ್‌ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮಾಡುವುದಾಗಿ ಪ್ರಕಟಿಸಿತ್ತು. ಇದೀಗ ಪಕ್ಷ ಗೆಲುವು ಸಾಧಿಸಿದ್ದರಿಂದ ಅದು ಆ ಬೇಡಿಕೆಯನ್ನು ಈಡೇರಿಸಲಿದೆ ಎಂದು ಮಧು ಬಂಗಾರಪ್ಪ ಶಿಕ್ಷಕರಿಗೆ ಭರವಸೆ ನೀಡಿದ್ದಾರೆ.

ಮುಂದಿನ ವರ್ಷದಿಂದ 600 ಕರ್ನಾಟಕ ಪಬ್ಲಿಕ್‌ ಸ್ಕೂಲ್

‌ರಾಜ್ಯದಲ್ಲಿ ಮುಂದಿನ ವರ್ಷದಿಂದ 600 ಹೊಸ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ (ಕೆಪಿಎಸ್‌) ತೆರೆಯಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಅವರು ಸೋಮವಾರ ವಿಶ್ವನಾಥಪುರದಲ್ಲಿ ಹೇಳಿದರು. ಜಿಲ್ಲಾಡಳಿತ ಮತ್ತು ಜಿಪಂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೆಪಿಎಸ್‌ ಶಾಲೆಯ ಆವರಣದಲ್ಲಿ ʻನನ್ನ ಶಾಲೆ ನನ್ನ ಕೊಡುಗೆʼಯಡಿಯಲ್ಲಿ ಸಿಎಸ್‌ಆರ್‌ ಅನುದಾನದಲ್ಲಿ ಮಾದರಿ ಸರಕಾರಿ ಶಾಲೆ ಯೋಜನೆ ಉದ್ಘಾಟನೆ ಮತ್ತು ನೂತನ ಶಾಲಾ ಕೊಠಡಿಗಳು ಹಾಗೂ ವಿವೇಕ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಿಎಸ್‌ಆರ್‌ ಅನುದಾನದಡಿಯಲ್ಲಿ ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಸರಕಾರದ ಪ್ರಯತ್ನಗಳು ಕಾರ್ಯರೂಪದಲ್ಲಿದೆ. 1 ರಿಂದ 12 ನೇ ತರಗತಿಯವರೆಗೆ ಒಂದೇ ಶಾಲೆಯಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಲು ಹಾಗೂ ಮೂಲ ಸೌಲಭ್ಯಗಳನ್ನು ಒಳಗೊಂಡ 600 ಕೆ.ಪಿ.ಎಸ್‌ ಶಾಲೆಗಳನ್ನು ಮುಂದಿನ ವರ್ಷದ ವೇಳೆಗೆ ರಾಜ್ಯಾದ್ಯಂತ ಪ್ರಾರಂಭ ಮಾಡಲಾಗುವುದು. ಮುಂದಿನ 5 ವರ್ಷಗಳಲ್ಲಿಎರಡು ಗ್ರಾಮಗಳಿಗೆ ಒಂದರಂತೆ 2000 ಕೆ.ಪಿ.ಎಸ್‌ ಶಾಲೆಗಳನ್ನು ನಿರ್ಮಿಸಲು ಗುರಿ ಹೊಂದಲಾಗಿದೆ ಎಂದರು.

ಇದನ್ನೂ ಓದಿ: Shivamogga Violence : ನಾವು ತ್ರಿಶೂಲ ಹಿಡ್ಕೊಳಲ್ವಾ? ಹಾಗೆ ಅವರು ತಲ್ವಾರ್‌ ಹಿಡಿದಿದ್ದಾರೆ ಅಷ್ಟೆ; ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿಮೂಲಸೌಲಭ್ಯ ಕಲ್ಪಿಸಿ, ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ಕಲ್ಪಿಸುವುದು ಸರಕಾರದ ಜವಾಬ್ದಾರಿಯಾಗಿದೆ . ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರಕಾರ ಶ್ರಮಿಸುತ್ತಿದ್ದು, ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಶಾಲಾ ಮಕ್ಕಳಿಗೆ ಬಿಸಿಯೂಟದ ಜತೆಗೆ ವಾರಕ್ಕೆ 2 ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ನೀಡಲಾಗುತ್ತಿದೆ. ಈ ವರ್ಷ ಪಿಯುಸಿ ಫೇಲಾದ ವಿದ್ಯಾರ್ಥಿಗಳಿಗೆ 2 ಪೂರಕ ಪರೀಕ್ಷೆಗಳನ್ನು ನಡೆಸಿದ್ದೆವು. ಇದರ ಪ್ರತಿಫಲವಾಗಿ 4200 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ ಎಂದು ವಿವರಿಸಿದರು.

ಮುಂದಿನ ಶೈಕ್ಷಣಿಕ ವರ್ಷದಿಂದ 13,500 ಶಿಕ್ಷಕರನ್ನು ನೇಮಕ ಮಾಡಿಕೊಂಡು ಶಿಕ್ಷಕರ ಕೊರತೆ ನೀಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

Continue Reading

ದೇಶ

7th Pay Commission: ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ, ಮುಂದಿನ ತಿಂಗಳು ಘೋಷಣೆ?

7th Pay Commission: ಕೇಂದ್ರ ಸರ್ಕಾರಿ ನೌಕರರು ಖುಷಿಪಡುವ ಸುದ್ದಿಯೊಂದು ಹೊರಬಿದ್ದಿದ್ದು, ಮುಂದಿನ ತಿಂಗಳು ಕೇಂದ್ರ ಸರ್ಕಾರವು ತುಟ್ಟಿ ಭತ್ಯೆಯನ್ನು ಘೋಷಿಸುವ ಸಾಧ್ಯತೆ ಇದೆ.

VISTARANEWS.COM


on

Dearness Allowance
Koo

ನವದೆಹಲಿ: ಕೇಂದ್ರ ಸರ್ಕಾರದ ನೌಕರರಿಗೆ (Central Government Employees) ಶೀಘ್ರವೇ ಸಿಹಿ ಸುದ್ದಿ ಸಿಗಲಿದೆ. ನೌಕರರ ತುಟ್ಟಿ ಭತ್ಯೆ (dearness allowance – DA) ಹೆಚ್ಚಳ ಕುರಿತು ಸೆಪ್ಟೆಂಬರ್‌ ತಿಂಗಳಲ್ಲಿ (September Month) ಕೇಂದ್ರ ಸರ್ಕಾರವು ಘೋಷಣೆ ಮಾಡುವ ಸಾಧ್ಯತೆಗಳಿವೆ. ಸರ್ಕಾರದಿಂದ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಇಲ್ಲವಾದರೂ, ಮಾಧ್ಯಮಗಳ ವರದಿಗಳ ಪ್ರಕಾರ, ಮುಂದಿನ ತಿಂಗಳು ಘೋಷಣೆಯಾಗುವುದು ಪಕ್ಕಾ ಎಂದು ಹೇಳಲಾಗುತ್ತಿದೆ(7th Pay Commission).

ದೇಶದಲ್ಲಿ ಹಣದುಬ್ಬರ ಏರಿಕೆಯು 15 ತಿಂಗಳ ಗರಿಷ್ಠ ಮಟ್ಟಕ್ಕೆ ತಲುಪಿದೆ. ವರದಿಗಳ ಪ್ರಕಾರ ಕೇಂದ್ರ ಸರ್ಕಾರವು ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.3ರಷ್ಟು ಹೆಚ್ಚಿಸುವ ಸಾಧ್ಯತೆಗಳಿವೆ. ಈ ಹೆಚ್ಚಳವು ಪೂರ್ವಾನ್ವಯ ಅಂದರೆ ಜುಲೈ ತಿಂಗಳಿನಿಂದಲೇ ಅನ್ವಯವಾಗಲಿದೆ ಎಂದು ಹೇಳಲಾಗುತ್ತಿದೆ.

ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿ ಭತ್ಯೆಯನ್ನು ಕಾರ್ಮಿಕ ಬ್ಯೂರೋ ಪ್ರತಿ ತಿಂಗಳು ಹೊರತರುವ ಕೈಗಾರಿಕಾ ಕಾರ್ಮಿಕರ ಇತ್ತೀಚಿನ ಗ್ರಾಹಕ ಬೆಲೆ ಸೂಚ್ಯಂಕದ (CPI-IW) ಆಧಾರದ ಮೇಲೆ ಲೆಕ್ಕ ಹಾಕಲಾಗುತ್ತದೆ.

ಈ ಸುದ್ದಿಯನ್ನೂ ಓದಿ: DA Hike News : ಕಳೆದ ಐದು ತಿಂಗಳ ಬಾಕಿ ತುಟ್ಟಿ ಭತ್ಯೆ; ಯಾವ ವೇತನ ಶ್ರೇಣಿಯವರಿಗೆ ಎಷ್ಟು ಹಣ ಲಭ್ಯ?

2023ರ ಜೂನ್ ತಿಂಗಳ CPI-IW ಅನ್ನು 2023ರ ಜುಲೈ 31ರಂದು ಬಿಡುಗಡೆ ಮಾಡಲಾಗಿದೆ. ನಾವು ತುಟ್ಟಿಭತ್ಯೆಯಲ್ಲಿ ನಾಲ್ಕು ಶೇಕಡಾವಾರು ಪಾಯಿಂಟ್‌ಗಳ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದೇವೆ. ಆದರೆ ತುಟ್ಟಿಭತ್ಯೆ ಹೆಚ್ಚಳವು ಮೂರು ಶೇಕಡಾವಾರು ಅಂಕಗಳಿಗಿಂತ ಸ್ವಲ್ಪ ಹೆಚ್ಚಾಗಿರುತ್ತದೆ. ಹೀಗಾಗಿ ಡಿಎ ಮೂರು ಶೇಕಡಾ ಪಾಯಿಂಟ್‌ಗಳಿಂದ ಶೇಕಡಾ 45 ಕ್ಕೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಖಿಲ ಭಾರತ ರೈಲ್ವೇಮೆನ್ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಶಿವ ಗೋಪಾಲ್ ಮಿಶ್ರಾ ಇತ್ತೀಚೆಗೆ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ನೌಕರರ ಕಾರ್ನರ್

Shadakshari CS : ನನ್ನ ಟಾರ್ಗೆಟ್‌ ಮಾಡಿದ್ರೆ ಚರ್ಚೆಗೆ ಸಿದ್ಧ: ಎನ್‌ಪಿಎಸ್‌ ಅಧ್ಯಕ್ಷರ ಆರೋಪಕ್ಕೆ ಷಡಾಕ್ಷರಿ ಸವಾಲು

Shadakshari CS ಎನ್‌ಪಿಎಸ್‌ ನೌಕರರ ಶಿವಮೊಗ್ಗ ಶಾಖೆಯ ಅಧ್ಯಕ್ಷ ಪ್ರಭಾಕರ್‌ ನಾಪತ್ತೆ ಪ್ರಕರಣದಲ್ಲಿ ತಮ್ಮ ಪಾತ್ರ ಇಲ್ಲ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್‌ ಷಡಾಕ್ಷರಿ ಹೇಳಿದ್ದಾರೆ.

VISTARANEWS.COM


on

Shadakshari
Koo

ಶಿವಮೊಗ್ಗ: ಎನ್‌ಪಿಎಸ್‌ ನೌಕರರ ಸಂಘದ ಶಿವಮೊಗ್ಗ ಶಾಖೆಯ ಅಧ್ಯಕ್ಷ ಪ್ರಭಾಕರ್‌ ಅವರು ತಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌ ಷಡಾಕ್ಷರಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಸಿ ಎಸ್ ಷಡಾಕ್ಷರಿ (Shadakshari CS )ಹೇಳಿಕೆ ನೀಡಿದ್ದು, ಇತ್ತೀಚೆಗೆ ಕೆಲ ಕಾಲ ನಡೆದ ಪ್ರಭಾಕರ್‌ ಅವರ ನಾಪತ್ತೆ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧ ಇಲ್ಲ ಎಂದು ತಿಳಿಸಿದ್ದಾರೆ.

ನನ್ನ ಮತ್ತು ಇತರ ಐದು ಅಧಿಕಾರಿಗಳ ವಿರುದ್ಧ ಕೆಲ ಆರೋಪಗಳನ್ನು ಪ್ರಭಾಕರ್‌ ಮಾಡಿದ್ದಾರೆ ಎಂಬುದನ್ನು ಸಾಮಾಜಿಕ ಜಾಲತಾಣಗಳ ಮೂಲಕ ತಿಳಿದುಕೊಂಡಿದ್ದೇನೆ. ಅವರು ಈಗ ಏನು ಹೇಳಿಕೆ ಕೊಟ್ಟಿದ್ದಾರೆ ಅಂತ ನನಗೆ ಗೊತ್ತಿಲ್ಲ. ಆದರೆ ಒಂದು ವೇಳೆ ಈಗಲೂ ನನ್ನನ್ನು ಟಾರ್ಗೆಟ್ ಮಾಡಿದ್ರೆ ಚರ್ಚೆಗೆ ಸಿದ್ದನಿದ್ದೇನೆ ಎಂದು ಷಡಾಕ್ಷರಿ ಸವಾಲು ಹಾಕಿದ್ದಾರೆ.

ಪ್ರಭಾಕರ್‌ ಅವರು ಇತ್ತೀಚೆಗೆ ಮಿಸ್ಸಿಂಗ್ ಆದ ನಂತರ ನಾನು ಕೂಡ ವಿಧಾನಸೌಧದ ಪೊಲೀಸ್ ಸ್ಟೇಷನ್ ಗೆ ಕಂಪ್ಲೇಂಟ್ ಕೊಟ್ಟಿದ್ದೇನೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಸರ್ಕಾರಕ್ಕೆ ಆಗ್ರಹ ಮಾಡಿದ್ದೇನೆ. ನನಗೂ, ಅವರಿಗೂ ಸಂಬಂಧಿಸಿದಂತೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಅದಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆ ನನ್ನ ಹತ್ತಿರಾನೂ ಇಲ್ಲ ಅವರ ಬಳಿಯು ಇರಲು ಸಾಧ್ಯವಿಲ್ಲ. ಆದಾಗ್ಯೂ ನನ್ನ ವಿರುದ್ಧ ಆರೋಪ ಮಾಡಿದ್ದರೆ ಅದರ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಷಡಾಕ್ಷರಿ ಹೇಳಿದರು.

ಪ್ರಭಾಕರ್ ಶಿವಮೊಗ್ಗದಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಸಿಆರ್ ಪಿ ಆಗಿಯೂ ಕೆಲಸ ಮಾಡಿದ್ದರು. ನಂತರದಲ್ಲಿ ಉಪನೋಂದಣಾಧಿಕಾರಿ ಕಚೇರಿಗೆ ಆರೋಗ್ಯ ಸಮಸ್ಯೆ ನಿಮಿತ್ತ ವರ್ಗಾವಣೆ ಬಯಸಿದ್ದರು. ಅದರ ಪ್ರಸ್ತಾವನೆಗೆ ಅನುಮತಿ ಕೂಡ ಸಿಕ್ಕಿರುತ್ತೆ. ಒಂದು ವರ್ಷ ಕಾಲ ಅದರ ಲಾಭ ಪಡೆದು ಹೊನ್ನಾಳಿಯಲ್ಲೂ ಕೆಲಸ ಮಾಡಿರುತ್ತಾರೆ. ನಿಯಮಾವಳಿ ಪ್ರಕಾರ ಅವರಿಗೆ ಡಿಮೋಷನ್ ಮಾಡಿರಬೇಕು. ಇದರ ನಡುವೆ ಕೋರ್ಟಿಗೆ ಕೂಡ ಹೋಗಿರುವ ಮಾಹಿತಿ ಲಭ್ಯ ಆಗಿದೆ. ಅದರ ಸಂಪೂರ್ಣ ದಾಖಲಾತಿ ನನಗೆ ಸಿಕ್ಕಿಲ್ಲ. ಸಿಕ್ಕ ನಂತರ ಸಂಪೂರ್ಣ ವಿವರ ನೀಡುತ್ತೇನೆ ಅವರಿಗೆ ಯಾವುದೇ ತೊಂದರೆ ಕೊಡುವಂತಹ ಶಿಫಾರಸು ಪತ್ರ ಕೊಟ್ಟಿಲ್ಲ. ಯಾರಿಗೂ ಫೋನ್ ಮಾಡಿ ಇವರಿಗೆ ಮಾಡಿಕೊಡಬೇಡಿ ಅಂತ ಹೇಳಿಲ್ಲ. ಹೊನ್ನಾಳಿಯಲ್ಲಿ ಅವರಿಗೆ ಸಂಬಳ ಆಗಿಲ್ಲ ಅಂದ್ರೆ ಅದಕ್ಕೆ ನಾನು ಹೇಗೆ ಕಾರಣ?

ಏಳು ತಿಂಗಳು ಸಂಬಳ ಆಗಿಲ್ಲ ಅಂದರೆ ನನ್ನ ಗಮನಕ್ಕೆ ತಂದಿದ್ರೆ ನಾನು ತಕ್ಷಣ ಸಂಬಳ ಮಾಡಿಕೊಡಲು ಹೇಳುತ್ತಿದ್ದೆ. ನನಗೆ ಗೊತ್ತಿಲ್ಲದ ವಿಷಯ ಹೇಳದೆ ಇದ್ದರೆ ಅದಕ್ಕೆ ನಾನು ಕಾರಣನಲ್ಲ. ಯಾವುದೇ ಸಂಬಳ ಬಾಕಿ ಇಲ್ಲ ಅಂತ ಹೊನ್ನಾಳಿ ಬಿಇಓ ಹೇಳಿಕೆ ಕೊಟ್ಟಿದ್ದಾರೆ. ಸಂಬಳ ಕೊಡುವುದು ಅಧಿಕಾರಿಗಳು ನಾನಲ್ಲ. ಅವರು ಸಮಸ್ಯೆ ಹೇಳಿಕೊಂಡರೆ ನಾನು ಸ್ಪಂದಿಸಬಹುದು ಅಷ್ಟೇ. ಡಿಮೋಷನ್ ಮಾಡುವುದು ಸರ್ಕಾರದ ಮಟ್ಟದಲ್ಲಿ. ಅದಕ್ಕೆ ಕಾನೂನುಗಳಿವೆ, ಅದರ ಅಡಿಯಲ್ಲಿ ಅವರು ಮಾಡಿರುತ್ತಾರೆ. ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಹೇಳಿದರೆ ಅಧಿಕಾರಿಗಳು ಮಾಡುವುದಿಲ್ಲ. ಕಾನೂನಿನಲ್ಲಿ ಅವಕಾಶ ಇದ್ದರೆ ಮಾತ್ರ ಮಾಡ್ತಾರೆ.

ಇದನ್ನೂ ಓದಿ: Govt Employees Strike : ಯಶಸ್ಸು ಪಡೆದ ಮುಷ್ಕರ; ಷಡಾಕ್ಷರಿಗೆ ನಿವೃತ್ತ ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ

ಪ್ರಭಾಕರ್ ಅವರ ಪ್ರಕರಣದಲ್ಲಿ ನನ್ನ ಯಾವುದೇ ಪಾತ್ರ ಇಲ್ಲ. ಅವರಿಗೆ ತೊಂದರೆ ಕೊಡಿ ಅಂತ ನಾನೇನಾದರೂ ಹೇಳಿದ್ದರೆ, ಶಿಫಾರಸು ಪತ್ರ ಕೊಟ್ಟಿದ್ದರೆ ದಾಖಲಾತಿ ತೋರಿಸಲಿ. ಅವರಿಗೆ ಮಾನಸಿಕ ಕಿರಿಕಿರಿ ಆಗಿರಬೇಕು. ಅವರಿಗೆ ಶಿವಮೊಗ್ಗದಲ್ಲಿ, ಬೆಂಗಳೂರಿನಲ್ಲಿ ನಮ್ಮ ಸಹಕಾರಿ ಸಂಘದಿಂದ ತಲಾ 5 ಲಕ್ಷ ಸಾಲ ನಾವೇ ಕೊಟ್ಟಿದ್ದೇವೆ. ಅವರು ಹೊನ್ನಾಳಿಯಿಂದ ಶಿವಮೊಗ್ಗಕ್ಕೆ ವರ್ಗಾವಣೆಯಾಗಿ ಬರಲು ನಾನು ಶಿಫಾರಸು ಪತ್ರ ಕೂಡ ಕೊಟ್ಟಿದ್ದೆ ನಮ್ಮ ಕೈಲಾದಷ್ಟು ಅವರಿಗೆ ಸಹಾಯ ಮಾಡಿದ್ದೇವೆ ಎಂದು ಷಡಾಕ್ಷರಿ ವಿವರಿಸಿದ್ದಾರೆ.

Continue Reading

ನೌಕರರ ಕಾರ್ನರ್

Govt Employees News : ಸರ್ಕಾರಿ ನೌಕರರಿಗೆ ಸದ್ಯವೇ ಕ್ಯಾಶ್‌ಲೆಸ್‌ ಇನ್ಷೂರೆನ್ಸ್‌ ಕಾರ್ಡ್‌

Govt Employees News : ರಾಜ್ಯ ಸರ್ಕಾರಿ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲು ಜಾರಿಗೆ ತಂದಿರುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ (karnataka arogya sanjeevani ) ಕಾರ್ಡ್‌ ರೂಪಿಸಲು ಈಗ ಮಾಹಿತಿ ಸಂಗ್ರಹಿಸಲಾಗುತ್ತಿದೆ.

VISTARANEWS.COM


on

arogya sanjeevani scheme karnataka
Koo

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ʻಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆʼಯ (ಕೆಎಎಸ್‌ಎಸ್‌) (karnataka arogya sanjeevani) ಲಾಭ ಸದ್ಯವೇ ನೌಕರರಿಗೆ (Govt Employees News) ಲಭ್ಯವಾಗಲಿದೆ.

ಈ ಯೋಜನೆಯ ಲಾಭ ಪಡೆಯಲು ಸರ್ಕಾರಿ ನೌಕರರು ʻಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆಯʼ (HRMS) ವೆಬ್‌ಸೈಟ್‌ನಲ್ಲಿ ಮಾಹಿತಿಯನ್ನು ಅಪ್‌ಡೇಟ್‌ ಮಾಡಿಸಬೇಕೆಂದು ಎಲ್ಲ ಸರ್ಕಾರಿ ನೌಕರರಿಗೆ ಸರ್ಕಾರ ಸೂಚಿಸಿದೆ. ನೌಕರರು ತಮ್ಮ ಮತ್ತು ಅವಲಂಬಿತರ ಮಾಹಿತಿಯನ್ನು HRMS ನಲ್ಲಿ ಅಪಡೇಟ್ ಮಾಡಬೇಕಿರುತ್ತದೆ. ಅಲ್ಲದೆ ಈ ಮಾಹಿತಿಯನ್ನು ಕಚೇರಿಗೆ ಸಹ ಸಲ್ಲಿಸಬೇಸಬೇಕಿರುತ್ತದೆ ಎಂದು ನೌಕರರಿಗೆ ತಿಳಿಸಲಾಗಿದೆ.

ಎಚ್‌ಆರ್‌ಎಂಎಸ್‌ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ (Click Here) ಮಾಡಿ.

c s shadakshari
ಸಿ ಎಸ್‌ ಷಡಾಕ್ಷರಿ

ಕಳೆದ ಮಾರ್ಚ್‌ನಲ್ಲಿ ಸರ್ಕಾರ ಈ ಯೋಜನೆಯ ಜಾರಿಗೆ ಸಂಬಂಧಿಸಿದಂತೆ ಪರಿಷ್ಕೃತ ಕಾರ್ಯನೀತಿಯನ್ನು ಪ್ರಕಟಿಸಿಸಿ ಯೋಜನೆಗೆ ಚಾಲನೆ ನೀಡಲಾಗಿತ್ತು. ಆದರೆ ಸಾಫ್ಟ್‌ವೇರ್‌ ಸಮಸ್ಯೆಯಿಂದಾಗಿ ಯೋಜನೆ ಜಾರಿ ಸಾಧ್ಯವಾಗಿರಲಿಲ್ಲ. ಈಗ ಸಮಸ್ಯೆ ಬಗೆಹರಿದಿದ್ದು, ತ್ವರಿತಗತಿಯಲ್ಲಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಆದಷ್ಟು ಬೇಗ ಈ ಯೋಜನೆಯ ಲಾಭ ಪ್ರತಿ ನೌಕರರಿಗೂ ದೊರೆಯಲಿದೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್‌. ಷಡಾಕ್ಷರಿ ʻವಿಸ್ತಾರ ನ್ಯೂಸ್‌ʼಗೆ ತಿಳಿಸಿದ್ದಾರೆ.

ಸಂಘದ ಮನವಿಗೆ ಸ್ಪಂದಿಸಿರುವ ಸರ್ಕಾರ ಈ ನಿಟ್ಟಿನಲ್ಲಿ ತುರ್ತು ಕ್ರಮ ತೆಗೆದುಕೊಂಡಿದೆ. ನೌಕರರ ಮಾಹಿತಿ ಸಂಗ್ರಹ ಸಂಪೂರ್ಣವಾಗುತ್ತಿದ್ದಂತೆಯೇ ಕಾರ್ಡ್‌ ರೂಪಿಸುವ ಪ್ರಕ್ರಿಯೆ ಆರಂಭವಾಗಲಿದೆ. ಒಟ್ಟಾರೆ ಈ ಯೋಜನೆ ಜಾರಿಯು ಅಂತಿಮ ಹಂತದಲ್ಲಿದೆ ಎಂದು ಅವರು ತಿಳಿಸಿದ್ದಾರೆ. 2020-21 ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿಯೇ ಈ ಯೋಜನೆಯನ್ನು ಪ್ರಕಟಿಸಲಾಗಿತ್ತು.

ರಾಜ್ಯ ಉಚ್ಚ ನ್ಯಾಯಾಲಯದ ನೌಕರರು, ರಾಜ್ಯ ವಿಧಾನ ಮಂಡಲದ ನೌಕರರು, ʻಆರೋಗ್ಯ ಭಾಗ್ಯ’ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಪೊಲೀಸ್‌ ಇಲಾಖೆಯ ಸಿಬ್ಬಂದಿ, ಕರ್ನಾಟಕ ನ್ಯಾಯಾಂಗ ಅಧಿಕಾರಿಗಳು, ಅಖಿಲ ಭಾರತ ಸೇವೆಗೆ ಸೇರಿದ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ನಿಗಮ/ ಮಂಡಳಿಗಳು, ಸಹಕಾರ ಸ೦ಸ್ಥೆಗಳ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಇತರೆ ಸಸ್ಥೆಗಳ ನೌಕರರು ಈ ಯೋಜನೆಯ ಲಾಭ ಪಡೆಯಲಿದ್ದಾರೆ.

ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ.

ಈ ಯೋಜನೆಯಡಿ ಸರ್ಕಾರಿ ನೌಕರನ ಪತಿ ಅಥವಾ ಪತ್ನಿ, ತಂದೆ ಮತ್ತು ತಾಯಿ (ಮಲ ತಾಯಿಯ ನ್ನೊಳಗೊಂಡಂತೆ (ಅವರು ಸರ್ಕಾರಿ ನೌಕರನೊಂದಿಗೆ ಸಾಮಾನ್ಯವಾಗಿ ವಾಸವಾಗಿದ್ದಲ್ಲಿ ಮತ್ತು ಅವರ ಒಟ್ಟು ಮಾಸಿಕ ಆದಾಯ- ಕನಿಷ್ಠ ಕುಟುಂಬ ಪಿಂಚಣಿ ರೂ.8500 ಹಾಗೂ ಚಾಲ್ತಿಯಲ್ಲಿದ್ದ ತುಟ್ಟಿಭತ್ಯೆಯನ್ನು ಒಳಗೊಂಡ ಮೊತ್ತವನ್ನು ಮೀರದಿದ್ದಲ್ಲಿ), ಸರ್ಕಾರಿ ನೌಕರನ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಿರುವ ಮಕ್ಕಳು (ದತ್ತು ಪಡೆದ ಮಕ್ಕಳು ಮತ್ತು ಮಲ ಮಕ್ಕಳನ್ನೊಳಗೊಂಡಂತೆ) ವೈದ್ಯಕೀಯ ಸೇವೆ ಪಡೆಯಲು ಅರ್ಹರಾಗಿರುತ್ತಾರೆ.

ಇದನ್ನೂ ಓದಿ: KSRTC Employees News : ಸಾರಿಗೆ ನೌಕರರರಿಗೆ ಸರ್ಕಾರಿ ನೌಕರರಾಗುವ ಭಾಗ್ಯವಿಲ್ಲ!

ಈ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಜಾರಿಗೆ ತರುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಒಳಪಟ್ಟಿದ್ದು, ಈ ಟ್ರಸ್ಟ್‌ ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದ ಆಯುಷ್ಮಾನ್‌ ಭಾರತ – ಆರೋಗ್ಯ ಕರ್ನಾಟಕ ಯೋಜನೆಯನ್ನು ನಿರ್ವಹಿಸುತ್ತಿದೆ. ಸರ್ಕಾರಿ ನೌಕರರಿಗೆ ರೂಪಿಸಲಾಗಿರುವ ಈ ಯೋಜನೆ ಕೂಡ ಇದರ ಅಡಿಯಲ್ಲಿಯೇ ಬರಲಿದೆ.

Continue Reading
Advertisement
dina bhavishya
ಪ್ರಮುಖ ಸುದ್ದಿ1 hour ago

Dina Bhavishya : ಈ ರಾಶಿಯವರು ಹೂಡಿಕೆ ಮಾಡಿದ್ರೆ ಲಾಭ ಗ್ಯಾರಂಟಿ

Sphoorti Salu
ಸುವಚನ1 hour ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Vivek Ramaswamy offering rs 80 lakh to nanny Says media report
ಪ್ರಮುಖ ಸುದ್ದಿ6 hours ago

ಮಕ್ಕಳನ್ನು ನೋಡಿಕೊಳ್ಳುವ ಆಯಾ ಕೆಲಸಕ್ಕೆ 80 ಲಕ್ಷ ರೂ. ಸ್ಯಾಲರಿ ಆಫರ್!

MLC TA Sharavana
ಬೆಂಗಳೂರು6 hours ago

TA Sharavana: ಅನಾಮಿಕರಾಗಿದ್ದ ಜಮೀರ್‌ಗೆ ರಾಜಕೀಯ ಬದುಕು ಕೊಟ್ಟಿದ್ದೇ ಜೆಡಿಎಸ್: ಟಿ.ಎ.ಶರವಣ

Justin Trudeau
ದೇಶ7 hours ago

India Canada Row: ಥಂಡಾ ಹೊಡೆದ ಕೆನಡಾ ಪಿಎಂ! ಭಾರತದೊಂದಿಗೆ ಇನ್ನು ಜಗಳ ಮಾಡಲ್ಲ ಎಂದ ಟ್ರೂಡೋ

Netherlands cricket team
ಕ್ರಿಕೆಟ್7 hours ago

ICC World Cup 2023 : ವಿಶ್ವ ಕಪ್​ನಲ್ಲಿ ಆಡಲಿರುವ ನೆದರ್ಲ್ಯಾಂಡ್ಸ್​​ ತಂಡದ ಬಲವೇನು? ದೌರ್ಬಲ್ಯವೇನು?

Modi and KTR
ದೇಶ7 hours ago

ಎನ್‌ಡಿಎಗೆ ಸೇರಿಸಿಕೊಳ್ಳಿ ಎಂದಿದ್ದ ಕೆಸಿಆರ್; ಮೋದಿ! ಬಿಜೆಪಿ ಜತೆ ಹೋಗಲು ನಮಗೇನು ಹುಚ್ಚು ನಾಯಿ ಕಚ್ಚಿದೆಯಾ; ಕೆಟಿಆರ್

Child dies
ಕರ್ನಾಟಕ7 hours ago

Anekal News: ಮಹಡಿ ಮೇಲಿಂದ ಬಿದ್ದು 2 ವರ್ಷದ ಮಗು ಸಾವು

MB Patil visits america
ಕರ್ನಾಟಕ8 hours ago

MB Patil : ಬೆಂಗಳೂರಿನಲ್ಲಿ 800 ಕೋಟಿ ರೂ. ಹೂಡಲು ಕ್ರಿಪ್ಟನ್ ಸೊಲ್ಯೂಷನ್ಸ್ ಒಲವು: ಎಂ.ಬಿ. ಪಾಟೀಲ್

Top 10 news
ಟಾಪ್ 10 ನ್ಯೂಸ್8 hours ago

VISTARA TOP 10 NEWS : ಜಾತಿ ಗಣತಿಗೆ ಮೋದಿ ವಿರೋಧ, ಶಿವಮೊಗ್ಗದಲ್ಲಿ ಪೊಲೀಸರಿಗೇ ಬೆದರಿಕೆ ಹಾಕಿದ್ದ ಕಿಡಿಗೇಡಿಗಳು ಮತ್ತಿತರ ದಿನದ ಪ್ರಮುಖ ಸುದ್ದಿಗಳು

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Karnataka bandh Majestic
ಕರ್ನಾಟಕ1 week ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

kpsc recruitment 2023 pdo recruitment 2023
ಉದ್ಯೋಗ3 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ10 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

dina bhavishya
ಪ್ರಮುಖ ಸುದ್ದಿ1 hour ago

Dina Bhavishya : ಈ ರಾಶಿಯವರು ಹೂಡಿಕೆ ಮಾಡಿದ್ರೆ ಲಾಭ ಗ್ಯಾರಂಟಿ

The maintenance train finally lifted Metro services as usual
ಕರ್ನಾಟಕ14 hours ago

Namma Metro : ಕೊನೆಗೂ ಲಿಫ್ಟ್ ಆಯ್ತು ಮೆಂಟೈನ್ಸ್‌ ವೆಹಿಕಲ್‌; ಎಂದಿನಂತೆ ಮೆಟ್ರೋ ಓಡಾಟ

BBK Season 10 KicchaSudeep
ಕಿರುತೆರೆ15 hours ago

BBK Season 10 : ಅಕ್ಟೋಬರ್‌ 8 ರಿಂದ ಬಿಗ್‌ ಬಾಸ್‌ ಆಟ; ಚಾರ್ಲಿ ಎಂಟ್ರಿ ಕನ್ಫರ್ಮ್, ಉಳಿದವರು ಯಾರು ?

dina bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!

Actor Nagabhushana
ಕರ್ನಾಟಕ2 days ago

Actor Nagabhushana : ಡ್ರಂಕ್‌ ಆ್ಯಂಡ್‌ ಡ್ರೈವ್‌ನಲ್ಲಿ ನಟ ನಾಗಭೂಷಣ್‌ ನೆಗಟಿವ್‌; ವಿಚಾರಣೆಗೆ ಕರೆದ ಪೊಲೀಸರು

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಆಪ್ತರೊಂದಿಗೆ ಮಾಡುವ ವ್ಯಾಪಾರ ನಷ್ಟ ತಂದೀತು ಹುಷಾರ್‌!

Terrorist Attack in Turkey Suicide bomber blows himself near parliament
ಪ್ರಮುಖ ಸುದ್ದಿ2 days ago

Terrorist Attack: ಟರ್ಕಿ ಸಂಸತ್ ಬಳಿ ಆತ್ಮಹತ್ಯಾ ಬಾಂಬ್ ದಾಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಸ್ಫೋಟದ ಕ್ಷಣಗಳು!

prajwal and yashswini
ಕರ್ನಾಟಕ3 days ago

Actor Nagabhushana : ಆ್ಯಕ್ಟಿಂಗ್‌ ನೋಡಿ ಮೆಚ್ಚಿದವರ ಪಾಲಿಗೆ ಯಮನಾಗಿಬಿಟ್ಟ; ಮೃತ ಕುಟುಂಬಸ್ಥರ ಆಕ್ರೋಶ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಆಪ್ತರೊಂದಿಗೆ ಅತಿಯಾದ ಸಲುಗೆ ಈ ರಾಶಿಯವರಿಗೆ ಒಳ್ಳೆಯದಲ್ಲ!

dina bhavishya
ಪ್ರಮುಖ ಸುದ್ದಿ4 days ago

Dina Bhavishya : ದಿನ ಪೂರ್ತಿ ಈ ರಾಶಿಯವರಿಗೆ ಟೆನ್ಷನ್‌ ಜತೆಗೆ ಪ್ರೆಶರ್‌

ಟ್ರೆಂಡಿಂಗ್‌