CS Shadakshari : ಸಂಘಟನೆ ಹೆಸರಲ್ಲಿ 1 ರೂ. ಗಳಿಸಿದ್ದರೆ ಈ ಕ್ಷಣವೇ ರಾಜೀನಾಮೆ; ಷಡಾಕ್ಷರಿ ಸವಾಲ್‌ Vistara News

ಕರ್ನಾಟಕ

CS Shadakshari : ಸಂಘಟನೆ ಹೆಸರಲ್ಲಿ 1 ರೂ. ಗಳಿಸಿದ್ದರೆ ಈ ಕ್ಷಣವೇ ರಾಜೀನಾಮೆ; ಷಡಾಕ್ಷರಿ ಸವಾಲ್‌

CS Shadakshari : ಸಂಘಟನೆಯ ಹೆಸರಿನಲ್ಲಿ ಷಡಾಕ್ಷರಿ ಹಣ ಸಂಗ್ರಹ ಮಾಡುತ್ತಿದ್ದಾರೆ ಎಂಬ ಆರೋಪವನ್ನು ಅವರು ಸ್ಪಷ್ಟವಾಗಿ ಅಲ್ಲಗಳೆದಿದ್ದಾರೆ. ಮತ್ತು ಈ ಸಂಬಂಧ ಸವಾಲು ಹಾಕಿದ್ದಾರೆ.

VISTARANEWS.COM


on

CS Shadakshari in Power point programme
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾನು ಒಬ್ಬೇ ಒಬ್ಬ ನೌಕರನಿಂದ ಒಂದೇ ಒಂದು ರೂಪಾಯಿ ಸಂಗ್ರಹ ಮಾಡಿದ್ದೇನೆ ಎಂದು ಆರು ಲಕ್ಷ ಜನರಲ್ಲಿ ಒಬ್ಬನೇ ಒಬ್ಬ ಹೇಳಿದರೆ ಸಾಕು ನಾನು ರಾಜೀನಾಮೆ ಕೊಟ್ಟು ಹೋಗುತ್ತೇನೆ ಎಂದು ಮಾಧ್ಯಮದ ಮುಂದೆ ಸವಾಲು ಹಾಕುತ್ತೇನೆ; ಹೀಗೆಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ (Karnataka State Employees Association President) ಸಿ.ಎಸ್‌. ಷಡಾಕ್ಷರಿ (CS Shadakshari) ಅವರು.

ಶಿಕ್ಷಣ ಸಚಿವರಾಗಿರುವ ಮಧು ಬಂಗಾರಪ್ಪ ಅವರು ಬರೆದ ಪತ್ರದ ಆಧಾರದಲ್ಲಿ ಸಿ.ಎಸ್‌. ಷಡಾಕ್ಷರಿ ಅವರನ್ನು ಶಿವಮೊಗ್ಗದಿಂದ ಕೋಲಾರ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಈ ಪತ್ರದಲ್ಲಿ ಉಲ್ಲೇಖವಾದ ಹಲವಾರು ಅಂಶಗಳಿಗೆ ಸಂಬಂಧಿಸಿ ವಿಸ್ತಾರ ನ್ಯೂಸ್‌ ಪವರ್‌ ಪಾಯಿಂಟ್‌ ಪ್ರೋಗ್ರಾಂನಲ್ಲಿ (Power point Programe) ಅವರು ಉತ್ತರ ನೀಡಿದರು. ಶಿವಮೊಗ್ಗದಲ್ಲಿ ಮಣ್ಣು ಸಾಗಾಟ ಮಾಡಿದ ಆರೋಪ, ಅದರಿಂದ ಸರ್ಕಾರಕ್ಕೆ ಆದ ನಷ್ಟದ ಬಗ್ಗೆಯೂ ಉತ್ತರ ನೀಡಿದರು.

ಈ ನಡುವೆ, ಪ್ರತಿಭಟನೆ ಹೆಸರಿನಲ್ಲಿ ಷಡಾಕ್ಷರಿ ಅವರು ಕಲೆಕ್ಷನ್‌ ಮಾಡುತ್ತಾರೆ ಎಂಬ ಆರೋಪ ಪದೇಪದೆ ಕೇಳಿಬರುತ್ತಿದೆಯಲ್ಲಾ ಎಂಬ ವಿಸ್ತಾರ ನ್ಯೂಸ್‌ ಪೊಲಿಟಿಕಲ್‌ ಬ್ಯೂರೊ ಹೆಡ್‌ ಮಾರುತಿ ಪಾವಗಡ ಅವರ ಪ್ರಶ್ನೆಗೆ ನೇರ ಮಾತುಗಳಲ್ಲಿ ಷಡಾಕ್ಷರಿ ಉತ್ತರ ನೀಡಿದರು.

ʻʻʻನೀವು ಈ ಪ್ರಶ್ನೆಯನ್ನು ನನ್ನನ್ನು ತಪ್ಪಾಗಿ ಕೇಳಿದ್ದೀರಿ. ಸಂಘಟನೆಯ ಹೆಸರಿನಲ್ಲಿ, ಪ್ರತಿಭಟನೆಯ ಹೆಸರಿನಲ್ಲಿ 5,000 ರೂ. ಹತ್ತು ಸಾವಿರ ರೂ. ಸಂಗ್ರಹ ಮಾಡಿ ಕೊನೆಗೆ ಏನೂ ಮಾಡದೆ ಹೋದವರು ತುಂಬ ಜನ ಇದ್ದಾರೆ. ಆದರೆ, ನಾನು ಹಾಗಲ್ಲ. ಸಂಘಟನೆಯ ಹೆಸರಿನಲ್ಲಿ ನಾನು ಒಂದು ರೂಪಾಯಿ ಗಳಿಸಿದ್ದೇನೆ ಎಂದು ಸಾಬೀತಾದರೆ ಮಾಧ್ಯಮದ ಮುಂದೆಯೇ ರಾಜೀನಾಮೆ ಕೊಡುತ್ತೇನೆ. ಒಬ್ಬನೇ ಒಬ್ಬ ನೌಕರ ನನ್ನ ಮೇಲೆ ಲಿಖಿತವಾಗಿ ದೂರು ನೀಡಿದರೆ ಹುದ್ದೆಯನ್ನು ತ್ಯಜಿಸುತ್ತೇನೆʼʼ ಎಂದು ಅವರು ಹೇಳಿದರು.

ಇದನ್ನೂ ಓದಿ: CS Shadakshari : ನನಗೆ ಕ್ಲೀನ್‌ ಚಿಟ್‌ ಸಿಕ್ಕಿದೆ, ಇನ್ನೇನು ಕ್ರಮ ಕೈಗೊಳ್ತಾರೆ: ಷಡಾಕ್ಷರಿ ಪ್ರಶ್ನೆ

ನಮ್ಮದು ಒಂದೇ ಒಂದು ಅಪಸ್ವರವಿಲ್ಲದ ತೀರ್ಮಾನ

ʻʻನಮ್ಮ ಸಂಘಟನೆಯ ಎಲ್ಲ ಆಡಿಟ್‌ ರಿಪೋರ್ಟ್‌ ಎಲ್ಲ ಆರು ಲಕ್ಷ ನೌಕರರಿಗೆ ತಲುಪುತ್ತದೆ. ಯಾರಾದರೂ ಒಬ್ಬರು ಇದರಲ್ಲಿ ತಪ್ಪಿದೆ ಎಂದು ಬರಹದ ಮೂಲಕ ಹೇಳಿಕೆ ನೀಡಲಿ ನೋಡೋಣ ಸರ್‌. ನಾನು ಅಧ್ಯಕ್ಷನಾದ ಬಳಿಕ 18 ಪ್ರಮುಖ ಮೀಟಿಂಗ್‌ಗಳನ್ನು ಮಾಡಿದ್ದೇನೆ. ಅದರಲ್ಲಿ ಒಂದೇ ಒಂದು ಅಪಸ್ವರ ಇಲ್ಲದೆ ಸರ್ವಾನುಮತದ ತೀರ್ಮಾನವನ್ನು ಮಾಡಿದ್ದೇವೆ. ಇದು ನನ್ನ ಅಧ್ಯಕ್ಷತೆಯ ಅವಧಿಯ ವಿಶೇಷʼʼ ಎಂದು ಷಡಾಕ್ಷರಿ ಹೇಳಿದರು.

ನಾನು ಅಧ್ಯಕ್ಷನಾದ ಹೊತ್ತಿನಲ್ಲಿ ಸಂಘದಲ್ಲಿ ಹಣವೇ ಇರಲಿಲ್ಲ

ʻʻನಾನು ಪ್ರಾಮಾಣಿಕವಾಗಿ ಮತ್ತು ಪಾರದರ್ಶಕವಾಗಿ ಕೆಲಸ ಮಾಡಿದ್ದೇನೆ ಎಂದು ಈ ರಾಜ್ಯದ ಆರು ಲಕ್ಷ ಜನ ಸರ್ಕಾರಿ ನೌಕರರು ಒಪ್ಪಿಕೊಂಡಿದ್ದಾರೆ. ನಿಜ ಹೇಳಬೇಕು ಎಂದರೆ ನಾನು ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದಾಗ ಸಂಘದಲ್ಲಿ ಹಣವೇ ಇರಲಿಲ್ಲ. ಈಗ ನಾಲ್ಕುವರೆ ವರ್ಷದಲ್ಲಿ 22.5 ಕೋಟಿ ರೂ. ಉಳಿಸಿದಂಥ ವ್ಯಕ್ತಿ ನಾನುʼʼ ಎಂದು ಅವರು ಹೇಳಿದರು.

ಮುಖ್ಯಮಂತ್ರಿಗಳು ಅಂತಲ್ಲ, ಯಾರಾದರೂ ಕೇಳಿದರೆ ಒಳ್ಳೆಯದಿತ್ತು

ನಿಮ್ಮನ್ನು ವರ್ಗಾವಣೆ ಮಾಡುವ ಹಂತದಲ್ಲಿ ಮುಖ್ಯಮಂತ್ರಿಗಳಾದರೂ ಕರೆದು ಒಂದು ಮಾತು ಕೇಳಬೇಕಿತ್ತಲ್ಲ.. ಯಾಕೆ ಕೇಳಿಲ್ಲ? ಅವರಿಗೂ ನೀವು ತಪ್ಪು ಮಾಡಿದ್ದೀರಿ ಎಂದೇ ತೀರ್ಮಾನವಾಗಿ ಗೊತ್ತಾಯ್ತಾ? ಎಂಬ ಪ್ರಶ್ನೆಗೆ ಷಡಾಕ್ಷರಿ ಉತ್ತರಿಸಿದ್ದು ಹೀಗೆ:

ʻʻಈಗ ಚರ್ಚೆಯಾಗುತ್ತಿರುವ ಈ ವಿವಾದ ಕಳೆದ ಜೂನ್‌ನಿಂದಲೇ ಚಾಲ್ತಿಯಲ್ಲಿದೆ. ಈ ವಿಚಾರದಲ್ಲಿ ನನಗೆ ಇದುವರೆಗೂ ಒಂದೇ ಒಂದು ನೋಟಿಸ್‌ ಕೂಡಾ ಬಂದಿಲ್ಲ. ನಾನು ಇದರಲ್ಲಿ ಇದ್ದೇನೆ ಎಂದರೆ ಒಂದು ನೋಟಿಸ್‌ ಆದರೂ ಬಂದಿರಬೇಕಲ್ಲ. ಇನ್ನು ಮುಖ್ಯಮಂತ್ರಿಗಳೇ ಕೇಳಬೇಕು ಎಂದು ನಾನೂ ಬಯಸುವುದಿಲ್ಲ. ಕೆಳಮಟ್ಟದ ಅಧಿಕಾರಿಗಳಾದರೂ ಕ್ರಮ ಕೈಗೊಳ್ಳುವ ಮುನ್ನ ಇದು ಏನು ಎನ್ನುವ ಬಗ್ಗೆ ನನ್ನಲ್ಲಿ ಕೇಳಬಹುದಿತ್ತುʼʼ ಎಂದು ಷಡಾಕ್ಷರಿ ಹೇಳಿದರು.

ʻʻಈಗಲೂ ಕಾಲ ಮಿಂಚಿಲ್ಲ. ಉನ್ನತ ಮಟ್ಟದ ತನಿಖೆಯನ್ನು ನಡೆಸಿ. ನಾನು ಅದಕ್ಕೆ ಸಿದ್ಧ ಎಂದು ನೇರವಾಗಿಯೇ ಹೇಳಿದ್ದೇನೆ. ಒಂದು ವೇಳೆ ತಪ್ಪು ಮಾಡಿದ್ದರೆ ಶಿಕ್ಷೆ ಅನುಭವಿಸಲು ನಾನು ಸಿದ್ಧನಿದ್ದೇನೆ. ನಾನು ಪಲಾಯನವಾದಿಯಲ್ಲ. ಮುಖ್ಯಮಂತ್ರಿಗಳನ್ನು ನಾನು ಸೂಕ್ತ ಸಮಯದಲ್ಲಿ ಭೇಟಿ ಮಾಡುತ್ತೇನೆ. ನೌಕರರ ಸಮಸ್ಯೆಗೆ ಸ್ಪಂದಿಸುವವರು ಮುಖ್ಯಮಂತ್ರಿಗಳು. ಈ ವಿಷಯವನ್ನು ಅವರ ಗಮನಕ್ಕೆ ತರುವುದು ನಮ್ಮ ಜವಾಬ್ದಾರಿ. ತೀರ್ಮಾನ ಅವರಿಗೆ ಬಿಟ್ಟದ್ದು. ಏ ಇಲ್ಲಪ್ಪ ನೀನು ಹೋಗ್ಲೇಬೇಕು ಅಂದರೆ ಖಂಡಿತವಾಗಿಯೂ ಹೋಗುತ್ತೇನೆ. ಆದರೆ, ಅವರ ಗಮನಕ್ಕೆ ತರುವ ಕೆಲಸವನ್ನಂತೂ ನಾನು ಮಾಡಿಯೇ ಮಾಡುತ್ತೇನೆʼʼ ಎಂದು ಹೇಳಿದರು ಷಡಾಕ್ಷರಿ.

ನಾನೇ ಬೆಂಗಳೂರಿಗೆ ಡೆಪ್ಯುಟೇಷನ್‌ ಕೊಡಿ ಎಂದು ಕೇಳಿದ್ದೆ

ನಿಜವೆಂದರೆ ನನ್ನನ್ನು ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆ ಮಾಡುವುದರಿಂದ ನನಗೆ ವ್ಯತ್ಯಾಸ ಆಗುವುದಿಲ್ಲ. ಸಂಘದ ಕಚೇರಿ ಬೆಂಗಳೂರಿನಲ್ಲೇ ಇರುತ್ತದೆ. ನಾನು ಈಗ ಶಿವಮೊಗ್ಗ ಕಚೇರಿ ಬದಲು ಕೋಲಾರ ಕಚೇರಿ ಮಾಡಬೇಕಾಗುತ್ತದೆ ಅಷ್ಟೇ ವ್ಯತ್ಯಾಸ. ಉಳಿದಂತೆ ನನ್ನ ಓಡಾಟ ಇಡೀ ರಾಜ್ಯಾದ್ಯಂತ ಇದ್ದೇ ಇರುತ್ತದೆ. ನಿಜವೆಂದರೆ ನಾನೇ ಬೆಂಗಳೂರಿಗೆ ಡೆಪ್ಯೂಟೇಷನ್‌ ಕೊಡಿ. ಇಲ್ಲಿದ್ದರೆ ಅನುಕೂಲವಾಗುತ್ತದೆ ಎಂದು ಕೇಳಿದ್ದೆ. ಈಗ ಈ ಕಾರಣ ನೀಡಿ ಕೋಲಾರಕ್ಕೆ ಯಾಕೆ ವರ್ಗಾವಣೆ ಮಾಡಿದರೋ ಗೊತ್ತಿಲ್ಲ ಎಂದರು ಷಡಾಕ್ಷರಿ.

ಪೂರ್ಣ ಸಂದರ್ಶನಕ್ಕೆ ಈ ವಿಡಿಯೊ ನೋಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಕೊಡಗು ಜಿಲ್ಲೆಯ ಹೊಳೆಯಲ್ಲಿ ತಾಯಿ, ಇಬ್ಬರು ಯುವತಿಯರ ಶವ ಪತ್ತೆ; ಸಾವಿಗೆ ಕಾರಣ?

ಕೊಡಗು ಜಿಲ್ಲೆಯ ಹೈಸೂಡ್ಳೂರು ಗ್ರಾಮದ ಕೂಟಿಯಾಲ ಹೊಳೆಯಲ್ಲಿ ತಾಯಿ ಹಾಗೂ ಇಬ್ಬರು ಪುತ್ರಿಯರ ಶವ ಪತ್ತೆಯಾಗಿವೆ. ಇವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

VISTARANEWS.COM


on

Kodagu News
Koo

ಕೊಡಗು: ಜಿಲ್ಲೆಯ ಹೈಸೂಡ್ಳೂರು ಗ್ರಾಮದ ಕೂಟಿಯಾಲ ಹೊಳೆಯಲ್ಲಿ ತಾಯಿ ಹಾಗೂ ಇಬ್ಬರು ಯುವತಿಯರ ಶವ ಪತ್ತೆಯಾಗಿದೆ. ಅಶ್ವಿನಿ (48), ನಿಖಿತಾ (21) ಹಾಗೂ ನವ್ಯಾ (18) ಮೃತರು. ಕೊಡಗು ಜಿಲ್ಲೆಯಲ್ಲಿ (Kodagu District) ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆಯಲ್ಲಿ ಸೇವಾ ಪ್ರತಿನಿಧಿಯಾಗಿದ್ದ ಅಶ್ವಿನಿ ಅವರು ಇಬ್ಬರು ಪುತ್ರಿಯರೊಂದಿಗೆ ಮನೆಯಿಂದ ಹೊರಗೆ ಹೋದವರು ಶವವಾಗಿ ಪತ್ತೆಯಾಗಿದ್ದಾರೆ. ಇವರ ಸಾವು ಆತ್ಮಹತ್ಯೆಯೋ, ಕಾಲು ಜಾರಿ ಹೊಳೆಗೆ ಬಿದ್ದಿದ್ದಾರೋ ಅಥವಾ ಕೊಲೆಗೀಡಾಗಿದ್ದಾರೋ ಎಂಬುದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಅಶ್ವಿನಿ ಅವರು ಇಬ್ಬರು ಮಕ್ಕಳೊಂದಿಗೆ ಹುದಿಕೇರಿಯಲ್ಲಿ ವಾಸವಿದ್ದರು. ನಿಖಿತಾ ಅವರು ಗೋಣಿಕೊಪ್ಪಲು ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿದ್ದರು. ನವ್ಯಾ ಕಂಪ್ಯೂಟರ್‌ ತರಬೇತಿ ಪಡೆಯುತ್ತಿದ್ದರು. ತಾಯಿ ಹಾಗೂ ಇಬ್ಬರು ಮಕ್ಕಳು ಭಾನುವಾರ (ಡಿಸೆಂಬರ್‌ 3) ಮಧ್ಯಾಹ್ನ ಮನೆಯಿಂದ ಹೊರಗೆ ಹೋಗಿದ್ದರು. ಸಂಜೆ ಮೂವರ ಶವ ಪತ್ತೆಯಾಗಿದೆ. ಅಶ್ವಿನಿ ಅವರ ಪತಿ ಮಂಡ್ಯದ ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಶ್ರೀಮಂಗಲ ಪೊಲೀಸ್‌ ಠಾನೆಯಲ್ಲಿ ಪ್ರಕರಣ ದಾಖಲಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಕೆಲ ದಿನಗಳ ಹಿಂದಷ್ಟೇ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ ನಿಂತಿದ್ದ ಕಾರಿನಲ್ಲಿ ವೈದ್ಯರೊಬ್ಬರು ಶವವಾಗಿ ಪತ್ತೆಯಾಗಿದ್ದರು. ಮಂಡ್ಯ ಜಿಲ್ಲೆ ಪಾಂಡವಪುರದ ಶಿವಳ್ಳಿ ಗ್ರಾಮದ ಡಾ. ಸತೀಶ್ (47) ಅವರೇ ಮೃತಪಟ್ಟವರು. ಇವರ ಹೆಸರು ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಭ್ರೂಣ ಹತ್ಯೆ ಪ್ರಕರಣಕ್ಕೆ ತಳುಕು ಹಾಕಿಕೊಂಡಿತ್ತು. ಹೀಗಾಗಿ ಅವರು ತನಿಖೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡರೇ ಎಂಬ ಪ್ರಶ್ನೆಯೂ ಕೇಳಿಬಂದಿತ್ತು.

ಇದನ್ನೂ ಓದಿ: Actor Vinod Thomas: ಕಾರಿನಲ್ಲಿ ಖ್ಯಾತ ನಟನ ಶವ ಪತ್ತೆ; ನಿಗೂಢ ಸಾವಿಗೆ ಕಾರಣವೇನು?

ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಕೆಂಪು ಕಾರೊಂದರಲ್ಲಿ ಸತೀಶ್‌ ಮೃತದೇಹವು ಪತ್ತೆಯಾಗಿತ್ತು. ಡಾ ಸತೀಶ್ ಅವರು ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊಣಸೂರು ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರು. ಡ್ರೈವರ್‌ ಸೀಟಿನಲ್ಲೇ ಕುಳಿತಿರುವ ಸತೀಶ್‌ ಅವರಿಗೆ ಹೃದಯಾಘಾತವಾಗಿದೆಯಾ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಎಂಬ ಅವಳಿ ಪ್ರಶ್ನೆಗಳು ಕೇಳಿಬಂದಿದ್ದವು. ಇದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

ಕರ್ನಾಟಕ

Complaint to CM : ಸಿಎಂಗೆ ದೂರು ನೀಡಬೇಕೇ? ಈ ನಂಬರ್‌ಗೆ ಕರೆ ಮಾಡಿ!

Complaint to CM : ತಮ್ಮ ಸಮಸ್ಯೆಗಳಿಗೆ ಸರ್ಕಾರಿ ವ್ಯವಸ್ಥೆಯಲ್ಲಿ ಪರಿಹಾರ ಸಿಗದೇ ಇದ್ದಾಗ ನಾಗರಿಕರು ಅನಿವಾರ್ಯವಾಗಿ ಮುಖ್ಯಮಂತ್ರಿಯತ್ತ ದೃಷ್ಟಿ ನೆಡುತ್ತಾರೆ. ಹೇಗಾದರೂ ಮಾಡಿ ಅವರಿಗೊಂದು ದೂರು ಕೊಡಬೇಕು ಎಂದು ಅಂದುಕೊಳ್ಳುತ್ತಾರೆ. ಆದರೆ, ಇದಕ್ಕೆ ಅವರಿಗೆ ಯಾವ ಮಾರ್ಗ ಎಂಬುದು ಮಾತ್ರ ತಿಳಿದಿರುವುದಿಲ್ಲ. ಇದಕ್ಕೆ ಈಗ ಎರಡು ಮಾರ್ಗಗಳು ಇವೆ. ಸಹಾಯವಾಣಿಗೆ ಕರೆ ಮಾಡಿ ದೂರು ನೀಡುವುದು ಸರಳ ಮಾರ್ಗವಾಗಿದೆ.

VISTARANEWS.COM


on

Complaint to CM Siddaramaiah
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ದೂರು ನೀಡಬೇಕೇ? (Complaint to CM) ಇದಕ್ಕಾಗಿ ನೀವು ಜನತಾ ದರ್ಶನಕ್ಕೆ (Janatha Darshan) ಹೋಗಬೇಕೆಂದೇನೂ ಇಲ್ಲ. ನೀವು ಕುಳಿತಲ್ಲಿಯೇ ದೂರು ದಾಖಲು ಮಾಡಬಹುದು. ಅದಕ್ಕೆ ಇದೊಂದು ನಂಬರ್‌ಗೆ ಕರೆ ಮಾಡಿದರೆ ಸಾಕು ನಿಮ್ಮ ದೂರನ್ನು ದಾಖಲಿಸಿಕೊಳ್ಳಲಾಗುತ್ತದೆ.

ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳನ್ನು ಮಾಡಿಸಿಕೊಳ್ಳಬೇಕೆಂದರೆ ತುಸು ಕಷ್ಟವನ್ನೇ ಪಡಬೇಕು. ರೈತರಿಗೆ ಒಂದು ಖಾತೆ ಮಾಡಿಸಿಕೊಳ್ಳಲೋ, ರಸ್ತೆ ಸಮಸ್ಯೆಯೋ ಅದೇ ದೊಡ್ಡದಾಗಿರುತ್ತದೆ. ಆದರೆ, ಇದಕ್ಕೆ ಅಧಿಕಾರಿಗಳು ಸೊಪ್ಪು ಹಾಕುವುದಿಲ್ಲ. ಇನ್ನು ಮಹಿಳೆಯರಿಗೆ, ವೃದ್ಧರಿಗೆ ಸೇರಿದಂತೆ ನಾಗರಿಕರಿಗೆ ಒಂದಲ್ಲ ಒಂದು ಸಮಸ್ಯೆಗಳು ಇದ್ದೇ ಇರುತ್ತವೆ. ಇದಕ್ಕೆ ಸರ್ಕಾರಿ ವ್ಯವಸ್ಥೆಯಲ್ಲಿ ಪರಿಹಾರ ಸಿಗದೇ ಇದ್ದಾಗ ಅನಿವಾರ್ಯವಾಗಿ ಮುಖ್ಯಮಂತ್ರಿಯತ್ತ ದೃಷ್ಟಿ ನೆಡುತ್ತಾರೆ. ಹೇಗಾದರೂ ಮಾಡಿ ಅವರಿಗೊಂದು ದೂರು ಕೊಡಬೇಕು ಎಂದು ಅಂದುಕೊಳ್ಳುತ್ತಾರೆ. ಆದರೆ, ಇದಕ್ಕೆ ಅವರಿಗೆ ಯಾವ ಮಾರ್ಗ ಎಂಬುದು ಮಾತ್ರ ತಿಳಿದಿರುವುದಿಲ್ಲ. ಇದಕ್ಕೆ ಈಗ ಎರಡು ಮಾರ್ಗಗಳು ಇವೆ. ಒಂದೋ ಸಿಎಂ ನಡೆಸುವ ಜನತಾ ದರ್ಶನ ಕಾರ್ಯಕ್ರಮಕ್ಕೆ ಆಗಮಿಸಿ ದೂರು ಸಲ್ಲಿಸುವುದು, ಇಲ್ಲವೇ 1902 ಸಹಾಯವಾಣಿಗೆ (Helpline Number) ಕರೆ ಮಾಡಿ ಜನತಾ ದರ್ಶನದ ಅಡಿ ದೂರನ್ನು ದಾಖಲಿಸುವುದನ್ನು ಮಾಡಬಹುದಾಗಿದೆ. ಹೀಗೆ ಮಾಡಿದರೂ ನೇರವಾಗಿಯೇ ಸಿಎಂಗೆ ದೂರು ದಾಖಲಿಸಿದಂತೆ ಆಗುತ್ತದೆ.

ಕರೆ ಮಾಡಿ ಸಿಎಂಗೆ ಹೀಗೆ ದೂರು ನೀಡಿ!

1902 ಸಹಾಯವಾಣಿಯನ್ನು ರಾಜ್ಯ ಸರ್ಕಾರ ಈಗಾಗಲೇ ತೆರೆದಿದೆ. ಜನತಾ ದರ್ಶನಕ್ಕೆ ದೂರದ ಊರಿನಿಂದ ಹೋಗಲು ಆಗದವರು, ತೀವ್ರ ಸಮಸ್ಯೆ ಎದುರಿಸುತ್ತಿರುವವರು ಯಾರಾದರೂ ಇದ್ದರೆ ಸಿಎಂ ಗಮನಕ್ಕೆ ತರುವ ಸಂಬಂಧ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಸಾಕು. ಅಲ್ಲಿ ನಿಮ್ಮ ಸಮಸ್ಯೆಗಳನ್ನು ಹೇಳಬೇಕು. ಅವರು ನಿಮ್ಮ ಅಹವಾಲುಗಳನ್ನು ಆಧರಿಸಿ ಅದನ್ನು ಜನತಾ ದರ್ಶನ ಕೆಟಗರಿ ಅಡಿ ದೂರು ದಾಖಲು ಮಾಡಿಕೊಳ್ಳುತ್ತಾರೆ.

ಹೀಗೆ ದೂರು ದಾಖಲು ಮಾಡುವಾಗ ನಿಮ್ಮ ಸಮಸ್ಯೆ, ವಿಳಾಸ, ಮೊಬೈಲ್‌ ಸಂಖ್ಯೆಯನ್ನು ಪಡೆದು ಅದರಲ್ಲಿ ನಮೂದು ಮಾಡಲಾಗುತ್ತದೆ. ಈ ದೂರು ಸಿಎಂ ಜನತಾ ದರ್ಶನ ಕೆಟಗರಿ ಮೂಲಕ ಸಂಬಂಧಪಟ್ಟ ಇಲಾಖೆಗೆ ರವಾನೆ ಮಾಡಲಾಗುತ್ತದೆ. ಆದರೆ, ಮುಂದಿನ ಹಂತದ ಬಗ್ಗೆ ಸ್ಪಷ್ಟತೆಯನ್ನು ನೀಡಲಾಗಿಲ್ಲ.

ಮುಂದಿನ ಕ್ರಮ ಏನು?

ಒಂದು ವೇಳೆ 1092 ಸಹಾಯವಾಣಿಗೆ ಕರೆ ಮಾಡಿ ದೂರು ದಾಖಲಾದರೆ ನಿಮಗೊಂದು ಐಡಿ ಸಂಖ್ಯೆಯನ್ನು ನೀಡಲಾಗುತ್ತದೆ. ನೀವು ದಾಖಲು ಮಾಡಲಾದ ದೂರು ಸಿಎಂ ಕಾರ್ಯಾಲಯಕ್ಕೆ ಹೋಗುತ್ತದೆ. ಅಲ್ಲಿಂದ ಮುಂದಿನ ಪ್ರಕ್ರಿಯೆ ಏನು? ನಿಮ್ಮ ದೂರಿನ ಸ್ಥಿತಿ-ಗತಿ ಏನಾಯಿತು ಎಂಬ ಬಗ್ಗೆ ತಿಳಿಯಬೇಕು ಎಂದಿದ್ದರೆ, ಜನಸ್ಪಂದನ ಪೋರ್ಟಲ್‌ ಅಥವಾ ಜನಸ್ಪಂದನ ಪಿಜಿಆರ್‌ಎಸ್‌ ಪೋರ್ಟಲ್‌ಗೆ ಭೇಟಿ ನೀಡಿ ಅಲ್ಲಿ “ಸಿಪಿಗ್ರಾಮ್ಸ್‌ ಕುಂದುಕೊರತೆ ಸ್ಥಿತಿಯನ್ನು ಪರಿಶೀಲಿಸಿ ಆಯ್ಕೆ ಮೇಲೆ ಕ್ಲಿಕ್‌ ಮಾಡಬೇಕು. ಬಳಿಕ ನಿಮ್ಮ ಸಿಪಿಗ್ರಾಮ್ಸ್‌ ಗ್ರೀವಿಯನ್ಸ್‌ ನಂಬರ್‌ (CPGRAMS Grievance Number) ಅಥವಾ ನಿಮ್ಮ ನೋಂದಾಯಿತ ಮೊಬೈಲ್‌ ಸಂಖ್ಯೆಯನ್ನು ನಮೂದು ಮಾಡಿದರೆ ಅಲ್ಲಿ ಅಹವಾಲು ಯಾವ ಹಂತದಲ್ಲಿದೆ ಎಂಬುದನ್ನು ತಿಳಿಸುತ್ತದೆ. ಇಲ್ಲವೇ ನೇರವಾಗಿ 1902 ಸಂಖ್ಯೆಗೆ ಕರೆ ಮಾಡಿದರೆ ನಿಮಗೆ ಅಲ್ಲಿನ ಸಿಬ್ಬಂದಿ ಸಹ ಅಹವಾಲಿನ ಸ್ಟೇಟಸ್‌ ಬಗ್ಗೆ ತಿಳಿಸಿಕೊಡಲಿದ್ದಾರೆ.

ಪ್ರಕ್ರಿಯೆ ಹೇಗಿರಲಿದೆ?

ಸಾರ್ವಜನಿಕರಿಂದ ಮುದ್ದಾಂ/ಆನ್‌ಲೈನ್‌ನಲ್ಲಿ ಸ್ವೀಕೃತವಾಗುವ ಕುಂದುಕೊರತೆ/ಅಹವಾಲುಗಳನ್ನು ಏಕೀಕೃತ ಸಾರ್ವಜನಿಕ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆಯಲ್ಲಿ ದಾಖಲಿಸಿ, ಸ್ವೀಕೃತಿಯನ್ನು ನೀಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಸ್ವೀಕೃತಿ ಸಂಖ್ಯೆ ಬಳಸಿ ತಮ್ಮ ಕುಂದುಕೊರತೆ/ಅಹವಾಲಿನ ಸ್ಥಿತಿಗತಿಯನ್ನು ಏಕೀಕೃತ ಸಾರ್ವಜನಿಕ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆಯಲ್ಲಿ ಅಥವಾ 1902 ಸಂಖ್ಯೆಗೆ ಕರೆಮಾಡಿ ತಿಳಿದುಕೊಳ್ಳಬಹುದು.

ಇದನ್ನೂ ಓದಿ: Gruha Lakshmi : ಗೃಹಲಕ್ಷ್ಮಿ ಹಣ ಇನ್ನೂ ಬಂದಿಲ್ಲವೇ? ಹಾಗಾದರೆ ದೂರು ಕೊಡೋಕೆ ರೆಡಿ ಆಗಿ!

ಎಪಿಐ ಮೂಲಕ ನಿರ್ವಹಣೆ

ಸ್ವೀಕರಿಸಲಾದ ಕುಂದುಕೊರತೆ/ಅಹವಾಲುಗಳನ್ನು ವಿಷಯದ ಆಧಾರದಲ್ಲಿ ಸಂಬಂಧಿಸಿದ ಇಲಾಖೆಗಳ/ಅಧೀನ ಸಂಸ್ಥೆಗಳ ಅಧಿಕಾರಿಗಳ ಲಾಗಿನ್‌ಗಳಿಗೆ ತಕ್ಷಣ ರವಾನಿಸಲಾಗುತ್ತದೆ. ಮುಖ್ಯಮಂತ್ರಿಗಳ ಜನತಾದರ್ಶನದಲ್ಲಿ ಸ್ವೀಕೃತವಾದ ಕುಂದುಕೊರತೆ/ಅಹವಾಲುಗಳನ್ನು ಸ್ವಯಂಚಾಲಿತವಾಗಿ ಸಂಬಂಧಪಟ್ಟ ಇಲಾಖಾ ಕಾರ್ಯದರ್ಶಿಗಳ ಇ-ಆಫೀಸ್‌ ಲಾಗಿನ್‌ಗೆ ಕಳುಹಿಸುವ ವ್ಯವಸ್ಥೆ ಅಳವಡಿಸಲಾಗಿದೆ. ಇ-ಆಫೀಸ್‌ನಲ್ಲಿ ಸದರಿ ಕಡತದ ಪ್ರತಿ ಹಂತದ ಚಲನೆಯನ್ನು API ಮೂಲಕ ಏಕೀಕೃತ ಸಾರ್ವಜನಿಕ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆಗೆ ಒದಗಿಸಲಾಗುತ್ತದೆ. ಸ್ವೀಕೃತವಾದ ಅಹವಾಲುಗಳ ಪ್ರಗತಿ ಪರಿಶೀಲಿಸಲು ಪ್ರತ್ಯೇಕ ಡ್ಯಾಶ್‌ಬೋರ್ಡ್‌ ಅಭಿವೃದ್ಧಿಪಡಿಸಲಾಗಿದೆ. ಈ ಡ್ಯಾಶ್‌ಬೋರ್ಡ್‌ನಲ್ಲಿ ಇಲಾಖಾ/ಜಿಲ್ಲಾವಾರು ಸ್ವೀಕೃತವಾದ ಕುಂದುಕೊರತೆ ಮತ್ತು ಅಹವಾಲುಗಳ ಸಂಖ್ಯೆ, ವಿಲೇ ಮಾಡಲಾದ ಮತ್ತು ಬಾಕಿ ಉಳಿದಿರುವ ಕುಂದುಕೊರತೆ ಮತ್ತು ಅಹವಾಲುಗಳ ವಿವರ ಲಭ್ಯವಿದೆ.

Continue Reading

ಉಡುಪಿ

Karnataka Weather : ಮಳೆಯೊಂದಿಗೆ 30 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

Rain News : ಇನ್ನೆರಡು ದಿನಗಳು ಹಗುರ ಮಳೆಯೊಂದಿಗೆ ಥಂಡಿ ಗಾಳಿಯು ಬೀಸಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

women enjoying in rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ಡಿ. 4-5ರಂದು ಮಳೆಯ ಸಿಂಚನವಾಗಲಿದ್ದು, ಪ್ರತಿ ಗಂಟೆಗೆ 30 ಕಿ.ಮೀ ವೇಗದಲ್ಲಿ ನೆಲಗಾಳಿಯು ಬೀಸಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದಾಗಿ ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ (karnataka Weather Forecast) ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆ ಇದ್ದು, ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಮಳೆಯಾಗಲಿದೆ.

ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ರಾಯಚೂರಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು, ಉಳಿದೆಡೆ ಒಣ ಹವೆ ಇರಲಿದೆ. ಕರಾವಳಿಯಲ್ಲಿ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ ಇರಲಿದ್ದು, ಉತ್ತರ ಕನ್ನಡದಲ್ಲಿ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Cocktail finger ring : ಬ್ರೈಡಲ್‌ ಜ್ಯುವೆಲರಿ ಫ್ಯಾಷನ್‌ನಲ್ಲಿ ಎಥ್ನಿಕ್‌ ಕಾಕ್‌ಟೈಲ್‌ ಉಂಗುರಗಳ ಕಲರವ

ಕನಿಷ್ಠ ತಾಪಮಾನ ಏರಿಕೆ

ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರುವುದರಿಂದ ಮುಂದಿನ 48 ಗಂಟೆಯಲ್ಲಿ ಕನಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದಾಗಿ ಕೆಲವೆಡೆ ಚಳಿಯು ಮೈ ನಡುಗಿಸಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 27 ಡಿ.ಸೆ -18 ಡಿ.ಸೆ
ಮಂಗಳೂರು: 36 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 18 ಡಿ.ಸೆ
ಗದಗ: 33 ಡಿ.ಸೆ – 18ಡಿ.ಸೆ
ಹೊನ್ನಾವರ: 36 ಡಿ.ಸೆ- 23 ಡಿ.ಸೆ
ಕಲಬುರಗಿ: 34 ಡಿ.ಸೆ – 20 ಡಿ.ಸೆ
ಬೆಳಗಾವಿ: 32 ಡಿ.ಸೆ – 18 ಡಿ.ಸೆ
ಕಾರವಾರ: 36 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಕರ್ನಾಟಕ

ಧಾರವಾಡದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಧಾರವಾಡದ ಕೊಪ್ಪದಕೇರಿಯ ಶಿವಾಲಯದ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ.

VISTARANEWS.COM


on

Crime news
Koo

ಧಾರವಾಡ: ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ (Murder Case) ಮಾಡಿರುವ ಘಟನೆ ಧಾರವಾಡದ ಕೊಪ್ಪದಕೇರಿಯ ಶಿವಾಲಯದ ಬಳಿ ನಡೆದಿದೆ. ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ನಿಂಗಪ್ಪ ಹಡಪದ (60) ಹತ್ಯೆಗೀಡಾದ ವ್ಯಕ್ತಿ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಉಪನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗೋಕರ್ಣ ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ನೀರುಪಾಲು

drown in sea

ಕಾರವಾರ: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಪ್ರವಾಸಿಗರು ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಗೋಕರ್ಣ ಕಡಲತೀರದಲ್ಲಿ (Drown in Sea) ನಡೆದಿದೆ. ಇದೇ ವೇಳೆ ಗಂಭೀರಗೊಂಡ ಮತ್ತೊಬ್ಬ ಪ್ರವಾಸಿಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | ತಮ್ಮ ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸುಟ್ಟು ಹಾಕಿ ಎಂದ ಭವಾನಿ ರೇವಣ್ಣ! ವಿಡಿಯೊ ನೋಡಿ

ಕಲಬುರಗಿ ಮೂಲದ ಅಭಿಷೇಕ್, ಆಕಾಶ್ ಮೃತ ಪ್ರವಾಸಿಗರು. ಕಲಬುರಗಿಯಿಂದ ಐವರು ಸ್ನೇಹಿತರು ಪ್ರವಾಸಕ್ಕೆಂದು ಗೋಕರ್ಣಕ್ಕೆ ಆಗಮಿಸಿದ್ದರು. ಸಮುದ್ರದಲ್ಲಿ ಮೂವರು ಈಜಲು ತೆರಳಿದ್ದಾಗ ಅಲೆಗಳಿಗೆ ಸಿಲುಕಿ ಮುಳುಗಿದ್ದರು. ಈ ವೇಳೆ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದು, ಒಬ್ಬನನ್ನು ರಕ್ಷಣೆ ಮಾಡಲಾಗಿದೆ. ಗಂಭೀರಗೊಂಡ ಪ್ರವಾಸಿಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Continue Reading
Advertisement
Sangeetha is more cruel than Vinay drinking tonic task bigg boss
ಬಿಗ್ ಬಾಸ್6 mins ago

BBK SEASON 10: ವಿನಯ್‌ಗಿಂತ ಸಂಗೀತಾಗೆ ಕೊಬ್ಬು ಜಾಸ್ತಿ; ಟಾನಿಕ್ ಕುಡಿಸಿದ ಮೇಲೆ ಒದ್ದಾಟ-ಗುದ್ದಾಟ!

Kichcha Sudeep Save Snehith Gowda And Michel From Eliminations
ಬಿಗ್ ಬಾಸ್20 mins ago

BBK SEASON 10: ಬಿಗ್‌ ಬಾಸ್‌ ಇತಿಹಾಸದಲ್ಲೇ ಮೊದಲು; ಈ ವಾರ ನೋ ಎಲಿಮಿನೇಶನ್‌! ಸ್ನೇಹಿತ್- ಮೈಕಲ್‌ ಸೇಫ್‌!

Kodagu News
ಕರ್ನಾಟಕ49 mins ago

ಕೊಡಗು ಜಿಲ್ಲೆಯ ಹೊಳೆಯಲ್ಲಿ ತಾಯಿ, ಇಬ್ಬರು ಯುವತಿಯರ ಶವ ಪತ್ತೆ; ಸಾವಿಗೆ ಕಾರಣ?

Ishwar Sahu
ದೇಶ2 hours ago

ಮುಸ್ಲಿಮರಿಂದ ಹತ್ಯೆಗೀಡಾದ ಯುವಕನ ತಂದೆ 7 ಬಾರಿಯ ಕಾಂಗ್ರೆಸ್ ಶಾಸಕನನ್ನು ಸೋಲಿಸಿದರು!

Jyothi Reddy CEO of American Company
ಅಂಕಣ2 hours ago

Raja Marga Column : ಅನ್ನಕ್ಕಾಗಿ ಕಲ್ಲು ಒಡೆಯೋ ಕೆಲಸ ಮಾಡ್ತಿದ್ದ ಆಕೆ ಈಗ ಅಮೆರಿಕನ್‌ ಕಂಪನಿ ಸಿಇಓ!

Venkataramana Reddy
ದೇಶ2 hours ago

ತೆಲಂಗಾಣದಲ್ಲಿ ಹಾಲಿ, ಭಾವಿ ಸಿಎಂಗಳನ್ನೇ ಸೋಲಿಸಿದ ಬಿಜೆಪಿಯ ವೆಂಕಟರಮಣ ರೆಡ್ಡಿ; ಯಾರಿವರು?

Complaint to CM Siddaramaiah
ಕರ್ನಾಟಕ2 hours ago

Complaint to CM : ಸಿಎಂಗೆ ದೂರು ನೀಡಬೇಕೇ? ಈ ನಂಬರ್‌ಗೆ ಕರೆ ಮಾಡಿ!

women enjoying in rain
ಉಡುಪಿ2 hours ago

Karnataka Weather : ಮಳೆಯೊಂದಿಗೆ 30 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

Mizoram Election Result
ದೇಶ3 hours ago

Mizoram Election Result: ಮಿಜೋರಾಂ ಫಲಿತಾಂಶಕ್ಕೆ ಕ್ಷಣಗಣನೆ; ಯಾರಿಗೆ ಗೆಲುವು?

4 state election results shows us that, freebies are not the way for win elections
ದೇಶ3 hours ago

ವಿಸ್ತಾರ ಸಂಪಾದಕೀಯ: ವಿಧಾನಸಭೆ ಚುನಾವಣೆ ಫಲಿತಾಂಶ; ‘ಗ್ಯಾರಂಟಿ’ಯೇ ಅಂತಿಮವಲ್ಲ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ4 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ21 hours ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌