Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ Vistara News
Connect with us

ನೌಕರರ ಕಾರ್ನರ್

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

ರಾಜ್ಯದ ಸರ್ಕಾರಿ ನೌಕರರು ಮಾ.1 ರಂದು ನಡೆಸಿದ ಕರ್ತವ್ಯಕ್ಕೆ ಗೈರಾಗುವ ಮುಷ್ಕರದ (Govt Employees Strike) ಸಂದರ್ಭದಲ್ಲಿ ಕೆಲಸಕ್ಕೆ ಹಾಜರಾಗದ ನೌಕರರಿಗೆ ರಾಜ್ಯ ಸರ್ಕಾರ ವೇತನ ಸಹಿತ ರಜೆಯನ್ನು ಮಂಜೂರು ಮಾಡಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ತಿಳಿಸಿದೆ.

VISTARANEWS.COM


on

Entitled leave for employees involved in strike; Order from Govt
Koo

ಬೆಂಗಳೂರು: 7ನೇ ವೇತನ ಆಯೋಗದ (7th pay commission) ವರದಿಯ ಜಾರಿಯು ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಮಧ್ಯಂತರ ಪರಿಹಾರ ಘೋಷಿಸಬೇಕು ಹಾಗೂ ನೂತನ ಪಿಂಚಣಿ ಯೋಜನೆಯನ್ನು (NPS) ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆಯನ್ನು (OPS) ಜಾರಿಗೊಳಿಸಲೇಬೇಕೆಂದು ಒತ್ತಾಯಿಸಿ ಮಾ.1 ರಂದು ಕರ್ತವ್ಯಕ್ಕೆ ಗೈರಾಗುವ ಮುಷ್ಕರ ನಡೆಸಿದ್ದ (Govt Employees Strike) ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ವೇತನ ಸಹಿತ ರಜೆ ನೀಡಲಿದೆ.

ಈ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಾಕ್ಷರಿ ತಿಳಿಸಿದ್ದು, ಬುಧವಾರದಂದು ಕರ್ತವ್ಯಕ್ಕೆ ಗೈರಾದ ಯಾವುದೇ ನೌಕರರು ಹಾಜರಾತಿಯಲ್ಲಿ ಸಹಿ ಮಾಡಬಾರದು. ಯಾವ ರಜೆ ಹಾಕಬೇಕು ಎನ್ನುವುದರ ಬಗ್ಗೆ ಸರ್ಕಾರದಿಂದ ಸದ್ಯವೇ ಆದೇಶ ಬರಲಿದೆ. ಅದರಂತೆ ನಡೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಮುಷ್ಕರವನ್ನು ಹಿಂದಕ್ಕೆ ಪಡೆಯುವುದಾಗಿ ಪ್ರಕಟಿಸಲು ಬುಧವಾರದಂದು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿಯೇ ಷಡಾಕ್ಷರಿ ಅವರು ಈ ವಿಷಯವನ್ನು ಪ್ರಕಟಿಸಿದ್ದರು. ಅಲ್ಲದೆ ಈಗಾಗಲೇ ಸರ್ಕಾರದೊಂದಿಗೆ ಮಾತುಕತೆ ನಡೆಸಿದ್ದು, ವೇತನಸಹಿತ ರಜೆಯನ್ನು ಪ್ರಕಟಿಸುವಂತೆ ಕೋರಿದ್ದಾರೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘವು ಮನವಿಯನ್ನೂ ಸಲ್ಲಿಸಿದೆ.

ರಾಜ್ಯ ಸರ್ಕಾರವು ವೇತನವನ್ನು ಶೇ.17 ರಷ್ಟು ಹೆಚ್ಚಿಸಿ, ಅಧಿಕೃತ ಆದೇಶ ಹೊರಡಿಸಿದ್ದರಿಂದ ಹಾಗೂ ಎನ್‌ಪಿಎಸ್‌ ರದ್ದು ಮಾಡುವ ಕುರಿತು ತೀರ್ಮಾನಿಸಲು ವಿಶೇಷ ಸಮಿತಿ ರಚಿಸಿದ್ದರಿಂದ ಸರ್ಕಾರಿ ನೌಕರರ ಸಂಘವು ಮುಷ್ಕರವನ್ನು ಹಿಂದಕ್ಕೆ ಪಡೆದುಕೊಂಡಿದೆ.

ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ

ಮುಷ್ಕರದ ಸಂದರ್ಭದಲ್ಲಿ ರಾಜ್ಯದ ಎಲ್ಲ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರಾಗಿದ್ದು, ಎಲ್ಲ ಸರ್ಕಾರಿ ಸೇವೆಗಳನ್ನು ಬಂದ್‌ ಮಾಡಲಾಗಿತ್ತು. ರಾಜ್ಯಾದ್ಯಂತ ಆಡಳಿತ ಯಂತ್ರ ಸಂಪೂರ್ಣ ಸ್ತಬ್ಧವಾಗಿತ್ತು. ಆದರೆ ಮುಷ್ಕರ ಆರಂಭವಾದ ಮೂರು ಗಂಟೆಯ ಒಳಗೆ ಅದನ್ನು ಹಿಂದಕ್ಕೆ ಪಡೆಯಲಾಗಿತ್ತು. ಎಲ್ಲ ನೌಕರರು ಕರ್ತವ್ಯಕ್ಕೆ ಹಾಜರಾಗುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಕರೆ ನೀಡಿದ್ದರೂ ಕರ್ತವ್ಯದ ಸ್ಥಳದಿಂದ ದೂರವಿದ್ದವರಿಗೆ ಕೆಲಸಕ್ಕೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಬುಧವಾರದಂದು ಕೆಲಸಕ್ಕೆ ಗೈರಾದ ಬಹುತೇಕ ನೌಕರರಿಗೆ ಇದರಿಂದ ಅನುಕೂಲವಾಗಲಿದೆ.

ಇದನ್ನೂ ಓದಿ: Govt. Employees strike : 17% ವೇತನ ಹೆಚ್ಚಿಸಿದ ಸಿಎಂ ಬೊಮ್ಮಾಯಿಗೆ ನೌಕರರ ಸಂಘದಿಂದ ಅಭಿನಂದನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ದೇಶ

7th Pay Commission: ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ, ಮುಂದಿನ ತಿಂಗಳು ಘೋಷಣೆ?

7th Pay Commission: ಕೇಂದ್ರ ಸರ್ಕಾರಿ ನೌಕರರು ಖುಷಿಪಡುವ ಸುದ್ದಿಯೊಂದು ಹೊರಬಿದ್ದಿದ್ದು, ಮುಂದಿನ ತಿಂಗಳು ಕೇಂದ್ರ ಸರ್ಕಾರವು ತುಟ್ಟಿ ಭತ್ಯೆಯನ್ನು ಘೋಷಿಸುವ ಸಾಧ್ಯತೆ ಇದೆ.

VISTARANEWS.COM


on

Edited by

Dearness Allowance
Koo

ನವದೆಹಲಿ: ಕೇಂದ್ರ ಸರ್ಕಾರದ ನೌಕರರಿಗೆ (Central Government Employees) ಶೀಘ್ರವೇ ಸಿಹಿ ಸುದ್ದಿ ಸಿಗಲಿದೆ. ನೌಕರರ ತುಟ್ಟಿ ಭತ್ಯೆ (dearness allowance – DA) ಹೆಚ್ಚಳ ಕುರಿತು ಸೆಪ್ಟೆಂಬರ್‌ ತಿಂಗಳಲ್ಲಿ (September Month) ಕೇಂದ್ರ ಸರ್ಕಾರವು ಘೋಷಣೆ ಮಾಡುವ ಸಾಧ್ಯತೆಗಳಿವೆ. ಸರ್ಕಾರದಿಂದ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಇಲ್ಲವಾದರೂ, ಮಾಧ್ಯಮಗಳ ವರದಿಗಳ ಪ್ರಕಾರ, ಮುಂದಿನ ತಿಂಗಳು ಘೋಷಣೆಯಾಗುವುದು ಪಕ್ಕಾ ಎಂದು ಹೇಳಲಾಗುತ್ತಿದೆ(7th Pay Commission).

ದೇಶದಲ್ಲಿ ಹಣದುಬ್ಬರ ಏರಿಕೆಯು 15 ತಿಂಗಳ ಗರಿಷ್ಠ ಮಟ್ಟಕ್ಕೆ ತಲುಪಿದೆ. ವರದಿಗಳ ಪ್ರಕಾರ ಕೇಂದ್ರ ಸರ್ಕಾರವು ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.3ರಷ್ಟು ಹೆಚ್ಚಿಸುವ ಸಾಧ್ಯತೆಗಳಿವೆ. ಈ ಹೆಚ್ಚಳವು ಪೂರ್ವಾನ್ವಯ ಅಂದರೆ ಜುಲೈ ತಿಂಗಳಿನಿಂದಲೇ ಅನ್ವಯವಾಗಲಿದೆ ಎಂದು ಹೇಳಲಾಗುತ್ತಿದೆ.

ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿ ಭತ್ಯೆಯನ್ನು ಕಾರ್ಮಿಕ ಬ್ಯೂರೋ ಪ್ರತಿ ತಿಂಗಳು ಹೊರತರುವ ಕೈಗಾರಿಕಾ ಕಾರ್ಮಿಕರ ಇತ್ತೀಚಿನ ಗ್ರಾಹಕ ಬೆಲೆ ಸೂಚ್ಯಂಕದ (CPI-IW) ಆಧಾರದ ಮೇಲೆ ಲೆಕ್ಕ ಹಾಕಲಾಗುತ್ತದೆ.

ಈ ಸುದ್ದಿಯನ್ನೂ ಓದಿ: DA Hike News : ಕಳೆದ ಐದು ತಿಂಗಳ ಬಾಕಿ ತುಟ್ಟಿ ಭತ್ಯೆ; ಯಾವ ವೇತನ ಶ್ರೇಣಿಯವರಿಗೆ ಎಷ್ಟು ಹಣ ಲಭ್ಯ?

2023ರ ಜೂನ್ ತಿಂಗಳ CPI-IW ಅನ್ನು 2023ರ ಜುಲೈ 31ರಂದು ಬಿಡುಗಡೆ ಮಾಡಲಾಗಿದೆ. ನಾವು ತುಟ್ಟಿಭತ್ಯೆಯಲ್ಲಿ ನಾಲ್ಕು ಶೇಕಡಾವಾರು ಪಾಯಿಂಟ್‌ಗಳ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದೇವೆ. ಆದರೆ ತುಟ್ಟಿಭತ್ಯೆ ಹೆಚ್ಚಳವು ಮೂರು ಶೇಕಡಾವಾರು ಅಂಕಗಳಿಗಿಂತ ಸ್ವಲ್ಪ ಹೆಚ್ಚಾಗಿರುತ್ತದೆ. ಹೀಗಾಗಿ ಡಿಎ ಮೂರು ಶೇಕಡಾ ಪಾಯಿಂಟ್‌ಗಳಿಂದ ಶೇಕಡಾ 45 ಕ್ಕೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಖಿಲ ಭಾರತ ರೈಲ್ವೇಮೆನ್ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಶಿವ ಗೋಪಾಲ್ ಮಿಶ್ರಾ ಇತ್ತೀಚೆಗೆ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ನೌಕರರ ಕಾರ್ನರ್

Shadakshari CS : ನನ್ನ ಟಾರ್ಗೆಟ್‌ ಮಾಡಿದ್ರೆ ಚರ್ಚೆಗೆ ಸಿದ್ಧ: ಎನ್‌ಪಿಎಸ್‌ ಅಧ್ಯಕ್ಷರ ಆರೋಪಕ್ಕೆ ಷಡಾಕ್ಷರಿ ಸವಾಲು

Shadakshari CS ಎನ್‌ಪಿಎಸ್‌ ನೌಕರರ ಶಿವಮೊಗ್ಗ ಶಾಖೆಯ ಅಧ್ಯಕ್ಷ ಪ್ರಭಾಕರ್‌ ನಾಪತ್ತೆ ಪ್ರಕರಣದಲ್ಲಿ ತಮ್ಮ ಪಾತ್ರ ಇಲ್ಲ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್‌ ಷಡಾಕ್ಷರಿ ಹೇಳಿದ್ದಾರೆ.

VISTARANEWS.COM


on

Edited by

Shadakshari
Koo

ಶಿವಮೊಗ್ಗ: ಎನ್‌ಪಿಎಸ್‌ ನೌಕರರ ಸಂಘದ ಶಿವಮೊಗ್ಗ ಶಾಖೆಯ ಅಧ್ಯಕ್ಷ ಪ್ರಭಾಕರ್‌ ಅವರು ತಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌ ಷಡಾಕ್ಷರಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಸಿ ಎಸ್ ಷಡಾಕ್ಷರಿ (Shadakshari CS )ಹೇಳಿಕೆ ನೀಡಿದ್ದು, ಇತ್ತೀಚೆಗೆ ಕೆಲ ಕಾಲ ನಡೆದ ಪ್ರಭಾಕರ್‌ ಅವರ ನಾಪತ್ತೆ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧ ಇಲ್ಲ ಎಂದು ತಿಳಿಸಿದ್ದಾರೆ.

ನನ್ನ ಮತ್ತು ಇತರ ಐದು ಅಧಿಕಾರಿಗಳ ವಿರುದ್ಧ ಕೆಲ ಆರೋಪಗಳನ್ನು ಪ್ರಭಾಕರ್‌ ಮಾಡಿದ್ದಾರೆ ಎಂಬುದನ್ನು ಸಾಮಾಜಿಕ ಜಾಲತಾಣಗಳ ಮೂಲಕ ತಿಳಿದುಕೊಂಡಿದ್ದೇನೆ. ಅವರು ಈಗ ಏನು ಹೇಳಿಕೆ ಕೊಟ್ಟಿದ್ದಾರೆ ಅಂತ ನನಗೆ ಗೊತ್ತಿಲ್ಲ. ಆದರೆ ಒಂದು ವೇಳೆ ಈಗಲೂ ನನ್ನನ್ನು ಟಾರ್ಗೆಟ್ ಮಾಡಿದ್ರೆ ಚರ್ಚೆಗೆ ಸಿದ್ದನಿದ್ದೇನೆ ಎಂದು ಷಡಾಕ್ಷರಿ ಸವಾಲು ಹಾಕಿದ್ದಾರೆ.

ಪ್ರಭಾಕರ್‌ ಅವರು ಇತ್ತೀಚೆಗೆ ಮಿಸ್ಸಿಂಗ್ ಆದ ನಂತರ ನಾನು ಕೂಡ ವಿಧಾನಸೌಧದ ಪೊಲೀಸ್ ಸ್ಟೇಷನ್ ಗೆ ಕಂಪ್ಲೇಂಟ್ ಕೊಟ್ಟಿದ್ದೇನೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಸರ್ಕಾರಕ್ಕೆ ಆಗ್ರಹ ಮಾಡಿದ್ದೇನೆ. ನನಗೂ, ಅವರಿಗೂ ಸಂಬಂಧಿಸಿದಂತೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಅದಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆ ನನ್ನ ಹತ್ತಿರಾನೂ ಇಲ್ಲ ಅವರ ಬಳಿಯು ಇರಲು ಸಾಧ್ಯವಿಲ್ಲ. ಆದಾಗ್ಯೂ ನನ್ನ ವಿರುದ್ಧ ಆರೋಪ ಮಾಡಿದ್ದರೆ ಅದರ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಷಡಾಕ್ಷರಿ ಹೇಳಿದರು.

ಪ್ರಭಾಕರ್ ಶಿವಮೊಗ್ಗದಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಸಿಆರ್ ಪಿ ಆಗಿಯೂ ಕೆಲಸ ಮಾಡಿದ್ದರು. ನಂತರದಲ್ಲಿ ಉಪನೋಂದಣಾಧಿಕಾರಿ ಕಚೇರಿಗೆ ಆರೋಗ್ಯ ಸಮಸ್ಯೆ ನಿಮಿತ್ತ ವರ್ಗಾವಣೆ ಬಯಸಿದ್ದರು. ಅದರ ಪ್ರಸ್ತಾವನೆಗೆ ಅನುಮತಿ ಕೂಡ ಸಿಕ್ಕಿರುತ್ತೆ. ಒಂದು ವರ್ಷ ಕಾಲ ಅದರ ಲಾಭ ಪಡೆದು ಹೊನ್ನಾಳಿಯಲ್ಲೂ ಕೆಲಸ ಮಾಡಿರುತ್ತಾರೆ. ನಿಯಮಾವಳಿ ಪ್ರಕಾರ ಅವರಿಗೆ ಡಿಮೋಷನ್ ಮಾಡಿರಬೇಕು. ಇದರ ನಡುವೆ ಕೋರ್ಟಿಗೆ ಕೂಡ ಹೋಗಿರುವ ಮಾಹಿತಿ ಲಭ್ಯ ಆಗಿದೆ. ಅದರ ಸಂಪೂರ್ಣ ದಾಖಲಾತಿ ನನಗೆ ಸಿಕ್ಕಿಲ್ಲ. ಸಿಕ್ಕ ನಂತರ ಸಂಪೂರ್ಣ ವಿವರ ನೀಡುತ್ತೇನೆ ಅವರಿಗೆ ಯಾವುದೇ ತೊಂದರೆ ಕೊಡುವಂತಹ ಶಿಫಾರಸು ಪತ್ರ ಕೊಟ್ಟಿಲ್ಲ. ಯಾರಿಗೂ ಫೋನ್ ಮಾಡಿ ಇವರಿಗೆ ಮಾಡಿಕೊಡಬೇಡಿ ಅಂತ ಹೇಳಿಲ್ಲ. ಹೊನ್ನಾಳಿಯಲ್ಲಿ ಅವರಿಗೆ ಸಂಬಳ ಆಗಿಲ್ಲ ಅಂದ್ರೆ ಅದಕ್ಕೆ ನಾನು ಹೇಗೆ ಕಾರಣ?

ಏಳು ತಿಂಗಳು ಸಂಬಳ ಆಗಿಲ್ಲ ಅಂದರೆ ನನ್ನ ಗಮನಕ್ಕೆ ತಂದಿದ್ರೆ ನಾನು ತಕ್ಷಣ ಸಂಬಳ ಮಾಡಿಕೊಡಲು ಹೇಳುತ್ತಿದ್ದೆ. ನನಗೆ ಗೊತ್ತಿಲ್ಲದ ವಿಷಯ ಹೇಳದೆ ಇದ್ದರೆ ಅದಕ್ಕೆ ನಾನು ಕಾರಣನಲ್ಲ. ಯಾವುದೇ ಸಂಬಳ ಬಾಕಿ ಇಲ್ಲ ಅಂತ ಹೊನ್ನಾಳಿ ಬಿಇಓ ಹೇಳಿಕೆ ಕೊಟ್ಟಿದ್ದಾರೆ. ಸಂಬಳ ಕೊಡುವುದು ಅಧಿಕಾರಿಗಳು ನಾನಲ್ಲ. ಅವರು ಸಮಸ್ಯೆ ಹೇಳಿಕೊಂಡರೆ ನಾನು ಸ್ಪಂದಿಸಬಹುದು ಅಷ್ಟೇ. ಡಿಮೋಷನ್ ಮಾಡುವುದು ಸರ್ಕಾರದ ಮಟ್ಟದಲ್ಲಿ. ಅದಕ್ಕೆ ಕಾನೂನುಗಳಿವೆ, ಅದರ ಅಡಿಯಲ್ಲಿ ಅವರು ಮಾಡಿರುತ್ತಾರೆ. ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಹೇಳಿದರೆ ಅಧಿಕಾರಿಗಳು ಮಾಡುವುದಿಲ್ಲ. ಕಾನೂನಿನಲ್ಲಿ ಅವಕಾಶ ಇದ್ದರೆ ಮಾತ್ರ ಮಾಡ್ತಾರೆ.

ಇದನ್ನೂ ಓದಿ: Govt Employees Strike : ಯಶಸ್ಸು ಪಡೆದ ಮುಷ್ಕರ; ಷಡಾಕ್ಷರಿಗೆ ನಿವೃತ್ತ ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ

ಪ್ರಭಾಕರ್ ಅವರ ಪ್ರಕರಣದಲ್ಲಿ ನನ್ನ ಯಾವುದೇ ಪಾತ್ರ ಇಲ್ಲ. ಅವರಿಗೆ ತೊಂದರೆ ಕೊಡಿ ಅಂತ ನಾನೇನಾದರೂ ಹೇಳಿದ್ದರೆ, ಶಿಫಾರಸು ಪತ್ರ ಕೊಟ್ಟಿದ್ದರೆ ದಾಖಲಾತಿ ತೋರಿಸಲಿ. ಅವರಿಗೆ ಮಾನಸಿಕ ಕಿರಿಕಿರಿ ಆಗಿರಬೇಕು. ಅವರಿಗೆ ಶಿವಮೊಗ್ಗದಲ್ಲಿ, ಬೆಂಗಳೂರಿನಲ್ಲಿ ನಮ್ಮ ಸಹಕಾರಿ ಸಂಘದಿಂದ ತಲಾ 5 ಲಕ್ಷ ಸಾಲ ನಾವೇ ಕೊಟ್ಟಿದ್ದೇವೆ. ಅವರು ಹೊನ್ನಾಳಿಯಿಂದ ಶಿವಮೊಗ್ಗಕ್ಕೆ ವರ್ಗಾವಣೆಯಾಗಿ ಬರಲು ನಾನು ಶಿಫಾರಸು ಪತ್ರ ಕೂಡ ಕೊಟ್ಟಿದ್ದೆ ನಮ್ಮ ಕೈಲಾದಷ್ಟು ಅವರಿಗೆ ಸಹಾಯ ಮಾಡಿದ್ದೇವೆ ಎಂದು ಷಡಾಕ್ಷರಿ ವಿವರಿಸಿದ್ದಾರೆ.

Continue Reading

ನೌಕರರ ಕಾರ್ನರ್

Govt Employees News : ಸರ್ಕಾರಿ ನೌಕರರಿಗೆ ಸದ್ಯವೇ ಕ್ಯಾಶ್‌ಲೆಸ್‌ ಇನ್ಷೂರೆನ್ಸ್‌ ಕಾರ್ಡ್‌

Govt Employees News : ರಾಜ್ಯ ಸರ್ಕಾರಿ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲು ಜಾರಿಗೆ ತಂದಿರುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ (karnataka arogya sanjeevani ) ಕಾರ್ಡ್‌ ರೂಪಿಸಲು ಈಗ ಮಾಹಿತಿ ಸಂಗ್ರಹಿಸಲಾಗುತ್ತಿದೆ.

VISTARANEWS.COM


on

Edited by

arogya sanjeevani scheme karnataka
Koo

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ʻಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆʼಯ (ಕೆಎಎಸ್‌ಎಸ್‌) (karnataka arogya sanjeevani) ಲಾಭ ಸದ್ಯವೇ ನೌಕರರಿಗೆ (Govt Employees News) ಲಭ್ಯವಾಗಲಿದೆ.

ಈ ಯೋಜನೆಯ ಲಾಭ ಪಡೆಯಲು ಸರ್ಕಾರಿ ನೌಕರರು ʻಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆಯʼ (HRMS) ವೆಬ್‌ಸೈಟ್‌ನಲ್ಲಿ ಮಾಹಿತಿಯನ್ನು ಅಪ್‌ಡೇಟ್‌ ಮಾಡಿಸಬೇಕೆಂದು ಎಲ್ಲ ಸರ್ಕಾರಿ ನೌಕರರಿಗೆ ಸರ್ಕಾರ ಸೂಚಿಸಿದೆ. ನೌಕರರು ತಮ್ಮ ಮತ್ತು ಅವಲಂಬಿತರ ಮಾಹಿತಿಯನ್ನು HRMS ನಲ್ಲಿ ಅಪಡೇಟ್ ಮಾಡಬೇಕಿರುತ್ತದೆ. ಅಲ್ಲದೆ ಈ ಮಾಹಿತಿಯನ್ನು ಕಚೇರಿಗೆ ಸಹ ಸಲ್ಲಿಸಬೇಸಬೇಕಿರುತ್ತದೆ ಎಂದು ನೌಕರರಿಗೆ ತಿಳಿಸಲಾಗಿದೆ.

ಎಚ್‌ಆರ್‌ಎಂಎಸ್‌ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ (Click Here) ಮಾಡಿ.

c s shadakshari
ಸಿ ಎಸ್‌ ಷಡಾಕ್ಷರಿ

ಕಳೆದ ಮಾರ್ಚ್‌ನಲ್ಲಿ ಸರ್ಕಾರ ಈ ಯೋಜನೆಯ ಜಾರಿಗೆ ಸಂಬಂಧಿಸಿದಂತೆ ಪರಿಷ್ಕೃತ ಕಾರ್ಯನೀತಿಯನ್ನು ಪ್ರಕಟಿಸಿಸಿ ಯೋಜನೆಗೆ ಚಾಲನೆ ನೀಡಲಾಗಿತ್ತು. ಆದರೆ ಸಾಫ್ಟ್‌ವೇರ್‌ ಸಮಸ್ಯೆಯಿಂದಾಗಿ ಯೋಜನೆ ಜಾರಿ ಸಾಧ್ಯವಾಗಿರಲಿಲ್ಲ. ಈಗ ಸಮಸ್ಯೆ ಬಗೆಹರಿದಿದ್ದು, ತ್ವರಿತಗತಿಯಲ್ಲಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಆದಷ್ಟು ಬೇಗ ಈ ಯೋಜನೆಯ ಲಾಭ ಪ್ರತಿ ನೌಕರರಿಗೂ ದೊರೆಯಲಿದೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್‌. ಷಡಾಕ್ಷರಿ ʻವಿಸ್ತಾರ ನ್ಯೂಸ್‌ʼಗೆ ತಿಳಿಸಿದ್ದಾರೆ.

ಸಂಘದ ಮನವಿಗೆ ಸ್ಪಂದಿಸಿರುವ ಸರ್ಕಾರ ಈ ನಿಟ್ಟಿನಲ್ಲಿ ತುರ್ತು ಕ್ರಮ ತೆಗೆದುಕೊಂಡಿದೆ. ನೌಕರರ ಮಾಹಿತಿ ಸಂಗ್ರಹ ಸಂಪೂರ್ಣವಾಗುತ್ತಿದ್ದಂತೆಯೇ ಕಾರ್ಡ್‌ ರೂಪಿಸುವ ಪ್ರಕ್ರಿಯೆ ಆರಂಭವಾಗಲಿದೆ. ಒಟ್ಟಾರೆ ಈ ಯೋಜನೆ ಜಾರಿಯು ಅಂತಿಮ ಹಂತದಲ್ಲಿದೆ ಎಂದು ಅವರು ತಿಳಿಸಿದ್ದಾರೆ. 2020-21 ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿಯೇ ಈ ಯೋಜನೆಯನ್ನು ಪ್ರಕಟಿಸಲಾಗಿತ್ತು.

ರಾಜ್ಯ ಉಚ್ಚ ನ್ಯಾಯಾಲಯದ ನೌಕರರು, ರಾಜ್ಯ ವಿಧಾನ ಮಂಡಲದ ನೌಕರರು, ʻಆರೋಗ್ಯ ಭಾಗ್ಯ’ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಪೊಲೀಸ್‌ ಇಲಾಖೆಯ ಸಿಬ್ಬಂದಿ, ಕರ್ನಾಟಕ ನ್ಯಾಯಾಂಗ ಅಧಿಕಾರಿಗಳು, ಅಖಿಲ ಭಾರತ ಸೇವೆಗೆ ಸೇರಿದ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ನಿಗಮ/ ಮಂಡಳಿಗಳು, ಸಹಕಾರ ಸ೦ಸ್ಥೆಗಳ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಇತರೆ ಸಸ್ಥೆಗಳ ನೌಕರರು ಈ ಯೋಜನೆಯ ಲಾಭ ಪಡೆಯಲಿದ್ದಾರೆ.

ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ.

ಈ ಯೋಜನೆಯಡಿ ಸರ್ಕಾರಿ ನೌಕರನ ಪತಿ ಅಥವಾ ಪತ್ನಿ, ತಂದೆ ಮತ್ತು ತಾಯಿ (ಮಲ ತಾಯಿಯ ನ್ನೊಳಗೊಂಡಂತೆ (ಅವರು ಸರ್ಕಾರಿ ನೌಕರನೊಂದಿಗೆ ಸಾಮಾನ್ಯವಾಗಿ ವಾಸವಾಗಿದ್ದಲ್ಲಿ ಮತ್ತು ಅವರ ಒಟ್ಟು ಮಾಸಿಕ ಆದಾಯ- ಕನಿಷ್ಠ ಕುಟುಂಬ ಪಿಂಚಣಿ ರೂ.8500 ಹಾಗೂ ಚಾಲ್ತಿಯಲ್ಲಿದ್ದ ತುಟ್ಟಿಭತ್ಯೆಯನ್ನು ಒಳಗೊಂಡ ಮೊತ್ತವನ್ನು ಮೀರದಿದ್ದಲ್ಲಿ), ಸರ್ಕಾರಿ ನೌಕರನ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಿರುವ ಮಕ್ಕಳು (ದತ್ತು ಪಡೆದ ಮಕ್ಕಳು ಮತ್ತು ಮಲ ಮಕ್ಕಳನ್ನೊಳಗೊಂಡಂತೆ) ವೈದ್ಯಕೀಯ ಸೇವೆ ಪಡೆಯಲು ಅರ್ಹರಾಗಿರುತ್ತಾರೆ.

ಇದನ್ನೂ ಓದಿ: KSRTC Employees News : ಸಾರಿಗೆ ನೌಕರರರಿಗೆ ಸರ್ಕಾರಿ ನೌಕರರಾಗುವ ಭಾಗ್ಯವಿಲ್ಲ!

ಈ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಜಾರಿಗೆ ತರುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಒಳಪಟ್ಟಿದ್ದು, ಈ ಟ್ರಸ್ಟ್‌ ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದ ಆಯುಷ್ಮಾನ್‌ ಭಾರತ – ಆರೋಗ್ಯ ಕರ್ನಾಟಕ ಯೋಜನೆಯನ್ನು ನಿರ್ವಹಿಸುತ್ತಿದೆ. ಸರ್ಕಾರಿ ನೌಕರರಿಗೆ ರೂಪಿಸಲಾಗಿರುವ ಈ ಯೋಜನೆ ಕೂಡ ಇದರ ಅಡಿಯಲ್ಲಿಯೇ ಬರಲಿದೆ.

Continue Reading

ನೌಕರರ ಕಾರ್ನರ್

KSRTC Employees News : ಸಾರಿಗೆ ನೌಕರರರಿಗೆ ಸರ್ಕಾರಿ ನೌಕರರಾಗುವ ಭಾಗ್ಯವಿಲ್ಲ!

ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ (KSRTC Employees News) ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ವಿಧಾನಸಭೆಯಲ್ಲಿ ಹೇಳಿದ್ದಾರೆ.

VISTARANEWS.COM


on

Edited by

KSRTC Employees News
Koo

ಬೆಂಗಳೂರು: ರಾಜ್ಯದ ಸಾರಿಗೆ ಸಂಸ್ಥೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ (KSRTC Employees News) ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ (ramalinga reddy) ಸ್ಪಷ್ಟಪಡಿಸಿದ್ದಾರೆ.

ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ, ಸರ್ಕಾರಿ ನೌಕರರಿಗೆ ನೀಡಲಾಗುವ ಎಲ್ಲ ಸವಲತ್ತುಗಳನ್ನು ಒದಗಿಸಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೌಕರರು ಒತ್ತಾಯಿಸಿಕೊಂಡೇ ಬಂದಿದ್ದರು. ನೂತನ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬಹುದೆಂದು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಅವರಿಗೆ ಈಗ ನಿರಾಸೆಯಾಗಿದೆ.

2020ರಲ್ಲಿ ಸಾರಿಗೆ ನಿಗಮದ ನೌಕರರ ಇದೇ ಬೇಡಿಕೆಯನ್ನು ಮುಂದಿಷ್ಟುಕೊಂಡು ಬೃಹತ್‌ ಪ್ರತಿಭಟನೆ ನಡೆಸಿದ್ದರು. ಸಾರಿಗೆ ನೌಕರರಿಗೆ 6ನೇ ವೇತನ ಆಯೋಗಕ್ಕೆ ಸಮನಾದ ವೇತನ ನೀಡಲು ಸರಕಾರ ಸಿದ್ಧ ಆದರೆ ಅವರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಆಗಿನ ಸಾರಿಗೆ ಸಚಿವ ಲಕ್ಷಣ್‌ ಸವದಿ ಹೇಳಿದ್ದರು. ಈ ಸಂದರ್ಭದಲ್ಲಿ ನೌಕರರ ಪ್ರತಿಭಟನೆಗೆ ಬೆಂಬಲ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಆಗಿನ ವಿಪಕ್ಷ ನಾಯಕ ಸಿದ್ದರಾಮಯ್ಯ ನೌಕರರ ಬೇಡಿಕೆ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದರು. ಆದರೆ ಈಗಿನ ಸರ್ಕಾರ ಕೂಡ ಈ ಬಗ್ಗೆ ಚಿಂತನೆ ನಡೆಸಿಲ್ಲ.

ಸೋಮವಾರ ವಿಧಾನಸಭೆಯಲ್ಲಿ ಶಾಸಕ ಅಪ್ಪಾಜಿ ಸಿ.ಎಸ್‌. ನಾಡಗೌಡ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವ ರಾಮಲಿಂಗಾರೆಡ್ಡಿ, ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನೌಕರರನ್ನು ಸರ್ಕಾರಿ ಸರ್ಕಾರಿ ನೌಕರರೆಂದು ಪರಿಗಣಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

ಈ ಸಾರಿಗೆ ನೌಕರರಿಗೆ ಸರಿಸಮಾನವಾದ ವೇತನ ಹಾಗು ಇತರೆ ಎಲ್ಲ ಸೌಲಭ್ಯಗಳನ್ನು ನೀಡಲು ಯಾವ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಕೇಳಲಾದ ಮತ್ತೊಂದು ಪ್ರಶ್ನೆಗೆ ವಿವರವಾಗಿ ಲಿಖಿತ ಉತ್ತರ ನೀಡಿರುವ ಸಚಿವರು, ರಾಜ್ಯ ರಸ್ತೆ ಸಾರಿಗೆ ನಿಗಮಗಳು ರಸ್ತೆ ಸಾರಿಗೆ ನಿಗಮಗಳ ಕಾಯ್ದೆ-1950ರಡಿ ಅಸ್ತಿತ್ವಕ್ಕೆ ಬಂದಿರುವ ಸರ್ಕಾರಿ ಸ್ವಾಮ್ಯದ ಸ್ವಾಯತ್ತ ಸಂಸ್ಥೆ ಆಗಿರುತ್ತದೆ. ರಸ್ತೆ ಸಾರಿಗೆ ನಿಗಮಗಳ ನಿರ್ವಹಣೆ ಮತ್ತು ಸಿಬ್ಬಂದಿಗಳ ವೇತನ ಹಾಗೂ ಎಲ್ಲಾ ಆರ್ಥಿಕ ಸೌಲಭ್ಯಗಳನ್ನು ನಿಗಮಗಳು ಆಂತರಿಕ. ಮೂಲಗಳಿಂದಲೇ ಭರಿಸಬೇಕಿದೆ. ಆದ್ದರಿಂದ, ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿ ಮತ್ತು ವೇತನವನ್ನು ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಶ್ರೇಣಿ ಮತ್ತು ವೇತನಕ್ಕೆ ಹೋಲಿಸಲು ಬರುವುದಿಲ್ಲ ಎಂದಿದ್ದಾರೆ.

ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ.

ಸಚಿವರು ಹೇಳಿದ್ದೇನು?

ಸಾರಿಗೆ ಸಂಸ್ಥೆಗಳ ನೌಕರರು ದಿನಾಂಕ;31/12/2019 ರಂದು ಪಡೆಯುತ್ತಿದ್ದ ಮೂಲ ವೇತನವನ್ನು ಶೇ.15ರಷ್ಟು ಹೆಚ್ಚಿಸಿ ದಿನಾಂಕ: 01.03.2023ರಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಣೆ ಮಾಡಲಾಗಿದೆ. ಅಲ್ಲದೇ, ಸಾರಿಗೆ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ, ವೇತನ ಬಡ್ಡಿಗಳನ್ನು ಮತ್ತು ಇತರೆ. ವೇತನ ಭತ್ಯೆಗಳಾದ ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ, ಪ್ರಭಾರ ಕಾರ್ಯ ಭತ್ಯೆ, ಅಧಿಕಾವಧಿ ಭತ್ಯೆ, ವಾಷಿಂಗ್‌ ಭತ್ಯೆ, ಬಾಟಾ, ಇನ್ಸೆಂಟಿವ್‌, ರಾತ್ರಿ ಭತ್ಯೆ, ಸಹ ವೇತನ ರಜೆ ಭತ್ಯೆ, ಪ್ರವಾಸ ಭತ್ಯೆ, ನಗರ ಪರಿಹಾರ ಭತ್ಯೆ, ಕನ್ವಿಯನ್ಸ್‌ ಭತ್ಯೆ, ಶಿಶುಪಾಲನಾ ಭತ್ಯೆ, ಬೆಳ್ಳಿ & ಬಂಗಾರ ಪದಕ ಭತ್ಯೆ, ವಾಹನ ಭತ್ಯೆ, ದಿನ ಪತ್ರಿಕೆ ಭತ್ಯೆ, ಪರಿಚಾರಕ ಭತ್ಯೆ, ಹಾರ್ಡ್‌ಶಿಪ್‌ ಭತ್ಯೆ, ಮುಂತಾದವುಗಳನ್ನು ಪಾವತಿಸಲಾಗುತ್ತಿದೆ ಎಂದು ಸಚಿವ ರಾಮಲಿಂಗರೆಡ್ಡಿ ವಿವರಿಸಿದ್ದಾರೆ.

ಇದನ್ನೂ ಓದಿ : 2000 Notes Withdrawn: ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ನಲ್ಲಿ 2000 ನೋಟು ಚಲಾವಣೆಯಲ್ಲಿ ಇಲ್ವಾ?

ಅರ್ಹ ಸಿಬ್ಬಂದಿಗಳಿಗೆ ಮುಂಬಡ್ತಿ, ಆಯ್ಕೆ ಶ್ರೇಣಿ, ಉನ್ನತ ಶ್ರೇಣಿ, ಗಳಿಕೆ ರಜೆ ನಗದಿಕರಣ, ವಿಶೇಷ ವೇತನ ಬಡ್ತಿ, ವಿಶೇಷ ರಜೆಗಳು ಹಾಗೂ ಇತರೆ ಸೌಲಭ್ಯಗಳನ್ನು ನಿಯಮಾನುಸಾರ ಕಾಲಕಾಲಕ್ಕೆ ನೀಡಲಾಗುತ್ತಿದೆ ಎಂದು ಸಚಿವರು ತಮ್ಮ ಉತ್ತರದಲ್ಲಿ ತಿಳಿಸಿದ್ದಾರೆ.

Continue Reading
Advertisement
castor oil
ಆರೋಗ್ಯ12 mins ago

Hair Care Tips: ಹರಳೆಣ್ಣೆಯನ್ನು ಹೇಗೆ ಬಳಸುವ ಮೂಲಕ ಉದ್ದವಾದ ಕಪ್ಪುಗೂದಲು ಪಡೆಯಬಹುದು ಗೊತ್ತೇ?

Vistara Editorial, Indian Government must act against Khalistani Terrorists
ದೇಶ1 hour ago

ವಿಸ್ತಾರ ಸಂಪಾದಕೀಯ: ಖಲಿಸ್ತಾನಿ ಭಯೋತ್ಪಾದಕರ ಹೆಡೆಮುರಿ ಕಟ್ಟಲೇಬೇಕಿದೆ

dina bhavishya September 27
ಪ್ರಮುಖ ಸುದ್ದಿ2 hours ago

Dina Bhavishya : ಈ ರಾಶಿಯವರಿಗೆ ಇಂದು ಕಿರಿಕಿರಿ, ಆತಂಕದ ಭಾವವೇ ಹೆಚ್ಚು; ಸ್ವಲ್ಪ ಎಚ್ಚರವಹಿಸಿ!

Sphoorti Salu
ಸುವಚನ2 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

S somanath and HD DeveGowda
ಕರ್ನಾಟಕ7 hours ago

Honorary Doctorate: ಇಸ್ರೋ ಅಧ್ಯಕ್ಷ ಎಸ್‌. ಸೋಮನಾಥ್‌, ಎಚ್‌.ಡಿ ದೇವೇಗೌಡರಿಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್‌

Gujarat High Court
ದೇಶ7 hours ago

ಜಿಮೇಲ್ ಓಪನ್ ಆಗ್ಲಿಲ್ಲ, ಅದ್ಕೆ ಜೈಲಿನಿಂದ ಬಿಡಲಿಲ್ಲ! ಹೈಕೋರ್ಟ್ ಬೇಲ್ ನೀಡಿದ್ರೂ 3 ವರ್ಷ ಜೈಲಿನಲ್ಲೇ ಉಳಿದ ಯುವಕ!

World culture fest
ಕಲೆ/ಸಾಹಿತ್ಯ8 hours ago

World Culture Festival: ಸೆ.29ರಿಂದ ವಾಷಿಂಗ್ಟನ್‌ನಲ್ಲಿ ಸಾಂಸ್ಕೃತಿಕ ಒಲಿಂಪಿಕ್ಸ್; ಶ್ರೀ ರವಿಶಂಕರ್ ಗುರೂಜಿ ಮುಂದಾಳತ್ವ

credit cards
ದೇಶ8 hours ago

Flipkart, Amazon Sale: ಹಬ್ಬದ ಸೀಸನ್‌ ಆನ್‌ಲೈನ್ ಖರೀದಿ, ಕ್ರೆಡಿಟ್‌ ಕಾರ್ಡ್‌ದಾರರು ತಿಳಿದುಕೊಳ್ಳಬೇಕಾದ ಸಂಗತಿಗಳು

virat kohli dance
ಕ್ರಿಕೆಟ್8 hours ago

Viral Video: ಬ್ರೇಕ್​ ಪಡೆದ ಆಸೀಸ್​ ಆಟಗಾರರ ಮುಂದೆ ಬ್ರೇಕ್​ ಡ್ಯಾನ್ಸ್​ ಮಾಡಿದ ವಿರಾಟ್​ ಕೊಹ್ಲಿ

Knives
ಕರ್ನಾಟಕ8 hours ago

Kolar News: ಬಾರ್‌ನಲ್ಲಿ ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

bangalore bandh
ಕರ್ನಾಟಕ2 days ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

dina bhavishya
ಪ್ರಮುಖ ಸುದ್ದಿ1 day ago

Dina Bhavishya : ನಿಮಗೆ ಆಗದವರು ಪಿತೂರಿ ಮಾಡ್ಬಹುದು ಎಚ್ಚರ!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ3 days ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ3 days ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ3 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ3 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ4 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

ಟ್ರೆಂಡಿಂಗ್‌