GPF Interest Rate karnataka government fixed GPF Interest RateGPF Interest Rate : ಸಾಮಾನ್ಯ ಭವಿಷ್ಯ ನಿಧಿಯ ಬಡ್ಡಿದರ ನಿಗದಿ; ರಾಜ್ಯ ಸರ್ಕಾರದ ಅಧಿಸೂಚನೆ - Vistara News

ನೌಕರರ ಕಾರ್ನರ್

GPF Interest Rate : ಸಾಮಾನ್ಯ ಭವಿಷ್ಯ ನಿಧಿಯ ಬಡ್ಡಿದರ ನಿಗದಿ; ರಾಜ್ಯ ಸರ್ಕಾರದ ಅಧಿಸೂಚನೆ

ರಾಜ್ಯ ಸರ್ಕಾರವು ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ವಂತಿಕೆದಾರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಜಮೆಯಾಗಿರುವ ಶಿಲ್ಕಿನ ಮೇಲಿನ ಬಡ್ಡಿದವರನ್ನು (GPF Interest Rate) ನಿಗದಿ ಪಡಿಸಿ ಅಧಿಸೂಚನೆ ಹೊರಡಿಸಿದೆ.

VISTARANEWS.COM


on

GPF Interest Rate
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸರ್ಕಾರವು ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ವಂತಿಕೆದಾರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಜಮೆಯಾಗಿರುವ ಶಿಲ್ಕಿನ ಮೇಲಿನ ಬಡ್ಡಿದವರನ್ನು (Govt Employees News) ನಿಗದಿಪಡಿಸಿದೆ. ಕಳೆದ ಜನವರಿ 1 ರಿಂದ ಮಾರ್ಚ್‌ 31 ರವರೆಗಿನ (ಮೂರು ತಿಂಗಳು) ಅವಧಿಗೆ ವಾರ್ಷಿಕ ಶೇ.7.1 ಬಡ್ಡಿದರ (GPF Interest Rate) ನಿಗದಿಪಡಿಸಲಾಗಿದೆ.

ಈ ಸಂಬಂಧ ರಾಜ್ಯ ಸರ್ಕಾರ ಜೂನ್‌ 12 ರಂದು ಅಧಿಸೂಚನೆ ಹೊರಡಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ಸಾಮಾನ್ಯ ಭವಿಷ್ಯ ನಿಧಿಯ ಬಡ್ಡಿದರವನ್ನು ಮೂರು ತಿಂಗಳಿಗೊಮ್ಮೆ ಪರಿಷ್ಕರಿಸಲಾಗುತ್ತದೆ. 01-04-2006 ಕ್ಕಿಂತ ಮೊದಲು ರಾಜ್ಯದ ಸೇವೆಗೆ ಸೇರಿದ ರಾಜ್ಯ ಸರ್ಕಾರಿ ನೌಕರರು ಈ ಭವಿಷ್ಯ ನಿಧಿಯ ವಂತಿಕೆದಾರರಾಗಿರುತ್ತಾರೆ. ಈಗಾಗಲೇ ಕೇಂದ್ರ ಸರ್ಕಾರವು ತನ್ನ ಸೇವೆಯ ಸಾಮಾನ್ಯ ಭವಿಷ್ಯ ನಿಧಿಯ ಬಡ್ಡಿದರವನ್ನು ಶೇ.7.1 ಕ್ಕೆ ನಿಗದಿ ಪಡಿಸಿ ಆದೇಶ ಹೊರಡಿಸಿದೆ. ಏಪ್ರಿಲ್‌ ನಿಂದ ಜೂನ್‌ ಅವಧಿಗೂ ಇದೇ ಬಡ್ಡಿದರ ಅನ್ವಯಿಸಲಿದೆ ಎಂದು ಸಹ ಪ್ರಕಟಿಸಿದೆ.

ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ನಿಯಮಗಳು, 2016ರ ಅಡಿಯಲ್ಲಿ ರಾಜ್ಯ ಸರ್ಕಾರವು ಈ ಭವಿಷ್ಯ ನಿಧಿಯನ್ನು ಸ್ಥಾಪಿಸಿದೆ. ಪ್ರತಿ ನೌಕರರು ಮಾಸಿಕ ವಂತಿಗೆಯನ್ನು ಪಾವತಿಸುವ ಮೂಲಕ ಈ ನಿಧಿಯ ಚಂದಾದಾರಾಗಬಹುದು. ತಾವು ಹೊಂದಿರುವ ಹುದ್ದೆಯ ಗರಿಷ್ಠ ಮೂಲ ವೇತನಕ್ಕೆ ಒಳಪ್ಟಟ ಕನಿಷ್ಠ ಪ್ರಮಾಣಕ್ಕಿಂತ ಹೆಚ್ಚಿನ ವಂತಿಗೆಯನ್ನು ಆಯ್ಕೆಮಾಡಿಕೊಳ್ಳಬಹುದು.

ಸಾಮಾನ್ಯ ಭವಿಷ್ಯ ನಿಧಿಯು ರಾಜ್ಯ ಮತ್ತು ಕೇಂದ್ರ ಸರ್ಕಾರದ ಭವಿಷ್ಯ ನಿಧಿ ಯೋಜನೆಯಾಗಿದ್ದು, ಕೇವಲ ಸರ್ಕಾರಿ ನೌಕರರಿಗೆ (ಗ್ರೂಪ್‌ ಡಿ ಹೊರತುಪಡಿಸಿ) ಇದನ್ನು ಒದಗಿಸಲಾಗುತ್ತದೆ. ಪ್ರತಿ ತಿಂಗಳು ನೌಕರರು ಇಂತಿಷ್ಟು ಎಂದು ತಮ್ಮ ವೇತನದಲ್ಲಿ ಹಣವನ್ನು ಇದಕ್ಕೆ ತೆಗೆದಿರಿಸುತ್ತಾರೆ. ಹೀಗೆ ಸಂಗ್ರಹವಾದ ಮೊತ್ತವನ್ನು ಅಗತ್ಯವಿರುವಾಗ ನೌಕರರು ಮನೆ ಅಥವಾ ನಿವೇಶನ ಕೊಳ್ಳುವ ಸಂದರ್ಭದಲ್ಲಿ, ಮನೆ ಕಟ್ಟುವಾಗ, ಮದುವೆಯಾಗುವ, ಕಾರು ಕೊಳ್ಳುವಾಗ ಅಥವಾ ಮಕ್ಕಳ ಶೈಕ್ಷಣಿಕ ಉದ್ದೇಶಗಳಿಗಾಗಿ ಈ ಹಣವನ್ನು ಹಿಂದಕ್ಕೆ ಪಡೆಯಲು ಅವಕಾಶ ನೀಡಲಾಗಿರುತ್ತದೆ. ಪಡೆದುಕೊಳ್ಳಬಹುದು, ಇಲ್ಲವೇ, ನಿವೃತ್ತಿ ಸಂದರ್ಭದಲ್ಲಿ ಒಟ್ಟಾಗಿ ಪಡೆದುಕೊಳ್ಳಬಹುದಾಗಿದೆ. ಮಹಾಲೇಖಪಾಲಕರ ಕಚೇರಿಯು ಈ ನಿಧಿಯನ್ನು ನಿರ್ವಹಿಸುತ್ತದೆ.

ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ.

ಇತ್ತೀಚೆಗೆ ಕೇಂದ್ರ ಸರ್ಕಾರವು ಈ ನಿಧಿಗೆ ಸಂಬಂಧಿಸಿದ ನಿಯಮಗಳಲ್ಲಿ ಬದಲಾವಣೆ ಮಾಡಿದ್ದು, ಈಗ ಜಿಪಿಎಫ್‌ ಅನ್ನು ಕಾರು, ಸ್ಕೂಟರ್‌ನಂಥ ಗ್ರಾಹಕೋತ್ಪನ್ನಗಳ ಖರೀದಿ ಸಲುವಾಗಿಯೂ ಬಳಸಬಹುದಾಗಿದೆ. ಈ ಹೊಸ ನಿಯಮದ ಪ್ರಕಾರ ಜಿಪಿಎಫ್‌ನಿಂದ ಹಣ ತೆಗೆಯುವ ಸಂದರ್ಭದಲ್ಲಿ ಅದನ್ನು ಮಂಜೂರು ಮಾಡುವ ಮತ್ತು ಕೈಗೆ ನೀಡುವ ಅವಧಿಯನ್ನು 15 ದಿನಗಳಿಗೆ ಸೀಮಿತಗೊಳಿಸಲಾಗಿದೆ. ಅನಾರೋಗ್ಯದಂಥ ತುರ್ತು ಸಂದರ್ಭಗಳಲ್ಲಿ 7 ದಿನದೊಳಗೆ ಹಣವನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ: NPS News: ಈ ಬಾರಿ ಬಜೆಟ್‌ನಲ್ಲಿ NPS ರದ್ದು?: ಪದಾಧಿಕಾರಿಗಳನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Govt Employees: ಸರ್ಕಾರಿ ನೌಕರರಿಗೆ ಅಲರ್ಟ್‌; ಬೆಳಗ್ಗೆ 9.15ಕ್ಕೆ ಆಫೀಸ್‌ ತಲುಪದಿದ್ರೆ ಅರ್ಧ ದಿನ ರಜೆ!

Govt Employees: ಕೇಂದ್ರ ಸರ್ಕಾರಿ ನೌಕರರು ಬೆಳಗ್ಗೆ 9.15ರೊಳಗೆ ಕಚೇರಿ ತಲುಪಿ, ಬಯೋಮೆಟ್ರಿಕ್‌ ನೀಡದಿದ್ದರೆ ಅಂತಹವರಿಗೆ ಅರ್ಧ ದಿನ ರಜೆ ಎಂದು ಪರಿಗಣಿಸಲಾಗುತ್ತದೆ. ಈ ಬಗ್ಗೆ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಆದೇಶ ನೀಡಿದೆ.

VISTARANEWS.COM


on

govt employees
Koo

ನವ ದೆಹಲಿ: ಸರ್ಕಾರಿ ಕಚೇರಿಗಳಿಗೆ ಕೆಲ ನೌಕರರು (Govt Employees) ತಡವಾಗಿ ಬರುತ್ತಾರೆ ಎಂಬ ವಿಷಯ ಎಲ್ಲರಿಗೂ ತಿಳಿದಿರುವ ಸಂಗತಿ. ಅಂತಹವರಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಇದೀಗ ಕಠಿಣ ಕ್ರಮ ಕೈಗೊಂಡಿದೆ. ಕೇಂದ್ರ ಸರ್ಕಾರಿ ನೌಕರರು ಕಚೇರಿಗೆ ಬೆಳಗ್ಗೆ 9.15ರೊಳಗೆ ಕಚೇರಿ ತಲುಪಿ, ಬಯೋಮೆಟ್ರಿಕ್‌ ನೀಡದಿದ್ದರೆ ಅಂತಹವರಿಗೆ ಅರ್ಧ ದಿನ ಸಾಂದರ್ಭಿಕ ರಜೆ (casual leave) ಎಂದು ಪರಿಗಣಿಸಲು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DOPT) ಆದೇಶ ನೀಡಿದೆ.

ಇನ್ನು ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಹಾಜರಾತಿ ಪುಸ್ತಕದ ಬದಲಾಗಿ ಕಡ್ಡಾಯವಾಗಿ ಬಯೋಮೆಟ್ರಿಕ್‌ ಹಾಜರಾತಿ ವ್ಯವಸ್ಥೆ ಬಳಸಬೇಕು ಎಂದು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ತಿಳಿಸಿದೆ. ಒಂದು ವೇಳೆ ವಿವಿಧ ಕಾರಣಗಳಿಂದ ನೌಕರರು ಕೆಲಸಕ್ಕೆ ಹಾಜರಾಗಲು ಸಾಧ್ಯವಾಗದಿದ್ದರೆ, ಒಂದು ದಿನ ಮೊದಲೇ ಕಚೇರಿಯಲ್ಲಿ ತಿಳಿಸಿ ಸಾಂದರ್ಭಿಕ ರಜೆ (CL) ಚೀಟಿ ಸಲ್ಲಿಸಬೇಕು ಎಂದು ನೌಕರರಿಗೆ ಸೂಚಿಸಲಾಗಿದೆ.

ಹಾಗೆಯೇ ಉದ್ಯೋಗಿಗಳ ಹಾಜರಾತಿ, ಸಮಯ ಪಾಲನೆ ಬಗ್ಗೆ ಹಿರಿಯ ಅಧಿಕಾರಿಗಳು ಪರಿಶೀಲಿಸಬೇಕು. ಕೇಂದ್ರ ಸರ್ಕಾರಿ ಕಚೇರಿಗಳ ಕೆಲಸದ ಅವಧಿ ಬೆಳಗ್ಗೆ 9ಗಂಟೆಯಿಂದ ಸಂಜೆ 5.30ವರೆಗೆ ಇರುತ್ತದೆ. ಆದರೆ, ಕೆಲ ನೌಕರರು, ಅಧಿಕಾರಿಗಳು ಮಾತ್ರ ತಡವಾಗಿ ಆಫೀಸ್‌ಗೆ ಬಂದು, ಬೇಗನೆ ವಾಪಸ್‌ ಹೋಗುತ್ತಾರೆ. ಇದರಿಂದ ಕೆಲಸದ ನಿಮಿತ್ತ ಕಚೇರಿಗಳಿಗೆ ಬರುವ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದೆ. ಹೀಗಾಗಿ ಹಾಜರಾತಿ ವಿಚಾರದಲ್ಲಿ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.

ಇದನ್ನೂ ಓದಿ | KAS Exam: ಕೆಎಎಸ್‌ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಪರೀಕ್ಷೆ ಬರೆಯಲು ಒಂದು ಬಾರಿ ಹೆಚ್ಚುವರಿ ಅವಕಾಶ

2014ಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸರ್ಕಾರಿ ಕಚೇರಿಗಳಲ್ಲಿ ಆಧಾರ್‌ ಆಧಾರಿತ ಬಯೋಮೆಟ್ರಿಕ್ಸ್ ಹಾಜರಾತಿ ವ್ಯವಸ್ಥೆ (AEBAS) ಜಾರಿ ಮಾಡಿತ್ತು. 2019ರಲ್ಲಿ ಕೋವಿಡ್‌ ವ್ಯಾಪಿಸಿದಾಗ ಮುನ್ನೆಚ್ಚರಿಕಾ ಕ್ರಮವಾಗಿ ಬಯೋಮೆಟ್ರಿಕ್‌ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿತ್ತು, ನಂತರ 2022ರಲ್ಲಿ ವ್ಯವಸ್ಥೆ ಮರು ಆರಂಭವಾಗಿದೆ. ಇದೀಗ ಕಚೇರಿಗಳಲ್ಲಿ ನೌಕರರು ಸಮಯಪಾಲನೆ ಮಾಡುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಂಡಿರುವುದರಿಂದ ಸುಧಾರಣೆ ಕಂಡುಬರಲಿದೆ ಎಂದು ಹಿರಿಯ ಅಧಿಕಾರಿಗಳು ಹೇಳುತ್ತಿದ್ದಾರೆ.

Continue Reading

ಕರ್ನಾಟಕ

KAS Exam: ಕೆಎಎಸ್‌ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಪರೀಕ್ಷೆ ಬರೆಯಲು ಒಂದು ಬಾರಿ ಹೆಚ್ಚುವರಿ ಅವಕಾಶ

KAS Exam: 2023-24ನೇ ಸಾಲಿನ ಕೆಎಎಸ್ ಪರೀಕ್ಷೆ ಬರೆಯಲು ಈಗಾಗಲೇ ಒಂದು ಬಾರಿ ಎಂಬಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿತ್ತು. ಆದರೆ, ಇದೀಗ 2017-18 ನೇ ಸಾಲಿನ ಕೆಎಎಸ್‌ ಪರೀಕ್ಷೆ ಬರೆದಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿ ಹೆಚ್ಚುವರಿ ವಿಶೇಷ ಅವಕಾಶ ನೀಡಲಾಗಿದೆ.

VISTARANEWS.COM


on

KAS Exam
Koo

ಬೆಂಗಳೂರು: ಕೆಎಎಸ್‌ ಹುದ್ದೆ ಆಕಾಂಕ್ಷಿಗಳಿಗೆ ಕೆಪಿಎಸ್‌ಸಿ ಗುಡ್‌ ನ್ಯೂಸ್‌ (Job News) ನೀಡಿದೆ. 2023-24 ಸಾಲಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿ ಹೊರಡಿಸಿರುವ ಅಧಿಸೂಚನೆಯಲ್ಲಿ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (KAS Exam) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಸೀಮಿತಗೊಳಿಸಿ (One time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಲಾಗಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದ್ದು, ಕೆಲವು ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆ ಆಕಾಂಕ್ಷಿಗಳು ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸಿ, ರಾಜ್ಯ ಸರ್ಕಾರವು 2023-24ನೇ ಸಾಲಿಗೆ ಈಗಾಗಲೇ ಕೆಎಎಸ್ ಪರೀಕ್ಷೆ ಬರೆಯಲು ಒಂದು ಬಾರಿ ಎಂಬಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ನೀಡಿದ್ದು, ಇದರಿಂದ ಕೆಲವು ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ದೊರೆಯಲಿದೆ. ಉಳಿದ ಅಭ್ಯರ್ಥಿಗಳು ಅವಕಾಶ ವಂಚಿತರಾಗುತ್ತಿರುವ ಹಿನ್ನಲೆಯಲ್ಲಿ, 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ 2023-24 ನೇ ಸಾಲಿನ ಅಧಿಸೂಚನೆಯಲ್ಲಿ ಪರೀಕ್ಷೆ ಬರೆಯಲು ವಯಸ್ಸಿನ ನಿರ್ಬಂಧವಿಲ್ಲದೆ ಹೆಚ್ಚುವರಿ ವಿಶೇಷ ಅವಕಾಶ ನೀಡುವಂತೆ ಕೋರಿದ್ದಾರೆ.

ಈ ಅಂಶಗಳನ್ನು ಸರ್ಕಾರವು ಪರಿಶೀಲಿಸಿ 2023-24 ನೇ ಸಾಲಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗವು ಫೆಬ್ರವರಿ 26ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ (One time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಲು ತೀರ್ಮಾನಿಸಿದೆ ಎಂದು ತಿಳಿಸಿದೆ.

ಕೆಎಎಸ್‌ ಸೇರಿ ಇತರ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಜುಲೈ 21ರಂದು ನಡೆಸಲಾಗುವುದು ಎಂದು ಈಗಾಗಲೇ ಕೆಪಿಎಸ್‌ಸಿ ತಿಳಿಸಿದೆ. ಅಭ್ಯರ್ಥಿಗಳ ಮನವಿ ಮೇರೆಗೆ ಪರೀಕ್ಷಾ ದಿನಾಂಕ ಮುಂದೂಡಲಾಗಿತ್ತು.

ಇದನ್ನೂ ಓದಿ | Job Recruitment: ಎಚ್‌ಎಎಲ್‌ನಲ್ಲಿ ಉದ್ಯೋಗ; ನಾಳೆಯೇ ಕೊನೆಯ ದಿನಾಂಕ

Job Recruitment: ನಮ್ಮ ಮೆಟ್ರೋದಲ್ಲಿದೆ ಉದ್ಯೋಗ ಅವಕಾಶ; ಕೂಡಲೇ ಅರ್ಜಿ ಸಲ್ಲಿಸಿ

Job Recruitment

ಬೆಂಗಳೂರು: ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ ಹುದ್ದೆಗಳಿಗೆ ಬೆಂಗಳೂರು (bengaluru) ಮೆಟ್ರೋ ರೈಲು (metro train) ಕಾರ್ಪೋರೇಷನ್ ಲಿಮಿಟೆಡ್ (Bengaluru Metro Rail Corporation Limited)​ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 69 ಹುದ್ದೆಗಳಿದ್ದು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಅಥವಾ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಈ ಕುರಿತು ಬೆಂಗಳೂರು ಮೆಟ್ರೋದ ಅಧಿಕೃತ ವೆಬ್​ಸೈಟ್​ bmrc.co.in ಅಲ್ಲಿ ಸಂಪೂರ್ಣ ಮಾಹಿತಿ ಲಭ್ಯವಿದೆ. ಹುದ್ದೆಯ ಕುರಿತು ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ಹುದ್ದೆಯ ವಿವರ

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನ ಒಟ್ಟು 69 ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲೇ ಪೋಸ್ಟಿಂಗ್ ನೀಡಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಮಾಸಿಕ 35,000- 82,660 ರೂ. ಸಂಬಳ ನೀಡಲಾಗುತ್ತದೆ.

ಅರ್ಹತೆ ಏನು?

ಮೆಟ್ರಿಕ್ಯುಲೇಷನ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್/ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್/ ಟೆಲಿಕಮ್ಯುನಿಕೇಷನ್ಸ್/ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್/ ಎಲೆಕ್ಟ್ರಿಕಲ್ ಪವರ್ ಸಿಸ್ಟಮ್ಸ್/ ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್/ ಮೆಕ್ಯಾನಿಕಲ್ ಎಂಜಿನಿಯರಿಂಗ್​​ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 2024ರ ಜೂನ್ 14ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ: Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ

ಅರ್ಹರಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಸೈಕೋಮೆಟ್ರಿಕ್ ಟೆಸ್ಟ್ ನಡೆಸಿ ದಾಖಲಾತಿಗಳನ್ನು ಪರಿಶೀಲನೆ ನಡೆಸಿದ ಬಳಿಕ ಸೂಕ್ತವೆನಿಸುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಪ್ರಕ್ರಿಯೆ

ಆಸಕ್ತ ಅಭ್ಯರ್ಥಿಗಳು 2024ರ ಜುಲೈ 10ರೊಳಗೆ ಅರ್ಜಿ ಸಲ್ಲಿಸಬೇಕು. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, 3ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಹೆಚ್. ರಸ್ತೆ, ಶಾಂತಿನಗರ, ಬೆಂಗಳೂರು- 560027 ಇವರಿಗೆ ಸಲ್ಲಿಸಬೇಕು. ಆನ್ ;ಲೈನ್ ಮೂಲಕ ಅರ್ಜಿ ಸಲ್ಲಿಸುವವರು https://recruitr.bmrc.co.in/frminstructions.aspx ಈ ಲಿಂಕ್ ಕ್ಲಿಕ್ ಮಾಡಿ ನೇರವಾಗಿ ಅರ್ಜಿ ಸಲ್ಲಿಸಬಹುದು.

Continue Reading

ಕರ್ನಾಟಕ

LKG UKG In Govt Schools: 578 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ಸರ್ಕಾರ ಆದೇಶ; ಶಿಕ್ಷಕರಾಗಲು ಅರ್ಹತೆ ಏನು?

LKG UKG In Govt Schools: 2023-24 ಹಾಗೂ 2024-25ನೇ ಸಾಲಿನಲ್ಲಿ ಕ್ರಮವಾಗಿ ರಾಜ್ಯದ 262 ಮತ್ತು 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ.

VISTARANEWS.COM


on

LKG UKG In Govt Schools
Koo

ಬೆಂಗಳೂರು: ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ ಅನುಮೋದನೆಗೊಂಡಂತೆ ರಾಜ್ಯದ ಆಯ್ದ 578 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (govt pre-schools) ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. 2023-24 ಹಾಗೂ 2024-25ನೇ ಸಾಲಿನಲ್ಲಿ ಕ್ರಮವಾಗಿ ರಾಜ್ಯದ 262 ಮತ್ತು 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (LKG UKG In Govt Schools) ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ 2023-24 ಹಾಗೂ 2024-25ನೇ ಸಾಲಿನಲ್ಲಿ ಕ್ರಮವಾಗಿ ರಾಜ್ಯದ 262 ಮತ್ತು 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ. ಅದರಂತೆ, 2023-24 ನೇ ಸಾಲಿನಲ್ಲಿ ರಾಜ್ಯದ ಆಯ್ದ 262 ಮತ್ತು 2024-25ನೇ ಸಾಲಿನಲ್ಲಿ 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದ ಅನುಮತಿ ನೀಡುವಂತೆ ಕೋರಿ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಇದನ್ನು ಕೂಲಂಕಷವಾಗಿ ಪರಿಶೀಲಿಸಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ಆದೇಶ ಹೊರಡಿಸಲಾಗಿದೆ.

ಇನ್ನು ಶಿಕ್ಷಣ ಸಚಿವಾಲದ ಸೂಚನೆಯಂತೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾಯೋಗಿಕವಾಗಿ ಪ್ರಾರಂಭಿಸುವ ಸಂಬಂಧದಲ್ಲಿ ಈ ಕೆಳಗಿನಂತೆ ವಿವರವಾದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ.

ಇದನ್ನೂ ಓದಿ | NET 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ರದ್ದುಗೊಳಿಸಿದ ಕೇಂದ್ರ ಸರ್ಕಾರ; ಏನಿದು ಕೇಸ್?‌

ತರಗತಿ ಪ್ರಾರಂಭಿಸಲು ಪಾಲಿಸಬೇಕಾದ ಸೂಚನೆಗಳು

  • 2024-25ನೇ ಸಾಲಿನ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಎಲ್ಲಾ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.
  • 2024-25ನೇ ಸಾಲಿನಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ ಕುರಿತು ಸರ್ಕಾರಿ ಪ್ರಾಥಮಿಕ ಶಾಲೆಗಳ ಎಸ್.ಡಿ.ಎಂ.ಸಿಯವರು ಮತ್ತು ಶಿಕ್ಷಕರು ಸ್ಥಳೀಯ ಮಟ್ಟದಲ್ಲಿ ಪ್ರಚಾರ ಮಾಡಬೇಕು.
  • 2024-25ನೇ ಸಾಲಿನ ಪೂರ್ವ ಪ್ರಾಥಮಿಕ LKGಯ ಒಂದು ವಿಭಾಗವನ್ನು ಮಾತ್ರ ಪ್ರಾರಂಭಿಸುವುದು, ಈ LKG ತರಗತಿಗೆ 4 ವರ್ಷದಿಂದ 5 ವರ್ಷದ ವಯೋಮಿತಿಯ ಒಳಗಿನ ಮಕ್ಕಳನ್ನು ದಾಖಲುಮಾಡಿಕೊಳ್ಳುವುದು. ಈ ವಿಭಾಗ ಪ್ರಾರಂಭಿಸಲು 4 ವರ್ಷದಿಂದ 5 ವರ್ಷದ ವಯೋಮಾನದ ಕನಿಷ್ಠ 20 ಮಕ್ಕಳು ಪ್ರವೇಶ ಪಡೆಯುವಂತಿರಬೇಕು ಹಾಗೂ ಗರಿಷ್ಠ 30 ಮಕ್ಕಳನ್ನು ಮಾತ್ರ ದಾಖಲಿಸಬೇಕು.
  • ಪೂರ್ವ ಪ್ರಾಥಮಿಕ ತರಗತಿಯನ್ನು ಪ್ರಾರಂಭಿಸಲು ಒಂದು ಕೊಠಡಿಯನ್ನು ಗುರುತಿಸಿಕೊಳ್ಳುವುದು ಹಾಗೂ ಕೊಠಡಿ ಸಜ್ಜುಗೊಳಿಸುವುದು ಅವಶ್ಯ ಸಾಧನ ಸಾಮಗ್ರಿಗಳನ್ನು ನಿಯಮಾನುಸಾರ ಖರೀದಿಸುವುದು. ಕೊಠಡಿ ಸಜ್ಜುಗೊಳಿಸಲು ಸ್ಥಳಿಯ ಚಿತ್ರಕಲಾ ಶಿಕ್ಷಕರನ್ನು / ಚಿತ್ರಕಲಾ ಪರಿಣಿತರನ್ನು ಬಳಸಿಕೊಂಡು ಮಕ್ಕಳಿಗೆ ಆಕರ್ಷಕವಾದ ಚಿತ್ರಗಳ ರಚನೆ, ಗೋಡೆ ಮೇಲೆ ನೆಲ ಮಟ್ಟದಿಂದ 2 ಅಡಿಯವರೆಗೆ ಮಕ್ಕಳು ಬರೆಯಲು/ ಚಿತ್ರ ರಚಿಸಲು ಸಾಧ್ಯವಾಗುವಂತೆ ಗ್ರೀನ್ ಬೋರ್ಡ/ಕರಿಹಲಗೆ ರಚನೆ ಮುಂತಾದ ಕಾರ್ಯಗಳನ್ನು ಮಾಡುವುದು. ಖರೀದಿಸಬೇಕಾದ ಸಾಧನ ಸಾಮಗ್ರಿಗಳ ಪಟ್ಟಿಯನ್ನು ಹಾಗೂ ಕೆಲವು ಕೊಠಡಿಯ ವಿನ್ಯಾಸದ ಕೆಲವು ಮಾದರಿ ಉದಾಹರಣೆಗಳನ್ನು ಕೂಡಲೇ ಒದಗಿಸಬೇಕು.
  • ಪ್ರತಿ ಪೂರ್ವ ಪ್ರಾಥಮಿಕ ತರಗತಿಗೆ ಒಬ್ಬ ಶಿಕ್ಷಕಿ/ಶಿಕ್ಷಕ ಮತ್ತು ಒಬ್ಬರು ಆಯಾರವರನ್ನು ಶಾಲಾ ಎಸ್.ಡಿ.ಎಂ.ಸಿ ವತಿಯಿಂದ ತಾತ್ಕಾಲಿಕವಾಗಿ 10 ತಿಂಗಳುಗಳ ಅವಧಿಗೆ ನೇಮಕ ಮಾಡಿಕೊಳ್ಳತಕ್ಕದ್ದು. ಪೂರ್ವ ಪ್ರಾಥಮಿಕ ತರಗತಿ ಶಿಕ್ಷಕಿ/ಶಿಕ್ಷಕರಿಗೆ ಪ್ರಸ್ತುತ ಅತಿಥಿ ಶಿಕ್ಷಕರಿಗೆ ನೀಡುತ್ತಿರುವ ಸಂಭಾವನೆಯಂತೆಯೇ ಮಾಸಿಕ 10,000 ರೂ. ಮತ್ತು ಆಯಾಗಳಿಗೆ ಮಾಸಿಕ 5000 ರೂ. ಸಂಭಾವನೆಯನ್ನು ನಿಗದಿಪಡಿಸತಕ್ಕದ್ದು.
  • ವೇತನ ಅನುದಾನವನ್ನು ಆಯಾ ಎಸ್.ಡಿ.ಎಂ.ಸಿ. ಖಾತೆಗೆ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಿಂದ ಬಿಡುಗಡೆ ಮಾಡಬೇಕು.

ಆಡಳಿತಾತ್ಮಕ ಕ್ರಮಗಳು

ಶಿಕ್ಷಕಿ/ಶಿಕ್ಷಕರನ್ನು ಮತ್ತು ಆಯಾ ಅವರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಈ ಕೆಳಗಿನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ | NEET-UG Row: ನೀಟ್‌ ಕೌನ್ಸೆಲಿಂಗ್‌ಗೆ ತಡೆ ಇಲ್ಲ ಎಂದು ಪುನರುಚ್ಚರಿಸಿದ ಸುಪ್ರೀಂ ಕೋರ್ಟ್

ಶಿಕ್ಷಕರ ಆಯ್ಕೆಗೆ ಆರ್ಹತೆ

ಪೂರ್ವ ಪ್ರಾಥಮಿಕ ತರಗತಿ ಶಿಕ್ಷಕಿ/ಶಿಕ್ಷಕ, ಪದವಿ ಪೂರ್ವ ಶಿಕ್ಷಣದಲ್ಲಿ (PUC) ಕನಿಷ್ಠ ಶೇ.50 ಅಂಕಗಳನ್ನು ಪಡೆದು ತೇರ್ಗಡೆಯಾಗಿರಬೇಕು ಮತ್ತು NCTE ಮಾನ್ಯತೆ ಪಡೆದ ಸಂಸ್ಥೆಯಿಂದ ಎರಡು ಅಥವಾ ಎರಡು ವರ್ಷಕ್ಕಿಂತ ಹೆಚ್ಚಿನ ಅವಧಿಯ ಡಿಪ್ಲೊಮಾ ಇನ್ ನರ್ಸರಿ ಟೀಚರ್ಸ್ ಎಜ್ಯುಕೇಶನ್/ಪ್ರೀ- ಸ್ಕೂಲ್ ಎಜ್ಯುಕೇಶನ್/ಅರ್ಲಿ ಚೈಲ್ಡ್‌ಹುಡ್ ಎಜುಕೇಶನ್ ಪ್ರೊಗ್ರಾಂ (ಡಿ.ಇ.ಸಿ.ಇಡಿ) ಅಥವಾ ಬಿ.ಇಡಿ (ನರ್ಸರಿ) ಅರ್ಹತೆ (Diploma in Nursery Teachers Education/pre-School Education/Early Childhood Education Programme (D.E.C.ED) of duration of not less than two years or B.Ed(Nursery)] ಹೊಂದಿರಬೇಕು, ವಯಸ್ಸು 45 ವರ್ಷಕ್ಕಿಂತ ಕಡಿಮೆ ಇರಬೇಕು.

ಒಂದು ವೇಳೆ ಈ ಮೇಲಿನ ಪೂರ್ವ ಪ್ರಾಥಮಿಕ ಶಿಕ್ಷಕರ ತರಬೇತಿ ಪಡೆದ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಪಿ.ಯು.ಸಿ.ಯಲ್ಲಿ ಕನಿಷ್ಠ ಶೇ.50 ಅಂಕಗಳನ್ನು ಪಡೆಯುವುದರ ಜತೆಗೆ NCTE ಮಾನ್ಯತೆ ಪಡೆದ ಸಂಸ್ಥೆಯಿಂದ ಡಿ.ಎಡ್ ತರಬೇತಿ ಹೊಂದಿರುವ 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಭ್ಯರ್ಥಿಗಳನ್ನು ಪರಿಗಣಿಸತಕ್ಕದ್ದು.

ಆಯಾಗಳ ಹುದ್ದೆಗೆ ಅರ್ಹತೆ:

  1. ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು ಕಡ್ಡಾಯವಾಗಿ ಮಹಿಳೆಯಾಗಿರಬೇಕು, ವಯಸ್ಸು 45 ವರ್ಷಕ್ಕಿಂತ ಕಡಿಮೆ ಇರಬೇಕು ಮತ್ತು ಸ್ಥಳಿಯರಾಗಿರಬೇಕು (ಆಯಾ ಗ್ರಾಮ/ವಾರ್ಡ್ ವ್ಯಾಪ್ತಿಯವರು), ಒಂದು ವೇಳೆ ಸ್ಥಳಿಯವಾಗಿ ಯಾವುದೇ ಅಭ್ಯರ್ಥಿ ಲಭ್ಯವಿಲ್ಲದೇ ಇದ್ದಲ್ಲಿ ಸರ್ಕಾರಿ ಶಾಲೆ ಇರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದವರನ್ನು/ಪಕ್ಕದ ವಾರ್ಡಿನವರನ್ನು ಪರಿಗಣಿಸತಕ್ಕದ್ದು.

ಶಿಕ್ಷಕರ/ಆಯಾರ ಆಯ್ಕೆಯಲ್ಲಿ ಅನುಸರಿಸಬೇಕಾದ ಮಾನದಂಡಗಳು

  1. a) ಶಿಕ್ಷಕರ/ಆಯಾರ ಆಯ್ಕೆ ಸಮಿತಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಇರುವ ಮುಖ್ಯ ಶಿಕ್ಷಕರು, ಪ್ರಾಥಮಿಕ ವಿಭಾಗದ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಒಬ್ಬ ಹಿರಿಯ ಸಹ ಶಿಕ್ಷಕ / ಶಿಕ್ಷಕಿ ಸದಸ್ಯರಾಗಿರತಕ್ಕದ್ದು.
    B)ಶಿಕ್ಷಕರ ಆಯ್ಕೆಗೆ ವಿವಿಧ ಅಂಶಗಳಿಗೆ ನೀಡಬೇಕಾದ ಮೌಲ್ಯ (weightage): ಅರ್ಹ ಅಭ್ಯರ್ಥಿಗಳ ಪೈಕಿ ನಿಗದಿತ ಮಾನದಂಡದಂತೆ ಅತೀ ಹೆಚ್ಚು ಒಟ್ಟು ಅಂಕಗಳಿಸಿದವರನ್ನು ಪರಿಗಣಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.


    Continue Reading

    ಕರ್ನಾಟಕ

    7th Pay Commission: ಸರ್ಕಾರಿ ನೌಕರರ ಸಂಬಳ 27% ಹೆಚ್ಚಿಸಿದರೆ ಒಟ್ಟು ಏರಿಕೆ ಎಷ್ಟಾಗಲಿದೆ? ಇಲ್ಲಿದೆ ಲೆಕ್ಕಾಚಾರ

    7th Pay Commission: 7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರಿಗೆ ಆಗಬಹುದಾದ ವೇತನ ರಚನೆ ಮತ್ತು ವೇತನ ವ್ಯತ್ಯಾಸದ ಮಾಹಿತಿ ಲಭ್ಯವಾಗಿದ್ದು, ಯಾರಿಗೆ ಎಷ್ಟು ವೇತನ ಹೆಚ್ಚಳವಾಗಲಿದೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

    VISTARANEWS.COM


    on

    7th Pay Commission
    Koo

    ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ (Government Employees) 7ನೇ ವೇತನ ಆಯೋಗದ (7th Pay Commission) ಶಿಫಾರಸಿನಂತೆ ಶೇ.27ರಷ್ಟು ವೇತನ ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಒಲವು ತೋರಿದ್ದಾರೆ. ಗುರುವಾರ (ಜೂನ್‌ 20) ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರ ಸಲಹೆಯನ್ನೂ ಮೀರಿ ವೇತನ ಹೆಚ್ಚಳ ಮಾಡಲು ಸಿದ್ದರಾಮಯ್ಯ ಅವರು ಒಲವು ತೋರಿದ್ದಾರೆ. ವೇತನ ಆಯೋಗದ ಶಿಫಾರಸುಗಳನ್ನು ಪೂರ್ಣಗೊಳಿಸುವ ಮಾತನ್ನಾಡಿರುವ ಸಿಎಂ ಸಿದ್ದರಾಮಯ್ಯ, 27%ರಷ್ಟು ವೇತನ ಹೆಚ್ಚಳ ಮಾಡಲು ಸೈ ಎಂದಿದ್ದಾರೆ. ನೌಕರರು ನಿರೀಕ್ಷೆ ಮಾಡಿದ ಹೆಚ್ಚಳ ಜಾರಿಯಾಗುವ ಸಾಧ್ಯತೆಯಿದ್ದು, ಅಂತಿಮ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಸಂಪುಟ ಸಭೆ ಸಿಎಂಗೆ ಬಿಟ್ಟಿದೆ. ಹಾಗಾಗಿ, ಸಿದ್ದರಾಮಯ್ಯ ಅವರು ಶೀಘ್ರದಲ್ಲೇ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.

    ವೇತನ ಹೆಚ್ಚಳದ ಕುರಿತು ಮಾಜಿ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ ರಾವ್ ನೇತೃತ್ವದ ಏಳನೇ ವೇತನ ಆಯೋಗ ಮಾರ್ಚ್ 16ರಂದು ಅಂತಿಮ ವರದಿ ಸಲ್ಲಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂತಿಮ ವರದಿ ಸಲ್ಲಿಸಿದ್ದ ಆಯೋಗ, ಕರ್ನಾಟಕ ಸರ್ಕಾರಿ ನೌಕರರಿಗೆ 27.5% ವೇತನವನ್ನು ಹೆಚ್ಚಿಸಲು ಶಿಫಾರಸು ಮಾಡಿತ್ತು. ಈಗ ಮುಖ್ಯಮಂತ್ರಿ ಅವರು ವೇತನ ಹೆಚ್ಚಿಸಲು ಒಲವು ತೋರಿರುವ ಕಾರಣ ನೌಕರರ ನಿರೀಕ್ಷೆ, ಕುತೂಹಲ ಜಾಸ್ತಿಯಾಗಿದೆ. ಹಾಗಾದರೆ, ಶೇ.27ರಷ್ಟು ವೇತನ ಜಾಸ್ತಿಯಾದರೆ ನೌಕರರ ವೇತನ ಎಷ್ಟು ಹೆಚ್ಚಳವಾಗಲಿದೆ ಎಂಬುದರ ಮಾಹಿತಿ ಇಲ್ಲಿದೆ.

    Reservation in outsourcing

    ಎ ವಲಯದಲ್ಲಿ ಕರ್ತವ್ಯ ನಿರ್ವಹಿಸುವ ಸಿ ಮತ್ತು ಡಿ ದರ್ಜೆ ನೌಕರರಿಗೆ 2022ರ ಜುಲೈ 1ರಂದು ಮೂಲ ವೇತನ 17,000 ರೂ. ಇದ್ದರೆ, ತುಟ್ಟಿಭತ್ಯೆ ಶೇ. 31 (5,270 ರೂ.) ಹಾಗೂ ಶೇ.27.50 (4,675 ರೂ. ) ಫಿಟ್ಮೆಂಟ್‌ ಸೇರಿ ಒಟ್ಟು 26,945 ಸಿಗುತ್ತಿತ್ತು. ಇನ್ನು 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಮೂಲ ವೇತನ 27,000 ಇದ್ದರೆ, ಅಂದಾಜು ತುಟ್ಟಿ ಭತ್ಯೆ ಶೇ.8.5 (2295 ರೂ), ಮನೆ ಬಾಡಿಗೆ ಭತ್ಯೆ ಶೇ.20 (5,400 ರೂ.), ವೈದ್ಯಕೀಯ 500, ನಗರ ಪರಿಹಾರ ಭತ್ಯೆ (ಸಿಸಿಎ) 750 ರೂ. ಸೇರಿ ಒಟ್ಟು 35,945 (01-01-2024ಕ್ಕೆ) ರೂ. ಸಿಗಲಿದೆ. 6ನೇ ವೇತನ ಆಯೋಗದಲ್ಲಾದರೆ ಒಟ್ಟು 29,005 ರೂ. ಸಿಗುತ್ತಿತ್ತು. ಪರಿಷ್ಕೃತ ವೇತನದಲ್ಲಿ 6940 ರೂ. ಹೆಚ್ಚಳವಾಗಲಿದೆ.

    ಅದೇ ರೀತಿ ಎ ವಲಯದಲ್ಲಿ ಕಾರ್ಯ ನಿರ್ವಹಿಸುವ ಎ ಮತ್ತು ಬಿ ದರ್ಜೆ ನೌಕರರಿಗೆ 2022ರ ಜುಲೈ 1ರಂದು 17,000 ರೂ. ವೇತನ ಇದ್ದರೆ, ಶೇ. 31 ತುಟ್ಟಿ ಭತ್ಯೆ (5270 ರೂ.), ಫಿಟ್ಮೆಂಟ್‌ ಶೇ.27.50 (4675 ರೂ.) ಸೇರಿ ಒಟ್ಟು 26945 ರೂ ವೇತನ ಸಿಗುತ್ತಿತ್ತು. ಆದರೆ, 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಮೂಲ ವೇತನ 27000 ಇದ್ದರೆ, ತುಟ್ಟಿ ಭತ್ಯೆ ಶೇ.8.5 (2298 ರೂ.), ಮನೆ ಬಾಡಿಗೆ ಭತ್ಯೆ ಶೇ.20 (5400 ರೂ.), ನಗರ ಪರಿಹಾರ ಭತ್ಯೆ(ಸಿಸಿಎ) 900 ಸೇರಿ ಒಟ್ಟು 35,595 ವೇತನ ಸಿಗಲಿದೆ. ಇದು 6ನೇ ವೇತನ ಆಯೋಗದ ಅವಧಿಯಲ್ಲಿ 27,545 ರೂ. ಆಗಿದೆ. ಪರಿಷ್ಕೃತ ವೇತನದಲ್ಲಿ 8,050 ರೂ. ಹೆಚ್ಚಳವಾಗಲಿದೆ.

    ವೇತನ ರಚನೆ ಮತ್ತು ವ್ಯತ್ಯಾಸದ ಪಟ್ಟಿ ಇಲ್ಲಿದೆ

    ಇದನ್ನೂ ಓದಿ: CM Siddaramaiah: ಸರ್ಕಾರಿ ನೌಕರರಿಗೆ ಬಂಪರ್‌ ಸುದ್ದಿ: 27% ವೇತನ ಹೆಚ್ಚಳಕ್ಕೆ ಮುಂದಾದ ಸಿಎಂ

    Continue Reading
    Advertisement
    Surrogacy Leaves
    ಪ್ರಮುಖ ಸುದ್ದಿ16 mins ago

    Surrogacy Leaves: ಬಾಡಿಗೆ ತಾಯ್ತನದ ನಿಯಮ ಬದಲಿಸಿದ ಕೇಂದ್ರ; ಇನ್ನು ಸಿಗಲಿದೆ 6 ತಿಂಗಳು ರಜೆ!

    T20 world Cup 2024
    ಕ್ರೀಡೆ52 mins ago

    T20 World Cup 2024 : ಇಂಗ್ಲೆಂಡ್ ವಿರುದ್ಧ ಯುಎಸ್​​ಎ ತಂಡಕ್ಕೆ 10 ವಿಕೆಟ್​ ಹೀನಾಯ ಸೋಲು

    SBI
    ದೇಶ1 hour ago

    SBI: ನಿಮ್ಮೂರಿಗೂ ಬರಲಿದೆ ಎಸ್‌ಬಿಐ ಹೊಸ ಬ್ರ್ಯಾಂಚ್;‌ 400 ಶಾಖೆ ತೆರೆಯಲು ಬ್ಯಾಂಕ್‌ ನಿರ್ಧಾರ

    IND vs SA
    ಪ್ರಮುಖ ಸುದ್ದಿ1 hour ago

    IND VS SA : ದಕ್ಷಿಣ ಆಫ್ರಿಕಾ ವಿರುದ್ಧ 3-0 ಕ್ಲೀನ್ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರ ಕ್ರಿಕೆಟ್ ತಂಡ

    T20 world cup 2024
    ಪ್ರಮುಖ ಸುದ್ದಿ2 hours ago

    T20 World Cup 2024 : ಅಮೆರಿಕ ವಿರುದ್ಧವೂ ಸೋತ್ರಲ್ಲೋ… ಪಾಕ್​ ಪಾರ್ಲಿಮೆಂಟ್​ನಲ್ಲೂ ವಿಶ್ವ ಕಪ್ ಸೋಲಿನ ಚರ್ಚೆ!

    Rahul Gandhi
    ದೇಶ2 hours ago

    Rahul Gandhi: ಎಲ್ಲರೂ ಬೈಯುವಾಗ ನೀವು ಪ್ರೀತಿ ಕೊಟ್ರಿ; ವಯನಾಡು ಜನತೆಗೆ ರಾಹುಲ್‌ ಗಾಂಧಿ ಭಾವುಕ ಪತ್ರ

    Babar Azam
    ಪ್ರಮುಖ ಸುದ್ದಿ3 hours ago

    Babar Azam: ಮ್ಯಾಚ್​ ಫಿಕ್ಸಿಂಗ್ ಆರೋಪ ಮಾಡಿದವನ ಮೇಲೆ 1 ಕೋಟಿ ರೂ. ಮಾನನಷ್ಠ ಮೊಕದ್ದಮೆ ಹೂಡಿದ ಬಾಬರ್ ಅಜಮ್​

    Abbi Falls
    ಕರ್ನಾಟಕ3 hours ago

    Abbi Falls: ಅಬ್ಬಿ ಫಾಲ್ಸ್ ಬಳಿ ಸೆಲ್ಫಿ ಕ್ರೇಜ್‌ಗೆ ಯುವಕ ಬಲಿ; ಕೊಡಗಿನಲ್ಲಿ ಮತ್ತೆ ಪ್ರವಾಸಿಗರ ಮೇಲೆ ಹಲ್ಲೆ

    Shakib Al Hasan
    ಪ್ರಮುಖ ಸುದ್ದಿ3 hours ago

    Shakib Al Hasan : ನಿವೃತ್ತಿಯಾಗು ಶಕಿಬ್…, ಬಾಂಗ್ಲಾ ಮಾಜಿ ನಾಯಕನ ಮೇಲೆ ಮತ್ತೆ ಗುಡುಗಿದ ಸೆಹ್ವಾಗ್​

    Vashu Bhagnani
    ಸಿನಿಮಾ3 hours ago

    Vashu Bhagnani: ‘ಬೆಲ್ ಬಾಟಮ್’ ಚಿತ್ರದ ನಿರ್ಮಾಪಕ ದಿವಾಳಿ; ಕಚೇರಿ ಕಟ್ಟಡ ಸೇಲ್!

    Sharmitha Gowda in bikini
    ಕಿರುತೆರೆ9 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ8 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ8 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ7 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ9 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ8 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ6 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ7 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    karnataka weather Forecast
    ಮಳೆ2 days ago

    Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

    International Yoga Day 2024
    ಕರ್ನಾಟಕ2 days ago

    International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

    Karnataka Weather Forecast
    ಮಳೆ3 days ago

    Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

    Actor Darshan
    ಮೈಸೂರು6 days ago

    Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

    Bakrid 2024
    ಬೆಂಗಳೂರು6 days ago

    Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

    Renukaswamy murder case The location of the accused is complete
    ಸಿನಿಮಾ1 week ago

    Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

    Renuka swamy murder
    ಚಿತ್ರದುರ್ಗ1 week ago

    Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

    Vijayanagara News
    ವಿಜಯನಗರ1 week ago

    Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

    Actor Darshan
    ಯಾದಗಿರಿ1 week ago

    Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

    Karnataka Weather Forecast
    ಮಳೆ1 week ago

    Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

    ಟ್ರೆಂಡಿಂಗ್‌