KSET- 2024: ಕೆಸೆಟ್‌ 2024ಕ್ಕೆ ಅರ್ಜಿ ಆಹ್ವಾನ; ಪರೀಕ್ಷೆ ದಿನಾಂಕ, ಶುಲ್ಕ, ಅರ್ಹತೆಯ ಸಂಪೂರ್ಣ ಮಾಹಿತಿ ಇಲ್ಲಿದೆ - Vistara News

ನೌಕರರ ಕಾರ್ನರ್

KSET- 2024: ಕೆಸೆಟ್‌ 2024ಕ್ಕೆ ಅರ್ಜಿ ಆಹ್ವಾನ; ಪರೀಕ್ಷೆ ದಿನಾಂಕ, ಶುಲ್ಕ, ಅರ್ಹತೆಯ ಸಂಪೂರ್ಣ ಮಾಹಿತಿ ಇಲ್ಲಿದೆ

KSET- 2024: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್) – 2024ಕ್ಕೆ ಜುಲೈ 22ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್‌ 24ರಂದು ಕೆಸೆಟ್‌ ಪರೀಕ್ಷೆ ನಡೆಯಲಿದೆ.

VISTARANEWS.COM


on

KSET-2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್) – 2024ಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ರಾಜ್ಯ ಸರ್ಕಾರದ ನಿರ್ದೇಶನದಂತೆ ನವೆಂಬರ್‌ 24ರಂದು ಕೆಸೆಟ್‌ ಪರೀಕ್ಷೆ (KSET- 2024) ನಡೆಸುವುದಾಗಿ ಕೆಇಎ ತಿಳಿಸಿದೆ.

ಅಭ್ಯರ್ಥಿಗಳು ಕೆಸೆಟ್-2024ಕ್ಕೆ ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಯುಜಿಸಿಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದ ಅರ್ಹ ಅಭ್ಯರ್ಥಿಗಳು KEA ವೆಬ್ ಸೈಟ್ http://kea.kar.nic.in ಅನ್ನು ಪ್ರವೇಶಿಸುವ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಕೆಸೆಟ್ (KSET) 2024ರ ಪರೀಕ್ಷೆಯನ್ನು 41 ವಿಷಯಗಳಲ್ಲಿ ನಡೆಸಲಾಗುತ್ತಿದ್ದು, ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು, ಕರ್ನಾಟಕ ರಾಜ್ಯದ ಯಾವುದೇ ವಿಶ್ವವಿದ್ಯಾನಿಲಯ, ಪ್ರಥಮ ದರ್ಜೆ ಪದವಿ ಕಾಲೇಜು, ಉನ್ನತ ಶಿಕ್ಷಣ ಸಂಸ್ಥೆ (ಸರ್ಕಾರಿ, ಅನುದಾನಿತ ಮತ್ತು ಖಾಸಗಿ) ಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ.

ಕೆಸೆಟ್-2024 ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ

1) ಅಧಿಸೂಚನೆ ಹೊರಡಿಸಿದ ದಿನಾಂಕ: ಜುಲೈ 13
2) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ: ಜುಲೈ 22
3) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್‌ 22
4) ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಆಗಸ್ಟ್‌ 26
5) ಪರೀಕ್ಷಾ ದಿನಾಂಕ- ನವೆಂಬರ್‌ 24

ವಯೋಮಿತಿ:

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ತೆಗೆದುಕೊಳ್ಳಲು ಗರಿಷ್ಠ ವಯೋಮಿತಿ ಇರುವುದಿಲ್ಲ.

ಇದನ್ನೂ ಓದಿ | Job Alert: 2000 ಲೈನ್‌ಮೆನ್‌ಗಳ ನೇಮಕಕ್ಕೆ 15 ದಿನಗಳಲ್ಲಿ ಅಧಿಸೂಚನೆ; ಸಚಿವ ಕೆ.ಜೆ. ಜಾರ್ಜ್‌ ಘೋಷಣೆ

ಪರೀಕ್ಷಾ ಶುಲ್ಕ, ಪಾವತಿಸುವ ವಿಧಾನ

1) ಪರೀಕ್ಷಾ ಶುಲ್ಕ :
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಹಾಗೂ ಇತರೆ ರಾಜ್ಯದ ಅಭ್ಯರ್ಥಿಗಳಿಗೆ: 1,000 ರೂ.
ಪ್ರವರ್ಗ-I, ಎಸ್‌ಸಿ, ಎಸ್‌ಟಿ, ವಿಶೇಷಚೇತನರು, ಮತ್ತು ತೃತೀಯ ಲಿಂಗ ಅಭ್ಯರ್ಥಿಗಳಿಗೆ: 700 ರೂ.

2) ಶುಲ್ಕ ಪಾವತಿಸುವ ವಿಧಾನ:
ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಶುಲ್ಕ ವಿನಾಯಿತಿಯನ್ನು ವಿಶೇಷಚೇತನರಾದ ಪ್ರವರ್ಗ-I, ಎಸ್‌ಸಿ, ಎಸ್‌ಟಿ, ತೃತೀಯ ಲಿಂಗ ಅಭ್ಯರ್ಥಿಗಳಿಗೆ ನೀಡಲಾಗುತ್ತದೆ. (Medical Certificate with 40% or more disability )

ಪರೀಕ್ಷಾ ವಿಧಾನ, ಪರೀಕ್ಷಾ ದಿನಾಂಕ

ಕೆಸೆಟ್ (KSET) ಪರೀಕ್ಷೆಯಲ್ಲಿ ಎರಡು ಪ್ರಶ್ನೆಪತ್ರಿಕೆಗಳಿರುತ್ತವೆ. ಎರಡು ಪತ್ರಿಕೆಗಳು ಸಹ ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತವೆ. ಪರೀಕ್ಷೆಯು ನವೆಂಬರ್ 24 ರಂದು ಒಂದು ಅವಧಿಯಲ್ಲಿ ಈ ಕೆಳಕಂಡಂತೆ ನಡೆಯುವುದು.

ಪತ್ರಿಕೆ-1: 50 ಪ್ರಶ್ನೆ (100 ಅಂಕ)
ಪತ್ರಿಕೆ-2: 100 ಪ್ರಶ್ನೆ (200 ಅಂಕ)
(ಸಮಯ-ಬೆಳಗ್ಗೆ 10ರಿಂದ ಮ.1 ಗಂಟೆವರೆಗೆ)

ಫಲಿತಾಂಶ ಪ್ರಕಟಣೆಯ ವಿಧಾನ

ಯುಜಿಸಿ ಮಾರ್ಗಸೂಚಿಗಳ ಪ್ರಕಾರ KSETನ ಮಾನದಂಡವು UGC-NETನ ಮಾನದಂಡದ ಪ್ರಕಾರವಾಗಿರುತ್ತದೆ. ಸಹಾಯಕ ಪ್ರಾಧ್ಯಾಪಕರ ಅರ್ಹತೆಗಾಗಿ ಅಭ್ಯರ್ಥಿಗಳು ಪೇಪರ್-I ಮತ್ತು ಪೇಪರ್-II ರ ಪತ್ರಿಕೆಗಳ ಒಟ್ಟು ಅಂಕಗಳಲ್ಲಿ ಕೆಳಗೆ ನಿರ್ದಿಷ್ಟಪಡಿಸಿದ ಕನಿಷ್ಠ ಅಂಕಗಳನ್ನು ಪಡೆಯಬೇಕು.

ಸಾಮಾನ್ಯ ವರ್ಗ(GM): ಎರಡೂ ಪತ್ರಿಕೆಗಳಲ್ಲೂ ಸೇರಿ ಒಟ್ಟು ಶೇ. 40 ಅಂಕಗಳು
ಎಸ್‌ಸಿ. ಎಸ್‌ಟಿ, ಪ್ರವರ್ಗ-1, 2ಎ, 2ಬಿ, 3ಎ, 3ಬಿ, ವಿಶೇಷಚೇತನರು, ತೃತೀಯ ಲಿಂಗಿಗಳು: ಎರಡೂ ಪತ್ರಿಕೆಗಳಲ್ಲೂ ಸೇರಿ ಶೇ.35 ಅಂಕಗಳು

ಅರ್ಹತಾ ನಿಬಂಧನೆಗಳು

1) ಅಭ್ಯರ್ಥಿಗಳು ಯುಜಿಸಿಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯ, ಉನ್ನತ ಶಿಕ್ಷಣ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಅಥವಾ ಸಮಾನವಾದ ಪರೀಕ್ಷೆಗಳಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಶೇ.55% ರಷ್ಟು ಅಂಕಗಳನ್ನು (ಪೂರ್ಣಾಂಕಿತ ಗೊಳಿಸಿರಬಾರದು) ಪಡೆದಿರಬೇಕು. ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಇತರೆ ಹಿಂದುಳಿದ ಅಭ್ಯರ್ಥಿಗಳು (ಪ್ರವರ್ಗ-1, IIA, IIB, IIIA, IIIB), ವಿಕಲಚೇತನರು (PwD) ಮತ್ತು ತೃತೀಯ ಲಿಂಗ ಗುಂಪಿಗೆ ಸೇರಿದ ಅಭ್ಯರ್ಥಿಗಳು ಶೇ.50% ರಷ್ಟು (ಪೂರ್ಣಾಂಕಿತ ಗೊಳಿಸಿರಬಾರದು) ಅಂಕಗಳನ್ನು ಪಡೆದಿರಬೇಕು.

2) ಸ್ನಾತಕೋತ್ತರ ಪದವಿ ಪಡೆದವರು ಹಾಗೂ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ (ಪ್ರಥಮ ಮತ್ತು ದ್ವಿತೀಯ) ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಕೆಸೆಟ್ ಪರೀಕ್ಷೆಯನ್ನು ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ. ಆದರೆ, ಪ್ರಸ್ತುತ ವ್ಯಾಸಾಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ಪರೀಕ್ಷೆ ತೆಗೆದುಕೊಳ್ಳಲು ತಾತ್ಕಾಲಿಕವಾಗಿ ಮಾತ್ರ ಪ್ರದೇಶ ನೀಡಲಾಗುವುದು. ಅವರು ಸ್ನಾತಕೋತ್ತರ ಪದವಿ ಅಥವಾ ಸಮಾನವಾದ ಪರೀಕ್ಷೆಯನ್ನು, ಸಾಮಾನ್ಯ ವರ್ಗದವರು ಶೇ.55% ರಷ್ಟು ಹಾಗೂ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಪ್ರವರ್ಗ-I, IIA, IIB, IIIA, ಮತ್ತು IIIB, ವಿಕಲಚೇತನರು (PwD) ಮತ್ತು ತೃತೀಯ ಲಿಂಗದ ಅಭ್ಯರ್ಥಿಗಳು, ಶೇ. 50% ರಷ್ಟು ಅಂಕ ಪಡೆದು, ಅರ್ಹತೆ ಹೊಂದಿ ಕೆಸೆಟ್ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ ದಿನಾಂಕದಿಂದ ಎರಡು ವರ್ಷದೊಳಗಾಗಿ ಅವರ ಸ್ನಾತಕೋತ್ತರ ಪದವಿಯ ಅಂಕಪಟ್ಟಿಗಳನ್ನು ಸಲ್ಲಿಸಿದರೆ ಮಾತ್ರ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪ್ರಮಾಣ ಪತ್ರ ಪಡೆಯಬಹುದು. ಇಲ್ಲವಾದಲ್ಲಿ ಅಂತಹವರ ಅರ್ಹತೆ ರದ್ದಾಗುತ್ತದೆ.

3) ಸ್ನಾತಕೋತ್ತರ ಪದವಿಯಲ್ಲಿ ಅಧ್ಯಯನ ಮಾಡಿದ ವಿಷಯದಲ್ಲಿಯೇ ಅಭ್ಯರ್ಥಿಗಳು ಕೆಸೆಟ್ (KSET) ಪರೀಕ್ಷೆಯನ್ನು ತೆಗೆದುಕೊಳ್ಳಬೇಕು. ಪ್ರಸ್ತುತ ಕೆಸೆಟ್ ಪ್ರಕಟಣೆಯಲ್ಲಿ ಇಲ್ಲದಿರುವ ವಿಷಯಗಳಿಗೆ, ಅಭ್ಯರ್ಥಿಗಳು ವರ್ಷದಲ್ಲಿ ಎರಡು ಬಾರಿ ನಡೆಯುವ ಯು.ಜಿ.ಸಿ, ಎನ್.ಇ.ಟಿ. ಅಥವಾ ಯು.ಜಿ.ಸಿ-ಸಿ.ಎಸ್.ಐ.ಆರ್-ಎನ್.ಇ.ಟಿ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು.

4) 1991ರ ಸೆಪ್ಟೆಂಬರ್ 19ರೊಳಗೆ ಸ್ನಾತಕೋತ್ತರ ಪರೀಕ್ಷೆಯನ್ನು ಪೂರ್ಣಗೊಳಿಸಿ (ಫಲಿತಾಂಶ ಘೋಷಣೆಯ ದಿನಾಂಕವನ್ನು ಲೆಕ್ಕಿಸದೆ) ಹಾಗೂ ಪಿ.ಹೆಚ್.ಡಿ ಪದವಿ ಪಡೆದವರು ಕೆಸೆಟ್ ಪರೀಕ್ಷೆಯನ್ನು ತೆಗೆದುಕೊಳ್ಳಲು ಒಟ್ಟು ಅಂಕಗಳಲ್ಲಿ 5% ವಿನಾಯಿತಿ ಇರುತ್ತದೆ (55%ರ ಬದಲಾಗಿ 50%).

5) ಸಾಮಾನ್ಯ ವರ್ಗದ ಅಭ್ಯರ್ಥಿಗಳನ್ನು ಹೊರತುಪಡಿಸಿ, ಮೀಸಲಾತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯಲ್ಲೇ ಸ್ಪಷ್ಟವಾಗಿ ನಮೂದಿಸಿರಬೇಕು. SC, ST, CAT-1, IIA, IIB, IIIA, IIIB ಅಭ್ಯರ್ತಿಗಳು ಸಕ್ಷಮ ಪ್ರಾಧಿಕಾರಗಳು ನೀಡುವ ಪ್ರವರ್ಗ ಪ್ರಮಾಣಪತ್ರಗಳನ್ನು ಲಗತ್ತಿಸಬೇಕು. ಈ ಅಭ್ಯರ್ಥಿಗಳ ಪ್ರಮಾಣ ಪತ್ರಗಳು ಯಾವುದೇ ಹಂತದಲ್ಲಾದರೂ, ಸುಳ್ಳು ಎಂದು ಸಾಬೀತಾದರೆ ಅವರ ಆಭ್ಯರ್ಥಿತ್ವವನ್ನು ಮುನ್ಸೂಚನೆ ಇಲ್ಲದೆ ರದ್ದುಗೊಳಿಸಲಾಗುತ್ತದೆ ಮತ್ತು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.

6) ಹೊರರಾಜ್ಯದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಮೀಸಲಾತಿ ಇರುವುದಿಲ್ಲ. ಅವರು ಸ್ನಾತಕೋತ್ತರ ಪರೀಕ್ಷೆಯಲ್ಲಿ ನಿಗಧಿತ ಕನಿಷ್ಟ 55% ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿದ್ದಲ್ಲಿ ಮಾತ್ರ ಸಾಮಾನ್ಯ ವರ್ಗದಡಿಯಲ್ಲಿ ಪ್ರವೇಶಾತಿಗೆ ನೊಂದಾಯಿಸಬಹುದು. SC/ ST/OBC ಅರ್ಹತೆಯ ನಿಯಮವು ಕೇವಲ ಕರ್ನಾಟಕದ SC/ST/OBC ಅಭ್ಯರ್ಥಿಗಳಿಗೆ ಮಾತ್ರ ಅನ್ವಯವಾಗುತ್ತದೆ.

7) ಅಭ್ಯರ್ಥಿಗಳು ಮುಖ್ಯವಾಗಿ ಗಮನಿಸಬೇಕಾದ ಅಂಶವೇನೆಂದರೆ ಅವರ ಅಭ್ಯರ್ಥಿತನವು ತಾತ್ಕಾಲಿಕವೆಂದು ಭಾವಿಸಿಕೊಳ್ಳತಕ್ಕದ್ದು. ಪ್ರವೇಶಾತಿ ಪಡೆದ ಕಾರಣಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅವರನ್ನು ಅರ್ಹ ಅಭ್ಯರ್ಥಿಯಾಗಿ ಪರಿಗಣಿಸಿದೆ ಎಂದು ತಿಳಿಯಬಾರದು. ಅಭ್ಯರ್ಥಿಗಳ ಅರ್ಹತಾ ನಿಬಂಧನೆಗಳನ್ನು ಪರಿಶೀಲಿಸಿದ ನಂತರ ಅವರ ಅಭ್ಯರ್ಥಿತನವನ್ನು ಪರಿಗಣಿಸಲಾಗುವುದು.

8) ಈಗಾಗಲೇ ಕೆಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಮುಂಬರುವ ಕೆಸೆಟ್ ಪರೀಕ್ಷೆಗೆ ಆದೇ ವಿಷಯದಲ್ಲಿ (Same Subject) ಅರ್ಜಿ ಸಲ್ಲಿಸುವಂತಿಲ್ಲ. ಕೆಸೆಟ್ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಪುನಃ ಅರ್ಜಿ ಸಲ್ಲಿಸಿದ್ದು ಕಂಡು ಬಂದ ಪಕ್ಷದಲ್ಲಿ ಅಂತಹ ಅಭ್ಯರ್ಥಿಗಳ ಅರ್ಹತೆಯನ್ನು ರದ್ದುಗೊಳಿಸಲಾಗುವುದು ಹಾಗೂ ಅವರು ಹಿಂದೆ ಪಡೆದಿರುವ ಕೆಸೆಟ್ ಪರೀಕ್ಷೆಯ ಅರ್ಹತೆಯನ್ನು ಕೂಡ ಡಿನೋಟಿಫಿಕೇಷನ್ ಮೂಲಕ ಹಿಂಪಡೆಯಲಾಗುವುದು.

9) ಭಾರತೀಯ ವಿಶ್ವವಿದ್ಯಾಲಯ / ಸಂಸ್ಥೆ ನೀಡುವ ಎರಡು ವರ್ಷದ ಸ್ನಾತಕೋತ್ತರ ಡಿಪ್ಲೊಮಾ / ಪ್ರಮಾಣಪತ್ರ ಅಥವಾ ವಿದೇಶಿ ವಿಶ್ವವಿದ್ಯಾಲಯ / ಸಂಸ್ಥೆ ನೀಡುವ ವಿದೇಶಿ ಪದವಿ / ಡಿಪ್ಲೊಮಾ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳು ತಮ್ಮ ಹಿತದೃಷ್ಟಿಯಿಂದ, ಮಾನ್ಯತೆ ಪಡೆದ ಭಾರತೀಯ ಸ್ನಾತಕೋತ್ತರ ಪದವಿಯೊಂದಿಗೆ ತಮ್ಮ ಡಿಪ್ಲೊಮಾ/ ಪದವಿ/ ಪ್ರಮಾಣಪತ್ರದ ಸಮಾನತೆಯನ್ನು (ಅಸೋಸಿಯೇಷನ್ ಆಫ್ ಇಂಡಿಯನ್ ಯೂನಿವರ್ಸಿಟೀಸ್ (ಎಐಯು) ನವದೆಹಲಿ) ಯಿಂದ ಖಚಿತಪಡಿಸಿಕೊಳ್ಳಬೇಕು.

ವಿನಾಯಿತಿ:

ಕರ್ನಾಟಕ ರಾಜ್ಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ, ವಿಶ್ವವಿದ್ಯಾನಿಲಯ / ಪ್ರಥಮ ದರ್ಜೆ ಕಾಲೇಜುಗಳು / ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ (ಸರ್ಕಾರಿ / ಅನುದಾನಿತ / ಖಾಸಗಿ) ನೇಮಕವಾಗಬೇಕಾದರೆ, ಆಭ್ಯರ್ಥಿಗಳು ಕಡ್ಡಾಯವಾಗಿ ಕೆಸೆಟ್ ಅಥವಾ ಎನ್.ಇ.ಟಿ ಪರೀಕ್ಷೆಯಲ್ಲಿ ಆರ್ಹತೆ ಪಡೆದಿರಬೇಕೆಂಬ ನಿಯಮವಿದೆ.

ಅ) ಯು.ಜಿ.ಸಿ ಕಾಲಕಾಲಕ್ಕೆ ಹೊರಡಿಸುವ ನಿಬಂಧನೆಗಳು, ಯು.ಜಿ.ಸಿ ಮಾರ್ಗಸೂಚಿಗಳು ಮತ್ತು ಅಧಿನಿಯಮಗಳ ಅನ್ವಯ ಕೆಸೆಟ್ ಅರ್ಹತೆ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುವುದು.

ಆ) ಅಭ್ಯರ್ಥಿಯು 1989 ಕ್ಕಿಂತ ಮುಂಚಿತವಾಗಿ ಯು.ಜಿ.ಸಿ-ನೆಟ್ / ಸಿ.ಎಸ್.ಐ.ಆರ್-ನೆಟ್, ಜೆ.ಆರ್.ಎಫ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಲ್ಲಿ ಅಂತಹವರಿಗೆ ಕೆಸೆಟ್ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ.

ಇದನ್ನೂ ಓದಿ | Job Alert: ಪದವೀಧರರಿಗೆ ಗುಡ್‌ನ್ಯೂಸ್‌; SCDCC ಬ್ಯಾಂಕ್‌ನಲ್ಲಿದೆ 123 ಹುದ್ದೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಇ) ಕೆಸೆಟ್ ಅಭ್ಯರ್ಥಿಗಳಿಗೆ 1ನೇ ಜೂನ್ 2002ಕ್ಕಿಂತ ಮೊದಲೇ ನಡೆಸಲಾದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದ ಅಭ್ಯರ್ಥಿಗಳಿಗೂ ಕೆಸೆಟ್ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುತ್ತದೆ. ಅಂತಹ ಅಭ್ಯರ್ಥಿಗಳು ಭಾರತದಲ್ಲಿ ಎಲ್ಲಿಯಾದರೂ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹರಾಗುತ್ತಾರೆ. ಆದರೆ 1ನೇ ಜೂನ್ 2002ರ ನಂತರ ಕೆಸೆಟ್‌ನಲ್ಲಿ ಅರ್ಹರಾದ ಅಭ್ಯರ್ಥಿಗಳು ಆಯಾ ರಾಜ್ಯಗಳ ವಿಶ್ವವಿದ್ಯಾನಿಲಯಗಳು / ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮಾತ್ರ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹರಾಗಿರುತ್ತಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

7th Pay Commission: ವೇತನ ಏರಿಕೆಗೆ ಒಪ್ಪಿಗೆ; ಒಪಿಎಸ್, ಆರೋಗ್ಯ ಯೋಜನೆ ಬೇಡಿಕೆ ಬಾಕಿ; ನೌಕರರ ಸಂಘದ ಮುಂದಿನ ನಿರ್ಧಾರ ಏನು?

7th Pay Commission: ಏಳನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ಹಳೇ ಪಿಂಚಣಿ ಯೋಜನೆ, ಆರೋಗ್ಯ ಯೋಜನೆ ಸೇರಿ ಇತರ ಬೇಡಿಕೆಗಳ ಈಡೇರಿಕೆಗಾಗಿ ನೌಕರರ ಸಂಘವು ಜುಲೈ 23ರಂದು ಪ್ರಮುಖ ಸಭೆ ನಡೆಸಲು ತೀರ್ಮಾನಿಸಿದೆ. ಸಭೆಯಲ್ಲಿ ಚರ್ಚಿಸಿದ ಬಳಿಕ ಉಳಿದ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತದೆ ಎಂದು ತಿಳಿದುಬಂದಿದೆ.

VISTARANEWS.COM


on

7th Pay Commission
Koo

ಬೆಂಗಳೂರು: ಕರ್ನಾಟಕದಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ (7th Pay Commission) ರಾಜ್ಯ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಪ್ರಸಕ್ತ ವರ್ಷದ ಆಗಸ್ಟ್‌ 1ರಿಂದಲೇ ಶಿಫಾರಸುಗಳು ಜಾರಿಗೆ ಬರಲಿವೆ. ಇದರಿಂದ ಲಕ್ಷಾಂತರ ನೌಕರರ (Karnataka Government Employees) ವೇತನವು ಶೇ.27.5ರಷ್ಟು ಏರಿಕೆಯಾಗಲಿದೆ. ಇನ್ನು, ರಾಜ್ಯ ಸರ್ಕಾರವು ಆಯೋಗದ ಶಿಫಾರಸುಗಳ ಜಾರಿ ಕುರಿತು ಸರ್ಕಾರದ ತೀರ್ಮಾನವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಸ್ವಾಗತಿಸಿದೆ. ಇದರ ಬೆನ್ನಲ್ಲೇ, ಹಳೇ ಪಿಂಚಣಿ ಯೋಜನೆ (ಒಪಿಎಸ್)‌, ಆರೋಗ್ಯ ಯೋಜನೆ ಬೇಡಿಕೆಗಳ ಈಡೇರಿಕೆಗೆ ಸಂಘವು ಒತ್ತಾಯಿಸಿದೆ.

ರಾಜ್ಯ ಸರ್ಕಾರದ ತೀರ್ಮಾನದ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. “ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾದ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿರುವುದು ಸಮಾಧಾನಕರ ಸಂಗತಿಯಾಗಿದೆ. ಇದಕ್ಕಾಗಿ ನೌಕರರ ಸಂಘ ಸೇರಿ ಎಲ್ಲ ಸಂಘಗಳು ಹಾಗೂ ನೌಕರರ ಪರವಾಗಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ” ಎಂದು ತಿಳಿಸಿದರು.

ಜುಲೈ 23ರಂದು ಪ್ರಮುಖ ಸಭೆ

ಏಳನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ಇತರ ಬೇಡಿಕೆಗಳ ಈಡೇರಿಕೆಗಾಗಿ ನೌಕರರ ಸಂಘವು ಜುಲೈ 23ರಂದು ಪ್ರಮುಖ ಸಭೆ ನಡೆಸಲು ತೀರ್ಮಾನಿಸಿದೆ. “ಹಳೇ ಪಿಂಚಣಿ ಯೋಜನೆ, ನೌಕರರಿಗೆ ಆರೋಗ್ಯ ಯೋಜನೆ ಸೇರಿ ಹಲವು ಬೇಡಿಕೆಗಳ ಈಡೇರಿಕೆ ಬಾಕಿ ಇದೆ. ಇಷ್ಟೆಲ್ಲ ವಿಚಾರಗಳ ಕುರಿತು ಚರ್ಚಿಸಲು ರಾಜ್ಯದ ಸರ್ಕಾರಿ ನೌಕರರ ಸಂಘಗಳ ಎಲ್ಲ ವೃಂದಗಳು, ರಾಜ್ಯ ಕೇಡರ್‌ ಅಸೋಸಿಯೇಷನ್‌ ಹಾಗೂ ಎಕ್ಸಿಕ್ಯೂಟಿವ್‌ ಸಭೆಯನ್ನು ಜುಲೈ 23ರಂದು ಕರೆಯಲಾಗಿದೆ. ಸಭೆಯಲ್ಲಿ ಎಲ್ಲ ವಿಷಯಗಳ ಕುರಿತು ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದು ಸಿ.ಎಸ್.ಷಡಾಕ್ಷರಿ ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಇತರ ಬೇಡಿಕೆಗಳು

1) ಎನ್.ಪಿ.ಎಸ್. ರದ್ದುಪಡಿಸಿ ಹಳೇ ಪಿಂಚಣೆ ಯೋಜನೆಯನ್ನು ಮರು ಜಾರಿಗೊಳಿಸುವುದು: ರಾಜ್ಯದ ಎನ್.ಪಿ.ಎಸ್. ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್. ನೌಕರರನ್ನು ಓ.ಪಿ.ಎಸ್. ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿ. ಈಗಾಗಲೇ ಪಂಜಾಬ್, ರಾಜಸ್ಥಾನ, ಚತ್ತೀಸ್‌ ಘಡ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುವಂತೆ ಹಾಗೂ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್.
ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು.

2) ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವುದು: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ” (ಕೆ.ಎ.ಎಸ್.ಎಸ್)ಯನ್ನು ಜಾರಿಗೆ ತರಲು ಈ ಹಿಂದಿನ ರಾಜ್ಯ ಸರ್ಕಾರವು 2021-22ರ ಆಯವ್ಯದಲ್ಲಿ ಘೋಷಿಸಿತ್ತು. ಈಗಾಗಲೇ ಸಚಿವ ಸಂಪುಟದ ಅನುಮೋದನೆ ಪಡೆದು ದಿನಾಂಕ: 05-09-2022 ರಂದು ಸರ್ಕಾರಿ ಆದೇಶ ಹೊರಡಿಸಿರುತ್ತದೆ. ಈ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ವೇತನದಿಂದ ಪ್ರತಿ ತಿಂಗಳು ವೃಂದವಾರು ವಂತಿಗೆ ಕಟಾವಣೆಯಾಗಲಿದ್ದು, ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುವುದಿಲ್ಲ. ಯೋಜನೆಯ ಅನುಷ್ಟಾನಾಧಿಕಾರಿಗಳು ತಾಂತ್ರಿಕ ಹಾಗೂ ಇನ್ನಿತರೆ ಕಾರಣಗಳನ್ನು ನೀಡಿ ಈ ಯೋಜನೆಯನ್ನು ಜಾರಿಗೊಳಿಸಲು ಅನಗತ್ಯ ವಿಳಂಬ ಮಾಡುತ್ತಿದ್ದು, ಚಿಕಿತ್ಸೆ ಪಡೆಯಲು ನೌಕರರಿಗೆ ಆರ್ಥಿಕ ಹೊರೆಯಾಗುತ್ತಿರುವುದರಿಂದ ಶೀಘ್ರವಾಗಿ ಈ ಯೋಜನೆಯನ್ನು ಲೋಕಾರ್ಪಣೆ ಮಾಡುವುದು.

ಇದನ್ನೂ ಓದಿ: 7th Pay Commission: 7ನೇ ವೇತನ ಆಯೋಗ ಜಾರಿ; ನೌಕರರ ಸಂಬಳ ಎಷ್ಟು ಹೆಚ್ಚಾಗಲಿದೆ? ಇಲ್ಲಿದೆ ಪಟ್ಟಿ

Continue Reading

ಕರ್ನಾಟಕ

7th Pay Commission: 7ನೇ ವೇತನ ಆಯೋಗ ಜಾರಿ; ನೌಕರರ ಸಂಬಳ ಎಷ್ಟು ಹೆಚ್ಚಾಗಲಿದೆ? ಇಲ್ಲಿದೆ ಪಟ್ಟಿ

7th Pay Commission: ಕರ್ನಾಟಕದಲ್ಲಿ ಏಳನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ. ಇದರಿಂದ ರಾಜ್ಯದ ಲಕ್ಷಾಂತರ ನೌಕರರ ಸಂಬಳವು ಹೆಚ್ಚಾಗಲಿದೆ. ಹಾಗಾದರೆ, ಏಳನೇ ವೇತನ ಆಯೋಗದ ಅನ್ವಯ ನೌಕರರ ಸಂಬಳ ಎಷ್ಟು ಹೆಚ್ಚಾಗಲಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

7th Pay Commission
Koo

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ (Karnataka Government Employees) ಬಹುದಿನಗಳ ಕನಸು ನನಸಾಗಿದೆ. ನೌಕರರ ಬೇಡಿಕೆಯಂತೆ ರಾಜ್ಯದಲ್ಲಿ ಏಳನೇ ವೇತನ ಆಯೋಗದ ಶಿಫಾರಸುಗಳ (7th Pay Commission) ಜಾರಿಗೆ ರಾಜ್ಯ ಸರ್ಕಾರವು (Karnataka Government) ತೀರ್ಮಾನ ತೆಗೆದುಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಆಗಸ್ಟ್‌ 1ರಿಂದಲೇ 7ನೇ ವೇತನ ಆಯೋಗದ ಶಿಫಾರಸುಗಳು ಜಾರಿಗೆ ಬರಲಿವೆ.

ವೇತನ ಹೆಚ್ಚಳದ ಕುರಿತು ಮಾಜಿ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ ರಾವ್ ನೇತೃತ್ವದ ಏಳನೇ ವೇತನ ಆಯೋಗ ಮಾರ್ಚ್ 16ರಂದು ಅಂತಿಮ ವರದಿ ಸಲ್ಲಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂತಿಮ ವರದಿ ಸಲ್ಲಿಸಿದ್ದ ಆಯೋಗ, ಕರ್ನಾಟಕ ಸರ್ಕಾರಿ ನೌಕರರಿಗೆ 27.5% ವೇತನವನ್ನು ಹೆಚ್ಚಿಸಲು ಶಿಫಾರಸು ಮಾಡಿತ್ತು. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ನೌಕರರ ಸಂಬಳವನ್ನು ಶೇ.17ರಷ್ಟು ಹೆಚ್ಚಳ ಮಾಡಿದ್ದರು. ಈಗ ಏಳನೇ ವೇತನ ಆಯೋಗದ ಶಿಫಾರಸಿನಂತೆ ಇನ್ನೂ ಶೇ.10.5ರಷ್ಟು ಸೇರಿ ಒಟ್ಟು ಶೇ.27.5ರಷ್ಟು ಆಗುವಂತೆ ವೇತನವನ್ನು ಹೆಚ್ಚಿಸಲಾಗುತ್ತದೆ. ಹಾಗಾದರೆ, ಏಳನೇ ವೇತನ ಆಯೋಗದ ಜಾರಿಯಿಂದ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಾಗಲಿದೆ ಎಂಬುದರ ಮಾಹಿತಿ ಇಲ್ಲಿದೆ.

ಇಲ್ಲಿದೆ ವಿಭಾಗವಾರು ವೇತನದ ವ್ಯತ್ಯಾಸ

ಎ ವಲಯದಲ್ಲಿ ಕರ್ತವ್ಯ ನಿರ್ವಹಿಸುವ ಸಿ ಮತ್ತು ಡಿ ದರ್ಜೆ ನೌಕರರಿಗೆ 2022ರ ಜುಲೈ 1ರಂದು ಮೂಲ ವೇತನ 17,000 ರೂ. ಇದ್ದರೆ, ತುಟ್ಟಿಭತ್ಯೆ ಶೇ. 31 (5,270 ರೂ.) ಹಾಗೂ ಶೇ.27.50 (4,675 ರೂ. ) ಫಿಟ್ಮೆಂಟ್‌ ಸೇರಿ ಒಟ್ಟು 26,945 ಸಿಗುತ್ತಿತ್ತು. ಇನ್ನು 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಮೂಲ ವೇತನ 27,000 ಇದ್ದರೆ, ಅಂದಾಜು ತುಟ್ಟಿ ಭತ್ಯೆ ಶೇ.8.5 (2295 ರೂ), ಮನೆ ಬಾಡಿಗೆ ಭತ್ಯೆ ಶೇ.20 (5,400 ರೂ.), ವೈದ್ಯಕೀಯ 500, ನಗರ ಪರಿಹಾರ ಭತ್ಯೆ (ಸಿಸಿಎ) 750 ರೂ. ಸೇರಿ ಒಟ್ಟು 35,945 (01-01-2024ಕ್ಕೆ) ರೂ. ಸಿಗಲಿದೆ. 6ನೇ ವೇತನ ಆಯೋಗದಲ್ಲಾದರೆ ಒಟ್ಟು 29,005 ರೂ. ಸಿಗುತ್ತಿತ್ತು. ಪರಿಷ್ಕೃತ ವೇತನದಲ್ಲಿ 6940 ರೂ. ಹೆಚ್ಚಳವಾಗಲಿದೆ.

ಅದೇ ರೀತಿ ಎ ವಲಯದಲ್ಲಿ ಕಾರ್ಯ ನಿರ್ವಹಿಸುವ ಎ ಮತ್ತು ಬಿ ದರ್ಜೆ ನೌಕರರಿಗೆ 2022ರ ಜುಲೈ 1ರಂದು 17,000 ರೂ. ವೇತನ ಇದ್ದರೆ, ಶೇ. 31 ತುಟ್ಟಿ ಭತ್ಯೆ (5270 ರೂ.), ಫಿಟ್ಮೆಂಟ್‌ ಶೇ.27.50 (4675 ರೂ.) ಸೇರಿ ಒಟ್ಟು 26945 ರೂ ವೇತನ ಸಿಗುತ್ತಿತ್ತು. ಆದರೆ, 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಮೂಲ ವೇತನ 27000 ಇದ್ದರೆ, ತುಟ್ಟಿ ಭತ್ಯೆ ಶೇ.8.5 (2298 ರೂ.), ಮನೆ ಬಾಡಿಗೆ ಭತ್ಯೆ ಶೇ.20 (5400 ರೂ.), ನಗರ ಪರಿಹಾರ ಭತ್ಯೆ(ಸಿಸಿಎ) 900 ಸೇರಿ ಒಟ್ಟು 35,595 ವೇತನ ಸಿಗಲಿದೆ. ಇದು 6ನೇ ವೇತನ ಆಯೋಗದ ಅವಧಿಯಲ್ಲಿ 27,545 ರೂ. ಆಗಿದೆ. ಪರಿಷ್ಕೃತ ವೇತನದಲ್ಲಿ 8,050 ರೂ. ಹೆಚ್ಚಳವಾಗಲಿದೆ.

ವೇತನ ರಚನೆ ಮತ್ತು ವ್ಯತ್ಯಾಸದ ಪಟ್ಟಿ ಇಲ್ಲಿದೆ

ಇದನ್ನೂ ಓದಿ: 7th Pay Commission: 7ನೇ ವೇತನ ಆಯೋಗದ‌ ಶಿಫಾರಸು ಜಾರಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್; ನೌಕರರಿಗೆ ಗುಡ್‌ ನ್ಯೂಸ್

Continue Reading

ಕರ್ನಾಟಕ

7th Pay Commission: 7ನೇ ವೇತನ ಆಯೋಗದ‌ ಶಿಫಾರಸು ಜಾರಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್; ನೌಕರರಿಗೆ ಗುಡ್‌ ನ್ಯೂಸ್

7th Pay Commission: ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌ ಷಡಾಕ್ಷರಿ (CS Shadakshari) ಅವರು ರಾಜ್ಯ ಸರ್ಕಾರಕ್ಕೆ ಈಗಾಗಲೇ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ.

VISTARANEWS.COM


on

7th Pay Commission
Koo

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕರ್ನಾಟಕದಲ್ಲಿ 7ನೇ ವೇತನ ಆಯೋಗದ (7th Pay Commission) ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ. ಇದರಿಂದಾಗಿ ರಾಜ್ಯದ ಲಕ್ಷಾಂತರ ನೌಕರರ ವೇತನ (Karnataka Government Employees) ಜಾಸ್ತಿಯಾಗಲಿದೆ. ಆಗಸ್ಟ್‌ 1ರಿಂದಲೇ ಏಳನೇ ವೇತನ ಆಯೋಗದ ಜಾರಿಗೆ ಕರ್ನಾಟಕ ಸರ್ಕಾರ (Karnataka Government) ತೀರ್ಮಾನ ಮಾಡಿದೆ.

ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌ ಷಡಾಕ್ಷರಿ (CS Shadakshari) ಅವರು ರಾಜ್ಯ ಸರ್ಕಾರಕ್ಕೆ ಈಗಾಗಲೇ ಎಚ್ಚರಿಕೆ ನೀಡಿದ್ದರು. ಕೆಲ ವರ್ಷಗಳಿಂದಲೂ ಏಳನೇ ವೇತನ ಆಯೋಗ ಜಾರಿಗೊಳಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘವು ಆಗ್ರಹಿಸುತ್ತಲೇ ಇತ್ತು.

Cauvery Dispute

ಇದರೊಂದಿಗೆ ರಾಜ್ಯ ಸರ್ಕಾರಿ ನೌಕರರ ಮಹತ್ವದ ಬೇಡಿಕೆ ಈಡೇರಿದಂತಾಗಿದೆ. ಇದಲ್ಲದೆ, ರಾಜ್ಯದ ಎನ್.ಪಿ.ಎಸ್. ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್. ನೌಕರರನ್ನು ಓ.ಪಿ.ಎಸ್. ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿ. ಈಗಾಗಲೇ ಪಂಜಾಬ್, ರಾಜಸ್ಥಾನ, ಚತ್ತೀಸ್‌ ಘಡ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುವಂತೆ ಹಾಗೂ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್.
ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂಬುದು ಮತ್ತೊಂದು ಬೇಡಿಕೆಯಾಗಿದೆ.

ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ” (ಕೆ.ಎ.ಎಸ್.ಎಸ್)ಯನ್ನು ಜಾರಿಗೆ ತರಲು ಈ ಹಿಂದಿನ ರಾಜ್ಯ ಸರ್ಕಾರವು 2021-22ರ ಆಯವ್ಯದಲ್ಲಿ ಘೋಷಿಸಿತ್ತು. ಈಗಾಗಲೇ ಸಚಿವ ಸಂಪುಟದ ಅನುಮೋದನೆ ಪಡೆದು ದಿನಾಂಕ: 05-09-2022 ರಂದು ಸರ್ಕಾರಿ ಆದೇಶ ಹೊರಡಿಸಿರುತ್ತದೆ. ಈ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ವೇತನದಿಂದ ಪ್ರತಿ ತಿಂಗಳು ವೃಂದವಾರು ವಂತಿಗೆ ಕಟಾವಣೆಯಾಗಲಿದ್ದು, ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುವುದಿಲ್ಲ. ಯೋಜನೆಯ ಅನುಷ್ಟಾನಾಧಿಕಾರಿಗಳು ತಾಂತ್ರಿಕ ಹಾಗೂ ಇನ್ನಿತರೆ ಕಾರಣಗಳನ್ನು ನೀಡಿ ಈ ಯೋಜನೆಯನ್ನು ಜಾರಿಗೊಳಿಸಲು ಅನಗತ್ಯ ವಿಳಂಬ ಮಾಡುತ್ತಿದ್ದು, ಚಿಕಿತ್ಸೆ ಪಡೆಯಲು ನೌಕರರಿಗೆ ಆರ್ಥಿಕ ಹೊರೆಯಾಗುತ್ತಿರುವುದರಿಂದ ಶೀಘ್ರವಾಗಿ ಈ ಯೋಜನೆಯನ್ನು ಲೋಕಾರ್ಪಣೆ ಮಾಡಬೇಕು ಎಂಬುದು ಮತ್ತೊಂದು ಬೇಡಿಕೆಯಾಗಿದೆ.

ಇದನ್ನೂ ಓದಿ: OPS News: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ಅರ್ಹರಿಗೆ ಒಪಿಎಸ್‌, ಪ್ರಸ್ತಾವನೆ ಸಲ್ಲಿಕೆಗೆ ಆದೇಶ

Continue Reading

ಕರ್ನಾಟಕ

7th Pay Commission: 7ನೇ ವೇತನ ಆಯೋಗ ಸಂಪುಟ ಸಭೆಯ ಅಜೆಂಡಾ; ಇಂದೇ ಸಿಗುತ್ತಾ ಸಿಹಿ ಸುದ್ದಿ?

7th Pay Commission: ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌ ಷಡಾಕ್ಷರಿ (CS Shadakshari) ಅವರು ರಾಜ್ಯ ಸರ್ಕಾರಕ್ಕೆ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

7th Pay Commission
Koo

ಬೆಂಗಳೂರು: ಹಳೆಯ ಪಂಚಣಿ ಯೋಜನೆ ಜಾರಿ, ಏಳನೇ ವೇತನ ಆಯೋಗದ ಶಿಫಾರಸುಗಳ ಅನುಷ್ಠಾನ ಸೇರಿ ಕರ್ನಾಟಕ ಸರ್ಕಾರಿ ನೌಕರರ (Govt Employees) ಹಲವು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ನೌಕರರ ಸಂಘವು ಆಗ್ರಹಿಸುತ್ತಲೇ ಇದೆ. ಇದರ ಬೆನ್ನಲ್ಲೇ, ಸೋಮವಾರ (ಜುಲೈ 15) ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, 7ನೇ ವೇತನ ಆಯೋಗದ (7th Pay Commission) ಜಾರಿಯು ಪ್ರಮುಖ ಅಜೆಂಡಾ ಆಗಿದೆ. ಹಾಗಾಗಿ, ರಾಜ್ಯ ಸರ್ಕಾರಿ ನೌಕರರಿಗೆ ಇಂದೇ ಸಿಹಿ ಸುದ್ದಿ ಇದೆ ಎಂದು ಹೇಳಲಾಗುತ್ತಿದೆ.

ಸಂಪುಟ ಸಭೆಯ ಕುರಿತು ರಾಜ್ಯ ಸರ್ಕಾರಿ ನೌಕರರ ಸಂಘವು ಮಾಹಿತಿ ನೀಡಿದೆ. “ಜುಲೈ 7ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಬೇಡಿಕೆ ಈಡೇರಿಕೆಗೆ ಆಗ್ರಹಿಸುವ ಜತೆಗೆ ಹೋರಾಟದ ಕುರಿತು ತೀರ್ಮಾನ ತೆಗೆದುಕೊಂಡ ಕಾರಣ ಸೋಮವಾರದ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ಜಾರಿಯು ಪ್ರಮುಖ ಅಜೆಂಡಾ ಆಗಿದೆ. ಹಾಗಾಗಿ, ಸರ್ಕಾರಿ ನೌಕರರಿಗೆ ಆಯೋಗದ ಶಿಫಾರಸುಗಳ ಜಾರಿಯ ಬಗ್ಗೆ ಹೆಚ್ಚು ನಿರೀಕ್ಷೆ ಇದೆ. ಇನ್ನು ಒಪಿಎಸ್‌ ಹಾಗೂ ಆರೋಗ್ಯ ಸಂಜೀವಿನಿ ಜಾರಿ ಕುರಿತು ಜುಲೈ 23ರಂದು ನಡೆಯುವ ಎಲ್ಲ ವೃಂದ ಸಂಘಗಳ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದೆ.

ಮತ್ತೊಂದೆಡೆ, ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌ ಷಡಾಕ್ಷರಿ (CS Shadakshari) ಅವರು ರಾಜ್ಯ ಸರ್ಕಾರಕ್ಕೆ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಹಾಗಾಗಿ, ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸಂಪುಟ ಸಭೆಯು ಪ್ರಮುಖವಾಗಿದೆ.

Govt Employees
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ.

ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳು

1) ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ ಆದೇಶ ಹೊರಡಿಸುವುದು: ರಾಜ್ಯ 7ನೇ ವೇತನ ಆಯೋಗವು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಶಿಫಾರಸ್ಸು ವರದಿಯಲ್ಲಿನ ಫಿಟ್‌ಮೆಂಟ್ ಸೌಲಭ್ಯವನ್ನು ಯಥಾವತ್ತಾಗಿ 01-07-2022ರಿಂದ ಅನ್ವಯವಾಗುವಂತೆ ವೇತನ ನಿಗದಿಪಡಿಸಿ, ದಿ: 01-04-2024 ರಿಂದ ಆರ್ಥಿಕ ಸೌಲಭ್ಯವನ್ನು ನೀಡಿ ಸರ್ಕಾರಿ ಆದೇಶ ಹೊರಡಿಸುವುದು.

2) ಎನ್.ಪಿ.ಎಸ್. ರದ್ದುಪಡಿಸಿ ಹಳೇ ಪಿಂಚಣೆ ಯೋಜನೆಯನ್ನು ಮರು ಜಾರಿಗೊಳಿಸುವುದು: ರಾಜ್ಯದ ಎನ್.ಪಿ.ಎಸ್. ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್. ನೌಕರರನ್ನು ಓ.ಪಿ.ಎಸ್. ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿ. ಈಗಾಗಲೇ ಪಂಜಾಬ್, ರಾಜಸ್ಥಾನ, ಚತ್ತೀಸ್‌ ಘಡ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುವಂತೆ ಹಾಗೂ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್.
ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು.

3) ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವುದು: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ” (ಕೆ.ಎ.ಎಸ್.ಎಸ್)ಯನ್ನು ಜಾರಿಗೆ ತರಲು ಈ ಹಿಂದಿನ ರಾಜ್ಯ ಸರ್ಕಾರವು 2021-22ರ ಆಯವ್ಯದಲ್ಲಿ ಘೋಷಿಸಿತ್ತು. ಈಗಾಗಲೇ ಸಚಿವ ಸಂಪುಟದ ಅನುಮೋದನೆ ಪಡೆದು ದಿನಾಂಕ: 05-09-2022 ರಂದು ಸರ್ಕಾರಿ ಆದೇಶ ಹೊರಡಿಸಿರುತ್ತದೆ. ಈ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ವೇತನದಿಂದ ಪ್ರತಿ ತಿಂಗಳು ವೃಂದವಾರು ವಂತಿಗೆ ಕಟಾವಣೆಯಾಗಲಿದ್ದು, ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುವುದಿಲ್ಲ. ಯೋಜನೆಯ ಅನುಷ್ಟಾನಾಧಿಕಾರಿಗಳು ತಾಂತ್ರಿಕ ಹಾಗೂ ಇನ್ನಿತರೆ ಕಾರಣಗಳನ್ನು ನೀಡಿ ಈ ಯೋಜನೆಯನ್ನು ಜಾರಿಗೊಳಿಸಲು ಅನಗತ್ಯ ವಿಳಂಬ ಮಾಡುತ್ತಿದ್ದು, ಚಿಕಿತ್ಸೆ ಪಡೆಯಲು ನೌಕರರಿಗೆ ಆರ್ಥಿಕ ಹೊರೆಯಾಗುತ್ತಿರುವುದರಿಂದ ಶೀಘ್ರವಾಗಿ ಈ ಯೋಜನೆಯನ್ನು ಲೋಕಾರ್ಪಣೆ ಮಾಡುವುದು.

ವೇತನ ಆಯೋಗ ವರದಿ

ರಾಜ್ಯ 6ನೇ ವೇತನ ಆಯೋಗದ ವರದಿಯು ಅನುಷ್ಟಾನಗೊಂಡು ದಿ: 31-06-2022ಕ್ಕೆ 5 ವರ್ಷ ಪೂರ್ಣಗೊಂಡಿರುವುದರಿಂದ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳನ್ನು ದಿನಾಂಕ:01-07-2022ರಿಂದ ಪರಿಷ್ಕರಣೆಗೊಳಿಸಬೇಕಾಗಿತ್ತು. ಸಂಘವು ಸರ್ಕಾರಕ್ಕೆ ಒತ್ತಡ ತಂದ ಹಿನ್ನೆಲೆಯಲ್ಲಿ; ಈ ಹಿಂದಿನ ಸರ್ಕಾರವು 19-11-2022 ರಂದು ನಿವೃತ್ತ ಮುಖ್ಯ ಕಾರ್ಯದರ್ಶಿಗಳಾದ ಕೆ.ಸುಧಾಕರ್‌ ರಾವ್‌ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗವನ್ನು ರಚಿಸಿ, ಆರು ತಿಂಗಳೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲು ಆದೇಶಿಸಿತ್ತು. ಆಯೋಗವು ದಿ:16-03-2024ರಂದು ಸರ್ಕಾರಕ್ಕೆ ಅಂತಿಮ ವರದಿಯನ್ನು ಸಲ್ಲಿಸಿದೆ. ವೇತನ ಆಯೋಗ ರಚನೆಯಾಗಿ ಇಂದಿಗೆ 19 ತಿಂಗಳು ಕಳೆದಿದ್ದು, ಇಂದಿಗೆ ಸರ್ಕಾರ ವರದಿ ಪಡೆದು 04 ತಿಂಗಳು ಪೂರ್ಣಗೊಳ್ಳುತ್ತಿದೆ.

ಈ ಮಧ್ಯೆ ಸಂಘವು ದಿನಾಂಕ: 01-03-2023 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡ ಪರಿಣಾಮ ಸರ್ಕಾರವು ದಿನಾಂಕ: 01-04-2023 ರಿಂದ ಅನ್ವಯವಾಗುವಂತೆ ಶೇ. 17 ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ಸರ್ಕಾರಿ ಆದೇಶ ಹೊರಡಿಸಿತ್ತು. 27-02-2024ರಂದು ರಾಜ್ಯ ಮಟ್ಟದ ಮಹಾ ಸಮ್ಮೇಳನವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿ, 7ನೇ ವೇತನ ಆಯೋಗವು ವರದಿ ನೀಡಿದ ನಂತರ ಜಾರಿಗೊಳಿಸುವ ಸ್ಪಷ್ಟ ಭರವಸೆಯನ್ನು ನೌಕರರಿಗೆ ನೀಡಿದ್ದರು. ಈ ಸಂಬಂಧ ಮುಖ್ಯಮಂತ್ರಿಗಳನ್ನು ಹಾಗೂ ಆರ್ಥಿಕ ಇಲಾಖೆಯ ಅಧಿಕಾರಿಗಳನ್ನು ಸಂಘದ ನಿಯೋಗ
ಹಲವಾರು ಬಾರಿ ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಹಳೇ ಪಿಂಚಣಿ ಯೋಜನೆ

ಸಂಘದ ಮತ್ತೊಂದು ಪ್ರಮುಖ ಬೇಡಿಕೆಯಾದ 2006ರ ನಂತರ ಸರ್ಕಾರಿ ಸೇವೆಗೆ ನೇಮಕವಾದ ನೌಕರರ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಸಲುವಾಗಿ ಈ ಹಿಂದಿನ ಸರ್ಕಾರ ಇತರೆ ರಾಜ್ಯಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ವರದಿ ನೀಡಲು ಸರ್ಕಾರ ದಿ: 01-03-2023 ರಂದು ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿತ್ತು. ಸಮಿತಿಯು ಇದುವರೆವಿಗೂ ಒಂದೂ ಸಭೆಯನ್ನು ನಡೆಸಿಲ್ಲ ಹಾಗೂ ಹಳೆ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಿರುವ ರಾಜ್ಯಗಳಿಗೆ ಭೇಟಿ ನೀಡಿ ಅಧ್ಯಯನವನ್ನೂ ಸಹ ನಡೆಸಿಲ್ಲ. ಅಲ್ಲದೆ ಈ ಸಂಬಂಧ ಸರ್ಕಾರಕ್ಕೆ ಯಾವುದೇ ವರದಿಯನ್ನು ಇಲ್ಲಿಯವರೆಗೂ ನೀಡಿಲ್ಲ. ಚುನಾವಣಾ ಪ್ರಣಾಳಿಕೆಯಲ್ಲಿ ಪಕ್ಷ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವ ಭರವಸೆಯನ್ನು ನೀಡಿದೆ. ಎನ್.ಪಿ.ಎಸ್. ಯೋಜನೆಯಲ್ಲಿ ನೇಮಕಗೊಂಡು ನಿವೃತ್ತಿಯಾಗಿರುವ ಸರ್ಕಾರಿ ನೌಕರರಿಗೆ ಮಾಸಿಕ ಕೇವಲ ರೂ.1500 ಪಿಂಚಣಿ ಲಭ್ಯವಾಗುತ್ತಿದ್ದು, ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 2.50 ಲಕ್ಷ ಎನ್.ಪಿ.ಎಸ್ ಯೋಜನೆ ವ್ಯಾಪ್ತಿಯ ನೌಕರರ ಸಂಧ್ಯಾ ಕಾಲದ ಬದುಕು ಆರ್ಥಿಕ ಭದ್ರತೆಯಿಲ್ಲದೆ ದುಸ್ತರಗೊಳ್ಳುತ್ತಿದೆ.

ಇದನ್ನೂ ಓದಿ: Govt Employees: ಸರ್ಕಾರಿ ನೌಕರರ ವಿಮಾ ಪಾಲಿಸಿಗಳ ಮೊತ್ತಕ್ಕೆ ಬೋನಸ್‌ ನೀಡಲು ರಾಜ್ಯ ಸರ್ಕಾರ ಆದೇಶ!

ಆರೋಗ್ಯ ಸಂಜೀವಿನಿ ಯೋಜನೆ

ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ” (ಕೆ.ಎ.ಎಸ್.ಎಸ್)ಗೆ ಈ ಹಿಂದಿನ ರಾಜ್ಯ ಸರ್ಕಾರವು 2021-22ರ ಆಯವ್ಯದಲ್ಲಿ ಘೋಷಿಸಿತ್ತು. ಸಚಿವ ಸಂಪುಟದ ಅನುಮೋದನೆ ಪಡೆದು ಈ ಯೋಜನೆಯ ರೂಪ-ರೇಷೆಗಳನ್ನು ಸಿದ್ಧಪಡಿಸಿ ನಿರ್ವಹಣೆ ಮಾಡಲು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ಗೆ ಜವಾಬ್ದಾರಿಯನ್ನು ನೀಡಿ 5-9-2022 ರಂದು ಸರ್ಕಾರಿ ಆದೇಶ ಹೊರಡಿಸಿದೆ. ಹಿಂದಿನ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳು ಈ ಯೋಜನೆಯನ್ನು 20-03-2023
ರಂದು ಸಾಂಕೇತಿಕವಾಗಿ ಲೋಕಾರ್ಪಣೆ ಮಾಡಿದ್ದರು. ಈ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ವೇತನದಿಂದ ಪ್ರತಿ ತಿಂಗಳು ವೃಂದವಾರು ವಂತಿಗೆ ಕಟಾವಣೆಯಾಗಲಿದ್ದು, ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುವುದಿಲ್ಲ. ರಾಜ್ಯದ ಬಹಳಷ್ಟು ಸಿ ಮತ್ತು ಡಿ ವರ್ಗದ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಗಂಭೀರ ಸ್ವರೂಪದ ಖಾಯಿಲೆಗಳಾದಲ್ಲಿ ಲಕ್ಷಾಂತರ ರೂಗಳನ್ನು ಭರಿಸಲು ಕಷ್ಟವಾಗುತ್ತಿದೆ ಎನ್ನುವುದನ್ನು ಷಡಾಕ್ಷರಿ ಸರ್ಕಾರದ ಗಮನಕ್ಕೆ ತಂದಿದ್ದಾರೆ.

ಇದನ್ನೂ ಓದಿ: Govt Employees: ವಿವಿಧ ಬೇಡಿಕೆ ಈಡೇರಿಸಲು ಮುಖ್ಯ ಕಾರ್ಯದರ್ಶಿಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ

Continue Reading
Advertisement
Viral Video
Latest6 mins ago

Viral Video: ಕಾಮುಕರ ಹಾವಳಿ ಮಿತಿ‌ ಮೀರಿದೆ; ಬೀದಿ ನಾಯಿಯನ್ನೂ ಇವರು ಬಿಡುತ್ತಿಲ್ಲ! ಆಘಾತಕಾರಿ ವಿಡಿಯೊ

Jitan Sahani
ದೇಶ14 mins ago

Jitan Sahani: ಬಿಹಾರದಲ್ಲಿ ವಿಕಾಸಶೀಲ ಇನ್ಸಾನ್‌ ಪಕ್ಷದ ಮುಖ್ಯಸ್ಥನ ತಂದೆಯ ಭೀಕರ ಹತ್ಯೆ; ಮನೆ ತುಂಬ ರಕ್ತ!

karnataka assembly live
ಪ್ರಮುಖ ಸುದ್ದಿ33 mins ago

Karnataka Assembly Live: ಸದನದಲ್ಲಿ ಇಂದು ಕಿಡಿಯೆಬ್ಬಿಸಲಿರುವ ವಾಲ್ಮೀಕಿ ಹಗರಣ; ಉತ್ತರ ನೀಡಲು ಸಿಎಂ ಸಜ್ಜು; ಇಲ್ಲಿದೆ ಕ್ಷಣಕ್ಷಣದ ಲೈವ್‌

David Warner
ಕ್ರೀಡೆ35 mins ago

David Warner: ​ಚಾಂಪಿಯನ್ಸ್ ಟ್ರೋಫಿಗೆ ವಾರ್ನರ್​ ಆಯ್ಕೆ ಇಲ್ಲ ಎಂದ ಜಾರ್ಜ್​ ಬೈಲಿ

Kannada New Movie
ಸ್ಯಾಂಡಲ್ ವುಡ್39 mins ago

Kannada New Movie: ಸೆಟ್ಟೇರಿತು ‘ಆಕಾಶ್’, ‘ಅರಸು’ ಚಿತ್ರಗಳ ಡೈರೆಕ್ಟರ್ ಹೊಸ ಸಿನಿಮಾ; ಕಿರುತೆರೆಯ ಈ ಪ್ರತಿಭೆ ನಾಯಕ

Kannada In Madrasa
ಕರ್ನಾಟಕ53 mins ago

Kannada In Madrasa: ರಾಜ್ಯದ ಮದರಸಾಗಳಲ್ಲಿ ಇನ್ನು ಕನ್ನಡ ಕಲಿಕೆ ಕಡ್ಡಾಯ; ಶೀಘ್ರವೇ ಆದೇಶ!

murder case set fire bagalakote
ಕ್ರೈಂ1 hour ago

Horrible Murder Case: ಶೆಡ್‌ ಹೊರಗಿನಿಂದ ಲಾಕ್‌ ಮಾಡಿ ಬೆಂಕಿ ಇಟ್ಟ ದುಷ್ಟರು; ಇಬ್ಬರು ಸಜೀವ ದಹನ

Iti Acharya
ಸಿನಿಮಾ1 hour ago

Iti Acharya: ಬಾಲಿವುಡ್‌ಗೆ ಕಾಲಿಟ್ಟ ಮತ್ತೊಬ್ಬ ಕನ್ನಡತಿ; ದಕ್ಷಿಣ ಭಾರತದ ಚಿತ್ರಗಳ ಬಳಿಕ ಹಿಂದಿಯಲ್ಲೂ ಅಭಿನಯ

Karnataka Assembly
ಕ್ರೀಡೆ1 hour ago

Karnataka Assembly: ಬಿಜೆಪಿಯಿಂದಲೇ ರಾಹುಲ್​ಗೆ ಶ್ಲಾಘನೆ; ಸದನದಲ್ಲಿ ಅಭಿನಂದನೆಗೆ ನಿರ್ಣಯ

Anant Radhika Wedding
ವಾಣಿಜ್ಯ1 hour ago

Anant Radhika Wedding: ನಮ್ಮಿಂದ ಏನಾದರು ತಪ್ಪಾಗಿದ್ದರೆ ದಯವಿಟ್ಟು ಕ್ಷಮಿಸಿ; ನೀತಾ ಅಂಬಾನಿ ವಿನಮ್ರ ಮನವಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ17 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ23 hours ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ3 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

ಟ್ರೆಂಡಿಂಗ್‌