ಭವಿಷ್ಯ: ಈ ಐದು ರಾಶಿಯವರು ಕಷ್ಟದಲ್ಲಿ ಖಂಡಿತಾ ಸಹಾಯಕ್ಕೆ ಬರುತ್ತಾರೆ - Vistara News

ಭವಿಷ್ಯ

ಭವಿಷ್ಯ: ಈ ಐದು ರಾಶಿಯವರು ಕಷ್ಟದಲ್ಲಿ ಖಂಡಿತಾ ಸಹಾಯಕ್ಕೆ ಬರುತ್ತಾರೆ

ಇಂಥವರ ಆಪ್ತವಲಯದಲ್ಲಿ ಯಾರಾದರೂ ಇದ್ದರೆ ಅವರನ್ನ ಜೋಪಾನವಾಗಿ ನೋಡಿಕೊಳ್ಳುವುದರಲ್ಲಿ ಸಂಶಯವೇ ಇಲ್ಲ ಎನ್ನಬಹುದು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಂಕಷ್ಟದಲ್ಲಿ ಸಮಯದಲ್ಲಿ ನೆರವಿಗೆ ಬರುವವನೆ ನಿಜವಾದ ಸಂಬಂಧಿ ಎಂಬ ಮಾತಿದೆ. ಕೆಲವೊಮ್ಮೆ ಅದೆಷ್ಟೇ ಆಪ್ತರಾಗಿದ್ದರೂ ಕಷ್ಟ ಎಂದು ಹೇಳಿಕೊಂಡಾಗ ಗೊತ್ತೇ ಆಗದಂತೆ ಕಣ್ಮರೆಯಾಗುವವರೆ ಹೆಚ್ಚು. ಆದರೆ ಕೆಲವರಿರುತ್ತಾರೆ, ಅವರು ಎಂತಹ ಕಷ್ಟ ಎಂದರೂ ಕ್ಷಣ ಮಾತ್ರದಲ್ಲಿ ಓಡಿ ಬಂದು ಸಹಾಯಕ್ಕೆ ನಿಲ್ಲುತ್ತಾರೆ. ದುಃಖದ ಸಮಯದಲ್ಲಿ ಕೈ ಹಿಡಿದು ಸಾಂತ್ವನ ಮಾಡುತ್ತಾರೆ. ಎದುರಾದ ಆಪತ್ತಿನಿಂದ ಹೇಗೆ ಹೊರಬರಬೇಕು ಎಂಬುದನ್ನ ತಿಳಿಸಿಕೊಡುತ್ತಾರೆ. ಅಂಥವರು ನಮ್ಮ ಜೊತೆಗಿದ್ದಾರೆ ಎಂಬುದೇ ಅದೆಷ್ಟೋ ಸಾರಿ ಬೆಟ್ಟದಷ್ಟು ಕಷ್ಟಗಳು ಎದುರಾದರು ಬೆಣ್ಣೆಯಂತೆ ಕರಗಿ ಹೋಗುತ್ತವೆ. ಹಾಗಾದರೆ ಅನುಗಾಲವು ಸಹಾಯಕ್ಕೆ ಬರುವವರು ಯಾರು ಎಂಬ ಪ್ರಶ್ನೆ ಕಾಡಬಹುದು. ಅವರೇ ಈ ಐದು ರಾಶಿಗಳವರು. ಇವರು ಎಂಥದ್ದೇ ಕಷ್ಟ ಇದ್ದರೂ ಕೈಲಾದಷ್ಟು ಸಹಾಯ ಮಾಡೇ ಮಾಡುತ್ತಾರೆ ಎಂದು ಹೇಳುತ್ತದೆ ಜ್ಯೋತಿಷ ಶಾಸ್ತ್ರ. ಹಾಗಾದರೆ ಹಾಗೇ ಸದಾ ಬೇರೆಯವರ ಸಂಕಷ್ಟಗಳಿಗೆ ಜೊತೆಯಾಗುವವ ಆ ಐದು ರಾಶಿಗಳು ಇವರೇ ನೋಡಿ.

ಕರ್ಕ ರಾಶಿ :

ಕರ್ಕ ರಾಶಿಯಯವರು ಸಾಮಾನ್ಯವಾಗಿ ತುಂಬಾ ಸೂಕ್ಷ್ಮಮತಿಗಳು ಹಾಗೂ ಭಾವುಕ ಜೀವಿಗಳು. ಇವರು ತಮಗೆ ಹತ್ತಿರದವರ ಬಗ್ಗೆ ಸದಾ ಕಾಳಜಿಯುಳ್ಳವರಾಗಿರುತ್ತಾರೆ. ಅವರಿಗಾಗಿ ಎಂತಹದ್ದೇ ಸಂದರ್ಭವನ್ನು ಎದುರಿಸಲು ಸಿದ್ಧರಾಗಿರುತ್ತಾರೆ. ಪ್ರೀತಿಸಿದವರಿಗಾಗಿ ಪ್ರಾಣ ಕೊಡಲು ತಯಾರಾಗುತ್ತಾರೆ. ಈ ರಾಶಿಯವರು ನಿಮ್ಮ ಆಪ್ತ ವಲಯದಲ್ಲಿ ಇದ್ದಾರೆ ಎಂದರೆ ನೀವು ನಿಶ್ಚಿಂತರಾಗಿರಬಹುದು. ಅವರು ನಮ್ಮನ್ನ ಯಾವತ್ತೂ ಬಿಟ್ಟು ಕೊಡಲಾರರು. ಸ್ವಾರ್ಥವಿಲ್ಲದೆ ಸಹಾಯ ಮಾಡುವ ಮನಸಿನ ಆ ವ್ಯಕ್ತಿಗಳು ಆಪ್ತವಲಯದಲ್ಲಿಯೂ ಇರಬಹುದು ನೋಡಿ.    

ಮೀನ ರಾಶಿ :

ಮೀನ ರಾಶಿಯ ವ್ಯಕ್ತಿಗಳು ತುಂಬಾ ಕಾಳಜಿ ತೆಗೆದುಕೊಳ್ಳುವವರಾಗಿರುತ್ತಾರೆ. ಮೃದು ವ್ಯಕ್ತಿತ್ವದ ಸರಳ ಸ್ವಭಾವದವರಾಗಿರುತ್ತಾರೆ. ಸಹಜವಾಗಿ ಇವರು ಸ್ವಚ್ಛಂದವಾಗಿ ಓಡಾಡಿಕೊಂಡಿರಲು ಬಯಸುತ್ತಾರೆ. ಆದರೆ ಸತ್ಯದಿಂದ ಸದಾ ಅಂತರ ಕಾಪಾಡಿಕೊಳ್ಳುವುದರಲ್ಲಿ ಇವರು ನಿಸ್ಸೀಮರು. ಸತ್ಯದ ಸಂದರ್ಭಗಳನ್ನ ಎದುರಿಸುವಲ್ಲಿ ಹಿಂದೇಟು ಹಾಕುತ್ತಾರೆ. ಹಾಗಂತ ಪಲಾಯನವಾದಿಗಳು ಎಂದೇನಲ್ಲ. ತಮ್ಮವರ ಹಾಗೂ ತಮಗೆ ಬೇಕಾದವರ ಯೋಗಕ್ಷೇಮ ವಿಚಾರಿಸುವ ವಿಷಯದಲ್ಲಿ ಸದಾ ಮುಂದಿರುತ್ತಾರೆ. ನಿಸ್ವಾರ್ಥತೆಯಿಂದ ಆಪ್ತರ ಕಾಳಜಿ ತೆಗೆದುಕೊಳ್ಳುತ್ತಾರೆ. ಸದಾ ಅವರ ಒಳಿತನ್ನ ಬಯಸುವವರಾಗಿರುತ್ತಾರೆ.

ಕನ್ಯಾ ರಾಶಿ :

ಕಾಳಜಿ ತೆಗೆದುಕೊಳ್ಳುವಲ್ಲಿ ಮತ್ತು ನೆರವಿಗೆ ಧಾವಿಸುವಲ್ಲಿ ಕನ್ಯಾ ರಾಶಿಯವರು ಮಹಾ ನಿಸ್ಸೀಮರು. ಇವರು ತಮ್ಮ ಪ್ರೀತಿ ಪಾತ್ರರಿಗೆ ಆದರ್ಶವಾಗಿರಲು ಬಯಸುತ್ತಾರೆ. ಕುಟುಂಬದವರ ದೃಷ್ಟಿಯಲ್ಲಿ ತಮ್ಮ ವ್ಯಕ್ತಿತ್ವ ಎಲ್ಲಿಯೂ ಹಾಳಾಗದಂತೆ ಕಾಪಾಡಿಕೊಳ್ಳುವ ಸ್ವಭಾವದವರಾಗಿರುತ್ತಾರೆ. ಯಾವುದೇ ಸಂದರ್ಭವಿದ್ದರೂ ಸಮಾಧಾನದಿಂದ ತಿಳಿ ಹೇಳುವುದು ಇವರ ವೈಶಿಷ್ಟ್ಯತೆ. ತಮ್ಮ ಕುಟುಂಬ ಮತ್ತು ಆಪ್ತವಲಯವೇ ತಮ್ಮ ಅತೀ ದೊಡ್ಡ ಶಕ್ತಿ ಎಂಬುದನ್ನ ಇವರು ಬಲವಾಗಿ ನಂಬುತ್ತಾರೆ. ಹೀಗಾಗಿ ಅವರನ್ನ ಸದಾ ಕಾಪಾಡುವಲ್ಲಿ ಅವರ ಕಷ್ಟಗಳಿಗೆ ನೆರವಾಗುವಲ್ಲಿ ಸಿದ್ಧರಿರುತ್ತಾರೆ. ಬೇರೆಯವರ ಭಾವನೆಗಳಿಗೆ ಸಮಾನ ಗೌರವ ಕೊಡುವುದನ್ನ ಯಾವತ್ತೂ ಮರೆಯುವದಿಲ್ಲ.

ವೃಷಭ ರಾಶಿ :

ಮನುಷ್ಯತ್ವಕ್ಕೆ ಹೆಚ್ಚಿನ ಬೆಲೆ ಕೊಡುವುದು ಹಾಗೂ ಆರ್ಥಿಕವಾಗಿ ದುರ್ಬಲರಾದವರಿಗೆ ಕೈಲಾದ ನೆರವನ್ನ ನೀಡುವುದನ್ನ ಈ ರಾಶಿವರು ಹೆಚ್ಚು ಇಷ್ಟಪಡುತ್ತಾರೆ. ಇವರು ಸ್ನೇಹಿತರ ಸಹಾಯಕ್ಕೆ ಟೊಂಕ ಕಟ್ಟಿ ನಿಲ್ಲಬಲ್ಲವರು ಹಾಗೂ ತಾವು ಪ್ರೀತಿಸುವವರ ಬಗ್ಗೆ ಅತೀವ ಕಾಳಜಿ ತೆಗೆದುಕೊಳ್ಳವರಾಗಿರುತ್ತಾರೆ. ತಮ್ಮವರ ಎಲ್ಲ ಸಂಕಷ್ಟಗಳಿಗೂ ತಾವು ಜೊತೆಯಾಗಲೇಬೇಕು ಎಂಬುದನ್ನ ಬಲವಾಗಿ ನಂಬುವವರು. ಹಾಗೆಯೇ ತಮಗೆ ಬೇಕಾದವರು ಅನುಗಾಲವು ಸುಖ, ಸಂತೋಷದಿಂದ ಇರಲು ಬೇಕಾದ ಸಹಾಯ ಮಾಡುವ ಮನಸ್ಸುಳ್ಳವರಾಗಿರುತ್ತಾರೆ.

ತುಲಾ ರಾಶಿ :

ತುಲಾ ರಾಶಿಯ ವ್ಯಕ್ತಿಗಳು ತಮಗೆ ಸರಿಯೆನಿಸಿದ್ದನ್ನು ಮಾಡುವಲ್ಲಿ ಹೆಚ್ಚು ಪ್ರಾಧಾನ್ಯತೆ ಕೊಡುತ್ತಾರೆ. ತಾರತಮ್ಯ ಮಾಡದೆ ಎಲ್ಲರಿಗೂ ನ್ಯಾಯ ಸಲ್ಲಬೇಕು ಎಂಬುದನ್ನ ಇವರು ಹೆಚ್ಚು ಇಷ್ಟಪಡುತ್ತಾರೆ. ತಮ್ಮನ್ನ ನಂಬಿದವರಿಗಾಗಿ ಸದಾ ನೆರವಾಗುವುದು ಕೂಡಾ ಇವರ ಅಚ್ಚುಮೆಚ್ಚಿನ ಸ್ವಭಾವ. ಪ್ರೀತಿ ಪಾತ್ರರಿಗೆ ಸದಾ ಒಳಿತಾಗಬೇಕು ಎಂಬುದು ಇವರ ಮನದ ಆಶಯವಾಗಿರುತ್ತದೆ. ಅವರಿಗೇನಾದರೂ ಸಂಕಷ್ಟದ ಘಳಿಗೆ ಎದುರಾದರೆ ಇವರು ಹಿಂದೆ ಮುಂದೆ ಯೋಚಿಸದೆ ಅವರ ಜೊತೆಗೆ ನಿಲ್ಲುತ್ತಾರೆ. ತಮ್ಮ ಆಪ್ತರಿಗೆ ಕಷ್ಟದ ಸಮಯವೇನಾದರು ಎದುರಾದರೆ ಸುಮ್ಮನೆ ನೋಡಿಕೊಂಡು ಕುಳಿತುಕೊಳ್ಳುವ ಜಾಯಮಾನದವರಾಗಿರುವುದಿಲ್ಲ.

ಸ್ವಭಾವತಃ ಈ ಐದು ರಾಶಿಗಳವರ ತಮ್ಮವರಿಗಾಗಿಯೇ ಸದಾ ಮಿಡಿಯುವವರು ಮತ್ತು ಸ್ಪಂದಿಸುವ ವ್ಯಕ್ತಿತ್ವವನ್ನು ಹೊಂದಿರುತ್ತಾರೆ. ಹೀಗಾಗಿ ಇಂಥವರ ಆಪ್ತವಲಯದಲ್ಲಿ ಯಾರಾದರೂ ಇದ್ದರೆ ಅವರನ್ನ ಜೋಪಾನವಾಗಿ ನೋಡಿಕೊಳ್ಳುವುದರಲ್ಲಿ ಸಂಶಯವೇ ಇಲ್ಲ ಎನ್ನಬಹುದು.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಭವಿಷ್ಯ

Dina Bhavishya : ಯಾರನ್ನೂ ನಂಬಿ ಈ ರಾಶಿಯವರು ಹೂಡಿಕೆ ವ್ಯವಹಾರದಲ್ಲಿ ತೊಡಗಬೇಡಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ದಶಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

dina Bhavishya
Koo

ಚಂದ್ರನು ಸೋಮವಾರವು ವೃಷಭ ರಾಶಿಯಲ್ಲೆ ನೆಲಸಲ್ಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ,ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಅಪರೂಪದ ವ್ಯಕ್ತಿಗಳ ಪರಿಚಯವಾಗಲಿದೆ. ಅನೇಕ ವಿಚಾರಗಳು ಮನಸ್ಸಿನ ಆಳಕ್ಕೆ ಇಳಿಯುವುದು. ಮಿಥುನ ರಾಶಿಯವರು ಬುದ್ಧಿವಂತಿಕೆಯಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು. ಯಾರನ್ನೂ ನಂಬಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ದಿನದ ಕೊನೆಯ ಭಾಗದಲ್ಲಿ ಮಾನಸಿಕವಾಗಿ ದುರ್ಬಲವಾಗುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (1-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ದಶಮಿ 10:25 ವಾರ: ಸೋಮವಾರ
ನಕ್ಷತ್ರ: ಅಶ್ವಿನಿ 06:25 / ಭರಣಿ 29:26 ಯೋಗ: ಸುಕರ್ಮ 13:40
ಕರಣ: ವಿಷ್ಟಿ (ಭದ್ರ) 10:25 ಅಮೃತಕಾಲ: ಮಧ್ಯರಾತ್ರಿ 12:51 ರಿಂದ 02:23ರವರೆಗೆ

ಸೂರ್ಯೋದಯ : 05:57   ಸೂರ್ಯಾಸ್ತ : 06:50

ರಾಹುಕಾಲ: ಬೆಳಗ್ಗೆ 07:34ರಿಂದ 09:10
ಗುಳಿಕಕಾಲ: ಮಧ್ಯಾಹ್ನ 02:00 ರಿಂದ 03:37

ಯಮಗಂಡಕಾಲ: ಬೆಳಗ್ಗೆ 10:47 ರಿಂದ 12:24

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರೋಗ್ಯ ಸಂಬಂಧಿ ಖರ್ಚು ಇರಲಿದೆ. ಅಪರೂಪದ ವ್ಯಕ್ತಿಗಳ ಪರಿಚಯವಾಗಲಿದೆ. ಅನೇಕ ವಿಚಾರಗಳು ಮನಸ್ಸಿನ ಆಳಕ್ಕೆ ಇಳಿಯುವುದು. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ:ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವುದು ಉತ್ತಮ. ಕಾಲಹರಣ ಮಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ದಿನದ ಮಟ್ಟಿಗೆ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಕೆಲಸದ ಒತ್ತಡ ಹೆಚ್ಚಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಬುದ್ಧಿವಂತಿಕೆಯಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು. ಯಾರನ್ನೂ ನಂಬಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ದಿನದ ಕೊನೆಯ ಭಾಗದಲ್ಲಿ ಮಾನಸಿಕವಾಗಿ ದುರ್ಬಲವಾಗುವ ಸಾಧ್ಯತೆ ಇದೆ. ಗುರು ದತ್ತಾತ್ರೇಯರನ್ನು ಆರಾಧಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಆಪ್ತರೊಂದಿಗೆ ಅತಿಯಾದ ಸಲುಗೆ ಒಳ್ಳೆಯದಲ್ಲ. ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಆತುರದ ಮಾತುಗಳಿಗೆ ನಿಯಂತ್ರಣ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಅತಿಥಿಗಳ ಆಗಮನದಿಂದ ಕಾರ್ಯ ವಿಳಂಬವಾಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಬಿಡುವಿರದಂತೆ ಕೆಲಸದ ಒತ್ತಡ ಇರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಹಣಕಾಸು, ಹೂಡಿಕೆ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಕೀರ್ತಿ ಸಿಗಲಿದೆ. ಉದ್ಯೋಗಿಗಳಿಗೆ ಉತ್ತಮ ಅವಕಾಶ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಗತಿಸಿದ ಘಟನೆಗಳ ಬಗ್ಗೆ ಚಿಂತಿಸಿ ಫಲವಿಲ್ಲ. ದಿನದ ಮಟ್ಟಿಗೆ ಖರ್ಚು ಇರಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ವಹಿಸಿ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ದೀರ್ಘಕಾಲದ ಪ್ರಯತ್ನ ನಿಮಗೆ ಯಶಸ್ಸು ತಂದು ಕೊಡುವುದು. ಕುಟುಂಬದ ಆಪ್ತರು, ಸ್ನೇಹಿತರಿಂದ ಉಡುಗೊರೆ ಸಿಗುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿ ಸಾಧಾರಣವಾಗಿರಲಿದೆ.ಆರೋಗ್ಯ ಉತ್ತಮವಾಗಿರಲಿದೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ : ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸುನ್ನು ತಂದು ಕೊಡುವುದು. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಹಣಕಾಸು ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಧನಸ್ಸು: ಕುಟುಂಬದ ಸಮಸ್ಯೆಗಳು ನಿಮ್ಮನ್ನು ಮಾನಸಿಕವಾಗಿ ದೈಹಿಕವಾಗಿ ಬಳಲುವಂತೆ ಮಾಡಬಹುದು. ಹಿರಿಯರ ಮಾರ್ಗದರ್ಶನ ಪಡೆಯಿರಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಆರೋಗ್ಯದ ಕಡೆಗೆ ಗಮನ ಹರಿಸಿ. ಸಂಗಾತಿಯ ಮಧುರ ಮಾತುಗಳು ಸಮಾಧಾನ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಕರ: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿದೆ. ಇಂದಿನ ದಿವಸ ಯಾರೊಂದಿಗೂ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಸದಸ್ಯರ ವರ್ತನೆ ಕೋಪವನ್ನು ತರಿಸುವುದು. ಆಲಸ್ಯದಿಂದ ಉತ್ತಮ ಕೆಲಸವನ್ನು ಮುಂದೂಡುವುದು ಬೇಡ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕುಂಭ:ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಖರ್ಚಿನ ವಿಷಯಗಳಿಗೆ ಕಡಿವಾಣ ಹಾಕಿ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಸಂಗಾತಿಯು ಸೃಷ್ಟಿಸುವ ಸಮಸ್ಯೆಗಳನ್ನು ಬುದ್ಧಿವಂತಿಕೆಯಿಂದ ನಿಭಾಯಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮೀನ: ವೃತ ವಿಚಾರ ಮಾಡಿ ಕಾಲಹರಣ ಮಾಡುವ ಬದಲು ಸೃಜನಾತ್ಮಕ ಕೆಲಸ ಕಾರ್ಯಗಳಲ್ಲಿ ತೊಡಗಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಆರ್ಥಿಕವಾಗಿ ಬಲಿಷ್ಠರಾಗುವಿರಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರು ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವಿರಿ ಈ ದಿನ ಎಚ್ಚರಿಕೆ ಇರಲಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ನವಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhvishya
Koo

ಚಂದ್ರನು ಮೇಷ ರಾಶಿಯಿಂದ ಭಾನುವಾರ ಬೆಳಗ್ಗೆ 08:00ಕ್ಕೆ ವೃಷಭ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ,ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರ ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ವೃಷಭ ರಾಶಿಯವರು ಹಾಸ್ಯಪ್ರಜ್ಞೆಯ ನಡವಳಿಕೆಯಿಂದಾಗಿ ಇತರರನ್ನು ಚುಂಬಕದಂತೆ ಆಕರ್ಷಿಸಿ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿಕೊಳ್ಳುವಿರಿ. ಭೂ ಹಾಗೂ ಹೂಡಿಕೆ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ತೊಡುಗುವುದು ಬೇಡ. ಇದರಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (30-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ನವಮಿ 12:18 ವಾರ: ಭಾನುವಾರ
ನಕ್ಷತ್ರ: ರೇವತಿ 07:33 ಯೋಗ: ಅತಿಗಂಡ 16:13
ಕರಣ: ಗರಜ 12:18 ಅಮೃತಕಾಲ: ರಾತ್ರಿ 11:34ರಿಂದ 01:06ರವರೆಗೆ
ದಿನದ ವಿಶೇಷ: ಲಿಂಗಾನಂದಸ್ವಾಮಿ ಆರಾಧನೆ, ಹಲಾಪುರಕೋಟೇಶ್ವರ ರಥ

ಸೂರ್ಯೋದಯ : 05:57   ಸೂರ್ಯಾಸ್ತ : 06:50

ರಾಹುಕಾಲ: ಸಂಜೆ 05:13 ರಿಂದ 06:50
ಗುಳಿಕಕಾಲ: ಮಧ್ಯಾಹ್ನ 03:37 ರಿಂದ05:13

ಯಮಗಂಡಕಾಲ: ಮಧ್ಯಾಹ್ನ 12:23 ರಿಂದ 02:00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರ ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಹಾಸ್ಯಪ್ರಜ್ಞೆಯ ನಡವಳಿಕೆಯಿಂದಾಗಿ ಇತರರನ್ನು ಚುಂಬಕದಂತೆ ಆಕರ್ಷಿಸಿ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿಕೊಳ್ಳುವಿರಿ. ಭೂ ಹಾಗೂ ಹೂಡಿಕೆ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ತೊಡುಗುವುದು ಬೇಡ. ಇದರಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಉತ್ಸಾಹ ತುಂಬಿದ ವಾತಾವರಣ ಇರಲಿದೆ. ಇಂದು ನೀವು ಚೈತನ್ಯಯುಕ್ತವಾಗಿ ಇರುವಿರಿ. ಅನಾವಶ್ಯಕ ಖರ್ಚು ಮಾಡಿ ಆಮೇಲೆ ದುಃಖಿಸುವುದು ಬೇಡ. ಕುಟುಂಬದ ಯಜಮಾನನ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ: ನೀವು ಇತರರನ್ನು ಶ್ಲಾಘಿಸುವ ಮೂಲಕ ಯಶಸ್ಸನ್ನು ಆನಂದಿಸುವ ಸಾಧ್ಯತೆ ಇದೆ. ವ್ಯಾಪಾರ ಹಾಗೂ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಪ್ರೇಮಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಆತ್ಮವಿಶ್ವಾಸದಿಂದ ಮಾಡಿದ ಕೆಲಸ ಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಆಪ್ತರೊಂದಿಗೆ ವಾದಕ್ಕಿಳಿಯುವ ಸಾಧ್ಯತೆ ಇದೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳು ಉಜ್ವಲ ಭವಿಷ್ಯಕ್ಕಾಗಿ ಮನೋರಂಜನೆಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳು ನಿಮಗೆ ಪುಷ್ಟಿ ನೀಡಲಿವೆ. ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಒಂದು ಯಶಸ್ವಿ ದಿನ. ವಿವಾಹ ಅಪೇಕ್ಷಿತರಿಗೆ ಶುಭ ಸೂಚನೆ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸದೃಢವಾಗಿ ಇರುವಿರಿ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಜೀವನದ ಪ್ರಮುಖ ನಿರ್ಧಾರಗಳ ಕುರಿತು ನೀವು ಕುಟುಂಬದೊಂದಿಗೆ ಚರ್ಚಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ : ಹಳೆಯ ಸ್ನೇಹಿತರೊಂದಿಗೆ ಆತ್ಮೀಯ ಮಾತುಕತೆಯಲ್ಲಿ ತೊಡಗುವಿರಿ. ಭವಿಷ್ಯದ ಕುರಿತು ಹೂಡಿಕೆ ಬಗ್ಗೆ ಆಲೋಚನೆ ಮಾಡುವಿರಿ. ಸಂಗಾತಿಯಿಂದ ಸಲಹೆ ಪಡೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅನೇಕ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಕೋರ್ಟ್ ಕಚೇರಿ ವ್ಯಾಜ್ಯಗಳು ವಿಜಯವನ್ನು ತಂದು ಕೊಡಲಿವೆ. ದಿನದ ಕೊನೆಯಲ್ಲಿ ಯಾವುದಾದರೂ ಕಾರಣದಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಕರ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಯಾವುದೋ ಮೂಲದಿಂದ ಆರ್ಥಿಕವಾಗಿ ಬಲಗೊಳ್ಳಲಿದ್ದೀರಿ. ಕುಟುಂಬ ಸದಸ್ಯರ ಅಪಸ್ವರದಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಮಾತಿಗೆ ವಿರಾಮ ನೀಡಿ. ಉದ್ಯೋಗಿಗಳಿಗೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ನಿಮ್ಮ ಕೋಪದ ಮನಸ್ಥಿತಿ ಇತರರ ಮೇಲೆ ಪ್ರಭಾವ ಬೀರಬಹುದು. ಅನಿವಾರ್ಯ ಕಾರಣಗಳಿಂದ ಸ್ನೇಹಿತರ ಸಹಾಯ ಬೇಡುವ ಸಾಧ್ಯತೆ ಇದೆ. ನಿಮ್ಮ ಕೆಲಸದ ಮೇಲೆ ಗಮನ ಹರಿಸಿದಲ್ಲಿ ಯಶಸ್ಸು ಮತ್ತು ಮನ್ನಣೆ ನಿಮ್ಮದಾಗುತ್ತದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಹೊಂದಲಿದ್ದೀರಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮೀನ: ಅನಿವಾರ್ಯ ಕಾರಣಗಳಿಂದ ಕುಟುಂಬದ ಸದಸ್ಯರೊಂದಿಗೆ ಮನಸ್ತಾಪ ,ಆದಾಗ್ಯೂ ನೀವು ನಿಮ್ಮ ಶಾಂತ ಸ್ವಭಾವದಿಂದ ಎಲ್ಲವನ್ನು ಸರಿಗೊಳಿಸಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಧಾರ್ಮಿಕ

Ashada Month: ಆಷಾಢವನ್ನು ಅಶುಭ ತಿಂಗಳು ಅನ್ನುವುದೇಕೆ? ಇದಕ್ಕಿದೆ ವೈಜ್ಞಾನಿಕ ಕಾರಣ!

ಆಷಾಢ ಮಾಸವನ್ನು (Ashada Month) ಅಶುಭ ತಿಂಗಳು ಎಂದು ಕರೆಯಲು ಹಲವು ಕಾರಣಗಳೂ ಇವೆ. ಆದರೂ ಈ ಸಂದರ್ಭದಲ್ಲಿ ಹಲವು ವಿಶೇಷ ಆಚರಣೆಗಳನ್ನು ಮಾಡಲಾಗುತ್ತದೆ. ಶುಭ ಕಾರ್ಯಗಳಿಗೆ ಅಶುಭವಾದರೂ ಕೆಲವೊಂದು ಸಂಪ್ರದಾಯ, ಆಚರಣೆಗಳು ಈ ಸಂದರ್ಭದಲ್ಲಿ ಮಾತ್ರ ನಡೆಸಲಾಗುತ್ತದೆ. ಅದು ಯಾವುದು ಗೊತ್ತೆ? ಈ ಕುರಿತ ಮಾಹಿತಿ ಇಲ್ಲಿದೆ, ಓದಿ.

VISTARANEWS.COM


on

By

Ashada Month
Koo

ದಕ್ಷಿಣ ಭಾರತದಲ್ಲಿ (south india) ಆದಿ ಎಂದೂ ಕರೆಯಲ್ಪಡುವ ಆಷಾಢ ಮಾಸ (Ashada Month) ಶುಭ ಕಾರ್ಯಗಳಿಗೆ ಅತ್ಯಂತ ಅಶುಭ (inauspicious) ಮಾಸವೆಂದು ಪರಿಗಣಿಸಲಾಗಿದೆ. ಇದು ಈಗಿನ ನಂಬಿಕೆಯಲ್ಲ. ಇದಕ್ಕೆ ಸಹಸ್ರಾರು ವರ್ಷಗಳ ಹಿನ್ನೆಲೆಯೇ ಇದೆ. ಈ ಸಂದರ್ಭದಲ್ಲಿ ಕೆಲವೊಂದು ನಂಬಿಕೆ, ವಿಶಿಷ್ಟ ಆಚರಣೆಗಳನ್ನೂ ಮಾಡಲಾಗುತ್ತದೆ.

ಸರಿಸುಮಾರು ಜೂನ್- ಜುಲೈನಲ್ಲಿ ಬರುವ ಆಷಾಢ ಮಾಸದಲ್ಲಿ ಭಾರತದಲ್ಲಿ ಗಾಳಿ ಬೀಸುವ ಕಾಲವಾಗಿದೆ. ಮಳೆಗಾಲ ಆರಂಭದ ಸಮಯ. ಆಕಾಶದಲ್ಲಿ ದಟ್ಟ ಮೋಡಗಳು ಆವರಿಸುತ್ತದೆ. ಖಗೋಳಶಾಸ್ತ್ರದ ಪ್ರಕಾರ ಭೂಮಿಯು ಪೂರ್ವ- ಆಷಾಢ ನಕ್ಷತ್ರಪುಂಜದ ಸಮೀಪದಲ್ಲಿರುತ್ತದೆ. ಆದ್ದರಿಂದ ಈ ತಿಂಗಳಲ್ಲಿ ಪೂರ್ಣ ಚಂದ್ರನು ಆ ನಕ್ಷತ್ರಪುಂಜದಲ್ಲಿ ಕಾಣಿಸಿಕೊಳ್ಳುತ್ತಾನೆ. ಸೂರ್ಯ ಮಿಥುನ ರಾಶಿಯಿಂದ ಕರ್ಕಾಟಕಕ್ಕೆ ದಕ್ಷಿಣದ ಕಡೆಗೆ ಚಲಿಸುತ್ತಾನೆ.

ದಕ್ಷಿಣ ಭಾರತದಲ್ಲಿ ಈ ತಿಂಗಳು ನವವಿವಾಹಿತ ದಂಪತಿಗೆ ಬಹಳ ಭಾವನಾತ್ಮಕ ತಿಂಗಳು. ಯಾಕೆಂದರೆ ವಧು ಮತ್ತು ವರರನ್ನು ಈ ಒಂದು ತಿಂಗಳ ಕಾಲ ಬೇರ್ಪಡಿಸಲಾಗುತ್ತದೆ. ಅನೇಕರು ಇದನ್ನು ಸಂಪ್ರದಾಯದ ಭಾಗವಾಗಿ ಅನುಸರಿಸುತ್ತಾರೆ. ಇದಕ್ಕೆ ನಿರ್ದಿಷ್ಟ ಕಾರಣಗಳು ಇಲ್ಲವಾದರೂ ಸಂಪ್ರದಾಯವಂತೂ ಇಂದಿಗೂ ಆಚರಣೆಯಲ್ಲಿದೆ.

1. ಬೇಸಿಗೆಯಲ್ಲಿ ಮಗುವಿನ ಜನನ

ಆಷಾಢ ಮಾಸದಲ್ಲಿ ನವವಿವಾಹಿತರು ಬೇರ್ಪಡಲು ಮುಖ್ಯ ಕಾರಣ ಈ ಸಮಯದಲ್ಲಿ ಮಹಿಳೆ ಗರ್ಭಿಣಿಯಾದರೆ ದಕ್ಷಿಣ ಭಾರತದಲ್ಲಿ ಬೇಸಿಗೆಯ ಮಧ್ಯದಲ್ಲಿ ಅಂದರೆ ಮಾರ್ಚ್, ಏಪ್ರಿಲ್, ಮೇ ತಿಂಗಳಲ್ಲಿ ಮಗುವಿನ ಜನನವಾಗುತ್ತದೆ. ತಾಯಿ ಮತ್ತು ಮಗು ಇಬ್ಬರಿಗೂ ಇದು ಒಳ್ಳೆಯದಲ್ಲ. ಬೇಸಿಗೆಯಲ್ಲಿ ಮಗುವನ್ನು ನೋಡಿಕೊಳ್ಳುವುದು ತುಂಬಾ ಕಷ್ಟಕರವಾಗಿರುತ್ತದೆ ಮತ್ತು ಮಗುವಿಗೆ ತೊಂದರೆಯಾಗುತ್ತದೆ. ಆದ್ದರಿಂದ ನಮ್ಮ ಪೂರ್ವಜರು ನವಜಾತ ಶಿಶುವಿಗೆ ತೊಂದರೆಯಾಗದಂತೆ ವಧು ವರನನ್ನು ಬೇರ್ಪಡಿಸುವ ಯೋಜನೆಯನ್ನು ರೂಪಿಸಿದ್ದಾರೆ ಎನ್ನಲಾಗುತ್ತದೆ.


2. ಕೃಷಿಗೆ ಹೆಚ್ಚಿನ ಪ್ರಾಮುಖ್ಯತೆ

ಜುಲೈ ಮತ್ತು ಆಗಸ್ಟ್ ದಕ್ಷಿಣ ಭಾರತದ ಪ್ರದೇಶಗಳಲ್ಲಿ ಮಾನ್ಸೂನ್ ಆರಂಭವಾಗುತ್ತದೆ. ಈ ಋತುವಿನಲ್ಲಿ ಕೃಷಿಗೆ ಉತ್ತಮವಾದ ಋತುವಾಗಿದೆ. ನದಿ ಮತ್ತು ಸರೋವರಗಳು ನೀರಿನಿಂದ ತುಂಬಿರುತ್ತವೆ. ಜುಲೈ ಮತ್ತು ಆಗಸ್ಟ್ ತಿಂಗಾಲಿನಲ್ಲಿ ಹೊಲಗಳಲ್ಲಿ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ಆದ್ದರಿಂದ ಈ ತಿಂಗಳುಗಳಲ್ಲಿ ಕುಟುಂಬದ ಪ್ರತಿಯೊಬ್ಬರೂ ಇಡೀ ವರ್ಷ ಉತ್ತಮ ಫಲಿತಾಂಶವನ್ನು ಪಡೆಯಲು ಹೊಲದಲ್ಲಿ ಕೆಲಸ ಮಾಡಬೇಕಾಗುತ್ತದೆ. ವಧುವನ್ನು ತನ್ನ ತಂದೆಯ ಮನೆಗೆ ಕಳುಹಿಸಲಾಗುತ್ತದೆ. ಆದ್ದರಿಂದ ಅವಳು ತನ್ನ ಹೆತ್ತವರಿಗೆ ಸಹಾಯ ಮಾಡಬಹುದು ಮತ್ತು ಮದುಮಗನು ಕೃಷಿಯತ್ತ ಗಮನಹರಿಸಬಹುದು. ಕೆಲಸದ ಮೇಲೆ ಗಮನ ಕೇಂದ್ರೀಕರಿಸಲು ಇದು ಒಂದು ಯೋಜನೆಯಾಗಿ ನವದಂಪತಿಯನ್ನು ಬೇರ್ಪಡಿಸಲಾಗುತ್ತದೆ ಎನ್ನಲಾಗುತ್ತದೆ.

3. ಆಯುರ್ವೇದ ನಂಬಿಕೆ

ಆಯುರ್ವೇದ ಶಾಸ್ತ್ರದ ಪ್ರಕಾರ ಮಾನ್ಸೂನ್ ಸಮಯದಲ್ಲಿ ಲೈಂಗಿಕತೆಯನ್ನು ನಿಷೇಧಿಸಲಾಗುತ್ತದೆ. ಮಳೆಗಾಲವು ವಿಶ್ರಾಂತಿ ಮತ್ತು ನವ ಯೌವನ ಪಡೆಯುವ ಕಾಲವಾಗಿದೆ. ಈ ತಿಂಗಳಲ್ಲಿ ಲೈಂಗಿಕತೆಯನ್ನು ಅನುಮತಿಸಲಾಗುವುದಿಲ್ಲ. ಮಾನ್ಸೂನ್ ತಿಂಗಳುಗಳನ್ನು ಅತ್ಯಂತ ದುರ್ಬಲ ತಿಂಗಳುಗಳೆಂದು ಪರಿಗಣಿಸಲಾಗುತ್ತದೆ. ಮಳೆ ಸುರಿಯುವುದರಿಂದ ಸುಲಭವಾಗಿ ರೋಗಗಳನ್ನು ಉಂಟುಮಾಡುತ್ತದೆ. ಹಾಗಾಗಿ ಈ ತಿಂಗಳಲ್ಲಿ ಲೈಂಗಿಕತೆಯು ದೋಷಯುಕ್ತ ಸಮಸ್ಯೆಗಳು ಮತ್ತು ಇತರ ತೊಡಕುಗಳಿಗೆ ಕಾರಣವಾಗಬಹುದು ಎಂಬುದು ಹಳೆಯವರ ಲೆಕ್ಕಾಚಾರವಾಗಿತ್ತು!

4. ಸಾಂಸ್ಕೃತಿಕ ಮಹತ್ವ

ಆಷಾಢ ತಿಂಗಳು ತಮಿಳಿಗರು ಮತ್ತು ಮಲಯಾಳಿಗಳಲ್ಲಿ ಮಹತ್ವದ್ದಾಗಿದೆ. ಯಾಕೆಂದರೆ ಈ ತಿಂಗಳುಗಳನ್ನು ಅಶುಭವೆಂದು ಪರಿಗಣಿಸುವ ಅವರು ಈ ಸಮಯದಲ್ಲಿ ರಾಮಾಯಣವನ್ನು ಓದುತ್ತಾರೆ ಮತ್ತು ಧ್ಯಾನದಲ್ಲಿ ಹೆಚ್ಚು ತೊಡಗುತ್ತಾರೆ. ಅವರು ತಮ್ಮ ಆರೋಗ್ಯವನ್ನು ಬಲಪಡಿಸಲು ಮತ್ತು ಪ್ರತಿರಕ್ಷಣೆಗಾಗಿ ಔಷಧೀಯ ಆಹಾರ ಮತ್ತು ಪಾನೀಯಗಳನ್ನು ತೆಗೆದುಕೊಳ್ಳುತ್ತಾರೆ.


5. ಮೆಹೆಂದಿಗೆ ಪ್ರಾಮುಖ್ಯತೆ

ಭಾರತದ ಅನೇಕ ಸ್ಥಳಗಳಲ್ಲಿ ಜನರು ಆಷಾಢ ಮಾಸದಲ್ಲಿ ಕೈ ಮತ್ತು ಪಾದಗಳಿಗೆ ಮೆಹೆಂದಿಯನ್ನು ಹಚ್ಚುತಾರೆ. ಹವಾಮಾನ ಬದಲಾವಣೆಗಳ ಪರಿಣಾಮ ದೇಹದ ಮೇಲೆ ಆಗದೇ ಇರಲಿ ಎಂದು ಮೆಹೆಂದಿಯನ್ನು ಕೈಗಳಿಗೆ ಹಚ್ಚಿಕೊಳ್ಳಲಾಗುತ್ತದೆ ಎನ್ನಲಾಗುತ್ತದೆ. ಮೆಹೆಂದಿ ಎಲೆಗಳು ಈ ಸಮಯದಲ್ಲಿ ಬೆಳೆಯಲು ಪ್ರಾರಂಭಿಸುತ್ತವೆ. ಇದು ತೀವ್ರವಾದ ಹವಾಮಾನ ಬದಲಾವಣೆಯಿಂದ ಉಂಟಾಗುವ ಸೋಂಕುಗಳನ್ನು ತಡೆಗಟ್ಟುವ ಗುಣಗಳನ್ನು ಹೊಂದಿದೆ.

6. ವ್ರತ, ಪೂಜೆಗೆ ಆದ್ಯತೆ

ಆಷಾಢ ತಿಂಗಳು ಶುಭ ಕಾರ್ಯಕ್ರಮಗಳಿಗೆ ಅಶುಭವಾಗಿದ್ದರೂ ಈ ಸಂದರ್ಭದಲ್ಲಿ ವ್ರತ, ಪೂಜೆಗಳಿಗೆ ಈ ತಿಂಗಳು ಉತ್ತಮ ಎಂದೇ ಭಾವಿಸಲಾಗುತ್ತದೆ. ಹೊರಗೆ ಧಾರಾಕಾರವಾಗಿ ಮಳೆ ಸುರಿಯುವಾಗ ಯಾವುದೇ ಕೆಲಸ ಮಾಡುವುದು ಸಾಧ್ಯವಿಲ್ಲ. ಹೀಗಾಗಿ ಹೆಚ್ಚಿನವರು ಈ ಸಂದರ್ಭದಲ್ಲಿ ಪೂಜೆ, ವ್ರತಾಚರಣೆಯಲ್ಲಿ ತೊಡಗುತ್ತಾರೆ. ಕೆಲವು ದೇವಾಲಯಗಳಲ್ಲಿ ಈ ಸಂದರ್ಭದಲ್ಲಿ ವಿಶೇಷ ಪೂಜೆ, ಉತ್ಸವಗಳೂ ನಡೆಯುತ್ತವೆ.

7. ಬೇವಿಗೆ ಪ್ರಾಮುಖ್ಯತೆ

ದಕ್ಷಿಣ ಭಾರತದಾದ್ಯಂತ ಆಷಾಢ ಮಾಸದಲ್ಲಿ ಮನೆ ಮತ್ತು ಬೀದಿಗಳಲ್ಲಿ ಅನೇಕ ಬೇವಿನ ಎಲೆಗಳನ್ನು ತೂಗು ಹಾಕುತ್ತಾರೆ. ಕಾರಣ ಈ ಋತುವಿನಲ್ಲಿ ಸಾಮಾನ್ಯವಾಗಿ ರಾಜ್ಯದಾದ್ಯಂತ ಭಾರೀ ಗಾಳಿ ಇರುತ್ತದೆ. ಇದರೊಂದಿಗೆ ಮಳೆಯು ಬರುತ್ತದೆ. ಗಾಳಿ, ಮಳೆಯೂ ಅನೇಕ ಸೋಂಕುಗಳನ್ನು ಹಬ್ಬಿಸುವ ಸಾಧ್ಯತೆ ಇರುತ್ತದೆ. ಇದಕ್ಕಾಗಿ ಜನರು ಬೇವನ್ನು ರಕ್ಷಣೆಯಾಗಿ ಬಳಸುತ್ತಾರೆ. ಬೇವಿನ ಸೊಪ್ಪನ್ನು ಖಾದ್ಯಕ್ಕೆ ಸೇರಿಸುತ್ತಾರೆ. ಇದರಿಂದ ಅನೇಕ ರೋಗಗಳನ್ನು ದೂರವಿಡಬಹುದು ಎನ್ನಲಾಗುತ್ತದೆ.

8. ಆಷಾಢ ಕೊಡುಗೆ

ಸಾಮಾನ್ಯವಾಗಿ ಈ ತಿಂಗಳಲ್ಲಿ ವ್ಯಾಪಾರ ವಹಿವಾಟುಗಳು ಕಡಿಮೆಯಾಗುತ್ತವೆ. ಸಾಮಾನ್ಯವಾಗಿ ಭಾರತದ ದಕ್ಷಿಣ ಭಾಗಗಳಲ್ಲಿ ಹೊಸ ಉದ್ಯಮಗಳನ್ನು ಪ್ರಾರಂಭಿಸಲು, ಮನೆಗಳನ್ನು ಬದಲಾಯಿಸಲು ಅಶುಭ ಮಾಸವೆಂದೇ ಇದನ್ನು ಪರಿಗಣಿಸಲಾಗಿದೆ. ಹೀಗಾಗಿ ಹಲವು ವ್ಯಾಪಾರಿಗಳು ಈ ಸಂದರ್ಭದಲ್ಲಿ ವಿಶೇಷ ಕೊಡುಗೆಗಳನ್ನು ಘೋಷಿಸಲು ಪ್ರಾರಂಭಿಸುತ್ತಾರೆ.

ಇದನ್ನೂ ಓದಿ: Vastu Tips: ಈ ವಾಸ್ತು ನಿಯಮ ಪಾಲಿಸಿದರೆ ವ್ಯವಹಾರದಲ್ಲಿ ವೃದ್ಧಿ


9. ಆಟಿ ಕಷಾಯ ಸೇವನೆ

ಆಷಾಢ ಮಾಸದಲ್ಲಿ ಬರುವ ಅಮಾವಾಸ್ಯೆಯಂದು ಹಾಳೆ ಮರದ ತೊಗಟೆಯನ್ನು ತಂದು ಅದಕ್ಕೆ ಬೆಳ್ಳುಳ್ಳಿ, ಶುಂಠಿ, ಓಂ ಕಾಳು ಸೇರಿಸಿ ರಸ ತೆಗೆದು ಒಗ್ಗರಣೆಯನ್ನು ಹಾಕಿ ಕಷಾಯ ಮಾಡಿ ಸೇವಿಸಲಾಗುತ್ತದೆ. ಇದು ಮಳೆಗಾಲದಲ್ಲಿ ಉಂಟಾಗುವ ಅನೇಕ ರೀತಿಯ ಸೋಂಕಿನಿಂದ ನಮ್ಮನ್ನು ರಕ್ಷಿಸುತ್ತದೆ ಎಂಬ ನಂಬಿಕೆ ಜನರಲ್ಲಿದೆ.

Continue Reading

ಭವಿಷ್ಯ

Dina Bhavishya : ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಶನಿವಾರವೂ ಮೇಷ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ಸಿಂಹ ರಾಶಿಯವರು ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದ್ದು, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (29-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ಅಷ್ಟಮಿ 14:19 16:26 ವಾರ: ಶನಿವಾರ
ನಕ್ಷತ್ರ: ಉತ್ತರ ಭಾದ್ರಪದ 08:48 ಯೋಗ: ಶೋಭನ 18:52
ಕರಣ: ಕೌಲವ 14:19 ಅಮೃತಕಾಲ: ಬೆಳಗ್ಗೆ 05:17 ರಿಂದ 06:48

ಸೂರ್ಯೋದಯ : 05:57   ಸೂರ್ಯಾಸ್ತ : 06:50

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30

ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ, ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಎಚ್ಚರಿಕೆ ಇರಲಿ. ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡುವಿರಿ. ಆರ್ಥಿಕವಾಗಿ ಪ್ರಗತಿ ಹೊಂದುವಿರಿ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದ್ದು, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ನಿಮ್ಮ ಕ್ರಿಯಾಶೀಲ ಕಾರ್ಯ ಯೋಜನೆ ಸಫಲತೆಯನ್ನು ತಂದು ಕೊಡಲಿದೆ. ಆಪ್ತರು ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ ಅದರ ಹೊರತಾಗಿಯೂ ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ : ಬಿಡುವಿಲ್ಲದ ಕಾರ್ಯದಿಂದ ಆಯಾಸ, ಇದರಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಆದಷ್ಟು ವಿಶ್ರಾಂತಿ ಪಡೆಯಿರಿ.ಅನಗತ್ಯ ಖರ್ಚು ಇರಲಿದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಂತೋಷ ತುಂಬಿದ ವಾತಾವರಣ ಇರಲಿದೆ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಈ ದಿನ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮಲ್ಲಿರುವ ನಾಯಕತ್ವ ಗುಣವನ್ನು ಗುರುತಿಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮ ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ. ಆದರೆ ಅದೇ ಸಮಯದಲ್ಲಿ ಖರ್ಚು ಹೆಚ್ಚಾಗುತ್ತದೆ. ನಿಮ್ಮ ಬಗೆಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಬೇಡ. ದೀರ್ಘಕಾಲದ ಪ್ರಯತ್ನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ವಿನಾಕಾರಣ ವಿಚಾರ ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಗತ್ಯವಾಗಿ ಹಣವನ್ನು ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಸಲಹೆ ಹಿತಕರವೆನಿಸುವುದು. ಆತ್ಮೀಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
DCM Post
ಕರ್ನಾಟಕ41 mins ago

DCM Post: ಒನ್ ಮ್ಯಾನ್ ಒನ್ ಪೋಸ್ಟ್ ಕೂಗಿಗೆ ಡಿಕೆಶಿ ಡೋಂಟ್ ಕೇರ್‌; ಕೇಡರ್ ಬೇಸ್ ಪಾರ್ಟಿ ಕಟ್ಟಲು ಪಣ!

Sheikh Abdul Rashid
ದೇಶ43 mins ago

Sheikh Abdul Rashid: ಸೆರೆಮನೆಯಿಂದ ನೇರ ಸಂಸತ್‌ಗೆ! ಜೈಲಿನಿಂದಲೇ ಸ್ಪರ್ಧಿಸಿ ಗೆದ್ದ ʼಉಗ್ರರ ಬೆಂಬಲಿಗʼನ ಪ್ರಮಾಣವಚನಕ್ಕೆ NIA ಅಸ್ತು

karnataka Weather Forecast
ಮಳೆ48 mins ago

Karnataka Rain :‌ ಮುಂದುವರಿದ ಮಳೆ ಅಬ್ಬರ; ಸಿಡಿಲು ಬಡಿದು ಹೊತ್ತಿ ಉರಿದ ಮನೆ, ಸೇತುವೆ ಮುಳುಗಡೆ

reels obsession
ಕ್ರೈಂ53 mins ago

Reels Obsession: ಎಕೆ 47, ಬಾಡಿಗಾರ್ಡ್ಸ್‌, ಸುಂದರಿಯರ ನಡುವೆ ರೀಲ್ಸ್‌ ಶೋಕಿ ಮಾಡಿದವನು ಜೈಲುಪಾಲು!

Parliament Sessions
ದೇಶ54 mins ago

Parliament Sessions: ಲೋಕಸಭೆಯಲ್ಲಿ ನೀಟ್‌ ವಿವಾದ ಚರ್ಚೆಗೆ ಆಗ್ರಹಿಸಿ ಸಭಾತ್ಯಾಗ ಮಾಡಿದ ಪ್ರತಿಪಕ್ಷ

Darshan support by Adviti Shetty Block the bad commenter
ಸ್ಯಾಂಡಲ್ ವುಡ್1 hour ago

Actor Darshan: ಕೆಟ್ಟ ಕಮೆಂಟ್‌ ಮಾಡೋರನ್ನ ಬ್ಲಾಕ್‌ ಮಾಡಿ, ದರ್ಶನ್‌ ನಿರಪರಾಧಿ ಆಗಿ ಹೊರ ಬರಲಿ ಎಂದ ಅದ್ವಿತಿ ಶೆಟ್ಟಿ

Inspirational Story
ಬೆಂಗಳೂರು1 hour ago

Inspirational Story: ಕಣ್ಣೆದುರೆ ಸುಟ್ಟು ಕರಕಲಾದ ಮಗಳ ದುರಂತ ಅಂತ್ಯ; ಬಡಮಕ್ಕಳಿಗೆ ದಾರಿದೀಪವಾದ ಎಎಸ್‌ಐ

Doctor's Day
ದೇಶ2 hours ago

Doctor’s Day: ಆರೋಗ್ಯ ಕ್ಷೇತ್ರದ ಮೂಲ ಸೌಕರ್ಯ ವೃದ್ಧಿಗೆ ಕ್ರಮ; ಪ್ರಧಾನಿ ಮೋದಿ ಭರವಸೆ

Munawar Faruqui shares first pic with new wife
ಬಾಲಿವುಡ್2 hours ago

Munawar Faruqui: ಮೊದಲ ಬಾರಿಗೆ ಪತ್ನಿ ಜತೆ ಇರುವ ಫೋಟೊ ಹಂಚಿಕೊಂಡ  ʻಬಿಗ್ ಬಾಸ್ 17ʼರ ವಿಜೇತ  ಮುನಾವರ್ ಫಾರೂಕಿ!

Lok sabha Election 2024 DV Sadananda Gowda
ಪ್ರಮುಖ ಸುದ್ದಿ2 hours ago

DV Sadananda Gowda: ಬಿಜೆಪಿ ರಾಜ್ಯ ನಾಯಕರ ಮೇಲೆ ಸಿಡಿದೆದ್ದ ಸದಾನಂದ ಗೌಡ; ಪಕ್ಷವಿರೋಧಿಗಳಿಗೆ ಮಣೆ ಹಾಕಿದ್ದಕ್ಕೆ ಕಿಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ21 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌