Site icon Vistara News

Astrology Answers : ನನಗೆ ಮುಂದೆ ಸರ್ಕಾರಿ ಕೆಲಸ ಸಿಗುತ್ತದೆಯೇ ಗುರೂಜಿ?

ಭವಿಷ್ಯ ಪ್ರಶ್ನೋತ್ತರ rajaguru

rajaguru

ಪ್ರಶ್ನೆ: ಸರ್ಕಾರಿ ಕೆಲಸಕ್ಕಾಗಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದೇನೆ. ನನಗೆ ಮುಂದೆ ಸರ್ಕಾರಿ ಕೆಲಸ ಸಿಗುತ್ತದೆಯೇ ಗುರೂಜಿ?
ರಾಶಿ: ಮಿಥುನ ನಕ್ಷತ್ರ: ಪುನರ್ವಸು

ಪರಿಹಾರ: ಪುನರ್ವಸು ನಕ್ಷತ್ರದವರಿಗೆ ಏಕಾದಶದಲ್ಲಿ ಗುರು ಸ್ಥಿತನಾಗಿದ್ದು, ದಶಮದಲ್ಲಿ ಶನಿಯು ಇರುವುದರಿಂದ ನೀವು ಹೆಚ್ಚು ಶ್ರಮ ಪಡಬೇಕಾಗಿದೆ. ಆಲಸ್ಯ, ಅಸಡ್ಡೆಯನ್ನು ಬಿಟ್ಟು, ಅಭ್ಯಾಸ ನಡೆಸಿ. ಸತತವಾಗಿ ಪ್ರಯತ್ನ ಮಾಡುತ್ತಲೇ ಇರಿ. ಜತೆಗೆ ಶ್ರೀ ಸುಬ್ರಹ್ಮಣ್ಯ ದೇವರನ್ನು ಅನಂತವಾಗಿ ಪೂಜಿಸಿದರೆ ಗ್ರಹಸ್ಥಿತಿಯು ಅನುಕೂಲಕರವಾಗಿರುವಾಗ ನಿಮಗೆ ಸರ್ಕಾರಿ ನೌಕರಿಯು ದೊರೆಯುತ್ತದೆ.

ಮನುಷ್ಯನಿಗೆ ಗುರಿ ಇರಬೇಕು ಅಂತೆಯೇ ಗುರುವಿನ ಅನುಗ್ರಹವೂ ಬೇಕು. ಗುರುವಿನ ಮಾರ್ಗದರ್ಶನದಲ್ಲಿ ನಿಮ್ಮ ಲೋಪದೋಷಗಳನ್ನು ಸರಿಪಡಿಸಿಕೊಂಡು ನಿರಾಶೆ ಬಿಟ್ಟು, ಸತ್ಯ ಸಂಕಲ್ಪದಿಂದ ಪ್ರಯತ್ನ ಪಟ್ಟರೆ ನಿಮ್ಮ ಇಷ್ಟಾರ್ಥವು ಈಡೇರುತ್ತದೆ. ಇಡಗುಂಜಿಯ ಗಣಪತಿಗೆ ಕೆಲಸ ಸಿಕ್ಕ ಮೇಲೆ ಕೈಲಾದ ಸೇವೆ ಮಾತ್ತೇನೆಂದು ಪ್ರಾರ್ಥನೆ ಮಾಡಿಕೊಂಡು ನಿಮ್ಮ ಪ್ರಯತ್ನವನ್ನು ಮುಂದುವರಿಸಿರಿ, ಒಳ್ಳೆಯದಾಗುತ್ತದೆ.

ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್‌ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್‌. ದ್ವಾರಕನಾಥ್‌ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ಇ-ಮೇಲ್‌ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕೇಳಲು ನಮ್ಮ ಇ-ಮೇಲ್‌ ವಿಳಾಸ: janasamparka@vistaranews.com

ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.

ಇದನ್ನೂ ಓದಿ : Yearly Horoscope 2023 | ಹೊಸ ವರ್ಷದಲ್ಲಿ ಯಾವೆಲ್ಲಾ ಗ್ರಹಗಳ ಸಂಚಾರವಿರಲಿದೆ? ದ್ವಾದಶ ರಾಶಿಗಳ ಮೇಲೆ ಪರಿಣಾಮವೇನು?

Exit mobile version