Site icon Vistara News

Astrology Answers : ಹಣಕಾಸಿನ ಸಮಸ್ಯೆಯಿಂದ ಬಳಲುತ್ತಿದ್ದೇನೆ, ಪರಿಹಾರ ತಿಳಿಸಿ ಗುರೂಜಿ

ಭವಿಷ್ಯ ಪ್ರಶ್ನೋತ್ತರ rajaguru

rajaguru

ಪ್ರಶ್ನೆ: ತೀವ್ರ ಹಣಕಾಸು ಸಮಸ್ಯೆಯಿಂದ ಬಳಲುತ್ತಿದ್ದೇನೆ. ಇದರಿಂದ ಹೊರ ಬರುವುದು ಹೇಗೆ ಗುರೂಜಿ.
ರಾಶಿ: ಕುಂಭ ನಕ್ಷತ್ರ: ಶತಭಿಷ

ಪರಿಹಾರ: ಕುಂಭ ರಾಶಿಯಲ್ಲಿ ಶನಿಯಿದ್ದು, ದ್ವಿತೀಯದಲ್ಲಿ ಇರುವ ಗುರುವಿನ ಕೃಪಾಕಟಾಕ್ಷ ನಿಮ್ಮ ಮೇಲಿದೆ. ಹೀಗಾಗಿ ನೀವು ಆರ್ಥಿಕ ಸಮಸ್ಯೆಗಳನ್ನು ದೂರಮಾಡಿಕೊಳ್ಳಬಹುದು. ಜನ್ಮಾಂತರದಲ್ಲಿ ಮಾಡಿದ ಪಾಪಗಳಿಂದ ನಮಗೆ ತೀವ್ರವಾದ ಅನಾರೋಗ್ಯ ಅಥವಾ ಆರ್ಥಿಕ ಸಮಸ್ಯೆ ಉಂಟಾಗುತ್ತವೆ. ಇದರಲ್ಲಿ ವಿಶೇಷವೇನೂ ಇಲ್ಲ. ಹೀಗಾಗಿ ಹೆದರಬೇಡಿ. ಭಗವಂತನನ್ನು ನಂಬಿ ಮುನ್ನೆಡೆಯಿರಿ.
ಈ ಕೂಡಲೇ ಶಿರಸಿಗೆ ತೆರಳಿ ಸೋಂದಾ ಸ್ವರ್ಣವಲ್ಲೀ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಯವರಿಗೆ ಗುರುಪೂಜೆ ಮಾಡಿ, ಶ್ರೀಚಕ್ರಕ್ಕೆ ಅರ್ಚನೆಯನ್ನು ಮಾಡಿಸಿಕೊಂಡು ಬನ್ನಿ. ನಿಮ್ಮ ಸಮಸ್ಯೆಗಳು ದೂರವಾಗುವ ಸೂಚನೆಗಳು ಕಂಡು ಬರುತ್ತವೆ. ಒಳ್ಳೆಯದಾಗಲಿ.

ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್‌ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್‌. ದ್ವಾರಕನಾಥ್‌ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ಇ-ಮೇಲ್‌ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕೇಳಲು ನಮ್ಮ ಇ-ಮೇಲ್‌ ವಿಳಾಸ: janasamparka@vistaranews.com

ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.

ಇದನ್ನೂ ಓದಿ: Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?

Exit mobile version