Site icon Vistara News

Astrology Answers : ನನ್ನ ಜೀವನದಲ್ಲಿ ನಾನಂದುಕೊಂಡಂತೆ ಏನೂ ನಡೆಯುತ್ತಿಲ್ಲ, ಏನು ಮಾಡುವುದು ಗುರೂಜಿ?

ಭವಿಷ್ಯ ಪ್ರಶ್ನೋತ್ತರ rajaguru

rajaguru

ಪ್ರಶ್ನೆ: ನನ್ನ ಜೀವನದಲ್ಲಿ ನಾನಂದುಕೊಂಡಂತೆ ಏನೂ ನಡೆಯುತ್ತಿಲ್ಲ, ಏನು ಮಾಡುವುದು ಗುರೂಜಿ?
ರಾಶಿ: ಕನ್ಯಾ ನಕ್ಷತ್ರ: ಹಸ್ತ

ಪರಿಹಾರ: ಕನ್ಯಾ ರಾಶಿಯವರಿಗೆ ಈಗ ತಾನೇ ಪಂಚಮ ಶನಿಯು ಬಿಟ್ಟು ಗುರುವು ಸಪ್ತಮಕ್ಕೆ ಬಂದಿದ್ದಾನೆ. ಶನಿಯು ಆರರಲ್ಲಿ ನೆಲಸಿದ್ದಾನೆ. ಅಡುಗೆ ಮಾಡೆಂದು ಹೇಳಿ ಅದಕ್ಕೆ ಬೇಕಾದ ಸಾಮಗ್ರಿಯನ್ನು ಒದಗಿಸದಿದ್ದರೆ ಅಡುಗೆ ಹೇಗೆ ಸಾಧ್ಯ? ಈಗ ನಿಮ್ಮ ಸಮಯವು ಚೆನ್ನಾಗಿದೆ. ನೀವು ಸುಖವನ್ನು, ಶಾಂತಿಯನ್ನು ಪಡೆಯಬಹುದು. ಆದರೆ ಗುರುವಿನ ಬಲ ಬೇಕು. ಅದಕ್ಕಾಗಿ ಶ್ರೀ ಗುರು ದತ್ತಾತ್ರೇಯನನ್ನು ಪ್ರಾರ್ಥಿಸಿ. ಸುಬ್ರಹ್ಮಣ್ಯನನ್ನು ಅರ್ಚಿಸಿ. ಕಾಲವು ತಾನೇ ಬದಲಾಗುತ್ತದೆ. ನಿಮ್ಮ ಕುಲದೇವರನ್ನು ಪ್ರಾರ್ಥಿಸಿ. ಕುಲಗುರುಗಳನ್ನು ಸಂದರ್ಶಿಸಿ ಬನ್ನಿ. ಶ್ರೀ ಕ್ಷೇತ್ರ ಸ್ವರ್ಣವಲ್ಲಿಗೆ ಭೇಟಿ ನೀಡಿ, ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ದರ್ಶನ ಪಡೆದು, ಆಶೀರ್ವಾದ ಪಡೆದುಕೊಂಡು ಬನ್ನಿ. ನಿಮ್ಮ ಸಮಸ್ಯೆಗಳು ದೂರವಾಗುತ್ತವೆ. ಒಳ್ಳೆಯದಾಗಲಿ.

ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್‌ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್‌. ದ್ವಾರಕನಾಥ್‌ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ಇ-ಮೇಲ್‌ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕೇಳಲು ನಮ್ಮ ಇ-ಮೇಲ್‌ ವಿಳಾಸ: janasamparka@vistaranews.com

ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.

ಇದನ್ನೂ ಓದಿ: Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?

Exit mobile version