ಪ್ರಮುಖ ಸುದ್ದಿ
Astrology Answers : ನನ್ನ ಮಗಳ ಮದುವೆ ಯಾವಾಗ ನಡೆಯುತ್ತದೆ ಗುರೂಜಿ?
ಇದು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಪರಿಹಾರ ನೀಡುವ ಅಂಕಣ (Astrology Answers). ಇಲ್ಲಿ ನಮ್ಮ ಓದುಗರು ಕೇಳುವ ಪ್ರಶ್ನೆಗಳಿಗೆ ರಾಜಗುರು ಬಿ. ಎಸ್. ದ್ವಾರಕನಾಥ್ ಅವರು ಉತ್ತರಿಸಲಿದ್ದಾರೆ, ಪರಿಹಾರ ಸೂಚಿಸಲಿದ್ದಾರೆ. ನೀವೂ ಪ್ರಶ್ನೆ ಕೇಳಬಹುದು.
ಪ್ರಶ್ನೆ : ನನ್ನ ಮಗಳ ಮದುವೆ ಮಾಡಬೇಕೆಂದು ಬಹಳವಾಗಿ ಪ್ರಯತ್ನ ಪಡುತ್ತಿರುವೆ. ಮಗಳ ಮದುವೆ ಯಾವಾಗ ನಡೆಯಬಹುದು ಎಂಬುದನ್ನು ತಿಳಿಸಿ ಗುರೂಜಿ.
ರಾಶಿ: ಧನಸ್ಸು ನಕ್ಷತ್ರ: ಮೂಲಾ
ಪರಿಹಾರ: ಮೂಲ ನಕ್ಷತ್ರದಲ್ಲಿ ಹುಟ್ಟಿದವರಿಗೆ ಇನ್ನೇನು ಶನಿ ಸಂಚಾರ ಮುಗಿಸಿ, ಒಳ್ಳೆಯ ಫಲ ಕೊಡುವ ಸಮಯ ಇದು. ಸಾಮಾನ್ಯವಾಗಿ ಈ ನಕ್ಷತ್ರದವರು ತಮ್ಮ ಇಷ್ಟದಂತೆ ಆಗಬೇಕೆಂದು ಆಸೆ ಪಡುತ್ತಾರೆ. ಅದಕ್ಕೆ ಈಗ ಸಕಾಲವಾಗಿದೆ. ತಾವು ತಮ್ಮ ಮಗಳ ಮದುವೆಯನ್ನು ಮಾಡಲು ದಶಾಭುಕ್ತಿಯೂ ಕೂಡ ಬಹಳ ಅನುಕೂಲಕರವಾಗಿದ್ದು, ಒಳ್ಳೆಯ ಫಲ ನೀಡುತ್ತದೆ. ಸಾಧ್ಯವಾದಲ್ಲಿ ಸರ್ವಮಂಗಳ ಮಾಂಗಲ್ಯೆ ಮಂತ್ರದಿಂದ ಸಂಪುಟೀಕರಣ ಪಾರಾಯಣ ಮಾಡಿಸಿ. ನಿಮ್ಮ ಮಗಳ ಮದುವೆಯು ಈಡೇರುತ್ತದೆ. ವರನನ್ನು ಹುಡುಕುವಾಗ ಮೂಲಾ ನಕ್ಷತ್ರದ ಹೆಣ್ಣು ಮಕ್ಕಳನ್ನು ಒಪ್ಪಿಕೊಳ್ಳಲು ಕೆಲವರು ಸಿದ್ಧರಿರದೇ ಇರಬಹುದು. ಇದರಿಂದ ನಿಮಗೆ ನಿರಾಸೆಯಾಗಬಹುದು. ಆದರೆ ಪ್ರಯತ್ನ ಬಿಡಬೇಡಿ. ಈ ರೀತಿಯ ತಿಳುವಳಿಕೆ ತಪ್ಪು. ಇದನ್ನು ಅರ್ಥಮಾಡಿಕೊಂಡವರೂ ಇರುತ್ತಾರೆ, ಯೋಚಿಸಬೇಡಿ.
ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್. ದ್ವಾರಕನಾಥ್ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ವಾಟ್ಸ್ ಆ್ಯಪ್ ಸಂಖ್ಯೆ ಅಥವಾ ಇ-ಮೇಲ್ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕಳುಹಿಸಲು ವಾಟ್ಸ್ ಆ್ಯಪ್ ಸಂಖ್ಯೆ: 9481024181, ಇ-ಮೇಲ್ ವಿಳಾಸ: janasamparka@abhilashbc
ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.
ಇದನ್ನೂ ಓದಿ: Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?
ಕರ್ನಾಟಕ
Reservation: ಒಬಿಸಿ ಮೀಸಲಾತಿ ಪುನರ್ ವರ್ಗೀಕರಿಸಿ ರಾಜ್ಯ ಸರ್ಕಾರ ಆದೇಶ; 2ಸಿ ಪ್ರವರ್ಗಕ್ಕೆ ಶೇ.6, 2ಡಿ ಪ್ರವರ್ಗಕ್ಕೆ ಶೇ.7 ಮೀಸಲಾತಿ
Reservation: ಒಕ್ಕಲಿಗರು ಮತ್ತು ಇತರ ಜಾತಿಗಳಿರುವ ಪ್ರವರ್ಗ 2ಸಿಗೆ ಶೇ.6 ಮತ್ತು ಲಿಂಗಾಯತರು, ವೀರಶೈವ ಪಂಚಮಸಾಲಿ ಹಾಗೂ ಇತರೆ ಜಾತಿಗಳಿರುವ ಪ್ರವರ್ಗ 2ಡಿಗೆ ಶೇ.7ರಷ್ಟು ಮೀಸಲಾತಿ ನಿಗದಿ ಮಾಡಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಒಕ್ಕಲಿಗ ಮತ್ತು ವೀರಶೈವ ಪಂಚಮಸಾಲಿ ಮೀಸಲಾತಿ ಪ್ರಮಾಣವನ್ನು ತಲಾ ಶೇ.2ರಷ್ಟು ಹೆಚ್ಚಿಸಲು ಸಚಿವ ಸಂಪುಟ ನಿರ್ಧಾರ ಕೈಗೊಂಡ ಬೆನ್ನಲ್ಲೇ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು (Reservation) ಪುನರ್ ವರ್ಗೀಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅತ್ಯಂತ ಹಿಂದುಳಿದ ಒಬಿಸಿ ಪ್ರವರ್ಗ-1ಕ್ಕೆ ಶೇ.4, ಪ್ರವರ್ಗ-2ಎ ಶೇ.15, ಪ್ರವರ್ಗ 2ಬಿ ಶೇ.0, ಅತೀ ಹಿಂದುಳಿದ ಪ್ರವರ್ಗ 2ಸಿಗೆ ಶೇ.6 ಹಾಗೂ ಪ್ರವರ್ಗ 2ಡಿಗೆ ಶೇ.7 ಮೀಸಲಾತಿ ಸೇರಿ ಒಟ್ಟು ಶೇ. 32ರಷ್ಟು ಮೀಸಲಾತಿ ನೀಡಿ ಆದೇಶ ಹೊರಡಿಸಲಾಗಿದೆ. ರಾಜ್ಯದ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ದೃಷ್ಟಿಯಿಂದ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಪುನರ್ ವರ್ಗೀಕರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಇಲಾಖೆ ತಿಳಿಸಿದೆ.
ಈ ಹಿಂದೆ ಒಕ್ಕಲಿಗರು ಮತ್ತು ಪಂಚಮಸಾಲಿಗಳಿಗೆ 2ಸಿ ಮತ್ತು 2 ಡಿ ಎಂಬ ಎರಡು ಹೊಸ ಪ್ರವರ್ಗಗಳನ್ನು ಸೃಷ್ಟಿಸಲಾಗಿತ್ತು. ಇವರಿಗೆ ಕೇಂದ್ರ ಸರ್ಕಾರ ಮೇಲ್ವರ್ಗದ ಬಡವರಿಗೆ ನಿಗದಿಪಡಿಸಿದ ಇಡಬ್ಲ್ಯುಎಸ್ ಶೇ. 10 ಮೀಸಲಾತಿಯಲ್ಲಿ ಅವಕಾಶ ನೀಡಲು ನಿರ್ಧರಿಸಲಾಗಿತ್ತು. ಆದರೆ, ಮಾ.24ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಕ್ಕಲಿಗರಿಗೆ ಮತ್ತು ವೀರಶೈವ ಪಂಚಮಸಾಲಿಗಳಿಗೆ ಮೀಸಲಾತಿಯನ್ನು ತಲಾ ಶೇ.2ರಷ್ಟು ಹೆಚ್ಚಿಸಲು ತೀರ್ಮಾನಿಸಲಾಗಿತ್ತು. ಜತೆಗೆ ಇತರ ಹಿಂದುಳಿದ ವರ್ಗದಲ್ಲಿ ಧಾರ್ಮಿಕ ಅಲ್ಪ ಸಂಖ್ಯಾತರಿಗೆ ಮೀಸಲಾತಿ ನೀಡುತ್ತಿದ್ದ 2ಬಿ ಪ್ರವರ್ಗ ರದ್ದು ಮಾಡಲಾಗಿತ್ತು.
ಹೊಸ ಮಾದರಿಯಲ್ಲಿ ಒಬಿಸಿಯಲ್ಲಿ 4 ಪ್ರವರ್ಗಗಳನ್ನು ಮಾಡಲಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರಿಗೆ ಇದ್ದ ಮೀಸಲಾತಿಯನ್ನು ರದ್ದು ಮಾಡಿ ಅವರಿಗಿದ್ದ ಶೇ.4ರಷ್ಟು ಮೀಸಲಾತಿಯನ್ನು ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚಲಾಗಿದೆ. ಹೀಗಾಗಿ ಧಾರ್ಮಿಕ ಅಲ್ಪಸಂಖ್ಯಾತರು ಇನ್ನು ಮುಂದೆ ಮೇಲ್ವರ್ಗದ ಬಡವರಿಗೆ ಮೀಸಲಿಟ್ಟ ʼಆರ್ಥಿಕವಾಗಿ ಹಿಂದುಳಿದ ವರ್ಗʼಗಳ (ಇಡಬ್ಲ್ಯುಎಸ್) ಶೇ.10 ಮೀಸಲಾತಿಯಲ್ಲಿ ಅವಕಾಶಗಳನ್ನು ಪಡೆಯಬೇಕಾಗಿದೆ.
ಸಂತಸ ವ್ಯಕ್ತಪಡಿಸಿದ ವಚನಾನಂದ ಸ್ವಾಮೀಜಿ
ಮೂರು ದಶಕಗಳ ಪಂಚಮಸಾಲಿ ಸಮುದಾಯದ ಹೋರಾಟಕ್ಕೆ ಮತ್ತೊಂದು ಸ್ಪಷ್ಟತೆ ದೊರೆತಿದೆ. 2ಡಿ ಪ್ರವರ್ಗಕ್ಕೆ ಶೇ. 7 ರಷ್ಟು ಮೀಸಲಾತಿಯನ್ನು ನೀಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದ್ದು ಒಂದು ಹಂತವಾದರೆ, ಮೀಸಲಾತಿಯನ್ನು ಪುನರ್ ವರ್ಗೀಕರಿಸಿ ಮೀಸಲಾತಿ ಪ್ರಮಾಣದ ಬಗ್ಗೆ ಅಧಿಕೃತ ಆದೇಶವನ್ನು ಸರ್ಕಾರ ಹೊರಡಿಸಿದೆ ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠಾಧ್ಯಕ್ಷರಾದ ಶ್ರೀ ವಚನಾನಂದ ಸ್ವಾಮೀಜಿ ತಿಳಿಸಿದ್ದಾರೆ.
ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ನೇತೃತ್ವದ ಹೋರಾಟಕ್ಕೆ ಮತ್ತೊಂದು ಯಶಸ್ಸು ದೊರೆತಿರುವುದು ಸಂತಸದ ವಿಷಯ. ಹರಿಹರ ಪೀಠ ಇದನ್ನು ತುಂಬು ಹೃದಯದಿಂದ ಸ್ವಾಗತಿಸುತ್ತದೆ. ಹಾಗೆಯೇ, ಕೇಂದ್ರ ಓಬಿಸಿ ಪಟ್ಟಿಯಲ್ಲಿ ಸ್ಥಾನ ದೊರಕಿಸಿ ಕೊಡುವ ನಿಟ್ಟಿನಲ್ಲಿ ಪ್ರಯತ್ನ ಮುಂದುವರೆಯಲಿದೆ ಎಂದು ಹೇಳಿದ್ದಾರೆ.
ಧಾರ್ಮಿಕ
Ram Navami 2023: ಶ್ರೀರಾಮನ ಪರಿಪೂರ್ಣತೆ ನಮ್ಮಲ್ಲಿ ತುಂಬಿಕೊಳ್ಳೋದು ಹೇಗೆ?
Ram Navami 2023: ಭಗವಾನ್ ಶ್ರೀರಾಮ ಎಂದರೆ ನಂಬಿಕೆ, ವಿಶ್ವಾಸ, ಭರವಸೆ ಹಾಗೂ ಪರಿಪೂರ್ಣತೆ. ಅಂತಹ ಪರಿಪೂರ್ಣತೆಯನ್ನು ಸಾಧಿಸಲು ಏನೆಲ್ಲ ಮಾಡಬೇಕು? ಇಲ್ಲಿದೆ ಮಾಹಿತಿ.
ಪ್ರಮುಖ ಸುದ್ದಿ
ವಿಸ್ತಾರ ಸಂಪಾದಕೀಯ: ಮತ ಪ್ರಮಾಣ ಹೆಚ್ಚಿಸುವ ಆಯೋಗದ ಕ್ರಮವನ್ನು ಬೆಂಬಲಿಸೋಣ
ಪ್ರತೀ ಪ್ರಜೆಗೂ ಮತದಾನ ಎಂಬುದು ಮೂಲಭೂತ ಹಕ್ಕು. ಚುನಾವಣೆ ಆಯೋಗದ ಸುಧಾರಣಾವಾದಿ ಕ್ರಮಗಳನ್ನು ಬೆಂಬಲಿಸುವುದು ತಮ್ಮ ಕರ್ತವ್ಯ ಎಂದು ನಾಗರಿಕರು ಪರಿಗಣಿಸಿದರೆ ಮಾತ್ರ ಮತ ಪ್ರಮಾಣ ಹೆಚ್ಚಲು ಸಾಧ್ಯ.
ಕೇಂದ್ರ ಚುನಾವಣೆ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆಯ ದಿನವನ್ನು ಘೋಷಿಸಿದೆ. ಮೇ 10ರಂದು ಒಂದೇ ಹಂತದಲ್ಲಿ ಚುನಾವಣೆ ನಡೆದು, ಮೇ 13ರಂದು ಮತ ಎಣಿಕೆಯಾಗಿ ಫಲಿತಾಂಶ ಕೂಡ ಬರಲಿದೆ. ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯುವುದರ ಜತೆಗೆ, ಮತದಾನ ಪ್ರಮಾಣವನ್ನೂ ಹೆಚ್ಚಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುತ್ತಿರುವುದಾಗಿ ಆಯೋಗ ಘೋಷಿಸಿದೆ. ಮುಖ್ಯವಾಗಿ ನಗರ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಕಡಿಮೆಯಿದೆ. ವಿದ್ಯಾವಂತರೇ ಮತದಾನ ಮಾಡುತ್ತಿಲ್ಲ ಎಂಬುದು ನಮ್ಮ ಪ್ರಜಾಪ್ರಭುತ್ವಕ್ಕೆ ಸವಾಲಾಗಿರುವ ಕೊರಗುಗಳಲ್ಲಿ ಒಂದು. ಹೀಗಾಗಿ ಮತದಾರರನ್ನು ಮತಗಟ್ಟೆಯತ್ತ ಸೆಳೆಯಲು ಆಯೋಗ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇವುಗಳಿಗೆ ಪೂರಕವಾಗಿ ಎಲ್ಲರೂ ಸ್ಪಂದಿಸಬೇಕಿದೆ.
ಸಾಮಾನ್ಯವಾಗಿ ವಾರಾಂತ್ಯ ಅಥವಾ ವಾರದ ಆರಂಭದಲ್ಲಿ ಮತದಾನ ದಿನ ನಿಗದಿಪಡಿಸಿದರೆ ಒಂದಿಷ್ಟು ಸಂಖ್ಯೆಯ ಮತದಾರರು ಪ್ರವಾಸಕ್ಕೆ ಹೊರಡುವ ಪ್ರವೃತ್ತಿಯನ್ನು ನಾವು ಈ ಹಿಂದಿನ ಚುನಾವಣೆಗಳಲ್ಲಿ ಗಮನಿಸಿದ್ದೇವೆ. ಅದನ್ನು ತಪ್ಪಿಸಲು ಈ ಬಾರಿ ಆಯೋಗವು ವಾರದ ನಡುವೆ ಮತದಾನದ ದಿನ ನಿಗದಿಪಡಿಸಿದ್ದು ಕೂಡ ಯೋಜಿತ ಮತ್ತು ಪರಿಣಾಮಕಾರಿ ನಿರ್ಧಾರ ಎನ್ನಬಹುದಾಗಿದೆ. ಹಾಗೆಯೇ ಎಲ್ಲರೂ ಮತದಾನ ಮಾಡಲು ಅವಕಾಶ ದೊರೆಯಬೇಕು ಎನ್ನುವ ಉದ್ದೇಶದಿಂದ ಮೊದಲ ಬಾರಿಗೆ ಮತದಾನ ಕೇಂದ್ರಕ್ಕೆ ಬರಲು ಆಗದ 80 ವರ್ಷಕ್ಕೂ ಮೇಲ್ಪಟ್ಟವರು, ಗಂಭೀರ ಅನಾರೋಗ್ಯ ಬಾಧಿತರು ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ. ಜತೆಗೆ ಮತದಾನ ಕೇಂದ್ರದಲ್ಲೂ ಇವರಿಗೆ ವಿಶೇಷ ಸೌಲಭ್ಯ ಮಾಡಲಾಗಿದೆ. ಆದರೆ ಮೊದಲೇ ಈ ಬಗ್ಗೆ ನೋಂದಾಯಿಸಿಕೊಳ್ಳಬೇಕು. ಅಂಥ ಒಂದು ಮತದ ಸಂಗ್ರಹಕ್ಕೆ ಮೂರ್ನಾಲ್ಕು ಮಂದಿಯನ್ನು ನಿಯೋಜಿಸಲಾಗುತ್ತದೆ ಎಂದರೆ, ಒಂದೊಂದು ಮತವನ್ನೂ ಆಯೋಗ ಎಷ್ಟು ಗಂಭಿರವಾಗಿ ಪರಿಗಣಿಸಿದೆ ಎಂಬುದನ್ನು ಗಮನಿಸಬಹುದು. ಕರ್ನಾಟಕದಲ್ಲಿ ಮೊದಲ ಬಾರಿಗೆ ಜಾರಿಯಾಗುತ್ತಿರುವ ಇದೊಂದು ಕ್ರಾಂತಿಕಾರಿ ಉಪಕ್ರಮವೇ ಸರಿ. ಅಗತ್ಯವಿದ್ದವರು ಇದರ ಸದ್ಬಳಕೆ ಮಾಡಿಕೊಳ್ಳಬೇಕಿದೆ.
ಯುವ ಮತದಾರರಿಗೆ, ಮೊದಲ ಬಾರಿಗೆ ಮತ ಹಾಕುತ್ತಿರುವವರಿಗೆ ಉತ್ತೇಜನ ನೀಡುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕರ್ನಾಟಕದಲ್ಲಿ ಕರ್ನಾಟಕದಲ್ಲಿ 5, 21, 73, 573 ಮತದಾರರಿದ್ದು, ಇದರಲ್ಲಿ ಮೊದಲ ಬಾರಿಯ ಮತದಾರರ ಸಂಖ್ಯೆ 9.17 ಲಕ್ಷದಷ್ಟು ಹೆಚ್ಚಳವಾಗಿದೆ. ಇವರನ್ನು ಮತಗಟ್ಟೆಗಳತ್ತ ತರಲು ಉತ್ಸಾಹ ತುಂಬಲು, ಪ್ರಜಾಪ್ರಭುತ್ವದಲ್ಲಿ ಅವರ ಹೊಣೆಯ ಕುರಿತು ಆಡುವ ನಾಲ್ಕು ಪ್ರೋತ್ಸಾಹದ ಮಾತುಗಳೂ ಸಾಕಾಗುತ್ತವೆ. ಇವರನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಜೇನು ಕುರುಬ ಹಾಗೂ ಕೊರಗ ಸಮುದಾಯಗಳನ್ನು ಬುಡಕಟ್ಟು ಸಮುದಾಯಗಳು ಎಂದು ಪರಿಗಣಿಸಲಾಗಿದ್ದು, ಈ ಸಮುದಾಯದವರ ಮತದಾನಕ್ಕೆ 40 ಮತಗಟ್ಟೆ ಮಾಡಲಾಗಿದೆ. ಮತಗಟ್ಟೆಗಳ ಸಂಖ್ಯೆ ಹೆಚ್ಚಿಸಲಾಗಿರುವುದರಿಂದ ಒತ್ತಡ ಕಡಿಮೆಯಾಗಲಿದೆ. ಬೆಂಗಳೂರು ನಗರದಲ್ಲಿ ಯುವಮತದಾರರ ಪಾಲ್ಗೊಳ್ಳುವಿಕೆ ಹೆಚ್ಚಿಸಲು ಐಐಎಸ್ಸಿ, ಐಐಟಿ ಹಾಗೂ ಸ್ಟಾರ್ಟಪ್ಗಳ ಸಹಯೋಗದೊಂದಿಗೆ ಎಲೆಕ್ಥಾನ್ ಹಾಗೂ ಇನ್ನಿತರ ಕ್ರಮಗಳನ್ನು ಆಯೋಗ ಕೈಗೊಳ್ಳುತ್ತಿದೆ. ಮತ ಪ್ರಮಾಣ ಹೆಚ್ಚಿಸುವ ಸಲಹೆ ನೀಡುವವರಿಗೆ ಬಹುಮಾನ ಇತ್ಯಾದಿ ಹಲವು ಕ್ರಮಗಳನ್ನು ಕೈಗೊಂಡಿರುವುದು ಕ್ರಾಂತಿಕಾರಕವಾಗಿದೆ.
ಪ್ರತಿ ಮತವೂ ಅಮೂಲ್ಯ ಎಂದು ನಾವು ಹೇಳುತ್ತೇವೆ. ಆದರೆ, ಮುಖ್ಯವಾಗಿ ನಗರ ಪ್ರದೇಶಗಳಲ್ಲೇ ಮತದಾನ ಪ್ರಮಾಣ ಶೇ.60ನ್ನು ದಾಟುವುದಿಲ್ಲ. ನಗರ ಪ್ರದೇಶದ ಮತದಾರರ ಆಲಸ್ಯ ಹಾಗೂ ಹಣದ ಪ್ರಾಬಲ್ಯವು ಕರ್ನಾಟಕದಲ್ಲಿ ಪ್ರಮುಖ ಸವಾಲಾಗಿದೆ ಎಂದು ಆಯೋಗವೇ ಹೇಳಿದೆ. ಸುಶಿಕ್ಷಿತರು ಮತದಾನ ಮಾಡುವುದು ತಮ್ಮ ಕರ್ತವ್ಯ ಎಂದು ಭಾವಿಸಿದಾಗ ಮಾತ್ರ ಇದಕ್ಕೆ ಪರಿಹಾರ. ಪ್ರಜಾಪ್ರಭುತ್ವವೆಂಬುದು ಸುಮ್ಮನೇ ಯಾರೋ ನಮಗೆ ತಟ್ಟೆಯಲ್ಲಿಟ್ಟು ಕೊಟ್ಟ ಉಡುಗೊರೆಯಲ್ಲ. ಪ್ರತಿ ಪ್ರಜೆಯೂ ಪ್ರತಿ ಕಾಲದಲ್ಲೂ ತಮ್ಮ ಪ್ರಜಾಪ್ರಭುತ್ವವನ್ನು ಉತ್ತಮಗೊಳಿಸಿಕೊಳ್ಳಲು ಸದಾ ಶ್ರಮಿಸುತ್ತಿರಬೇಕು. ಸಂವಿಧಾನದ ಪ್ರಕಾರ ಪ್ರತೀ ಪ್ರಜೆಗೂ ಮತದಾನ ಎಂಬುದು ಮೂಲಭೂತ ಹಕ್ಕು. ಮತದಾನದ ಒಂದು ದಿನದಂದು ಮಾತ್ರವೇ ಪ್ರಜೆ ಪ್ರಭುವಾಗಿರುತ್ತಾನೆ. ಅಂದು ಸರಿಯಾಗಿ ತಮ್ಮ ಅಧಿಕಾರ ಚಲಾಯಿಸದೇ ಹೋದರೆ ಮುಂದಿನ ಐದು ವರ್ಷ ತಮಗಿಷ್ಟವಿಲ್ಲದ ವ್ಯಕ್ತಿಗಳ ಗುಲಾಮರಾಗಿರಬೇಕಾಗುತ್ತದೆ. ಚುನಾವಣೆ ಆಯೋಗದ ಸುಧಾರಣಾವಾದಿ ಕ್ರಮಗಳನ್ನು ಬೆಂಬಲಿಸುವುದು ತಮ್ಮ ಕರ್ತವ್ಯ ಎಂದು ನಾಗರಿಕರು ಪರಿಗಣಿಸಬೇಕು. ಆಗ ಮಾತ್ರ ಮತದಾನ ಪ್ರಮಾಣ ಹೆಚ್ಚಲು ಸಾಧ್ಯವಾಗುತ್ತದೆ.
ದೇಶ
ಬಾಲಕಿಯ ಪ್ರಾಣ ಉಳಿಸಲು 7 ಲಕ್ಷ ರೂ. ಜಿಎಸ್ಟಿ ಬಿಟ್ಟ ಕೇಂದ್ರ, ಮಾನವೀಯತೆ ಮೆರೆದ ಶಶಿ ತರೂರ್
ಕ್ಯಾನ್ಸರ್ನಿಂದ ಬಳಲುತ್ತಿರುವ ಬಾಲಕಿಯ ನೆರವಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಸಂಸದ ಶಶಿ ತರೂರ್ ಅವರು ಧಾವಿಸಿದ್ದು, ಇದರಿಂದ ಬಾಲಕಿಯು ಚಿಕಿತ್ಸೆ ಪಡೆಯಲು ಸಾಧ್ಯವಾಗಿದೆ. ಮಾನವೀಯ ನೆಲೆಯ ನಡೆಯ ಬಗ್ಗೆ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ನವದೆಹಲಿ/ತಿರುವನಂತಪುರಂ: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗೆ ಮಾನವೀಯತೆ ಇದ್ದರೆ, ಆಳುವ ಸರ್ಕಾರಕ್ಕೆ ಜನರ ಮೇಲೆ ಕಾಳಜಿ ಇದ್ದರೆ ಏನೆಲ್ಲ ಆಗುತ್ತದೆ ಎಂಬುದಕ್ಕೆ ನಿದರ್ಶನ ಸಿಕ್ಕಿದೆ. ಹೌದು, ಕ್ಯಾನ್ಸರ್ನಿಂದ ಬಳಲುತ್ತಿರುವ ಬಾಲಕಿಯೊಬ್ಬಳ ಪ್ರಾಣ ಉಳಿಸಲು ಕೇಂದ್ರ ಸರ್ಕಾರವು 7 ಲಕ್ಷ ರೂಪಾಯಿ ಜಿಎಸ್ಟಿಗೆ ವಿನಾಯಿತಿ ನೀಡಿದರೆ, ಬಾಲಕಿಗೆ ಅಗತ್ಯ ನೆರವಿನ ವ್ಯವಸ್ಥೆ ಮಾಡಿಸುವ ಮೂಲಕ ತಿರುವನಂತಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್ ಮಾನವೀಯತೆ ಮೆರೆದಿದ್ದಾರೆ.
ನಿಹಾರಿಕಾ ಎಂಬ ಬಾಲಕಿಯು ನ್ಯೂರೋಬ್ಲಾಸ್ಟೋಮಾ (Neuroblastoma) ಎಂಬ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದಾಳೆ. ಕ್ಯಾನ್ಸರ್ ಈಕೆಗೆ ನಾಲ್ಕನೇ ಸ್ಟೇಜ್ನಲ್ಲಿದೆ. ಬಾಲಕಿಯ ಪ್ರಾಣ ಉಳಿಸಲು ಡಿನುಟುಕ್ಸಿಮ್ಯಾಬ್ ಬೆಟಾ (Dinutuximab Beta) ಅಥವಾ ಕರ್ಜಿಬಾ (Qarziba) ಎಂಬ ಇಂಜೆಕ್ಷನ್ ನೀಡಬೇಕು. ಈ ಇಂಜೆಕ್ಷನ್ನ ಒಂದು ಬಾಟಲಿಗೆ 10 ಲಕ್ಷ ರೂಪಾಯಿ ಇದ್ದು, ಇದನ್ನು ವಿದೇಶದಿಂದ ತರಿಸಬೇಕು. ಹೀಗೆ, ತರಿಸಿದ ಇಂಜೆಕ್ಷನ್ ಬೆಲೆ ಒಟ್ಟು 63 ಲಕ್ಷ ರೂಪಾಯಿ ಆಗಿದೆ. ಇದಕ್ಕೆ 7 ಲಕ್ಷ ರೂಪಾಯಿ ಜಿಎಸ್ಟಿ ಕಟ್ಟಬೇಕಿರುತ್ತದೆ. ಆದರೆ, ನಿಹಾರಿಕಾಳ ಕುಟುಂಬ ಸಂಕಷ್ಟದಲ್ಲಿರುವ ಕಾರಣ ಇಷ್ಟೊಂದು ಮೊತ್ತ ಭರಿಸಲು ಆಗುತ್ತಿರಲಿಲ್ಲ.
ಶಶಿ ತರೂರ್ ಪತ್ರ
ನೆರವಿಗೆ ಧಾವಿಸಿದ ಶಶಿ ತರೂರ್
ನಿಹಾರಿಕಾ ಕುಟುಂಬದ ಸಂಕಷ್ಟ ಅರಿತ ಶಶಿ ತರೂರ್ ಅವರು ನೆರವಿಗೆ ಧಾವಿಸಿದ್ದಾರೆ. ಮಾನವೀಯತೆ ಆಧಾರದ ಮೇಲೆ 7 ಲಕ್ಷ ರೂಪಾಯಿ ಜಿಎಸ್ಟಿ ಮನ್ನಾ ಮಾಡಬೇಕು ಎಂಬುದಾಗಿ ಹಣಕಾಸು ಸಚಿವಾಲಯಕ್ಕೆ ಪತ್ರ ಬರೆಯುತ್ತಾರೆ. ಆದರೆ, ಸಚಿವಾಲಯದಿಂದ ಯಾವುದೇ ಪ್ರತಿಕ್ರಿಯೆ ಬರುವುದಿಲ್ಲ. ಮತ್ತೊಂದೆಡೆ, ಔಷಧವು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದು, ತೆರಿಗೆ ಕಟ್ಟದಿದ್ದರೆ ಅದನ್ನು ನೀಡುವುದಿಲ್ಲ ಎಂಬುದಾಗಿ ಕಸ್ಟಮ್ಸ್ ಅಧಿಕಾರಿಗಳು ಹೇಳುತ್ತಾರೆ. ಆದರೂ ಪ್ರಯತ್ನ ಬಿಡದ ಶಶಿ ತರೂರ್ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ನೇರವಾಗಿ ಕರೆ ಮಾಡಿ ಪರಿಸ್ಥಿತಿ ವಿವರಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಜಿಎಸ್ಟಿ ವಿನಾಯಿತಿ ನೀಡಲು ಒಪ್ಪಿ, ಕೊನೆಗೆ ಮಾರ್ಚ್ 28ರಂದು ಔಷಧಿಯು ನಿಹಾರಿಕಾ ಕುಟುಂಬಸ್ಥರ ಕೈ ಸೇರುತ್ತದೆ.
ಇದನ್ನೂ ಓದಿ: Karwar News: ನಿತ್ರಾಣಗೊಂಡಿದ್ದ ಭಿಕ್ಷುಕನ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಾರಿಗೆ ಸಿಬ್ಬಂದಿ
ಸೀತಾರಾಮನ್ಗೆ ತರೂರ್ ಧನ್ಯವಾದ
ಇಡೀ ಘಟನೆಯನ್ನು ಶಶಿ ತರೂರ್ ಅವರು ಪತ್ರದ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸಿದ್ದಾರೆ. “ಪುಟ್ಟ ಬಾಲಕಿಗೆ ಈಗ ಇಂಜೆಕ್ಷನ್ ಸಿಗಲಿದೆ. ಆಕೆ ಬದುಕುಳಿಯಲಿದ್ದಾಳೆ. ಕೇಂದ್ರ ಸರ್ಕಾರವು ಏಳು ಲಕ್ಷ ರೂಪಾಯಿ ಆದಾಯವನ್ನು ಬಿಟ್ಟಿದೆ. ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದಗಳು. ರಾಜಕೀಯದ ಹೊರತಾಗಿಯೂ ನೀವು ಮಾನವೀಯತೆ ಮೆರೆದಿದ್ದೀರಿ. ಸರ್ಕಾರದ ಮೇಲೆ ನಾನು ಇಟ್ಟಿರುವ ನಂಬಿಕೆಯನ್ನು ಹೆಚ್ಚಿಸಿದ್ದೀರಿ” ಎಂಬುದಾಗಿ ಭಾವುಕರಾಗಿ ಸಚಿವೆಗೆ ಧನ್ಯವಾದ ತಿಳಿಸಿದ್ದಾರೆ. ಶಶಿ ತರೂರ್ ಪೋಸ್ಟಿಗೆ ಸಾವಿರಾರು ಜನ ಪ್ರತಿಕ್ರಿಯಿಸಿದ್ದು, ಸಂಸದ ಹಾಗೂ ನಿರ್ಮಲಾ ಸೀತಾರಾಮನ್ ಅವರಿಗೆ ಮೆಚ್ಚುಗೆ ಸೂಚಿಸಿದ್ದಾರೆ.
-
ಕರ್ನಾಟಕ14 hours ago
Karnataka Election: ಮೇ 10ರಂದು ಕರ್ನಾಟಕ ಚುನಾವಣೆ; ಮೇ 13ಕ್ಕೆ ಫಲಿತಾಂಶ ಎಂದು ಘೋಷಿಸಿದ ಚುನಾವಣಾ ಆಯೋಗ
-
ಕರ್ನಾಟಕ15 hours ago
Karnataka Election 2023 LIVE: ಕರ್ನಾಟಕದಲ್ಲಿ ಮೇ 10ಕ್ಕೆ ಮತದಾನ, 13ಕ್ಕೆ ರಿಸಲ್ಟ್, ಒಂದೇ ಹಂತದ ಎಲೆಕ್ಷನ್
-
ಕರ್ನಾಟಕ18 hours ago
Karnataka Election: ಕರ್ನಾಟಕ ಚುನಾವಣೆ ದಿನಾಂಕ ಇಂದು ಘೋಷಣೆ, ಇಂದಿನಿಂದಲೇ ನೀತಿ ಸಂಹಿತೆ ಜಾರಿ
-
ಕರ್ನಾಟಕ13 hours ago
Karnataka Election: ನೀತಿ ಸಂಹಿತೆಗೆ ಮೊದಲೇ ತುಂಬಿತು ಅಕ್ರಮದ ಪಾತ್ರೆ: 2018ರ ಹಣದ ಹೊಳೆಯನ್ನು ಈಗಲೇ ಮೀರಿಸಿದ ಕರ್ನಾಟಕ !
-
ಪ್ರಮುಖ ಸುದ್ದಿ9 hours ago
UPI transactions : ಯುಪಿಐ ಬಳಕೆ ಗ್ರಾಹಕರಿಗೆ ಸಂಪೂರ್ಣ ಉಚಿತ ಎಂದ ಎನ್ಪಿಸಿಐ, ಹಾಗಾದರೆ 1.1% ಶುಲ್ಕ ಯಾರಿಗೆ?
-
ಗ್ಯಾಜೆಟ್ಸ್10 hours ago
Google: ಗೂಗಲ್ಗೆ 1337 ಕೋಟಿ ರೂ. ದಂಡ, 30 ದಿನದಲ್ಲಿ ಪಾವತಿಸಲು ನ್ಯಾಯಮಂಡಳಿ ಆದೇಶ!
-
ಕರ್ನಾಟಕ12 hours ago
Karnataka Elections 2023 : ವಲಸಿಗ ಸಚಿವರ ಮೇಲೆ ಬೊಮ್ಮಾಯಿ ನಿಗಾ; ಹೆಬ್ಬಾರ್, ಮುನಿರತ್ನ ಕರೆಸಿಕೊಂಡು ಚರ್ಚೆ
-
ಕರ್ನಾಟಕ16 hours ago
Karnataka Elections 2023 : 8 ಸಚಿವರ ಸಹಿತ 35 ಶಾಸಕರಿಗೆ ಸೋಲಿನ ಭೀತಿ, ಈ ಬಾರಿ ಬಿಜೆಪಿಯಲ್ಲಿ 50 ಹೊಸ ಮುಖ?