ಪ್ರಶ್ನೆ: ವೈವಾಹಿಕ ಜೀವನದಲ್ಲಿ ನೆಮ್ಮದಿ ಇಲ್ಲ. ಉದ್ಯೋಗದಲ್ಲೂ ಪ್ರಗತಿ ಇಲ್ಲ. ದಯವಿಟ್ಟು ದಾರಿ ತೋರಿಸಿ ಗುರೂಜಿ
ರಾಶಿ: ಮೇಷ ನಕ್ಷತ್ರ: ಭರಣಿ
ಪರಿಹಾರ: ಭರಣಿ ನಕ್ಷತ್ರದಲ್ಲಿ ಜನಿಸಿದ ನಿಮಗೆ ಲಗ್ನದಲ್ಲಿ ಗುರು ರಾಹು ಇದ್ದು, ಮನಸ್ಸು ಚಂಚಲವಾಗಿದೆ. ದೇವರಲ್ಲಿ ಅಚಲ ಭಕ್ತಿ ಇಲ್ಲದಿದ್ದರೆ ಏನೂ ದೊರಕದು. ಪುರುಷರು ಸಂಗಾತಿಯೊಂದಿಗೆ ಪ್ರೀತಿಯಿಂದ ಇದ್ದು, ದರ್ಪ ತೋರಿಸದೆ ಜೀವನ ಸಾಗಿಸಿದರೆ ಯಾವ ಕಷ್ಟವೂ ಬಾರದು. ನಿಮ್ಮ ಹಠದ ಸ್ವಭಾವ ಬಿಟ್ಟು, ಧೋರಣೆ, ದರ್ಪ ಸರಿ ಮಾಡಿಕೊಂಡರೆ, ಏಕಾದಶದಲ್ಲಿರುವ ಶನಿಯು ನಿಮ್ಮ ಉದ್ಯೋಗದಲ್ಲಿ ಪ್ರಗತಿಯನ್ನು ತರುತ್ತಾನೆ. ವೈವಾಹಿಕ ಜೀವನದಲ್ಲಿ ಸುಖ-ಸಂತೋಷವನ್ನು ನೀಡುತ್ತಾನೆ. ಶ್ರೀ ಗುರು ನರಸಿಂಹನನ್ನು ಪೂಜಿಸಿ, ಪ್ರಾರ್ಥಿಸಿ. ಒಳ್ಳೆಯದಾಗಲಿ.
ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್. ದ್ವಾರಕನಾಥ್ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ವಾಟ್ಸ್ ಆ್ಯಪ್ ಸಂಖ್ಯೆ ಅಥವಾ ಇ-ಮೇಲ್ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕಳುಹಿಸಲು ವಾಟ್ಸ್ ಆ್ಯಪ್ ಸಂಖ್ಯೆ: 9481024181, janasamparka@vistaranews.com
ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.
ಇದನ್ನೂ ಓದಿ: Astrology: ನಿಮ್ಮ ರಾಶಿಗೆ ಸಾಡೇಸಾತಿ ಮತ್ತು ಶನಿ ದೆಸೆ ಯಾವಾಗ ಇದೆ ಗೊತ್ತೆ?