Site icon Vistara News

Astrology Answers : ನನಗೆ ಕೆಲಸವೇ ಸರಿಹೋಗುತ್ತಿಲ್ಲ, ಇದೇ ಸಮಸ್ಯೆಯಾಗಿದೆ, ಪರಿಹಾರ ತಿಳಿಸಿ ಗುರೂಜಿ

ಭವಿಷ್ಯ ಪ್ರಶ್ನೋತ್ತರ rajaguru

rajaguru

ಪ್ರಶ್ನೆ: ನನಗೆ ನನ್ನ ಕೆಲಸದ್ದೇ ಸಮಸ್ಯೆಯಾಗಿದೆ. ಎಲ್ಲಿ ಹೋದರೂ ನನಗೆ ಸರಿಯಾದ ಕೆಲಸ ಸಿಗುತ್ತಿಲ್ಲ. ಏನು ಮಾಡುವುದು ತಿಳಿಸಿ ಗುರೂಜಿ.
ರಾಶಿ: ಮಿಥುನ ನಕ್ಷತ್ರ: ಆರಿದ್ರಾ

ಪರಿಹಾರ: ಆರಿದ್ರಾ ನಕ್ಷತ್ರ ಮಿಥುನ ರಾಶಿಯಲ್ಲಿ ಜನಿಸಿದ ನಿಮಗೆ ದೈವಭಲ ಹಾಗೂ ಗ್ರಹಬಲ ಎರಡು ಇದ್ದು, ನಿಮ್ಮ ಕೆಲಸಗಳನ್ನು ಪೂರೈಸಿಕೊಳ್ಳಲು ಇದು ಒಳ್ಳೆಯ ಸಮಯ. ಗುರು-ರಾಹು ಸಂಯೋಜನೆಯಲ್ಲಿ ಇದ್ದರೂ, ಕೆಲಸಗಳು ನಿಲ್ಲದೆ ನಿಧಾನವಾಗಿ ಸಾಗುತ್ತವೆ. ಶನಿಯು ನವಮಕ್ಕೆ ಬಂದಿದ್ದು, ನಿಮ್ಮ ವೃತ್ತಿಯಲ್ಲಿ ಏಳಿಗೆಯನ್ನು, ಯಶಸ್ಸನ್ನು ಕಾಣುತ್ತೀರಿ. ಮಾಡುವ ಕೆಲಸವನ್ನು ಶ್ರದ್ಧೆಯಿಂದ ಮಾಡಿ. ಸ್ಪಷ್ಟ ನಿರ್ಧಾರ ತೆಗೆದುಕೊಂಡು ಹಿಡಿದ ಕೆಲಸವನ್ನು ಪೂರ್ಣಗೊಳಿಸಿ. ಆಗ ನೀವು ಹಿಡಿದ ವೃತ್ತಿಯಲ್ಲಿಯೂ ಯಶಸ್ಸನ್ನು ಕಾಣುವುದರಲ್ಲಿ ಸಂದೇಹವಿಲ್ಲ. ಶುಭವಾಗಲಿ.

ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್‌ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್‌. ದ್ವಾರಕನಾಥ್‌ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ವಾಟ್ಸ್‌ ಆ್ಯಪ್ ಸಂಖ್ಯೆ ಅಥವಾ ಇ-ಮೇಲ್‌ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕಳುಹಿಸಲು ವಾಟ್ಸ್‌ ಆ್ಯಪ್ ಸಂಖ್ಯೆ: 9481024181, janasamparka@vistaranews.com

ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.

ಇದನ್ನೂ ಓದಿ: Astrology: ನಿಮ್ಮ ರಾಶಿಗೆ ಸಾಡೇಸಾತಿ ಮತ್ತು ಶನಿ ದೆಸೆ ಯಾವಾಗ ಇದೆ ಗೊತ್ತೆ?

Exit mobile version