Dina Bhavishya: ಇಂದು ಈ ರಾಶಿಯವರ ಜೀವನದಲ್ಲಿ ಹೊಸ ತಿರುವು ಸಿಗಲಿದೆ - Vistara News

ಪ್ರಮುಖ ಸುದ್ದಿ

Dina Bhavishya: ಇಂದು ಈ ರಾಶಿಯವರ ಜೀವನದಲ್ಲಿ ಹೊಸ ತಿರುವು ಸಿಗಲಿದೆ

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷದ ಪಾಡ್ಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your horoscope today 12 january 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಶುಕ್ರವಾರವೂ ಕುಂಭ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಮಿಥುನ ರಾಶಿಯವರು ನಿಮ್ಮ ಕೋಪದಿಂದ ಇತರರ ಮೇಲೆ ಒತ್ತಡ ಹಾಕುವುದು ಬೇಡ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕನ್ಯಾ ರಾಶಿಯವರು ನಕಾರಾತ್ಮಕ ಆಲೋಚನೆಗಳಿಂದ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಅದರಿಂದ ದೂರ ಇರಿ. ಧನಸ್ಸು ರಾಶಿಯವರು ಕೆಲವು ಅನಿವಾರ್ಯ ಸಂದರ್ಭಗಳು ನಿಮಗೆ ಅಹಿತಕರವೆನಿಸಬಹುದು. ಆತುರದಲ್ಲಿ ಅತಿರೇಕದ ಮಾತುಗಳು ಬೇಡ. ಆದರೆ ಹೂಡಿಕೆಯಲ್ಲಿ ತೊಡಗಿಸಿದ ಹಣ ಇಮ್ಮಡಿ ಲಾಭ ತರುವುದು. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (12-01-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷ
ತಿಥಿ: ಪಾಡ್ಯ 14:22 ವಾರ: ಶುಕ್ರವಾರ
ನಕ್ಷತ್ರ: ಉತ್ತರಾಷಾಡ 15:17 ಯೋಗ: ಹರ್ಷಣ 14:03
ಕರಣ: ಭವ 14:22 ಅಮೃತ ಕಾಲ: ಬೆಳಗ್ಗೆ 09:32 ರಿಂದ 10:58ರವರೆಗೆ
ದಿನದ ವಿಶೇಷ: ಸ್ವಾಮಿ ವಿವೇಕಾನಂದರ ಜನ್ಮದಿನ (ಯುವದಿನ), ಚಂದ್ರದರ್ಶನ

ಸೂರ್ಯೋದಯ : 06:45  ಸೂರ್ಯಾಸ್ತ : 06:11

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಉತ್ಸಾಹದ ದಿನವಿದು. ಪ್ರಭಾವಿತ ವ್ಯಕ್ತಿಗಳ ಬೆಂಬಲ ಸಿಗಲಿದೆ. ಜೀವನದಲ್ಲಿ ಹೊಸ ತಿರುವು ಪಡೆದುಕೊಳ್ಳುವ ಸಾಧ್ಯತೆಯಿದೆ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕೌಟುಂಬಿಕ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ನಿಮ್ಮ ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಆರ್ಥಿಕವಾಗಿ ಇಂದು ನೀವು ಸಾಕಷ್ಟು ಬಲವಾಗಿ ಕಾಣುವಿರಿ. ಸಂಗಾತಿಯೊಂದಿಗೆ ಮಾತಿಗೆ ಇಳಿಯುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಜನರ ಸಹಕಾರ ಸಿಗಲಿದೆ. ನಿಮ್ಮ ಕೋಪದಿಂದ ಇತರರ ಮೇಲೆ ಒತ್ತಡ ಹಾಕುವುದು ಬೇಡ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಪ್ರಭಾವಿ ವ್ಯಕ್ತಿಗಳ ಬೆಂಬಲ ಸಿಗಲಿದೆ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಹೊಸ ಯೋಜನೆ, ಯೋಚನೆಗಳು ಫಲ ನೀಡಲಿವೆ. ಹಣಕಾಸು ವ್ಯವಹಾರದಲ್ಲಿ ಸಾಧಾರಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ, ಕಾಳಜಿ ವಹಿಸಿ.ಕುಟುಂಬದ ಬೆಂಬಲ ಸಿಗಲಿದೆ. ಆತುರದ ತೀರ್ಮಾನ ಕೈಗೊಳ್ಳುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ನಕಾರಾತ್ಮಕ ಆಲೋಚನೆಗಳಿಂದ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಅದರಿಂದ ದೂರ ಇರಿ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದ ಕಾರ್ಯವು ಆಯಾಸವನ್ನುಂಟು ಮಾಡಲಿದೆ. ಆಲಸ್ಯದಿಂದ ಕೆಲಸ ಕಾರ್ಯಗಳನ್ನು ಮುಂದೂಡುವುದು ಬೇಡ. ಅತಿಥಿಗಳ ಆಗಮನ ಸಂತಸ ತರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು. ಅನುಮಾನವು ಸಂಬಂಧಗಳನ್ನು ಹಾಳು ಮಾಡುವುದು. ಕುಟುಂಬದಲ್ಲಿ ಮಾತಿಗೆ ಮಾತು ಬೆಳೆಸುವುದು ಬೇಡ. ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಕೆಲವು ಅನಿವಾರ್ಯ ಸಂದರ್ಭಗಳು ನಿಮಗೆ ಅಹಿತಕರವೆನಿಸಬಹುದು. ಆತುರದಲ್ಲಿ ಅತಿರೇಕದ ಮಾತುಗಳು ಬೇಡ. ಹೂಡಿಕೆಯಲ್ಲಿ ತೊಡಗಿಸಿದ ಹಣ ಇಮ್ಮಡಿ ಲಾಭ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಜೀವನದಲ್ಲಿ ಭರವಸೆ ಮೂಡಲಿದೆ. ಅನಿರೀಕ್ಷಿತವಾಗಿ ಹಣ ಖರ್ಚು ಮಾಡುವಿರಿ. ಸಂಬಂಧಿಗಳಿಂದ ಕುಟುಂಬಕ್ಕೆ ಶುಭ ಸಿಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ದಿನದ ಕೊನೆಯಲ್ಲಿ ಗಳಿಗೆಯಲ್ಲಿ ಸ್ವಲ್ಪ ಒತ್ತಡ ಉಂಟಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಅನೇಕ ವಿಷಯಗಳು ನಿಮಗೆ ಸಂತಸ ತರುವುದು. ದೀರ್ಘಕಾಲದ ಕೆಲಸ ಇಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ಆರ್ಥಿಕ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಟೀಕಿಸುವವರ ಮಾತುಗಳಿಗೆ ಕಿವಿ ಕೊಡದೆ ಕಾರ್ಯದಲ್ಲಿ ಮುನ್ನುಗ್ಗಿ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮೀನ: ಅನುಮಾನದಿಂದ ಕಾರ್ಯದಲ್ಲಿ ತೊಡಗುವುದು ಬೇಡ. ಹೊಸ ಅವಕಾಶಗಳು ಒದಗಿ ಬರಲಿದೆ. ಮಕ್ಕಳ ಆರೋಗ್ಯದ ಕಡೆಗೆ ಗಮನ ಇರಲಿ. ಕುಟುಂಬದಲ್ಲಿ ವ್ಯತಿರಿಕ್ತವಾದ ವಾತಾವರಣ ಸೃಷ್ಟಿಯಾಗುವ ಮುಂಚೆ ಎಚ್ಚರಿಕೆ ವಹಿಸಿ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಗುಜರಾತ್ ಬೆಂಕಿ ದುರಂತ ನಮಗೆ ಎಚ್ಚರಿಕೆಯ ಪಾಠವಾಗಲಿ

ಕಾರ್ಖಾನೆಗಳು, ಸಾರ್ವಜನಿಕ ತಾಣಗಳಲ್ಲಿ ಸುರಕ್ಷತೆಯ ಕ್ರಮಗಳನ್ನು ತೆಗೆದುಕೊಳ್ಳುವುದು ನಮ್ಮಲ್ಲಿ ಇನ್ನೂ ರೂಢಿಯಾಗಿಲ್ಲ. ನಮ್ಮಲ್ಲಿ ನಗರಗಳು ಜನದಟ್ಟಣೆಯ ಕೇಂದ್ರಗಳಾಗಿವೆ. ಆದರೆ ಸೂಕ್ತ ನಗರ ಯೋಜನೆಯ ಕೊರತೆಯಿದೆ. ಕಟ್ಟಡಗಳ ನಡುವೆ ಸಾಕಷ್ಟು ಸೆಟ್‌ಬ್ಯಾಕ್ ಬಿಡಬೇಕು ಎಂಬುದು ನಿಯಮ. ಈ ನಿಯಮದ ಪಾಲನೆ ಆಗದಿರುವುದರಿಂದ, ಒಂದು ಕಟ್ಟಡಕ್ಕೆ ಹಾನಿ ಅಥವಾ ಅಗ್ನಿ ಆಕಸ್ಮಿಕ‌ ಸಂಭವಿಸಿದರೆ ಇನ್ನೊಂದು ಕಟ್ಟಡಕ್ಕೂ ಹಾನಿಯಾಗುತ್ತದೆ. ಇಂತಹ ಹಲವು ಸಂಗತಿಗಳ ಬಗ್ಗೆ ನಾವು ಎಚ್ಚರಿಕೆ ವಹಿಸಲೇಬೇಕಿದೆ.

VISTARANEWS.COM


on

Fire Accident
Koo

ಗುಜರಾತ್‌ನ ರಾಜ್‌ಕೋಟ್‌ (Rajkot) ನಗರದಲ್ಲಿರುವ ಗೇಮಿಂಗ್‌ ಜೋನ್‌ (Gaming Zone) ಒಂದರಲ್ಲಿ ಶನಿವಾರ (ಮೇ 25) ಸಂಜೆ ಭೀಕರ ಅಗ್ನಿ ದುರಂತ (Fire Accident) ಸಂಭವಿಸಿದ್ದು, ಮಹಿಳೆಯರು, ಮಕ್ಕಳು ಸೇರಿ 24 ಮಂದಿ ಮೃತಪಟ್ಟಿದ್ದಾರೆ. ಏಕಾಏಕಿ ಹೊತ್ತಿಕೊಂಡ ಬೆಂಕಿಯು ಇಡೀ ಕಟ್ಟಡದ ತುಂಬ ಆವರಿಸಿಕೊಂಡಿದ್ದು, ಇನ್ನೂ ಹಲವರು ಅಗ್ನಿಯ ಕೆನ್ನಾಲಗೆಯಲ್ಲಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಅಗ್ನಿಶಾಮಕ ದಳದ ಸಿಬ್ಬಂದಿಯು ಬೆಂಕಿ ನಂದಿಸಲು ಇನ್ನಿಲ್ಲದ ಹರಸಾಹಸ ಪಡುತ್ತಿದ್ದಾರೆ. ಗೇಮಿಂಗ್‌ ಜೋನ್‌ ಕಟ್ಟಡದಲ್ಲಿ ವೀಕೆಂಡ್ ಆದ ಕಾರಣ ನೂರಾರು ಮಕ್ಕಳು ಹಾಗೂ ಅವರ ತಾಯಂದಿರು ಇದ್ದರು. ಇದೇ ವೇಳೆ ಏಕಾಏಕಿ ಅಗ್ನಿದುರಂತ ಸಂಭವಿಸಿದ ಕಾರಣ 24 ಜನ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಇವರಲ್ಲಿ ಮಹಿಳೆಯರು ಹಾಗೂ ಮಕ್ಕಳು ಕೂಡ ಸೇರಿದ್ದಾರೆ. ಘಟನೆ ಸಂಭವಿಸುತ್ತಲೇ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಅವರು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದುವರೆಗೆ 15-20 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದೊಂದು ದಾರುಣ ವಿಷಾದನೀಯ ದುರಂತ.

ಕೆಲ ದಿನಗಳ ಹಿಂದಷ್ಟೇ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 11 ಮಂದಿ ಮೃತಪಟ್ಟಿದ್ದರು. ಸುಮಾರು 15 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನ ಕೆಲಸ ಮಾಡುವಾಗಲೇ ಬಾಯ್ಲರ್‌ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದಾದ ಕ್ಷಣಮಾತ್ರದಲ್ಲೇ ಭೀಕರ ಸ್ಫೋಟ ಸಂಭವಿಸಿತ್ತು. ಈ ಪ್ರಕರಣಗಳಲ್ಲಿ ಆಕಸ್ಮಿಕಕ್ಕೆ ಕಾರಣ ಹುಡುಕುವುದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡುವುದು ಅಗತ್ಯ.

ಕಾರ್ಖಾನೆಗಳು, ಸಾರ್ವಜನಿಕ ತಾಣಗಳಲ್ಲಿ ಸುರಕ್ಷತೆಯ ಕ್ರಮಗಳನ್ನು ತೆಗೆದುಕೊಳ್ಳುವುದು ನಮ್ಮಲ್ಲಿ ಇನ್ನೂ ರೂಢಿಯಾಗಿಲ್ಲ. ನಮ್ಮಲ್ಲಿ ನಗರಗಳು ಜನದಟ್ಟಣೆಯ ಕೇಂದ್ರಗಳಾಗಿವೆ. ಆದರೆ ಸೂಕ್ತ ನಗರ ಯೋಜನೆಯ ಕೊರತೆಯಿದೆ. ಕಟ್ಟಡಗಳ ನಡುವೆ ಸಾಕಷ್ಟು ಸೆಟ್‌ಬ್ಯಾಕ್ ಬಿಡಬೇಕು ಎಂಬುದು ನಿಯಮ. ಈ ನಿಯಮದ ಪಾಲನೆ ಆಗದಿರುವುದರಿಂದ, ಒಂದು ಕಟ್ಟಡಕ್ಕೆ ಹಾನಿ ಅಥವಾ ಅಗ್ನಿ ಆಕಸ್ಮಿಕ‌ ಸಂಭವಿಸಿದರೆ ಇನ್ನೊಂದು ಕಟ್ಟಡಕ್ಕೂ ಹಾನಿಯಾಗುತ್ತದೆ. ಮಾಲ್‌ಗಳು, ನಿಲ್ದಾಣಗಳು, ಹೆಚ್ಚು ಜನ ಸೇರುವ ಸಾರ್ವಜನಿಕ ತಾಣಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸುವುದು ಕಡ್ಡಾಯ. ಆದರೆ ಎಷ್ಟು ಜನ ಇದನ್ನು ಪಾಲಿಸುತ್ತಾರೆ? ದೊಡ್ಡ ಕಂಪನಿಗಳ ಸಿಬ್ಬಂದಿಗೆ ಆಗಾಗ ಅಣಕು ಅಗ್ನಿ ಸುರಕ್ಷತಾ ಡ್ರಿಲ್‌ಗಳನ್ನು ಮಾಡಿಸುವುದು ಅಗತ್ಯ. ಆದರೆ ತುಂಬಾ ಕಡೆ ಮಾಡಿಸುವುದಿಲ್ಲ.

ಬೆಂಗಳೂರು ನಗರ ಕೂಡ ಅಡ್ಡಾದಿಡ್ಡಿಯಾಗಿ ಬೆಳೆದಿದೆ. ಇಂಥ ಆಕಸ್ಮಿಕಗಳು ನಮಗೆ ಎಚ್ಚರಿಕೆಯ ಪಾಠ ಆಗಬೇಕು. ದುರಂತಗಳು ನಮಗೆ ಸುರಕ್ಷತೆಯ ನಿಯಮಗಳನ್ನು ನೆನಪಿಸಬೇಕು. ಪ್ರತಿ ಕಟ್ಟಡದಲ್ಲೂ ಫೈರ್ ಎಕ್ಸಿಟ್‌ಗಳು, ಅಗ್ನಿಶಾಮಕ ಸಿಲಿಂಡರ್‌ಗಳು ಸೇರಿದಂತೆ ಸುರಕ್ಷತಾ ಸಾಧನಗಳಿರಬೇಕು. ಸೆಕ್ಯುರಿಟಿ ಸಿಬ್ಬಂದಿ ಹಾಗೂ ನಿವಾಸಿಗಳಿಗೆ ತರಬೇತಿ ನೀಡುತ್ತಿರಬೇಕು. ತುರ್ತು ಕಾರ್ಯಾಚರಣೆ ವ್ಯವಸ್ಥೆಯ ಅರಿವಿರಬೇಕು. ಗ್ಯಾಸ್ ಸಿಲಿಂಡರ್‌ಗಳು, ಎಲೆಕ್ಟ್ರಿಕ್ ವ್ಯವಸ್ಥೆಗಳ ಸುರಕ್ಷತೆಯನ್ನು ಕಾಲಕಾಲಕ್ಕೆ ಗಮನಿಸುತ್ತಿರಬೇಕು. ಹೀಗೆಲ್ಲ ಇದ್ದಾಗ ಮಾತ್ರ ಇಂಥ ದುರಂತಗಳಿಂದ ಪಾರಾಗಬಹುದು.

ಇದನ್ನೂ ಓದಿ: Chemical Factory: ಕೆಮಿಕಲ್‌ ಕಾರ್ಖಾನೆಯಲ್ಲಿ ಭಾರಿ ಸ್ಫೋಟ; ನಾಲ್ವರ ಸಾವು, 25 ಮಂದಿಗೆ ಗಾಯ

Continue Reading

ಪ್ರಮುಖ ಸುದ್ದಿ

Election Commission : ಶೀಘ್ರದಲ್ಲೇ ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ; ಚುನಾವಣಾ ಆಯೋಗ

Election Commission: ಮಾರ್ಚ್​ನಲ್ಲಿ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಘೋಷಿಸುವಾಗ ಭದ್ರತಾ ಕಾರಣಗಳಿಂದಾಗಿ ವಿಧಾನಸಭಾ ಮತ್ತು ಸಂಸದೀಯ ಚುನಾವಣೆಗಳನ್ನು ಜಮ್ಮು ಕಾಶ್ಮೀರದಲ್ಲಿ ಏಕಕಾಲದಲ್ಲಿ ನಡೆಸುವುದು ಸೂಕ್ತವಲ್ಲ ಎಂಬ ತೀರ್ಮಾನಕ್ಕೆ ಬರಲಾಯಿತು ಎಂದು ಕುಮಾರ್ ಅವರು ಬಹಿರಂಪಡಿಸಿದರು.

VISTARANEWS.COM


on

election commission
Koo

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಗರಿಷ್ಠ ಪ್ರಮಾಣದ ಮತದಾನದ ಆಗಿರುವುದರಿಂದ ಚೈತನ್ಯ ಪಡೆದಿರುವ ಚುನಾವಣಾ ಆಯೋಗವು (Election Commission) ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಸುವ ಪ್ರಕ್ರಿಯೆ ಆರಂಭಿಸಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಶನಿವಾರ ಸುದ್ದಿ ಸಂಸ್ಥೆಯೊಂದರ ಜತೆ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಜನರು ತಮ್ಮದೇ ಸರ್ಕಾರದ ವ್ಯಾಪ್ತಿಗೆ ಸೇರಲು ಅರ್ಹರು ಎಂದು ಅವರು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಲೋಕಸಭಾ ಚುನಾವಣೆ ಪ್ರಕ್ರಿಯೆಗಳು ಮತ್ತು ವಿಧಾನಸಭಾ ಚುನಾವಣೆ ಎಂದು ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯ ಚುನಾವಣಾ ಆಯುಕ್ತ ಕುಮಾರ್, ಲೋಕಸಭಾ ಚುನಾವಣೆಯಲ್ಲಿ ಜನರ ಭಾಗವಹಿಸುವಿಕೆಯಿಂದ ಚುನಾವಣಾ ಆಯೋಗವು ತುಂಬಾ ಪ್ರೇರಣೆಗೊಂಡಿದೆ. ಅವರ ಉತ್ಸಾಹ ನಮಗೆ ಖುಷಿಯ ವಿಚಾರ. ಯುವಕರು, ಮಹಿಳೆಯರು ಸಂತೋಷದಿಂದ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ. ಪ್ರಜಾಪ್ರಭುತ್ವದ ಬೇರುಗಳನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ. ಜನರು ಪಾಲ್ಗೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು.

ಜಮ್ಮು ಕಾಶ್ಮೀರದ ಮಂದಿ ತಮ್ಮ ಸರ್ಕಾರಕ್ಕೆ ಅರ್ಹರು. ನಾವು ಶೀಘ್ರದಲ್ಲೇ ಆ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತೇವೆ. ಮತದಾನಕ್ಕಾಗಿ ತುಂಬಾ ಪ್ರೋತ್ಸಾಹಿಸಲಾಗುತ್ತಿದೆ ಎಂದು ಹೇಳಿದರು.

ಮಾರ್ಚ್​ನಲ್ಲಿ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಘೋಷಿಸುವಾಗ ಭದ್ರತಾ ಕಾರಣಗಳಿಂದಾಗಿ ವಿಧಾನಸಭಾ ಮತ್ತು ಸಂಸದೀಯ ಚುನಾವಣೆಗಳನ್ನು ಜಮ್ಮು ಕಾಶ್ಮೀರದಲ್ಲಿ ಏಕಕಾಲದಲ್ಲಿ ನಡೆಸುವುದು ಸೂಕ್ತವಲ್ಲ ಎಂಬ ತೀರ್ಮಾನಕ್ಕೆ ಬರಲಾಯಿತು ಎಂದು ಕುಮಾರ್ ಅವರು ಬಹಿರಂಪಡಿಸಿದರು.

ಆಗಸ್ಟ್ 2019 ರಲ್ಲಿ ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ನಡೆಯುತ್ತಿರುವ ಮೊದಲ ಚುನವಾಣೆ ಇದಾಗಿದೆ. ಇಲ್ಲಿನ ಭಾಗವಹಿಸುವಿಕೆಯನ್ನು ನೋಡಿದ ಬಳಿಕ ಇದೀಗ ವಿಧಾನಸಭಾ ಚುನಾವಣೆ ನಡೆಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Lok Sabha Election: 6ನೇ ಹಂತದಲ್ಲಿ 59% ಮತದಾನ ; ಬಂಗಾಳದಲ್ಲಿ ವೋಟಿಂಗ್‌ ಹೆಚ್ಚು, ಹಿಂಸೆಯ ಕಿಚ್ಚು

ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಪ್ರಕ್ರಿಯೆಯು ಸಾಮಾನ್ಯವಾಗಿ ಒಂದು ತಿಂಗಳ ಕಾಲ ನಡೆಯುತ್ತದೆ. ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯ ನಂತರ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನಿಗದಿಪಡಿಸಿದ ಸ್ಥಾನಗಳನ್ನು ಹೊರತುಪಡಿಸಿ ವಿಧಾನಸಭಾ ಸ್ಥಾನಗಳ ಸಂಖ್ಯೆ 83 ರಿಂದ 90 ಕ್ಕೆ ಏರಿಕೆಯಾಗಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 30 ರೊಳಗೆ ವಿಧಾನಸಭಾ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್​ ಡಿಸೆಂಬರ್​ನಲ್ಲಿ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.

Continue Reading

ಪ್ರಮುಖ ಸುದ್ದಿ

Fire Accident: 9 ಮಕ್ಕಳು ಸೇರಿ 27 ಜನರ ಸಾವಿಗೆ ಕಾರಣವಾದ ಗೇಮಿಂಗ್‌ ಜೋನ್‌ಗೆ NOCಯೇ ಇರ್ಲಿಲ್ಲ!

Fire Accident: ಗೇಮಿಂಗ್‌ ಜೋನ್‌ನಲ್ಲಿ ಅಗ್ನಿ ದುರಂತ ಸಂಭವಿಸಲು ನಿಖರ ಕಾರಣ ತಿಳಿದುಬಂದಿಲ್ಲ. ಅಗ್ನಿಯನ್ನು ನಂದಿಸಲು ಸಿಬ್ಬಂದಿಯು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಆದಾಗ್ಯೂ, ಬೆಂಕಿಯಲ್ಲಿ ಎಷ್ಟು ಜನ ಸಿಲುಕಿದ್ದಾರೆ? ಇನ್ನೂ ಎಷ್ಟು ಜನ ಕಾಣೆಯಾಗಿದ್ದಾರೆ ಎಂಬುದರ ಕುರಿತು ನಿಖರ ಮಾಹಿತಿ ದೊರೆತಿಲ್ಲ. ಗಾಳಿಯ ತೀವ್ರತೆ ಹಾಗೂ ಬೆಂಕಿಯ ಹಿನ್ನೆಲೆಯಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದ ಕಾರಣ ರಕ್ಷಣಾ ಕಾರ್ಯಾಚರಣೆಯು ಕ್ಷಿಪ್ರವಾಗಿ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

Fire Accident
Koo

ಗಾಂಧಿನಗರ: ಗುಜರಾತ್‌ನ ರಾಜ್‌ಕೋಟ್‌ (Rajkot) ನಗರದಲ್ಲಿರುವ ಗೇಮಿಂಗ್‌ ಜೋನ್‌ (Gaming Zone) ಒಂದರಲ್ಲಿ ಶನಿವಾರ (ಮೇ 25) ಸಂಜೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ (Fire Accident) ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. 9 ಮಕ್ಕಳು, ಮಹಿಳೆಯರು ಸೇರಿ 27 ಮಂದಿ ಮೃತಪಟ್ಟಿರುವ ಪ್ರಕರಣವು ದೇಶವನ್ನೇ ಬೆಚ್ಚಿಬೀಳಿಸಿದೆ. ಈಗಲೂ ಅಗ್ನಿ ನಂದಿಸುವ ಕಾರ್ಯವನ್ನು ಅಗ್ನಿಶಾಮಕದ ದಳದ ಸಿಬ್ಬಂದಿಯು ಮುಂದುವರಿಸಿದ್ದಾರೆ. ಇನ್ನೂ ಹಲವು ಜನ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಜಾಸ್ತಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ, ರಾಜ್‌ಕೋಟ್‌ ಗೇಮಿಂಗ್‌ ಜೋನ್‌ಗೆ ನಿರಾಕ್ಷೇಪಣಾ ಪತ್ರವೇ (NOC) ಸಿಕ್ಕಿರಲಿಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ.

ಹೌದು, ಎರಡು ಅಂತಸ್ತಿನ ಶೆಡ್‌ನಲ್ಲಿ ನಿರ್ಮಿಸಲಾಗಿದ್ದ ರಾಜ್‌ಕೋಟ್‌ ಗೇಮಿಂಗ್‌ ಜೋನ್‌ಗೆ ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪತ್ರವೇ ಸಿಕ್ಕಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ರಾಜ್‌ಕೋಟ್‌ ಮೇಯರ್‌ ನಯನಾ ಪೆಢಾದಿಯಾ ಅವರೇ ಮಾಹಿತಿ ನೀಡಿದ್ದಾರೆ. “ನೋ ಅಬ್ಜೆಕ್ಷನ್‌ ಸರ್ಟಿಫಿಕೇಟ್‌ ಇಲ್ಲದೆಯೇ ಗೇಮಿಂಗ್‌ ಜೋನ್‌ ಕಾರ್ಯನಿರ್ವಹಿಸುತ್ತಿದ್ದ ಕುರಿತು ತನಿಖೆ ನಡೆಸಲಾಗುತ್ತಿದೆ. ಇದರಲ್ಲಿ ಯಾವುದೇ ರೀತಿಯಾದ ರಾಜಕೀಯ ನುಸುಳದಂತೆ ತನಿಖೆ ನಡೆಸಲಾಗುತ್ತದೆ. ಇದು ಸಣ್ಣ ಸಂಗತಿ ಅಲ್ಲ” ಎಂಬುದಾಗಿ ಮಾಹಿತಿ ನೀಡಿದ್ದಾರೆ.

“ಟಿಆರ್‌ಪಿ ಗೇಮಿಂಗ್‌ ಜೋನ್‌ನಲ್ಲಿ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಲಾಗುತ್ತಿದೆ. ಕಾರ್ಯಾಚರಣೆಯು ಕೊನೆಯ ಹಂತಕ್ಕೆ ಬಂದಿದೆ. ಇದುವರೆಗೆ 20 ಶವಗಳು ಪತ್ತೆಯಾಗಿವೆ. ಪ್ರಕರಣದ ಕುರಿತು ಸಂಪೂರ್ಣ ತನಿಖೆ ನಡೆಸಲಾಗುವುದು. ಯುವರಾಜ್‌ ಸಿಂಗ್‌ ಸೋಲಂಕಿ ಎಂಬುವವರಿಗೆ ಈ ಗೇಮಿಂಗ್‌ ಜೋನ್‌ ಸೇರಿದೆ. ನಿರ್ಲಕ್ಷ್ಯ ವಹಿಸಿದ ಕಾರಣ ಅವರ ವಿರುದ್ಧ ಕೇಸ್‌ ದಾಖಲಿಸಲಾಗುತ್ತದೆ. ರಕ್ಷಣಾ ಕಾರ್ಯಾಚರಣೆ ಬಳಿಕ ಸಮಗ್ರ ತನಿಖೆ ನಡೆಸಲಾಗುವುದು” ಎಂದು ರಾಜ್‌ಕೋಟ್‌ ಕಮಿಷನರ್‌ ರಾಜು ಭಾರ್ಗವ ಮಾಹಿತಿ ನೀಡಿದ್ದಾರೆ.

4 ಲಕ್ಷ ರೂ. ಪರಿಹಾರ

ರಾಜ್‌ಕೋಟ್‌ ಅಗ್ನಿ ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡುವುದಾಗಿ ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಘೋಷಿಸಿದ್ದಾರೆ. ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನೂ ಘೋಷಣೆ ಮಾಡಿದ್ದಾರೆ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನೂ (SIT) ರಚಿಸಲಾಗಿದೆ. ಇನ್ನು ಕಾರ್ಯಾಚರಣೆ ಕ್ಷಿಪ್ರವಾಗಿ ನಡೆಸಿ, ಅಗತ್ಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂಬುದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Fire Accident: ಗೇಮಿಂಗ್‌ ಜೋನ್‌ನಲ್ಲಿ ಅಗ್ನಿ ದುರಂತ; ಮಹಿಳೆಯರು, ಮಕ್ಕಳು ಸೇರಿ 25 ಮಂದಿ ದಾರುಣ ಸಾವು

Continue Reading

ಪ್ರಮುಖ ಸುದ್ದಿ

Virat kohli : ಕೊಹ್ಲಿ ಹೆಸರು ಕೂಗಿ ಪಾಕಿಸ್ತಾನ ಬೌಲರ್​​ನನ್ನು ಲೇವಡಿ ಮಾಡಿದ ಅಭಿಮಾನಿಗಳು; ಇಲ್ಲಿದೆ ವಿಡಿಯೊ

Virat kohli: ಹ್ಯಾರಿಸ್ ರವೂಫ್ 5 ನೇ ಓವರ್​ನಲ್ಲಿ ಆಕ್ರಮಣ ಮುಂದಾದರು. ಆದರೆ ಮೊದಲ ಓವರ್​ನಲ್ಲಿ 17 ರನ್​ ನೀಡಿದ ಕಾರಣ ಅವರಿಗೆ ಉತ್ತಮ ಆರಂಭ ಸಿಗಲಿಲ್ಲ. ಆದಾಗ್ಯೂ, ನಂತರ ಅದ್ಭುತ ಪುನರಾಗಮನ ಮಾಡಿದರು. ತಮ್ಮ ವೇಗದಿಂದ ಇಂಗ್ಲೆಂಡ್ ಬ್ಯಾಟರ್​ಗಳಿಗೆ ತೊಂದರೆ ನೀಡಿದರು.

VISTARANEWS.COM


on

Virat kohli
Koo

ಬೆಂಗಳೂರು: ಪಾಕಿಸ್ತಾನದ ವೇಗಿ ಹ್ಯಾರಿಸ್ ರೌಫ್ ಇಂಗ್ಲೆಂಡ್ ವಿರುದ್ಧ ಟಿ20 ಐ ಪಂದ್ಯದಲ್ಲಿ ಬೌಲಿಂಗ್​ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಉಭಯ ತಂಡಗಳ ನಡುವಿನ ನಾಲ್ಕು ಪಂದ್ಯಗಳ ಟಿ 20 ಐ ಸರಣಿಯ ಎರಡನೇ ಪಂದ್ಯ ಶನಿವಾರ (ಮೇ 25) ಬರ್ಮಿಂಗ್​ಹ್ಯಾಮ್​ನ ಎಜ್​ಬಾಸ್ಟನ್​ನಲ್ಲಿ ನಡೆಯಿತು. ದೀರ್ಘಕಾಲದ ಗಾಯದ ನಂತರ ಪಾಕಿಸ್ತಾನ ತಂಡಕ್ಕೆ ಮರಳಿದ ಹ್ಯಾರಿಸ್ ರವೂಫ್, ಚೆಂಡಿನೊಂದಿಗೆ ತಂಡಕ್ಕೆ ಪ್ರಮುಖ ಪಾತ್ರ ವಹಿಸಿದರು ಮತ್ತು ತಮ್ಮ ತಂಡದ ಪರವಾಗಿ ನಿರ್ಣಾಯಕ ವಿಕೆಟ್​ಗಳನ್ನು ಪಡೆದರು. ಆದಾಗ್ಯೂ, ಬರ್ಮಿಂಗ್​ಹ್ಯಾಮ್​ನ ಎಜ್​ಬಾಸ್ಟನ್​ನಲ್ಲಿ ನಡೆದ ಪಂದ್ಯ ಗೆಲ್ಲಲು ಅವರು ತಮ್ಮ ತಂಡಕ್ಕೆ ಸಹಾಯ ಮಾಡಲು ಸಾಧ್ಯವಾಗಲಿಲ್ಲ. ಆದರೆ ಅವರಿಗೆ ಕೊಹ್ಲಿ (Virat kohli) ಕಾಡಿದರು.

ಹ್ಯಾರಿಸ್ ರವೂಫ್ 5 ನೇ ಓವರ್​ನಲ್ಲಿ ಆಕ್ರಮಣ ಮುಂದಾದರು. ಆದರೆ ಮೊದಲ ಓವರ್​ನಲ್ಲಿ 17 ರನ್​ ನೀಡಿದ ಕಾರಣ ಅವರಿಗೆ ಉತ್ತಮ ಆರಂಭ ಸಿಗಲಿಲ್ಲ. ಆದಾಗ್ಯೂ, ನಂತರ ಅದ್ಭುತ ಪುನರಾಗಮನ ಮಾಡಿದರು. ತಮ್ಮ ವೇಗದಿಂದ ಇಂಗ್ಲೆಂಡ್ ಬ್ಯಾಟರ್​ಗಳಿಗೆ ತೊಂದರೆ ನೀಡಿದರು.

ಹ್ಯಾರಿಸ್ ರವೂಫ್ ತಮ್ಮ ಎರಡನೇ ಸ್ಪೆಲ್​ನಲ್ಲಿ ಆಕ್ರಮಣಕ್ಕೆ ಬಂದಾಗ, ಅವರಿಗೆ ಪ್ರೇಕ್ಷಕರಿಂದ ಉತ್ತಮ ಸ್ವಾಗತ ಸಿಗಲಿಲ್ಲ. ವೇಗಿ ಎರಡನೇ ಓವರ್​ನ ಮೊದಲ ಎಸೆತವನ್ನು ಎಸೆಯುತ್ತಿದ್ದಂತೆ ಅಭಿಮಾನಿಗಳು “ಕೊಹ್ಲಿ ಕೊಹ್ಲಿ” ಎಂದು ಕೂಗಿದರು. ಹ್ಯಾರಿಸ್ ರವೂಫ್ ಅವರನ್ನು ಕೆಲವು ಸಮಯದಿಂದ “ಕೊಹ್ಲಿ ಕೊಹ್ಲಿ” ಎಂದು ಕರೆಯಲಾಗುತ್ತದೆ. ಏಕೆಂದರೆ 2022 ರ ಟಿ 20 ವಿಶ್ವಕಪ್​​ನಲ್ಲಿ ಎಂಸಿಜಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಸಮಯದಲ್ಲಿ ಕೊಹ್ಲಿ ರವೂಫ್​ಗೆ ಸಿಕ್ಸರ್ ಬಾರಿಸಿದ್ದರು.

ಇದನ್ನೂ ಓದಿ: Hardik Pandya : ಮೊದಲ ಲವ್​ ಬ್ರೇಕ್​ಅಪ್​ ಮಾಡಿಕೊಂಡಿದ್ದ ಪಾಂಡ್ಯ; ಇಲ್ಲಿದೆ ಆರಂಭದ ಪ್ರೇಮ ಕಹಾನಿ!

ಇಂಗ್ಲೆಂಡ್ ವಿರುದ್ಧದ ಎರಡನೇ ಟಿ 20 ಐ ಪಂದ್ಯದಲ್ಲಿ, ಹ್ಯಾರಿಸ್ ರೌಫ್ 34 ರನ್​ಗಳಿಗೆ 2 ವಿಕೆಟ್​ ಪಡೆದರು. ಎದುರಾಳಿಯನ್ನು ಒಟ್ಟು 200 ಕ್ಕಿಂತ ಕಡಿಮೆ ಮೊತ್ತಕ್ಕೆ ನಿಯಂತ್ರಿಸಲು ತಮ್ಮ ತಂಡಕ್ಕೆ ಸಹಾಯ ಮಾಡಿದರು. ಇವರಲ್ಲದೆ, ಶಾಹೀನ್ ಅಫ್ರಿದಿ ಮತ್ತು ಇಮಾದ್ ವಾಸಿಮ್ ಎರಡು ವಿಕೆಟ್ ಪಡೆದು ಎದುರಾಳಿಗಳನ್ನು 183 ರನ್​ಗಳಿಗೆ ನಿಯಂತ್ರಿಸಿದರು.

ಇದು ಪಾಕಿಸ್ತಾನದಿಂದ ಉತ್ತಮ ಬ್ಯಾಟಿಂಗ್ ಪ್ರದರ್ಶನವಾಗಿತ್ತು. ಫಖರ್ ಜಮಾನ್ 45 ರನ್ ಗಳಿಸಿದರೆ ನಾಯಕ ಬಾಬರ್ ಅಜಮ್ 32 ರನ್ ಗಳಿಸಿದರು. ಆದಾಗ್ಯೂ ಕೇವಲ 160 ರನ್​ಗಳಿಗೆ ಆಲೌಟ್ ಆದರು ಮತ್ತು ಪಂದ್ಯವನ್ನು 23 ರನ್ ಗಳಿಂದ ಕಳೆದುಕೊಂಡರು.

ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಎರಡನೇ ಟಿ 20 ಪಂದ್ಯದ ಸೋಲಿನ ಬಗ್ಗೆ ಮಾತನಾಡಿದ್ದಾರೆ. ಇದು ಅವರಿಂದ ಉತ್ತಮ ಬೌಲಿಂಗ್ ಪ್ರದರ್ಶನ ಎಂದು ಅವರು ಒಪ್ಪಿಕೊಂಡರು. ಆದರೆ ಬ್ಯಾಟಿಂಗ್​ನಲ್ಲಿ ವಿಫಲಗೊಂಡೆವು ಎಂದು ಹೇಳಿದ್ದಾರೆ.

ಇದು ಸಾಧಾರಣ ಸ್ಕೋರ್ ಆಗಿತ್ತು, ನಾವು ಉತ್ತಮವಾಗಿ ಬೌಲಿಂಗ್ ಮಾಡಿದ್ದವು. ದೊಡ್ಡ ಜತೆಯಾಟ ಮೂಡಿ ಬರಲಿಲ್ಲ. ಪ್ರತಿಯೊಬ್ಬರೂ ತಮ್ಮ ಪಾತ್ರವನ್ನು ತಿಳಿದಿದ್ದಾರೆ. ನಾವು ಪ್ರತಿಯೊಬ್ಬ ಆಟಗಾರನ ಪಾತ್ರವನ್ನು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

Continue Reading
Advertisement
Fire Accident
ಸಂಪಾದಕೀಯ4 hours ago

ವಿಸ್ತಾರ ಸಂಪಾದಕೀಯ: ಗುಜರಾತ್ ಬೆಂಕಿ ದುರಂತ ನಮಗೆ ಎಚ್ಚರಿಕೆಯ ಪಾಠವಾಗಲಿ

election commission
ಪ್ರಮುಖ ಸುದ್ದಿ4 hours ago

Election Commission : ಶೀಘ್ರದಲ್ಲೇ ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ; ಚುನಾವಣಾ ಆಯೋಗ

Fire Accident
ಪ್ರಮುಖ ಸುದ್ದಿ4 hours ago

Fire Accident: 9 ಮಕ್ಕಳು ಸೇರಿ 27 ಜನರ ಸಾವಿಗೆ ಕಾರಣವಾದ ಗೇಮಿಂಗ್‌ ಜೋನ್‌ಗೆ NOCಯೇ ಇರ್ಲಿಲ್ಲ!

Virat kohli
ಪ್ರಮುಖ ಸುದ್ದಿ5 hours ago

Virat kohli : ಕೊಹ್ಲಿ ಹೆಸರು ಕೂಗಿ ಪಾಕಿಸ್ತಾನ ಬೌಲರ್​​ನನ್ನು ಲೇವಡಿ ಮಾಡಿದ ಅಭಿಮಾನಿಗಳು; ಇಲ್ಲಿದೆ ವಿಡಿಯೊ

Union Minister Pralhad Joshi latest statement about channagiri case
ಕರ್ನಾಟಕ5 hours ago

Pralhad Joshi: ನೇಹಾ, ಅಂಜಲಿ ಹತ್ಯೆ ಪ್ರಕರಣದಲ್ಲಿ ಕೈಗೊಳ್ಳದ ಕ್ರಮ ಚನ್ನಗಿರಿ ಪ್ರಕರಣದಲ್ಲಿ ಏಕೆ ಎಂದ ಪ್ರಲ್ಹಾದ್‌ ಜೋಶಿ

childrens summer camp closing ceremony at yallapur
ಉತ್ತರ ಕನ್ನಡ6 hours ago

Uttara Kannada News: ಭಾರತದ ಭವಿಷ್ಯ ಸಣ್ಣ ಸಣ್ಣ ಊರುಗಳಲ್ಲಿದೆ: ಹರಿಪ್ರಕಾಶ್‌ ಕೋಣೆಮನೆ

Hardik Pandya
ಪ್ರಮುಖ ಸುದ್ದಿ6 hours ago

Hardik Pandya : ಮೊದಲ ಲವ್​ ಬ್ರೇಕ್​ಅಪ್​ ಮಾಡಿಕೊಂಡಿದ್ದ ಪಾಂಡ್ಯ; ಇಲ್ಲಿದೆ ಆರಂಭದ ಪ್ರೇಮ ಕಹಾನಿ!

Siddaramaiah
ಕರ್ನಾಟಕ6 hours ago

Siddaramaiah: ನೀವು 2 ಸಾವಿರ ಕೊಟ್ಟಿದ್ದಕ್ಕೆ ದೇವರ ದರ್ಶನ; ಧರ್ಮಸ್ಥಳದಲ್ಲಿ ಸಿದ್ದರಾಮಯ್ಯಗೆ ಸ್ತ್ರೀಯರ ಮೆಚ್ಚುಗೆ

Shikhar Dhawan
ಪ್ರಮುಖ ಸುದ್ದಿ6 hours ago

Shikhar Dhawan : ಶಿಖರ್ ಧವನ್ ಮಿಥಾಲಿ ರಾಜ್ ಮದುವೆ? ಬಗ್ಗೆ ಮೌನ ಮುರಿದ ಭಾರತದ ಸ್ಟಾರ್

Union Minister Pralhad Joshi statement about Prajwal revanna case
ಕರ್ನಾಟಕ6 hours ago

Pralhad Joshi: ಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್‌ಪೋರ್ಟ್ ರದ್ದಾಗಲ್ಲ: ಪ್ರಲ್ಹಾದ್‌ ಜೋಶಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ12 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ7 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌