Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಿರಿಕಿರಿ ತಪ್ಪಲ್ಲ! - Vistara News

ಪ್ರಮುಖ ಸುದ್ದಿ

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಿರಿಕಿರಿ ತಪ್ಪಲ್ಲ!

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಅಧಿಕ ಶ್ರಾವಣ ಮಾಸ, ಕೃಷ್ಣ ಪಕ್ಷದ ತ್ರಯೋದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Dina Bhavishya) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಸೋಮವಾರದಂದು ಕಟಕ ರಾಶಿಯಿಂದ ಸಿಂಹ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರಿಗೆ ಉದ್ಯೋಗದ ಸ್ಥಳದಲ್ಲಿ ಪಿತೂರಿ ಮಾಡುವ ಸಾಧ್ಯತೆ ಇದೆ. ಹೀಗಾಗಿ ಎಚ್ಚರಿಕೆ ಇರಲಿ. ವೃಷಭ ರಾಶಿಯವರಿಗೂ ಸಹದ್ಯೋಗಿಗಳಿಂದ ಕಿರಿಕಿರಿ ಉಂಟಾಗಲಿದೆ. ತುಲಾ ರಾಶಿಯವರು ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ. ಮಾತಿಗೆ ಮಾತು ಬೆಳೆಸುವುದು ಬೇಡ. ಉಳಿದ ರಾಶಿಗಳ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (14-08-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ,
ವರ್ಷ ಋತು, ಅಧಿಕ ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ತ್ರಯೋದಶಿ 10:24 ವಾರ: ಸೋಮವಾರ
ನಕ್ಷತ್ರ: ಪುನರ್ವಸು 11:05 ಯೋಗ: ಸಿದ್ಧಿ 16:38
ಕರಣ: ವಾಣಿಜ 10:24 ಅಮೃತ ಕಾಲ: ಬೆಳಗ್ಗೆ 08:27 ರಿಂದ 10:14ರವರೆಗೆ
ದಿನದ ವಿಶೇಷ : ಮಾಸ ಶಿವರಾತ್ರಿ, ಅನಧ್ಯಯನ ಚತುಷ್ಟಯ

ಸೂರ್ಯೋದಯ : 06:07 ಸೂರ್ಯಾಸ್ತ : 06:41

ರಾಹುಕಾಲ : ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅತಿಯಾದ ಒತ್ತಡ ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ. ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಅವಕಾಶ ಸಿಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ. ಉತ್ತಮ ಆರೋಗ್ಯ. ಸಹದ್ಯೋಗಿಗಳಿಂದ ಕಿರಿಕಿರಿ, ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಬಂಧುಗಳು ಟೀಕೆಗಳನ್ನು ಮಾಡುವ ಸಾಧ್ಯತೆ. ದಿನದ ಮಟ್ಟಿಗೆ ಒತ್ತಡ ಮಾನಸಿಕ ನೆಮ್ಮದಿ ಹಾಳು ಮಾಡುವ ಸಾಧ್ಯತೆ. ಸಂಯಮದಿಂದ ವರ್ತಿಸಿ. ಆರ್ಥಿಕ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕಟಕ: ಪ್ರಮುಖ ವ್ಯಕ್ತಿಗಳ ಸಹಕಾರ ಸಿಗಲಿದೆ. ಆತುರದ ತಿರ್ಮಾನ ತೆಗೆದುಕೊಳ್ಳುವುದು ಬೇಡ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಆರೋಗ್ಯ ಪರಿಪೂರ್ಣವಾಗಿರುತ್ತದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಮಿತಿ ಮೀರಿದ ಕೆಲಸದ ಒತ್ತಡದಿಂದಾಗಿ ದಣಿವು, ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಮಕ್ಕಳಿಂದ ಸಂತೋಷ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ನಿಮ್ಮ ವರ್ತನೆ ಕುಟುಂಬದ ಸದಸ್ಯರಿಗೆ ಕಿರಿಕಿರಿ ಉಂಟು ಮಾಡುವ ಸಾಧ್ಯತೆ. ಆರೋಗ್ಯದಲ್ಲಿ ವ್ಯತ್ಯಾಸ. ಹಣಕಾಸು ಪ್ರಗತಿ. ಬಂಧುಗಳ ಭೇಟಿ ಕೊಂಚ ಸಮಾಧಾನ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ. ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಕುಟುಂಬ ಸದಸ್ಯರ ಆರೋಗ್ಯ ಕಡೆ ಗಮನ ಇರಲಿ. ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವಂತೆ ಮಾಡಬಹುದು. ದಿನದ ಮಟ್ಟಿಗೆ ಖರ್ಚು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಧನಸ್ಸು: ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆಪ್ತ ಸ್ನೇಹಿತ- ಸಂಬಂಧಿಗಳ ಸಮಸ್ಯೆಗಳಿಗೆ ಸ್ಪಂದಿಸುವಿರಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಯಾವ ರಾಶಿಯವರು ಯಾವ ಕೆಲಸ ಮಾಡಬೇಕು?

Horoscope Today

ಮಕರ: ಆರೋಗ್ಯ ಉತ್ತಮ. ಸ್ನೇಹಿತರ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತರುವುದು. ಅತಿರೇಖದಲ್ಲಿ ಮಾತನಾಡುವುದು ಬೇಡ. ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ ಸಿಗಲಿದೆ. ಹಿರಿಯರ ಮಾರ್ಗದರ್ಶನ ಸಿಗುವುದು. ಉತ್ತಮ ಆರೋಗ್ಯ. ಅನಿರೀಕ್ಷಿತ ಖರ್ಚು. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ.
ಅದೃಷ್ಟ ಸಂಖ್ಯೆ: 3

ಇದನ್ನೂ ಓದಿ : Prerane column : ನಿಮ್ಮ ನಿಮ್ಮ ಬದುಕಿಗೆ ನೀವೇ ಜವಾಬ್ದಾರಿ; ಅದನ್ನು ಬೇರೆಯವರ ಮೇಲೆ ಹೊರಿಸಿದರೆ ನೀವು Waste Body!

Horoscope Today

ಮೀನ: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕಾರ್ಯಗಳಲ್ಲಿ ಯಶಸ್ಸು. ಪಾಲುದಾರಿಕೆ ವ್ಯವಹಾರವು ನಷ್ಟ ತರುವುದು. ನಿಮ್ಮ ಉದಾರ ವರ್ತನೆಯನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಟಾಪ್​ 5 ಬೌಲರ್​ಗಳು ಯಾರು?

T20 World Cup 2024: ಪಾಕಿಸ್ತಾನ ತಂಡದ ಮಾಜಿ ನಾಯಕ ಹಾಗೂ ಆಟಗಾರ ಶಾಹೀದ್ ಅಫ್ರಿದಿಗೆ(Shahid Afridi) ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಬೌಲರ್​ಗಳ ಯಾದಿಯಲ್ಲಿ ದ್ವಿತೀಯ ಸ್ಥಾನ. 2007 ರಿಂದ 2016ರ ತನಕ ಒಟ್ಟು 34 ಪಂದ್ಯಗಳನ್ನಾಡಿರುವ ಅಫ್ರಿದಿ 39 ವಿಕೆಟ್​ ಉರುಳಿಸಿದ್ದಾರೆ.

VISTARANEWS.COM


on

T20 World Cup 2024
Koo

ಬೆಂಗಳೂರು: 9ನೇ ಆವೃತ್ತಿಯ ಐಸಿಸಿ ಪುರುಷರ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೆ ಇನ್ನು ಬೆರಳೆಣಿಕೆ ದಿನಗಳ ಮಾತ್ರ ಬಾಕಿ ಉಳಿದಿವೆ. ಜೂನ್​ 1ರಿಂದ ಆರಂಭವಾಗಿ 29ರ ತನಕ ಪಂದ್ಯಾವಳಿಗಳು ಸಾಗಲಿದೆ. ಉದ್ಘಾಟನ ಪಂದ್ಯದಲ್ಲಿ ಆತಿಥೇಯ ಅಮೆರಿಕ ಮತ್ತು ಕೆನಾಡ ಮುಖಾಮುಖಿಯಾಗಲಿವೆ. ಇದುವರೆಗಿನ 8 ಆವೃತ್ತಿಯ ಮಿನಿ ವಿಶ್ವಕಪ್​ ಸಮರದಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಬೌಲರ್​ಗಳು ಯಾರೆಂಬ ಕುತೂಹಲಕಾರಿ ಮಾಹಿತಿ ಇಂತಿದೆ.

ಶಕೀಬ್ ಅಲ್ ಹಸನ್


ಬಾಂಗ್ಲಾದೇಶ ಕ್ರಿಕೆಟ್ ತಂಡದ ಹಿರಿಯ ಆಲ್​ರೌಂಡರ್​ ಶಕೀಬ್ ಅಲ್ ಹಸನ್(Shakib Al Hasan) ಅವರು ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಬೌಲರ್​ ಎನಿಸಿಕೊಂಡಿದ್ದಾರೆ. ಜತೆಗೆ ಉದ್ಘಾಟನ ಆವೃತ್ತಿಯಿಂದ ಇದುವರೆಗಿನ ಎಲ್ಲ ಆವೃತ್ತಿಯಲ್ಲಿಯೂ ಆಡಿದ ಆಟಗಾರನೂ ಆಗಿದ್ದಾರೆ. ಒಟ್ಟು 36 ಪಂದ್ಯಗಳನ್ನಾಡಿ 47 ವಿಕೆಟ್​ ಕೆಡವಿದ್ದಾರೆ. ಈ ಬಾರಿ ಮೂರು ವಿಕೆಟ್​ ಕಿತ್ತರೆ 50 ವಿಕೆಟ್​ ಕಿತ್ತ ಸಾಧನೆ ಮಾಡಲಿದ್ದಾರೆ. 9 ರನ್​ಗೆ 4 ವಿಕೆಟ್​ ಕಿತ್ತದ್ದು ಅವರ ವೈಯಕ್ತಿಕ ಸಾಧನೆಯಾಗಿದೆ.


ಶಾಹೀದ್ ಅಫ್ರಿದಿ


ಪಾಕಿಸ್ತಾನ ತಂಡದ ಮಾಜಿ ನಾಯಕ ಹಾಗೂ ಆಟಗಾರ ಶಾಹೀದ್ ಅಫ್ರಿದಿಗೆ(Shahid Afridi) ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಬೌಲರ್​ಗಳ ಯಾದಿಯಲ್ಲಿ ದ್ವಿತೀಯ ಸ್ಥಾನ. 2007 ರಿಂದ 2016ರ ತನಕ ಒಟ್ಟು 34 ಪಂದ್ಯಗಳನ್ನಾಡಿರುವ ಅಫ್ರಿದಿ 39 ವಿಕೆಟ್​ ಉರುಳಿಸಿದ್ದಾರೆ. 11 ರನ್​ಗೆ 4 ವಿಕೆಟ್​ ಪಡೆದದ್ದು ಅವರ ವೈಯಕ್ತಿಕ ಶ್ರೇಷ್ಠ ಸಾಧನೆಯಾಗಿದೆ.


ಲಸಿತ್ ಮಾಲಿಂಗ


ಶ್ರೀಲಂಕಾ ತಂಡದ ಮಾಜಿ ವೇಗಿ ಲಸಿತ್ ಮಾಲಿಂಗ(Lasith Malinga) 2007 ರಿಂದ 2014ರ ತನಕ ಒಟ್ಟು 31 ಟಿ20 ವಿಶ್ವಕಪ್​ ಪಂದ್ಯಗಳನ್ನಾಡಿ 38 ವಿಕೆಟ್​ ಪಡೆದಿದ್ದಾರೆ. 31 ರನ್​ಗೆ 5 ವಿಕೆಟ್​ ಉರುಳಿಸಿದ್ದು ಅವರ ವೈಯಕ್ತಿಕ ಶ್ರೇಷ್ಠ ಸಾಧನೆಯಾಗಿದೆ. ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಮೂರನೇ ಅಟಗಾರ ಎನಿಸಿಕೊಂಡಿದ್ದಾರೆ.

ಇದನ್ನೂ ಓದಿ T20 World Cup 2024: 2ನೇ ಬ್ಯಾಚ್​ನಲ್ಲಿ ನ್ಯೂಯಾರ್ಕ್​ಗೆ ತೆರಳಿದ ಭಾರತದ ಮೂವರು ಆಟಗಾರರು


ಸಯೀದ್ ಅಜ್ಮಲ್


ಪಾಕಿಸ್ತಾನ ತಂಡದ ಮಾಜಿ ಸ್ಪಿನ್​​ ಬೌಲರ್​ ಸಯೀದ್ ಅಜ್ಮಲ್(Saeed Ajmal) ಅವರು ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಬೌಲರ್​ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. 2009 ರಿಂದ 2014ರ ತನಕ 23 ಪಂದ್ಯಗಳನ್ನು ಆಡಿದ ಅವರು 36 ವಿಕೆಟ್​ ಕಡೆವಿದ್ದಾರೆ.


ಅಜಂತಾ ಮೆಂಡೀಸ್​


ಶ್ರೀಲಂಕಾ ತಂಡದ ಮಾಜಿ ಸ್ಪಿನ್ನರ್‌ ಅಜಂತಾ ಮೆಂಡೀಸ್‌(Ajantha Mendis) 2009 ರಿಂದ 2014 ತನಕ ಒಟ್ಟು 21 ಪಂದ್ಯಗಳನ್ನಾಡಿ 35 ವಿಕೆಟ್​ ಕಿತ್ತಿದ್ದಾರೆ. ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಬೌಲರ್​ಗಳ ಪಟ್ಟಿಯಲ್ಲಿ 5ನೇ ಸ್ಥಾನ ಪಡೆದಿದ್ದಾರೆ. ಪ್ರಸಕ್ತ ಟಿ20 ಆಡುತ್ತಿರುವ ನ್ಯೂಜಿಲ್ಯಾಂಡ್​ ತಂಡದ ಹಿರಿಯ ವೇಗಿ ಟಿಮ್​ ಸೌಥಿ 7 ವಿಕೆಟ್​ ಕಿತ್ತರೆ ಮೆಂಡೀಸ್​ ದಾಖಲೆ ಪತನಗೊಳ್ಳಲಿದೆ. ಸದ್ಯ ಸೌಥಿ 29* ವಿಕೆಟ್​ ಕಿತ್ತಿದ್ದಾರೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಭಾರತದ ಬ್ಯಾಟರ್​ಗಳಿವರು

Continue Reading

ಆಟೋಮೊಬೈಲ್

Car Care Tips : ಕಾಸು ಉಳಿಸಿ ಎಂಜಿನ್ ಬೆಳಗಿಸಿ, ಕಾರಿನ ಎಂಜಿನ್ ನೀವೇ ​ಕ್ಲೀನ್ ಮಾಡಲು ಇಲ್ಲಿವೆ ಟಿಪ್ಸ್​​​

Car Care Tips: ಕಾರಿನ ಎಂಜಿನ್ ಕ್ಲೀನಿಂಗ್ ಸವಾಲಿನಿಂದ ಕೂಡಿರುವುದಕ್ಕೆ ಅದರ ಮೇಲೆ ಅಂಟಿರುವ ಗ್ರೀಸ್ ಹಾಗೂ ಇನ್ನಿತರ ವಸ್ತುಗಳ ಹಾಗೂ ಜಟಿಲ ಪ್ರದೇಶವೇ ಕಾರಣ. ಅನೇಕರು ಈ ಕಾರ್ಯವನ್ನು ವೃತ್ತಿಪರರಿಗೆ ವಹಿಸುತ್ತಾರೆ. ಆದರೆ ಹಣವನ್ನು ಉಳಿಸಬೇಕಾದರೆ ನೀವೇ ಅದನ್ನು ತೊಳೆಯಬಹುದು. ಪ್ರತಿ ಒಂದು ಅಥವಾ ಎರಡು ತಿಂಗಳಿಗೊಮ್ಮೆ ಎಂಜಿನ್ ಸ್ವಚ್ಛಗೊಳಿಸುವುದರಿಂದ ಅದು ತುಕ್ಕು ಸೇರಿದಂತೆ ನಾನಾ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ.

VISTARANEWS.COM


on

car care tips
Koo

ಬೆಂಗಳೂರು: ತಮ್ಮ ಕಾರುಗಳನ್ನು ಆಗಾಗ ತೊಳೆಯುವ ಮಂದಿ ಅದರ ಎಂಜಿನ್ (Car Engine) ಸ್ವಚ್ಛತೆ ಬಗ್ಗೆ ಹೆಚ್ಚು ಆಸಕ್ತಿ ವಹಿಸುವುದಿಲ್ಲ. ಎಂಜಿನ್ ಎಲ್ಲರಿಗೂ ಕಾಣುವುದಿಲ್ಲ ಎಂಬುದು ಮೊದಲ ಕಾರಣವಾದರೆ ಕ್ಲೀನ್ ಮಾಡಲು ಕಷ್ಟ ಎಂಬುದು ಎರಡನೇ ಸಂಗತಿ. ಆದರೆ, ಗ್ರೀಸ್​, ಆಯಿಲ್​ಗಳ ಸಣ್ಣ ಪ್ರಮಾಣದ ಸೋರಿಕೆ ಹಾಗೂ ಇನ್ನಿತ್ಯಾದಿ ಕಾರಣಕ್ಕೆ ಎಂಜಿನ್ ಮೇಲೆ ಹೆಚ್ಚು ಕೊಳೆ ಇರುತ್ತದೆ. ಅಂಕಿಅಂಶಗಳ ಪ್ರಕಾರ, 60% ಕ್ಕೂ ಹೆಚ್ಚು ಕಾರು ಮಾಲೀಕರಿಗೆ ಎಂಜಿನ್ ಸ್ವಚ್ಛ ಮಾಡುವುದೇ ಸವಾಲು. ಅದಕ್ಕಾಗಿ ವರ್ಷಕ್ಕೊಮ್ಮೆ ಸರ್ವಿಸ್​ಗೆ ಬಿಡುವಾಗ ಮಾತ್ರ ಎಂಜಿನ್ ಸ್ವಚ್ಛ ಮಾಡುತ್ತಾರೆ. ಹಾಗೆ ಮಾಡುವುದು ಸೂಕ್ತ ಮಾರ್ಗವಲ್ಲ. ಅದಕ್ಕಾಗಿ ಎಂಜಿನ್ ಶುಚಿ ಮಾಡುವಂಥ ಕೆಲವೊಂದು ಉಪಾಯಗಳನ್ನು ಈ ಕೆಳಗೆ (Car Care Tips) ನೀಡಲಾಗಿದೆ. ಅದನ್ನು ಪಾಲಿಸಿದರೆ ನಿಮ್ಮ ಕಾರಿನ ಎಂಜಿನ್ ಸದಾ ಬೆಳಗುತ್ತಿರುತ್ತದೆ.

ಕಾರ್ ಎಂಜಿನ್ ಅನ್ನು ಸ್ವಚ್ಛಗೊಳಿಸುವುದು ಹೇಗೆ

ಕಾರಿನ ಎಂಜಿನ್ ಕ್ಲೀನಿಂಗ್ ಸವಾಲಿನಿಂದ ಕೂಡಿರುವುದಕ್ಕೆ ಅದರ ಮೇಲೆ ಅಂಟಿರುವ ಗ್ರೀಸ್ ಹಾಗೂ ಇನ್ನಿತರ ವಸ್ತುಗಳ ಹಾಗೂ ಜಟಿಲ ಪ್ರದೇಶವೇ ಕಾರಣ. ಅನೇಕರು ಈ ಕಾರ್ಯವನ್ನು ವೃತ್ತಿಪರರಿಗೆ ವಹಿಸುತ್ತಾರೆ. ಆದರೆ ಹಣವನ್ನು ಉಳಿಸಬೇಕಾದರೆ ನೀವೇ ಅದನ್ನು ತೊಳೆಯಬಹುದು. ಪ್ರತಿ ಒಂದು ಅಥವಾ ಎರಡು ತಿಂಗಳಿಗೊಮ್ಮೆ ಎಂಜಿನ್ ಸ್ವಚ್ಛಗೊಳಿಸುವುದರಿಂದ ಅದು ತುಕ್ಕು ಸೇರಿದಂತೆ ನಾನಾ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ.

ಎಂಜಿನ್ ತೊಳೆಯಲು ಹೊರಡುವ ಮೊದಲು ಅಗತ್ಯ ವಸ್ತುಗಳು ಮತ್ತು ಪರಿಕರಗಳನ್ನು ತರಬೇಕು. ಮುಖ್ಯ ಉತ್ಪನ್ನಗಳಲ್ಲಿ ಒಂದು ಡಿಗ್ರೀಸರ್. ಇವುಗಳು ಎಂಜಿನ್ ಮೇಲೆ ಕುಳಿತಿರುವ ಗ್ರೀಸ್​ನಂಥ ಜಿಡ್ಡಿನಂಶವನ್ನು ಬೇಗ ಕರಗಿಸುತ್ತದೆ. ಇಂಥ ಕೆಮಿಕಲ್​ಗಲು ಹೊಂದಿರುವ ಘಾಟು ವಾಸನೆಯಿಂದಾಗಿ ಅವುಗಳನ್ನು ಹೊರಾಂಗಣದಲ್ಲಿ ಬಳಸಬೇಕು. ಲಿಕ್ವಿಡ್​ ಮಾದರಿಯ ಡಿಗ್ರೀಸರ್​ಗಳನ್ನು ಬಳಸಲು ಅನುಕೂಲ ಮಾಡಬಹುದು.

ಇನ್ನೇನು ಬೇಕು?

ಸ್ವಚ್ಛಗೊಳಿಸುವ ದಿನ ಮಳೆ ಅಥವಾ ಹೆಚ್ಚು ಚಳಿ ಇಲ್ಲದಿದ್ದರೆ ಉತ್ತಮ. ಇದರಿಂದ ಎಂಜಿನ್ ಮತ್ತು ಅದರ ಘಟಕಗಳು ತೊಳೆದ ಸ್ವಲ್ಪ ಹೊತ್ತಿನಲ್ಲಿಯೇ ಒಣಗುತ್ತವೆ. ಇನ್ನು ಎಂಜಿನ್ ಆಫ್​ ಮಾಡಿದ ಬಳಿಕ ಸಾಕಷ್ಟು ಹೊತ್ತು ಕಾಯುವುದು ಉತ್ತಮ. ತೊಳೆಯುವ ಸಂದರ್ಭದಲ್ಲಿ ಉಂಟಾಗಬಹುದಾದ ಸುಟ್ಟ ಗಾಯಗಳನ್ನು ತಪ್ಪಿಸಬಹುದು.

ಮೊದಲಿಗೆ ಎಂಜಿನ್ ಕಂಪಾರ್ಟ್​ಮೆಂಟ್​ ಅನ್ನು ಓಪನ್ ಮಾಡಬೇಕು. ಮೇಲೆ ನಿಂತಿರುವ ಎಲೆಗಳು ಮತ್ತು ಕಡ್ಡಿಗಳನ್ನು ನಿಧಾನವಾಗಿ ತೆಗೆಯಬೇಕು. ವ್ಯಾಕ್ಯೂಮ್ ಕ್ಲೀನರ್ ಅಥವಾ ಏರ್ ಕಂಪ್ರೆಸರ್ ಅನ್ನು ಅದಕ್ಕಾಗಿ ಬಳಸಬಹುದು. ಈ ವೇಳೆ ಬ್ಯಾಟರಿ, ಇಗ್ನಿಷನ್ ಕೇಬಲ್ ಗಳು ಮತ್ತು ಎಂಜಿನ್ ಕಂಟ್ರೋಲ್ ಯುನಿಟ್ ನಂತಹ ಎಲ್ಲಾ ಎಲೆಕ್ಟ್ರಾನಿಕ್ ಘಟಕಗಳನ್ನು ಸೀಲ್​ ಮಾಡಿರಬೇಕು. ಇದಕ್ಕೆ ನೀರು ಬೀಳದಂತೆ ನೋಡಿಕೊಳ್ಳಬೇಕು. ಏರ್ ಫಿಲ್ಟರ್​ಗಳನ್ನು ತೆಗೆದುಬಿಡಿ. ಸರಿಯಾದ ಟೂಲ್ಸ್​ ಇದ್ದರೆ ಬ್ಯಾಟರಿ ಸಂಪರ್ಕವನ್ನೂ ತಪ್ಪಿಸಿ. ಇದರಿಂದ ಶಾರ್ಟ್​ ಸರ್ಕೀಟ್​ನಂಥ ಸಂಭಾವ್ಯ ಅವಘಡಗಳನ್ನು ತಪ್ಪಿಸಬಹುದು.

ಡಿಗ್ರೀಸರ್ ನ ಹಾಕಿ

ಎಂಜಿನ್​ ಮೇಲ್ಮೈ ಕೊಳೆಯನ್ನು ತೆಗೆಯಲು ಒತ್ತಡದೊಂದಿಗೆ ನೀರು ಹಾಯಿಸಿ. ಮಾರುಕಟ್ಟೆಯಲ್ಲಿ ಬಗೆಬಗೆಯ ಕಂಪ್ರೆಸರ್​​ಗಳಿವೆ. ಎಂಜಿನ್ ಗೆ ಡಿಗ್ರೀಸರ್ ಹಚ್ಚಿ, ವಿಶೇಷವಾಗಿ ಕವರ್ ಗಳು ಮತ್ತು ಪೈಪ್ ಗಳಂತಹ ಭಾರಿ ಕೊಳೆಯಿರುವ ಜಾಗಗಳಿಗೆ ಪರಿಣಾಮಕಾರಿಯಾಗಿ ಹಚ್ಚಿ. ಸ್ವಚ್ಛಗೊಳಿಸಲು ಸಿಂಥೆಟಿಕ್ ಬ್ರಿಸ್ಟಲ್ ಬ್ರಷ್ ಬಳಸಿ. ಅಗತ್ಯವಿದ್ದರೆ, ಡಿಗ್ರೀಸರ್ ಅಪ್ಲಿಕೇಶನ್ ಮತ್ತೆ ಮತ್ತೆ ಹಾಕಿ.

ಡಿಗ್ರೀಸರ್ ಅನ್ನು ತೆಗೆದುಹಾಕಲು ಎಂಜಿನ್ ಅನ್ನು ಮತ್ತೆ ನೀರಿನಿಂದ ತೊಳೆಯಿರಿ. ಹಾನಿಯನ್ನು ತಪ್ಪಿಸಲು ಎಲ್ಲ ಗ್ರೀಸರ್​ಗಳನ್ನು ಚೆನ್ನಾಗಿ ತೊಳೆಯಿರು.

ಒಣಗಿಸಿ

ಎಂಜಿನ್ ಮೇಲೆ ನೀರಿನ ಕಲೆಗಳು ನಿಲ್ಲುವುದನ್ನು ತಪ್ಪಿಸಲು ಚೆನ್ನಾಗಿ ಒಣಗಿಸಿ. ನೀವು ಅದನ್ನು ಗಾಳಿಯಲ್ಲಿ ಒಣಗಲು ಬಿಡಬಹುದು ಅಥವಾ ಸ್ವಚ್ಛವಾದ ಮೈಕ್ರೋಫೈಬರ್ ಬಟ್ಟೆಯನ್ನು ಬಳಸಿ ಉಜ್ಜಬಹುದು. ಮೂಲೆಗಳನ್ನು ಮತ್ತು ತಲುಪಲು ಕಷ್ಟಕರವಾದ ಪ್ರದೇಶಗಳನ್ನು ಒಣಗಿಸಲು ಬಟ್ಟೆ ಬಳಸಿ. ಸಂಪೂರ್ಣವಾಗಿ ಒಣಗಿದ ನಂತರ, ಪ್ಲಾಸ್ಟಿಕ್ ಕವರ್​ ತೆಗೆದು ಎಲ್ಲಾ ವಿದ್ಯುತ್ ಸಂಪರ್ಕಗಳನ್ನು ಮರುಸಂಪರ್ಕಿಸಿ.

ಎಂಜಿನ್ ತೊಳೆಯುವುದರಿಂದ ಆಗುವ ಪ್ರಯೋಜಗಳು

ಎಂಜಿನ್​ ಮೇಲೆ ಕೊಳೆ ಕಡಿಯಿದ್ದಾಗ ಅದಕ್ಕೆ ಚೆನ್ನಾಗಿ ಗಾಳಿ ಬಡಿಯುತ್ತದೆ. ಅದರಿಂದ ಕಾರಿನ ಎಂಜಿನ್ ಅತಿಯಾಗಿ ಬಿಸಿಯಾಗುವ ಸಾಧ್ಯತೆ ಕಡಿಮೆ. ಎಂಜಿನ್ ನಿರ್ವಹಣೆ ಸುಲಭವಾಗುತ್ತದೆ. ಸೋರಿಕೆಗಳು, ಬಿರುಕುಗಳು ಮತ್ತು ಇತರ ಹಾನಿಯು ಚೆನ್ನಾಗಿ ಕಾಣಿಸುತ್ತದೆ. ನಿಯಮಿತವಾಗಿ ಸ್ವಚ್ಛಗೊಳಿಸುವುದರಿಂದ ಎಂಜಿನ್ ಭಾಗಗಳು ತುಕ್ಕು ಹಿಡಿಯುವುದನ್ನು ತಪ್ಪಿಸಬಹುದು.

ಇದನ್ನೂ ಓದಿ: Shilpa Shetty : 3.5 ಕೋಟಿ ರೂಪಾಯಿ ಬೆಲೆಯ ರೇಂಜ್​ ರೋವರ್​​ ಕಾರು ಖರೀದಿಸಿದ ಶಿಲ್ಪಾ ಶೆಟ್ಟಿ; ವಿಡಿಯೊ ನೋಡಿ

ಡಿಗ್ರೀಸರ್​ಗಳು ಯಾವುದೆಲ್ಲ?

ಆರ್ಗಾನಿಕ್​ ಡಿಗ್ರೀಸರ್​ಗಳು ಮಾರುಕಟ್ಟೆಯಲ್ಲಿವೆ. ಈ ಡಿಗ್ರೀಸರ್ ಗಳು ಕಡಿಮೆ ಬೆಲೆಗೆ ದೊರೆಯುತ್ತವೆ. ಡಾಂಬರು ಕಲೆಗಳು, ಯಂತ್ರ ತೈಲ, ಮ್ಯಾಸ್ಟಿಕ್, ನೈಸರ್ಗಿಕ ರಬ್ಬರ್ ಮತ್ತು ಸಿಲಿಕಾನ್ ಅನ್ನು ಇದರಿಂದ ತೆಗೆಯಬಹುದು. ಇದು ಬೆಂಕಿ ಅಪಾಯಕಾರಿ, ಆದ್ದರಿಂದ ಅವುಗಳನ್ನು ಬಳಸುವಾಗ ಎಚ್ಚರಿಕೆ ಅಗತ್ಯ.

ಎರಡನೆಯದದ್ದು ಲಿಕ್ವಿಡ್​ ಆಧಾರಿತ ಡಿಗ್ರೀಸರ್. ಇದು ಅತ್ಯುತ್ತಮ ಆಂಟಿ-ಸ್ಟ್ಯಾಟಿಕ್ ಗುಣಲಕ್ಷಣಗಳನ್ನು ಹೊಂದಿವೆ ಮತ್ತು ತುಕ್ಕು ಸೇರಿದಂತೆ ಕಠಿಣ ಕಲೆಗಳನ್ನು ತೆಗೆದುಹಾಕಬಹುದು. ಅವು ಸುರಕ್ಷಿತ ಮತ್ತು ನಿರುಪದ್ರವಿ. ಪ್ಲಾಸ್ಟಿಕ್ ಮೇಲ್ಮೈಗೂ ಹಾಕಬಹುದು. ಫೆರಸ್ ಮತ್ತು ಕಬ್ಬಿಣೇತರ ಲೋಹಗಳನ್ನು ಪರಿಣಾಮಕಾರಿಯಾಗಿ ಸ್ವಚ್ಛಗೊಳಿಸುತ್ತವೆ.
ಮೂರನೇ ಮಾದರಿಯ ಸಾವಯವ ದ್ರಾವಕಗಳ ಎಮಲ್ಷನ್​ಗಳು ಅತ್ಯುತ್ತಮ ನುಗ್ಗುವ ಸಾಮರ್ಥ್ಯ ಹೊಂದಿವೆ. ತೈಲ ಕಣಗಳೊಂದಿಗೆ ಮೇಲ್ಮೈ ಮರು-ಮಾಲಿನ್ಯ ತಡೆಯುತ್ತವೆ. ಮಸಿ ಮತ್ತು ಆಕ್ಸೈಡ್​ ಫಿಲ್ಮ್ ಗಳನ್ನು ತೆಗೆದುಹಾಕುವಲ್ಲಿ ಅವು ಅತ್ಯುತ್ತಮವಾಗಿವೆ.

ಡಿಗ್ರೀಸರ್ ಗಳನ್ನು ಬಳಸುವ ಮುನ್ನ

ಮೊದಲಿಗೆ ಬಾಟಲಿಗಳಲ್ಲಿ ಬರೆದಿರುವ ಸೂಚನೆಗಳನ್ನು ಎಚ್ಚರಿಕೆಯಿಂದ ಓದಿ. ತಯಾರಕರ ಶಿಫಾರಸುಗಳನ್ನು ಅನುಸರಿಸಿ. ಉತ್ಪನ್ನವು ನೀವು ತೊಳೆಯುವ ಎಂಜಿನ್​ಗೆ ಹೊಂದಿಕೆಯಾಗುತ್ತದೆ ಎಂದು ಖಚಿತಪಡಿಸಿಕೊಳ್ಳಿ. ಉದಾಹರಣೆಗೆ, ಟ್ರೈಕ್ಲೋರೋಫ್ಲೋರೋಮೀಥೇನ್ ಆಧಾರಿತ ಡಿಗ್ರೀಸರ್ ಗಳು ಅಲ್ಯೂಮಿನಿಯಂ ವಸ್ತುಗಳಿಗೆ ಬಿದ್ದಾಗ ಸ್ಫೋಟವಾಗುತ್ತದೆ.

ದ್ರಾವಣ ಆಧಾರಿತ ಡಿಗ್ರೀಸರ್ ಗಳನ್ನು ಬಳಸುವಾಗ, ಬಟ್ಟೆ, ಸುರಕ್ಷತಾ ಕನ್ನಡಕಗಳು ಮತ್ತು ಉಸಿರಾಟದ ಸಾಧನವನ್ನು ಧರಿಸಿ. ಗಾಳಿಯಾಡುವ ಪ್ರದೇಶದಲ್ಲಿ ಕೆಲಸ ಮಾಡಿ. ಬೆಂಕಿಯ ಸಮೀಪ ತೆಗೆದುಕೊಂಡು ಹೋಗಬೇಡಿ. ಡಿಗ್ರೀಸರ್ ಅನ್ನು ಸಮಾನವಾಗಿ ಹಾಕಲು ಸ್ಪ್ರೇಯರ್ ಅಥವಾ ಲಿಂಟ್-ಫ್ರೀ ಬಟ್ಟೆಯನ್ನು ಬಳಸಿ.
ರಾಸಾಯನಿಕ ಉತ್ಪನ್ನವನ್ನು ಸಂಪೂರ್ಣವಾಗಿ ಒಣಗಲು ಬಿಡಬೇಡಿ.

ಶುಚಿಗೊಳಿಸುವ ಗುಣಮಟ್ಟ ನಿಯಂತ್ರಣ

ಆಟೋಮೋಟಿವ್ ತಜ್ಞರ ಪ್ರಕಾರ, ಡಿಗ್ರೀಸರ್ ಗಳ ಸಮಪರ್ಕ ಬಳಕೆ ಮತ್ತು ನಿಯಮಿತ ಎಂಜಿನ್ ಕ್ಲೀನಿಂಗ್ ಕಾರಿನ ಜೀವಿತಾವಧಿಯನ್ನು ಗಮನಾರ್ಹವಾಗಿ ವಿಸ್ತರಿಸುತ್ತದೆ. ಅದರ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ. ಡಿಗ್ರೀಸರ್ ಗಳನ್ನು ಆಯ್ಕೆ ಮಾಡಲು ಮತ್ತು ಬಳಸಲು ಮತ್ತು ನಿಯಮಿತ ಎಂಜಿನ್ ಕ್ಲೀನಿಂಗ್ ಗಾಗಿ ಶಿಫಾರಸುಗಳನ್ನು ಅನುಸರಿಸಬೇಕು.

Continue Reading

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಭಾರತದ ಬ್ಯಾಟರ್​ಗಳಿವರು

T20 World Cup 2024: ರೋಹಿತ್ ಶರ್ಮ ಟಿ20 ವಿಶ್ವ ಕಪ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಸದ್ಯ ಅಗ್ರಸ್ಥಾನದಲ್ಲಿದ್ದಾರೆ. ಇದುವರೆಗೆ 35 ಸಿಕ್ಸರ್​ ಬಾರಿಸಿದ್ದಾರೆ

VISTARANEWS.COM


on

T20 World Cup 2024
Koo

ಬೆಂಗಳೂರು: 2007ರಲ್ಲಿ ಆರಂಭಗೊಂಡ ಟಿ20 ವಿಶ್ವ ಕಪ್ (T20 World Cup 2024) ​ನಿಂದ 2022ರ ವಿಶ್ವ ಕಪ್​ವರೆಗೆ ನಡೆದ ಟಿ20 ವಿಶ್ವ ಕಪ್​ನಲ್ಲಿ ಭಾರತ ಕ್ರಿಕೆಟ್​ ತಂಡದ ಆಟಗಾರರು ಎಷ್ಟು ಸಿಕ್ಸರ್​ ಸಾಧನೆ ಮಾಡಿದ್ದಾರೆ ಎನ್ನುವ ಸ್ವಾರಸ್ಯಕರ ಸಂಗತಿ ಇಂತಿದೆ.

ರೋಹಿತ್​ ಶರ್ಮ


ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮ ಟಿ20 ವಿಶ್ವ ಕಪ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಸದ್ಯ ಅಗ್ರಸ್ಥಾನದಲ್ಲಿದ್ದಾರೆ. ರೋಹಿತ್ ಉದ್ಘಾಟನ ಆವೃತ್ತಿಯ ವಿಶ್ವಕಪ್​ನಿಂದ ಆಡಿ ಇದುವರೆಗೆ 35 ಸಿಕ್ಸರ್​ ಬಾರಿಸಿದ್ದಾರೆ. ಇದೀಗ 2024 ರ ವಿಶ್ವ ಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸುತ್ತಿರುವ ರೋಹಿತ್​ ತಮ್ಮ ಸಿಕ್ಸರ್​ಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವ ಇರಾದೆಯಲ್ಲಿದ್ದಾರೆ. 2007-2022ರ ವಿಶ್ವಕಪ್​ ಆವೃತ್ತಿಯಲ್ಲಿ ರೋಹಿತ್​ ಒಟ್ಟು 39 ಪಂದ್ಯಗಳನ್ನು ಆಡಿದ್ದಾರೆ.


ಯುವರಾಜ್ ಸಿಂಗ್


ಭಾರತ ಕ್ರಿಕೆಟ್​ ಕಂಡ ಅತ್ಯಂತ ಶ್ರೇಷ್ಠ ಆಲ್​ರೌಂಡರ್, ಮಾಜಿ ಆಟಗಾರ, 2007 ವಿಶ್ವಕಪ್​ ಟೂರ್ನಿಯಲ್ಲಿ ಸ್ಟುವರ್ಟ್​ ಬ್ರಾಡ್​ ಓವರ್​ಗೆ ಸತತವಾಗಿ 6 ಸಿಕ್ಸರ್​ ಬಾರಿಸಿದ ಯುವರಾಜ್​ ಸಿಂಗ್ ಈ ಸಾಲಿನಲ್ಲಿ ಸದ್ಯ ದ್ವಿತೀಯ ಸ್ಥಾನದಲ್ಲಿದ್ದಾರೆ. ಯುವಿ ಒಟ್ಟು 31 ವಿಶ್ವ ಕಪ್​ ಪಂದ್ಯಗಳನ್ನು ಆಡಿದ್ದು 33 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಭಾರತ 2007 ಮತ್ತು 2011 ರ ವಿಶ್ವ ಕಪ್​ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ ಆಟಗಾರ ಎನ್ನುವ ಕೀರ್ತಿಯೂ ಇವರದ್ದಾಗಿದೆ.


ವಿರಾಟ್​ ಕೊಹ್ಲಿ


ಕಳೆದ 2 ವರ್ಷಗಳ ಬಳಿಕ ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿರುವ, ಈ ಆವೃತ್ತಿ ಐಪಿಎಲ್​ನಲ್ಲಿ ಗರಿಷ್ಠ ಮೊತ್ತ ದಾಖಲಿಸಿದ ಕಿಂಗ್ ಖ್ಯಾತಿಯ​ ವಿರಾಟ್​ ಕೊಹ್ಲಿ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ. 2012ರಿಂದ ಟಿ20 ವಿಶ್ವಕಪ್​ ಆಡುತ್ತಿರುವ ಕೊಹ್ಲಿ ಇದುವರೆಗೆ 27 ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ 28 ಸಿಕ್ಸರ್​ ಬಾರಿಸಿದ್ದಾರೆ. ಈ ಬಾರಿಯ ಟೂರ್ನಿಯಲ್ಲಿ ಕೇವಲ 4 ಸಿಕ್ಸರ್​ ಬಾರಿಸಿದರೆ ಯುವರಾಜ್​ ಸಿಂಗ್​ ದಾಖಲೆ ಮುರಿಯಲಿದ್ದಾರೆ.

ಇದನ್ನೂ ಓದಿ T20 World Cup 2024: ಮಿನಿ ವಿಶ್ವಕಪ್​ ಸಮರದಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್‌ ಗಳಿಸಿದ ದಾಂಡಿಗರಿವರು!


ಎಂ.ಎಸ್​ ಧೋನಿ


ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ ಈ ಯಾದಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಧೋನಿ 2007ರಿಂದ 2016ರ ತನಕ 33 ಪಂದ್ಯಗಳನ್ನಾಡಿ ಒಟ್ಟು 16 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಆದರೆ ಧೋನಿ ಚೊಚ್ಚಲ ಟಿ20 ವಿಶ್ವಕಪ್​ನಲ್ಲಿಯೇ ತಂಡವನ್ನು ಚಾಂಪಿಯನ್​ ಪಟ್ಟಕ್ಕೇರಿಸಿದ ಖ್ಯಾತಿ ಹೊಂದಿದ್ದಾರೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ ಇತಿಹಾಸದಲ್ಲಿ ಎಂದೂ ಮರೆಯದ ಸ್ಮರಣೀಯ ಸನ್ನಿವೇಶಗಳಿವು


ಕೆ.ಎಲ್​ ರಾಹುಲ್​


ಕನ್ನಡಿಗ ಕೆ.ಎಲ್​ ರಾಹುಲ್​ ಅವರು ಇದುವರೆಗೆ 11 ಟಿ20 ವಿಶ್ವಕಪ್​ ಆಡಿದ್ದು 15 ಸಿಕ್ಸರ್​ ಬಾರಿಸಿದ್ದಾರೆ. ಟಿ20 ವಿಶ್ವ ಕಪ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಅವರಿಗೆ 5ನೇ ಸ್ಥಾನ. ವಿಪರ್ಯಾಸವೆಂದರೆ ಈ ಬಾರಿ ಅವರಿಗೆ ತಂಡದಲ್ಲಿ ಅವಕಾಶ ಸಿಕ್ಕಿಲ್ಲ.

Continue Reading

ಪ್ರಮುಖ ಸುದ್ದಿ

ವಾಲ್ಮೀಕಿ ನಿಗಮ ಅಧೀಕ್ಷಕ ಆತ್ಮಹತ್ಯೆ ಪ್ರಕರಣ: ಮೂವರ ಮೇಲೆ ಎಫ್‌ಐಆರ್; ಡೆತ್‌ ನೋಟ್‌ನಲ್ಲಿರುವ ಸಚಿವ ಯಾರು?

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಆರು ಪುಟಗಳ ಸುದೀರ್ಘ ಡೆತ್ ನೋಟ್ ಬರೆದಿಟ್ಟು ಸಾವನ್ನಪ್ಪಿದ್ದರು. ನಿಯಮಬಾಹಿರವಾಗಿ 85 ಕೋಟಿ ಹಣವನ್ನು ವರ್ಗಾವಣೆ ಮಾಡಲಾಗಿದೆ, ಅದನ್ನು ಪ್ರಶ್ನಿಸಿದ್ದಕ್ಕೆ ತನಗೆ ಕಿರುಕುಳ ನೀಡಲಾಗುತ್ತಿದೆ ಎಂದು ಅದರಲ್ಲಿ ಆರೋಪಿಸಿದ್ದರು. ಡೆತ್ ನೋಟ್‌ನಲ್ಲಿ, ʼಸಚಿವರ ಮೌಖಿಕ ಆದೇಶ ಮೇಲೆ ಹಣ ವರ್ಗಾವಣೆʼ ವಿಚಾರ ಪ್ರಸ್ತಾಪವಿದೆ.

VISTARANEWS.COM


on

self harming chandrashekar ವಾಲ್ಮೀಕಿ
Koo

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Development Corporation) ಅಧೀಕ್ಷಕ ಚಂದ್ರಶೇಖರ್‌ ಆತ್ಮಹತ್ಯೆ (Self Harming) ಪ್ರಕರಣದಲ್ಲಿ ಮೂರು ಜನ ಅಧಿಕಾರಿಗಳ (Officers) ವಿರುದ್ಧ ಪ್ರಕರಣ (FIR) ದಾಖಲಿಸಲಾಗಿದೆ. ಚಂದ್ರಶೇಖರ್‌ ಬರೆದಿಟ್ಟಿರುವ ಡೆತ್‌ ನೋಟ್‌ನಲ್ಲಿ (Death note) ಒಬ್ಬರು ಸಚಿವರ (minister) ಉಲ್ಲೇಖ ಕಂಡುಬಂದಿದೆ.

ಶಿವಮೊಗ್ಗ (Shivamogga news) ನಗರದ ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಇದಕ್ಕೆ ಸಂಬಂಧಿಸಿ ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್, ಲೆಕ್ಕಾಧಿಕಾರಿ ಪರಶುರಾಮ್, ಬ್ಯಾಂಕ್ ಅಧಿಕಾರಿ ಸುಚಿಸ್ಥನಾ ಎಂಬವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ನಿಗಮದಲ್ಲಿ ನಿಯಮಬಾಹಿರವಾಗಿ 85 ಕೋಟಿ ಹಣವನ್ನು ವರ್ಗಾವಣೆ ಮಾಡಲಾಗಿದೆ ಎಂಬ ಆರೋಪವನ್ನು ಡೆತ್ ನೋಟ್‌ನಲ್ಲಿ ನೌಕರ ಮಾಡಿದ್ದಾರೆ.

ಚಂದ್ರಶೇಖರ್‌ ಅವರು ಆರು ಪುಟಗಳ ಸುದೀರ್ಘ ಡೆತ್ ನೋಟ್ ಬರೆದಿಟ್ಟು ಸಾವನ್ನಪ್ಪಿದ್ದರು. ನಿಯಮಬಾಹಿರವಾಗಿ 85 ಕೋಟಿ ಹಣವನ್ನು ವರ್ಗಾವಣೆ ಮಾಡಲಾಗಿದೆ, ಅದನ್ನು ಪ್ರಶ್ನಿಸಿದ್ದಕ್ಕೆ ತನಗೆ ಕಿರುಕುಳ ನೀಡಲಾಗುತ್ತಿದೆ ಎಂದು ಅದರಲ್ಲಿ ಆರೋಪಿಸಿದ್ದರು. ಡೆತ್ ನೋಟ್‌ನಲ್ಲಿ, ʼಸಚಿವರ ಮೌಖಿಕ ಆದೇಶ ಮೇಲೆ ಹಣ ವರ್ಗಾವಣೆʼ ವಿಚಾರ ಪ್ರಸ್ತಾಪವಿದೆ. ಸಚಿವರ ಹೆಸರು ಬರೆಯದೇ ಮೌಖಿಕ ಆದೇಶ ಎಂದು ಡೆತ್ ನೋಟ್‌ನಲ್ಲಿ ಬರೆದಿದ್ದು, ಈ ಸಚಿವರು ಯಾರು ಎಂಬ ಪ್ರಶ್ನೆ ಹಾಗೇ ಉಳಿದಿದೆ.

85 ಕೋಟಿ ರೂ. ಹಣ ವರ್ಗಾವಣೆ ವಿಚಾರದಲ್ಲಿ ಚಂದ್ರಶೇಖರ್‌ ಭಯಗೊಂಡಿದ್ದರು ಎಂದು ಗೊತ್ತಾಗಿದೆ. ಹಣ ಯಾರ ಅಕೌಂಟ್‌ಗೆ ಕಳಿಸಿದ್ದಾರೆ ಎಂದು ತಿಳಿಯದೇ ಆತಂಕಗೊಂಡಿದ್ದರು. ಬ್ಯಾಂಕ್ ಅಧಿಕಾರಿಗೆ ಈ ಬಗ್ಗೆ ಮಾಹಿತಿ ಕೇಳಿದರೂ ಬ್ಯಾಂಕ್ ಅಧಿಕಾರಿಗಳು ಮಾಹಿತಿ ನೀಡಿರಲಿಲ್ಲ. 85 ಕೋಟಿ ವರ್ಗಾವಣೆ ಆಗಿದ್ದು ಎಲ್ಲಿಗೆ ಎಂಬುದನ್ನು ಬ್ಯಾಂಕ್‌ ಅಧಿಕಾರಿ ತಿಳಿಸಬೇಕಿದೆ. ಮೌಖಿಕ ಆದೇಶ ನೀಡಿದ ಸಚಿವರು ಯಾರು ಎಂಬುದನ್ನು ಚಂದ್ರಶೇಖರ್‌ ಅವರ ಮೇಲಧಿಕಾರಿಗಳು ತಿಳಿಸಬೇಕಿದೆ.

ಕಣ್ಣೀರಿಟ್ಟ ಚಂದ್ರಶೇಖರ್ ಪತ್ನಿ

“ನನ್ನ ಗಂಡನ ಸಾವಿಗೆ ಸೂಕ್ತ ನ್ಯಾಯ ಒದಗಿಸಬೇಕು. ನಾನು ಎರಡು ಮಕ್ಕಳನ್ನು ಇಟ್ಟುಕೊಂಡು ಹೇಗೆ ಬದುಕೋದು ಸರ್” ಎಂದು ಗಂಡನನ್ನು ನೆನೆದು ಚಂದ್ರಶೇಖರ್ ಪತ್ನಿ ಕವಿತಾ ಕಣ್ಣೀರಿಟ್ಟಿದ್ದಾರೆ. ʼʼನನ್ನ ಗಂಡನ ಸಾವಿಗೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಆಗಬೇಕು. ಮೂವರು ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅವರು ಒಂದು ರೂಪಾಯಿ ಲಂಚ ಪಡೆದಿಲ್ಲ. ನಾನು ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡ್ತಾ ಇದ್ದೀನಿ” ಎಂದು ಶಿವಮೊಗ್ಗದಲ್ಲಿ ಚಂದ್ರಶೇಖರ್ ಪತ್ನಿ ಕವಿತಾ ಹೇಳಿಕೆ ನೀಡಿದ್ದಾರೆ.

“ಸಚಿವರನ್ನು ವಜಾ ಮಾಡಿ”

“ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕರು ಡೆತ್ ನೋಟ್ ಬರೆದಿಟ್ಟು ಸಾವನ್ನಪ್ಪಿದ್ದಾರೆ. ನಾನು ಹೇಡಿಯಲ್ಲ ಎಂದು ಸಹ ಅವರು ಬರೆದಿದ್ದಾರೆ. ಸೂಪರಿಂಟೆಂಡೆಂಟ್ ಪರಿಸ್ಥಿತಿ ಹೀಗಾದರೆ ಸಾಮಾನ್ಯ ಅಧಿಕಾರಿಗಳ ಪರಿಸ್ಥಿತಿ ಏನು? ಕೋಟ್ಯಾಂತರ ರೂಪಾಯಿ ಹಣ ಸಚಿವರ ಮೌಖಿಕ ಆದೇಶದ ಮೂಲಕ ಹಣ ವರ್ಗಾವಣೆ ಆಗಿದೆ. ಸರ್ಕಾರದ ಅಧಿಕಾರಿಗಳಿಗೆ ಈ ಪರಿಸ್ಥಿತಿ ಬರುತ್ತೆ ಅಂದರೆ ನಾವು ಯಾವ ವಾತಾವರಣದಲ್ಲಿದ್ದೇವೆ? ಇಡೀ ಪ್ರಕರಣ ನೋಡಿದರೆ ಏನೂ ನಡೆದೇ ಇಲ್ಲ ಎಂಬಂತೆ ಸರ್ಕಾರ ಇದೆ. ಕುಟುಂಬಗಳು ಅನಾಥವಾಗುತ್ತಿವೆ” ಎಂದು ಶಿವಮೊಗ್ಗದಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನ ಕುಮಾರ್ ಟೀಕಿಸಿದ್ದಾರೆ.

ಸಿಎಂ ಕೂಡಲೇ ತಮ್ಮ ವಾಲ್ಮೀಕಿ ನಿಗಮದ ಮಂತ್ರಿಯನ್ನು ವಜಾಗೊಳಿಸಬೇಕು. ಈ ಘಟನೆಗಳನ್ನು ರಾಜ್ಯದ ಜನ ಗಮನಿಸುತ್ತಾರೆ. ಕೂಡಲೇ ಸಂಬಂಧ ಪಟ್ಟ ಮಂತ್ರಿಯ ಹೆಸರನ್ನು ಎಫ್‌ಐಆರ್‌ನಲ್ಲಿ ಸೇರಿಸಬೇಕು. ವಾಲ್ಮೀಕಿ ಅಭಿವೃದ್ಧಿ ನಿಗಮದ ಉಸ್ತುವಾರಿ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಸರ್ಕಾರಿ ನೌಕರನ ಸಾವಿಗೆ ಕಾರಣರಾದವರ ಹೆಸರನ್ನು ಸಹ ಎಫ್ಐಆರ್‌ನಲ್ಲಿ ಸೇರಿಸಬೇಕು. ಅಧಿಕಾರಿಗಳು ಹೆದರಿಕೊಂಡು ಕೆಲಸ ಮಾಡುವ ಪರಿಸ್ಥಿತಿ ಬಂದಿದೆ. ಆತ್ಮಹತ್ಯೆ ಆಗಿ ಎರಡು ದಿನ ಆದರೂ ಸರ್ಕಾರ ಸುಮ್ಮನಿರುವುದನ್ನು ನೋಡಿ ಅನುಮಾನ ಬರುತ್ತಿದೆ” ಎಂದು ಅವರು ದೂರಿದ್ದಾರೆ.

ಇದನ್ನೂ ಓದಿ: Self Harming: ಮೇಲಧಿಕಾರಿಗಳ ಕಿರುಕುಳ, ಹಗರಣದ ಕರಿನೆರಳು: ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಟೆಂಡೆಂಟ್ ಆತ್ಮಹತ್ಯೆ

Continue Reading
Advertisement
WhatsApp Update
ತಂತ್ರಜ್ಞಾನ14 mins ago

WhatsApp Update : ವಾಯ್ಸ್ ನೋಟ್ ಅವಧಿ ಹೆಚ್ಚಿಸಲಿದೆ ವಾಟ್ಸ್ಆ್ಯಪ್; ವಿಸ್ತರಣೆ ಅವಧಿ ಎಷ್ಟು ಗೊತ್ತೇ?

Mango For Diabetes
ಆರೋಗ್ಯ19 mins ago

Mango For Diabetes: ಮಧುಮೇಹಿಗಳೂ ಮಾವಿನಹಣ್ಣಿನ ರುಚಿ ಸವಿಯಬಹುದೇ? ಇಲ್ಲಿದೆ ಉತ್ತರ!

T20 World Cup 2024
ಕ್ರೀಡೆ24 mins ago

T20 World Cup 2024: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಟಾಪ್​ 5 ಬೌಲರ್​ಗಳು ಯಾರು?

Love Case
ವಿಜಯಪುರ34 mins ago

Love Case : ಪ್ರೀತಿಸಿದವಳೇ ಬೇಕೆಂದ ಪ್ರೇಮಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ರಾ ಯುವತಿ ಕುಟುಂಬಸ್ಥರು!

Bengaluru Traffic
ಬೆಂಗಳೂರು35 mins ago

Bengaluru Traffic: ಬೆಂಗಳೂರು ಟ್ರಾಫಿಕ್ ನಿರ್ವಹಣೆಗೆ ಹೊಸ ತಂತ್ರಜ್ಞಾನ; ಸಂಚಾರ ಇಲಾಖೆಯ ಪ್ಲಾನ್

car care tips
ಆಟೋಮೊಬೈಲ್53 mins ago

Car Care Tips : ಕಾಸು ಉಳಿಸಿ ಎಂಜಿನ್ ಬೆಳಗಿಸಿ, ಕಾರಿನ ಎಂಜಿನ್ ನೀವೇ ​ಕ್ಲೀನ್ ಮಾಡಲು ಇಲ್ಲಿವೆ ಟಿಪ್ಸ್​​​

Viral Video
ವೈರಲ್ ನ್ಯೂಸ್1 hour ago

Viral Video: ದಿಗಂಬರ ಜೈನ ಮುನಿಗಳಿಗೆ ಈ ಪಾಪಿ ಮಾಡಿದ್ದೇನು ಗೊತ್ತಾ? ಶಾಕಿಂಗ್‌ ವಿಡಿಯೋ ವೈರಲ್‌

Prajwal Revanna Case
ಕರ್ನಾಟಕ1 hour ago

Prajwal Revanna Case: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

assault case
ದಕ್ಷಿಣ ಕನ್ನಡ1 hour ago

Assault Case : ರೊಚ್ಚಿಗೆದ್ದ ಸ್ಥಳೀಯರು; ಬೋರ್‌ವೆಲ್ ಕೊರೆಯುತ್ತಿದ್ದ ಲಾರಿ ಮೇಲೆ ಕಲ್ಲು ತೂರಾಟ

T20 World Cup 2024
ಕ್ರೀಡೆ2 hours ago

T20 World Cup 2024: 2ನೇ ಬ್ಯಾಚ್​ನಲ್ಲಿ ನ್ಯೂಯಾರ್ಕ್​ಗೆ ತೆರಳಿದ ಭಾರತದ ಮೂವರು ಆಟಗಾರರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

tumkur murder
ತುಮಕೂರು6 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ24 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 week ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

ಟ್ರೆಂಡಿಂಗ್‌