Dina Bhavishya : ಈ ರಾಶಿಯವರಿಗೆ ಈ ಹಿಂದೆ ಮಾಡಿದ ಹೂಡಿಕೆಯು ಇಂದು ದ್ವಿಗುಣ ಲಾಭ ತರಲಿದೆ! - Vistara News

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರಿಗೆ ಈ ಹಿಂದೆ ಮಾಡಿದ ಹೂಡಿಕೆಯು ಇಂದು ದ್ವಿಗುಣ ಲಾಭ ತರಲಿದೆ!

Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ ಬಿದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya investment returns and Astrology prediction 2023 august 18
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಸಿಂಹ ರಾಶಿಯಿಂದ ಕನ್ಯಾ ರಾಶಿಗೆ ಬುಧವಾರ ಪ್ರವೇಶಿಸಿದ್ದಾನೆ. ಶನಿವಾರದವರೆಗೂ ಕನ್ಯಾರಾಶಿಯಲ್ಲಿಯೇ ಇರಲಿದ್ದು, ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ಇಂದು ಕಾರಣಾಂತರಗಳಿಂದ ಮೋಸ ಹೋಗುವ ಸಾಧ್ಯತೆ ಇದೆ. ಮಕರ ರಾಶಿಯವರು ಈ ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವ ಸಾಧ್ಯತೆಗಳು ಹೆಚ್ಚಿದೆ. ಕುಂಭ ರಾಶಿಯವರು ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅಗತ್ಯ. ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಇರುವವರು ಹೆಚ್ಚು ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು. ಇವು ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (18-08-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ.
ತಿಥಿ: ಬಿದಿಗೆ 20:00 ವಾರ: ಶುಕ್ರವಾರ
ನಕ್ಷತ್ರ: ಹುಬ್ಬಾ 22:55 ಯೋಗ: ಶಿವ 20:25
ಕರಣ: ಬಾಲವ 06:48 ಅಮೃತ ಕಾಲ: ಮಧ್ಯಾಹ್ನ 03:45 ರಿಂದ 05:33 ರವರೆಗೆ

ಸೂರ್ಯೋದಯ : 06:08  ಸೂರ್ಯಾಸ್ತ : 06:39

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕಾರಣಾಂತರಗಳಿಂದ ಮೋಸ ಹೋಗುವ ಸಾಧ್ಯತೆ ಇದೆ. ಹಣಕಾಸು ಪ್ರಗತಿಯಲ್ಲಿ ಸಾಧಾರಣ ಫಲ ಇದೆ. ಹೊಸದೊಂದು ವಸ್ತು ಖರೀದಿಯಿಂದ ಸಂತೋಷ ಆಗಲಿದೆ. ಆರೋಗ್ಯದಲ್ಲಿ ಉತ್ತಮ ಸ್ಥಿತಿ ಇರಲಿದ್ದು, ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಶಾಂತ ಮನಸ್ಥಿತಿಯಿಂದ ಉತ್ಸಾಹ ತುಂಬಿ ಕಾರ್ಯದಲ್ಲಿ ಯಶಸ್ಸು ಸಿಗುವುದು. ದಿನದ ಮಟ್ಟಿಗೆ ಖರ್ಚು ಹೆಚ್ಚಲಿದೆ. ಪ್ರೀತಿ ಪಾತ್ರರಿಂದ ಕಿರಿಕಿರಿ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣಲಿದೆ. ದಿನದ ಕೊನೆಯಲ್ಲಿ ಯಾವುದಾದರೂ ಸುದ್ದಿ ದುಃಖ ತರುವುದು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಜೀವನದಲ್ಲಿ ಅಭದ್ರತೆಯು ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಕಚೇರಿ ಕೆಲಸಗಳು ನಿಧಾನವಾಗಿ ಸಾಗುವುದು. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಬಿಡುವಿಲ್ಲದ ಕೆಲಸದಿಂದ ಆಯಾಸವಾಗಲಿದೆ. ಕುಟುಂಬದ ಸಂತಸ ಹೆಚ್ಚಿಸಲು ಪ್ರಯತ್ನ ಮಾಡುವಿರಿ. ಸಭೆ-ಸಮಾರಂಭಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಸ್ವಲ್ಪ ಖರ್ಚಿನ ದಿನ ನಿಮ್ಮದಾಗಲಿದೆ. ಬಹುದಿನಗಳ ಕನಸು ನನಸಾಗುವ ಸಮಯ ಬಂದಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಆಪ್ತರು ನಿಮ್ಮ ತಾಳ್ಮೆ ಪರೀಕ್ಷಿಸಲಿದ್ದು, ಈ ಬಗ್ಗೆ ಗಮನ ಇರಲಿ. ಯಾವುದೇ ವಿಷಯಗಳಲ್ಲಿ ದೃಢ ನಿರ್ಧಾರ, ರಾಜಿಯಾಗದ ಗುಣ ನಿಮ್ಮದಾಗಲಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಸಾಧಿಸುವಿರಿ. ದಿನದ ಮಧ್ಯಭಾಗದಲ್ಲಿ ಸ್ವಲ್ಪ ಮನಸ್ಸಿಗೆ ಒತ್ತಡ ಆಗಲಿದೆ. ಉದ್ಯೋಗ ಮತ್ತು ಆರೋಗ್ಯದಲ್ಲಿ ಉತ್ತಮ ಸ್ಥಿತಿ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಆಪ್ತರೊಂದಿಗೆ ಅನೇಕ ವಿಚಾರಗಳನ್ನು ಹಂಚಿಕೊಳ್ಳುವಿರಿ. ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ ದೊರೆಯಲಿದೆ.
ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಉತ್ತಮವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಸಾಧ್ಯತೆ. ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ನಿಮ್ಮ ಹಿಂದೆ ಪಿತೂರಿ ಮಾಡುವ ಜನರ ಬಗ್ಗೆ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಆಹಾರದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಆಪ್ತರೊಂದಿಗಿನ ಮಾತುಕತೆಯಲ್ಲಿ ವ್ಯತ್ಯಾಸವಾಗಬಹುದಾಗಿದ್ದು, ಜಗಳವಾಗುವ ಸಾಧ್ಯತೆ ಇದೆ. ಹೀಗಾಗಿ ಆದಷ್ಟು ಮಾತು ನಿಯಂತ್ರಣದಲ್ಲಿರಲಿ. ಇದರ ಮಧ್ಯೆ ಉದ್ಯೋಗದ ಸ್ಥಳದಲ್ಲಿ ಮಾಡುವ ಕೌಶಲ್ಯದ ಕೆಲಸವು ನಿಮಗೆ ಯಶಸ್ಸು ತಂದು ಕೊಡುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಅತಿಯಾದ ಒತ್ತಡದ ಕಾರ್ಯ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ಆಪ್ತರೊಂದಿಗೆ ಪ್ರಯಾಣ ಮಾಡುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಯೋಗಿಯಿಂದ ಏನೆಲ್ಲ ಬದಲಾಯಿತು..? 

Horoscope Today

ಮಕರ: ನಿಸ್ಪೃಹ ಮನೋಭಾವದಿಂದ ಕಾರ್ಯ ಸಿದ್ಧಿ ಮಾಡುವುದು. ಈ ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವ ಸಾಧ್ಯತೆಗಳು ಹೆಚ್ಚು. ಅನಗತ್ಯವಾಗಿ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅಗತ್ಯ. ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಇರುವವರು ಹೆಚ್ಚು ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು. ವ್ಯಾಪಾರದಲ್ಲಿ ಪ್ರಗತಿ ಸಾಧಿಸುವಿರಿ. ಹೊಸದಾಗಿ ಕಾರ್ಯ ಪ್ರಾರಂಭಿಸುವುದು ದಿನದ ಮಟ್ಟಿಗೆ ಬೇಡ. ಜೀವನದ ಭವಿಷ್ಯದ ಬಗ್ಗೆ ಅತಿಯಾಗಿ ಚಿಂತಿಸಿ ಮನಸ್ಥಿತಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?

Horoscope Today

ಮೀನ: ಕುಟುಂಬದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯದಿಂದ ಮಾನಸಿಕ ಅಸಮತೋಲನ ಆಗಬಹುದು. ನಡೆದು ಹೋದ ಘಟನೆಗಳ ಬಗ್ಗೆ ಚಿಂತಿಸಿ ಫಲವಿಲ್ಲ. ಅತಿಥಿಗಳ ಆಗಮನ ಹರ್ಷ ತರಲಿದೆ. ಉದ್ಮೋಗದಲ್ಲಿ ಸಾಧಾರಣ ಪ್ರಗತಿ ಕಾಣುವಿರಿ. ಕೌಟಂಬಿಕ ವ್ಯಾಜ್ಯಗಳು ಉಂಟಾಗಬಹುದು. ಕೌಟಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿಕ್ಕೋಡಿ

Sallekhana: ಸಲ್ಲೇಖನ ವ್ರತ ಸ್ವೀಕರಿಸಿ ಸಮಾಧಿಸೇನ ಮುನಿ ಜಿನೈಕ್ಯ

Sallekhana: ಸಮಾಧಿಸೇನ ಮುನಿಗಳಿಗೆ 79 ವರ್ಷ ವಯಸ್ಸಾಗಿತ್ತು. ಮೇ 17ರಿಂದ ಅವರು ಆಹಾರ ತ್ಯಾಗ ಮಾಡಿದ್ದರು. ಆಶ್ರಮದ ಆವರಣದಲ್ಲಿಯೇ ಮಂಗಳವಾರ ಅಂತ್ಯಕ್ರಿಯೆ ನೆರವೇರಿದೆ. ಚಿಕ್ಕೋಡಿ, ನಿಪ್ಪಾಣಿ, ಕಾಗವಾಡ, ಅಥಣಿ ತಾಲೂಕು, ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗ್ಲಿ ಜಿಲ್ಲೆಯಿಂದಲೂ ಅಪಾರ ಸಂಖ್ಯೆಯ ಭಕ್ತರು ಆಶ್ರಮಕ್ಕೆ ಬಂದು ಮುನಿಗಳ ಅಂತಿಮ ದರ್ಶನ ಪಡೆದರು.

VISTARANEWS.COM


on

jain monk samadhi sena chikkodi sallekhana
Koo

ಚಿಕ್ಕೋಡಿ: ಜೈನಮುನಿಗಳಾದ (Jain Muni) ಬೆಳಗಾವಿ ಜಿಲ್ಲೆ ಚಿಕ್ಕೋಡಿ (Chikkodi news) ತಾಲೂಕಿನ ಕೋಥಳಿಯ ಸಮಾಧಿಸೇನ ಮುನಿಗಳು (Samadhisena Muni) ಜೈನ ಸಂಪ್ರದಾಯದಂತೆ (Jain tradition) ಯಮ ಸಲ್ಲೇಖನ ವ್ರತ (Sallekhana Vrata) ಸ್ವೀಕರಿಸಿ ಕೀರ್ತಿಶೇಷರಾಗಿದ್ದಾರೆ. ಇವರು ಕೋಥಳಿಯ ದೇಶಭೂಷಣ ಮನಿಗಳ ಜೈನ ಆಶ್ರಮದಲ್ಲಿ ಕಳೆದ ನಾಲ್ಕು ದಿನಗಳಿಂದ ಸಲ್ಲೇಖನ ವ್ರತ ನಿರತರಾಗಿದ್ದರು. ಸೋಮವಾರ ರಾತ್ರಿ ಅವರು ಜಿನೈಕ್ಯರಾಗಿದ್ದಾರೆ.

ಸಮಾಧಿಸೇನ ಮುನಿಗಳಿಗೆ 79 ವರ್ಷ ವಯಸ್ಸಾಗಿತ್ತು. ಮೇ 17ರಿಂದ ಅವರು ಆಹಾರ ತ್ಯಾಗ ಮಾಡಿದ್ದರು. ಆಶ್ರಮದ ಆವರಣದಲ್ಲಿಯೇ ಮಂಗಳವಾರ ಅಂತ್ಯಕ್ರಿಯೆ ನೆರವೇರಿದೆ. ಚಿಕ್ಕೋಡಿ, ನಿಪ್ಪಾಣಿ, ಕಾಗವಾಡ, ಅಥಣಿ ತಾಲೂಕು, ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗ್ಲಿ ಜಿಲ್ಲೆಯಿಂದಲೂ ಅಪಾರ ಸಂಖ್ಯೆಯ ಭಕ್ತರು ಆಶ್ರಮಕ್ಕೆ ಬಂದು ಮುನಿಗಳ ಅಂತಿಮ ದರ್ಶನ ಪಡೆದರು.

ಗದಗ ಜಿಲ್ಲೆಯ ಗಜೇಂದ್ರ ಗಢದವರಾದ ಸಮಾಧಿಸೇನ ಮುನಿಗಳು ಗುಲಾಬಭೂಷಣ ಮುನಿಯವರ ಶಿಷ್ಯರಾಗಿದ್ದರು. ಸಂಸಾರಿಯಾಗಿದ್ದ ಅವರು 2004ರಲ್ಲಿ ಮನೆ ತೊರೆದು ತ್ಯಾಗಿಯಾಗಿ ದೀಕ್ಷೆ ಪಡೆದು ಜೈನ ಧರ್ಮದ ಪ್ರಸಾರ ಕಾರ್ಯದಲ್ಲಿ ತೊಡಗಿದ್ದರು. 2014ರಲ್ಲಿ ಮಹಾರಾಷ್ಟ್ರದ ಚಿಪರಿ ಆಶ್ರಮದ ಧರ್ಮಸೇನಾ ಮುನಿಗಳಿಂದ ಕ್ಷುಲ್ಲಕ ದೀಕ್ಷೆ ಪಡೆದಿದ್ದರು. 2021ರಲ್ಲಿ ಗುಲಾಬಭೂಷಣ ಮುನಿಗಳಿಂದ ಮುನಿ ದೀಕ್ಷೆ ಪಡೆದಿದ್ದ ರು. ಕೋಥಳಿಯ ಆಶ್ರಮದಲ್ಲಿ ದೇಶಭೂಷಣ ಮುನಿಗಳು ಸೇರಿ ಇದುವರೆಗೆ 40ಕ್ಕೂ ಅಧಿಕ ಜೈನಮುನಿಗಳು ಯಮ ಸಲ್ಲೇಖನ ವ್ರತ ಕೈಗೊಂಡು ದೇಹ ತ್ಯಾಗ ಮಾಡಿದ್ದಾರೆ.

ಸಲ್ಲೇಖನ ಎಂದರೇನು?

ಸಲ್ಲೇಖನ ಜೈನ ಧರ್ಮೀಯರ ಒಂದು ಕಠಿಣ ವ್ರತ. ಜೈನ ಧರ್ಮದ ಅನುಸಾರವಾಗಿ ಮೋಕ್ಷ ಅಥವಾ ಸದ್ಗತಿಗಾಗಿ ಧರ್ಮಪೂರ್ವಕವಾಗಿ ಆಹಾರಾದಿಗಳನ್ನು ತ್ಯಜಿಸಿ ಶರೀರ ತ್ಯಾಗ ಮಾಡುವ ವಿಧಿಗೆ ಸಲ್ಲೇಖನ ವ್ರತ ಎನ್ನಲಾಗುತ್ತದೆ. ಇದಕ್ಕೆ ಸಮಾಧಿ ಮರಣ ಎಂಬ ಹೆಸರೂ ಇದೆ. ಸಲ್ಲೇಖನ ವ್ರತವು ಮುನಿಗೆ ಶ್ರೇಷ್ಠವಾದುದು ಹಾಗೂ ಗೃಹಸ್ಥರಿಗೆ ಸಂಪೂರ್ಣ ಐಚ್ಛಿಕ ಕ್ರಿಯೆಯಾಗಿದೆ.

ಕೋಟ್ಯಂತರ ರೂ. ಆಸ್ತಿ ತ್ಯಜಿಸಿ ಜೈನ ಸನ್ಯಾಸ ದೀಕ್ಷೆ ಪಡೆದ ಬೆಂಗಳೂರಿನ ಉದ್ಯಮಿಯ ಪತ್ನಿ, 11 ವರ್ಷದ ಮಗ!

ಬೆಂಗಳೂರು ಮೂಲದ ಉದ್ಯಮಿ ಮನೀಶ್‌ ಎಂಬುವವರ ಪತ್ನಿ ಸ್ವೀಟಿ (30) ಹಾಗೂ 11 ವರ್ಷದ ಮಗ ಹೃಧನ್ ಇತ್ತೀಚೆಗೆ ಜೈನ ಸನ್ಯಾಸ ದೀಕ್ಷೆ ಪಡೆದಿದ್ದಾರೆ. ತಾಯಿ-ಮಗನ ದೀಕ್ಷಾ ಸಮಾರಂಭವು ಗುಜರಾತ್‌ನ ಸೂರತ್‌ನಲ್ಲಿ ಜನವರಿಯಲ್ಲಿ ಬಹಳ ವಿಜೃಂಭಣೆಯಿಂದ ನಡೆದಿದೆ. ಇವರಿಬ್ಬರೂ ಈಗ ಸೂರತ್‌ನಲ್ಲಿ ನೆಲೆಸಿದ್ದಾರೆ.

ಜೈನ ದೀಕ್ಷೆಯ ನಂತರ ತಾಯಿ ಸ್ವೀಟಿಗೆ ಭಾವಶುದ್ಧಿ ರೇಖಾ ಶ್ರೀ ಜಿ ಹಾಗೂ ಮಗ ಹೃದನ್‌ಗೆ ಹಿತಶಯ್ ರತನವಿಜಯ್ ಜಿ. ಎಂದು ಮರು ನಾಮಕರಣ ಮಾಡಲಾಗಿದೆ. ಇದೀಗ ತಾಯಿ-ಮಗ ದೀಕ್ಷೆ ಸ್ವೀಕಾರ ಮಾಡಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಸದ್ಯ ಈ ವಿಡಿಯೊ ಎಲ್ಲೆಡೆ ವೈರಲ್‌ ಆಗಿದೆ.

ಸನ್ಯಾಸ ದೀಕ್ಷೆ ಸ್ವೀಕರಿಸುವಾಗ ಮಗನ ತಲೆಯನ್ನು ತಾಯಿ ನೇವರಿಸುತ್ತಾ ಭಾವುಕರಾಗಿದ್ದಾರೆ. ಪರಸ್ಪರ ಹಣೆಗೆ ಕುಂಕುಮ ಇಟ್ಟುಕೊಂಡು, ಅಕ್ಷತೆ ಹಾಕಿಕೊಂಡಿದ್ದು, ನಂತರ ಇಬ್ಬರೂ ಶ್ವೇತ ವಸ್ತ್ರಗಳಲ್ಲಿ ಕಾಣಿಸಿಕೊಂಡಿರುವುದು ವಿಡಿಯೊದಲ್ಲಿದೆ.

ಕುಟುಂಬದ ಸಂಬಂಧಿ ವಿವೇಕ್‌ ಪ್ರತಿಕ್ರಿಯಿಸಿ, ಭಾವಶುದ್ಧಿ ರೇಖಾ ಶ್ರೀ ಜಿ ಅವರು ಗರ್ಭಿಣಿಯಾಗಿದ್ದಾಗಲೇ ಸನ್ಯಾಸಿಯಾಗಲು ಬಯಸಿದ್ದರು. ಅದೇ ಸಮಯದಲ್ಲಿ, ತನ್ನ ಮಗು ಕೂಡ ತನ್ನನ್ನು ಅನುಸರಿಸಿ ಜೈನ ಸನ್ಯಾಸಿಯಾಗಬೇಕೆಂದು ನಿರ್ಧರಿಸಿದ್ದರು. ನಂತರ ಮಗ ಕೂಡ ತಾಯಿ ಹಾದಿಯಲ್ಲೇ ನಡೆಯುವುದಾಗಿ ಹೇಳಿದ್ದ. ಭಾವಶುದ್ಧಿ ರೇಖಾ ಶ್ರೀ ಜಿ ಅವರ ಸಂಕಲ್ಪ ಕೇಳಿದ ನಂತರ ಅವರ ಪತಿ ಮನೀಶ್ ಕೂಡ ಬೆಂಬಲಿಸಿದರು. ಅವರು ದೀಕ್ಷೆ ಪಡೆದಿರುವುದು ಮನೀಶ್ ಮತ್ತು ಕುಟುಂಬದ ಇತರರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Akshay Kumar: ಜೈನ ಸನ್ಯಾಸಿಯ 180 ದಿನಗಳ ಉಪವಾಸ ಬ್ರೇಕ್‌ ಮಾಡಿದ ಅಕ್ಷಯ್ ಕುಮಾರ್!

ಈ ಹಿಂದೆ, ಗುಜರಾತ್‌ನ ಶ್ರೀಮಂತ ಜೈನ ದಂಪತಿ ಸುಮಾರು 200 ಕೋಟಿ ರೂ. ಆಸ್ತಿ ತ್ಯಜಿಸಿ ಸನ್ಯಾಸ ದೀಕ್ಷೆ ಪಡೆದಿದ್ದರು. ಭಾವೇಶ್ ಭಂಡಾರಿ ಮತ್ತು ಪತ್ನಿ ಫೆಬ್ರವರಿಯಲ್ಲಿ ಸನ್ಯಾಸ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ ಒಬ್ಬ ಮಗ ಮತ್ತು ಮಗಳಿದ್ದು, ಅವರು ಕೂಡ 2022ರಲ್ಲಿಯೇ ದೀಕ್ಷೆ ತೆಗೆದುಕೊಂಡಿದ್ದರು.

ಇದನ್ನೂ ಓದಿ: Srinidhi Shetty: ಕೋಲ ಸೇವೆ ಸಲ್ಲಿಸಿದ ಕೆಜಿಎಫ್‌ ಬೆಡಗಿ; ಶ್ರೀನಿಧಿ ಶೆಟ್ಟಿಗೆ ದೈವ ಅಭಯ ನೀಡಿದ್ದೇನು?

Continue Reading

ಪ್ರಮುಖ ಸುದ್ದಿ

Corona Virus: ಸಿಂಗಾಪುರದಲ್ಲಿ ಕೋವಿಡ್‌-19 ಹೊಸ ಅಲೆ, ರಾಜ್ಯದಲ್ಲಿ ಅಲರ್ಟ್‌, ಇಂದು ಆರೋಗ್ಯ ಇಲಾಖೆ ಸಭೆ

Corona Virus: ಸಿಂಗಾಪುರದಲ್ಲಿ ಒಂದೇ ವಾರದಲ್ಲಿ 25 ಸಾವಿರ ಕೋವಿಡ್ ಕೇಸ್ ಖಚಿತವಾಗಿದ್ದು, ಇದರಿಂದ ಸಿಲಿಕಾನ್ ಸಿಟಿ ಬೆಂಗಳೂರು ಅಲರ್ಟ್‌ ಆಗಿದೆ. ಇದರ ಜೊತೆಗೆ ಮಹಾರಾಷ್ಟ್ರದಲ್ಲಿಯೂ ಕೋವಿಡ್ ಒಮಿಕ್ರಾನ್ ರೂಪಾಂತರಿ ವೈರಸ್‌ನ 91 ಕೇಸ್‌ ಪತ್ತೆಯಾಗಿವೆ. ಹೀಗಾಗಿ, ಮುನ್ನೆಚ್ಚರಿಕೆ ವಹಿಸಲು ಇಂದು ಕೇಂದ್ರ ಆರೋಗ್ಯ ಇಲಾಖೆಯ ಜೊತೆಗೆ ರಾಜ್ಯ ಆರೋಗ್ಯ ಇಲಾಖೆ ಸಭೆ ನಡೆಯುತ್ತಿದೆ.

VISTARANEWS.COM


on

corona virus wave in singapore
Koo

ಬೆಂಗಳೂರು: ಸಿಂಗಾಪುರದಲ್ಲಿ (Singapore) ಹೊಸ ಕೋವಿಡ್‌- 19 (Covid 19 wave) ಅಲೆ ಪತ್ತೆಯಾಗಿದೆ. ಒಂದೇ ವಾರದಲ್ಲಿ ಕೊರೊನಾ ವೈರಸ್‌ (Corona Virus) ಕೇಸುಗಳ ಸಂಖ್ಯೆ ದ್ವಿಗುಣಗೊಂಡಿದ್ದು, ಮತ್ತೆ ಮಾಸ್ಕ್‌ (Mask) ಧರಿಸಲು ಸಲಹೆ ನೀಡಲಾಗಿದೆ. ರಾಜ್ಯದಲ್ಲೂ ಆರೋಗ್ಯ ಇಲಾಖೆ (Health department) ಅಲರ್ಟ್‌ ಆಗಿದ್ದು, ಪರಿಸ್ಥಿತಿಯನ್ನು ಗಮನಿಸುತ್ತಿದೆ.

ಸಿಂಗಾಪುರದಲ್ಲಿ ಒಂದೇ ವಾರದಲ್ಲಿ 25 ಸಾವಿರ ಕೋವಿಡ್ ಕೇಸ್ ಖಚಿತವಾಗಿದ್ದು, ಇದರಿಂದ ಸಿಲಿಕಾನ್ ಸಿಟಿ ಬೆಂಗಳೂರು ಅಲರ್ಟ್‌ ಆಗಿದೆ. ಇದರ ಜೊತೆಗೆ ಮಹಾರಾಷ್ಟ್ರದಲ್ಲಿಯೂ ಕೋವಿಡ್ ಒಮಿಕ್ರಾನ್ ರೂಪಾಂತರಿ ವೈರಸ್‌ನ 91 ಕೇಸ್‌ ಪತ್ತೆಯಾಗಿವೆ. ಹೀಗಾಗಿ, ಮುನ್ನೆಚ್ಚರಿಕೆ ವಹಿಸಲು ಇಂದು ಕೇಂದ್ರ ಆರೋಗ್ಯ ಇಲಾಖೆಯ ಜೊತೆಗೆ ರಾಜ್ಯ ಆರೋಗ್ಯ ಇಲಾಖೆ ಸಭೆ ನಡೆಯುತ್ತಿದೆ.

ಸಿಂಗಾಪುರದಿಂದ ಬೆಂಗಳೂರು ಹಾಗೂ ಮುಂಬಯಿಗೆ ಆಗಮಿಸುವ ವಿಮಾನಯಾನಿಗಳ ಸಂಖ್ಯೆ ಹೆಚ್ಚು ಇದ್ದು, ಈ ಹಿನ್ನೆಲೆಯಲ್ಲಿ ಮುಂದಿನ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ. ಆಯ್ದ ಯಾನಿಗಳ ಆರೋಗ್ಯ ತಪಾಸಣೆ, ಮಾಸ್ಕ್‌ ಧಾರಣೆ ಸೇರಿದಂತೆ ಹಲವು ಕ್ರಮಗಳ ಬಗೆಗೆ ಚರ್ಚಿಸಲಾಗುತ್ತಿದೆ.

ಸಿಂಗಾಪುರದಲ್ಲಿ ಏನಾಗಿದೆ?

ಸಿಂಗಾಪುರದ ಆರೋಗ್ಯ ಸಚಿವ ಓಂಗ್ ಯೆ ಕುಂಗ್, ಸಾರ್ವಜನಿಕ ತಾಣಗಳಲ್ಲಿ ಮುಖವಾಡಗಳನ್ನು ಧರಿಸುವಂತೆ ಸಲಹೆ ನೀಡಿದ್ದಾರೆ. ಸಾಮಾಜಿಕ ನಿರ್ಬಂಧಗಳ ಕುರಿತು ಮಾತನಾಡಿದ ಸಚಿವ ಓಂಗ್, ಸದ್ಯಕ್ಕೆ ಯಾವುದೇ ರೀತಿಯ ಸಾಮಾಜಿಕ ನಿರ್ಬಂಧಗಳ ಯೋಚನೆಯಿಲ್ಲ ಎಂದಿದ್ದಾರೆ. ಏಕೆಂದರೆ ಸಿಂಗಾಪುರದಲ್ಲಿ ಕೋವಿಡ್ -19 ಅನ್ನು ಸ್ಥಳೀಯ ಕಾಯಿಲೆ ಎಂದು ಪರಿಗಣಿಸಲಾಗುತ್ತದೆ.

ಕೋವಿಡ್‌ನ ಹೊಸ ಅಲೆಯ ಪಥವನ್ನು ಸರ್ಕಾರವು ನಿಕಟವಾಗಿ ಗಮನಿಸುತ್ತಿದೆ ಎಂದು ಸಿಂಗಾಪುರದ ಆರೋಗ್ಯ ಸಚಿವಾಲಯ ಹೇಳಿದೆ. ಸಚಿವಾಲಯದ ಪ್ರಕಾರ, ಕೋವಿಡ್ -19 ಪ್ರಕರಣಗಳ ಅಂದಾಜು ಸಂಖ್ಯೆಯು ಹಿಂದಿನ ವಾರದಲ್ಲಿದ್ದ 13,700ರಿಂದ 25,900ಕ್ಕೆ ದ್ವಿಗುಣಗೊಂಡಿದೆ. ಅದೇ ಅವಧಿಯಲ್ಲಿ ಸರಾಸರಿ ದೈನಂದಿನ ಕೋವಿಡ್ -19 ಆಸ್ಪತ್ರೆಗೆ ದಾಖಲು ಕೇಸ್‌ಗಳು 181ರಿಂದ ಸರಿಸುಮಾರು 250ಕ್ಕೆ ಏರಿದೆ ಎಂದು ಸಚಿವಾಲಯ ವರದಿ ಮಾಡಿದೆ.

ಆಸ್ಪತ್ರೆಯ ಹಾಸಿಗೆ ಸಾಮರ್ಥ್ಯವನ್ನು ಸಂರಕ್ಷಿಸಲು, ಸಾರ್ವಜನಿಕ ಆಸ್ಪತ್ರೆಗಳಿಗೆ ತುರ್ತು-ಅಲ್ಲದ ಶಸ್ತ್ರಚಿಕಿತ್ಸೆಗಳನ್ನು ಕಡಿಮೆ ಮಾಡಲು ಮತ್ತು ಸೂಕ್ತವಾದ ರೋಗಿಗಳನ್ನು ಆರೈಕೆ ಸೌಲಭ್ಯಗಳಿಗೆ ವರ್ಗಾಯಿಸಲು ಸೂಚನೆ ನೀಡಲಾಗಿದೆ. “ನಾವು ಅಲೆಯ ಆರಂಭಿಕ ಭಾಗದಲ್ಲಿದ್ದೇವೆ. ಪ್ರಮಾಣ ಸ್ಥಿರವಾಗಿ ಏರುತ್ತಿದೆ” ಎಂದು ಆರೋಗ್ಯ ಸಚಿವ ಓಂಗ್ ಯೆ ಕುಂಗ್ ಹೇಳಿದ್ದಾರೆ.

ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಬಿಗ್‌ ಶಾಕ್‌! ಆಘಾತಕಾರಿ ವರದಿ ಔಟ್‌

ನವದೆಹಲಿ: ಕೊರೋನಾ ವೈರಸ್‌(Corona Virus) ಎದುರಿಸಲು ತೆಗೆದುಕೊಂಡಿರುವ ಕೋವಿಶೀಲ್ಡ್‌(Covishield Vaccine) ಲಸಿಕೆ ಅಡ್ಡಪರಿಣಾಮ(Side Effects) ಹೊಂದಿದೆ ಎಂಬುದು ಬಯಲಾದ ಬೆನ್ನಲ್ಲಿ ಕೋವಾಕ್ಸಿನ್‌ (Covaxin) ತೆಗೆದುಕೊಂಡಿರುವ ಜನ ತಮಗೇನು ಅಪಾಯವಿಲ್ಲ ಎಂದು ನಿರಾಳವಾಗಿದ್ದರು. ಆದರೆ ಇದೀಗ ವರದಿಯೊಂದು ಹೊರಬಿದ್ದಿದ್ದು, ಕೋವಾಕ್ಸಿನ್‌ ಪಡೆದಿರುವ ಜನರಿಗೆ ಬಿಗ್‌ ಶಾಕ್‌ ಕೊಟ್ಟಿದೆ. ಕೋವಾಕ್ಸಿನ್‌ ಲಸಿಕೆಯೂ ಅಡ್ಡಪರಿಣಾಮ ಹೊಂದಿದೆ ಎಂಬುದು ಅಧ್ಯಯನದಲ್ಲಿ ಬಯಲಾಗಿದೆ.

ಇತ್ತೀಚೆಗೆ ಕೋವಿಶೀಲ್ಡ್ ಅನ್ನು ಅಭಿವೃದ್ಧಿಪಡಿಸಿದ ಬ್ರಿಟಿಷ್ ಕಂಪನಿಯಾದ ಅಸ್ಟ್ರಾಜೆನೆಕಾ ಇತ್ತೀಚೆಗೆ ಅಲ್ಲಿನ ನ್ಯಾಯಾಲಯದಲ್ಲಿ ಅದರ ಲಸಿಕೆ ಕೆಲವು ಜನರಲ್ಲಿ ಗಂಭೀರ ಕಾಯಿಲೆಗೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿತ್ತು. ಇದೀಗ ಅದೇ ರೀತಿ ನಮ್ಮ ದೇಶದಲ್ಲಿ ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿಪಡಿಸಿರುವ ‘ಕೋವಾಕ್ಸಿನ್’ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ವರದಿ ಬಂದಿದೆ. ಈ ಲಸಿಕೆಯನ್ನು ಪಡೆದ ಸುಮಾರು ಒಂದು ವರ್ಷದ ನಂತರ, ಅದರ ಅಡ್ಡಪರಿಣಾಮಗಳು ಸಾಕಷ್ಟು ಜನರಲ್ಲಿ ಕಂಡುಬಂದಿದೆ ಎಂದು ಹೇಳಲಾಗಿದೆ.

BHU ಅಧ್ಯಯನ ವರದಿಯಲ್ಲಿ ಬಹಿರಂಗ

ಬನಾರಸ್‌ ಹಿಂದೂ ವಿಶ್ವವಿದ್ಯಾಲಯ ನಡೆಸಿದ ಅಧ್ಯಯನದಲ್ಲಿ ಈ ಅಂಶ ಬೆಳಕಿಗೆ ಬಂದಿದ್ದು, ಈ ವರದಿಯ ಪ್ರಕಾರ, ಕೊವಾಕ್ಸಿನ್‌ ತೆಗೆದುಕೊಂಡಿರುವ ಹದಿ ಹರೆಯದವರು ಮತು ಯುವಕರಲ್ಲಿ ಈ ಅಡ್ಡ ಪರಿಣಾಮ ಹೆಚ್ಚಾಗಿ ಕಂಡು ಬಂದಿದೆ. ಈ ಸಂಶೋಧನೆಗಾಗಿ ಒಟ್ಟು 1024 ಜನರನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಅವರಲ್ಲಿ 635 ಹದಿಹರೆಯದವರು ಮತ್ತು 391 ಯುವಕರು ಇದ್ದರು. 304 ಹದಿಹರೆಯದವರು ಅಥವಾ ಸುಮಾರು 48 ಪ್ರತಿಶತದಷ್ಟು ಜನರು ಶ್ವಾಸನಾಳದ ಸೋಂಕುಗೆ ತುತ್ತಾಗಿರುವುದು ಅಧ್ಯಯನದಲ್ಲಿ ಬಯಲಾಗಿದೆ.

ಇದನ್ನೂ ಓದಿ: CoWIN Certificates: ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಔಟ್‌; ಕೇಂದ್ರ ಹೇಳೋದೇನು?

Continue Reading

ಪ್ರಮುಖ ಸುದ್ದಿ

Board Exam: ಮಕ್ಕಳೇ ನೀವು ಪಾಸ್!‌ 5, 8 ಮತ್ತು 9ನೇ ತರಗತಿಯ ಎಲ್ಲ ಮಕ್ಕಳು ಉತ್ತೀರ್ಣ

Board Exam: ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈಗಾಗಲೇ ಶಾಲೆಗಳಲ್ಲಿ ನಡೆದಿರುವ FA-1, FA-2, FA-3, FA-4, SA-1 ಗಳ ಮೌಲ್ಯಾಂಕನ ಆಧಾರದ ಮೇಲೆ ಮಕ್ಕಳನ್ನು ಮುಂದಿನ ಶೈಕ್ಷಣಿಕ ತರಗತಿಗೆ ಮುಂದುವರೆಸಲು ಅವಕಾಶ ಕಲ್ಪಿಸುವಂತೆ ಶಿಕ್ಷಣ ಇಲಾಖೆಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ಸೂಚಿಸಿ ಆದೇಶ ಹೊರಡಿಸಿದೆ.

VISTARANEWS.COM


on

board exam public exam
Koo

ಬೆಂಗಳೂರು: 5, 8 ಮತ್ತು 9ನೇ ತರಗತಿಯ (5, 8, 9 class exam) ಎಲ್ಲ ಮಕ್ಕಳನ್ನು ಉತ್ತೀರ್ಣಗೊಳಿಸಿ ಶಿಕ್ಷಣ ಇಲಾಖೆ (Education department) ಆದೇಶ ನೀಡಿದೆ. ಈ ತರಗತಿಗಳ ಪಬ್ಲಿಕ್‌ ಪರೀಕ್ಷೆ ಫಲಿತಾಂಶ (board exam result) ಪ್ರಕಟಕ್ಕೆ ಸುಪ್ರೀಂ ಕೋರ್ಟ್ (supreme court) ತಡೆ ನೀಡಿರುವ ಹಿನ್ನೆಲೆಯಲ್ಲಿ ಈ ತರಗತಿಯ ಮಕ್ಕಳ ಮುಂದಿನ ಶೈಕ್ಷಣಿಕ ವರ್ಷದ (academic year) ಭವಿಷ್ಯ ಅತಂತ್ರಕ್ಕೆ ಸಿಲುಕಿತ್ತು. ಇಲಾಖೆಯ ನೂತನ ಆದೇಶದಂತೆ ಈ ಎಲ್ಲಾ ವಿದ್ಯಾರ್ಥಿಗಳು ಮುಂದಿನ ತರಗತಿಗೆ ಪ್ರವೇಶ ಪಡೆಯಲು ಅವಕಾಶ ಪಡೆದುಕೊಂಡಿದ್ದಾರೆ.

5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಈ ಸಂತಸದ ಸುದ್ದಿಯನ್ನು ನೀಡಿದೆ. ತರಗತಿವಾರು ಮೌಲ್ಯಾಂಕನದ ವಿಶ್ಲೇಷಣೆ ಮಾಡಿ, ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ದಾಖಲಿಸುವಂತೆ ಅವಕಾಶ ಕಲ್ಪಿಸಿ ಇಲಾಖೆ ಆದೇಶಿಸಿದೆ.

2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನ ಕಾರ್ಯ ಮುಗಿದಿದ್ದು, ರಾಜ್ಯದ ಎಲ್ಲ ಶಾಲೆಗಳಲ್ಲಿ 8.4.2024ರಂದು ಫಲಿತಾಂಶವನ್ನು ಪ್ರಕಟಿಸಲು ತಿಳಿಸಲಾಗಿತ್ತು. ನಂತರದಲ್ಲಿ ಫಲಿತಾಂಶವನ್ನು ಪ್ರಕಟಿಸಲು ಸರ್ವೋಚ್ಛ ನ್ಯಾಯಾಲಯವು ತಡೆಯಾಜ್ಞೆ ನೀಡಿತ್ತು. ಈ ಬಗ್ಗೆ ಅಂತಿಮ ತೀರ್ಪು ಬಾಕಿ ಇದೆ. ಇದರಿಂದಾಗಿ ಅತಂತ್ರಕ್ಕೆ ಸಿಲುಕಿದ್ದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ರಿಲೀಫ್ ನೀಡಿದ್ದು, ಮುಂದಿನ ತರಗತಿಗಳಿಗೆ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಿದೆ.

ಪ್ರಸ್ತುತ 2023-24ನೇ ಸಾಲಿನ ಶೈಕ್ಷಣಿಕ ವರ್ಷ ಅಂತ್ಯಗೊಂಡಿದ್ದು, 29-05-2024ರಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದೇ ಇದ್ದರೆ ಅವರನ್ನು ಮುಂದಿನ ಶೈಕ್ಷಣಿಕ ವರ್ಷಕ್ಕೆ/ತರಗತಿಗೆ ಶಾಲಾ ಪ್ರವೇಶ/ದಾಖಲಾತಿ ಮಾಡಲು, ಪ್ರವೇಶ ಶುಲ್ಕ ಪಾವತಿಸಲು ಹಾಗೂ ಬೇರೆ ಸ್ಥಳಗಳಿಗೆ ವರ್ಗಾವಣೆ ಹೊಂದಿರುವ ಪ್ರಯುಕ್ತ ಮಕ್ಕಳ ವರ್ಗಾವಣೆ ಪ್ರಮಾಣಪತ್ರ, ಪ್ರಗತಿ ಪತ್ರ ಮತ್ತು ವ್ಯಾಸಂಗ ಪ್ರಮಾಣಪತ್ರಗಳನ್ನು ವಿತರಿಸಲು ಸಾಧ್ಯವಾಗದು. ಈ ಹಿನ್ನೆಲೆಯಲ್ಲಿ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಅಗತ್ಯ ಕ್ರಮ ವಹಿಸುವಂತೆ ಪೋಷಕರು ಮನವಿ ಮಾಡಿದ್ದರು. ಅದರಂತೆ ಮಕ್ಕಳ ಶೈಕ್ಷಣಿಕ ಭವಿಷ್ಯ ಸುಗಮಗೊಳಿಸಲು ಕ್ರಮವಹಿಸಿ ಇಲಾಖೆ ಆದೇಶ ಹೊರಡಿಸಿದೆ.

ಸರ್ವೋಚ್ಛ ನ್ಯಾಯಾಲಯದ ಮಧ್ಯಂತರ ತೀರ್ಪಿನಂತೆ, 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನವನ್ನು ತಡೆ ಹಿಡಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈಗಾಗಲೇ ಶಾಲೆಗಳಲ್ಲಿ ನಡೆದಿರುವ FA-1, FA-2, FA-3, FA-4, SA-1 ಗಳ ಮೌಲ್ಯಾಂಕನ ಆಧಾರದ ಮೇಲೆ ಮಕ್ಕಳನ್ನು ಮುಂದಿನ ಶೈಕ್ಷಣಿಕ ತರಗತಿಗೆ ಮುಂದುವರೆಸಲು ಅವಕಾಶ ಕಲ್ಪಿಸುವಂತೆ ಶಿಕ್ಷಣ ಇಲಾಖೆಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ಸೂಚಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: Public Exam: 5, 8, 9ನೇ ತರಗತಿ ಪಬ್ಲಿಕ್‌ ಪರೀಕ್ಷೆ ಮೌಲ್ಯಮಾಪನದಲ್ಲಿ ಲೋಪ; ವಿವರ ಸಲ್ಲಿಕೆಗೆ ಸರ್ಕಾರ ಸೂಚನೆ

Continue Reading

ಉದ್ಯೋಗ

Job Alert: ಗಮನಿಸಿ: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಮೇ 24 ಕೊನೆಯ ದಿನ

Job Alert: ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ (KPSC) ಗ್ರೂಪ್‌ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸುಮಾರು 277 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಮೇ 24 ಕೊನೆಯ ದಿನ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 35 ವರ್ಷ. ಅರ್ಜಿ ಶುಲ್ಕವಾಗಿ ಸಾಮಾನ್ಯ ಅಭ್ಯರ್ಥಿಗಳು 300 ರೂ., ಇತರ ಹಿಂದುಳಿದ ಅಭ್ಯರ್ಥಿಗಳು 150 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು ಶುಲ್ಕ ಪಾವತಿಸಬೇಕಾಗಿಲ್ಲ.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಗುಡ್‌ನ್ಯೂಸ್‌. ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ (KPSC) ಗ್ರೂಪ್‌ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ(KPSC Group B (RPC) Recruitment 2024). ಸುಮಾರು 277 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಮೇ 24 ಕೊನೆಯ ದಿನ (Job Alert).

ಬಿ.ಟೆಕ್‌ ವಿದ್ಯಾರ್ಹತೆಯುಳ್ಳವರಿಗೂ ಅವಕಾಶ

ಈ ಹಿಂದಿನ ಅಧಿಸೂಚನೆಯಲ್ಲಿನ ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್) (ವಿಭಾಗ 1) – 90 ಮತ್ತು ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್) (ವಿಭಾಗ-1) – 10 ಹುದ್ದೆಗಳಿಗೆ ಇಲಾಖೆಯ ಪ್ರಸ್ತಾವನೆಯಂತೆ ನಿಗದಿಪಡಿಸಲಾಗಿದ್ದ ವಿದ್ಯಾರ್ಹತೆಯ ಕೋರ್ಸ್‌ಗಳಲ್ಲಿ ಕೇವಲ ಬಿಇ ಪದವಿಗಳನ್ನು ಮಾತ್ರ ಈ ಹಿಂದೆ ಪರಿಗಣಿಸಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಪ್ರಸ್ತುತ ಸರ್ಕಾರ ಈ ಹುದ್ದೆಗಳಿಗೆ ಬಿ.ಟೆಕ್ ಪದವಿಯನ್ನು ಸಹ ಪರಿಗಣಿಸಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಉಳಿದಂತೆ ಹಿಂದಿನ ಅಧಿಸೂಚನೆಯ ಷರತ್ತು ಅನ್ವಯ.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸಹಾಯಕ ಎಂಜಿನಿಯರ್‌ (ಸಿವಿಲ್‌) (ವಿಭಾಗ 1)- 92 ಹುದ್ದೆ, ವಿದ್ಯಾರ್ಹತೆ: ಬಿ.ಇ / ಬಿ.ಟೆಕ್‌ (ಸಿವಿಲ್‌ ಎಂಜಿನಿಯರಿಂಗ್‌)
ಸಹಾಯಕ ಎಂಜಿನಿಯರ್‌ (ಸಿವಿಲ್‌) (ವಿಭಾಗ 1)-90 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್‌)
ಭೂ ದಾಖಲೆಗಳ ಸಹಾಯಕ ನಿರ್ದೇಶಕರು-24 ಹುದ್ದೆ, ವಿದ್ಯಾರ್ಹತೆ: ಪದವಿ (ಸಿವಿಲ್‌ ಎಂಜಿನಿಯರಿಂಗ್‌)
ಪತ್ರಾಂಕಿತ ವ್ಯವಸ್ಥಾಪಕರು / ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು-21 ಹುದ್ದೆ, ವಿದ್ಯಾರ್ಹತೆ: ಪದವಿ
ಸಹಾಯಕ ನಿರ್ದೇಶಕರು – 20 ಹುದ್ದೆ, ವಿದ್ಯಾರ್ಹತೆ: ಬಿ.ಇ / ಬಿ.ಟೆಕ್‌ (ಎಂಜಿನಿಯರಿಂಗ್‌) ಅಥವಾ ಎಂಬಿಎ
ಸಹಾಯಕ ಎಂಜಿನಿಯರ್‌ (ಮೆಕ್ಯಾನಿಕಲ್‌) (ವಿಭಾಗ-1) – 10 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್‌)
ಕಾರ್ಖಾನೆಗಳ ಸಹಾಯಕ ನಿರ್ದೇಶಕರು – 7 ಹುದ್ದೆ, ವಿದ್ಯಾರ್ಹತೆ: ಪದವಿ (ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್‌)
ಬಾಯ್ಲರುಗಳ ಸಹಾಯಕ ನಿರ್ದೇಶಕರು – 3 ಹುದ್ದೆ, ವಿದ್ಯಾರ್ಹತೆ: (ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್‌)
ಭೂ ವಿಜ್ಞಾನಿ – 10 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ (ಜಿಯೋಲಜಿ / ಅಪ್ಲೈಡ್‌ ಜಿಯಾಲಜಿ.

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ಅಭ್ಯರ್ಥಿಗಳು 300 ರೂ., ಇತರ ಹಿಂದುಳಿದ ಅಭ್ಯರ್ಥಿಗಳು 150 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು ಶುಲ್ಕ ಪಾವತಿಸಬೇಕಾಗಿಲ್ಲ.

ಪರಿಷ್ಕೃತ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Continue Reading
Advertisement
murder Case in Vijayapura
ವಿಜಯಪುರ5 mins ago

Murder Case : ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ, ಶವದ ಪಕ್ಕದಲ್ಲೇ ನಿದ್ರೆಗೆ ಜಾರಿದ ಕುಡುಕ ಪತಿ

Jayant Sinha
ದೇಶ5 mins ago

Jayant Sinha: ವೋಟೂ ಹಾಕಿಲ್ಲ..ಪ್ರಚಾರಕ್ಕೂ ಬಂದಿಲ್ಲ; ಜಯಂತ್‌ ಸಿನ್ಹಾಗೆ ಬಿಜೆಪಿ ಶೋಕಾಸ್‌ ನೊಟೀಸ್‌

Katrina Kaif And Vicky Kaushal Together In London
ಸಿನಿಮಾ13 mins ago

Katrina Kaif: ಕತ್ರಿನಾ ಕೈಫ್ ಈಗ ಪ್ರೆಗ್ನೆಂಟ್? ಪತಿ ಜತೆ ಲಂಡನ್‌ನಲ್ಲಿ ಜಾಲಿ ಮೂಡ್‌!

gold rate today sruthi hassan
ಚಿನ್ನದ ದರ24 mins ago

Gold Rate Today: ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ, ಗ್ರಾಹಕರಿಗೆ ತುಸು ನಿರಾಳ

India Head Coach
ಕ್ರೀಡೆ31 mins ago

India Head Coach: ಭಾರತ ತಂಡದ ಕೋಚ್​ ಆಗಲು ಫ್ಲೆಮಿಂಗ್​ಗೆ ಮನವೊಲಿಸುವಂತೆ ಧೋನಿಗೆ ಮನವಿ ಮಾಡಿದ ಬಿಸಿಸಿಐ!

Viral Video
ವೈರಲ್ ನ್ಯೂಸ್40 mins ago

Viral Video: ಪೆಟ್ರೋಲ್ ಬಂಕ್‌ನಲ್ಲಿ ಹೊತ್ತಿಕೊಂಡ ಬೆಂಕಿಯನ್ನು ಈತ ಏಕಾಂಗಿಯಾಗಿ ಹೇಗೆ ನಂದಿಸಿದ ನೋಡಿ!

Contaminated Water
ಮೈಸೂರು49 mins ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Viral video
ವೈರಲ್ ನ್ಯೂಸ್55 mins ago

Chudidar Gang: ಚಡ್ಡಿ ಗ್ಯಾಂಗ್ ಆಯ್ತು, ಈಗ ದರೋಡೆಕೋರರ ಚೂಡಿದಾರ್ ಗ್ಯಾಂಗ್ ಆ್ಯಕ್ಟಿವ್ ಆಗಿದೆ; ಹುಷಾರ್! ವಿಡಿಯೊ ನೋಡಿ

Actor Upendra Ajaneesh Visited Hangary To Record Music
ಸ್ಯಾಂಡಲ್ ವುಡ್1 hour ago

Actor Upendra: ಹಂಗೆರಿಯಲ್ಲಿ ಉಪೇಂದ್ರ, ಅಜನೀಶ್: ʻUIʼ ಸಿನಿಮಾದ ಬಿಗ್‌ ಅಪ್‌ಡೇಟ್‌!

RCB
ಕ್ರೀಡೆ1 hour ago

RCB: ಅಮೆರಿಕದ ಘಟಿಕೋತ್ಸವದಲ್ಲೂ ಆರ್​ಸಿಬಿಯದ್ದೇ ಹವಾ: ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ23 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌