Dina Bhavishya : ಈ ರಾಶಿಯವರು ದಿನ ಕೊನೆಯಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವಿರಿ - Vistara News

ಭವಿಷ್ಯ

Dina Bhavishya : ಈ ರಾಶಿಯವರು ದಿನ ಕೊನೆಯಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷದ ತ್ರಯೋದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಶುಕ್ರವಾರವೂ ಕರ್ಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಕೆಲವು ನಿರ್ಧಾರಗಳು ಹತಾಶೆ ಮತ್ತು ಮಾನಸಿಕ ಪ್ರಕ್ಷುಬ್ಧತೆಗೆ ಕಾರಣವಾಗುತ್ತದೆ. ಆಪ್ತರಿಂದ ಸಹಾಯವನ್ನು ಕೋರುವಿರಿ. ಒತ್ತಡದ ಕೆಲಸದಿಂದಾಗಿ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ವೃಷಭ ರಾಶಿಯವರು ಆಂತರಿಕ ಭಯ ನಿಮ್ಮ ಸಂತೋಷವನ್ನು ಹಾಳುಗೆಡುವಬಹುದು. ನಕಾರಾತ್ಮಕ ಆಲೋಚನೆಗಳನ್ನು ಮಾಡದಿರಿ, ಆಗ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ದಿನ ಕೊನೆಯ ಭಾಗದಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (02-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ.
ತಿಥಿ: ತ್ರಯೋದಶಿ 15:26 ವಾರ: ಶುಕ್ರವಾರ
ನಕ್ಷತ್ರ: ಆರಿದ್ರಾ 10:57 ಯೋಗ: ಹರ್ಷಣ 11:43
ಕರಣ: ವಣಿಜ 15:26 ದಿನದ ವಿಶೇಷ: ಆಡಿ ಶುಕ್ರವಾರ, ಮಾಸ ಶಿವರಾತ್ರಿ

ಸೂರ್ಯೋದಯ : 06:05   ಸೂರ್ಯಾಸ್ತ : 06:46

ರಾಹುಕಾಲ: ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಬೆಳಗ್ಗೆ 06:00 ರಿಂದ 07:30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕೆಲವು ನಿರ್ಧಾರಗಳು ಹತಾಶೆ ಮತ್ತು ಮಾನಸಿಕ ಪ್ರಕ್ಷುಬ್ಧತೆಗೆ ಕಾರಣವಾಗುತ್ತದೆ. ಆಪ್ತರಿಂದ ಸಹಾಯವನ್ನು ಕೋರುವಿರಿ. ಒತ್ತಡದ ಕೆಲಸದಿಂದಾಗಿ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಸದೃಢವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಆಂತರಿಕ ಭಯ ನಿಮ್ಮ ಸಂತೋಷವನ್ನು ಹಾಳುಗೆಡುವಬಹುದು. ನಕಾರಾತ್ಮಕ ಆಲೋಚನೆಗಳನ್ನು ಮಾಡದಿರಿ, ಆಗ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ದಿನ ಕೊನೆಯ ಭಾಗದಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವ ಸಾಧ್ಯತೆ ಇದೆ. ಆರೋಗ್ಯ ಕೊಂಚ ಮಟ್ಟಿಗೆ ಹದಗೆಡಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಬೇರೆಯವರ ಮಾತನ್ನು ಕೇಳಿಕೊಂಡು ನಿಮ್ಮನ್ನು ಪ್ರೀತಿಯಿಂದ ಕಾಣುವ ವ್ಯಕ್ತಿಗಳನ್ನು ದ್ವೇಷಿಸುವುದು ಬೇಡ. ಇತರರ ಸಮಸ್ಯೆಗಳನ್ನು ಪರಿಹರಿಸಲು ನೀವು ಮಧ್ಯಪ್ರವೇಶ ಮಾಡುವ ಸಾಧ್ಯತೆ ಇದೆ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಾವಶ್ಯಕ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅನಿವಾರ್ಯ ಪ್ರಸಂಗಗಳು ನಿಮಗೆ ಕೋಪವನ್ನು ತರಿಸುವ ಸಾಧ್ಯತೆ ಇದ್ದು, ಭಾವನೆಗಳನ್ನು ನಿಯಂತ್ರಣಕ್ಕೆ ತೆಗೆದುಕೊಂಡರೆ ಉತ್ತಮವಾಗಿರಲಿದೆ. ಕಠಿಣ ಪರಿಶ್ರಮ ನಿಮಗೆ ಫಲ ನೀಡಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಉದ್ಯೋಗಿಗದ ಸ್ಥಳದಲ್ಲಿ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಸಿಂಹ:ನಿಮ್ಮ ಸಭ್ಯ ನಡವಳಿಕೆ ಇತರರಿಂದ ಮೆಚ್ಚುಗೆ ಪಡೆಯುತ್ತದೆ. ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ. ದಿನದ ಆರಂಭದಲ್ಲಿ ಇಂದು ನೀವು ಯಾವುದೇ ಆರ್ಥಿಕ ನಷ್ಟವನ್ನು ಹೊಂದಬಹುದು. ಇದರಿಂದ ನಿಮ್ಮ ಪೂರ್ತಿ ದಿನ ಹದಗೆಡಬಹುದು. ಇತರರಿಗೆ ಪ್ರತಿಫಲಗಳು ತರುವ ನಿಮ್ಮ ಸಾಮರ್ಥ್ಯ ಪ್ರತಿಫಲ ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆ ಅವಕಾಶ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಒತ್ತಡದಿಂದ ವಿಮುಕ್ತಿ ಹೊಂದಿ, ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ದೀರ್ಘಕಾಲದ ದೃಷ್ಟಿಕೋನದಿಂದ ಮಾಡಿದ ಹೂಡಿಕೆಯಿಂದ ಲಾಭ ಇರಲಿದೆ.
ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಸಂಪೂರ್ಣ ಸಹಕಾರ ಸಿಗಲಿದೆ. ಉದ್ಯೋಗಿಗಳಿಗೆ ಅದೃಷ್ಟ ಖುಲಾಯಿಸಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ದಿಢೀರ್ ಧನಾಗಮನದಿಂದ ಸಂತೋಷ ಇಮ್ಮಡಿಯಾಗಲಿದೆ. ಅನೇಕ ಸಮಸ್ಯೆಗಳು ಇಂದು ಪರಿಹಾರವಾಗುವುದು. ಆರೋಗ್ಯ ಪರಿಪೂರ್ಣವಾಗಲಿದೆ. ಬಹಳ ದಿನಗಳಿಂದ ಕಂಡ ಕನಸು ನನಸಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಇಂದು ಪ್ರಮುಖ ನಿರ್ಧಾರಗಳಿಂದಾಗಿ ಮಾನಸಿಕವಾಗಿ ನೀವು ಬಳಲುವ ಸಾಧ್ಯತೆ ಇದೆ. ಅನಾವಶ್ಯಕ ಖರ್ಚು ಮಾಡಿ ಕೊರಗುವ ಸಾಧ್ಯತೆ ಇದೆ. ಆದಷ್ಟು ನಿಯಂತ್ರಣದಲ್ಲಿರಿ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭಫಲ, ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

Horoscope Today

ಧನಸ್ಸು: ಆರೋಗ್ಯದ ಆರೈಕೆ ಇಂದು ಅಗತ್ಯವಿದೆ. ಆಪ್ತರೊಂದಿಗೆ ಸೇರಿಕೊಂಡು ಮಾಡುವ ವ್ಯಾಪಾರ ನಷ್ಟ ತಂದಿತು, ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ನಿಮ್ಮ ಆಂತರಿಕ ಶಕ್ತಿ ದಿನದ ಕೆಲಸವನ್ನು ಉತ್ತಮಗೊಳಿಸುವಲ್ಲಿ ನಿಮ್ಮನ್ನು ಬೆಂಬಲಿಸುತ್ತದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮಕರ: ಆಹಾರ ಕ್ರಮದ ವ್ಯತ್ಯಾಸದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರು ಸಾಧ್ಯತೆ ಇದೆ, ಆದಷ್ಟು ಆಹಾರ ಕ್ರಮದಲ್ಲಿ ನಿಯಂತ್ರಣ ಮಾಡಿ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ದಿಢೀರ್‌ ಪ್ರಯಾಣ ಬೆಳಸಬೇಕಾಗಬಹುದು. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ನಿಮ್ಮ ಸಾಧನೆಗೆ ಇಂದು ಪ್ರೋತ್ಸಾಹ ಸಿಗಲಿದೆ. ಅನೇಕ ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ. ವ್ಯಾಪಾರದ ಉದ್ದೇಶಕ್ಕಾಗಿ ಕೈಗೊಂಡ ಪ್ರಯಾಣ ಲಾಭವನ್ನು ತಂದುಕೊಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆವರಿಸಬಹುದು. ಆದಷ್ಟು ಸಕಾರಾತ್ಮಕವಾಗಿ ಆಲೋಚಿಸಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ನಿಮ್ಮ ಸಹೋದ್ಯೋಗಿಗಳು ನಿಮ್ಮನ್ನು ಟೀಕಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya: ವಿದೇಶ ಪ್ರವಾಸಕ್ಕೆ ಕಾಯುತ್ತಿರುವ ಈ ರಾಶಿಯವರಿಗೆ ಶುಭ ಸೂಚನೆ ಸಿಗಲಿದೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷದ ದ್ವಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
Koo

ಚಂದ್ರನು ಮಿಥುನ ರಾಶಿಯಿಂದ ಬುಧವಾರ ರಾತ್ರಿ 11:19 ಗಂಟೆಗೆ ಕರ್ಕ ರಾಶಿಯನ್ನು ಪ್ರವೇಶಿಸಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮಿಥುನ ರಾಶಿಯ ಉದ್ಯೋಗಿಗಳಿಗೆ ಹೊಸ ಅವಕಾಶಗಳು ತೆರೆದುಕೊಳ್ಳಲಿವೆ. ಪ್ರೇಮಿಗಳಿಗೆ ಶುಭ ಸೂಚನೆ ಸಿಗಲಿದೆ. ಇನ್ನು ಮಕರ ರಾಶಿಯವರಿಗೆ ಬಹು ದಿನಗಳಿಂದ ನನೆಗುದಿಗೆ ಬಿದ್ದಿರುವ ಕೆಲಸ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ವಿದೇಶ ಪ್ರವಾಸಕ್ಕೆ ಕಾಯುತ್ತಿರುವವರಿಗೆ ಶುಭ ಸೂಚನೆ ಸಿಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (01-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ.
ತಿಥಿ: ದ್ವಾದಶಿ 15:28 ವಾರ: ಗುರುವಾರ
ನಕ್ಷತ್ರ: ಮೃಗಶಿರಾ 10:22 ಯೋಗ: ವ್ಯಾಘಾತ 12:48
ಕರಣ: ತೈತುಲ 15:28 ಅಮೃತಕಾಲ: ಬೆಳಗ್ಗೆ 01:32 ರಿಂದ 03:08
ದಿನದ ವಿಶೇಷ: ವಿದ್ಯಾನಿಧಿತೀರ್ಥರ ಆರಾಧನೆ, ಪ್ರದೋಷ

ಸೂರ್ಯೋದಯ : 05:54   ಸೂರ್ಯಾಸ್ತ : 07:12

ರಾಹುಕಾಲ: ಮಧ್ಯಾಹ್ನ 1:30 ರಿಂದ 03:00
ಗುಳಿಕಕಾಲ: ಬೆಳಗ್ಗೆ 9:00
ರಿಂದ 10:30
ಯಮಗಂಡಕಾಲ: ಬೆಳಗ್ಗೆ 06:00
ರಿಂದ 07:30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮ ಸಂಗಾತಿಯ ಒರಟು ವರ್ತನೆ ನಿಮ್ಮ ಮೇಲೆ ಒತ್ತಡ ಹಾಕಬಹುದು. ವ್ಯಾಪಾರ-ವ್ಯವಹಾರದಲ್ಲಿ ಲಾಭ. ಆರ್ಥಿಕವಾಗಿ ಲಾಭ. ತಿಂಗಳ ಆರಂಭದ ದಿನವೇ ಉದ್ಯೋಗದ ಸ್ಥಳದಲ್ಲಿ ನೀವು ಕಿರಿಕಿರಿ ಅನುಭವಿಸುವ ಸಾಧ್ಯತೆ ಇರುವುದರಿಂದ ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ, ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ.
ನಿಮ್ಮ ಆಕರ್ಷಣೆಯ ವ್ಯಕ್ತಿತ್ವ, ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ವಿಶೇಷ ಅನುಕೂಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಜೀವನ ಸಂಗಾತಿಯೊಂದಿಗೆ ಸೇರಿ ಇಂದು ನೀವು ಭವಿಷ್ಯಕ್ಕೆ ಯಾವುದೇ ಆರ್ಥಿಕ ಯೋಜನೆಯನ್ನು ಮಾಡಬಹುದು ಮತ್ತು ಈ ಯೋಜನೆ ಯಶಸ್ವಿಯಾಗಲಿದೆ.
ಹತಾಶೆಯ ಭಾವನೆ ನಿಮ್ಮನ್ನು ಅವರಿಸಲು ಬಿಡಬೇಡಿ. ಆರೋಗ್ಯ ಮಧ್ಯಮ. ಉದ್ಯೋಗಿಗಳಿಗೆ ಹೊಸ ಅವಕಾಶಗಳು ತೆರೆದುಕೊಳ್ಳಲಿವೆ. ಪ್ರೇಮಿಗಳಿಗೆ ಶುಭ ಸೂಚನೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಅನಿರೀಕ್ಷಿತ ಲಾಭದ ಮೂಲಕ ಆರ್ಥಿಕ ಬಲಗಳು ಸುಧಾರಿಸುತ್ತವೆ. ನಿಮ್ಮ ಸಹೋದ್ಯೋಗಿಗಳು ಎಂದಿಗಿಂತಲೂ ಉತ್ತಮವಾಗಿ ನಿಮ್ಮನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳುತ್ತಾರೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಧರ್ಮಕಾರ್ಯಗಳು/ ಹವನಗಳು / ಮಂಗಳಕರ ಸಮಾರಂಭಗಳನ್ನು ಮನೆಯಲ್ಲಿ ಕೈಗೊಳ್ಳವ ಸಾಧ್ಯತೆ. ಅತಿಯಾದ ದ್ವೇಷದ ಭಾವನೆಯಿಂದ ನಿಮ್ಮ ಮನಸ್ಸನ್ನು ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದಲ್ಲಿ ಕೊಂಚ ವ್ಯತ್ಯಾಸವಾಗುವ ಸಾಧ್ಯತೆ. ಆರ್ಥಿಕವಾಗಿ ಲಾಭ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಅನುಭವಿಸುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಕೆಲವು ಅನಿವಾರ್ಯ ಸಂದರ್ಭಗಳು ನಿಮಗೆ ಅಹಿತಕರವೆನಿಸಬಹುದು.
ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಇದು ನಿಮ್ಮ ಮನಸ್ಥಿತಿಯನ್ನು ಬದಲಾಯಿಸುವುದಷ್ಟೇ ಅಲ್ಲದೇ ನಿಮ್ಮ ತಪ್ಪು ತಿಳಿವಳಿಕೆಗಳನ್ನೂ ಹೋಗಲಾಡಿಸುತ್ತದೆ. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ದಿನದ ಮಟ್ಟಿಗೆ ಆದಾಯಕ್ಕಿಂತ ಹೆಚ್ಚಿನ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಸ್ನೇಹಿತರ ಜೊತೆಗಿನ ನಿಮ್ಮ ಅಪಾರ್ಥ ಕೆಲವು ಅಹಿತಕರ ಪ್ರತಿಕ್ರಿಯೆಗಳನ್ನು ಉಂಟುಮಾಡಬಹುದು. ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಸಂಯಮದಿಂದ ವರ್ತಿಸಿ.
ನಿಮ್ಮ ವೈಯಕ್ತಿಕ ರಂಗದಲ್ಲಿ ಮುಖ್ಯ ಬೆಳವಣಿಗೆಯಾಗುತ್ತಿದ್ದು, ಇದು ನೀವು ಮತ್ತು ನಿಮ್ಮ ಇಡೀ ಕುಟುಂಬಕ್ಕೆ ಸಂತೋಷ ತರಲಿದೆ. ಆರ್ಥಿವಾಗಿ ಉತ್ತಮ ಫಲ ಇರಲಿದೆ. ಆರೋಗ್ಯದ ಬಗೆಗೆ ಜಾಗೃತಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಪ್ರಮುಖ ಕೆಲಸಗಳಲ್ಲಿ ವಿಳಂಬವಾಗುವ ಸಾಧ್ಯತೆ. ಅನೇಕ ಒತ್ತಡದಿಂದ ಹೊರಬರವಿರಿ. ಹಣಕಾಸಿನಲ್ಲಿ ಸುಧಾರಣೆ, ದೀರ್ಘಕಾಲದ ಬಾಕಿ ಮರುಪಾವತಿ ಆಗಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಶುಭ ಫಲ.ಕು ಟುಂಬದಲ್ಲಿ ದಿನದ ಕೊನೆಯಲ್ಲಿ ಮನಸ್ತಾಪ ಆದಷ್ಟು ಮಾತಿಗೆ ವಿರಾಮವಿರಲಿ.
ಅದೃಷ್ಟ ಸಂಖ್ಯೆ: 9

Horoscope Today

ಧನಸ್ಸು: ಚಿಕ್ಕ ಪುಟ್ಟ ವಿಷಯಗಳಿಗೆ ತಲೆಕೆಡಿಸಿಕೊಂಡು ಮನಸ್ಸನ್ನು ಹಾಳು ಮಾಡಿಕೊಳ್ಳುವುದು ಬೇಡ. ನೀವು ಇತರರ ಮಾತುಗಳನ್ನು ನಂಬಿ ಇಂದು ಹೂಡಿಕೆ ಮಾಡಿದಲ್ಲಿ ಇಂದು ಆರ್ಥಿಕ ನಷ್ಟದ ಸಾಧ್ಯತೆಯಿದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ. ಉದ್ಯೋಗಿಗಳಿಗೆ ಆಲಸ್ಯದಿಂದಾಗಿ ಕಿರಿಕಿರಿ ಅನುಭವಿಸುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮಕರ: ಬಹು ದಿನಗಳಿಂದ ನನೆಗುದಿಗೆ ಬಿದ್ದಿರುವ ಕೆಲಸ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ವಿದೇಶ ಪ್ರವಾಸಕ್ಕೆ ಕಾಯುತ್ತಿರುವವರಿಗೆ ಶುಭ ಸೂಚನೆ ಸಿಗಲಿದೆ. ಸೃಜನಶೀಲ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ಸಿಗಲಿದೆ. ಆರೋಗ್ಯ ಮಧ್ಯಮ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಶುಭ ಫಲ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ.
ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ, ಇಂದು ನೀವು ಅದರಲ್ಲಿ ವಿಜಯವನ್ನು ಪಡೆಯಬಹುದು ಮತ್ತು ನೀವು ಹಣದ ಲಾಭವನ್ನು ಪಡೆಯಬಹುದು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಭರವಸೆ ಇಮ್ಮಡಿ ಆಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮೀನ: ನಿಮ್ಮ ಆರೋಗ್ಯವು ಇಂದು ಉತ್ತಮವಾಗಿರಲಿದೆ. ನಿಮ್ಮಲ್ಲಿ ಚುರುಕುತನವನ್ನು ನೋಡಬಹುದು. ಕೆಲವು ಊಹೆಗಳು ಲಾಭ ತರುತ್ತವೆ. ಪ್ರಮುಖ ವ್ಯಕ್ತಿಗಳೊಂದಿಗೆ ಮಾತನಾಡುವಾಗ ಜಾಗೃತೆ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಸಿಗಲಿದೆ ಶುಭ ಸೂಚನೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷದ ಏಕಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮಿಥುನ ರಾಶಿಯಿಂದ ಬುಧವಾರ ರಾತ್ರಿ 11:19 ಗಂಟೆಗೆ ಕರ್ಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸಿ. ಈ ದಿನ ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭವಾಗಲಿದೆ. ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆ ಇದೆ. ಕಲೆ ಮತ್ತು ರಂಗಭೂಮಿಯ ಜತೆ ಸಂಪರ್ಕ ಹೊಂದಿರುವವರು ಸೃಜನಶೀಲರು ಹೊಸ ಅವಕಾಶಗಳನ್ನು ಪಡೆಯುತ್ತಾರೆ. ವೃಷಭ ರಾಶಿಯವರು ದೀರ್ಘಕಾಲೀನ ಅನಾರೋಗ್ಯದಿಂದ ಬಳಲುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿ ಸುಧಾರಿಸಿದರೂ ಹಣದ ಹೊರಹರಿವು ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆಯುಂಟು ಮಾಡುತ್ತದೆ. ಅನಗತ್ಯ ವಿಷಯಗಳ ಬಗ್ಗೆ ಸಮಯ ಕೊಡಬೇಡಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (31-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ.
ತಿಥಿ: ಏಕಾದಶಿ 15:54 ವಾರ: ಬುಧವಾರ
ನಕ್ಷತ್ರ: ರೋಹಿಣಿ 10:11 ಯೋಗ: ಧ್ರುವ 14:12
ಕರಣ: ಬಾಲವ 15:54 ಅಮೃತಕಾಲ: ಬೆಳಗ್ಗೆ 07:02 ರಿಂದ 08:37
ದಿನದ ವಿಶೇಷ: ಸರ‍್ವೇಷಾಮೇಕಾದಶಿ

ಸೂರ್ಯೋದಯ : 06:05   ಸೂರ್ಯಾಸ್ತ : 06:47

ರಾಹುಕಾಲ: ಮಧ್ಯಾಹ್ನ 12:26 ರಿಂದ 02:01
ಗುಳಿಕಕಾಲ: ಬೆಳಗ್ಗೆ 10:51
ರಿಂದ 12:26
ಯಮಗಂಡಕಾಲ: ಬೆಳಗ್ಗೆ 07:40
ರಿಂದ 09:16

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸಿ. ಈ ದಿನ ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭವಾಗಲಿದೆ. ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆ ಇದೆ. ಕಲೆ ಮತ್ತು ರಂಗಭೂಮಿಯ ಜತೆ ಸಂಪರ್ಕ ಹೊಂದಿರುವವರು ಸೃಜನಶೀಲರು ಹೊಸ ಅವಕಾಶಗಳನ್ನು ಪಡೆಯುತ್ತಾರೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಕುಟುಂಬದಲ್ಲಿ ಮಧುರತೆ ಇರಲಿದೆ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ದೀರ್ಘಕಾಲೀನ ಅನಾರೋಗ್ಯದಿಂದ ಬಳಲುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿ ಸುಧಾರಿಸಿದರೂ ಹಣದ ಹೊರಹರಿವು ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆಯುಂಟು ಮಾಡುತ್ತದೆ. ಅನಗತ್ಯ ವಿಷಯಗಳ ಬಗ್ಗೆ ಸಮಯ ಕೊಡಬೇಡಿ. ಸಂಗಾತಿಯ ಸಲಹೆ ಹಿತಕರವೆನಿಸಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಭೂ ಸಂಬಂಧಿ ವ್ಯವಹಾರಗಳಲ್ಲಿ ಲಾಭವಾಗಲಿದೆ. ಉತ್ಸಾಹದ ಜತೆಗೆ ನಿಮ್ಮ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ವ್ಯಾಪಾರದಲ್ಲಿ ಅಧಿಕ ಲಾಭ ಸಿಗಲಿದೆ. ಜೀವನ ಸಂಗಾತಿಯ ಮಹತ್ವ ಮನವರಿಕೆ ಆಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಮಟ್ಟಿನ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕಟಕ: ದೈಹಿಕ ಆಯಾಸ ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ದೇಹದ ಮೇಲೆ ಹೆಚ್ಚು ಒತ್ತಡ ಹಾಕುವ ಯಾವುದೇ ದೈಹಿಕ ಪರಿಶ್ರಮವನ್ನು ತಪ್ಪಿಸಲು ಪ್ರಯತ್ನಿಸಿ. ವಿಶ್ರಾಂತಿ ತೆಗೆದುಕೊಳ್ಳಿ. ಹಳೆಯ ನೆನಪುಗಳು ತಮಗೆ ಸಂತಸ ತರಲಿದೆ. ಸಂಗಾತಿಯೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ ಆದಷ್ಟು ಸಂಯಮ ಕಳೆದುಕೊಳ್ಳುವುದು ಬೇಡ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಆರ್ಥಿಕ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಸಿಂಹ:ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಿದರೂ ಹಣದ ಹೊರಹರಿವು ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆಯುಂಟು ಮಾಡುತ್ತದೆ. ಆರೋಗ್ಯದ ಕಡೆ ವಿಶೇಷ ಗಮನ ಹರಿಸಿ. ಅಧಿಕ ರಕ್ತ ಒತ್ತಡದ ರೋಗಿಗಳು ಆಲಸ್ಯವನ್ನು ಮಾಡಲೇಬೇಡಿ. ಉದ್ಯೋಗಿಗಳಿಗೆ ಪ್ರಶಂಸೆ, ಪ್ರೋತ್ಸಾಹ ಸಿಗಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಯಾವುದೇ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ಹೂಡಿಕೆ ಮಾಡುವುದು ಬೇಡ, ನಷ್ಟ ಸಾಧ್ಯತೆ, ಎಚ್ಚರಿಕೆ ಇರಲಿ. ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂತಸ ವಾತಾವರಣ ಇರಲಿದೆ. ಸೃಜನಶೀಲತೆಯಿಂದ ಕೆಲಸ ಮಾಡುವವರಿಗೆ ಪ್ರೋತ್ಸಾಹ ಸಿಗಲಿದೆ. ಅನಿರೀಕ್ಷಿತ ಪ್ರತಿಫಲಗಳನ್ನು ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಚೆನ್ನಾಗಿರುತ್ತದೆ. ಒಡಹುಟ್ಟಿದವರು ನಿಮ್ಮ ಸಹಾಯ ಯಾಚಿಸಬಹುದು. ಆರ್ಥಿಕವಾಗಿ ನಿಮಗೆ ಮಧ್ಯಮ ಫಲ ಇರಲಿದೆ. ಸ್ನೇಹಿತರ ವರ್ಗದಿಂದ ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಉದ್ಯೋಗಿಗಳಿಗೆ ಕೆಲಸದ ಒತ್ತಡ ಇದ್ದರೂ ದೈಹಿಕವಾಗಿ ನೀವು ಸದೃಢವಾಗಿ ಕೆಲಸ ನಿಭಾಯಿಸುವಲ್ಲಿ ಯಶಸ್ಸು ಪಡೆಯುವಿರಿ. ಕೌಟುಂಬಿಕವಾಗಿ ಶುಭ ಫಲವಿದೆ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ದೈಹಿಕವಾಗಿ ಮಾನಸಿಕವಾಗಿ ಬಳಲುವ ಸಾಧ್ಯತೆ, ಆದಷ್ಟು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಆಧ್ಯಾತ್ಮ ಮತ್ತು ಯೋಗ ಹೆಚ್ಚಿನ ನೆಮ್ಮದಿ ತರಲಿದೆ. ಹೂಡಿಕೆ ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಪ್ರೇಮಿಗಳಿಗೆ ಶುಭ ಸೂಚನೆ ಸಿಗಲಿದೆ. ಸಹದ್ಯೋಗಿಗಳು ನಿಮ್ಮ ಹಿಂದೆ ಪಿತೂರಿ ನಡೆಸುವ ಸಾಧ್ಯತೆ ಇದೆ, ಆದಷ್ಟು ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಧನಸ್ಸು: ಆರ್ಥಿಕವಾಗಿ ಸುಧಾರಣೆ ಆಗುವುದರಿಂದ, ಇಂದು ಕೊಂಚ ನೆಮ್ಮದಿಯಿಂದ ಇರುವಿರಿ. ದೀರ್ಘಕಾಲದ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಅದೃಷ್ಟದ ಬಾಗಿಲು ತೆರೆದು ಹೊಸ ಅವಕಾಶಗಳು ಸಿಗಲಿವೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಕರ: ಸಾಲದ ಮರುಪಾವತಿ ಆಗಲಿದೆ. ಹೀಗಾಗಿ ಆರ್ಥಿಕವಾಗಿ ಸದೃಢ ಇರಲಿದೆ. ದೈಹಿಕ ಆರೋಗ್ಯದ ಕಡೆ ಕೊಂಚ ಗಮನ ಹರಿಸಿ. ಅನಗತ್ಯ ಅನುಮಾನ ದಿನದ ಕೊನೆಯಲ್ಲಿ ನೆಮ್ಮದಿ ಹಾಳು ಮಾಡುವ ಸಾಧ್ಯತೆ ಇದೆ, ಅದರ ಕಡೆಗೆ ಗಮನ ಹರಿಸದಿರಿ. ವಿದ್ಯಾರ್ಥಿಗಳು ಹೆಚ್ಚಿನ ಶ್ರಮ ಪಟ್ಟರೆ ಭರವಸೆಯ ಹೊಸ ಅವಕಾಶಗಳು ಸಿಕ್ಕಾವು ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ತೊಡಗಿ. ಉದ್ಯೋಗಿಗಳಿಗೆ ಒತ್ತಡ ಇದ್ದರೂ ಯಾವುದೇ ತೊಂದರೆ ಇಲ್ಲ. ಯಶಸ್ವಿಯಾಗಿ ಕಾರ್ಯ ನಿರ್ವಹಿಸುವಿರಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕುಂಭ:

ಸರಿಯಾದ ಆಲೋಚನೆಗಳು ಹಾಗೂ ಕಾರ್ಯಗಳು ನಿಮಗೆ ಅಗತ್ಯವಿರುವ ಸಮಾಧಾನವನ್ನು ತರುತ್ತವೆ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ, ತಾತ್ಸಾರ ಮನೋಭಾವ ಬೇಡ.ಸಂಗಾತಿಯೊಂದಿಗೆ ವಿನಾಕಾರಣ ವಾದಕ್ಕೆ ಇಳಿದೆ ಮನೆಯಲ್ಲಿ ನೆಮ್ಮದಿ ವಾತಾವರಣ ಹಾಳು ಮಾಡುವುದು ಬೇಡ. ಉದ್ಯೋಗಿಗಳಿಗೆ ಭಯದ ವಾತಾವರಣ ನಿರ್ಮಾಣವಾಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮೀನ: ಉದ್ಯೋಗದ ಸ್ಥಳದಲ್ಲಿ ನೀವು ಯಾವುದೇ ದೊಡ್ಡ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಅದರಿಂದ ಹೊರಬರಬಹುದು. ಕುಟುಂಬದಲ್ಲಿ ಸ್ತ್ರೀ ಸದಸ್ಯರ ಆರೋಗ್ಯ ಚಿಂತೆಗೆ ಕಾರಣವಾಗಬಹುದು. ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಆರ್ಥಿಕವಾಗಿ ಬಲ ಹೆಚ್ಚಲಿದೆ. ಉದ್ಯೋಗಿಗಳಿಗೆ ಶುಭ ಫಲ. ದಾಂಪತ್ಯದಲ್ಲಿ ಮಧುರತೆ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಬಣ್ಣದ ಮಾತುಗಳನ್ನು ನಂಬಿ ಈ ರಾಶಿಯವರು ಯಾವುದೇ ವ್ಯವಹಾರ ಮಾಡ್ಬೇಡಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷದ ದಶಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

dina bhavishya
Koo

ಚಂದ್ರನು ಮಂಗಳವಾರ ಮಿಥುನ ರಾಶಿಯಲ್ಲೇ ನೆಲಸಲ್ಲಿದ್ದು, ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೀನ ರಾಶಿಯವರು ಅನಿವಾರ್ಯ ಕಾರಣಗಳಿಂದ ಕುಟುಂಬದ ಸದಸ್ಯರೊಂದಿಗೆ ಮನಸ್ತಾಪ, ಆದಾಗ್ಯೂ ನೀವು ನಿಮ್ಮ ಶಾಂತ ಸ್ವಭಾವದಿಂದ ಎಲ್ಲವನ್ನು ಸರಿಗೊಳಿಸಬಹುದು. ತುಲಾ ರಾಶಿಯವರು ಅತಿಯಾದ ಒತ್ತಡದಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಜೀವನದ ಪ್ರಮುಖ ನಿರ್ಧಾರಗಳ ಕುರಿತು ನೀವು ಕುಟುಂಬದೊಂದಿಗೆ ಚರ್ಚಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (30-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ.
ತಿಥಿ: ದಶಮಿ 16:44 ವಾರ: ಮಂಗಳವಾರ
ನಕ್ಷತ್ರ: ಕೃತ್ತಿಕಾ 10:22 ಯೋಗ: ವೃದ್ಧಿ 15:54
ಕರಣ: ವಿಷ್ಟಿ (ಭದ್ರ) 16:44 ಅಮೃತಕಾಲ: ಬೆಳಗ್ಗೆ 08:02 ರಿಂದ 09:36
ದಿನದ ವಿಶೇಷ: ತುಳಸೀದಾಸರ ಆರಾಧನೆ

ಸೂರ್ಯೋದಯ : 06:05   ಸೂರ್ಯಾಸ್ತ : 06:47

ರಾಹುಕಾಲ: ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 02:01 ರಿಂದ 03:37
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರ ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಎಚ್ಚರಿಕೆ ಇರಲಿ. ದಿಢೀರ್ ಪ್ರಯಾಣ ಬೆಳಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಹಾಸ್ಯಪ್ರಜ್ಞೆಯ ನಡವಳಿಕೆಯಿಂದಾಗಿ ಇತರರನ್ನು ಚುಂಬಕದಂತೆ ಆಕರ್ಷಿಸಿ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿಕೊಳ್ಳುವಿರಿ. ಭೂ ಹಾಗೂ ಹೂಡಿಕೆ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ತೊಡುಗುವುದು ಬೇಡ. ಇದರಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಉತ್ಸಾಹ ತುಂಬಿದ ವಾತಾವರಣ ಇರಲಿದೆ. ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ. ಅನಾವಶ್ಯಕ ಖರ್ಚು ಮಾಡಿ ಆಮೇಲೆ ಹಳಹಳಿಸುವುದು ಬೇಡ. ಕುಟುಂಬದ ಯಜಮಾನನ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ: ನೀವು ಇತರರನ್ನು ಶ್ಲಾಘಿಸುವ ಮೂಲಕ ಯಶಸ್ಸನ್ನು ಆನಂದಿಸುವ ಸಾಧ್ಯತೆ ಇದೆ. ವ್ಯಾಪಾರ ಹಾಗೂ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಪ್ರೇಮಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಸಿಂಹ:ಆತ್ಮವಿಶ್ವಾಸತೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಆಪ್ತರೊಂದಿಗೆ ವಾದಕ್ಕಿಳಿಯುವ ಸಾಧ್ಯತೆ ಇದೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳು ಉಜ್ವಲ ಭವಿಷ್ಯಕ್ಕಾಗಿ ಮನೋರಂಜನೆಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳು ನಿಮಗೆ ಪುಷ್ಟಿ ನೀಡಲಿವೆ. ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಒಂದು ಯಶಸ್ವಿ ದಿನವಿದು. ವಿವಾಹ ಅಪೇಕ್ಷಿತರಿಗೆ ಶುಭ ಸೂಚನೆ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸದೃಢವಾಗಿ ಇರುವಿರಿ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಜೀವನದ ಪ್ರಮುಖ ನಿರ್ಧಾರಗಳ ಕುರಿತು ನೀವು ಕುಟುಂಬದೊಂದಿಗೆ ಚರ್ಚಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಹಳೆಯ ಸ್ನೇಹಿತರೊಂದಿಗೆ ಆತ್ಮೀಯ ಮಾತುಕತೆಯಲ್ಲಿ ತೊಡಗುವಿರಿ. ಭವಿಷ್ಯದ ಜೀವನಕ್ಕಾಗಿ ಹೂಡಿಕೆ ಕುರಿತು ಆಲೋಚನೆ ಮಾಡುವಿರಿ. ಸಂಗಾತಿಯಿಂದ ಸಲಹೆ ಪಡೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅನೇಕ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಕೋರ್ಟ್ ಕಚೇರಿ ವ್ಯಾಜ್ಯಗಳು ವಿಜಯವನ್ನು ತಂದು ಕೊಡಲಿವೆ. ದಿನದ ಕೊನೆಯಲ್ಲಿ ಯಾವುದಾದರೂ ಕಾರಣದಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಕರ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಯಾವುದೋ ಮೂಲದಿಂದ ಆರ್ಥಿಕವಾಗಿ ಬಲಗೊಳ್ಳಲಿದ್ದೀರಿ. ಕುಟುಂಬದ ಸದಸ್ಯರ ಅಪಸ್ವರದಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಮಾತಿಗೆ ವಿರಾಮ ನೀಡಿ. ಉದ್ಯೋಗಿಗಳಿಗೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ನಿಮ್ಮ ಕೋಪದ ಮನಸ್ಥಿತಿ ಇತರರ ಮೇಲೆ ಪ್ರಭಾವ ಬೀರಬಹುದು. ಅನಿವಾರ್ಯ ಕಾರಣಗಳಿಂದ ಸ್ನೇಹಿತರ ಸಹಾಯ ಬೇಡವ ಸಾಧ್ಯತೆ ಇದೆ. ನಿಮ್ಮ ಕೆಲಸದ ಮೇಲೆ ಗಮನ ಹರಿಸಿದಲ್ಲಿ ಯಶಸ್ಸು ಮತ್ತು ಮನ್ನಣೆ ನಿಮ್ಮದಾಗುತ್ತದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಹೊಂದಲಿದ್ದೀರಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮೀನ: ಅನಿವಾರ್ಯ ಕಾರಣಗಳಿಂದ ಕುಟುಂಬದ ಸದಸ್ಯರೊಂದಿಗೆ ಮನಸ್ತಾಪ, ಆದಾಗ್ಯೂ ನೀವು ನಿಮ್ಮ ಶಾಂತ ಸ್ವಭಾವದಿಂದ ಎಲ್ಲವನ್ನು ಸರಿಗೊಳಿಸಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರು ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ್ವೇ ಬೇಡ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷದ ನವಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ವೃಷಭ ರಾಶಿಯಿಂದ ಸೋಮವಾರ ಸಂಜೆ 05:27ಕ್ಕೆ ಮಿಥುನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮಿಥುನ ರಾಶಿಯವರು ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡುವಿರಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಸಿಂಹ ರಾಶಿಯವರು ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (29-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ.
ತಿಥಿ: ನವಮಿ 17:55 ವಾರ: ಸೋಮವಾರ
ನಕ್ಷತ್ರ: ಭರಣಿ 10:54 ಯೋಗ: ಗಂಡ 17:53
ಕರಣ: ತೈತುಲ 06:38 ಅಮೃತಕಾಲ: ಬೆಳಗ್ಗೆ 06:17 ರಿಂದ 07:50
ದಿನದ ವಿಶೇಷ: ರಾಮೇಶ್ವರಿ ಜಾತ್ರೆ

ಸೂರ್ಯೋದಯ : 06:05   ಸೂರ್ಯಾಸ್ತ : 06:47

ರಾಹುಕಾಲ: ಬೆಳಗ್ಗೆ 07:40 ರಿಂದ 09:15
ಗುಳಿಕಕಾಲ: ಮಧ್ಯಾಹ್ನ 02:01
ರಿಂದ 03:37
ಯಮಗಂಡಕಾಲ: ಬೆಳಗ್ಗೆ 10:51 ರಿಂದ 12:26

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬದ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ, ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಸಿಗಲಿದೆ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡುವಿರಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ:ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ನಿಮ್ಮ ಕ್ರಿಯಾಶೀಲ ಕಾರ್ಯ ಯೋಜನೆ ಸಫಲತೆಯನ್ನು ತಂದು ಕೊಡಲಿದೆ. ಆಪ್ತರು ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ, ಅದರ ಹೊರತಾಗಿಯೂ ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ಬಿಡುವಿಲ್ಲದ ಕಾರ್ಯದಿಂದ ಆಯಾಸ, ಇದರಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ, ಆದಷ್ಟು ವಿಶ್ರಾಂತಿ ಪಡೆಯಿರಿ. ಅನಗತ್ಯ ಖರ್ಚು ಇರಲಿದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಂತೋಷ ತುಂಬಿದ ವಾತಾವರಣ ಇರಲಿದೆ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಈ ದಿನ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮಲ್ಲಿರುವ ನಾಯಕತ್ವ ಗುಣವನ್ನು ಗುರುತಿಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮ ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ. ಆದರೆ ಅದೇ ಸಮಯದಲ್ಲಿ ಖರ್ಚು ತುಂಬಾ ಹೆಚ್ಚಾಗುತ್ತದೆ. ನಿಮ್ಮ ಬಗೆಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಬೇಡ. ದೀರ್ಘಕಾಲದ ಪ್ರಯತ್ನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ವಿನಾಕಾರಣ ವಿಚಾರ ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಗತ್ಯವಾಗಿ ಹಣವನ್ನು ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಸಲಹೆ ಹಿತಕರವೆನಿಸುವುದು. ಆತ್ಮೀಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Yogi Adityanath
ದೇಶ3 mins ago

Yogi Adityanath: ನೀರು ಎರಚಿ ಮಹಿಳೆಗೆ ಕಿರುಕುಳ ಕೇಸ್‌; ಇಡೀ ಪೊಲೀಸ್‌ ಚೌಕಿಯೇ ಅಮಾನತು; ಇನ್ಮುಂದೆ ʼಬುಲೆಟ್‌ ರೈಲ್‌ʼ ಓಡಿಸಲಾಗುತ್ತೆ ಎಂದು ವಾರ್ನಿಂಗ್‌

India's National Pension System
ಮನಿ-ಗೈಡ್11 mins ago

National Pension System: ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆಗಾಗಿ ಎನ್‌ಪಿಎಸ್ ಯೋಜನೆ ಸೂಕ್ತ

Karnataka Rain
ಮಳೆ16 mins ago

Karnataka Rain News: ಮಳೆ ಆರ್ಭಟ, ಇಂದು ಶಾಲೆ ಕಾಲೇಜುಗಳಿಗೆ ರಜೆ

wilma rudolph ರಾಜಮಾರ್ಗ ಅಂಕಣ
ಅಂಕಣ40 mins ago

ರಾಜಮಾರ್ಗ ಅಂಕಣ: ಬಾಲ್ಯದಲ್ಲಿ ಎರಡೂ ಕಾಲು ಪೋಲಿಯೋ ಪೀಡಿತಳಾದ ಹುಡುಗಿ ಮಹೋನ್ನತ ಕ್ರೀಡಾಪಟು ಆದ ಕಥೆ!

Things to Avoid Cleaning with Lemon
ಲೈಫ್‌ಸ್ಟೈಲ್1 hour ago

Things to Avoid Cleaning with Lemon: ಇವುಗಳನ್ನು ಸ್ವಚ್ಛ ಮಾಡಲು ಯಾವ ಕಾರಣಕ್ಕೂ ನಿಂಬೆಹಣ್ಣನ್ನು ಬಳಸಲೇಬೇಡಿ!

LIC New Jeevan Shanti Plan
ಮನಿ-ಗೈಡ್1 hour ago

LIC New Jeevan Shanti Plan: ಒಮ್ಮೆ ಪಾವತಿಸಿದರೆ ಸಾಕು; ಜೀವನ ಪರ್ಯಂತ ಪಿಂಚಣಿ!

Vastu Tips
ಧಾರ್ಮಿಕ2 hours ago

Vastu Tips: ಗಲ್ಲಾ ಪೆಟ್ಟಿಗೆಯಲ್ಲಿ ಇಂಥ ವಸ್ತುಗಳನ್ನು ಇಟ್ಟರೆ ಲಾಸ್‌!

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಇಂದು ಕಣಕ್ಕೆ ಇಳಿಯಲಿರುವ ಭಾರತದ ಸ್ಪರ್ಧಿಗಳು ಯಾರ್ಯಾರು? ಇಲ್ಲಿದೆ ಎಲ್ಲ ವಿವರ

Tea vs Coffee
ಆರೋಗ್ಯ2 hours ago

Tea vs Coffee: ಟೀ ಒಳ್ಳೆಯದಾ ಕಾಫಿ ಒಳ್ಳೆಯದಾ? ಇಲ್ಲಿದೆ ಉತ್ತರ

karnataka Rain
ಮಳೆ2 hours ago

Karnataka Weather : 7 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ ಕೊಟ್ಟ ಹವಾಮಾನ ತಜ್ಞರು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ18 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ19 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ19 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌