Dina Bhavishya read your daily horoscope predictions for july 10 2023Dina Bhavishya : ಇಂದು ಈ ರಾಶಿಯವರಿಗೆ ಅಷ್ಟಮ ಚಂದ್ರ ದೋಷ; ನಿಮ್ಮ ಭವಿಷ್ಯ ಹೀಗಿದೆ! - Vistara News

ಪ್ರಮುಖ ಸುದ್ದಿ

Dina Bhavishya : ಇಂದು ಈ ರಾಶಿಯವರಿಗೆ ಅಷ್ಟಮ ಚಂದ್ರ ದೋಷ; ನಿಮ್ಮ ಭವಿಷ್ಯ ಹೀಗಿದೆ!

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷದ ಅಷ್ಟಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (dina bhavishya) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

ashtama chandra dosha horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾರದ ಮೊದಲ ದಿನವಾದ ಇಂದು ಚಂದ್ರನು ರಾತ್ರಿ 07:55 ಕ್ಕೆ ವೃಷಭ ರಾಶಿಯನ್ನು ಪ್ರವೇಶಿಸುತ್ತಾನೆ. ಇಂದು ಸಿಂಹ ರಾಶಿಯವರನ್ನು ಅಷ್ಟಮ ಚಂದ್ರ ದೋಷ ಕಾಡಲಿದೆ. ಹೀಗಾಗಿ ಈ ರಾಶಿಯವರು ಇಂದು ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಯೋಚಿಸಬೇಕು. ಹೊಸ ಕಾರ್ಯ ಕೈಗೆತ್ತಿಕೊಳ್ಳುವುದಿದ್ದರೆ ಮುಂದೂಡುವುದು ಒಳಿತು. ವಿವಾದಗಳಿಂದ ಸಾಧ್ಯವಾದಷ್ಟು ದೂರ ಇರಿ. ಇಂದು ಸಂಜೆಯವರೆಗೆ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ಇರಲಿದೆ. ನಿಮ್ಮ ಇಂದಿನ ದಿನ ಹೇಗಿದೆ, ಭವಿಷ್ಯ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (10-07-2023)

ಶ್ರೀ ಶಕೇ 1945, ಶೋಭಕೃತ್‌ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ

ತಿಥಿ: ಅಷ್ಟಮಿ 18:43 ವಾರ: ಸೋಮವಾರ
ನಕ್ಷತ್ರ: ರೇವತಿ 18:57 ಯೋಗ: ಅತಿಗಂಡ 12:31
ಕರಣ: ಬಾಲವ 07:16 ಇಂದಿನ ವಿಶೇಷ: ಚಾಮುಂಡೇಶ್ವರೀ ವರ್ಧಂತಿ ಉತ್ಸವ.
ಅಮೃತಕಾಲ: ಸಂಜೆ 04 ಗಂಟೆ 38 ನಿಮಿಷದಿಂದ 06 ಗಂಟೆ 12 ನಿಮಿಷದವರೆಗೆ.

ಸೂರ್ಯೋದಯ : 06:00 ಸೂರ್ಯಾಸ್ತ : 06:50

ರಾಹುಕಾಲ : ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಇಂದು ಅನೇಕ ರೀತಿಯ ಒತ್ತಡಗಳು ಆವರಿಸುವ ಸಾಧ್ಯತೆ. ಆರ್ಥಿಕವಾಗಿ ಸಾಧರಣ ಫಲ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಕೊಂಚ ಮಟ್ಟಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯಕ. ವಿನಾ ಕಾರಣ ಎಲ್ಲದಕ್ಕೂ ಮೂಗು ತೂರಿಸುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಹೂಡಿಕೆಯ ಕುರಿತು ಆಲೋಚನೆ. ಆಪ್ತರ ಆರೋಗ್ಯ ವಿಚಾರಣೆ. ಉದ್ಯೋಗಿಗಳಿಗೆ ಮಿಶ್ರ ಫಲ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ, ಆರ್ಥಿಕ ಲಾಭ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಮಿಥುನ: ಕೆಲಸ ಕಾರ್ಯಗಳಲ್ಲಿ ಮಂದಗತಿ. ಆರೋಗ್ಯ ಮಧ್ಯಮ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ. ಆರ್ಥಿಕ ಲಾಭ ಸಾಧಾರಣ. ವ್ಯಾಪಾರ-ವ್ಯವಹಾರದಲ್ಲಿ ಮಿಶ್ರ ಫಲ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗಲಿದೆ. ಆರ್ಥಿಕವಾಗಿ ಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಹಳೆಯ ಸ್ನೇಹಿತರು, ಕುಟುಂಬದ ಆಪ್ತರೊಂದಿಗೆ ಸಮಯ ಕಳೆಯುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಆರೋಗ್ಯ ಕಾಳಜಿ ಇರಲಿ ಅವಶ್ಯಕ. ಒತ್ತಡದಿಂದ ಹೊರಬರಲು ವ್ಯಸನಗಳಿಗೆ ಬಲಿಯಾಗುವುದು ಬೇಡ. ಆರ್ಥಿಕವಾಗಿ ಕೊಂಚ ಲಾಭ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ. ಮಾತನಾಡುವಾಗ ಎಚ್ಚರಿಕೆ ವಹಿಸಿ. ಕೆಲಸ ಕಾರ್ಯಗಳಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಶುಭ ಕಾರ್ಯಗಳಿಗಾಗಿ ಖರ್ಚು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ. ಜವಾಬ್ದಾರಿಗಳು ಹೆಚ್ಚಾಗಲಿವೆ, ಕೋಪದಿಂದ ವರ್ತಿಸುವ ಸಾಧ್ಯತೆ. ಹಿಂದೆ-ಮುಂದೆ ಯೋಚಿಸದೇ ಮಾತುಗಳನ್ನಾಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣ. ಕುಟುಂಬದ ಹಿರಿಯರಿಂದ ಒತ್ತಡ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಆರ್ಥಿಕ ಲಾಭ. ಹಿಂದೆ ನೀಡಿದ ಸಾಲ ಮರಳುವ ಸಾಧ್ಯತೆ. ಆಪ್ತರಿಂದ ಸಲಹೆ ಸಹಕಾರ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವೃಶ್ಚಿಕ: ಸಂಗಾತಿಯ ಆರೋಗ್ಯದ ಸಲವಾಗಿ ಖರ್ಚು. ವೃತಾ ಕಾಲಹರಣ ಮಾಡುವ ಆಲೋಚನೆಗಳಿಂದ ದೂರವಿರಿ. ಸಹೋದ್ಯೋಗಿಗಳಿಂದ ಕಿರಿಕಿರಿ. ವ್ಯಾಪಾರ ವ್ಯವಹಾರ ಸಾಧಾರಣ. ಹೂಡಿಕೆಯ ವ್ಯವಹಾರಗಳಲ್ಲಿ ಪ್ರಗತಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಆಪ್ತರಿಂದ ಬೆಂಬಲ. ಕೆಲಸಕಾರ್ಯಗಳಲ್ಲಿ ಪ್ರಗತಿ. ಆಪ್ತರಿಂದ ಹಣದ ಸಹಾಯದ ಕೋರಿಕೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ಯಾರು ಯಾವ ಮಂತ್ರವನ್ನು ಜಪಿಸಿದರೆ ಫಲ ಸಿಗುತ್ತದೆ? ತಿಳಿಯಲು ಈ ವಿಡಿಯೋ ನೋಡಿ.
Horoscope Today

ಮಕರ: ಇಂದು ಉತ್ಸಾಹದ ದಿನ. ಆರ್ಥಿಕವಾಗಿ ಲಾಭ. ಹೂಡಿಕೆ ವ್ಯವಹಾರಗಳಲ್ಲಿ, ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ. ಯಾವುದಾದರೂ ಸಭೆ-ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ನಿರೀಕ್ಷೆಯ ಹೊಸ ಭರವಸೆಗಳು ಮೂಡಲಿವೆ. ಆಪ್ತರೊಂದಿಗೆ ಮಾತುಕತೆ. ಕುಟುಂಬದ ಸದಸ್ಯರಿಗೆ ಸಲಹೆ ಸಹಕಾರ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ಇತರರನ್ನು ಟೀಕಿಸುತ್ತಾ ಸಮಯ ವ್ಯರ್ಥ ಮಾಡುವುದು ಬೇಡ. ಭೂಮಿಗೆ ಸಂಬಂಧಿಸಿದಂತೆ ವ್ಯಾಪಾರ ವ್ಯವಹಾರದಲ್ಲಿ ಲಾಭ. ಪ್ರಯಾಣ ಸಾಧ್ಯತೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಇದನ್ನೂ ಓದಿ : Navavidha Bhakti : ಭಗವಂತನಲ್ಲಿ ಸೇರಿಕೊಳ್ಳುವ ಸ್ಥಿತಿಯೇ ಭಕ್ತಿ!

Horoscope Today

ಮೀನ: ಆರೋಗ್ಯ ಪರಿಪೂರ್ಣ. ಉದ್ಯೋಗಕ್ಕೆ ಸಂಬಂಧಿಸಿದಂತೆ ಖರ್ಚು. ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ನಿಮ್ಮ ನಿರೀಕ್ಷೆಗೆ ತಕ್ಕ ಪ್ರತಿಫಲವಿಲ್ಲ. ಕುಟುಂಬದ ಸದಸ್ಯರಿಂದ ಒತ್ತಡ. ಸಂಗಾತಿಯ ವರ್ತನೆ ನಿಮ್ಮ ಖ್ಯಾತಿಯ ಮೇಲೆ ಪರಿಣಾಮ ಬೀರಬಹುದು. ದಿಡೀರ್ ಧನ ಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ಬಾಗಿಲ ಬಳಿ ಇದ್ದ ಆಹಾರ ಪ್ಯಾಕೆಟ್‌ ಕದ್ದೊಯ್ದ ಜೊಮ್ಯಾಟೊ ಡೆಲಿವರಿ ಬಾಯ್‌!

Viral Video: ಆನ್‌ಲೈನ್‌ ಮೂಲಕ ಫುಡ್ ತರಿಸಿಕೊಂಡು ತಿನ್ನುವುದು ಈಗ ಸರ್ವೆಸಾಮಾನ್ಯವಾಗಿ ಬಿಟ್ಟಿದೆ. ಫುಡ್ ಡೆಲಿವರಿ ಬಾಯ್ ಮಾಡಿದ ದುಷ್ಕೃತ್ಯದ ವಿಡಿಯೊವೊಂದು ಈಗ ಎಲ್ಲೆಡೆ ವೈರಲ್ ಆಗಿದೆ. ಜೊಮ್ಯಾಟೊ ಡೆಲಿವರಿ ಬಾಯ್ ಆರ್ಡರ್ ಅನ್ನು ಮನೆಗೆ ತಲುಪಿಸಲು ಮನೆಯ ಬಾಗಿಲಿಗೆ ಬಂದಿದ್ದಾನೆ. ನಂತರ ಆತ ಆರ್ಡರ್ ನೀಡಿ ಮರಳುವಾಗ ಮನೆಯ ಬಾಗಿಲಿ ಬಳಿ ಇದ್ದ ಆಹಾರದ ಪ್ಯಾಕೆಟ್ ಒಂದನ್ನು ಗಮನಿಸಿದ್ದಾನೆ. ಮನೆಯವರು ಒಳಗೆ ಹೋದ ತಕ್ಷಣ ಅದನ್ನು ಎತ್ತಿಕೊಂಡು ಹೋಗಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

VISTARANEWS.COM


on

Viral Video
Koo

ಬೆಂಗಳೂರು: ಯಾವುದೇ ಆನ್‌ಲೈನ್ ಆ್ಯಪ್‌ಗಳಲ್ಲಿ ನೀವು ಯಾವುದೇ ವಸ್ತುಗಳನ್ನು ಆರ್ಡರ್ ಮಾಡಿದರೂ ಅದನ್ನು ಅವರು ಮನೆ ಬಾಗಿಲಿಗೆ ತಂದು ನೀಡುತ್ತಾರೆ ನಿಜ. ಆದರೆ ಕೆಲವೊಮ್ಮೆ ಡೆಲಿವರಿ ಬಾಯ್ಸ್ ನಿಂದ ಕೆಲವು ದುರ್ಘಟನೆಗಳು ನಡೆಯುತ್ತಿರುವುದನ್ನು ನೀವು ಕೇಳಿರಬಹುದು. ಹಾಗಾಗಿ ಡೆಲಿವರಿ ಬಾಯ್ಸ್ ಬಗ್ಗೆ ಎಚ್ಚರಿಕೆಯಿಂದಿರಿ. ಯಾಕೆಂದರೆ ಅಂತಹದೊಂದು ಘಟನೆ ಇದೀಗ ಬೆಂಗಳೂರಿನಲ್ಲಿ ನಡೆದಿದೆ. ಜೊಮ್ಯಾಟೊ ಡೆಲಿವರಿ ಬಾಯ್ ಮಾಡಿದ ಕಳ್ಳತನದ ಕೃತ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಜೂನ್ 25ರಂದು ಜೊಮ್ಯಾಟೊ ಡೆಲಿವರಿ ಬಾಯ್ ಆರ್ಡರ್ ಅನ್ನು ಮನೆಗೆ ತಲುಪಿಸಲು ಮನೆಯ ಬಾಗಿಲಿಗೆ ಬಂದಿದ್ದಾನೆ. ನಂತರ ಆತ ಆರ್ಡರ್ ನೀಡಿ ಮರಳುವಾಗ ಮನೆಯ ಬಾಗಿಲಿ ಬಳಿ ಇದ್ದ ಆಹಾರದ ಪ್ಯಾಕೆಟ್ ಒಂದನ್ನು ಗಮನಿಸಿದ್ದಾನೆ. ಮನೆಯವರು ಒಳಗೆ ಹೋದ ತಕ್ಷಣ ಅದನ್ನು ಎತ್ತಿಕೊಂಡು ಹೋಗಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪತ್ರಕರ್ತ ಆದಿತ್ಯ ಕಾಲ್ರಾ ಎಂಬುವವರು ಇದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅನೇಕರು ಕಾಮೆಂಟ್ ಮಾಡಿದ್ದಾರೆ. ಇದನ್ನು ಗಮನಿಸಿದ ಜೊಮ್ಯಾಟೊ ಕೇರ್ ಈ ಬಗ್ಗೆ ಕ್ಷಮೆ ಯಾಚಿಸಿದೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. “ಇದು ಸಂಭವಿಸಿದ್ದಕ್ಕಾಗಿ ನಾವು ವಿಷಾದಿಸುತ್ತೇವೆ. ಅಂತಹ ವಿಷಯಗಳನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಮತ್ತು ಅಂತಹ ಘಟನೆಗಳಿಗೆ ಕಾರಣವಾದವರ ವಿರುದ್ಧ ನಾವು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಜೊಮ್ಯಾಟೊ ಕೇರ್ ಭರವಸೆ ನೀಡಿದ್ದಾರೆ. ಹಾಗೇ ಇದಕ್ಕೆ ಸಂಬಂಧಪಟ್ಟ ವಿವರಗಳನ್ನು ಕಳುಹಿಸಿ, ಇದರಿಂದ ನಾವು ತ್ವರಿತವಾಗಿ ತನಿಖೆ ಮಾಡಬಹುದು ಎಂಬುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಮುಂದಿನ ಐದು ಸಾಲಿನಲ್ಲಿ ಮಹಿಳೆಯರಿಗೆ ಅವಕಾಶವಿಲ್ಲ! ಇದು ಸ್ವಾಮೀಜಿಯೊಬ್ಬರ ಕಂಡೀಷನ್‌!

Viral Video

ಜೊಮ್ಯಾಟೊ ಡೆಲಿವರಿ ಬಾಯ್ಸ್ ನ ಕಳ್ಳತನದ ಪ್ರಕರಣ ಇದೇ ಮೊದಲಲ್ಲ. ಇದಕ್ಕೂ ಮೊದಲು ಜೊಮ್ಯಾಟೊ ಡೆಲಿವರಿ ಬಾಯ್ ಒಬ್ಬ ಟ್ರಾಫಿಕ್ ಸಿಗ್ನಲ್‌ನಲ್ಲಿ ಕಾಯುತ್ತಿರುವಾಗ ಗ್ರಾಹಕರು ಆರ್ಡರ್ ಮಾಡಿದ ಬಾಕ್ಸ್ ನಿಂದ ಫುಡ್ ತೆಗೆದು ತಿಂದಿದ್ದಾನೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರಿಂದ ಜೊಮ್ಯಾಟೊ ಆಹಾರ ಸುರಕ್ಷತಾ ಕಾರ್ಯವಿಧಾನಗಳ ಬಗ್ಗೆ ಜನರಿಗೆ ಕಳವಳ ಉಂಟಾಗಿತ್ತು. ಹಾಗಾಗಿ ಜೊಮ್ಯಾಟೊದಿಂದ ವಸ್ತುಗಳನ್ನು ಆರ್ಡರ್ ಮಾಡುವಾಗ ಗ್ರಾಹಕರು ಬಹಳ ಎಚ್ಚರಿಕೆ ಇರುವುದು ಉತ್ತಮ. ಇಲ್ಲವಾದರೆ ಇದರಿಂದ ನೀವು ಸಮಸ್ಯೆ ಎದುರಿಸಬೇಕಾಗುತ್ತದೆ.

Continue Reading

Latest

Viral Video: ಪ್ರೇಯಸಿ ಹೆಜ್ಜೆ ಇರಿಸಲು ಕಂತೆಕಂತೆ ನೋಟಿನ ಮೆಟ್ಟಿಲು! ಪ್ರಿಯತಮನ ಹುಚ್ಚು ಪ್ರೀತಿ ನೋಡಿ!

Viral Video : ಪ್ರೀತಿಸಿದ ಹುಡುಗಿಯ ಮನಮೆಚ್ಚಿಸುವುದಕ್ಕಾಗಿ ಹುಡುಗರು ಏನೆಲ್ಲಾ ಸರ್ಕಸ್ ಮಾಡುತ್ತಾರೆ ಎಂಬುದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ. ತನ್ನನ್ನು ನೋಡಲು ಬರುವ ಪ್ರೇಯಸಿಯನ್ನು ಪ್ರಿಯಕರನೊಬ್ಬ ಸ್ವಾಗತಿಸಿದ ಪರಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ವಿಡಿಯೊ ನೋಡಿ ಕೆಲ ಹುಡುಗಿಯರು ಮನಸ್ಸಿನಲ್ಲಿಯೇ ʼನನಗೂ ಒಬ್ಬ ಗೆಳೆಯಬೇಕುʼ…. ಎಂಬ ಹಾಡು ಗುನುಗುವಂತೆ ಆಗಿದೆ. ತನ್ನನ್ನು ನೋಡಲ್ಛಿಸಿದ ಪ್ರೇಯಸಿಗಾಗಿ ಶ್ರೀಮಂತ ಉದ್ಯಮಿಯೊಬ್ಬ ಹೆಲಿಕಾಪ್ಟರ್ ಕಳುಹಿಸಿದ್ದು ಅಲ್ಲದೇ, ಆಕೆ ಇಳಿಯಲು ಕಾರ್ಪೆಟ್ ಬದಲು ಹಣದ ನೋಟಿನ ಕಂತಿನ ಮೆಟ್ಟಿಲು ಮಾಡಿದ್ದಾನೆ!

VISTARANEWS.COM


on

Viral Video
Koo

ದುಬೈ: ಹಣ ಜೀವನದಲ್ಲಿ ತುಂಬಾ ಮೌಲ್ಯಯುತವಾದುದು. ಹಾಗಾಗಿ ಹಣವನ್ನು ಖರ್ಚು ಮಾಡಲು ಜನರು ಮೀನಾಮೇಷ ಎಣಿಸುತ್ತಾರೆ. ಆದರೆ ಕೆಲವು ಹುಡುಗರು ಮಾತ್ರ ತಮ್ಮ ಹುಡುಗಿಗಾಗಿ ಏನು ಮಾಡಲು ಕೂಡ ಸಿದ್ಧರಿರುತ್ತಾರೆ. ಇದಕ್ಕೆ ನಿರ್ದಶನ ಎಂಬಂತೆ ಇಲ್ಲೊಂದು ಘಟನೆ ನಡೆದಿದ್ದು, ತನ್ನ ಪ್ರೇಯಸಿಗಾಗಿ ಪ್ರಿಯಕರನೊಬ್ಬ ಹಣದ ಹೊಳೆಯನ್ನೇ ಹರಿಸಿದ್ದಾನೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ.

ವಿಡಿಯೊದಲ್ಲಿ ಶ್ರೀಮಂತ ಉದ್ಯಮಿಯೊಬ್ಬ ಪ್ರೇಯಸಿಯನ್ನು ಹೆಲಿಕಾಪ್ಟರ್ ಮೂಲಕ ಕರೆಸಿಕೊಂಡಿದ್ದಾನೆ. ಅಷ್ಟೇ ಅಲ್ಲದೇ ಆಕೆ ಹೆಲಿಕಾಪ್ಟರ್‌ನಿಂದ ಇಳಿಯಲು ಕಾರ್ಪೆಟ್ ಬದಲು ಹಣದ ನೋಟಿನ ಕಂತಿನ ಮೆಟ್ಟಿಲು ಮಾಡಿದ್ದಾನೆ. ಆ ಯುವತಿ ಹಣದ ಕಂತಿನ ಮೇಲೆ ರಾಣಿಯಂತೆ ಅವನ ಕೈ ಹಿಡಿದುಕೊಂಡು ನಡೆದುಬರುತ್ತಿದ್ದಾಳೆ. ಕಂತೆ ಕಂತೆ ಹಣ ನೋಡಿದರೆ ಯಾರಿಗೆ ತಾನೆ ದಂಗಾವುದಿಲ್ಲ ಹೇಳಿ. ಹಾಗಾಗಿ ಜನರು ಇದನ್ನು ಕಂಡು ಜನರು ಹೌಹಾರಿದ್ದಾರೆ.

ಆ ಐಷರಾಮಿ ಉದ್ಯಮಿ ದುಬೈನ ಸರ್ಗಿ ಕೊಸೆಂಕೋ ಎಂಬುದಾಗಿ ತಿಳಿದುಬಂದಿದೆ. ಈತ ತನ್ನ ಇನ್ ಸ್ಟಾಗ್ರಾಂನಲ್ಲಿ ಇದನ್ನು ಪೋಸ್ಟ್ ಮಾಡಿದ್ದಾನೆ. ಜನರು ಉದ್ಯಮಿಯ ಐಷಾರಾಮಿ ಜೀವನ ಕಂಡು ದಂಗಾಗಿದ್ದಾರೆ. ವರದಿ ಪ್ರಕಾರ, ಯುವತಿ ಹಾಗೂ ಸರ್ಗಿ ಕೊಸೆಂಕೋ ಒಬ್ಬರನೊಬ್ಬರು ಪ್ರೀತಿಸುತ್ತಿದ್ದು, ಯುವತಿಗೆ ತನ್ನ ಪ್ರಿಯತಮನನ್ನು ನೋಡುವ ಆಸೆಯಾಗಿ ಆತನಿಗೆ ಕಾಲ್ ಮಾಡಿ ವಿಚಾರ ತಿಳಿಸಿದ್ದಾಳೆ. ಆಗ ಆತ ಆಕೆಯನ್ನು ಕರೆದುಕೊಂಡು ಬರಲು ತನ್ನ ಹೆಲಿಕಾಪ್ಟರ್ ಕಳುಹಿಸಿದ್ದಲ್ಲದೇ ಮನೆಗೆ ಬಂದ ಆಕೆಗೆ ಹೆಲಿಕಾಪ್ಟರ್ ನಿಂದ ಇಳಿಯಲು ನೋಟಿನ ಕಂತಿನ ಮೆಟ್ಟಿಲು ಮಾಡಿದ್ದಾನೆ. ಅಷ್ಟೇ ಅಲ್ಲದೇ ಈ ಹಣದ ಮೆಟ್ಟಿಲು ಆತನ ಮನೆಯ ತನಕ ಹಾಕಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಸಿಮೆಂಟ್, ಕಲ್ಲಿನಿಂದ ವಾಷಿಂಗ್ ಮೆಷಿನ್ ತಯಾರಿಸಿದ ಮಹಿಳೆ; ಹೇಗೆ ಕೆಲಸ ಮಾಡುತ್ತೆ ನೋಡಿ!

ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಜನರು ಆಶ್ಚರ್ಯಚಕಿತರಾಗಿದ್ದು, ನಮಗೆ ಆ ಕಂತೆ ಕಂತೆ ನೋಟು ಬೇಡ. ಅದರ ಅಕ್ಕಪಕ್ಕ ಬಿದ್ದಿರುವ ನೋಟುಗಳು ಸಿಕ್ಕರೆ ಸಾಕು, ನೆಮ್ಮದಿಯ ಜೀವನ ಕಟ್ಟಿಕೊಳ್ಳುವುದಾಗಿ ಆಸೆ ವ್ಯಕ್ತಪಡಿಸಿದ್ದಾರೆ.

Continue Reading

ವಾಣಿಜ್ಯ

5G Spectrum: 11,300 ಕೋಟಿ ರೂ. ಮೌಲ್ಯದ 5ಜಿ ತರಂಗ ಹರಾಜು; ಭಾರ್ತಿ ಏರ್‌ಟೆಲ್‌ ಮುಂಚೂಣಿ

5G Spectrum: ಭಾರ್ತಿ ಏರ್‌ಟೆಲ್‌ ಕಂಪನಿಯು 97 ಎಂಎಚ್‌ಝಡ್‌ (ಮೆಗಾ ಹರ್ಟ್ಸ್‌) ತರಂಗಗಳನ್ನು 6,857 ಕೋಟಿ ರೂ. ಪಾವತಿಸಿ 20 ವರ್ಷಗಳಿಗಾಗಿ ಖರೀದಿಸಿದೆ. ಇದರೊಂದಿಗೆ 5ಜಿ ತರಂಗಗಳ ಹರಾಜು ಪ್ರಕ್ರಿಯೆ ಬುಧವಾರ ಮುಕ್ತಾಯಗೊಂಡಿದ್ದು, ಸರ್ಕಾರಕ್ಕೆ 11,300 ಕೋಟಿ ರೂ. ಆದಾಯ ಲಭಿಸಿದೆ.

VISTARANEWS.COM


on

5G Spectrum
Koo

ನವದೆಹಲಿ: ದೇಶವೇ ಕುತೂಹಲದಿಂದ ಕಾಯುತ್ತಿದ್ದ 5ಜಿ ತರಂಗಗಳ ಹರಾಜು (5G Spectrum) ಪ್ರಕ್ರಿಯೆ ಭಾನುವಾರ ಮುಕ್ತಾಯಗೊಂಡಿದೆ. ಕೇಂದ್ರ ಸರ್ಕಾರವು (Central Government) 11,300 ಕೋಟಿ ರೂಪಾಯಿಗೆ 5ಜಿ ತರಂಗ ಹರಾಜು ಮಾಡಿದ್ದು, ದೇಶದ ಪ್ರಮುಖ ಖಾಸಗಿ ಟೆಲಾಕಾಂ ಕಂಪನಿಯಾದ ಭಾರ್ತಿ ಏರ್‌ಟೆಲ್‌ (Bharti Airtel) 6,857 ಕೋಟಿ ರೂ.ಗೆ ತರಂಗಗಳನ್ನು ಖರೀದಿಸುವ (5G Spectrum Auctions) ಮೂಲಕ ಹರಾಜಿನಲ್ಲಿ ಬೃಹತ್‌ ಬಿಡ್ಡರ್‌ ಎನಿಸಿದೆ.

ಭಾರ್ತಿ ಏರ್‌ಟೆಲ್‌ ಕಂಪನಿಯು 97 ಎಂಎಚ್‌ಝಡ್‌ (ಮೆಗಾ ಹರ್ಟ್ಸ್‌) ತರಂಗಗಳನ್ನು 6,857 ಕೋಟಿ ರೂ. ಪಾವತಿಸಿ 20 ವರ್ಷಗಳಿಗಾಗಿ ಖರೀದಿಸಿದೆ. “ಗ್ರಾಹಕರಿಗೆ ಅತ್ಯುತ್ತಮ, ಅತ್ಯಾಧುನಿಕ ಹಾಗೂ ಕ್ಷಿಪ್ರಗತಿಯ ಸೇವೆಗಳನ್ನು ಒದಗಿಸುವ ದಿಸೆಯಲ್ಲಿ ಭಾರ್ತಿ ಏರ್‌ಟೆಲ್‌ ಕಂಪನಿಯು 5ಜಿ ತರಂಗಗಳನ್ನು ಖರೀದಿಸಿದೆ. ಇದರಿಂದ ದೇಶದ ಮೂಲೆ ಮೂಲೆಗಳಿಗೂ 5ಜಿ ಸೇವೆಯನ್ನು ವಿಸ್ತರಿಸುವ ನಮ್ಮ ಉದ್ದೇಶಕ್ಕೆ ಈಗ ಬಲ ಬಂದಂತಾಗಿದೆ” ಎಂದು ಹರಾಜು ಪ್ರಕ್ರಿಯೆ ಮುಗಿದ ಬಳಿಕ ಕಂಪನಿಯ ಎಂಡಿ ಹಾಗೂ ಸಿಇಒ ಗೋಪಾಲ್‌ ವಿಠಲ್‌ ಮಾಹಿತಿ ನೀಡಿದ್ದಾರೆ.

ತರಂಗಗಳ ಹರಾಜು ಮೊತ್ತ ಕುಸಿತ

ತರಂಗಗಳ ಹರಾಜು ಪ್ರಕ್ರಿಯೆಗೆ 2022ಕ್ಕೆ ಹೋಲಿಸಿದರೆ ಈ ಬಾರಿ ಕಡಿಮೆ ಮೊತ್ತ ಲಭಿಸಿದೆ. 2022ರಲ್ಲಿ 72,097 ಎಂಎಚ್‌ಝಡ್‌ ರೇಡಿಯೊ ತರಂಗಗಳ ಮಾರಾಟದಿಂದ 1.5 ಲಕ್ಷ ಕೋಟಿ ರೂ. ಆದಾಯ ಲಭಿಸಿತ್ತು. ಆ ವರ್ಷದಲ್ಲಿ ಕೇಂದ್ರ ಸರ್ಕಾರವು ಮೊದಲ ಬಾರಿಗೆ 5ಜಿ ತರಂಗಗಳ ಹರಾಜು ನಡೆಸಿತ್ತು. ಆ ವರ್ಷ ಸರ್ಕಾರವು ತರಂಗಗಳ ಹರಾಜಿನಿಂದ ದಾಖಲೆ ಮೊತ್ತದ ಆದಾಯ ಗಳಿಸಿತ್ತು. ಮುಕೇಶ್‌ ಅಂಬಾನಿ ಅವರ ಜಿಯೋ ಒಂದೇ ಸುಮಾರು 88 ಸಾವಿರ ಕೋಟಿ ರೂ. ಕೊಟ್ಟು 5ಜಿ ತರಂಗಗಳನ್ನು ಖರೀದಿಸಿತ್ತು.

ಎರಡನೇ ದಿನದ (ಬುಧವಾರ-ಜೂನ್‌ 26) ಹರಾಜಿನಲ್ಲಿ ಕೇಂದ್ರ ಸರ್ಕಾರವು ಸುಮಾರು 96,238 ಕೋಟಿ ರೂ. ಮೌಲ್ಯದ ತರಂಗಗಳನ್ನು ಮಾರಾಟ ಮಾಡುವ ಉದ್ದೇಶ ಹೊಂದಿತ್ತು. ಆದರೆ, ಸರ್ಕಾರದ ಗುರಿಯಲ್ಲಿ ಶೇ.12ರಷ್ಟು ಗುರಿ ಮಾತ್ರ ಸಾಧಿಸಲಾಯಿತು ಎಂದು ತಿಳಿದುಬಂದಿದೆ. ದೇಶದಲ್ಲಿ ಜಿಯೋ, ಏರ್‌ಟೆಲ್‌ ಸೇರಿ ಹಲವು ಟೆಲಿಕಾಮ್‌ ಕಂಪನಿಗಳು 5 ಜಿ ಸೇವೆಗಳನ್ನು ಒದಗಿಸುತ್ತಿವೆ. ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ 5ಜಿ ಸೇವೆಯು ಲಭ್ಯವಿದೆ. ಈಗಾಗಲೇ ಕೇಂದ್ರ ಸರ್ಕಾರವು 6ಜಿ ಅಳವಡಿಕೆಗೆ ಚಿಂತನೆ ನಡೆಸಿದೆ.

ಇದನ್ನೂ ಓದಿ: 5G India: ಭಾರತದ 5ಜಿ ವೇಗಕ್ಕೆ ಸಾಟಿ ಇಲ್ಲ; ನಮ್ಮ ಸ್ಪೀಡ್‌ ಮುಂದೆ ಜಪಾನ್‌, ಬ್ರಿಟನ್‌ ಕೂಡ ಹಿಂದೆ!

Continue Reading

ಕರ್ನಾಟಕ

Rain News: ಕೊಡಗು, ಚಿಕ್ಕಮಗಳೂರು, ಕಾರವಾರದಲ್ಲಿ ವರುಣಾರ್ಭಟ; ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆ!

Rain News: ಜೂನ್‌ 27ರಂದು ಕೂಡ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಕೊಡಗು ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಸಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

VISTARANEWS.COM


on

Rain News
ಮಂಗಳವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕಾರವಾರದಲ್ಲಿ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ.
Koo

ಬೆಂಗಳೂರು: ಕೊಡಗು, ಚಿಕ್ಕಮಗಳೂರು, ಕಾರವಾರ ಸೇರಿ ವಿವಿಧೆಡೆ ಮಂಗಳವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದ (Rain News) ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ಬೃಹತ್‌ ಮರಗಳು ರಸ್ತೆಗೆ ಉರುಳಿದ್ದರಿಂದ ಸಂಚಾರಕ್ಕೆ ಅಡಚಣೆಯಾಗಿದೆ. ಇನ್ನು ಕಾರವಾರದಲ್ಲಿ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನ ಪರದಾಡುವಂತಾಗಿದೆ.

ಇನ್ನು ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆಯ‌ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು ಮತ್ತು ಹಾವೇರಿ ಜಿಲ್ಲೆಯಲ್ಲಿ ಗಂಟೆಗೆ 50 kmph ವೇಗದ ಗಾಳಿ, ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಸಿಡಿಲು- ಗುಡುಗು ವೇಳೆ ಎಲೆಕ್ಟ್ರಿಕ್ ಉಪಕರಣಗಳನ್ನು ಆಫ್ ಮಾಡುವಂತೆ ಹಾಗೂ ಮಳೆ ಬರುವಾಗ ಶಿಥಿಲ ಕಟ್ಟಡ, ಮರದ ಕೆಳಗಡೆ ನಿಲ್ಲದಂತೆ ಹವಾಮಾನ ಇಲಾಖೆ ಸೂಚನ ನೀಡಿದೆ.

ಕಾವೇರಿ ನದಿ ನೀರಿನ ಮಟ್ಟ ಗಣನೀಯ ಏರಿಕೆ

ಕೊಡಗು: ಜಿಲ್ಲೆಯ ವಿವಿಧೆಡೆ ಬಿರುಸಿನ ಮಳೆ‌ಯಾಗಿದ್ದು, ಪುಷ್ಪಗಿರಿ, ಬ್ರಹ್ಮಗಿರಿ ತಪ್ಪಲಿನಲ್ಲಿ ಭಾರಿ ಮಳೆಯಿಂದನದಿ, ತೊರೆ, ಹಳ್ಳ, ಕೊಳ್ಳಗಳ ನೀರಿನ ಮಟ್ಟ ಏರಿಕೆಯಾಗಿದೆ. ಕಾವೇರಿ ನದಿ ನೀರಿನ ಮಟ್ಟವೂ ಗಣನೀಯ ಏರಿಕೆಯಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ಇನ್ನು ಗಾಳಿ ಮಳೆಗೆ ಹಲವೆಡೆ ಮರ ಗಿಡಗಳು ನೆಲಕ್ಕುರುಳಿವೆ.

ಮಡಿಕೇರಿ ವ್ಯಾಪ್ತಿಯಲ್ಲಿ ರಾತ್ರಿ ಧಾರಾಕಾರ ಮಳೆ ಹಿನ್ನಲೆಯಲ್ಲಿ ಮಡಿಕೇರಿ- ಚೆಟ್ಟಳ್ಳಿ ಮಾರ್ಗದಲ್ಲಿ ರಸ್ತೆಯ ಮೇಲೆ ಬೃಹತ್ ಮರ ಬಿದ್ದ‌ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಅಸ್ತವ್ಯವಾಗಿದೆ. ಮರ ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ.

ಇಂದು (ಬುಧವಾರ) ಬೆಳಗ್ಗೆಯಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ, ಮಧ್ಯಾಹ್ನದ ಬಳಿಕ ಮತ್ತೆ ಆರ್ಭಟಿಸುತ್ತಿದ್ದಾನೆ. ಇದರಿಂದ ಜನರ ಓಡಾಟಕ್ಕೆ ತೊಂದರೆಯಾಗಿದೆ. ಮಡಿಕೇರಿ, ಭಾಗಮಂಡಲ ನಾಪೋಕ್ಲು ಸೇರಿದಂತೆ ಹಲವೆಡೆ ಮಳೆ ಸುರಿಯುತ್ತಿದೆ.

ಮಲೆನಾಡಿನಲ್ಲಿ ಮಳೆ ಆರ್ಭಟ ಜೋರು

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡಿನಲ್ಲಿ ಮಳೆ ಆರ್ಭಟ ಜೋರಾಗಿದೆ. ಕುದುರೆಮುಖ ಸಮೀಪದ ನೆಲ್ಲಿಬೀಡು ಗ್ರಾಮದ ಬಳಿ ಕಳಸ-ಮಂಗಳೂರು ರಾಜ್ಯ ಹೆದ್ದಾರಿಯಲ್ಲಿ ಮರ ಅಡ್ಡಲಾಗಿ ಬಿದ್ದಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡಿದೆ. ಸ್ಥಳೀಯರಿಂದ ಮರ ತೆರವು ಕಾರ್ಯಚರಣೆ ನಡೆಯುತ್ತಿದೆ.

ಇನ್ನು ಮೂಡಿಗೆರೆ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿದಿದ್ದು, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್, ಬಣಕಲ್, ಕೊಟ್ಟಿಗೆಹಾರ, ಜಾವಳಿ, ಮಲೆಮನೆ, ರಾಣಿಜರಿ, ಸುಂಕಸಾಲೆ, ದೇವರಮನೆ ಸುತ್ತಮುತ್ತ ಬಿರುಸಿನ ಮಳೆಯಾಗಿದೆ.

ಕಳೆದೊಂದು ವಾರದಿಂದ ಬಿಡುವು ನೀಡಿದ್ದ ವರುಣದೇವ, ಇಂದು ಬೆಳಗ್ಗೆಯಿಂದ ಮತ್ತೆ ಅಬ್ಬರಿಸುತ್ತಿದ್ದಾನೆ. ಭಾರಿ ಗಾಳಿ-ಮಳೆಗೆ ಚಾರ್ಮಾಡಿಯಲ್ಲಿ ವಾಹನ ಸವಾರರು ಪರದಾಡುತ್ತಿದ್ದಾರೆ.

ಕಾರವಾರದಲ್ಲಿ ಮನೆಗಳಿಗೆ ನುಗ್ಗಿದ ನೀರು

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ತಡರಾತ್ರಿ ಸುರಿದ ಭಾರಿ ಮಳೆಗೆ ಕಾರವಾರದಲ್ಲಿ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ.

ಕಾರವಾರ ನಗರದ ಮಾಲಾದೇವಿ ಮೈದಾನ ಸಮೀಪ ಚರಂಡಿಯಲ್ಲಿ ನೀರು ಹರಿಯದ ಪರಿಣಾಮ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಸಂಕಷ್ಟ ಅನುಭವಿಸುವಂತಾಗಿದೆ. ಮಲೆನಾಡು ಭಾಗದ ಶಿರಸಿ, ಸಿದ್ದಾಪುರ, ಯಲ್ಲಾಪುರ ಭಾಗದಲ್ಲಿ ಮಳೆಯಬ್ಬರ ಹೆಚ್ಚಿದ್ದು, ಕರಾವಳಿ ಭಾಗದ ಕಾರವಾರ, ಅಂಕೋಲಾ ಭಟ್ಕಳ, ಹೊನ್ನಾವರ ಭಾಗದಲ್ಲಿ ಅಲ್ಪ ಮಳೆಯಾಗಿದೆ. ಜಿಲ್ಲೆಯಾದ್ಯಂತ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.

ಇದನ್ನೂ ಓದಿ | IND vs ENG Semi Final: ಇಂಡೋ-ಆಂಗ್ಲ ಸೆಮಿಫೈನಲ್​ ಪಂದ್ಯದ ಸಂಭಾವ್ಯ ತಂಡ, ಪಿಚ್​ ರಿಪೋರ್ಟ್​ ಹೀಗಿದೆ

ಭಾರಿ ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಸಾವು

ಮಂಗಳೂರು: ಭಾರಿ ಮಳೆಯ (Rain news) ಪರಿಣಾಮ ಮನೆಯ ಗೋಡೆ ಕುಸಿದು (Wall collapse) ಬಿದ್ದು ನಾಲ್ವರು‌ ದುರ್ಮರಣ (four death) ಹೊಂದಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ (Ullala) ನಡೆದಿದೆ.

ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ದುರ್ಘಟನೆ ನಡೆದಿದ್ದು, ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ ಕುಸಿದಿದೆ. ಇದು ಪಕ್ಕದ ಯಾಸಿರ್ ಎಂಬವರ ಮನೆಯ ಗೋಡೆಗೆ ಬಿದ್ದು ಭಾರೀ ಅವಘಡ ಸಂಭವಿಸಿತು. ಮನೆಯೊಳಗಿದ್ದ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಸಾವಿಗೀಡಾದರು.

ರಾತ್ರಿ ಸುರಿದ ಭಾರೀ ಮಳೆಗೆ ಈ ದುರಂತ ಸಂಭವಿಸಿದೆ. ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಾಲ್ವರ ಮೃತದೇಹವನ್ನೂ ಸ್ಥಳೀಯರು ಹೊರತೆಗೆದಿದ್ದಾರೆ.

Continue Reading
Advertisement
Viral Video
Latest11 mins ago

Viral Video: ಬಾಗಿಲ ಬಳಿ ಇದ್ದ ಆಹಾರ ಪ್ಯಾಕೆಟ್‌ ಕದ್ದೊಯ್ದ ಜೊಮ್ಯಾಟೊ ಡೆಲಿವರಿ ಬಾಯ್‌!

Rohit Sharma
ಕ್ರೀಡೆ19 mins ago

Rohit Sharma: ವಿಶ್ವ ದಾಖಲೆ ಮೇಲೆ ಕಣ್ಣಿಟ್ಟ ಹಿಟ್​ಮ್ಯಾನ್​ ರೋಹಿತ್​; ಲಂಕಾ ಆಟಗಾರನಿಗೆ ನಡುಕ

Viral Video
Latest21 mins ago

Viral Video: ಪ್ರೇಯಸಿ ಹೆಜ್ಜೆ ಇರಿಸಲು ಕಂತೆಕಂತೆ ನೋಟಿನ ಮೆಟ್ಟಿಲು! ಪ್ರಿಯತಮನ ಹುಚ್ಚು ಪ್ರೀತಿ ನೋಡಿ!

Arvind Kejriwal
ದೇಶ22 mins ago

Arvind Kejriwal: ಅರೆಸ್ಟ್‌ ಬೆನ್ನಲ್ಲೇ ತಡೆಯಾಜ್ಞೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಕೇಜ್ರಿವಾಲ್‌

Actor Darshan Full aggressive mode while he drunk
ಸ್ಯಾಂಡಲ್ ವುಡ್27 mins ago

Actor Darshan: `ದರ್ಶನ್‌’ ಫುಲ್‌ ಟೈಟ್‌ ಆದಾಗಲೇ ಅಗ್ರೆಸಿವ್‌ ಆಗೋದು‌ ಎಂದ ಭಾವನಾ ಬೆಳಗೆರೆ!

5G Spectrum
ವಾಣಿಜ್ಯ29 mins ago

5G Spectrum: 11,300 ಕೋಟಿ ರೂ. ಮೌಲ್ಯದ 5ಜಿ ತರಂಗ ಹರಾಜು; ಭಾರ್ತಿ ಏರ್‌ಟೆಲ್‌ ಮುಂಚೂಣಿ

Rain News
ಕರ್ನಾಟಕ31 mins ago

Rain News: ಕೊಡಗು, ಚಿಕ್ಕಮಗಳೂರು, ಕಾರವಾರದಲ್ಲಿ ವರುಣಾರ್ಭಟ; ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆ!

Money Guide
ಮನಿ-ಗೈಡ್44 mins ago

Money Guide: ಸಾಲಕ್ಕೆ ಅಪ್ಲೈ ಮಾಡುವ ಮುನ್ನ ಈ ಅಂಶ ನಿಮಗೆ ತಿಳಿದಿರಲೇ ಬೇಕು

Prajwal revanna Case
ಕರ್ನಾಟಕ55 mins ago

Prajwal Revanna Case: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ; ಮತ್ತೆ ಜೈಲೇ ಗತಿ

Actress Akshita entry to kollywood cinema
ಕಾಲಿವುಡ್1 hour ago

Actress Akshita: ಕನ್ನಡತಿ ಅಕ್ಷಿತಾ ಈಗ ತಮಿಳು ಚಿತ್ರದ ನಾಯಕಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌