Dina Bhavishya : ಈ ರಾಶಿಯವರು ಇಂದು ಹೂಡಿಕೆ ಮಾಡಿ ಅಧಿಕ ಲಾಭ ಪಡೆಯಿರಿ! Vistara News
Connect with us

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರು ಇಂದು ಹೂಡಿಕೆ ಮಾಡಿ ಅಧಿಕ ಲಾಭ ಪಡೆಯಿರಿ!

ಶ್ರೀ ಶಕೇ 1945, ಶೋಭಕೃತ್‌ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಅಧಿಕ ಶ್ರಾವಣ ಮಾಸ, ಶುಕ್ಲದ ತದಿಗೆ/ಚೌತಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (dina bhavishya) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today Dina Bhavishya
Koo

ಲಕ್ಷ್ಮಿ ದೇವಿಯ ವಾರ ಎಂದೇ ಕರೆಯಲ್ಪಡುವ ಶುಕ್ರವಾರದಂದು ಸಹ ಚಂದ್ರನು ಕನ್ಯಾರಾಶಿಯಲ್ಲೇ ನೆಲೆಸಿದ್ದು, ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭಾ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮಿಥುನ ರಾಶಿಯವರು ಇಂದು ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ. ಮೀನ ರಾಶಿಯವರಿಗೆ ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ, ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (21-07-2023)

ಶ್ರೀ ಶಕೇ 1945, ಶೋಭಕೃತ್‌ ನಾಮ ಸಂವತ್ಸರ, ದಕ್ಷಿಣಾಯನ,
ವರ್ಷ ಋತು, ಅಧಿಕ ಶ್ರಾವಣ ಮಾಸ, ಶುಕ್ಲ ಪಕ್ಷ

ತಿಥಿ: ತದಿಗೆ 06:57 ವಾರ: ಶುಕ್ರವಾರ
ನಕ್ಷತ್ರ: ಮಘಾ 13:56 ಯೋಗ: ವ್ಯತಿಪಾತ 12:22
ಕರಣ: ಗರಜ 06:57 ದಿನ ವಿಶೇಷ: ಆಡಿ ಶುಕ್ರವಾರ
ಅಮೃತ ಕಾಲ: ಬೆಳಗ್ಗೆ 11:16ರಿಂದ ಮಧ್ಯಾಹ್ನ 01:04ರ ವರೆಗೆ

ಸೂರ್ಯೋದಯ : 06:03 ಸೂರ್ಯಾಸ್ತ : 06:49

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ, ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಗೆ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಹಣಕಾಸು ಪ್ರಗತಿ ಸಾಮಾನ್ಯ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ಇರಲಿ. ಕುಟುಂಬದ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು. ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಆರೋಗ್ಯ ಪರಿಪೂರ್ಣ. ಹಣಕಾಸು ಪ್ರಗತಿ ಮಧ್ಯಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ. ಅದರಲ್ಲೂ ಗರ್ಭಿಣಿಯರು ಹೆಚ್ಚು ಕಾಳಜಿ ವಹಿಸಿ. ಹೊಸ ಒಪ್ಪಂದ ಮಾಡುವುದು ಇಂದಿನ ಮಟ್ಟಿಗೆ ಬೇಡ. ಆತುರದಲ್ಲಿ ಯಾವ ತಿರ್ಮಾನಗಳು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಬಿಡುವಿಲ್ಲದ ಕಾರ್ಯ ಯೋಜನೆ, ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡುವುದು. ಪ್ರಯಾಣದ ಕುರಿತಾಗಿ ಯೋಜನೆ. ಹೂಡಿಕೆ ವ್ಯವಹಾರ ಇಂದು ಹೆಚ್ಚು ಲಾಭ ತರುವುದು. ಪರಿಪೂರ್ಣ ಆರೋಗ್ಯ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ. ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೊಡಿಕೆ ಕುರಿತಾಗಿ ಆಲೋಚನೆ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಉದ್ಯೋಗದಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸೌಂದರ್ಯದ ಕುರಿತು ಕಾಳಜಿ. ಆರೋಗ್ಯ ಪರಿಪೂರ್ಣ. ಹಣಕಾಸು ವ್ಯವಹಾರದಲ್ಲಿ ಲಾಭ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಮಾನಸಿಕ ಒತ್ತಡದಿಂದ ದೂರವಾಗಲು ಧ್ಯಾನ ಮಾಡಿ. ವೃತಾ ಚಿಂತೆ ನಿಮ್ಮನ್ನು ಮತ್ತಷ್ಟು ಖಿನ್ನತೆಗೆ ಒಳಪಡಿಸುವುದು. ಆದರಿಂದ ಸಕಾರಾತ್ಮಕ ಆಲೋಚನೆಗಳನ್ನು ಮಾಡಿ. ಕೌಟುಂಬಿಕ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ, ಮನೆಯ ವಾತಾವರಣ ಹದಗೆಡಬಹುದು. ಮೌನದಿಂದ ಕಾರ್ಯ ಸಿದ್ಧಿಸಿಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಪ್ರಭಾವಿ ವ್ಯಕ್ತಿಗಳ ವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಅನಿರೀಕ್ಷಿತ ಖರ್ಚು, ಇದರ ಹೊರಾತಾಗಿಯೂ ಲಾಭ ಪಡೆಯುವಿರಿ. ಮಾತಿನ ಮೇಲೆ ಹಿಡಿತವಿರಲಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಮನೆಯಲ್ಲಿ ಶಾಂತಿ ನೆಲೆಸಲು ಏನು ಮಾಡಬೇಕು? ಈ ವಿಡಿಯೋ ನೋಡಿ.
Horoscope Today

ಮಕರ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು ಕಾರ್ಯದಲ್ಲಿ ಮುನ್ನುಗ್ಗಿ. ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಆಗುವ ಸಾಧ್ಯತೆ. ಅತಿರೇಕವಾಗಿ ಕೋಪದಿಂದ ಮಾತನಾಡುವುದು ಬೇಡ. ಆರ್ಥಿಕ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ನಿಮ್ಮ ಸಹಾಯ ಮಾಡುವ ಗುಣ, ಇತರರಿಂದ ಪ್ರಶಂಸೆ ಸಿಗಲಿದೆ. ವ್ಯಾಪರ ವ್ಯವಹಾರದಲ್ಲಿ ಪ್ರಗತಿ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಇದನ್ನೂ ಓದಿ : Adhika Masa 2023 : ಅಧಿಕಮಾಸದಲ್ಲಿ ಈ ಕೆಲಸಗಳನ್ನು ಮಾಡಲೇಬೇಡಿ!

Horoscope Today

ಮೀನ: ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಆರೋಗ್ಯ ಪರಿಪೂರ್ಣ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bangalore Bandh : ಶುಕ್ರವಾರ ಇಡೀ ಕರ್ನಾಟಕ ಬಂದ್‌; ಸೆಕ್ಷನ್‌ 144 ಹಾಕಿದ್ರೆ ಹುಷಾರ್‌ ಎಂದು ಗುಡುಗಿದ ವಾಟಾಳ್‌

Bangalore News : ಸೆ. 29ರಂದು ನಡೆಯಲಿರುವ ಕರ್ನಾಟಕ ಬಂದ್‌ ವೇಳೆ ನಿಷೇಧಾಜ್ಞೆ ಹಾಕುವಂತಿಲ್ಲ ಎಂದು ವಾಟಾಳ್‌ ನಾಗರಾಜ್‌ ಸರ್ಕಾರಕ್ಕೆ ತಾಕೀತು ಮಾಡಿದ್ದಾರೆ.

VISTARANEWS.COM


on

Edited by

Vataka Nagaraj Karnataka Bandh
Koo

ಬೆಂಗಳೂರು: ಮಂಗಳವಾರ ನಡೆದ ಬೆಂಗಳೂರು ಬಂದ್‌ನ್ನು (Bangalore Bandh) ಸರ್ಕಾರ ಪೊಲೀಸ್‌ ಬಲ ಪ್ರಯೋಗದ ಮೂಲಕ ಹತ್ತಿಕ್ಕುವ ಪ್ರಯತ್ನ ಮಾಡಿದೆ. ಆದರೆ ಸೆಪ್ಟೆಂಬರ್‌ 29ರಂದು ನಡೆಯಲಿರುವ ಕನ್ನಡದ ಒಕ್ಕೂಟ ಕರೆ ನೀಡಿರುವ ಅಖಿಲ ಕರ್ನಾಟಕ ಬಂದ್‌ನ್ನು (Karnataka Bandh) ತಡೆಯಲು ಯತ್ನಿಸಿದರೆ ಹುಷಾರ್‌ ಎಂದು ಕನ್ನಡ ಹೋರಾಟಗಾರ ವಾಟಾಳ್‌ ನಾಗರಾಜ್‌ (Vatal Nagaraj) ಸರ್ಕಾರವನ್ನು ಎಚ್ಚರಿಸಿದ್ದಾರೆ.

ಅವರು ಮಂಗಳವಾರ ನಡೆದ ಬೆಂಗಳೂರು ಬಂದ್‌ ನಡುವೆಯೇ ತಮ್ಮ ತಂಡವನ್ನು ಕೂಡಿಕೊಂಡು ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಆದರೆ, ಪೊಲೀಸರು ಅವರ ಪ್ರಯತ್ನವನ್ನು ವಿಫಲಗೊಳಿಸಿದ್ದರು. ಇದೂ ಸೇರಿದಂತೆ ಹೋರಾಟಗಾರರ ಹಕ್ಕನ್ನು ಕಸಿಯಲಾಗಿದೆ ಎಂದು ಅವರು ಸಂಜೆ ಆಪಾದಿಸಿದರು.

ರಾಜ್ಯ ಸರ್ಕಾರ ಸೆಕ್ಷನ್‌ 144ರ ಅಡಿ ನಿಷೇಧಾಜ್ಞೆ ವಿಧಿಸಿ ಪೊಲೀಸರ ಮೂಲಕ ಪ್ರತಿಭಟನೆ ಹತ್ತಿಕ್ಕುವ ಮಾರ್ಗ ಕಂಡುಕೊಂಡಿದೆ. ಆದರೆ, ಶುಕ್ರವಾರ ಈ ತಂತ್ರವನ್ನು ಪ್ರಯೋಗಿಸಿದರೆ ಎಚ್ಚರಿಕೆ ಎಂದು ಹೇಳಿದರು ವಾಟಾಳ್‌ ನಾಗರಾಜ್‌

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿರುದ್ಧ ಸೆ. 27ರ ಬುಧವಾರ ಕನ್ನಡ ಪರ ಸಂಘಟನೆಗಳು ಸಿಎಂ ಸಿದ್ದರಾಮಯ್ಯ ಅವರ ಮುಂದೆ ಪ್ರತಿಭಟನೆ ನಡೆಸಲಿವೆ. ಶುಕ್ರವಾರ ಸಂಪೂರ್ಣ ಕರ್ನಾಟಕ ಬಂದ್‌ ಆಗಲಿದೆ ಎಂದು ಅವರು ಹೇಳಿದರು. ವಾಟಾಳ್ ನಾಗರಾಜ್, ಕನ್ನಡ ಹೋರಾಟಗಾರರ ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್ ಸೇರಿದಂತೆ 50ಕ್ಕೂ ಅಧಿಕ ಸಂಘಟನೆಗಳಿಂದ ಬಂದ್‌ಗೆ ಕರೆ ನೀಡಲಾಗಿದೆ.

ಇದನ್ನೂ ಓದಿ: Bangalore Bandh : ಬೆಂಗಳೂರು ಬಂದ್‌ ಸಕ್ಸಸ್‌; ಕಾವೇರಿ ಹೋರಾಟಕ್ಕೆ ಜನತೆ ಸ್ವಯಂಪ್ರೇರಿತ ಬೆಂಬಲ

ಶುಕ್ರವಾರ ಏನಿರುತ್ತೆ ಏನಿರಲ್ಲ: ವಾಟಾಳ್‌ ಕೊಟ್ಟ ಲಿಸ್ಟ್‌

-ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್, ಖಾಸಗಿ ಬಸ್, ಓಲಾ, ಉಬರ್, ಟ್ಯಾಕ್ಸಿ, ಆಟೋ ಗೂಡ್ಸ್ ವಾಹನ ಸೇವೆ ಇರುವುದಿಲ್ಲ
-ಶುಕ್ರವಾರ ಮಾಲ್, ಹೋಟೆಲ್, ರೆಸ್ಟೊರೆಂಟ್, ಮಾಲ್, ಮಲ್ಟಿಪ್ಲೆಕ್ಸ್
-ಯಶವಂತಪುರ, ದಾಸನಪುರ ಎಪಿಎಂಸಿ ಮಾರುಕಟ್ಟೆ, ಕೆ.ಆರ್‌ ಮಾರ್ಕೆಟ್‌ ಬಂದ್‌
– ಅಂಗಡಿ ಮಳಿಗೆಗಳು, ಕೈಗಾರಿಕೆಗಳು ಬಂದ್.

ವಾಟಾಳ್‌ ನಾಗರಾಜ್‌ ನೇತೃತ್ವದ ಬಂದ್‌ಗೆ ಮಂಗಳವಾರದ ಬಂದ್‌ಗೆ ಕರೆ ಕೊಟ್ಟ ಸಂಘಟನೆಗಳಲ್ಲದೆ ಹೋಟೆಲ್‌ ಅಸೋಸಿಯೇಷನ್‌, ಓಲಾ ಊಬರ್‌ ಚಾಲಕರ ಸಂಘಟನೆ, ಆದರ್ಶ ಆಟೋ ಸಂಘಟನೆಗಳು ಬೆಂಬಲ ನೀಡಿವೆ. ಹೀಗಾಗಿ ಬಂದ್ ಇನ್ನಷ್ಟು ಪ್ರಖವಾಗುವ ನಿರೀಕ್ಷೆ ಇದೆ. ಆದರೆ, ರಾಜ್ಯದ ಎಲ್ಲ ಭಾಗಗಳಲ್ಲಿ ಯಶಸ್ವಿಯಾಗುವುದು ಡೌಟ್‌. ಕರಾವಳಿ, ಉತ್ತರ ಕರ್ನಾಟಕದಲ್ಲಿ ಕಾವೇರಿ ಹೋರಾಟದ ಕಾವು ಅಷ್ಟಾಗಿ ತಟ್ಟುವುದಿಲ್ಲ. ಆದರೆ, ಬೆಂಗಳೂರು, ಮಂಡ್ಯ, ಮೈಸೂರು, ರಾಮನಗರ ಭಾಗದಲ್ಲಿ ಹೆಚ್ಚು ಪರಿಣಾಮ ಉಂಟುಮಾಡುವ ಸಾಧ್ಯತೆ ಇದೆ.

ಕೇಂದ್ರ ಸರ್ಕಾರ ಮಧ್ಯ ಪ್ರವೇಶಕ್ಕೆ ಆಗ್ರಹ

ಕಾವೇರಿ ನೀರಿನ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಬೇಕು ಎಂದು ಅವರು ಆಗ್ರಹಿಸಿದರು. ರಾಜ್ಯದ ಸಂಸದರು ಸಂಪೂರ್ಣ ನಾಯಪತ್ತೆಯಾಗಿದ್ದಾರೆ. ಅವರಿಗೆ ಕಾವೇರಿ ನೀರು ಬೇಡ್ವಾ ಎಂದು ಕೇಳಿದರು. ಶುಕ್ರವಾರ ಸಂಪೂರ್ಣ ಬಂದ್‌ಗೆ ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದರು.

Continue Reading

ಕ್ರಿಕೆಟ್

World Cup 2023 : ವಿಶ್ವ ಕಪ್​ಗೆ 15 ಸದಸ್ಯರ ಬಾಂಗ್ಲಾದೇಶ ತಂಡ ಪ್ರಕಟ, ಸ್ಟಾರ್ ಆಟಗಾರನೇ ಇಲ್ಲ

ವಿಶ್ವ ಕಪ್​ಗೆ (World Cup 2023) ಆಯ್ಕೆಯಾಗಿರುವ ಬಾಂಗ್ಲಾದೇಶ ತಂಡದನ್ನು ಆಲ್​ರೌಂಡರ್​​ ಶಕೀಬ್ ಅಲ್ ಹಸನ್ ತಂಡವನ್ನು ಮುನ್ನಡೆಸಲಿದ್ದು, ಲಿಟನ್ ದಾಸ್ ಉಪನಾಯಕನ ಪಾತ್ರವನ್ನು ನಿರ್ವಹಿಸಲಿದ್ದಾರೆ.

VISTARANEWS.COM


on

Bangladesh Cricket team
Koo

ನವದೆಹಲಿ: ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಭಾರತದಲ್ಲಿ ನಡೆಯಲಿರುವ ಮುಂಬರುವ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಗಾಗಿ ಬಾಂಗ್ಲಾದೇಶ ಮಂಗಳವಾರ (ಸೆಪ್ಟೆಂಬರ್ 26) ತನ್ನ 15 ಸದಸ್ಯರ ತಂಡವನ್ನು ಅನಾವರಣಗೊಳಿಸಿದೆ. ಆಲ್​ರೌಂಡರ್​​ ಶಕೀಬ್ ಅಲ್ ಹಸನ್ ತಂಡವನ್ನು ಮುನ್ನಡೆಸಲಿದ್ದು, ಲಿಟನ್ ದಾಸ್ ಉಪನಾಯಕನ ಪಾತ್ರವನ್ನು ನಿರ್ವಹಿಸಲಿದ್ದಾರೆ.

ಜುಲೈನಲ್ಲಿ ನಿವೃತ್ತಿ ನಿರ್ಧಾರವನ್ನು ಬದಲಾಯಿಸುವ ಮೂಲಕ ಕ್ರಿಕೆಟ್​ ಕ್ಷೇತ್ರಕ್ಕೆ ಆಘಾತ ನೀಡಿದ್ದ ಅನುಭವಿ ತಮೀಮ್ ಇಕ್ಬಾಲ್ ಅವರನ್ನು ವಿಶ್ವಕಪ್ ತಂಡದಲ್ಲಿ ಸೇರಿಸಿಕೊಳ್ಳಲಾಗಿಲ್ಲ. ಬೆನ್ನುನೋವಿನಿಂದಾಗಿ ಏಷ್ಯಾ ಕಪ್ 2023 ರಲ್ಲಿ ಕಾಣಿಸಿಕೊಳ್ಳದಿದ್ದರೂ, ಅವರು ಫಿಟ್ನೆಸ್ ಅನ್ನು ಮರಳಿ ಪಡೆದುಕೊಂಡಿದ್ದರು. ಅವರು ಇತ್ತೀಚೆಗೆ ತವರಿನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾಗವಹಿಸಿದ್ದರು. ಆದ್ದರಿಂದ, ವಿಶ್ವ ಕಪ್ ತಂಡದಿಂದ ಅವರ ಅನುಪಸ್ಥಿತಿಯು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ಇದನ್ನೂ ಓದಿ : World Cup 2023 : ಮುಂಬರುವ ವಿಶ್ವ ಕಪ್​ ಮಿಸ್ ಮಾಡಿಕೊಳ್ಳಲಿರುವ ಸ್ಟಾರ್​ ಪ್ಲೇಯರ್​ಗಳ ಲಿಸ್ಟ್​ ಇಲ್ಲಿದೆ

ಜುಲೈನಲ್ಲಿ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಬಲಗೈ ವೇಗಿ ಎಬಾದತ್ ಹುಸೇನ್ ಮೊಣಕಾಲು ಗಾಯದಿಂದ ಅವಕಾಶ ಪಡೆಯಲು ವಿಫಲರಾಗಿದ್ದರು. ಅವರೂ ವಿಶ್ವ ಕಪ್​ ತಂಡದಲ್ಲಿ ಸ್ಥಾನ ಪಡೆದಿಲ್ಲ.

ಅನುಭವಿಗಳ ಸೇರ್ಪಡೆ

ತಮೀಮ್ ಅನುಪಸ್ಥಿತಿಯ ಹೊರತಾಗಿಯೂ, ಬಾಂಗ್ಲಾದೇಶದ ಬ್ಯಾಟಿಂಗ್ ಸಾಲಿನಲ್ಲಿ ಮುಷ್ಫಿಕರ್ ರಹೀಮ್, ನಜ್ಮುಲ್ ಹುಸೇನ್ ಶಾಂಟೊ, ಲಿಟನ್ ದಾಸ್ ಮತ್ತು ಶಕೀಬ್ ಅವರಂತಹ ಅನುಭವಿ ಪ್ರಚಾರಕರು ಇದ್ದಾರೆ. ಶಕೀಬ್, ಮೆಹಿದಿ ಹಸನ್ ಮಿರಾಜ್, ನಸುಮ್ ಅಹ್ಮದ್ ಮತ್ತು ಮಹೆದಿ ಹಸನ್ ಅವರ ಉಪಸ್ಥಿತಿಯೊಂದಿಗೆ ಬಾಂಗ್ಲಾದೇಶದ ಸ್ಪಿನ್ ವಿಭಾಗವು ಸಾಕಷ್ಟು ಪ್ರಬಲವಾಗಿದೆ.

ಟಸ್ಕಿನ್ ಅಹ್ಮದ್ ಮತ್ತು ಮುಸ್ತಾಫಿಜುರ್ ರೆಹಮಾನ್ ವೇಗದ ದಾಳಿಯನ್ನು ಮುನ್ನಡೆಸಲಿದ್ದು, ಶೋರಿಫುಲ್ ಇಸ್ಲಾಂ, ಹಸನ್ ಮಹಮೂದ್ ಮತ್ತು ತಂಝಿಮ್ ಹಸನ್ ಕೂಡ ಅವಕಾಶ ಪಡೆದಿದ್ದಾರೆ. ಬಾಂಗ್ಲಾದೇಶ ತನ್ನ ವಿಶ್ವಕಪ್ ಅಭಿಯಾನವನ್ನು ಅಕ್ಟೋಬರ್ 7 ರಂದು ಧರ್ಮಶಾಲಾದಲ್ಲಿ ಅಫ್ಘಾನಿಸ್ತಾನ ವಿರುದ್ಧ ಪ್ರಾರಂಭಿಸಲಿದೆ.

ಬಾಂಗ್ಲಾದೇಶ ತಂಡ: ಶಕೀಬ್ ಅಲ್ ಹಸನ್ (ನಾಯಕ), ಮುಷ್ಫಿಕರ್ ರಹೀಮ್, ಲಿಟನ್ ದಾಸ್ (ಉಪನಾಯಕ), ನಜ್ಮುಲ್ ಹುಸೇನ್ ಶಾಂಟೊ, ಮೆಹಿದಿ ಹಸನ್ ಮಿರಾಜ್, ತೌಹಿದ್ ಹೃದೋಯ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರಹಮಾನ್, ಶೋರಿಫುಲ್ ಇಸ್ಲಾಂ, ಹಸನ್ ಮಹಮೂದ್, ನಸೂಮ್ ಅಹ್ಮದ್, ಮಹೆದಿ ಹಸನ್, ತಂಝೀಮ್ ಹಸನ್ ಸಾಕಿಬ್, ತಂಜಿದ್ ಹಸನ್ ತಮೀಮ್, ಮಹಮುದುಲ್ಲಾ ರಿಯಾದ್.

ಶ್ರೀಲಂಕಾ ತಂಡವೂ ಪ್ರಕಟ

ಶ್ರೀಲಂಕಾದ ಸ್ಟಾರ್ ಆಲ್ರೌಂಡರ್ ವನಿಂದು ಹಸರಂಗ ಗಾಯದ ಸಮಸ್ಯೆಯಿಂದಾಗಿ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿರುವುದರಿಂದ ಮುಂಬರುವ ಏಕ ದಿನ ವಿಶ್ವಕಪ್​​ಗೆ (World Cup 2023) ಶ್ರೀಲಂಕಾ ಮಂಗಳವಾರ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಮೂರನೇ ಹಂತದ ಸ್ನಾಯು ಸೆಳೆತದಿಂದಾಗಿ ಹಸರಂಗ ಟೂರ್ನಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಲಂಕಾ ತಂಡವು ಪ್ರಮುಖ ಬೌಲರ್​ಗಳು ಇಲ್ಲದೇ ಆಡುವಂತಾಗಿದೆ. ತಮ್ಮ ಕೆಲವು ಪ್ರಮುಖ ಆಟಗಾರರನ್ನು ಕಾಡುತ್ತಿರುವ ಗಾಯವು ಅಲ್ಲಿನ ಆಯ್ಕೆದಾದರರನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಇದೀಗ ಪ್ರಮುಖ ಸ್ಪಿನ್ನರ್​ಗಳು ಇಲ್ಲದೇ ತಂಡವನ್ನು ಪ್ರಕಟಿಸಲಾಗಿದೆ.

ಊಹಾಪೋಹಗಳು ಮತ್ತು ಅನುಮಾನಗಳನ್ನು ನಿವಾರಿಸಿದ ದಸುನ್ ಶನಕಾ ಅವರು ನಾಯಕತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ವನಿಂದು ಹಸರಂಗ, ಮಹೇಶ್ ತೀಕ್ಷಣಾ ಮತ್ತು ದಿಲ್ಶಾನ್ ಮಧುಶಂಕಾ ಅವರ ಫಿಟ್ನೆಸ್ ಬಗ್ಗೆ ದೀರ್ಘಕಾಲದ ಕಳವಳ ವ್ಯಕ್ತತೊಂಡಿವೆ. ಶ್ರೀಲಂಕಾದ ಮ್ಯಾನೇಜ್ಮೆಂಟ್ ಈ ವಿಷಯದ ಮೇಲೆ ಬೆಳಕು ಚೆಲ್ಲಿದೆ, ಅವರ ಭಾಗವಹಿಸುವಿಕೆಯು ಅವರ ದೈಹಿಕ ಸ್ಥಿತಿಯ ಮೇಲೆ ಅವಲಂಬಿತವಾಗಿದೆ ಎಂದು ಒತ್ತಿಹೇಳಿದೆ.

ಶ್ರೀಲಂಕಾ ತಂಡ: ದಸುನ್ ಶನಕಾ (ನಾಯಕ), ಕುಸಾಲ್ ಮೆಂಡಿಸ್ (ಉಪನಾಯಕ), ಕುಸಾಲ್ ಪೆರೆರಾ, ಪಥುಮ್ ನಿಸ್ಸಾಂಕಾ, ದಿಮುತ್ ಕರುಣರತ್ನೆ, ಸದೀರಾ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ದುಶಾನ್ ಹೇಮಂತ, ಮಹೇಶ್ ತೀಕ್ಷಾ, ದುನಿತ್ ವೆಲ್ಲಾಗೆ, ಕಸುನ್ ರಜಿತಾ, ಮಥೀಶಾ ಪತಿರಾನಾ, ಲಹಿರು ಕುಮಾರ, ದಿಲ್ಶಾನ್ ಮಧುಶಂಕಾ.

Continue Reading

ಕರ್ನಾಟಕ

Bangalore Bandh : ಬೆಂಗಳೂರು ಬಂದ್‌ ಸಕ್ಸಸ್‌; ಕಾವೇರಿ ಹೋರಾಟಕ್ಕೆ ಜನತೆ ಸ್ವಯಂಪ್ರೇರಿತ ಬೆಂಬಲ

Bangalore bandh : ಬೆಂಗಳೂರು ಬಂದ್‌ ಯಶಸ್ವಿಯಾಗಿ ಮುಕ್ತಾಯವಾಗಿದೆ. ಎಲ್ಲ ವ್ಯವಸ್ಥೆಗಳು ಇದ್ದರೂ ಜನರೇ ಸ್ವಯಂಪ್ರೇರಿತವಾಗಿ ಬಂದ್‌ಗೆ ಬೆಂಬಲ ನೀಡಿದ್ದು ಕಂಡುಬಂತು.

VISTARANEWS.COM


on

Edited by

Bangalore Bandh KG Road
ಯಾವಾಗಲೂ ಗಿಜಿಗುಡುವ ಕೆ.ಜಿ ರಸ್ತೆ ಹೇಗಿತ್ತು ನೋಡಿ
Koo

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದರೂ ತಮಿಳುನಾಡಿಗೆ ನೀರು ಬಿಡುಗಡೆ (Cauvery Water Dispute) ಮಾಡಲೇಬೇಕು ಎಂದು ಆದೇಶ ನೀಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (Cauvery Water Management authority) ಮತ್ತು ಅದು ಹೇಳಿದಂತೆ ನೀರು ಬಿಡುಗಡ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮಗಳನ್ನು ಖಂಡಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ (Karnataka Jala samrakshana samiti) ಕರೆ ನೀಡಿದ್ದ ಮಂಗಳವಾರದ (ಸೆ. 26) ಬೆಂಗಳೂರು ಬಂದ್‌ (Bangalore bandh) ಯಶಸ್ವಿಯಾಗಿದೆ. ಯಾವುದೇ ಗೊಂದಲ, ಗಲಾಟೆ, ಹಿಂಸಾತ್ಮಕ ಘಟನೆಗಳಿಲ್ಲದೆ ಅದು ಸಫಲತೆಯನ್ನು ಕಂಡಿದೆ. ಆದರೆ, ಇದು ಸರ್ಕಾರದ ನಿರ್ಧಾರಗಳ ಮೇಲೆ ಪರಿಣಾಮ ಬೀರುತ್ತದೆಯೇ ಕಾದು ನೋಡಬೇಕು.

ಈ ಬಂದ್‌ ನೂರಾರು ಸಾಮಾಜಿಕ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ವ್ಯಾಪಾರಿಗಳು, ವಾಹನ ಮಾಲೀಕರೇ ಆದರೂ ಅಂತಿಮವಾಗಿ ಇದನ್ನು ಯಶಸ್ವಿಗೊಳಿಸಿದ್ದು ಜನ ಬೆಂಬಲ. ಯಾಕೆಂದರೆ, ಸೆಪ್ಟೆಂಬರ್‌ 29ರಂದು ಕರ್ನಾಟಕ ಬಂದ್‌ ಇರುವುದರಿಂದ ಬೆಂಬಲ ನೀಡುವ ಸಂಘಟನೆಗಳಲ್ಲಿ ವಿಭಜನೆಯಾಗಿತ್ತು. ಕೆಲವರು ತಾವು ಈ ಬಂದ್‌ಗೆ ಬೆಂಬಲ ಕೊಡುವುದಿಲ್ಲ, ಸೆ. 29ರ ಬಂದ್‌ಗೆ ಬೆಂಬ ಕೊಡುವುದಾಗಿ ಪ್ರಕಟಿಸಿದ್ದರು. ಆದರೂ ಒಟ್ಟಾರೆ ಪರಿಣಾಮದಲ್ಲಿ ವ್ಯತ್ಯಾಸವಾಗಲಿಲ್ಲ. ಯಾಕೆಂದರೆ ಸಂಘಟನೆಗಳ ಹಂಗನ್ನು ಮೀರಿ ಜನರು ಈ ಬಂದ್‌ಗೆ ಮೌನ ಬೆಂಬಲವನ್ನು ಸೂಚಿಸಿದ್ದರು.

Bangalore Bandh protest
ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ

ಮುಂಜಾನೆಯಿಂದಲೇ ರಾಜಧಾನಿಯಲ್ಲಿ ಬಂದ್‌ನ ವಾತಾವರಣ ಸ್ಪಷ್ಟವಾಗಿ ಗೋಚರಿಸುತ್ತಿತ್ತು. ಅಲ್ಲಲ್ಲಿ ಪ್ರತಿಭಟನೆಗಳು ನಡೆದವು. ಪ್ರತಿಭಟನೆಗೆ ಕರೆ ನೀಡಿದ ಸಂಘಟನೆಯ ಮುಖ್ಯಸ್ಥರಲ್ಲಿ ಒಬ್ಬರಾದ ಕುರುಬೂರು ಶಾಂತ ಕುಮಾರ್‌ ಅವರನ್ನೂ ಪೊಲೀಸರು ವಶಕ್ಕೆ ಪಡೆದರು. ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ ಸಭೆ ನಡೆಯಿತು. ಅಲ್ಲಿ ಸರ್ಕಾರದ ಮುಂದೆ ಬೇಡಿಕೆಗಳನ್ನು ಮಂಡಿಸಲಾಯಿತು. ಸರ್ಕಾರದ ಪರವಾಗಿ ಸಚಿವ ರಾಮಲಿಂಗಾ ರೆಡ್ಡಿ ಅವರು ಮನವಿ ಸ್ವೀಕರಿಸಿದರು. ಈ ಭರವಸೆಗಳ ಈಡೇರಿಕೆಗೆ ಮೂರು ದಿನಗಳ ಗಡುವನ್ನು ವಿಧಿಸಲಾಗಿದೆ.

Metro station empty
ಮೆಟ್ರೋ ರೈಲಿಗೆ ಜನರೇ ಇಲ್ಲ

ಎಲ್ಲ ವ್ಯವಸ್ಥೆಗಳಿದ್ದರೂ ಜನರೇ ರಸ್ತೆಗೆ ಬಂದಿಲ್ಲ

ನಿಜವೆಂದರೆ, ರಾಜಧಾನಿಯಲ್ಲಿ ಬಂದ್‌ ಘೋಷಣೆಯಾಗಿದ್ದರೂ ಬಸ್‌, ಮೆಟ್ರೋ ರೈಲು, ಆಟೊಗಳು, ಓಲಾ, ಊಬರ್‌ ಟ್ಯಾಕ್ಸಿಗಳು, ಹೋಟೆಲ್‌ಗಳು ತೆರೆದಿದ್ದವು. ಆದರೆ, ಅದನ್ನು ಬಳಸುವ ಜನರೇ ಇರಲಿಲ್ಲ.

ಬಿಎಂಟಿಸಿ ಬಸ್‌ಗಳು ಓಡಾಡಿದರೂ ಖಾಲಿಯಾಗಿದ್ದವು. ಮೆಟ್ರೋ ರೈಲು ಬಹುಭಾಗ ಖಾಲಿಯಾಗಿಯೇ ಓಡಾಡಿತು. ಆಟೊಗಳಲ್ಲಿ ಹೋಗುವವರು ಕಡಿಮೆ ಇದ್ದರು. ರೆಸ್ಟೋರೆಂಟ್‌ಗಳಲ್ಲಿ ಜನ ಸಂದಣಿ ಇರಲಿಲ್ಲ. ಅಂದರೆ ಇಷ್ಟೆಲ್ಲ ವ್ಯವಸ್ಥೆ ಇದ್ದರೂ ಜನರೇ ಮಂಗಳವಾರ ಕಾವೇರಿಗಾಗಿ ಒಂದು ದಿನ ಬಂದ್‌ ಎಂಬ ತೀರ್ಮಾನಕ್ಕೆ ಬಂದಿದ್ದರು. ಹೀಗಾಗಿ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಸರ್ಕಾರಿ ಕಚೇರಿಗಳಲ್ಲಿ ಜನ ಇರಲಿಲ್ಲ.

ಇದನ್ನೂ ಓದಿ: Bangalore Bandh : 13 ವಿಮಾನ ಸಂಚಾರ ಕ್ಯಾನ್ಸಲ್‌, ಮೆಟ್ರೋ ಫುಲ್‌ ಖಾಲಿ, ಬಿಎಂಟಿಸಿ ಬಸ್‌ಗಳಿವೆ, ಜನರೇ ಇಲ್ಲ

ವಿಶೇಷವೆಂದರೆ ಬೆಂಗಳೂರಿನಲ್ಲಿ ಮಂಗಳವಾರ ಬಂದ್‌ ನಡೆದೇ ನಡೆಯುತ್ತದೆ. ಅಲ್ಲಿ ಹೋಗಿ ಕಷ್ಟಕ್ಕೆ ಸಿಕ್ಕಿ ಹಾಕಿಕೊಳ್ಳುವುದು ಬೇಡ ಎಂದು ವಿಮಾನ ಪ್ರಯಾಣಿಕರು ನಿರ್ಧಾರ ಮಾಡಿದ ಪರಿಣಾಮವಾಗಿ ಬೆಂಗಳೂರಿಗೆ ಮಂಗಳವಾರ ಬರಬೇಕಾಗಿದ್ದ 13 ವಿಮಾನಗಳ ಸಂಚಾರವೇ ರದ್ದಾಗಿತ್ತು.

Bangalore Bandh

ಶಾಲೆ, ಕಾಲೇಜು ಬಂದ್‌; ಮಾಲ್‌, ಥಿಯೇಟರ್‌ಗಳ ಬೆಂಬಲ

ಈ ನಡುವೆ, ಬಂದ್‌ ನಿಮಿತ್ತ ಬೆಂಗಳೂರಿನ ಎಲ್ಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಹೀಗಾಗಿ ಮಕ್ಕಳು ಮತ್ತು ಮನೆಯವರು ನಿರಾಳರಾಗಿದ್ದರು. ಇತ್ತ ದೊಡ್ಡ ದೊಡ್ಡ ಮಾಲ್‌ಗಳು ಬಂದ್‌ಗೆ ಬೆಂಬಲ ನೀಡಿದ್ದರು. ಚಿತ್ರೋದ್ಯಮದ ಬೆಂಬಲ ಇದ್ದಿದ್ದರಿಂದ ಸಿನಿಮಾ ಥಿಯೇಟರ್‌ಗಳು ಸಂಜೆವರೆಗೆ ಓಪನ್‌ ಆಗಲಿಲ್ಲ.

ಪೊಲೀಸ್‌ ಬಲ ಪ್ರಯೋಗದ ಆರೋಪ

ಇದರ ನಡುವೆ ಬಂದ್‌ನ್ನು ವಿಫಲಗೊಳಿಸಲು ಪೊಲೀಸ್‌ ಬಲ ಪ್ರಯೋಗ ಮಾಡಿದ ಆರೋಪ ಎದುರಾಗಿದೆ. ಬಲವಂತದ ಬಂದ್‌ಗೆ ಅವಕಾಶವಿಲ್ಲ, ಮೆರವಣಿಗೆ ನಡೆಸುವಂತಿಲ್ಲ, ಬಹಿರಂಗ ಪ್ರತಿಭಟನೆಗೆ ಅವಕಾಶವಿಲ್ಲ ಎಂಬ ನಿರ್ಬಂಧಗಳನ್ನು ಹಾಕಿದ ಪೊಲೀಸರು ಬಂದ್‌ನ ಮುನ್ನಾ ದಿನವೇ 1000ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದಿದ್ದರು. ಇಷ್ಟೆಲ್ಲ ಮಾಡಿದರೂ ಬಂದ್‌ ಸಫಲವಾಗಿದೆ ಎಂದು ಬಿಜೆಪಿ ಮತ್ತು ಜೆಡಿಎಸ್‌ಗಳು ಸಂಘಟನೆಗಳನ್ನು ಅಭಿನಂದಿಸಿವೆ.

Bangalore bandh protesters arrested

ಇನ್ನು ಸೆ. 29ರ ಬಂದ್‌. ಈಗ ಈ ಬಂದ್‌ ಮುಕ್ತಾಯವಾಗಿರುವಂತೆಯೇ ಸೆಪ್ಟೆಂಬರ್‌ 29ರ ಕರ್ನಾಟಕ ಬಂದ್‌ಗೆ ವೇದಿಕೆ ಸಿದ್ಧವಾಗಿದೆ. ಅಂದು ಪೂರ್ಣವಾಗಿ ಕರ್ನಾಟಕ ಬಂದ್‌ ಆಗಲಿದೆ ಎಂದಿದ್ದಾರೆ ವಾಟಾಳ್‌ ನಾಗರಾಜ್‌.

ಇದನ್ನೂ ಓದಿ: Bangalore Bandh: ಬೆಂಗಳೂರು ಬಂದ್‌ ಹತ್ತಿಕ್ಕಲು ಪೊಲೀಸ್‌ ಬಲ ಪ್ರಯೋಗ ನಡೆಯಿತೇ? ಕಮಿಷನರ್‌ ಹೇಳಿದ್ದೇನು?

Continue Reading

ಕೋರ್ಟ್

Supreme Court: ಜಡ್ಜ್ ನೇಮಕಾತಿ, ಮತ್ತೆ ಕೇಂದ್ರ-ಸುಪ್ರೀಂ ಜಟಾಪಟಿ! 10 ತಿಂಗಳಾದ್ರೂ ಶಿಫಾರಸು ಕ್ಲಿಯರ್ ಮಾಡಿಲ್ಲ ಸರ್ಕಾರ

Supreme Court: ಜಡ್ಜ್ ನೇಮಕಾತಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ಶಿಫಾರಸು ಮಾಡಿರುವ ಹೆಸರಗಳನ್ನು ವಾಪಸ್ ಕೊಲಿಜಿಯಂಗೆ ಕಳುಹಿಸಲು ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ.

VISTARANEWS.COM


on

Edited by

Supreme Court
Koo

ನವದೆಹಲಿ: ಜಡ್ಜ್‌ಗಳ ನೇಮಕಾತಿ ವಿಷಯಕ್ಕೆ (Appointment of Judges) ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ (Supreme Court) ಹಾಗೂ ಕೇಂದ್ರ ಸರ್ಕಾರ (Central Government) ನಡುವೆ ಮತ್ತೊದು ಸುತ್ತಿನ ಜಟಾಪಟಿ ಶುರುವಾಗುವ ಸಾಧ್ಯತೆಗಳಿವೆ. ಹೈಕೋರ್ಟ್‌ ಶಿಫಾರಸಗಳನ್ನು (High court Recommendations) ಕೊಲಿಜಿಯಂಗೆ (Collegium) ಏಕೆ ಕಳುಹಿಸಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಮಂಗಳವಾರ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಹೈಕೋರ್ಟ್‌ ನ್ಯಾಯಮೂರ್ತಿಗಳ ಹೆಸರು ಅಂತಿಮಗೊಳಿಸುವ ಸಂಬಂಧ ಕೇಂದ್ರ ಸರ್ಕಾರವು ವಿಳಂ ಧೋರಣೆಯನ್ನು ಅನುಸರಿಸುತ್ತಿದೆ ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರಿದ್ದ ಪೀಠವು ಹೇಳಿದೆ. ಅಲ್ಲದೇ ಈ ವಿಷಯವನ್ನು ಸುಪ್ರೀಂ ಕೋರ್ಟ್ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ತಿಳಿಸಿದೆ.

ಹೆಸರುಗಳನ್ನು ತೆರವುಗೊಳಿಸುವಲ್ಲಿ ಕೇಂದ್ರವು ವಿಳಂಬ ಮಾಡುತ್ತಿದೆ ಎಂದು ಆರೋಪಿಸಿರುವ ಅರ್ಜಿಗಳನ್ನು ಆಲಿಸಿದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರ ಪೀಠವು ಈ ವಿಷಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದರು. ಹೈಕೋರ್ಟ್‌ನಿಂದ ಶಿಫಾರಸು ಮಾಡಿದ 80 ಹೆಸರುಗಳು 10 ತಿಂಗಳ ಅವಧಿಗೆ ಬಾಕಿ ಉಳಿದಿವೆ ಎಂದು ನ್ಯಾಯಮೂರ್ತಿ ಕೌಲ್ ಕೇಂದ್ರ ಸರ್ಕಾರವನ್ನು ಉದ್ದೇಶಿಸಿ ಹೇಳಿದರು.

ಹೆಸರನ್ನು ತೆರವುಗೊಳಿಸುವುದರಲ್ಲಿ ಕೇಂದ್ರ ಸರ್ಕಾರದ ವಿಳಂಭವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ದ್ವಿಸದಸ್ಯ ಪೀಠವು, 26 ನ್ಯಾಯಾಧೀಶರ ವರ್ಗಾವಣೆ ಮತ್ತು ‘ಸೂಕ್ಷ್ಮ ಹೈಕೋರ್ಟ್’ನಲ್ಲಿ ಮುಖ್ಯ ನ್ಯಾಯಮೂರ್ತಿ ನೇಮಕ ಬಾಕಿ ಇದೆ ಎಂದು ಪೀಠ ಹೇಳಿದೆ. ಹೈಕೋರ್ಟ್ ಶಿಫಾರಸು ಮಾಡಿದ್ದರೂ ಕೊಲಿಜಿಯಂಗೆ ಕಳುಹಿಸಲಾಗದ ಎಷ್ಟು ಹೆಸರುಗಳು ಬಾಕಿ ಉಳಿದಿವೆ ಎಂಬ ಮಾಹಿತಿ ನನ್ನ ಬಳಿ ಇದೆ ಎಂದು ನ್ಯಾಯಮೂರ್ತಿ ಕೌಲ್ ಹೇಳಿದರು.

ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ಕೇಂದ್ರ ಸರ್ಕಾರದ ಪ್ರತಿಕ್ರಿಯೆಗೆ ವಾರ ಕಾಲ ಸಮಯ ಕೇಳಿದರು. ಪೀಠವು ಕೇಂದ್ರ ಸರ್ಕಾರಕ್ಕೆ ಎರಡು ವಾರಗಳ ಸಮಯವನ್ನು ನೀಡಿದೆ. ಅಲ್ಲದೇ, ಕೇಂದ್ರ ಸರ್ಕಾರದ ಪ್ರತಿಕ್ರಿಯೆಯೊಂದಿಗೆ ಮರಳಬೇಕು ಎಂದು ಅಟಾರ್ನಿ ಜನರಲ್‌ಗೆ ಸೂಚಿಸಿ, ವಿಚಾರಣೆಯನ್ನು ಅಕ್ಟೋಬರ್ 9ಕ್ಕೆ ಮುಂದೂಡಿತು.

ಈ ಸುದ್ದಿಯನ್ನೂ ಓದಿ: Supreme Court: ಮುಸ್ಲಿಂ ಬಾಲಕನಿಗೆ ಶಾಲೆಯಲ್ಲಿ ಕಪಾಳ ಮೋಕ್ಷ, ಇದು ದೇಶದ ಅಂತಃಸಾಕ್ಷಿ ಅಲುಗಾಡಿಸುವ ಕೇಸ್!

ನ್ಯಾಯಮೂರ್ತಿಗಳ ನೇಮಕಾತಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ನಡೆದುಕೊಳ್ಳುತ್ತಿರುವ ರೀತಿಗೆ ನಾನು ಬಹಳಷ್ಟು ಹೇಳಬೇಕಿದೆ. ಆದರೆ, ನನ್ನಷ್ಟಕ್ಕೆ ತಡೆದುಕೊಳ್ಳುತ್ತಿದ್ದೇನೆ. ನಾನು ಶಾಂತವಾಗಿದ್ದೇನೆ. ಯಾಕೆಂದರೆ, ಅಟಾರ್ನಿ ಜನರಲ್ ಒಂದು ವಾರ ಸಮಯ ಕೇಳಿದ್ದಾರೆ. ಆದರೆ, ಮುಂದಿನ ದಿನಾಂಕದಲ್ಲಿ ನಾನು ಸುಮ್ಮನೆ ಇರಲಾರೆ ಎಂದು ಜಸ್ಟೀಸ್ ಕೌಲ್ ಅವರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

ನ್ಯಾಯಮೂರ್ತಿಗಳ ನೇಮಕಾತಿ ವಿಷಯವು ಯಾವಾಗಲೂ ಸುಪ್ರೀಂ ಕೋರ್ಟ್ ಹಾಗೂ ಕಾರ್ಯಾಂಗದ ನಡುವಿನ ಜಟಾಪಟಿ ವಿಷಯವಾಗಿ ಮಾರ್ಪಟ್ಟಿದೆ. ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಕೇಂದ್ರ ಸರ್ಕಾರದ ಪಾತ್ರ ಇರಬೇಕು ಎಂದು ಕೆಲವು ಕೇಂದ್ರ ಸಚಿವರು ವಾದಿಸುತ್ತಾರೆ. ನ್ಯಾಯಾಧೀಶರ ನೇಮಕಾತಿಯಲ್ಲಿ ಸರ್ಕಾರದ ದೊಡ್ಡ ಪಾತ್ರವನ್ನು ನೀಡುವ ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಕಾಯ್ದೆಯನ್ನು ಸುಪ್ರೀಂ ಕೋರ್ಟ್ ಅಕ್ಟೋಬರ್ 2015 ರಲ್ಲಿ ರದ್ದುಗೊಳಿಸಿತ್ತು.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading
Advertisement
Vataka Nagaraj Karnataka Bandh
ಕರ್ನಾಟಕ3 mins ago

Bangalore Bandh : ಶುಕ್ರವಾರ ಇಡೀ ಕರ್ನಾಟಕ ಬಂದ್‌; ಸೆಕ್ಷನ್‌ 144 ಹಾಕಿದ್ರೆ ಹುಷಾರ್‌ ಎಂದು ಗುಡುಗಿದ ವಾಟಾಳ್‌

Bangladesh Cricket team
ಕ್ರಿಕೆಟ್30 mins ago

World Cup 2023 : ವಿಶ್ವ ಕಪ್​ಗೆ 15 ಸದಸ್ಯರ ಬಾಂಗ್ಲಾದೇಶ ತಂಡ ಪ್ರಕಟ, ಸ್ಟಾರ್ ಆಟಗಾರನೇ ಇಲ್ಲ

Bangalore Bandh KG Road
ಕರ್ನಾಟಕ34 mins ago

Bangalore Bandh : ಬೆಂಗಳೂರು ಬಂದ್‌ ಸಕ್ಸಸ್‌; ಕಾವೇರಿ ಹೋರಾಟಕ್ಕೆ ಜನತೆ ಸ್ವಯಂಪ್ರೇರಿತ ಬೆಂಬಲ

Supreme Court
ಕೋರ್ಟ್46 mins ago

Supreme Court: ಜಡ್ಜ್ ನೇಮಕಾತಿ, ಮತ್ತೆ ಕೇಂದ್ರ-ಸುಪ್ರೀಂ ಜಟಾಪಟಿ! 10 ತಿಂಗಳಾದ್ರೂ ಶಿಫಾರಸು ಕ್ಲಿಯರ್ ಮಾಡಿಲ್ಲ ಸರ್ಕಾರ

Rishabh Pant
ಕ್ರಿಕೆಟ್59 mins ago

World Cup 2023 : ಮುಂಬರುವ ವಿಶ್ವ ಕಪ್​ ಮಿಸ್ ಮಾಡಿಕೊಳ್ಳಲಿರುವ ಸ್ಟಾರ್​ ಪ್ಲೇಯರ್​ಗಳ ಲಿಸ್ಟ್​ ಇಲ್ಲಿದೆ

Soldier
ಕರ್ನಾಟಕ1 hour ago

Belagavi News: ಹಣಕಾಸು ವಿಚಾರಕ್ಕೆ ಯೋಧನಿಂದಲೇ ಯೋಧನ ಮೇಲೆ ಗುಂಡಿನ ದಾಳಿ

DK Shivakumar and CM Siddaramaiah
ಕರ್ನಾಟಕ1 hour ago

Cauvery Dispute : 3000 ಕ್ಯೂಸೆಕ್‌ ನೀರು ಬಿಡುಗಡೆ ಆದೇಶವನ್ನೂ ಪಾಲಿಸುತ್ತಾ ಸರ್ಕಾರ?; ಸಿಎಂ ಹೇಳಿದ್ದೇನು?

Fact Check, PFI Attack on Soldier is Fake Says Kerala Police
Fact Check1 hour ago

Fact Check: ಕೇರಳ ಯೋಧನ ಮೇಲೆ ಪಿಎಫ್ಐ ದಾಳಿ! ಪ್ರಸಿದ್ಧಿಗಾಗಿ ‘ಫೇಕ್’ ಅಟ್ಯಾಕ್ ಕತೆ ಕಟ್ಟಿದ್ನಾ ಸೈನಿಕ?

Ruturaj Gaikwad
ಕ್ರಿಕೆಟ್2 hours ago

Ruturaj Gaikwad : ಚೀನಾಗೆ ಹೊರಡುವ ಮೊದಲು ಪುಣೆಯ ಗಣೇಶ ಮಂದಿರಕ್ಕೆ ಭೇಟಿ ನೀಡಿದ ಋತುರಾಜ್​

BJP Workers Protest
ಕರ್ನಾಟಕ2 hours ago

BJP Protest: ಕೋಲಾರ ಸಂಸದ ಮುನಿಸ್ವಾಮಿ ಜತೆ ಅನುಚಿತ ವರ್ತನೆಗೆ ಆಕ್ರೋಶ; ಶಾಸಕ, ಎಸ್‌ಪಿ ವಿರುದ್ಧ ಬಿಜೆಪಿ ಪ್ರತಿಭಟನೆ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ17 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ1 day ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ1 day ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ1 day ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ1 day ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ2 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

ಟ್ರೆಂಡಿಂಗ್‌