Dina Bhavishya: ಈ ರಾಶಿಯವರಿಗೆ ಕೂಡಿ ಬರಲಿದೆ ಕಂಕಣಭಾಗ್ಯ - Vistara News

ಭವಿಷ್ಯ

Dina Bhavishya: ಈ ರಾಶಿಯವರಿಗೆ ಕೂಡಿ ಬರಲಿದೆ ಕಂಕಣಭಾಗ್ಯ

Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷದ ನವಮಿ/ ದಶಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಧನಸ್ಸು ರಾಶಿಯಿಂದ ಸೋಮವಾರ ಸಂಜೆ 04:15ಕ್ಕೆ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಮೇಷ ರಾಶಿಯವರು ಇಂದು ದೈಹಿಕ ಶ್ರಮ ಹೆಚ್ಚಲಿದೆ. ಸಂಶಯಾಸ್ಪದವಾದ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಆಪ್ತರಿಂದ ಸಿಹಿ ಸುದ್ದಿ ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಕನ್ಯಾ ರಾಶಿಯವರಿಗೆ ದೀರ್ಘಕಾಲದ ಕೆಲಸ ಕಾರ್ಯಗಳು ಇಂದು ಯಶಸ್ಸನ್ನು ತಂದು ಕೊಡಲಿದೆ. ಆದಾಯದ ಮೂಲ ಹೆಚ್ಚಾಗಲಿದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ, ಕುಟುಂಬದ ವಾತಾವರಣ ಹದಗೆಡುವ ಸಾಧ್ಯತೆ ಇದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (05-03-2024)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ
ತಿಥಿ: ನವಮಿ 08:03/ ದಶಮಿ 30:30 ವಾರ: ಮಂಗಳವಾರ
ನಕ್ಷತ್ರ: ಮೂಲಾ 15:58 ಯೋಗ: ಸಿದ್ಧಿ 14:07
ಕರಣ: ಗರಜ 08:03 ಅಮೃತ ಕಾಲ: ಬೆಳಗ್ಗೆ 09:42 ರಿಂದ 11:16ರವರೆಗೆ
ದಿನದ ವಿಶೇಷ: ಸೌಕೂರು ದುರ್ಗಾ ಪರಮೇಶ್ವರಿ ರಥ, ಬ್ಯಾಡಗಿ ಕಲ್ಲೇಶ್ವರ ಮಾರುತಿ ರಥ

ಸೂರ್ಯೋದಯ : 6:33   ಸೂರ್ಯಾಸ್ತ : 06:29

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಇಂದು ದೈಹಿಕ ಶ್ರಮ ಹೆಚ್ಚಲಿದೆ. ಸಂಶಯಾಸ್ಪದವಾದ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಆಪ್ತರಿಂದ ಸಿಹಿ ಸುದ್ದಿ ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಸಂಗಾತಿಯ ಮಧುರ ಮಾತುಗಳು ಹಿತವೇನಿಸುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಕುಟುಂಬದ ಆಪ್ತರಿಂದ ಆರ್ಥಿಕ ಸಹಾಯವನ್ನು ಬೇಡುವರು. ಮಾನಸಿಕ ಒತ್ತಡ ಹೆಚ್ಚಾಗಲಿದೆ. ವಿದ್ಯಾರ್ಥಿಗಳು ಮನೋಬಲ ಹೆಚ್ಚಿಸಿಕೊಳ್ಳುವುದು ಅವಶ್ಯಕ ಇದೆ. ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗುವುದು. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3

Horoscope Today

ಮಿಥುನ: ಸದಾ ಕಲ್ಪನೆಯಲ್ಲಿ ಕನಸುಗಳನ್ನು ಕಾಣುವಿರಿ. ಆರ್ಥಿಕವಾಗಿ ಸಹಾಯ ಮಾಡಿ ನೀವು ಹಣಕಾಸಿನ ಸಮಸ್ಯೆಯಲ್ಲಿ ಸಿಲುಕುವುದು ಬೇಡ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 1

Horoscope Today

ಕಟಕ: ಕುಟುಂಬ ಸದಸ್ಯರಿಂದ ಆರ್ಥಿಕ ಬೆಂಬಲ ಸಿಗಲಿದೆ. ಉದ್ಯೋಗಿಗಳಿಗೆ ಶುಭಫಲ. ಹಣದ ಹರಿವು ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆಪ್ತ ವ್ಯಕ್ತಿಗಳೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಕೆಲವು ಘಟನೆಗಳು ಮನಸ್ಸಿನ ಮೇಲೆ ಪರಿಣಾಮ ಬೀರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಹೋದ್ಯೋಗಿಗಳಿಂದ ಬೆಂಬಲ ಸಿಗಲಿದೆ. ಕ್ಷೇತ್ರ ದರ್ಶನ ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ದೀರ್ಘಕಾಲದ ಕೆಲಸ ಕಾರ್ಯಗಳು ಇಂದು ಯಶಸ್ಸನ್ನು ತಂದು ಕೊಡಲಿದೆ. ಆದಾಯದ ಮೂಲ ಹೆಚ್ಚಾಗಲಿದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ, ಕುಟುಂಬದ ವಾತಾವರಣ ಹದಗೆಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆತ್ಮವಿಶ್ವಾಸದಿಂದ ಕೆಲಸಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವಿರಿ. ಹಣಕಾಸು, ಉದ್ಯೋಗ ಹಾಗೂ ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಈ ಹಿಂದೆ ನಿಮ್ಮನ್ನು ದ್ವೇಷಿಸುತ್ತಿದ್ದ ಜನರು ನಿಮ್ಮೊಂದಿಗೆ ಪ್ರೀತಿಯಿಂದ ವರ್ತಿಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಕಾಲ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಆರೋಗ್ಯದ ಕುರಿತು ಕಾಳಜಿ ಇರಲಿ. ನ್ಯಾಯಾಲಯದಲ್ಲಿರುವ ವ್ಯಾಜ್ಯಗಳು ವಿಜಯವನ್ನು ತಂದುಕೊಡುವ ಸಾಧ್ಯತೆ ಇದೆ. ಹಣಕಾಸು, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಹಾದಿ ಅತ್ಯವಶ್ಯಕ. ಹಣಕಾಸು ವಿಷಯದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಮಿಶ್ರಫಲ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ಬುದ್ಧಿವಂತಿಕೆಯಿಂದ ಕೆಲಸಕಾರ್ಯಗಳಲ್ಲಿ ಯಶಸ್ಸು ಕೀರ್ತಿ ಸಿಗುವುದು. ಕೋಪ ಅಪಾಯ ತರುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕ ಲಾಭ ಸಿಗಲಿದೆ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ದುಂದುವೆಚ್ಚವನ್ನು ತಪ್ಪಿಸಿ. ಬುದ್ದಿವಂತಿಕೆಯಿಂದ ಕೆಲಸಮಾಡಿ ವ್ಯರ್ಥ ಪ್ರಯತ್ನ ಮಾಡುವುದು ಬೇಡ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

Horoscope Today

ಮೀನ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಪ್ರಗತಿ. ಸಂಗಾತಿ ಇಂದು ನಿಮ್ಮೊಂದಿಗೆ ಮುಖ್ಯ ವಿಷಯದ ಕುರಿತು ಚರ್ಚಿಸಬಹುದು. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ತದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಧನಸ್ಸು ರಾಶಿಯಿಂದ ಶನಿವಾರ ಬೆಳಗ್ಗೆ 11:35ಕ್ಕೆ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮಿಥುನ ರಾಶಿಯವರು ಯಾರಾದರೂ ನಿಮ್ಮ ಸಹಾಯ ಬೇಡಿ ಬರುವರು, ವಿಮರ್ಶಿಸಿ ಸಹಾಯ ಮಾಡಿ. ಆರ್ಥಿಕ ಪ್ರಗತಿ ದಿನದ ಮಟ್ಟಿಗೆ ಸಾಧಾರಣವಾಗಿರಲಿದೆ. ಯಾರಾದರೂ ನಿಮ್ಮ ಭಾವನೆಗಳನ್ನು ನಿರಾಸೆ ಮಾಡುವ ಸಾಧ್ಯತೆ ಇದೆ, ಅವರ ಮಾತಿಗೆ ಗಮನಕೊಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕಟಕ ರಾಶಿಯವರು ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರಿಕೆ ಇರಲಿ. ಕೆಲವು ಆಘಾತಗಳನ್ನು ಎದುರಿಸುವುದರಿಂದ ಧೈರ್ಯದಿಂದ ಇರಿ. ನಿಮ್ಮ ಆಸೆ-ಆಕಾಂಕ್ಷೆಗಳು ಯಶಸ್ಸನ್ನು ತಂದುಕೊಡಲಿವೆ. ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (26-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ತದಿಗೆ 18:05 ವಾರ: ಭಾನುವಾರ
ನಕ್ಷತ್ರ: ಮೂಲಾ 10:34 ಯೋಗ: ಸಾಧ್ಯ 08:29
ಕರಣ: ವಣಿಜ 06:34 ಅಮೃತ ಕಾಲ: ಬೆಳಗಿನ ಜಾವ 05:30 ರಿಂದ 07:04
ದಿನದ ವಿಶೇಷ: ಸಂಕಷ್ಟಹರ ಚತುರ್ಥಿ

ಸೂರ್ಯೋದಯ : 05:53   ಸೂರ್ಯಾಸ್ತ : 06:41

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ:
ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆಪ್ತರ ವರ್ತನೆಯಿಂದ ನಿಮ್ಮ ಮನಸ್ಸಿಗೆ ನೋವು ತರುವ ಸಾಧ್ಯತೆಗಳು ಹೆಚ್ಚು, ತಾಳ್ಮೆಯಿಂದ ಇರಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ತಲೆದೋರಬಹುದು ಮಾತಿನಲ್ಲಿ ಹಿಡಿತವಿರಲಿ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ಆರೋಗ್ಯದ ಕುರಿತು ವಿಶೇಷ ಕಾಳಜಿ ಇರಲಿ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಷಭ:ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಪ್ರಗತಿಯೊಂದಿಗೆ ಲಾಭ ಪಡೆಯುವಿರಿ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ನಿಮ್ಮ ಶ್ರಮಕ್ಕೆ ಪ್ರತಿಫಲ ಸಿಗಲಿದೆ. ಆಹಾರ ಕ್ರಮದಲ್ಲಿ ವ್ಯತ್ಯಾಸದಿಂದಾಗಿ ಸ್ವಲ್ಪ ಆರೋಗ್ಯದ ಕಡೆಗೆ ಗಮನ ಹರಿಸಿ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಿಥುನ:ಯಾರಾದರೂ ನಿಮ್ಮ ಸಹಾಯ ಬೇಡಿ ಬರುವರು, ವಿಮರ್ಶಿಸಿ ಸಹಾಯ ಮಾಡಿ. ಆರ್ಥಿಕ ಪ್ರಗತಿ ದಿನದ ಮಟ್ಟಿಗೆ ಸಾಧಾರಣವಾಗಿರಲಿದೆ. ಯಾರಾದರೂ ನಿಮ್ಮ ಭಾವನೆಗಳನ್ನು ನಿರಾಸೆ ಮಾಡುವ ಸಾಧ್ಯತೆ ಇದೆ, ಅವರ ಮಾತಿಗೆ ಗಮನಕೊಡದೆ ಕಾರ್ಯದಲ್ಲಿ ಮುನ್ನುಗ್ಗಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಹೊಸ ಭರವಸೆಯ ಆಶಾಭಾವನೆ ಮೂಡಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ: ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರಿಕೆ ಇರಲಿ. ಕೆಲವು ಆಘಾತಗಳನ್ನು ಎದುರಿಸುವುದರಿಂದ ಧೈರ್ಯದಿಂದ ಇರಿ. ನಿಮ್ಮ ಆಸೆ-ಆಕಾಂಕ್ಷೆಗಳು ಯಶಸ್ಸನ್ನು ತಂದುಕೊಡಲಿವೆ. ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕವಾಗಿ ಲಾಭ ಕಡಿಮೆ ಇರಲಿದೆ. ಹೊಸ ಆಲೋಚನೆಗಳು ನಿಮ್ಮನ್ನು ಸೃಜನಾತ್ಮಕವಾಗಿ ಏನಾದರೂ ಮಾಡಲು ಪ್ರೇರೇಪಿಸುತ್ತದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ಕುಟುಂಬದ ಆಪ್ತರೊಂದಿಗೆ ಸಂತಸ ಹಂಚಿಕೊಳ್ಳವಿರಿ. ಹಣಕಾಸು ಪರಿಸ್ಥಿತಿ ಸಾಧಾರಣವಾಗಿರಲಿದ್ದು, ದಿನದ ಮಟ್ಟಿಗೆ ಖರ್ಚು ಇರಲಿದೆ. ದುಬಾರಿ ವಸ್ತುಗಳನ್ನು ಖರೀದಿಸುವ ಮುನ್ನ ನಿಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಹಾಸಿಗೆ ಇದ್ದಷ್ಟು ಕಾಲು ಚಾಚಿ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಪ್ರಭಾವಿ ಜನರ ಬೆಂಬಲ ಸಿಗಲಿದೆ. ಇದರಿಂದ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ. ಒಡಹುಟ್ಟಿದವರ ಸಹಕಾರ ಸಿಗಲಿದೆ. ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನಾಡಿ ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ: ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡಿ, ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಇಂದು ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ. ಪ್ರಯಾಣದಿಂದ ಲಾಭ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ಭಾವನಾ ಜೀವಿಗಳಾದ ನೀವು ನಕಾರಾತ್ಮಕ ಆಲೋಚನೆಗಳಿಂದ ದೂರ ಇರಿ. ಅಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ, ಕ್ಷೇತ್ರ ದರ್ಶನ ಪಡೆದು ಮಾನಸಿಕ ನೆಮ್ಮದಿ ತಂದುಕೊಳ್ಳುವುದು ಅವಶ್ಯಕ. ಮಕ್ಕಳ ಆರೋಗ್ಯದ ಕಡೆಗೆ ಗಮನ ಹರಿಸಿ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಪರಿಸ್ಥಿತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಮಕರ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಕೆಲಸ ಕಾರ್ಯಗಳಲ್ಲಿ ಬಳಸಿಕೊಂಡರೆ ಇನ್ನೂ ಹೆಚ್ಚು ಆಕರ್ಷಕ ವ್ಯಕ್ತಿತ್ವ ವಿಕಸನ ಆಗುತ್ತದೆ. ಆರೋಗ್ಯ ಉತ್ತಮವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಅತಿಥಿಗಳ ಆಗಮನ ಸಂತಸ ತರುವುದು. ಆತ್ಮವಿಶ್ವಾಸದ ಹೊಸ ಭರವಸೆ ಮೂಡಲಿದೆ. ಹೂಡಿಕೆಯ ಲಾಭ ಇಂದು ಉಪಯೋಗಕ್ಕೆ ಬರುವುದು. ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದು ಕೊಡಲಿದೆ. ಆರೋಗ್ಯ, ಉದ್ಯೋಗದಲ್ಲಿ ಉತ್ತಮ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮೀನ: ಅತಿರೇಕದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಕೋಪಗೊಳ್ಳುವಂತೆ ಉದ್ರೇಕವಾಗುವ ವಿಷಯಗಳಿಂದ ದೂರ ಇರಿ. ತಾಳ್ಮೆಯಿಂದ ವರ್ತಿಸಿ. ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಕುಟುಂಬದ ಆಪ್ತರಿಂದ ಈ ರಾಶಿಯವರಿಗೆ ಸಿಗಲಿದೆ ಗುಡ್‌ ನ್ಯೂಸ್‌

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಬಿದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina bhavishya
Koo

ಚಂದ್ರನು ಧನಸ್ಸು ರಾಶಿಯಿಂದ ಶನಿವಾರ ಬೆಳಗ್ಗೆ 11:35ಕ್ಕೆ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಮಿಥುನ ರಾಶಿಯವರು ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸ್ನೇಹಿತರು, ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ, ಉಡುಗೊರೆ ಸಿಗುವ ಸಾಧ್ಯತೆ ಇದೆ. ಕನ್ಯಾ ರಾಶಿಯವರು ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಭೂ ಸಂಬಂಧಿ, ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದ್ದು ಲಾಭವಾಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (25-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಬಿದಿಗೆ 18:57 ವಾರ: ಶನಿವಾರ
ನಕ್ಷತ್ರ: ಜೇಷ್ಠಾ 10:35 ಯೋಗ: ಸಿದ್ದಿ 10:05
ಕರಣ: ತೈತುಲ 07:14 ಅಮೃತ ಕಾಲ: ಬೆಳಗಿನ ಜಾವ 04:12 ರಿಂದ 05:48
ದಿನದ ವಿಶೇಷ: ನಾರದ ಜಯಂತಿ

ಸೂರ್ಯೋದಯ : 05:53   ಸೂರ್ಯಾಸ್ತ : 06:41

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ
6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ:ಹಣದ ಹೂಡಿಕೆ ಕುರಿತು ಆಲೋಚನೆ ಮಾಡುವಿರಿ. ಹಾಸ್ಯದ ಮನೋವೃತ್ತಿ ಇತರರನ್ನು ಆಕರ್ಷಿಸುತ್ತದೆ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸ್ನೇಹಿತರು, ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ, ಉಡುಗೊರೆ ಸಿಗುವ ಸಾಧ್ಯತೆ ಇದೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಸೌಜನ್ಯದಿಂದ ವರ್ತಿಸಿ. ಯಾವುದೇ ಆತುರದ ಮಾತುಗಳನ್ನಾಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಒತ್ತಡದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರಲಿದೆ. ನ್ಯಾಯಾಲಯದಲ್ಲಿರುವ ವ್ಯಾಜ್ಯ ಪ್ರಕರಣಗಳು ನಿಮಗೆ ವಿಜಯವನ್ನು ತಂದು ಕೊಡಲಿದೆ. ಸಂಗಾತಿಯ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವಿರಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ಮಾನಸಿಕ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ, ಬದಲಾಗಿ ಕ್ಷೇತ್ರ ದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವುದು ಸೂಕ್ತ. ಆರೋಗ್ಯ ಮಧ್ಯಮವಾಗಿರಲಿದೆ. ವ್ಯಾಪಾರ ವ್ಯವಹಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯ ಚಟುವಟಿಕೆಯ ಮಧ್ಯೆಯೂ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಭೂ ಸಂಬಂಧಿ, ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದ್ದು ಲಾಭವಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಿರಿಯರ ಮಾರ್ಗದರ್ಶನ ಸಿಗಲಿದೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದಲ್ಲಿ ಅನೇಕ ಬದಲಾವಣೆಗಳನ್ನು ಕಾಣುವ ಸಾಧ್ಯತೆ ಇದೆ. ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ನಿಮ್ಮದಲ್ಲದ ಕುರಿತು ಅನಗತ್ಯವಾಗಿ ಚರ್ಚೆ ಮಾಡಿ, ಕುಟುಂಬದ ಸ್ವಾಸ್ಥ್ಯ ಕೆಡಿಸಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡುವ ಸಾಧ್ಯತೆ ಇದೆ. ಆಲಸ್ಯತನದಿಂದ ಕಾರ್ಯ ಮುಂದೂಡುವುದು ಬೇಡ. ಅಮೂಲ್ಯ ವಸ್ತುಗಳ ಕುರಿತಾಗಿ ಜಾಗೃತೆ ಇರಲಿ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸುವುದು ಅಗತ್ಯ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅತಿಯಾದ ಒತ್ತಡ ಉಂಟು ಮಾಡುವ ವಿಚಾರಗಳಿಂದ ದೂರ ಇರಿ. ಕುಟುಂಬದ ಆಪ್ತರಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದ ವ್ಯತ್ಯಾಸದಿಂದ ದಿನದ ಮಟ್ಟಿಗೆ ಖರ್ಚು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಹಾಸ್ಯ ಪ್ರವೃತ್ತಿಯಿಂದ ಬರುವ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದವರು ನಿಮ್ಮ ಬಗ್ಗೆ ಹೆಚ್ಚು ಕಾಳಜಿ ವಹಿಸುವರು. ಆರೋಗ್ಯ‌ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಅತಿಯಾದ ಉತ್ಸಾಹದ ಭರದಲ್ಲಿ ಅತಿರೇಕದ ಮಾತುಗಳನ್ನಾಡುವುದು ಸರಿಯಲ್ಲ, ಅಪಾಯ ತಂದಿತು ಎಚ್ಚರಿಕೆ ಇರಲಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ಆಹಾರ ಕ್ರಮದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಸಂಗಾತಿಯ ಮಾತುಗಳು ಹಿತವೇನಿಸಿದರೂ ಅವರ ಮಾತುಗಳಿಗೆ ಮನ್ನಣೆ ಸಿಗುವುದಿಲ್ಲ. ಆರೋಗ್ಯ ಹಾಗೂ ಹಣಕಾಸಿನ ವಿಷಯದಲ್ಲಿ ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಆತುರದಲ್ಲಿ ಈ ರಾಶಿಯವರು ಯಾವುದೇ ತೀರ್ಮಾನ ತೆಗೆದುಕೊಳ್ಳಬೇಡಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಪಾಡ್ಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಶುಕ್ರವಾರವು ಧನಸ್ಸು ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ವೃಶ್ಚಿಕ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ವೃಷಭ ರಾಶಿಯವರು ಹಿರಿಯರ ಸಲಹೆ ಆರ್ಥಿಕವಾಗಿ ಲಾಭ ತರುವುದು. ಕುಟುಂಬದ ಸದಸ್ಯರ ಬೆಂಬಲ ಕೆಲಸ ಕಾರ್ಯಗಳಲ್ಲಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಮನ್ನಣೆ ಸಿಕ್ಕು ಪ್ರಶಂಸೆ ಪಡೆಯುವಿರಿ. ಅಪರಿಚಿತರೊಂದಿಗೆ ಅನಿವಾರ್ಯ ಕಾರಣಗಳಿಂದ ವಾದಕ್ಕೆ ಇಳಿಯುವಂತೆ ಮಾಡಬಹುದು. ಸಿಂಹ ರಾಶಿಯವರು ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಹಣಕಾಸು ವ್ಯಾಪಾರ- ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಅಗತ್ಯ ವಸ್ತುಗಳ ಖರೀದಿ ಸಾಧ್ಯತೆ ಇದೆ. ಆತುರದ ಮಾತುಗಳು ಸುತ್ತಮುತ್ತಲಿನ ಜನರೊಂದಿಗೆ ವಾದಕ್ಕೆ ಇಳಿಯುವಂತೆ ಮಾಡಬಹುದು ಎಚ್ಚರಿಕೆ ಇರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (24-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಪಾಡ್ಯ 19:24 ವಾರ: ಶುಕ್ರವಾರ
ನಕ್ಷತ್ರ: ಅನುರಾಧ 10:09 ಯೋಗ: ಶಿವ 11:19
ಕರಣ: ಬಾಲವ 07:27 ಅಮೃತ ಕಾಲ: ಮಧ್ಯರಾತ್ರಿ 01:38ರಿಂದ 03:16ರವರೆಗೆ

ಸೂರ್ಯೋದಯ : 05:53   ಸೂರ್ಯಾಸ್ತ : 06:40

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ
7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರ್ಥಿಕ ವ್ಯವಹಾರಗಳ ಕುರಿತಾಗಿ ಹಿರಿಯರಿಂದ ಮಾರ್ಗದರ್ಶನ ಪಡೆಯುವಿರಿ. ಆರೋಗ್ಯದ ಕುರಿತು ಕಾಳಜಿ ವಹಿಸಿ, ಅದರಲ್ಲಿಯೂ ಕಣ್ಣಿನ ಕುರಿತು ವಿಶೇಷ ಕಾಳಜಿ ವಹಿಸುವುದು ಸೂಕ್ತ. ಆರ್ಥಿಕವಾಗಿ ಪ್ರಗತಿ ಇರಲಿದೆ. ವ್ಯಾಪಾರ-ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ . ಅದೃಷ್ಟ ಸಂಖ್ಯೆ: 8

Horoscope Today

ವೃಷಭ: ಹಿರಿಯರ ಸಲಹೆ ಆರ್ಥಿಕವಾಗಿ ಲಾಭ ತರುವುದು. ಕುಟುಂಬದ ಸದಸ್ಯರ ಬೆಂಬಲ ಕೆಲಸ ಕಾರ್ಯಗಳಲ್ಲಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಮನ್ನಣೆ ಸಿಕ್ಕು ಪ್ರಶಂಸೆ ಪಡೆಯುವಿರಿ. ಅಪರಿಚಿತರೊಂದಿಗೆ ಅನಿವಾರ್ಯ ಕಾರಣಗಳಿಂದ ವಾದಕ್ಕೆ ಇಳಿಯುವಂತೆ ಮಾಡಬಹುದು. ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಆಶಾವಾದಿಗಳಾಗಿರಿ, ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸುನ್ನು ತಂದು ಕೊಡುವುದು. ಅನಿವಾರ್ಯ ಕಾರಣಗಳಿಂದ ಖರ್ಚು ಮಾಡುವ ಸಾಧ್ಯತೆ ಇದೆ. ಹಳೆಯ ಪರಿಚಿತರ ಸಂಪರ್ಕ ಪುನಃ ಸ್ಥಾಪಿತವಾಗುವುದು. ವೈವಾಹಿಕ ಜೀವನಕ್ಕೆ ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕಟಕ: ಅವಿರತವಾಗಿ ಶ್ರಮಿಸಿದ ಜೀವಕೆ ವಿಶ್ರಾಂತಿಯು ಸಿಗಲಿದೆ.ಸಂಗಾತಿಯೊಂದಿಗೆ ಹೂಡಿಕೆ ಕೂರಿತಾಗಿ ಚರ್ಚೆ.ಉತ್ತಮ ವ್ಯಕ್ತಿಗಳ ಸಂಪರ್ಕ, ಮಾರ್ಗದರ್ಶನ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ ಇದೆ. ತಾಳ್ಮೆಯಿಂದ ಸಹಕರಿಸಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಸಿಂಹ: ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಹಣಕಾಸು ವ್ಯಾಪಾರ- ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಅಗತ್ಯ ವಸ್ತುಗಳ ಖರೀದಿ ಸಾಧ್ಯತೆ ಇದೆ. ಆತುರದ ಮಾತುಗಳು ಸುತ್ತಮುತ್ತಲಿನ ಜನರೊಂದಿಗೆ ವಾದಕ್ಕೆ ಇಳಿಯುವಂತೆ ಮಾಡಬಹುದು ಎಚ್ಚರಿಕೆ ಇರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ: ಹೊಸ ಆರ್ಥಿಕ ಒಪ್ಪಂದಗಳು ಗರಿಗೆದರಲಿವೆ. ಆಪ್ತರಿಂದ ಆಮಂತ್ರಣ ಸಿಗಲಿದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಆಸ್ತಿ ಖರೀದಿ ವ್ಯವಹಾರದ ಕುರಿತು ಚರ್ಚೆ ಮಾಡುವಿರಿ. ಸಂಗಾತಿಯ ಮಾತುಗಳಿಗೆ ಮನ್ನಣೆ ಸಿಗದೇ ಇರುವುದರಿಂದ ನಿಮ್ಮ ಮೇಲೆ ಕೋಪಿಸಿಕೊಳ್ಳುವ ಸಾಧ್ಯತೆ ಇದೆ. ನಗುವಿನ ಮೂಲಕ ಪರಿಸ್ಥಿತಿ ತಿಳಿಗೊಳಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 6

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಗಾಳಿಯಲ್ಲಿ ಗೋಪುರ ಕಟ್ಟಿಕೊಂಡು ಸಮಯ, ವ್ಯರ್ಥ ಪ್ರಯತ್ನ ಮಾಡಬೇಡಿ. ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ. ಕುಟುಂಬದ ಸದಸ್ಯರ ಮಾರ್ಗದರ್ಶನ ಪಡೆಯುವುದು ಒಳ್ಳೆಯದು. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಸಂಗಾತಿಯ ಮಧುರ ಪ್ರೀತಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು. ಹಣಕಾಸಿನ ವ್ಯವಹಾರ ನಿರೀಕ್ಷಿಸಿದಷ್ಟು ಸಾಧ್ಯವಿಲ್ಲ. ಅತಿಥಿಗಳ ಆಗಮನದಿಂದ ನಿಮ್ಮ ಯೋಚಿತ ಕಾರ್ಯ ವಿಳಂಬವಾಗುವ ಸಾಧ್ಯತೆ ಇದೆ. ಆತುರದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು: ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಮಾಡುವ ಸಾಧ್ಯತೆ ಇದೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ, ಯಾವುದೇ ಹಣಕಾಸು ಒಪ್ಪಂದಗಳನ್ನು ಮಾಡಿಕೊಳ್ಳುವುದು ಬೇಡ. ಪ್ರೀತಿ ಪಾತ್ರರೊಂದಿಗೆ ಆತುರದ ಮಾತುಗಳಿಂದ ನೋವಾಗಲಿದೆ. ನಿಧಾನಿಸಿ, ಯೋಚಿಸಿ ಮಾತನಾಡಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮಕರ: ಬಹಳ ದಿನಗಳ ಕನಸು ನನಸಾಗುವ ಕಾಲವಿದು. ಆತುರದಲ್ಲಿ ಯಾವುದೇ ಸಂಕಲ್ಪ ಮಾಡುವುದು ಬೇಡ. ಸ್ನೇಹಿತರ ಕಷ್ಟಕಾಲಕ್ಕೆ ಸ್ಪಂದಿಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕುಂಭ: ಅತಿಯಾದ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವದು ಬೇಡ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯಿರಿ. ತಾಳ್ಮೆಯಿಂದ ವರ್ತಿಸಿ. ಆತುರದಿಂದ ಮಾತನಾಡುವುದು ಬೇಡ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕುಟುಂಬದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಮೀನ: ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ ಕಾಳಜಿ ವಹಿಸುವುದು ಸೂಕ್ತ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ ಇರಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಸಂಗಾತಿಯ ವರ್ತನೆ ನಿಮಗೆ ಕೋಪ ತರಿಸಬಹುದು. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ಹುಣ್ಣಿಮೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your daily horoscope predictions for May 23 2024
Koo

ಚಂದ್ರನು ಬುಧವಾರವೂ ವೃಶ್ಚಿಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ವೃಷಭ ರಾಶಿಯವರು ಸಂಬಂಧವಿರದ ವಿಷಯಗಳಿಗೆ ಕಿವಿಗೊಡವುದು ಬೇಡ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಹಳೆಯ ವಿಚಾರಗಳನ್ನು ಕೆರಳಿಸಿ ಗಾಯ ಮಾಡಿಕೊಳ್ಳುವುದು ಬೇಡ. ಮಿಥುನ ರಾಶಿಯವರು ನಿಮ್ಮ ಅಭಿಪ್ರಾಯಗಳಿಗೆ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ, ಹೀಗಾಗಿ ಆತುರದಲ್ಲಿ ಮಾತನಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಖರ್ಚು ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (23-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ಹುಣ್ಣಿಮೆ 19:22 ವಾರ: ಗುರುವಾರ
ನಕ್ಷತ್ರ: ವಿಶಾಖ 09:13 ಯೋಗ: ಪರಿಘ 12:10
ಕರಣ: ವಿಷ್ಟಿ (ಭದ್ರ) 07:08 ಅಮೃತ ಕಾಲ: ರಾತ್ರಿ 11:22 ರಿಂದ ಮೇ 24ರ ಬೆಳಗಿನ ಜಾವ 01:02 ರವರಗೆ
ದಿನದ ವಿಶೇಷ: ಬುದ್ಧ ಪೂರ್ಣಿಮಾ

ಸೂರ್ಯೋದಯ : 05:53   ಸೂರ್ಯಾಸ್ತ : 06:40

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ
9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಇಂದು ನಿಮಗೆ ಉತ್ಸಾಹದ ವಾತಾವರಣ ಲಭ್ಯವಾಗಲಿದೆ. ಆಪ್ತರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ವ್ಯಾಪಾರ ವ್ಯವಹಾರಗಳಿಗೆ ಹೆಚ್ಚಿನ ಲಾಭ ದೊರೆಯಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ನಿಮ್ಮ ವ್ಯಕ್ತಿತ್ವ ಇತರರನ್ನು ಆಕರ್ಷಿಸಿ ಕಾರ್ಯದಲ್ಲಿ ಯಶಸ್ಸು ಸಾಧಿಸುವಂತೆ ಮಾಡುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಕುಟುಂಬದಲ್ಲಿ ನೆಮ್ಮದಿ ನೆಲೆಸಲಿದೆ.
ಅದೃಷ್ಟ ಸಂಖ್ಯೆ: 5

Horoscope Today

ಮಿಥುನ: ಈ ದಿನ ಸಂತಸದ ಕ್ಷಣಗಳನ್ನು ಕಳೆಯುವಿರಿ. ಆರ್ಥಿಕ ಪ್ರಗತಿ ಸಾಧಿಸುವಿರಿ. ಬಹಳ ದಿನಗಳ ಬಾಕಿ ಇರುವ ಕಾರ್ಯವು ಪೂರ್ಣವಾಗುವುದು. ಮನೆಯಲ್ಲಿ ಪರಸ್ಪರ ಸಹಕಾರ ಸಿಗಲಿದೆ. ಉತ್ಸಾಹದ ದಿನವಿದು.
ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಆಕರ್ಷಕ ವ್ಯಕ್ತಿತ್ವ ಹೊಂದಿರುವ ನೀವು ಇಂದು ಇತರರನ್ನು ಆಕರ್ಷಿಸುವಿರಿ. ಆರ್ಥಿಕ ಪ್ರಗತಿ ಸಾಧಾರಣವಿದ್ದರೂ ಸಮರ್ಥವಾಗಿ ನಿರ್ವಹಿಸುವಿರಿ. ಉದ್ಯೋಗದಲ್ಲಿ ಪ್ರಗತಿ ಕಾಣುವಿರಿ. ಮಡದಿಯ ಪ್ರೀತಿಗೆ ಸೋಲುವಿರಿ. ಕುಟುಂಬದಲ್ಲಿ ನೆಮ್ಮದಿ ನೆಲೆಸಲಿದೆ.
ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಉದ್ಯೋಗ ಅಪೇಕ್ಷಿತರಿಗೆ ಇಂದು ಉದ್ಯೋಗದ ಭರವಸೆ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣಲಿದ್ದೀರಿ. ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿ ಫಲ ಸಿಗುವ ದಿನ ಇದಾಗಲಿದೆ. ಮನೆಯವರ ಪ್ರೀತಿ ಸಹಕಾರವೂ ಸಿಗಲಿದೆ. ಕುಟುಂಬದಲ್ಲಿ ನೆಮ್ಮದಿ ನೆಲೆಸಲಿದೆ.
ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಮನೆಯಲ್ಲಿ ಪರಸ್ಪರರ ಮಧ್ಯೆ ಕಲಹದಿಂದ ವಾತಾವರಣ ಹದಗೆಡಬಹುದು. ಕೆಲಸದಲ್ಲಿ ಹಿರಿಯರಿಂದ ಒತ್ತಡ ಹೆಚ್ಚಲಿದೆ. ಹೀಗಾಗಿ ಈ ಬಗ್ಗೆ ಎಚ್ಚರಿಕೆ ವಹಿಸಿ. ಆರ್ಥಿಕ ಪ್ರಗತಿ ನಿಮ್ಮದಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಯಾವುದೇ ಹೂಡಿಕೆಯನ್ನು ಮಾಡುವುದು ಬೇಡ. ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರೋಗ್ಯದಲ್ಲಿ ಉತ್ತಮ ಪ್ರಗತಿಯನ್ನು ಕಾಣುವಿರಿ. ಮನೆಯಲ್ಲಿ ಸಂತೋಷದ ದಿನ ನಿಮ್ಮದಾಗಲಿದೆ.
ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಹೊಂದಲು ಹಿರಿಯರು ಮಾರ್ಗದರ್ಶನ ಮಾಡಲಿದ್ದಾರೆ. ಧೈರ್ಯದಿಂದ ಕಾರ್ಯದಲ್ಲಿ ಮುನ್ನುಗ್ಗಿ, ಯಶ ಸಿಗುತ್ತದೆ. ಕುಟುಂಬದಲ್ಲಿ ನೆಮ್ಮದಿ ನೆಲೆಸಲಿದೆ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಕುಟುಂಬ ಸದಸ್ಯರ ಆರೋಗ್ಯ ಸಂಬಂಧಿ ವಿಷಯಗಳು ತಮಗೆ ಒತ್ತಡ ಉಂಟುಮಾಡಬಹುದು. ಉದಾಸಿನತೆ ಮಾಡುವುದು ಬೇಡ. ಆಶಾವಾದಿಗಳಾಗಿರಿ ಕುಲದೇವರನ್ನು ಸ್ಮರಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಮಕರ: ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳಿಂದ ಕಿರಿಕಿರಿಯಾಗಿ ಒತ್ತಡ ಉಂಟಾಗುವ ಸಾಧ್ಯತೆ ಇದೆ. ಆಲಸ್ಯದಿಂದ ದೂರವಿದ್ದು, ಮುಂದೆ ಆಗಬೇಕಾದ ಕೆಲಸಕ್ಕೆ ಚುರುಕುತನ ನೀಡಿ. ನಿಮ್ಮ ಕೆಲಸದ ಒತ್ತಡವನ್ನು ಮನೆಯ ಸದಸ್ಯರ ಮೇಲೆ ಹಾಕಿ ವಾತಾವರಣವನ್ನು ಹದಗೆಡಿಸಬೇಡಿ. ಗುರುಗಳ ಆರಾಧನೆ ಮಾಡಿ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ಭೂ ಸಂಬಂಧಿ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಅನ್ಯರು ಆಡುವ ಕುಹುಕ ಮಾತುಗಳಿಗೆ ಧ್ವನಿಯಾಗಬೇಡಿ. ಕುಟುಂಬದಲ್ಲಿ ನೆಮ್ಮದಿ ನೆಲೆಸಲಿದೆ.
ಅದೃಷ್ಟ ಸಂಖ್ಯೆ: 3

Horoscope Today

ಮೀನ: ನಿಮ್ಮ ಮಹತ್ವಾಕಾಂಕ್ಷೆಯ ಕೆಲಸ – ಕಾರ್ಯಗಳು ಕುಂಠಿತವಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಆರ್ಥಿಕ ನಷ್ಟದಿಂದ ತಪ್ಪಿಸಿಕೊಳ್ಳುವತ್ತ ಚಿಂತಿಸಿ. ಸಂಗಾತಿಯ ಮಾತುಗಳು ಹಿತವೆನಿಸುವುದು. ಕುಟುಂಬದಲ್ಲಿ ನೆಮ್ಮದಿ ಕಾಣುವಿರಿ.
ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
IT Raid
ದೇಶ4 mins ago

IT Raid: ಚಿನ್ನದ ವ್ಯಾಪಾರಿಗಳಿಗೆ ಐಟಿ ಶಾಕ್‌; ಬೆಳ್ಳಂಬೆಳಗ್ಗೆ ರೇಡ್‌, ಕೋಟಿ ಕೋಟಿ ಹಣ ಜಪ್ತಿ!

Udupi Gang War
ಕರ್ನಾಟಕ11 mins ago

Udupi Gang War: ಉಡುಪಿ ಗ್ಯಾಂಗ್ ವಾರ್ ಪ್ರಕರಣ; ಮತ್ತೆ ಮೂವರು ಆರೋಪಿಗಳ ಬಂಧನ

T20 World Cup 2024
ಕ್ರೀಡೆ22 mins ago

T20 World Cup 2024: ನ್ಯೂಯಾರ್ಕ್​ಗೆ ಪ್ರಯಾಣಿಸಿದ ಮೊದಲ ಬ್ಯಾಚ್​; ವಿರಾಟ್​ ಕೊಹ್ಲಿ ಗೈರು, ಅಭ್ಯಾಸ ಪಂದ್ಯಕ್ಕೂ ಅನುಮಾನ

Road Accident in Bengaluru
ಕ್ರೈಂ24 mins ago

Road Accident : ಕಾರು ಡ್ರೈವಿಂಗ್‌ ಕಲಿಯುವಾಗ ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದಳು; ಡೆಡ್ಲಿ ಆಕ್ಸಿಡೆಂಟ್‌ಗೆ ಬಾಲಕಿ ಬಲಿ

Teenage boy arrested
ಕ್ರೈಂ38 mins ago

Teenage Boy Arrested: ತನ್ನನ್ನು ಅತ್ಯಾಚಾರ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದವನನ್ನು ಕೊಂದ ಬಾಲಕ!

Janhvi Kapoor on paparazzi culture
ಬಾಲಿವುಡ್45 mins ago

Janhvi Kapoor: ಪಾಪರಾಜಿಗಳ ಅಸಲಿ ಮುಖ ರಿವೀಲ್‌ ಮಾಡಿದ ಜಾನ್ವಿ ಕಪೂರ್!

Gold Rate Today
ಕರ್ನಾಟಕ50 mins ago

Gold Rate Today: ಇಂದೂ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ

Tiger attack
ಮೈಸೂರು1 hour ago

Tiger Attack : ಮೈಸೂರಲ್ಲಿ ಹುಲಿ ದಾಳಿ; ಮಹಿಳೆಯನ್ನು ಹೊತ್ತೊಯ್ದು ಕೊಂದ ವ್ಯಾಘ್ರ

IPL 2024 Final
ಕ್ರೀಡೆ1 hour ago

IPL 2024 Final: ಐಪಿಎಲ್​ ವಿನ್ನರ್​ & ರನ್ನರ್​ಗೆ ಸಿಗುವ ಮೊತ್ತವೆಷ್ಟು? ಈ ಬಾರಿ ಆರೆಂಜ್​ ಕ್ಯಾಪ್​, ಪರ್ಪಲ್​ ಕ್ಯಾಪ್​ ಯಾರಿಗೆ ಸಿಗಲಿದೆ?

Cyclone Remal
ದೇಶ1 hour ago

Cyclone Remal: ರೆಮಲ್‌ ಚಂಡ ಮಾರುತದ ಅಬ್ಬರ ಶುರು; ಬಾಂಗ್ಲಾದೇಶ, ಪ.ಬಂಗಾಳ ಸೇರಿದಂತೆ ಹಲವಡೆ ಭಾರೀ ಮಳೆ, ಭೂಕುಸಿತ ಸಾಧ್ಯತೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ7 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌