Dina Bhavishya : ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಇಂದು ಲಾಸ್‌! - Vistara News

ಪ್ರಮುಖ ಸುದ್ದಿ

Dina Bhavishya : ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಇಂದು ಲಾಸ್‌!

Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಯುಜ ಮಾಸ, ಶುಕ್ಲ ಪಕ್ಷದ ತದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ವೃಶ್ಚಿಕ ರಾಶಿಯಿಂದ ಮಂಗಳವಾರ ಮಧ್ಯಾಹ್ನ 03:36ಕ್ಕೆ ಧನಸ್ಸು ರಾಶಿಗೆ ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರಿಗೆ ಭೂಮಿ ಖರೀದಿ, ವ್ಯಾಪಾರ ವ್ಯವಹಾರಗಳಲ್ಲಿ ಲಾಭ ಇರಲಿದೆ. ವೃಷಭ ರಾಶಿಯ ಪ್ರೇಮಿಗಳಿಗೆ ಪ್ರೇಮ ನಿವೇದನೆ ಮಾಡಿಕೊಳ್ಳುವ ದಿನವಲ್ಲ. ಕಟಕ ರಾಶಿಯವರು ಮನೆಯಲ್ಲಿನ ಒತ್ತಡ ನಿಮಗೆ ಸಿಟ್ಟು ತರಿಸಬಹುದು. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (17-10-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಯುಜ ಮಾಸ, ಶುಕ್ಲ ಪಕ್ಷ.
ತಿಥಿ:
ತದಿಗೆ 25:25 ವಾರ: ಮಂಗಳವಾರ
ನಕ್ಷತ್ರ: ವಿಶಾಖ 20:30 ಯೋಗ: ಪ್ರೀತಿ 09:20
ಕರಣ: ತೈತುಲ 13:22 ಅಮೃತ ಕಾಲ: ಬೆಳಗ್ಗೆ 11:23 ರಿಂದ 01:02 ರವರೆಗೆ
ದಿನದ ವಿಶೇಷ: ಕಾವೇರಿ ತೀರ್ಥೋದ್ಭವ‌, ಶರನ್ನವರಾತ್ರಿ ತೃತೀಯ ದಿವಸ ಪೂಜೆ ಚಂದ್ರಘಂಟಾ ಅವತಾರ, ಬಡತನ ನಿರ್ಮೂಲನ ದಿನ

ಸೂರ್ಯೋದಯ : 06:24  ಸೂರ್ಯಾಸ್ತ : 07:00

ರಾಹುಕಾಲ: ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಚಿಂತನೆ ಮತ್ತು ಶಕ್ತಿಯನ್ನು ನೀವು ವಾಸ್ತವವಾಗಿ ಏನನ್ನು ನೋಡಬಯಸುತ್ತೀರೋ ಅದನ್ನು ಸಾಧಿಸಲು ಮುನ್ನುಗ್ಗಿ. ಭೂಮಿ ಖರೀದಿ ವ್ಯಾಪಾರ ವ್ಯವಹಾರಗಳಲ್ಲಿ ಲಾಭ ಇರಲಿದೆ. ಹಣಕಾಸು ವ್ಯವಹಾರಗಳಲ್ಲಿ ಲಾಭ ಇರಲಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಸ್ನೇಹಿತರೊಂದಿಗೆ ಮನೋರಂಜನೆ, ಕಾಲಕಳೆಯುವ ಸಾಧ್ಯತೆ ಇದೆ. ಯಾರ ಬಳಿಯಾದರು ಸಾಲವನ್ನು ಮಾಡಿದ್ದರೆ ಇಂದು ಯಾವುದೇ ಪರಿಸ್ಥಿತಿಯಲ್ಲೂ ಸಾಲವನ್ನು ಮರುಪಾವತಿಸಬೇಕಾಗುತ್ತದೆ. ಇದರಿಂದ ಆರ್ಥಿಕ ಪರಿಸ್ಥಿತಿ ಸ್ವಲ್ಪ ದುರ್ಬಲವಾಗುತ್ತದೆ. ಪ್ರೇಮಿಗಳಿಗೆ ಪ್ರೇಮ ನಿವೇದನೆ ಮಾಡಿಕೊಳ್ಳುವ ದಿನವಲ್ಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಆರೋಗ್ಯ ಪರಿಪೂರ್ಣವಾಗಿರಲಿದೆ. ಮನಸ್ಸು ಉತ್ಸಾಹದಿಂದ ಕೂಡಿರಲಿದೆ. ನಿಮಗೆ ನಿಮ್ಮ ಸಹೋದರ ಅಥವಾ ಸಹೋದರಿಯ ಸಹಾಯದಿಂದ ಲಾಭವಾಗುವ ಸಾಧ್ಯತೆ ಇದೆ. ಹೊಸ ಸಂಬಂಧಗಳು ಕೂಡಿ ಬರಲಿದ್ದು, ಹೆಚ್ಚು ಅನುಕೂಲಕರವಾಗಿರುತ್ತವೆ. ಆರ್ಥಿಕವಾಗಿ ಸದೃಢವಾಗಿರಲಿದೆ. ಉದ್ಯೋಗಿಗಳಿಗೆ ಹೆಚ್ಚು ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಮನೆಯಲ್ಲಿ ಒತ್ತಡ ನಿಮಗೆ ಸಿಟ್ಟು ತರಿಸಬಹುದು. ಅವುಗಳನ್ನು ದಮನಗೊಳಿಸುವುದು ಕೇವಲ ದೈಹಿಕ ಸಮಸ್ಯೆಯನ್ನು ಹೆಚ್ಚಿಸುತ್ತದೆ. ದೈಹಿಕ ಚಟುವಟಿಕೆಯೊಂದಿಗೆ ಇದನ್ನು ತೊಡೆದುಹಾಕಿ. ಕಿರಿಕಿರಿಯುಂಟುಮಾಡುವ ಪರಿಸ್ಥಿತಿಯಿಂದ ಹೊರಬರುವುದು ಉತ್ತಮ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು ಪಡೆಯಲು ಸಹಾಯ ಮಾಡುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ತಕ್ಕ ಮಟ್ಟಿಗೆ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಇಂದು ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡುವವರು ತಮ್ಮ ಹಣವನ್ನು ಕಳೆದುಕೊಳ್ಳಬಹುದು. ಸಮಯಕ್ಕೆ ನೀವು ಜಾಗರೂಕರಾಗಿದ್ದರೆ ಅದು ನಿಮಗೆ ಉತ್ತಮವಾಗಿರುತ್ತದೆ. ಕುಟುಂಬದ ಸದಸ್ಯರೊಂದಿಗೆ ನಿಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಈ ರಾಶಿಚಕ್ರದ ವಿವಾಹಿತ ಜನರಿಗೆ ಇಂದು ಅತ್ತೆ ಮನೆಯ ಕಡೆಯಿಂದ ಹಣದ ಪ್ರಯೋಜನವಾಗುವ ಸಾಧ್ಯತೆ ಇದೆ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಭಾವನಾತ್ಮಕ ತೊಂದರೆಗಳು ನಿಮ್ಮನ್ನು ಕಾಡುತ್ತವೆ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ಪ್ರಯಾಣ ಸಂತೋಷಕರ ಮತ್ತು ಹೆಚ್ಚು ಅನುಕೂಲಕರವಾಗಿರುತ್ತದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟು ಮಾಡಬಹುದು. ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ದೀರ್ಘ ಕಾಲ ಬಾಕಿಯಿದ್ದ ಕೆಲಸಗಳು ಕೊನೆಗೂ ದೊರವಾಗಲಿದೆ. ನಿಮ್ಮ ಮನೆಯ ಪರಿಸರದಲ್ಲಿ ಒಳ್ಳೆಯ ಬದಲಾವಣೆಗಳನ್ನು ಮಾಡುತ್ತೀರಿ. ಕೆಲಸದ ಒತ್ತಡ ಇನ್ನೂ ನಿಮ್ಮ ಮನಸ್ಸನ್ನು ಆವರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರಿಗೆ ಯಾವುದೇ ಸಮಯವಿಲ್ಲದಂತೆ ಮಾಡುತ್ತದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ನಿಮ್ಮ ಹಠಮಾರಿ ಧೋರಣೆಯಿಂದಾಗಿ ಮನೆಯಲ್ಲಿ ಕಿರಿಕಿರಿ ಸಾಧ್ಯತೆ ಇದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಒಟ್ಟಾಗುವಿಕೆಯಲ್ಲಿ ನೀವೇ ಕೇಂದ್ರಬಿಂದುವಾಗಿರುತ್ತೀರಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಕೆಲಸದ ಒತ್ತಡ ಅಸಮಾಧಾನ ತರಬಹುದು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಅನೇಕ ಒತ್ತಡಗಳಿಂದ ವಿಶ್ರಾಂತಿ ಸಿಗಲಿದೆ. ಆಭರಣ, ಹೂಡಿಕೆ ವ್ಯಾಪಾರ ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಅನಿರೀಕ್ಷಿತವಾಗಿ ಸ್ನೇಹಿತರನ್ನು ಭೇಟಿ ಮಾಡುವಿರಿ. ಆರೋಗ್ಯ ಪರಿಪೂರ್ಣ ಇರಲಿದೆ. ಉದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗಲಿವೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಸಂತೆಯೊಳಮಂತರಂಗದ ಸದ್ದು ಕೇಳಿಪುದು ।ಸ್ವಾಂತದಿಕ್ಕೆಲಗಳವು – ಮಂಕುತಿಮ್ಮ ॥ ಕಗ್ಗ ಮಾರ್ಗ 211

Horoscope Today

ಮಕರ: ಕೌಟುಂಬಿಕ ಒತ್ತಡ ನಿಮ್ಮ ಮನಸ್ಸಿಗೆ ನೋವುಂಟು ಮಾಡುವ ಸಾಧ್ಯತೆ ಇದೆ. ಕೋಪದಲ್ಲಿ ಆಡಿದ ಮಾತುಗಳ ಮನವರಿಕೆ ಆಗುವುದು.
ಜೀವನದಲ್ಲಿ ಹೊಸ ಪಾಠ ಕಲಿಯುವಿರಿ.ಆರೋಗ್ಯ ಪರಿಪೂರ್ಣ.ಉದ್ಯೋಗದ ಸ್ಥಳದಲ್ಲಿ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ,ಕೀರ್ತಿ ಸಿಗುವುದು. ದಿನದ ಮಟ್ಟಿಗೆ ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳನ್ನು ಹಂಚಿಕೊಂಡು ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ಸಮಾಧಾನದ ಮಾತುಗಳು ಸೂಕ್ತ ವ್ಯಕ್ತಿಗಳಿಂದ ಸಿಗಲಿವೆ.ನಿಮ್ಮ ವರ್ತನೆಯಿಂದ ಕುಟುಂಬದ ಸದಸ್ಯರು ಕೋಪಗೊಳ್ಳವ ಸಾಧ್ಯತೆ ಇದೆ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅವಶ್ಯಕ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Election: 5ನೇ ಹಂತದಲ್ಲಿ ಕೇವಲ ಶೇ.56ರಷ್ಟು ಮತದಾನ; ಯಾವ ರಾಜ್ಯದಲ್ಲಿ ಹೆಚ್ಚು?

Lok Sabha Election: ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಬಹುತೇಕ ಕಡೆ ಶಾಂತಿಯುತವಾಗಿ ಮತದಾನ ನಡೆದಿದೆ. ಪಶ್ಚಿಮ ಬಂಗಾಳದ ಕೆಲವೆಡೆ ಮಾತ್ರ ಗಲಾಟೆ ನಡೆದಿವೆ ಎಂದು ತಿಳಿದುಬಂದಿದೆ.

VISTARANEWS.COM


on

Lok Sabha Election
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ಐದನೇ ಹಂತದ ಮತದಾನವು ಸೋಮವಾರ (ಮೇ 20) ಶಾಂತಿಯುತವಾಗಿ ನಡೆದಿದೆ. ಸಂಜೆ 5 ಗಂಟೆ ಸುಮಾರಿಗೆ ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಶೇ.56.68ರಷ್ಟು ಮತದಾನ ದಾಖಲಾಗಿದೆ. ಸಂಜೆ 5 ಗಂಟೆ ವೇಳೆಗೆ ಕಳೆದ ನಾಲ್ಕು ಹಂತದ ಮತದಾನದ ವೇಳೆ ಹೆಚ್ಚಿನ ಮತದಾನ ದಾಖಲಾಗಿತ್ತು. ಆದರೆ, ಐದನೇ ಹಂತದಲ್ಲಿ ಮತದಾನ ಪ್ರಮಾಣ ಭಾರಿ ಇಳಿಕೆಯಾಗಿದೆ. ಈ ಕುರಿತು ಚುನಾವಣೆ ಆಯೋಗ ಅಂಕಿ-ಅಂಶ ಬಿಡುಗಡೆ ಮಾಡಿದಾಗಲೇ ನಿಖರ ಮಾಹಿತಿ ಲಭ್ಯವಾಗಲಿದೆ.

ಪಶ್ಚಿಮ ಬಂಗಾಳದಲ್ಲಿ ಹೆಚ್ಚು

ಪಶ್ಚಿಮ ಬಂಗಾಳದಲ್ಲಿ ಐದನೇ ಹಂತದಲ್ಲಿ ಹೆಚ್ಚಿನ ಮತದಾನ ದಾಖಲಾಗಿದೆ. ರಾಜ್ಯದಲ್ಲಿ ಕೆಲವೆಡೆ ಹಿಂಸಾಚಾರ ಪ್ರಕರಣಗಳು ಸುದ್ದಿಯಾಗಿದ್ದರೂ ಶೇ.73ರಷ್ಟು ಮತದಾನ ದಾಖಲಾಗಿದೆ. ಇನ್ನು ಲಡಾಕ್‌ನಲ್ಲಿ ಶೇ.67.15, ಜಾರ್ಖಂಡ್‌ನಲ್ಲಿ ಶೇ.61.90ರಷ್ಟು ಮತದಾನ ನಡೆದಿದೆ. ಇನ್ನು ಮಹಾರಾಷ್ಟ್ರದಲ್ಲಿ ಕೇವಲ ಶೇ.48.66ರಷ್ಟು ಮತದಾನ ದಾಖಲಾಗಿದ್ದು, ಐದನೇ ಹಂತದಲ್ಲಿ ಕನಿಷ್ಠ ಮತದಾನ ನಡೆದ ರಾಜ್ಯ ಎನಿಸಿದೆ. ನಾಲ್ಕನೇ ಹಂತದಲ್ಲೂ ಮಹಾರಾಷ್ಟ್ರದಲ್ಲಿ ಕನಿಷ್ಠ ಮತದಾನ ದಾಖಲಾಗಿತ್ತು.

ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಮತಯಂತ್ರಗಳಲ್ಲಿ ಭದ್ರವಾಗಿದೆ.

ನಾಲ್ಕನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿತ್ತು. ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿತ್ತು. ಮೂರೂ ಹಂತಗಳಲ್ಲಿ 2019ಕ್ಕಿಂತ ಕಡಿಮೆ ಮತದಾನ ದಾಖಲಾಗಿದ್ದು ಚರ್ಚೆಗೆ ಗ್ರಾಸವಾಗಿತ್ತು. ಆದರೀಗ, 4ನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿದ್ದು, ಕಳೆದ ಬಾರಿಗಿಂತ ಕೇವಲ 0.40ರಷ್ಟು ಕಡಿಮೆಯಾಗಿದೆ. ಹಾಗಾಗಿ, ನಾಲ್ಕನೇ ಹಂತದ ಮತದಾನವು ಸಕಾರಾತ್ಮಕ ಬೆಳವಣಿಗೆ ಎಂದು ಹೇಳಲಾಗುತ್ತಿದೆ.

ಐದನೇ ಹಂತದ ಮತದಾನದೊಂದಿಗೆ ದೇಶಾದ್ಯಂತ ಇದುವರೆಗೆ ಒಟ್ಟು 428 ಕ್ಷೇತ್ರಗಳಲ್ಲಿ ಚುನಾವಣೆ ನಡೆದಂತಾಗಿದೆ. ಉಳಿದ ಕ್ಷೇತ್ರಗಳಲ್ಲಿ ಐದು ಹಾಗೂ ಆರನೇ ಹಂತದಲ್ಲಿ ಮತದಾನ ನಡೆಯಲಿದೆ. ಜೂನ್‌ 1ರಂದು ಚುನಾವಣೆ ಮುಗಿಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯೂ ನಡೆದಿದ್ದು, ಜೂನ್‌ 4ರಂದೇ ಫಲಿತಾಂಶ ತಿಳಿಯಲಿದೆ.

ಇದನ್ನೂ ಓದಿ: Narendra Modi: ಮುಸ್ಲಿಮರ ವೋಟಿಗಾಗಿ ಮಮತಾ ಬ್ಯಾನರ್ಜಿ ಹಿಂದು ಸಂಘಟನೆಗಳ ವಿರುದ್ಧ ಆರೋಪ; ಮೋದಿ ಟೀಕೆ

Continue Reading

ಶಿಕ್ಷಣ

Public Exam: 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; ರಾಜ್ಯ ಸರ್ಕಾರದ ಮಹತ್ವ ನಿರ್ಧಾರ

Public Exam: ಸರ್ವೋಚ್ಚ ನ್ಯಾಯಾಲಯವು 2024ರ ಏಪ್ರಿಲ್‌ 08ರಂದು ಪಬ್ಲಿಕ್‌ ಪರೀಕ್ಷೆಗೆ ತಡೆಯಾಜ್ಞೆ ನೀಡಿತ್ತು. ಈಗ ಈ ಸಂಬಂಧ ತೀರ್ಪು ಪ್ರಕಟವಾಗುವ ಮೂಲಕ ಪಬ್ಲಿಕ್‌ ಪರೀಕ್ಷೆಯ ಬಗ್ಗೆ ನಿರ್ಧಾರವಾಗಬೇಕಿದೆ. ಅಂದರೆ, 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನ ಕಾರ್ಯ ಮುಗಿದಿದ್ದು, ರಾಜ್ಯದ ಎಲ್ಲ ಶಾಲೆಗಳಲ್ಲಿ ದಿನಾಂಕ: 08-04-2024ರಂದು ಫಲಿತಾಂಶವನ್ನು ಪ್ರಕಟಿಸಲು ತಿಳಿಸಲಾಗಿತ್ತು. ಬಳಿಕ ಫಲಿತಾಂಶವನ್ನು ಪ್ರಕಟಿಸಲು ಸರ್ವೋಚ್ಚ ನ್ಯಾಯಾಲಯವು ತಡೆಯಾಜ್ಞೆಯನ್ನು ನೀಡಿದ್ದು, ಅಂತಿಮ ತೀರ್ಪು ಬಾಕಿ ಇದೆ. ಹೀಗಾಗಿ ಮುಂದಿನ ಪ್ರವೇಶಾತಿಯ ದೃಷ್ಟಿಯಿಂದ ಈ ನಿರ್ಧಾರಕ್ಕೆ ಬರಲಾಗಿದೆ.

VISTARANEWS.COM


on

Public Exam Good news for students of classes 5 and 8 and 9 Important decision of Karnataka government
Koo

ಬೆಂಗಳೂರು: ರಾಜ್ಯ ಸರ್ಕಾರದ ನಿರ್ಧಾರದಿಂದಾಗಿ ಭಾರಿ ವಿವಾದಕ್ಕೆ ಕಾರಣವಾಗಿರುವ 5,8 ಮತ್ತು 9ನೇ ತರಗತಿ ಪಬ್ಲಿಕ್‌ ಪರೀಕ್ಷೆ (Public Exam) ನಡೆದಿದ್ದರೂ, ಸುಪ್ರೀಂ ಕೋರ್ಟ್‌ನಲ್ಲಿ ಇದರ ಭವಿಷ್ಯ ಇನ್ನೂ ನಿರ್ಧಾರ ಇನ್ನೂ ಆಗಿಲ್ಲ. ಇದು ಶಾಲಾ ಆಡಳಿತ ಮಂಡಳಿ, ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಕಾರಣ, ಈ ಮೂರೂ ತರಗತಿವಾರು ಮೌಲ್ಯಾಂಕನದ ವಿಶ್ಲೇಷಣೆ ಮಾಡಿ, ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ದಾಖಲಿಸುವ ಗೊಂದಲದಲ್ಲಿ ಶಿಕ್ಷಣ ಇಲಾಖೆ ಇದೆ. ಈಗ ಈ ಸಂಬಂಧ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ಈಗಾಗಲೇ ಶಾಲೆಗಳಲ್ಲಿ ಮಾಸಿಕವಾಗಿ, ಅರ್ಧ ವಾರ್ಷಿಕವಾಗಿ ನಡೆಸಲಾಗಿರುವ ಪರೀಕ್ಷೆಗಳಲ್ಲಿ ಪಡೆದ ಅಂಕಗಳನ್ನು ಅಗ್ರಿಗೇಟ್‌ ಮಾಡಿ ಮುಂದಿನ ತರಗತಿಗಳಿಗೆ ದಾಖಲಿಸಲು ಮುಂದಾಗಲಾಗಿದೆ.

ಸರ್ವೋಚ್ಚ ನ್ಯಾಯಾಲಯವು 2024ರ ಏಪ್ರಿಲ್‌ 08ರಂದು ಪಬ್ಲಿಕ್‌ ಪರೀಕ್ಷೆಗೆ ತಡೆಯಾಜ್ಞೆ ನೀಡಿತ್ತು. ಈಗ ಈ ಸಂಬಂಧ ತೀರ್ಪು ಪ್ರಕಟವಾಗುವ ಮೂಲಕ ಪಬ್ಲಿಕ್‌ ಪರೀಕ್ಷೆಯ ಬಗ್ಗೆ ನಿರ್ಧಾರವಾಗಬೇಕಿದೆ. ಅಂದರೆ, 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನ ಕಾರ್ಯ ಮುಗಿದಿದ್ದು, ರಾಜ್ಯದ ಎಲ್ಲ ಶಾಲೆಗಳಲ್ಲಿ ದಿನಾಂಕ: 08-04-2024ರಂದು ಫಲಿತಾಂಶವನ್ನು ಪ್ರಕಟಿಸಲು ತಿಳಿಸಲಾಗಿತ್ತು. ಬಳಿಕ ಫಲಿತಾಂಶವನ್ನು ಪ್ರಕಟಿಸಲು ಸರ್ವೋಚ್ಚ ನ್ಯಾಯಾಲಯವು ತಡೆಯಾಜ್ಞೆಯನ್ನು ನೀಡಿದ್ದು, ಅಂತಿಮ ತೀರ್ಪು ಬಾಕಿ ಇದೆ. ಹೀಗಾಗಿ ಮುಂದಿನ ಪ್ರವೇಶಾತಿಯ ದೃಷ್ಟಿಯಿಂದ ಈ ನಿರ್ಧಾರಕ್ಕೆ ಬರಲಾಗಿದೆ.

ಈಗಿರುವ ಸಮಸ್ಯೆ ಏನು?

ಪ್ರಸ್ತುತ 2023-24ನೇ ಸಾಲಿನ ಶೈಕ್ಷಣಿಕ ವರ್ಷ ಅಂತ್ಯಗೊಳ್ಳುತ್ತಿದೆ. ಆದರೆ, ಸುಪ್ರೀಂ ಕೋರ್ಟ್‌ನಿಂದ ಪರೀಕ್ಷೆಯ ಬಗ್ಗೆ ಇನ್ನೂ ತೀರ್ಪು ಬಂದಿಲ್ಲ. ಹೀಗಾಗಿ ಈಗಾಗಲೇ ನಡೆಸಿದ ಪರೀಕ್ಷೆಯ ಮೌಲ್ಯಮಾಪನ ಸೇರಿದಂತೆ ಫಲಿತಾಂಶವನ್ನು ಪ್ರಕಟ ಮಾಡಲು ಶಾಲೆಗಳಿಗೆ ಅವಕಾಶ ಇಲ್ಲ. ಆದರೆ, ಮೇ 29ರಿಂದ 2024- 25ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ಇನ್ನು ಫಲಿತಾಂಶವೇ ಬರದೇ ಮುಂದಿನ ತರಗತಿಗಳಿಗೆ ಕಳುಹಿಸಲು ಆಗದ ಇಕ್ಕಟ್ಟಿನಲ್ಲಿ ಶಾಲಾ ಆಡಳಿತ ಮಂಡಳಿಗಳು ಇವೆ.

Public Exam Good news for students of classes 5 and 8 and 9 Important decision of Karnataka government

ವರ್ಗಾವಣೆಯಾದವರಿಗೂ ಭಾರಿ ಸಮಸ್ಯೆ!

2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದೇ ಇರುವುದರಿಂದ ಅವರನ್ನು ಮುಂದಿನ ಶೈಕ್ಷಣಿಕ ವರ್ಷಕ್ಕೆ/ತರಗತಿಗೆ ಶಾಲಾ ಪ್ರವೇಶ/ದಾಖಲಾತಿ ಮಾಡಲು, ಪ್ರವೇಶ ಶುಲ್ಕ ಪಾವತಿಸಲು ಹಾಗೂ ಬೇರೆ ಸ್ಥಳಗಳಿಗೆ ವರ್ಗಾವಣೆ ಹೊಂದಿರುವ ಪ್ರಯುಕ್ತ ಮಕ್ಕಳ ವರ್ಗಾವಣೆ ಪ್ರಮಾಣಪತ್ರ, ಪ್ರಗತಿ ಪತ್ರ ಮತ್ತು ವ್ಯಾಸಂಗ ಪ್ರಮಾಣಪತ್ರಗಳನ್ನು ವಿತರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಅಗತ್ಯ ಕ್ರಮ ವಹಿಸುವಂತೆ ಶಾಲೆಗಳು, ವಿದ್ಯಾರ್ಥಿಗಳು ಕೋರಿದ್ದಾರೆ. ಅದರಂತೆ ಮಕ್ಕಳ ಶೈಕ್ಷಣಿಕ ಭವಿಷ್ಯ ಸುಗಮಗೊಳಿಸುವ ಉದ್ದೇಶದಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಇದನ್ನೂ ಓದಿ: Legislative Council Election: ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್;‌ ಜೂನ್‌ 13ಕ್ಕೆ ಮತದಾನ

ಮೌಲ್ಯಾಂಕನದ ಆಧಾರದ ಮೇಲೆ ಪಾಸ್‌

ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ: 8142/2024, 8136/2024 ಮತ್ತು 8127/2024ರ ಮಧ್ಯಂತರ ತೀರ್ಪಿನಂತೆ, 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನವನ್ನು ತಡೆಹಿಡಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈಗಾಗಲೇ ಶಾಲೆಗಳಲ್ಲಿ ನಡೆದಿರುವ FA- 1, FA-2, FA-3, FA-4 ಮತ್ತು SA-1 ಗಳ ಮೌಲ್ಯಾಂಕನದ ಆಧಾರದ ಮೇಲೆ ಮಕ್ಕಳನ್ನು ಮುಂದಿನ ಶೈಕ್ಷಣಿಕ ತರಗತಿಗೆ ಮುಂದುವರಿಸಲು ಅವಕಾಶ ಕಲ್ಪಿಸುವ ನಿರ್ಧಾರವನ್ನು ಕೈಗೊಂಡಿದ್ದಾಗಿ ಆದೇಶದಲ್ಲಿ ತಿಳಿಸಲಾಗಿದೆ.

ಏನಿದು ಪಬ್ಲಿಕ್‌ ಪರೀಕ್ಷೆ ಮತ್ತು ಅದರ ಸುತ್ತಲಿನ ವಿವಾದ?

ಬಿಜೆಪಿ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದ ಬಿ.ಸಿ ನಾಗೇಶ್ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಮಾದರಿಯ ಮೌಲ್ಯಾಂಕನ ಪರೀಕ್ಷೆ ಜಾರಿಗೆ ತಂದಿದ್ದರು. ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ 9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್‌ ಎಕ್ಸಾಮ್‌ ನಡೆಸುವ ಚಿಂತನೆ ಮಾಡಲಾಗಿತ್ತು. 9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಪಬ್ಲಿಕ್‌ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಗಂಭೀರತೆ ಕಾಣಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಾದವಾಗಿತ್ತು.

ಆದರೆ, 2023ರ ಡಿಸೆಂಬರ್‌ನಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು. ವಾದ ಆಲಿಸಿದ ಹೈಕೋರ್ಟ್ ಸರ್ಕಾರ ಸುತ್ತೋಲೆ ರದ್ದುಗೊಳಿಸಿ ಆದೇಶಿಸಿತ್ತು. ತಕ್ಷಣವೇ ರಾಜ್ಯದ ಶಿಕ್ಷಣ ಇಲಾಖೆ ವತಿಯಿಂದ ಹೈಕೋರ್ಟ್‌ನ ದ್ವಿಸದಸ್ಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿತು. ಎರಡೂ ಕಡೆಯವರ ವಾದ ಮಾತ್ರವಲ್ಲ, ಪರೀಕ್ಷೆಗಳು ಹೇಗೆ ನಡೆಯುತ್ತವೆ ಎಂಬಿತ್ಯಾದಿ ಅಂಶಗಳನ್ನು ಕೇಳಿಸಿಕೊಂಡ ಹೈಕೋರ್ಟ್‌ ಪರೀಕ್ಷೆ ನಡೆಸಲು ಷರತ್ತುಬದ್ಧ ಅನುಮತಿಯನ್ನು ನೀಡಿತ್ತು.

ಇದನ್ನೂ ಓದಿ: Prajwal Revanna Case: ದೇವರಾಜೇಗೌಡರಿಗೆ ಮೆಂಟಲ್‌ ಟ್ರೀಟ್ಮೆಂಟ್‌ ಕೊಡಿಸಬೇಕಿದೆ: ಕಾಂಗ್ರೆಸ್‌ ವ್ಯಂಗ್ಯ

ಒಂದು ಹಂತದಲ್ಲಿ ಮಾರ್ಚ್‌ 13ರಂದು ನಡೆಯಬೇಕಾಗಿದ್ದ ಪರೀಕ್ಷೆಯನ್ನು ರದ್ದುಪಡಿಸಿದ್ದ ಹೈಕೋರ್ಟ್‌ ಮಾರ್ಚ್‌ 14ರಂದು ತೀರ್ಪು ನೀಡಿ ಪರೀಕ್ಷೆಗೆ ಅನುಮತಿ ನೀಡಿತು. ಜತೆಗೆ ಮಾರ್ಚ್‌ 27ರಿಂದಲೇ ಪರೀಕ್ಷೆಯನ್ನು ಮರುನಿಗದಿ ಮಾಡಲು ಸೂಚಿಸಿತು. ಜತೆಗೆ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳನ್ನು ಕೇಳಬಾರದು, ಯಾರನ್ನೂ ಅನುತ್ತೀರ್ಣಗೊಳಿಸಬಾರದು ಮತ್ತು ಫಲಿತಾಂಶವನ್ನು ಶಾಲಾ ಮಟ್ಟದಲ್ಲಿ ಮಾತ್ರ ಪ್ರಕಟಿಸಬೇಕು ಎಂಬ ಷರತ್ತುಗಳನ್ನು ವಿಧಿಸಿತು. ಇದಕ್ಕೆ ರಾಜ್ಯ ಸರ್ಕಾರವೂ ಒಪ್ಪಿ ಮಾರ್ಚ್‌ 27ರಿಂದ ಪರೀಕ್ಷೆಯನ್ನು ಆರಂಭಿಸಿತ್ತು.

ಈ ನಡುವೆ ಖಾಸಗಿ ಶಾಲೆಗಳ ಒಕ್ಕೂಟವು ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು. ಅರ್ಜಿಯ ವಿಚಾರಣೆ ನಡೆದು, ಪರೀಕ್ಷೆ ಈಗಾಗಲೇ ಆರಂಭಗೊಂಡಿರುವುದರಿಂದ ಈಗ ತಡೆಯಾಜ್ಞೆ ನೀಡಲಾಗದು ಎಂದು ಹೇಳಿತ್ತು. ಬಳಿಕ ಮೇಲ್ಮನವಿಯ ವಿಚಾರಣೆ ನಡೆದಿದ್ದು. ಅಂತಿಮವಾಗಿ ಪಬ್ಲಿಕ್‌ ಪರೀಕ್ಷೆಯ ವಿರುದ್ಧ ತಡೆಯಾಜ್ಞೆಯನ್ನು ನೀಡಲಾಗಿತ್ತು.

Continue Reading

ಕ್ರೀಡೆ

KKR vs SRH: ನಾಳೆ ಮೊದಲ ಕ್ವಾಲಿಫೈಯರ್‌ ಪಂದ್ಯ; ಗೆದ್ದವರಿಗೆ ನೇರ ಫೈನಲ್‌ ಸೋತವರಿಗೆ ಇನ್ನೊಂದು ಅವಕಾಶ

KKR vs SRH: 25 ವರ್ಷದ ಎಡಗೈ ದಾಂಡಿಗ ಅಭಿಷೇಕ್​ ಶರ್ಮ ಮತ್ತು ಟ್ರಾವಿಸ್​ ಹೆಡ್​​ ಜಿದ್ದಿಗೆ ಬಿದ್ದವತರಂತೆ ಬ್ಯಾಟ್​ ಬೀಸಿ ಉತ್ತಮ ಆರಂಭ ಒದಗಿಸುತ್ತಿದ್ದಾರೆ. ಈ ಜೋಡಿ ಪವರ್​ ಪ್ಲೇ ತನಕ ಆಡಿದರೆ ದೊಡ್ಡ ಮೊತ್ತ ಹರಿದು ಬರುವುದರಲ್ಲಿ ಯಾವುದೇ ಅನುಮಾನ ಬೇಡ. ಈಗಾಗಲೇ ಈ ಜೋಡಿ ಲೀಗ್​ನಲ್ಲಿ ಅಬ್ಬರದ ಬ್ಯಾಟಿಂಗ್​ ನಡೆಸಿ 5 ಓವರ್​ನಲ್ಲಿಯೇ 100ರ ಗಡಿ ದಾಟಿದ ದಾಖಲೆಯನ್ನು ಕೂಡ ಹೊಂದಿದ್ದಾರೆ

VISTARANEWS.COM


on

KKR vs SRH
Koo

ಅಹಮದಾಬಾದ್​: 17ನೇ ಆವೃತ್ತಿಯ ಐಪಿಎಲ್‌(IPL 2024) ಪಂದ್ಯಾವಳಿ ತನ್ನ ಲೀಗ್‌ ವ್ಯವಹಾರವನ್ನು ಮುಗಿಸಿದೆ. ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್​ ಕಿಂಗ್ಸ್​ ಪ್ಲೇ ಆಫ್‌ ರೇಸ್‌ನಿಂದ ಹೊರಬಿದ್ದದ್ದು, ಪಾತಾಳದಲ್ಲಿದ್ದ ಆರ್​ಸಿಬಿ ಸತತವಾಗಿ 6 ಪಂದ್ಯಗಳನ್ನು ಗೆದ್ದು ಫೀನಿಕ್ಸ್‌ನಂತೆ ಎದ್ದು ನಿಂತು 4ನೇ ಸ್ಥಾನ ಅಲಂಕರಿಸಿದ್ದೆಲ್ಲ ಲೀಗ್‌ ಹಂತದ ಅಚ್ಚರಿ. ಇನ್ನು ಕ್ವಾಲಿಫೈಯರ್​ ಮತ್ತು ಎಲಿಮಿನೇಟರ್​ ಪಂದ್ಯದ ಕೌತುಕ.

ನಾಳೆ(ಮಂಗಳವಾರ) ನಡೆಯುವ ಮೊದಲ ಕ್ವಾಲಿಫೈಯರ್‌(KKR vs SRH Qualifier 1) ಪಂದ್ಯದಲ್ಲಿ ಈ ಬಾರಿಯ ಕೂಟದ ಅತ್ಯಂತ ಬಲಿಷ್ಠ ತಂಡಗಳಾದ ಕೋಲ್ಕತ್ತಾ ನೈಟ್​ ರೈಡರ್ಸ್(KKR vs SRH)​ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ತಂಡಗಳು ಕಣಕ್ಕಿಳಿಯಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ಇತ್ತಂಡಗಳ ಈ ಪಂದ್ಯ ಜಿದ್ದಾಜಿದ್ದಿ ಹೋರಾಟವೊಂದಕ್ಕೆ ಸಾಕ್ಷಿಯಾಗುವ ಎಲ್ಲ ಸಾಧ್ಯತೆ ಇದೆ. ಇದರ ಮಧ್ಯೆ ಮಳೆಯ ಭೀತಿ ಕೂಡ ಎದುರಾಗಿದೆ.

ಇತ್ತಂಡಗಳಲ್ಲಿ ಕೆಕೆಆರ್​ ಲೀಗ್‌ ಹಂತದ ಅಗ್ರಸ್ಥಾನಿ ಎಂಬ ಹೆಗ್ಗಳಿಕೆ ಇದೆ. ಅಷ್ಟೇ ಅಲ್ಲ, ಲೀಗ್‌ ಹಂತದಲ್ಲಿ ಎದುರಾದ ಒಂದು ಪಂದ್ಯಗಳಲ್ಲಿ ಹೈದರಾಬಾದ್​ಗೆ 4 ರನ್​ ಅಂತರದ ಸೋಲುಣಿಸಿದ ಹಿರಿಮೆಯನ್ನೂ ಹೊಂದಿದೆ. ಜತೆಗೆ ಉಭಯ ತಂಡಗಳು 26 ಬಾರಿ ಮುಖಾಮುಖಿಯಾಗಿದ್ದು ಈ ಪೈಕಿ ಕೆಕೆಆರ್​ 17 ಪಂದ್ಯ ಗೆದ್ದಿದೆ. ಹೈದರಾಬಾದ್​ ಗೆದ್ದಿರುವುದು ಕೇವಲ 9 ಪಂದ್ಯ ಮಾತ್ರ. ಈ ಲೆಕ್ಕಾಚಾರದಲ್ಲಿ ಕೆಕೆಆರ್​ ನೆಚ್ಚಿನ ತಂಡ ಎಂಬುದರಲ್ಲಿ ಅನುಮಾನವಿಲ್ಲ.

ಹೆಡ್​-ಅಭಿಷೇಕ್​ ಬಲ


25 ವರ್ಷದ ಎಡಗೈ ದಾಂಡಿಗ ಅಭಿಷೇಕ್​ ಶರ್ಮ ಮತ್ತು ಟ್ರಾವಿಸ್​ ಹೆಡ್​​ ಜಿದ್ದಿಗೆ ಬಿದ್ದವತರಂತೆ ಬ್ಯಾಟ್​ ಬೀಸಿ ಉತ್ತಮ ಆರಂಭ ಒದಗಿಸುತ್ತಿದ್ದಾರೆ. ಈ ಜೋಡಿ ಪವರ್​ ಪ್ಲೇ ತನಕ ಆಡಿದರೆ ದೊಡ್ಡ ಮೊತ್ತ ಹರಿದು ಬರುವುದರಲ್ಲಿ ಯಾವುದೇ ಅನುಮಾನ ಬೇಡ. ಈಗಾಗಲೇ ಈ ಜೋಡಿ ಲೀಗ್​ನಲ್ಲಿ ಅಬ್ಬರದ ಬ್ಯಾಟಿಂಗ್​ ನಡೆಸಿ 5 ಓವರ್​ನಲ್ಲಿಯೇ 100ರ ಗಡಿ ದಾಟಿದ ದಾಖಲೆಯನ್ನು ಕೂಡ ಹೊಂದಿದ್ದಾರೆ. ಅಭಿಷೇಕ್​ ಶರ್ಮ ಈ ಬಾರಿಯ ಕೂಟದಲ್ಲಿ 41 ಸಿಕ್ಸರ್​ ಬಾರಿಸಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಹೆನ್ರಿಚ್​ ಕ್ಲಾಸೆನ್​, ಐಡೆನ್​ ಮಾರ್ಕ್ರಮ್​ ಸಿಡಿದು ನಿಂತು ಪಂದ್ಯದ ಗತಿಯನ್ನೇ ಬದಲಿಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಬೌಲಿಂಗ್​ನಲ್ಲಿ ನಾಯಕ ಪ್ಯಾಟ್​ ಕಮಿನ್ಸ್​, ಭುವನೇಶ್ವರ್​ ಕುಮಾರ್​, ಟಿ. ನಟರಾಜನ್​ ಎದುರಾಳಿಗಳನ್ನು ಕಟ್ಟಿ ಹಾಕುವಲ್ಲಿ ಸಮರ್ಥರಿದ್ದಾರೆ.

ಇದನ್ನೂ ಓದಿ KKR vs SRH Qualifier 1: ಕೆಕೆಆರ್​-ಹೈದರಾಬಾದ್​ ಮುಖಾಮುಖಿ ದಾಖಲೆ, ಪಿಚ್​ ರಿಪೋರ್ಟ್​ ಹೇಗಿದೆ?

ಕೆಕೆಆರ್​ ಕೂಡ ಸಮರ್ಥ ತಂಡ


ಗೌತಮ್​ ಗಂಭಿರ್​ ಅವರ ಮಾರ್ಗದರ್ಶನ ಮತ್ತು ಆಟಗಾರರ ಸಂಘಟಿತ ಪ್ರದರ್ಶನ ಕೆಕೆಆರ್​ ಪಾಲಿನ ಬಲ. ಅದರಲ್ಲೂ ಆಲ್​ರೌಂಡರ್​ ಸುನೀಲ್​ ನರೈನ್​ ಅವರಂತು ಈ ಬಾರಿ ಪ್ರಚಂಡ ಫಾರ್ಮ್​ನಲ್ಲಿದ್ದಾರೆ. ತಂಡಕ್ಕೆ ಹಿನ್ನಡೆಯಾಗಿರುವುದೆಂದರೆ ಇಂಗ್ಲೆಂಡ್​ನ ಫಿಲ್​ ಸಾಲ್ಟ್ ಪಾಕ್​ ವಿರುದ್ಧದ ಟಿ20 ಸರಣಿಯ ಭಾಗವಾಗಿ ತವರಿಗೆ ಮರಳಿದ್ದು. ಹೀಗಾಗಿ ಅವರ ತಂಡ ಇವರ ಸೇವೆ ಕಳೆದುಕೊಂಡಿದೆ. ಇವರ ಸ್ಥಾನದಲ್ಲಿ ಅಫಘಾನಿಸ್ತಾನದ ರಹಮಾನುಲ್ಲಾ ಗುರ್ಬಾಜ್ ಈ ಪಂದ್ಯದಲ್ಲಿ ಆಡಲಿದ್ದಾರೆ. ಮೊದಲ ಪಂದ್ಯವನ್ನಾಡುತ್ತಿರುವ ಕಾರಣ ಅವರ ಫಾರ್ಮ್​ ಹೇಗಿರಲಿದೆ ಎನ್ನುವುದು ಕೂಡ ಇಲ್ಲಿ ಮುಖ್ಯವಾಗಿದೆ.

ಆ್ಯಂಡ್ರೆ ರೆಸಲ್​ ಈ ಬಾರಿ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡೂ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ತೋರಿದ್ದಾರೆ. ಯುವ ಆಟಗಾರ ಆಂಗ್ಕ್ರಿಶ್ ರಘುವಂಶಿ, ಗಾಯದಿಂದ ಚೇತರಿಕೆ ಕಂಡು ಕಮ್​ಬ್ಯಾಕ್​ ಮಾಡಿರುವ ನಿತೇಶ್​ ರಾಣಾ, ವೆಂಕಟೇಶ್​ ಅಯ್ಯರ್​ ಮತ್ತು ನಾಯಕ ಶ್ರೇಯಸ್​ ಅಯ್ಯರ್​ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್​ ನೆರವು ನೀಡಲಿದ್ದಾರೆ. ರಿಂಕು ಸಿಂಗ್​ ಕಳೆದ ಆವೃತ್ತಿಯಲ್ಲಿ ತೋರಿದ ಪ್ರದರ್ಶನ ಇದುವರೆಗೂ ತೋರಿಲ್ಲ. ಹೀಗಾಗಿ ಈ ಮಹತ್ವದ ಪಂದ್ಯದಲ್ಲಿ ಅವರು ಅಬ್ಬರಿಸುವ ಅನಿವಾರ್ಯತೆ ಇದೆ. 24 ಕೋಟಿ ವೀರ ಮಿಚೆಲ್​ ಸ್ಟಾರ್ಕ್​ ಈ ಪಂದ್ಯದಲ್ಲಾದರೂ ತಾವು ಪಡೆದ ಈ ಮೊತ್ತಕ್ಕೆ ನ್ಯಾಯ ಒದಗಿಸಲೇ ಬೇಕು. ದುಬಾರಿ ಮೊತ್ತ ಪಡೆದರೂ ಕೂಡ ಅವರಿಂದ ನಿರೀಕ್ಷಿತ ಪ್ರದರ್ಶನ ಕಂಡುಬಂದಿಲ್ಲ.

Continue Reading

ವಿದೇಶ

ಇಸ್ರೇಲ್‌ ಪಿಎಂ ಬೆಂಜಮಿನ್‌ ನೆತನ್ಯಾಹು, ಹಮಾಸ್‌ ಉಗ್ರರಿಗೆ ಜಾಗತಿಕ ಕೋರ್ಟ್‌ ಅರೆಸ್ಟ್‌ ವಾರೆಂಟ್! ಶೀಘ್ರ ಬಂಧನ?

ಕಳೆದ ಏಳು ತಿಂಗಳಲ್ಲಿ ಇಸ್ರೇಲ್‌ ಹಾಗೂ ಪ್ಯಾಲೆಸ್ತೀನ್‌ನಲ್ಲಿ ನಡೆದ ಹಿಂಸಾಚಾರ, ಮಾನವ ಹಕ್ಕುಗಳ ದಮನ, ಪ್ರಾದೇಶಿಕ ಅಸ್ಥಿರತೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಬೆಂಜಮಿನ್‌ ನೆತನ್ಯಾಹು ಸೇರಿ ಹಲವರ ವಿರುದ್ಧ ಅರೆಸ್ಟ್‌ ವಾರೆಟ್‌ ಹೊರಡಿಸಬೇಕು ಎಂಬುದಾಗಿ ಐಸಿಸಿ ಆದೇಶಿಸಿದೆ ಎಂದು ಕೋರ್ಟ್‌ನ ಮುಖ್ಯ ಪ್ರಾಸಿಕ್ಯೂಟರ್‌ ಆಗಿರುವ ಕರೀಮ್‌ ಖಾನ್‌ ಮಾಹಿತಿ ನೀಡಿದ್ದಾರೆ.

VISTARANEWS.COM


on

Benjamin Netanyhu
Koo

ಹೇಗ್:‌ ಕಳೆದ ಅಕ್ಟೋಬರ್‌ನಿಂದಲೂ ಗಾಜಾ ನಗರದ ಮೇಲೆ ಇಸ್ರೇಲ್‌ ಪ್ರತಿದಾಳಿ ಮಾಡುತ್ತಿದೆ. ಹಮಾಸ್‌ ಉಗ್ರರ ದಾಳಿಗೆ ಪ್ರತಿಯಾಗಿ ಇಸ್ರೇಲ್‌ ದಾಳಿ ನಡೆಸುತ್ತಿದೆ. ಇದರ ಬೆನ್ನಲ್ಲೇ, ಯುದ್ಧಾಪರಾಧದ ಹಿನ್ನೆಲೆಯಲ್ಲಿ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು (Benjamin Netanyahu) ಹಾಗೂ ಮೂವರು ಹಮಾಸ್‌ ಉಗ್ರರ ವಿರುದ್ಧ ಇಂಟರ್‌ನ್ಯಾಷನಲ್‌ ಕ್ರಿಮಿನಲ್‌ ಕೋರ್ಟ್‌ (International Criminal Court) ಅರೆಸ್ಟ್‌ ವಾರಂಟ್‌ ಹೊರಡಿಸಲು ಮುಂದಾಗಿದೆ. ಯುದ್ಧಾಪರಾಧದ ಹಿನ್ನೆಲೆಯಲ್ಲಿ ಅರೆಸ್ಟ್‌ ವಾರಂಟ್‌ ಹೊರಡಿಸಲಿದೆ ಎಂದು ಹೇಳಲಾಗುತ್ತಿದೆ.

ಬೆಂಜಮಿನ್‌ ನೆತನ್ಯಾಹು, ಇಸ್ರೇಲ್‌ ರಕ್ಷಣಾ ಸಚಿವ ಯೊಯಾವ್‌ ಗ್ಯಾಲಂಟ್‌, ಹಮಾಸ್‌ ಉಗ್ರ ಸಂಘಟನೆಯ ಯೆಹಿಯಾ ಸಿನ್ವರ್‌, ಮೊಹಮ್ಮದ್‌ ಡೈಫ್‌ ಹಾಗೂ ಇಸ್ಮಾಯಿಲ್‌ ಹನಿಯೇಹ್‌ ವಿರುದ್ಧ ಅರೆಸ್ಟ್‌ ವಾರಂಟ್‌ ಹೊರಡಿಸಬೇಕು ಎಂಬುದು ಜಾಗತಿಕ ಕೋರ್ಟ್‌ನ ಆದೇಶವಾಗಿದೆ. ಕಳೆದ ಏಳು ತಿಂಗಳಲ್ಲಿ ಇಸ್ರೇಲ್‌ ಹಾಗೂ ಪ್ಯಾಲೆಸ್ತೀನ್‌ನಲ್ಲಿ ನಡೆದ ಹಿಂಸಾಚಾರ, ಮಾನವ ಹಕ್ಕುಗಳ ದಮನ, ಪ್ರಾದೇಶಿಕ ಅಸ್ಥಿರತೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಇವರ ವಿರುದ್ಧ ಅರೆಸ್ಟ್‌ ವಾರೆಟ್‌ ಹೊರಡಿಸಬೇಕು ಎಂಬುದಾಗಿ ಐಸಿಸಿ ಆದೇಶಿಸಿದೆ ಎಂದು ಕೋರ್ಟ್‌ನ ಮುಖ್ಯ ಪ್ರಾಸಿಕ್ಯೂಟರ್‌ ಆಗಿರುವ ಕರೀಮ್‌ ಖಾನ್‌ ಮಾಹಿತಿ ನೀಡಿದ್ದಾರೆ.

ಕರೀಮ್‌ ಖಾನ್‌ ಅವರು ಅರೆಸ್ಟ್‌ ವಾರಂಟ್‌ ಕುರಿತು ಸಲ್ಲಿಸುವ ದಾಖಲೆಗಳ ಆಧಾರದ ಮೇಲೆ ಅಂತಾರಾಷ್ಟ್ರೀಯ ಕ್ರಿಮಿನಲ್‌ ಕೋರ್ಟ್‌ ನ್ಯಾಯಮೂರ್ತಿಗಳು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಅರೆಸ್ಟ್‌ ವಾರಂಟ್‌ ಹೊರಡಿಸಿದರೂ ಬೆಂಜಮಿನ್‌ ನೆತನ್ಯಾಹು ಹಾಗೂ ಅವರ ರಕ್ಷಣಾ ಸಚಿವರ ಬಂಧನ ಆಗುವುದಿಲ್ಲ ಎಂದು ತಿಳಿದುಬಂದಿದೆ. ಇಂಟರ್‌ನ್ಯಾಷನಲ್‌ ಕ್ರಿಮಿನಲ್‌ ಕೋರ್ಟ್‌ನ ಸದಸ್ಯತ್ವವನ್ನು ಇಸ್ರೇಲ್‌ ಪಡೆದಿಲ್ಲ. ಹಾಗಾಗಿ, ಕೋರ್ಟ್‌ ಅರೆಸ್ಟ್‌ ವಾರಂಟ್‌ ಹೊರಡಿಸಿದರೂ ಬಂಧನ ಸಾಧ್ಯವಿಲ್ಲ ಎಂದೇ ವಿಶ್ಲೇಷಿಸಲಾಗುತ್ತಿದೆ.

ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ನಡೆಸಿ 1,200 ನಾಗರಿಕರ ಸಾವಿಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಇಸ್ರೇಲ್, ಗಾಜಾಪಟ್ಟಿಯಲ್ಲಿನ ಹಮಾಸ್ ಉಗ್ರರನ್ನು ನಾಶ ಮಾಡುವ ಪಣತೊಟ್ಟು, ಸೇನಾ ಕಾರ್ಯಾಚರಣೆಯನ್ನು ಕೈಗೆತ್ತಿಕೊಂಡಿದೆ. ಗಾಜಾ ನಗರದ ಮೇಲೆ ಇಸ್ರೇಲ್‌ ನಡೆಸುತ್ತಿರುವ ನಿರಂತರ ದಾಳಿಗಳಿಂದಾಗಿ ಸಾವಿರಾರು ಜನ ಮೃತಪಟ್ಟಿದ್ದಾರೆ. ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ಸಾವಿರಾರು ಕಟ್ಟಡಗಳು ಧರೆಗುರುಳಿವೆ. ಇಷ್ಟಾದರೂ ಇಸ್ರೇಲ್‌ ಪ್ರತಿದಾಳಿ ನಿಲ್ಲಿಸುತ್ತಿಲ್ಲ.

ಇದನ್ನೂ ಓದಿ: Al Jazeera: ಹಮಾಸ್‌ ಉಗ್ರರ ಪರ ನಿಲುವು; ಇಸ್ರೇಲ್‌ನಲ್ಲಿ ಅಲ್‌ಜಜೀರಾ ಚಾನೆಲ್‌ ಬಂದ್‌ ಮಾಡಿದ ನೆತನ್ಯಾಹು!

Continue Reading
Advertisement
Lok Sabha Election
ದೇಶ6 mins ago

Lok Sabha Election: 5ನೇ ಹಂತದಲ್ಲಿ ಕೇವಲ ಶೇ.56ರಷ್ಟು ಮತದಾನ; ಯಾವ ರಾಜ್ಯದಲ್ಲಿ ಹೆಚ್ಚು?

Public Exam Good news for students of classes 5 and 8 and 9 Important decision of Karnataka government
ಶಿಕ್ಷಣ10 mins ago

Public Exam: 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; ರಾಜ್ಯ ಸರ್ಕಾರದ ಮಹತ್ವ ನಿರ್ಧಾರ

KKR vs SRH
ಕ್ರೀಡೆ21 mins ago

KKR vs SRH: ನಾಳೆ ಮೊದಲ ಕ್ವಾಲಿಫೈಯರ್‌ ಪಂದ್ಯ; ಗೆದ್ದವರಿಗೆ ನೇರ ಫೈನಲ್‌ ಸೋತವರಿಗೆ ಇನ್ನೊಂದು ಅವಕಾಶ

Air Crashes
ವಿದೇಶ23 mins ago

Air Crashes: ವಿಮಾನ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ 10 ಪ್ರಭಾವಿ ರಾಜಕಾರಣಿಗಳಿವರು

Phone Tapping
ಕರ್ನಾಟಕ33 mins ago

Phone Tapping: ಎಚ್‌ಡಿಕೆ ಫೋನ್‌ ಟ್ಯಾಪ್‌ ಮಾಡೋಕೆ, ಅವರೇನು ಟೆರರಿಸ್ಟಾ? ಎಂದ ಡಿಕೆಶಿ

Star Fashion
ಫ್ಯಾಷನ್35 mins ago

Star Fashion: ಮಾಲಾಶ್ರೀ ಮಗಳ ಬಿಗ್‌ ಬ್ಲ್ಯಾಕ್‌ ಜುಮ್ಕಾ ಲವ್‌!

Benjamin Netanyhu
ವಿದೇಶ36 mins ago

ಇಸ್ರೇಲ್‌ ಪಿಎಂ ಬೆಂಜಮಿನ್‌ ನೆತನ್ಯಾಹು, ಹಮಾಸ್‌ ಉಗ್ರರಿಗೆ ಜಾಗತಿಕ ಕೋರ್ಟ್‌ ಅರೆಸ್ಟ್‌ ವಾರೆಂಟ್! ಶೀಘ್ರ ಬಂಧನ?

Legislative Council Election dates fixedVoting on June 13
ರಾಜಕೀಯ40 mins ago

Legislative Council Election: ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್;‌ ಜೂನ್‌ 13ಕ್ಕೆ ಮತದಾನ

Covaxin Safety
ದೇಶ1 hour ago

Covaxin Safety: ಕೊವ್ಯಾಕ್ಸಿನ್‌ನಿಂದ ಅಡ್ಡ ಪರಿಣಾಮ ಎಂದು ಬನಾರಸ್‌ ವಿವಿ ವರದಿ; ವೈದ್ಯ ಸಂಶೋಧನಾ ಸಂಸ್ಥೆ ಆಕ್ಷೇಪ

Food department deletes name from ration card list even though it is alive
ವಿಜಯನಗರ1 hour ago

Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌