Dina Bhavishya : ಹುಷಾರು.. ಆಪ್ತರಿಂದಲೇ ಈ ರಾಶಿಯವರಿಗೆ ಇಂದು ಅಪಾಯ! Vistara News

ಪ್ರಮುಖ ಸುದ್ದಿ

Dina Bhavishya : ಹುಷಾರು.. ಆಪ್ತರಿಂದಲೇ ಈ ರಾಶಿಯವರಿಗೆ ಇಂದು ಅಪಾಯ!

Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಯುಜ ಮಾಸ, ಶುಕ್ಲ ಪಕ್ಷದ ಚತುರ್ದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಶುಕ್ರವಾರವೂ ಮೇಷ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರಿಗೆ ನಿಮ್ಮ ಆಪ್ತರಿಂದ ಸಮಸ್ಯೆಯನ್ನು ಉಂಟು ಮಾಡುವ ಸಾಧ್ಯತೆ ಇದೆ. ಅನಗತ್ಯ ಒತ್ತಡ ನಿಮ್ಮ ಮನಸ್ಸಿಗೆ ಘಾಸಿಯನ್ನುಂಟು ಮಾಡಲಿದೆ. ಮಿಥುನ ರಾಶಿಯವರಿಗೆ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ವಹಿಸಿ, ಆತುರದಲ್ಲಿ ಅತಿರೇಕದ ಮಾತುಗಳನ್ನಾಡಿ ಅಪಾಯ ತಂದುಕೊಳ್ಳುವುದು ಬೇಡ. ತುಲಾ ರಾಶಿಯವರಿಗೆ ಅನಿರೀಕ್ಷಿತ ಘಟನೆಗಳು ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ಒತ್ತಡಕ್ಕೆ ಒಳಗಾಗದೆ, ತಾಳ್ಮೆಯಿಂದ ಇರಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (26-10-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಯುಜ ಮಾಸ, ಶುಕ್ಲ ಪಕ್ಷ.
ತಿಥಿ: ಚತುರ್ದಶಿ 28:16
ವಾರ: ಶುಕ್ರವಾರ
ನಕ್ಷತ್ರ: ಉತ್ತರಾ ಭಾದ್ರಪದ 09:23 ಯೋಗ: ಹರ್ಷಣ 26:00
ಕರಣ: ತೈತುಲ 06:56 / ಗರಜ 17:35 ಅಮೃತ ಕಾಲ: ಬೆಳಗ್ಗೆ 5:18 ರಿಂದ 6:47ರವರೆಗೆ
ದಿನದ ವಿಶೇಷ: ಚಾಮುಂಡೇಶ್ವರಿ ರಥೋತ್ಸವ, ರಾಮತೀರ್ಥ ಆರಾಧನೆ, ಮಚ್ಚಿಕೆರೆ ಜಾತ್ರೆ

ಸೂರ್ಯೋದಯ : 06:12  ಸೂರ್ಯಾಸ್ತ : 05:55

ರಾಹುಕಾಲ: ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಹೆಚ್ಚಾಗಲಿದೆ. ನಿಮ್ಮ ಆಪ್ತರು ಸಮಸ್ಯೆಯನ್ನು ಉಂಟು ಮಾಡುವ ಸಾಧ್ಯತೆ ಇದೆ. ಅನಗತ್ಯ ಒತ್ತಡ ನಿಮ್ಮ ಮನಸ್ಸಿಗೆ ಘಾಸಿಯನ್ನುಂಟು ಮಾಡಲಿದೆ. ಸಂಗಾತಿಯ ಮಧುರ ಮಾತುಗಳು ಹಿತವೆನಿಸುಬಹುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ದೀರ್ಘಕಾಲದ ಪ್ರಯತ್ನ ನಿಮಗೆ ಯಶಸ್ಸು ತಂದು ಕೊಡಲಿದೆ. ಹಿಂದೆ ನೀವು ಮಾಡಿದ ಸಹಾಯ ಇಂದು ಫಲ ನೀಡಲಿದೆ. ಹಿರಿಯರಿಂದ ಪ್ರಶಂಸೆ ವ್ಯಕ್ತವಾಗಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ವ್ಯಾಪಾರದಲ್ಲಿ ಅಭಿವೃದ್ಧಿ ಕಾಣಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಆಹಾರ ಹಿತ ಮಿತವಾಗಿರಲಿ, ಇಲ್ಲವಾದಲ್ಲಿ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ವಹಿಸಿ, ಆತುರದಲ್ಲಿ ಅತಿರೇಕದ ಮಾತುಗಳನ್ನಾಡಿ ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕಟಕ: ಉದ್ಯೋಗಿಗಳಿಗೆ ಉತ್ತಮ ಯಶಸ್ಸು ಸಿಗಲಿದೆ. ಅವಶ್ಯಕ ಖರೀದಿಯ ಕಾರಣಗಳಿಂದ ಖರ್ಚು ಅಷ್ಟೇ ಹಣಕಾಸಿನ ಹರಿವು ಹೆಚ್ಚಾಗಲಿದೆ. ಕುಟುಂಬದಲ್ಲಿ ಚರ್ಚಿಸುವ ವಿಷಯಗಳು ನಿಮ್ಮನ್ನು ಭಾವುಕರನ್ನಾಗಿ ಮಾಡುವುದು. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಸೃಜನಾತ್ಮಕ ಕೆಲಸ ಕಾರ್ಯಗಳಿಂದ ಯಶಸ್ಸು ಸಿಗಲಿದೆ. ಉತ್ತಮ ಆರೋಗ್ಯ ನಿಮ್ಮದಾಗಲಿದೆ. ಆರ್ಥಿಕವಾಗಿ ಸದೃಢವಾಗಲಿದ್ದಿರಿ. ಅತಿಥಿಗಳ ಆಗಮನ ಸಂತಸ ತರಲಿದೆ. ಉದ್ಯೋಗಿಗಳಿಗೆ ಕೆಲಸದ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ಹೂಡಿಕೆ ವ್ಯವಹಾರದಲ್ಲಿ ಹೆಚ್ಚು ಲಾಭ ಸಿಗಲಿದೆ. ನಿಮ್ಮ ನಡವಳಿಕೆ ಕುಟುಂಬದ ಸದಸ್ಯರಿಗೆ ಕೋಪ ತರಿಸಬಹುದು. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಹೆಚ್ಚು ಲಾಭ ತರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅನಿರೀಕ್ಷಿತ ಘಟನೆಗಳು ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ಒತ್ತಡಕ್ಕೆ ಒಳಗಾಗದೆ, ತಾಳ್ಮೆಯಿಂದ ಇರಿ. ಹಿರಿಯರ ಮಾರ್ಗದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಭೇಟಿ ಮನಸ್ಸಿಗೆ ಸಮಾಧಾನ ತರುವುದು. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಪೋಷಕರ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಕೆಲಸ ಕಾರ್ಯಗಳು ಆಲಸ್ಯದಿಂದ ಸಾಗಲಿದ್ದು, ಮುಂಜಾಗ್ರತೆ ವಹಿಸಿ. ವ್ಯಾಪಾರ ವ್ಯವಹಾರದಲ್ಲಿ ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

ಜೇಡರ ದಾಸಿಮಯ್ಯರ ವಚನ ಎಲ್ಲಿರುಗೂ ಆದರ್ಶ

Horoscope Today

ಧನಸ್ಸು: ಅಧಿಕ ಉತ್ಸಾಹದಿಂದ ಇರುವಿರಿ. ಆದರೂ ಕೆಲಸದ ಒತ್ತಡ ತಪ್ಪದು. ವ್ಯಾಪಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಬರುವ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಶಕ್ತಿ ನಿಮ್ಮಲ್ಲಿ ಇದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಮಕರ: ಮುಂಗೋಪದಿಂದ ಆಡುವ ಮಾತುಗಳಿಂದ ತೊಂದರೆಯಲ್ಲಿ ಸಿಲುಕಿ, ಅಪಾಯ ತಂದುಕೊಳ್ಳುವುದು ಬೇಡ. ಭೂ ಸಂಬಂಧಿ ವ್ಯವಹಾರ, ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಜೊತೆಯಲ್ಲಿ ಇರುವವುರೊಂದಿಗೆ ಅನಾವಶ್ಯಕ ಜಗಳಗಳು ನಡೆಯುವ ಸಾಧ್ಯತೆ ಇದೆ. ಮಾತಿನಲ್ಲಿ ನಿಗಾ ಇರಲಿ. ಉದ್ಯೋಗಿಗಳಿಗೆ ಉತ್ತಮ ದಿನ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ಅನಾವಶ್ಯಕ ವಿಚಾರಗಳು ನಿಮ್ಮ ಮಾನಸಿಕ ನೆಮ್ಮದಿ ಹಾಳುಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸಹನೆ ಕಳೆದುಕೊಳ್ಳುವುದು ಬೇಡ. ನೆರೆಹೊರೆಯವರ ಜತೆಗೆ ವಾದಕ್ಕೆ ಇಳಿಯುವುದು ಬೇಡ. ಆರೋಗ್ಯ ಮಧ್ಯಮವಾಗಿ ಇರಲಿದೆ. ಕೌಟುಂಬಿಕ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಮೀನ: ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ನಿಮ್ಮ ಅಭಿಪ್ರಾಯಗಳನ್ನು ಇತರರು ಒಪ್ಪಿಕೊಳ್ಳದಿರಬಹುದು. ಮನೆಯಲ್ಲಿ ಹಿರಿಯರೊಂದಿಗೆ ಮಾತಿಗೆ ಇಳಿಯುವುದು ಬೇಡ. ವ್ಯಾಪಾರ ವ್ಯವಹಾರ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

ಛತ್ತೀಸ್‍‌ಗಢ ಸಿಎಂ ವಿಷ್ಣುಗೆ ಇಬ್ಬರು ಡೆಪ್ಯುಟಿಗಳು; ರಮಣ್ ಸಿಂಗ್ ಸ್ಪೀಕರ್

Chhattisgarh: ಆದಿವಾಸಿ ಸಮುದಾಯದ ಪ್ರಮುಖ ನಾಯಕ ವಿಷ್ಣು ದೇವ ಸಾಯಿ ಅವರನ್ನು ಬಿಜೆಪಿಯು ಛತ್ತೀಸ್‌ಗಢ ಮುಖ್ಯಮಂತ್ರಿಗೆ ಆಯ್ಕೆ ಮಾಡಿದೆ.

VISTARANEWS.COM


on

Chhattisgarh to be CM Vishnu has two deputies and Raman Singh Speaker
Koo

ನವದೆಹಲಿ: ಛತ್ತೀಸ್‌ಗಢದಲ್ಲಿ (Chhattisgarh) ಎಲ್ಲರ ನಿರೀಕ್ಷೆ ಹುಸಿ ಮಾಡಿ ಭಾರತೀಯ ಜನತಾ ಪಾರ್ಟಿ (BJP Party) ಗೆಲುವು ಸಾಧಿಸಿ, ವಾರದ ಬಳಿಕ ವಿಷ್ಣು ದೇವ ಸಾಯಿ (Vishnu Deo Sai) ಅವರನ್ನು ಮುಖ್ಯಮಂತ್ರಿಯಾಗಿ ಪಕ್ಷವು ಭಾನುವಾರ ಘೋಷಿಸಿದೆ. ಸಿಎಂ ಪೋಸ್ಟ್‌ಗೆ ಸಾಕಷ್ಟು ಹೆಸರುಗಳು ಕೇಳಿ ಬಂದಿದ್ದವು. ಹಾಗಾಗಿ, ಎರಡು ಉಪ ಮುಖ್ಯಮಂತ್ರಿ (Two Deputy CM) ಹುದ್ದೆಗಳನ್ನು ಸೃಜಿಸಲಾಗಿದೆ. ಸಿಎಂ ರೇಸ್‌ನಲ್ಲಿ ತೀವ್ರ ಪೈಪೋಟಿ ನೀಡಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಅರುಣ್ ಸಾವೋ ಹಾಗೂ ಇತರ ಹಿಂದುಳಿದ ವರ್ಗದ ನಾಯಕ ವಿಜಯ್ ಶರ್ಮಾ ಅವರನ್ನು ಡಿಸಿಎಂಗಳಾಗಿ ನೇಮಕ ಮಾಡಲಾಗಿದೆ. ಮಾಜಿ ಸಿಎಂ ರಮಣ್ ಸಿಂಗ್ (Raman singh) ಅವರು ವಿಧಾನಸಭೆ ಸ್ಪೀಕರ್ (Speaker) ಆಗಲಿದ್ದಾರೆ.

15 ವರ್ಷಗಳ ಕಾಲ ಛತ್ತೀಸ್‌ಗಢ ಮುಖ್ಯಮಂತ್ರಿಯಾಗಿದ್ದ ರಮಣ್ ಸಿಂಗ್ ಅವರು ಈ ಬಾರಿ ಸಿಎಂ ಹುದ್ದೆಗೆ ಭಾರೀ ಪೈಪೋಟಿ ನಡೆಸಿದ್ದರು. ಆದರೆ, ಸಿಎಂ ಪೋಸ್ಟ್‌ಗೆ ಹೊಸ ಮುಖವನ್ನು ಹುಡುಕಿರುವ ಬಿಜೆಪಿ, ರಮಣ್ ಸಿಂಗ್ ಅವರಿಗೆ ವಿಧಾನಸಭೆ ಸ್ಪೀಕರ್ ಹುದ್ದೆಯನ್ನು ದಯಾ ಪಾಲಿಸಿದೆ.

ರಮಣ್ ಸಿಂಗ್ ಜೊತೆಗೆ, ಅರುಣ್ ಸಾವೊ ಕೂಡ ರಾಜ್ಯದ ಉನ್ನತ ಹುದ್ದೆಯ ನಿರೀಕ್ಷೆಯಲ್ಲಿದ್ದರು. ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆಯನ್ನು ನೀಡಲಾಗಿದೆ. ಆ ಮೂಲಕ, ಸಂಭಾವ್ಯ ಗುಂಪುಗಾರಿಕೆಯನ್ನು ತಡೆಯುವ ಪ್ರಯತ್ನವನ್ನು ಬಿಜೆಪಿ ಮಾಡಿದೆ. ಮತ್ತೊಬ್ಬ ಡಿಸಿಎಂ ಆಗಿರುವ ವಿಜಯ್ ಶರ್ಮಾ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅಲ್ಲದೇ, ಮಾಜಿ ಸಿಎಂ ರಮಣ್ ಸಿಂಗ್ ಅವರ ಅತ್ಯಂತ ನಿಕಟವರ್ತಿಯಾಗಿದ್ದಾರೆ.

ಇನ್ನು ಮುಖ್ಯಮಂತ್ರಿಯಾಗಿ ನೇಮಕವಾಗಿರುವ ವಿಷ್ಣು ದೇವ ಸಾಯಿ ಅವರು ಕುಂಕುರಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 87,604 ಮತಗಳನ್ನು ಪಡೆದು ಜಯ ಗಳಿಸಿದ್ದಾರೆ. ಬಿಜೆಪಿಯ ಮಾಜಿ ರಾಜ್ಯ ಮುಖ್ಯಸ್ಥರಾದ ದೇವ್ ಸಾಯಿ ಅವರು ಬುಡಕಟ್ಟು ಮುಖವನ್ನು ಆಯ್ಕೆ ಮಾಡಿದರೆ ಮುಖ್ಯಮಂತ್ರಿ ಹುದ್ದೆಗೆ ಪಕ್ಷದ ಮೊದಲ ಆಯ್ಕೆಯಾಗುತ್ತಾರೆ ಎಂದು ಊಹಿಸಲಾಗಿತ್ತು.

ವಿಷ್ಣದೇವ್ ಸಾಯ ಅವರು ಈ ಮೊದಲು ಮೋದಿ ಸಂಪುಟದಲ್ಲಿ ಕೇಂದ್ರ ಉಕ್ಕು ಇಲಾಖೆಯ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. 16 ನೇ ಲೋಕಸಭೆಯಲ್ಲಿ ಛತ್ತೀಸ್‌ಗಢದ ರಾಯಗಢ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ವಿಷ್ಣು ದೇವ ಸಾಯಿ ಅವರು 2020ರಿಂದ 2022ರವರೆಗೆ ಛತ್ತೀಸ್‌ಗಢ ಬಿಜೆಪಿ ಅಧಯಕ್ಷರೂ ಆಗಿ ಕಾರ್ಯ ನಿರ್ವಹಿಸಿದ್ದಾರೆ.

ರಾಜಸ್ಥಾನ ಮತ್ತು ಛತ್ತೀಸ್‌ಗಢದಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಯಶಸ್ವಿಯಾಗಿದೆ. ಮಧ್ಯಪ್ರದೇಶವನ್ನು ಭರ್ಜರಿ ಜಯದೊಂದಿಗೆ ಉಳಿಸಿಕೊಂಡಿದೆ. ಇದು ಕೇಸರಿ ಪಕ್ಷವು ಹಿಂದಿಯ ಹೃದಯಭಾಗದಲ್ಲಿ ತನ್ನ ಹಿಡಿತವನ್ನು ಬಿಗಿಗೊಳಿಸುವುದಕ್ಕೆ ಕಾರಣವಾಯಿತು ಮತ್ತು 2024 ರ ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ದೊಡ್ಡ ಉತ್ತೇಜನವನ್ನು ನೀಡಲಿದೆ ಎಂದು ಹೇಳಲಾಗುತ್ತಿದೆ.

ಈ ಸುದ್ದಿಯನ್ನೂ ಓದಿ: Chhattisgarh CM: ವಿಷ್ಣು ದೇವ ಸಾಯಿ ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿ

Continue Reading

ದೇಶ

Reliance Retail: ಯಲಹಂಕದಲ್ಲಿ ರಿಲಯನ್ಸ್ ರೀಟೇಲ್‌ನ ‘ಟಿರಾ’ ಮಳಿಗೆ ಆರಂಭ

Reliance Retail: ಟಿರಾದಿಂದ ಖರೀದಿ ಮಾಡುವಂಥ ಅನುಭವವೇ ಬಹಳ ವಿಶಿಷ್ಟವಾದದ್ದು. ಈಗಿನ ತಲೆಮಾರಿನ ಅಗತ್ಯಗಳು ಹಾಗೂ ಅಭಿರುಚಿಯನ್ನು ಗಮನದಲ್ಲಿ ಇಟ್ಟುಕೊಂಡು ರೂಪಿಸಿದಂಥ ಜಾಗತಿಕ ಹಾಗೂ ಸ್ಥಳೀಯವಾದ ಸೌಂದರ್ಯ ಬ್ರ್ಯಾಂಡ್ ಗಳ ವಿಶೇಷ ಉತ್ಪನ್ನಗಳು ಇಲ್ಲಿ ದೊರೆಯುತ್ತವೆ.

VISTARANEWS.COM


on

Reliance Retail launches beauty retail store 'Tira' in Bengaluru
Koo

ಬೆಂಗಳೂರು: ಇದೀಗ ‘ಟಿರಾ’ ಬೆಂಗಳೂರಿಗೆ (Bengaluru) ಕಾಲಿಟ್ಟಿದೆ. ಅಂದ ಹಾಗೆ ಟಿರಾ ಎಂಬುದು ರಿಲಯನ್ಸ್ ರೀಟೇಲ್ ನ (Reliance Retail) ಸೌಂದರ್ಯ ರೀಟೇಲ್ ಪ್ಲಾಟ್ ಪ್ಲಾರ್ಮ್. ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ (phoenix mall of Asia) ರೀಟೇಲ್ ಕೇಂದ್ರವನ್ನು ಶುರು ಮಾಡುವ ಮೂಲಕ ಟಿರಾ ಬೆಂಗಳೂರು ನಗರಕ್ಕೆ ಪ್ರವೇಶ ಮಾಡಿದೆ. ಇಲ್ಲಿಯ ತನಕ ಮುಂಬೈ, ಹೈದರಾಬಾದ್ ಹಾಗೂ ಚೆನ್ನೈನಲ್ಲಿ ಮಾತ್ರ ‘ಟಿರಾ’ (Tira) ಇತ್ತು. ಅದರ ಹೆಜ್ಜೆ ಗುರುತು ಬೆಂಗಳೂರಲ್ಲೂ ಮೂಡಿದೆ.

ಟಿರಾದಿಂದ ಖರೀದಿ ಮಾಡುವಂಥ ಅನುಭವವೇ ಬಹಳ ವಿಶಿಷ್ಟವಾದದ್ದು. ಈಗಿನ ತಲೆಮಾರಿನ ಅಗತ್ಯಗಳು ಹಾಗೂ ಅಭಿರುಚಿಯನ್ನು ಗಮನದಲ್ಲಿ ಇಟ್ಟುಕೊಂಡು ರೂಪಿಸಿದಂಥ ಜಾಗತಿಕ ಹಾಗೂ ಸ್ಥಳೀಯವಾದ ಸೌಂದರ್ಯ ಬ್ರ್ಯಾಂಡ್ ಗಳ ವಿಶೇಷ ಉತ್ಪನ್ನಗಳು ಇಲ್ಲಿ ದೊರೆಯುತ್ತವೆ. ಖರೀದಿ ಮಾಡುವಂಥ ಗ್ರಾಹಕರಿಗೆ ಸೌಂದರ್ಯ ರೀಟೇಲ್ ಉತ್ಪನ್ನಗಳ ಪೈಕಿ ಬೇರೆಲ್ಲೂ ಸಿಗದಂಥ ಅನುಭವ ದೊರೆಯಲಿ ಎಂಬ ಕಾರಣಕ್ಕಾಗಿಯೇ ‘ಟಿರಾ’ದಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗಿದೆ.

ಬೆಂಗಳೂರಿನಲ್ಲಿ ಹೊಸದಾಗಿ ಶುರುವಾಗಿರುವ ಟಿರಾ ಮಳಿಗೆಯಲ್ಲಿ ತಮಗೆ ಬೇಕಾದಂಥ ಸುಗಂಧ ಅಥವಾ ಸುವಾಸನೆಯನ್ನು ಹುಡುಕಿಕೊಳ್ಳುವುದಕ್ಕೆ ಗ್ರಾಹಕರಿಗೆ ವಿಶಾಲವಾದ ಆಯ್ಕೆಗಳಿವೆ. ಪ್ರತಿ ವ್ಯಕ್ತಿಯೂ ತಮ್ಮದೇ ಆದ ಆದ್ಯತೆಯ ಮೇಲೆ ಸುಗಂಧ ದ್ರವ್ಯಗಳನ್ನು ಆರಿಸಿಕೊಳ್ಳಬಹುದಾಗಿದೆ. ಇನ್ನೂ ವಿಶೇಷ ಏನೆಂದರೆ, ಟಿರಾದಲ್ಲಿ ಲಭ್ಯ ಇರುವಂಥ ಸ್ಮಾರ್ಟ್ ಕನ್ನಡಿಗಳು ಹಾಗೂ ಆಗ್ಯುಮೆಂಟೆಡ್ ರಿಯಾಲಿಟಿ ಕಾರಣಕ್ಕೆ ಗ್ರಾಹಕರು ಉತ್ಪನ್ನಗಳನ್ನು ವರ್ಚುವಲ್ ಆಗಿ ಪ್ರಯೋಗಿಸಬಹುದು. ಅದೇ ರೀತಿ ಇಲ್ಲಿ ಲಭ್ಯ ಇರುವಂಥ ಬ್ಯೂಟಿ ಟ್ರೀಟ್ಸ್ ಮತ್ತು ನಮೂನೆಗಳನ್ನು ವಿತರಿಸುವಂಥ ವಿತರಣೆ ಯಂತ್ರಗಳ ಸಹಾಯದಿಂದ ಗ್ರಾಹಕರು ತಮಗೆ ಬೇಕಾದಂಥದ್ದನ್ನು ತಮ್ಮ ಮನೆಗೆ ಕೊಂಡೊಯ್ಯಬಹುದು.
ಅಂದಹಾಗೆ ಸೌಂದರ್ಯದ ವಿಚಾರದಲ್ಲಿ ಸಲಹೆ ನೀಡುವುದರಲ್ಲಿ ಪರಿಣತರಾದಂಥವರೇ ರೂಪಿಸಿರುವ ‘ಟಿರಾ ಸಿಗ್ನೇಚರ್ ಲುಕ್ಸ್’ ಬಗ್ಗೆ ಗ್ರಾಹಕರು ದೊಡ್ಡ ಮಟ್ಟದಲ್ಲಿ ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸುತ್ತಿದ್ದಾರೆ. ಇದರ ಜತೆಗೆ ಇಲ್ಲಿ ಗ್ರಾಹಕರು ತಮ್ಮ ಅಚ್ಚುಮೆಚ್ಚಿನ ಉಚಿತ ಗ್ಲಾಮ್ ಲುಕ್ ಪಡೆಯಬಹುದಾಗಿದೆ. ಇನ್ನೂ ಮುಂದುವರಿದು ಹೇಳಬೇಕು ಅಂದರೆ, ‘ಟಿರಾ’ದಲ್ಲಿ ಉಡುಗೊರೆ ನೀಡುವುದಕ್ಕೆ ಅಂತಲೇ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಗ್ರಾಹಕರು ತಾವು ಖರೀದಿ ಮಾಡಿದ ವಸ್ತುಗಳ ಮೇಲೆ ಪ್ರೀತಿಪಾತ್ರರ ಹೆಸರನ್ನು ಬರೆಸಿ, ನೀಡುವುದರೊಂದಿಗೆ ತಮ್ಮ ಉಡುಗೊರೆಗಳನ್ನು ಇನ್ನಷ್ಟು ವಿಶೇಷ ಎನ್ನುವಂತೆ ಮಾಡಬಹುದು.

ಸೌಂದರ್ಯ ಉತ್ಪನ್ನಗಳ ರೀಟೇಲ್ ವ್ಯಾಪ್ತಿಯಲ್ಲಿ ಟಿರಾ ಹಿಗ್ಗಿಸುತ್ತಾ ಬಂದಿದ್ದು, ಪ್ರತಿ ಗ್ರಾಹಕರಿಗೆ ತಮಗೆ ಬೇಕಾದದ್ದು ಇಲ್ಲಿ ದೊರೆಯುತ್ತದೆ ಎಂಬ ಭರವಸೆಯನ್ನು ನೀಡಿತ್ತಾ ಬಂದಿದೆ. ಇನ್ನು ‘ಟಿರಾ’ ಆಪ್ ಡೌನ್ ಲೋಡ್ ಸಂಖ್ಯೆಯು ಐದು ಮಿಲಿಯನ್ ಸಂಖ್ಯೆಯ ಮೈಲುಗಲ್ಲು ದಾಟಿದೆ. ಈ ಸಂಖ್ಯೆಯೇ ಮೂಲಕ ತಿಳಿಯಬಹುದಾದದ್ದು ಏನೆಂದರೆ, ಸೌಂದರ್ಯ ಅಭಿಮಾನಗಳಲ್ಲಿ ಟಿರಾಗೆ ಜನಪ್ರಿಯತೆಯು ಹೆಚ್ಚುತ್ತಲೇ ಬರುತ್ತಿದೆ. ಭಾರತ ದೇಶದಾದ್ಯಂತ ಶೇ 98ರಷ್ಟು ಪಿನ್ ಕೋಡ್ ಗಳ ವ್ಯಾಪ್ತಿಯಲ್ಲಿ ಟಿರಾ ಉತ್ಪನ್ನಗಳನ್ನು ವೇಗವಾಗಿ ಪೂರೈಕೆ ಮಾಡಲಾಗುತ್ತಿದ್ದು, 100ಕ್ಕೂ ಹೆಚ್ಚು ನಗರಗಳ ಗ್ರಾಹಕರನ್ನು ತಲುಪುತ್ತಿದೆ.

ಮಾಲ್ ಆಫ್ ಏಷ್ಯಾದಲ್ಲಿನ ಮಳಿಗೆಯು ಬೆಂಗಳೂರು ಮಾತ್ರವಲ್ಲದೆ ಅದರ ಆಚೆಗೆ ಇರುವಂಥ ಸೌಂದರ್ಯ ಉತ್ಪನ್ನಗಳ ಬಳಕೆದಾರರ ಪಾಲಿಗೆ ಪ್ರಮುಖ ಕೇಂದ್ರ ಆಗುವುದಕ್ಕೆ ಎಲ್ಲ ರೀತಿಯಿಂದಲೂ ಸಜ್ಜಾಗಿದ್ದು, ಉನ್ನತ ಮಟ್ಟದ- ಅತ್ಯಾಧುನಿಕ ತಂತ್ರಜ್ಞಾನದ ಅನುಭವದ ಹೊಸ ಯುಗಕ್ಕೆ ಇದು ನಾಂದಿ ಹಾಡಿದೆ. ಟಿರಾ ಮಳಿಗೆ ವಿಳಾಸ: ಕೆಳ ಮಹಡಿ, 239/240, ಬ್ಯಾಟರಾಯನಪುರ, ಯಲಹಂಕ ಹೋಬಳಿ, ಯಲಹಂಕ ತಾಲೂಕು, ಬಳ್ಳಾರಿ ರಸ್ತೆ, ಬೆಂಗಳೂರು, ಕರ್ನಾಟಕ 560092.

ಈ ಸುದ್ದಿಯನ್ನೂ ಓದಿ: ರಿಲಯನ್ಸ್‌ ರಿಟೇಲ್‌ ಅಧ್ಯಕ್ಷರಾಗಿ ಮುಕೇಶ್‌ ಅಂಬಾನಿ ಪುತ್ರಿ ಇಶಾ ಅಂಬಾನಿ ನೇಮಕ

Continue Reading

ಕ್ರಿಕೆಟ್

IND vs SA: ಭಾರತ-ದಕ್ಷಿಣ ಆಫ್ರಿಕಾ ಟಿ20 ಪಂದ್ಯಕ್ಕೆ ಮಳೆ ಅಡ್ಡಿ; ಪಂದ್ಯ ವಿಳಂಬ

ದಕ್ಷಿಣ ಆಫ್ರಿಕಾ(IND vs SA) ಮತ್ತು ಭಾರತ ನಡುವಣ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿದ್ದು ಟಾಸ್​ ಮತ್ತು ಪಂದ್ಯ ಆರಂಭ ವಿಳಂಬಗೊಳ್ಳಲಿದೆ.

VISTARANEWS.COM


on

South Africa vs India 1
Koo

ಡರ್ಬಾನ್​: ದಕ್ಷಿಣ ಆಫ್ರಿಕಾ(IND vs SA) ಮತ್ತು ಭಾರತ ನಡುವಣ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿದ್ದು ಟಾಸ್​(Toss delayed due to rain) ಮತ್ತು ಪಂದ್ಯ ಆರಂಭ ವಿಳಂಬಗೊಳ್ಳಲಿದೆ. ಸದ್ಯಕ್ಕೆ ಡರ್ಬಾನ್​ನಲ್ಲಿ ಭಾರಿ ಮಳೆಯಾಗುತ್ತಿದೆ ಎಂದು ತಿಳಿದುಬಂದಿದೆ. ಮುಂದಿನ ವರ್ಷ ನಡೆಯುವ ಟಿ20 ವಿಶ್ವಕಪ್​ ಹಿನ್ನಲೆ ಇತ್ತಂಡಗಳಿಗೂ ಈ ಸರಣಿ ಪ್ರಮುಖವಾಗಿದೆ.

ಕವರ್​ನಿಂದ ಮುಚ್ಚಿದ ಮೈದಾನ

ಸದ್ಯ ಡರ್ಬಾನ್​ನ ಕಿಂಗ್ಸ್‌ಮೀಡ್ ಮೈದಾನವನ್ನು ಕವರ್​ನಿಂದ ಸಂಪೂರ್ಣವಾಗಿ ಮುಚ್ಚಲಾಗಿದೆ. ಆಟಗಾರರೆಲ್ಲ ಡ್ರೆಸಿಂಗ್​ ರೂಮ್​ನಲ್ಲಿ ಮಳೆ ಯಾವಾಗ ಬಿಡುತ್ತದೆ ಎಂದು ಕಾದು ಕುಳಿತಿದ್ದಾರೆ. ಇದು ಐಸಿಸಿ ಅಡ್ಡಿಯಲ್ಲಿ ನಡೆಯುವ ಟೂರ್ನಿಯಾದ ಕಾರಣ ನಿಗದಿತ ಸಮಯಕ್ಕೆ ಮಳೆ ನಿಂತು ಆಟ ಪ್ರಾರಂಭವಾಗದಿದ್ದರೆ ಪಂದ್ಯವನ್ನು ರದ್ದು ಎಂದು ಘೋಷಿಸಲಾಗುತ್ತದೆ.

ಟಿ20 ಮುಖಾಮುಖಿ

ಭಾರತ ಮತ್ತು ದಕ್ಷಿಣ ಆಫ್ರಿಕಾ ಇದುವರೆಗೆ 24 ಟಿ20 ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿದ್ದು, ಭಾರತವು 13 ಪಂದ್ಯಗಳನ್ನು ಗೆದ್ದಿದೆ. ದಕ್ಷಿಣ ಆಫ್ರಿಕಾ 10 ಪಂದ್ಯಗಳಲ್ಲಿ ಗೆಲುವು ಕಂಡಿದೆ. ಒಂದು ಪಂದ್ಯವು ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ದಕ್ಷಿಣ ಆಫ್ರಿಕಾದಲ್ಲಿ, ‘ಮೆನ್ ಇನ್ ಬ್ಲೂ’ ಏಳು ಪಂದ್ಯಗಳನ್ನು ಆಡಿ ಐದರಲ್ಲಿ ಗೆದ್ದಿದ್ದರೆ, ಆತಿಥೇಯರು ಎರಡರಲ್ಲಿ ಗೆದ್ದಿದ್ದಾರೆ. ಬಲಾಬಲದ ಲೆಕ್ಕಾಚಾರದಲ್ಲಿ ಭಾರತ ಬಲಿಷ್ಠವಾಗಿದೆ.

ಪಿಚ್​ ರಿಪೋರ್ಟ್

ಡರ್ಬಾನ್​ನ ಕಿಂಗ್ಸ್‌ಮೀಡ್ ಪಿಚ್ ಮೈದಾನದಲ್ಲಿ ಆಡಿದ 18 ಪಂದ್ಯಗಳಲ್ಲಿ, ವೇಗದ ಬೌಲರ್‌ಗಳು 23.84 ಸರಾಸರಿಯಲ್ಲಿ 162 ವಿಕೆಟ್‌ಗಳನ್ನು ಪಡೆದರೆ, ಸ್ಪಿನ್ನರ್‌ಗಳು 18 ಪಂದ್ಯಗಳಲ್ಲಿ 26.80 ಸರಾಸರಿಯಲ್ಲಿ 42 ವಿಕೆಟ್‌ಗಳನ್ನು ಪಡೆದಿದ್ದಾರೆ. ಮೊದಲು ಬ್ಯಾಟಿಂಗ್ ಮಾಡಿದ ತಂಡ ಒಂಬತ್ತು ಗೆಲುವು ಸಾಧಿಸಿದರೆ, ಎರಡನೇ ಬ್ಯಾಟಿಂಗ್ ನಡೆಸಿದ ತಂಡ ಎಂಟು ಗೆಲುವುಗಳನ್ನು ಸಾಧಿಸಿದೆ. ಒಂದು ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಡರ್ಬನ್‌ನಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ 143 ಆಗಿದೆ.

ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಮೊದಲ ಬಾರಿ ಆಡಿದ ತಂಡವೆಂದರೆ ಅದು ಭಾರತ ಮತ್ತು ದಕ್ಷಿಣ ಆಫ್ರಿಕಾ. 2007ರಲ್ಲಿ ನಡೆದ ಚೊಚ್ಚಲ ಅಂತಾರಾಷ್ಟೀಯ ಟಿ20 ಪಂದ್ಯದಲ್ಲಿ ವೀರೇಂದ್ರ ಸೆಹವಾಗ್​ ಸಾರಥ್ಯದ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 82 ರನ್​ಗಳಿಂದ ಮಣಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ್ದ ಭಾರತ 6 ವಿಕೆಟ್​ಗೆ 169 ರನ್​ ಬಾರಿಸಿತ್ತು. ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ ಕೇವಲ 87 ರನ್​ಗೆ ಸರ್ವಪತನ ಕಂಡಿತ್ತು.

ಸಿಕ್ಕ ಅವಕಾಶ ಬಳಿಸಿಕೊಳ್ಳಿ

ಈಗಾಗಲೇ ಬಿಸಿಸಿಐ ಆಯ್ಕೆ ಸಮಿತಿಯ ಇಬ್ಬರು ಅಧಿಕಾರಿಗಳನ್ನು ದಕ್ಷಿಣ ಆಫ್ರಿಕಾಗೆ ಕಳುಹಿಸಿದ್ದು ಆಟಗಾರರ ಎಲ್ಲ ಪ್ರದರ್ಶನದ ಬಗ್ಗೆ ಮಾಹಿತಿ ಸಂಗ್ರಹಿಸಲು ಸೂಚಿಸಿದೆ. ಹೀಗಾಗಿ ವಿಶ್ವಕಪ್​ನಲ್ಲಿ ಸ್ಥಾನ ಪಡೆಯಬೇಕಿದ್ದರೆ. ಯುವ ಆಟಗಾರರು ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಬೇಕಿದೆ. ವಿಶ್ವಕಪ್​ಗೂ ಮುನ್ನ ಐಪಿಎಲ್​ ಕೂಡ ನಡೆಯುದರಿಂದ ಇಲ್ಲಿಯೂ ಕೆಲ ಉದಯೋನ್ಮುಖ ಆಟಗಾರು ಬೆಳಕಿಗೆ ಬರುತ್ತಾರೆ. ಆದ್ದರಿಂದ ಈಗ ತಂಡದಲ್ಲಿ ಇದ್ದ ಆಟಗಾರರು ತಮ್ಮ ಶ್ರೇಷ್ಠ ಪ್ರದರ್ಶನ ತೋರಿ ಆಯ್ಕೆ ಸಮಿತಿಯ ಗಮನಸೆಳೆಯಬೇಕಿದೆ.

Continue Reading

ದೇಶ

Ram Mandir: ಅಯೋಧ್ಯೆ ರಾಮ ಮಂದಿರದಲ್ಲಿ ಅದ್ಭುತ ಕಲಾಕೃತಿಗಳು!

Ram Mandir: ಅಯೋಧ್ಯೆ ರಾಮ ಮಂದಿರದಲ್ಲಿ ಜನವರಿ 22ರಂದು ಪ್ರಾಣ ಪ್ರತಿಷ್ಠೆ ನಡೆಯಲಿದ್ದು, ಭರದಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

VISTARANEWS.COM


on

Shri Ram Janmabhoomi Mandir carvings are wonderful
Koo

ಅಯೋಧ್ಯೆ: ಉತ್ತರ ಪ್ರದೇಶದ (Uttar Pradesh) ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ರಾಮ ಮಂದಿರ (Ayodhya Ram Mandir) ಬಹುತೇಕ ಸಿದ್ಧವಾಗಿದೆ. ಜನವರಿ 22ರಂದು ರಂದು ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ನಡುವೆ ರಾಮ ಮಂದಿರ ಗರ್ಭಗಡಿ (Sanctum Sanctorum) ಹಾಗೂ ದೇವಾಲಯ ಒಳಗಿರುವ ಅದ್ಭುತ, ಮನಮೋಹಕ ಕಲಾಕೃತಿಗಳ (carvings) ಫೋಟೋಗಳನ್ನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಿಲೀಸ್ ಮಾಡಿದೆ.

ಅದ್ಭುತ ಕೆತ್ತನೆಗಳನ್ನು ಹೊಂದಿರುವ ಮಂದಿರ ಒಳಾಂಗಣ ಫೋಟೋಗಳು ಭಾರೀ ವೈರಲ್ ಆಗಿವೆ. ಸುಂದರ ಕಲಾಕೃತಿಗಳನ್ನು ಮಂದಿರದೊಳಗೆ ಕಾಣಬಹುದಾಗಿದೆ. ನಿನ್ನೆಯಷ್ಟೇ ರಾಮ ಮಂದಿರದ ಗರ್ಭಗಡಿಯು ಚಿತ್ರವನ್ನು ಹಂಚಿಕೊಳ್ಳಲಾಗಿತ್ತು. ಜನವರಿ 22ರಂದು ನಡೆಯಲಿರುವ ಪ್ರಾಣ ಪ್ರತಿಷ್ಠೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಮಂತ್ರಣ ನೀಡಲಾಗಿದೆ. ಸುಮಾರು 10 ಸಾವಿರದಿಂದ 15 ಸಾವಿರ ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮನಮೋಹಕ ರಾಮ ಮಂದಿರ ಗರ್ಭ ಗುಡಿ

ಶ್ರೀ ರಾಮ (Lord Ram Idol) ದೇವರ ಮೂರ್ತಿ ಪ್ರತಿಷ್ಠಾಪನೆಯಾಗಲಿರುವ ಗರ್ಭ ಗುಡಿಯ (Sanctum Sanctorum) ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಅವರು ಈ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಷೇರ್ ಮಾಡಿಕೊಂಡಿದ್ದಾರೆ. ರಾಮನನ್ನು ಪ್ರತಿಷ್ಠಾಪಿಸುವ ಪೀಠ ಮತ್ತು ಗರ್ಭಗುಡಿಯನ್ನು ಫೋಟೋದಲ್ಲಿಕಾಣಬಹುದು.

ಭಗವಾನ್ ಶ್ರೀ ರಾಮ ಅವರ ಗರ್ಭಗುಡಿ ಬಹುತೇಕ ಸಿದ್ಧವಾಗಿದೆ. ಇತ್ತೀಚೆಗೆ ಲೈಟಿಂಗ್-ಫಿಟ್ಟಿಂಗ್ ಕೆಲಸವೂ ಪೂರ್ಣಗೊಂಡಿದೆ. ಕೆಲವು ಛಾಯಾಚಿತ್ರಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ ಎಂದು ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಎಕ್ಸ್ ವೇದಿಕೆಯಲ್ಲಿ ಬರೆದುಕೊಂಡಿದ್ದಾರೆ. ಮತ್ತೊಂದೆಡೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಶುಕ್ರವಾರ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಯ ಫೋಟೋಗಳನ್ನು ಬಿಡುಗಡೆ ಮಾಡಿದೆ.

ಟ್ರಸ್ಟ್‌ನ ಮೇಲ್ವಿಚಾರಣೆಯಲ್ಲಿ ದೇವಾಲಯದ ನಿರ್ಮಾಣವು ಪ್ರಗತಿಯಲ್ಲಿದ್ದು, ಇದು ದೇವಾಲಯದೊಳಗಿನ ಸಂಕೀರ್ಣ ಕೆತ್ತನೆಗಳ ಚಿತ್ರಗಳನ್ನು ಕಾಣಬಹುದು. ಇದಕ್ಕೂ ಮೊದಲು ಚಂಪತ್ ರಾಯ್ ಅವರು ಶ್ರೀ ರಾಮ ದೇವರ ಮೂರ್ತಿ ಕೆತ್ತನೆ ಶೇ.90ರಷ್ಟು ಮುಗಿದಿದೆ ಎಂದು ಹೇಳಿದ್ದರು.

ರಾಮ ಜನ್ಮಭೂಮಿ ದೇವಸ್ಥಾನದಲ್ಲಿ, ಅಯೋಧ್ಯೆಯ ಮೂರು ಸ್ಥಳಗಳಲ್ಲಿ ಭಗವಾನ್ ರಾಮನ ಐದು ವರ್ಷದ ಮಗುವಿನ ರೂಪವನ್ನು ಚಿತ್ರಿಸುವ 4’3″ ವಿಗ್ರಹವನ್ನು ನಿರ್ಮಿಸಲಾಗುತ್ತಿದೆ. ಮೂವರು ಕುಶಲಕರ್ಮಿಗಳು ಮೂರು ವಿಭಿನ್ನ ಶಿಲೆಗಳಯಲ್ಲಿ ವಿಗ್ರಹವನ್ನು ನಿರ್ಮಿಸುತ್ತಿದ್ದಾರೆ. ಈ ವಿಗ್ರಹಗಳು 90 ಪ್ರತಿಶತದಷ್ಟು ಸಿದ್ಧವಾಗಿವೆ ಮತ್ತು ಅಂತಿಮ ಕಾರ್ಯವು ಸುಮಾರು ಒಂದು ವಾರ ತೆಗೆದುಕೊಳ್ಳುತ್ತದೆ ಎಂದು ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಅವರು ಈ ಹಿಂದೆ ಹೇಳಿದ್ದರು.

ಪ್ರಾಣ-ಪ್ರತಿಷ್ಠಾ ಸಮಾರಂಭದ ವೈದಿಕ ವಿಧಿವಿಧಾನಗಳು ಜನವರಿ 16 ರಂದು ಮುಖ್ಯ ಸಮಾರಂಭಕ್ಕೆ ಒಂದು ವಾರ ಮುಂಚಿತವಾಗಿ ಪ್ರಾರಂಭವಾಗುತ್ತವೆ. ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಲಕ್ಷ್ಮೀಕಾಂತ ದೀಕ್ಷಿತ್ ಮುಖ್ಯ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸುಮಾರು 10ರಿಂದ 15 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಈ ಸುದ್ದಿಯನ್ನೂ ಓದಿ: ಮನಮೋಹಕ ರಾಮ ಮಂದಿರ ಗರ್ಭ ಗುಡಿ! ಪ್ರಾಣ ಪ್ರತಿಷ್ಠೆಗೆ ದಿನಗಣನೆ ಶುರು

Continue Reading
Advertisement
Chhattisgarh to be CM Vishnu has two deputies and Raman Singh Speaker
ದೇಶ16 mins ago

ಛತ್ತೀಸ್‍‌ಗಢ ಸಿಎಂ ವಿಷ್ಣುಗೆ ಇಬ್ಬರು ಡೆಪ್ಯುಟಿಗಳು; ರಮಣ್ ಸಿಂಗ್ ಸ್ಪೀಕರ್

Rambhapuri seer and MB Patil
ಕರ್ನಾಟಕ33 mins ago

ಎಂ.ಬಿ. ಪಾಟೀಲ್‌ಗೆ ನೀರಾವರಿ ಖಾತೆ ಸಿಗಬೇಕಿತ್ತು; ಡಿಕೆಶಿಗೆ ಕೊಟ್ಟಿದ್ದಕ್ಕೆ ರಂಭಾಪುರಿ ಶ್ರೀ ಬೇಸರ!

India U19 vs Pakistan U19
ಕ್ರಿಕೆಟ್34 mins ago

U19 Asia Cup: ಪಾಕಿಸ್ತಾನ​ ವಿರುದ್ಧ ಭಾರತಕ್ಕೆ 8 ವಿಕೆಟ್​ ಸೋಲು

Reliance Retail launches beauty retail store 'Tira' in Bengaluru
ದೇಶ49 mins ago

Reliance Retail: ಯಲಹಂಕದಲ್ಲಿ ರಿಲಯನ್ಸ್ ರೀಟೇಲ್‌ನ ‘ಟಿರಾ’ ಮಳಿಗೆ ಆರಂಭ

South Africa vs India 1
ಕ್ರಿಕೆಟ್1 hour ago

IND vs SA: ಭಾರತ-ದಕ್ಷಿಣ ಆಫ್ರಿಕಾ ಟಿ20 ಪಂದ್ಯಕ್ಕೆ ಮಳೆ ಅಡ್ಡಿ; ಪಂದ್ಯ ವಿಳಂಬ

Shri Ram Janmabhoomi Mandir carvings are wonderful
ದೇಶ1 hour ago

Ram Mandir: ಅಯೋಧ್ಯೆ ರಾಮ ಮಂದಿರದಲ್ಲಿ ಅದ್ಭುತ ಕಲಾಕೃತಿಗಳು!

Bus-jeep accident
ಉಡುಪಿ1 hour ago

Road Accident: ಕಾರ್ಕಳ ಬಳಿ ಖಾಸಗಿ ಬಸ್‌-ಜೀಪ್ ನಡುವೆ ಭೀಕರ ಅಪಘಾತ; 12 ಮಂದಿಗೆ ಗಂಭೀರ ಗಾಯ

Killers who killed lawyer for property in kalaburagi
ಕರ್ನಾಟಕ2 hours ago

ವಕೀಲನ ಹತ್ಯೆ ಮಾಡಿ ರಕ್ತದ ಕೈಯಲ್ಲೇ ದಂಪತಿಯಿಂದ ಹಣ ಪಡೆದಿದ್ದ ಸುಪಾರಿ ಕಿಲ್ಲರ್ಸ್‌!

air india
ಉದ್ಯೋಗ2 hours ago

Job Alert: ಏರ್‌ ಇಂಡಿಯಾದಲ್ಲಿದೆ ಉದ್ಯೋಗಾವಕಾಶ; ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

man accused of murder wins acquittal after studying law and fighting own Case
ದೇಶ2 hours ago

ಜೋಡಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಅಮಾಯಕ, ಲಾ ಓದಿ ತನ್ನ ಕೇಸನ್ನು ತಾನೇ ಗೆದ್ದ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Actor Shivarajkumar rejects DKS offer
ಕರ್ನಾಟಕ5 hours ago

Shiva Rajkumar: ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

HD Kumaraswamy attack on congress
ಕರ್ನಾಟಕ7 hours ago

HD Kumaraswamy: ಬಿಜೆಪಿಗೆ ‌50 ಶಾಸಕರ ಕರ್ಕೊಂಡು ಬರ್ತೇವೆ ಎಂದಿರುವ ಕಾಂಗ್ರೆಸ್‌ ನಾಯಕ!

Dina Bhavishya
ಪ್ರಮುಖ ಸುದ್ದಿ15 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ2 days ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema2 days ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema2 days ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಟ್ರೆಂಡಿಂಗ್‌