Dina Bhavishya : ಅತ್ಯಂತ ಪ್ರೀತಿಯ ಕನಸು ನನಸಾಗುವ ದಿನವಿದು - Vistara News

ಭವಿಷ್ಯ

Dina Bhavishya : ಅತ್ಯಂತ ಪ್ರೀತಿಯ ಕನಸು ನನಸಾಗುವ ದಿನವಿದು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಕೃಷ್ಣ ಪಕ್ಷದ ಏಕಾದಶಿ ಅಹೋರಾತ್ರಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಭಾನುವಾರವೂ ಕನ್ಯಾರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರಿಗೆ ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುವ ದಿನವಿದು. ಕೆಲಸ-ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣಲಿದ್ದಿರಿ. ಉತ್ಸಾಹದ ಭರದಲ್ಲಿ ಆಶ್ವಾಸನೆ ನೀಡುವುದು ಅಪಾಯ ತರುವ ಸಾಧ್ಯತೆಗಳು ಹೆಚ್ಚು, ಎಚ್ಚರಿಕೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (27-10-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಕೃಷ್ಣ ಪಕ್ಷ.
ತಿಥಿ: ಏಕಾದಶಿ ಅಹೋರಾತ್ರಿ ವಾರ: ಭಾನುವಾರ
ನಕ್ಷತ್ರ: ಮಘಾ 12:23 ಯೋಗ: ಬ್ರಹ್ಮ 30:46
ಕರಣ: ಭವ 18:34 ಅಮೃತಕಾಲ: ಬೆಳಗ್ಗೆ 09:44 ರಿಂದ 11:31

ಸೂರ್ಯೋದಯ : 06:12   ಸೂರ್ಯಾಸ್ತ : 05:55

ರಾಹುಕಾಲ: ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ
3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುವ ದಿನವಿದು. ಕೆಲಸ-ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣಲಿದ್ದಿರಿ. ಉತ್ಸಾಹದ ಭರದಲ್ಲಿ ಆಶ್ವಾಸನೆ ನೀಡುವುದು ಅಪಾಯ ತರುವ ಸಾಧ್ಯತೆಗಳು ಹೆಚ್ಚು, ಎಚ್ಚರಿಕೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಧ್ಯಮ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ನಿಮ್ಮ ಆಕರ್ಷಣೆ ಹಾಗೂ ವ್ಯಕ್ತಿತ್ವ ನೀವು ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡುತ್ತದೆ. ಹೂಡಿಕೆ ವ್ಯವಹಾರದ ಕುರಿತು ಆಲೋಚನೆ ಮಾಡುವಿರಿ. ವ್ಯಾಪಾರ ವ್ಯವಹಾರದ ಕುರಿತಾಗಿ ಬೆಳೆಸಿದ ಪ್ರಯಾಣ ಲಾಭ ತಂದುಕೊಡಲಿದೆ. ಉದ್ಯೋಗಿಗಳಿಗೆ ಮೆಚ್ಚುಗೆ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಹತಾಶೆಯ ಭಾವನೆಯಿಂದ ಮನಸ್ಸಿನ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಲಾಭ ಸಿಗುವ ಸಾಧ್ಯತೆ ಇದೆ. ಪ್ರೀತಿ-ಪಾತ್ರರ ಜತೆ ವಾದಗಳಿಗೆ ಕಾರಣವಾಗಬಹುದಾದ ವಿವಾದಾತ್ಮಕ ವಿಷಯಗಳನ್ನು ತಪ್ಪಿಸಿ, ಎಚ್ಚರಿಕೆಯಿಂದ ಮಾತನಾಡಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಸದೃಢವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ ಅದೃಷ್ಟ ಸಂಖ್ಯೆ: 4

Horoscope Today

ಕಟಕ: ಮಾನಸಿಕವಾಗಿ ದೈಹಿಕವಾಗಿ ಆರೋಗ್ಯ ಪರಿಪೂರ್ಣವಾಗಿರಲಿದೆ. ಹರ್ಷ ತುಂಬಿದ ಮನಸ್ಸು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಹಳೆಯ ಬಾಕಿ ಮರುಪಾವತಿ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯಮಿಗಳಿಗೆ ಒಳ್ಳೆಯ ದಿನ. ವ್ಯಾಪಾರದ ಉದ್ದೇಶಕ್ಕಾಗಿ ಕೈಗೊಂಡ ಪ್ರವಾಸ ಸಕಾರಾತ್ಮಕ ಫಲಿತಾಂಶವನ್ನು ನೀಡುತ್ತದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಬಹಳ ದಿನಗಳಿಂದ ಕಾಡುತ್ತಿರುವ ಸಮಸ್ಯಗೆ ಪರಿಹಾರ ಸಿಗಲಿದೆ. ಭವಿಷ್ಯದ ಹೂಡಿಕೆ ವ್ಯವಹಾರದ ಕುರಿತಾಗಿ ಆಲೋಚನೆ ಮಾಡುವಿರಿ. ನಿಮ್ಮ ಹಿಂದೆ ನಿಮಗೆ ಆಗದವರು ಪಿತೂರಿ ನಡೆಸುವ ಸಾಧ್ಯತೆ ಇದೆ ಅಂತವರಿಂದ ಎಚ್ಚರಿಕೆ ಇರಲಿ. ದಿಢೀರ್‌ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ಸೃಜನಾತ್ಮಕ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಯಶಸ್ವಿ ದಿನ. ಭೂಮಿ ಸಂಬಂಧಿ ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ದಿನಕ್ಕಿಂತ ಹೆಚ್ಚಿನ ಸಂತೋಷ ಇರಲಿದೆ. ಆರ್ಥಿಕ ಚಟುವಟಿಕೆಗೆ ಗರಿಗೆದರಲಿದೆ. ದಿನದ ಕೊನೆಯಲ್ಲಿ ಕೌಟುಂಬಿಕ ಕಲಹಗಳು ನಡೆಯುವ ಸಾಧ್ಯತೆ ಇದೆ, ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಒತ್ತಡ ತುಂಬಿದ ವಾತಾವರಣ ಇರಲಿದೆ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ತೊಡಗಿರುವವರಿಗೆ ದಿನದ ಮಟ್ಟಿಗೆ ಹೆಚ್ಚಿನ ಲಾಭ ಸಿಗಲಿದೆ. ಕುಟುಂಬ ಸಹಿತರಾಗಿ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ವ್ಯಾಪಾರಿಗಳಿಗೆ ಹೆಚ್ಚಿನ ಲಾಭವಾಗಲಿದೆ. ನಿಮ್ಮ ಸಂತೋಷದ ಸಂಗತಿಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಆರ್ಥಿಕವಾಗಿ ಸಾಧಾರಣ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ.ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಧನಸ್ಸು: ಕೆಲವು ಪ್ರಮುಖ ನಿರ್ಧಾರಗಳು ನಿಮ್ಮ ಮೇಲೆ ಪರಿಣಾಮ ಬೀರಬಹುದು. ಅದರ ಹೊರತಾಗಿ ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ಕುಟುಂಬ ಸದಸ್ಯರ ಮಾತುಗಳು ನಿಮ್ಮನ್ನು ಘಾಸಿಗೊಳಿಸಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ.ಉದ್ಯೋಗಿಗಳಿಗೆ ಮಿಶ್ರ ಫಲ.ಆರ್ಥಿಕ ಪ್ರಗತಿ ಸಾಧಾರಣ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ಮಕರ: ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಅದರಲ್ಲಿಯೂ ಗರ್ಭಿಣಿಯರು ಹೆಚ್ಚಿನ ಮುತುವರ್ಜಿ ವಹಿಸಬೇಕು. ಅನಾವಶ್ಯಕ ಖರ್ಚುಗಳಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಸಂಬಂಧ ಪಡದೆ ಇರುವ ವಿಷಯದ ಕುರಿತು ಮೂಗು ತೂರಿಸುವುದು ಬೇಡ. ಟೀಕೆಗಳನ್ನು ಎದಿರಿಸಬೇಕಾದಿತು,ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ವಿವಾದಾತ್ಮಕ ವಿಷಯಗಳಿಂದ ದೂರ ಇರಿ. ಮಾತಿನಲ್ಲಿ ಹಿಡಿತವಿರಲಿ. ತಮ್ಮ ಬಳಿ ಯಾರಾದರೂ ಹಣದ ಸಹಾಯ ಬೇಡುವ ಸಾಧ್ಯತೆ ಇದೆ, ಆಲೋಚಿಸಿ ಹೆಜ್ಜೆ ಇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಧ್ಯಮ ಫಲ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಮೀನ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆ ಮಾರ್ಗಸೂಚಿಯಾಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಸದೃಢತೆ ಇರಲಿದೆ. ಉದ್ಯೋಗಿಗಳಿಗೆ ಅಭದ್ರತೆಯ ಭಾವನೆ ಕಾಡಲಿದೆ. ನಿಮ್ಮ ಸಹನೆಯನ್ನು ಪರೀಕ್ಷಿಸು ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಭವಿಷ್ಯ

Dina Bhavishya: ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನಾಡಿ ಅಪಾಯ ತಂದುಕೊಳ್ಳಬೇಡಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಕೃಷ್ಣ ಪಕ್ಷದ ದಶಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

dina bhavishya
Koo

ಚಂದ್ರನು ಸಿಂಹ ರಾಶಿಯಿಂದ ಶನಿವಾರ ಬೆಳಗ್ಗೆ 11:47ಕ್ಕೆ ಕನ್ಯಾರಾಶಿಗೆ ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ.ಸ್ನೇಹಿತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಕೆಲಸ ಕಾರ್ಯಗಳಲ್ಲಿ ಬಳಸಿಕೊಂಡರೆ ಇನ್ನೂ ಹೆಚ್ಚು ಆಕರ್ಷಕ ವ್ಯಕ್ತಿತ್ವ ವಿಕಸನ ಆಗುತ್ತದೆ.ಆರೋಗ್ಯ ಉತ್ತಮ.ದಿನದ ಮಟ್ಟಿಗೆ ಖರ್ಚು ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (26-10-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಕೃಷ್ಣ ಪಕ್ಷ.
ತಿಥಿ: ದಶಮಿ 29:23 ವಾರ: ಶನಿವಾರ
ನಕ್ಷತ್ರ: ಆಶ್ಲೇಷಾ 09:44 ಯೋಗ: ಶುಕ್ಲ 29:56
ಕರಣ: ವಣಿಜ 16:18 ಅಮೃತಕಾಲ: ಬೆಳಗ್ಗೆ 08:01 ರಿಂದ 09:46

ಸೂರ್ಯೋದಯ : 06:12   ಸೂರ್ಯಾಸ್ತ : 05:55

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ
6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆಪ್ತರ ವರ್ತನೆಯಿಂದ ನಿಮ್ಮ ಮನಸ್ಸಿಗೆ ನೋವು ತರುವ ಸಾಧ್ಯತೆಗಳು ಹೆಚ್ಚು, ತಾಳ್ಮೆಯಿಂದ ಇರಿ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ತಲೆದೋರಬಹುದು ಮಾತಿನಲ್ಲಿ ಹಿಡಿತವಿರಲಿ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ, ಆರೋಗ್ಯದ ಕಡೆಗೆ ಗಮನ ಹರಿಸಿ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಪ್ರಗತಿಯೊಂದಿಗೆ ಲಾಭ ಪಡೆಯುವಿರಿ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ನಿಮ್ಮ ಶ್ರಮಕ್ಕೆ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಯಾರಾದರೂ ನಿಮ್ಮ ಸಹಾಯ ಬೇಡಿ ಬರುವರು, ವಿಮರ್ಶಿಸಿ ಸಹಾಯ ಮಾಡಿ. ಆರ್ಥಿಕ ಪ್ರಗತಿ ದಿನದ ಮಟ್ಟಿಗೆ ಸಾಧಾರಣವಾಗಿರಲಿದೆ. ಯಾರಾದರೂ ನಿಮ್ಮ ಭಾವನೆಗಳನ್ನು ನಿರಾಸೆ ಮಾಡುವ ಸಾಧ್ಯತೆ ಇದೆ. ಅವರ ಮಾತನ್ನು ಲಕ್ಷಿಸದೆ ಕಾರ್ಯದಲ್ಲಿ ಮುನ್ನುಗ್ಗಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಹೊಸ ಭರವಸೆಯ ಆಶಾಭಾವನೆ ಮೂಡಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ: ನಿಮ್ಮ ಆಸೆ-ಆಕಾಂಕ್ಷೆಗಳು ಯಶಸ್ಸನ್ನು ತಂದುಕೊಡಲಿವೆ. ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ ಇದೆ. ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕವಾಗಿ ಲಾಭ ಕಡಿಮೆ ಇರಲಿದೆ. ಹೊಸ ಆಲೋಚನೆಗಳು ನಿಮ್ಮನ್ನು ಸೃಜನಾತ್ಮಕವಾಗಿ ಏನಾದರೂ ಮಾಡಲು ಪ್ರಯತ್ನಿಸುವಂತೆ ಮಾಡುವಂತೆ ಪ್ರೇರೇಪಿಸುತ್ತದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ಕುಟುಂಬದ ಆಪ್ತರೊಂದಿಗೆ ಸಂತಸ ಹಂಚಿಕೊಳ್ಳುವಿರಿ. ಹಣಕಾಸು ಪರಿಸ್ಥಿತಿ ಸಾಧಾರಣವಾಗಿರಲಿದೆ, ದಿನದ ಮಟ್ಟಿಗೆ ಖರ್ಚು ಇರಲಿದೆ. ದುಬಾರಿ ವಸ್ತುಗಳನ್ನು ಖರೀದಿಸುವ ಮುನ್ನ ನಿಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಹಾಸಿಗೆ ಇದ್ದಷ್ಟು ಕಾಲು ಚಾಚಿ. ಆರೋಗ್ಯ ಮಧ್ಯಮವಾಗಿರಲಿದೆ, ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಪ್ರಭಾವಿ ಜನರ ಬೆಂಬಲ ಸಿಗಲಿದೆ.ಇದರಿಂದ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ.ಒಡಹುಟ್ಟಿದವರ ಸಹಕಾರ ಸಿಗಲಿದೆ.ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನಾಡಿ ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ: ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡಿ, ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಇಂದು ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ.ವ್ಯಾಪರದಲ್ಲಿ ಯಶಸ್ಸು ಸಿಗಲಿದೆ.ಪ್ರಯಾಣದಿಂದ ಲಾಭ.ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ಭಾವನಾ ಜೀವಿಗಳಾದ ನೀವು ನಕಾರಾತ್ಮಕ ಆಲೋಚನೆಗಳಿಂದ ದೂರ ಇರಿ.ಅಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ, ಕ್ಷೇತ್ರ ದರ್ಶನ ಪಡೆದು ಮಾನಸಿಕ ನೆಮ್ಮದಿ ತಂದುಕೊಳ್ಳುವುದು ಅವಶ್ಯಕ.ಮಕ್ಕಳ ಆರೋಗ್ಯದ ಕಡೆಗೆ ಗಮನ ಹರಿಸಿ.ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಮಕರ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ.ಸ್ನೇಹಿತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಕೆಲಸ ಕಾರ್ಯಗಳಲ್ಲಿ ಬಳಸಿಕೊಂಡರೆ ಇನ್ನೂ ಹೆಚ್ಚು ಆಕರ್ಷಕ ವ್ಯಕ್ತಿತ್ವ ವಿಕಸನ ಆಗುತ್ತದೆ.ಆರೋಗ್ಯ ಉತ್ತಮ.ದಿನದ ಮಟ್ಟಿಗೆ ಖರ್ಚು.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಅತಿಥಿಗಳ ಆಗಮನ ಸಂತಸ ತರುವುದು.ಆತ್ಮವಿಶ್ವಾಸದ ಹೊಸ ಭರವಸೆ ಮೂಡಲಿದೆ. ಹೂಡಿಕೆಯ ಲಾಭ ಇಂದು ಉಪಯೋಗಕ್ಕೆ ಬರುವುದು.ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದು ಕೊಡಲಿದೆ.ಆರೋಗ್ಯ, ಉದ್ಯೋಗದಲ್ಲಿ ಉತ್ತಮ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮೀನ: ಅತಿರೇಕದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಕೋಪಗೊಳ್ಳುವಂತೆ ಉದ್ರೇಕವಾಗುವ ವಿಷಯಗಳಿಂದ ದೂರ ಇರಿ. ತಾಳ್ಮೆಯಿಂದ ವರ್ತಿಸಿ. ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಕೃಷ್ಣ ಪಕ್ಷದ ನವಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಶುಕ್ರವಾರ ಸಿಂಹ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ,ಕಟಕ,ಕನ್ಯಾ,ತುಲಾ,ಮಕರ,ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸ್ನೇಹಿತರು,ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ, ಉಡುಗೊರೆ ಸಿಗುವ ಸಾಧ್ಯತೆ ಇದೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಸೌಜನ್ಯದಿಂದ ವರ್ತಿಸಿ. ಯಾವುದೇ ಆತುರದ ಮಾತುಗಳನ್ನಾಡುವುದು ಬೇಡ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (25-10-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಕೃಷ್ಣ ಪಕ್ಷ.
ತಿಥಿ: ನವಮಿ 27:22 ವಾರ: ಶುಕ್ರವಾರ
ನಕ್ಷತ್ರ: ಪುಷ್ಯ 07:38 ಯೋಗ: ಶುಭ 29:25
ಕರಣ: ತೈತುಲ 14:34

ಸೂರ್ಯೋದಯ : 06:11   ಸೂರ್ಯಾಸ್ತ : 05:57

ರಾಹುಕಾಲ: ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ
7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಕ್ಕಳ ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಿ ಇರಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಹಾಸ್ಯದ ಮನೋವೃತ್ತಿ ಇತರರನ್ನು ಆಕರ್ಷಿಸುತ್ತದೆ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸ್ನೇಹಿತರು,ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ, ಉಡುಗೊರೆ ಸಿಗುವ ಸಾಧ್ಯತೆ ಇದೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಸೌಜನ್ಯದಿಂದ ವರ್ತಿಸಿ. ಯಾವುದೇ ಆತುರದ ಮಾತುಗಳನ್ನು ಆಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ನ್ಯಾಯಲಯದಲ್ಲಿರುವ ವ್ಯಾಜ್ಯ ಪ್ರಕರಣಗಳು ನಿಮಗೆ ವಿಜಯವನ್ನು ತಂದುಕೊಡಲಿದೆ. ಒತ್ತಡದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರಲಿದೆ. ಸಂಗಾತಿಯ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳವಿರಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ಮಾನಸಿಕ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ, ಬದಲಾಗಿ ಕ್ಷೇತ್ರ ದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವುದು ಸೂಕ್ತ. ಆರೋಗ್ಯ ಮಧ್ಯಮವಾಗಿರಲಿದೆ. ವ್ಯಾಪಾರ ವ್ಯವಹಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯ ಚಟುವಟಿಕೆಯ ಮಧ್ಯೆಯೂ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಭೂ ಸಂಬಂಧಿ, ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಲಾಭವಾಗಲಿದೆ. ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆಮಾಡುವಿರಿ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಿರಿಯರ ಮಾರ್ಗದರ್ಶನ ಸಿಗಲಿದೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದಲ್ಲಿ ಅನೇಕ ಬದಲಾವಣೆಗಳನ್ನು ಕಾಣುವ ಸಾಧ್ಯತೆ ಇದೆ. ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ನಿಮಗಲ್ಲದವರ ಕುರಿತು ಅನಗತ್ಯವಾಗಿ ಚರ್ಚೆ ಮಾಡಿ, ಕುಟುಂಬದ ಸ್ವಾಸ್ಥ್ಯ ಕೆಡಿಸಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡುವ ಸಾಧ್ಯತೆ ಇದೆ. ಆಲಸ್ಯತನದಿಂದ ಕಾರ್ಯ ಮುಂದುಡುವುದು ಬೇಡ. ಅಮೂಲ್ಯ ವಸ್ತುಗಳ ಕುರಿತಾಗಿ ಜಾಗೃತೆ ಇರಲಿ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸುವುದು ಅಗತ್ಯ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅತಿಯಾದ ಒತ್ತಡ ಉಂಟುಮಾಡುವ ವಿಚಾರಗಳಿಂದ ದೂರ ಇರಿ. ಕುಟುಂಬದ ಆಪ್ತರಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದ ವ್ಯತ್ಯಾಸದಿಂದ ದಿನದ ಮಟ್ಟಿಗೆ ಖರ್ಚು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಹಾಸ್ಯ ಪ್ರವೃತ್ತಿಯಿಂದ,ಬರುವ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದವರು ನಿಮ್ಮ ಬಗೆಗೆ ಹೆಚ್ಚು ಕಾಳಜಿ ವಹಹಿಸುವರು. ಆರೋಗ್ಯ‌ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ.ಅತಿಯಾದ ಉತ್ಸಾಹದ ಭರದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಸರಿಯಲ್ಲ, ಅಪಾಯ ತಂದಿತು ಎಚ್ಚರಿಕೆ ಇರಲಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ಆಹಾರ ಕ್ರಮದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಸಂಗಾತಿಯ ಮಾತುಗಳು ಹಿತವೇನಿಸಿದರೂ ಅವರ ಮಾತುಗಳಿಗೆ ಮನ್ನಣೆ ಸಿಗುವುದಿಲ್ಲ. ಆರೋಗ್ಯ ಹಾಗೂ ಹಣಕಾಸಿನ ವಿಷಯದಲ್ಲಿ ಸಾಮಾನ್ಯ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ದಿನ ಹೂಡಿಕೆ ವ್ಯವಹಾರದಿಂದ ದೂರವಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಕೃಷ್ಣ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಕಟಕ ರಾಶಿಯಿಂದ ಗುರುವಾರ ಮಧ್ಯರಾತ್ರಿ 01:24 ಕ್ಕೆ ಸಿಂಹ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ,ಕಟಕ,ಕನ್ಯಾ,ತುಲಾ,ಮಕರ,ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ವೃಷಭ ರಾಶಿಯವರು ಹಿರಿಯರ ಸಲಹೆ ಆರ್ಥಿಕವಾಗಿ ಲಾಭ ತರುವುದು.ಕುಟುಂಬದ ಸದಸ್ಯರ ಬೆಂಬಲ ಕೆಲಸ ಕಾರ್ಯಗಳಲ್ಲಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಮನ್ನಣೆ ಸಿಕ್ಕು ಪ್ರಶಂಸೆ ಪಡೆಯುವಿರಿ. ಅಪರಿಚಿತರೊಂದಿಗೆ ಅನಿವಾರ್ಯ ಕಾರಣಗಳಿಂದ ವಾದಕ್ಕೆ ಇಳಿಯುವಂತೆ ಮಾಡಬಹುದು, ಮಾತು ಮಿತವಾಗಿರಲಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (24-10-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಕೃಷ್ಣ ಪಕ್ಷ.
ತಿಥಿ: ಅಷ್ಟಮಿ 25:57 ವಾರ: ಗುರುವಾರ
ನಕ್ಷತ್ರ: ಪುಷ್ಯ 31:38 ಯೋಗ: ಸಾಧ್ಯ 29:21
ಕರಣ: ಬಾಲವ 13:31 ಅಮೃತಕಾಲ: ಮಧ್ಯರಾತ್ರಿ 03:48 ರಿಂದ 05:26

ಸೂರ್ಯೋದಯ : 06:11   ಸೂರ್ಯಾಸ್ತ : 05:57

ರಾಹುಕಾಲ: ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ
9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರ್ಥಿಕ ವ್ಯವಹಾರಗಳ ಕುರಿತಾಗಿ ಹಿರಿಯರಿಂದ ಮಾರ್ಗದರ್ಶನ ಪಡೆಯುವಿರಿ. ಆರೋಗ್ಯದ ಕುರಿತು ಕಾಳಜಿ ವಹಿಸಿ, ಅದರಲ್ಲಿಯೂ ಕಣ್ಣಿನ ಬಗೆಗೆ ವಿಶೇಷ ಕಾಳಜಿ ವಹಿಸುವುದು ಸೂಕ್ತ. ಆರ್ಥಿಕವಾಗಿ ಪ್ರಗತಿ ಇರಲಿದೆ. ವ್ಯಾಪಾರ-ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ . ಅದೃಷ್ಟ ಸಂಖ್ಯೆ: 8

Horoscope Today

ವೃಷಭ: ಹಿರಿಯರ ಸಲಹೆ ಆರ್ಥಿಕವಾಗಿ ಲಾಭ ತರುವುದು.ಕುಟುಂಬದ ಸದಸ್ಯರ ಬೆಂಬಲ ಕೆಲಸ ಕಾರ್ಯಗಳಲ್ಲಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಮನ್ನಣೆ ಸಿಕ್ಕು ಪ್ರಶಂಸೆ ಪಡೆಯುವಿರಿ. ಅಪರಿಚಿತರೊಂದಿಗೆ ಅನಿವಾರ್ಯ ಕಾರಣಗಳಿಂದ ವಾದಕ್ಕೆ ಇಳಿಯುವಂತೆ ಮಾಡಬಹುದು, ಮಾತು ಮಿತವಾಗಿರಲಿ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಆಶಾವಾದಿಗಳಾಗಿರಿ, ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸುನ್ನು ತಂದು ಕೊಡುವುದು.ಅನಿವಾರ್ಯ ಕಾರಣಗಳಿಂದ ಖರ್ಚು ಮಾಡುವ ಸಾಧ್ಯತೆ ಇದೆ. ಹಳೆಯ ಪರಿಚಿತರ ಸಂಪರ್ಕ ಪುನಃ ಸ್ಥಾಪಿತವಾಗುವುದು. ವೈವಾಹಿಕ ಜೀವನಕ್ಕೆ ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕಟಕ: ಅವಿರತವಾಗಿ ಶ್ರಮಿಸಿದ ಜೀವಕೆ ವಿಶ್ರಾಂತಿಯು ಸಿಗಲಿದೆ.ಸಂಗಾತಿಯೊಂದಿಗೆ ಹೂಡಿಕೆ ಕೂರಿತಾಗಿ ಚರ್ಚೆ.ಉತ್ತಮ ವ್ಯಕ್ತಿಗಳ ಸಂಪರ್ಕ, ಮಾರ್ಗದರ್ಶನ ಸಿಗಲಿದೆ.ಆರ್ಥಿಕವಾಗಿ ಲಾಭ ಸಿಗಲಿದೆ.ಆರೋಗ್ಯ ಪರಿಪೂರ್ಣ.ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ, ತಾಳ್ಮೆಯಿಂದ ಸಹಕರಿಸಿ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಸಿಂಹ: ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಹಣಕಾಸು ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಅಗತ್ಯ ವಸ್ತುಗಳ ಖರೀದಿ ಸಾಧ್ಯತೆ ಇದೆ. ಆತುರದ ಮಾತುಗಳು ಸುತ್ತಮುತ್ತಲಿನ ಜನರೊಂದಿಗೆ ವಾದಕ್ಕೆ ಇಳಿಯುವಂತೆ ಮಾಡಬಹುದು ಎಚ್ಚರಿಕೆ ಇರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ: ಹೊಸ ಆರ್ಥಿಕ ಒಪ್ಪಂದಗಳು ಗರಿಗೆದರಲಿವೆ. ಆಪ್ತರಿಂದ ಆಮಂತ್ರಣ ಸಿಗಲಿದೆ.ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ.ಆಸ್ತಿ ಖರೀದಿ ವ್ಯವಹಾರದ ಕುರಿತು ಚರ್ಚೆ.ಸಂಗಾತಿಯ ಮಾತುಗಳಿಗೆ ಮನ್ನಣೆ ಸಿಗದೇ ಇರುವುದರಿಂದ ನಿಮ್ಮ ಮೇಲೆ ಕೋಪಿಸಿಕೊಳ್ಳುವ ಸಾಧ್ಯತೆ ಇದೆ. ನಗುವಿನ ಮೂಲಕ ಪರಿಸ್ಥಿತಿ ತಿಳಿಗೊಳಿಸಿ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 6

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಗಾಳಿಯಲ್ಲಿ ಗೋಪುರ ಕಟ್ಟಿಕೊಂಡು ಸಮಯ, ವ್ಯರ್ಥ ಪ್ರಯತ್ನ,ಮಾಡಬೇಡಿ.ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ.ಕುಟುಂಬದ ಸದಸ್ಯರ ಮಾರ್ಗದರ್ಶನ ಪಡೆಯುವುದು ಒಳ್ಳೆಯದು.ಆರೋಗ್ಯದ ಕುರಿತು ಕಾಳಜಿ ವಹಿಸಿ.ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ ಉಂಟಾಗುವ ಸಾಧ್ಯತೆ.ಸಂಗಾತಿಯ ಮಧುರ ಪ್ರೀತಿ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು.ಹಣಕಾಸಿನ ವ್ಯವಹಾರ ನಿರೀಕ್ಷಿಸಿದಷ್ಟು ಸಾಧ್ಯವಿಲ್ಲ.ಅತಿಥಿಗಳ ಆಗಮನದಿಂದ ನಿಮ್ಮ ಯೋಚಿತ ಕಾರ್ಯ ವಿಳಂಬವಾಗುವ ಸಾಧ್ಯತೆ.ಆತುರದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳಲಾಗುವುದು ಬೇಡ.ಆರೋಗ್ಯ ಉತ್ತಮ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು: ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಮಾಡುವ ಸಾಧ್ಯತೆ ಇದೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ, ಯಾವುದೇ ಹಣಕಾಸು ಒಪ್ಪಂದಗಳನ್ನು ಮಾಡಿಕೊಳ್ಳುವುದು ಬೇಡ. ಪ್ರೀತಿ ಪಾತ್ರರೊಂದಿಗೆ ಆತುರದ ಮಾತುಗಳಿಂದ ಹಳಿಸುವ ಸಾಧ್ಯತೆ. ನಿಧಾನಿಸಿ, ಯೋಚಿಸಿ ಮಾತನಾಡಿ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಕರ: ಬಹಳ ದಿನಗಳ ಕನಸು ನನಸಾಗುವ ಕಾಲ.ಆತುರದಲ್ಲಿ ಯಾವುದೇ ಸಂಕಲ್ಪ ಮಾಡುವುದು ಬೇಡ. ಸ್ನೇಹಿತರ ಕಷ್ಟಕಾಲಕ್ಕೆ ಸ್ಪಂದಿಸುವ ಸಾಧ್ಯತೆ.ಆರೋಗ್ಯ ಪರಿಪೂರ್ಣ.ಉದ್ಯೋಗದಲ್ಲಿ ಯಶಸ್ಸು.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕುಂಭ: ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳಿಂದ ಕಿರಿಕಿರಿ ಒತ್ತಡ ಉಂಟಾಗುವ ಸಾಧ್ಯತೆ.ಆಲಸ್ಯದಿಂದ ದೂರವಿದ್ದು ಕಾರ್ಯ ಪೂರ್ಣ ಮಾಡಿ.ಕೆಲಸದ ಒತ್ತಡದಿಂದ ಮನೆಯ ಸದಸ್ಯರ ಮೇಲೆ ಹಾಕಿ, ವಾತಾವರಣ ಹದಗೆಡಲು ಕಾರಣವಾಗಬೇಡಿ.ಗುರುಗಳ ಆರಾಧನೆ ಮಾಡಿ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಮೀನ: ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ.ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಕಾಳಜಿ ವಹಿಸುವುದು ಸೂಕ್ತ.ವ್ಯಾಪರ ವ್ಯವಹಾರದಲ್ಲಿ ಸಾಧಾರಣ.ದಿನದ ಮಟ್ಟಿಗೆ ಖರ್ಚು.ಸಂಗಾತಿಯ ವರ್ತನೆ ನಿಮಗೆ ಕೋಪ ತರಿಸಬಹುದು.ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya: ಈ ರಾಶಿಯವರಿಗೆ ಉತ್ಸಾಹದ ವಾತಾವರಣ; ಆಪ್ತರೊಂದಿಗೆ ಪ್ರಯಾಣ ಸಾಧ್ಯತೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಕೃಷ್ಣ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina bhavishya
Koo

ಚಂದ್ರನು ಬುಧವಾರವೂ ಕಟಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರಿಗೆ ಉತ್ಸಾಹದ ವಾತಾವರಣ ಇರಲಿದೆ.ಆಪ್ತರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ವ್ಯಾಪಾರ ವ್ಯವಹಾರಗಳಿಗೆ ಹೆಚ್ಚಿನ ಲಾಭ ದೊರೆಯಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (23-10-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಕೃಷ್ಣ ಪಕ್ಷ.
ತಿಥಿ: ಸಪ್ತಮಿ 25:18 ವಾರ: ಬುಧವಾರ
ನಕ್ಷತ್ರ: ಪುನರ್ವಸು 30:14 ಯೋಗ: ಶಿವ 06:57
ಕರಣ: ವಿಷ್ಟಿ (ಭದ್ರ) 13:16 ಅಮೃತಕಾಲ: ಮಧ್ಯರಾತ್ರಿ 03:48 ರಿಂದ 05:26

ಸೂರ್ಯೋದಯ : 06:11   ಸೂರ್ಯಾಸ್ತ : 05:57

ರಾಹುಕಾಲ: ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ
10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಉತ್ಸಾಹದ ವಾತಾವರಣ ಇರಲಿದೆ.ಆಪ್ತರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ವ್ಯಾಪಾರ ವ್ಯವಹಾರಗಳಿಗೆ ಹೆಚ್ಚಿನ ಲಾಭ ದೊರೆಯಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ನಿಮ್ಮ ವ್ಯಕ್ತಿತ್ವ ಇತರರನ್ನು ಆಕರ್ಷಿಸಿ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ, ಕುಟುಂಬದಲ್ಲಿ ನೆಮ್ಮದಿ. ಅದೃಷ್ಟ ಸಂಖ್ಯೆ: 5

Horoscope Today

ಮಿಥುನ: ಸಂತಸದ ಕ್ಷಣಗಳನ್ನು ಕಳೆಯುವಿರಿ.ಆರ್ಥಿಕ ಪ್ರಗತಿ ಇರಲಿದೆ.ಬಹಳ ದಿನಗಳ ಬಾಕಿ ಇರುವ ಕಾರ್ಯವು ಪುರ್ಣವಾಗುವುದು.ಮನೆಯಲ್ಲಿ ಪರಸ್ಪರ ಸಹಕಾರ ಸಿಗುವುದು, ಉತ್ಸಾಹದ ದಿನವಿದು.
ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಆಕರ್ಷಕ ವ್ಯಕ್ತಿತ್ವ ಹೊಂದಿರುವ ನೀವು ಇಂದು ಇತತರನ್ನು ಆಕರ್ಷಿಸುವಿರಿ.ಆರ್ಥಿಕ ಪ್ರಗತಿ ಸಾಧಾರಣ ವಿದ್ದರೂ ಸಮರ್ಥವಾಗಿ ನಿರ್ವಹಿಸುವಿರಿ.ಉದ್ಯೋಗದಲ್ಲಿ ಪ್ರಗತಿ.ಮಡದಿಯ ಪ್ರೀತಿಗೆ ಸೋಲುವಿರಿ.ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಉದ್ಯೋಗ ಅಪೇಕ್ಷಿತರಿಗೆ ಇಂದು ಉದ್ಯೋಗದ ಭರವಸೆ.ಆರ್ಥಿಕ ಪ್ರಗತಿ.ಪರಿಶ್ರಮಕ್ಕೆ ಪ್ರತಿ ಫಲ ಸಿಗುವುದು.ಮನೆಯವರ ಪ್ರೀತಿ ಸಹಕಾರ ಸಿಗಲಿದೆ.ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಮನೆಯಲ್ಲಿ ಪರಸ್ಪರರ ಮಧ್ಯೆ ಕಲಹದಿಂದ ವಾತಾವರಣ ಹದಗೆಡಡಬಹುದು.ಕೆಲಸದಲ್ಲಿ ಹಿರಿಯರಿಂದ ಒತ್ತಡ, ಎಚ್ಚರಿಕೆ ವಹಿಸಿ.ಆರ್ಥಿಕ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಯಾವುದೇ ಹೂಡಿಕೆ ಬೇಡ.ಬಂಧು ಮಿತ್ರರಿಂದ ಸಹಕಾರ ಸಿಗಲಿದೆ.ಆರೋಗ್ಯದಲ್ಲಿ ಉತ್ತಮ.ಮನೆಯಲ್ಲಿ ಸಂತೋಷದ ದಿನ.
ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ:ಮಿತ್ರರಿಂದ ಸಹಕಾರ ಸಿಗಲಿದೆ.ಆರ್ಥಿಕವಾಗಿ ಪ್ರಗತಿ ಹೊಂದಲು ಹಿರಿಯರು ಮಾರ್ಗದರ್ಶನ ಮಾಡುವುರು. ಧೈರ್ಯದಿಂದ ಕಾರ್ಯದಲ್ಲಿ ಮುನ್ನುಗ್ಗಿ ಯಶ ಸಿಗುವುದು.ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಕುಟುಂಬ ಸದಸ್ಯರ ಆರೋಗ್ಯ ಸಂಬಂಧಿ ವಿಷಯಗಳು ತಮಗೆ ಒತ್ತಡ ಉಂಟುಮಾಡಬಹುದು.ಉದಾಸಿನತೆ ಮಾಡುವುದು ಬೇಡ.ಆಶಾವಾದಿಗಳಾಗಿರಿ ಕುಲದೇವರನ್ನು ಸ್ಮರಿಸಿ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಮಕರ: ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳಿಂದ ಕಿರಿಕಿರಿ ಒತ್ತಡ ಉಂಟಾಗುವ ಸಾಧ್ಯತೆ.ಆಲಸ್ಯದಿಂದ ದೂರವಿದ್ದು ಕಾರ್ಯ ಪೂರ್ಣ ಮಾಡಿ.ಕೆಲಸದ ಒತ್ತಡದಿಂದ ಮನೆಯ ಸದಸ್ಯರ ಮೇಲೆ ಹಾಕಿ, ವಾತಾವರಣ ಹದಗೆಡಲು ಕಾರಣವಾಗಬೇಡಿ.ಗುರುಗಳ ಆರಾಧನೆ ಮಾಡಿ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ಭೂ ಸಂಬಂಧಿ ವ್ಯವಹಾರದಲ್ಲಿ ಪ್ರಗತಿ.ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರುವುದು.ಅನ್ಯರು ಆಡುವ ಕುಹುಕು ಮಾತುಗಳಿಗೆ ದ್ವನಿಯಾಗಬೇಡಿ.ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 3

Horoscope Today

ಮೀನ: ನಿಮ್ಮ ಮಹತ್ವಾಕಾಂಕ್ಷೆಯ ಕೆಲಸ ಕಾರ್ಯಗಳು ಕುಂಠಿತವಾಗುವ ಸಾಧ್ಯತೆ.ಗೌಪ್ಯ ವಿಷಯಗಳು ಬಹಿರಂವಾಗದಿರಲಿ. ಆರ್ಥಿಕ ನಷ್ಟ ತಪ್ಪಿಸಿಕೊಳ್ಳಿ.ಸಂಗಾತಿಯ ಮಾತುಗಳು ಹಿತವೆನಿಸುದು.ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Hc to hear Darshans bail plea tomorrow
ಬೆಂಗಳೂರು14 ನಿಮಿಷಗಳು ago

Actor Darshan : ನಾಳೆ ಹೈಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ಭವಿಷ್ಯ

Dina Bhavishya
ಭವಿಷ್ಯ7 ಗಂಟೆಗಳು ago

Dina Bhavishya : ಅತ್ಯಂತ ಪ್ರೀತಿಯ ಕನಸು ನನಸಾಗುವ ದಿನವಿದು

Belekeri Port Scam Congress MLA Satish sentenced to 7 years in jail
ಬೆಂಗಳೂರು17 ಗಂಟೆಗಳು ago

Belekeri Port Scam : ಬೇಲಿಕೇರಿ ಅದಿರು ನಾಪತ್ತೆ ಪ್ರಕರಣ; ಕಾಂಗ್ರೆಸ್‌ ಶಾಸಕ ಸತೀಶ್‌ಗೆ 7 ವರ್ಷ ಜೈಲು

Murder Case
ಕೊಡಗು21 ಗಂಟೆಗಳು ago

Murder case : ಆಸ್ತಿಗಾಗಿ ಪ್ರಿಯಕರನ ಜತೆ ಸೇರಿ ಗಂಡನನ್ನೇ ಕೊಂದು ಬಿಟ್ಟಳು ಪಾಪಿ

Rajakaluve Encroachment
ಬೆಂಗಳೂರು1 ದಿನ ago

Rajakaluve Encroachment : ರಾಜಕಾಲುವೆ ಒತ್ತುವರಿ ತೆರವಿಗೆ ಮುಹೂರ್ತ ಫಿಕ್ಸ್; ಮತ್ತೆ ಗರ್ಜಿಸಲಿದೆ ಬುಲ್ಡೋಜರ್

karnataka Weather Forecast
ಮಳೆ1 ದಿನ ago

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

dina bhavishya
ಭವಿಷ್ಯ1 ದಿನ ago

Dina Bhavishya: ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನಾಡಿ ಅಪಾಯ ತಂದುಕೊಳ್ಳಬೇಡಿ

kea
ಬೆಂಗಳೂರು2 ದಿನಗಳು ago

KEA: ನಾಳೆ ಕನ್ನಡ ಕಡ್ಡಾಯ ಪರೀಕ್ಷೆ; ಅ.27ಕ್ಕೆ ಬಿಗಿ ಬಂದೋಬಸ್ತ್ ನಡೆಯಲಿದೆ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

assault Case
ಕೊಡಗು2 ದಿನಗಳು ago

Assault case: ಟ್ರಾಫಿಕ್‌ ಪೊಲೀಸ್‌ ಮೇಲೆಯೇ ಕಾರು ಹರಿಸಿ ಪರಾರಿ ಆಗಿದ್ದ ಚಾಲಕ ಅರೆಸ್ಟ್‌

actor darshan
ಪ್ರಮುಖ ಸುದ್ದಿ2 ದಿನಗಳು ago

Actor Darshan : ದರ್ಶನ್‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌; ನ.8ರಂದು ನವಗ್ರಹ ಸಿನಿಮಾ ರೀ-ರಿಲೀಸ್‌

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ11 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ3 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌