Dina Bhavishya : ಈ ರಾಶಿಯವರಿಗೆ ಇಂದು ಮನೆಯಲ್ಲೂ ಆಫೀಸ್‌ನಲ್ಲೂ ಕಿರಿಕಿರಿ! - Vistara News

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರಿಗೆ ಇಂದು ಮನೆಯಲ್ಲೂ ಆಫೀಸ್‌ನಲ್ಲೂ ಕಿರಿಕಿರಿ!

Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಯುಜ ಮಾಸ, ಶುಕ್ಲ ಪಕ್ಷದ ಹುಣ್ಣಿಮೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಮೇಷ ರಾಶಿಯಿಂದ ಶನಿವಾರ ಬೆಳಗ್ಗೆ 07:44 ಕ್ಕೆ ವೃಷಭ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ, ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ವೃಷಭ ರಾಶಿಯವರು ಮನೆಯಲ್ಲಿ ಅಪಸ್ವರಗಳು ಮೂಡದಂತೆ ಎಚ್ಚರಿಕೆ ವಹಿಸಿ. ಸಿಂಹ ರಾಶಿಯವರಿಗೂ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ. ವೃಶ್ಚಿಕ ರಾಶಿಯವರು ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ ಇದೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬದ ಸದಸ್ಯನ ಆರೋಗ್ಯ ಹದಗೆಡುವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (27-10-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಯುಜ ಮಾಸ, ಶುಕ್ಲ ಪಕ್ಷ.
ತಿಥಿ: ಹುಣ್ಣಿಮೆ 25:52
ವಾರ: ಶನಿವಾರ
ನಕ್ಷತ್ರ: ರೇವತಿ 07:30 ಯೋಗ: ವಜ್ರ 22:50
ಕರಣ: ವಿಷ್ಟಿ (ಭದ್ರ) 15:02 ಅಮೃತ ಕಾಲ: ರಾತ್ರಿ 11:11 ರಿಂದ 12:41 ರವರೆಗೆ
ದಿನದ ವಿಶೇಷ: ಪಾರ್ಶ್ವ ಚಂದ್ರಗ್ರಹಣ, ಶೀಗಿ ಹುಣ್ಣಿಮೆ, ವಾಲ್ಮೀಕಿ ಜಯಂತಿ

ಸೂರ್ಯೋದಯ : 06:12  ಸೂರ್ಯಾಸ್ತ : 05:55

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅನಿರೀಕ್ಷಿತ ಖರ್ಚು ನಿಮ್ಮ ಮನಸ್ಸಿನ ಶಾಂತಿಗೆ ಭಂಗ ತರುವ ಸಾಧ್ಯತೆ ಇದೆ. ಹಾಸಿಗೆ ಇದ್ದಷ್ಟು ಕಾಲು ಚಾಚಿ. ಸ್ನೇಹಿತರು, ಮಿತ್ರರ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವಿರಿ. ಸಹದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಬಗ್ಗೆ ಕೊಂಚ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ದಾಂಪತ್ಯದಲ್ಲಿ ಮಧುರ ಭಾವ ಮೂಡಲಿದೆ.
ಅದೃಷ್ಟ ಸಂಖ್ಯೆ: 9

Horoscope Today

ವೃಷಭ: ದಿನದ ಆರಂಭದಲ್ಲಿ ಇಂದು ನೀವು ಯಾವುದೇ ಆರ್ಥಿಕ ನಷ್ಟವನ್ನು ಹೊಂದಬಹುದು. ಇದರಿಂದ ನಿಮ್ಮ ಪೂರ್ತಿ ದಿನ ಹದಗೆಡವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ಆದಷ್ಟು ದೈಹಿಕ ಹಾಗೂ ಮಾನಸಿಕ ದೃಢತೆಗಾಗಿ ಯೋಗ ಹಾಗೂ ಧ್ಯಾನ ಮಾಡುವುದು ಉತ್ತಮ. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಮನೆಯಲ್ಲಿ ಅಪಸ್ವರಗಳು ಮೂಡದಂತೆ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಉದ್ಯೋಗಿಗಳಿಗೆ ಆಪ್ತರಿಂದ ಸಲಹೆ ಸೂಚನೆಗಳು ಸಿಗಲಿದೆ. ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರಿಕೆ ವಹಿಸಿ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಸಭಲತೆ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕಟಕ: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರ್ಥಿಕವಾಗಿ ಸದೃಢವಾಗಿ ಇರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಸಿಗಲಿದೆ. ಉದ್ಯೋಗಕ್ಕೆ ಸಂಬಂಧಿಸಿದ ಜನರು ಇಂದು ಕೆಲಸದ ಸ್ಥಳದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ತಾಳ್ಮೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಸಿಂಹ: ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ. ನಿಮ್ಮ ಸರ್ವಾಧಿಕಾರಿ ಧೋರಣೆಯಿಂದಾಗಿ ನಿಮ್ಮ ಸಹೋದ್ಯೋಗಿಗಳಿಂದ ಟೀಕೆಗೆ ಗುರಿಯಾಗುವ ಸಾಧ್ಯತೆ ಹೆಚ್ಚು. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ, ಅನಗತ್ಯ ಖರ್ಚುಗಳ ಬಗೆಗೆ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ: ಅನಗತ್ಯ ಒತ್ತಡದಿಂದ ಹೊರಬರಲು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಸಮಾಧಾನ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಕೊಂಚಮಟ್ಟಿಗೆ ನಿಧಾನವಾದರೂ ಪ್ರಯತ್ನವನ್ನು ಬಿಡಬೇಡಿ. ಮುಂದೊಂದು ದಿನ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯ ಮಧ್ಯಮ. ಆರ್ಥಿಕವಾಗಿ ಉತ್ತಮ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ. ನಿಮ್ಮ ಹರ್ಷಚಿತ್ತದ ಮನಸ್ಸು ನಿಮಗೆ ಇನ್ನಷ್ಟೂ ಆತ್ಮವಿಶ್ವಾಸ ತರಲಿದೆ.ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಆರ್ಥಿಕವಾಗಿ ಸಾಧಾರಣ ಫಲ. ಉದ್ಯೋಗಿಗಳಿಗೆ ಮಿಶ್ರಫಲ.ಕೌಟುಂಬಿಕವಾಗಿ ಸಂತೋಷದ ವಾತಾವರಣ ಇರಲಿದೆ.
ಅದೃಷ್ಟ ಸಂಖ್ಯೆ: 9

Horoscope Today

ವೃಶ್ಚಿಕ: ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ ಇದೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬದ ಸದಸ್ಯನ ಆರೋಗ್ಯ ಹದಗೆಡುವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಉದ್ಯೋಗಿಗಳಿಗೆ ಹೆಚ್ಚಿದ ಕಿರಿಕಿರಿ. ಸಂಗಾತಿಯಿಂದ ಸಲಹೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

ಜೇಡರ ದಾಸಿಮಯ್ಯರ ವಚನ ಎಲ್ಲಿರುಗೂ ಆದರ್ಶ

Horoscope Today

ಧನಸ್ಸು: ದೃಢ ವಿಶ್ವಾಸದ ನಿರ್ಧಾರದಿಂದಾಗಿ ಸುದೀರ್ಘವಾದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸ್ನೇಹಿತರಿಂದ ಆರ್ಥಿಕ ಸಹಾಯದ ಬೇಡಿಕೆ, ಆಲೋಚಿಸಿ ಸಹಾಯ ಮಾಡಿ. ಬಹಳ ದಿನಗಳಿಂದ ಪ್ರಯತ್ನಿಸುತ್ತಿದ್ದ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮಗೆ ಪ್ರಸಂಶೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8

Horoscope Today

ಮಕರ: ಇಂದು ನೀವು ಹಲವಾರು ಒತ್ತಡಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾಗಬಹುದು, ಇದು ನಿಮಗೆ ಕಿರಿಕಿರಿ ಹಾಗೂ ಆತಂಕದ ಭಾವನೆಗಳನ್ನು ಉಂಟುಮಾಡಬಹುದು. ಕುಟುಂಬದವರ ಬೆಂಬಲ ಪ್ರೋತ್ಸಾಹದಿಂದಾಗಿ ಕೊಂಚಮಟ್ಟಿಗೆ ನಿರಾಳವಾಗುವಿರಿ. ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ. ಉದ್ಯೋಗದ ಸ್ಥಳದಲ್ಲಿ ಒತ್ತಡ ಹೆಚ್ಚಲಿದೆ. ಖರ್ಚಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ದಿನದ ಮಟ್ಟಿಗೆ ಮಾಡುವುದು ಬೇಡ.ಆತುರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಸ್ನೇಹಿತರ ಜೊತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಲಾಭ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಹೂಡಿಕೆಯಲ್ಲಿ ಲಾಭಾಂಶ ಕಡಿಮೆ ಇರಲಿದೆ. ನೀವು ಯಾವುದೇ ದೊಡ್ಡ ಸಮಸ್ಯೆಯಿಂದ ಹೊರಬರಬಹುದು. ಪ್ರೀತಿ ಪಾತ್ರರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕೊಂಚ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ ನೀಡಲಿದೆ.
ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Weight Lifting: ಮೊಣಕಾಲಿನ ಸಂಧಿವಾತವಿದ್ದರೂ 68ನೇ ವಯಸ್ಸಿನಲ್ಲಿ 60 ಕೆಜಿ ಭಾರ ಎತ್ತುವ ಅಜ್ಜಿ!

Weight Lifting: ಆರೋಗ್ಯದ ವಿಷಯಕ್ಕೆ ಬಂದಾಗ ಕೆಲವರು ಹೆಚ್ಚಿನ ಎಚ್ಚರಿಕೆ ವಹಿಸುತ್ತಾರೆ. ಇಲ್ಲೊಬ್ಬರು ಅಜ್ಜಿ ತಮಗೆ ಸಂಧಿವಾತ ಸಮಸ್ಯೆ ಇದೆ ಎಂದು ಗೊತ್ತಾದ ತಕ್ಷಣ ಕೊರಗದೇ ವೇಟ್‌ಲಿಪ್ಟಿಂಗ್‌ಗೆ ಮುಂದಾಗಿದ್ದಾರೆ. ಅಜ್ಜಿಯ ಈ ಸಾಹಸ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

VISTARANEWS.COM


on

weight lifting
Koo

ಬೆಂಗಳೂರು: ನಮ್ಮಲ್ಲಿ ಹೆಚ್ಚಿನ ಜನರು ವಯಸ್ಸಾದ ಮೇಲೆ ಸಂಧಿವಾತ ಸಮಸ್ಯೆಯಿಂದ ನರಳುತ್ತಿರುವುದನ್ನು ನಾವು ನೋಡಿರುತ್ತೇವೆ. ಇದರಿಂದ ಅವರಿಗೆ ನಡೆಯಲು, ಕುಳಿತುಕೊಳ್ಳಲು, ಕೆಲಸ ಮಾಡಲು ಕಷ್ಟವಾಗುತ್ತದೆ. ಈ ಸಮಸ್ಯೆಗೆ ಸರಿಯಾದ ಚಿಕಿತ್ಸೆ ಪಡೆಯಬೇಕು ಇಲ್ಲವಾದರೆ ಇದು ನಮ್ಮನ್ನು ಹಾಸಿಗೆ ಹಿಡಿಯುವಂತೆ ಮಾಡುತ್ತದೆ. ಇನ್ನು ಈಗಿನ ಯುವಜನತೆ ಬೆಳಿಗ್ಗೆದ್ದು ವಾಕಿಂಗ್‌ ಮಾಡುವುದಕ್ಕೆ ಹಿಂದೆ ಮುಂದೆ ನೋಡುತ್ತಾರೆ. ಇಲ್ಲೊಬ್ಬರು ಅಜ್ಜಿ ಮೊಣಕಾಲಿನ ಸಂಧಿವಾತ ಸಮಸ್ಯೆ ಇದ್ದರೂ ವೇಟ್‌ಲಿಪ್ಟಿಂಗ್ (Weight Lifting )ಮಾಡುವ ಮೂಲಕ ಎಲ್ಲರಲ್ಲೂ ಅಚ್ಚರಿಯನ್ನು ಮೂಡಿಸಿದ್ದಾರೆ. ಸಂಧಿವಾತದಿಂದ ಬಳಲುತ್ತಿದ್ದ 68 ವರ್ಷದ ಈ ಅಜ್ಜಿ ಪ್ರತಿದಿನ 60 ಕೆಜಿ ತೂಕವನ್ನು ಎತ್ತುತ್ತಾರಂತೆ. ಇದಕ್ಕೆ ಸಂಬಂಧಿಸಿದ ಪೋಸ್ಟ್ ಇನ್ ಸ್ಟಾಗ್ರಾಂನಲ್ಲಿ ಹರಿದಾಡುತ್ತಿದೆ.

ಅಜ್ಜಿಯ ವೇಟ್‌ಲಿಪ್ಟಿಂಗ್ ಹಿಂದಿನ ಕತೆ

ಕೆಲವರು ಯಾವುದಾದರೂ ಆರೋಗ್ಯ ಸಮಸ್ಯೆ ಬರುವವರೆಗೂ ಆರೋಗ್ಯದ ಬಗ್ಗೆ ಅಷ್ಟಾಗಿ ತಲೆಕೆಡಿಸಿಕೊಳ್ಳಲ್ಲ. ಇನ್ನು ಕೆಲವರು ಆರೋಗ್ಯದಲ್ಲಿ ಸ್ವಲ್ಪ ಏರುಪೇರಾದಾಗ ಕಾಳಜಿ ವಹಿಸಿ ಅದರಿಂದ ಹೊರಗೆ ಬರುವುದಕ್ಕೆ ನೋಡುತ್ತಾರೆ. ಈ ಅಜ್ಜಿಯ ವಿಷಯದಲ್ಲೂ ಅದೇ ಆಗಿದ್ದು. ಸೆಪ್ಟೆಂಬರ್ 2022ರಲ್ಲಿ ಇವರಿಗೆ ಸಂಧಿವಾತ ಸಮಸ್ಯೆ ಇರುವುದು ಗೊತ್ತಾಯಿತು. ವಯಸ್ಸಾಯಿತು ಎಂದು ಸುಮ್ಮನಿರದೇ ಈ ಅಜ್ಜಿ ತಾನು ಫಿಟ್‌ ಆಗಿರಬೇಕು ಎಂದು ವೇಟ್‌ಲಿಪ್ಟಿಂಗ್ ಮಾಡುವುದಕ್ಕೆ ಶುರುಮಾಡಿದರಂತೆ. ತಾಯಿಗೆ ಬೆಂಬಲವಾಗಿ ನಿಂತಿದ್ದು ಅವರ ಮಗ. ನಂತರ ವೇಟ್‌ಲಿಪ್ಟಿಂಗ್‌ ತರಬೇತುದಾರರ ಅಡಿಯಲ್ಲಿ ಕೂಡ ಇವರು ಕಲಿಯುತ್ತಿದ್ದಾರಂತೆ. ಈಗ ಯಾವುದೇ ನೋವು ಇಲ್ಲ ಎಂಬುದಾಗಿ ಅವರ ಮಗ ತಿಳಿಸಿದ್ದಾರೆ. ಈ ಅಜ್ಜಿಯ ಆರೋಗ್ಯದ ಕಾಳಜಿ, ಹುಮ್ಮಸ್ಸು ಎಲ್ಲರಲ್ಲೂ ಆಶ್ಚರ್ಯ ಮೂಡಿಸಿದೆ.

ತೂಕ ಎತ್ತುವುದು ಒಟ್ಟಾರೆ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದ್ದರೂ ಕೂಡ ಮೊಣಕಾಲಿನ ಸಂಧಿವಾತ ಸಮಸ್ಯೆ ಇರುವವರು ಇದನ್ನು ಮಾಡುವಾಗ ಎಚ್ಚರಿಕೆಯಿಂದಿರಬೇಕು. ಭಾರೀ ತೂಕ ಎತ್ತುವುದು ಮೊಣಕಾಲುಗಳನ್ನು ಒಳಗೊಂಡಂತೆ ಕೀಳುಗಳ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ. ಇದರಿಂದ ಮೊಣಕಾಲಿನ ಸಂಧಿವಾತ ಹೊಂದಿರುವವರಿಗೆ ಈ ಸಮಸ್ಯೆ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಮೂಳೆ ತಜ್ಞರು ಹೇಳಿದ್ದಾರೆ.

ವೇಟ್‌ಲಿಪ್ಟಿಂಗ್ ಪ್ರಾರಂಭಿಸುವ ಮುನ್ನ ಆರೋಗ್ಯ ತಜ್ಞರು ಮತ್ತು ವೈದ್ಯರ ಬಳಿ ಸಮಾಲೋಚನೆ ಮಾಡುವುದು ಸೂಕ್ತ. ಅವರು ವ್ಯಕ್ತಿ ನಿರ್ದಿಷ್ಟ ಸ್ಥಿತಿ ಮತ್ತು ವೈದ್ಯಕೀಯ ಇತಿಹಾಸದ ಆಧಾರದ ಮೇಲೆ ನಿಮಗೆ ಸೂಕ್ತವಾದ ಸಲಹೆಗಳನ್ನು ನೀಡುತ್ತಾರೆ ಎಂದು ತಜ್ಞರು ತಿಳಿಸಿದ್ದಾರೆ.

ಇದನ್ನೂ ಓದಿ: Terror attack : ಉಗ್ರರ ದಾಳಿ; ತನ್ನ ಪ್ರಾಣ ತ್ಯಾಗ ಮಾಡಿ ಪ್ರಯಾಣಿಕರ ಜೀವ ಉಳಿಸಿದ ಬಸ್‌ ಚಾಲಕ

ಅಲ್ಲದೇ ಕಡಿಮೆ ಪ್ರಭಾವ ಬೀರುವ ವ್ಯಾಯಾಮಗಳು ಅಥವಾ ವಾಟರ್ ಏರೋಬಿಕ್ಸ್ ನಂತಹ ಪರ್ಯಾಯಗಳು ಮೊಣಕಾಲುಗಳ ಮೇಲೆ ಕಡಿಮೆ ಒತ್ತಡವನ್ನುಂಟುಮಾಡುತ್ತದೆ ಮತ್ತು ಪ್ರಯೋಜನಕಾರಿಯಾಗಿದೆ. ಕೀಲುಗಳು ಮತ್ತು ಬೆನ್ನಿನ ಮೇಲೆ ಒತ್ತಡ ಹೇರುವ ಬದಲು ಸ್ನಾಯುಗಳನ್ನು ಬಲಪಡಿಸುವುದು ಉತ್ತಮ ಎಂದು ತಜ್ಞರು ತಿಳಿಸಿದ್ದಾರೆ.
ಹಾಗಾಗಿ ವೇಟ್‌ಲಿಪ್ಟಿಂಗ್ ಮಾಡುವುದು ಒಟ್ಟಾರೆ ಆರೋಗ್ಯಕ್ಕೆ ಉತ್ತಮವಾದರೂ ಕೂಡ ಸಂಧಿವಾತ ಸಮಸ್ಯೆ ಇರುವವರು ಇದನ್ನು ಮಾಡುವಾಗ ಬಹಳ ಎಚ್ಚರಿಕೆ ವಹಿಸಬೇಕು. ಹಾಗೇ ತಮ್ಮ ವೈದ್ಯರ ಸಲಹೆಗಳನ್ನು ತೆಗೆದುಕೊಳ್ಳುವುದು ಉತ್ತಮ.

Continue Reading

ಪ್ರಮುಖ ಸುದ್ದಿ

Online Order Tragedy: ಆನ್‌ಲೈನ್‌ನಿಂದ ತರಿಸಿದ ಐಸ್‌ಕ್ರೀಂನಲ್ಲಿತ್ತು ಮನುಷ್ಯರ ಬೆರಳು!

Online Order Tragedy ಮಹಿಳೆಯೊಬ್ಬಳು ದಿನಸಿ ವಸ್ತುಗಳ ಜೊತೆಗೆ ತನ್ನ ಸಹೋದರನಿಗಾಗಿ ಐಸ್ ಕ್ರೀಂ ಕೋನ್ ಅನ್ನು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದಾಳೆ. ಐಸ್ ಕ್ರೀಂ ತಿನ್ನುವಾಗ 2 ಸೆಂಟಿಮೀಟರ್ ಉದ್ದವಿರುವ ಮನುಷ್ಯನ ಕೈಬೆರಳು ಇರುವುದು ಪತ್ತೆಯಾಗಿದೆ.

VISTARANEWS.COM


on

Online Order Tragedy
Koo

ಮುಂಬೈ: ಇತ್ತೀಚಿನ ದಿನಗಳಲ್ಲಿ ಜನರು ಬೆಳಗ್ಗಿನ ತಿಂಡಿಯಿಂದ ಹಿಡಿದು ರಾತ್ರಿಯ ಊಟದವರೆಗೂ ಆನ್‌ಲೈನ್‌ನಲ್ಲಿಯೇ ಆರ್ಡರ್‌ ಮಾಡುತ್ತಾರೆ. ಇನ್ನು ಆನ್‌ಲೈನ್‌ ಸರ್ವಿಸ್‌ಗಳು ಒಂದಕ್ಕಿಂತ ಒಂದು ಸ್ಪೀಡ್‌ ಆಗಿದ್ದು ಆರ್ಡರ್‌ ಕೊಟ್ಟು ಕಣ್ಣುಮುಚ್ಚುವುದರೊಳಗೆ ಮನೆಯ ಕಾಲಿಂಗ್‌ ಬೆಲ್‌ ಸದ್ದಾಗುತ್ತದೆ. ಇದರಿಂದ ಜನರಿಗೆ ಮಾರುಕಟ್ಟೆಗೆ ಹೋಗಿ ಬಿಸಿಲು, ಮಳೆಯಲ್ಲಿ ಸುತ್ತಾಡುವುದು ತಪ್ಪುತ್ತದೆ .ಆರಾಮಾಗಿ ಮನೆಯಲ್ಲಿಯೇ ಕುಳಿತು ತಮಗೆ ಏನು ಬೇಕೋ ಅದನ್ನು ಆರ್ಡರ್‌ ಮಾಡಬಹುದು. ಆದರೆ ಈ ಆನ್‌ಲೈನ್‌ ಸರ್ವಿಸ್‌ನಿಂದ ತೊಂದರೆಯಾದ ಘಟನೆ ಕೂಡ ಸಾಕಷ್ಟಿದೆ. ಇತ್ತೀಚೆಗಷ್ಟೇ ಬಾಲಕಿಯೊಬ್ಬಳು ಆನ್‌ಲೈನ್‌ನಲ್ಲಿ ಆರ್ಡರ್‌ (Online Order Tragedy) ಮಾಡಿದ ಕೇಕ್‌ ತಿಂದು ಮರಣಹೊಂದಿದ ಘಟನೆ ಇನ್ನೂ ಮಾಸಿಲ್ಲ, ಅದರ ಬೆನ್ನಲ್ಲೇ ಈಗ ಮಹಿಳೆಯೊಬ್ಬರು ಆನ್‌ಲೈನ್ ನಲ್ಲಿ ಆರ್ಡರ್ ಮಾಡಿದ ಐಸ್ ಕ್ರೀಂನಲ್ಲಿ ಮನುಷ್ಯನ ಕೈಬೆರಳು ಇರುವುದು ಪತ್ತೆಯಾಗಿದೆ.

ಮುಂಬೈನ ಮಲಾಡ್ ಪ್ರದೇಶದ ಮಹಿಳೆಯೊಬ್ಬಳು ದಿನಸಿ ವಸ್ತುಗಳ ಜೊತೆಗೆ ತನ್ನ ಸಹೋದರನಿಗಾಗಿ ಯುಮ್ಮೋ ಐಸ್ ಕ್ರೀಂ ಕಂಪೆನಿಯ ಮೂರು ಬಟರ್ ಸ್ಕಾಚ್ ಕೋನ್ ಅನ್ನು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದಾಳೆ. ಮನೆಗೆ ಬಂದ ಐಸ್ ಕ್ರೀಂ ಅನ್ನು ಸಹೋದರ ಬಿಚ್ಚಿ ತಿನ್ನುವಾಗ ನಾಲಿಗೆಗೆ ಏನೋ ತಗುಲಿದ ಹಾಗೆ ಆಗಿದೆ. ಆಗ ಆತ ಅದನ್ನು ಹೊರತೆಗೆದಾಗ ಅದು ಮನುಷ್ಯನ ಕೈಬೆರಳಾಗಿದ್ದು ಸುಮಾರು 2 ಸೆಂಟಿಮೀಟರ್ ಉದ್ದವಿತ್ತು ಎಂಬುದಾಗಿ ತಿಳಿದುಬಂದಿದೆ. ಮಹಿಳೆಯ ಸಹೋದರ ವೈದ್ಯನಾಗಿದ್ದ ಕಾರಣ ಆತ ಅದು ಮನುಷ್ಯನ ಕೈ ಬೆರಳು ಎಂದು ಕೂಡಲೇ ಪತ್ತೆ ಹಚ್ಚಿದ್ದಾನೆ.

ಈ ಬಗ್ಗೆ ಮಹಿಳೆ ಮಲಾಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಯುಮ್ಮೋ ಐಸ್ ಕ್ರೀಂ ಕಂಪನಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಹಾಗೇ ಐಸ್ ಕ್ರೀಂನಲ್ಲಿ ಪತ್ತೆಯಾದ ಮಾನವನ ಕೈಬೆರಳನ್ನು ಫೊರೆನ್ಸಿಕ್‌ಗೆ ಕಳುಹಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಪೊಲೀಸರು ಐಸ್ ಕ್ರೀಂ ಕಂಪನಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 272, 271 ಮತ್ತು 336 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Kangana Ranaut: ಸಂಸದೆಯಾಗಿರುವ ನಟಿ ಕಂಗನಾ ರಣಾವತ್‌ಗೆ ಸಿಗುವ ಸಂಬಳ, ಇತರ ಸವಲತ್ತುಗಳು ಏನೇನು?

ಈ ಹಿಂದೆ ಕೂಡ ವ್ಯಕ್ತಿಯೊಬ್ಬರು ಆನ್‌ಲೈನ್‌ನಲ್ಲಿ ಕಿತ್ತಳೆ ಹಣ್ಣು ಆರ್ಡರ್ ಮಾಡಿ ಅದರಲ್ಲಿ ಜೀವಂತ ಹುಳಗಳು ಹರಿದಾಡುತ್ತಿರುವುದನ್ನು ನೋಡಿದ್ದಾರೆ. ಹಾಗಾಗಿ ಆನ್ಲೈನ್ನಲ್ಲಿ ಯಾವುದೇ ವಸ್ತುಗಳನ್ನು ಆರ್ಡರ್ ಮಾಡಿ ಬಳಸುವ ಮುನ್ನ ಜನರು ಎಚ್ಚರಿಕೆಯಿಂದರಬೇಕು. ಇಲ್ಲವಾದರೆ ಇದರಿಂದ ಮುಂದೆ ಸಮಸ್ಯೆ ಎದುರಿಸಬೇಕಾಗುತ್ತದೆ.

Continue Reading

ದೇಶ

Ajit Doval: ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್‌ ದೋವಲ್‌ 3ನೇ ಅವಧಿಗೆ ನೇಮಕ; ಉಗ್ರರಿಗೆ ನಡುಕ

Ajit Doval: ಅಜಿತ್ ದೋವಲ್‌ ಅವರನ್ನು ಮೂರನೇ ಅವಧಿಗೆ ನೇಮಿಸಿರುವ ಕುರಿತು ಸಂಪುಟದ ನೇಮಕಾತಿ ಸಮಿತಿಯು ಜೂನ್‌ 10ರಂದೇ ಆದೇಶ ಹೊರಡಿಸಿದೆ. ನೂತನ ಆದೇಶದ ಪ್ರಕಾರ, ಅಜಿತ್‌ ದೋವಲ್‌ ಅವರು ನರೇಂದ್ರ ಮೋದಿ ಅವರು ಪ್ರಧಾನಿಯಾಗಿರುವವರೆಗೆ ಅಥವಾ ಮುಂದಿನ ಆದೇಶದವರೆಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಇರಲಿದ್ದಾರೆ. ಇದೇ ನಿಯಮವು ಪಿ.ಕೆ.ಮಿಶ್ರಾ ಅವರಿಗೂ ಅನ್ವಯವಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

VISTARANEWS.COM


on

Ajit Doval
Koo

ನವದೆಹಲಿ: ಭಾರತದ ಜೇಮ್ಸ್‌ ಬಾಂಡ್‌ ಎಂದೇ ಖ್ಯಾತಿಯಾಗಿರುವ, ಪಾಕಿಸ್ತಾನದ ಉಗ್ರರ ವಿರುದ್ಧ ಸರ್ಜಿಕಲ್‌ ಸ್ಟ್ರೈಕ್, ಬಾಲಾಕೋಟ್‌ ವಾಯುದಾಳಿ ಸೇರಿ ಹಲವು ಕಾರ್ಯಾಚರಣೆಗಳ ಸೂತ್ರಧಾರಿಯಾಗಿರುವ, ದೇಶದ ಟ್ರಬಲ್‌ ಶೂಟರ್‌ ಎಂದೇ ಹೆಸರು ಗಳಿಸಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ (National Security Advisor) ಅಜಿತ್‌ ದೋವಲ್‌ (Ajit Doval) ಅವರನ್ನು ಕೇಂದ್ರ ಸರ್ಕಾರವು (Central Government) ಮೂರನೇ ಅವಧಿಗೂ ಸಲೆಹೆಗಾರರನ್ನಾಗಿ ನೇಮಿಸಿದೆ. ಮತ್ತೊಂದೆಡೆ, ಪ್ರಧಾನಿ ನರೇಂದ್ರ ಮೋದಿ ಅವರ ಮುಖ್ಯ ಕಾರ್ಯದರ್ಶಿಯಾಗಿ ಪಿ.ಕೆ.ಮಿಶ್ರಾ (PK Mishra) ಅವರೇ ಮುಂದುವರಿಯಲಿದೆ. ಇವರ ನೇಮಕದ ಕುರಿತು ಕೂಡ ಸರ್ಕಾರ ಆದೇಶ ಹೊರಡಿಸಿದೆ.

ಅಜಿತ್ ದೋವಲ್‌ ಅವರನ್ನು ಮೂರನೇ ಅವಧಿಗೆ ನೇಮಿಸಿರುವ ಕುರಿತು ಸಂಪುಟದ ನೇಮಕಾತಿ ಸಮಿತಿಯು ಜೂನ್‌ 10ರಂದೇ ಆದೇಶ ಹೊರಡಿಸಿದೆ. ನೂತನ ಆದೇಶದ ಪ್ರಕಾರ, ಅಜಿತ್‌ ದೋವಲ್‌ ಅವರು ನರೇಂದ್ರ ಮೋದಿ ಅವರು ಪ್ರಧಾನಿಯಾಗಿರುವವರೆಗೆ ಅಥವಾ ಮುಂದಿನ ಆದೇಶದವರೆಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಇರಲಿದ್ದಾರೆ. ಇದೇ ನಿಯಮವು ಪಿ.ಕೆ.ಮಿಶ್ರಾ ಅವರಿಗೂ ಅನ್ವಯವಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಅಜಿತ್‌ ದೋವಲ್‌ ಅವರು 1968ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿದ್ದು, ಕೇಂದ್ರ ಸರ್ಕಾರದ ಮಿಲಿಟರಿ, ಇಂಟಲಿಜೆನ್ಸ್‌ ಸೇರಿ ಹಲವು ವಿಭಾಗಗಳಲ್ಲಿ ಮಹತ್ವದ ಸಲಹೆ-ಸೂಚನೆ ನೀಡುತ್ತಾರೆ. ಇನ್ನು ಡಾ.ಪಿ.ಕೆ.ಮಿಶ್ರಾ ಅವರು 1972ರ ಬ್ಯಾಚ್‌ ಅಧಿಕಾರಿಯಾಗಿದ್ದು, ಪಿಎಂಒದ ಪ್ರಮುಖ ನೇಮಕಾತಿಗಳ ಉಸ್ತುವಾರಿ ನೋಡಿಕೊಳ್ಳುತ್ತಾರೆ. ಆಡಳಿತಾತ್ಮಕ ವಿಚಾರಗಳ ಹೊಣೆಯೂ ಇವರದ್ದೇ ಆಗಿದೆ.

ಪಿಎಫ್‌ಐ ನಿಷೇಧದ ಹಿಂದೆಯೂ ಅಜಿತ್‌ ದೋವಲ್‌ ಅವರ ಪಾತ್ರ ದೊಡ್ಡದಿದೆ. ಅಜಿತ್‌ ದೋವಲ್‌ ಅವರು 2022ರಲ್ಲಿ ಎನ್‌ಐಎ ದಾಳಿಗೂ ಐದು ದಿನದ ಮೊದಲೇ ಅಂದರೆ, ಸೆಪ್ಟೆಂಬರ್‌ 17ರಂದು ಪ್ರಮುಖ ಮುಸ್ಲಿಂ ಸಂಘಟನೆಗಳ ಮುಖಂಡರ ಜತೆ ಮಾತುಕತೆ ನಡೆಸಿದ್ದರು. ಎನ್‌ಐಎ, ಇ.ಡಿ, ರಾಜ್ಯ ಪೊಲೀಸರು ಸೆ.22ರಂದು ನಡೆಸುವ ದಾಳಿ, ಪಿಎಫ್‌ಐ ವಿರುದ್ಧ ಕ್ರಮ, ಇದರ ಕುರಿತು ಮುಸ್ಲಿಂ ಸಂಘಟನೆಗಳ ಮುಖಂಡರ ಅಭಿಪ್ರಾಯವೇನು ಎಂಬುದನ್ನು ಸಂಗ್ರಹಿಸಿಯೇ ದಾಳಿ, ನಿಷೇಧ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಷ್ಟೇ ಅಲ್ಲ, ಅಗಸ್ಟಾ ವೆಸ್ಟ್‌ಲ್ಯಾಂಡ್‌ ವಿವಿಐಪಿ ಹೆಲಿಕಾಪ್ಟರ್‌ ಖರೀದಿ ವೇಳೆ 3,600 ಕೋಟಿ ರೂ. ವಂಚನೆ ಪ್ರಕರಣದ ಪ್ರಮುಖ ಆರೋಪಿ ಕ್ರಿಶ್ಟಿಯನ್‌ ಮೈಕೆಲ್‌ನನ್ನು ಭಾರತಕ್ಕೆ ಕರೆತರುವುದು, ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸುವುದು ಸೇರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೈಗೊಂಡ ಪ್ರಮುಖ ತೀರ್ಮಾನಗಳ ಹಿಂದೆ ಅಜಿತ್‌ ದೋವಲ್‌ ಅವರು ಇದ್ದಾರೆ.

ಇದನ್ನೂ ಓದಿ: NSA Ajit Doval: ಅಜಿತ್‌ ದೋವಲ್‌ ಲಂಡನ್‌ ಭೇಟಿ: ಖಲಿಸ್ತಾನ್‌, ಬಿಬಿಸಿ, ಭಯೋತ್ಪಾದನೆ ವಿಚಾರದಿಂದಾಗಿ ಈ ಬಾರಿ ಮಾತುಕತೆ ಕಠಿಣ

Continue Reading

ಕರ್ನಾಟಕ

BS Yediyurappa: ಪೋಕ್ಸೊ ಕೇಸ್; ಯಡಿಯೂರಪ್ಪ ವಿರುದ್ಧ ಅರೆಸ್ಟ್‌ ವಾರಂಟ್, ಶೀಘ್ರವೇ ಬಂಧನ?

BS Yediyurappa: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೊ ಕೇಸ್‌ ದಾಖಲಾಗಿದೆ. ಇದಕ್ಕೆ ಸಂಬಂಧಿಸಿದಂತೆ, ನ್ಯಾಯಾಲಯವೀಗ ಜಾಮೀನು ರಹಿತ ವಾರಂಟ್‌ ಹೊರಡಿಸಿದ್ದು, ಮಾಜಿ ಸಿಎಂಗೆ ಬಂಧನದ ಭೀತಿ ಎದುರಾಗಿದೆ.

VISTARANEWS.COM


on

BS Yediyurappa
Koo

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರಿಗೆ ಸಂಕಷ್ಟ ಎದುರಾಗಿದೆ. ಪೋಕ್ಸೊ ಪ್ರಕರಣದಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯವು ಜಾಮೀನು ರಹಿತ ವಾರಂಟ್‌ ಹೊರಡಿಸಿದ್ದು, ಶೀಘ್ರದಲ್ಲೇ ಅವರನ್ನು ಬಂಧಿಸಲಾಗುತ್ತದೆ ಎಂದು ತಿಳಿದುಬಂದಿದೆ. ನ್ಯಾಯಾಧೀಶ ಎನ್‌.ಎಂ.ರಮೇಶ್‌ ಅವರು ಯಡಿಯೂರಪ್ಪ ಅವರ ವಿರುದ್ಧ ಅರೆಸ್ಟ್ ವಾರಂಟ್‌ ಹೊರಡಿಸಲು ಆದೇಶಿಸಿದ್ದಾರೆ. ಮತ್ತೊಂದೆಡೆ, ಯಡಿಯೂರಪ್ಪ ಅವರು ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ ಮೊರೆ ಹೋಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿಯನ್ನು ಕೋಣೆಯೊಳಗೆ ಕರೆದುಕೊಂಡು ಹೋಗಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲ, ಬಾಲಕಿಯ ತಾಯಿಯು ಮಾರ್ಚ್‌ 17ರಂದು ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ನಂತರ ಪೊಲೀಸರು ಪೋಕ್ಸೊ ಕಾಯ್ದೆ ಅಡಿಯಲ್ಲಿ ಯಡಿಯೂರಪ್ಪ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು.

BS Yediyurappa: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಜಾಮೀನು ರಹಿತ ವಾರಂಟ್‌ ಹೊರಡಿಸಲಾಗಿದೆ. ಇದರಿಂದಾಗಿ ಮಾಜಿ ಸಿಎಂಗೆ ಬಂಧನದ ಭೀತಿ ಎದುರಾಗಿದೆ.

ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು. ಈಗಾಗಲೇ, ಬಂಧನದಿಂದ ರಕ್ಷಣೆ ಹಾಗೂ ಪ್ರಕರಣವನ್ನು ರದ್ದುಗೊಳಿಸಬೇಕು ಎಂಬುದಾಗಿ ಯಡಿಯೂರಪ್ಪ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಕಳೆದ ಏಪ್ರಿಲ್‌ನಲ್ಲಿ ಯಡಿಯೂರಪ್ಪ ಅವರು ಸಿಐಡಿ ವಿಚಾರಣೆಗೂ ಹಾಜರಾಗಿದ್ದರು.

ದೆಹಲಿಯಲ್ಲಿದ್ದಾರೆ ಮಾಜಿ ಸಿಎಂ

ಬಿ.ಎಸ್‌.ಯಡಿಯೂರಪ್ಪ ಅವರು ಸದ್ಯ ದೆಹಲಿಯಲ್ಲಿದ್ದು, ಗುರುವಾರ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ. ಮೂರು ದಿನಗಳ ಹಿಂದೆಯೇ ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದಾರೆ. ಪೋಕ್ಸೊ ಪ್ರಕರಣದ ರದ್ದು ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಶುಕ್ರವಾರ (ಜೂನ್‌ 14) ವಿಚಾರಣೆಗೆ ಬರುವ ಸಾಧ್ಯತೆ ಇದೆ. ಒಂದು ಕಡೆ ಅವರ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿಯಾಗಿದೆ. ಮತ್ತೊಂದು ಕಡೆ, ಶುಕ್ರವಾರ ನ್ಯಾಯಾಲಯದ ತೀರ್ಪು ಯಡಿಯೂರಪ್ಪ ಅವರಿಗೆ ಮಹತ್ವದ್ದಾಗಿದೆ. ಇದು ಯಡಿಯೂರಪ್ಪ ಅವರನ್ನು ತುಸು ಚಿಂತೆಯಲ್ಲಿ ಮುಳುಗಿಸಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Actor Darshan: ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ನಟಿ ಸಂಜನಾಗೆ ಶಾಕ್‌, ರಕ್ಷಿತಾ ಹಾರ್ಟ್‌ಬ್ರೇಕ್, ದೇವರಲ್ಲಿ ಪ್ರಾರ್ಥನೆ!

Continue Reading
Advertisement
weight lifting
ಪ್ರಮುಖ ಸುದ್ದಿ2 mins ago

Weight Lifting: ಮೊಣಕಾಲಿನ ಸಂಧಿವಾತವಿದ್ದರೂ 68ನೇ ವಯಸ್ಸಿನಲ್ಲಿ 60 ಕೆಜಿ ಭಾರ ಎತ್ತುವ ಅಜ್ಜಿ!

Online Order Tragedy
ಪ್ರಮುಖ ಸುದ್ದಿ11 mins ago

Online Order Tragedy: ಆನ್‌ಲೈನ್‌ನಿಂದ ತರಿಸಿದ ಐಸ್‌ಕ್ರೀಂನಲ್ಲಿತ್ತು ಮನುಷ್ಯರ ಬೆರಳು!

Ajit Doval
ದೇಶ28 mins ago

Ajit Doval: ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್‌ ದೋವಲ್‌ 3ನೇ ಅವಧಿಗೆ ನೇಮಕ; ಉಗ್ರರಿಗೆ ನಡುಕ

karnataka weather Forecast
ಮಳೆ34 mins ago

Karnataka Weather : ಭಾರಿ ಮಳೆಗೆ ಕುಸಿದು ಬಿದ್ದ ಮಣ್ಣಿನ ಮನೆ; ಮಲಗಿದ್ದಲ್ಲೇ ಪ್ರಾಣ ಬಿಟ್ಟ ವ್ಯಕ್ತಿ

Actor Darshan devil 22 crore taken by producer
ಸಿನಿಮಾ47 mins ago

Actor Darshan: ʻಡೆವಿಲ್ʼ ಸಿನಿಮಾಗೆ ದರ್ಶನ್‌ ಪಡೆದಿದ್ದು ಬರೋಬ್ಬರಿ 22 ಕೋಟಿ ರೂ.; ಶಾಕ್‌ನಲ್ಲಿ ನಿರ್ಮಾಪಕ!

Shirt Fashion
ಫ್ಯಾಷನ್49 mins ago

Shirt Fashion: ಮೆನ್ಸ್ ಹೈ ಫ್ಯಾಷನ್‌ಗೆ ಲಗ್ಗೆ ಇಟ್ಟ ಪ್ರಯೋಗಾತ್ಮಕ ರ‍್ಯಾಂಪ್‌ ಶರ್ಟ್

BS Yediyurappa
ಕರ್ನಾಟಕ49 mins ago

BS Yediyurappa: ಪೋಕ್ಸೊ ಕೇಸ್; ಯಡಿಯೂರಪ್ಪ ವಿರುದ್ಧ ಅರೆಸ್ಟ್‌ ವಾರಂಟ್, ಶೀಘ್ರವೇ ಬಂಧನ?

Rohit Sharma
ಕ್ರೀಡೆ59 mins ago

Rohit Sharma: ನ್ಯೂಯಾರ್ಕ್‌ ಪಿಚ್‌ನಲ್ಲಿ ಆಡುವುದು ಸುಲಭವಲ್ಲ ಎಂದ ರೋಹಿತ್​

Bengalurus first double-decker flyover ready
ಬೆಂಗಳೂರು1 hour ago

Double Decker Flyover : ಬೆಂಗಳೂರಿನ ಮೊದಲ ಡಬಲ್‌ ಡೆಕ್ಕರ್‌ ಫ್ಲೈಓವರ್‌ ಕೊನೆಗೂ ಸಿದ್ಧ; ಯಾವಾಗಿಂದ ಸಂಚಾರಕ್ಕೆ ಅವಕಾಶ

Job Alert
ಉದ್ಯೋಗ1 hour ago

Job Alert: ಪದವೀಧರರಿಗೆ ಗುಡ್‌ನ್ಯೂಸ್‌; ಪಶುವೈದ್ಯ ಸೇವಾ ಇಲಾಖೆಯಲ್ಲಿದೆ 400 ವೈದ್ಯಾಧಿಕಾರಿ ಹುದ್ದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌