Dina Bhavishya : ಈ ರಾಶಿಯವರಿಗೆ ಅವರ ಮಾತುಗಳೇ ಕಂಟಕ! - Vistara News

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರಿಗೆ ಅವರ ಮಾತುಗಳೇ ಕಂಟಕ!

Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷದ ನವಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಭಾನುವಾರ ಸಿಂಹ ರಾಶಿಯಲ್ಲೇ ಇರಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ಕೊಡಬೇಡಿ ಎಚ್ಚರಿಕೆ ಇರಲಿ. ಮಿಥುನ ರಾಶಿಯವರು ಇತರರ ವಿರುದ್ಧ ದ್ವೇಷ ಕಾರುತ್ತಾ ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ನಕರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡಬಹುದು. ಸಿಂಹ ರಾಶಿಯ ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರುವುದು. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (8-10-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ.
ತಿಥಿ:
ನವಮಿ 10:12 ವಾರ: ಭಾನುವಾರ
ನಕ್ಷತ್ರ: ಪುಷ್ಯ 26:43 ಯೋಗ: ಸಿದ್ದಿ 30:49
ಕರಣ: ಸಿದ್ದಿ 30:49 ಅಮೃತಕಾಲ : ರಾತ್ರಿ 07:36 ರಿಂದ 09:23 ರವರೆಗೆ
ದಿನದ ವಿಶೇಷ: ಹರಿಹರ ವ್ರತ, ಭಾರತೀಯ ವಾಯುಪಡೆ ದಿನ

ಸೂರ್ಯೋದಯ : 06:20  ಸೂರ್ಯಾಸ್ತ : 07:19

ರಾಹುಕಾಲ: ಸಾಯಂಕಾಲ 4.30 ರಿಂದ 6.00
ಗುಳಿಕಕಾಲ: ಸಾಯಂಕಾಲ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು, ಬಾಕಿ ವ್ಯವಹಾರಗಳು ಪೂರ್ಣವಾಗಲಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ಕೊಡಬೇಡಿ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ವಾಹನ ಖರೀದಿ ವಿಚಾರವಾಗಿ ಚರ್ಚಿಸುವಿರಿ. ಈ ಹಿಂದೆ ನಡೆದ ಘಟನೆ ನೆನಪಿಸಿ ಕೊರಗುವುದು ಬೇಡ. ಸಹದ್ಯೋಗಿಗಳಿಂದ ಅಸಹಕಾರ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಇತರರ ವಿರುದ್ಧ ದ್ವೇಷ ಕಾರುತ್ತಾ ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ನಕರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭಫಲ. ಆರ್ಥಿಕ ಪ್ರಗತಿ ಸಾಧಾರಣ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

Horoscope Today

ಕಟಕ: ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳು ಬೇಡ, ಭಾವನೆಗಳನ್ನು ನಿಯಂತ್ರಿಸಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಆರ್ಥಿಕ ಸಮಸ್ಯೆಯಿಂದಾಗಿ ಒತ್ತಡ ಹೆಚ್ಚಾಗಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ, ಸ್ನೇಹ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರುವುದು. ವ್ಯಾಪಾರ-ವ್ಯವಹಾರದಲ್ಲಿ ಸಾಧಾರಣ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗಳಾಗುವಂತೆ ಮಾಡುವ ಸಾಧ್ಯತೆ ಇದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರ್ಥಿಕವಾಗಿ ಬಳಲುವ ಸಾಧ್ಯತೆ ಇದ್ದು, ಕೆಲಸ ಕಾರ್ಯಗಳಲ್ಲಿ ನಿಧಾನಗತಿ. ತಾಳ್ಮೆಯಿಂದ ವರ್ತಿಸಿ. ನೆರೆಹೊರೆಯವರೊಂದಿಗೆ ವಿನಾಕಾರಣ ಜಗಳ ಮಾಡುವುದು ಬೇಡ. ಉದ್ಯೋಗಿಗಳಿಗೆ ಶುಭಫಲ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗಲಿದೆ.ಆರ್ಥಿಕವಾಗಿ ಲಾಭ.ಸಮಾರಂಭಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.ಜನಪ್ರೀಯತೆ ಹೆಚ್ಚಾಗಲಿದೆ.ಪ್ರವಾಸದ ಕುರಿತು ಚರ್ಚೆ ಮಾಡುವಿರಿ. ಕುಟುಂಬದವರ ಸಹಕಾರ ಸಿಗಲಿದೆ. ಕೊಂಚ ಆರೋಗ್ಯದ ಕಡೆಗೆ ಗಮನ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅತಿಯಾದ ಚಿಂತೆ,ಒತ್ತಡ ನಿಮ್ಮ ಆರೋಗ್ಯದ ಮೇಲೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಪರಿಣಾಮವನ್ನು ಬೀರಬಹುದು. ಆದಷ್ಟು ವಿಶ್ರಾಂತಿ ಪಡೆಯಿರಿ, ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ.ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು ಹಿತವೆನಿಸಲಿದೆ.ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

ಕಪ್ಪುದಾರ ಕಟ್ಟಿಕೊಂಡರೆ ಮಾತ್ರ ಒಳ್ಳೆಯದೇ

Horoscope Today

ಮಕರ: ಅನಿವಾರ್ಯ ಪ್ರಸಂಗಗಳು ನಿಮ್ಮನ್ನು ಒತ್ತಡಕ್ಕೆ ಒಳಗಾಗುವಂತೆ ಮಾಡಬಹುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ, ಹೂಡಿಕೆಯ ಕುರಿತು ಆಲೋಚನೆ ಮಾಡುವಿರಿ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಉದ್ಯೋಗದ ಕುರಿತು ಆಲೋಚನೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ವಾಹನ ಚಾಲನೆ ಮಾಡುವಾಗ ಜಾಗರೂಕತೆಯಿಂದ ಚಾಲನೆ ಮಾಡಿ, ಅಪಘಾತ ಸಂಭವವಿದೆ. ಅವಸರದಲ್ಲಿ ಕೆಲಸ ಮಾಡುವುದು ಬೇಡ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ದಿಢೀರ್ ಪ್ರಯಾಣ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಕನಿಷ್ಠ ಫಲ.
ಅದೃಷ್ಟ ಸಂಖ್ಯೆ: 2

ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?

Horoscope Today

ಮೀನ: ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಮಾತಿನ ಭರದಲ್ಲಿ ಅತಿರೇಕದ ಮಾತುಗಳು ಬೇಡ,ತಾಳ್ಮೆಯಿಂದ ವರ್ತಿಸಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

BSP President: ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಹತ್ಯೆ; ರಾಜಕೀಯ ವೈಷಮ್ಯ ಕಾರಣ?

BSP President: ಚೆನ್ನೈನ ಪೆರಂಬೂರ್‌ನಲ್ಲಿರುವ ಸದಯಪ್ಪನ್‌ ಸ್ಟ್ರೀಟ್‌ನಲ್ಲಿರುವ ಅವರ ನಿವಾಸದ ಬಳಿ ಶುಕ್ರವಾರ (ಜುಲೈ 5) ಸಂಜೆ 7.30ರ ವೇಳೆಗೆ ಸುಮಾರು 6 ಜನರ ಗ್ಯಾಂಗ್‌ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡಿದ್ದ ಆರ್ಮ್‌ಸ್ಟ್ರಾಂಗ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಉಪಯೋಗ ಆಗಲಿಲ್ಲ. ದಾಳಿಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

VISTARANEWS.COM


on

BSP President
Koo

ಚೆನ್ನೈ: ರಾಜಕೀಯ ಹತ್ಯೆ, ಹಿಂಸಾಚಾರ, ಬೇರೆ ರಾಜಕೀಯ ಪಕ್ಷದ ನಾಯಕರ ಮೇಲೆ ಹಲ್ಲೆಗಳು ಕೇರಳ ಹಾಗೂ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಲೇ ಇರುತ್ತವೆ. ಈಗ ಇಂತಹ ರಾಜಕೀಯ ದ್ವೇಷದ ಹತ್ಯೆಗಳು ತಮಿಳುನಾಡಿಗೂ ಕಾಲಿಟ್ಟಿವೆ. ಇದಕ್ಕೆ ನಿದರ್ಶನ ಎಂಬಂತೆ, ಬಹುಜನ ಸಮಾಜ ಪಕ್ಷದ (BSP President) ತಮಿಳುನಾಡು ಘಟಕದ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್‌ (Armstrong) ಅವರನ್ನು ಹತ್ಯೆ ಮಾಡಲಾಗಿದೆ. ಚೆನ್ನೈನಲ್ಲಿರುವ (Chennai) ಅವರ ನಿವಾಸದ ಬಳಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ.

ಚೆನ್ನೈನ ಪೆರಂಬೂರ್‌ನಲ್ಲಿರುವ ಸದಯಪ್ಪನ್‌ ಸ್ಟ್ರೀಟ್‌ನಲ್ಲಿರುವ ಅವರ ನಿವಾಸದ ಬಳಿ ಶುಕ್ರವಾರ (ಜುಲೈ 5) ಸಂಜೆ 7.30ರ ವೇಳೆಗೆ ಸುಮಾರು 6 ಜನರ ಗ್ಯಾಂಗ್‌ ದಾಳಿ ಮಾಡಿದೆ. ಮಾರಕಾಸ್ತ್ರಗಳ ಸಮೇತ ಆಗಮಿಸಿದ ಅವರು ದಾಳಿ ನಡೆಸಿ, ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆರ್ಮ್‌ಸ್ಟ್ರಾಂಗ್‌ ಅವರನ್ನು ನಗರದಲ್ಲಿರುವ ಥೌಸಂಡ್‌ ಲ್ಯಾಂಪ್ಸ್‌ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ತಮಿಳುನಾಡು ಬಿಎಸ್‌ಪಿ ಘಟಕದ ಅಧ್ಯಕ್ಷರಾಗಿದ್ದ ಆರ್ಮ್‌ಸ್ಟ್ರಾಂಗ್‌ ಅವರು ಇದಕ್ಕೂ ಮೊದಲು ಗ್ರೇಟರ್‌ ಚೆನ್ನೈ ಕಾರ್ಪೊರೇಷನ್‌ನ ಕೌನ್ಸಿಲರ್‌ ಆಗಿದ್ದರು. ಚುನಾವಣಾ ರಾಜಕೀಯದಲ್ಲಿ ಹೆಚ್ಚು ತೊಡಗಿಸಿಕೊಳ್ಳದ ಆರ್ಮ್‌ಸ್ಟ್ರಾಂಗ್‌ ಅವರು ರಾಜ್ಯದಲ್ಲಿ ದಲಿತರ ಪರ ಚಿಂತಕ, ಅಂಬೇಡ್ಕರ್‌ವಾದಿ ಎಂಬುದಾಗಿಯೇ ಹೆಚ್ಚು ಗುರುತಿಸಿಕೊಂಡಿದ್ದರು. ಹಾಗಾಗಿ, ಆರ್ಮ್‌ಸ್ಟ್ರಾಂಗ್‌ ಅವರು ರಾಜಕೀಯದಲ್ಲಿ ಹೆಚ್ಚಿನ ಶತ್ರುಗಳನ್ನು ಹೊಂದಿರಲಿಲ್ಲ. ಇಷ್ಟಾದರೂ ಅವರ ಮೇಲೆ ಹಲ್ಲೆ ನಡೆಸಿ, ಹತ್ಯೆಗೈಯಲಾಗಿದೆ.

ಆರ್ಮ್‌ಸ್ಟ್ರಾಂಗ್‌ ಜತೆಗೆ ಇನ್ನಿಬ್ಬರ ಮೇಲೆಯೂ ಹಲ್ಲೆ ನಡೆದಿದ್ದು, ಅವರು ಗಾಯಗೊಂಡಿದ್ದಾರೆ. ದಾಳಿ ಮಾಡಿದ ಆರು ಮಂದಿಯ ಕುರಿತು ಇದುವರೆಗೆ ಪೊಲೀಸರಿಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದಾಗ್ಯೂ, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: NEET Aspirant: ನೀಟ್‌ ಅಕ್ರಮ ಬಯಲಾದ ಬೆನ್ನಲ್ಲೇ 17 ವರ್ಷದ NEET ಅಭ್ಯರ್ಥಿ ಆತ್ಮಹತ್ಯೆ; ಸಾವಿಗೆ ಯಾರು ಹೊಣೆ?

Continue Reading

ಕರ್ನಾಟಕ

Dengue Fever: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆ!

Dengue Fever: ಕಳೆದ 24 ಗಂಟೆಗಳಲ್ಲಿ 899 ಮಂದಿಗೆ ಡೆಂಗ್ಯೂ ಟೆಸ್ಟ್‌ ನಡೆಸಲಾಗಿದ್ದು, ಈ ಪೈಕಿ 155 ಮಂದಿಗೆ ಡೆಂಗ್ಯೂ ದೃಢವಾಗಿದೆ.

VISTARANEWS.COM


on

Dengue Fever
Koo

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆಯಾಗಿವೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 107 ಹೊಸ ಕೇಸ್‌ಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟಾರೆ 343 ಸಕ್ರಿಯ ಡೆಂಗ್ಯೂ ಪ್ರಕರಣಗಳು ಇವೆ. ಡೆಂಗ್ಯೂ ಸೋಂಕಿನಿಂದ ಜನವರಿಯಿಂದ ಈವರೆಗೆ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 899 ಮಂದಿಗೆ ಡೆಂಗ್ಯೂ ಟೆಸ್ಟ್‌ ನಡೆಸಲಾಗಿದ್ದು, ಈ ಪೈಕಿ 155 ಮಂದಿಗೆ ಡೆಂಗ್ಯೂ ದೃಢವಾಗಿದೆ. ಬೆಂಗಳೂರಿನಲ್ಲಿ 107, ಚಿತ್ರದುರ್ಗ 10, ದಾವಣಗೆರೆ 4, ಶಿವಮೊಗ್ಗ 9, ಉತ್ತರ ಕನ್ನಡ 2, ವಿಜಯನಗರ 4, ಹಾಸನ 16 ಉಡುಪಿಯಲ್ಲಿ 3 ಕೇಸ್‌ಗಳು ಪತ್ತೆಯಾಗಿವೆ. 343 ಸಕ್ರಿಯ ಪ್ರಕರಣಗಳ ಪೈಕಿ 142 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡೆಂಗ್ಯೂಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೊದಲ ಬಲಿ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ. ಗುಡಿಬಂಡೆ ಪಟ್ಟಣದ‌ ನಿವಾಸಿ ವೇಣು(50) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡೆಂಗ್ಯೂ ಜ್ವರರಿಂದ ವೇಣು ಅವರು ಮೃತಪಟ್ಟಿರುವುದಾಗಿ ಸಂಬಂಧಿಕರು ಹೇಳಿದ್ದಾರೆ.

ಡೆಂಗ್ಯೂ ಆತಂಕ; ರಾಜಧಾನಿಯಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ಕಸ ಬಿಸಾಡಿದರೆ ಬೀಳಲಿದೆ ಭಾರಿ ದಂಡ!

ಬೆಂಗಳೂರು: ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು (Dengue Fever) ಹೆಚ್ಚಳವಾಗುತ್ತಿರುವುದರಿಂದ ಆತಂಕ ಮೂಡಿದೆ. ಹೀಗಾಗಿ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಿರುವ ಬಿಬಿಎಂಪಿ, ಎಲ್ಲೆಂದರಲ್ಲಿ ಕಸ ಬಿಸಾಡುವವರಿಗೆ ಭಾರಿ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಲು ನಿರ್ಧರಿಸಿದೆ. ಸದ್ಯದಲ್ಲೇ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಿಗೂ ಆರೋಗ್ಯ ಇಲಾಖೆ ಆದೇಶ ಹೊರಡಿಸಲಿದೆ.

ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡಿದವರಿಗೆ ಇನ್ಮುಂದೆ 50 ರೂಪಾಯಿ ಅಲ್ಲ, 500 ರೂಪಾಯಿ ದಂಡ ವಿಧಿಸಲು ಪಾಲಿಕೆ ನಿರ್ಧರಿಸಿದೆ. ಸ್ವಚ್ಛತೆ ಇಲ್ಲದಿದ್ದರೆ 500 ರೂ. ದಂಡ ಬೀಳೋದು ಗ್ಯಾರಂಟಿ. 50 ರೂ ಇದ್ದ ದಂಡದ ಮೊತ್ತವನ್ನು 500 ರೂ.ಗೆ ಏರಿಕೆ ಮಾಡಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ನೆನ್ನೆ ಆರೋಗ್ಯ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಜನರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ. ಸಂಗ್ರಹಿಸಿದ ನೀರನ್ನು ನಾಲ್ಕೈದು ದಿನಗಳಿಗೆ ಒಮ್ಮೆ ಬದಲಾಯಿಸಬೇಕು. ಆಶಾ ಕಾರ್ಯಕರ್ತೆಯರು ಬಂದಾಗ ಸಾರ್ವಜನಿಕರು ಸ್ಪಂದಿಸಬೇಕು ಎಂದು ಕೋರಿದ್ದಾರೆ.

Continue Reading

ಪ್ರಮುಖ ಸುದ್ದಿ

T20 World Cup : ಮಹಾರಾಷ್ಟ್ರದ ಆಟಗಾರರಿಗೆ 11 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಮಹಾ ಸಿಎಂ ಶಿಂಧೆ

T20 World Cup : 2024ರ ಟಿ20 ವಿಶ್ವಕಪ್ ಗೆಲ್ಲುವಲ್ಲಿ ರೋಹಿತ್ ಶರ್ಮಾ ಪ್ರಮುಖ ಪಾತ್ರ ವಹಿಸಿದ್ದರು. ಅವರ ಬ್ಯಾಟಿಂಗ್ ಮಾತ್ರವಲ್ಲ, ತಂಡದ ನಾಯಕ ತಂಡವನ್ನು ಸಂವೇದನಾಶೀಲವಾಗಿ ಮುನ್ನಡೆಸಿದರು. ಅವರು 257 ರನ್ ಗಳಿಸಿದರು ಮತ್ತು ತಂಡದ ಪರ ಅತಿ ಹೆಚ್ಚು ರನ್ ಗಳಿಸಿದವರು.

VISTARANEWS.COM


on

Rohit Sharma
Koo

ಬೆಂಗಳೂರು: 2024ರ ಐಸಿಸಿ ಟಿ20 ವಿಶ್ವಕಪ್ (T20 World Cup) ಗೆದ್ದ ಬಳಿಕ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಹಾಗೂ ತಂಡದ ಆಟಗಾರರು ಸಂಭ್ರಮದಲ್ಲಿದ್ದಾರೆ. ಬಾರ್ಬಡೋಸ್​​​ನ ಬ್ರಿಜ್​​ಟೌನ್​​ ಕೆನ್ಸಿಂಗ್ಟನ್ ಓವಲ್​​ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್​​ಗಳಿಂದ ಸೋಲಿಸಿ ಟಿ20 ಕ್ರಿಕೆಟ್​ ಇತಿಹಾಸದಲ್ಲಿ ಎರಡನೇ ಟಿ 20 ಪ್ರಶಸ್ತಿ ಗೆದ್ದುಕೊಂಡಿತು. 2024ರ ಟಿ20 ವಿಶ್ವಕಪ್ ಗೆಲ್ಲುವಲ್ಲಿ ನಾಯಕ ರೋಹಿತ್ ಶರ್ಮಾ (Rohit Sharma) ಮುಂಬೈ ಆಟಗಾರರಾದ ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ ಪ್ರಮುಖ ಪಾತ್ರ ವಹಿಸಿದ್ದರು. ರೋಹಿತ್ ತಂಡವನ್ನು ಮುನ್ನಡೆಸಿದರೆ ಸೂರ್ಯಕುಮಾರ್ ಮತ್ತು ದುಬೆ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು.

2024ರ ಟಿ20 ವಿಶ್ವಕಪ್ ಗೆಲ್ಲುವಲ್ಲಿ ರೋಹಿತ್ ಶರ್ಮಾ ಪ್ರಮುಖ ಪಾತ್ರ ವಹಿಸಿದ್ದರು. ಅವರ ಬ್ಯಾಟಿಂಗ್ ಮಾತ್ರವಲ್ಲ, ತಂಡದ ನಾಯಕ ತಂಡವನ್ನು ಸಂವೇದನಾಶೀಲವಾಗಿ ಮುನ್ನಡೆಸಿದರು. ಅವರು 257 ರನ್ ಗಳಿಸಿದರು ಮತ್ತು ತಂಡದ ಪರ ಅತಿ ಹೆಚ್ಚು ರನ್ ಗಳಿಸಿದವರು.

ರೋಹಿತ್ ಶರ್ಮಾ ಪ್ರಭಾವಿ ನಾಯಕತ್ವವನ್ನು ಪ್ರದರ್ಶಿಸಿದ್ದರು ಮತ್ತು ಅವರ ಅದ್ಭುತ ತಂತ್ರಗಾರಿಕೆ ತೋರಿದ್ದರು. ಭಾರತದ ನಾಯಕ ಅದ್ಭುತ ಬೌಲಿಂಗ್ ಬದಲಾವಣೆಗಳು ಮತ್ತು ಫೀಲ್ಡ್ ಪ್ಲೇಸ್​ಮೆಂಟ್​​ಗಳು ಟೂರ್ನಿಯುದ್ದಕ್ಕೂ ಗಮನ ಸೆಳೆಯಿತು. ಇದು ಪ್ರತಿಯೊಂದು ಪಂದ್ಯದಲ್ಲೂ ಫಲ ನೀಡಿತು. 2024 ರ ಟಿ 20 ವಿಶ್ವಕಪ್ ಗೆಲ್ಲಲು ಭಾರತಕ್ಕೆ ಸಹಾಯ ಮಾಡಿತು.

ಸೂರ್ಯಕುಮಾರ್ ಯಾದವ್ ಕೂಡ ಬ್ಯಾಟಿಂಗ್​ನಲ್ಲಿ ಉತ್ತಮ ಪಾತ್ರ ವಹಿಸಿದ್ದರು. ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಮತ್ತು ಯುಎಸ್ಎ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್​ ಮೂಲಕ ಉತ್ತಮ ಪ್ರದರ್ಶನವನ್ನು ನೀಡಿದ್ದರು. ಅಲ್ಲಿ ಭಾರತವು ಮುಂದುವರಿಯಲು ಹೆಣಗಾಡಿತು. ಅವರು ತಂಡದ ಪ್ರಮುಖ ಪಂದ್ಯಗಳಲ್ಲಿ ನಿರ್ಣಾಯಕ ಅರ್ಧ ಶತಕಗಳನ್ನು ಗಳಿಸಿದ್ದರು.

ಸೂರ್ಯಕುಮಾರ್ ಎಂಟು ಪಂದ್ಯಗಳಲ್ಲಿ 28.42 ಸರಾಸರಿಯಲ್ಲಿ 199 ರನ್ ಗಳಿಸಿದ್ದರೆ, ಟಿ 20 ವಿಶ್ವಕಪ್​​ನ ಫೈನಲ್​​ನಲ್ಲಿ ರೋಚಕ ಕ್ಯಾಚ್ ಹಿಡಿದು ಡೇವಿಡ್​ ಮಿಲ್ಲರ್​ ಅವರನ್ನು ಔಟ್ ಮಾಡಿದ್ದರು. ಆ ಕ್ಯಾಚ್ ಭಾರತವನ್ನು ಗೆಲ್ಲಿಸಿತ್ತು.

ಶಿವಂ ದುಬೆ ಕೂಡ ಉತ್ತಮವಾಗಿ ಆಡಿದ್ದರು. ಆಲ್ರೌಂಡರ್ ಮಧ್ಯದಲ್ಲಿ ಬ್ಯಾಟರ್​ ಮತ್ತು ಅವರು ಪರಿಣಾಮಕಾರಿ ಇನ್ನಿಂಗ್ಸ್​ಗಳನ್ಉ ಆಡುವುದನ್ನು ಖಚಿತಪಡಿಸಿಕೊಂಡರು. ಅವರು 16 ಎಸೆತಗಳಲ್ಲಿ ಮೂರು ಸಿಕ್ಸರ್ ಮತ್ತು ಒಂದು ಬೌಂಡರಿ ಸೇರಿದಂತೆ 27 ರನ್ ಗಳಿಸಿದ್ದರು. 168 ಸ್ಟ್ರೈಕ್ ರೇಟ್​​ನಲ್ಲಿ ಇದು ಫೈನಲ್​ನಲ್ಲಿ ಭಾರತೀಯ ಬ್ಯಾಟರ್​​​ಗಳ ಪೈಕಿ ಅತ್ಯಧಿಕವಾಗಿದೆ.

11 ಕೋಟಿ ರೂ. ಬಹುಮಾನ ಘೋಷಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ

2024 ರ ಟಿ 20 ವಿಶ್ವಕಪ್​​ನಲ್ಲಿ ಮುಂಬೈ ಮೂಲದ ಆಟಗಾರರು ಭಾರತ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದರಿಂದ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಅವರಂತಹ ನಾಲ್ವರು ಆಟಗಾರರಿಗೆ ಬಹುಮಾನದ ಮೊತ್ತವನ್ನು ಘೋಷಿಸಿದ್ದಾರೆ.

ಇದನ್ನೂ ಓದಿ: Teach For India : ಟೀಚ್ ಫಾರ್ ಇಂಡಿಯಾದಿಂದ 2025ರ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿಗಳ ಆಹ್ವಾನ

ಮುಂಬೈ ಆಟಗಾರರಿಗೆ ಮಹಾರಾಷ್ಟ್ರ ಸರ್ಕಾರದಿಂದ 11 ಕೋಟಿ ರೂಪಾಯಿ ಹಾಗೂ ಭಾರತೀಯ ನಾಯಕ ರೋಹಿತ್ ಶರ್ಮಾ ಅವರಿಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಛತ್ರಪತಿ ಶಿವಾಜಿ ಮಹಾರಾಜ್ ಪ್ರತಿಮೆ ಉಡುಗೊರೆಯಾಗಿ ನೀಡಿದರು.

2024 ರ ಟಿ 20 ವಿಶ್ವಕಪ್ ನಲ್ಲಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದ ನಂತರ, ರೋಹಿತ್ ಶರ್ಮಾ ಟಿ 20ಯಿಂದ ನಿವೃತ್ತಿ ಘೋಷಿಸಿದರು. ಅವರು 4231 ರನ್​ಗಳೊಂದಿಗೆ ಸಾರ್ವಕಾಲಿಕ ಅತ್ಯಧಿಕ ರನ್ ಸ್ಕೋರರ್ ಆಗಿ ತಮ್ಮ ವೃತ್ತಿಜೀವನ ಕೊನೆಗೊಳಿಸಿದರು. ನಾಯಕ ಐದು ಶತಕಗಳನ್ನು ಗಳಿಸಿದ್ದಾರೆ. ಇದು ಟಿ 20 ಐ ಕ್ರಿಕೆಟ್​​ನಲ್ಲಿ ಬ್ಯಾಟರ್​ ಗಳಿಸಿದ ಗರಿಷ್ಠ ಮೊತ್ತವಾಗಿದೆ. ಅವರು 32 ಅರ್ಧಶತಕ ಬಾರಿಸಿದ್ದರೆ ವೃತ್ತಿಜೀವನದ ಸ್ಟ್ರೈಕ್ ರೇಟ್ 140 ಆಗಿದೆ.

Continue Reading

ದೇಶ

RBI Fine: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ಆರ್‌ಬಿಐ 1.31 ಕೋಟಿ ರೂ. ದಂಡ; ಕಾರಣ ಹೀಗಿದೆ

RBI Fine: ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ಎರಡು ರಾಜ್ಯಗಳಲ್ಲಿರುವ ರಾಜ್ಯ ಸರ್ಕಾರಿ ಒಡೆತನದ ನಿಗಮಗಳಿಗೆ ಸಾಲ ನೀಡಿರುವುದು ಸೇರಿ ಹಲವು ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಪಿಎನ್‌ಬಿಗೆ ಆರ್‌ಬಿಐ ನೋಟಿಸ್‌ ಜಾರಿಗೊಳಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಬಳಿಕ ಆರ್‌ಬಿಐ ದಂಡ ವಿಧಿಸಿದೆ ಎಂದು ತಿಳಿದುಬಂದಿದೆ.

VISTARANEWS.COM


on

RBI Fine
Koo

ಮುಂಬೈ: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ (Punjab National Bank) ಭಾರತೀಯ ರಿಸರ್ವ್‌ ಬ್ಯಾಂಕ್‌ 1.31 ಕೋಟಿ ರೂಪಾಯಿ ದಂಡ ವಿಧಿಸಿದೆ. ಆರ್‌ಬಿಐ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಕೇಂದ್ರೀಯ ಬ್ಯಾಂಕ್‌ ಪಿಎನ್‌ಬಿಗೆ (PNB) ದಂಡ ವಿಧಿಸಿದೆ. ಕೆವೈಸಿ (Know Your Customer), ಸಾಲಗಳು ಹಾಗೂ ಅಡ್ವಾನ್ಸಸ್‌ ಕುರಿತು ನಿಯಮಗಳನ್ನು ಪಾಲಿಸಲು ಪಿಎನ್‌ಬಿ ವಿಫಲವಾದ ಕಾರಣ ಆರ್‌ಬಿಐ ದಂಡದ (RBI Fine) ಬರೆ ಎಳೆದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ಎರಡು ರಾಜ್ಯಗಳಲ್ಲಿರುವ ರಾಜ್ಯ ಸರ್ಕಾರಿ ಒಡೆತನದ ನಿಗಮಗಳಿಗೆ ಸಾಲ ನೀಡಿರುವುದು ಸೇರಿ ಹಲವು ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಪಿಎನ್‌ಬಿಗೆ ಆರ್‌ಬಿಐ ನೋಟಿಸ್‌ ಜಾರಿಗೊಳಿಸಿತ್ತು. ನೋಟಿಸ್‌ಗೆ ಪಿಎನ್‌ಬಿ ನೀಡಿದ ಪ್ರತಿಕ್ರಿಯೆಯ ಆಧಾರದ ಮೇಲೆ ಆರ್‌ಬಿಐ ದಂಡ ವಿಧಿಸಿದೆ ಎಂದು ತಿಳಿದುಬಂದಿದೆ.

RBI Balance Sheet

ಬ್ಯಾಂಕ್‌ ಆಫ್‌ ಇಂಡಿಯಾಗೆ ಕಳೆದ ತಿಂಗಳು ದಂಡ

ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ ಕಳೆದ ಜೂನ್‌ ತಿಂಗಳಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ 1.45 ಕೋಟಿ ರೂ. ದಂಡ ವಿಧಿಸಿತ್ತು. ಸಾಲಗಳು ಹಾಗೂ ಮುಂಗಡಗಳು, ಗ್ರಾಹಕರ ರಕ್ಷಣೆಯ ಕುರಿತು ಆರ್‌ಬಿಐ ಜಾರಿಗೆ ತಂದಿರುವ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಮುಂಬೈ ಮೂಲದ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ ದಂಡ ವಿಧಿಸಲಾಗಿತ್ತು.

ಅನುತ್ಪಾದಕ ಆಸ್ತಿ (NPA) ಬಿಕ್ಕಟ್ಟು ನಿವಾರಣೆ, ಬ್ಯಾಂಕ್‌ಗಳ ದಿವಾಳಿತನ ತಡೆಗಾಗಿ ಹಲವು ನಿಯಮಗಳನ್ನು ಆರ್‌ಬಿಐ ಜಾರಿಗೆ ತಂದಿದೆ. ಹಾಗಾಗಿ, ಎಲ್ಲ ಬ್ಯಾಂಕ್‌ಗಳು ಕಠಿಣ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ನಿಯಮಗಳನ್ನು ಪಾಲಿಸುವಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಆರ್‌ಬಿಐ ದಂಡ ವಿಧಿಸುತ್ತದೆ. ಆರ್‌ಬಿಐ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿಯೇ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ ವಹಿವಾಟನ್ನು ಸ್ಥಗಿತಗೊಳಿಸಲಾಗಿದೆ.

ಕೆಲ ತಿಂಗಳ ಹಿಂದೆಯೂ ಮೂರು ಬ್ಯಾಂಕ್‌ಗಳಿಗೆ ಆರ್‌ಬಿಐ ದಂಡ ವಿಧಿಸಿತ್ತು. ಎಸ್‌ಬಿಐಗೆ 2 ಕೋಟಿ ರೂ. ದಂಡ ವಿಧಿಸಲಾಗಿತ್ತು. ಠೇವಣಿದಾರರ ಶೈಕ್ಷಣಿಕ ಜಾಗೃತಿ ಫಂಡ್‌ ಯೋಜನೆ (2014) ಅಡಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ದಂಡ ವಿಧಿಸಿತ್ತು. ಆದಾಯ ಗುರುತಿಸುವ ಮಾನದಂಡಗಳು, ಅನುತ್ಪಾದಕ ಆಸ್ತಿ ಪತ್ತೆಹಚ್ಚುವಲ್ಲಿ ಚ್ಯುತಿ ಸೇರಿ ಹಲವು ಕಾರಣಗಳಿಂದಾಗಿ ಸಿಟಿ ಯುನಿಯನ್‌ ಬ್ಯಾಂಕ್‌ಗೆ 66 ಲಕ್ಷ ರೂ. ದಂಡ ವಿಧಿಸಿತ್ತು. ಮತ್ತೊಂದೆಡೆ, ಆರ್‌ಬಿಐ ನಿರ್ದೇಶನಗಳನ್ನು ಪಾಲಿಸುವಲ್ಲಿ ವಿಫಲವಾದ ಕೆನರಾ ಬ್ಯಾಂಕ್‌ಗೆ 32.30 ಲಕ್ಷ ರೂ. ದಂಡ ವಿಧಿಸಿತ್ತು.

ಇದನ್ನೂ ಓದಿ: RBI Dividend: ಆರ್‌ಬಿಐನಿಂದ ಕೇಂದ್ರಕ್ಕೆ 2.11 ಲಕ್ಷ ಕೋಟಿ ರೂ.‌ ಡಿವಿಡೆಂಡ್! ಮುಂದಿನ ಸರ್ಕಾರಕ್ಕೆ ವರ!

Continue Reading
Advertisement
BSP President
ದೇಶ8 mins ago

BSP President: ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಹತ್ಯೆ; ರಾಜಕೀಯ ವೈಷಮ್ಯ ಕಾರಣ?

Dengue Fever
ಕರ್ನಾಟಕ22 mins ago

Dengue Fever: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆ!

Rohit Sharma
ಪ್ರಮುಖ ಸುದ್ದಿ28 mins ago

T20 World Cup : ಮಹಾರಾಷ್ಟ್ರದ ಆಟಗಾರರಿಗೆ 11 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಮಹಾ ಸಿಎಂ ಶಿಂಧೆ

RBI Fine
ದೇಶ51 mins ago

RBI Fine: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ಆರ್‌ಬಿಐ 1.31 ಕೋಟಿ ರೂ. ದಂಡ; ಕಾರಣ ಹೀಗಿದೆ

Namma Metro
ಕರ್ನಾಟಕ56 mins ago

Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ನಾಳೆಯಿಂದ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ

Viral Video
ವೈರಲ್ ನ್ಯೂಸ್58 mins ago

Viral Video: ಆಧಾರ್ ಕಾರ್ಡ್ ಫೋಟೋಗೆ ಸುಂದರ ಪೋಸ್ ಕೊಟ್ಟು ಮನ ಗೆದ್ದ ಪುಟಾಣಿ! ನಿಮಗೇನು ಅನಿಸಿತು?

Brain Eating Amoeba
ಆರೋಗ್ಯ1 hour ago

Brain Eating Amoeba: ಏನಿದು ಮೆದುಳು ತಿನ್ನುವ ಅಮೀಬಾ? ಇದರಿಂದ ನಮಗೂ ಅಪಾಯ ಇದೆಯೆ?

Kerala govt
ದೇಶ2 hours ago

Kerala Govt: ಕೇರಳ ಸರ್ಕಾರಿ ನೌಕರರ ಪೈಕಿ ಮೂರರಲ್ಲಿ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್

Teach for India
ಬೆಂಗಳೂರು2 hours ago

Teach For India : ಟೀಚ್ ಫಾರ್ ಇಂಡಿಯಾದಿಂದ 2025ರ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿಗಳ ಆಹ್ವಾನ

Bridge Collapse
ದೇಶ2 hours ago

Bridge Collapse: 17 ದಿನದಲ್ಲಿ 10 ಸೇತುವೆ ಕುಸಿತ; ಬಿಹಾರದಲ್ಲಿ 15 ಎಂಜಿನಿಯರ್‌ಗಳ ಅಮಾನತು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ4 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ5 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ6 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ8 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ9 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು10 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು11 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ15 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌