Site icon Vistara News

Dina Bhavishya : ಈ ರಾಶಿಯವರಿಗೆ ಅವರ ಮಾತುಗಳೇ ಕಂಟಕ!

dina bhavishya

ಚಂದ್ರನು ಭಾನುವಾರ ಸಿಂಹ ರಾಶಿಯಲ್ಲೇ ಇರಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ಕೊಡಬೇಡಿ ಎಚ್ಚರಿಕೆ ಇರಲಿ. ಮಿಥುನ ರಾಶಿಯವರು ಇತರರ ವಿರುದ್ಧ ದ್ವೇಷ ಕಾರುತ್ತಾ ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ನಕರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡಬಹುದು. ಸಿಂಹ ರಾಶಿಯ ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರುವುದು. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (8-10-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ.
ತಿಥಿ:
ನವಮಿ 10:12 ವಾರ: ಭಾನುವಾರ
ನಕ್ಷತ್ರ: ಪುಷ್ಯ 26:43 ಯೋಗ: ಸಿದ್ದಿ 30:49
ಕರಣ: ಸಿದ್ದಿ 30:49 ಅಮೃತಕಾಲ : ರಾತ್ರಿ 07:36 ರಿಂದ 09:23 ರವರೆಗೆ
ದಿನದ ವಿಶೇಷ: ಹರಿಹರ ವ್ರತ, ಭಾರತೀಯ ವಾಯುಪಡೆ ದಿನ

ಸೂರ್ಯೋದಯ : 06:20  ಸೂರ್ಯಾಸ್ತ : 07:19

ರಾಹುಕಾಲ: ಸಾಯಂಕಾಲ 4.30 ರಿಂದ 6.00
ಗುಳಿಕಕಾಲ: ಸಾಯಂಕಾಲ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು, ಬಾಕಿ ವ್ಯವಹಾರಗಳು ಪೂರ್ಣವಾಗಲಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ಕೊಡಬೇಡಿ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ವೃಷಭ: ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ವಾಹನ ಖರೀದಿ ವಿಚಾರವಾಗಿ ಚರ್ಚಿಸುವಿರಿ. ಈ ಹಿಂದೆ ನಡೆದ ಘಟನೆ ನೆನಪಿಸಿ ಕೊರಗುವುದು ಬೇಡ. ಸಹದ್ಯೋಗಿಗಳಿಂದ ಅಸಹಕಾರ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಮಿಥುನ: ಇತರರ ವಿರುದ್ಧ ದ್ವೇಷ ಕಾರುತ್ತಾ ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ನಕರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭಫಲ. ಆರ್ಥಿಕ ಪ್ರಗತಿ ಸಾಧಾರಣ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

ಕಟಕ: ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳು ಬೇಡ, ಭಾವನೆಗಳನ್ನು ನಿಯಂತ್ರಿಸಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

ಸಿಂಹ: ಆರ್ಥಿಕ ಸಮಸ್ಯೆಯಿಂದಾಗಿ ಒತ್ತಡ ಹೆಚ್ಚಾಗಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ, ಸ್ನೇಹ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರುವುದು. ವ್ಯಾಪಾರ-ವ್ಯವಹಾರದಲ್ಲಿ ಸಾಧಾರಣ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

ಕನ್ಯಾ: ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗಳಾಗುವಂತೆ ಮಾಡುವ ಸಾಧ್ಯತೆ ಇದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಆರ್ಥಿಕವಾಗಿ ಬಳಲುವ ಸಾಧ್ಯತೆ ಇದ್ದು, ಕೆಲಸ ಕಾರ್ಯಗಳಲ್ಲಿ ನಿಧಾನಗತಿ. ತಾಳ್ಮೆಯಿಂದ ವರ್ತಿಸಿ. ನೆರೆಹೊರೆಯವರೊಂದಿಗೆ ವಿನಾಕಾರಣ ಜಗಳ ಮಾಡುವುದು ಬೇಡ. ಉದ್ಯೋಗಿಗಳಿಗೆ ಶುಭಫಲ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ವೃಶ್ಚಿಕ: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗಲಿದೆ.ಆರ್ಥಿಕವಾಗಿ ಲಾಭ.ಸಮಾರಂಭಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.ಜನಪ್ರೀಯತೆ ಹೆಚ್ಚಾಗಲಿದೆ.ಪ್ರವಾಸದ ಕುರಿತು ಚರ್ಚೆ ಮಾಡುವಿರಿ. ಕುಟುಂಬದವರ ಸಹಕಾರ ಸಿಗಲಿದೆ. ಕೊಂಚ ಆರೋಗ್ಯದ ಕಡೆಗೆ ಗಮನ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

ಧನಸ್ಸು: ಅತಿಯಾದ ಚಿಂತೆ,ಒತ್ತಡ ನಿಮ್ಮ ಆರೋಗ್ಯದ ಮೇಲೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಪರಿಣಾಮವನ್ನು ಬೀರಬಹುದು. ಆದಷ್ಟು ವಿಶ್ರಾಂತಿ ಪಡೆಯಿರಿ, ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ.ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು ಹಿತವೆನಿಸಲಿದೆ.ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

ಕಪ್ಪುದಾರ ಕಟ್ಟಿಕೊಂಡರೆ ಮಾತ್ರ ಒಳ್ಳೆಯದೇ

ಮಕರ: ಅನಿವಾರ್ಯ ಪ್ರಸಂಗಗಳು ನಿಮ್ಮನ್ನು ಒತ್ತಡಕ್ಕೆ ಒಳಗಾಗುವಂತೆ ಮಾಡಬಹುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ, ಹೂಡಿಕೆಯ ಕುರಿತು ಆಲೋಚನೆ ಮಾಡುವಿರಿ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಉದ್ಯೋಗದ ಕುರಿತು ಆಲೋಚನೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

ಕುಂಭ: ವಾಹನ ಚಾಲನೆ ಮಾಡುವಾಗ ಜಾಗರೂಕತೆಯಿಂದ ಚಾಲನೆ ಮಾಡಿ, ಅಪಘಾತ ಸಂಭವವಿದೆ. ಅವಸರದಲ್ಲಿ ಕೆಲಸ ಮಾಡುವುದು ಬೇಡ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ದಿಢೀರ್ ಪ್ರಯಾಣ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಕನಿಷ್ಠ ಫಲ.
ಅದೃಷ್ಟ ಸಂಖ್ಯೆ: 2

ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?

ಮೀನ: ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಮಾತಿನ ಭರದಲ್ಲಿ ಅತಿರೇಕದ ಮಾತುಗಳು ಬೇಡ,ತಾಳ್ಮೆಯಿಂದ ವರ್ತಿಸಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version