Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ! Vistara News
Connect with us

ಪ್ರಮುಖ ಸುದ್ದಿ

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ಪ್ರಥಮ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya
Koo

ಚಂದ್ರನು ಶನಿವಾರವೂ ತುಲಾ ರಾಶಿಯಲ್ಲೇ ನೆಲೆಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನುಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರಿಗೆ ಆರ್ಥಿಕ ಸಮಸ್ಯೆಗಳಿಗೆ ತಕ್ಕ ಪರಿಹಾರವೂ ಇಂದು ಸಿಗುವ ಸಾಧ್ಯತೆ ಇದೆ. ಮಿಥುನ ರಾಶಿಯವರು ಈ ಹಿಂದೆ ಹೂಡಿಕೆ ಮಾಡಿದ್ದರೆ, ಅದರ ಪ್ರಯೋಜನವನ್ನು ಇಂದು ನೀವು ಪಡೆಯಬಹುದು. ಕಟಕ ರಾಶಿಯವರ ಬಿಡುವಿಲ್ಲದ ಕೆಲಸದಿಂದ ಒತ್ತಡ ಹೆಚ್ಚಾಗಲಿದ್ದು, ಆರೋಗ್ಯದಲ್ಲಿ ವ್ಯತ್ಯಾಸ ಆಗಲಿದೆ. ವೃಶ್ಚಿಕ ರಾಶಿಯವರು ಭೂಮಿ, ಆಸ್ತಿ ಖರೀದಿಗೂ ಮುನ್ನ ಆಲೋಚನೆ ಮಾಡಿ. ಇತರೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (16-09-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ.
ತಿಥಿ:
ಪ್ರಥಮ 09:16 ವಾರ: ಶನಿವಾರ
ನಕ್ಷತ್ರ: ಉತ್ತರಾ 07:34 ಯೋಗ: ಶುಕ್ಲ 28:11
ಕರಣ: ಭವ 09:16 ಅಮೃತಕಾಲ: ಸೆ.17ರ ಮುಂಜಾನೆ 03:25 ಯಿಂದ 05:11 ವರೆಗೆ
ದಿನದ ವಿಶೇಷ: ವಿಶ್ವ ಓಝೋನ್‌ ದಿನ, ಚಂದ್ರದರ್ಶನ

ಸೂರ್ಯೋದಯ : 06: 14  ಸೂರ್ಯಾಸ್ತ : 06:45

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ:
ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕ ಸಮಸ್ಯೆಗಳಿಗೆ ತಕ್ಕ ಪರಿಹಾರವೂ ಇಂದು ಸಿಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಉದ್ಯೋಗಿಗಳಿಗೆ ಪ್ರೋತ್ಸಾಹವೂ ಸೇರಿದಂತೆ ಅನೇಕ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ವಿವಿಧ ಮೂಲಗಳಿಂದ
ಆರ್ಥಿಕವಾಗಿ ಲಾಭ ಸಿಗಲಿದೆ. ಸಂಗಾತಿಯೊಂದಿಗೆ ವಿನಾ ಕಾರಣ ವಾದಕ್ಕೆ ಇಳಿಯುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಸ್ನೇಹಿತರ ಮೂಲಕ ದೊರಕುವ ಮಾರ್ಗದರ್ಶನ ನಿಮ್ಮ ಆರೋಗ್ಯವನ್ನು ಸುಧಾರಿಸಲು ನಿಮ್ಮನ್ನು ಉತ್ತೇಜಿಸುತ್ತದೆ. ಈ ಹಿಂದೆ ಹೂಡಿಕೆ ಮಾಡಿದ್ದರೆ, ಅದರ ಪ್ರಯೋಜನವನ್ನು ಇಂದು ನೀವು ಪಡೆಯಬಹುದು. ನಿಮ್ಮ ಜತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿ ಆಗಬಹುದು. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಬಿಡುವಿಲ್ಲದ ಕೆಲಸದಿಂದ ಒತ್ತಡ ಹೆಚ್ಚಾಗಲಿದ್ದು, ಆರೋಗ್ಯದಲ್ಲಿ ವ್ಯತ್ಯಾಸ ಆಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಆಗುಬಹುದು. ಮನಸ್ಸಿಗೆ ನೋವುಂಟು ಮಾಡಬಹುದು. ಆಪ್ತರೊಂದಿಗೆ ಭಾವನೆ ಹಂಚಿಕೊಳ್ಳುವಿರಿ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಸಂತೋಷದಿಂದ ಇದ್ದು, ಇತರರಿಗೆ ಸಂತಸ ಹಂಚಿಕೊಳ್ಳಲು ಹವಣಿಸುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆತುರದ ಭರದಲ್ಲಿ ಇತರರನ್ನು ಟೀಕೆ ಮಾಡುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ನಿಮ್ಮ ಹರಿತವಾದ ಮಾತುಗಳಿಂದ ಇತರರ ಮನಸ್ಸು ನೋವುಗಾವುದು ಬೇಡ, ಆಲೋಚಿಸಿ ಮಾತನಾಡಿ.ಕುಟುಂಬದ ಪ್ರತಿಯೊಂದು ವಿಷಯದಲ್ಲೂ ತಪ್ಪು ಹುಡುಕುವುದು ಬೇಡ, ಇದರಿಂದ ಮನಸ್ಸು ಘಾಸಿಯಾಗುವುದು. ಆಧ್ಯಾತ್ಮದ ಹಾದಿ ದಾರಿ ಹಿಡಿಯುವಿರಿ. ಗುರು ದತ್ತಾತ್ರೇಯನನ್ನು ಆರಾಧಿಸಿ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಸಮಯ ನೀಡುವಿರಿ.ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ.ಭೂಮಿ, ಆಸ್ತಿ ಖರೀದಿಗೂ ಮುನ್ನ ಆಲೋಚನೆ ಮಾಡಿ.ಆರೋಗ್ಯ ಉತ್ತಮವಾಗಿರಲಿದೆ.
ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ದೀರ್ಘಕಾಲದ ಪ್ರಯಾಣ ಮಾಡುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಹೊಸ ಕೆಲಸಗಳಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಈ ಸಮಯದಲ್ಲಿ ಈ ರೀತಿಯ ಆಹಾರ ತಿನ್ನಲೇಬಾರದು

Horoscope Today

ಮಕರ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವುದು. ಮುಂಗೋಪದಿಂದ ನಷ್ಟ ಸಾಧ್ಯತೆ ಇದೆ. ಸ್ನೇಹಿತರ ಸಲಹೆ ಸಹಕಾರ ಸಿಗುವುದು.
ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಆಲಸ್ಯದಿಂದ ಕಾರ್ಯ ಹಾನಿಯಾಗುವುದು. ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸೃಜನಾತ್ಮಕವಾಗಿ ಕೆಲಸ ಮಾಡಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?

Horoscope Today

ಮೀನ: ಹೊಸ ಅವಕಾಶಗಳು ಗರಿಗೆದರಲಿವೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ನಿಮ್ಮ ಹಿಂದೆ ಟೀಕೆಗಳನ್ನು ಮಾಡುವ ಜನರಿಂದ ದೂರ ಇರಿ. ದಿನ ಮಟ್ಟಿಗೆ ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಆಗುವ ಸಾಧ್ಯತೆ. ಸಂಗಾತಿಯ ಸ್ವಾರ್ಥದಿಂದ ಕುಟುಂಬದ ವಾತಾವರಣದಲ್ಲಿ ವ್ಯತ್ಯಾಸ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

ind vs aus : ಮೊದಲ ಪಂದ್ಯದಲ್ಲಿ ಭಾರತ ತಂಡಕ್ಕೆ ಜಯ, ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ 1-0 ಮುನ್ನಡೆ

ಭಾರತ ತಂಡ ಗೆಲುವಿನ ಬಳಿಕ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ (ind vs aus) 1-0 ಮುನ್ನಡೆ ಪಡೆಯಿತು.

VISTARANEWS.COM


on

Ruturaj Gaikwad
Koo

ಮೊಹಾಲಿ: ಪ್ರವಾಸಿ ಆಸ್ಟ್ರೇಲಿಯಾ (ind vs aus ) ವಿರುದ್ಧದ ಏಕ ದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್​ಗಳ ಸುಲಭ ಗೆಲುವು ಸಾಧಿಸಿದೆ. ಭಾರತ ತಂಡದ ಪರ ಬೌಲಿಂಗ್​ನಲ್ಲಿ 51 ರನ್​ಗಳಿಗೆ 5 ವಿಕೆಟ್​ ಉರುಳಿಸಿದ ಮೊಹಮ್ಮದ್ ಶಮಿ ಹಾಗೂ ಬ್ಯಾಟಿಂಗ್ ಮೂಲಕ ತಲಾ ಅರ್ಧ ಶತಕಗಳನ್ನು ಬಾರಿಸಿದ ಶುಭ್​ಮನ್​ ಗಿಲ್​ (74) ಹಾಗೂ ಋತುರಾಜ್​ ಗಾಯಕ್ವಾಡ್​ (71), ಸೂರ್ಯಕುಮಾರ್​ ಯಾದವ್​ (50), ಮತ್ತು ಕೆ. ಎಲ್​ ರಾಹುಲ್​ (58*) ಗೆಲುವಿನ ರೂವಾರಿಗಳು ಎನಿಸಿಕೊಂಡರು. ಈ ವಿಜಯದ ಮೂಲಕ ಭಾರತ ತಂಡ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿತು.

ಇಲ್ಲಿನ ಐಎಸ್​ ಬಿಂದ್ರಾ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 50 ಓವರ್​ಗಳಲ್ಲಿ 276 ರನ್​ಗಳಿಗೆ ಆಲ್​ಔಟ್​ ಆಯಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಭಾರತ ತಂಡ. 48.4 ಓವರ್​ಗಳಲ್ಲಿ. 5 ವಿಕೆಟ್​ ಕಳೆದುಕೊಂಡು 281 ರನ್ ಬಾರಿಸಿ ಜಯಶಾಲಿಯಾಯಿತು.

ಗುರಿ ಬೆನ್ನಟ್ಟಲು ಆರಂಭಿಸಿದ ಭಾರತ ತಂಡ ಋತುರಾಜ್ ಗಾಯಕ್ವಾಡ್ ಹಾಗೂ ಶುಭ್​ ಮನ್​ ಗಿಲ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಉತ್ತಮ ಆರಂಭ ಪಡೆಯಿತು. ಈ ಜೋಡಿ ಮೊದಲ ವಿಕೆಟ್​ಗೆ 142 ರನ್​ ಬಾರಿಸಿ ವಿಶ್ವಾಸ ಮೂಡಿಸಿತು. ಇವರಿಬ್ಬರೂ ಆಸ್ಟ್ರೇಲಿಯಾದ ಬೌಲರ್​ಗಳನ್ನು ಹಿಮ್ಮಟ್ಟಿಸಿದರು.

ಆದರೆ, ಮೂರನೇ ಕ್ರಮಾಂಕದಲ್ಲಿ ಬ್ಯಾಟ್​ ಮಾಡಲು ಬಂದ ಶ್ರೇಯಸ್​ ಅಯ್ಯರ್ ಮತ್ತೆ ವೈಫಲ್ಯ ಕಂಡರು. 3 ರನ್​ಗೆ ಅವರು ರನ್​ಔಟ್ ಆದರು. ಅನಗತ್ಯ ರನ್​ ಕದಿಯಲು ಮುಂದಾದ ಅವರು ತಾವಿನ್ನೂ ಲಯ ಕಂಡುಕೊಂಡಿಲ್ಲ ಎಂಬುದನ್ನು ಸೂಚಿಸಿದಂತಿತ್ತು. ಅವರು ಔಟಾದ ಬಳಿಕ ಭಾರತಕ್ಕೆ ಸ್ವಲ್ಪ ಹಿನ್ನಡೆ ಉಂಟಾಯಿತು. ಆದರೆ ಈ ಇಬ್ಬರೂ ಬ್ಯಾಟರ್​ಗಳು ಆಸೀಸ್ ಸ್ಪಿನ್ನರ್ ಆ್ಯಡಂ ಜಂಪಾ ಅವರ ಎಸೆತಗಳಿವೆ ವಿಕೆಟ್ ಒಪ್ಪಿಸಿದರು. ನಾಲ್ಕನೇ ಕ್ರಮಾಂಕದಲ್ಲಿ ಆಡಲು ಬಂದ ಇಶಾನ್​ ಕಿಶನ್ ಭರವಸೆ ಮೂಡಿಸಿದರೂ 18 ರನ್​ಗಳಿಗೆ ಔಟಾದರು. ಈ ವೇಳೆ ಭಾರತ ತಂಡ 185 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಆತಂಕಕ್ಕೆ ಒಳಗಾಯಿತು.

ಈ ವೇಳೆ ಜತೆಯಾದ ಸೂರ್ಯಕುಮಾರ್ ಯಾದವ್​ ಹಾಗೂ ನಾಯಕ ಕೆ. ಎಲ್​ ರಾಹುಲ್​ ಅರ್ಧ ಶತಕಗಳನ್ನು ಬಾರಿಸಿ ಭಾರತವನ್ನು ಗೆಲುವಿನತ್ತ ಮುನ್ನಡೆಸಿದರು. ಇವರಿಬ್ಬರೂ 80 ರನ್​ಗಳ ಜತೆಯಾಟ ಆಡಿದರು.

ಮೊದಲು ಬ್ಯಾಟ್​ ಮಾಡಿದ ಆಸ್ಟ್ರೇಲಿಯಾ ತಂಡದ ಪರ ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ ಗರಿಷ್ಠ 52 ರನ್ ಗಳಿಸಿದರು. ಜೋಶ್ ಇಂಗ್ಲಿಷ್ 45, ಸ್ಟೀವ್ ಸ್ಮಿತ್ 41, ಮಾರ್ನಸ್ ಲಾಬುಷೇನ್ 39, ಕ್ಯಾಮರೂನ್ ಗ್ರೀನ್ 31, ಮಾರ್ಕಸ್ ಸ್ಪೋಯಿನಿಸ್ 29 ಮತ್ತು ನಾಯಕ ಪ್ಯಾಟ್ ಕಮಿನ್ಸ್ 21 ರನ್ ಗಳಿಸಿ ಔಟಾಗದೆ ಉಳಿದರು. ಸ್ಮಿತ್ ಹಾಗೂ ವಾರ್ನರ್​ ಭಾರತ ತಂಡದ ಬೌಲರ್​ಗಳನ್ನು ಕಾಡಿದರಲ್ಲದೆ, ದೊಡ್ಡ ಮೊತ್ತ ಪೇರಿಸುವ ಆತಂಕ ಮೂಡಿಸಿದರು. ಆದರೆ, ಮೊಹಮ್ಮದ್ ಶಮಿ ಭಾರತದ ಭಯವನ್ನು ದೂರ ಮಾಡಿದರು. ಬುಮ್ರಾ.ಅಶ್ವಿನ್ ಹಾಗೂ ಜಡೇಜಾ ತಲಾ ಒಂದು ವಿಕೆಟ್ ಪಡೆಯುವ ಮೂಲಕ ಶಮಿಗೆ ಉತ್ತಮ ಬೆಂಬಲ ನೀಡಿದರು.

ಇದನ್ನೂ ಓದಿ: Mohammed Shami : ಬೌಲಿಂಗ್​ನಲ್ಲಿ ಹೊಸ ಮಿಂಚು ಸೃಷ್ಟಿಸಿದ ಮೊಹಮ್ಮದ್ ಶಮಿ; ಏನಿದು ಸಾಧನೆ

ತವರಿನಲ್ಲಿ ನಡೆಯಲಿರುವ ವಿಶ್ವಕಪ್‌ಗೆ ಪೂರ್ವ ಸಿದ್ಧತೆ ನಡೆಸಲು ಈ ಸರಣಿ ಭಾರತದ ಪಾಲಿಗೆ ಮಹತ್ವದನಿಸಿದೆ. ಮೊದಲೆರಡು ಪಂದ್ಯಗಳಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ಕಲ್ಪಿಸಲಾಗಿದೆ.

Continue Reading

ಕರ್ನಾಟಕ

Cat Eyed Snake : ಬೆಕ್ಕಿನ ಕಣ್ಣಿನ ಸುಂದರಿಯರನ್ನು ನೋಡೇ ಇರ್ತೀರಿ, ಬೆಕ್ಕಿನ ಕಣ್ಣಿನ ಹಾವು ನೋಡಿದ್ದೀರಾ?

VISTARANEWS.COM


on

Edited by

Cat eyed snake
Koo

ಪುತ್ತೂರು (ದಕ್ಷಿಣ ಕನ್ನಡ): ನೀವು ಖಂಡಿತವಾಗಿಯೂ ಬೆಕ್ಕಿನ ಕಣ್ಣಿನ ಸುಂದರಿಯರನ್ನು (Cat eyed Beauties) ನೋಡಿರುತ್ತೀರಿ. ನಮ್ಮ ಐಶ್ವರ್ಯ ರೈ (Aishwarya Rai), ಏಮಿ ಜಾಕ್ಸನ್‌ (Amy Jackson), ಹಾಲಿವುಡ್‌ನ ಹಲವು ನಟಿಯರು ತಮ್ಮ ಸುಂದರವಾದ ಕಣ್ಣುಗಳಿಗಾಗಿಯೇ ಹೆಸರುವಾಸಿ. ಅವರೆಲ್ಲ ನಿಮಗೆ ಗೊತ್ತು. ಆದರೆ, ಬೆಕ್ಕಿನ ಕಣ್ಣಿನ ಹಾವು (Cat Eyed Snake) ನಿಮಗೆ ಗೊತ್ತಾ? ನೋಡಿದ್ದೀರಾ? ನೋಡಿಲ್ಲ ಅಂದರೆ ಒಮ್ಮೆ ನೋಡಿಬಿಡಿ ಅಂತ ಕೆಲವು ದಿನದ ಹಿಂದೆ ಈ ಹಾವೇ ಪುತ್ತೂರಿನ ಒಂದು ಮನೆಗೆ ಬಂದಿತ್ತು!

ಪುತ್ತೂರಿನ ಬಲ್ನಾಡು ನಿವಾಸಿ ರವಿಕೃಷ್ಣ ಕಲ್ಲಜೆ ಎಂಬವರ ಮನೆಗೆ ಇತ್ತೀಚೆಗೆ ಒಂದು ಹಾವು ಬಂದಿತ್ತು. ಬಂದಿತ್ತು ಅನ್ನುವುದಕ್ಕಿಂತಲೂ ನೇರವಾಗಿ ಬಂದು ಮನೆಯೊಂದರ ಒಳಗಿನ ಟೇಬಲ್ ಮೇಲೆ ಆರಾಮವಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿತ್ತು. ಸಾಮಾನ್ಯವಾಗಿ ಹಾವುಗಳು ಜನ ಸಂಚಾರ ಇದ್ದರೆ ಹೆದರುತ್ತವೆ. ಆದರೆ, ಇದು ಮಾತ್ರ ಮನೆಯ ಸದಸ್ಯನೋ ಎನ್ನುವ ಹಾಗೆ ಮಲಗಿಕೊಂಡಿತ್ತು.

Cat eyed snake
ಮನೆಯ ಟೇಬಲ್‌ ಮೇಲೆ ಮಲಗಿದ್ದ ಹಾವು

ರವಿಕೃಷ್ಣ ಅವರು ಜಗಲಿಗೆ ಬಂದಾಗ ಟೇಬಲ್ ಮೇಲೆ ಹಳದಿ ಬಣ್ಣದ ವಸ್ತು ಬಿದ್ದಿದೆ ಅನಿಸಿತು. ಹತ್ತಿರ ಹೋಗಿ ನೋಡಿದಾಗಲೇ ಗೊತ್ತಾದದ್ದು ಅದು ಹಾವು ಅಂತ. ನೋಡಿದರೆ ಕಂದು ಬಣ್ಣದ ಪಟ್ಟೆ ಪಟ್ಟೆಗಳನ್ನು ಹೊಂದಿದ್ದ ಅದು ಅತ್ಯಂತ ವಿಷಕಾರಿ ಕನ್ನಡಿ ಹಾವು ಅನಿಸುತ್ತಿತ್ತು. ಅಬ್ಬಾ ದೇವರೇ.. ಕನ್ನಡಿ ಹಾವು ಮನೆಯೊಳಗೆ ಬಂದಿದೆ ಏನು ಮಾಡುವುದು ಎಂದು ಯೋಚಿಸಿದ ರವಿಕೃಷ್ಣ ಅವರಿಗೆ ನೆನಪಾದದ್ದು ಪುತ್ತೂರಿನ ಯುವ ಉರಗತಜ್ಞ ತೇಜಸ್ ಬನ್ನೂರು ಅವರು.

ಸಣ್ಣ ವಯಸ್ಸಿನಿಂದಲೇ ಹಾವುಗಳ ಬಗ್ಗೆ ಕುತೂಹಲ ತಳೆದಿರುವ ತೇಜಸ್‌ ಅವರು ಕನ್ನಡಿ ಹಾವು ಮನೆಯ ಟೇಬಲ್‌ನಲ್ಲಿ ಮಲಗಿದೆ ಎಂಬ ಸುದ್ದಿ ಕೇಳಿ ಓಡೋಡಿ ಬಂದರು.

ಇದು ಕನ್ನಡಿ ಹಾವಲ್ಲರಿ.. ಬೆಕ್ಕಿನ ಕಣ್ಣಿನ ಹಾವು ಅಂದ್ರು ತೇಜಸ್‌!

ತೇಜಸ್‌ ಅವರು ಓಡೋಡಿ ಬಂದು ಟೇಬಲ್‌ ಹತ್ತಿರ ಹೋದರು. ಮಲಗಿದ್ದ ಹಾವನ್ನು ನೋಡಿ ಅವರು ʻಓ ಇದಾ.. ಇದು ಕನ್ನಡಿ ಹಾವಲ್ಲ ಮಾರಾಯ್ರೆ.. ಇದು ಭಾರಿ ಪಾಪದ ಹಾವುʼ ಎಂದರು. ಕಿರಿಯ ವಯಸ್ಸಿನಲ್ಲೇ ಹಾವು ಹಿಡಿದು ಅವುಗಳ ರಕ್ಷಣೆ ಮಾಡುತ್ತಿರುವ ತೇಜಸ್ ಕಳೆದ ಹಲವು ವರ್ಷಗಳಿಂದ ಹಲವು ರೀತಿಯ, ಹಲವು ಪ್ರಕಾರದ ಹಾವುಗಳನ್ನು ರಕ್ಷಣೆ ಮಾಡಿದ್ದು, ಸುಮಾರು ಹತ್ತು ಸಾವಿರಕ್ಕೂ ಮಿಕ್ಕಿದ ಹಾವನ್ನು ರಕ್ಷಿಸಿದ್ದಾರೆ.

ಹೀಗಾಗಿ ಅವರಿಗೆ ನೋಡಿದ ಕೂಡಲೇ ಹಾವು ಯಾವುದೆಂದು ಗೊತ್ತಾಗಿದೆ. ಅವರು ಹಾವನ್ನು ಕೈಯಲ್ಲೇ ಹಿಡಿದು ಹೇಳಿದರು: ನೋಡಿ ಇದು ಪಶ್ಚಿಮ ಘಟ್ಟದಂತಹ ದಟ್ಟ ಅರಣ್ಯಗಳ ಮಧ್ಯೆಯೂ ಅಪರೂಪವಾಗಿ ಕಾಣಸಿಗುವ ಬೆಕ್ಕು ಕಣ್ಣಿನ ಹಾವು. ನೋಡಿ, ಇದರ ಕಣ್ಣು ನೋಡಿ, ಐಶ್ವರ್ಯ ರೈ ಕಣ್ಣಿನ ಹಾಗೆ ಇಲ್ವಾ? ಈ ಕಣ್ಣಿನಿಂದಲೇ ಈ ಹಾವಿಗೆ ಈ ಹೆಸರು ಬಂದಿದೆ.

Cat eyed snake in Tejas hand

ಹಾವನ್ನು ಕೈಯಲ್ಲಿ ಹಿಡಿದೇ ತೇಜಸ್‌ ಹಾವಿನ ಕಥೆ ಹೇಳುತ್ತಾ ಹೋದರು

  1. ಇದರ ಹೆಸರು ಫಾರೆಸ್ಟಿನ್ ಕ್ಯಾಟ್ ಸ್ನೇಕ್-Forestian Cat snake (ಬೆಕ್ಕಿನ ಕಣ್ಣಿನ ಹಾವು)
  2. ದಟ್ಟ ಅರಣ್ಯದಲ್ಲಿ ಸ್ವಚ್ಛಂದವಾಗಿ ವಿಹರಿಸುವ ಅಪರೂಪದ ಹಾವಿದು
  3. ಬೆಕ್ಕಿನ ಕಣ್ಞಿನಂತೆ ಬಿಳಿ ಕಣ್ಣುಗಳನ್ನು ಹೊಂದಿರುವ ಈ ಹಾವು ರಾತ್ರಿ ವೇಳೆಯಲ್ಲೇ ಸಂಚರಿಸುತ್ತದೆ.
  4. ರಾತ್ರಿಯಲ್ಲಿ ಬೆಕ್ಕಿನ ಕಣ್ಣುಗಳಂತೆಯೇ ಹೊಳೆಯುವ ಈ ಹಾವಿನ ಕಣ್ಣುಗಳು ಅತ್ಯಂತ ಆಕರ್ಷಕವೂ ಆಗಿದೆ.
  5. ರಾತ್ರಿ ವೇಳೆಯಲ್ಲೇ ಬೇಟೆಗಿಳಿಯುವ ಈ ಹಾವು ಹಕ್ಕಿಗಳ ಮೊಟ್ಟೆ, ಸಣ್ಣ ಗಾತ್ರದ ಹಕ್ಕಿ, ಓತಿಕ್ಯಾತ ಸೇರಿದಂತೆ ಹಲವು ಸಣ್ಣ ಗಾತ್ರದ ಪ್ರಾಣಿ ಪಕ್ಷಿಗಳನ್ನು ಬೇಟೆಯಾಡುತ್ತದೆ.
  6. ವಿಷಕಾರಿಯಲ್ಲದ ಈ ಹಾವು ತನ್ನ ರಕ್ಷಣೆಗಾಗಿ ಕಚ್ಚುತ್ತದೆ. ಆದರೆ ಈ ಹಾವು ಕಚ್ಚಿದಲ್ಲಿ ಯಾವುದೇ ತೊಂದರೆಯೂ ಇಲ್ಲ.
  7. ಹಳದಿ ಬಣ್ಣದಲ್ಲಿ ಕಂದು ಬಣ್ಣದ ಪಟ್ಟೆಗಳನ್ನು ಹೊಂದಿರುವ ಈ ಹಾವು ಕನ್ನಡಿ ಹಾವನ್ನೇ ಹೋಲುತ್ತವೆ‌.
  8. ಅಪರೂಪದ ಈ ಹಾವುಗಳು ಜನರ ಕಣ್ಣಿಗೆ ಬಿದ್ದಲ್ಲಿ ಕನ್ನಡಿ ಹಾವಿನ ಚಹರೆಯಿಂದಾಗಿ ಕೊಲ್ಲಲ್ಪಡುವುದೂ ಉಂಟು.
  9. ಸಣ್ಣ ಗಾತ್ರದಿಂದ ದೊಡ್ಡ ಗಾತ್ರದವರೆಗೆ ಬೆಳೆಯುವ ಈ ಹಾವು ಕೇರೆ ಹಾವಿನಷ್ಟೇ ಉದ್ದಕ್ಕೆ ಬೆಳೆಯುತ್ತದೆ.
Cat eyed snake

ಮರಳಿ ದಟ್ಟ ಕಾನನ ಸೇರಿದ ಬೆಕ್ಕಿನ ಕಣ್ಣಿನ ಹಾವು

ತೇಜಸ್‌ ಅವರ ಪ್ರೀತಿಯ ಕೈಗಳಿಗೆ ಸಿಕ್ಕಿದ ಈ ಹಾವು ಇದೀಗ ಅದರ ಮೂಲ ವಾಸಸ್ಥಾನವಾದ ದಟ್ಟ ಅರಣ್ಯವನ್ನು ತಲುಪಿದೆ. ಇಂಥ ಹಾವನ್ನು ನೋಡಿದ ಉರಗತಜ್ಞ ತೇಜಸ್ ಪುತ್ತೂರಿನಲ್ಲಿ ಈ ರೀತಿಯ ಹಾವು ಪತ್ತೆಯಾಗಿರುವುದೇ ಅಪರೂಪ ಎಂದಿದ್ದಾರೆ. ಸಿಟಿ ನೋಡ್ಕೊಂಡು ಹೋಗೋಣ ಅಂತ ಬಂದಿರಬೇಕು ಎಂದು ನಕ್ಕರಂತೆ ರವಿಕೃಷ್ಣ ಕಲ್ಲಜೆ.

Continue Reading

ದೇಶ

Money Guide: ಅತ್ಯುತ್ತಮ ನಿವೃತ್ತ ಜೀವನಕ್ಕಾಗಿ ಟಾಪ್ 10 ಹಣ ಉಳಿತಾಯದ ಟಿಪ್ಸ್!

Money Guide: ನಿಮ್ಮ ನಿವೃತ್ತಿಯ ದಿನಗಳು ಅತ್ಯುತ್ತಮ ಆಗಿರಬೇಕು ಎಂದಾದರೆ, ವೃತ್ತಿಯ ಆರಂಭದಿಂದಲೇ ಉಳಿತಾಯವನ್ನು ಆರಂಭಿಸಿ.

VISTARANEWS.COM


on

Edited by

savings
Koo

ಣವನ್ನು ಉಳಿತಾಯ (Money Saving) ಮಾಡುವುದೂ ಒಂದು ಕಲೆ. ದುಡಿಮೆಯ ದಿನಗಳಲ್ಲಿ ಒಂದಿಷ್ಟು ಹಣವನ್ನು ಉಳಿತಾಯದ ಮಾಡಿದರೆ, ನಿವೃತ್ತಿಯ ದಿನಗಳನ್ನು (Retirement Life) ನೆಮ್ಮದಿಯಾಗಿ ಕಳೆಯಬಹುದು. ಇಲ್ಲದಿದ್ದರೆ, ದುಡಿಯುವ ಕಸುವು ಇಲ್ಲದ ಸಮಯದಲ್ಲಿ ಹಣಕ್ಕಾಗಿ ಪರದಾಡಬೇಕಾಗುತ್ತದೆ. ಹಾಗಾಗಿ, ನಿಮ್ಮ ವೃತ್ತಿಯ ಆರಂಭದ ದಿನಗಳಿಂದಲೇ ನಿವೃತ್ತಿಯ ಬಗ್ಗೆ ಪ್ಲ್ಯಾನ್ ಮಾಡಿ(Plan for Retirement life), ಹಣವನ್ನು ಉಳಿತಾಯ ಮಾಡಬೇಕು. ನಿವೃತ್ತಿಯ ಅಂಚಿಗೆ ಬರುವಷ್ಟರಲ್ಲಿ ದೊಡ್ಡ ಮೊತ್ತದ ಉಳಿತಾಯ ನಿಮಗಾಗಿ ಕಾಯುತ್ತಿರುತ್ತದೆ. ಹಾಗಾಗಿ, ಈಗನಿಂದಲೇ ನೀವು ಉಳಿತಾಯ ಮತ್ತು ನಿವೃತ್ತಿಯ ದಿನಗಳಿಗಾಗಿ ಹೂಡಿಕೆಯ ಪ್ಲ್ಯಾನ್ ಮಾಡುವುದು ಶುರು ಮಾಡಿ(Money Guide).

ನಿವೃತ್ತಿಗಾಗಿ ಹಣ ಉಳಿಸುವ ಮಾರ್ಗಗಳು….

1.ಉಳಿತಾಯ ಬೇಗ ಆರಂಭಿಸಿ

ಉತ್ತಮ ನಿವೃತ್ತಿ ಜೀವನಕ್ಕಾಗಿ ವೃತ್ತಿ ಆರಂಭದ ದಿನಗಳಿಂದಲೇ ಉಳಿತಾಯವನ್ನು ಆರಂಭಿಸಬೇಕು. ಚಿಕ್ಕ ಮೊತ್ತದ ಸೇವಿಂಗ್ ಕೂಡ ನಿವೃತ್ತಿ ಹೊತ್ತಿಗೆ ಬಹುದೊಡ್ಡ ಮೊತ್ತವಾಗಿ ಬದಲಾಗಿರುತ್ತದೆ.

2.ಟಾರ್ಗೆಟ್ ಸೆಟ್ ಮಾಡಿಕೊಳ್ಳಿ

ನಿಮ್ಮ ನಿರೀಕ್ಷಿತ ವೆಚ್ಚಗಳು ಮತ್ತು ಜೀವನಶೈಲಿಯ ಆಧಾರದ ಮೇಲೆ ನಿವೃತ್ತಿಗಾಗಿ ನಿಮಗೆ ಎಷ್ಟು ಹಣ ಬೇಕು ಎಂದು ನಿರ್ಧರಿಸಿ. ಹಣದುಬ್ಬರ ಮತ್ತು ಆರೋಗ್ಯ ವೆಚ್ಚಗಳಂತಹ ಅಂಶಗಳನ್ನು ಪರಿಗಣಿಸಿ ಸೇವಿಂಗ್ ಆರಂಭಿಸಿ. ಸ್ಪಷ್ಟವಾದ ನಿವೃತ್ತಿ ಗುರಿಯನ್ನು ಹಾಕಿಕೊಳ್ಳುವುದರಿಂದ ಹಣ ಉಳಿಕೆಯಲ್ಲಿ ಸ್ಪಷ್ಟತೆ ದೊರೆಯುತ್ತದೆ.

3.ರಿಟೈರ್‌ಮೆಂಟ್ ಬಜೆಟ್ ತಯಾರಿಸಿ

ನಿಮ್ಮ ಸದ್ಯದ ಆದಾಯ ಮತ್ತು ವೆಚ್ಚದ ಅನುಸಾರ ನಿಮ್ಮ ನಿವೃತ್ತಿಯ ಬಜೆಟ್ ತಯಾರಿಸಿ. ಅನವಶ್ಯವಾಗಿ ಎಲ್ಲೆಲ್ಲಿ ಹಣ ಪೋಲಾಗುತ್ತಿದೆ ಎಂದು ಗುರುತಿಸಿಕೊಳ್ಳಿ ಮತ್ತು ಅಂಥ ಹಣವನ್ನು ಉಳಿಕೆಯ ಪಟ್ಟಿಗೆ ಸೇರಿಸಿ. ಈ ಮೂಲಕ ರಿಟೈರ್ ಫಂಡ್ ಕ್ರೋಡೀಕರಿಸಬಹುದು.

4.ರಿಟೈರ್‌ಮೆಂಟ್ ಅಕೌಂಟ್!

ಭಾರತದಲ್ಲಿ ನಾನಾ ಅಕೌಂಟ್‌ಗಳು ಚಾಲ್ತಿಯಲ್ಲಿವೆ. ಅವುಗಳ ಮೂಲಕ ರಿಟೈರ್ಮೆಂಟ್ ಪ್ಲ್ಯಾನ್ ಮಾಡಬಹುದು. ಇಪಿಎಫ್, ಪಿಪಿಎಫ್, ಎನ್‌ಪಿಎಸ್, ಎಫ್‌ಡಿ ಇತ್ಯಾದಿ ಖಾತೆಗಳ ಮೂಲಕ ಸೇವಿಂಗ್‌ ಹೆಚ್ಚಿಸುತ್ತಾ ಹೋದಂತೆ ನಿವೃತ್ತಿ ಸಮಯದಯಲ್ಲಿ ತುಂಬಾ ಸಹಕಾರಿಯಾಗುತ್ತದೆ.

5.ಹೂಡಿಕೆ ಮಾಡಿ

ಷೇರುಗಳು, ನಿರ್ದಿಷ್ಟ ಆದಾಯ ತರುವ ಹೂಡಿಕೆಗಳು, ರಿಯಲ್ ಎಸ್ಟೇಟ್ ಸೇರಿದಂತೆ ಇನ್ನಿತರ ಹೂಡಿಕೆಗಳನ್ನು ಆಯ್ದುಕೊಳ್ಳಬಹುದು. ನೀವು ಯಾವುದೇ ರೀತಿಯ ಹೂಡಿಕೆಯ ಸಾಧನವನ್ನು ಆಯ್ಕೆ ಮಾಡಿಕೊಳ್ಳಿ. ಆದರೆ, ಅದಕ್ಕಿಂತ ಮುಂಚೆ ಅದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಮುಂದುವರಿಯರಿ.

6.ಅನವಶ್ಯ ವೆಚ್ಚ ಬೇಡ

ನಿಮ್ಮ ನಿವೃತ್ತಿಯ ದಿನಗಳು ಅತ್ಯುತ್ತಮವಾಗಿರಬೇಕು ಎಂದಾದರೆ, ಈಗಿನಿಂದಲೂ ಅನವಶ್ಯ ವೆಚ್ಚಗಳನ್ನು ದೂರ ಮಾಡಿ. ನಿಮ್ಮ ರಿಟೈರ್ಮೆಂಟ್‌ ಖಾತೆಗಳಿಗೆ ಆಟೋಮೆಟಿಕ್ ಆಗಿ ದುಡ್ಡು ಪೇ ಆಗುವ ಹಾಗೆ ಮಾಡಿ. ನಿಮ್ಮ ಸಂಬಳದಲ್ಲಿ ಇನ್‌ಕ್ರಿಮೆಂಟ್ ಆದಾಗಲೆಲ್ಲ. ಈ ರೀತಿಯ ಪರಿಹಾರವನ್ನು ಕಂಡುಕೊಳ್ಳಬಹುದು.

7.ಪರ್ಯಾಯ ಉಳಿತಾಯ

ಮ್ಯೂಚವಲ್ ಫಂಡ್ಸ್, ಷೇರುಗಳು, ಬಾಂಡ್‌ಗಳಂಥ ಪರ್ಯಾಯ ಉಳಿತಾಯದ ಮಾರ್ಗಗಳನ್ನು ಹುಡುಕಿಕೊಳ್ಳಬಹುದು. ಕೇವಲ ಹಣವನ್ನು ಫಿಕ್ಸೆಡ್ ಡಿಪಾಸೆಟ್ ಮಾಡುವುದು ಮಾತ್ರವೇ ಉಳಿತಾಯದ ಮಾರ್ಗವಲ್ಲ. ಉಳಿತಾಯದ ಜತೆಗೆ ಹಣ ಹೆಚ್ಚಾಗುವ ಮಾರ್ಗಗಳಿವೆ. ಅವುಗಳನ್ನು ಶೋಧಿಸಬಹುದು. ಆದರೆ, ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯ.

8.ತೆರಿಗೆ ಮಾಹಿತಿ ಇರಲಿ

ತೆರಿಗೆ ಕಾನೂನುಗಳು, ಹೂಡಿಕೆ ಆಯ್ಕೆಗಳು ಮತ್ತು ನಿವೃತ್ತಿ ಯೋಜನೆ ತಂತ್ರಗಳಲ್ಲಿನ ಬದಲಾವಣೆಗಳ ಬಗ್ಗೆ ನಿಮಗೆ ಅಪ್‌ಡೇಟೆಡ್ ಮಾಹಿತಿ ಇರುವುದು ಉತ್ತಮ. ತಿಳುವಳಿಕೆಯುಳ್ಳ ಹಣಕಾಸಿನ ನಿರ್ಧಾರಗಳನ್ನು ಮಾಡಲು ಈ ರೀತಿಯ ಅಪ್‌ಡೇಟೆಡ್ ಮಾಹಿತಿ ಇದ್ದರೆ ಬೆಸ್ಟ್ ಹೂಡಿಕೆ ಮಾಡಲು ಸಾಧ್ಯವಾಗುತ್ತದೆ.

9.ರಿಟೈರ್ಮೆಂಟ್ ಫಂಡ್ ಮುಟ್ಟಬೇಡಿ

ಯಾವುದೇ ಕಾರಣಕ್ಕೂ ನಿಮ್ಮ ನಿವೃತ್ತಿ ಉಳಿತಾಯವನ್ನು ಇತರ ವೆಚ್ಚಗಳಿಗಾಗಿ ಬಳಸಲು ಹೋಗಲೇಡಿ. ಉಳಿತಾಯದ ಹಣವನ್ನು ಬಳಸಲಾರಂಭಿಸಿದರೆ, ನಿವೃತ್ತಿಯ ಸಮಯದಲ್ಲಿ ಮತ್ತೆ ನೀವು ಹಣವಿಲ್ಲದೇ ಪರದಾಡಬೇಕಾಗುತ್ತದೆ. ಹಾಗಾಗಿ, ಎಂಥದ್ದೇ ಸಂದರ್ಭದಲ್ಲಿ ನಿವೃತ್ತಿಗಾಗಿ ತೆಗೆದಿಟ್ಟ ಅಥವಾ ಸೇವಿಂಗ್ ಮಾಡಿದ ಹಣವನ್ನು ಸದ್ಯದ ವೆಚ್ಚಕ್ಕೆ ಬಳಸಲು ಮುಂದಾಗಬೇಡಿ.

ಈ ಸುದ್ದಿಯನ್ನೂ ಓದಿ: Money Guide: ಪಿಪಿಎಫ್‌, ಎನ್‌ಎಸ್‌ಸಿ, ಎಸ್‌ಸಿಎಸ್‌ಎಸ್‌ ಖಾತೆ ಸ್ಥಗಿತವಾಗದಂತೆ ನೋಡಿಕೊಳ್ಳಿ

10.ತುರ್ತು ನಿಧಿ ಇರಲಿ

ಅನಿರೀಕ್ಷಿತ ವೆಚ್ಚಗಳಿಗಾಗಿ ತುರ್ತು ನಿಧಿಯನ್ನು ನಿರ್ವಹಣೆ ಮಾಡುವುದು ಉತ್ತಮ. ಯಾಕೆಂದರೆ, ತುರ್ತು ನಿಧಿ ನಿಮ್ಮ ಬಳಿ ಇದ್ದರೆ ನೀವು ನಿಮ್ಮ ಸೇವಿಂಗ್ಸ್‌ ಅನ್ನು ವೆಚ್ಚಗಳಿಗೆ ಬಳಸಲು ಮುಂದಾಗುವುದಿಲ್ಲ. ಇಲ್ಲದಿದ್ದರೆ, ಉಳಿತಾಯದ ಹಣವನ್ನೇ ನೀವು ತುರ್ತು ಅಗತ್ಯಗಳಿಗೆ ಬಳಸುತ್ತೀರಿ. ಆಗ ನಿಮ್ಮ ನಿವೃತ್ತಿಯ ಎಲ್ಲ ಪ್ಲ್ಯಾನ್ ಹಾಳಾಗುತ್ತದೆ.

Continue Reading

ಕ್ರಿಕೆಟ್

T20 World Cup : 2024 ಟಿ20 ವಿಶ್ವ ಕಪ್​ ಪಂದ್ಯಗಳು ಎಲ್ಲೆಲ್ಲಿ ನಡೆಯುತ್ತವೆ ಎಂಬ ಮಾಹಿತಿ ಇಲ್ಲಿದೆ

ಅಮೆರಿಕದ ಮೂರು ಸ್ಥಳ ಹಾಗೂ ವೆಸ್ಟ್​ ಇಂಡೀಸ್​ನ 7 ಸ್ಥಳಗಳು ಸೇರಿ ಒಟ್ಟು 10 ಕಡೆ ವಿಶ್ವ ಕಪ್​ (T20 World Cup) ಪಂದ್ಯಗಳು ಆಯೋಜನೆಗೊಳ್ಳಲಿವೆ.

VISTARANEWS.COM


on

T20 wordl cup venue
Koo

ದುಬೈ: 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಐಸಿಸಿ ಶುಕ್ರವಾರ ಪ್ರಕಟಿಸಿದೆ. ವೆಸ್ಟ್ ಇಂಡೀಸ್ ಮತ್ತು ಯುಎಸ್ಎ (ಅಮೆರಿಕ) ಮುಂದಿನ ವರ್ಷ ಜೂನ್​ನಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ ಅನ್ನು ಜಂಟಿಯಾಗಿ ಆಯೋಜಿಸಲಿದೆ. ಮೆಗಾ ಈವೆಂಟ್​ನಲ್ಲಿ ಒಟ್ಟು 20 ತಂಡಗಳು ಭಾಗವಹಿಸಲಿವೆ. ಐಸಿಸಿ ಬುಧವಾರ ಯುಎಸ್ಎಯಲ್ಲಿ ಪಂದ್ಯ ನಡೆಯಲಿರುವ ಮೂರು ಸ್ಥಳಗಳನ್ನು ಬಹಿರಂಗಪಡಿಸಿದೆ. ಕೆರಿಬಿಯನ್ ರಾಷ್ಟ್ರಗಳಿಂದ ಏಳು ಸ್ಥಳಗಳನ್ನು ಅಂತಿಮಗೊಳಿಸಲಾಗಿದೆ.

ಆಂಟಿಗುವಾ ಮತ್ತು ಬಾರ್ಬುಡಾ, ಬಾರ್ಬಡೋಸ್, ಡೊಮಿನಿಕಾ, ಗಯಾನಾ, ಸೇಂಟ್ ಲೂಸಿಯಾ, ಟ್ರಿನಿಡಾಡ್ ಮತ್ತು ಟೊಬಾಗೊ ಮತ್ತು ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್ ವೆಸ್ಟ್​ ಇಂಡೀಸ್​ನಿಂದ ಆಯ್ಕೆಯಾದ ಏಳು ಸ್ಥಳಗಳಾಗಿವೆ, ಡಲ್ಲಾಸ್​​ನ ಗ್ರ್ಯಾಂಡ್ ಪ್ರೈರಿ, ಫ್ಲೋರಿಡಾದ ಬ್ರೋವರ್ಡ್ ಕೌಂಟಿ ಮತ್ತು ನ್ಯೂಯಾರ್ಕ್ನ ನಸ್ಸಾವು ಕೌಂಟಿ ಯುಎಸ್ಎಯಲ್ಲಿ ವಿಶ್ವ ಕಪ್​ ಪಂದ್ಯಗಳಿಗೆ ಆತಿಥ್ಯ ವಹಿಸಲಿವೆ.

ಐಸಿಸಿ ಪುರುಷರ ಟಿ 20 ವಿಶ್ವಕಪ್​​ಗೆ ಆತಿಥ್ಯ ವಹಿಸಲಿರುವ ಏಳು ಕೆರಿಬಿಯನ್ ಸ್ಥಳಗಳನ್ನು ಘೋಷಿಸಲು ನಾವು ಸಂತೋಷಪಡುತ್ತೇವೆ, ಟ್ರೋಫಿಗಾಗಿ 20 ತಂಡಗಳು ಸ್ಪರ್ಧಿಸುತ್ತಿವೆ ಎಂದು ಐಸಿಸಿ ಮುಖ್ಯ ಕಾರ್ಯನಿರ್ವಾಹಕ ಜೆಫ್ ಅಲ್ಲಾರ್ಡೈಸ್ ಹೇಳಿದರು. ಅವೆಲ್ಲವೂ ಆಟಗಾರರು ಮತ್ತು ಅಭಿಮಾನಿಗಳೊಂದಿಗೆ ಜನಪ್ರಿಯ ಸ್ಥಳಗಳಾಗಿವೆ. ಇದು ಈವೆಂಟ್​ಗೆ ಅದ್ಭುತ ರೂಪ ಕೊಡಲಿದೆ ಎಂದು ಹೇಳಿದ್ದಾರೆ.

ವೆಸ್ಟ್​ ಇಂಡೀಸ್​ಗೆ ಮೂರನೇ ಆತಿಥ್ಯ

ಇದು ವೆಸ್ಟ್ ಇಂಡೀಸ್ ಆತಿಥ್ಯ ವಹಿಸುತ್ತಿರುವ ಮೂರನೇ ಐಸಿಸಿ ಹಿರಿಯ ಪುರುಷರ ಪಂದ್ಯಾವಳಿಯಾಗಿದೆ. ಈ ಪಂದ್ಯಗಳು ಕ್ರಿಕೆಟ್ ಅಭಿಮಾನಿಗಳಿಗೆ ಕೆರಿಬಿಯನ್ ನಲ್ಲಿ ಕ್ರಿಕೆಟ್ ಅನ್ನು ಆನಂದಿಸುವ ವಿಶಿಷ್ಟ ಅನುಭವ ನೀಡಲಿದೆ. ಕ್ರೀಡೆಯ ಕಡೆಗೆ ನಮ್ಮ ನಿರಂತರ ಬದ್ಧತೆ ಮತ್ತು ಬೆಂಬಲಕ್ಕಾಗಿ ಕ್ರಿಕೆಟ್ ವೆಸ್ಟ್ ಇಂಡೀಸ್ ಮತ್ತು ಏಳು ಆತಿಥೇಯ ಸರ್ಕಾರಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ.

ಕ್ರಿಕೆಟ್ ವೆಸ್ಟ್ ಇಂಡೀಸ್ (ಸಿಡಬ್ಲ್ಯುಐ) ಈ ಹಿಂದೆ 2007 ರಲ್ಲಿ ಐಸಿಸಿ ಏಕದಿನ ವಿಶ್ವಕಪ್ ಮತ್ತು ನಂತರ 2010 ರಲ್ಲಿ ಟಿ 20 ವಿಶ್ವಕಪ್ ಅನ್ನು ಆಯೋಜಿಸಿತ್ತು. ಸಿಡಬ್ಲ್ಯುಐ ಮುಖ್ಯಸ್ಥ ಜಾನಿ ಗ್ರೇವ್ಸ್ ಅವರು ಮೆಗಾ ಐಸಿಸಿ ಈವೆಂಟ್ ಅನ್ನು ಆಯೋಜಿಸಲು ಮಂಡಳಿಯ ಉತ್ಸಾಹವನ್ನು ಪ್ರಕಟಿಸಿದ್ದಾರೆ ಆಯ್ಕೆಯಾದ ಎಲ್ಲಾ ಏಳು ಸ್ಥಳಗಳು ಮೇಲ್ದರ್ಜೆಗೇರುವ ಅರ್ಹತೆ ಹೊಂದಿವೆ ಎಂದು ಹೇಳಿದರು.

ಇದನ್ನೂ ಓದಿ : World Cup 2023 : ಏಕ ದಿನ ವಿಶ್ವ ಕಪ್​ನ ಬಹುಮಾನ ಎಷ್ಟು ಗೊತ್ತೇ? ಇಲ್ಲಿದೆ ಎಲ್ಲ ವಿವರ

ಇತಿಹಾಸದಲ್ಲಿ ಅತಿದೊಡ್ಡ ಐಸಿಸಿ ಟಿ 20 ವಿಶ್ವಕಪ್ ಆತಿಥ್ಯ ವಹಿಸಲು ಕೆರಿಬಿಯನ್ ಸ್ಥಳಗಳನ್ನು ನಾವು ಘೋಷಿಸುತ್ತಿರುವುದರಿಂದ ಇದು ರೋಮಾಂಚನಕಾರಿ ಕ್ಷಣ. ಮುಂದಿನ ವರ್ಷ ಜೂನ್​ನಲ್ಲಿ 20 ತಂಡಗಳು 55 ಪಂದ್ಯಗಳಲ್ಲಿ ಆಡಲಿವೆ. ಒಂದು ತಲೆಮಾರುಗಳಿಂದ ವೆಸ್ಟ್ ಇಂಡೀಸ್ ನಲ್ಲಿ ನಡೆಯುವ ಅತ್ಯಂತ ಮಹತ್ವದ ಕ್ರೀಡಾಕೂಟವನ್ನು ಆಯೋಜಿಸಲು ಅನುವು ಮಾಡಿಕೊಟ್ಟ ವೆಸ್ಟ್ ಇಂಡೀಸ್ ನ ಸರ್ಕಾರಗಳಿಗೆ ನಾವು ಕೃತಜ್ಞರಾಗಿದ್ದೇವೆ. ಏಳು ಆತಿಥೇಯ ಸರ್ಕಾರಗಳು ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಥಳಗಳು ಮತ್ತು ಅಭ್ಯಾಸ ಸೌಲಭ್ಯಗಳನ್ನು ನವೀಕರಿಸಲು ಬದ್ಧವಾಗಿವೆ. ವೆಸ್ಟ್ ಇಂಡೀಸ್ ಕ್ರಿಕೆಟ್​​ ಹೆಮ್ಮೆಯ ಪರಂಪರೆಯನ್ನು ಬೆಂಬಲಿಸುವುದನ್ನು ಮತ್ತು ಸಂರಕ್ಷಿಸುವುದನ್ನು ಮುಂದುವರಿಸಿವೆ” ಎಂದು ಜಾನಿ ಗ್ರೇವ್ಸ್ ಹೇಳಿಕೊಂಡಿದ್ದಾರೆ.

Continue Reading
Advertisement
Ruturaj Gaikwad
ಕ್ರಿಕೆಟ್34 mins ago

ind vs aus : ಮೊದಲ ಪಂದ್ಯದಲ್ಲಿ ಭಾರತ ತಂಡಕ್ಕೆ ಜಯ, ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ 1-0 ಮುನ್ನಡೆ

Cat eyed snake
ಕರ್ನಾಟಕ48 mins ago

Cat Eyed Snake : ಬೆಕ್ಕಿನ ಕಣ್ಣಿನ ಸುಂದರಿಯರನ್ನು ನೋಡೇ ಇರ್ತೀರಿ, ಬೆಕ್ಕಿನ ಕಣ್ಣಿನ ಹಾವು ನೋಡಿದ್ದೀರಾ?

Dakshin Bharat Utsav
ಕರ್ನಾಟಕ50 mins ago

Dakshin Bharat Utsav: ಪ್ರವಾಸೋದ್ಯಮ ಉತ್ತೇಜಿಸಲು ಖಾಸಗಿ ವಲಯಕ್ಕೆ 550 ಸ್ಮಾರಕ ದತ್ತು: ಸಚಿವ ಎಚ್‌.ಕೆ. ಪಾಟೀಲ್

savings
ದೇಶ57 mins ago

Money Guide: ಅತ್ಯುತ್ತಮ ನಿವೃತ್ತ ಜೀವನಕ್ಕಾಗಿ ಟಾಪ್ 10 ಹಣ ಉಳಿತಾಯದ ಟಿಪ್ಸ್!

Mohammed Shami
ಕ್ರಿಕೆಟ್1 hour ago

Mohammed Shami : ಬೌಲಿಂಗ್​ನಲ್ಲಿ ಹೊಸ ಮಿಂಚು ಸೃಷ್ಟಿಸಿದ ಮೊಹಮ್ಮದ್ ಶಮಿ; ಏನಿದು ಸಾಧನೆ

Vijayanagara DC Diwakar MS Visit and inspection of hospital in Hagaribommanahalli
ವಿಜಯನಗರ1 hour ago

Vijayanagara News: ಹಗರಿಬೊಮ್ಮನಹಳ್ಳಿಯ ಆಸ್ಪತ್ರೆ, ಸರ್ಕಾರಿ ಕಚೇರಿಗಳಿಗೆ ಡಿಸಿ ದಿವಾಕರ್‌ ದಿಢೀರ್‌ ಭೇಟಿ

Neegilu Kavya Abhiyan programme at gubbi
ತುಮಕೂರು1 hour ago

Tumkur News: ಗುಬ್ಬಿಯಲ್ಲಿ ನೇಗಿಲು ಕಾವ್ಯ ಅಭಿಯಾನಕ್ಕೆ ಸಾಹಿತಿ ಸಂತೋಷ್ ಮಡೆನೂರು ಚಾಲನೆ

T20 wordl cup venue
ಕ್ರಿಕೆಟ್2 hours ago

T20 World Cup : 2024 ಟಿ20 ವಿಶ್ವ ಕಪ್​ ಪಂದ್ಯಗಳು ಎಲ್ಲೆಲ್ಲಿ ನಡೆಯುತ್ತವೆ ಎಂಬ ಮಾಹಿತಿ ಇಲ್ಲಿದೆ

sugar factory representatives and sugarcane growers meeting at DC office Karwar
ಉತ್ತರ ಕನ್ನಡ2 hours ago

Uttara Kannada News: ಕಬ್ಬು ಬೆಳೆಗಾರರಿಗೆ ಸಮಸ್ಯೆಯಾಗದಂತೆ ಕಾರ್ಯ ನಿರ್ವಹಿಸಿ: ಡಿಸಿ ಗಂಗೂಬಾಯಿ ಮಾನಕರ್

Vishwa Hindu Mahasabha Ganapati Utsav Committee Honorary President Sanjiva Achar spoke at the pressmeet
ಶಿವಮೊಗ್ಗ2 hours ago

Shivamogga News: ವಿಶ್ವ ಹಿಂದೂ ಮಹಾಸಭಾ ಗಣಪತಿ ಉತ್ಸವ ಸಮಿತಿಯಿಂದ ಸೆ.23ರಿಂದ ಸೊರಬದಲ್ಲಿ ಕಾರ್ಯಕ್ರಮ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ3 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ7 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ17 hours ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ5 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ6 days ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ6 days ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ6 days ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ7 days ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

Kadri temple is the target for Shariq NIA reveals
ಕರ್ನಾಟಕ1 week ago

ಮಂಗಳೂರು ಸ್ಫೋಟ : ಶಾರಿಕ್‌ಗೆ ಕದ್ರಿ ದೇವಸ್ಥಾನವೇ ಟಾರ್ಗೆಟ್; ರಿವೀಲ್ ಮಾಡಿದ ಎನ್ಐಎ

Dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ರಾಶಿಯವರು ಹೂಡಿಕೆ ಮಾಡಿದರೆ ನಷ್ಟ ಗ್ಯಾರಂಟಿ!

ಟ್ರೆಂಡಿಂಗ್‌