Dina Bhavishya : ಈ ರಾಶಿಯವರಿಗೆ ಇಂದು ಮಾನಸಿಕ ನೆಮ್ಮದಿಯೇ ಹಾಳು! - Vistara News

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರಿಗೆ ಇಂದು ಮಾನಸಿಕ ನೆಮ್ಮದಿಯೇ ಹಾಳು!

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷದ
ದಶಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಶನಿವಾರ ಕಟಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ವೃಷಭ ರಾಶಿಯ ಉದ್ಯೋಗಿಗಳಿಗೆ ಕೊಂಚ ಕಿರಿಕಿರಿ ಇರಲಿದೆ. ಕಟಕ ರಾಶಿಯವರಿಗೆ ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ, ಹೀಗಾಗಿ ಕಾಳಜಿ ವಹಿಸಿ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಧನಸ್ಸು ರಾಶಿಯವರಿಗೆ ಭವಿಷ್ಯದ ಕುರಿತಾಗಿ ಆಲೋಚನೆ, ಜೀವನದಲ್ಲಿ ಅಭದ್ರತೆಯು ಕಾಡಬಹುದು. ಇತರೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (9-09-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ:
ದಶಮಿ 19:17 ವಾರ: ಶನಿವಾರ
ನಕ್ಷತ್ರ: ಆರಿದ್ರಾ 14:25 ಯೋಗ: ವ್ಯತಿಪಾತ 22:33
ಕರಣ: ವಣಿಜ 06:20 ಅಮೃತಕಾಲ: ಬೆಳಗಿನ ಜಾವ 03:29 ಯಿಂದ 05:14 ವರೆಗೆ
ದಿನದ ವಿಶೇಷ: ಶ್ರಾವಣ ಶನಿವಾರ

ಸೂರ್ಯೋದಯ : 06: 15  ಸೂರ್ಯಾಸ್ತ : 06:46

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ:ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು ಹೆಚ್ಚಾಗಲಿದೆ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಕಿರಿಕಿರಿ ಉಂಟಾಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗುವುದು. ಹಿರಿಯರ ಬೆಂಬಲ ಆಶೀರ್ವಾದ ಸಿಗಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿ ಇರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಆರೋಗ್ಯದ ಕುರಿತು ಕಾಳಜಿ ಇರಲಿ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಭವಿಷ್ಯದಲ್ಲಿನ ಹೂಡಿಕೆ ಯೋಜನೆ ಕುರಿತು ಆಲೋಚಿಸಿ. ಕುಟುಂಬದಲ್ಲಿ ಸಂಗಾತಿಯ ಬೆಂಬಲ, ಸಲಹೆ ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ, ಹೀಗಾಗಿ ಕಾಳಜಿ ವಹಿಸಿ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಕೆಡದಂತೆ ಜಾಗ್ರತೆ ವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದ್ದು, ಅದಷ್ಟು ತಾಳ್ಮೆ ಇರಲಿ. ಉನ್ನತ ವ್ಯಕ್ತಿಗಳ ಸಹಾಯ ದೊರೆಯಲಿದೆ. ಉದ್ಯೋಗಿಗಳಿಗೆ ಯಶಸ್ಸು,ಕೀರ್ತಿ, ಶುಭಫಲ ಇರಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ಮುಂದಾಗುವ ಕಾರ್ಯಗಳ ಬಗೆಗೆ ಗಮನ ಇರಲಿ. ಆರೋಗ್ಯದ ಕುರಿತು ಕಾಳಜಿ ಇರಲಿ.ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಣಕಾಸಿನ ಸಮಸ್ಯೆ ತಲೆದೋರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು ಸಿಗಲಿದೆ. ಹೂಡಿಕೆ ವ್ಯವಹಾರಗಳನ್ನು ಮಾಡುವುದು ಬೇಡ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರೋಗ್ಯದಲ್ಲಿ ಪರಿಪೂರ್ಣವಾಗಿರಲಿದೆ. ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದವರ ಸಹಕಾರ ಸಿಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕೊಂಚಮಟ್ಟಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಭವಿಷ್ಯದ ಕುರಿತಾಗಿ ಆಲೋಚನೆ, ಜೀವನದಲ್ಲಿ ಅಭದ್ರತೆಯು ಕಾಡಬಹುದು. ಯಾವುದನ್ನು ಅತಿಯಾಗಿ ಆಲೋಚಿಸಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ.ಹೂಡಿಕೆ, ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರು ಏನು ಮಾಡಬೇಕು?
Horoscope Today

ಮಕರ: ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯದಲ್ಲಿ ಕೊಂಚ ಏರುಪೇರಾಗುವುದು. ಕೆಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಹಿಂದೆ ನೀಡಿದ ಹಣವು ಮರಳುವ ಸಾಧ್ಯತೆ. ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಉತ್ಸಾಹದಿಂದ ಕಾರ್ಯ ಸಿದ್ಧಿ. ಅಗತ್ಯವಸ್ತುಗಳ ಖರೀದಿ ಖರ್ಚು ಹೆಚ್ಚಾಗಲಿದೆ. ಅಮೂಲ್ಯ ವಸ್ತುಗಳ ಕುರಿತು ಲಕ್ಷ್ಯ ಇರಲಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?

Horoscope Today

ಮೀನ: ಅನೇಕ ಮೂಲಗಳಿಂದ ಹಣಕಾಸಿನ ಹರಿವು ಹೆಚ್ಚಳ. ದೀರ್ಘಕಾಲದ ಆಲೋಚನೆಯಿಂದ ದೂರವಾಗುವ ಸಾಧ್ಯತೆ ಇದೆ. ಮಾನಸಿಕ ನೆಮ್ಮದಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಒದಗಿಬರುವುದು. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Ramniwas Rawat: 15 ನಿಮಿಷದಲ್ಲಿ 2 ಬಾರಿ ಸಚಿವನಾಗಿ ಬಿಜೆಪಿ ಶಾಸಕ ಪ್ರಮಾಣವಚನ; ಎಲ್ಲಾಯ್ತು ಎಡವಟ್ಟು?

Ramniwas Rawat: ರಾಜಭವನದಲ್ಲಿ ಸೋಮವಾರ ಬೆಳಗ್ಗೆ 9 ಗಂಟೆಗೆ ರಾಮ್‌ನಿವಾಸ್‌ ಅವರಿಗೆ ರಾಜ್ಯಪಾಲ ಮಂಗುಭಾಯಿ ಸಿ ಪಟೇಲ್‌ ಅವರು ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸುವಾಗ ರಾಮ್‌ನಿವಾಸ್‌ ರಾವತ್‌ ಅವರು ರಾಜ್ಯ ಕೆ ಮಂತ್ರಿ ಎಂದು ಹೇಳುವ ಬದಲು ರಾಜ್ಯ ಮಂತ್ರಿ (ಸಹಾಯಕ ಸಚಿವ) ಎಂದು ಹೇಳಿದರು. ಇದರಿಂದಾಗಿ ಕೆಲಹೊತ್ತು ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಬಳಿಕ ಎರಡನೇ ಬಾರಿ ಬಿಜೆಪಿ ಶಾಸಕ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

VISTARANEWS.COM


on

Ramniwas Rawat
Koo

ಭೋಪಾಲ್‌: ನಾವು ಮಾತನಾಡುವಾಗ, ಬರೆಯುವಾಗ ಬಳಸುವ ಒಂದು ಪದವು ಎಷ್ಟು ಪರಿಣಾಮ ಬೀರುತ್ತದೆಯೋ, ಬಳಸಬೇಕಾದ ಜಾಗದಲ್ಲಿ ಇನ್ನೊಂದು ಪದ ಬಳಸದಿದ್ದರೂ ಅದು ಕೂಡ ಬೇರೊಂದು ಪರಿಣಾಮವನ್ನೇ ಬೀರುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ಮಧ್ಯಪ್ರದೇಶದ (Madhya Pradesh Cabinet) ನೂತನ ಸಚಿವರಾಗಿ ಬಿಜೆಪಿಯ ರಾಮ್‌ನಿವಾಸ್‌ ರಾವತ್‌ (Ramniwas Rawat) ಅವರು ಪ್ರಮಾಣವಚನ ಸ್ವೀಕರಿಸುವಾಗ ಒಂದು ಪದವನ್ನು ಬಳಸದ ಕಾರಣ 15 ನಿಮಿಷಗಳಲ್ಲಿಯೇ ಎರಡನೇ ಬಾರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬಳಿಕ ಮೋಹನ್‌ ಯಾದವ್‌ ಅವರು ಸಿಎಂ ಆಗಿ ಪದಗ್ರಹಣ ಮಾಡಿದ್ದಾರೆ. ಇದಾದ ಐದು ತಿಂಗಳ ಬಳಿಕ ಅವರು ಮೊದಲ ಬಾರಿಗೆ ಸಂಪುಟ ವಿಸ್ತರಣೆ ಮಾಡಿದ್ದಾರೆ. ಇದಕ್ಕೂ ಮೊದಲು ಕಾಂಗ್ರೆಸ್‌ನಲ್ಲಿದ್ದ ರಾಮ್‌ನಿವಾಸ್‌ ರಾವತ್‌ ಅವರು ಬಿಜೆಪಿ ಸೇರ್ಪಡೆಯಾಗಿದ್ದು, ಸೋಮವಾರ (ಜುಲೈ 8) ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸುವಾಗ ಅವರು ಒಂದು ಪದವನ್ನು ಉಚ್ಚರಣೆ ಮಾಡದ ಕಾರಣ ಎರಡನೇ ಬಾರಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಅವರು ಬಳಸದ ಆ ಒಂದು ಪದ ಯಾವುದು?

ರಾಜಭವನದಲ್ಲಿ ಸೋಮವಾರ ಬೆಳಗ್ಗೆ 9 ಗಂಟೆಗೆ ರಾಮ್‌ನಿವಾಸ್‌ ಅವರಿಗೆ ರಾಜ್ಯಪಾಲ ಮಂಗುಭಾಯಿ ಸಿ ಪಟೇಲ್‌ ಅವರು ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸುವಾಗ ರಾಮ್‌ನಿವಾಸ್‌ ರಾವತ್‌ ಅವರು ರಾಜ್ಯ ಕೆ ಮಂತ್ರಿ ಎಂದು ಹೇಳುವ ಬದಲು ರಾಜ್ಯ ಮಂತ್ರಿ (ಸಹಾಯಕ ಸಚಿವ) ಎಂದು ಹೇಳಿದರು. ಸಹಾಯಕ ಸಚಿವ ಎಂಬುದಾಗಿ ಅವರು ಹೇಳುತ್ತಲೇ ಕಾರ್ಯಕ್ರಮದಲ್ಲಿ ಗೊಂದಲವಾಯಿತು. ಪತ್ರಕರ್ತರು ಕೂಡ ಈ ಕುರಿತು ನಾಯಕರ ಗಮನಕ್ಕೆ ತಂದರು.

ರಾಜ್ಯ ಕೆ ಮಂತ್ರಿ ಎಂಬುದಾಗಿ ಹೇಳುವ ಬದಲು ರಾಜ್ಯ ಮಂತ್ರಿ ಎಂದು ಹೇಳಿರುವುದು ಗಮನಕ್ಕೆ ಬಂದ 15 ನಿಮಿಷದಲ್ಲಿಯೇ ರಾಮ್‌ನಿವಾಸ್‌ ರಾವತ್‌ ಅವರು ಎರಡನೇ ಬಾರಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಒಂದೇ ಒಂದು ಪದವನ್ನು ಬಳಸದ ಕಾರಣ ರಾಜಭವನದಲ್ಲಿ ಇಷ್ಟೆಲ್ಲ ಗೊಂದಲ ಉಂಟಾಯಿತು. ರಾಮ್‌ನಿವಾಸ್‌ ರಾವತ್‌ ಅವರ ಸೇರ್ಪಡೆಯೊಂದಿಗೆ ಮಧ್ಯಪ್ರದೇಶ ಸಚಿವರ ಸಂಖ್ಯೆ 32ಕ್ಕೆ ಏರಿಕೆಯಾಯಿತು. Words

ಇದನ್ನೂ ಓದಿ: Hemant Soren: 5 ತಿಂಗಳ ಜೈಲುವಾಸದ ಬಳಿಕ ಮತ್ತೆ ಜಾರ್ಖಂಡ್‌ ಸಿಎಂ ಆಗಿ ಹೇಮಂತ್‌ ಸೊರೆನ್‌ ಪ್ರಮಾಣವಚನ!

Continue Reading

ಕ್ರೀಡೆ

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್‌ಗೆ ಸಿಂಧು, ಶರತ್ ಕಮಲ್ ಭಾರತದ ಧ್ವಜಧಾರಿ

Paris Olympics 2024: ವೈಯಕ್ತಿಕ ಕಾರಣ ನೀಡಿ 2 ತಿಂಗಳ ಹಿಂದೆ ಮೇರಿ ಕೋಮ್ ಅವರು ಷೆಫ್ ಡಿ ಮಿಷನ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದೀಗ ಈ ಸ್ಥಾನಕ್ಕೆ 2012 ಲಂಡನ್​ ಒಲಿಂಪಿಕ್ಸ್​ ಟೂರ್ನಿಯಲ್ಲಿ 10 ಮೀ. ಏರ್​ ರೈಫಲ್​ ಸ್ಫರ್ದೆಯಲ್ಲಿ ಕಂಚಿನ ಪದಕ ಗೆದ್ದಿದ್ದ ಗಗನ್​ ನಾರಂಗ್​ ಅವರನ್ನು ಆಯ್ಕೆ ಮಾಡಲಾಗಿದೆ

VISTARANEWS.COM


on

Paris Olympics 2024
Koo

ನವದೆಹಲಿ: ಅವಳಿ ಒಲಿಂಪಿಕ್ಸ್​ ಪದಕ ವಿಜೇತೆ, ಸ್ಟಾರ್​ ಶಟ್ಲರ್​, ಪಿ.ವಿ.ಸಿಂಧು(PV Sindhu) ಮತ್ತು ಹಿರಿಯ ಟೇಬಲ್ ಟೆನಿಸ್ ಆಟಗಾರ ಶರತ್ ಕಮಲ್(Sharath Kamal) ಜುಲೈ 26ರಿಂದ ಆರಂಭಗೊಳ್ಳಲಿರುವ ಪ್ಯಾರಿಸ್ ಒಲಿಂಪಿಕ್(Paris Olympics 2024) ಕ್ರೀಡೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಧ್ವಜಧಾರಿಯಾಗಲಿದ್ದಾರೆ. ಮಾಜಿ ಒಲಿಂಪಿಕ್​ ಪದಕ ವಿಜೇತ ಶೂಟರ್​ ಗಗನ್​ ನಾರಂಗ್​ ಅವರನ್ನು ತಂಡದ ಷೆಫ್ ಡಿ ಮಿಷನ್ ಆಗಿ ಸೋಮವಾರ ನೇಮಿಸಲಾಗಿದೆ.

ವೈಯಕ್ತಿಕ ಕಾರಣ ನೀಡಿ 2 ತಿಂಗಳ ಹಿಂದೆ ಮೇರಿ ಕೋಮ್ ಅವರು ಷೆಫ್ ಡಿ ಮಿಷನ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದೀಗ ಈ ಸ್ಥಾನಕ್ಕೆ 2012 ಲಂಡನ್​ ಒಲಿಂಪಿಕ್ಸ್​ ಟೂರ್ನಿಯಲ್ಲಿ 10 ಮೀ. ಏರ್​ ರೈಫಲ್​ ಸ್ಫರ್ದೆಯಲ್ಲಿ ಕಂಚಿನ ಪದಕ ಗೆದ್ದಿದ್ದ ಗಗನ್​ ನಾರಂಗ್​ ಅವರನ್ನು ಆಯ್ಕೆ ಮಾಡಲಾಗಿದೆ. ಇದಕ್ಕೂ ಮುನ್ನ ನಾರಂಗ್ ಉಪ ಸಿಡಿಎಂ ಸ್ಥಾನ ಹೊಂದಿದ್ದರು. ಬಡ್ತಿ ನೀಡುವ ಮೂಲಕ ಷೆಫ್ ಡಿ ಮಿಷನ್ ನೀಡಲಾಗಿದೆ. ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​(ಐಒಎ) ಅಧ್ಯಕ್ಷೆ ಪಿಟಿ ಉಷಾ ಈ ವಿಚಾರವನ್ನು ಅಧಿಕೃತ ಪ್ರಕಟನೆ ಮೂಲಕ ತಿಳಿಸಿದ್ದಾರೆ.

“ಎರಡು ಒಲಿಂಪಿಕ್ಸ್ ಪದಕಗಳನ್ನು ಗೆದ್ದ ಭಾರತದ ಏಕೈಕ ಮಹಿಳೆಯಾಗಿರುವ ಸಿಂಧು ಅವರು ಆರಂಭಿಕ ಸಮಾರಂಭದಲ್ಲಿ ಶರತ್ ಕಮಲ್ ಅವರೊಂದಿಗೆ ಮಹಿಳಾ ಧ್ವಜಧಾರಿಯಾಗಿ ಘೋಷಿಸಲು ಸಂತೋಷಪಡುತ್ತೇನೆ. ಪ್ಯಾರಿಸ್ 2024ರ ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಉತ್ತಮ ಫಲಿತಾಂಶಗಳನ್ನು ನೀಡಲು ನಮ್ಮ ಕ್ರೀಡಾಪಟುಗಳು ಉತ್ತಮವಾಗಿ ಸಿದ್ಧರಾಗಿದ್ದಾರೆ ಎಂದು ನನಗೆ ವಿಶ್ವಾಸವಿದೆ”ಎಂದು ಪಿಟಿ ಉಷಾ ಹೇಳಿದ್ದಾರೆ.

ಇದನ್ನೂ ಓದಿ Paris Olympics 2024: ಸರ್ಕಾರಿ, ಖಾಸಗಿ ವಲಯದ ಪಾಲುದಾರಿಕೆಯಿಂದ ಕ್ರೀಡೆಗಳ ಭವಿಷ್ಯ ನಿರ್ಧಾರ: ಪಾರ್ಥ್ ಜಿಂದಾಲ್

ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪದಕ ಗೆಲ್ಲುವುದು ಭಾರತದ ಪ್ರಮುಖ ಗುರಿಯಾಗಿದೆ. ಟೋಕಿಯೊದಲ್ಲಿ ಭಾರತ ಒಟ್ಟು 7 ಪದಕ ಜಯಿಸಿತ್ತು. ಇದರಲ್ಲಿ ಒಂದು ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕ ಒಳಗೊಂಡಿತ್ತು. ಒಟ್ಟಾರೆಯಾಗಿ ಭಾರತ ಪದಕ ಪಟ್ಟಿಯಲ್ಲಿ 48ನೇ ಸ್ಥಾನ ಪಡೆದಿತ್ತು. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ. 30 ಸದಸ್ಯರನ್ನು ಒಳಗೊಂಡ ಟ್ರ್ಯಾಕ್ ಆ್ಯಂಡ್ ಫೀಲ್ಡ್ ತಂಡಕ್ಕೆ ಟೋಕಿಯೊ ಒಲಿಂಪಿಕ್​ ಚಿನ್ನದ ಪದಕ ವಿಜೇತ, ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ನಾಯಕನಾಗಿದ್ದಾರೆ.

ಈ ಬಾರಿಯ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ(Paris Olympics) ಭಾಗಿಯಾಗುವ ಭಾರತದ ಆ್ಯತ್ಲೀಟ್‌ಗಳಿಗೆ ಮನೆಯ ವಾತಾವರಣವನ್ನು ಕಲ್ಪಿಸುವ ಉದ್ದೇಶದಿಂದ ರಿಲಯನ್ಸ್‌ ಸಂಸ್ಥೆ “ಇಂಡಿಯಾ ಹೌಸ್​”(India House)​ ಎಂಬ ವಿಶೇಷ ವ್ಯವಸ್ಥೆಯೊಂದನ್ನು ಮಾಡಿದೆ. ಭಾರತೀಯ ಕ್ರೀಡಾಪಟುಗಳು ಇದರಲ್ಲೇ ಉಳಿದುಕೊಳ್ಳಲಿದ್ದಾರೆ.

Continue Reading

ದೇಶ

Union Budget 2024: ಕೇಂದ್ರ ಬಜೆಟ್;‌ 8ನೇ ವೇತನ ಆಯೋಗ ಸೇರಿ 7 ಬೇಡಿಕೆ ಇಟ್ಟ ಸರ್ಕಾರಿ ನೌಕರರು!

Union Budget 2024: ಬಜೆಟ್‌ಗೆ ದಿನಗಣನೆ ಆರಂಭವಾದ ಹಿನ್ನೆಲೆಯಲ್ಲಿ ನೌಕರರಿಗೆ ತೆರಿಗೆ ವಿನಾಯಿತಿ, ಬಡವರು, ಮಧ್ಯಮ ವರ್ಗದವರಿಗೆ ನಿರೀಕ್ಷೆಗಳು ಹೆಚ್ಚಾಗಿವೆ. ಹಾಗೆಯೇ, ಆಯುಷ್ಮಾನ್‌ ಭಾರತ್‌ ಯೋಜನೆಯ ಫಲಾನುಭವಿಗಳ ಸಂಖ್ಯೆ ಹಾಗೂ ವಿಮಾ ಮೊತ್ತವನ್ನು 10 ಲಕ್ಷ ರೂ.ಗೆ ಏರಿಸುವ ಕುರಿತು ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ನಲ್ಲಿ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ, ಕೇಂದ್ರ ಸರ್ಕಾರಿ ನೌಕರರು ಕೇಂದ್ರ ಸರ್ಕಾರಕ್ಕೆ ಪ್ರಮುಖ 7 ಬೇಡಿಕೆಗಳನ್ನು ಇಟ್ಟಿದ್ದಾರೆ.

VISTARANEWS.COM


on

Union Budget 2024
Koo

ನವದೆಹಲಿ: ದೇಶದ ಜನ ಭಾರಿ ನಿರೀಕ್ಷೆಯಿಂದ ಕಾಯುತ್ತಿರುವ ಕೇಂದ್ರ ಬಜೆಟ್‌ಗೆ (Union Budget 2024) ದಿನಾಂಕ ನಿಗದಿಯಾಗಿದೆ. ಜುಲೈ 22ರಿಂದ ಆಗಸ್ಟ್‌ 12ರವರೆಗೆ ಬಜೆಟ್‌ ಅಧಿವೇಶನ (Union Budget Session) ನಡೆಯಲಿದ್ದು, ಜುಲೈ 23ರಂದು ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ದಾಖಲೆಯ ಏಳನೇ ಬಾರಿಗೆ ಬಜೆಟ್‌ ಮಂಡಿಸಲಿದ್ದಾರೆ. ಇದರ ಬೆನ್ನಲ್ಲೇ, ಕೇಂದ್ರ ಸರ್ಕಾರಿ ನೌಕರರ ಒಕ್ಕೂಟವು (Government Union) 8ನೇ ವೇತನ ಆಯೋಗ ಜಾರಿ ಸೇರಿ ಕೇಂದ್ರ ಸರ್ಕಾರಕ್ಕೆ 7 ಬೇಡಿಕೆಗಳನ್ನು ಇಟ್ಟಿದ್ದಾರೆ. ಸಂಪುಟ ಕಾರ್ಯದರ್ಶಿಗೆ ನೌಕರರ ಒಕ್ಕೂಟವು 7 ಬೇಡಿಕೆಗಳನ್ನು ಸಲ್ಲಿಸಿದ್ದು, ಅವುಗಳ ಕುರಿತ ಮಾಹಿತಿ ಇಲ್ಲಿದೆ.

ನೌಕರರ 7 ಬೇಡಿಕೆಗಳು

  1. ಕೂಡಲೇ 8ನೇ ವೇತನ ಆಯೋಗ ಜಾರಿಗೊಳಿಸಬೇಕು
  2. ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಬೇಕು
  3. ಕೇಂದ್ರ ನೌಕರರಿಗೆ ಬಾಕಿ ಇರುವ 18 ತಿಂಗಳ ತುಟ್ಟಿಭತ್ಯೆ ನೀಡಬೇಕು
  4. ಅನುಕಂಪದ ಆಧಾರದ ಮೇಲೆ ನೇಮಕಾತಿಗೆ ಇರುವ ಶೇ.5ರಷ್ಟು ಗರಿಷ್ಠ ಮಿತಿ ತೆಗೆದು, ನಿಧನರಾದ ಎಲ್ಲ ನೌಕರರ ಮಕ್ಕಳಿಗೂ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಬೇಕು
  5. ಕೇಂದ್ರ ಸರ್ಕಾರದ ಎಲ್ಲ ಬಾಕಿ ಇರುವ ಹುದ್ದೆಗಳನ್ನು ನೇಮಕಾತಿ ಮಾಡಬೇಕು
  6. ಸಂಘಟನೆಗಳ ಪ್ರಜಾಸತ್ತಾತ್ಮಕ ಕಾರ್ಯನಿರ್ವಹಣೆಯನ್ನು ದೃಢಪಡಿಸುವುದು
  7. ಒಕ್ಕೂಟಗಳಿಗೆ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡುವುದು
Reservation in outsourcing

ಆಯುಷ್ಮಾನ್‌ ಭಾರತ್‌ ವಿಮಾ ಮೊತ್ತ ದ್ವಿಗುಣ?

ದೇಶದ ಸುಮಾರು 50 ಕೋಟಿ ಬಡವರಿಗೆ ಆಯುಷ್ಮಾನ್‌ ಭಾರತ್‌ ಯೋಜನೆ ಅಡಿಯಲ್ಲಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಇನ್ನು, 70 ವರ್ಷ ದಾಟಿದ ಎಲ್ಲರಿಗೂ ಆಯುಷ್ಮಾನ್‌ ಭಾರತ್‌ ಯೋಜನೆಯ ಸೌಲಭ್ಯವನ್ನು ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಇದರ ಜತೆಗೆ, ವಿಮಾ ಮೊತ್ತವನ್ನು 5 ಲಕ್ಷ ರೂ.ನಿಂದ 10 ಲಕ್ಷ ರೂ.ಗೆ ಏರಿಕೆ ಮಾಡುವ ಕುರಿತು ಕೂಡ ಚಿಂತನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಇದರಿಂದ ಕೇಂದ್ರ ಸರ್ಕಾರಕ್ಕೆ ವಾರ್ಷಿಕ 12,076 ಕೋಟಿ ರೂ. ಹೆಚ್ಚುವರಿಯಾಗಿ ಖರ್ಚಾಗಲಿದೆ ಎಂದು ತಿಳಿದುಬಂದಿದೆ.

ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್‌ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್‌ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Union Budget 2024: ಕೇಂದ್ರ ಬಜೆಟ್‌ನಲ್ಲಿ ಉದ್ಯೋಗ, ಗ್ರಾಮೀಣಾಭಿವೃದ್ಧಿಗೆ ಒತ್ತು-ಅರ್ಥಶಾಸ್ತ್ರಜ್ಞರು ಹೇಳೋದೇನು?

Continue Reading

ಕರ್ನಾಟಕ

Dengue Cases: ರಾಜ್ಯದಲ್ಲಿ ಸೋಮವಾರ 197 ಡೆಂಗ್ಯೂ ಕೇಸ್‌ಗಳು ಪತ್ತೆ, ಒಬ್ಬರ ಸಾವು

Dengue Cases: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 892 ಮಂದಿಗೆ ಟೆಸ್ಟ್‌ ನಡೆಸಿದ್ದು, ಈ ಪೈಕಿ 197 ಮಂದಿಗೆ ಡೆಂಗ್ಯೂ ದೃಢಪಟ್ಟಿದೆ.

VISTARANEWS.COM


on

Dengue Cases
Koo

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 197 ಡೆಂಗ್ಯೂ ಕೇಸ್‌ಗಳು (Dengue Cases) ಪತ್ತೆಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 303ಕ್ಕೇರಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲೇ 95 ಮಂದಿಗೆ ಸೋಮವಾರ ಸೋಂಕು ತಗುಲಿದೆ. ಸೋಂಕಿತರ ಪೈಕಿ 46 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ 24 ಗಂಟೆಯಲ್ಲಿ 892 ಮಂದಿಗೆ ಟೆಸ್ಟ್‌ ನಡೆಸಿದ್ದು, ಈ ಪೈಕಿ 197 ಮಂದಿಗೆ ಡೆಂಗ್ಯೂ ದೃಢಪಟ್ಟಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 95, ಬೆಂಗಳೂರು ನಗರ 4, ಶಿವಮೊಗ್ಗ 16, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ 3, ಕಲಬುರಗಿ 15, ಕೊಪ್ಪಳ 1, ಚಾಮರಾಜನಗರ 6, ಮಂಡ್ಯ 33, ಉಡುಪಿ 1, ಚಿಕ್ಕಮಗಳೂರು ಜಿಲ್ಲೆಯಲ್ಲಿ 17 ಮಂದಿಗೆ ಸೋಂಕು ತಗುಲಿದೆ. 197 ಮಂದಿಯಲ್ಲಿ 0-1 ವರ್ಷದೊಳಗಿನವರಲ್ಲಿ 1 ಮಗುವಿಗೆ, 1 ರಿಂದ 18 ವರ್ಷಗೊಳಗಿನ 63 ಮಂದಿಗೆ ಸೋಂಕು ತಗುಲಿದೆ.

ಇನ್ನು ರಾಜ್ಯದಲ್ಲಿ ಜನವರಿಯಿಂದ ಈವರೆಗೆ ಒಟ್ಟು 7362 ಮಂದಿ ಡೆಂಗ್ಯೂ ಪೀಡಿತರಾಗಿದ್ದು, 7 ಮಂದಿ ಮೃತಪಟ್ಟಿದ್ದಾರೆ. ಸಾವಿನ ಪ್ರಮಾಣ 0.09 ಇದೆ.

ಕಲುಷಿತ ನೀರು ಪೂರೈಕೆಯಾದ್ರೆ ಅಧಿಕಾರಿಗಳೇ ಹೊಣೆ; 15 ದಿನಕ್ಕೊಮ್ಮೆ ಕ್ವಾಲಿಟಿ ಟೆಸ್ಟ್ ಮಾಡಿ ಎಂದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ (Dengue Cases) ಏರಿಕೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಲಾರ್ವಾ ಸಮೀಕ್ಷೆ, ಸೊಳ್ಳೆ ನಿಯಂತ್ರಣದ ಜತೆಗೆ ಮನೆಮನೆಗೆ ತೆರಳಿ ಆರೋಗ್ಯ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. ಈ ನಡುವೆ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಅವರು, ಜನರಿಗೆ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಪ್ರತಿ 15 ದಿನಗಳಿಗೊಮ್ಮೆ ನೀರಿನ ಮೂಲಗಳಲ್ಲಿ ಕಡ್ಡಾಯವಾಗಿ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ | Uttara Kannada News: ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ, 12 ಕಾಳಜಿ ಕೇಂದ್ರಗಳಲ್ಲಿ 437 ಜನರಿಗೆ ಆಸರೆ

ಕಲುಷಿತ ನೀರಿನಿಂದ ಯಾವುದೇ ತೊಂದರೆ ಉಂಟಾದರೆ ಸಂಬಂಧಪಟ್ಟ ಅಧಿಕಾರಿಯನ್ನು ನೇರ ಜವಾಬ್ದಾರಿ ಮಾಡಲಾಗುವುದು. ತುಕ್ಕು ಹಿಡಿದ ಹಳೆಯ ಪೈಪ್‌ ಬದಲಾವಣೆ ಮಾಡಬೇಕು. ಪ್ರತಿ 15 ದಿನಗಳಿಗೊಮ್ಮೆ ನೀರಿನ ಮೂಲದಲ್ಲಿ ಹಾಗೂ ವಿತರಣಾ ಬಿಂದುವಿನಲ್ಲಿನ ನೀರಿನ ಗುಣಮಟ್ಟವನ್ನು ಪ್ರಯೋಗಾಲಯದಲ್ಲಿ ಕಡ್ಡಾಯವಾಗಿ ಪರೀಕ್ಷೆ ಮಾಡಬೇಕು. ನೀರಿನ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾದ ಕಡೆಗಳಲ್ಲಿ ಹೊಸ ಮೂಲದಿಂದ ನೀರು ಪೂರೈಕೆ ಮಾಡಬೇಕು ಎಂದು ತಿಳಿಸಿದ್ದಾರೆ.

ಎಲ್ಲಾ ಜಿಲ್ಲೆಗಳಲ್ಲಿ ಆದಷ್ಟು ಬೇಗನೆ ಘನ ತ್ಯಾಜ್ಯ ವಿಲೇವಾರಿ ಘಟಕಗಳನ್ನು ಆರಂಭಿಸಬೇಕು. ಇನ್ನೂ 55 ಕಡೆಗಳಲ್ಲಿ ಘನತ್ಯಾಜ್ಯ ಘಟಕಗಳ ನಿರ್ಮಾಣ ಪ್ರಕ್ರಿಯೆ ನಡೆಯುತ್ತಿದ್ದು, ಆದಷ್ಟು ಬೇಗನೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಬೇಕು. ತ್ಯಾಜ್ಯ ನೀರು ಶುದ್ಧೀಕರಣ ಘಟಕ ಕಾರ್ಯಾರಂಭಿಸುವ ಮೂಲಕ ಕೊಳಚೆ ನೀರು ನೇರವಾಗಿ ಕೆರೆಗಳಿಗೆ ಸೇರುವುದನ್ನು ತಪ್ಪಿಸಬೇಕು. ಮೈಸೂರಿನ ದಳವಾಯಿ ಕೆರೆಗೆ ಕೊಳಚೆ ನೀರು ಸೇರುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಹೇಳಿದ್ದಾರೆ.

Continue Reading
Advertisement
Ramniwas Rawat
ದೇಶ11 mins ago

Ramniwas Rawat: 15 ನಿಮಿಷದಲ್ಲಿ 2 ಬಾರಿ ಸಚಿವನಾಗಿ ಬಿಜೆಪಿ ಶಾಸಕ ಪ್ರಮಾಣವಚನ; ಎಲ್ಲಾಯ್ತು ಎಡವಟ್ಟು?

Paris Olympics 2024
ಕ್ರೀಡೆ22 mins ago

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್‌ಗೆ ಸಿಂಧು, ಶರತ್ ಕಮಲ್ ಭಾರತದ ಧ್ವಜಧಾರಿ

MLA Satish Sail visited the flood affected areas of Karwar taluk
ಉತ್ತರ ಕನ್ನಡ34 mins ago

Uttara Kannada News: ಕಾರವಾರ ತಾಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಸತೀಶ ಕೆ. ಸೈಲ್ ಭೇಟಿ

Union Budget 2024
ದೇಶ54 mins ago

Union Budget 2024: ಕೇಂದ್ರ ಬಜೆಟ್;‌ 8ನೇ ವೇತನ ಆಯೋಗ ಸೇರಿ 7 ಬೇಡಿಕೆ ಇಟ್ಟ ಸರ್ಕಾರಿ ನೌಕರರು!

Dengue Cases
ಕರ್ನಾಟಕ1 hour ago

Dengue Cases: ರಾಜ್ಯದಲ್ಲಿ ಸೋಮವಾರ 197 ಡೆಂಗ್ಯೂ ಕೇಸ್‌ಗಳು ಪತ್ತೆ, ಒಬ್ಬರ ಸಾವು

ಕ್ರೀಡೆ1 hour ago

Kuldeep Yadav: ಕುಲ್​ದೀಪ್ ಯಾದವ್​ರನ್ನು​ ಅಭಿನಂದಿಸಿದ ಯೋಗಿ ಆದಿತ್ಯನಾಥ್

Channappa Gowda Mosambi elected as new District President of Akhila bharata Veerashaiva Mahasabha
ಯಾದಗಿರಿ1 hour ago

Yadgiri News: ಅಖಿಲ ಭಾರತ ವೀರಶೈವ ಮಹಾಸಭಾ ನೂತನ ಜಿಲ್ಲಾಧ್ಯಕ್ಷರಾಗಿ ಚನ್ನಪ್ಪಗೌಡ ಮೋಸಂಬಿ ಅವಿರೋಧ ಆಯ್ಕೆ

Maharashtra Rain
Latest2 hours ago

Maharashtra Rain: ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ; ರಾಯಗಢ ಕೋಟೆಯಲ್ಲಿ ಪ್ರವಾಸಿಗರಿಗೆ ಪ್ರಾಣ ಸಂಕಟ; ವಿಡಿಯೊ ನೋಡಿ

Money Guide
ಮನಿ-ಗೈಡ್2 hours ago

Money Guide: ಕಡಿಮೆ ಅವಧಿಯಲ್ಲಿ 1 ಕೋಟಿ ರೂ. ಗಳಿಸುವುದು ಹೇಗೆ? ಇಲ್ಲಿದೆ ಹೂಡಿಕೆಯ ಲೆಕ್ಕಾಚಾರ

land fraud
ಕರ್ನಾಟಕ2 hours ago

land fraud: ಭೂ ವಂಚನೆ ತಡೆಗೆ ಪಹಣಿ-ಆಧಾರ್‌ ಜೋಡಣೆ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ: ಸಿಎಂ ಸಿದ್ದರಾಮಯ್ಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect
ಮಳೆ5 hours ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ7 hours ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ9 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ10 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು11 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ1 day ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ1 day ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 day ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ2 days ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಟ್ರೆಂಡಿಂಗ್‌