ಭವಿಷ್ಯ ಪ್ರಶ್ನೋತ್ತರ | ನನಗೆ ಸರಿಯಾದ ಕೆಲಸ ಇಲ್ಲ, ಮುಂದೆ ಸರ್ಕಾರಿ ಕೆಲಸ ಸಿಗಬಹುದೇ? - Vistara News

ಪ್ರಮುಖ ಸುದ್ದಿ

ಭವಿಷ್ಯ ಪ್ರಶ್ನೋತ್ತರ | ನನಗೆ ಸರಿಯಾದ ಕೆಲಸ ಇಲ್ಲ, ಮುಂದೆ ಸರ್ಕಾರಿ ಕೆಲಸ ಸಿಗಬಹುದೇ?

ಭವಿಷ್ಯ ಪ್ರಶ್ನೋತ್ತರ | ಇದು ಜ್ಯೋತಿಷ್ಯದ ಹೊಸ ಅಂಕಣ. ಇಲ್ಲಿ ನಮ್ಮ ಓದುಗರು ಕೇಳುವ ಪ್ರಶ್ನೆಗಳಿಗೆ ರಾಜಗುರು ಬಿ. ಎಸ್‌. ದ್ವಾರಕನಾಥ್‌ ಅವರು ಉತ್ತರಿಸಲಿದ್ದಾರೆ, ಪರಿಹಾರ ಸೂಚಿಸಲಿದ್ದಾರೆ. ಇಲ್ಲಿ ನೀವೂ ಪ್ರಶ್ನೆ ಕೇಳಬಹುದು.

VISTARANEWS.COM


on

ಭವಿಷ್ಯ ಪ್ರಶ್ನೋತ್ತರ rajaguru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ರಶ್ನೆ: ಬಹಳ ದಿನಗಳಿಂದ ಹಣಕಾಸಿನ ಸಮಸ್ಯೆ ಇದೆ ಗುರೂಜಿ, ಇದು ಜಾಸ್ತಿಯಾಗಲು ಕಾರಣ ನನಗೆ ಉದ್ಯೋಗವಿಲ್ಲದ್ದು. ಎಲ್ಲೂ ಕೆಲ್ಸ ಸರಿಹೋಗುತ್ತಿಲ್ಲ. ಸರ್ಕಾರಿ ಕೆಲಸ ಸಿಗಬಹುದೇ?
ಜನ್ಮದಿನಾಂಕ : 22-05-1991 ನಕ್ಷತ್ರ: ಹುಬ್ಬಾ

ಪರಿಹಾರ: ಹುಬ್ಬಾ ನಕ್ಷತ್ರ ಸಿಂಹ ರಾಶಿಯವರಿಗೆ ಈಗ ತಾತ್ಕಾಲಿಕವಾಗಿ ಗುರು ಎಂಟನೇ ಮನೆಯಲ್ಲಿದ್ದಾನೆ. ಅಷ್ಟಮ ಗುರು ಈಗ ಯಾವ ಪ್ರಗತಿಯನ್ನೂ ಕೊಡುವುದಿಲ್ಲ. ಶನಿ ಈಗ ಚೆನ್ನಾಗಿದ್ದಾನೆ. ಹೀಗಾಗಿ ನೀವು ಸರ್ಕಾರಿ ಉದ್ಯೋಗ ಪಡೆಯಲು ಪ್ರಯತ್ನ ಪಡುತ್ತಲೇ ಇರಿ. ಏಪ್ರಿಲ್‌ ತಿಂಗಳಿನಲ್ಲಿ ನಿಮಗೆ ಕೆಲಸ ಬದಲಾವಣೆಯಾಗಿ, ಇಷ್ಟಾರ್ಥ ಸಿದ್ಧಿಯಾಗುತ್ತದೆ. ನೀವು ಅಂದುಕೊಂಡಿದ್ದೆಲ್ಲಾ ಈಡೇರಬೇಕಾದರೆ, ತ್ರಿಮೂರ್ತಿಗಳ ಸ್ವರೂಪನಾದ ಶ್ರೀ ಗುರು ದತ್ತಾತ್ರೇಯನು ನೆಲೆಸಿರುವ ಗಾಣಗಾಪುರಕ್ಕೆ ತೆರಳಿ ಅಲ್ಲಿ ದೇವರನ್ನು ದರ್ಶಿಸಿ, ತಮ್ಮ ಕೈಯಲ್ಲಾದ ಸೇವೆ, ಪೂಜೆಯನ್ನು ಮಾಡಿ. ಸಂಗಮಕ್ಕೆ ತೆರಳಿ ಧ್ಯಾನವನ್ನು ಮಾಡಿ ಬಂದಲ್ಲಿ, ನಿಮ್ಮ ಮನೋಕಾಮನೆಗಳು ಈಡೇರುವ ಕಾಲ ಬರುತ್ತದೆ, ಯಶಸ್ಸು ದೊರೆಯುತ್ತದೆ.

ನೀವೂ ಪ್ರಶ್ನೆ ಕೇಳಬಹುದು….…
ಇದು ವಿಸ್ತಾರನ್ಯೂಸ್‌ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್‌. ದ್ವಾರಕನಾಥ್‌ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ಇ-ಮೇಲ್‌ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕೇಳಲು ನಮ್ಮ ಇ-ಮೇಲ್‌ ವಿಳಾಸ: janasamparka@vistaranews.com

ಇದನ್ನೂ ಓದಿ | Horoscope Today | ಬುಧನ ವಕ್ರಿ ಸಂಚಾರ; ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

Job Alert: ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆ ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಲಿಮಿಟೆಡ್‌ 36 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 20. ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 70,000-1,00,000 ರೂ. ಮಾಸಿಕ ವೇತನ ದೊರೆಯಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆ ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಲಿಮಿಟೆಡ್‌ (Neyveli Lignite Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (NLC Recruitment 2024). ಸುಮಾರು 36 ಎಕ್ಸಿಕ್ಯೂಟಿವ್‌ ಹುದ್ದೆಗಳಿದ್ದು, ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 20 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಕ್ಸಿಕ್ಯೂಟಿವ್‌-ಆಪರೇಷನ್‌: 24 ಮತ್ತು ಎಕ್ಸಿಕ್ಯೂಟಿವ್‌-ಮೈಂಟೆನೆನ್ಸ್‌: 12 ಹುದ್ದೆಗಳಿವೆ.
ಎಕ್ಸಿಕ್ಯೂಟಿವ್‌-ಆಪರೇಷನ್‌ ಹುದ್ದೆಗೆ ಕೆಮಿಕಲ್/ ಸಿ&ಐ/ ಇ&ಐ/ ಇಸಿಇ/ ಎಲೆಕ್ಟ್ರಿಕಲ್/ ಇಇಇ/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ಎಕ್ಸಿಕ್ಯೂಟಿವ್‌-ಮೈಂಟೆನೆನ್ಸ್‌ ಹುದ್ದೆಗೆ ಸಿವಿಲ್/ ಕೆಮಿಕಲ್/ ಸಿ&ಐ/ ಇ&ಐ/ ಇಸಿಇ/ ಎಲೆಕ್ಟ್ರಿಕಲ್/ ಇಇಇ/ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು ಅರ್ಹರು.

ವಯೋಮಿತಿ ಮತ್ತು ಅರ್ಜಿ ಶುಲ್ಕ

Neyveli Lignite Corporation Limited recruitment ಅಧಿಸೂಚನೆ ಪ್ರಕಾರ ಗರಿಷ್ಠ ವಯೋಮಿತಿ 63 ವರ್ಷ. ಅರ್ಜಿ ಶುಲ್ಕವಾಗಿ ಮಾಜಿ ಯೋಧರು / ಎಸ್‌ಸಿ / ಎಸ್‌ಟಿ ವರ್ಗಕ್ಕೆ ಸೇರಿದವರು 354 ರೂ. ಮತ್ತು ಸಾಮಾನ್ಯ / ಇಡಬ್ಲ್ಯುಎಸ್‌ / ಒಬಿಸಿ ವಿಭಾಗದವರು 854 ರೂ. ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್‌ ಪಾವತಿ ಮಾರ್ಗ ಅನುಸರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 70,000-1,00,000 ರೂ. ಮಾಸಿಕ ವೇತನ ದೊರೆಯಲಿದೆ. ಒಂದು ವರ್ಷದ ಅವಧಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಆಯ್ಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಹೆಸರು ನೊಂದಾಯಿಸಿ.
  • NLC Executive Apply Online ಆಯ್ಕೆ ಕ್ಲಿಕ್‌ ಮಾಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಫೋಟೊಗಳನ್ನು ಸೂಚಿಸಿದ ಗಾತ್ರದಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಎಲ್ಲ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ. ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಅಪ್‌ಲೋಡ್‌ ಮಾಡಬೇಕಾದ ದಾಖಲೆಗಳು

  • ಫೋಟೊ ಹೈ ಕ್ವಾಲಿಟಿಯಲ್ಲಿದ್ದು, 2023ರ ಅಕ್ಟೋಬರ್‌ 1ರ ಬಳಿಕ ತೆಗೆದಿರಬೇಕು.
  • ಅತ್ಯುತ್ತಮ ಕ್ಲಾಲಿಟಿಯ ಅಭ್ಯರ್ಥಿಯ ಸಹಿಯ ಫೋಟೊ.
  • ಹುಟ್ಟಿದ ದಿನಾಂಕವನ್ನು ಖಾತರಿಪಡಿಸುವ ದಾಖಲೆ.
  • ಎಸ್ಸೆಸ್ಸೆಲ್ಸಿ / ಶೈಕ್ಷಣಿಕ ಪ್ರಮಾಣ ಪತ್ರ.
  • ಆಧಾರ್‌ ಕಾರ್ಡ್‌ನ ಪ್ರತಿ.
  • ಜಾತಿ ಸರ್ಟಿಫಿಕೆಟ್‌.
  • ಮಾಜಿ ಯೋಧರಾಗಿದ್ದರೆ ಅದರ ದಾಖಲೆ.
  • ಫೋಟೊ ಮತ್ತು ಸಹಿಯ ಫೋಟೊ JPEG ಫಾರ್ಮಾಟ್‌ನಲ್ಲಿರಬೇಕು.
  • ದಾಖಲೆಗಳು, ಡಾಕ್ಯುಮೆಂಟ್‌ JPEG ಅಥವಾ PDF ಫಾರ್ಮಾಟ್‌ನಲ್ಲಿರುವುದು ಕಡ್ಡಾಯ.

ಅಪೂರ್ಣ ಅಪ್ಲಿಕೇಷನ್‌ ತಿರಸ್ಕೃರಿಸಲಾಗುತ್ತದೆ. ಹೀಗಾಗಿ ಎಚ್ಚರಿಕೆಯಿಂದ ಭರ್ತಿ ಮಾಡಬೇಕು ಎಂದು ಪ್ರಕಟಣೆಯಲ್ಲಿ ಎಚ್ಚರಿಸಲಾಗಿದೆ.

ಇದನ್ನೂ ಓದಿ: Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಿ

Continue Reading

ಪ್ರಮುಖ ಸುದ್ದಿ

‌Bomb Threat: ಬಾಂಬ್‌ ಬೆದರಿಕೆ ಇಮೇಲ್ ಮೂಲ ಪತ್ತೆ, ದಿಲ್ಲಿಯ 100ಕ್ಕೂ ಅಧಿಕ ಶಾಲೆ ಕ್ಲೋಸ್

Bomb threat: ಇಂದು ಮುಂಜಾನೆ ದಿಲ್ಲಿಯ 100ಕ್ಕೂ ಅಧಿಕ ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇಮೇಲ್‌ ಬಂದಿತ್ತು. ಕೂಡಲೇ ಮಕ್ಕಳನ್ನು ತೆರವುಗೊಳಿಸಿ ಮನೆಗೆ ಕಳಿಸಲಾಗಿತ್ತು. ಆತಂಕಿತರಾದ ಇತರ ಶಾಲೆಗಳವರೂ ಮಕ್ಕಳನ್ನು ತರಗತಿಗಳಿಂದ ಮರಳಿ ಕಳಿಸಿದ್ದರು. ಇದೀಗ ಇಮೇಲ್‌ ಮೂಲ ಪತ್ತೆಹಚ್ಚಲಾಗಿದೆ.

VISTARANEWS.COM


on

bomb threat delhi ncr schools
Koo

ಹೊಸದಿಲ್ಲಿ: ದೆಹಲಿ (New Delhi) ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದ (NCR) ಸುಮಾರು 100 ಶಾಲೆಗಳಿಗೆ (Schools) ಕಳುಹಿಸಲಾದ ಬಾಂಬ್ ಬೆದರಿಕೆ (Bomb Threat) ಇಮೇಲ್‌ಗಳ ಮೂಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಶಾಲೆಗಳು ಬಾಂಬ್‌ ಬೆದರಿಕೆಯ ಹಿನ್ನೆಲೆಯಲ್ಲಿ ಮಕ್ಕಳನ್ನು ಮರಳಿ ಮನೆಗೆ ಕಳುಹಿಸಿವೆ.

“ದೆಹಲಿ ಪೊಲೀಸರು ಇಮೇಲ್‌ಗಳ (Email threat) ಮೂಲವನ್ನು ಪತ್ತೆಹಚ್ಚಿದ್ದಾರೆ. ಪೊಲೀಸರು ಜಾಗರೂಕರಾಗಿದ್ದಾರೆ, ಲೀಡ್‌ಗಳನ್ನು ಪಡೆಯುತ್ತಿದ್ದಾರೆ ಮತ್ತು ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ನಾನು ದೆಹಲಿಯ ನಾಗರಿಕರಿಗೆ ಭರವಸೆ ನೀಡುತ್ತಿದ್ದೇನೆ” ಎಂದು ಹೊಸದಿಲ್ಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಹೇಳಿದ್ದಾರೆ.

ಇಂದು ಮುಂಜಾನೆ ದಿಲ್ಲಿಯ 100ಕ್ಕೂ ಅಧಿಕ ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇಮೇಲ್‌ ಬಂದಿತ್ತು. ಕೂಡಲೇ ಮಕ್ಕಳನ್ನು ತೆರವುಗೊಳಿಸಿ ಮನೆಗೆ ಕಳಿಸಲಾಗಿತ್ತು. ಆತಂಕಿತರಾದ ಇತರ ಶಾಲೆಗಳವರೂ ಮಕ್ಕಳನ್ನು ತರಗತಿಗಳಿಂದ ಮರಳಿ ಕಳಿಸಿದ್ದರು.

ವಿದೇಶಿ ಸರ್ವರ್‌ಗಳ ಮೂಲಕ ಡೇಟಾವನ್ನು ರೂಟ್ ಮಾಡುವ ಮತ್ತು ದಾರಿ ತಪ್ಪಿಸುವ ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್ (ವಿಪಿಎನ್) ಅನ್ನು ಬಳಸಿಕೊಂಡು ಇಮೇಲ್‌ನ ಮೂಲವನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸ್ವಲ್ಪ ಸಮಯ ತೆಗೆದುಕೊಂಡರು. ವಿಪಿಎನ್ ಟ್ರಾಫಿಕ್ ಅನ್ನು ಹಿಂತೆಗೆದುಕೊಂಡ ನಂತರ ಮತ್ತು ಇಮೇಲ್‌ನ ಮೂಲವನ್ನು ಕಂಡುಹಿಡಿದ ನಂತರ ಪೊಲೀಸರು ಇಂಟರ್ನೆಟ್ ಪ್ರೋಟೋಕಾಲ್ (ಐಪಿ) ವಿಳಾಸವನ್ನು- ಅನನ್ಯ ಐಡೆಂಟಿಫೈಯರ್ ಅನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಪೊಲೀಸ್ ವಿಶೇಷ ಸೆಲ್‌ ಈ ಕುರಿತು ತನಿಖೆ ಪ್ರಾರಂಭಿಸಿದೆ. ಶೋಧದ ಸಂದರ್ಭದಲ್ಲಿ ಯಾವುದೇ ಶಾಲೆಯಲ್ಲಿ ಅನುಮಾನಾಸ್ಪದವಾದುದು ಏನೂ ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. “ನಾವು ಎಲ್ಲಾ ಶಾಲೆಗಳನ್ನು ಪರಿಶೀಲಿಸಿದ್ದೇವೆ ಮತ್ತು ಏನೂ ಕಂಡುಬಂದಿಲ್ಲ; ಭಯಪಡುವ ಅಗತ್ಯವಿಲ್ಲ” ಎಂದು ಹಿರಿಯ ಪೊಲೀಸ್ ಅಧಿಕಾರಿ ಕುಮಾರ್ ಮಹ್ಲಾ ಹೇಳಿದ್ದಾರೆ.

ಎಲ್‌ಜಿ ಸಕ್ಸೇನಾ ಅವರು ದೆಹಲಿ ಪೊಲೀಸ್ ಮುಖ್ಯಸ್ಥರಿಂದ ವಿವರವಾದ ತನಿಖೆಯನ್ನು ಕೋರಿದ್ದಾರೆ. ರಾಜಧಾನಿಯ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದ ನಂತರ ಸಕ್ಸೇನಾ ಅವರು ಉತ್ತರ ದೆಹಲಿಯ ಮಾಡೆಲ್ ಟೌನ್‌ನಲ್ಲಿರುವ ಡಿಎವಿ ಶಾಲೆಗೆ ಭೇಟಿ ನೀಡಿದರು.

“… ಪೋಷಕರು ಭಯಪಡಬೇಡಿ. ಶಾಲೆಗಳು ಮತ್ತು ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಆಡಳಿತದೊಂದಿಗೆ ಸಹಕರಿಸಬೇಕೆಂದು ನಾನು ವಿನಂತಿಸುತ್ತೇನೆ. ದುಷ್ಕರ್ಮಿಗಳು ಮತ್ತು ಅಪರಾಧಿಗಳನ್ನು ಬಿಡಲಾಗುವುದಿಲ್ಲ” ಎಂದು ಸಕ್ಸೇನಾ ಹೇಳಿದ್ದಾರೆ. ಬೆಳಗಿನ ಜಾವ 4.15ರ ಸುಮಾರಿಗೆ ಬಾಂಬ್‌ ಬೆದರಿಕೆ ಬಂದಿರುವ ಶಾಲೆಗಳಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ತೀವ್ರ ತಪಾಸಣೆ ನಡೆಸುತ್ತಿದ್ದಾರೆ.

“ಮುಂಜಾನೆ 4:15ರ ಸುಮಾರಿಗೆ ಹಲವಾರು ಶಾಲೆಗಳಿಗೆ ಒಂದೇ ಇಮೇಲ್ ಕಳುಹಿಸಲಾಗಿದೆ ಎಂಬ ಮಾಹಿತಿ ನಮಗೆ ಸಿಕ್ಕಿತು. ನಾವು ಕ್ರಮ ಕೈಗೊಂಡಿದ್ದೇವೆ. ಶಾಲೆಗಳನ್ನು ಮುಚ್ಚಿ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ. ಎಲ್ಲಾ ಶಾಲೆಗಳಲ್ಲಿ ತಪಾಸಣೆ ನಡೆಯುತ್ತಿದೆ. ನಮ್ಮ ತಾಂತ್ರಿಕ ವಿಭಾಗವು ತನಿಖೆ ನಡೆಸುತ್ತಿದೆ. ಪ್ರಾಥಮಿಕ ತನಿಖೆಯ ಮೂಲಕ ಇದೊಂದು ಸಾಮೂಹಿಕ ಇಮೇಲ್ ಎಂದು ಕಂಡುಬಂದಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ರೋಹಿತ್ ಮೀನಾ ತಿಳಿಸಿದ್ದಾರೆ.

ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿರುವುದರಿಂದ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದರು. “ಬಾಂಬ್ ಬಗ್ಗೆ ನಮಗೆ ಇಮೇಲ್ ಬಂದಿದೆ. ನಮ್ಮಲ್ಲಿ ವಿದ್ಯಾರ್ಥಿಗಳಿರುವುದರಿಂದ ನಾವು ರಿಸ್ಕ್‌ ತೆಗೆದುಕೊಳ್ಳಲು ಸಾಧ್ಯವಿಲ್ಲ. ಪೊಲೀಸರಿಗೆ, ಪೋಷಕರಿಗೆ ತಿಳಿಸಲಾಗಿದೆ ಮತ್ತು ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ” ಎಂದು ದೆಹಲಿ ಪಬ್ಲಿಕ್ ಸ್ಕೂಲ್ ನೋಯ್ಡಾದ ಪ್ರಾಂಶುಪಾಲರಾದ ಕಾಮಿನಿ ಭಾಸಿನ್ ಹೇಳಿದರು.

ಇದನ್ನೂ ಓದಿ: Bomb Threat: ದಿಲ್ಲಿಯ ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್‌ ಬೆದರಿಕೆ, ಮಕ್ಕಳ ತೆರವು

Continue Reading

ಕ್ರೈಂ

Hassan Pen Drive Case: SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

Hassan Pen Drive Case: ವಿಡಿಯೊ ಲೀಕ್‌ ವೇಳೆ ಸಂತ್ರಸ್ತೆಯರ ಮುಖವನ್ನು ಬ್ಲರ್‌ ಮಾಡಲಾಗಿಲ್ಲ. ಇದರಿಂದ ಅದೆಷ್ಟೋ ಹೆಣ್ಣು ಮಕ್ಕಳು ಹೊರಗಡೆ ತಲೆ ಎತ್ತಿ ತಿರುಗುವಂತೆ ಆಗುತ್ತಿಲ್ಲ. ಈ ಮಧ್ಯೆ ಎಸ್‌ಐಟಿ ಅಧಿಕಾರಿಗಳು ತನಿಖೆಗಾಗಿ ಅವರನ್ನು ಭೇಟಿ ಮಾಡಿ ಹೇಳಿಕೆ ಪಡೆಯಲು ಹೋದರೆ ಮೊದಲೇ ನೊಂದಿರುವ ನಮ್ಮನ್ನು ಮತ್ತಷ್ಟು ನೋಯಿಸಬೇಡಿ. ಈ ಬಗ್ಗೆ ನಮ್ಮ ಬಳಿ ಏನನ್ನೂ ಕೇಳಬೇಡಿ. ಇದು ನಮ್ಮ ಜೀವನದ ಪ್ರಶ್ನೆಯಾಗಿದೆ. ಅಷ್ಟಕ್ಕೂ ನೀವು ಒತ್ತಾಯ ಮಾಡಿದ್ದೇ ಆದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾದೀತು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Hassan Pen Drive Case Victims reluctance to sit investigation and Suicide threat if he is disturbed by trial
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಎಸ್‌ಐಟಿಗೆ ಮಾಹಿತಿ ನೀಡಲು ಸಂತ್ರಸ್ತೆಯರು ಹಿಂದೇಟು ಹಾಕುತ್ತಿದ್ದಾರೆ. “ನನಗೆ ತೊಂದರೆ ಕೊಟ್ಟರೆ ಸೂಸೈಡ್ ಮಾಡಿಕೊಳ್ಳುತ್ತೇವೆ” ಎಂದು ಬೆದರಿಕೆ ಒಡ್ಡುತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ.

ಪ್ರಜ್ವಲ್‌ ರೇವಣ್ಣ ಒಬ್ಬ ಸಂಸದ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ವಂಶದ ಕುಡಿ. ಈ ಹಿನ್ನೆಲೆಯಲ್ಲಿ ಇದೊಂದು ಹೈ ಪ್ರೊಫೈಲ್‌ ಕೇಸ್‌ ಆಗಿದೆ. ಇದರ ಜತೆಗೆ ವಿಡಿಯೊ ಲೀಕ್‌ ವೇಳೆ ಸಂತ್ರಸ್ತೆಯರ ಮುಖವನ್ನು ಬ್ಲರ್‌ ಮಾಡಲಾಗಿಲ್ಲ. ಇದರಿಂದ ಅದೆಷ್ಟೋ ಹೆಣ್ಣು ಮಕ್ಕಳು ಹೊರಗಡೆ ತಲೆ ಎತ್ತಿ ತಿರುಗುವಂತೆ ಆಗುತ್ತಿಲ್ಲ. ಈ ಮಧ್ಯೆ ಎಸ್‌ಐಟಿ ಅಧಿಕಾರಿಗಳು ತನಿಖೆಗಾಗಿ ಅವರನ್ನು ಭೇಟಿ ಮಾಡಿ ಹೇಳಿಕೆ ಪಡೆಯಲು ಹೋದರೆ ಮೊದಲೇ ನೊಂದಿರುವ ನಮ್ಮನ್ನು ಮತ್ತಷ್ಟು ನೋಯಿಸಬೇಡಿ. ಈ ಬಗ್ಗೆ ನಮ್ಮ ಬಳಿ ಏನನ್ನೂ ಕೇಳಬೇಡಿ. ಇದು ನಮ್ಮ ಜೀವನದ ಪ್ರಶ್ನೆಯಾಗಿದೆ. ಅಷ್ಟಕ್ಕೂ ನೀವು ಒತ್ತಾಯ ಮಾಡಿದ್ದೇ ಆದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾದೀತು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

ದೂರುದಾರೆ ಹೊರತುಪಡಿಸಿ ಉಳಿದವರು ನೋ ರೆಸ್ಪಾನ್ಸ್!

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವಿಡಿಯೊದಲ್ಲಿರುವ ಮಹಿಳೆಯರನ್ನು ಸಂಪರ್ಕಿಸಲು ಎಸ್‌ಐಟಿ ತಂಡವು ಸಾಕಷ್ಟು ಪ್ರಯತ್ನಪಟ್ಟಿದೆ. ಎಷ್ಟೇ ಪ್ರಯತ್ನ ಪಟ್ಟರೂ ಸಂತ್ರಸ್ತೆಯರು ಮಾತ್ರ ಇವರಿಗೆ ಸ್ಪಂದಿಸುತ್ತಿಲ್ಲ. ನಾವು ಏನೂ ಹೇಳಲ್ಲ, ಏನನ್ನೂ ಕೇಳಬೇಡಿ ಎಂದು ಸಂತ್ರಸ್ತೆಯರು ಹೇಳುತ್ತಿದ್ದಾರೆ.

ನಾವೇನು ದೂರು ಕೊಟ್ಟಿಲ್ಲ, ನಮ್ಮನ್ನು ಯಾಕೆ ಎಳೆದು ತರುತ್ತೀರಿ? ನಮ್ಮನ್ನು ನಮ್ಮ ಪಾಡಿಗೆ ಬಿಟ್ಟುಬಿಡಿ ಎಂದು ಹೇಳುತ್ತಿರುವುದರಿಂದ ಎಸ್‌ಐಟಿ ತನಿಖೆಗೆ ಸ್ವಲ್ಪ ಹಿನ್ನಡೆಯಾಗಿದೆ. ಹೀಗಾಗಿ ಸದ್ಯಕ್ಕೆ ದೂರುದಾರೆ ಸಂತ್ರಸ್ತೆಯ ಮಾಹಿತಿ ಆಧರಿಸಿ ತನಿಖೆಯನ್ನು ಮುನ್ನಡೆಸುವ ತೀರ್ಮಾನಕ್ಕೆ ಬರಲಾಗಿದೆ.

ಮೇ 3ರಂದು ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ, ಬಂದ ತಕ್ಷಣ ಎಸ್‌ಐಟಿ ವಶಕ್ಕೆ?

ಅಶ್ಲೀಲ ವಿಡಿಯೋದಲ್ಲಿರುವ (Obscene video) ಪ್ರಧಾನ ಆರೋಪಿ, ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ (Prajwal Revanna) ಮೇ 3ರಂದು ತಡರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಗೊತ್ತಾಗಿದೆ. ಸದ್ಯ ಅವರು ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿದ್ದಾರೆ.

ಲುಪ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಮೇ 3ರ ಪ್ರಯಾಣಕ್ಕೆ ಪ್ರಜ್ವಲ್‌ ಟಿಕೆಟ್ ಬುಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮೇ 3 ಮಧ್ಯರಾತ್ರಿ ಕೆಂಪೇಗೌಡ ಏರ್‌ಪೋರ್ಟ್‌ಗೆ ಅವರು ಆಗಮಿಸಬಹುದು. ಮೇ 4ರಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಅಥವಾ ಅವರು ವಿಮಾನದಿಂದ ಇಳಿದ ಕೂಡಲೇ ಅವರನ್ನು ವಿಶೇಷ ತನಿಖಾ ತಂಡ (SIT) ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಮೊದಲ ಹಂತದ ಮತದಾನದ ದಿನವೇ ಪ್ರಜ್ವಲ್‌ ಅವರು ದೇಶ ಬಿಟ್ಟು ತೆರಳಿದ್ದರು. ಬ್ಯುಸಿನೆಸ್‌ ವೀಸಾವನ್ನು ಅವರು ಹೊಂದಿದ್ದಾರೆ. ಟೂರಿಸ್ಟ್‌ ವೀಸಾದಲ್ಲಿ ಅವರು ಜರ್ಮನಿಗೆ ತೆರಳಿದ್ದು, ಇದರ ಅವಧಿ 90 ದಿನಗಳ ಕಾಲ ಚಾಲೂ ಇರುತ್ತದೆ. CRPC41A ಸೆಕ್ಷನ್‌ ಪ್ರಕಾರ, ಅವರು ನೋಟಿಸ್‌ಗೆ ಸ್ಪಂದಿಸಿ ಹಾಜರಾಗದೆ ಇದ್ದರೆ ಅವರನ್ನು ಬಂಧಿಸಬಹುದಾಗಿದೆ.

ಏಕಾಏಕಿ ಬಂಧನವಿಲ್ಲ: ಪರಮೇಶ್ವರ್‌

ಆದರೆ ಹಾಗೆ ಏಕಾಏಕಿ ಯಾರನ್ನೂ ಬಂಧಿಸಲು ಮುಂದಾಗುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಇಂದು ಬೆಳಗ್ಗೆ ಹೇಳಿದ್ದಾರೆ. “ಅದಕ್ಕೆ ಪುರಾವೆಗಳು, ದೂರು, ದೂರಿನಲ್ಲಿ ಏನು ಹೇಳಿರುತ್ತಾರೆ ಅನ್ನೋದು ಮುಖ್ಯ. ಯಾವ ಸೆಕ್ಷನ್ ಬರುತ್ತೆ, ಅದರಲ್ಲಿ ‌ಅರೆಸ್ಟ್ ಮಾಡಬಹುದಾ, ಬೇಲ್ ಕೇಸಾ, ನಾನ್ ಬೇಲ್ ಕೇಸಾ ಅಂತ ನೋಡಬೇಕು. ಅದಕ್ಕೆ 41A CRPC ಸೆಕ್ಷನ್ ಅಡಿ‌ ನೋಟಿಸ್ ಕೊಟ್ಟಿದ್ದಾರೆ. ಅವರು 24 ಗಂಟೆ ಒಳಗೆ ಒಂದು ಹಾಜರಾಗಬೇಕು. ಹಾಜರಾಗದೇ ಹೋದರೆ SITಯವರು ಮುಂದಿನ ಪ್ರಕ್ರಿಯೆ ಮಾಡ್ತಾರೆ” ಎಂದಿದ್ದಾರೆ.

ಪ್ರಜ್ವಲ್‌ ತನಿಖೆ ಮುಖ್ಯ

ಸದ್ಯ ಪ್ರಜ್ವಲ್ ತನಿಖೆ ಎಸ್‌ಐಟಿಗೆ ತುಂಬಾ ಮುಖ್ಯವಾಗಿದೆ. ಎ1 ರೇವಣ್ಣ ಆಗಿದ್ದರೂ ಪ್ರಕರಣಗಳು ಹೊರಬಂದಿದ್ದು ಪ್ರಜ್ವಲ್ ರೇವಣ್ಣ ವಿಡೀಯೋಗಳಿಂದ ಆಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಸ್ಟೇಟ್‌ಮೆಂಟ್ ಇಲ್ಲಿ ಅಗತ್ಯವಿದೆ. ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna) ಹಾಗೂ ಪ್ರಜ್ವಲ್ ರೇವಣ್ಣ (Hassan MP Prajwal Revanna) ಇವರಿಬ್ಬರ ಹೊಳೆನರಸೀಪುರ ಮನೆಯ ಬಾಗಿಲಿಗೆ ಇಂದು ನೊಟೀಸ್ (Notice) ಅನ್ನು ಎಸ್‌ಐಟಿ (SIT) ಟೀಂ ಅಂಟಿಸಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಯ ಬಾಗಿಲಿಗೆ ನೊಟೀಸ್ ಅಂಟಿಸಿದ್ದು, ಎಸ್‌ಐಟಿ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ತನಿಖೆಗೆ ಬೇಕು ಎಂದರೆ ಪ್ರಜ್ವಲ್ ಹಾಜರಾಗ್ತಾನೆ ಎಂದು ಎಚ್.ಡಿ ರೇವಣ್ಣ ಹೇಳಿದ್ದಾರೆ. ಪ್ರಜ್ವಲ್ ಬಾರದಿದ್ದಲ್ಲಿ ತನಿಖೆ ನಿಧಾನಗತಿಯಲ್ಲಿ ಸಾಗಬಹುದು. ಆದರೆ ಈಗಾಗಲೇ ಎಸ್‌ಐಟಿ ವಿಚಾರಣೆ ನೋಟಿಸ್‌ ಜಾರಿ ಮಾಡಿದೆ. ಇದಕ್ಕೆ ಉತ್ತರಿಸದೆ ತಲೆ ಮರೆಸಿಕೊಂಡರೆ ಆರೋಪಿಗೆ ಇಂಟರ್‌ಪೋಲ್ ಮುಖಾಂತರ ರೆಡ್ ಕಾರ್ನರ್ ಅಥವಾ ಲುಕ್ ಔಟ್ ನೋಟಿಸ್ ಜಾರಿ ಮಾಡುವ ಸಾಧ್ಯತೆಯೂ ಎಸ್‌ಐಟಿ ಮುಂದಿದೆ.

ಈಗಾಗಲೇ ಡ್ರೈವರ್ ಕಾರ್ತಿಕ್‌ನನ್ನು ಎಸ್‌ಐಟಿ ವಿಚಾರಣೆಗೊಳಪಡಿಸಿದೆ. ಸಂತ್ರಸ್ತೆಯ ಹೇಳಿಕೆಯನ್ನೂ ದಾಖಲಿಸಿದೆ. ನಾಳೆ ಅಥವಾ ನಾಡಿದ್ದು CRPC 164 ಅಡಿಯಲ್ಲಿ ಸ್ಟೆಟ್ಮೆಂಟ್ ಪಡೆಯಲಿದೆ. ವಿಚಾರಣೆ ಬಳಿಕ ಕಾರ್ತಿಕ್ ಮೊಬೈಲ್ ಸೀಜ್ ಮಾಡಿ ಎಫ್ಎಸ್ಎಲ್‌ಗೆ ವಿಧಿವಿಜ್ಞಾನ ಪರಿಶೀಲನೆಗಾಗಿ ಕಳಿಸಲಾಗಿದೆ.

ಇದನ್ನೂ ಓದಿ: Hassan Pen Drive Case: ಹೊಳೆನರಸೀಪುರದ ಮನೆ ಬಾಗಿಲಿಗೆ ನೋಟಿಸ್‌ ಅಂಟಿಸಿ ಎಸ್‌ಐಟಿ ವಾಪಸ್!‌

ಹೋಮ ಮಾಡಿಸುತ್ತಿರುವ ರೇವಣ್ಣ

ತಮ್ಮ ವಿರುದ್ಧ ಎಸ್ಐಟಿ ತನಿಖೆ ಚುರುಕುಗೊಂಡಿರುವ ನಡುವೆ ರೇವಣ್ಣ ದೇವರು ದಿಂಡಿರ ಮೊರೆ ಹೋಗಿದ್ದಾರೆ. ಹೊಳೆನರಸೀಪುರದ ಅವರ ಮನೆಯಲ್ಲಿ ಹೋಮ ಹವನ ಮಾಡಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಎದುರಾದ ಸಂಕಷ್ಟ ನಿವಾರಣೆಗಾಗಿ ಮನೆಯೊಳಗೇ ಹೋಮ ಕುಂಡ ನಿರ್ಮಿಸಿ ಬೆಳಗ್ಗೆಯಿಂದ ಪೂಜೆ ಸಲ್ಲಿಸಲಾಗುತ್ತಿದೆ.

Continue Reading

ದೇಶ

LPG Price Cut: ತಿಂಗಳ ಆರಂಭದಲ್ಲೇ ಗುಡ್‌ನ್ಯೂಸ್‌; ಎಲ್‌ಪಿಜಿ ಬೆಲೆ 19 ರೂ. ಇಳಿಕೆ

LPG Price Cut: ಮೇ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು (OMCs) ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 19 ರೂ. ಕಡಿಮೆ ಮಾಡಿವೆ. ಇದರೊಂದಿಗೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 19 ರೂ. ಕಡಿತಗೊಂಡು 1825.50 ರೂ.ಗೆ ತಲುಪಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಪ್ರತಿ ತಿಂಗಳ 1ನೇ ತಾರೀಕಿನಂದು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ ರೀತಿಯ ಏರಿಳಿತಗಳು ಸಾಮಾನ್ಯವಾಗಿ ಇಂಧನ ವೆಚ್ಚಗಳು ಮತ್ತು ಮಾರುಕಟ್ಟೆ ಡೈನಾಮಿಕ್ಸ್ ಬದಲಾವಣೆಗಳಿಂದ ಪ್ರಭಾವಿತವಾಗಿರುತ್ತದೆ.

VISTARANEWS.COM


on

LPG Price Cut
Koo

ನವದೆಹಲಿ: ಮೇ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು (OMCs) ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 19 ರೂ. ಕಡಿಮೆ ಮಾಡಿವೆ (LPG Price Cut). ಇದರೊಂದಿಗೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 19 ರೂ. ಕಡಿತಗೊಂಡು 1,825.50 ರೂ.ಗೆ ತಲುಪಿದೆ.

ಇನ್ನು ದೆಹಲಿಯಲ್ಲಿ ಪರಿಷ್ಕೃತ ದರ 1,745.50 ರೂ. ಆಗಿದೆ. ಹಿಂದೆ 1,764.50 ರೂ. ಆಗಿತ್ತು. ಮುಂಬೈಯಲ್ಲಿಯೂ 19 ರೂ. ಇಳಿಕೆಯಾಗಿದ್ದು ಹೊಸ ಬೆಲೆಯನ್ನು 1,698.50 ರೂ.ಗೆ ನಿಗದಿಪಡಿಸಲಾಗಿದೆ. ಚೆನ್ನೈನಲ್ಲಿ 1,911 ರೂ., ಕೋಲ್ಕತ್ತಾದಲ್ಲಿ 20 ರೂ.ಗಳ ಕಡಿತದ ನಂತರ 1,859 ರೂ. ಇದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಪ್ರತಿ ತಿಂಗಳ 1ನೇ ತಾರೀಕಿನಂದು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ ರೀತಿಯ ಏರಿಳಿತಗಳು ಸಾಮಾನ್ಯವಾಗಿ ಇಂಧನ ವೆಚ್ಚಗಳು ಮತ್ತು ಮಾರುಕಟ್ಟೆ ಡೈನಾಮಿಕ್ಸ್ ಬದಲಾವಣೆಗಳಿಂದ ಪ್ರಭಾವಿತವಾಗಿರುತ್ತದೆ.

ಜಾಗತಿಕ ತೈಲ ಬೆಲೆಗಳು ಇತ್ತೀಚೆಗೆ ಕುಸಿದ ಹಿನ್ನೆಲೆಯಲ್ಲಿ ದರ ಇಳಿಕೆಯಾಗಿದೆ. ಅಮೆರಿಕದಲ್ಲಿ ಕಚ್ಚಾ ದಾಸ್ತಾನುಗಳ ಏರಿಕೆ ಮತ್ತು ಅಸ್ಥಿರ ಮಧ್ಯಪ್ರಾಚ್ಯ ಪ್ರದೇಶದಲ್ಲಿ ಸಂಭಾವ್ಯ ಕದನ ವಿರಾಮ ಒಪ್ಪಂದದ ಸುತ್ತ ಹೆಚ್ಚುತ್ತಿರುವ ಆಶಾವಾದದ ಕಾರಣದಿಂದ ಜಾಗತಿಕ ತೈಲ ಬೆಲೆಗಳು ಕುಸಿಯುತ್ತಿವೆ ಎಂದು ಮೂಲಗಳು ತಿಳಿಸಿವೆ.

ವಾಣಿಜ್ಯ ಎಲ್‌ಪಿಜಿ ಬೆಲೆಗಳ ಕಡಿತವು ಈ ಸಿಲಿಂಡರ್‌ಗಳನ್ನೇ ಅವಲಂಬಿಸಿರುವ ವ್ಯವಹಾರಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ. ಜಾಗತಿಕ ತೈಲ ಮಾರುಕಟ್ಟೆಯ ಪ್ರವೃತ್ತಿಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುವುದಾಗಿ ಮತ್ತು ದೇಶಾದ್ಯಂತದ ಗ್ರಾಹಕರಿಗೆ ನ್ಯಾಯಯುತ ಬೆಲೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಹೊಂದಾಣಿಕೆಗಳನ್ನು ಮಾಡುವುದಾಗಿ ಒಎಂಸಿಗಳು ಭರವಸೆ ನೀಡಿವೆ.

ಗೃಹಬಳಕೆಯ ಸಿಲಿಂಡರ್‌ ಬೆಲೆ ಯಥಾಸ್ಥಿತಿ

ಈ ಮಧ್ಯೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಇಳಿಕೆ ಅಥವಾ ಏರಿಕೆ ಆಗಿಲ್ಲ. ಬೆಂಗಳೂರಿನಲ್ಲಿ ಗೃಹಬಳಕೆಯ ಸಿಲಿಂಡರ್‌ ಬೆಲೆ 805.50 ರೂ. ಇದೆ.

ಇದನ್ನೂ ಓದಿ: LPG Aadhaar Link: ಎಲ್‌ಪಿಜಿ ಕನೆಕ್ಷನ್‌ಗೆ ಆಧಾರ್ ಲಿಂಕ್ ಮಾಡಿಸುವುದು ಹೇಗೆ? ಇಲ್ಲಿದೆ ಸುಲಭ ವಿಧಾನ

ತೈಲ ಮಾರುಕಟ್ಟೆ ಕಂಪನಿಗಳು ಹಿಂದಿನ ಘೋಷಣೆಯನ್ನು ಮಾರ್ಚ್ 1ರಂದು ಮಾಡಿದ್ದು, ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗಳ ದರಗಳನ್ನು ಹೆಚ್ಚಿಸಿದ್ದವು. ಆ ಸಮಯದಲ್ಲಿ, OMCಗಳು ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ಗ್ಯಾಸ್ ಸಿಲಿಂಡರ್ ಬೆಲೆಗಳಲ್ಲಿ 19 ಕೆಜಿ ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು ₹25ರಷ್ಟು ಹೆಚ್ಚಿಸಿದ್ದವು.

Continue Reading
Advertisement
Job Alert
ಉದ್ಯೋಗ7 mins ago

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

bomb threat delhi ncr schools
ಪ್ರಮುಖ ಸುದ್ದಿ7 mins ago

‌Bomb Threat: ಬಾಂಬ್‌ ಬೆದರಿಕೆ ಇಮೇಲ್ ಮೂಲ ಪತ್ತೆ, ದಿಲ್ಲಿಯ 100ಕ್ಕೂ ಅಧಿಕ ಶಾಲೆ ಕ್ಲೋಸ್

prajwal revanna actress swara bhasker angry government silence on prajwal revanna
ರಾಜಕೀಯ12 mins ago

Prajwal Revanna: ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ; ಮೋದಿ ವಿರುದ್ಧ ನಟಿಯ ಆಕ್ರೋಶ!

Hassan Pen Drive Case Victims reluctance to sit investigation and Suicide threat if he is disturbed by trial
ಕ್ರೈಂ14 mins ago

Hassan Pen Drive Case: SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

Koppala ZP CEO Rahul Ratnam Pandeya Spoke in Progress review meeting at kanakagiri
ಕೊಪ್ಪಳ19 mins ago

Koppala News: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಿಗುವಂತೆ ಕ್ರಮ ಕೈಗೊಳ್ಳಲು ಜಿ.ಪಂ ಸಿಇಒ ಸೂಚನೆ

LPG Price Cut
ದೇಶ29 mins ago

LPG Price Cut: ತಿಂಗಳ ಆರಂಭದಲ್ಲೇ ಗುಡ್‌ನ್ಯೂಸ್‌; ಎಲ್‌ಪಿಜಿ ಬೆಲೆ 19 ರೂ. ಇಳಿಕೆ

Ambedkar Statue in kalaburagi news
ಕಲಬುರಗಿ38 mins ago

Ambedkar Statue: ಅಂಬೇಡ್ಕರ್‌ ಪ್ರತಿಮೆ ಅಪಮಾನ ಕೇಸ್‌; ಜಾಮೀನು ಪಡೆದ ಆರೋಪಿ ಮನೆಗೆ ಕಲ್ಲು ತೂರಾಟ

gold rate today 18
ಚಿನ್ನದ ದರ56 mins ago

Gold Rate Today: ಬಂಗಾರ‌ ಇಂದೇ ತಗೊಳ್ಳಿ! ಚಿನ್ನದ ಬೆಲೆ ಭಾರೀ ಇಳಿಕೆ; ಇಂದು ಇಷ್ಟಿದೆ ನೋಡಿ

Delhi Congress
ರಾಜಕೀಯ59 mins ago

Delhi Congress: ದಿಲ್ಲಿ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು; ಪಕ್ಷಕ್ಕೆ ಗುಡ್‌ಬೈ ಹೇಳಿದ ಮಾಜಿ ಶಾಸಕರು

Duniya Vijay Visited Kolluru Shri Mookambika Devi Temple
ಸಿನಿಮಾ1 hour ago

Duniya Vijay: ಕೊಲ್ಲೂರಿನಲ್ಲಿ ʼಸ್ಯಾಂಡಲ್‌ವುಡ್‌ ಸಲಗʼವನ್ನು ಮುತ್ತಿಕೊಂಡ ಅಭಿಮಾನಿಗಳು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌