Horoscope Today | ದಕ್ಷಿಣಾಯನ ಪುಣ್ಯಕಾಲ ಇಂದು ಶುರು; ದ್ವಾದಶ ರಾಶಿಗಳ ಭವಿಷ್ಯ ಹೀಗಿದೆ - Vistara News

ಪ್ರಮುಖ ಸುದ್ದಿ

Horoscope Today | ದಕ್ಷಿಣಾಯನ ಪುಣ್ಯಕಾಲ ಇಂದು ಶುರು; ದ್ವಾದಶ ರಾಶಿಗಳ ಭವಿಷ್ಯ ಹೀಗಿದೆ

ಶುಭಕೃತ ನಾಮ ಸಂವತ್ಸರ, ಗ್ರೀಷ್ಮ ಋತು, ಆಷಾಢ ಮಾಸದ ಚತುರ್ಥಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ.

ತಿಥಿ: ಚತುರ್ಥಿ 10:48 ವಾರ:  ಭಾನುವಾರ
ನಕ್ಷತ್ರ: ಶತಭಿಷಾ 13:23 ಯೋಗ: ಸೌಭಾಗ್ಯ 17:47
ಕರಣ: ಬಾಲವ 10:48 ದಿನ ವಿಶೇಷ: ದಕ್ಷಿಣಾಯನ ಪುಣ್ಯಕಾಲ ಶುರು

ಸೂರ್ಯೋದಯ: 0೬.೦೩  ಸೂರ್ಯಾಸ್ತ: 07.೦೦

ರಾಹು ಕಾಲ : ಸಾಯಂಕಾಲ 4.30 ರಿಂದ 6.00
ಗುಳಿಕಕಾಲ:  ಸಾಯಂಕಾಲ 3.00 ರಿಂದ 10.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ಭಾವನಾತ್ಮಕವಾಗಿ ನೀವಿಂದು ಸ್ಥಿರವಾಗಿರುವುದಿಲ್ಲ. ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರಿಕೆ. ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಪ್ರತಿಫಲ ಸಿಗುವುದರ ಜೊತೆಗೆ ಪುರಸ್ಕಾರ ಸಿಗುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

Horoscope Today

ವೃಷಭ: ಕುಟುಂಬದ ಸದಸ್ಯರಿಗೆ ಸಂಬಂಧಿಗಳಿಂದ ಒಳ್ಳೆಯ ಸುದ್ದಿ ಬರುವುದು. ಆರ್ಥಿಕ ಪ್ರಗತಿ ಸಾಧಾರಣ, ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಮನೆಯಲ್ಲಿ  ಶುಭ ಕಾರ್ಯಗಳ ಕುರಿತು ಚರ್ಚೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ಮಿಥುನ: ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡುವಂತೆ ಮಾಡುವುದು. ಆತುರದ ತಿರ್ಮಾನ, ಮಾತುಗಳು ಅಪಾಯ ತಂದಿತು ಎಚ್ಚರಿಕೆ. ಆರೋಗ್ಯ ಕೊಂಚ ಮಟ್ಟಿಗೆ ಹದಗೆಡುವ ಸಾಧ್ಯತೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ. ಮನೆಯವರ ಧೈರ್ಯದ ಮಾತುಗಳು ಮನಸ್ಸಿಗೆ ಸಂತೋಷ ನೆಮ್ಮದಿ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ಕಟಕ: ಅತಿಯಾದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ. ಸೂಕ್ತ ವ್ಯಕ್ತಿಗಳ ಬೆಂಬಲದಿಂದ ಹೂಡಿಕೆ ವ್ಯವಹಾರದಲ್ಲಿ ತೊಡುಗುವ ಸಾಧ್ಯತೆ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯುವಿರಿ. ಸಂಗಾತಿ ನಿಮ್ಮ ಮನಸ್ಸಿಗೆ ಮುದ ನೀಡುವಳು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ಸಿಂಹ: ವರ್ತನೆಯಲ್ಲಿ ಬದಲಾವಣೆ, ಹಿರಿಯರ ಆಶೀರ್ವಾದದ
ಬಲದಿಂದ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಭೇಟಿ ಮಾಡಿ ಸ್ವಾಂತನ ಹೇಳಬಹುದು. ದೀಡಿರ್ ಪ್ರಯಾಣ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

Horoscope Today

ಕನ್ಯಾ: ಒತ್ತಡದ ಕಾರ್ಯ ಆಯಾಸವನ್ನುಂಟು ಮಾಡುವುದು. ಕುಟುಂಬದ ಸದಸ್ಯರ ಅವಶ್ಯಕತೆಗಾಗಿ ಅನಗತ್ಯ ಖರ್ಚು. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಸಾಧ್ಯತೆ. ಇದರಮದ್ಯೆ ಕುಟುಂಬದ ಸದಸ್ಯರು ನಿಮ್ಮ ಮುಂದೆ ಸಮಸ್ಯೆ ಹಂಚಿಕೊಳ್ಳುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ತುಲಾ: ಕೈಗೊಂಡ ಧಾರ್ಮಿಕ ಕಾರ್ಯಗಳು ಮನಸ್ಸಿಗೆ ಸಮಾಧಾನ ತರುವುದು. ಅಗತ್ಯಕ್ಕೆ ತಕ್ಕಂತೆ ಖರ್ಚು. ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿ ಅಚ್ಚರಿ ತರುವುದು, ಕೋಪದಲ್ಲಿ ಮಾತಿಗೆ ಇಳಿಯುವುದರಿಂದ ಕಠಿಣ ಪರಿಸ್ಥಿತಿ ನಿರ್ಮಾಣ ಮಾಡುವುದು. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ವೃಶ್ಚಿಕ: ಕಠಿಣ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಸಿದ್ಧರಾಗುವಿರಿ. ಭಾವನಾತ್ಮಕ ನಿರ್ಧಾರ ಕೈಗೊಳ್ಳುವ ಭರದಲ್ಲಿ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವುದು ಬೇಡ. ಅಜಾಗೃತ ಕಾರ್ಯ ನಿಮಗೆ ಆರ್ಥಿಕ ನಷ್ಟ ಉಂಟು ಮಾಡಬಹುದು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

Horoscope Today

ಧನಸ್ಸು: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕುಟುಂಬದ ಸದಸ್ಯರ ವರ್ತನೆಯಿಂದ ಕೋಪಗೊಳ್ಳುವ ಸಾಧ್ಯತೆ. ಸಂಬಂಧಿಕರಿಂದ ವ್ಯಾಜ್ಯ ಉಂಟಾಗುವ ಸಾಧ್ಯತೆ. ಆತುರದ ಮಾತುಗಳು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

Horoscope Today

ಮಕರ: ಜೀವನದಲ್ಲಿ ಹೊಸ ಪಾಠ ಕಲಿಯುವಿರಿ. ಕೌಟುಂಬಿಕ ಒತ್ತಡ ನಿಮ್ಮ ಮನಸ್ಸಿಗೆ ನೋವುಂಟು ಮಾಡುವ ಸಾಧ್ಯತೆ. ಕೋಪದಲ್ಲಿ ಆಡಿದ ಮಾತುಗಳ ಮನವರಿಕೆ ಆಗುವುದು. ಆರೋಗ್ಯದ ಕಡೆಗೆ ಗಮನ ಹರಿಸಿ. ವೈದ್ಯರ ಸಲಹೆ ಪಡೆಯುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

Horoscope Today

ಕುಂಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ,ಕೀರ್ತಿ ಸಿಗುವುದು. ದಿನದ ಮಟ್ಟಿಗೆ ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ. ಗೌಪ್ಯ ವಿಷಯಗಳನ್ನು ಹಂಚಿಕೊಂಡು ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

Horoscope Today

ಮೀನ: ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ಸಮಾಧಾನದ ಮಾತುಗಳು ಸೂಕ್ತ ವ್ಯಕ್ತಿಗಳಿಂದ ಸಿಗಲಿವೆ. ನಿಮ್ಮ ವರ್ತನೆಯಿಂದ ಕುಟುಂಬದ ಸದಸ್ಯರು ಕೋಪಗೊಳ್ಳವ ಸಾಧ್ಯತೆ. ಹಣಕಾಸು ಪ್ರಗತಿ ಸಾಧಾರಣ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅವಶ್ಯಕ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | Karka Sankranti 2022 | ಇಂದು ಕಟಕ ರಾಶಿಗೆ ಸೂರ್ಯನ ಸಂಚಾರ; ತಿಳಿಯಿರಿ ನಿಮ್ಮ ಭವಿಷ್ಯದ ವಿಚಾರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Hijab Ban: ತರಗತಿಯಲ್ಲಿ ಹಿಜಾಬ್‌, ಬುರ್ಖಾ ನಿಷೇಧ; ಕಾಲೇಜು ಆದೇಶ ಎತ್ತಿಹಿಡಿದ ಹೈಕೋರ್ಟ್‌

Hijab Ban: ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸುವುದು ಅವರ ಆಯ್ಕೆ ಹಾಗೂ ವೈಯಕ್ತಿಕ ವಿಚಾರವಾಗಿದೆ ಎಂದು ಮುಸ್ಲಿಂ ವಿದ್ಯಾರ್ಥಿನಿಯರ ಪರ ವಕೀಲ ವಾದ ಮಂಡಿಸಿದರು. ಕಾಲೇಜಿನಲ್ಲಿ ಯಾವುದೇ ಧರ್ಮ, ಜಾತಿ, ಸಮುದಾಯವನ್ನು ಗಮನಿಸಿದೆ, ಎಲ್ಲರಿಗೂ ಅನ್ವಯವಾಗುವಂತೆ ಆದೇಶ ಹೊರಡಿಸಲಾಗಿದೆ ಎಂದು ಕಾಲೇಜು ಆಡಳಿತ ಮಂಡಳಿ ಪರ ವಕೀಲ ತಿಳಿಸಿದರು. ಕೊನೆಗೆ ನ್ಯಾಯಾಲಯವು, ಆಡಳಿತ ಮಂಡಳಿ ತೀರ್ಮಾನವನ್ನು ಎತ್ತಿಹಿಡಿಯಿತು.

VISTARANEWS.COM


on

Hijab Ban
Koo

ಮುಂಬೈ: ಕರ್ನಾಟಕದಂತೆ ಮಹಾರಾಷ್ಟ್ರದಲ್ಲೂ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್‌, ಬುರ್ಖಾ ಧರಿಸುವ ಕುರಿತು ವಿವಾದ (Hijab Row) ಭುಗಿಲೆದ್ದಿದೆ. ಇದರ ಬೆನ್ನಲ್ಲೇ, ಕಾಲೇಜಿನಲ್ಲಿ ಹಿಜಾಬ್‌, ಬುರ್ಖಾ ನಿಷೇಧಿಸಿದ (Hijab Ban) ಮುಂಬೈ ಮೂಲದ ಕಾಲೇಜಿನ ಆದೇಶವನ್ನು ಬಾಂಬೆ ಹೈಕೋರ್ಟ್‌ (Bombay High Court) ಎತ್ತಿಹಿಡಿದಿದೆ. ಕಾಲೇಜಿನಲ್ಲಿ ಹಿಜಾಬ್‌, ಬುರ್ಖಾ ನಿಷೇಧಿಸಿದ ಕಾಲೇಜಿನ ಆಡಳಿತ ಮಂಡಳಿ ತೀರ್ಮಾನದ ವಿಷಯದಲ್ಲಿ ಮಧ್ಯಪ್ರವೇಶ ಇಲ್ಲ ಎಂಬುದಾಗಿ ಬಾಂಬೆ ಹೈಕೋರ್ಟ್‌ ಖಡಾಖಂಡಿತವಾಗಿ ಹೇಳಿದೆ.

ಮುಂಬೈನಲ್ಲಿರುವ ಚೆಂಬುರ್‌ ಟ್ರೋಂಬೆ ಎಜುಕೇಷನ್‌ ಸೊಸೈಟಿಯ ಎನ್‌.ಜಿ.ಆಚಾರ್ಯ ಹಾಗೂ ಕೆ.ಕೆ. ಮರಾಠೆ ಕಾಲೇಜಿನಲ್ಲಿ ಇತ್ತೀಚೆಗೆ ವಸ್ತ್ರಸಂಹಿತೆ ಜಾರಿಗೆ ತರಲಾಗಿದ್ದು, ಕಾಲೇಜು ಆವರಣದಲ್ಲಿ ಹಿಜಾಬ್‌, ನಕಾಬ್‌, ಬುರ್ಖಾ, ಶಾಲು, ಟೋಪಿ, ಬ್ಯಾಡ್ಜ್‌ಗಳನ್ನು ಧರಿಸಿಕೊಂಡು ಬರುವಂತಿಲ್ಲ ಎಂದು ಆದೇಶ ಹೊರಡಿಸಿದೆ. ಆದರೆ, ಕಾಲೇಜಿನಲ್ಲಿ ಪದವಿಯ ದ್ವಿತೀಯ ಹಾಗೂ ಅಂತಿಮ ವರ್ಷದ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ 9 ವಿದ್ಯಾರ್ಥಿನಿಯರು ಕಾಲೇಜಿನ ಆದೇಶ ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋಗಿದ್ದರು.

ಅರ್ಜಿದಾರರ ವಾದ ಏನಾಗಿತ್ತು?

ವಿದ್ಯಾರ್ಥಿಗಳ ಪರ ಹಿರಿಯ ವಕೀಲ ಅಲ್ತಾಫ್‌ ಖಾನ್‌ ವಾದ ಮಂಡಿಸಿದರು. “ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸುವುದು ಅವರ ಆಯ್ಕೆ ಹಾಗೂ ವೈಯಕ್ತಿಕ ವಿಚಾರವಾಗಿದೆ. ಹೀಗೆ, ಹಿಜಾಬ್‌ ಧರಿಸುವುದನ್ನು ನಿಷೇಧಿಸುವ ಮೂಲಕ ಕಾಲೇಜಿನ ಆಡಳಿತ ಮಂಡಳಿಯು ಕಾನೂನುಬಾಹಿರ, ನಿರಂಕುಶ ಹಾಗೂ ಹಟಮಾರಿತನದ ನಿರ್ಧಾರ ತೆಗೆದುಕೊಂಡಿದೆ. ಇಸ್ಲಾಂನಲ್ಲಿ ಹಿಜಾಬ್‌ ಧರಿಸುವುದು ಅತ್ಯವಶ್ಯಕವಾಗಿದೆ. ಈ ಕುರಿತು ಕುರಾನ್‌ನಲ್ಲಿ ಕೂಡ ಉಲ್ಲೇಖಿಸಲಾಗಿದೆ” ಎಂದು ಕುರಾನ್‌ನ ಹಲವು ಅಧ್ಯಾಯಗಳನ್ನು ಕೋರ್ಟ್‌ಗೆ ನೀಡಿದರು.

ಕಾಲೇಜು ಆಡಳಿತ ಮಂಡಳಿ ವಾದ ಹೀಗಿತ್ತು

ಕಾಲೇಜು ಆಡಳಿತ ಮಂಡಳಿ ಪರ ಅನಿಲ್‌ ಅತುರ್ಕರ್‌ ವಾದ ಮಂಡಿಸಿದರು. “ಕಾಲೇಜಿನಲ್ಲಿ ಯಾವುದೇ ಧರ್ಮ, ಜಾತಿ ಹಾಗೂ ಸಮುದಾಯಗಳನ್ನು ಗಮನದಲ್ಲಿಟ್ಟುಕೊಂಡು ವಸ್ತ್ರಸಂಹಿತೆ ತಂದಿಲ್ಲ. ಎಲ್ಲ ತೀರ್ಮಾನಗಳನ್ನು ಸಮಾನ ವಸ್ತ್ರಸಂಹಿತೆ ಜಾರಿಯಲ್ಲಿರಲಿ ಎಂದು ತೆಗೆದುಕೊಳ್ಳಲಾಗಿದೆ. ಇಸ್ಲಾಂ ವಿರೋಧಿಯಾಗಿ, ಯಾವುದೇ ಧರ್ಮದ ವಿರೋಧಿಯಾಗಿ ಈ ತೀರ್ಮಾನ ತೆಗೆದುಕೊಂಡಿಲ್ಲ” ಎಂದು ಹೇಳಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳಾದ ಎ.ಎಸ್.ಚಂದುರ್ಕರ್‌ ಹಾಗೂ ರಾಜೇಶ್‌ ಪಾಟೀಲ್‌ ಅವರಿದ್ದ ಪೀಠವು, ಕಾಲೇಜು ಆಡಳಿತ ಮಂಡಳಿಯ ತೀರ್ಮಾನದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ತಿಳಿಸಿತು.

ಇದನ್ನೂ ಓದಿ: Hijab Row : ಹಾಸನ ಖಾಸಗಿ ಕಾಲೇಜಿನಲ್ಲಿ ಹಿಜಾಬ್‌ VS ಕೇಸರಿ ಶಾಲು

Continue Reading

Latest

Viral Video: ಸಿಮೆಂಟ್, ಕಲ್ಲಿನಿಂದ ವಾಷಿಂಗ್ ಮೆಷಿನ್ ತಯಾರಿಸಿದ ಮಹಿಳೆ; ಹೇಗೆ ಕೆಲಸ ಮಾಡುತ್ತೆ ನೋಡಿ!

Viral Video: ಬಟ್ಟೆ ಒಗೆಯುವುದು, ಕಸ ಗುಡಿಸುವುದು ಇವು ಎಂದಿಗೂ ಮುಗಿಯದ ಕೆಲಸಗಳು! ದಿನಾ ಬೆಳಗಾದರೆ ಈ ಕೆಲಸಗಳನ್ನು ಮಾಡಲೇಬೇಕಾಗುತ್ತದೆ. ಇದನ್ನು ಸುಲಭ ಮಾಡುವುದಕ್ಕೆ ಈಗ ಸಾಕಷ್ಟು ಎಲೆಕ್ಟ್ರಾನಿಕ್ ಸಾಧನಗಳು ಬಂದಿವೆ. ಇಲ್ಲೊಬ್ಬಳು ಮಹಿಳೆ ಕಲ್ಲು ಹಾಗೂ ಸಿಮೆಂಟ್ ಬಳಸಿ ವಾಷಿಂಗ್ ಮೆಷಿನ್ ತಯಾರಿಸಿದ್ದಾಳೆ ಇದು ಸಿಕ್ಕಾಪಟ್ಟೆ ವೈರಲ್ (Viral Video )ಆಗಿದೆ. ಈ ವಾಷಿಂಗ್ ಮೆಷಿನ್ ನ ಒಂದು ಬದಿಯಲ್ಲಿ ಸಿಂಕ್ ಅನ್ನು ಹೊಂದಿದ್ದು, ಅದಕ್ಕೆ ನಲ್ಲಿಯನ್ನು ಜೋಡಿಸಲಾಗಿದೆ. ಹಾಗೇ ಇನ್ನೊಂದು ಬದಿಯಲ್ಲಿ ನಿಂತು ಬಟ್ಟೆಗಳನ್ನು ಒಗೆಯಲು ಕಲ್ಲುಗಳನ್ನು ಇರಿಸಲಾಗಿದೆ.

VISTARANEWS.COM


on

Viral Video
Koo

ನವದೆಹಲಿ : ಇತ್ತೀಚಿನ ದಿನಗಳಲ್ಲಿ ಪುರುಷರ ಜತೆ ಮಹಿಳೆಯರೂ ಕೆಲಸದ ನಿಮಿತ್ತ ಹೊರಗೆ ಹೋಗುವುದರಿಂದ ಮನೆಗೆಲಸಗಳು ಹಾಗೇ ಉಳಿದುಬಿಡುತ್ತವೆ. ಹಾಗಾಗಿ ಜನರು ಎಲೆಕ್ಟ್ರಾನಿಕ್ಸ್ ಮೆಷಿನ್ ಗಳ ಮೇಲೆ ಅವಲಂಬಿತರಾಗುತ್ತಿದ್ದಾರೆ. ಬಟ್ಟೆ ಒಗೆಯಲು, ಅಡುಗೆ ಮಾಡಲು, ನೆಲ ಗುಡಿಸಿ (Floor cleaning), ಒರೆಸಲು ಕೂಡ ಎಲೆಕ್ಟ್ರಾನಿಕ್ಸ್ ಮೆಷಿನ್ ಗಳು ಬಂದಿವೆ. ಅದರಲ್ಲೂ ಬಟ್ಟೆ (Cloth) ಒಗೆಯುವುದಂತು ಒಂದು ದೊಡ್ಡ ಕೆಲಸ ಎಂದೇ ಹೇಳಬಹುದು. ಹಾಗಾಗಿ ಎಲ್ಲರ ಮನೆಯಲ್ಲಿ ವಾಷಿಂಗ್ ಮೆಷಿನ್ ಇದ್ದೆ ಇರುತ್ತದೆ. ಆದರೆ ಇಲ್ಲೊಬ್ಬ ಮಹಿಳೆ ಬಟ್ಟೆ ಒಗೆಯಲು ಸಿಮೆಂಟ್ ಮತ್ತು ಕಲ್ಲಿನಿಂದ ವಾಷಿಂಗ್ ಮೆಷಿನ್ ತಯಾರಿಸಿದ್ದು, ಅದು ವೈರಲ್ (Viral Video )ಆಗಿದೆ.

ವಿಡಿಯೊದಲ್ಲಿ ಮಹಿಳೆ ಕಲ್ಲು ಮತ್ತು ಸಿಮೆಂಟ್ ಬಳಸಿ ವಾಷಿಂಗ್ ಮೆಷಿನ್ ರೆಡಿ ಮಾಡುತ್ತಿದ್ದಾಳೆ. ಅದಕ್ಕಾಗಿ ವಾಷಿಂಗ್ ಮೆಷಿನ್‌ನ ಅಂಚುಗಳನ್ನು ಪರಿಪೂರ್ಣಗೊಳಿಸುತ್ತಿರುವುದನ್ನು ನಾವು ಈ ವಿಡಿಯೊದಲ್ಲಿ ನೋಡಬಹುದು. ಈ ವಾಷಿಂಗ್ ಮೆಷಿನ್ ನ ಒಂದು ಬದಿಯಲ್ಲಿ ಸಿಂಕ್ ಅನ್ನು ಹೊಂದಿದ್ದು, ಅದಕ್ಕೆ ನಲ್ಲಿಯನ್ನು ಜೋಡಿಸಲಾಗಿದೆ. ಹಾಗೇ ಇನ್ನೊಂದು ಬದಿಯಲ್ಲಿ ನಿಂತು ಬಟ್ಟೆಗಳನ್ನು ಒಗೆಯಲು ಕಲ್ಲುಗಳನ್ನು ಇರಿಸಲಾಗಿದೆ. ಇದು ನೋಡಲು ತುಂಬಾ ವ್ಯವಸ್ಥಿತವಾಗಿ ಕಂಡುಬಂದರೂ ಕೂಡ ವಾಷಿಂಗ್ ಮೆಷಿನ್ ನ ಹಾಗೇ ಬಟ್ಟೆಯನ್ನು ತಾನೇ ವಾಶ್ ಮಾಡುವುದಿಲ್ಲ. ಬದಲಾಗಿ ಬಟ್ಟೆ ಮಹಿಳೆ ಕೈಯಿಂದ ತೊಳೆಯಬೇಕಾಗುತ್ತದೆ.

ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಆಗಿದೆ. ಆದರೆ ಜನರು ಹೆಚ್ಚು ಇದಕ್ಕೆ ಪ್ರಭಾವಿತರಾಗಿಲ್ಲ. ಯಾಕೆಂದರೆ ಇದರಲ್ಲಿ ಬಟ್ಟೆ ತಾವೇ ಕೈಯಿಂದ ತೊಳೆಯಬೇಕಾದ ಕಾರಣ ಇದು ಬಟ್ಟೆ ತೊಳೆಯುವ ಸಮಸ್ಯೆಗೆ ಪರಿಹಾರ ನೀಡುವುದಿಲ್ಲ ಒಂದು ಜನರು ಅಭಿಪ್ರಾಯ ತಿಳಿಸಿದ್ದಾರೆ. ಅಲ್ಲದೇ ಇದರಿಂದ ಹೆಚ್ಚು ನೀರು ಕೂಡ ವ್ಯರ್ಥವಾಗುತ್ತದೆ ಎಂಬುದಾಗಿ ಸೂಚಿಸಿದ್ದಾರೆ.

ಇದನ್ನೂ ಓದಿ: ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕರಿಸಿ ಬೆರಗುಗೊಳಿಸಿದ ಅತ್ಯಂತ ಕಿರಿಯ ಸಂಸದೆ!

ಇದೇರೀತಿ ಇತ್ತೀಚೆಗಷ್ಟೇ ವ್ಯಕ್ತಿಯೊಬ್ಬ ಎಸಿಯಿಂದ ನೀರನ್ನು ಕೂಲರ್‌ಗೆ ಮರು ನಿರ್ದೇಶಿಸುತ್ತಿರುವುದನ್ನು ತೋರಿಸುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಆಗಿತ್ತು. ಅದರಲ್ಲಿ ವ್ಯಕ್ತಿ ಎಸಿಯಿಂದ ಒಂದು ಪೈಪ್ ಅನ್ನು ನೆಲಮಹಡಿಯಲ್ಲಿರುವ ಕೂಲರ್‌ಗೆ ಸಂಪರ್ಕಿಸಿರುವುದನ್ನು ತೋರಿಸುವುದು ಕಂಡುಬಂದಿದೆ. ಇದರಲ್ಲಿ ಎಸಿಯಿಂದ ನೀರು ಕೂಲರ್ ಗೆ ವರ್ಗಾಯಿಸಲಾಗುತ್ತದೆ. ಇದು ವೈರಲ್ ಆಗಿದೆ. ಈ ವಿಡಿಯೊಗೆ 2.9 ದಶಲಕ್ಷಕ್ಕೂ ಹೆಚ್ಚು ವೀವ್ಸ್ ಬಂದಿದೆ. ವ್ಯಕ್ತಿಯ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Continue Reading

Latest

Viral Video: ಮುಂದಿನ ಐದು ಸಾಲಿನಲ್ಲಿ ಮಹಿಳೆಯರಿಗೆ ಅವಕಾಶವಿಲ್ಲ! ಇದು ಸ್ವಾಮೀಜಿಯೊಬ್ಬರ ಕಂಡೀಷನ್‌!

Viral Video: ಎಲ್ಲಿ ನಾರಿಯನ್ನು ಪೂಜಿಸಲಾಗುವುದೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ ಎನ್ನುತ್ತಾರೆ. ಆದರೆ ಇತ್ತೀಚೆಗೆ ಕೊಲ್ಕತ್ತಾದಲ್ಲಿ ನಡೆದ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಮಹಿಳೆಯರನ್ನು ಅವಮಾನ ಮಾಡಲಾಗಿದೆ. ಕೊಲ್ಕತ್ತಾದಲ್ಲಿ ಸಿಎ ವಿದ್ಯಾರ್ಥಿಗಳ ಅಂತರರಾಷ್ಟ್ರೀಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿತ್ತು. ಮೊದಲ ಐದು ಸಾಲುಗಳಲ್ಲಿ ಯಾವುದೇ ಮಹಿಳೆ ಅಥವಾ ಹುಡುಗಿಯರು ಇರಬಾರದು. ಒಂದು ವೇಳೆ ಷರತ್ತು ಪಾಲಿಸದಿದ್ದರೆ ಸ್ವಾಮಿಜಿ ವೇದಿಕೆ ಬಿಟ್ಟು ಹೋಗಲಿದ್ದಾರೆ ಎಂದು ಘೋಷಿಸಿ ವಿಡಿಯೊ ಎಲ್ಲೆಡೆ ವೈರಲ್ ಆಗಿದೆ.

VISTARANEWS.COM


on

Viral Video
Koo

ಕೋಲ್ಕತ್ತಾ: ಜಗತ್ತಿನಲ್ಲಿ ಮಹಿಳೆಯರಿಗೆ ಹೆಚ್ಚು ಗೌರವ ನೀಡಬೇಕು ಎನ್ನುತ್ತಾರೆ. ಯಾಕೆಂದರೆ ತಾಯಿ, ಸಹೋದರಿ, ಪತ್ನಿ, ಮಗಳಾಗಿ ಮಹಿಳೆ ಪುರುಷರ ಪಾಲಿನ ದೀಪವಾಗುತ್ತಾಳೆ, ಅವರ ಬದುಕಿಗೆ ಸ್ಫೂರ್ತಿಯಾಗುತ್ತಾಳೆ ಮಹಿಳೆ. ಹಾಗಾಗಿ ಕಾನೂನುಗಳಲ್ಲಿ ಪುರುಷರಂತೆ ಮಹಿಳೆಯರಿಗೂ ಸಮಾನ ಅವಕಾಶಗಳನ್ನು ನೀಡಲಾಗಿದೆ. ಆದರೆ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಇತ್ತೀಚೆಗೆ ಮಹಿಳೆಯರಿಗೆ ಘೋರ ಅವಮಾನ ಮಾಡಲಾಗಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.

ಇತ್ತೀಚೆಗೆ ಕೊಲ್ಕತ್ತಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಸ್ವಾಮಿ ಜ್ಞಾನವತ್ಸಲ್ಯ ಹಾಗೂ ಸಮ್ಮೇಳನದ ಸಂಘಟಕರು ಮಹಿಳೆಯರಿಗೆ ಅವಮಾನ ಮಾಡಿದ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಹಲವರ ಆಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚೆಗೆ ಕೊಲ್ಕತ್ತಾದಲ್ಲಿ ಸಿಎ ವಿದ್ಯಾರ್ಥಿಗಳ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿತ್ತು. ಇದಕ್ಕೆ ಬಿಎಪಿಎಸ್ ಸ್ವಾಮಿನಾರಾಯಣ ಮಂದಿರದ ಸ್ವಾಮಿ ಜ್ಞಾನವತ್ಸಲ್ಯ ಅವರನ್ನು ಆಹ್ವಾನಿಸಲಾಗಿತ್ತು. ಆ ವೇಳೆ ಅಲ್ಲಿ ಹಲವು ಮಹಿಳೆಯರು ಹಾಗೂ ಪುರುಷರು ನೆರೆದಿದ್ದರು. ಆದರೆ ಐಸಿಎಐ ಅಧ್ಯಕ್ಷ ರಂಜಿತ್ ಕುಮಾರ್ ಅಗರ್ವಾಲ್ ಅವರು ಭಾಷಣದ ವೇಳೆ ಸಭಾಂಗಣದ ಮೊದಲ ಐದು ಸಾಲುಗಳಲ್ಲಿ ಯಾವುದೇ ಮಹಿಳೆ ಅಥವಾ ಹುಡುಗಿಯರು ಇರಬಾರದು. ಒಂದು ವೇಳೆ ಷರತ್ತು ಪಾಲಿಸದಿದ್ದರೆ ಸ್ವಾಮೀಜಿ ವೇದಿಕೆ ಬಿಟ್ಟು ಹೋಗಲಿದ್ದಾರೆ ಎಂದು ಹೇಳಿದ್ದಾರೆ.

ಅವರು ಯಾವ ಸಮಯದಲ್ಲಾದರೂ ಬರಬಹುದು. ಹಾಗಾಗಿ ಯಾವುದೇ ಹುಡುಗಿಯರು, ಮಹಿಳಾ ಸ್ವಯಂಸೇವಕರು ಮುಂದೆ ಬರಬಾರದು. ಎಲ್ಲರೂ ಹಿಂದೆ ಹೋಗುವಂತೆ ತಿಳಿಸಲಾಗಿದೆ. ಆಗ ಎಲ್ಲಾ ಮಹಿಳೆಯರು ಹಿಂದಿನ ಸಾಲಿಗೆ ತೆರಳಿದ್ದಾರೆ.

ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಆಗಿದ್ದು, ಸಖತ್ ವೈರಲ್ ಆಗಿದೆ. ಮಹಿಳೆಯರ ಬಗ್ಗೆ ತಾರತಮ್ಯ ತೋರಿದ ಸ್ವಾಮಿ ಜ್ಞಾನವತ್ಸಲ್ಯ ಮತ್ತು ಸಮ್ಮೇಳನದ ಸಂಘಟಕರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಕೌಂಟೆಂಟ್ ವೃತ್ತಿಯಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದ ನಮ್ಮ ಹೆಮ್ಮೆಯ ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ(ಐಸಿಎಐ)ಯ ತನ್ನ ವೇದಿಕೆಗೆ ಸಮಾನತೆ ಮತ್ತು ಗೌರವಕ್ಕೆ ಧಕ್ಕೆ ತರುವಂತಹ ವ್ಯಕ್ತಿಯನ್ನು ಅತಿಥಿಯಾಗಿ ಆಹ್ವಾನಿಸುತ್ತದೆ ಎಂದರೆ ನಾಚಿಕೆಗೇಡಿನ ವಿಚಾರ ಎಂದು ಹಲವರು ಟೀಕೆ ಮಾಡಿದ್ದಾರೆ.

ಅಲ್ಲದೇ ‘2047ರ ವೇಳೆಗೆ ಭಾರತ ವಿಕಾಸ ಹೊಂದುತ್ತದೆ ಎಂಬ ಸ್ವಾಮೀಜಿಯ ಧೋರಣೆ ನೇರವೇರುವುದಿಲ್ಲ’ ಎಂದು ಒಬ್ಬರು ಬರೆದಿದ್ದಾರೆ. ಹಾಗೇ ಮತ್ತೊಬ್ಬರು ‘ಸಿಎಂ ಮಮತಾ ಬ್ಯಾನರ್ಜಿ ಅವರು ಈ ಸಮ್ಮೇಳನದಲ್ಲಿ ಉಪಸ್ಥಿತರಿದ್ದರೆ ನೀವು ಏನು ಮಾಡುತ್ತಿದ್ದೀರಿ?’ ಎಂದು ಪ್ರಶ್ನಿಸಿದ್ದಾರೆ. ಇನ್ನೊಬ್ಬರು ‘ಇಂತಹ ತಪ್ಪನ್ನು ಮಾಡಿದ ಪ್ರತಿಯೊಬ್ಬರನ್ನೂ ವಜಾಗೊಳಿಸಬೇಕು’ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಏಳುಮಲ್ಲಿಗೆ ತೂಕದ ಚೆಲುವೆ ಪರಿಣಿತಿ ಚೋಪ್ರಾ ಸಿಕ್ಕಾಪಟ್ಟೆ ದಪ್ಪಗಾಗಿದ್ದು ಯಾಕೆ?

ಈ ಘಟನೆಗೆ ಸಂಬಂಧಿಸಿದಂತೆ ಸ್ವಾಮಿ ಜ್ಞಾನವತ್ಸಲ್ಯ ಹಾಗೂ ಐಸಿಎಐನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಮಹಿಳೆಯರಿಗೆ ಅವಮಾನ, ಅಗೌರವ ತೋರಿದ್ದಕ್ಕೆ ಟೀಕೆ ವ್ಯಕ್ತವಾಗುತ್ತಿದೆ ಮತ್ತು ಎಲ್ಲರಿಗೂ ಸಮಾನ ಹಕ್ಕುಗಳು ಮತ್ತು ಅವಕಾಶಗಳನ್ನು ನೀಡುವ ತತ್ವಗಳನ್ನು ಎತ್ತಿ ಹಿಡಿಯುವಂತೆ ಜನರು ಆಗ್ರಹಿಸಿದ್ದಾರೆ.

Continue Reading

ಕ್ರೀಡೆ

AFG vs SA Semi Final: ಚೊಚ್ಚಲ ಫೈನಲ್​ ನಿರೀಕ್ಷೆಯಲ್ಲಿ ಆಫ್ಘನ್​-ದಕ್ಷಿಣ ಆಫ್ರಿಕಾ; ಯಾರಿಗೆ ಒಲಿಯಲಿದೆ ಗೆಲುವಿನ ಲಕ್?​

AFG vs SA Semi Final: ವೇಳಾಪಟ್ಟಿಯಂತೆ ದಕ್ಷಿಣ ಆಫ್ರಿಕಾ ಮತ್ತು ಅಫಘಾನಿಸ್ತಾನ ನಡುವಣ ಪಂದ್ಯ ಜೂನ್​ 26(ಇಂದು) ನಡೆಯುವ ಸ್ಪರ್ಧೆಯಾಗಿದೆ. ವಿಂಡೀಸ್​ನಲ್ಲಿ ಇದು ರಾತ್ರಿ ಪಂದ್ಯವಾದರೆ ಭಾರತೀಯ ಕಾಲಮಾನದಂತೆ ಗುರುವಾರ ಬೆಳಗ್ಗೆ ಪ್ರಸಾರಗೊಳ್ಳಲಿದೆ.

VISTARANEWS.COM


on

AFG vs SA Semi Final
Koo

ಟ್ರಿನಿಡಾಡ್: ಟಿ20 ವಿಶ್ಕಪ್​ ಟೂರ್ನಿಯ ಸೆಮಿಫೈನಲ್​ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಭಾರತೀಯ ಕಾಲಮಾನದಂತೆ ನಾಳೆ ಟರೂಬದಲ್ಲಿ ನಡೆಯುವ ಮೊದಲ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ-ಅಫಘಾನಿಸ್ಥಾನ(AFG vs SA Semi Final) ಮುಖಾಮುಖೀ ಆಗಲಿವೆ. ಇದೇ ದಿನ ರಾತ್ರಿ ಗಯಾನಾದ ಪ್ರೊವಿಡೆನ್ಸ್‌ನಲ್ಲಿ ನಡೆಯುವ ಮೊತ್ತೊಂದು ಸೆಮಿ ಪಂದ್ಯದಲ್ಲಿ ಭಾರತ ಮತ್ತು ಹಾಲಿ ಚಾಂಪಿಯನ್‌ ಇಂಗ್ಲೆಂಡ್​ ತಂಡದ ಸವಾಲನ್ನು ಎದುರಿಸಲಿದೆ.

ವೇಳಾಪಟ್ಟಿಯಂತೆ ದಕ್ಷಿಣ ಆಫ್ರಿಕಾ ಮತ್ತು ಅಫಘಾನಿಸ್ತಾನ ನಡುವಣ ಪಂದ್ಯ ಜೂನ್​ 26(ಇಂದು) ನಡೆಯುವ ಸ್ಪರ್ಧೆಯಾಗಿದೆ. ವಿಂಡೀಸ್​ನಲ್ಲಿ ಇದು ರಾತ್ರಿ ಪಂದ್ಯವಾದರೆ ಭಾರತೀಯ ಕಾಲಮಾನದಂತೆ ಗುರುವಾರ ಬೆಳಗ್ಗೆ ಪ್ರಸಾರಗೊಳ್ಳಲಿದೆ. ಈ ಪಂದ್ಯಕ್ಕೆ ಮಳೆ ಬಂದರೂ ಕೂಡ ಮೀಸಲು ದಿನವಿದೆ.

ಹಾಲಿ ಟಿ20 ವಿಶ್ವಕಪ್‌(T20 World Cup 2024) ಕ್ರಿಕೆಟ್‌ ಪಂದ್ಯಾವಳಿಯಲ್ಲಿ ನ್ಯೂಜಿಲ್ಯಾಂಡ್​, ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡಗಳಿಗೆ ಸೊಕ್ಕಡಗಿಸಿ ಕನಸಿನ ಓಟ ಬೆಳೆಸಿರುವ ಅಫಘಾನಿಸ್ತಾನ(AFG vs SA) ಸೆಮಿಫೈನಲ್​ನಲ್ಲಿಯೂ ಗೆಲುವು ಸಾಧಿಸುವ ಇರಾದೆಯಲ್ಲಿದೆ. ಅತ್ತ ಕೂಟದ ಅಜೇಯ ತಂಡವಾದ ದಕ್ಷಿಣ ಆಫ್ರಿಕಾದ (South Africa vs Afghanistan Semi Final 1) ಮೊದಲ ಬಾರಿಗೆ ಫೈನಲ್​ ಪ್ರವೇಶಿಸಿ ಚಾಂಪಿಯನ್​ ಪಟ್ಟ ಅಲಂಕರಸಿ ಚೋಕರ್ಸ್​ ಹಣೆಪಟ್ಟಿಯನ್ನು ಅಳಿಸಿ ಹಾಕುವ ಪಣತೊಟ್ಟಿದೆ. ಹೀಗಾಗಿ ಈ ಪಂದ್ಯವನ್ನು ಜಿದ್ದಾಜಿದ್ದಿನ ಪಂದ್ಯ ಎಂದಉ ನಿರೀಕ್ಷೆ ಮಾಡಬಹುದು.

ಇತ್ತಂಡಗಳಿಗೂ ಇದೆ ಅದೃಷ್ಟದ ಬಲ


ಈ ಬಾರಿಯ ಟೂರ್ನಿಯಲ್ಲಿ ಇತ್ತಂಡಗಳಿಗೂ ಕೂಡ ಅದೃಷ್ಟ ಕೈ ಹಿಡಿದಿದೆ. ಲೀಗ್​ ಹಂತದಲ್ಲಿ ಸೋಲುವ ಪಂದ್ಯಗಳನ್ನು ಗೆದ್ದು ಸೂಪರ್​-8 ಹಂತಕ್ಕೇರಿತ್ತು. ಪ್ರತಿ ಐಸಿಸಿ ಟೂರ್ನಿಯಲ್ಲಿ ಗೆಲ್ಲುವ ಪಂದ್ಯಗಳನ್ನು ಸೋಲುವ ಮತ್ತು ಮಳೆಯಿಂದ ಹೊನ್ನಡೆ ಅನುಭವಿಸಿ ಚೋಕರ್ಸ್​ ಎನಿಸಿಕೊಳ್ಳುತ್ತಿದ್ದ ದಕ್ಷಿಣ ಆಫ್ರಿಕಾದ ನಸೀಬು ಈ ಬಾರಿ ಬದಲಾದಂತಿದೆ. ಲೀಗ್​ ಹಂತದಲ್ಲಿ ಬಾಂಗ್ಲಾ ವಿರುದ್ಧ 1 ರನ್​ ಅಂತರದಿಂದ ಗೆದ್ದದ್ದು, ಸೂಪರ್​-8 ಪಂದ್ಯದಲ್ಲಿ ವಿಂಡೀಸ್​ ಎದುರು ಮಳೆ ಪೀಡಿತ ಪಂದ್ಯವನ್ನು ಜಯಿಸಿದ್ದು ನೋಡುವಾಗ ಹರಿಣ ಪಡೆ ಈ ಬಾರಿ ಚೋಕರ್ಸ್​ ಹಣೆಪಟ್ಟಿಯನ್ನು ಕಳಚಿಕೊಳ್ಳುವ ಸಾಧ್ಯತೆಯೊಂದು ಕಂಡಿಬಂದಿದೆ.

ಇದನ್ನೂ ಓದಿ IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

ಸಿಡಿಯಬೇಕಿದೆ ಮಾರ್ಕ್ರಮ್​, ಕ್ಲಾಸೆನ್​, ಮಿಲ್ಲರ್​

ದಕ್ಷಿಣ ಆಫ್ರಿಕಾ ಪರ ಡಿ ಕಾಕ್​ ಹೊರತುಪಡಿಸಿ ಉಳಿದ ಯಾವುದೇ ಬ್ಯಾಟರ್​ ಇದುವರೆಗೂ ನಿರೀಕ್ಷತ ಬ್ಯಾಟಿಂಗ್​ ಪ್ರದರ್ಶನ ತೋರದಿದ್ದರು. ಕೂಡ ಬೌಲಿಂಗ್​ ಮತ್ತು ಫೀಲ್ಡಿಂಗ್​ನಲ್ಲಿ ಉತ್ಕೃಷ್ಟ ಮಟ್ಟದ ಪ್ರದರ್ಶನ ತೋರುವ ಮೂಲಕ ಪಂದ್ಯವನ್ನು ಗೆದ್ದಿದ್ದಾರೆ. ಆದರೆ, ಸೆಮಿಫೈನಲ್​ನಲ್ಲಿಯೂ ಇದೇ ರೀತಿಯಲ್ಲಿ ಪಂದ್ಯವನ್ನು ಗೆಲ್ಲಬಹುದೆಂದು ಯೋಚಿಸಿ ಕುಳಿತರೆ ಸೋಲು ಎದುರಾಗುವುದು ಖಚಿತ ಎನ್ನಲಡ್ಡಿಯಿಲ್ಲ. ಏಕೆಂದರೆ, ಅಫಘಾನಿಸ್ತಾನ 100 ರನ್​ ಬಾರಿಸಿದರೂ ಕೂಡ ಇದನ್ನು ಹಿಡಿದು ನಿಲ್ಲಿಸುವ ತಾಕತ್ತು ಈ ತಂಡದ ಬೌಲರ್​ಗಳಿಗಿದೆ. ಸ್ಪಿನ್​, ಸ್ಪೀಡ್​ ಎರಡೂ ವಿಭಾಗದಲ್ಲಿಯೂ ವೈವಿಧ್ಯಮಯವಾಗಿದೆ. ಬ್ಯಾಟಿಂಗ್​ನಲ್ಲಿ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಜ್ ಪ್ರತಿ ಪಂದ್ಯದಲ್ಲಿಯೂ ಶ್ರೇಷ್ಠ ಬ್ಯಾಟಿಂಗ್​ ಪ್ರದರ್ಶನ ತೋರುವ ಮೂಲಕ ತಂಡಕ್ಕೆ ಆಸರೆಯಾಗುತ್ತಿದ್ದಾರೆ. ಮಧ್ಯಮ ವೇಗಿ ನವೀನ್​ ಉಲ್​ ಹಕ್​ ಕೂಡ ಘಾತಕ ಬೌಲಿಂಗ್​ ಪ್ರದರ್ಶನ ತೋರುವ ಮೂಲಕ ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ.

ಬಲಾಬಲ

ಅಫಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಇದುವರೆಗೂ ಟಿ20 ಕ್ರಿಕೆಟ್​ನಲ್ಲಿ 2 ಬಾರಿ ಮುಖಾಮುಖಿಯಾಗಿವೆ. ಈ ಎರಡೂ ಪಂದ್ಯಗಳನ್ನು ಕೂಡ ದಕ್ಷಿಣ ಆಫ್ರಿಕಾವೇ ಗೆದ್ದಿದೆ. ಈ ಲೆಕ್ಕಾಚಾರದಲ್ಲಿ ಹರಿಣ ಪಡೆಯೇ ಬಲಿಷ್ಠವಾಗಿ ಗೋಚರಿಸಿದೆ. ಆದರೂ ಕೂಡ ಅಪಾಯಕಾರಿ ಆಫ್ಘನ್​ ಸವಾಲನ್ನು ಹಗುರವಾಗಿ ಕಾಣಬಾರದು. ಏಕೆಂದರೆ ಹೊಡಿ ಬಡಿ ಆಟವಾದ ಟಿ20 ಕ್ರಿಕೆಟ್​ನಲ್ಲಿ ಕೊನೆಯ ಎಸೆತದಲ್ಲಿಯೂ ಪಂದ್ಯದ ಫಲಿತಾಂಶ ಬದಲಾದ ನಿದರ್ಶನವಿದೆ.

Continue Reading
Advertisement
Bhaavaramayana Ramavatarana book release programme on June 29 in Bengaluru
ಕರ್ನಾಟಕ2 mins ago

Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

Varthur Santhosh Animal Transport Rules Violation Allegation
ಕ್ರೈಂ5 mins ago

Varthur Santhosh: ಹಳ್ಳಿಕಾರ್ ರೇಸ್ ನಡೆಸಲು ಸಜ್ಜಾಗುತ್ತಿದ್ದ ವರ್ತೂರು ಸಂತೋಷ್​ ವಿರುದ್ಧ ಪ್ರಕರಣ ದಾಖಲು

Hijab Ban
ದೇಶ5 mins ago

Hijab Ban: ತರಗತಿಯಲ್ಲಿ ಹಿಜಾಬ್‌, ಬುರ್ಖಾ ನಿಷೇಧ; ಕಾಲೇಜು ಆದೇಶ ಎತ್ತಿಹಿಡಿದ ಹೈಕೋರ್ಟ್‌

honey trap harish gowda
ಕ್ರೈಂ11 mins ago

Honey Trap: ಎಂಎಲ್‌ಎ ಹರೀಶ್‌ ಗೌಡಗೆ ಹನಿಟ್ರ್ಯಾಪ್ ಮಾಡಿದ್ದ ಗ್ಯಾಂಗ್‌ ಸೆರೆ, ಇವರ ಖತರ್‌ನಾಕ್‌ ಐಡಿಯಾ ನೋಡಿ!

Kangana Ranaut Chirag Paswan In Parliament
ಬಾಲಿವುಡ್23 mins ago

Kangana Ranaut: ಸಂಸತ್ತಿನ ಹೊರಗೆ ಕೈ ಕುಲುಕಿ ಸಂತಸದ ಕ್ಷಣ ಹಂಚಿಕೊಂಡ ಚಿರಾಗ್ ಪಾಸ್ವಾನ್-ಕಂಗನಾ!

Viral Video
Latest41 mins ago

Viral Video: ಸಿಮೆಂಟ್, ಕಲ್ಲಿನಿಂದ ವಾಷಿಂಗ್ ಮೆಷಿನ್ ತಯಾರಿಸಿದ ಮಹಿಳೆ; ಹೇಗೆ ಕೆಲಸ ಮಾಡುತ್ತೆ ನೋಡಿ!

Terrorist Killed
ದೇಶ41 mins ago

Terrorist Killed: ಮುಂದುವರಿದ ಉಗ್ರರ ಬೇಟೆ; ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭದ್ರತಾ ಪಡೆ

Viral Video
Latest45 mins ago

Viral Video: ಮುಂದಿನ ಐದು ಸಾಲಿನಲ್ಲಿ ಮಹಿಳೆಯರಿಗೆ ಅವಕಾಶವಿಲ್ಲ! ಇದು ಸ್ವಾಮೀಜಿಯೊಬ್ಬರ ಕಂಡೀಷನ್‌!

AFG vs SA Semi Final
ಕ್ರೀಡೆ53 mins ago

AFG vs SA Semi Final: ಚೊಚ್ಚಲ ಫೈನಲ್​ ನಿರೀಕ್ಷೆಯಲ್ಲಿ ಆಫ್ಘನ್​-ದಕ್ಷಿಣ ಆಫ್ರಿಕಾ; ಯಾರಿಗೆ ಒಲಿಯಲಿದೆ ಗೆಲುವಿನ ಲಕ್?​

Development of Gaanagapura kshethra on Pandharpur, Thulajapur model says DC Fauzia Tarannum
ಕಲಬುರಗಿ58 mins ago

Kalaburagi News: ಪಂಢರಪುರ, ತುಳಜಾಪುರ ಮಾದರಿಯಲ್ಲಿ ಗಾಣಗಾಪುರ ಕ್ಷೇತ್ರ ಅಭಿವೃದ್ಧಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌