Horoscope Today | ಮಂಗಳ ಗೌರೀ ವ್ರತದ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೀಗಿದೆ - Vistara News

ಪ್ರಮುಖ ಸುದ್ದಿ

Horoscope Today | ಮಂಗಳ ಗೌರೀ ವ್ರತದ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೀಗಿದೆ

ಶುಭಕೃತ ನಾಮ ಸಂವತ್ಸರ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷದ ಪಂಚಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Horoscope Today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಇಂದಿನ ಪಂಚಾಂಗ (16-08-2022)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ
ದಕ್ಷಿಣಾಯನ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ

ತಿಥಿ: ಪಂಚಮಿ 20:16 ವಾರ: ಮಂಗಳವಾರ
ನಕ್ಷತ್ರ: ರೇವತಿ 21:05 ಯೋಗ: ಶೂಲ 21:47
ಕರಣ: ಕೌಲವ 08:32 ದಿನ ವಿಶೇಷ: ಮಂಗಳ ಗೌರೀ ವ್ರತ

ಸೂರ್ಯೋದಯ:  06: ೧2     ಸೂರ್ಯಾಸ್ತ: 06: 54

ರಾಹು ಕಾಲ : ಸಾಯಂಕಾಲ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಪ್ರಾತಃ ಕಾಲ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ನಿಮ್ಮ ವರ್ತನೆ ಇತರರ ಮೇಲೆ ಒತ್ತಡ ಉಂಟುಮಾಡುವ ಸಾಧ್ಯತೆ. ಹಣಕಾಸು ಪ್ರಗತಿ ಉತ್ತಮ. ಧಾರ್ಮಿಕ ವ್ಯಕ್ತಿಗಳ ಭೇಟಿ, ಕ್ಷೇತ್ರ ದರ್ಶನ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ದ್ವೇಷದ ಭಾವನೆ ನಿಮ್ಮ ಮನಸ್ಸಿಗೆ ಅಸಮಾಧಾನ ತರುವುದರೊಂದಿಗೆ ಒತ್ತಡ ಉಂಟುಮಾಡುವ ಸಾಧ್ಯತೆ. ಕುಟುಂಬದ ಸದಸ್ಯರೊಂದಿಗೆ ಸಮಾಧಾನದಿಂದ ವರ್ತಿಸಿ. ಮೌನದಿಂದ ಇರುವುದು ಒಳಿತು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಮಹತ್ವಾಕಾಂಕ್ಷೆಯ ಯೋಜನೆಗಳು ಸಫಲವಾಗುವವು. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ. ಅನಾವಶ್ಯಕವಾಗಿ ಒತ್ತಡ ತೆಗೆದುಕೊಂಡು ಜೀವನದ ಮಹತ್ವದ ವಿಷಯಗಳ ಬಗ್ಗೆ ಆಲಸ್ಯ ಮಾಡುವುದು ಬೇಡ. ಆರ್ಥಿಕವಾಗಿ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಬಿಡುವಿಲ್ಲದ ಕೆಲಸದಿಂದ ಒತ್ತಡ, ಆರೋಗ್ಯದಲ್ಲಿ ವ್ಯತ್ಯಾಸ. ಆರ್ಥಿಕ ಪ್ರಗತಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಮನಸ್ಸಿಗೆ ನೋವುಂಟು ಮಾಡಬಹುದು. ಆಪ್ತರೊಂದಿಗೆ ಭಾವನೆ ಹಂಚಿಕೊಳ್ಳುವಿರಿ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಸಂತೋಷದಿಂದ ಇದ್ದು, ಇತರರಿಗೆ ಸಂತಸ ಹಂಚಿಕೊಳ್ಳಲು ಹವಣಿಸುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಆತುರದಲ್ಲಿ, ಸರಿಯಾಗಿ ವಿಷಯ ತಿಳಿದುಕೊಳ್ಳದೇ ಇತರರನ್ನು ಟೀಕೆ ಮಾಡುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ತುಲಾ: ನಿಮ್ಮ ಹರಿತವಾದ ಮಾತುಗಳಿಂದ ಇತರರ ಮನಸ್ಸು ನೋಯಿಸುವುದು ಬೇಡ, ಆಲೋಚಿಸಿ ಮಾತನಾಡಿ. ಕುಟುಂಬದ ಪ್ರತಿಯೊಂದು ವಿಷಯದಲ್ಲೂ ತಪ್ಪು ಹುಡುಕುವುದು ಬೇಡ, ಇದರಿಂದ ಮನಸ್ಸಿಗೆ ಘಾಸಿಯಾಗುವುದು. ಆಧ್ಯಾತ್ಮದ ಹಾದಿ ದಾರಿ ತೋರಿತು. ಗುರು ದತ್ತಾತ್ರೇಯನನ್ನು ಆರಾಧಿಸಿ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಸಮಯ ನೀಡುವಿರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಭೂಮಿ, ಆಸ್ತಿ ಖರೀದಿಗಾಗಿ ಆಲೋಚನೆ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ದೀರ್ಘಕಾಲದ ಪ್ರಯಾಣ ಸಾಧ್ಯತೆ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಹೊಸ ಕೆಲಸಗಳಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭತರುವುದು. ಮುಂಗೋಪದಿಂದ ನಷ್ಟ ಸಾಧ್ಯತೆ. ಸ್ನೇಹಿತರ ಸಲಹೆ ಸಹಕಾರ ಸಿಗುವುದು.
ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಆಲಸ್ಯದಿಂದ ಕಾರ್ಯ ಹಾನಿ. ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಸೃಜನಾತ್ಮಕವಾಗಿ ಕೆಲಸ ಮಾಡಿ. ಉದ್ಯೋಗದಲ್ಲಿ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹೊಸ ಅವಕಾಶಗಳು ಗರಿಗೆದರಲಿವೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ನಿಮ್ಮ ಹಿಂದೆ ಟೀಕೆಗಳನ್ನು ಮಾಡುವ ಜನರಿಂದ ದೂರ ಇರಿ. ದಿನದ ಮಟ್ಟಿಗೆ ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಆಗುವ ಸಾಧ್ಯತೆ. ಸಂಗಾತಿಯ ಸ್ವಾರ್ಥದಿಂದ ಕುಟುಂಬದ ವಾತಾವರಣದಲ್ಲಿ ವ್ಯತ್ಯಾಸ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | Saturn In Astrology | ಜಾತಕದಲ್ಲಿ ಶನಿ ಲಗ್ನದಲ್ಲಿದ್ದರೆ ರಾಜನಂತೆ ಮೆರೆಯಬಹುದು! ಉಳಿದ ಮನೆಗಳಲ್ಲಿದ್ದರೆ ಏನು ಫಲ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವುದಿಲ್ಲ ಎಂದಿದ್ದೇಕೆ ಮಮತಾ ಬ್ಯಾನರ್ಜಿ?

VISTARANEWS.COM


on

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹೀನಾಯವಾಗಿ ಸೋಲನುಭವಿಸಿದರೂ ತಾನು ಮಾತ್ರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದಾರೆ. ಇಂದು ಕೋಲ್ಕತ್ತಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಮತಾ ಬ್ಯಾನರ್ಜಿ ತಾವು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ನಾವು ಪಶ್ಚಿಮ ಬಂಗಾಳದಲ್ಲಿ ಸೋತಿಲ್ಲ. ನಿಷ್ಪಕ್ಷಪಾತವಾಗಿ ಚುನಾವಣೆ ನಡೆದಿಲ್ಲ. ನ್ಯಾಯಯುತವಾಗಿ ಚುನಾವಣೆ ನಡೆದಿದ್ದರೆ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೆ. ಆದರೆ ಈಗ ರಾಜಭವನಕ್ಕೆ ಹೋಗುವ ಮಾತೇ ಇಲ್ಲ. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ. ಪಶ್ಚಿಮ ಬಂಗಾಳದಲ್ಲಿ ಇವಿಎಂಗಳ ಲೂಟಿ ಮಾಡಲಾಗಿದೆ. ಚುನಾವಣಾ ಆಯೋಗ ಬಿಜೆಪಿ ಜೊತೆ ಸೇರಿಕೊಂಡಿದೆ. ಆದರೆ ನೈತಿಕವಾಗಿ ನಾವು ಗೆಲುವನ್ನು ಸಾಧಿಸಿದ್ದೇವೆ ಎಂದಿದ್ದಾರೆ.

Continue Reading

Latest

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

VISTARANEWS.COM


on

ಪಶ್ಚಿಮ ಬಂಗಾಳದ ಚುನಾವಣೋತ್ತರ ಸಮೀಕ್ಷೆಯ ಟ್ರೆಂಡ್‌ ಪಕ್ಕದ ಬಾಂಗ್ಲಾದೇಶಕ್ಕೆ ಆತಂಕ ಉಂಟುಮಾಡಿದೆ. ಎಂಟು ಎಕ್ಸಿಟ್‌ ಪೋಲ್‌ಗಳ ಪೈಕಿ ಆರು ಸಮೀಕ್ಷೆಗಳು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೇರುವ ಮುನ್ಸೂಚನೆ ನೀಡಿವೆ. ಈ ಮುನ್ಸೂಚನೆಯೇ ಬಾಂಗ್ಲಾದೇಶದ ಆತಂಕಕ್ಕೆ ಕಾರಣವಾಗಿದೆ.
ಬಾಂಗ್ಲಾದೇಶದ ಸಂಸದ ಆಖ್ತರ್‌ ಹೊಸೈನ್‌ ಈ ವಿಷಯವನ್ನು ಅಲ್ಲಿನ ಸಂಸತ್ತಿನಲ್ಲಿ ಎತ್ತಿದ್ದಾರೆ. “ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಅದು ಅಲ್ಲಿನ ಎಲ್ಲಾ ಬಾಂಗ್ಲಾದೇಶಿ ನುಸುಳುಕೋರರನ್ನು ಹೊರಗಟ್ಟುತ್ತದೆ. ಇದು ಬಾಂಗ್ಲಾದೇಶದಲ್ಲಿ ಅತಿದೊಡ್ಡ ಮಾನವೀಯ, ಅರ್ಥಿಕ ಹಾಗೂ ನಿರಾಶ್ರಿತರ ಬಿಕ್ಕಟ್ಟನ್ನು ಸೃಷ್ಟಿಸಲಿದೆ. ಇದು ನಮ್ಮ ಅತಿದೊಡ್ಡ ಆತಂಕಕ್ಕೆ ಕಾರಣವಾಗಿದೆʼʼ ಎಂದು ಹೇಳಿದ್ದಾರೆ.
ಗಡಿದಾಟಿ ಭಾರತಕ್ಕೆ ಬಂದಿರುವ ಅಕ್ರಮ ಬಾಂಗ್ಲಾ ದೇಶಿ ನುಸುಳುಕೋರರನ್ನು ಬಿಜೆಪಿ ಹೊರಗಟ್ಟಿದರೆ ಅವರಿಗೆ ಹೊಸ ನೆಲೆ ಕಲ್ಪಿಸುವುದು ಹೇಗೆ ಎಂಬ ಚಿಂತೆ ಬಾಂಗ್ಲಾದೇಶವನ್ನು ಕಾಡುತ್ತಿದೆ. ಬಾಂಗ್ಲಾದೇಶದ ಅಕ್ರಮ ನುಸುಳುಕೋರರ ಸಮಸ್ಯೆಯೇ ಪಶ್ಚಿಮ ಬಂಗಾಳದ ಅತಿದೊಡ್ಡ ಚುನಾವಣಾ ವಿಷಯವಾಗಿತ್ತು. ಅಧಿಕಾರಕ್ಕೇರಿದ ತಕ್ಷಣವೇ ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡುವುದಾಗಿ ಬಿಜೆಪಿ ಹೇಳಿತ್ತು.

Continue Reading

Latest

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

VISTARANEWS.COM


on

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌
ಐದು ರಾಜ್ಯಗಳ ಎಕ್ಸಿಟ್‌ ಪೋಲ್‌ ಫಲಿತಾಂಶ ಹೊರಬಿದ್ದಿದೆ. ಅಸ್ಸಾಂನಲ್ಲಿ ಬಿಜೆಪಿ, ಕೇರಳದಲ್ಲಿ ಯುಡಿಎಫ್‌, ಪುದುಚೇರಿಯಲ್ಲಿ ಎನ್‌ಡಿಎ ಜಯಭೇರಿ ಬಾರಿಸಲಿದೆ ಎಂದು ಎಲ್ಲಾ ಎಕ್ಸಿಟ್‌ ಪೋಲ್‌ಗಳು ಹೇಳಿವೆ. ಆದರೆ, ಪ.ಬಂಗಾಳ ಮತ್ತು ತಮಿಳುನಾಡು ಮತದಾನೋತ್ತರ ಸಮೀಕ್ಷೆಗಳು ಮಾತ್ರ ಭಿನ್ನ ಫಲಿತಾಂಶ ನೀಡಿವೆ.
ಅಸ್ಸಾಂನಲ್ಲಿ ಕಮಲ ಕಿಲಕಿಲ:
126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ಸಾಧ್ಯತೆಯನ್ನು ಎಲ್ಲಾ ಎಕ್ಸಿಟ್‌ ಪೋಲ್‌ಗಳು ಹೇಳಿವೆ. ಹಿಮಂತ ಬಿಸ್ವ ಶರ್ಮಾ ಎರಡನೇ ಅವಧಿಗೆ ಸಿಎಂ ಆಗುವ ಸಾಧ್ಯತೆ ಹೆಚ್ಚಿವೆ. ಆಕ್ಸಿಸ್‌ ಮೈ ಇಂಡಿಯಾ, ಪಿ-ಮಾರ್ಕ್‌, ಮಾಟ್ರಿಜ್‌, ಜೆವಿಸಿ ಮತ್ತು ಚಾಣಕ್ಯ ಸ್ಟ್ರಾಟಜಿಸ್‌ ಬಿಜೆಪಿ ಭಾರೀ ಬಹುಮತ ದಾಖಲಿಸಲಿದೆ ಎಂದು ಭವಿಷ್ಯ ನುಡಿದಿವೆ. ಕಾಂಗ್ರೆಸ್‌ ಪ್ರತಿಪಕ್ಷಕ್ಕೆ ಸೀಮಿತಗೊಳ್ಳಲಿದೆ.
ಕೇರಳಂನಲ್ಲಿ ಯುಡಿಎಫ್‌ಗೆ ಅಧಿಕಾರ?:
ಕೇರಳಂ ವಿಧಾನಸಭೆಯ ಬಲ 140. ಬಹುಮತಕ್ಕೆ 71 ಸೀಟುಗಳು ಬೇಕು. ಕೇರಳಂನಲ್ಲಿ ಹ್ಯಾಟ್ರಿಕ್‌ ದಾಖಲಿಸುವ ಎಲ್‌ಡಿಎಫ್‌ ಕನಸು ನುಚ್ಚುನೂರಾಗುವ ಸಾಧ್ಯತೆಗಳಿವೆ. ಈ ಸಲ ಕಾಂಗ್ರೆಸ್‌ ನೇತೃತ್ವದ ಯುನೈಟೆಡ್‌ ಡೆಮಾಕ್ರಾಟಿಕ್‌ ಫ್ರಂಟ್‌ – ಯುಡಿಎಫ್‌, ಜಯಭೇರಿ ಬಾರಿಸಲಿದೆ ಎಂದು ಆಕ್ಸಿಸ್‌ ಮೈ ಇಂಡಿಯಾ, ಪಿ-ಮಾರ್ಕ್‌, ಮಾಟ್ರಿಜ್‌, ಮನೋರಮಾ ನ್ಯೂಸ್‌ ಸಿವೋಟರ್ಸ್‌ ಮತ್ತು ಜೆವಿಸಿ ಸಮೀಕ್ಷೆಗಳು ಹೇಳಿವೆ. ಬಿಜೆಪಿ ಕೇರಳಂನಲ್ಲಿ ಮೂರರಿಂದ ಏಳು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಗಳಿವೆ.
ಪುದುಚೇರಿಯಲ್ಲಿ ಎನ್‌ಡಿಎ?:
ಪುದುಚೇರಿ ವಿಚಾರದಲ್ಲಿ ಎಕ್ಸಿಟ್‌ ಪೋಲ್‌ ಏಜೆನ್ಸಿಗಳಿಗೆ ಯಾವುದೇ ಅನುಮಾನ ಇಲ್ಲ. 30 ಸದಸ್ಯಬಲದ ಪುದುಚೇರಿ ಅಸೆಂಬ್ಲಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ದಿಗ್ವಿಜಯ ಬಾರಿಸಲಿದೆ ಎಂದು ಎಲ್ಲಾ ಚುನಾವಣೋತ್ತರ ಭವಿಷ್ಯ ನುಡಿದಿವೆ.
ಪ. ಬಂಗಾಳದಲ್ಲಿ ದೀದಿಯೋ, ಮೋದಿಯೋ?
ಪಶ್ಚಿಮ ಬಂಗಾಳದ ಎಕ್ಸಿಟ್‌ ಪೋಲ್‌ನಲ್ಲಿ ಏಕಮತ ಇಲ್ಲ. 6 ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ, 4 ಸಮೀಕ್ಷೆಗಳು ಬಿಜೆಪಿ ಗೆಲುವಿನ ಭವಿಷ್ಯ ನುಡಿದಿವೆ. 2 ಸಮೀಕ್ಷೆಗಳು ಟಿಎಂಸಿಯೇ ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿವೆ. ಪಿ-ಮಾರ್ಕ್‌, ಮಾಟ್ರಿಜ್‌, ಜೆವಿಸಿ, ಚಾಣಕ್ಯ ಈ ನಾಲ್ಕು ಸಮೀಕ್ಷೆಗಳಲ್ಲಿ ಬಿಜೆಪಿ ಸರಿಸುಮಾರು 150ಕ್ಕೂ ಅಧಿಕ ಸೀಟು ಗಳಿಸುವ ಸಾಧ್ಯತೆಗಳಿವೆ ಎಂದು ಹೇಳಿವೆ. ಪೀಪಲ್ಸ್‌ ಪಲ್ಸ್‌, ಜನಮತ ಪೋಲ್ಸ್‌ ಈ ಎರಡೂ ಸಮೀಕ್ಷೆಗಳ ಪ್ರಕಾರ ಟಿಎಂಸಿ 170ರಿಂದ 200 ಸೀಟು ಗೆದ್ದು ಅಧಿಕಾರದಲ್ಲಿ ಮುಂದುವರಿಯಲಿದೆ. ಅಂದ ಹಾಗೆ, 294 ಸದಸ್ಯ ಬಲದ ಪ.ಬಂಗಾಳ ಅಸೆಂಬ್ಲಿಯಲ್ಲಿ ಅಧಿಕಾರಕ್ಕೇರಲು 147 ಸೀಟುಗಳನ್ನು ಗೆಲ್ಲಲೇ ಬೇಕು.
ದ್ರಾವಿಡ ದಂಗಲ್‌ನಲ್ಲಿ ಅಚ್ಚರಿ ಫಲಿತಾಂಶ?:
ತಮಿಳುನಾಡಿನಲ್ಲಿ ಬಹುತೇಕ ಎಲ್ಲಾ ಎಕ್ಸಿಟ್‌ ಪೋಲ್‌ಗಳು ಡಿಎಂಕೆ ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ಭವಿಷ್ಯ ನುಡಿದಿವೆ. ಎಐಎಡಿಎಂಕೆ ನೇತೃತ್ವದ ಎನ್‌ಡಿಎ 50 ರಿಂದ 80 ಸ್ಥಾನಗಳನ್ನು ಗಳಿಸುವ ಸಾಧ್ಯತೆಗಳಿವೆ. ಆದರೆ, ಇಲ್ಲೊಂದು ಟ್ವಿಸ್ಟ್‌ ಇದೆ. ಆಕ್ಸಿಸ್‌ ಮೈ ಇಂಡಿಯಾ ಮಾತ್ರ ವಿಜಯ್‌ ನೇತೃತ್ವದ ಟಿವಿಕೆಗೆ ಬಹುಮತ ಸಿಗಲಿದೆ ಎಂದು ಹೇಳಿದೆ. ದಳಪತಿ ವಿಜಯ್‌ ನೇತೃತ್ವದ ಟಿವಿಕೆ ತನ್ನ ಚೊಚ್ಚಲ ಯತ್ನದಲ್ಲೇ 98ರಿಂದ 120 ಸ್ಥಾನ ಗಳಿಸುವ ಸಾಧ್ಯತೆಗಳಿವೆ ಎಂದು ಆಕ್ಸಿಸ್‌ ಮೈ ಇಂಡಿಯಾ ಹೇಳಿವೆ. 234 ಸದಸ್ಯಬಲದ ತಮಿಳುನಾಡು ಅಸೆಂಬ್ಲಿಯಲ್ಲಿ ಅಧಿಕಾರಕ್ಕೇರಲು 117 ಸೀಟುಗಳು ಬೇಕು.

Continue Reading

Latest

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

VISTARANEWS.COM


on

ದ್ರಾವಿಡ ದಂಗಲ್‌ನಲ್ಲಿ ಅಚ್ಚರಿಯ ಫಲಿತಾಂಶದ ಸಾಧ್ಯತೆಯೊಂದನ್ನು ಎಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆ ಪ್ರಕಟಿಸಿದೆ. ಆಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆ ಪ್ರಕಾರ ಟಿವಿಕೆ ನಾಯಕ ವಿಜಯ್‌ ಮೊದಲ ಪ್ರಯತ್ನದಲ್ಲೇ ಅಭೂತಪೂರ್ವ ಯಶಸ್ಸು ಗಳಿಸಿದ್ದಾರೆ. ತಮಿಳುನಾಡಿನ ಎಲ್ಲಾ ಸಮೀಕ್ಷೆಗಳು ಡಿಎಂಕೆ ಅಧಿಕಾರಕ್ಕೇರಲಿದೆ ಎಂದು ಹೇಳುತ್ತಿರುವಾಗಲೇ, ಆಕ್ಸಿಸ್‌ ಮೈ ಇಂಡಿಯಾ ಮಾತ್ರ ಈ ಸಲ ವಿಜಯ್‌ ನಿಜವಾದ ಜನನಾಯಗನ್‌ ಎಂದಿದೆ.
ತಮಿಳುನಾಡಿನ ಸಾರಥ್ಯ ವಿಜಯ್‌ಗೆ?
ಆಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆ ಪ್ರಕಾರ ಟಿವಿಕೆಗೆ 98 ರಿಂದ 120 ಸೀಟುಗಳು ಸಿಗಲಿವೆ. ಡಿಎಂಕೆ-ಕಾಂಗ್ರೆಸ್‌ ಮೈತ್ರಿಕೂಟಕ್ಕೆ 92ರಿಂದ 110 ಹಾಗೂ 22ರಿಂದ 32 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲ್ಲುವ ಸಾಧ್ಯತೆಗಳಿವೆ. 234 ಸದಸ್ಯಬಲದ ತಮಿಳುನಾಡು ಅಸೆಂಬ್ಲಿಯಲ್ಲಿ 117 ಸೀಟು ಗೆಲ್ಲುವ ಪಕ್ಷದ ನಾಯಕ ಮುಖ್ಯಮಂತ್ರಿ ಆಗ್ತಾರೆ. ಸಮೀಕ್ಷೆ ಪ್ರಕಾರ ಟಿವಿಕೆ ಗರಿಷ್ಠ 120 ಸೀಟು ಗೆಲ್ಲುವ ಸಾಧ್ಯತೆಗಳಿವೆ.̇̇̇
ವೋಟ್‌ ಶೇರ್‌ನಲ್ಲೂ ಟಿವಿಕೆ ದಿಗ್ವಿಜಯ?
ಆಕ್ಸಿಸ್‌ ಮೈ ಇಂಡಿಯಾ ವೋಟ್‌ ಶೇರ್‌ ಸಮೀಕ್ಷೆಯನ್ನೂ ಪ್ರಕಟಿಸಿದೆ. ಅದರ ಪ್ರಕಾರ ಟಿವಿಕೆಗೆ ಶೇಕಡಾ 35ರಷ್ಟು ಮತ ಸಿಗಲಿದೆ. ಸ್ಟಾಲಿನ್‌ ನೇತೃತ್ವದ ಡಿಎಂಕೆ-ಕಾಂಗ್ರೆಸ್‌ ಮೈತ್ರಿಕೂಟಕ್ಕೂ ಶೇ. 35ರಷ್ಟು ವೋಟ್‌ ಶೇರ್‌ ಸಿಗಲಿದೆ. ಎನ್‌ಡಿಎಗೆ 23 ಶೇಕಡಾ ಮತ ಸಿಗುವ ಸಾಧ್ಯತೆಗಳಿವೆ.
ಸಿಎಂ ಸ್ಥಾನಕ್ಕೆ ವಿಜಯ್‌ ಬೆಸ್ಟ್‌?
ಮುಖ್ಯಮಂತ್ರಿ ಸ್ಥಾನಕ್ಕೆ ಯಾರು ಉತ್ತಮ ಅಭ್ಯರ್ಥಿ ಎಂಬ ಪ್ರಶ್ನೆಯನ್ನೂ ಆಕ್ಸಿಸ್‌ ಮೈ ಇಂಡಿಯಾ ಜನರ ಮುಂದಿಟ್ಟಿದೆ. ಅದರ ಪ್ರಕಾರ ಶೇ. 37ರಷ್ಟು ಮತದಾರರು ವಿಜಯ್‌ ಪರ ಒಲವು ತೋರಿದ್ದಾರೆ. ಶೇ. 35ರಷ್ಟು ಮಂದಿ ಮಾತ್ರ ಸ್ಟಾಲಿನ್‌ ಬೆಸ್ಟ್‌ ಅಂದಿದ್ದಾರೆ.
ವಿಜಯ್‌ಗೆ ಯುವ ಸಮೂಹದ ಬೆಂಬಲ
ಸರ್ವೇ ಪ್ರಕಾರ ಶೇ. 68ರಷ್ಟು ಹೊಸ ವೋಟರ್ಸ್‌ ವಿಜಯ್‌ಗೆ ಬೆಂಬಲ ನೀಡಿದ್ದಾರೆ. 20ರಿಂದ 29 ವಯೋಮಾನದ ಶೇ. 59ರಷ್ಟು ಯುವಕರು ಟಿವಿಕೆಗೆ ಜೈ ಎಂದಿದ್ದಾರೆ. 30-39 ವಯೋಮಾನದ ಶೇ. 45 ಮಂದಿ ದಳಪತಿಯನ್ನು ದಡಮುಟ್ಟಿಸಿದ್ದಾರೆ ಎನ್ನುತ್ತಿದೆ ಸಮೀಕ್ಷೆ.

Continue Reading
Advertisement
Latest9 hours ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

Latest10 hours ago

ದಳಪತಿʼ ಪಟ್ಟಾಭಿಷೇಕಕ್ಕೆ ಕ್ಷಣಗಣನೆ : ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

Latest1 day ago

ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವುದಿಲ್ಲ ಎಂದಿದ್ದೇಕೆ ಮಮತಾ ಬ್ಯಾನರ್ಜಿ?

Latest1 day ago

ಬಿಜೆಪಿ ಬಂಗಾಳ ಗೆದ್ದಾಯ್ತು, ಸಿಎಂ ರೇಸ್‌ನಲ್ಲಿ ಯಾರು?

Latest1 day ago

ತಮಿಳುನಾಡು: ಬಹುಮತ ಪಡೆಯಲು ದಳಪತಿ ಮುಂದಿರುವ ತಂತ್ರಗಳೇನು?

Latest2 days ago

ಪಶ್ಚಿಮ ಬಂಗಾಳದಲ್ಲಿ ಕೇಸರಿ, ತಮಿಳುನಾಡಲ್ಲಿ ದಳಪತಿ, ಕೇರಳಂನಲ್ಲಿ ಕಾಂಗ್ರೆಸ್‌ ದರ್ಬಾರ್‌

Latest2 days ago

ಕೇರಳಂ: ಯುಡಿಎಫ್‌ ಗೆಲುವಿನ ಹಿಂದಿನ ಏಳು ರಣತಂತ್ರ!

Latest2 days ago

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

Latest2 days ago

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

Latest2 days ago

ದ್ರಾವಿಡ ನಾಡಲ್ಲಿ ʼದಳಪತಿʼ ಯುಗಾರಂಭ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌