Horoscope Today | ಕನ್ಯಾ ರಾಶಿಯವರ ಅದೃಷ್ಟ ಸಂಖ್ಯೆ 5, ಇಂದು ನಿಮ್ಮ ಅದೃಷ್ಟ ಸಂಖ್ಯೆ ಎಷ್ಟು? - Vistara News

ಪ್ರಮುಖ ಸುದ್ದಿ

Horoscope Today | ಕನ್ಯಾ ರಾಶಿಯವರ ಅದೃಷ್ಟ ಸಂಖ್ಯೆ 5, ಇಂದು ನಿಮ್ಮ ಅದೃಷ್ಟ ಸಂಖ್ಯೆ ಎಷ್ಟು?

ಶುಭಕೃತ ನಾಮ ಸಂವತ್ಸರ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷದ ದಶಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Horoscope Today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (20-09-2022)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ
ದಕ್ಷಿಣಾಯನ, ವರ್ಷ ಋತು, ಭಾದ್ರಪದ
ಮಾಸ, ಕೃಷ್ಣ ಪಕ್ಷ
ತಿಥಿ: ದಶಮಿ 21:25 ವಾರ: ಮಂಗಳವಾರ
ನಕ್ಷತ್ರ: ಪುನರ್ವಸು 21:05 ಯೋಗ: ವರಿಯಾನ 08:22
ಕರಣ: ವಣಿಜ 08:14
ಅಮೃತಕಾಲ: ಸಂಜೆ 6 ಗಂಟೆ 23 ನಿಮಿಷದಿಂದ 8 ಗಂಟೆ 10 ನಿಮಿಷದವರೆಗೆ.

ಸೂರ್ಯೋದಯ: 06: 18     ಸೂರ್ಯಾಸ್ತ: 06: 29

ರಾಹುಕಾಲ: ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ನಿಮ್ಮ ಹಾಸ್ಯದ ಮನೋಭಾವನೆ ಇತರರನ್ನು ಆಕರ್ಷಿಸುವುದು. ಹಣಕಾಸು ಪ್ರಗತಿ ಉತ್ತಮ. ಧಾರ್ಮಿಕ ಸ್ಥಳಗಳ ಭೇಟಿ ನೀಡುವ ಸಾಧ್ಯತೆಗಳಿವೆ. ಅಧ್ಯಾತ್ಮ ವ್ಯಕ್ತಿಗಳ ಮಾರ್ಗದರ್ಶನ ದೊರೆಯಬಹುದು. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಷಭ: ವ್ಯವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ ನಿಮಗೆ ಕೋಪ ತರಿಸಬಹುದು, ತಾಳ್ಮೆಯಿಂದ ವರ್ತಿಸಿ. ಈ ಹಿಂದೆ ಕಾಡಿದ ವ್ಯಾಧಿ ಮರುಕಳಿಸುವ ಸಾಧ್ಯತೆ. ದಿನದ ಮಟ್ಟಿಗೆ ಖರ್ಚು. ಏತನ್ಮಧ್ಯೆ ಅತಿಥಿಗಳ ಆಗಮನ ಹರ್ಷ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು, ಮುಂದಿನ ಆಗುವ ಕೆಲಸಗಳ ಬಗೆಗೆ ಕಾರ್ಯ ಪ್ರವೃತ್ತರಾಗಿ. ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು. ಅನೇಕ ವಿಚಾರಗಳಿಂದ ಒತ್ತಡಕ್ಕೆ ಒಳಾಗಾಗುವ ಸಾಧ್ಯತೆ. ಕೋಪದಿಂದ ಏನನ್ನೂ ಸಾಧಿಸಲಾಗದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಹಣದ ಹರಿವು ಹೆಚ್ಚಾಗಲಿದೆ. ಮಾನಸಿಕ ನೆಮ್ಮದಿ ಸಿಗುವುದು. ಹೊಸ ಭರವಸೆಯ ಅವಕಾಶಗಳು ಹುಡುಕಿಕೊಂಡು ಬರುವವು. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಫಲ ಸಿಗಲಿದೆ. ಆರೋಗ್ಯ ಉತ್ತಮ ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಸಿಂಹ: ಕುಟುಂಬದ ಆಪ್ತರ ಹಾಗೂ ಸ್ನೇಹಿತರ ಸೂಕ್ತ ಸಲಹೆ ಸಹಕಾರ ಸಿಗುವುದು. ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ವಿಶ್ರಾಂತಿ ಸಿಗಲಿದೆ. ಹಣಕಾಸು ಪ್ರಗತಿ ಉತ್ತಮ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ, ಅಗತ್ಯವಿದ್ದಷ್ಟೆ ಮಾತನಾಡಿ, ಸಮಾಧಾನದಿಂದ ವರ್ತಿಸಿ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಅನೇಕ ವಿಷಯಗಳು ನಿಮಗೆ ಒತ್ತಡ ಉಂಟು ಮಾಡುವ ಸಾಧ್ಯತೆ. ಖರ್ಚು ಹೆಚ್ಚಾಗುವ ಸಾಧ್ಯತೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ತುಲಾ: ಆಪ್ತ ಸಂಬಂಧಿಕರಿಂದ ಸಹಾಯ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸು ಪ್ರಗತಿ. ಹಳೆಯ ವಿಚಾರಗಳು ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ, ಎಚ್ಚರಿಕೆ ಇರಲಿ. ಉತ್ತಮ ಆರೋಗ್ಯ, ಉದ್ಯೋಗದಲ್ಲಿ ಸಾಧಾರಣ ಫಲ. ನಿಮಗಿಂದು ಕುಟುಂಬದ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ವಾಹನ ಚಾಲನೆ ಮಾಡುವಾಗ ಆದಷ್ಟು ಎಚ್ಚರಿಕೆ ವಹಿಸಿ. ಆಪ್ತರ ಸಲಹೆಗಳನ್ನು ತಿರಸ್ಕಾರ ಭಾವದಿಂದ ನೋಡಬೇಡಿ, ವ್ಯತಿರಿಕ್ತವಾದ ಪರಿಣಾಮದಿಂದಾಗಿ ಸ್ನೇಹದಲ್ಲಿ ಬಿರುಕು ಮೂಡುವ ಸಾಧ್ಯತೆ. ಅನಗತ್ಯ ಖರ್ಚು. ಆರೋಗ್ಯ ಸಾಧಾರಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು: ಅನಿರೀಕ್ಷಿತ ಪ್ರಯಾಣ. ಆತುರದಿಂದ ಆಡುವ ಅತಿರೇಕದ ಮಾತುಗಳು ಜಗಳ ತರಬಹುದು, ಸಮಾಧಾನದಿಂದ ವರ್ತಿಸಿ. ಅಮೂಲ್ಯ ವಸ್ತುಗಳು ಕೈತಪ್ಪುವ ಸಾಧ್ಯತೆ, ಎಚ್ಚರಿಕೆ ಇರಲಿ. ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಕರ: ಆರೋಗ್ಯ ಉತ್ತಮ. ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಾಧಿಸುವಿರಿ. ಉದ್ಯೋಗಿಗಳಿಗೆ ಭಡ್ತಿ ದೊರೆಯುವ ಸಾಧ್ಯತೆ, ವೇತನ ಹೆಚ್ಚಳವಾಗಬಹುದು. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಪ್ರಯತ್ನಿಸುವಿರಿ. ಶುಭ ಸಮಾರಂಭದ ಆಮಂತ್ರಣ ಬರುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕುಂಭ: ಆಹಾರದ ಕ್ರಮ ಆರೋಗ್ಯದಲ್ಲಿ ವ್ಯತ್ಯಾಸ ಮೂಡಿಸಬಹುದು. ಅಮೂಲ್ಯ ವಸ್ತುಗಳ ಬಗೆಗೆ ಕಾಳಜಿ ವಹಿಸಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ಉದ್ಯೋಗದಲ್ಲಿ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸುವುದರಲ್ಲಿ ಯಶಸ್ಸು ಪಡೆಯುವಿರಿ. ಸಂಗಾತಿಯ ಹಸ್ತಕ್ಷೇಪ ನಿಮಗೆ ಮುಜುಗರ ಉಂಟು ಮಾಡುವ ಸಾಧ್ಯತೆ. ಉದ್ಯೋಗದಲ್ಲಿ ಭರವಸೆ ಮೂಡಲಿದೆ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | Astrology: ನಿಮ್ಮ ರಾಶಿಗೆ ಸಾಡೇಸಾತಿ ಮತ್ತು ಶನಿ ದೆಸೆ ಯಾವಾಗ ಇದೆ ಗೊತ್ತೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪರಿಸರ

Wildlife Sanctuaries: ಮಳೆ ಬರುವ ಮುನ್ನ ಈ ವನ್ಯಜೀವಿಧಾಮಗಳನ್ನು ನೋಡಲು ಪ್ರಯತ್ನಿಸಿ

ವನ್ಯಜೀವಿಗಳ ಬೆನ್ನು ಹತ್ತಲು ಯಾರಿಗೂ ಆಸ್ಪದವಿಲ್ಲ. ಆದರೂ, ಪ್ರಕೃತಿ ಪ್ರಿಯರೆಲ್ಲ ಇಂತಹ ರಾಷ್ಟ್ರೀಯ ಉದ್ಯಾನ/ ವನ್ಯಜೀವಿಧಾಮಗಳು ಮುಚ್ಚಿಕೊಳ್ಳುವ ಕೆಲವೇ ದಿನಗಳ ಮುಂಚಿತವಾಗಿ ಅಲ್ಲಿಗೆ ಭೇಟಿ ಕೊಡಬೇಕು. ಮಳೆಗಾಲ ಈಗಷ್ಟೇ ಶುರುವಾದ ವನ್ಯಜೀವಿಧಾಮದಲ್ಲಿ ತಿರುಗಾಡಿ ಬರುವುದೇ ಹಬ್ಬ. ಒಂದೆರಡು ಮಳೆ ಸುರಿದು ಕಾಡೆಲ್ಲ ಕಳೆಕಳೆಯಾಗಿ ಹಸಿರಾಗಿ ಚಿಗಿತುಕೊಂಡು ಅದ್ಭುತ ದೃಶ್ಯಗಳನ್ನು ನಿಮಗೆ ನೀಡುವ ಜೊತೆಗೆ ರೋಮಾಂಚಕ (wildlife sanctuaries) ಅನುಭವಗಳನ್ನು ನೀಡುತ್ತವೆ

VISTARANEWS.COM


on

Wildlife Sanctuaries
Koo

ಮಳೆಗಾಲ ಮತ್ತು ಕಾಡು! ಪ್ರಕೃತಿ ಪ್ರಿಯರ ಅತ್ಯಂತ ಇಷ್ಟದ ಕಾಂಬಿನೇಷನ್‌ ಇದು. ಮಳೆಗಾಲದಲ್ಲೊಮ್ಮೆ ಕಾಡಿಗೆ ಕರೆದರೆ ಯಾವ ಪ್ರಕೃತಿಪ್ರೇಮಿ ಬೇಡ ಅನ್ನಲಾರ ಹೇಳಿ? ವನ್ಯಜೀವಿ ಪ್ರಿಯರ, ಪ್ರಕೃತಿಪ್ರಿಯರ ಈ ಆಸೆಗೆ ತಣ್ಣೀರೆರಚುವಂತೆ ಮಳೆಗಾಲ ಬಂದ ತಕ್ಷಣ ರಾಷ್ಟ್ರೀಯ ಉದ್ಯಾನ/ವನ್ಯಜೀವಿಧಾಮಗಳೆಲ್ಲ ಬಾಗಿಲು ಮುಚ್ಚುತ್ತವೆ. ಕಾಡಿನ ಮದ್ಯದಲ್ಲಿ ಸಫಾರಿ ಹೋಗಲು, ವನ್ಯಜೀವಿಗಳ ಬೆನ್ನು ಹತ್ತಲು ಯಾರಿಗೂ ಆಸ್ಪದವಿಲ್ಲ. ಆದರೂ, ಪ್ರಕೃತಿ ಪ್ರಿಯರೆಲ್ಲ ಇಂತಹ ರಾಷ್ಟ್ರೀಯ ಉದ್ಯಾನ/ ವನ್ಯಜೀವಿಧಾಮಗಳು ಮುಚ್ಚಿಕೊಳ್ಳುವ ಕೆಲವೇ ದಿನಗಳ ಮುಂಚಿತವಾಗಿ ಅಲ್ಲಿಗೆ ಭೇಟಿ ಕೊಡಬೇಕು. ಮಳೆಗಾಲ ಈಗಷ್ಟೇ ಶುರುವಾದ ವನ್ಯಜೀವಿಧಾಮದಲ್ಲಿ ತಿರುಗಾಡಿ ಬರುವುದೇ ಹಬ್ಬ. ಒಂದೆರಡು ಮಳೆ ಸುರಿದು ಕಾಡೆಲ್ಲ ಕಳೆಕಳೆಯಾಗಿ ಹಸಿರಾಗಿ ಚಿಗಿತುಕೊಂಡು ಅದ್ಭುತ ದೃಶ್ಯಗಳನ್ನು ನಿಮಗೆ ನೀಡುವ ಜೊತೆಗೆ ರೋಮಾಂಚಕ ಅನುಭವಗಳನ್ನು ನೀಡುತ್ತವೆ. ಬನ್ನಿ, ಯಾವೆಲ್ಲ ರಾಷ್ಟ್ರೀಯ ಉದ್ಯಾನಗಳನ್ನು ಮಳೆಗಾಲಕ್ಕೆ ಸ್ವಲ್ಪವೇ ಮುನ್ನ ನೀವು ನೋಡುವುದೇ ಒಂದು ಅನುಭವ (wildlife sanctuaries) ಎಂಬುದನ್ನು ತಿಳಿಯೋಣ ಬನ್ನಿ.

Jim Corbett National Park, Uttarakhand

ಜಿಮ್‌ ಕಾರ್ಬೆಟ್‌ ರಾಷ್ಟ್ರೀಯ ಉದ್ಯಾನ, ಉತ್ತರಾಖಂಡ

ಉತ್ತರಾಖಂಡದ ಬಹು ಪ್ರಸಿದ್ಧ ರಾಷ್ಟ್ರೀಯ ಉದ್ಯಾನ ಭಾರತದ ಅತ್ಯಂತ ಹಳೆಯ ವನ್ಯಜೀವಿಧಾಮಗಳಲ್ಲಿ ಒಂದು. ಹುಲಿಗಳನ್ನು ಕಾಣಲು ಇದು ಪ್ರಶಸ್ತ ಜಾಗ. ಜೂನ್‌ ಮದ್ಯದಲ್ಲಿ ಇದು ಮುಚ್ಚಿದರೆ ಮತ್ತೆ ತೆರೆಯುವುದು ಅಕ್ಟೋಬರ್‌ನಲ್ಲಿಯೇ. ಆದರೆ, ಜೂನ್‌ ಆರಂಭದಲ್ಲಿ ಈ ಕಾಡು ನೋಡುವುದು ಬಲು ಸೊಗಸು.

Ranthambore National Park, Rajasthan

ರಣಥಂಬೋರ್‌ ರಾಷ್ಟ್ರೀಯ ಉದ್ಯಾನ, ರಾಜಸ್ಥಾನ

ಭಾರತದ ದೊಡ್ಡ ರಾಷ್ಟ್ರೀಯ ಉದ್ಯಾನಗಳ ಪೈಕಿ ಇದೂ ಒಂದು. ಹುಲಿಗಳನ್ನು ನೋಡಬೇಕೆಂದು ಬಯಸುವ ಪ್ರತಿ ವನ್ಯಜೀವಿ ಪ್ರೇಮಿ ಹಾಗೂ ವನ್ಯಜೀವಿ ಛಾಯಾಗ್ರಾಹಕರು ಈ ರಾಷ್ಟ್ರೀಯ ಉದ್ಯಾನಕ್ಕೆ ಬೇಟಿ ಕೊಡಲು ಬಯಸುವುದು ಸಾಮಾನ್ಯ. ಇದು ಜೂನ್‌ 30ರ ವೇಳೆಗೆ ಮುಚ್ಚುವ ಕಾರಣ ಅದಕ್ಕೂ ಮೊದಲು ಬೇಟಿ ಕೊಟ್ಟರೆ ಅಪರೂಪದ ಅನುಭವಗಳು ನಿಮ್ಮದಾಗಬಹುದು.

Bandhavgarh National Park, Madhya Pradesh

ಬಾಂಧವಗಢ ರಾಷ್ಟ್ರೀಯ ಉದ್ಯಾನ, ಮಧ್ಯಪ್ರದೇಶ

ಹುಲಿಯನ್ನು ನೋಡಲು ಬಯಸುವ ಪ್ರತಿಯೊಬ್ಬ ವನ್ಯಜೀವಿ ಪ್ರಿಯರಿಗೂ ತಿಳಿದ ವನ್ಯಜೀವಿಧಾಮ ಇದು. ಇಲ್ಲಿ ಹುಲಿ ದರ್ಶನದ ಸಾಧ್ಯತೆ ಹೆಚ್ಚು. ಈಗಷ್ಟೇ ಮಳೆಬಿದ್ದ ಕಾಡು ಹಸಿರಾಗಿ ಕಂಗೊಳಿಸುವ ಸಂದರ್ಭ ಮಧ್ಯದಲ್ಲಿ ಆಕಳಿಸುತ್ತಾ ಕುಳಿತ ಹುಲಿಯನ್ನೊಮ್ಮೆ ಕಲ್ಪಿಸಿ ನೋಡಿ. ರೋಮಾಂಚಿತಗೊಳ್ಳುವುದಿಲ್ಲವೇ ಹೇಳಿ! ಜುಲೈನಿಂದ ಅಕ್ಟೋಬರ್‌ವರೆಗೆ ಈದು ಮುಚ್ಚಿರುವ ಕಾರಣ ಜೂನ್‌ನಲ್ಲಿ ಭೇಟಿಕೊಡಲು ಸುಸಮಯ.

Kanha National Park, Madhya Pradesh

ಕನ್ಹಾ ರಾಷ್ಟ್ರೀಯ ಉದ್ಯಾನ, ಮಧ್ಯಪ್ರದೇಶ

ಇದೂ ಕೂಡಾ ಹುಲಿಗಳಿಗೆ ಬಲುಪ್ರಸಿದ್ಧವಾದ ರಾಷ್ಟ್ರೀಯ ಉದ್ಯಾನ. ಮಳೆಗಾಲ ಆರಂಭವಾದ ತಕ್ಷಣ ಕಾಣಲು ಇದು ಬಲು ಚಂದ. ಜೂನ್‌ 30ರಿಂದ ಅಕ್ಟೋಬರ್‌ 15ರವರೆಗೆ ಇದು ಮುಚ್ಚಿರುತ್ತದೆ.

Pench National Park, Madhya Pradesh and Maharashtra

ಪೆಂಚ್‌ ರಾಷ್ಟ್ರೀಯ ಉದ್ಯಾನ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ

ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದ ಗಡಿಯಲ್ಲಿರುವ ಈ ರಾಷ್ಟ್ರೀಯ ಉದ್ಯಾನ ಅತ್ಯಂತ ಸುಂದರವಾದ ಕಾಡುಗಳಲ್ಲಿ ಒಂದು. ರುಡ್ಯಾರ್ಡ್‌ ಕಿಪ್ಲಿಂಗ್‌ ಅವರ ದಿ ಜಂಗಲ್‌ ಬುಕ್‌ ಇದೇ ಕಾಡಿನಿಂದ ಸ್ಪೂರ್ತಿಗೊಂಡು ರಚಿತವಾದ ಕತೆ. ಹೆಚ್ಚು ಹುಲಿಗಳಿರುವ ಈ ಕಾಡು ಜೂನ್‌ 16ರಿಂದ ಸೆಪ್ಟೆಂಬರ್‌ವರೆಗೆ ಪ್ರವಾಸಿಗರಿಗೆ ಮುಚ್ಚಿರುತ್ತದೆ.

Nagarhole National Park, Karnataka

ನಾಗರಹೊಳೆ ರಾಷ್ಟ್ರೀಯ ಉದ್ಯಾನ, ಕರ್ನಾಟಕ

ನಮ್ಮ ಕರ್ನಾಟಕದ ನಾಗರಹೊಳೆ ರಾಷ್ಟ್ರೀಯ ಉದ್ಯಾನ ಭಾರತದ ಅತ್ಯಂತ ಸುಂದರವಾದ ವನ್ಯಜೀವಿಧಾಮಗಳಲ್ಲಿ ಒಂದು. ಹುಲಿಗಳ ಜೊತೆಗೆ ಆನೆ, ಚಿರತೆ, ಜಿಂಕೆ, ಕಾಡಮ್ಮೆಗಳೂ ಸೇರಿದಂತೆ ಅನೇಕ ಪ್ರಾಣಿಗಳ ಸಂತಿತಿ ಇಲ್ಲಿ ವಿಪುಲವಾಗಿದೆ. ಮಳೆ ಈಗಷ್ಟೇ ಬರಲು ಆರಂಭವಾಗುವ ಸಂದರ್ಭ ಇದು ರಮ್ಯವಾಗಿ ಕಾಣುತ್ತದೆ. ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ಇದು ಮುಚ್ಚಿರುತ್ತದೆ. ಅಕ್ಟೋಬರ್‌ ತಿಂಗಳಲ್ಲೂ ಇದು ಅದ್ಭುತವಾಗಿ ಕಾಣುತ್ತದೆ.

Continue Reading

ಪ್ರಮುಖ ಸುದ್ದಿ

Rishabh Pant : ವಿಶ್ವಕಪ್​​ಗೆ ಮುನ್ನ ಟೀಮ್ ಇಂಡಿಯಾ ಜೆರ್ಸಿ ಧರಿಸಿದ ರಿಷಭ್ ಪಂತ್ ವಿಡಿಯೋ ಹಂಚಿಕೊಂಡ ಬಿಸಿಸಿಐ

Rishabh Pant:

VISTARANEWS.COM


on

Rishab Pant
Koo

ಬೆಂಗಳೂರು: ಭೀಕರ ಕಾರು ಅಫಘಾತದ ಬಳಿಕ ಚೇತರಿಸಿಕೊಂಡು ಒಂದು ವರ್ಷಕ್ಕೂ ಹೆಚ್ಚು ಸಮಯದ ನಂತರ ರಾಷ್ಟ್ರೀಯ ಕರ್ತವ್ಯಕ್ಕೆ ಹಾಜರಾಗಿರುವ ರಿಷಭ್ ಪಂತ್​ಗೆ ಬಿಸಿಸಿಐ ವಿಶೇಷ ಗೌರವ ಸಲ್ಲಿದೆ ಭಾರತದ ವಿಕೆಟ್ ಕೀಪರ್ ರಿಷಭ್ ಪಂತ್ ಹೊಸ ನೀಲಿ ಜೆರ್ಸಿಯಲ್ಲಿ ಕಾಣಿಸಿಕೊಂಡಿರುವ ಅವರ ವಿಡಿಯೊವನ್ನು ಶೇರ್ ಮಾಡಿದೆ. ಸುಂದರ ಕ್ರಿಕೆಟ್ ಆಟಗಾರ ಮುಂದಿನ ತಿಂಗಳು ನಡೆಯಲಿರುವ ಟಿ 20 ವಿಶ್ವಕಪ್ 2024 ರಲ್ಲಿ ಮತ್ತೆ ತಮ್ಮ ದೇಶಕ್ಕಾಗಿ ಆಡುವ ವಿಷಯವನ್ನು ಸಂಭ್ರಮಿಸುವಂತೆ ಮಾಡಿದೆ. ಜೂನ್ 5ರಂದು ನ್ಯೂಯಾರ್ಕ್​ನಲ್ಲಿ ಐರ್ಲೆಂಡ್ ವಿರುದ್ಧ ಭಾರತ ತನ್ನ ಮೊದಲ ಪಂದ್ಯವನ್ನಾಡಲಿದೆ. ತಂಡದ ಮತ್ತೊಬ್ಬ ವಿಕೆಟ್ ಕೀಪರ್-ಬ್ಯಾಟರ್​ ಸಂಜು ಸ್ಯಾಮ್ಸನ್​ಗಿಂತ ಮುಂಚಿತವಾಗಿ ಪಂತ್ ಅವರನ್ನು ಆರಂಭಿಕ ಇಲೆವೆನ್​​ನಲ್ಲಿ ಆಯ್ಕೆ ಮಾಡಿದರೆ, ಅದು ಮೆನ್ ಇನ್ ಬ್ಲೂ ತಂಡದ ಐತಿಹಾಸಿಕ ಕ್ಷಣವಾಗಬಹುದು.

ಪಂತ್ ಪಿಚ್​ಗೆ ಮರಳುವ ಮೊದಲು ಹೃದಯಪೂರ್ವಕ ಸಂದೇಶದೊಂದಿಗೆ ಭಾರತೀಯ ಶರ್ಟ್​ನಲ್ಲಿ ತಮ್ಮ ಹೊಸ ನೋಟದ ಬಗ್ಗೆ ತಮ್ಮ ಅಭಿಮಾನಿಗಳಿಗೆ ಒಂದು ಇಣುಕು ನೋಟವನ್ನು ನೀಡಿದ್ದಾರೆ.

“ಸಿದ್ಧ. ಸಮರ್ಥ. ನಿರ್ಧರಿಸಲಾಗಿದೆ! ಪ್ರತಿಕೂಲ ಪರಿಸ್ಥಿತಿಯಿಂದ ಗೆಲುವಿನವರೆಗೆ, ಐಸಿಸಿ ಪುರುಷರ ಟಿ 20 ವಿಶ್ವಕಪ್​ಗೆ ರಿಷಭ್ ಪಂತ್​ ಅವರ ಪ್ರಯಾಣವು ದೃಢನಿಶ್ಚಯಕ್ಕೆ ಸಾಕ್ಷಿ. ಜೂನ್ 5 ರಿಂದ ನಡೆಯಲಿರುವ ಟಿ20 ವಿಶ್ವ ಕಪ್​ನಲ್ಲಿ ವಿಕೆಟ್ ಕೀಪರ್​, “ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ.

ಇದನ್ನೂ ಓದಿ: Rishabh Pant : ವಿಶ್ವಕಪ್​​ಗೆ ಮುನ್ನ ಟೀಮ್ ಇಂಡಿಯಾ ಜೆರ್ಸಿ ಧರಿಸಿದ ರಿಷಭ್ ಪಂತ್ ವಿಡಿಯೋ ಹಂಚಿಕೊಂಡ ಬಿಸಿಸಿಐ

ಭಯಾನಕ ಘಟನೆಯ ನಂತರ ಪಂತ್ ಮರಳಿದ್ದಾರೆ

ಡಿಸೆಂಬರ್ 30, 2022 ರ ಸಂಜೆ, ಪಂತ್ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ನಡೆದ ಭಯಾನಕ ಕಾರು ಅವಘಡದಲ್ಲಿ ಸಿಲುಕಿದ್ದರು. ಅವರ ವಾಹನವು ರಸ್ತೆ ಬಿಟ್ಟು ಹೆಚ್ಚಿನ ವೇಗದಲ್ಲಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಹೊಸ ವರ್ಷದ ಮುನ್ನಾದಿನವನ್ನು ಕುಟುಂಬದೊಂದಿಗೆ ಕಳೆಯಲು ಮುಂಜಾನೆ ಮನೆಗೆ ಪ್ರಯಾಣಿಸುತ್ತಿದ್ದಾಗ ಪಂತ್ ಅವರ ಕಾರಿಗೆ ಬೆಂಕಿ ಹೊತ್ತಿಕೊಂಡಿತ್ತು.

ಆ ಪ್ರದೇಶದ ಸ್ಥಳೀಯರು ಅವರನ್ನು ಉರಿಯುತ್ತಿರುವ ವಾಹನದಿಂದ ಹೊರಗೆಳೆದು ಆಸ್ಪತ್ರೆಗೆ ಸಾಗಿಸಿ ಜೀವ ಉಳಿಸಿದ್ದರು. ಪುನಶ್ಚೇತನ ಮತ್ತು ಚೇತರಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸುವ ಮೊದಲು, ಪಂತ್ ಅವರ ಮೊಣಕಾಲುಗಳು ಮತ್ತು ದೇಹದ ಇತರ ಭಾಗಗಳಲ್ಲಿ ಹಲವಾರು ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗಿತ್ತು. ಸಂಪೂರ್ಣ ಆರೋಗ್ಯಕ್ಕೆ ಮರಳಲು ಅವರಿಗೆ ಒಂದು ವರ್ಷಕ್ಕಿಂತ ಹೆಚ್ಚು ಸಮಯ ಹಿಡಿಯಿತು. ಆದಾಗ್ಯೂ ಅಷ್ಟೊಂದು ಭೀಕರ ಅಪಘಾತದ ಬಳಿಕ ಅವರು ಚೇತರಿಸಿಕೊಂಡ ವೇಗ ಅಸಾಮಾನ್ಯವಾಗಿದೆ.

Continue Reading

ಕ್ರೀಡೆ

T20 World Cup : ಭಾರತ- ಪಾಕ್ ಪಂದ್ಯ ಐಸಿಸ್​ ಉಗ್ರರಿಂದ ಬಾಂಬ್ ಬೆದರಿಕೆ

T20 World Cup: ವರದಿಯ ಪ್ರಕಾರ, ಐಸಿಸ್ ಅನುಯಾಯಿಗಳು Matrix.org ನೆಟ್ವರ್ಕ್​ನಲ್ಲಿ ಆನ್ಲೈನ್ ಚಾಟ್ ರೂಮ್​​ಗಳನ್ನು ಬಳಸುತ್ತಿರುವುದು ಕಂಡುಬಂದಿದೆ, ಅಲ್ಲಿ ಅವರು “ನಿಮ್ಮ ಶಸ್ತ್ರಾಸ್ತ್ರವನ್ನು ಸಿದ್ಧಪಡಿಸಿ, ನಿಮ್ಮ ಯೋಜನೆಯನ್ನು ರೂಪಿಸಿ ಮತ್ತು ನಂತರ ನಮ್ಮವರನ್ನು ಆಕರ್ಷಿಸಿ” ಎಂಬ ಸಂದೇಶ ಹಾಕಿದ್ದಾರೆ. ವಿಶೇಷವಾಗಿ ಟಿ 20 ವಿಶ್ವಕಪ್​ನಂತ ಪ್ರಮುಖ ಕ್ರೀಡಾಕೂಟಗಳನ್ನು ಗುರಿಯಾಗಿಸುವ ಬಗ್ಗೆ ಈ ಸಂದೇಶದಲ್ಲಿ ತಿಳಿಸಲಾಗಿದೆ.

VISTARANEWS.COM


on

T20 World Cup
Koo

ಬೆಂಗಳೂರು: ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ಜಂಟಿಯಾಗಿ ಆತಿಥ್ಯ ವಹಿಸಲಿರುವ ಮುಂಬರುವ ಟಿ 20 ವಿಶ್ವಕಪ್ 2024 ಗಾಗಿ ಅಭ್ಯಾಸ ಪಂದ್ಯಗಳು ಆರಂಭಗೊಂಡಿವೆ. ಈ ಮೆಗಾ-ಈವೆಂಟ್ ಜೂನ್ 1 ರಂದು ಪ್ರಾರಂಭವಾಗಲಿದೆ. ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಜಾಗತಿಕ ಕ್ರಿಕೆಟ್ ಟೂರ್ನಿಯನ್ನು ಆಯೋಜಿಸಲಾಗುತ್ತಿದೆ. ಏತನ್ಮಧ್ಯೆ ಟೂರ್ನಿಗೆ ಐಸಿಸ್​ (ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್​ ಸಿರಿಯಾ ಗ್ರೂಪ್) ಬೆದರಿಕೆ ಒಡ್ಡಿದೆ. ಉಗ್ರರು ಪ್ರಸಾರ ಮಾಡಿದ ಆಘಾತಕಾರಿ ಸಂದೇಶದಿಂದ ಕ್ರಿಕೆಟ್ ಜಗತ್ತು ತಲ್ಲಣಗೊಂಡಿದೆ. ಭಯೋತ್ಪಾದಕ ಬೆದರಿಕೆಯು ಈವೆಂಟ್​ಗೆ ಸಂಬಂಧಿಸಿದ ಸಂಘಟಕರು ಮತ್ತು ಸದಸ್ಯರ ಮೇಲೆ ಮಾತ್ರವಲ್ಲದೆ, ಪಂದ್ಯಾವಳಿಗೆ ಸಜ್ಜಾಗುತ್ತಿರುವ ಕ್ರಿಕೆಟ್ ಉತ್ಸಾಹಿಗಳು ಮತ್ತು ಬೆಂಬಲಿಗರಲ್ಲಿ ಆತಂಕ ಉಂಟು ಮಾಡಿದೆ. ವಆಯಾ ರಾಷ್ಟ್ರಗಳನ್ನು ಹಲವಾರು ಸ್ಥಳಗಳಲ್ಲಿ ಹುರಿದುಂಬಿಸಲು ಈಗಾಗಲೇ ಮನಸ್ಸು ಮಾಡಿದವರ ಅಭಿಮಾನಿಗಳ ಮೇಲೆ ಆತಂಕದ ಛಾಯೆಯನ್ನು ಮೂಡಿಸಿದೆ.

ವರದಿಯ ಪ್ರಕಾರ, ಐಸಿಸ್ ಅನುಯಾಯಿಗಳು Matrix.org ನೆಟ್ವರ್ಕ್​ನಲ್ಲಿ ಆನ್ಲೈನ್ ಚಾಟ್ ರೂಮ್​​ಗಳನ್ನು ಬಳಸುತ್ತಿರುವುದು ಕಂಡುಬಂದಿದೆ, ಅಲ್ಲಿ ಅವರು “ನಿಮ್ಮ ಶಸ್ತ್ರಾಸ್ತ್ರವನ್ನು ಸಿದ್ಧಪಡಿಸಿ, ನಿಮ್ಮ ಯೋಜನೆಯನ್ನು ರೂಪಿಸಿ ಮತ್ತು ನಂತರ ನಮ್ಮವರನ್ನು ಆಕರ್ಷಿಸಿ” ಎಂಬ ಸಂದೇಶ ಹಾಕಿದ್ದಾರೆ. ವಿಶೇಷವಾಗಿ ಟಿ 20 ವಿಶ್ವಕಪ್​ನಂತ ಪ್ರಮುಖ ಕ್ರೀಡಾಕೂಟಗಳನ್ನು ಗುರಿಯಾಗಿಸುವ ಬಗ್ಗೆ ಈ ಸಂದೇಶದಲ್ಲಿ ತಿಳಿಸಲಾಗಿದೆ.

ಅಂತರ್ಜಾಲದಲ್ಲಿ ಪ್ರಸಾರವಾದ ಗ್ರಾಫಿಕ್ ಪೋಸ್ಟರ್ ಅನ್ನು ಬಳಸಿಕೊಂಡು, ಭಯೋತ್ಪಾದಕ ಸಂಘಟನೆಯು ರೈಫಲ್ ಹಿಡಿದಿರುವ ವ್ಯಕ್ತಿಯನ್ನು ಚಿತ್ರಿಸುವ ಮೂಲಕ ತೀವ್ರ ಬೆದರಿಕೆಯನ್ನು ರವಾನಿಸಿದೆ. ನೀವು ಪಂದ್ಯಗಳಿಗಾಗಿ ಕಾಯಿರಿ…. ಮತ್ತು ನಾವು ನಿಮಗಾಗಿ ಕಾಯುತ್ತೇವೆ……” ಹೆಚ್ಚುವರಿಯಾಗಿ, ಪೋಸ್ಟ್​​ನಲ್ಲಿ ನ್ಯೂಯಾರ್ಕ್ನ ನಸ್ಸೌ ಕೌಂಟಿ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂ ಮತ್ತು ಜೂನ್ 9 ರ ನಡೆಯಲಿರುವ ಭಾರತ- ಪಾಕ್ ಪಂದ್ಯವನ್ನು ನಿರ್ದಿಷ್ಟವಾಗಿ ಉಲ್ಲೇಖಿಸಲಾಗಿದೆ. ಟಿಕೆಟ್ ಮಾರಾಟ ಮತ್ತು ಪ್ರಸಾರ ಅಂಕಿಅಂಶಗಳ ದೃಷ್ಟಿಯಿಂದ ಹೆಚ್ಚು ಪ್ರಚಾರವನ್ನು ಪಡೆದ ಪಂದ್ಯ ಇದಾಗಿದೆ.

ಚಿತ್ರದಲ್ಲಿ ಕ್ರೀಡಾಂಗಣದ ಚಿತ್ರಣದ ಮೇಲೆ ವೈಮಾನಿಕ ಡ್ರೊನ್​ಗಳನ್ನು ಸುತ್ತಿಸಲಾಗಿದೆ. ಇದರೊಂದಿಗೆ ಡೈನಮೈಟ್ ಕಡ್ಡಿ ಮತ್ತು ಟಿಕ್ಕಿಂಗ್ ಗಡಿಯಾರವಿದೆ. ಮ್ಯಾನ್​ಹಟ್​ನ ಹೊರಗೆ ಇತ್ತೀಚೆಗೆ ನಿರ್ಮಿಸಲಾದ ಸ್ಥಳದಲ್ಲಿ ಇಂಡೋ-ಪಾಕ್ ಪಂದ್ಯಕ್ಕೆ ಗರಿಷ್ಠ 34,000 ಅಭಿಮಾನಿಗಳು ಹಾಜರಾಗುವ ನಿರೀಕ್ಷೆಯಿದೆ. ಐಸೆನ್ಹೋವರ್ ಪಾರ್ಕ್​ನ ತಾತ್ಕಾಲಿಕ ಕ್ರೀಡಾಂಗಣದಲ್ಲಿ ನಡೆಯಲಿರುವ ಎಂಟು ಪಂದ್ಯಗಳಲ್ಲಿ ಭಾರತ-ಪಾಕಿಸ್ತಾನ ಪಂದ್ಯ ಒಂದಾಗಿದೆ.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ನಡುರಸ್ತೆಯಲ್ಲೇಕೆ ನಮಾಜ್‌ ಮಾಡಬೇಕು?

Namaz On Road: ಹಿಂದೂ ಧರ್ಮೀಯರು ಕೂಡ ವೈಯಕ್ತಿಕ ಪೂಜೆ, ನಿತ್ಯಪೂಜೆಯಂಥ ಆಚರಣೆಗಳನ್ನು ಮನೆಯೊಳಗೆ, ದೇವರ ಕೋಣೆಯಲ್ಲಿ ಮಾಡಿಕೊಳ್ಳುತ್ತಾರೆ. ಎಂದೂ ಇತರರಿಗೆ ತೊಂದರೆ ಮಾಡುವಂತೆ ನೆರವೇರಿಸುವುದಿಲ್ಲ. ಇನ್ನು ಮುಸ್ಲಿಂ ಸಮುದಾಯದ ಉರೂಸ್‌ನಂಥ ಸಾರ್ವಜನಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಎಲ್ಲರೂ ಸೇರುವಂತಹ ವಿಶಾಲ ಮೈದಾನಗಳಲ್ಲಿ ನಡೆಸುವ ಅವಕಾಶವಿದ್ದೇ ಇದೆ. ಇದಕ್ಕೆ ಯಾರೂ ಅಡ್ಡಿಪಡಿಸಿಲ್ಲ. ಮಸೀದಿಗಳಲ್ಲಿ ಪ್ರತಿದಿನ ಐದು ಬಾರಿ ನಡೆಸುವ ಆಜಾನ್‌ ಅನ್ನು ಕೂಡ ಧ್ವನಿವರ್ಧಕದಲ್ಲಿ ಪ್ರಸಾರ ಮಾಡುವುದನ್ನು ಕೂಡ ಬಹುತೇಕ ಹಿಂದೂಗಳು ಯಾವುದೇ ರೀತಿಯಲ್ಲಿ ಆಕ್ಷೇಪಿಸಿಲ್ಲ. ಹೀಗಿರುವಾಗ ನಡುರಸ್ತೆಯಲ್ಲಿ ನಮಾಜ್ ಮಾಡಿ ಶಾಂತಿ ಕದಡುವುದು ಎಷ್ಟು ಸರಿ?

VISTARANEWS.COM


on

namaz on road
Koo

ಮಂಗಳೂರು ನಗರದ ರಸ್ತೆಯಲ್ಲಿ ನಮಾಜ್ (Namaz On Road) ಮಾಡಿದ ವಿಚಾರಕ್ಕೆ ಬಿಜೆಪಿ ನಾಯಕರು ಹಾಗೂ ಹಿಂದು ಸಂಘಟನೆಗಳು ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ನಮಾಜ್ ಮಾಡಿದವರ ವಿರುದ್ಧ ಕದ್ರಿ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಐಪಿಸಿ ಕಲಂ 341, 283, 143 ಜೊತೆಗೆ 149ರಡಿ ಸುಮೋಟೊ ಪ್ರಕರಣ ದಾಖಲಾಗಿದೆ. ಮೇ 24ರಂದು ನಗರದ ಕಂಕನಾಡಿಯ ಮಸೀದಿ ಎದುರು ಯುವಕರ ತಂಡ ನಮಾಜ್‌ ಮಾಡಿತ್ತು. ಸಾರ್ವಜನಿಕ ಸ್ಥಳದಲ್ಲಿ ಓಡಾಡಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಆಗಿತ್ತು. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಈ ಘಟನೆ ಬಗ್ಗೆ ಹಿಂದು ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಕಿಡಿಕಾರಿದ್ದರು. ಇಂತಹ ಘಟನೆ ಮರುಕಳಿಸಿದರೆ ಅದೇ ವೇಳೆಯಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುವುದಾಗಿ ವಿಶ್ವ ಹಿಂದೂ ಪರಿಷದ್‌ ಎಚ್ಚರಿಕೆ ನೀಡಿತ್ತು. ಇದರ ಬೆನ್ನಲ್ಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರ ಸಕ್ರಿಯತೆ ಮೆಚ್ಚಬೇಕಾದ ಸಂಗತಿ.

ಕೆಲವರು ಇದನ್ನು ಸಾರ್ವಜನಿಕ ತಾಣಗಳಲ್ಲಿ ನಡೆಯುವ ಹಿಂದೂ ಧಾರ್ಮಿಕ ಆಚರಣೆಗಳ ಜೊತೆಗೆ ಹೋಲಿಸುತ್ತಿದ್ದಾರೆ. ನಮಾಜ್‌ ಸಂಪೂರ್ಣ ವೈಯಕ್ತಿಕ ಸಂಗತಿ ಹಾಗೂ ಅದೊಂದು ವೈಯಕ್ತಿಕ ಧಾರ್ಮಿಕ ಆಚರಣೆ. ಅದೇನೂ ಸಾರ್ವಜನಿಕ ಪ್ರಾರ್ಥನೆಯಾಗಲೀ, ಸಾರ್ವಜನಿಕ ಸತ್ಯನಾರಾಯಣ ಪೂಜೆಯಂತಹ ಕಾರ್ಯಕ್ರಮವಾಗಲೀ, ಮೊಸರು ಕುಡಿಕೆಯಂಥ ಮನರಂಜನಾ ಕಾರ್ಯಕ್ರಮವಾಗಲೀ ಅಲ್ಲ. ಆದ್ದರಿಂದ ಅದನ್ನು ಹಿಂದೂ ಧಾರ್ಮಿಕ ಆಚರಣೆಗಳ ಜೊತೆಗೆ ಹೋಲಿಸಲು ಸಾಧ್ಯವಿಲ್ಲ. ಯಾವುದೇ ಹಿಂದೂ ಹಬ್ಬಕ್ಕೆ ಸಂಬಂಧಿಸಿದ ಆಚರಣೆಯನ್ನೇ ಮಾಡುವುದಿದ್ದರೂ ರಸ್ತೆಯನ್ನು ಬಂದ್‌ ಮಾಡಿ ಯಾರೂ ಮಾಡುವುದಿಲ್ಲ. ಸಾರ್ವಜನಿಕ ಮೈದಾನ ಅಥವಾ ವೈಯಕ್ತಿಕ ಖಾಲಿ ಜಾಗಗಳಲ್ಲಿ, ರಸ್ತೆಯಲ್ಲಿ ಯಾವುದೇ ಅಡೆತಡೆಯಾಗದಂತೆ ಆಚರಿಸುತ್ತಾರೆ. ರಾಮನವಮಿಯಲ್ಲಿ ನಡೆಯುವ ಪಾನಕ ಪನಿವಾರ ವಿತರಣೆ ಕೂಡ ರಸ್ತೆಯಲ್ಲಿ ಹೋಗಿ ಬರುವವರ ದಣಿವನ್ನು ತಣಿಸುವಂತೆ ಆಪ್ಯಾಯಮಾನವಾಗಿರುತ್ತದೆಯೇ ಹೊರತು, ಕಿರಿಕಿರಿ ಮಾಡುವಂತೆ ಇರುವುದಿಲ್ಲ. ಆದ್ದರಿಂದ ಇದನ್ನು ಹಿಂದೂ ಆಚರಣೆಗಳ ಜೊತೆಗೆ ಹೋಲಿಸುವುದು ಕುತರ್ಕ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಕುಡುಕ ಬಾಲಕನಿಂದ ಅಪಘಾತ ಪ್ರಕರಣ; ಪುಣೆ ಪೊಲೀಸರ ದಿಟ್ಟ ಕ್ರಮ ಶ್ಲಾಘನೀಯ

ಹಿಂದೂ ಧರ್ಮೀಯರು ಕೂಡ ವೈಯಕ್ತಿಕ ಪೂಜೆ, ನಿತ್ಯಪೂಜೆಯಂಥ ಆಚರಣೆಗಳನ್ನು ಮನೆಯೊಳಗೆ, ದೇವರ ಕೋಣೆಯಲ್ಲಿ ಮಾಡಿಕೊಳ್ಳುತ್ತಾರೆ. ಎಂದೂ ಇತರರಿಗೆ ತೊಂದರೆ ಮಾಡುವಂತೆ ನೆರವೇರಿಸುವುದಿಲ್ಲ. ಇನ್ನು ಮುಸ್ಲಿಂ ಸಮುದಾಯದ ಉರೂಸ್‌ನಂಥ ಸಾರ್ವಜನಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಎಲ್ಲರೂ ಸೇರುವಂತಹ ವಿಶಾಲ ಮೈದಾನಗಳಲ್ಲಿ ನಡೆಸುವ ಅವಕಾಶವಿದ್ದೇ ಇದೆ. ಇದಕ್ಕೆ ಯಾರೂ ಅಡ್ಡಿಪಡಿಸಿಲ್ಲ. ಮಸೀದಿಗಳಲ್ಲಿ ಪ್ರತಿದಿನ ಐದು ಬಾರಿ ನಡೆಸುವ ಆಜಾನ್‌ ಅನ್ನು ಕೂಡ ಧ್ವನಿವರ್ಧಕದಲ್ಲಿ ಪ್ರಸಾರ ಮಾಡುವುದನ್ನು ಕೂಡ ಬಹುತೇಕ ಹಿಂದೂಗಳು ಯಾವುದೇ ರೀತಿಯಲ್ಲಿ ಆಕ್ಷೇಪಿಸಿಲ್ಲ. ಆದರೆ ಯಾವಾಗ ರಸ್ತೆಯಲ್ಲಿ ನಮಾಜ್‌ ಎಂಬುದು ಹೊಸದಾಗಿ ಆರಂಭವಾಯಿತೋ ಆಗ ಸ್ಥಳೀಯರು ಆತಂಕಕ್ಕೆ ಒಳಗಾಗುವುದು ಸಹಜ. ಇದೊಂದು ನಿತ್ಯದ ಪರಿಪಾಠವೇ ಆಗಿಬಿಟ್ಟರೆ, ಆಗ ನಿತ್ಯವೂ ದಾರಿಹೋಕರು ಕಿರಿಕಿರಿ ಅನುಭವಿಸಬೇಕಾಗುತ್ತದೆ. ಪ್ರತಿದಿನ ನಿರ್ದಿಷ್ಟ ಹೊತ್ತಿಗೆ ಇಂತಿಂಥ ರಸ್ತೆಯಲ್ಲಿ ಹೋಗಬಾರದು ಎಂಬ ಅಘೋಷಿತ ಕರ್ಫ್ಯೂ ಸೃಷ್ಟಿಯಾಗಿಬಿಡುತ್ತದೆ.

ಒಂದು ಸಮಾಜದಲ್ಲಿ ಅಸಹನೆ ಬೇರೂರಲು ಆರಂಭವಾಗುವುದು ಇಂಥ ಸಣ್ಣ, ಆದರೆ ಮೊಳಕೆಯಲ್ಲೇ ನಾವು ಹತ್ತಿಕ್ಕಬೇಕಾದ ಸಂಗತಿಗಳಿಂದಲೇ. ರಸ್ತೆಯಲ್ಲಿ ನಮಾಜ ಮಾಡುವುದನ್ನು ಸಾಂಪ್ರದಾಯಿಕ ಮುಸ್ಲಿಮರು ಕೂಡ ಸಮರ್ಥಿಸುವುದಿಲ್ಲ. ಮಸೀದಿಯ ಒಳಗೆ ಅಥವಾ ಮನೆಯ ಒಳಗೆ ನಡೆಯಬೇಕಾದ ಒಂದು ಖಾಸಗಿ ಧಾರ್ಮಿಕ ಸಂಗತಿಯನ್ನು ಸಾರ್ವಜನಿಕ ಮಾಡಿದರೆ ಅದರ ಘನತೆ ಕಳೆದುಹೋಗುತ್ತದೆ. ಅದಕ್ಕಿರಬಹುದಾದ ಪವಿತ್ರ ಆವರಣವೂ ನಾಶವಾಗುತ್ತದೆ. ನಮಾಜ್‌ ಎಂಬುದು ಮುಸ್ಲಿಮರಿಗೆ ಹೇಗೋ ಹಾಗೆಯೇ ಹಿಂದೂಗಳು ಕೂಡ ಗೌರವಿಸಬೇಕಾದ ಸಂಗತಿ. ಆ ಗೌರವ ಇರುವುದರಿಂದಲೇ, ರಸ್ತೆಯಲ್ಲಿ ಮಾಡುವ ಮೂಲಕ ಅದರ ಘನತೆಯನ್ನು ನಾಶ ಮಾಡದಿರಿ ಎಂಬ ಸಂದೇಶವನ್ನು ಹಿಂದೂ ಸಮಾಜದ ಹಲವರು ನೀಡುತ್ತಿದ್ದಾರೆ ಎಂದು ತಿಳಿಯಬೇಕು. ಈ ಮಾತನ್ನು ಮುಸ್ಲಿಂ ಸಮುದಾಯ ಒಪ್ಪಿ ಗೌರವಿಸಿದರೆ ಸಮಾಜದ ಸಾಮರಸ್ಯ ಕದಡದು.

Continue Reading
Advertisement
Rishab Pant
ಪ್ರಮುಖ ಸುದ್ದಿ19 mins ago

Rishabh Pant : ವಿಶ್ವಕಪ್​​ಗೆ ಮುನ್ನ ಟೀಮ್ ಇಂಡಿಯಾ ಜೆರ್ಸಿ ಧರಿಸಿದ ರಿಷಭ್ ಪಂತ್ ವಿಡಿಯೋ ಹಂಚಿಕೊಂಡ ಬಿಸಿಸಿಐ

Wildlife Sanctuaries
ಪರಿಸರ19 mins ago

Wildlife Sanctuaries: ಮಳೆ ಬರುವ ಮುನ್ನ ಈ ವನ್ಯಜೀವಿಧಾಮಗಳನ್ನು ನೋಡಲು ಪ್ರಯತ್ನಿಸಿ

T20 World Cup
ಕ್ರೀಡೆ49 mins ago

T20 World Cup : ಭಾರತ- ಪಾಕ್ ಪಂದ್ಯ ಐಸಿಸ್​ ಉಗ್ರರಿಂದ ಬಾಂಬ್ ಬೆದರಿಕೆ

namaz on road
ಪ್ರಮುಖ ಸುದ್ದಿ1 hour ago

ವಿಸ್ತಾರ ಸಂಪಾದಕೀಯ: ನಡುರಸ್ತೆಯಲ್ಲೇಕೆ ನಮಾಜ್‌ ಮಾಡಬೇಕು?

Dina Bhavishya
ಭವಿಷ್ಯ1 hour ago

Dina Bhavishya : ಈ ರಾಶಿಯವರು ಜಂಟಿ ಹೂಡಿಕೆ ವ್ಯವಹಾರದಿಂದ ದೂರವಿರಿ

Prajwal Revanna Case
ಪ್ರಮುಖ ಸುದ್ದಿ7 hours ago

Prajwal Revanna Case : ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ

chakravarthy sulibele
ಕರ್ನಾಟಕ8 hours ago

Chakravarthy Sulibele : ಮಂಡಿಯೂರಿ ಭೈರಪ್ಪ ಅವರಿಂದ ಸಾವರ್ಕರ್ ಪ್ರಶಸ್ತಿ ಸ್ವೀಕರಿಸಿದ ಚಕ್ರವರ್ತಿ ಸೂಲಿಬೆಲೆ

Cyber Crime
ಪ್ರಮುಖ ಸುದ್ದಿ8 hours ago

Cyber Crime : ಹೆಣ್ಣು ಮಕ್ಕಳ ಫೋಟೋ ಅಶ್ಲೀಲಗೊಳಿಸಿ ಪೋಸ್ಟ್​ ಮಾಡುತ್ತಿದ್ದವನ ಬಂಧನ

Bomb Threat
ಪ್ರಮುಖ ಸುದ್ದಿ8 hours ago

Bomb Threat : ತೆಲಂಗಾಣ ಡಿಸಿಎಂ ಮನೆಗೆ ಬಾಂಬ್​ ಬೆದರಿಕೆ; ಆತಂಕ

Acid attack
ಕರ್ನಾಟಕ9 hours ago

Acid attack: ಮನೆ ಬಾಗಿಲು ತೆರೆಯದ ಹಿನ್ನೆಲೆ ವಿವಾಹಿತ ಪ್ರಿಯತಮೆಗೆ ಆ್ಯಸಿಡ್ ಎರಚಿದ ಪ್ರಿಯಕರ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ11 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು19 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ7 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌