Horoscope Today : ರಥ ಸಪ್ತಮಿಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ - Vistara News

ಪ್ರಮುಖ ಸುದ್ದಿ

Horoscope Today : ರಥ ಸಪ್ತಮಿಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

ಶುಭಕೃತ ನಾಮ ಸಂವತ್ಸರ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷದ ಸಪ್ತಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Horoscope Today daily horoscope
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (28-೦೧-202೩)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ.

ತಿಥಿ: ಸಪ್ತಮಿ 08:42 ವಾರ: ಶನಿವಾರ
ನಕ್ಷತ್ರ: ಅಶ್ವಿನಿ 19:04 ಯೋಗ: ಸಾಧ್ಯ11:53
ಕರಣ: ವಾಣಿಜ 08:42 ಇಂದಿನ ವಿಶೇಷ: ರಥ ಸಪ್ತಮಿ
ಅಮೃತಕಾಲ: ಬೆಳಗ್ಗೆ 11 ಗಂಟೆ 45 ನಿಮಿಷದಿಂದ 01 ಗಂಟೆ 23 ನಿಮಿಷದವರೆಗೆ.

ಸೂರ್ಯೋದಯ: 06 : 46    ಸೂರ್ಯಾಸ್ತ: 0೬ :19

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ  (Horoscope Today)

Horoscope Today

ಮೇಷ: ನಿಮ್ಮ ಆಕರ್ಷಕ ವ್ಯಕ್ತಿತ್ವ ಇತರರ ಗಮನ ಸೆಳೆಯಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ವಿಶೇಷ ಅತಿಥಿಗಳ ಆಗಮನ, ಭೇಟಿ ಹರುಷ ತರುವುದು. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಲಾಭ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ವೃಷಭ: ದೈಹಿಕವಾಗಿ ಮತ್ತು ಮಾನಸಿಕವಾಗಿ ಇಂದು ಕೊಂಚಮಟ್ಟಿಗೆ ಬಳಲುವ ಸಾಧ್ಯತೆ. ಕುಟುಂಬದಲ್ಲಿ ಹೊಸ ಅತಿಥಿಗಳ ಆಗಮನ ಸಂತಸ ಹೆಚ್ಚಿಸಲಿದೆ. ಆರ್ಥಿಕವಾಗಿ ಪ್ರಗತಿ. ಆತುರದಲ್ಲಿ ಮಾಡುವ ಕೆಲಸ ಅಪಾಯ ತಂದೀತು ಎಚ್ಚರಿಕೆ ಇರಲಿ. ಆರೋಗ್ಯದ ಕುರಿತು ವಿಶೇಷ ಕಾಳಜಿ ಇರಲಿ. ಉದ್ಯೋಗಿಗಳಿಗೆ ಹಿರಿಯ ಅಧಿಕಾರಿಗಳಿಂದ ಕಿರುಕುಳ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಹಳೆಯ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ಪೋಷಕರಿಂದ ಹಣಕಾಸು ರೀತಿಯಿಂದ ಬೆಂಬಲ. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಪ್ರಗತಿ. ಉದ್ಯೋಗಿಗಳಿಗೆ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ಕಟಕ: ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ದಿನಕ್ಕಿಂತಲೂ ಹೆಚ್ಚಿನ ಪ್ರಗತಿ ಸಾಧಿಸಲಿದ್ದೀರಿ. ಅತಿಥಿಗಳ ಆಗಮನ ಸಂತಸ ತರುವುದು. ಸಂಗಾತಿಯ ಮಾತುಗಳು ಅಹಿತಕರವೆನಿಸುವವು. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ, ಪ್ರೋತ್ಸಾಹ ಸಿಗುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಹಿಂದೆ ಮಾಡಿದ ತಪ್ಪಿನ ಅರಿವಾಗುವುದು. ಕುಟುಂಬದ ಸದಸ್ಯರೊಂದಿಗೆ ಪ್ರವಾಸ ಬೆಳೆಸುವ ಸಾಧ್ಯತೆ. ವಿನಾಕಾರಣ ಸಂಬಂಧಿಕರೊಂದಿಗೆ ಮಾತಿಗೆ ಇಳಿದು ಅಪಾಯ ತಂದುಕೊಳ್ಳುವುದು ಬೇಡ. ಮಾತಿನಲ್ಲಿ ಹಿಡಿತವಿರಲಿ. ಆರೋಗ್ಯ ಪರಿಪೂರ್ಣ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಹೆಚ್ಚಿದ ಕಿರಿಕಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ: ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ. ಮನಸ್ಸಿಗೆ ಸಮಾಧಾನ ಸಿಗಲಿದೆ. ಆರೋಗ್ಯ ಪರಿಪೂರ್ಣ. ಅನಿವಾರ್ಯ ಕಾರಣಗಳಿಂದ ಖರ್ಚು. ಉದ್ಯೋಗಿಗಳಿಗೆ ಯಶಸ್ಸಿನ ದಿನ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ತುಲಾ: ಬಿಡುವಿರದ ಕಾರ್ಯದ ಒತ್ತಡ, ಅದರ ಹೊರತಾಗಿಯೂ ಆರೋಗ್ಯ ಪರಿಪೂರ್ಣ. ಅನಿವಾರ್ಯ ಕಾರಣಗಳಿಂದ ಖರ್ಚು. ಉದ್ಯೋಗಿಗಳಿಗೆ ಶುಭ ಫಲ. ದಿನದ ಕೊನೆಯಲ್ಲಿ ಮನೆಯ ಸದಸ್ಯರ ಭಿನ್ನಾಭಿಪ್ರಾಯ ನಿಮ್ಮ ಮನಸ್ಸಿಗೆ ನೋವು ತರುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

Horoscope Today

ವೃಶ್ಚಿಕ: ಇಂದು ಎಲ್ಲಿಲ್ಲದ ಉತ್ಸಾಹ, ಸಂತಸ ಇರಲಿದೆ. ನಿಮ್ಮ ಆಕರ್ಷಕ ವ್ಯಕ್ತಿತ್ವ ಇತರರ ಗಮನ ಸೆಳೆಯುವುದು. ಯಾರಾದರೂ ನಿಮ್ಮ ಸಹಾಯವನ್ನು ಬೇಡುವ ಸಾಧ್ಯತೆ, ಯೋಚಿಸಿ ಸಹಾಯ ಮಾಡಿ. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಸಾಧಾರಣ ಪ್ರಗತಿ. ಉದ್ಯೋಗಿಗಳಿಗೆ ಮಿಶ್ರ ಫಲ.
ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ಧನಸ್ಸು: ನಿರಂತರ ಪರಿಶ್ರಮದಿಂದ ಇಂದು ವಿಶ್ರಾಂತಿ ಸಿಗಲಿದೆ. ದಿನದ ಮಧ್ಯ ಭಾಗದಲ್ಲಿ ಆರೋಗ್ಯ ಕೊಂಚ ಮಟ್ಟಿಗೆ ಹದಗೆಡುವ ಸಾಧ್ಯತೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ನಡೆಯುವ ಸಾಧ್ಯತೆ. ಎಚ್ಚರಿಕೆ ಇರಲಿ. ಆರ್ಥಿಕವಾಗಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮಕರ: ಒತ್ತಡಗಳಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ. ಇದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ. ಆರ್ಥಿಕವಾಗಿ ಸದೃಢ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಸಿಗಲಿವೆ. ದಿನದ ಮಟ್ಟಿಗೆ ಸಣ್ಣ ಪ್ರಯಾಣ ಬೆಳೆಸಲಿದ್ದೀರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ದೀರ್ಘಕಾಲದ ಪ್ರಯಾಣದಿಂದ ಆರೋಗ್ಯದಲ್ಲಿ ವ್ಯತ್ಯಾಸ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ. ಕುಟುಂಬದ ಸದಸ್ಯರು ಸಕಾರಾತ್ಮಕವಾಗಿ ಸ್ಪಂದಿಸುವರು. ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗುವವು. ಉದ್ಯೋಗಿಗಳಿಗೆ ಯಶಸ್ಸು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

Horoscope Today

ಮೀನ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಕೆಲಸದ ಸ್ಥಳದಲ್ಲಿ ಅಥವಾ ವ್ಯಾಪಾರದಲ್ಲಿ ನಿಮ್ಮ ಯಾವುದೇ ಅಜಾಗರೂಕತೆ ಇಂದು ನಿಮಗೆ ಆರ್ಥಿಕ ನಷ್ಟವನ್ನು ಉಂಟುಮಾಡಬಹುದು. ಅತಿಥಿಗಳ ಆಗಮನ ನಿಮ್ಮ ಮನಸ್ಸಿಗೆ ಸಮಾಧಾನ ತರುವುದು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ : Ratha Saptami 2023 : ಸರ್ವರಿಗೂ ಪ್ರಿಯ ಸೂರ್ಯದೇವನನ್ನು ಪೂಜಿಸುವ ಹಬ್ಬ ರಥ ಸಪ್ತಮಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಬರದ ಮಧ್ಯೆಯೂ ಭರ್ಜರಿ ಕಾಣಿಕೆ; ಸವದತ್ತಿ ಯಲ್ಲಮ್ಮ ದೇಗುಲದಲ್ಲಿ 11 ಕೋಟಿ ರೂ. ಸಂಗ್ರಹ!

ಬರಗಾಲದ ಮಧ್ಯೆಯೂ ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮ ದೇವಿ ದೇಗುಲಕ್ಕೆ ಭಾರಿ ಪ್ರಮಾಣದಲ್ಲಿ ಕಾಣಿಕೆ ಹರಿದುಬಂದಿದೆ. ಒಂದೇ ವರ್ಷದಲ್ಲಿ 11 ಕೋಟಿ ರೂ. ಸಂಗ್ರಹವಾಗಿದೆ.

VISTARANEWS.COM


on

Savadatti Yallamma
Koo

ಬೆಳಗಾವಿ: ಕುಂದಾ ನಗರಿ ಬೆಳಗಾವಿ ಸೇರಿ ರಾಜ್ಯದ 200ಕ್ಕೂ ಅಧಿಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಕೃಷಿ ಚುಟುವಟಿಕೆ ಬಿಡಿ, ಕುಡಿಯಲು ಕೂಡ ನೀರಿಲ್ಲದ ಪರಿಸ್ಥಿತಿ ಎದುರಾಗಿದೆ. ಇಂತಹ ಪರಿಸ್ಥಿತಿ ಮಧ್ಯೆಯೂ ಬೆಳಗಾವಿ (Belagavi) ಜಿಲ್ಲೆ ಸವದತ್ತಿಯಲ್ಲಿರುವ ಯಲ್ಲಮ್ಮ ದೇವಿ (Savadatti Yallamma Devi Temple) ದೇವಾಲಯಕ್ಕೆ ಭರಪೂರ ಕಾಣಿಕೆ ಹರಿದುಬಂದಿದೆ. ದೇವಾಲಯದ ಹುಂಡಿ ಹಣವನ್ನು (Donation Box) ಎಣಿಕೆ ಮಾಡಲಾಗಿದ್ದು, ಒಂದೇ ವರ್ಷದಲ್ಲಿ 11 ಕೋಟಿ ರೂ. ಕಾಣಿಗೆ ಸಂಗ್ರಹವಾಗಿದೆ.

ಸವದತ್ತಿ ಯಲ್ಲಮ್ಮ ದೇವಿ ದೇವಾಲಯವು ಉತ್ತರ ಕರ್ನಾಟಕದ ಪ್ರಸಿದ್ಧ ಯಾತ್ರಾ ಸ್ಥಳವಾಗಿದ್ದು, ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಜನ ಭೇಟಿ ನೀಡುತ್ತಾರೆ. ಹಾಗಾಗಿ, ಬರಗಾಲದ ಮಧ್ಯೆಯೂ ದೇವಾಲಯದ ಹುಂಡಿಯಲ್ಲಿ 2023-24ನೇ ಸಾಲಿನಲ್ಲಿ 11.23 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಭಕ್ತರು ನಗದು, ಚಿನ್ನ, ಬೆಳ್ಳಿಯ ಆಭರಣಗಳನ್ನು ಹುಂಡಿಗೆ ಹಾಕಿ ಭಕ್ತಿ ಮೆರೆಯುತ್ತಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ 2.4 ಕೋಟಿ ರೂ. ಹೆಚ್ಚಿನ ಕಾಣಿಕೆ ಸಂಗ್ರಹವಾಗಿದೆ.

ದೇವಾಲಯದ ಹುಂಡಿಯಲ್ಲಿ 2022–23ರಲ್ಲಿ 8.01 ಕೋಟಿ ರೂ. ನಗದು, 66.28 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು 15.43 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣ ಸೇರಿ ಒಟ್ಟು 8.83 ಕೋಟಿಯ ಕಾಣಿಕೆ ಸಂಗ್ರಹವಾಗಿತ್ತು. ಇನ್ನು 2023–24ರಲ್ಲಿ ತೀವ್ರ ಬರಗಾಲದ ಮಧ್ಯೆಯೂ 10.22 ಕೋಟಿ ರೂ. ನಗದು, 84.14 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು 16.65 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣಗಳು ಸೇರಿ 11.23 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಜತೆಗೆ ಕೆನಡಾ ದೇಶದ ಎರಡು ಕರೆನ್ಸಿ ನೋಟುಗಳು ಕೂಡ ಪತ್ತೆಯಾಗಿವೆ.

ಇದನ್ನೂ ಓದಿ: Koppala News: ಅಂಜನಾದ್ರಿ ಆಂಜನೇಯ ಸ್ವಾಮಿ ದೇಗುಲದ ಹುಂಡಿ ಹಣ ಎಣಿಕೆ; 9.29 ಲಕ್ಷ ರೂ. ಸಂಗ್ರಹ

ಶಿವಮೊಗ್ಗ ಜಿಲ್ಲೆ ಚಂದ್ರಗುತ್ತಿಯ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದ ಕಳೆದ ಡಿಸೆಂಬರ್ ತಿಂಗಳಲ್ಲಿ ಕಾಣಿಕೆ ಹುಂಡಿ ಎಣಿಸಿದಾಗ 31,35,360 ರೂ. ಸಂಗ್ರಹವಾಗಿತ್ತು. ಈ ಬಾರಿ ದೇವಸ್ಥಾನದ ಹುಂಡಿಯಲ್ಲಿ 22,52,700 ರೂ. ಕಾಣಿಕೆ ಸಂಗ್ರಹವಾಗಿದೆ, ಎಣಿಕೆ ಕಾರ್ಯ ನಡೆಯುವ ಕೊಠಡಿ ಸುತ್ತ ಸಿಸಿ ಕ್ಯಾಮೆರಾ ಅಳವಡಿಸಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

ಹಾಸನದಲ್ಲಿ ಅಕ್ರಮ ಗೋಮಾಂಸ ಜಾಲ; 60 ಗೋವುಗಳನ್ನು ಕೊಂದ ರಾಕ್ಷಸರು!

ಹಾಸನದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುವ ಜಾಲ ಬಯಲಾಗಿದೆ. ಸುಮಾರು 60 ಗೋವುಗಳನ್ನು ಮಾರಾಟಗಾರರು ವಧೆ ಮಾಡಿದ್ದು, ಪೊಲೀಸರು ದಾಳಿ ನಡೆಸಿದ್ದಾರೆ.

VISTARANEWS.COM


on

Cows
Koo

ಹಾಸನ: ಗೋವುಗಳ ಅಕ್ರಮ ಸಾಗಣೆ (Cow Smuggling), ಅಕ್ರಮವಾಗಿ ಗೋಮಾಂಸ ಮಾರಾಟ ನಿಯಂತ್ರಣಕ್ಕೆ ಎಷ್ಟೇ ಕಾನೂನು ಜಾರಿಯಲ್ಲಿದ್ದರೂ ಕೆಲವೆಡೆ ಯಥೇಚ್ಛವಾಗಿ ಗೋಮಾಂಸ ಮಾರಾಟ ದಂಧೆ ಮುಂದುವರಿದಿದೆ. ಇದಕ್ಕೆ ಉದಾಹರಣೆ ಎಂಬಂತೆ, ಹಾಸನದಲ್ಲಿ (Hassan) ಗೋಮಾಂಸದ ಅಕ್ರಮ ಮಾರಾಟದ ಜಾಲವೊಂದು ಬಯಲಾಗಿದೆ. ಮಾಂಸ ಮಾರಾಟಕ್ಕಾಗಿ ದುರುಳರು ಸುಮಾರು 60ಕ್ಕೂ ಅಧಿಕ ಗೋವುಗಳನ್ನು ವಧೆ (Cow Slaughter) ಮಾಡಿದ್ದಾರೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಬಾಗೂರು ರಸ್ತೆಯಲ್ಲಿ ಸುಮಾರು 60 ಗೋವುಗಳನ್ನು ಕೊಂದಿರುವ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ನಿಖರ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಐದು ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ಇನ್ನು 60 ಗೋವುಗಳನ್ನು ಕೊಂದ ದುಷ್ಕರ್ಮಿಗಳು, ಅವುಗಳನ್ನು ನೇತು ಹಾಕಿದ್ದಾರೆ. ಪೊಲೀಸರು ಸುಮಾರು 10 ಸಾವಿರ ಕೆಜಿ ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ.

Cow slaugher near bynduru

ಮೊಹಮ್ಮದ್‌ ಅಬ್ದುಲ್‌ ಹಕ್‌ ವಿರುದ್ಧ ಆರೋಪ

ಮೊಹಮ್ಮದ್‌ ಅಬ್ದುಲ್‌ ಹಕ್‌ ಎಂಬುವವರು ಗೋವುಗಳ ಮಾಂಸವನ್ನು ಅಕ್ರಮ ಮಾರಾಟದಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ. ಗೋವುಗಳನ್ನು ವಧೆ ಮಾಡುವಾಗಲೇ ಪೊಲೀಸರು ದಾಳಿ ನಡೆಸಿದ್ದು, ದುಷ್ಕರ್ಮಿಗಳು ಕೂಡಲೇ ಪರಾರಿಯಾಗಿದ್ದಾರೆ. ಗೋವುಗಳನ್ನು ಸಂಹರಿಸಿ, ಅವುಗಳ ರಕ್ತವನ್ನು ಕೆರೆ ಬಿಡುತ್ತಿದ್ದರು ಎಂಬ ಕುರಿತು ಕೂಡ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗೋಮಾಂಸವನ್ನು ವಶಪಡಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಸಿಂಧಿ ಕರುಗಳ ರಕ್ಷಣೆ

ಚನ್ನರಾಯಪಟ್ಟಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸಿಂಧಿ ಕರುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಬೆಳಗಿನ ಜಾವ 4.30ರ ಸುಮಾರಿಗೆ ಪೊಲೀಸರು ದಾಳಿ ನಡೆಸಿದ ಪೊಲೀಸರು 26 ಸಿಂಧಿ ಕರುಗಳನ್ನು ರಕ್ಷಿಸಿದ್ದಾರೆ. ಇದರೊಂದಿಗೆ ಒಂದೇ ದಿನ ಎರಡು ಕಡೆ ಪೊಲೀಸರು ದಾಳಿ ನಡೆಸಿದ್ದು, ಕರುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಪೊಲೀಸರನ್ನು ಕಾಣುತ್ತಲೇ ವಾಹನ ಚಾಲಕ ಸೇರಿ ಹಲವು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಗೋವುಗಳ ರಕ್ಷಣೆಗೆ ಕೈ ಜೋಡಿಸಲು ನಿವೃತ್ತ ಆರ್‌ಸಿ ಮಹಾಂತೇಶ ಹಿರೇಮಠ ಕರೆ

ಕೆಲ ತಿಂಗಳ ಹಿಂದಷ್ಟೇ ಎರಡು ಹಸುಗಳಿಗೆ ಗುಂಡಿಕ್ಕಿ ಕೊಂದ ಘಟನೆ ಹಾಸನದ ಬೇಲೂರು ತಾಲೂಕಿನ ಹಿರೇಹಸಡೆ ಗ್ರಾಮದಲ್ಲಿ ನಡೆದಿತ್ತು. ಗ್ರಾಮದ ವಸಂತ್‌‌ಕುಮಾರ್, ಶಿವಮ್ಮ ಎಂಬುವವರಿಗೆ ಸೇರಿದ ಹಸುಗಳು ಕಾಣೆಯಾಗಿದ್ದವು. ವಸಂತ್‌ಕುಮಾರ್, ಶಿವಮ್ಮ ಸೇರಿ ಗೋವುಗಳಿಗಾಗಿ ಹುಡುಕಾಡಿದ್ದರು. ಎರಡು ದಿನಗಳ ಐಬಿಸಿ ಎಸ್ಟೇಟ್‌ನಲ್ಲಿ ಗೋವುಗಳ ಮೃತದೇಹ ಪತ್ತೆಯಾಗಿದ್ದವು. ಕಿರಾಕತರು ಎರಡು ಗಬ್ಬದ ಹಸುಗಳನ್ನು ಗುಂಡು ಹಾರಿಸಿ ಕೊಂದಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Bangalore Water Crisis: “ನೀರು ಕೊಡ್ತೀವಿ, ಪ್ಲೀಸ್‌ ಹೋಗ್ಬೇಡಿ…” ಐಟಿ ಸಂಸ್ಥೆಗಳಿಗೆ ರಾಜ್ಯ ಮನವಿ; ಗಾಳ ಹಾಕಿದ ಕೇರಳ

Bangalore Water Crisis: ಬೆಂಗಳೂರಿನ ನೀರಿನ ಬಿಕ್ಕಟ್ಟಿನ ಸಮಯ ಸಾಧಿಸಿ ಕೇರಳ ರಾಜ್ಯ, ತಮ್ಮಲ್ಲಿಗೆ ಆಗಮಿಸುವಂತೆ ಬೆಂಗಳೂರಿನ ಉನ್ನತ ಶ್ರೇಣಿಯ ತಂತ್ರಜ್ಞಾನ ಕಂಪನಿಗಳನ್ನು ಸಂಪರ್ಕಿಸಿತ್ತು.

VISTARANEWS.COM


on

Bangalore water crisis IT companies
Koo

ಬೆಂಗಳೂರು: ಬೆಂಗಳೂರಿನಲ್ಲಿರುವ ನೀರಿನ ಕೊರತೆ ಸಮಸ್ಯೆಯಿಂದಾಗಿ (Bangalore water crisis, Bengaluru water crisis) ಬೃಹತ್‌ ಐಟಿ ಸಂಸ್ಥೆಗಳು (IT companies) ರಾಜಧಾನಿ ತೊರೆಯಲು ಮುಂದಾಗಿವೆ; ಇವುಗಳಿಗೆ ಕೇರಳ ರಾಜ್ಯ (Kerala State) ಗಾಳ ಹಾಕುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ, ನೀರು ಪೂರೈಕೆಯ ಬಗ್ಗೆ ಜಲಮಂಡಳಿ (BWSSB) ಭರವಸೆ ನೀಡಿದೆ. ಐಟಿ ಸಂಸ್ಥೆಗಳಿಗೆ ಒದಗಿಸುವಷ್ಟು ನೀರು ನಮ್ಮ ಬಳಿ ಇದೆ ಎಂದು ತಿಳಿಸಲಾಗಿದೆ.

ನಿನ್ನೆ ಐಟಿ- ಬಿಟಿ ಕಂಪನಿಗಳ ಜೊತೆಗೆ ಬೆಂಗಳೂರು ಒಳಚರಂಡಿ ಹಾಗೂ ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಸಭೆ ನಡೆಸಿದರು. ಔಟರ್ ರಿಂಗ್ ರೋಡ್ ಕಂಪನಿ ಅಸೋಸಿಯೇಶನ್ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ನೀರಿನ ಸಮಸ್ಯೆ ಉಂಟಾಗಿರುವುದರ ಬಗ್ಗೆ ಕಂಪನಿ ಪದಾಧಿಕಾರಿಗಳು ಜಲಮಂಡಳಿ ಅಧ್ಯಕ್ಷರ ಗಮನಕ್ಕೆ ತಂದರು.

“ಐಟಿ, ಬಿಟಿ ಕಂಪನಿಗಳಿಗೆ ಸಮರ್ಪಕ ನೀರು ಪೂರೈಕೆಗೆ ಜಲಮಂಡಳಿ ಸಿದ್ಧವಿದೆ. ನಗರದಲ್ಲಿ ನೀರಿನ ಕೊರತೆಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದೇವೆ. ಇದೇ ರೀತಿ ಐಟಿ, ಬಿಟಿ ಕಂಪನಿಗಳಿಗೂ ಸಮರ್ಪಕವಾಗಿ ನೀರು ಪೂರೈಸಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ” ಎಂದು ಅಧ್ಯಕ್ಷರು ತಿಳಿಸಿದರು.

“ಕಾವೇರಿ 5ನೇ ಹಂತ ಪೂರ್ಣಗೊಂಡರೆ ನಗರಕ್ಕೆ ಪ್ರತಿದಿನ ಹೆಚ್ಚುವರಿ 775 mld ನೀರು ಸಿಗಲಿದೆ. ಇದರಿಂದ ನೀರಿನ ಕೊರತೆ ಕಡಿಮೆಯಾಗಲಿದೆ” ಎಂದು ಅಧ್ಯಕ್ಷರು ಮಾಹಿತಿ ನೀಡಿದ್ದು, ನಗರದಿಂದ ಹೊರ ಹೋಗದಂತೆ ಐಟಿಬಿಟಿ ಕಂಪನಿಗಳಿಗೆ ಮನವಿ ಮಾಡಿದರು.

ದೇಶದ ಟೆಕ್ ಹಬ್‌ನಲ್ಲಿ ನೀರಿನ ಬಿಕ್ಕಟ್ಟಿನ ವರದಿಗಳು ಹೊರಹೊಮ್ಮಿದ ನಂತರ, ಕೇರಳ ರಾಜ್ಯವನ್ನು ವಿಸ್ತರಣೆಗೆ ಪರಿಗಣಿಸುವಂತೆ ಆ ರಾಜ್ಯವು ಬೆಂಗಳೂರಿನ ಉನ್ನತ ಶ್ರೇಣಿಯ ತಂತ್ರಜ್ಞಾನ ಕಂಪನಿಗಳನ್ನು ಸಂಪರ್ಕಿಸಿತ್ತು. “ಬೆಂಗಳೂರಿನ ನೀರಿನ ಬಿಕ್ಕಟ್ಟಿನ ವರದಿಗಳನ್ನು ನಾವು ಓದಿದ ನಂತರ, ನಾವು ಐಟಿ ಕಂಪನಿಗಳಿಗೆ ಎಲ್ಲಾ ಸೌಲಭ್ಯಗಳನ್ನು ಮತ್ತು ಸಾಕಷ್ಟು ನೀರನ್ನು ನೀಡುವುದಾಗಿ ಪತ್ರ ಬರೆದಿದ್ದೇವೆ. ನಮ್ಮ ರಾಜ್ಯದಲ್ಲಿ ದೊಡ್ಡ ಮತ್ತು ಸಣ್ಣ 44 ನದಿಗಳಿವೆ. ಆದ್ದರಿಂದ ನೀರಿನ ಸಮಸ್ಯೆಯೇ ಇಲ್ಲ” ಎಂದು ಕೇರಳದ ಕೈಗಾರಿಕೆಗಳು ಮತ್ತು ಕಾನೂನು ಸಚಿವ ಪಿ. ರಾಜೀವ್ ಹೇಳಿದ್ದರು.

ಬೆಂಗಳೂರು ಐಟಿ ಉದ್ಯಮದ ಮೂಲಕ ಭಾರತದ 254 ಶತಕೋಟಿ ಡಾಲರ್‌ ಆದಾಯದ ಕೇಂದ್ರವಾಗಿದೆ. ಈ ಬೇಸಿಗೆಯ ಆರಂಭದಿಂದ ನಗರದಲ್ಲಿ ಪ್ರತಿದಿನ ಸುಮಾರು 500 ದಶಲಕ್ಷ ಲೀಟರ್ ನೀರಿನ ಕೊರತೆಯನ್ನು ಎದುರಿಸುತ್ತಿದೆ.

ಕೆಲವು ದಿನಗಳ ಹಿಂದೆ, ನಗರದಲ್ಲಿರುವ ಬೃಹತ್‌ ಸಂಸ್ಥೆಗಳಿಗೆ ಒದಗಿಸುವ ಕುಡಿಯುವ ನೀರಿನ ಪೂರೈಕೆಯಲ್ಲಿ ಶೇ.20ರಷ್ಟು ಕಡಿತ ಮಾಡಲಾಗಿದೆ. ಈ ಕ್ರಮದ ಬಗ್ಗೆ ಕೆಲವು ಸಂಸ್ಥೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಸಾರ್ವಜನಿಕ ನೀರಿನ ಬಳಕೆಯ ನಲ್ಲಿಗಳಿಗೆ ಏರಿಯೇಟರ್‌ ಬಳಸುವುದನ್ನು ಕಡ್ಡಾಯ ಮಾಡಲಾಗಿದೆ. ಇದಕ್ಕೆ ಮಾರ್ಚ್‌ 31 ಗಡುವು ವಿಧಿಸಲಾಗಿದ್ದು, ತಪ್ಪಿದರೆ ದಂಡ ವಿಧಿಸಲಾಗುತ್ತಿದೆ.

ನೀರಿನ ದುರ್ಬಳಕೆ ಮಾಡಿದರೆ ದಂಡ ವಿಧಿಸಲಾಗುತ್ತಿದ್ದು, ಈಗಾಗಲೇ ಒಂದು ಲಕ್ಷ ರೂಪಾಯಿಗೂ ಅಧಿಕ ದಂಡ ವಸೂಲಿ ಮಾಡಲಾಗಿದೆ. ನಗರದ ಎಲ್ಲ ಹೋಟೆಲ್‌, ರೆಸಾರ್ಟ್‌ಗಳಲ್ಲಿ ಈಜುಕೊಳಗಳಿಗೆ ಕುಡಿಯುವ ನೀರು ಬಳಕೆ ನಿಷೇಧಿಸಲಾಗಿದೆ. ರೈನ್‌ ಡ್ಯಾನ್ಸ್‌ ಇತ್ಯಾದಿ ನಿರ್ಬಂಧಿಸಲಾಗಿದೆ.

ಐಟಿ ಸಂಸ್ಥೆಗಳು ಕಳೆದ ವರ್ಷ ಜೋರಾಗಿ ಮಳೆ ಬಂದು ಬೆಳ್ಳಂದೂರಿನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದಾಗಲೂ ಬೆಂಗಳೂರು ಬಿಟ್ಟು ಹೋಗುವ ಕುರಿತು ಮಾತನಾಡಿದ್ದವು. ಈ ಬೃಹತ್‌ ಸಂಸ್ಥೆಗಳಿಗೆ ತೆರಿಗೆ ಮುಕ್ತ ನೆಲೆ, ಕಡಿಮೆ ದರದಲ್ಲಿ ನೀರಿನ ಪೂರೈಕೆ, ಸುಗಮ ರಸ್ತೆ ಮುಂತಾದ ವ್ಯವಸ್ಥೆಗಳನ್ನು ರಾಜ್ಯ ಸರ್ಕಾರಗಳು ಮೊದಲಿನಿಂದಲೂ ಕಲ್ಪಿಸುತ್ತ ಬಂದಿವೆ.

ಇದನ್ನೂ ಓದಿ: Water Crisis: ಇನ್ನು 3 ದಿನದಲ್ಲಿ ನಿಮ್ಮ ಮನೆಯ ನಲ್ಲಿಗಳಿಗೆ ಈ ಸಾಧನ ಹಾಕದಿದ್ದರೆ 5000 ರೂ. ದಂಡ!

Continue Reading

ಕರ್ನಾಟಕ

ಚಿಕ್ಕಬಳ್ಳಾಪುರದಲ್ಲಿ ಅತ್ತೆಯನ್ನು ಎಳೆದೊಯ್ದು ತಿಪ್ಪೆಗೆ ಎಸೆದ ಕ್ರೂರ ಸೊಸೆ; ವೃದ್ಧೆಯ ತಪ್ಪೇನು?

ಮನೆಯ ಎದುರು ಮಲಗಿದ್ದ ವೃದ್ಧ ಅತ್ತೆಯನ್ನು ಸೊಸೆಯು ಎಳೆದೊಯ್ದು ತಿಪ್ಪೆಗೆ ಎಸೆದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಸೊಸೆಯ ಕ್ರೌರ್ಯದ ಬಗ್ಗೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Chikkaballapur
Koo

ಚಿಕ್ಕಬಳ್ಳಾಪುರ‌: ಹೆತ್ತ ತಂದೆ-ತಾಯಿಯನ್ನೇ ವಯಸ್ಸಾಗುತ್ತಲೇ ವೃದ್ಧಾಶ್ರಮಕ್ಕೆ ಸೇರಿಸುವ ಮಕ್ಕಳಿದ್ದಾರೆ. ಇನ್ನು, ತಾಯಿ ಸಮಾನಳಾದ ಅತ್ತೆ ಮೇಲೆ ಸೊಸೆಯಂದಿರುವ ತೋರುವ ದರ್ಪ, ಹಲ್ಲೆಯ ಸುದ್ದಿಗಳಂತೂ ಆಗಾಗ ಕೇಳಿಸುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ (Chikkaballapur District) ಮಹಿಳೆಯೊಬ್ಬರು 80 ವರ್ಷದ ಅತ್ತೆಯನ್ನು (Mother In Law) ಎಳೆದೊಯ್ದು, ತಿಪ್ಪೆಗೆ ಎಸೆಯುವ ಮೂಲಕ ಅಮಾನವೀಯತೆ ತೋರಿದ್ದಾರೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಶಿಡ್ಲಘಟ್ಟ ತಾಲೂಕಿನ ಕೊಂಡಪ್ಪಗಾರಿಪಲ್ಲಿ ಗ್ರಾಮದಲ್ಲಿ ಸೊಸೆಯು ಅತ್ತೆಯ ಮೇಲೆ ಮೃಗೀಯ ವರ್ತನೆ ತೋರಿದ್ದಾಳೆ. 80 ವರ್ಷದ ವೆಂಕಟಲಕ್ಷ್ಮಮ್ಮ ಅವರು ಮನೆಯ ಎದುರು ಮಲಗಿದ್ದಾಗ ಲಕ್ಷ್ಮೀದೇವಮ್ಮ ಎಂಬ ಮಹಿಳೆಯು ಅವರನ್ನು ಎಳೆದಿದ್ದಾರೆ. ವೃದ್ಧೆ ಎಂಬುದನ್ನೂ ಲೆಕ್ಕಿಸದ ಸೊಸೆಯು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಬಿಸಿಲು ಎಂದು ನೆರಳಿನಲ್ಲಿ ಮಲಗಿದ್ದ ಅತ್ತೆಯ ಮೇಲೆ ಸೊಸೆ ತೋರಿದ ಕ್ರೌರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಳಿಯ ವಯಸ್ಸಿನಲ್ಲಿ ಎರಡು ಹೊತ್ತು ಊಟ ಸಿಕ್ಕರೆ ಸಾಕು ಎಂದು ಬಯಸುವ ಜೀವಕ್ಕೆ ಕಿರುಕುಳ ನೀಡಲು ಅವರು ಮಾಡಿದ ತಪ್ಪೇನು ಎಂಬುದು ತಿಳಿದುಬಂದಿಲ್ಲ. ವೆಂಕಟಲಕ್ಷ್ಮಮ್ಮ ಅವರನ್ನು ಎಳೆದು, ತಿಪ್ಪೆಗೆ ಎಸೆಯುವಾಗ ಅವರ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮರೆಯಾದ ಮಾನವೀಯತೆ: ಮಹಿಳೆ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿ ಮೆರವಣಿಗೆ; ನಾಲ್ವರು ಮಹಿಳೆಯರ ಬಂಧನ

ನನಗೇಕೆ ಕುಕ್ಕರ್‌ ನೀಡಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಉಜ್ಜನಿ ಗ್ರಾಮದಲ್ಲಿ ಮತದಾರರಿಗೆ ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಹಂಚಿಕೆ ಆರೋಪ ಕೇಳಿಬಂದಿದೆ. ಇನ್ನು, ಗ್ರಾಮದಲ್ಲಿ ಕುಕ್ಕರ್ ವಿತರಣೆಯಲ್ಲಿ ತಾರತಮ್ಯ ಮಾಡಿದ್ದಾರೆ, ನನಗ್ಯಾಕೆ ಕುಕ್ಕರ್‌ ನೀಡಿಲ್ಲ ಎಂದು ಕೇಳಿದ ವೃದ್ಧೆ ಮೇಲೆ ಹಲ್ಲೆ ಮಾಡಿರುವುದು ಕಂಡುಬಂದಿದೆ.

ಉಜ್ಜನಿ ಗ್ರಾಮದ ಗಂಗಮ್ಮ (75) ಹಲ್ಲೆಗೊಳಗಾದ ವೃದ್ಧೆ. ಕಾಂಗ್ರೆಸ್ ಕಾರ್ಯಕರ್ತ ನಾರಾಯಣ್ ಎಂಬಾತನ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಹಲ್ಲೆಯಿಂದ ಗಾಯಗೊಂಡ ವೃದ್ಧೆಗೆ ಹುಲಿಯೂರುದುರ್ಗ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Sania Mirza
ಕ್ರೀಡೆ13 mins ago

Sania Mirza: ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರಾ ಸಾನಿಯಾ ಮಿರ್ಜಾ?; ಈ ಪಕ್ಷದಿಂದ ಆಫರ್​

Savadatti Yallamma
ಕರ್ನಾಟಕ15 mins ago

ಬರದ ಮಧ್ಯೆಯೂ ಭರ್ಜರಿ ಕಾಣಿಕೆ; ಸವದತ್ತಿ ಯಲ್ಲಮ್ಮ ದೇಗುಲದಲ್ಲಿ 11 ಕೋಟಿ ರೂ. ಸಂಗ್ರಹ!

Heart Attack
ಬೆಂಗಳೂರು28 mins ago

Heart Attack : ಬಸ್‌ ಏರಿ ಕುಳಿತಾಗಲೇ ಹಠಾತ್ ಹೃದಯಾಘಾತ; ಹಾರಿ ಹೋಯ್ತು ವೃದ್ಧನ ಪ್ರಾಣ ಪಕ್ಷಿ

Ranbir Kapoor Raha Kapoor
ಬಾಲಿವುಡ್36 mins ago

Ranbir Kapoor: ಅತ್ಯಂತ ಕಿರಿಯ ಮತ್ತು ಶ್ರೀಮಂತ ಸ್ಟಾರ್‌ ಕಿಡ್‌ ಆಗಲಿದ್ದಾರಂತೆ ರಣಬೀರ್- ಆಲಿಯಾ ಮಗಳು!

Cows
ಕರ್ನಾಟಕ1 hour ago

ಹಾಸನದಲ್ಲಿ ಅಕ್ರಮ ಗೋಮಾಂಸ ಜಾಲ; 60 ಗೋವುಗಳನ್ನು ಕೊಂದ ರಾಕ್ಷಸರು!

R Ashwin
ಕ್ರೀಡೆ1 hour ago

IPL 2024: ಐಪಿಎಲ್‌ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಆರ್‌.ಅಶ್ವಿ‌ನ್‌!

Bangalore water crisis IT companies
ಬೆಂಗಳೂರು1 hour ago

Bangalore Water Crisis: “ನೀರು ಕೊಡ್ತೀವಿ, ಪ್ಲೀಸ್‌ ಹೋಗ್ಬೇಡಿ…” ಐಟಿ ಸಂಸ್ಥೆಗಳಿಗೆ ರಾಜ್ಯ ಮನವಿ; ಗಾಳ ಹಾಕಿದ ಕೇರಳ

Chikkaballapur
ಕರ್ನಾಟಕ2 hours ago

ಚಿಕ್ಕಬಳ್ಳಾಪುರದಲ್ಲಿ ಅತ್ತೆಯನ್ನು ಎಳೆದೊಯ್ದು ತಿಪ್ಪೆಗೆ ಎಸೆದ ಕ್ರೂರ ಸೊಸೆ; ವೃದ್ಧೆಯ ತಪ್ಪೇನು?

Actor Suriya announces film
ಕಾಲಿವುಡ್2 hours ago

Actor Suriya: ಹೊಸ ಸಿನಿಮಾ ಅನೌನ್ಸ್‌ ಮಾಡಿದ ಕಾಲಿವುಡ್‌ ನಟ ಸೂರ್ಯ: ಅಚ್ಚರಿಯಾಗಿದೆ ಪೋಸ್ಟರ್‌!

Yuva Rajkumar Yuva cutout
ಸಿನಿಮಾ2 hours ago

Yuva Rajkumar: ʻಯುವʼನ ಆರ್ಭಟ ಶುರು: ಸಿನಿಮಾ ನೋಡಿ ಬೆಳ್ಳುಳ್ಳಿ ಕಬಾಬ್‌ ಚಂದ್ರು ಏನಂದ್ರು?

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 202421 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 202423 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌