Horoscope Today | ಕನ್ಯಾ ರಾಶಿಯವರಿಗೆ ಶುಭ ದಿನ; ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ - Vistara News

ಪ್ರಮುಖ ಸುದ್ದಿ

Horoscope Today | ಕನ್ಯಾ ರಾಶಿಯವರಿಗೆ ಶುಭ ದಿನ; ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

ಶುಭಕೃತ ನಾಮ ಸಂವತ್ಸರ, ಹೇಮಂತ ಋತು, ಮಾರ್ಗಶಿರ ಮಾಸ, ಶುಕ್ಲ ಪಕ್ಷದ ಪಾಡ್ಯದ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

rashi bhavishya today in kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (24 -11-2022)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಹೇಮಂತ ಋತು, ಮಾರ್ಗಶಿರ ಮಾಸ, ಶುಕ್ಲ ಪಕ್ಷ.

ತಿಥಿ: ಪಾಡ್ಯ 25:37 ವಾರ: ಗುರುವಾರ
ನಕ್ಷತ್ರ: ಅನುರಾಧ 19:36 ಯೋಗ: ಅತಿಗಂಡ 12:17
ಕರಣ: ಕಿಮಸ್ತುಘ್ನ 15:03 ಇಂದಿನ ವಿಶೇಷ : ತಿಂತ್ರಿಣೀಗೌರೀ ವ್ರತ.
ಅಮೃತಕಾಲ: ಬೆಳಗ್ಗೆ 10 ಗಂಟೆ 05 ನಿಮಿಷದಿಂದ 11ಗಂಟೆ 33 ನಿಮಿಷದವರೆಗೆ.

ಸೂರ್ಯೋದಯ: 06: 22    ಸೂರ್ಯಾಸ್ತ: 05 : 50

ರಾಹುಕಾಲ : ಮಧ್ಯಾಹ್ನ 01.32 ರಿಂದ 02.58
ಗುಳಿಕಕಾಲ: ಬೆಳಗ್ಗೆ 09.14ರಿಂದ 10.40
ಯಮಗಂಡಕಾಲ: ಬೆಳಗ್ಗೆ 06.22 ರಿಂದ 07.48

ದ್ವಾದಶ ರಾಶಿ ಭವಿಷ್ಯ  (Horoscope Today)

Horoscope Today

ಮೇಷ: ಹಣಕಾಸಿನ ಹೂಡಿಕೆ ವ್ಯವಹಾರದಲ್ಲಿ ಹೊಸ ಆಲೋಚನೆಗಳು. ಆರೋಗ್ಯದ ಕುರಿತು ಕಾಳಜಿ ವಹಿಸಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಷಭ: ಹಿರಿಯರ ಸಲಹೆ ಆರ್ಥಿಕವಾಗಿ ಲಾಭ ತರುವುದು. ಕುಟುಂಬದ ಸದಸ್ಯರ ಬೆಂಬಲ ಕೆಲಸ ಕಾರ್ಯಗಳಲ್ಲಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಮನ್ನಣೆ ಸಿಕ್ಕು, ಪ್ರಶಂಸೆ ಪಡೆಯುವಿರಿ. ಅಪರಿಚಿತರೊಂದಿಗೆ ಅನಿವಾರ್ಯ ಕಾರಣಗಳಿಂದ ವಾದಕ್ಕೆ ಇಳಿಯುವ ಸಂದರ್ಭ ಬರಬಹುದು. ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಆಶಾವಾದಿಗಳಾಗಿರಿ, ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸುನ್ನು ತಂದು ಕೊಡುವುದು. ಅನಿವಾರ್ಯ ಕಾರಣಗಳಿಂದ ಖರ್ಚು ಮಾಡುವ ಸಾಧ್ಯತೆ. ಹಳೆಯ ಪರಿಚಿತರ ಸಂಪರ್ಕ ಪುನಃ ಸ್ಥಾಪಿತವಾಗುವುದು. ವೈವಾಹಿಕ ಜೀವನಕ್ಕೆ ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕಟಕ: ಅವಿರತವಾಗಿ ಶ್ರಮಿಸಿದ ಜೀವಕೆ ವಿಶ್ರಾಂತಿಯು ಸಿಗಲಿದೆ. ಸಂಗಾತಿಯೊಂದಿಗೆ ಹೂಡಿಕೆ ಕೂರಿತಾಗಿ ಚರ್ಚೆ. ಉತ್ತಮ ವ್ಯಕ್ತಿಗಳ ಸಂಪರ್ಕ, ಮಾರ್ಗದರ್ಶನ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಆರೋಗ್ಯ ಪರಿಪೂರ್ಣ.ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ, ತಾಳ್ಮೆಯಿಂದ ಸಹಕರಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಸಿಂಹ: ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ. ಹಣಕಾಸು ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಅಗತ್ಯ ವಸ್ತುಗಳ ಖರೀದಿ ಸಾಧ್ಯತೆ. ಆತುರದ ಮಾತುಗಳು ಸುತ್ತಮುತ್ತಲಿನ ಜನರೊಂದಿಗೆ ವಾದಕ್ಕೆ ಇಳಿಯುವಂತೆ ಮಾಡಬಹುದು ಎಚ್ಚರಿಕೆ ಇರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ: ಹೊಸ ಆರ್ಥಿಕ ಒಪ್ಪಂದಗಳು ಗರಿಗೆದರಲಿವೆ. ಆಪ್ತರಿಂದ ಆಮಂತ್ರಣ ಸಿಗಲಿದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಆಸ್ತಿ ಖರೀದಿ ವ್ಯವಹಾರದ ಕುರಿತು ಚರ್ಚೆ. ಸಂಗಾತಿಯ ಮಾತುಗಳಿಗೆ ಮನ್ನಣೆ ಸಿಗದೇ ಇರುವದರಿಂದ ನಿಮ್ಮ ಮೇಲೆ ಕೋಪಿಸಿಕೊಳ್ಳುವ ಸಾಧ್ಯತೆ. ನಗುವಿನ ಮೂಲಕ ಪರಿಸ್ಥಿತಿ ತಿಳಿಗೊಳಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

Horoscope Today

ತುಲಾ: ಗಾಳಿಯಲ್ಲಿ ಗೋಪುರ ಕಟ್ಟಿಕೊಂಡು ವೃತಾ ಸಮಯ, ವ್ಯರ್ಥ ಪ್ರಯತ್ನ, ಮಾಡಬೇಡಿ. ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ. ಕುಟುಂಬದ ಸದಸ್ಯರ ಮಾರ್ಗದರ್ಶನ ಪಡೆಯುವುದು ಒಳ್ಳೆಯದು. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ ಉಂಟಾಗುವ ಸಾಧ್ಯತೆ. ಸಂಗಾತಿಯ ಮಧುರ ಪ್ರೀತಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು. ಹಣಕಾಸಿನ ವ್ಯವಹಾರ ನಿರೀಕ್ಷಿಸಿದಷ್ಟು ಸಾಧ್ಯವಿಲ್ಲ. ಅತಿಥಿಗಳ ಆಗಮನದಿಂದ ನಿಮ್ಮ ಯೋಚಿತ ಕಾರ್ಯ ವಿಳಂಬವಾಗುವ ಸಾಧ್ಯತೆ. ಆತುರದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳಲಾಗುವುದು ಬೇಡ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು: ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಮಾಡುವ ಸಾಧ್ಯತೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ, ಯಾವುದೇ ಹಣಕಾಸು ಒಪ್ಪಂದಗಳನ್ನು ಮಾಡಿಕೊಳ್ಳುವುದು ಬೇಡ. ಪ್ರೀತಿ ಪಾತ್ರರೊಂದಿಗೆ ಆತುರದ ಮಾತುಗಳಿಂದ ಹಳಸುವ ಸಾಧ್ಯತೆ. ನಿಧಾನಿಸಿ, ಯೋಚಿಸಿ ಮಾತನಾಡಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಕರ: ಬಹಳ ದಿನಗಳ ಕನಸು ನನಸಾಗುವ ಕಾಲ. ಆತುರದಲ್ಲಿ ಯಾವುದೇ ಸಂಕಲ್ಪ ಮಾಡುವುದು ಬೇಡ. ಸ್ನೇಹಿತರ ಕಷ್ಟಕಾಲಕ್ಕೆ ಸ್ಪಂದಿಸುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕುಂಭ: ಅತಿಯಾದ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯಿರಿ. ತಾಳ್ಮೆಯಿಂದ ವರ್ತಿಸಿ. ಆತುರದಿಂದ ಮಾತನಾಡುವುದು ಬೇಡ. ಉದ್ಯೋಗಿಗಳಿಗೆ ಹೆಚ್ಚಿನ ಒತ್ತಡ. ಕುಟುಂಬದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಮೀನ: ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ, ಕಾಳಜಿ ವಹಿಸುವುದು ಸೂಕ್ತ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ ಫಲ. ದಿನದ ಮಟ್ಟಿಗೆ ಖರ್ಚು. ಸಂಗಾತಿಯ ವರ್ತನೆ ನಿಮಗೆ ಕೋಪ ತರಿಸಬಹುದು. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | ಭಾವಾಶ್ರಿತ ಗ್ರಹಫಲ | ಸೂರ್ಯನು ದಶಮ ಭಾವದಲ್ಲಿದ್ದರೆ ಬಲಿಷ್ಠ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Postal Ballot: ಅನಾರೋಗ್ಯದ ಕಾರಣ ಅಂಚೆ ಮತದಾನ ಕೋರಿ 78ರ ಅಜ್ಜಿ ಅರ್ಜಿ; ಬೇಡವೆಂದ ಸುಪ್ರೀಂ!

Postal Ballot: ಛತ್ತೀಸ್‌ಗಢದ ಬಿಲಾಸ್‌ಪುರ ನಿವಾಸಿಯಾದ ಸರಳ ಶ್ರೀವಾಸ್ತವ ಪರ ಹಿರಿಯ ವಕೀಲ ಗೌರವ್‌ ಅಗರ್ವಾಲ್‌ ವಾದ ಮಂಡಿಸಿದರು. “ಮಹಿಳೆಯು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಚುನಾವಣೆ ಆಯೋಗದ ನಿಯಮಗಳ ಪ್ರಕಾರ ಮಹಿಳೆಯು ಅಂಚೆ ಮತದಾನ ಮಾಡಲು ಅರ್ಹರು” ಎಂದು ಹೇಳಿದರು.

VISTARANEWS.COM


on

Postal Ballot
Koo

ನವದೆಹಲಿ: ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಕಾರಣ ಲೋಕಸಭೆ ಚುನಾವಣೆಯಲ್ಲಿ ಹಕ್ಕು ಚಲಾಯಿಸಲು ಅಂಚೆ ಮತದಾನಕ್ಕೆ (Postal Ballot) ಅವಕಾಶ ಮಾಡಿಕೊಡಬೇಕು ಎಂದು ಛತ್ತೀಸ್‌ಗಢದ 78 ವರ್ಷದ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ (Supreme Court) ನಿರಾಕರಿಸಿದೆ. ಇದರಿಂದಾಗಿ, ಅನಾರೋಗ್ಯವಿದ್ದರೂ ಚುನಾವಣೆಯಲ್ಲಿ ಮತದಾನ ಮಾಡಬೇಕು ಎಂಬ ಹಂಬಲ ಹೊಂದಿದ್ದ ಸರಳ ಶ್ರೀವಾಸ್ತವ ಎಂಬ ಅಜ್ಜಿಗೆ ನಿರಾಸೆಯಾದಂತಾಗಿದೆ.

ಛತ್ತೀಸ್‌ಗಢದ ಬಿಲಾಸ್‌ಪುರ ನಿವಾಸಿಯಾದ ಸರಳ ಶ್ರೀವಾಸ್ತವ ಪರ ಹಿರಿಯ ವಕೀಲ ಗೌರವ್‌ ಅಗರ್ವಾಲ್‌ ವಾದ ಮಂಡಿಸಿದರು. “ಮಹಿಳೆಯು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಚುನಾವಣೆ ಆಯೋಗದ ನಿಯಮಗಳ ಪ್ರಕಾರ ಮಹಿಳೆಯು ಅಂಚೆ ಮತದಾನ ಮಾಡಲು ಅರ್ಹರು” ಎಂದು ಹೇಳಿದರು. ಆದರೆ, ನ್ಯಾಯಮೂರ್ತಿಗಳಾದ ಬೆಲಾ ಎಂ. ತ್ರಿವೇದಿ ಹಾಗೂ ಜಸ್ಟಿಸ್‌ ಪಂಕಜ್‌ ಮಿತ್ತಲ್‌ ಅವರಿದ್ದ ಪೀಠವು ಅರ್ಜಿಯನ್ನು ತಿರಸ್ಕರಿಸಿತು.

“ಬಿಲಾಸ್‌ಪುರದಲ್ಲಿ ಮೇ 7ರಂದೇ ಮತದಾನ ಮುಕ್ತಾಯಗೊಂಡಿದೆ. ಮತದಾನ ಮುಗಿದು ಹಲವು ದಿನಗಳ ನಂತರ ಅಂಚೆ ಮತದಾನಕ್ಕೆ ಅವಕಾಶ ನೀಡಬೇಕು ಎಂದರೆ ಆಗುವುದಿಲ್ಲ. ಇಂತಹ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್‌ಗೆ ಮೊದಲೇ ಅರ್ಜಿ ಸಲ್ಲಿಸಬೇಕು. ಅಂಚೆ ಮತದಾನಕ್ಕೆ ಹಲವು ಪ್ರಕ್ರಿಯೆಗಳಿವೆ. ಅವುಗಳೆಲ್ಲವೂ ಸಮಯಕ್ಕೆ ಅನುಸಾರವಾಗಿ ಆಗಬೇಕು. ಅಷ್ಟಕ್ಕೂ, ಭಾರತದಲ್ಲಿ ಪ್ರತಿಯೊಬ್ಬರಿಗೂ ಮನೆಯಲ್ಲಿ ಕುಳಿತೇ ಮತದಾನ ಮಾಡುವ ಉಮೇದಿ ಇದೆ” ಎಂದು ನ್ಯಾಯಪೀಠವು ಅಸಮಾಧಾನ ವ್ಯಕ್ತಪಡಿಸಿತು.

ಸರಳ ಶ್ರೀವಾಸ್ತವ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅವರು ಹಾಸಿಗೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಚೆ ಮತದಾನದ ಮೂಲಕವಾದರೂ ಹಕ್ಕು ಚಲಾಯಿಸಬೇಕು ಎಂದು ಬಯಸಿದ್ದರು. ಇದೇ ಕಾರಣಕ್ಕಾಗಿ ಅವರು ಏಪ್ರಿಲ್‌ 29ರಂದೇ ಛತ್ತೀಸ್‌ಗಢ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮೇ 6ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಮಹಿಳೆಯ ಅರ್ಜಿಯನ್ನು ತಿರಸ್ಕರಿಸಿತ್ತು. ಈಗ ಸುಪ್ರೀಂ ಕೋರ್ಟ್‌ ಕೂಡ ಅರ್ಜಿಯನ್ನು ತಿರಸ್ಕರಿಸಿದೆ. ಒಟ್ಟಿನಲ್ಲಿ, ಯುವಕರೇ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡದ, ಜಾಗೃತಿ ಮೂಡಿಸಿದರೂ ಕೇಳದಂತಹ ಸಂದರ್ಭದಲ್ಲಿ, ಮನೆಯಿಂದಲಾದರೂ ಹಕ್ಕು ಚಲಾಯಿಸಬೇಕು ಎಂದು ಸುಪ್ರೀಂ ಕೋರ್ಟ್‌ ಮೊರೆ ಹೋದ ಅಜ್ಜಿಯ ಆಶಯವಂತೂ ಒಳ್ಳೆಯದೇ ಆಗಿತ್ತು ಎಂಬುದರಲ್ಲಿ ಎರಡು ಮಾತಿಲ್ಲ.

ಇದನ್ನೂ ಓದಿ: Legislative Council Election: ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್;‌ ಜೂನ್‌ 13ಕ್ಕೆ ಮತದಾನ

Continue Reading

ಶಿಕ್ಷಣ

2nd PUC Exam 2 Result: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ನಾಳೆ; ಸಿಇಟಿ ಫಲಿತಾಂಶ ಯಾವಾಗ?

2nd PUC Exam 2 Result: ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ ಮೇಲೆ ಕ್ಲಿಕ್‌ ಮಾಡಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಅಲ್ಲದೆ, ಮಂಗಳವಾರವೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ದ್ವಿತೀಯ PUC ಫಲಿತಾಂಶಗಳು karresults.nic.in ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು.

VISTARANEWS.COM


on

2nd PUC Exam 2 Result tomorrow
Koo

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು (KSEAB) ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 (PUC Exam 2024) ಅನ್ನು ನಡೆಸಿತ್ತು. ಈಗ ನಾಳೆ (ಮಂಗಳವಾರ – ಮೇ 21) ರಂದು ಫಲಿತಾಂಶವನ್ನು ಪ್ರಕಟ (2nd PUC Exam 2 Result) ಮಾಡುವುದಾಗಿ ಹೇಳಿದೆ.

ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ ಮೇಲೆ ಕ್ಲಿಕ್‌ ಮಾಡಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಅಲ್ಲದೆ, ಮಂಗಳವಾರವೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ನಿಮ್ಮ ಫಲಿತಾಂಶವನ್ನು ನೋಡುವುದು ಹೇಗೆ?

ದ್ವಿತೀಯ PUC ಫಲಿತಾಂಶಗಳು karresults.nic.in ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು:

  • karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ.
    ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು ಒದಗಿಸಿ; ವಿಷಯ ಸಂಯೋಜನೆ ಅಥವಾ ಸ್ಟ್ರೀಮ್ ಅನ್ನು ಆಯ್ಕೆ ಮಾಡಿ (ವಿಜ್ಞಾನ/ಕಲೆ/ವಾಣಿಜ್ಯ)
    ನಿಮ್ಮ 2ನೇ ಪಿಯುಸಿ ಫಲಿತಾಂಶವನ್ನು ಮುಂದಿನ ಪುಟದಲ್ಲಿ ಪರಿಶೀಲಿಸಿ.

ಸಿಇಟಿಗೆ ಹೆಚ್ಚು ಅಂಕಗಳ ಪಟ್ಟಿ ಪರಿಗಣನೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುಡ್‌ನ್ಯೂಸ್‌ ನೀಡಿದೆ. ದ್ವಿತೀಯ ಪಿಯುಸಿಯ ಮೂರು ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳು ಯಾವುದರಲ್ಲಿ ಹೆಚ್ಚು ಅಂಕ ಪಡೆದಿರುತ್ತಾರೋ ಅದನ್ನೇ ಸಿಇಟಿ (CET 2024)ಗೆ ಪರಿಗಣಿಸಲು ಕೆಇಎ ಸಮ್ಮತಿ ಸೂಚಿಸಿದೆ. ಇದರಿಂದ ನೂರಾರು ವಿದ್ಯಾರ್ಥಿಗಳು ನಿರಾಳವಾಗಿದ್ದಾರೆ. ಎಂಜಿನಿಯರ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕೆಇಎ ಪ್ರತಿವರ್ಷ ಸಿಇಟಿ ನಡೆಸುತ್ತದೆ.

ಸಿಇಟಿ ಜತೆಗೆ ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕವನ್ನೂ ರ‍್ಯಾಂಕಿಂಗ್​ಗೆ ಪರಿಗಣಿಸಲಾಗುತ್ತದೆ. ಇದುವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲಾದರೆ ಪೂರಕ ಪರೀಕ್ಷೆ ಬರೆದು ತೇರ್ಗಡೆಯಾಗಬೇಕಿತ್ತು. ಮುಖ್ಯ ಪರೀಕ್ಷೆ ಮತ್ತು ಪೂರಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಕ್ರೂಡೀಕರಿಸಿ ಅಂಕಪಟ್ಟಿ ನೀಡಲಾಗುತ್ತಿತ್ತು.

ನಿಯಮದಲ್ಲಿ ಬದಲಾವಣೆ

ಈ ಬಾರಿ ಈ ನಿಯಮದಲ್ಲಿ ಕೊಂಚ ಬದಲಾವಣೆ ತರಲಾಗಿದೆ. ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಮೂರು ಪರೀಕ್ಷೆಗಳನ್ನು ಪರಿಚಯಿಸಲಾಗಿದೆ. ಒಂದು ವೇಳೆ ಕಡಿಮೆ ಅಂಕ ಬಂದಿದ್ದರೆ ಅದನ್ನು ಉತ್ತಮಪಡಿಸಿಕೊಳ್ಳಲು ವಿದ್ಯಾರ್ಥಿಗಳು ಇನ್ನು ಉಳಿದ ಎರಡು ಪರೀಕ್ಷೆಗಳನ್ನೂ ಬರೆಯಬಹುದು. ಹೆಚ್ಚು ಅಂಕ ಬಂದಿರುವುದನ್ನೇ ಪರಿಗಣಿಸಿ ಅಂತಿಮ ಅಂಕಪಟ್ಟಿ ನೀಡಲಾಗುತ್ತದೆ. ಇದೀಗ ಆ ಹೆಚ್ಚುವರಿ ಅಂಕವನ್ನೇ ಸಿಇಟಿ ರ‍್ಯಾಂಕಿಂಗ್‌ಗೂ ಪರಿಣಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಕೆಇಎ ಸಹ ಸ್ಪಷ್ಟನೆ ನೀಡಿದ್ದು, ʼʼಹೆಚ್ಚು ಅಂಕ ಬಂದಿರುವ ಅಂತಿಮ ಅಂಕ ಪಟ್ಟಿಯನ್ನು ಸಿಇಟಿ ಅಂಕಗಳ ಜತೆ ರ‍್ಯಾಂಕಿಂಗ್‌ ಪಟ್ಟಿ ಸಿದ್ಧಪಡಿಸಲು ಪರೀಕ್ಷಾ ಪ್ರಾಧಿಕಾರ ಪರಿಗಣಿಸಲಿದೆʼʼ ಎಂದು ತಿಳಿಸಿದೆ.

ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

2024-25ನೇ ಸಾಲಿನ ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್‌, ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ರಿಸಲ್ಟ್‌ಗಾಗಿ (CET Result) ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಸ್ಪಷ್ಟನೆ ನೀಡಿದೆ. ಈಗ ಮಂಗಳವಾರ ಪಿಯು ಫಲಿತಾಂಶ ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಸಿಇಟಿ ಫಲಿತಾಂಶದ ದಿನಾಂಕವನ್ನು ಕೆಇಎ ಪ್ರಕಟಿಸಬೇಕಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಸ್ಪಷ್ಟನೆ ನೀಡಿದ್ದು, ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಹೇಳಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ‍್ಯಾಂಕ್‌ಗೆ ಪರಿಗಣನೆ ಮಾಡಲಾಗುವುದು ಎಂದು ಹೇಳಲಾಗಿದೆ. ಹೀಗಾಗಿ ಎರಡನೇ ಪರೀಕ್ಷೆಯ ಫಲಿತಾಂಶಕ್ಕಾಗಿ ಕೆಇಎ ಕಾಯುವುದು ಅನಿವಾರ್ಯವಾಗಿದೆ.

ಅಧಿಕಾರಿಗಳ ಎಡವಟ್ಟು

ರಾಜ್ಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರತಿ ವರ್ಷ ವೃತ್ತಿಪರ ಕೋಸ್‌ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ. ಆದರೆ, ಈ ಬಾರಿಯ ಸಿಇಟಿ ಪರೀಕ್ಷೆ ಗೊಂದಲದ ಗೂಡಾಗಿತ್ತು. ಪರೀಕ್ಷೆಯಲ್ಲಿ 4 ವಿಷಯಗಳಲ್ಲಿ ಸುಮಾರು 50ಕ್ಕೂ ಹೆಚ್ಚು ಔಟ್‌ ಆಫ್‌ ಸಿಲಬಸ್‌ (Out of Syllabus) ಪ್ರಶ್ನೆಗಳನ್ನು ಕೇಳಲಾಗಿತ್ತು. ರಸಾಯನ ಶಾಸ್ತ್ರ ವಿಷಯದಲ್ಲಿ 6, ಭೌತಶಾಸ್ತ್ರ ವಿಷಯದಲ್ಲಿ 5, ಪ್ರಶ್ನೆಗಳು, ಜೀವಶಾಸ್ತ್ರ ಪರೀಕ್ಷೆಯಲ್ಲಿ 11 ಪ್ರಶ್ನೆಗಳು, ಗಣಿತದಲ್ಲಿ 9 ಪ್ರಶ್ನೆಗಳು ಪಠ್ಯಕ್ರಮದಿಂದ ಹೊರತಾಗಿದ್ದವು. ಇದಕ್ಕೆ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದ್ದವು. ಬಳಿಕ ಆ 50 ಪ್ರಶ್ನೆಗಳನ್ನು ಕೈಬಿಟ್ಟು ಉಳಿದ ಪ್ರಶ್ನೆಗಳ ಮೌಲ್ಯ ಮಾಪನ ಮಾಡಲಾಗಿದೆ.

ಇದನ್ನೂ ಓದಿ: Public Exam: 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; ರಾಜ್ಯ ಸರ್ಕಾರದ ಮಹತ್ವ ನಿರ್ಧಾರ

ಸದ್ಯ ಸಿಇಟಿ ಪರೀಕ್ಷೆಯ ಉತ್ತರ ಪತ್ರಿಕೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೌಲ್ಯಮಾಪನ ಮಾಡಿ ಸಿದ್ಧಪಡಿಸಿದೆ. ಇದರ ಜತೆಗೆ ಶೇ. 50ರಷ್ಟು ದ್ವಿತೀಯ ಪಿಯುಸಿ ಅಂಕ ಮತ್ತು ಬಿಎಸ್‌ಸಿ ಸೀಟು ಹಂಚಿಕೆಗಾಗಿ ಜಿಕೆವಿಕೆ ನಡೆಸುವ ಪ್ರಾಯೋಗಿಕ ಪರೀಕ್ಷೆ ಫಲಿತಾಂಶದ ಅಂಕ ಸೇರಿಸಬೇಕಾಗಿರುವುದರಿಂದ ಕೆಇಎ ಅದಕ್ಕಾಗಿ ಕಾಯುತ್ತಿದೆ. ಈ ಬಾರಿ 3.49 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದರು. ಪ್ರತಿ ವರ್ಷ ಮೇ, ಜೂನ್‌ನಲ್ಲಿ ಪರೀಕ್ಷೆ ನಡೆದರೆ ಈ ಬಾರಿ ಏಪ್ರಿಲ್‌ನಲ್ಲೇ ಪರೀಕ್ಷೆ ನಡೆಸಲಾಗಿತ್ತು.

Continue Reading

ಕರ್ನಾಟಕ

Compound Wall Collapse: ಹಾಜಬ್ಬರ ಶಾಲೆ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು

Compound Wall Collapse: ದಕ್ಷಿಣ ಕನ್ನಡ ಜಿಲ್ಲೆಯ ‌ಉಳ್ಳಾಲ ತಾಲೂಕಿನ ನ್ಯೂಪಡ್ಪುನಲ್ಲಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರು ಕಟ್ಟಿದ ಶಾಲೆಯ ಕಾಂಪೌಂಡ್ ಗೋಡೆ ಕುಸಿದು ದುರ್ಘಟನೆ ನಡೆದಿದೆ.

VISTARANEWS.COM


on

Compound Wall Collapse
Koo

ಮಂಗಳೂರು: ಶಾಲೆಯ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟಿರುವ ಘಟನೆ (Compound Wall Collapse) ದಕ್ಷಿಣ ಕನ್ನಡ ಜಿಲ್ಲೆಯ ‌ಉಳ್ಳಾಲ ತಾಲೂಕಿನ ನ್ಯೂಪಡ್ಪುನಲ್ಲಿ ನಡೆದಿದೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ (Harekala Hajabba) ಅವರು ಕಟ್ಟಿದ ನ್ಯೂಪಡ್ಪು ಶಾಲೆಯ ಕಾಂಪೌಂಡ್ ಗೋಡೆ ಕುಸಿದು ದುರ್ಘಟನೆ ಸಂಭವಿಸಿದೆ.

ನ್ಯೂಪಡ್ಪು ನಿವಾಸಿ ಸಿದ್ದೀಖ್ ಜಮೀಲಾ ಪುತ್ರಿ ಶಾಜಿಯಾ (7) ಮೃತ ಬಾಲಕಿ. ಹಾಜಬ್ಬರ ಶಾಲೆಯಲ್ಲಿ ವಿದ್ಯಾರ್ಥಿನಿ ಶಾಜಿಯಾ 3ನೇ ತರಗತಿ ಓದುತ್ತಿದ್ದಳು. ಶಾಲೆಯಲ್ಲಿ ನಡೆಯುತ್ತಿದ್ದ ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿನಿ ಗೇಟಿನ ಬಳಿ ಆಟವಾಡುತ್ತಿದ್ದಾಗ ಕಾಂಪೌಡ್ ಗೋಡೆ ಕುಸಿದಿದ್ದರಿಂದ ದುರ್ಘಟನೆ ಸಂಭವಿಸಿದೆ. ಉಳ್ಳಾಲ ತಾಲೂಕಿನಲ್ಲಿ ಮೊದಲ ಮಳೆಗೆ ಅನಾಹುತ ಸಂಭವಿಸಿದೆ.

ಇದನ್ನೂ ಓದಿ | Physical Abuse & Murder: ಬಾಲಕಿ ಮೇಲೆ ಅತ್ಯಾಚಾರ, ಸಜೀವ ದಹನ ಕೇಸ್‌; ಹಂತಕರಿಗೆ ಮರಣದಂಡನೆ

ಕೂಡ್ಲಿಗಿಯಲ್ಲಿ ಹಿಟ್ ಆ್ಯಂಡ್ ರನ್; ಬೈಕ್‌ಗೆ ಲಾರಿ ಡಿಕ್ಕಿಯಾಗಿ ಯುವತಿ ಸಾವು

Hit And Run Case

ವಿಜಯನಗರ: ಬೈಕ್‌ಗೆ ಲಾರಿ ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಮೃತಪಟ್ಟು, ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಅಪಘಾತದ (Hit And Run Case) ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಮೇಘನಾ (18) ಮೃತ ಯುವತಿ. ಹೊಸಪೇಟೆಯಿಂದ ಕೂಡ್ಲಿಗಿ ಕಡೆ ಹೊರಟಿದ್ದ ಬೈಕ್ ಮೇಲೆ ಯುವಕ, ಯುವತಿ ಹೋಗುತ್ತಿದ್ದಾಗ ಲಾರಿ ಡಿಕ್ಕಿಯಾಗಿದೆ. ಈ ವೇಳೆ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದು, ಯುವಕ ಕೈಲಾಶ್‌ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಆತನನ್ನು ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ವಿಮ್ಸ್‌ಗೆ ರವಾನೆ ಮಾಡಲಾಗಿದೆ. ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶಪ್ಪ, ಸಿಪಿಐ ವಿನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಹಿಟ್ ಆ್ಯಂಡ್ ರನ್ ಮಾಡಿದ ಲಾರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ | Baby Death : ಮಲತಾಯಿಯ ಕ್ರೌರ್ಯಕ್ಕೆ ಬಲಿಯಾಯ್ತಾ 3 ವರ್ಷದ ಕಂದಮ್ಮ?

Continue Reading

ದೇಶ

Ebrahim Raisi: ಇಬ್ರಾಹಿಂ ರೈಸಿ ನಿಧನದಿಂದ ಭಾರತದಲ್ಲಿ ಚಿನ್ನ, ಪೆಟ್ರೋಲ್‌ ಬೆಲೆ ಏರಿಕೆ? ಹೀಗಿದೆ ವಿಶ್ವ ಮಾರುಕಟ್ಟೆ ಸ್ಥಿತಿ-ಗತಿ

Ebrahim Raisi: ಇಬ್ರಾಹಿಂ ರೈಸಿ ಅವರ ನಿಧನದ ಹಿನ್ನೆಲೆಯಲ್ಲಿ ಜಾಗತಿಕ ತೈಲ ಮಾರುಕಟ್ಟೆಯಲ್ಲಂತೂ ಹೆಚ್ಚಿನ ಆತಂಕ ಎದುರಾಗಿದೆ. ಜಾಗತಿಕ ರಾಜಕೀಯ ಹಾಗೂ ಹಣಕಾಸು ಸ್ಥಿತಿಯ ಮೇಲೆ ಇಬ್ರಾಹಿಂ ರೈಸಿ ಸಾವು ಪರಿಣಾಮ ಬೀರಿದೆ. ಇಬ್ರಾಹಿಂ ರೈಸಿ ನಿಧನದಿಂದಾಗಿ ಪ್ರಮುಖ ತೈಲೋತ್ಪಾದಿತ ದೇಶಗಳ ರಾಜಕೀಯ ವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತಿದೆ. ಇದರಿಂದಾಗಿ ಭಾರತದಲ್ಲೂ ಬೆಲೆಯೇರಿಕೆ ನಿಶ್ಚಿತ ಎಂದು ಹೇಳಲಾಗುತ್ತಿದೆ.

VISTARANEWS.COM


on

Ebrahim Raisi
Koo

ಟೆಹ್ರಾನ್:‌ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಭಾನುವಾರ (ಮೇ 19) ಅಜರ್‌ಬೈಜಾನ್‌ನ (Azerbaijan) ಗುಡ್ಡಗಾಡು ಪ್ರದೇಶದಲ್ಲಿ ನಡೆದ ಹೆಲಿಕಾಪ್ಟರ್‌ ದುರಂತದಲ್ಲಿ ಮೃತಪಟ್ಟಿದ್ದಾರೆ. ಹಂಗಾಮಿ ಅಧ್ಯಕ್ಷರನ್ನಾಗಿ ಮೊಹಮ್ಮದ್‌ ಮೊಖ್‌ಬೈರ್‌ (Mohammad Mokhber) ಅವರನ್ನು ನೇಮಿಸಲಾಗಿದೆ. ಇಬ್ರಾಹಿಂ ರೈಸಿ (Ebrahim Raisi) ನಿಧನದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ 5 ದಿನ ಶೋಕಾಚರಣೆ ಘೋಷಿಸಲಾಗಿದೆ. ಭಾರತದಲ್ಲೂ ಒಂದು ದಿನ ಶೋಕಾರಣೆ ಘೋಷಿಸಲಾಗಿದೆ. ಇಬ್ರಾಹಿಂ ರೈಸಿ ನಿಧನದ ಬೆನ್ನಲ್ಲೇ, ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿದೆ. ಹೌದು, ಇರಾನ್‌ ಅಧ್ಯಕ್ಷರ ನಿಧನದ ಹಿನ್ನೆಲೆಯಲ್ಲಿ ಜಾಗತಿಕವಾಗಿ ಬಂಗಾರದ ಬೆಲೆ ಜಾಸ್ತಿಯಾಗಿದೆ. ಕೆಲವೇ ದಿನಗಳಲ್ಲಿ ತೈಲ ಹಾಗೂ ಷೇರು ಮಾರುಕಟ್ಟೆ ಮೇಲೆಯೂ ಇದರ ಪರಿಣಾಮ ಆಗಲಿದೆ ಎಂದು ಹೇಳಲಾಗುತ್ತಿದೆ. ಇದು ಭಾರತದ ಮೇಲೂ ಪರಿಣಾಮ ಬೀರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಚಿನ್ನದ ಬೆಲೆ ಶೇ.1ರಷ್ಟು ಏರಿಕೆ

ಇಬ್ರಾಹಿಂ ರೈಸಿ ನಿಧನದ ಬೆನ್ನಲ್ಲೇ ಚಿನ್ನದ ಬೆಲೆಯು ಶೇ.1ರಷ್ಟು ಏರಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಒಂದು ಔನ್ಸ್‌ಗೆ (Ounce) (ಒಂದು ಔನ್ಸ್‌ ಎಂದರೆ 28.3 ಗ್ರಾಂ) 2,438.44 ಡಾಲರ್‌ ಆಗಿದೆ. ಬೆಳ್ಳಿಯ ಬೆಲೆಯೂ ಕಳೆದ 11 ವರ್ಷದಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಾಗತಿಕವಾಗಿ ಚಿನ್ನದ ಮಾರುಕಟ್ಟೆಯಲ್ಲಿ ಬೆಲೆ ಜಾಸ್ತಿಯಾದರೆ, ಖಂಡಿತವಾಗಿಯೂ ಭಾರತದಲ್ಲಿ ಚಿನ್ನದ ಬೆಲೆಯೇರಿಕೆ ಆಗಲಿದೆ. ಈಗಾಗಲೇ ಭಾರತದಲ್ಲಿ ಚಿನ್ನದ ಬೆಲೆಯು ಗಗನಕ್ಕೇರಿದ್ದು, ಈಗ ಮತ್ತಷ್ಟು ಏರಿಕೆಯಾಗುವ ಭೀತಿ ಉಂಟಾಗಿದೆ.

ತೈಲ ಮಾರುಕಟ್ಟೆ ಗತಿ ಏನು?

ಇಬ್ರಾಹಿಂ ರೈಸಿ ಅವರ ನಿಧನದ ಹಿನ್ನೆಲೆಯಲ್ಲಿ ಜಾಗತಿಕ ತೈಲ ಮಾರುಕಟ್ಟೆಯಲ್ಲಂತೂ ಹೆಚ್ಚಿನ ಆತಂಕ ಎದುರಾಗಿದೆ. ಜಾಗತಿಕ ರಾಜಕೀಯ ಹಾಗೂ ಹಣಕಾಸು ಸ್ಥಿತಿಯ ಮೇಲೆ ಇಬ್ರಾಹಿಂ ರೈಸಿ ಸಾವು ಪರಿಣಾಮ ಬೀರಿದೆ. ಇಬ್ರಾಹಿಂ ರೈಸಿ ನಿಧನದಿಂದಾಗಿ ಪ್ರಮುಖ ತೈಲೋತ್ಪಾದಿತ ದೇಶಗಳ ರಾಜಕೀಯ ವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತಿದೆ. ಸೌದಿ ಅರೇಬಿಯಾ ದೊರೆಯು ಜಪಾನ್‌ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಇರಾನ್‌ನಲ್ಲಿಯೂ ಅಧ್ಯಕ್ಷರ ಬದಲಾವಣೆಯಿಂದಾಗಿ ತೈಲದ ಉತ್ಪಾದನೆ ಕುಸಿಯುವ ಸಾಧ್ಯತೆ ಇದೆ.

crude oil

ಹೀಗೆ, ತೈಲ ಉತ್ಪಾದಿಸುವ ದೇಶಗಳಲ್ಲಿ ರಾಜಕೀಯ ಸ್ಥಿತ್ಯಂತರಗಳ ಬದಲಾವಣೆಯಿಂದಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತೈಲದ ಬೆಲೆಯು ಏರಿಕೆಯಾಗಲಿದೆ. ಇನ್ನು ಉತ್ಪಾದನೆ ಕಡಿಮೆಯಾಗಿ, ಬೇಡಿಕೆ ಜಾಸ್ತಿಯಾದರೆ ಕಚ್ಚಾತೈಲದ ಬೆಲೆಯು ಗಗನಕ್ಕೇರಲಿದೆ. ಇದರಿಂದ ಸಹಜವಾಗಿಯೇ ಭಾರತದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯು ಇನ್ನಷ್ಟು ಏರಿಕೆಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಚಿನ್ನ, ಇಂಧನದ ಜತೆಗೆ ಷೇರು ಮಾರುಕಟ್ಟೆ ಮೇಲೂ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Ebrahim Raisi: ಹೆಲಿಕಾಪ್ಟರ್‌ ದುರಂತಕ್ಕೂ ಮುಂಚಿನ ಇಬ್ರಾಹಿಂ ರೈಸಿ ವಿಡಿಯೋ ವೈರಲ್‌

Continue Reading
Advertisement
Karnataka weather Forecast
ಕರ್ನಾಟಕ7 mins ago

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

KMF Nandini Logo
ಕ್ರೀಡೆ9 mins ago

KMF Nandini Logo: ನಂದಿನಿಗೆ ಸ್ವಾಗತಿಸಿ ಟಿ20 ವಿಶ್ವಕಪ್​ ಜೆರ್ಸಿ ಬಿಡುಗಡೆಗೊಳಿಸಿದ ಐರ್ಲೆಂಡ್ ತಂಡ

Siddaramaiah government performance is zero says BY Vijayendra
ರಾಜಕೀಯ15 mins ago

BY Vijayendra: ಮಹಿಳಾ ಸುರಕ್ಷತೆಯನ್ನೂ ನೀಡದ ಕೊಲೆಗಡುಕ ಸರ್ಕಾರದಿಂದ ಸಾಧನೆ ಶೂನ್ಯ: ಬಿ.ವೈ. ವಿಜಯೇಂದ್ರ ಆಕ್ರೋಶ

Nutrition Alert
ಆರೋಗ್ಯ22 mins ago

Nutrition Alert: ಎಳನೀರು ಕುಡಿಯುವುದರಿಂದಲೂ ನಮ್ಮ ದೇಹಕ್ಕೆ ಸೈಡ್‌ ಎಫೆಕ್ಟ್‌ ಇದೆಯೆ?

Postal Ballot
ದೇಶ35 mins ago

Postal Ballot: ಅನಾರೋಗ್ಯದ ಕಾರಣ ಅಂಚೆ ಮತದಾನ ಕೋರಿ 78ರ ಅಜ್ಜಿ ಅರ್ಜಿ; ಬೇಡವೆಂದ ಸುಪ್ರೀಂ!

Model PSI Varsha repaired the road at own expense
ಕರ್ನಾಟಕ37 mins ago

Mysore News: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೊಳಿಸಿ ಮಾದರಿಯಾದ ಪಿಎಸ್‌ಐ

Driving Licence New Rules
ದೇಶ43 mins ago

Driving Licence New Rules: ಡ್ರೈವಿಂಗ್‌ ಲೈಸೆನ್ಸ್‌; ಜೂನ್‌ 1ರಿಂದ ಹೊಸ ರೂಲ್ಸ್‌!

2nd PUC Exam 2 Result tomorrow
ಶಿಕ್ಷಣ45 mins ago

2nd PUC Exam 2 Result: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ನಾಳೆ; ಸಿಇಟಿ ಫಲಿತಾಂಶ ಯಾವಾಗ?

Compound Wall Collapse
ಕರ್ನಾಟಕ57 mins ago

Compound Wall Collapse: ಹಾಜಬ್ಬರ ಶಾಲೆ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು

T20 World Cup 2024
ಕ್ರೀಡೆ1 hour ago

T20 World Cup 2024: ಇಂಡೋ-ಪಾಕ್​ ಮಿನಿ ವಿಶ್ವಕಪ್​ ಸಮರ ನಡೆಯುವ ಸ್ಟೇಡಿಯಂನ ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ8 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌