Horoscope Today | ಹೊಸ ವರ್ಷದ ಮೊದಲ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡಿ - Vistara News

ಪ್ರಮುಖ ಸುದ್ದಿ

Horoscope Today | ಹೊಸ ವರ್ಷದ ಮೊದಲ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡಿ

ಶುಭಕೃತ ನಾಮ ಸಂವತ್ಸರ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷದ ದಶಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (೦೧-೦೧-202೩)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷ.

ತಿಥಿ: ದಶಮಿ 19:10 ವಾರ: ಭಾನುವಾರ
ನಕ್ಷತ್ರ: ಅಶ್ವಿನಿ 12:47 ಯೋಗ: ಶಿವ 07:22
ಕರಣ: ಗರಜ 19:10 ಇಂದಿನ ವಿಶೇಷ: ಕ್ಯಾಲೆಂಡರ್‌ ನವ ವರ್ಷ ಆರಂಭ
ಅಮೃತಕಾಲ: ಬೆಳಗ್ಗೆ 05 ಗಂಟೆ 18 ನಿಮಿಷದಿಂದ 06 ಗಂಟೆ 58 ನಿಮಿಷದವರೆಗೆ.

ಸೂರ್ಯೋದಯ: 06 : 42    ಸೂರ್ಯಾಸ್ತ: 0೬ : 04

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ  (Horoscope Today)

Horoscope Today

ಮೇಷ: ಆತ್ಮವಿಶ್ವಾಸದ ಕೊರತೆಯಿಂದಾಗಿ ಕಾರ್ಯದಲ್ಲಿ ನಿಧಾನಗತಿ. ಆರೋಗ್ಯ ಸಂಬಂಧಿ ಖರ್ಚು ಸಾಧ್ಯತೆ. ಕುಟುಂಬ ಸದಸ್ಯರ ಸಂಪೂರ್ಣ ಬೆಂಬಲ ಸಿಗಲಿದೆ. ಅಪರೂಪದ ವ್ಯಕ್ತಿಗಳ ಪರಿಚಯದಿಂದಾಗಿ ಅನೇಕ ವಿಚಾರಗಳು ಮನಸ್ಸಿನ ಆಳಕ್ಕೆ ಇಳಿಯುವವು. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ವೃಷಭ: ಹೂಡಿಕೆ ವ್ಯವಹಾರದ ಕುರಿತು ಯೋಚಿಸುವ ಸಾಧ್ಯತೆ. ಆರ್ಥಿಕವಾಗಿ ಸದೃಢತೆ. ಜೀವನದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಸೂಕ್ತ ಸಮಯ. ಅನಗತ್ಯವಾಗಿ ಕಾಲ ಹರಣಮಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಸಂತೃಪ್ತ ಜೀವನ ನಡೆಸುವಿರಿ. ಕಾರ್ಯದಲ್ಲಿ ಯಶಸ್ಸು ಸಿಗುವುದು. ಯಾರನ್ನೂ ನಂಬಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಆಪ್ತ ಸ್ನೇಹಿತರೊಂದಿಗೆ ಮಾತು. ದಿನದ ಕೊನೆಯ ಭಾಗದಲ್ಲಿ ಮಾನಸಿಕವಾಗಿ ದುರ್ಬಲವಾಗುವ ಸಾಧ್ಯತೆ. ಆರ್ಥಿಕವಾಗಿ ಸಾಧಾರಣ ಫಲ. ಗುರುಗಳ ಅನುಗ್ರಹ ಪಡೆಯಿರಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಬೇರೆಯವರನ್ನು ಟೀಕೆ ಮಾಡುತ್ತಾ ನೀವು ಟೀಕೆಗೆ ಒಳಗಾಗುವುದು ಬೇಡ. ಆಪ್ತರೊಂದಿಗೆ ಅತಿಯಾದ ಸಲುಗೆ ಒಳ್ಳೆಯದಲ್ಲ. ಇದು ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ. ದಿನದ ಮಟ್ಟಿಗೆ ಖರ್ಚು. ಆತುರದ ಮಾತುಗಳಿಗೆ ನಿಯಂತ್ರಣ ಇರಲಿ. ಉದ್ಯೋಗಿಗಳಿಗೆ ಯಶಸ್ಸು. ಅತಿಥಿಗಳ ಆಗಮನದಿಂದ ಕಾರ್ಯ ವಿಳಂಬ. ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

Horoscope Today

ಸಿಂಹ: ಒತ್ತಡದಿಂದ ಹೊರಬಂದು ಉತ್ಸಾಹದ ಚಿಲುಮೆ ನೀವಾಗಲಿದ್ದೀರಿ. ದೈಹಿಕವಾಗಿ ಮಾನಸಿಕವಾಗಿ ಆರೋಗ್ಯ ಉತ್ತಮ. ಹಣಕಾಸು, ಹೂಡಿಕೆ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ದಿಢೀರ್‌ ಧನಾಗಮನವಾಗಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಕೀರ್ತಿ ಸಿಗಲಿದೆ. ಉದ್ಯೋಗಿಗಳಿಗೆ ಹೊಸ ಅವಕಾಶಗಳ ಸೂಚನೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ಕನ್ಯಾ: ಬಹಳ ದಿನಗಳಿಂದ ನಮಗೆ ಮರಳದೇ ಇದ್ದ ನಿಮ್ಮ ಹಣ ಮರಳುವ ಸಾಧ್ಯತೆ.
ಆರೋಗ್ಯದ ಬಗೆಗೆ ತುಂಬಾ ಕಾಳಜಿ ವಹಿಸಿ. ದಿನದ ಮಟ್ಟಿಗೆ ಪ್ರಯಾಣ ಬೆಳೆಸುವ ಸಾಧ್ಯತೆಗಳಿವೆ.
ಕುಟುಂಬದಲ್ಲಿ ಸಾಮರಸ್ಯ ಮೂಡಲಿದೆ. ಆಪ್ತರೊಂದಿಗೆ ಮಾತುಕತೆ. ಉದ್ಯೋಗದಲ್ಲಿ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ತುಲಾ: ಅನಿವಾರ್ಯ ಕಾರಣಗಳಿಂದ ನೀವು ಇತರರೊಂದಿಗೆ ಜಗಳಕ್ಕೆ ಇಳಿಯುವ ಸಾಧ್ಯತೆ. ಆದಷ್ಟು ಮಾತಿನಲ್ಲಿ ನಿಯಂತ್ರಣ ಇರಲಿ. ಕುಟುಂಬದ ಆಪ್ತರು, ಸ್ನೇಹಿತರಿಂದ ಉಡುಗೊರೆ ಸಿಗುವ ಸಾಧ್ಯತೆ. ಆರ್ಥಿಕವಾಗಿ ಪ್ರಗತಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

Horoscope Today

ವೃಶ್ಚಿಕ: ಇಂದು ಮನರಂಜನೆಗೆ ಹೆಚ್ಚು ಮಹತ್ವ ಕೊಡುವ ಸಾಧ್ಯತೆ. ಆಪ್ತರು ಹಾಗೂ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸನ್ನು ತಂದು ಕೊಡಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

Horoscope Today

ಧನಸ್ಸು: ಬಹಳ ದಿನಗಳ ಕನಸು ನನಸಾಗಲಿದೆ. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಇಂದು ಸಬಲತೆ ಹೊಂದುವಿರಿ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಸಂತೋಷದ ಜೊತೆ ಜೊತೆಗೆ ನಿಮ್ಮನ್ನು ಯಾರಾದರೂ ಟೀಕಿಸುವ ಸಾಧ್ಯತೆ. ದಿನದ ಕೊನೆಯಲ್ಲಿ ಕೌಟುಂಬಿಕ ತಾಪತ್ರಯ ನಿಮ್ಮನ್ನು ನಿರಾಸೆಗೊಳಿಸಬಹುದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮಕರ: ಆರೋಗ್ಯ ದಿನದ ಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ, ಆದಷ್ಟು ಎಚ್ಚರಿಕೆ ಇರಲಿ.
ಕುಟುಂಬದ ಸದಸ್ಯರ ಬೆಂಬಲ ನಿಮಗೆ ಬಲ ನೀಡಲಿದೆ. ಆರ್ಥಿಕವಾಗಿ ಬಲಗೊಳ್ಳುವಿರಿ. ಉದ್ಯೋಗದಲ್ಲಿ ಇಂದು ಬಹಳ ಕಷ್ಟಪಡಬೇಕಾಗುತ್ತದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಒಂಟಿತನ ನಿಮ್ಮನ್ನು ಕಾಡಬಹುದು. ಕುಟುಂಬ ಸದಸ್ಯರ ಅನಾರೋಗ್ಯ ಕಾರಣಗಳಿಂದ ಖರ್ಚು ಸಾಧ್ಯತೆ. ಬಾಕಿ ಇರುವ ಕೆಲಸ ಕಾರ್ಯಗಳನ್ನು ಮುಂದೂಡುವುದು ಬೇಡ. ಅತಿಯಾದ ಆಲಸ್ಯದಿಂದ ಹೊರ ಬಂದು, ಮಾಡುವ ಕೆಲಸದಲ್ಲಿ ತೊಡಗಿಸಿಕೊಳ್ಳುವುದು ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮೀನ: ಭರವಸೆಯ ಬದುಕು ರೂಪುಗೊಳ್ಳಲಿದೆ. ಆಪ್ತರು ನೀಡುವ ಶುಭ ಸಂದೇಶ ನಿಮ್ಮನ್ನು ಹರ್ಷಿತರನ್ನಾಗಿ ಮಾಡುವುದು. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಉದ್ಯೊಗದಲ್ಲಿ ಹೊಸ ಭರವಸೆ ಮೂಡಲಿದೆ. ಆರ್ಥಿಕವಾಗಿ ಬಲಿಷ್ಠರಾಗುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ |Yearly Horoscope 2023 | ಹೊಸ ವರ್ಷದಲ್ಲಿ ಯಾವೆಲ್ಲಾ ರಾಶಿಗಳಿಗೆ ಶುಭಾಶುಭ ಫಲಗಳಿವೆ?; ಇಲ್ಲಿದೆ ವರ್ಷ ಭವಿಷ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Prajwal Revanna Case: ತಾಳ್ಮೆ ಪರೀಕ್ಷಿಸಬೇಡ, ಈಗಲೇ ಬಂದು ಶರಣಾಗು; ಪ್ರಜ್ವಲ್‌ಗೆ ದೇವೇಗೌಡರ ವಾರ್ನಿಂಗ್‌

Prajwal Revanna Case: ಸಂಸದ ಪ್ರಜ್ವಲ್‌ ರೇವಣ್ಣರಿಗೆ ಪತ್ರ ಬರೆದಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಪ್ರಜ್ವಲ್‌ನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ. ಆದರೆ, ಇದನ್ನೆಲ್ಲ ನಾನು ಈ ಹೊತ್ತಿನಲ್ಲಿ ಜನರಿಗೆ ಅರ್ಥ ಮಾಡಿಸಲು ಸಾಧ್ಯವಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ ಎಂದು ಹೇಳಿದ್ದಾರೆ. ನನ್ನ ತಾಳ್ಮೆಯನ್ನು ಪರೀಕ್ಷೆ ಮಾಡಬೇಡ. ನೀನು ಎಲ್ಲಿಯೇ ಇದ್ದರೂ ಕೂಡಲೇ ಬಾ ಎಂದು ಪ್ರಜ್ವಲ್‌ ರೇವಣ್ಣ ವಿರುದ್ಧ ಗುಡುಗಿದ್ದಾರೆ.

VISTARANEWS.COM


on

Prajwal Revanna Case Surrender Now Devegowda warning to Prajwal
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ, ಎಚ್.ಡಿ. ದೇವೇಗೌಡ (HD Devegowda) ಅವರ ಅಸಮಾಧಾನ ಸ್ಫೋಟಗೊಂಡಿದೆ. ಪ್ರಜ್ವಲ್‌ ನನ್ನ ತಾಳ್ಮೆಯನ್ನು ಪರೀಕ್ಷೆ ಮಾಡಬೇಡ. ನೀನು ಎಲ್ಲಿಯೇ ಇದ್ದರೂ ಕೂಡಲೇ ಬಾ ಎಂದು ಫರ್ಮಾನು ಹೊರಡಿಸಿದ್ದಾರೆ.

ಈ ಬಗ್ಗೆ ಮೊಮ್ಮಗ, ಸಂಸದ ಪ್ರಜ್ವಲ್‌ ರೇವಣ್ಣರಿಗೆ ಪತ್ರ ಬರೆದಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಪ್ರಜ್ವಲ್‌ನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ. ಆದರೆ, ಇದನ್ನೆಲ್ಲ ನಾನು ಈ ಹೊತ್ತಿನಲ್ಲಿ ಜನರಿಗೆ ಅರ್ಥ ಮಾಡಿಸಲು ಸಾಧ್ಯವಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ ಎಂದು ಹೇಳಿದ್ದಾರೆ.

ಎಚ್‌.ಡಿ. ದೇವೇಗೌಡರ ಪತ್ರದಲ್ಲೇನಿದೆ?

ಪ್ರಜ್ವಲ್ ರೇವಣ್ಣನಿಗೆ ನನ್ನ ಎಚ್ಚರಿಕೆ,
ನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ, ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ದಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಹಗರಣ ಹೊರಬಿದ್ದ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ.

ಈ ಕೆಲವು ವಾರಗಳಿಂದ ಜನರು ನನ್ನ ಮತ್ತು ನನ್ನ ಕುಟುಂಬದವರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಹಗರಣದ ಎಲ್ಲ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು ಎಂದು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ. ಪ್ರಜ್ವಲನ ಚಟುವಟಿಕೆ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ನಾನು ಅವರಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಿಲ್ಲ. ಅವನನ್ನು ರಕ್ಷಿಸುವ ಯಾವುದೇ ಇರಾದೆಯೂ ನನಗಿಲ್ಲ. ಅವನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ ಎಂದು ನಾನು ಜನರಿಗೆ ಅರ್ಥ ಮಾಡಿಸಲು ಸಾಧ್ಯವಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ.

ದೇವೇಗೌಡರು ಪ್ರಜ್ವಲ್‌ ಕುರಿತಾಗಿ ಬರೆದ ಪತ್ರದ ಪೂರ್ಣ ಸಾರ ಈ ಪಿಡಿಎಫ್‌ನಲ್ಲಿದೆ. ಡೌನ್‌ಲೋಡ್‌ ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಓದಬಹುದು.

ನಾನು ಈಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ಪ್ರೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ ಮತ್ತು ತಾವು ಎಸಗಿದ ಕೃತ್ಯಗಳಿಗೆ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂದು ನಂಬಿದ್ದೇನೆ. ನನ್ನ ಸತ್ಯ ಮತ್ತು ನೋವಿನ ಹೊರೆಯನ್ನು ಭಗವಂತನ ಪದತಲದಲ್ಲಿ ಇರಿಸಿದ್ದೇನೆ.

ಪ್ರಜ್ವಲ್‌ಗೆ ಎಚ್ಚರಿಕೆ

ಈ ಸಂದರ್ಭದಲ್ಲಿ ನಾನು ಈಗ ಒಂದು ಕೆಲಸವನ್ನಷ್ಟೆ ಮಾಡಬಲ್ಲೆ. ಅದೇನೆಂದರೆ, ಪ್ರಜ್ವಲನು ಎಲ್ಲಿದ್ದರೂ ಬಂದು, ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳಬಲ್ಲೆ ಮತ್ತು ಹೇಳುತ್ತಿದ್ದೇನೆ. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ. ಅವನು ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ, ಈ ಎಚ್ಚರಿಕೆಗೆ ಅವನು ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಅವನು ಕೂಡಲೆ ಹಿಂದಿರುಗಿ ಬರಬೇಕು.

ಇದನ್ನೂ ಓದಿ: Prajwal Revanna Case: ರಾಹುಲ್‌ ಗಾಂಧಿ ಗೆದ್ದರೂ ಸಂಸತ್‌ ಸದಸ್ಯತ್ವ ರದ್ದು ಮಾಡಲು ಜೆಡಿಎಸ್‌ ಮೆಗಾ ಪ್ಲ್ಯಾನ್‌!

ನಾನಾಗಲಿ, ನನ್ನ ಕುಟುಂಬದವರಾಗಲಿ ಈ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಭರವಸೆ ಕೊಡುತ್ತೇನೆ. ಇದರಲ್ಲಿ ಯಾವುದೇ ಭಾವನೆಗೆ ಸಿಲುಕದೆ, ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗುವುದಷ್ಟೆ ನನಗೆ ಮುಖ್ಯ. ಜನರ ವಿಶ್ವಾಸವನ್ನು ಮರಳಿ ಪಡೆಯುವುದಷ್ಟೆ ನನ್ನ ಗುರಿ. ಜನರು ಆರು ದಶಕಗಳ ಕಾಲದ ನನ್ನ ರಾಜಕೀಯ ಜೀವನದುದ್ದಕ್ಕೂ ನನ್ನ ಜತೆಗೆ ನಿಂತಿದ್ದಾರೆ. ಅವರಿಗೆ ನಾನು ಸದಾ ಋಣಿ ಮತ್ತು ನಾನು ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ” ಎಂದು ಎಚ್‌.ಡಿ. ದೇವೇಗೌಡರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Continue Reading

ಆಟೋಮೊಬೈಲ್

2024 Maruti Swift : ಹಲವಾರು ಆ್ಯಕ್ಸೆಸರಿ ಪ್ಯಾಕ್​ನೊಂದಿಗೆ ಬಂದಿದೆ ಮಾರುತಿ ಸ್ವಿಫ್ಟ್​​ ಎಪಿಕ್​

2024 Maruti Swift: ಹೊಸ ಸ್ವಿಫ್ಟ್‌ಗಾಗಿ ಎಪಿಕ್ ರೂಫ್ ಮತ್ತು ಬಾನೆಟ್ ಮೇಲೆ ರೇಸಿಂಗ್ ಸ್ಟ್ರೈಪ್‌ಗಳನ್ನು ಪಡೆಯುತ್ತದೆ. ಇಲ್ಲಿ ಕಾಣುವ ಬಿಳಿ ಸ್ವಿಫ್ಟ್ ಕಪ್ಪು ಪಟ್ಟಿಗಳನ್ನು ಪಡೆಯುತ್ತದೆ. ಈ ಪಟ್ಟೆಗಳು ಮುಂಭಾಗದ ಫೆಂಡರ್‌ಗಳಿಗೂ ವಿಸ್ತರಿಸುತ್ತವೆ. ಕಾರ್ ಮುಂಭಾಗದ ಗ್ರಿಲ್ ಮತ್ತು ಫಾಗ್ ಲ್ಯಾಂಪ್‌ಗಳಿಗೆ ಗ್ಲಾಸ್ ಕಪ್ಪು ಬಾಹ್ಯರೇಖೆಯನ್ನು ಪಡೆಯುತ್ತದೆ. ಫಾಗ್ ಲ್ಯಾಂಪ್‌ಗಳ ಪಕ್ಕದಲ್ಲಿ ಕ್ರೋಮ್ ಆಕ್ಸೆಂಟ್‌ಗಳಿವೆ.

VISTARANEWS.COM


on

2024 Maruti Swift
Koo

ಬೆಂಗಳೂರು: ಮಾರುತಿ ಸುಜುಕಿ ಕೆಲವು ವಾರಗಳ ಹಿಂದೆ ಭಾರತೀಯ ಮಾರುಕಟ್ಟೆ 2024ರ ಆವೃತ್ತಿಯ ಸ್ವಿಫ್ಟ್ ಕಾರನ್ನು (2024 Maruti Swift) ಬಿಡುಗಡೆ ಮಾಡಿತ್ತು. ಕಾರು ಈಗಾಗಲೇ ಡೀಲರ್‌ಶಿಪ್‌ಗಳನ್ನು ತಲುಪಿದೆ ಮತ್ತು ಡೆಲಿವರಿ ಸಹ ಪ್ರಾರಂಭವಾಗಿದೆ. ರಸ್ತೆಗೆ ಬಂದ ಕಾರುಗಳು ಆಫ್ಟರ್ ಮಾರ್ಕೆಟ್​ ಮಾಡಿಫಿಕೇಷನ್​ನೊಂದಿಗೆ ರಸ್ತೆಯಲ್ಲಿ ಕಾಣಿಸಿಕೊಳ್ಳುತ್ತಿವೆ. ಮಾರುತಿ 2024 ಸ್ವಿಫ್ಟ್‌ ಲಾಂಚ್ ಮಾಡುವ ವೇಳೆ ಹಲವಾರು ಆ್ಯಕ್ಸೆಸರೀಸ್​ ಪ್ಯಾಕ್‌ಗಳನ್ನು ಬಿಡುಗಡೆ ಮಾಡಿದೆ. ಮಾರುತಿಯು ಬೇಸ್​ ವರ್ಷನ್ ಆಗಿರುವ ಎಲ್​ಎಕ್ಸ್​ಐಗೆ ಈ ಆ್ಯಕ್ಸೆಸರಿ ಪ್ಯಾಕ್ ಗಳನ್ನು ನೀಡಲಾಗಿದೆ. ಈ ಮಾದರಿನ್ನು ಎಪಿಕ್ ಎಡಿಷನ್ ಎಂದು ಕರೆಯಲಾಗಿದೆ.

ಹೊಸ ಸ್ವಿಫ್ಟ್‌ಗಾಗಿ ಎಪಿಕ್ ರೂಫ್ ಮತ್ತು ಬಾನೆಟ್ ಮೇಲೆ ರೇಸಿಂಗ್ ಸ್ಟ್ರೈಪ್‌ಗಳನ್ನು ಪಡೆಯುತ್ತದೆ. ಇಲ್ಲಿ ಕಾಣುವ ಬಿಳಿ ಸ್ವಿಫ್ಟ್ ಕಪ್ಪು ಪಟ್ಟಿಗಳನ್ನು ಪಡೆಯುತ್ತದೆ. ಈ ಪಟ್ಟೆಗಳು ಮುಂಭಾಗದ ಫೆಂಡರ್‌ಗಳಿಗೂ ವಿಸ್ತರಿಸುತ್ತವೆ. ಕಾರ್ ಮುಂಭಾಗದ ಗ್ರಿಲ್ ಮತ್ತು ಫಾಗ್ ಲ್ಯಾಂಪ್‌ಗಳಿಗೆ ಗ್ಲಾಸ್ ಕಪ್ಪು ಬಾಹ್ಯರೇಖೆಯನ್ನು ಪಡೆಯುತ್ತದೆ. ಫಾಗ್ ಲ್ಯಾಂಪ್‌ಗಳ ಪಕ್ಕದಲ್ಲಿ ಕ್ರೋಮ್ ಆಕ್ಸೆಂಟ್‌ಗಳಿವೆ. ಮುಂಭಾಗದ ಫಾಕ್ಸ್ ಸ್ಕಿಡ್ ಪ್ಲೇಟ್ ಅಥವಾ ಬಂಪರ್‌ನ ಕೆಳಗಿನ ಭಾಗದಲ್ಲಿ ನಾವು ಕ್ರೋಮ್ ಸ್ಟ್ರಿಪ್ ನೀಡಲಾಗಿದೆ.

ಸೈಡ್ ಪ್ರೊಫೈಲ್‌ನಲ್ಲಿ, 14-ಇಂಚಿನ ಸ್ಟೀಲ್ ರಿಮ್‌ಗಳಿಗಾಗಿ ಕಾರು ಬ್ಲ್ಯಾಕ್ಡ್-ಔಟ್ ವೀಲ್ ಕ್ಯಾಪ್‌ಗಳನ್ನು ಪಡೆಯುತ್ತದೆ. ಇಂಡಿಕೇಟರ್​ಗಳು ಲೋ ವೇರಿಯೆಂಟ್​ಗಳಿಗೆ ಫೆಂಡರ್‌ನಲ್ಲಿವೆ. ORVM ಗಳು ಗ್ರಾಫಿಕ್ಸ್‌ನೊಂದಿಗೆ ಮಿಂಚುವ ಕಪ್ಪು ಕವರ್‌ಗಳನ್ನು ಪಡೆಯುತ್ತವೆ. ವಿಂಡೋ ಕ್ರೋಮ್ ಅಲಂಕರಿಸಲು ಮತ್ತು ಡೋರ್ ವಿಸರ್ ಕೂಡ ನೀಡಲಾಗಿದೆ. ಕಾರು ಗ್ಲಾಸ್ ಬ್ಲ್ಯಾಕ್ ಡೋರ್ ಬೀಡಿಂಗ್ ಮತ್ತು ಕ್ರೋಮ್ ಡೋರ್ ಹ್ಯಾಂಡಲ್ ಕವರ್‌ಗಳನ್ನು ಪಡೆಯುತ್ತದೆ.

ಹಿಂಬದಿ ಹೇಗಿದೆ?

ಹಿಂಭಾಗದಲ್ಲಿ, ಫಾಗ್​​ LED ಟೈಲ್ ಲ್ಯಾಂಪ್‌ಗಳು ಯಾವುದೇ ಇತರ ಆವೃತ್ತಿಗಳಂತೆಯೇ ಇರುತ್ತವೆ. ಆದಾಗ್ಯೂ, ಕಾರು ಟೈಲ್‌ಗೇಟ್‌ನಲ್ಲಿ ಕ್ರೋಮ್ ಅಪ್ಲಿಕ್ ಅನ್ನು ಮತ್ತು ಹಿಂಭಾಗದ ಬಂಪರ್‌ನಲ್ಲಿ ಕ್ರೋಮ್ ಪಡೆಯುತ್ತದೆ. ಹಿಂಬದಿಯ ವಿಂಡ್‌ಸ್ಕ್ರೀನ್‌ನ ಕೆಳಗಿನ ಭಾಗದಲ್ಲಿ ಕ್ರೋಮ್ ನೀಡಿದ್ದಅರೆ. ಹೊಳಪುಳ್ಳ ಕಪ್ಪು ರೂರ್ಫರ್ -ಮೌಂಟೆಡ್ ಸ್ಪಾಯ್ಲರ್ ಅನ್ನು ಸಹ ಇಲ್ಲಿ ಕಾರಿನ ಮೇಲೆ ಕಾಣಬಹುದು.

ಇದನ್ನೂ ಓದಿ: 2024 Bajaj Pulsar F250 : ಬೆಲೆ ಏರಿಕೆ ಮಾಡದೇ ಹೊಸ ಪಲ್ಸರ್​ 250 ರಸ್ತೆಗಿಳಿಸಲಿದೆ ಬಜಾಜ್​​

ಇಂಟೀರಿಯರ್​

ಬೇಸ್​ ವೇರಿಯೆಂಟ್​ ಪಾರ್ಸೆಲ್ ಟ್ರೇನೊಂದಿಗೆ ಬರುವುದಿಲ್ಲ, ಆದರೆ ಅಗತ್ಯವಿದ್ದರೆ ಅದನ್ನು ಆ್ಯಕ್ಸೆಸರಿಯಾಗಿ ಖರೀದಿಸಬಹುದು. ಬಾಗಿಲಿನ ಮೇಲೆ ಯಾವುದೇ ವರ್ಣರಂಜಿತ ಟ್ರಿಮ್‌ಗಳು ಲಭ್ಯವಿಲ್ಲ. ಎಪಿಕ್ ಆವೃತ್ತಿಯು ವಿಂಡೋ ಶೇರ್​ ಪಡೆಯುತ್ತದೆ. ಇದನ್ನು ಹೊರತುಪಡಿಸಿ, ಕಾರು ಸ್ವಿಫ್ಟ್‌ಗೆ ಹೊಂದಿಕೆಯಾಗುವ ಸೀಟ್ ಕವರ್‌ಗಳನ್ನು ಪಡೆಯುತ್ತದೆ. ಇದಕ್ಕೆ ಆಫ್ಟರ್​ ಮಾರ್ಕೇಟ್​​ ಸೀಟ್ ಕವರ್‌ಗಳು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ ಏಕೆಂದರೆ ಹ್ಯಾಚ್‌ಬ್ಯಾಕ್ ಈಗ ಫ್ಯಾಕ್ಟರಿಯಿಂದಲೇ 6 ಏರ್‌ಬ್ಯಾಗ್‌ಗಳೊಂದಿಗೆ ಬರುತ್ತದೆ.

ಎಪಿಕ್ ಎಡಿಷನ್​ನಲ್ಲಿ ಸ್ಟೀರಿಂಗ್ ಕವರ್ ಇದೆ. ಮತ್ತು ಇದು 7-ಇಂಚಿನ ಬೇಸಿಕ್​ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಜೊತೆಗೆ 4-ಸ್ಪೀಕರ್ ಸಿಸ್ಟಮ್ ಅನ್ನು ಸಹ ನೀಡುತ್ತದೆ. ಬೇಸ್​​ ವೇರಿಯೆಂಟ್​ ಯಾವುದೇ ರೀತಿಯ ಇನ್ಫೋಟೈನ್‌ಮೆಂಟ್ ಸಿಸ್ಟಮ್ ನೀಡುವುದಿಲ್ಲ. ಇದು ಪ್ಯಾಕೇಜ್‌ನ ಭಾಗವಾಗಿದೆ.

67 ಸಾವಿರ ರೂಪಾಯಿ ಹೆಚ್ಚು

ಮೇಲಿನ ಎಲ್ಲಾ ಬಿಡಿಭಾಗಗಳೊಂದಿಗೆ ಸ್ವಿಫ್ಟ್‌ನ ಬೇಸ್ ವರ್ಷನ್​ ಕಾರನ್ನು ಟಾಪ್ ವರ್ಷನ್​ ರೀತಿ ಕಾಣುವಂತೆ ಪರಿವರ್ತಿಸಬಹುದು. ಈ ಎಪಿಕ್ ಆವೃತ್ತಿಯ ಆಕ್ಸೆಸರಿ ಪ್ಯಾಕ್ ಅನ್ನು ಖರೀದಿಸಲು ಆಸಕ್ತಿ ಹೊಂದಿದ್ದರೆ, 67,000 ರೂಪಾಯಿ ಸ್ವಲ್ಪ ಹೆಚ್ಚು ಖರ್ಚು ಮಾಡಬೇಕಾಗುತ್ತದೆ.

ಹೊಸ ಪೀಳಿಗೆಯ ಸ್ವಿಫ್ಟ್ ಹೊಚ್ಚ ಹೊಸ 1.2-ಲೀಟರ್, 3-ಸಿಲಿಂಡರ್ ನ್ಯಾಚುರಲ್ ಆಸ್ಪಿರೇಟೆಡ್​​ ಪೆಟ್ರೋಲ್ ಎಂಜಿನ್‌ನಿಂದ ಬರುತ್ತದೆ. ಅದು 82 Ps ಮತ್ತು 112 Nm ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಹ್ಯಾಚ್‌ಬ್ಯಾಕ್ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ AMT ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಲಭ್ಯವಿದೆ.

Continue Reading

ದೇಶ

Narendra Modi: ಪಾಕ್‌ ʼಬಂಡವಾಳʼ ಏನೆಂದು ಅಲ್ಲಿಗೇ ಹೋಗಿ ನೋಡಿ ಬಂದಿರುವೆ; ಕಾಂಗ್ರೆಸ್‌ ‘ಬಾಂಬ್’‌ ಹೇಳಿಕೆಗೆ ಮೋದಿ ಟಾಂಗ್!

Narendra Modi: “ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ” ಎಂಬುದಾಗಿ ಮಣಿಶಂಕರ್‌ ಅಯ್ಯರ್‌ ನೀಡಿದ ಹೇಳಿಕೆಗೆ ನರೇಂದ್ರ ಮೋದಿ ವ್ಯಂಗ್ಯವಾಗಿ ಉತ್ತರ ನೀಡಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪಾಕಿಸ್ತಾನ, ಜಮ್ಮು-ಕಾಶ್ಮೀರ, ಅಣುಬಾಂಬ್‌ ಸೇರಿ ಹಲವು ವಿಷಯಗಳು ಮುನ್ನೆಲೆಗೆ ಬರುತ್ತಿವೆ. ಅದರಲ್ಲೂ, “ಪಾಕಿಸ್ತಾನದ ಬಳಿ ಅಣುಬಾಂಬ್‌ ಇವೆ. ಭಾರತವು ಪಾಕಿಸ್ತಾನಕ್ಕೆ ಗೌರವ ಕೊಡಬೇಕು” ಎಂಬುದಾಗಿ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌ (Mani Shankar Aiyar) ಅವರು ನೀಡಿದ ಹೇಳಿಕೆಗೆ ಖುದ್ದು ಕಾಂಗ್ರೆಸ್‌ ಅಂತರ ಕಾಯ್ದುಕೊಂಡಿದೆ. ಮಣಿಶಂಕರ್‌ ಅಯ್ಯರ್‌ ಹೇಳಿಕೆಗೆ ಬಿಜೆಪಿ ನಾಯಕರು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ, ಮಣಿಶಂಕರ್‌ ಅಯ್ಯರ್‌ ‘ಅಣುಬಾಂಬ್‌’ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರತಿಕ್ರಿಯಿಸಿದ್ದು, “ನಾನೇ ಪಾಕಿಸ್ತಾನಕ್ಕೆ (Pakistan) ಹೋಗಿ, ಆ ದೇಶದ ಶಕ್ತಿ ಎಷ್ಟಿದೆ ಎಂಬುದನ್ನು ನೋಡಿಕೊಂಡು ಬಂದಿದ್ದೇನೆ” ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.

ಇಂಡಿಯಾ ಟಿವಿ ಚಾನೆಲ್‌ ಜತೆ ಸಂವಾದ ನಡೆಸುವ ವೇಳೆ, ಮಣಿಶಂಕರ್‌ ಅಯ್ಯರ್‌ ಹೇಳಿಕೆ ಕುರಿತು ಸಂದರ್ಶಕ ಕೇಳಿದ ಪ್ರಶ್ನೆಗೆ ನರೇಂದ್ರ ಮೋದಿ ಅವರು ಮಾರ್ಮಿಕವಾಗಿ ಉತ್ತರ ನೀಡಿದರು. “ನಾನೇ ಲಾಹೋರ್‌ಗೆ ತೆರಳಿ ಆ ಪಾಕಿಸ್ತಾನದ ಶಕ್ತಿ ಎಷ್ಟಿದೆ ಎಂಬುದನ್ನು ನೋಡಿಕೊಂಡು ಬಂದಿದ್ದೇನೆ. ನನ್ನನ್ನು ನೋಡಿ, ಪಾಕಿಸ್ತಾನದ ಒಬ್ಬ ಪತ್ರಕರ್ತ ಆಶ್ಚರ್ಯದಿಂದ ಕೇಳಿದ. ‘ವೀಸಾ ಇಲ್ಲದೆ ನೀವೇಗೆ ಇಲ್ಲಿಗೆ ಬಂದಿದ್ದೀರಿ’ ಎಂದ. ಅದಕ್ಕೆ ನಾನು, ‘ಪಾಕಿಸ್ತಾನ ಒಂದು ಕಾಲಕ್ಕೆ ನಮ್ಮದೇ ದೇಶದ ಭಾಗವಾಗಿತ್ತು’ ಎಂಬುದಾಗಿ ಉತ್ತರಿಸಿದೆ” ಎಂಬುದಾಗಿ ನರೇಂದ್ರ ಮೋದಿ ಹೇಳಿದ್ದಾರೆ. ಆ ಮೂಲಕ ಮಣಿಶಂಕರ್‌ ಅಯ್ಯರ್‌ ಹೇಳಿಕೆಗೆ ವ್ಯಂಗ್ಯವಾಗಿಯೇ ಉತ್ತರ ಕೊಟ್ಟಿದ್ದಾರೆ.

ಕೆಲ ದಿನಗಳ ಹಿಂದೆಯೂ ಮಣಿಶಂಕರ್‌ ಅಯ್ಯರ್‌ ಹೇಳಿಕೆ ವಿರುದ್ಧ ನರೇಂದ್ರ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದರು. “ಪಾಕಿಸ್ತಾನದ ಕುರಿತು ಕಾಂಗ್ರೆಸ್‌ ನಾಯಕರು ಹೆಚ್ಚು ಚಿಂತಿತರಾಗಿದ್ದಾರೆ. ನೆರೆಯ ರಾಷ್ಟ್ರದ ಬಳಿ ಅಣು ಬಾಂಬ್‌ಗಳಿವೆ ಎಂಬುದಾಗಿ ಅವರು ಹೆದರಿಸುತ್ತಾರೆ. ಆದರೆ, ಪಾಕಿಸ್ತಾನದ ಬಳಿ ಪರಮಾಣು ಬಾಂಬ್‌ಗಳಿವೆ ಹಾಗೂ ಅವುಗಳನ್ನು ನಿರ್ವಹಣೆ ಮಾಡಲು ಆಗದಂತಹ, ಅದಕ್ಕೆ ಹಣವೇ ಇಲ್ಲದಂತಹ ಪರಿಸ್ಥಿತಿ ಪಾಕಿಸ್ತಾನಕ್ಕೆ ಎದುರಾಗಿದೆ ಎಂಬುದನ್ನು ಕಾಂಗ್ರೆಸ್‌ ಅರ್ಥ ಮಾಡಿಕೊಳ್ಳುತ್ತಿಲ್ಲ” ಎಂಬುದಾಗಿ ಚುನಾವಣೆ ರ‍್ಯಾಲಿಯಲ್ಲಿ ಹೇಳಿದ್ದರು.

ಮಣಿಶಂಕರ್‌ ಅಯ್ಯರ್‌ ಹೇಳಿದ್ದೇನು?

“ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ಭಾರತ ಕೇವಲ ವಿಶ್ವಗುರು ಎಂದು ಹೇಳುತ್ತಾ ಇದ್ದರೆ ಸಾಲದು ನೆರೆಯ ರಾಷ್ಟ್ರ ಪಾಕಿಸ್ತಾನದ ಜತೆ ಮೊದಲು ಶಾಂತಿಯುತ ಮಾತುಕತೆ ನಡೆಸಬೇಕು. ಯಾವಾಗಲೂ ಕೈಯಲ್ಲಿ ಬಂದೂಕು ಹಿಡಿದು ಸುತ್ತಾಡಿದರೆ ಯಾವ ಕೆಲಸವೂ ಆಗಲ್ಲ, ಯಾವ ಪರಿಹಾರವೂ ಸಿಗಲ್ಲ. ಅದು ಕೇವಲ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಅಷ್ಟೇ. ಪಾಕಿಸ್ತಾನ ಕೂಡ ಸಾರ್ವಭೌಮ ರಾಷ್ಟ್ರ ಮತ್ತು ಅದಕ್ಕೆ ಅದರದ್ದೇ ಆದ ಗೌರವ ಇದೆ. ಒಂದು ವೇಳೆ ಅಲ್ಲಿ ತಲೆಕೆಟ್ಟ ಮನುಷ್ಯ ಅಧಿಕಾರಕ್ಕೆ ಬಂದರೆ, ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ” ಎಂದು ಅಯ್ಯರ್‌ ಹೇಳಿದ್ದರು.

ಇದನ್ನೂ ಓದಿ: PM Narendra Modi: ಪ್ರಧಾನಿ ಮೋದಿ ರ್‍ಯಾಲಿಯಲ್ಲಿ ಜನವೋ…ಜನ! ಅದ್ಭುತ ದೃಶ್ಯ ಕ್ಯಾಮೆರಾದಲ್ಲಿ ಸೆರೆ-ವಿಡಿಯೋ ವೈರಲ್‌

Continue Reading

ಪ್ರಮುಖ ಸುದ್ದಿ

Ayodhya Ram Mandir: ಅಯೋಧ್ಯೆ ಶ್ರೀ ರಾಮನಿಗೆ ಬೆಳ್ಳಿಯ ಬಿಲ್ಲು- ಬಾಣ; ಪೂಜಿಸಿ ಕಳಿಸಿಕೊಟ್ಟ ಶೃಂಗೇರಿ ಶ್ರೀಗಳು

Ayodhya Ram Mandir: ಶೃಂಗೇರಿ ಹಿರಿಯ ಶ್ರೀಗಳಾದ ಜಗದ್ಗುರು ಶ್ರೀ ಭಾರತೀ ತೀರ್ಥರು ಹಾಗೂ ಕಿರಿಯ ಶ್ರೀಗಳಾದ ಶ್ರೀ ವಿಧುಶೇಖರ ಭಾರತೀ ತೀರ್ಥರು (sri vidhushekhara bharati Teertha) ಈ ಸಂದರ್ಭದಲ್ಲಿ ಹಾಜರಿದ್ದು, ಬೆಳ್ಳಿಯ ಬಿಲ್ಲು- ಬಾಣದ ಅಂದಚಂದವನ್ನು ಸವಿದರು. ನಂತರ ಅದನ್ನು ಅಯೋಧ್ಯೆಗೆ ಕೊಂಡೊಯ್ಯಲಾಯಿತು.

VISTARANEWS.COM


on

ayodhya ram mandir 1
Koo

ಚಿಕ್ಕಮಗಳೂರು: ಅಯೋಧ್ಯೆ ಶ್ರೀರಾಮ ಮಂದಿರದ (Ayodhya Ram Mandir) ಆರಾಧ್ಯ ಮೂರ್ತಿ ಬಾಲಕ ರಾಮ (Balak Ram) ನಿಗೆ ಬೆಳ್ಳಿಯ ಬಿಲ್ಲು-ಬಾಣ (Silver bow, silver Arrow) ಸಮರ್ಪಿಸಲಾಗುತ್ತಿದೆ. ಬೆಂಗಳೂರು ಮೂಲದ ಭಕ್ತರೊಬ್ಬರು ಬೆಳ್ಳಿಯ ಬಿಲ್ಲು-ಬಾಣ ಸಮರ್ಪಣೆ ಮಾಡುತ್ತಿದ್ದು, ಅದಕ್ಕೂ ಮೊದಲು ಶೃಂಗೇರಿಯ ಶಾರದಾ ಪೀಠದಲ್ಲಿ (Sringeri Sharada Peetham) ಶ್ರೀ ಗುರುಗಳ ಮುಂದೆ ಅದನ್ನು ಪ್ರದರ್ಶಿಸಿದರು.

ಅತ್ಯಂತ ಸುಂದರ ಹಾಗೂ ಮನಮೋಹಕವಾದ, ಬೆಳ್ಳಿಯಿಂದ ಮಾಡಲಾದ ಈ ಬಿಲ್ಲು-ಬಾಣವನ್ನು ಶೃಂಗೇರಿ ಹಿರಿಯ ಹಾಗೂ ಕಿರಿಯ ಶ್ರೀಗಳು ಪೂಜಿಸಿ ಕಳಿಸಿಕೊಟ್ಟರು. ಶೃಂಗೇರಿ ಹಿರಿಯ ಶ್ರೀಗಳಾದ ಜಗದ್ಗುರು ಶ್ರೀ ಭಾರತೀ ತೀರ್ಥರು ಹಾಗೂ ಕಿರಿಯ ಶ್ರೀಗಳಾದ ಶ್ರೀ ವಿಧುಶೇಖರ ಭಾರತೀ ತೀರ್ಥರು (sri vidhushekhara bharati Teertha) ಈ ಸಂದರ್ಭದಲ್ಲಿ ಹಾಜರಿದ್ದು, ಬೆಳ್ಳಿಯ ಬಿಲ್ಲು- ಬಾಣದ ಅಂದಚಂದವನ್ನು ಸವಿದರು. ನಂತರ ಅದನ್ನು ಅಯೋಧ್ಯೆಗೆ ಕೊಂಡೊಯ್ಯಲಾಯಿತು.

ರಾಮ ಮಂದಿರದ ಪ್ರತಿಷ್ಠಾಪನೆಗೆ ಶೃಂಗೇರಿ ಶ್ರೀಗಳನ್ನು ಆಹ್ವಾನಿಸಲಾಗಿತ್ತು. ಶ್ರೀಗಳು ಶುಭಹಾರೈಕೆಯ ಸಂದೇಶವನ್ನು ಕಳಿಸಿಕೊಟ್ಟಿದ್ದರಲ್ಲದೆ, ಆ ದಿನ ಮಠದಲ್ಲಿ ಹಾಗೂ ಶಾಖಾಮಠಗಳಲ್ಲಿ ಶ್ರೀರಾಮನ ಆರಾಧನೆಗೆ ನಿರ್ದೇಶನ ನೀಡಿದ್ದರು.

ಚಿನ್ನದ ಬಿಲ್ಲು ಬಾಣ

ಪ್ರಸ್ತುತ ಅಯೋಧ್ಯಾ ರಾಮನ ಕೈಯಲ್ಲಿ ಚಿನ್ನದ ಬಿಲ್ಲು ಬಾಣ ಇವೆ. ರಾಮ ಲಲ್ಲಾನ ಪ್ರಾಣ ಪ್ರತಿಷ್ಠಾಪನೆಗೂ ಮುನ್ನವೇ ಹಲವು ಅಮೂಲ್ಯ ಉಡುಗೊರೆಗಳು ಅಯೋಧ್ಯೆಯನ್ನು ತಲುಪಿದ್ದವು. ದೇಶಾದ್ಯಂತ ಹಲವು ಭಕ್ತರು ಅನೇಕ ಉಡುಗೊರೆಗಳನ್ನು ಶ್ರೀರಾಮನಿಗಾಗಿ ಅಯೋಧ್ಯೆಗೆ ಕಳಿಸಿದ್ದರು. ಅತ್ತ ನೇಪಾಳದಿಂದಲೂ ಅತ್ಯಮೂಲ್ಯ ವಸ್ತುಗಳು ಅಯೋಧ್ಯೆ ಸೇರಿದ್ದವು. ಶ್ರೀರಾಮನಿಗಾಗಿ ಚಿನ್ನದ ಬಿಲ್ಲು (golden bow), ಚಿನ್ನದ ಬಾಣ (golden arrow), ಚಿನ್ನದ ಘಂಟೆ (golden bell) ಸೇರಿದಂತೆ ಹಲವು ಅಮೂಲ್ಯ ವಸ್ತುಗಳು ಬಂದಿದ್ದವು.

ಒನವಿಲ್ಲು ಸಮರ್ಪಣೆ

ಕೇರಳದ ಪ್ರಸಿದ್ಧ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನವು (Padmanabhaswamy Temple) ಕೂಡ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರದ (Ayodhya Ram Mandir) ಪ್ರತಿಷ್ಠಾಪನೆ ಸಮಾರಂಭದ ಸಂದರ್ಭದಲ್ಲಿ ಸಾಂಪ್ರದಾಯಿಕ ಬಿಲ್ಲು ‘ಒನವಿಲ್ಲು’ (Onavillu) ಸಮರ್ಪಿಸಿತ್ತು. ‘ಒನವಿಲ್ಲು’ ಮೂರು ಶತಮಾನಗಳ ಹಳೆಯ ಸಂಪ್ರದಾಯದ ಭಾಗವಾಗಿ ಭಗವಾನ್ ಶ್ರೀ ಪದ್ಮನಾಭನಿಗೆ ಸಮರ್ಪಿತವಾದ ವಿಧ್ಯುಕ್ತ ಅರ್ಪಣೆಯಾಗಿದೆ. ಇಲ್ಲಿನ ಸ್ಥಳೀಯರು ಇದನ್ನು ಪ್ರತಿ ವರ್ಷ ‘ತಿರು ಓಣಂ’ ಹಬ್ಬದಂದು ಪದ್ಮನಾಭ ದೇವಸ್ಥಾನಕ್ಕೆ ಅರ್ಪಿಸುತ್ತಾರೆ. ಭಕ್ತರಿಂದ ಪವಿತ್ರವೆಂದು ಪರಿಗಣಿಸಲ್ಪಟ್ಟಿರುವ ‘ವಿಲ್ಲು’ ಸಾಮಾನ್ಯವಾಗಿ ಬಿಲ್ಲಿನ ಆಕಾರದ ಮರದ ಫಲಕವಾಗಿದ್ದು, ಅನಂತಶಯನಂ ಪೌರಾಣಿಕ ಸರ್ಪ ಅನಂತ, ದಶಾವತಾರಂ ವಿಷ್ಣುವಿನ ಅವತಾರಗಳು, ಶ್ರೀರಾಮ ಪಟ್ಟಾಭಿಷೇಕ ಮುಂತಾದ ವರ್ಣಚಿತ್ರಗಳನ್ನು ಹೊಂದಿದೆ.

ಈವರೆಗೆ ಅಯೋಧ್ಯೆ ರಾಮಲಲ್ಲಾನ ದರ್ಶನ ಮಾಡಿದವರ ಸಂಖ್ಯೆ 1.5 ಕೋಟಿ!

ಭಗವಾನ್ ಶ್ರೀರಾಮನ (sriram) ಜನ್ಮ ಸ್ಥಳವಾದ ಅಯೋಧ್ಯೆಯ ರಾಮ ಮಂದಿರದಲ್ಲಿ (Ayodhya Ram mandir) ರಾಮಲಲ್ಲಾನ (ram lalla) ಪ್ರಾಣ ಪ್ರತಿಷ್ಠಾಪನೆಯಾದ ಬಳಿಕ ಪ್ರತಿನಿತ್ಯ ಸುಮಾರು ಒಂದು ಲಕ್ಷ ಮಂದಿ ಭೇಟಿ ನೀಡುತ್ತಿದ್ದಾರೆ. ದೇವಾಲಯ ಉದ್ಘಾಟನೆಯಾದ ಬಳಿಕ ಈವರೆಗೆ ಸುಮಾರು 1.5 ಕೋಟಿ ಮಂದಿ ದೇವಸ್ಥಾನಕ್ಕೆ ಭೇಟಿ ನೀಡಿ ರಾಮಲಲ್ಲಾನ ದರ್ಶನ ಪಡೆದಿದ್ದಾರೆ ಎಂದು ದೇವಾಲಯದ ಟ್ರಸ್ಟ್‌ ತಿಳಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ (Shri Ram Janmabhoomi Theertha Kshetra Trust) ಪ್ರಧಾನ ಕಾರ್ಯದರ್ಶಿ (Principal Secretary) ಚಂಪತ್ ರಾಯ್‌ (Champat Rai), ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಜನ್ಮಭೂಮಿ ದೇವಾಲಯದಲ್ಲಿ ಜನವರಿ 22ರಂದು ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯಾದ ಬಳಿಕ ಸರಿಸುಮಾರು 1.5 ಕೋಟಿ ಜನರು ರಾಮ್ ಲಲ್ಲಾನ ದರ್ಶನ ಪಡೆದಿದ್ದಾರೆ. ಪ್ರತಿದಿನ ಒಂದು ಲಕ್ಷಕ್ಕೂ ಹೆಚ್ಚು ಜನರು ರಾಮಲಲ್ಲಾನ ದರ್ಶನ ಪಡೆಯಲು ದೇವಾಲಯಕ್ಕೆ ಆಗಮಿಸುತ್ತಿದ್ದಾರೆ ಎಂದು ಹೇಳಿದರು.

ಹೊಸದಾಗಿ ನಿರ್ಮಿಸಲಾದ ಭವ್ಯವಾದ ರಾಮಜನ್ಮಭೂಮಿ ದೇವಾಲಯದಲ್ಲಿ ಪ್ರಸಿದ್ಧ ಶಿಲ್ಪಿ ಅರುಣ್ ಯೋಗಿರಾಜ್ ಅವರು ರಚಿಸಿರುವ 51 ಇಂಚು ಎತ್ತರದ ಭಗವಾನ್ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾ ಜನವರಿ 22ರಂದು ಎಲ್ಲಾ ಪಂಗಡಗಳಿಗೆ ಸೇರಿದ ಸುಮಾರು 8,000 ಗಣ್ಯರ ಸಮ್ಮುಖದಲ್ಲಿ ನಡುವೆ ನಡೆಯಿತು. ಪ್ರಾಣ ಪ್ರತಿಷ್ಠಾ ಸಮಾರಂಭದ ವಿಧಿವಿಧಾನಗಳ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಿದ್ದರು.

ಇದನ್ನೂ ಓದಿ: Narendra Modi: ರಾಮಲಲ್ಲಾನಿಗೆ ಮೋದಿ ಸಾಷ್ಟಾಂಗ ನಮಸ್ಕಾರ; ಇಲ್ಲಿವೆ ಅಯೋಧ್ಯೆ ಭೇಟಿ Photos

Continue Reading
Advertisement
Star Holiday Fashion
ಫ್ಯಾಷನ್5 mins ago

Star Holiday Fashion: ಪರ್ಫೆಕ್ಟ್ ಸಮ್ಮರ್‌ ಹಾಲಿ ಡೇ ಲುಕ್‌ನಲ್ಲಿ ನಟಿ ಅಮೂಲ್ಯ

Prajwal Revanna Case Surrender Now Devegowda warning to Prajwal
ರಾಜಕೀಯ9 mins ago

Prajwal Revanna Case: ತಾಳ್ಮೆ ಪರೀಕ್ಷಿಸಬೇಡ, ಈಗಲೇ ಬಂದು ಶರಣಾಗು; ಪ್ರಜ್ವಲ್‌ಗೆ ದೇವೇಗೌಡರ ವಾರ್ನಿಂಗ್‌

IPL 202
ಕ್ರೀಡೆ9 mins ago

IPL 2024: ಮುಂದಿನ ಆವೃತ್ತಿಯಲ್ಲಿ ಕೊಹ್ಲಿ ಈ ಫ್ರಾಂಚೈಸಿ ಪರ ಆಡಿದರೆ ಉತ್ತಮ ಎಂದ ಆರ್​ಸಿಬಿ ಮಾಜಿ ನಾಯಕ

2024 Maruti Swift
ಆಟೋಮೊಬೈಲ್16 mins ago

2024 Maruti Swift : ಹಲವಾರು ಆ್ಯಕ್ಸೆಸರಿ ಪ್ಯಾಕ್​ನೊಂದಿಗೆ ಬಂದಿದೆ ಮಾರುತಿ ಸ್ವಿಫ್ಟ್​​ ಎಪಿಕ್​

West Bengal Violence
ದೇಶ34 mins ago

West Bengal Violence: ಪಶ್ಚಿಮ ಬಂಗಾಳದಲ್ಲಿ ಭಾರೀ ಹಿಂಸಾಚಾರ; ಪೊಲೀಸರಿಂದ ಲಾಠಿಚಾರ್ಜ್‌

Narendra Modi
ದೇಶ48 mins ago

Narendra Modi: ಪಾಕ್‌ ʼಬಂಡವಾಳʼ ಏನೆಂದು ಅಲ್ಲಿಗೇ ಹೋಗಿ ನೋಡಿ ಬಂದಿರುವೆ; ಕಾಂಗ್ರೆಸ್‌ ‘ಬಾಂಬ್’‌ ಹೇಳಿಕೆಗೆ ಮೋದಿ ಟಾಂಗ್!

Money Guide
ಮನಿ-ಗೈಡ್51 mins ago

Money Guide: 1 ಕೋಟಿ ರೂ. ದುಡಿಯಬೇಕೆ? ಈ ಅಪಾಯ ರಹಿತ ಯೋಜನೆಯಲ್ಲಿ ಹೂಡಿಕೆ ಮಾಡಿ

T20 World Cup 2024
ಕ್ರೀಡೆ1 hour ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ಸಂಜುಗಿಂತ ಪಂತ್​ ಬೆಸ್ಟ್​ ಎಂದ ಯುವರಾಜ್

ayodhya ram mandir 1
ಪ್ರಮುಖ ಸುದ್ದಿ1 hour ago

Ayodhya Ram Mandir: ಅಯೋಧ್ಯೆ ಶ್ರೀ ರಾಮನಿಗೆ ಬೆಳ್ಳಿಯ ಬಿಲ್ಲು- ಬಾಣ; ಪೂಜಿಸಿ ಕಳಿಸಿಕೊಟ್ಟ ಶೃಂಗೇರಿ ಶ್ರೀಗಳು

Highest Paid CEO
ವಾಣಿಜ್ಯ1 hour ago

Highest Paid CEO: ವಿಪ್ರೊ ಮಾಜಿ ಸಿಇಒ ವಾರ್ಷಿಕ ಸಂಬಳ 166 ಕೋಟಿ ರೂ! ಉಳಿದ ಸಿಇಒಗಳಿಗೆ ಎಷ್ಟು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ12 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌