Horoscope Today | ಕಟಕ ರಾಶಿಯವರಿಗೆ ಇಂದು ಉತ್ಸಾಹದ ದಿನ; ನಿಮ್ಮ ಭವಿಷ್ಯ ಹೇಗಿದೆ? - Vistara News

ಪ್ರಮುಖ ಸುದ್ದಿ

Horoscope Today | ಕಟಕ ರಾಶಿಯವರಿಗೆ ಇಂದು ಉತ್ಸಾಹದ ದಿನ; ನಿಮ್ಮ ಭವಿಷ್ಯ ಹೇಗಿದೆ?

ಶುಭಕೃತ ನಾಮ ಸಂವತ್ಸರ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷದ ಪಾಡ್ಯದ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (೦8-೦೧-202೩)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷ.

ತಿಥಿ: ಪಾಡ್ಯ 07:06 ವಾರ: ಭಾನುವಾರ
ನಕ್ಷತ್ರ: ಪುಷ್ಯಾ 30:04 ಯೋಗ: ವೈಧೃತಿ 09:40
ಕರಣ: ಕೌಲವ 07:06 ಇಂದಿನ ವಿಶೇಷ: ಪುಷ್ಯಾರ್ಕಯೋಗ, ಧನುರ್ವೈಧೃತಿಯೋಗ
ಅಮೃತಕಾಲ: ರಾತ್ರಿ 10 ಗಂಟೆ 54 ನಿಮಿಷದಿಂದ 12 ಗಂಟೆ 42 ನಿಮಿಷದವರೆಗೆ.

ಸೂರ್ಯೋದಯ: 06 : 44    ಸೂರ್ಯಾಸ್ತ: 0೬ : 08

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ  (Horoscope Today)

Horoscope Today

ಮೇಷ: ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗುವವು. ಆರೋಗ್ಯ ಮಧ್ಯಮ. ಇಂದು ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಯಾವುದಾದರೂ ಸಮಾರಂಭದ ಆಮಂತ್ರಣ ಸಿಗುವ ಸಾಧ್ಯತೆ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ಇರಲಿ. ಮಾತಿಗೆ ವಿರಾಮವಿರಲಿ. ಉದ್ಯೋಗಿಗಳಿಗೆ ಹೊಸ ಚೈತನ್ಯ ಮೂಡಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

Horoscope Today

ವೃಷಭ: ಆರ್ಥಿಕವಾಗಿ ಸದೃಢವಾಗುವ ಸಾಧ್ಯತೆ. ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಹಿಂದೆ ನಡೆದ ಕೆಲವು ಘಟನೆ ನೆನಪಿಸಿ ಕೊರಗುವುದು ಬೇಡ. ಸಹದ್ಯೋಗದ ಸ್ಥಳದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ನಿಮ್ಮ ಆಕರ್ಷಕ ಗುಣಸ್ವಭಾವ ಇತರರನ್ನು ಚುಂಬಕದಂತೆ ಆಕರ್ಷಿಸಲಿದೆ.
ನಕರಾತ್ಮಕ ಆಲೋಚನೆಗಳು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕಟಕ: ಉತ್ಸಾಹ ತುಂಬಿದ ದಿನವಿಂದು. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಹಣದ ಪ್ರವಾಹ ಹರಿಯಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

Horoscope Today

ಸಿಂಹ: ನಿಮ್ಮ ವರ್ತನೆ ಇತರರಿಗೆ ಮುಜಗರ ಉಂಟು ಮಾಡಲಿದೆ. ಆರ್ಥಿಕ ಸಮಸ್ಯೆಯಿಂದಾಗಿ ಒತ್ತಡ ಹೆಚ್ಚಾಗಲಿದೆ. ಹಿರಿಯರ ಮಾರ್ಗದರ್ಶನವನ್ನು ಅಲ್ಲಗಳೆಯುವುದು ಬೇಡ. ಪ್ರಭಾವಿ ವ್ಯಕ್ತಿಗಳ ಬೆಂಬಲ, ಸ್ನೇಹ ಸಿಗಲಿದೆ. ವ್ಯಾಪಾರ-ವ್ಯವಹಾರದಲ್ಲಿ ಸಾಧಾರಣ ಪ್ರಗತಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಸಾರ್ವಜನಿಕ ಕಾರ್ಯಕ್ರಮ ಗಳಲ್ಲಿ ಭಾಗವಹಿಸುವ ನಿರೀಕ್ಷೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗೊಳಗಾಗುವಂತೆ ಮಾಡುವ ಸಾಧ್ಯತೆ. ಪ್ರಯಾಣ ಸಾಧ್ಯತೆ. ಉದ್ಯೋಗಿಗಳಿಗೆ ನಾಳೆಯ ಚಿಂತೆ ಕಾಡಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ತುಲಾ: ಆದಷ್ಟು ಹೊರಗಿನ ಆಹಾರ ತಿಂದು ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ. ಹಣಕಾಸು ಪ್ರಗತಿ ಸಾಧಿಸುವಿರಿ. ಅಗತ್ಯಕ್ಕೆ ತಕ್ಕಂತೆ ಖರ್ಚು ಮಾಡಿ. ಕೆಲಸ ಕಾರ್ಯಗಳು ನಿಧಾನ. ನೆರೆಹೊರೆಯವರೊಂದಿಗೆ ವಿನಾಕಾರಣ ಜಗಳ ಬೇಡ, ತಾಳ್ಮೆಯಿಂದ ವರ್ತಿಸಿ. ಉದ್ಯೋಗಿಗಳಿಗೆ ಮಿಶ್ರ ಫಲ. ಆರೋಗ್ಯದಲ್ಲಿ ಕೊಂಚ ಏರುಪೇರು ಸಾಧ್ಯತೆ ಆದಷ್ಟು ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಅನಿವಾರ್ಯ ಕಾರಣಗಳಿಂದ ಖರ್ಚು ಮಾಡುವ ಸಾಧ್ಯತೆ. ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗಲಿದೆ. ಕುಟುಂಬದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ. ಸಮಾರಂಭಗಳಲ್ಲಿ ಭಾಗವಹಿಸುವ ನಿರೀಕ್ಷೆ. ಜನಪ್ರೀಯತೆ ಹೆಚ್ಚಾಗಲಿದೆ. ಪ್ರವಾಸದ ಕುರಿತು ಚರ್ಚೆ. ಕೊಂಚ ಆರೋಗ್ಯದ ಕಡೆಗೆ ಗಮನ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅತಿಯಾಗಿ ಭವಿಷ್ಯದ ಬಗೆಗೆ ಚಿಂತಿಸುವುದು ನಿಮ್ಮ ಆರೋಗ್ಯದ ಮೇಲೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಪರಿಣಾಮವನ್ನು ಬೀರಬಹುದು. ಆದಷ್ಟು ವಿಶ್ರಾಂತಿ ಪಡೆಯಿರಿ. ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಶುಭ ಫಲ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು ಕೇಳಿ ಬರುತ್ತವೆ. ಗಣಪತಿಯ ಆರಾಧನೆ ಮಾಡಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಆರ್ಥಿಕವಾಗಿ ಪ್ರಗತಿ, ಹೂಡಿಕೆಯ ಕುರಿತು ಆಲೋಚನೆ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಅನಿವಾರ್ಯ ಪ್ರಸಂಗಗಳು ನಿಮ್ಮನ್ನು ಒತ್ತಡಕ್ಕೆ ಒಳಗಾಗುವಂತೆ ಮಾಡಬಹುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗದ ಹೊಸ ಅವಕಾಶಗಳ ಸುಳಿವು ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ಕುಟುಂಬದ ಯಾವುದಾದರೂ ಕಾರ್ಯಕ್ರಮದಲ್ಲಿ ಭಾಗವಹಿಸುವಿರಿ. ಆರ್ಥಿಕ ಪ್ರಗತಿ ಸಾಧಾರಣ. ಅವಸರದಲ್ಲಿ ಯಾವುದೇ ಕೆಲಸ ಮಾಡುವುದು ಬೇಡ. ದಿಢೀರ್ ಪ್ರಯಾಣ ಸಾಧ್ಯತೆ.
ಆರೋಗ್ಯ ಪರಿಪೂರ್ಣ ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮೀನ: ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು. ಆರೋಗ್ಯ ಉತ್ತಮವಾಗಿರಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮಾತಿನ ಭರದಲ್ಲಿ ಅತಿರೇಕದ ಮಾತುಗಳು ಬೇಡ,‌ ತಾಳ್ಮೆಯಿಂದ ವರ್ತಿಸಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ |Yearly Horoscope 2023 | ಹೊಸ ವರ್ಷದಲ್ಲಿ ಯಾವೆಲ್ಲಾ ರಾಶಿಗಳಿಗೆ ಶುಭಾಶುಭ ಫಲಗಳಿವೆ?; ಇಲ್ಲಿದೆ ವರ್ಷ ಭವಿಷ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IND vs SL : ಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲೂ ಭಾರತಕ್ಕೆ ಜಯ, ಸರಣಿ ಕ್ಲೀನ್ ಸ್ವೀಪ್ ಮಾಡಿದ ಸೂರ್ಯಕುಮಾರ್ ಪಡೆ

IND vs SL :ಭಾರತ ತಂಡ ವೈಫಲ್ಯ ಕಂಡು ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ಗೆ 137 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಲಂಕಾ ತಂಡ ನಿಗದಿತ 20 ಓವರ್​ಗಳು ಮುಗಿಯುವ ವೇಳೆ 8 ವಿಕೆಟ್ ಕಳೆದುಕೊಂಡು 137 ರನ್ ಬಾರಿಸಿತು. ಹೀಗಾಗಿ ಫಲಿತಾಂಶಕ್ಕಾಗಿ ಸೂಪರ್ ಓವರ್​ ಮೊರೆ ಹೋಗಲಾಯಿತು. ಮೊದಲು ಬ್ಯಾಟ್ ಮಾಡಿದ ಲಂಕಾ 1 ರನ್ ಬಾರಿಸುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡು ತಮ್ಮ ಅವಕಾಶವನ್ನು ಕೊನೆಗೊಳಿಸಿತು. ಭಾರತ ಪರ ಸೂರ್ಯಕುಮಾರ್ ಮೊದಲ ಎಸೆತಕ್ಕೆ ಫೋರ್ ಬಾರಿಸಿ ಜಯ ತಂದುಕೊಟ್ಟರು.

VISTARANEWS.COM


on

IND vs SL
Koo

ಪಲ್ಲೆಕೆಲೆ: ಮೂರು ಪಂದ್ಯಗಳ ಟಿ20 ಸರಣಿಯ (IND vs SL) ಕೊನೇ ಪಂದ್ಯದಲ್ಲೂ ಭಾರತ ತಂಡ ಶ್ರೀಲಂಕಾ ವಿರುದ್ಧ ಗೆದ್ದಿದೆ. ಅತ್ಯಂತ ರೋಚಕವಾಗಿ ನಡೆದ ಪಂದ್ಯದಲ್ಲಿ ಸೂಪರ್​ ಓವರ್​ ಮೂಲಕ ಭಾರತ ಜಯ ಕಂಡಿದೆ. ನಿಗದಿತ ಓವರ್​ಗಳ ಪಂದ್ಯ ಟೈ ಆದ ಕಾರಣ ಸೂಪರ್ ಓವರ್ ಮೊರೆ ಹೋಗಲಾಯಿತು. ಭಾರತ ಅತ್ಯಂತ ಸುಲಭವಾಗಿ ಪಂದ್ಯವನ್ನು ಗೆದ್ದುಕೊಂಡಿತು. ಅಲ್ಲದೆ, ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧನೆ ಮಾಡಿತು. ಈ ಸರಣಿಯ ಮೂಲಕ ನಾಯಕ ಸೂರ್ಯಕುಮಾರ್ ಯಾದವ್​ ಮೊದಲ ಸರಣಿಯಲ್ಲೇ ಯಶಸ್ಸು ಕಂಡರೆ, ಕೋಚ್​ ಗೌತಮ್ ಗಂಭೀರ್​ಗೂ ಶುಭಾರಂಭದ ಸಿಹಿ ದೊರೆಯಿತು.

ಇಲ್ಲಿನ ಪಲ್ಲೆಕೆಲೆ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಂಕಾ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ವೈಫಲ್ಯ ಕಂಡು ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ಗೆ 137 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಲಂಕಾ ತಂಡ ನಿಗದಿತ 20 ಓವರ್​ಗಳು ಮುಗಿಯುವ ವೇಳೆ 8 ವಿಕೆಟ್ ಕಳೆದುಕೊಂಡು 137 ರನ್ ಬಾರಿಸಿತು. ಹೀಗಾಗಿ ಫಲಿತಾಂಶಕ್ಕಾಗಿ ಸೂಪರ್ ಓವರ್​ ಮೊರೆ ಹೋಗಲಾಯಿತು. ಮೊದಲು ಬ್ಯಾಟ್ ಮಾಡಿದ ಲಂಕಾ 1 ರನ್ ಬಾರಿಸುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡು ತಮ್ಮ ಅವಕಾಶವನ್ನು ಕೊನೆಗೊಳಿಸಿತು. ಭಾರತ ಪರ ಸೂರ್ಯಕುಮಾರ್ ಮೊದಲ ಎಸೆತಕ್ಕೆ ಫೋರ್ ಬಾರಿಸಿ ಜಯ ತಂದುಕೊಟ್ಟರು.

ಸಾಧಾರಣ ಗುರಿಯನ್ನು ಬೆನ್ನಟ್ಟಿದ ಲಂಕಾ ತಂಡಕ್ಕೆ ಉತ್ತಮ ಆರಂಭ ದೊರಕಿತು. ಮೊದಲ ವಿಕೆಟ್​ಗೆ 58 ರನ್ ಬಾರಿಸಿತು. ಪಾಥುಮ್ ನಿಸ್ಸಾಂಕ 26 ರನ್ ಬಾರಿಸಿದರೆ ಕುಸಾಲ್ ಮೆಂಡಿಸ್​ 43 ರನ್ ಬಾರಿಸಿದರು. ಇವರಿಬ್ಬರ ಆಟದಿಂದಾಗಿ ಲಂಕಾಗೆ ಉತ್ತಮ ಲಾಭ ದೊರಕಿತು. ಬಳಿಕ ಕುಸಾಲ್ ಪೆರೆರಾ 34 ಎಸೆತಕ್ಕೆ 44 ರನ್ ಬಾರಿಸಿ ಗುರಿಯ ಸಮೀಪಕ್ಕೆ ರನ್ ತಂದಿಟ್ಟರು. ವಾನಿಂದು ಹಸರಂಗ 3 ರನ್ ಗೆ ಔಟಾದರೆ ಚರಿತ್ ಅಸಲಂಕಾ ಶೂನ್ಯಕ್ಕೆ ಔಟಾದರು. ಅಲ್ಲಿಂದ ಲಂಕಾ ತಂಡದ ಪತನ ಶುರುವಾಯಿತು.110 ರನ್​ಗೆ 2 ವಿಕೆಟ್ ನಷ್ಟ ಮಾಡಿಕೊಂಡಿದ್ದ ಲಂಕಾ ಮುಂದಿನ 22 ರನ್ ಮಾಡುವಷ್ಟರಲ್ಲಿ 6 ವಿಕೆಟ್ ನಷ್ಟ ಮಾಡಿಕೊಂಡಿತು. ರಿಂಕ ಸಿಂಗ್​, ಸೂರ್ಯಕುಮಾರ್ ಯಾದವ್​, ರವಿ ಬಿಷ್ಣೋಯಿ, ವಾಷಿಂಗ್ಟನ್ ಸುಂದರ್ ತಲಾ 2 ವಿಕೆಟ್ ಉರುಳಿಸಿ ಮಿಂಚಿದರು. ಸೂಪರ್ ಓವರ್​ನಲ್ಲೂ ಬಿಷ್ಣೋಯಿ 2 ವಿಕೆಟ್ ಪಡೆದು ಭಾರತದ ಗೆಲುವನ್ನು ಸುಲಭವಾಗಿಸಿದರು.

ಭಾರತದ ಬ್ಯಾಟಿಂಗ್ ವೈಫಲ್ಯ

ಭಾರತ ತಂಡ ಬ್ಯಾಟಿಂಗ್​ನಲ್ಲಿ ಹೆಚ್ಚು ಪ್ರಭಾವ ಬೀರಲಿಲ್ಲ.. 11 ರನ್​ಗೆ ಮೊದಲ ವಿಕೆಟ್​ ನಷ್ಟ ಮಾಡಿಕೊಂಡಿತು. ಯಶಸ್ವಿ ಜೈಸ್ವಾಲ್​ 10 ರನ್​ಗೆ ಸೀಮಿತಗೊಂಡರು. ಶುಭ್​ಮನ್ ಗಿಲ್​ 39 ರನ್ ಬಾರಿಸಿ ಚೈತನ್ಯ ತಂದರೂ ಅವರಿಗೆ ಹೆಚ್ಚು ಹೊತ್ತು ಇನಿಂಗ್ಸ್ ಮುಂದುವರಿಸಲು ಸಾಧ್ಯವಾಗಲಿಲ್ಲ. ಅವರಿಬ್ಬರು ಔಟಾದ ಬಳಿಕ ಭಾರತ ನಿರಂತರವಾಗಿ ವಿಕೆಟ್ ಕಳೆದುಕೊಂಡಿತು. ಸಂಜು ಸ್ಯಾಮ್ಸನ್​ ಮತ್ತೊಂದು ಬಾರಿ ಶೂನ್ಯಕ್ಕೆ ಔಟಾದರು. ಅವರು ಎರಡನೇ ಪಂದ್ಯದಲ್ಲೂ ಡಕ್​ಔಟ್ ಆಗಿದ್ದರು. ಈ ಮೂಲಕ ಅಭಿಮಾನಿಗಳ ಕೋಪಕ್ಕೆ ಕಾರಣರಾದರು.

ಇದನ್ನೂ ಓದಿ: ICC T20 ranking : ಐಸಿಸಿ ರ್ಯಾಂಕಿಂಗ್​ನಲ್ಲಿ ಸ್ಮೃತಿ ಮಂಧಾನಾ, ರೇಣುಕಾಗೆ ಭರ್ಜರಿ ಲಾಭ

ನಾಲ್ಕನೇ ಕ್ರಮಾಂಕಕ್ಕೆ ಬಡ್ತಿ ಪಡೆದುಕೊಂಡ ರಿಂಕು ಸಿಂಗ್ ನಿರಾಸೆ ಮೂಡಿಸಿ ಒಂದು ರನ್​ಗೆ ಔಟಾದರು. ಬಳಿಕ ಬಂದ ನಾಯಕ ಸೂರ್ಯಕುಮಾರ್​ ಯಾದವ್ ಕೂಡ 8 ರನ್​ಗೆ ಸೀಮಿತಗೊಂಡರು. ಈ ಪಂದ್ಯದಲ್ಲಿ ತಂಡಕ್ಕೆ ಸೇರ್ಪಡೆಗೊಂಡಿದ್ದ ಶಿವಂ ದುಬೆ 13 ರನ್ ಬಾರಿಸಿ ನಿರ್ಗಮಿಸಿದರು. ಬಳಿಕ ರಿಯಾನ್ ಪರಾಗ್​ 26 ರನ್ ಹಾಗೂ ವಾಷಿಂಗ್ಟನ್ ಸುಂದರ್​ 25 ರನ್ ಬಾರಿಸಿ ಸ್ಪರ್ಧಾತ್ಮಕ ಮೊತ್ತ ಪೇರಿಸಲು ತಂಡಕ್ಕೆ ನೆರವಾದರು.

Continue Reading

ಕರ್ನಾಟಕ

CM Siddaramaiah: ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಫೇಲ್; ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಹೇಳಿಕೆ

CM Siddaramaiah: ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಹಗರಣಗಳನ್ನು ಉಲ್ಲೇಖಿಸಿ ಬಿಜೆಪಿ ಹಾಗೂ ಜೆಡಿಎಸ್‌ ಇಕ್ಕಟ್ಟಿಗೆ ಸಿಲುಕಿಸಿವೆ. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್‌ ನಾಯಕರನ್ನು ಭೇಟಿಯಾಗಿ ಪ್ರಕರಣಗಳ ಕುರಿತು ವಿವರ ನೀಡಿದ್ದಾರೆ.

VISTARANEWS.COM


on

CM Siddaramaiah
Koo

ನವದೆಹಲಿ/ಬೆಂಗಳೂರು: ಕರ್ನಾಟಕದಲ್ಲಿ ವಾಲ್ಮೀಕಿ ಮಹರ್ಷಿ ಅಭಿವೃದ್ಧಿ ನಿಗಮ, ಮುಡಾ ಹಗರಣಗಳನ್ನು (MUDA Scam) ಇಟ್ಟುಕೊಂಡು ರಾಜ್ಯ ಸರ್ಕಾರವನ್ನು (Karnataka Government) ಬಿಜೆಪಿ ಹಾಗೂ ಜೆಡಿಎಸ್‌ ಇಕ್ಕಟ್ಟಿಗೆ ಸಿಲುಕಿಸಿವೆ. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ದೆಹಲಿಗೆ ತೆರಳಿ, ಪಕ್ಷದ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಿದ್ದಾರೆ. ಇದಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, “ಕರ್ನಾಟಕದಲ್ಲಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನವು ಫಲ ನೀಡುವುದಿಲ್ಲ” ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಮಲ್ಲಿಕಾರ್ಜುನ ಖರ್ಗೆ, ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿ ಹಲವು ನಾಯಕರನ್ನು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿಯಾದರು. ಇದಾದ ಬಳಿಕ ಸಿದ್ದರಾಮಯ್ಯ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. “ವಾಲ್ಮೀಕಿ ಹಗರಣದಲ್ಲಿ ಸರ್ಕಾರದ ಪಾತ್ರ ಇಲ್ಲ. ಹಣಕಾಸು ಇಲಾಖೆಯ ಪಾತ್ರ ಕೂಡ ಇಲ್ಲ . ಮುಡಾ ವಿಚಾರದಲ್ಲೂ ಕಾನೂನುಬಾಹಿರವಾಗಿ ಏನೂ ನಡೆದಿಲ್ಲ. ಎಲ್ಲವೂ ಕಾನೂನುಬದ್ದವಾಗಿ, ನಿಯಮಗಳ ಪ್ರಕಾರವೇ ನಡೆದಿದೆ ಎನ್ನುವುದನ್ನು ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಿಸಿದ್ದೇವೆ” ಎಂದು ತಿಳಿಸಿದರು.

“ಪರಿಶಿಷ್ಟ ಪಂಗಡಕ್ಕೆ ಸೇರಿದ ಹಣ ದುರುಪಯೋಗ ಆಗಿಲ್ಲ. ವಾಲ್ಮೀಕಿ ಹಗರಣದಲ್ಲಿ ಇದುವರೆಗೆ ಹಣ ವಶಪಡಿಸಿಕೊಳ್ಳಲಾಗುತ್ತಿದೆ. ಪ್ರಕರಣದ ತನಿಖೆ ನಡೆಯುತ್ತಿದೆ ಎನ್ನುವುದನ್ನೂ ಅರ್ಥ ಮಾಡಿಸಿದ್ದೇವೆ. ಬಿಜೆಪಿಯ ಸೇಡಿನ ಮತ್ತು ಅಸೂಯೆಯ ರಾಜಕಾರಣ ಹೈಕಮಾಂಡ್ ಅವರಿಗೂ ಮನವರಿಕೆಯಾಗಿದೆ. ಬಿಜೆಪಿಯ ಪಾದಯಾತ್ರೆಗೆ ಪ್ರತಿಯಾಗಿ ಏನು ಮಾಡಬೇಕು ಎನ್ನುವುದನ್ನು ಬೆಂಗಳೂರಿಗೆ ತೆರಳಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದರು.

“ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಬಜೆಟ್ ಪೂರ್ವ ಸಭೆಯಲ್ಲಿ ರಾಜ್ಯದಿಂದ ಇಟ್ಟಿದ್ದ ಯಾವ ಬೇಡಿಕೆಗಳನ್ನೂ ಈಡೇರಿಸಲಾಗಿಲ್ಲ. ಹೀಗಾಗಿ ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎನ್ನುವ ಕುರಿತೂ ಸಭೆಯಲ್ಲಿ ಚರ್ಚಿಸಲಾಯಿತು. ಇನ್ನು, ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವುದು ಬಿಜೆಪಿಯ ಹುನ್ನಾರ. ಆದರೆ ಇದರಲ್ಲಿ ಅವರಿಗೆ ಯಶಸ್ಸು ಸಿಗುವುದಿಲ್ಲ” ಎಂದು ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದರು.

ಇದನ್ನೂ ಓದಿ: Wayanad Landslide: ಕೇರಳದಲ್ಲಿ ರಕ್ಷಣೆ, ಪರಿಹಾರ ಕಾರ್ಯಾಚರಣೆಗೆ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ ಸಿಎಂ ಸಿದ್ದರಾಮಯ್ಯ

Continue Reading

ಪ್ರಮುಖ ಸುದ್ದಿ

Rashid Khan : ಟಿ20 ಕ್ರಿಕೆಟ್​ನಲ್ಲಿ ವಿಕೆಟ್​ಗಳ ಹೊಸ ಮೈಲುಗಲ್ಲು ಸೃಷ್ಟಿಸಿದ ಅಫಘಾನಿಸ್ತಾನ ಬೌಲರ್ ರಶೀದ್ ಖಾನ್​

Rashid Khan : ಬೌಲರ್ ಡಾಟ್ ಬಾಲ್ ಸೇರಿದಂತೆ 20 ಎಸೆತಗಳಲ್ಲಿ ಕೇವಲ 24 ರನ್​ಗಳನ್ನು ಬಿಟ್ಟುಕೊಟ್ಟರು. ಅದೇ ರೀತಿ ಅವರು 9 ಎಸೆತಗಳಲ್ಲಿ 2 ಸಿಕ್ಸರ್ ಸಹಿತ 15 ರನ್ ಸಿಡಿಸಿ ಔಟಾದರು. ಮ್ಯಾಂಚೆಸ್ಟರ್​ನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ರಾಕೆಟ್ಸ್ ತಂಡ 145 ರನ್​ಗಳ ಭರ್ಜರಿ ಜಯ ದಾಖಲಿಸಿದೆ. ರಾಕೆಟ್ಸ್ ನಾಲ್ಕು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿತು.

VISTARANEWS.COM


on

Rashid Khan
Koo

ಬೆಂಗಳೂರು: ಪುರುಷರ ಹಂಡ್ರೆಡ್ ಕ್ರಿಕೆಟ್​ ಟೂರ್ನಿಯಲ್ಲಿ ಟ್ರೆಂಟ್ ರಾಕೆಟ್ಸ್ ಮತ್ತು ಮ್ಯಾಂಚೆಸ್ಟರ್ ಒರಿಜಿನಲ್ಸ್ ನಡುವಿನ ಪಂದ್ಯದ ಸಮಯದಲ್ಲಿ ಅಫ್ಘಾನಿಸ್ತಾನದ ಲೆಗ್ ಸ್ಪಿನ್ನರ್ ರಶೀದ್ ಖಾನ್ (Rashid Khan) ಹೊಸ ದಾಖಲೆ ಮಾಡಿದ್ದಾರೆ, ವೆಸ್ಟ್ ಇಂಡೀಸ್​ನ ಡ್ವೇನ್ ಬ್ರಾವೋ ನಂತರ ಕ್ರಿಕೆಟ್​​ನಲ್ಲಿ 600 ವಿಕೆಟ್ ಪಡೆದ ಮೊದಲ ಸ್ಪಿನ್ನರ್​​ ಮತ್ತು ಒಟ್ಟಾರೆ ಎರಡನೇ ಬೌಲರ್ ಎಂಬ ಹೆಗ್ಗಳಿಕೆಗೆ ರಶೀದ್ ಖಾನ್ ಪಾತ್ರರಾಗಿದ್ದಾರೆ.

ರಶೀದ್ ಖಾನ್ ಇತ್ತೀಚಿನ ವರ್ಷಗಳಲ್ಲಿ ವಿವಿಧ ಜಾಗತಿಕ ಲೀಗ್​​ಗಳಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಮೇಜರ್ ಲೀಗ್ ಕ್ರಿಕೆಟ್ (ಎಂಎಸ್​​ಸಿ) 2024 ಋತುವಿನಲ್ಲಿ ಎಂಐ ನ್ಯೂಯಾರ್ಕ್ ಪರ ಆಡಿದ ನಂತರ ಅಫ್ಘಾನಿಸ್ತಾನದ ನಾಯಕ ಟ್ರೆಂಟ್ ರಾಕೆಟ್ಸ್​​ ಸೇರಿ್ದರು. ಈ ವರ್ಷದ ಪುರುಷರ ಹಂಡ್ರೆಡ್​​ನಲ್ಲಿ ತಮ್ಮ ಮೊದಲ ಪ್ರದರ್ಶನದಲ್ಲಿ ಅವರು ಎರಡು ವಿಕೆಟ್​ಗಳನ್ನು ಪಡೆದಿದ್ದಾರೆ.

ಬೌಲರ್ ಡಾಟ್ ಬಾಲ್ ಸೇರಿದಂತೆ 20 ಎಸೆತಗಳಲ್ಲಿ ಕೇವಲ 24 ರನ್​ಗಳನ್ನು ಬಿಟ್ಟುಕೊಟ್ಟರು. ಅದೇ ರೀತಿ ಅವರು 9 ಎಸೆತಗಳಲ್ಲಿ 2 ಸಿಕ್ಸರ್ ಸಹಿತ 15 ರನ್ ಸಿಡಿಸಿ ಔಟಾದರು. ಮ್ಯಾಂಚೆಸ್ಟರ್​ನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ರಾಕೆಟ್ಸ್ ತಂಡ 145 ರನ್​ಗಳ ಭರ್ಜರಿ ಜಯ ದಾಖಲಿಸಿದೆ. ರಾಕೆಟ್ಸ್ ನಾಲ್ಕು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿತು.

600 ವಿಕೆಟ್ ಪೂರೈಸಿದ ರಶೀದ್ ಖಾನ್

ಟಿ20 ಕ್ರಿಕೆಟ್​​ನಲ್ಲಿ 600 ವಿಕೆಟ್ ಪಡೆದ ಎರಡನೇ ಬೌಲರ್ ಎಂಬ ಹೆಗ್ಗಳಿಕೆಗೆ ರಶೀದ್ ಖಾನ್ ಪಾತ್ರರಾಗಿದ್ದಾರೆ. ಅವರು ಈ ಮೈಲಿಗಲ್ಲನ್ನು ಸಾಧಿಸಿದ ಅತ್ಯಂತ ಕಿರಿಯ ಮತ್ತು ವೇಗದ ಕ್ರಿಕೆಟಿಗ. ಅವರು ಕೇವಲ 438 ಇನ್ನಿಂಗ್ಸ್ ಗಳಲ್ಲಿ ಈ ಮೈಲಿಗಲ್ಲನ್ನು ತಲುಪಿದರು. ಅವರು 18.25 ಸರಾಸರಿ ಮತ್ತು 6.47 ಎಕಾನಮಿ ರೇಟ್​ನಲ್ಲ 600 ವಿಕೆಟ್​ಗಳನ್ನು ಪಡೆದಿದ್ದಾರೆ. 2015 ರಲ್ಲಿ ಟಿ20 ಐ ಗೆ ಪಾದಾರ್ಪಣೆ ಮಾಡಿದಾಗಿನಿಂದ ಅವರು ಸುಮಾರು 20 ತಂಡಗಳಿಗಾಗಿ ಆಡಿದ್ದಾರೆ.

ಡ್ವೇನ್ ಬ್ರಾವೋ 543 ಟಿ20 ಇನ್ನಿಂಗ್ಸ್​​ನಲ್ಲಿ 630 ವಿಕೆಟ್​ಗಳೊಂದಿಗೆ ಬೌಲಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಸುನಿಲ್ ನರೈನ್ 519 ಪಂದ್ಯಗಳಲ್ಲಿ 6.12 ಎಕಾನಮಿ ರೇಟ್​ನಲ್ಲಿ 557 ವಿಕೆಟ್ ಉರುಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಅನುಭವಿ ಲೆಗ್ ಸ್ಪಿನ್ನರ್ ಇಮ್ರಾನ್ ತಾಹಿರ್ 405 ಪಂದ್ಯಗಳಲ್ಲಿ 502 ವಿಕೆಟ್ ಪಡೆದರೆ, ಶಕೀಬ್ ಅಲ್ ಹಸನ್ 444 ಪಂದ್ಯಗಳಲ್ಲಿ 492 ವಿಕೆಟ್ ಪಡೆದಿದ್ದಾರೆ.

ಇದನ್ನೂ ಓದಿ: ICC T20 ranking : ಐಸಿಸಿ ರ್ಯಾಂಕಿಂಗ್​ನಲ್ಲಿ ಸ್ಮೃತಿ ಮಂಧಾನಾ, ರೇಣುಕಾಗೆ ಭರ್ಜರಿ ಲಾಭ

ರಶೀದ್ ಖಾನ್ 93 ಅಂತಾರಾಷ್ಟ್ರೀಯ ಟಿ 20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 14.14 ಸರಾಸರಿ ಮತ್ತು 6.08 ಎಕಾನಮಿ ರೇಟ್ನಲ್ಲಿ 152 ವಿಕೆಟ್​ಗಳನ್ನು ಪಡೆದಿದ್ದಾರೆ. ಐಪಿಎಲ್​​ನಲ್ಲಿ 121 ಪಂದ್ಯಗಳಲ್ಲಿ 21.82ರ ಸರಾಸರಿಯಲ್ಲಿ 149 ವಿಕೆಟ್ ಪಡೆದಿದ್ದಾರೆ. ರಶೀದ್ 2017 ರಿಂದ 2021 ರವರೆಗೆ ಸನ್ರೈಸರ್ಸ್ ಹೈದರಾಬಾದ್ (ಎಸ್​ಆರ್​ಎಚ್​) ಪರ ಆಡಿದ್ದರು. ನಂತರ ಗುಜರಾತ್​ ಟೈಟನ್ಸ್ ಸೇರಿಕೊಂಡಿದ್ದಾರೆ.

Continue Reading

ದೇಶ

Anurag Thakur: ತಮ್ಮ ಜಾತಿಯೇ ಗೊತ್ತಿರದ ರಾಹುಲ್‌ ಗಾಂಧಿಯಿಂದ ಜಾತಿಗಣತಿ ಪ್ರಸ್ತಾಪ ಎಂದ ಅನುರಾಗ್‌ ಠಾಕೂರ್‌!

Anurag Thakur: ತಮ್ಮ ಜಾತಿಯೇ ಯಾವುದೆಂದು ಗೊತ್ತಿರದವರು ಜಾತಿಗಣತಿ ಬಗ್ಗೆ ಮಾತನಾಡುತ್ತಿದ್ದಾರೆ ಎಂಬುದಾಗಿ ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಅವರು ಸಂಸತ್‌ನಲ್ಲಿ ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದಕ್ಕೆ ರಾಹುಲ್‌ ಗಾಂಧಿ ಹಾಗೂ ಅಖಿಲೇಶ್‌ ಯಾದವ್‌ ಅವರು ತಿರುಗೇಟು ನೀಡಿದ್ದಾರೆ.

VISTARANEWS.COM


on

Anurag Thakur
Koo

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ದೇಶಾದ್ಯಂತ ಜಾತಿಗಣತಿ ಮಾಡಬೇಕು ಎಂದು ಆಗ್ರಹಿಸುತ್ತಲೇ ಇದ್ದಾರೆ. ಹಾಗೆಯೇ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಜಾತಿಗಣತಿ ಮಾಡುತ್ತದೆ ಎಂದು ಕೂಡ ಹೇಳುತ್ತಾರೆ. ಇನ್ನು, ಸೋಮವಾರ (ಜುಲೈ 29) ಸಂಸತ್‌ನಲ್ಲಿ ಜಾತಿಗಣತಿ (Caste Census) ಕುರಿತು ರಾಹುಲ್‌ ಗಾಂಧಿ ಪ್ರಸ್ತಾಪಿಸಿದ್ದು, ಲೋಕಸಭೆಯಲ್ಲಿ ನಾವು ಜಾತಿಗಣತಿ ಮಂಡಿಸುತ್ತೇವೆ ಎಂದಿದ್ದರು. ಇದಕ್ಕೆ ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ (Anurag Thakur) ತಿರುಗೇಟು ನೀಡಿದ್ದು, “ತಮ್ಮ ಜಾತಿಯೇ ಯಾವುದೆಂದು ಗೊತ್ತಿರದವರು ಜಾತಿಗಣತಿ ಬಗ್ಗೆ ಮಾತನಾಡುತ್ತಿದ್ದಾರೆ” ಎಂಬುದಾಗಿ ಹೇಳಿದ್ದಾರೆ. ಇದಕ್ಕೆ ಪ್ರತಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಸತ್‌ನಲಿ ಮಾತನಾಡಿದ ಅನುರಾಗ್‌ ಠಾಕೂರ್‌, “ದೇಶದಲ್ಲಿ ಜಾತಿಗಣತಿ ಬಗ್ಗೆ ತುಂಬ ಮಾತನಾಡುತ್ತಾರೆ. ಜಾತಿಗಣತಿಯನ್ನು ಲೋಕಸಭೆಯಲ್ಲಿ ಮಂಡಿಸುತ್ತೇವೆ ಎನ್ನುತ್ತಾರೆ. ಆದರೆ, ಜಾತಿಗಣತಿ ಬಗ್ಗೆ ಮಾತನಾಡುವವರಿಗೇ ತಮ್ಮ ಜಾತಿ ಯಾವುದು ಎಂದು ಗೊತ್ತಿಲ್ಲ” ಎಂಬುದಾಗಿ ಅನುರಾಗ್‌ ಠಾಕೂರ್‌ ಟೀಕಿಸಿದರು. ಇದಕ್ಕೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ ಅವರು ತಿರುಗೇಟು ನೀಡಿದರು. “ಬೇರೆಯವರ ಜಾತಿಯನ್ನು ಕೇಳುವುದು ಎಷ್ಟು ಸರಿ” ಎಂದು ತಿರುಗೇಟು ನೀಡಿದರು.

ರಾಹುಲ್‌ ಗಾಂಧಿ ಪ್ರತ್ಯುತ್ತರ

ಅನುರಾಗ್‌ ಠಾಕೂರ್‌ ಹೇಳಿಕೆಗೆ ರಾಹುಲ್‌ ಗಾಂಧಿ ಪ್ರತ್ಯುತ್ತರ ನೀಡಿದರು. “ನೀವು ನನ್ನನ್ನು ಎಷ್ಟು ಅವಮಾನಿಸುತ್ತೀರೋ ಅವಮಾನಿಸಿ. ಆದರೆ, ನಾವು ಸಂಸತ್‌ನಲ್ಲಿ ಜಾತಿಗಣತಿ ವಿಧೇಯಕ ಮಂಡಿಸುತ್ತೇವೆ ಎಂಬುದನ್ನು ನೀವು ಮರೆಯದಿರಿ” ಎಂದರು. “ಅನುರಾಗ್‌ ಠಾಕೂರ್‌ ಅವರು ನನ್ನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ನನ್ನನ್ನು ಅವಮಾನಿಸಿದ್ದಾರೆ. ಆದರೆ, ನಾನು ಅವರು ಕ್ಷಮೆ ಕೇಳಿ ಎಂಬುದಾಗಿ ಆಗ್ರಹಿಸುವುದಿಲ್ಲ. ಎಷ್ಟು ಬೇಕಾದರೂ ಅವಮಾನ ಮಾಡಲಿ” ಎಂದರು.

ಸಂಸತ್‌ನಲ್ಲಿ ಸೋಮವಾರ (ಜುಲೈ 29) ರಾಹುಲ್‌ ಗಾಂಧಿ ಅವರು ಕೇಂದ್ರದ ವಿರುದ್ಧ ಹರಿಹಾಯ್ದಿದ್ದರು. ದೇಶದ ಜನರ ಸುತ್ತ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹೆಣೆದ ಚಕ್ರವ್ಯೂಹವನ್ನು ನಾವು ಭೇದಿಸುತ್ತೇವೆ. ಚಕ್ರವ್ಯೂಹವನ್ನು ನಮಗೆ ಭೇದಿಸುವುದು ಗೊತ್ತಿದೆ. ಯಾವ ಜಾತಿಗಣತಿ ಎಂದರೆ ನೀವು (ಬಿಜೆಪಿ) ಹೆದರುತ್ತೀರೋ, ಅದೇ ಜಾತಿಗಣತಿಯನ್ನು ಇದೇ ಸದನದಲ್ಲಿ ನಾವು ಮಂಡಿಸುತ್ತೇವೆ. ನಿಮಗೆ ಇಷ್ಟ ಇದೆಯೋ ಇಲ್ಲವೋ, ನಾವು ಇದೇ ಸದನದಲ್ಲಿ ಜಾತಿಗಣತಿಯನ್ನು ಮಂಡಿಸುತ್ತೇವೆ. ದೇಶದ ಜನ ಅರ್ಜುನನ ರೀತಿ ಚಕ್ರವ್ಯೂಹವನ್ನು ಭೇದಿಸಲಿದ್ದಾರೆ ಎಂದು ರಾಹುಲ್‌ ಗಾಂಧಿ ಹೇಳಿದರು.

ಇದನ್ನೂ ಓದಿ: Rahul Gandhi: ಮೋದಿ ಸೇರಿ 6 ಜನರಿಂದ ಭಾರತೀಯರಿಗೆ ಚಕ್ರವ್ಯೂಹ ರಚನೆ ಎಂದ ರಾಹುಲ್‌ ಗಾಂಧಿ; 6 ಜನ ಯಾರ‍್ಯಾರು?

Continue Reading
Advertisement
IND vs SL
ಪ್ರಮುಖ ಸುದ್ದಿ2 hours ago

IND vs SL : ಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲೂ ಭಾರತಕ್ಕೆ ಜಯ, ಸರಣಿ ಕ್ಲೀನ್ ಸ್ವೀಪ್ ಮಾಡಿದ ಸೂರ್ಯಕುಮಾರ್ ಪಡೆ

CM Siddaramaiah
ಕರ್ನಾಟಕ2 hours ago

CM Siddaramaiah: ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಫೇಲ್; ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಹೇಳಿಕೆ

Rashid Khan
ಪ್ರಮುಖ ಸುದ್ದಿ2 hours ago

Rashid Khan : ಟಿ20 ಕ್ರಿಕೆಟ್​ನಲ್ಲಿ ವಿಕೆಟ್​ಗಳ ಹೊಸ ಮೈಲುಗಲ್ಲು ಸೃಷ್ಟಿಸಿದ ಅಫಘಾನಿಸ್ತಾನ ಬೌಲರ್ ರಶೀದ್ ಖಾನ್​

Anurag Thakur
ದೇಶ2 hours ago

Anurag Thakur: ತಮ್ಮ ಜಾತಿಯೇ ಗೊತ್ತಿರದ ರಾಹುಲ್‌ ಗಾಂಧಿಯಿಂದ ಜಾತಿಗಣತಿ ಪ್ರಸ್ತಾಪ ಎಂದ ಅನುರಾಗ್‌ ಠಾಕೂರ್‌!

ICC T20 ranking
ಪ್ರಮುಖ ಸುದ್ದಿ3 hours ago

ICC T20 ranking : ಐಸಿಸಿ ರ್ಯಾಂಕಿಂಗ್​ನಲ್ಲಿ ಸ್ಮೃತಿ ಮಂಧಾನಾ, ರೇಣುಕಾಗೆ ಭರ್ಜರಿ ಲಾಭ

Asian Cricket Council
ಪ್ರಮುಖ ಸುದ್ದಿ3 hours ago

Asian Cricket Council : ಜಯ್​ ಶಾ ಹೊಂದಿರುವ ಉನ್ನತ ಸ್ಥಾನದ ಮೇಲೆ ಕಣ್ಣಿಟ್ಟಿರುವ ಪಾಕಿಸ್ತಾನ ಮೊಹ್ಸಿನ್ ನಖ್ವಿ

Viral video
ವೈರಲ್ ನ್ಯೂಸ್3 hours ago

Viral video: ಪೋಷಕರ ಫೋಟೊ ಶೋಕಿ; ಮೊಸಳೆ ಎದುರು ಮಕ್ಕಳಿಗೆ ಪ್ರಾಣ ಸಂಕಟ! ಆಘಾತಕಾರಿ ವಿಡಿಯೊ

Ranbir Kapoor
ಸಿನಿಮಾ3 hours ago

Ranbir Kapoor: ಮುದ್ದಿನ ಮಡದಿ ಅಲಿಯಾ ಕುರಿತ ಸೀಕ್ರೆಟ್ ಮಾಹಿತಿ ಹಂಚಿಕೊಂಡ ರಣಬೀರ್!

Minister Ramalinga Reddy drives for state level inter school Olympics sports in Bengaluru
ಬೆಂಗಳೂರು3 hours ago

Bengaluru News: ರಾಜ್ಯಮಟ್ಟದ ಅಂತರಶಾಲಾ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

Decision to release water from Malaprabha Reservoir says minister Lakshmi Hebbalkar
ಕರ್ನಾಟಕ3 hours ago

Lakshmi Hebbalkar: ಸುರಕ್ಷತೆ ದೃಷ್ಟಿಯಿಂದ ಮಲಪ್ರಭಾ ಜಲಾಶಯದಿಂದ ನೀರು ಬಿಡಲು ನಿರ್ಧಾರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ8 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ12 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ13 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 day ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 day ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌