Horoscope Today |‌ ಕುಂಭ ರಾಶಿಗೆ ಶನಿ ಸಂಚಾರ; ಇಂದು ದ್ವಾದಶ ರಾಶಿಗಳ ಭವಿಷ್ಯ ಹೀಗಿದೆ - Vistara News

ಪ್ರಮುಖ ಸುದ್ದಿ

Horoscope Today |‌ ಕುಂಭ ರಾಶಿಗೆ ಶನಿ ಸಂಚಾರ; ಇಂದು ದ್ವಾದಶ ರಾಶಿಗಳ ಭವಿಷ್ಯ ಹೀಗಿದೆ

ಶುಭಕೃತ ನಾಮ ಸಂವತ್ಸರ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷದ ದಶಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (17-೦೧-202೩)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷ.

ತಿಥಿ: ದಶಮಿ 18:05 ವಾರ: ಮಂಗಳವಾರ
ನಕ್ಷತ್ರ: ವಿಶಾಖ 18:45 ಯೋಗ: ಶೂಲ 08:33
ಕರಣ: ವಿಷ್ಟಿ (ಭದ್ರ) 18:05 ಇಂದಿನ ವಿಶೇಷ: ಶನೈಶ್ಚರ ಸಂಚಾರ
ಅಮೃತಕಾಲ: ಬೆಳಗ್ಗೆ 10 ಗಂಟೆ 12 ನಿಮಿಷದಿಂದ 11 ಗಂಟೆ 45ನಿಮಿಷದವರೆಗೆ.

ಸೂರ್ಯೋದಯ: 06 : 46    ಸೂರ್ಯಾಸ್ತ: 0೬ : 13

ರಾಹುಕಾಲ : ಸಾಯಂಕಾಲ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ  (Horoscope Today)

Horoscope Today

ಮೇಷ: ನಿಮ್ಮ ಅಪಾರ ವಿಶ್ವಾಸ ಕೆಲಸ ಕಾರ್ಯಗಳಲ್ಲಿ ಯಶಸ್ಸು ಕೀರ್ತಿ ತಂದು ಕೊಡಲಿದೆ. ಅತಿರೇಕದಲ್ಲಿ ಇಲ್ಲ ಸಲ್ಲದ ಮಾತುಗಳನ್ನಾಡಿ ಅಪಾಯವನ್ನು ತಂದುಕೊಳ್ಳುವುದು ಬೇಡ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಅತಿಥಿಗಳ ಆಗಮನದಿಂದ ಕುಟುಂಬದಲ್ಲಿ ಸಂತಸ. ಕುಟುಂಬದ ಸದಸ್ಯರಿಗೆ ಸಂಬಂಧಿಗಳಿಂದ ಸಿಹಿಸುದ್ದಿ ಬರುವುದು. ಆರ್ಥಿಕವಾಗಿ ಪ್ರಗತಿ ಕಂಡರೂ, ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಮನೆಯಲ್ಲಿ  ಶುಭ ಕಾರ್ಯಗಳ ಕುರಿತು ಚರ್ಚೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಸಕಾರಾತ್ಮಕ ಆಲೋಚನೆಗಳು ನಿಮಗೆ ಬಲ ನೀಡಲಿವೆ. ಆತುರದ ತಿರ್ಮಾನ, ಮಾತುಗಳು ಅಪಾಯ ತಂದೀತು ಎಚ್ಚರಿಕೆ. ಆರೋಗ್ಯ ಕೊಂಚ ಮಟ್ಟಿಗೆ ಹದಗೆಡುವ ಸಾಧ್ಯತೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ ಇರುವುದರಿಂದ ಆದಷ್ಟು ಮೌನಕ್ಕೆ ಜಾರುವುದು ಒಳಿತು. ಮನೆಯವರ ಧೈರ್ಯದ ಮಾತುಗಳು ಮನಸ್ಸಿಗೆ ಸಂತೋಷ ನೆಮ್ಮದಿ ತರುವುದು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅತಿಯಾದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ. ಸೂಕ್ತ ವ್ಯಕ್ತಿಗಳ ಬೆಂಬಲದಿಂದ ಹೂಡಿಕೆ ವ್ಯವಹಾರದಲ್ಲಿ ತೊಡುಗುವ ಸಾಧ್ಯತೆ. ಪ್ರೀತಿಪಾತ್ರರೊಂದಿಗೆ ಸಮಯ ಕಳೆಯುವಿರಿ. ಸಂಗಾತಿ ನಿಮ್ಮ ಮನಸ್ಸಿಗೆ ಮುದ ನೀಡುವಳು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ಸಿಂಹ: ನಿಮ್ಮ ವರ್ತನೆಯಲ್ಲಿ ಬದಲಾವಣೆ, ಹಿರಿಯರ ಆಶೀರ್ವಾದದ ಬಲದಿಂದ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಭೇಟಿ ಮಾಡಿ ಸ್ವಾಂತನ ಹೇಳಬಹುದು. ದಿಢೀರ್‌ ಪ್ರಯಾಣ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಒತ್ತಡದ ಕಾರ್ಯ ಆಯಾಸವನ್ನುಂಟು ಮಾಡುವುದು. ಕುಟುಂಬದ ಸದಸ್ಯರ ಅವಶ್ಯಕತೆಗಾಗಿ ಅನಗತ್ಯ ಖರ್ಚು. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಸಾಧ್ಯತೆ. ಕುಟುಂಬದ ಸದಸ್ಯರು ನಿಮ್ಮ ಮುಂದೆ ಸಮಸ್ಯೆ ಹಂಚಿಕೊಳ್ಳುವ ಸಾಧ್ಯತೆ. ಉದ್ಯೋಗದಲ್ಲಿ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ತುಲಾ: ಕೈಗೊಂಡ ಧಾರ್ಮಿಕ ಕಾರ್ಯಗಳು ಮನಸ್ಸಿಗೆ ಸಮಾಧಾನ ತರುವುದು. ಅಗತ್ಯಕ್ಕೆ ತಕ್ಕಂತೆ ಖರ್ಚು. ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿ ಅಚ್ಚರಿ ತರುವುದು, ಕೋಪದಲ್ಲಿ ಮಾತಿಗೆ ಇಳಿಯುವುದರಿಂದ ಕಠಿಣ ಪರಿಸ್ಥಿತಿ ನಿರ್ಮಾಣವಾಗುವುದು. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಕಠಿಣ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಸಿದ್ಧರಾಗುವಿರಿ. ಭಾವನಾತ್ಮಕ ನಿರ್ಧಾರ ಕೈಗೊಳ್ಳುವ ಭರದಲ್ಲಿ ಮನಸ್ಸಿನ ಮೇಲೆ ಹಿಡಿತ ಕಳೆದುಕೊಳ್ಳುವುದು ಬೇಡ. ಅಜಾಗೃತ ಕಾರ್ಯ ನಿಮಗೆ ಆರ್ಥಿಕ ನಷ್ಟ ಉಂಟು ಮಾಡಬಹುದು. ಉದ್ಯೋಗದಲ್ಲಿ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕುಟುಂಬದ ಸದಸ್ಯರ ವರ್ತನೆಯಿಂದ ಕೋಪಗೊಳ್ಳುವ ಸಾಧ್ಯತೆ. ಸಂಬಂಧಿಕರಿಂದ ವ್ಯಾಜ್ಯ ಉಂಟಾಗುವ ಸಾಧ್ಯತೆ. ಆತುರದಲ್ಲಿ ಯಾವುದೇ ಮಾತುಗಳನ್ನು ಆಡುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಜೀವನದಲ್ಲಿ ಹೊಸ ಪಾಠ ಕಲಿಯುವಿರಿ. ಕೌಟುಂಬಿಕ ಒತ್ತಡ ನಿಮ್ಮ ಮನಸ್ಸಿಗೆ ನೋವುಂಟು ಮಾಡುವ ಸಾಧ್ಯತೆ. ಕೋಪದಲ್ಲಿ ಆಡಿದ ಮಾತುಗಳ ಮನವರಿಕೆ ಆಗುವುದು. ಆರೋಗ್ಯದ ಕಡೆಗೆ ಗಮನ ಹರಿಸಿ. ವೈದ್ಯರ ಸಲಹೆ ಪಡೆಯುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು, ಕೀರ್ತಿ ಸಿಗುವುದು. ದಿನದ ಮಟ್ಟಿಗೆ ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ. ಗೌಪ್ಯ ವಿಷಯಗಳನ್ನು ಹಂಚಿಕೊಂಡು ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ಸಮಾಧಾನದ ಮಾತುಗಳು ಸೂಕ್ತ ವ್ಯಕ್ತಿಗಳಿಂದ ಸಿಗಲಿವೆ. ನಿಮ್ಮ ವರ್ತನೆಯಿಂದ ಕುಟುಂಬದ ಸದಸ್ಯರು ಕೋಪಗೊಳ್ಳವ ಸಾಧ್ಯತೆ. ಹಣಕಾಸು ಪ್ರಗತಿ ಸಾಧಾರಣ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅವಶ್ಯಕ. ಉದ್ಯೋಗದಲ್ಲಿ ಮಿಶ್ರ ಫಲ. ಕೌಟುಂಬಿಕವಾಗಿಯೂ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | Shani Gochar 2023 | ನಾಳೆ ಮಕರದಿಂದ ಕುಂಭಕ್ಕೆ ಶನಿ ಸಂಚಾರ; ಪುಣ್ಯ ಕಾಲ ಯಾವಾಗ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಇಂದು ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆ ಜತೆಗೆ ಮೋದಿ ಕಾರ್ಯಕ್ರಮ ಏನೇನು?

Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ಮೇ 14ರಂದು ನಾಮಪತ್ರ ಸಲ್ಲಿಸಲಿದ್ದು, ಇದಕ್ಕೂ ಮೊದಲು ಅಂದರೆ ಸೋಮವಾರ (ಮೇ 13) ಸಂಜೆ ವಾರಾಣಸಿಯಲ್ಲಿ ಬೃಹತ್‌ ರೋಡ್‌ ಶೋ ನಡೆಸಿದರು. ಆ ಮೂಲಕ ತಮ್ಮ ಲೋಕಸಭೆ ಕ್ಷೇತ್ರದಲ್ಲಿ ಮೋದಿ ಅವರು ಶಕ್ತಿ ಪ್ರದರ್ಶನ ಮಾಡಿದರು. ಇನ್ನು, ಮಂಗಳವಾರ ಮೋದಿ ಅವರು ವಾರಾಣಸಿಯಲ್ಲಿ ಯಾವೆಲ್ಲ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ? ಇಲ್ಲಿದೆ ಮಾಹಿತಿ.

VISTARANEWS.COM


on

Narendra Modi
Koo

ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿ (Varanasi) ಲೋಕಸಭೆ ಕ್ಷೇತ್ರದಿಂದ ಸತತ ಮೂರನೇ ಬಾರಿ ಸ್ಪರ್ಧಿಸುತ್ತಿರುವ (Lok Sabha Election) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ (ಮೇ 14) ನಾಮಪತ್ರ ಸಲ್ಲಿಸಲಿದ್ದಾರೆ. ಸೋಮವಾರ (ಮೇ 13) ಬೃಹತ್‌ ರೋಡ್‌ ಶೋ ನಡೆಸಿ ಶಕ್ತಿ ಪ್ರದರ್ಶನ ಮಾಡಿರುವ ನರೇಂದ್ರ ಮೋದಿ ಅವರು ಮಂಗಳವಾರ ನಾಮಪತ್ರ ಸಲ್ಲಿಕೆ ಜತೆಗೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಬೆಳಗ್ಗೆ 10.45ಕ್ಕೆ ಕಾಲಭೈರವ ದೇಗುಲಕ್ಕೆ ಭೇಟಿ

ನರೇಂದ್ರ ಮೋದಿ ಅವರು ವಾರಾಣಸಿ ಲೋಕಸಭೆ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆಗೂ ಮೊದಲು ಬೆಳಗ್ಗೆ 10.45ಕ್ಕೆ ಕಾಲಭೈರವ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಇದಾದ ಬಳಿಕ ಮೋದಿ ಅವರು ಲೋಕಸಭೆ ಚುನಾವಣೆ ದೃಷ್ಟಿಯಿಂದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರ ಜತೆ ಮಹತ್ವದ ಸಭೆ ನಡೆಸಲಿದ್ದಾರೆ. ಲೋಕಸಭೆ ಚುನಾವಣೆ ಗೆಲುವು, ಪಕ್ಷ ಸಂಘಟನೆ ಸೇರಿ ಹಲವು ವಿಷಯಗಳ ಕುರಿತು ನಾಯಕರು ಹಾಗೂ ಕಾರ್ಯಕರ್ತರ ಜತೆ ಮೋದಿ ಚರ್ಚಿಸಲಿದ್ದಾರೆ.

ವಾರಾಣಸಿಯಲ್ಲಿ ಮೋದಿ ರೋಡ್‌ ಶೋ ಝಲಕ್

11.40ಕ್ಕೆ ನಾಮಪತ್ರ ಸಲ್ಲಿಕೆ

ಮಂಗಳವಾರ ಬೆಳಗ್ಗೆ 11:40ಕ್ಕೆ ಪ್ರಧಾನಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಯ ಮುಹೂರ್ತವು ಹಿಂದೂ ಪಂಚಾಂಗದ ಪ್ರಕಾರ ʼಅಭಿಜಿತ್ ಮಹೂರ್ತ’ವಾಗಿದೆ. ಇದು ʼಆನಂದ ಯೋಗ’ದ ಅಡಿಯಲ್ಲಿ ಬರುತ್ತಿದ್ದು ಅತ್ಯಂತ ಮಂಗಳಕರ ಅವಧಿ ಎನ್ನಲಾಗಿದೆ. ನಾಮಪತ್ರ ಸಲ್ಲಿಕೆಗೂ ಮುನ್ನವೇ ಅವರು ಸೋಮವಾರ ರೋಡ್‌ ಶೋ ನಡೆಸಿ ಜನರ ಗಮನ ಸೆಳೆದಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿಯ ಕೆಲ ನಾಯಕರು ಮೋದಿ ಅವರಿಗೆ ಸಾಥ್‌ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ರೋಡ್‌ ಶೋ ಬಳಿಕ ಅವರು ಕಾಶಿ ವಿಶ್ವನಾಥ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಅಜಯ್ ರೈ ಕಣದಲ್ಲಿದ್ದಾರೆ. ಅಜಯ್ ರೈ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಕಳೆದ ಎರಡು ಬಾರಿಯೂ ಮೋದಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಪ್ರಧಾನಿ ಮೋದಿಯವರ ಗೆಲುವಿನ ಅಂತರವನ್ನು 7 ಲಕ್ಷಕ್ಕೂ ಮೀರಿ ಹೆಚ್ಚಿಸುವ ಗುರಿಯನ್ನು ಬಿಜೆಪಿ ಹೊಂದಿದೆ. 2019ರಲ್ಲಿ 64% ಮತ ಹಂಚಿಕೆಯೊಂದಿಗೆ ಮೋದಿಯವರು 4.8 ಲಕ್ಷ ಅಂತದಲ್ಲಿ ಗೆಲುವು ಸಾಧಿಸಿದ್ದರು. 2014ರಲ್ಲಿ ಅವರು 3.7 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು.

ಇದನ್ನೂ ಓದಿ: Narendra Modi: ವಾರಾಣಸಿಯಲ್ಲಿ ಹೊಸ ಅಲೆ ಸೃಷ್ಟಿಸಿದ ಮೋದಿ, ಶಕ್ತಿ ಪ್ರದರ್ಶನ; ರೋಡ್‌ ಶೋ Photos ಇಲ್ಲಿವೆ

Continue Reading

ಭವಿಷ್ಯ

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮಂಗಳವಾರವು ಸಿಂಹ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ. ಅತಿಯಾದ ಒತ್ತಡ ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕವಿದೆ. ಸಿಂಹ ರಾಶಿಯವರು ಮಿತಿಮೀರಿದ ಕೆಲಸದ ಒತ್ತಡದಿಂದಾಗಿ ದಣಿವಾಗಲಿದೆ, ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ.ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಮೀನ ರಾಶಿಯವರು ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಪಾಲುದಾರಿಕೆ ವ್ಯವಹಾರವು ನಷ್ಟ ತರುವುದು. ನಿಮ್ಮ ಉದಾರ ವರ್ತನೆಯನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (14-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ಸಪ್ತಮಿ 28:18 ವಾರ: ಮಂಗಳವಾರ
ನಕ್ಷತ್ರ: ಪುಷ್ಯ 13:04 ಯೋಗ: ಗಂಡ 07:23
ಕರಣ: ಗರಜ 15:29 ಅಮೃತ ಕಾಲ: ಬೆಳಗ್ಗೆ 06:14 ರಿಂದ 07:57
ದಿನದ ವಿಶೇಷ: ವೃಷಭ ಸಂಕ್ರಮಣ ಭಾಗೀರಥ ಜಯಂತಿ, ಭಾಗಮಂಡಲ ಚನ್ನಪಟ್ಟಣ ರಥೋತ್ಸವ

ಸೂರ್ಯೋದಯ : 05:55   ಸೂರ್ಯಾಸ್ತ : 06:37

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ.
ಅತಿಯಾದ ಒತ್ತಡ ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕವಿದೆ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಸಾಧಿಸಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಅವಕಾಶ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಸಹದ್ಯೋಗಿಗಳಿಂದ ಕಿರಿಕಿರಿ ಆಗಲಿದೆ, ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಬಂಧುಗಳು ಟೀಕೆಗಳನ್ನು ಮಾಡುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಒತ್ತಡ ಮಾನಸಿಕ ನೆಮ್ಮದಿ ಹಾಳು ಮಾಡುವ ಸಾಧ್ಯತೆ ಇದೆ. ಸಂಯಮದಿಂದ ವರ್ತಿಸಿ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕಟಕ: ಪ್ರಮುಖ ವ್ಯಕ್ತಿಗಳ ಸಹಕಾರ ಸಿಗಲಿದೆ. ಆತುರದ ತೀರ್ಮಾನ ತೆಗೆದುಕೊಳ್ಳುವುದು ಬೇಡ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರುತ್ತದೆ. ಕೌಟುಂಬಿಕವಾಗಿ ಶುಭ ಫಲ.ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಮಿತಿಮೀರಿದ ಕೆಲಸದ ಒತ್ತಡದಿಂದಾಗಿ ದಣಿವಾಗಲಿದೆ, ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ.ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಮಕ್ಕಳಿಂದ ಸಂತೋಷ ಸಿಗಲಿದೆ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ನಿಮ್ಮ ವರ್ತನೆ ಕುಟುಂಬದ ಸದಸ್ಯರಿಗೆ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಹಣಕಾಸು ಪ್ರಗತಿ ಇರಲಿದೆ. ಬಂಧುಗಳ ಭೇಟಿ ಕೊಂಚ ಸಮಾಧಾನ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಕುಟುಂಬದ ಸದಸ್ಯರ ಆರೋಗ್ಯ ಕಡೆ ಗಮನ ಇರಲಿ. ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವಂತೆ ಮಾಡಬಹುದು. ದಿನದ ಮಟ್ಟಿಗೆ ಖರ್ಚು.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಧನಸ್ಸು: ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆಪ್ತ ಸ್ನೇಹಿತ- ಸಂಬಂಧಿಗಳ ಸಮಸ್ಯೆಗಳಿಗೆ ಸ್ಪಂದಿಸುವಿರಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮಕರ: ಆರೋಗ್ಯ ಉತ್ತಮವಾಗಿರಲಿದೆ. ಸ್ನೇಹಿತರ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತರುವುದು. ಅತಿರೇಖದಲ್ಲಿ ಮಾತನಾಡುವುದು ಬೇಡ. ಸಮಾಧಾನದಿಂದ ವರ್ತಿಸಿ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ ಸಿಗಲಿದೆ.ಹಿರಿಯರ ಮಾರ್ಗದರ್ಶನ ಸಿಗುವುದು. ಆರೋಗ್ಯ ಉತ್ತಮವಾಗಿರಲಿದೆ .ಅನಿರೀಕ್ಷಿತ ಖರ್ಚು ಇರಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಅದೃಷ್ಟ ಸಂಖ್ಯೆ: 3

Horoscope Today

ಮೀನ: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಪಾಲುದಾರಿಕೆ ವ್ಯವಹಾರವು ನಷ್ಟ ತರುವುದು. ನಿಮ್ಮ ಉದಾರ ವರ್ತನೆಯನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

IPL 2024 : ಆರ್​ಸಿಬಿ, ಆರ್​ಆರ್​ಗೆ ಆಘಾತ; ಐಪಿಎಲ್ ಬೇಡ ಎಂದು ಹೊರಟ ಹಲವು ಆಟಗಾರರು

IPL 2024: ಜೋಸ್ ಬಟ್ಲರ್ ಈಗಾಗಲೇ ರಾಜಸ್ಥಾನ್​​ ತಂಡ ತೊರೆದಿದ್ದಾರೆ. ಈ ಬೆಳವಣಿಗೆಯ 2008 ರ ಚಾಂಪಿಯನ್ಸ್​ ತಂಡಕ್ಕೆ ದೊಡ್ಡ ಹೊಡೆತವಾಗಿದೆ. ರಾಜಸ್ಥಾನ್ ರಾಯಲ್ಸ್ ಪರ ಆಡಿರುವ ಬಟ್ಲರ್ 39.88ರ ಸರಾಸರಿಯಲ್ಲಿ 359 ರನ್ ಗಳಿಸಿದ್ದಾರೆ. ಅವರ ಒಂದು ಶತಕವು ಐಪಿಎಲ್ ಇತಿಹಾಸದಲ್ಲಿ ಜಂಟಿಯಾಗಿ ಅತಿ ಹೆಚ್ಚು ಯಶಸ್ವಿ ರನ್ ಚೇಸ್ ದಾಖಲಿಸಲು ರಾಯಲ್ಸ್​ಗೆ ಸಹಾಯ ಮಾಡಿದೆ.

VISTARANEWS.COM


on

IPL 2024
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024 ಕ್ಕೆ (IPL 2024) ಇಂಗ್ಲೆಂಡ್ ಕ್ರಿಕೆಟಿಗರು ವಿದಾಯ ಹೇಳಲು ಪ್ರಾರಂಭಿಸಿದ್ದಾರೆ. ಮೇ 22ರಿಂದ ಆರಂಭವಾಗಲಿರುವ 4 ಪಂದ್ಯಗಳ ಟಿ20 ಸರಣಿಯಲ್ಲಿ ಇಂಗ್ಲೆಂಡ್​ ತಂಡ ಪಾಕಿಸ್ತಾನ ವಿರುದ್ಧ ಸೆಣಸಲಿದೆ. ಈ ವರ್ಷದ ಕೊನೆಯಲ್ಲಿ ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ (ಯುಎಸ್ಎ) ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೆ ತಯಾರಿ ನಡೆಸಲು ಇಂಗ್ಲಿಷ್ ಕ್ರಿಕೆಟಿಗರು ಐಪಿಎಲ್ ಅನ್ನು ಬೇಗನೆ ತೊರೆಯುತ್ತಾರೆ ಎಂದು ಈ ಹಿಂದೆ ತಿಳಿದುಬಂದಿತ್ತು. ಇದೀಗ ಅವರೆಲ್ಲರೂ ಹೊರಟಿದ್ದಾರೆ.

ಜೋಸ್ ಬಟ್ಲರ್ ಈಗಾಗಲೇ ರಾಜಸ್ಥಾನ್​​ ತಂಡ ತೊರೆದಿದ್ದಾರೆ. ಈ ಬೆಳವಣಿಗೆಯ 2008 ರ ಚಾಂಪಿಯನ್ಸ್​ ತಂಡಕ್ಕೆ ದೊಡ್ಡ ಹೊಡೆತವಾಗಿದೆ. ರಾಜಸ್ಥಾನ್ ರಾಯಲ್ಸ್ ಪರ ಆಡಿರುವ ಬಟ್ಲರ್ 39.88ರ ಸರಾಸರಿಯಲ್ಲಿ 359 ರನ್ ಗಳಿಸಿದ್ದಾರೆ. ಅವರ ಒಂದು ಶತಕವು ಐಪಿಎಲ್ ಇತಿಹಾಸದಲ್ಲಿ ಜಂಟಿಯಾಗಿ ಅತಿ ಹೆಚ್ಚು ಯಶಸ್ವಿ ರನ್ ಚೇಸ್ ದಾಖಲಿಸಲು ರಾಯಲ್ಸ್​ಗೆ ಸಹಾಯ ಮಾಡಿದೆ.

ರಾಯಲ್ಸ್ ‘ಎಕ್ಸ್’ ನಲ್ಲಿ ಒಂದು ಪೋಸ್ಟ್ ಮಾಡಿದ್ದು, ಅದರಲ್ಲಿ ಬಟ್ಲರ್ ತಂಡವನ್ನು ತೊರೆಯುತ್ತಿರುವುದು ಕಂಡುಬಂದಿದೆ. ನಾವು ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇವೆ, ಜೋಸ್ ಭಾಯ್!” ಎಂದು ಬರೆಯಲಾಗಿದೆ. ಬಟ್ಲರ್ ಅನುಪಸ್ಥಿತಿಯಲ್ಲಿ, ರಾಜಸ್ಥಾನ್ ತಂಡವು ​ 190 ಟಿ 20 ಪಂದ್ಯಗಳಲ್ಲಿ 1 ಶತಕ ಮತ್ತು 34 ಅರ್ಧಶತಕಗಳೊಂದಿಗೆ 4734 ರನ್ ಗಳಿಸಿರುವ ಟಾಮ್ ಕೊಹ್ಲರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಿದೆ.

ರಾಯಲ್ಸ್ ಇನ್ನೂ ಪ್ಲೇಆಫ್​ನಲ್ಲಿ ತನ್ನ ಸ್ಥಾನ ಕಾಯ್ದಿರಿಸಿಲ್ಲ. ಸಂಜು ಸ್ಯಾಮ್ಸನ್ ಪಡೆ ಆಡಿರುವ ಮೊದಲ 9 ಪಂದ್ಯಗಳಲ್ಲಿ 8ರಲ್ಲಿ ಗೆಲುವು ಸಾಧಿಸಿದ್ದು, 3 ಪಂದ್ಯಗಳಲ್ಲಿ ಸೋತಿದೆ.

ಆರ್​ಸಿಬಿ ತೊರೆದ ಜಾಕ್ಸ್, ಟಾಪ್ಲೆ


ಆಟಗಾರರು ಬಿಟ್ಟು ಹೋಗುತ್ತಿರುವ ಮತ್ತೊಂದು ತಂಡ ಆರ್​ಸಿಬಿ. ಇಲ್ಲಿನ ಇಬ್ಬರು ಇಂಗ್ಲಿಷ್ ತಾರೆಯರು ಹೊರಗುಳಿದಿದ್ದಾರೆ. 12 ಅಂಕಗಳು ಮತ್ತು +0.387 ನೆಟ್ ರನ್ ರೇಟ್​ನೊಂದಿಗೆ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿರುವ ಚಾಲೆಂಜರ್ಸ್ ಪ್ಲೇ ಆಫ್​ಗೆ ಪ್ರವೇಶಿಸಲು ಬಹಳ ದೂರವಿಲ್ಲ.

ಇದನ್ನೂ ಓದಿ: IPL 2024 : ಮಳೆಯಿಂದಾಗಿ ಪಂದ್ಯ ರದ್ದು, ಕೆಕೆಆರ್​ಗೆ ಮೊದಲೆರಡಲ್ಲೊಂದು ಸ್ಥಾನ ಫಿಕ್ಸ್​

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಋತುರಾಜ್ ಗಾಯಕ್ವಾಡ್ ಅವರ ಸಿಎಸ್​ಕೆ ವಿರುದ್ಧದ ಕೊನೆಯ ಲೀಗ್ ಪಂದ್ಯಕ್ಕೆ ವಿಲ್ ಜಾಕ್ಸ್ ಮತ್ತು ರೀಸ್ ಟಾಪ್ಲೆ ಅವರ ಸೇವೆ ಲಭ್ಯವಿರುವುದಿಲ್ಲ. ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದ ಆರ್​ಸಿಬಿ ಸತತ 5 ಪಂದ್ಯಗಳನ್ನು ಗೆದ್ದು ಪ್ಲೇ ಆಫ್ ಆಸೆ ಜೀವಂತವಾಗಿರಿಸಿದೆ.

ಲಿಯಾಮ್ ಲಿವಿಂಗ್​ಸ್ಟನ್​ ಕೂಡ ನಿರ್ಗಮಿಸಿದ್ದಾರೆ. ಆದರೂ ಪಿಬಿಕೆಎಸ್ ಈಗಾಗಲೇ ಸ್ಪರ್ಧೆಯಿಂದ ಹೊರಗುಳಿದಿರುವುದರಿಂದ ಇದು ಯಾವುದೇ ವ್ಯತ್ಯಾಸವನ್ನುಂಟು ಮಾಡುವುದಿಲ್ಲ.

Continue Reading

ಪ್ರಮುಖ ಸುದ್ದಿ

Sushil Kumar Modi : ಬಿಹಾರದ ಮಾಜಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ನಿಧನ

VISTARANEWS.COM


on

Sushil Kumar Modi
Koo

ನವದೆಹಲಿ: ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ಮುಖಂಡ ಸುಶೀಲ್ ಕುಮಾರ್ ಮೋದಿ (72) ಸೋಮವಾರ ನಿಧನನ ಹೊಂದಿದ್ದಾರೆ. ಸುಶೀಲ್ ಕುಮಾರ್ ಮೋದಿ ಅವರು ಕ್ಯಾನ್ಸರ್​​ ಸಮಸ್ಯೆಯಿಂದ ಬಳಲುತ್ತಿದ್ದರು. ತಮ್ಮ ಆರೋಗ್ಯ ಸ್ಥಿತಿಯಿಂದಾಗಿ 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಈ ವರ್ಷದ ಏಪ್ರಿಲ್​​ನಲ್ಲಿ ಘೋಷಿಸಿದ್ದರು. ಮಾಜಿ ರಾಜ್ಯಸಭಾ ಸಂಸದರಾಗಿದ್ದ ಅವರ ಪಾರ್ಥಿವ ಶರೀರವನ್ನು ನಾಳೆ (ಮೇ 14) ಪಾಟ್ನಾದ ರಾಜೇಂದ್ರ ನಗರ ಪ್ರದೇಶದಲ್ಲಿರುವ ಅವರ ನಿವಾಸಕ್ಕೆ ತರಲಾಗುವುದು ಎಂದು ಮೂಲಗಳು ತಿಳಿಸಿವೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಿಹಾರದ ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಸುಶೀಲ್ ಕುಮಾರ್ ಮೋದಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಪಕ್ಷದಲ್ಲಿ ನನ್ನ ಮೌಲ್ಯಯುತ ಸಹೋದ್ಯೋಗಿ ಮತ್ತು ದಶಕಗಳಿಂದ ನನ್ನ ಸ್ನೇಹಿತ ಸುಶೀಲ್ ಮೋದಿ ಜಿ ಅವರ ಅಕಾಲಿಕ ನಿಧನದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಬಿಹಾರದಲ್ಲಿ ಬಿಜೆಪಿಯ ಏಳಿಗೆ ಮತ್ತು ಅದರ ಯಶಸ್ಸಿನ ಹಿಂದೆ ಅವರ ಕೊಡುಗೆ ಅಮೂಲ್ಯವಾಗಿದೆ. ತುರ್ತು ಪರಿಸ್ಥಿತಿಯನ್ನು ಬಲವಾಗಿ ವಿರೋಧಿಸಿದ ಅವರು ವಿದ್ಯಾರ್ಥಿ ರಾಜಕಾರಣದಿಂದ ತಮ್ಮನ್ನು ಪ್ರೇರಿತರಾಗಿದ್ದರು. ಅವರು ತುಂಬಾ ಶ್ರಮಜೀವಿ ಮತ್ತು ಸ್ನೇಹಪರ ಶಾಸಕ ಎಂದು ಹೆಸರುವಾಸಿಯಾಗಿದ್ದರು. ರಾಜಕೀಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಅವರ ತಿಳುವಳಿಕೆ ಬಹಳ ಆಳವಾಗಿತ್ತು. ಅವರು ಆಡಳಿತಗಾರರಾಗಿ ಪ್ರಶಂಸನೀಯ ಕೆಲಸವನ್ನೂ ಮಾಡಿದರು. ಜಿಎಸ್ಟಿ ಅಂಗೀಕಾರದಲ್ಲಿ ಅವರ ಸಕ್ರಿಯ ಪಾತ್ರವನ್ನು ಯಾವಾಗಲೂ ನೆನಪಿಸಿಕೊಳ್ಳಲಾಗುತ್ತದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರೊಂದಿಗೆ ನನ್ನ ಸಂತಾಪವಿದೆ. ಓಂ ಶಾಂತಿ! ಎಂದು ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Tejasvi Surya: ಈ ದಲಿತ ನಾಯಕನ ಜತೆ ಚರ್ಚೆಗೆ ಬನ್ನಿ ರಾಹುಲ್‌ ಗಾಂಧಿ; ತೇಜಸ್ವಿ ಸೂರ್ಯ ಪಂಥಾಹ್ವಾನ!

ರಾಷ್ಟ್ರೀಯ ಜನತಾ ದಳ (ಆರ್​ಜೆಡಿ) ಮುಖಂಡ ತೇಜಸ್ವಿ ಯಾದವ್ ಕೂಡ ಎಕ್ಸ್ ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಸುಶೀಲ್ ಕುಮಾರ್ ಮೋದಿ ಯಾರು?

ಜನವರಿ 5, 1952 ರಂದು ಜನಿಸಿದ ಸುಶೀಲ್ ಕುಮಾರ್ ಮೋದಿ ಅವರು ಪಾಟ್ನಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಕಾರ್ಯಕರ್ತನಾಗಿ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದರು, ಅಲ್ಲಿ ಅವರು 1973 ರಲ್ಲಿ ವಿದ್ಯಾರ್ಥಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು.

ತಮ್ಮ ಮೂರು ದಶಕಗಳ ರಾಜಕೀಯ ಜೀವನದಲ್ಲಿ ಸುಶೀಲ್ ಮೋದಿ ಅವರು ಶಾಸಕ, ಎಂಎಲ್ಸಿ ಮತ್ತು ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯ ಸೇರಿದಂತೆ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಅವರು 2005 ರಿಂದ 2013 ರವರೆಗೆ ಮತ್ತು ಮತ್ತೆ 2017 ರಿಂದ 2020 ರವರೆಗೆ ಬಿಹಾರದ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು.

ಹಿರಿಯ ರಾಜಕಾರಣಿ 1990 ರಲ್ಲಿ ಪಾಟ್ನಾ ಸೆಂಟ್ರಲ್ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. 1996 ರಿಂದ 2004 ರವರೆಗೆ ರಾಜ್ಯ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿಯೂ ಸೇವೆ ಸಲ್ಲಿಸಿದರು.

2004 ರಲ್ಲಿ ಸುಶೀಲ್ ಮೋದಿ ಭಾಗಲ್ಪುರದಿಂದ ಲೋಕಸಭೆಗೆ ಆಯ್ಕೆಯಾಗುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಿದ್ದರು. ಆದಾಗ್ಯೂ, 2005 ರಲ್ಲಿ, ಅವರು ತಮ್ಮ ಲೋಕಸಭಾ ಹುದ್ದೆಗೆ ರಾಜೀನಾಮೆ ನೀಡಿ ವಿಧಾನ ಪರಿಷತ್ತಿಗೆ ಸೇರಿ ಬಿಹಾರದ ಉಪಮುಖ್ಯಮಂತ್ರಿಯ ಪಾತ್ರವನ್ನು ವಹಿಸಿಕೊಂಡಿದ್ದರು.

Continue Reading
Advertisement
Narendra Modi
ದೇಶ11 mins ago

Narendra Modi: ಇಂದು ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆ ಜತೆಗೆ ಮೋದಿ ಕಾರ್ಯಕ್ರಮ ಏನೇನು?

Dina Bhavishya
ಭವಿಷ್ಯ12 mins ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

IPL 2024
ಪ್ರಮುಖ ಸುದ್ದಿ5 hours ago

IPL 2024 : ಆರ್​ಸಿಬಿ, ಆರ್​ಆರ್​ಗೆ ಆಘಾತ; ಐಪಿಎಲ್ ಬೇಡ ಎಂದು ಹೊರಟ ಹಲವು ಆಟಗಾರರು

Prajwal Revanna Case
ಕರ್ನಾಟಕ5 hours ago

Prajwal Revanna Case: ರೇವಣ್ಣಗೆ ಜಾಮೀನು ಹಿನ್ನೆಲೆ ವಿದೇಶದಿಂದ ಪ್ರಜ್ವಲ್‌ ವಾಪಸ್?‌; ಕೋರ್ಟ್‌ಗೆ ಶರಣಾಗುವ ಸಾಧ್ಯತೆ

Hoarding
ಸಂಪಾದಕೀಯ6 hours ago

ವಿಸ್ತಾರ ಸಂಪಾದಕೀಯ: ಹೋರ್ಡಿಂಗ್ ಕುಸಿತ ಬೆಂಗಳೂರಿಗರಿಗೂ ಎಚ್ಚರಿಕೆಯ ಗಂಟೆ

Sushil Kumar Modi
ಪ್ರಮುಖ ಸುದ್ದಿ6 hours ago

Sushil Kumar Modi : ಬಿಹಾರದ ಮಾಜಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ನಿಧನ

Tejasvi Surya
ದೇಶ6 hours ago

Tejasvi Surya: ಈ ದಲಿತ ನಾಯಕನ ಜತೆ ಚರ್ಚೆಗೆ ಬನ್ನಿ ರಾಹುಲ್‌ ಗಾಂಧಿ; ತೇಜಸ್ವಿ ಸೂರ್ಯ ಪಂಥಾಹ್ವಾನ!

IPL 2024
ಪ್ರಮುಖ ಸುದ್ದಿ6 hours ago

IPL 2024 : ಮಳೆಯಿಂದಾಗಿ ಪಂದ್ಯ ರದ್ದು, ಕೆಕೆಆರ್​ಗೆ ಮೊದಲೆರಡಲ್ಲೊಂದು ಸ್ಥಾನ ಫಿಕ್ಸ್​

Vidyarthi Vidyarthiniyare Movie
ಕರ್ನಾಟಕ6 hours ago

Vidyarthi Vidyarthiniyare Movie: ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೈಲರ್ ಔಟ್; ಧುಮ್ಮಿಕ್ಕಿದ ಹರೆಯದ ತೊರೆ!

Road Accident Head on collision between bikes One person died on the spot
ಉತ್ತರ ಕನ್ನಡ6 hours ago

Road Accident: ಬೈಕ್‌ಗಳ ನಡುವೆ ಡಿಕ್ಕಿ; ಒಬ್ಬ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 mins ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ10 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Prajwal Revanna case HD Revanna finally gets bail What was the argument like
ಕ್ರೈಂ11 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ11 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ11 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ12 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ18 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ23 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 day ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

ಟ್ರೆಂಡಿಂಗ್‌