Horoscope Today |‌ ಇಂದು ಏಳು ರಾಶಿಯವರಿಗೆ ಶುಭ ಫಲ; ನಿಮ್ಮ ಭವಿಷ್ಯ ಹೇಗಿದೆ? - Vistara News

ಪ್ರಮುಖ ಸುದ್ದಿ

Horoscope Today |‌ ಇಂದು ಏಳು ರಾಶಿಯವರಿಗೆ ಶುಭ ಫಲ; ನಿಮ್ಮ ಭವಿಷ್ಯ ಹೇಗಿದೆ?

ಶುಭಕೃತ ನಾಮ ಸಂವತ್ಸರ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷದ ಏಕಾದಶಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (18-೦೧-202೩)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷ.

ತಿಥಿ: ಏಕಾದಶಿ 16:02 ವಾರ: ಬುಧವಾರ
ನಕ್ಷತ್ರ: ಅನುರಾಧ 17:21 ಯೋಗ: ವೃದ್ಧಿ 26:45
ಕರಣ: ಬಾಲವ 16:02 ಇಂದಿನ ವಿಶೇಷ: ಅಮೃತಸಿದ್ಧಿಯೋಗ, ಕಲ್ಯಾಣೀ (ಷಟ್ತಿಲಾ) ಏಕಾದಶಿ.
ಅಮೃತಕಾಲ: ಬೆಳಗ್ಗೆ 07 ಗಂಟೆ 35 ನಿಮಿಷದಿಂದ 09 ಗಂಟೆ 05 ನಿಮಿಷದವರೆಗೆ.

ಸೂರ್ಯೋದಯ: 06 : 46    ಸೂರ್ಯಾಸ್ತ: 0೬ : 14

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ  (Horoscope Today)

Horoscope Today

ಮೇಷ: ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಅಮೂಲ್ಯ ವಸ್ತುಗಳ ಬಗ್ಗೆ ಜಾಗ್ರತೆ ಇರಲಿ. ಕಠಿಣ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಆಧ್ಯಾತ್ಮಿಕ ಗುರುವನ್ನು ಭೇಟಿ ಮಾಡಲು ತೆರಳುವ ಸಾಧ್ಯತೆ. ಆರ್ಥಿಕ ಪ್ರಗತಿ ಸಾಧಾರಣ. ವ್ಯಾಪಾರ ವ್ಯವಹಾರದಲ್ಲಿ ತಕ್ಕಮಟ್ಟಿಗೆ ಲಾಭ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ನಿಮ್ಮ ಶಾಂತ ಮನಸ್ಥಿತಿ ಉತ್ಸಾಹ ತುಂಬಿ ಕಾರ್ಯದಲ್ಲಿ ಯಶಸ್ಸು ತಂದುಕೊಡಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚು. ಪ್ರೀತಿ ಪಾತ್ರರಿಂದ ಕಿರಿಕಿರಿ ಸಾಧ್ಯತೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ದಿನದ ಕೊನೆಯಲ್ಲಿ ಯಾವುದಾದರೂ ಸುದ್ದಿ ದುಃಖ ತರಬಹುದು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಜೀವನದಲ್ಲಿ ಅಭದ್ರತೆ ಉಂಟಾಗಿ, ಮಾನಸಿಕ ಒತ್ತಡ ಸೃಷ್ಟಿಯಾಗುವ ಸಾಧ್ಯತೆ. ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ. ಕಚೇರಿ ಕೆಲಸಗಳು ನಿಧಾನವಾಗಿ ಸಾಗುವುದು. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಬಿಡುವಿಲ್ಲದ ಕೆಲಸದಿಂದ ಆಯಾಸ ಉಂಟಾಗಲಿದೆ. ಕುಟುಂಬದ ಸಂತಸ ಹೆಚ್ಚಿಸಲು ಪ್ರಯತ್ನಿಸುವಿರಿ. ಸಭೆ-ಸಮಾರಂಭಗಳಲ್ಲಿ ಭಾಗಿಯಾಗುವ ಸಾಧ್ಯತೆ. ಸ್ವಲ್ಪ ಖರ್ಚಿನ ದಿನ. ಬಹುದಿನಗಳ ಕನಸು ನನಸಾಗುವ ಸಮಯ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ಸಿಂಹ: ಆಪ್ತರು ನಿಮ್ಮ ತಾಳ್ಮೆ ಪರಿಕ್ಷಿಸುವವರು. ಯಾವುದೇ ವಿಷಯಗಳಲ್ಲಿ ದೃಢ ನಿರ್ಧಾರ, ರಾಜಿಯಾಗದ ಗುಣ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ದಿನದ ಮಧ್ಯಭಾಗದಲ್ಲಿ ಸ್ವಲ್ಪ ಮನೋ ಒತ್ತಡ. ಉದ್ಯೋಗ ಮತ್ತು ಆರೋಗ್ಯದಲ್ಲಿ ಉತ್ತಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಆಪ್ತರೊಂದಿಗೆ ಅನೇಕ ವಿಚಾರಗಳನ್ನು ಹಂಚಿಕೊಳ್ಳುವಿರಿ. ನಿಮಗೆ ಸಂಬಂಧಿಸಿದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಪಡೆಯುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ತುಲಾ: ಆರೋಗ್ಯ ಉತ್ತಮವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಸಾಧ್ಯತೆ. ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ. ನಿಮ್ಮ ಹಿಂದೆ ಪಿತೂರಿ ಮಾಡುವ ಜನರ ಬಗ್ಗೆ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಆಹಾರದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ. ಆಪ್ತರೊಂದಿಗಿನ ಮಾತುಕತೆಯಲ್ಲಿ ವ್ಯತಿರಿಕ್ತವಾದ ಪರಿಣಾಮದಿಂದಾಗಿ ಜಗಳವಾಗುವ ಸಾಧ್ಯತೆ, ಆದಷ್ಟು ಮಾತು ನಿಯಂತ್ರಣದಲ್ಲಿರಲಿ. ಇದರ ಮಧ್ಯೆ ಉದ್ಯೋಗದ ಸ್ಥಳದಲ್ಲಿ ಕೌಶಲ್ಯದ ಕೆಲಸ ನಿಮಗೆ ಯಶಸ್ಸು ತಂದು ಕೊಡುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಅತಿಯಾದ ಒತ್ತಡದ ಕಾರ್ಯ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ. ಆಪ್ತರೊಂದಿಗೆ ಪ್ರಯಾಣ ಮಾಡುವ ವಿಚಾರವಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಇಂದು ಸೌಹಾರ್ದತೆಯ ವಾತಾವರಣವಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ನಿಮ್ಮ ನಿಸ್ಪೃಹ ಮನೋಭಾವ ಕಾರ್ಯ ಸಿದ್ಧಿ ಮಾಡುವುದು. ಈ ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವ ಸಾಧ್ಯತೆಗಳು ಹೆಚ್ಚು. ಅನಗತ್ಯವಾಗಿ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅಗತ್ಯ. ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಇರುವವರು ಹೆಚ್ಚು ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು. ವ್ಯಾಪಾರದಲ್ಲಿ ಪ್ರಗತಿ. ಹೊಸದಾಗಿ ಕಾರ್ಯ ಪ್ರಾರಂಭಿಸುವುದು ದಿನದ ಮಟ್ಟಿಗೆ ಬೇಡ. ಜೀವನದ ಭವಿಷ್ಯದ ಬಗೆಗೆ ಅತಿಯಾಗಿ ಚಿಂತಿಸಿ ಮನಸ್ಥಿತಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮೀನ: ಕುಟುಂಬದ ಸದಸ್ಯರೊಂದಿಗಿನ ಭಿನ್ನಾಭಿಪ್ರಾಯದಿಂದ ಮಾನಸಿಕ ಅಸಮತೋಲನ. ನಡೆದು ಹೋದ ಘಟನೆಗಳ ಬಗ್ಗೆ ಚಿಂತಿಸಿ ಫಲವಿಲ್ಲ. ಅತಿಥಿಗಳ ಆಗಮನ ಹರ್ಷ ತರುವುದು. ಉದ್ಯೋಗದಲ್ಲಿ ಸಾಧಾರಣ ಫಲ. ಕೌಟಂಬಿಕ ವ್ಯಾಜ್ಯಗಳು ಹುಟ್ಟುವ ಸಾಧ್ಯತೆ. ಕೌಟಂಬಿಕವಾಗಿ  ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | Shani Gochar 2023 | ನಾಳೆ ಮಕರದಿಂದ ಕುಂಭಕ್ಕೆ ಶನಿ ಸಂಚಾರ; ಪುಣ್ಯ ಕಾಲ ಯಾವಾಗ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Hebbal flyover: ಬಿಡಿಎ ಕಾಮಗಾರಿ; ಹೆಬ್ಬಾಳ ಮೇಲ್ಸೇತುವೆಗೆ ಕೆ.ಆರ್.ಪುರಂನಿಂದ ಬರುವ ವಾಹನಗಳಿಗೆ ನಿರ್ಬಂಧ

Hebbal flyover: ಮೇ 14ರಿಂದ ಹೆಬ್ಬಾಳ ಫ್ಲೈ ಓವರ್‌ನ ಕೆ.ಆರ್. ಪುರಂ ಅಪ್ ರ‍್ಯಾಂಪ್ ಮುಚ್ಚುತ್ತಿರುವುದರಿಂದ ಕೆ.ಆರ್‌.ಪುರಂ., ನಾಗವಾರ ಕಡೆಯಿಂದ ಹೆಬ್ಬಾಳ ಮೇಲ್ಸೇತುವೆ ಕಡೆಗೆ ಬರುವ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ಮೇಲ್ಸೇತುವೆ ಮೇಲೆ ನಿರ್ಬಂಧಿಸಲಾಗಿದೆ.

VISTARANEWS.COM


on

Hebbal Flyover
Koo

ಬೆಂಗಳೂರು: ಬಿಡಿಎ ಕಾಮಗಾರಿ ಹಿನ್ನೆಲೆಯಲ್ಲಿ ನಗರದ ಹೆಬ್ಬಾಳ ಮೇಲ್ಸೇತುವೆಯ ಕೆ.ಆರ್.ಪುರಂ ಅಪ್ ರ‍್ಯಾಂಪ್ ಮುಚ್ಚಲಾಗಿದ್ದು, ನಾಗವಾರ ಕಡೆಯಿಂದ ಹೆಬ್ಬಾಳ ಮೇಲ್ಸೇತುವೆ ಕಡೆಗೆ ಬರುವ ಎಲ್ಲಾ ವಾಹನಗಳಿಗೆ ಫ್ಲೈ ಓವರ್ (Hebbal flyover) ಮೇಲೆ ಸಂಚಾರ ನಿರ್ಬಂಧಿಸಲಾಗಿದೆ. ಏಪ್ರಿಲ್ 17ರಿಂದ ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ ಎಲ್ಲಾ ವಾಹನಗಳಿಗೆ ನಿರ್ಬಂಧ ಇತ್ತು. ಈಗ ಎಲ್ಲಾ ರೀತಿಯ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಈ ಮಾರ್ಗದ ವಾಹನಗಳಿಗೆ ಪರ್ಯಾಯ ಮಾರ್ಗ ನಿಗದಿ ಮಾಡಲಾಗಿದೆ.

ಹೆಬ್ಬಾಳ ಮೇಲ್ಸೇತುವೆಗೆ ಎರಡು ಹೊಸ ಟ್ರ್ಯಾಕ್‌ಗಳನ್ನು ಸೇರಿಸಲು ಬಿ.ಡಿ.ಎ ಕಾಮಗಾರಿ ಆರಂಭಿಸಿರುವುದರಿಂದ ಈಗಾಗಲೇ ಏ.17ರಿಂದ ಕೆ.ಆರ್.ಪುರ ಲೂಪ್ ಸೇರುವ ಟ್ರ್ಯಾಕ್‌ನಲ್ಲಿ ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಇದೀಗ ಮೇ 14ರಿಂದ ಕೆ.ಆರ್.ಪುರಂ ಕಡೆಯಿಂದ ಬರುವ ಲೂಪ್ ಹೆಬ್ಬಾಳ ಫ್ಲೈ ಓವರ್‌ನ ಮುಖ್ಯ ಟ್ರ್ಯಾಕ್‌ಗೆ ಸೇರಿಸುವ ಎರಡು ಲಿಂಕ್ ಸ್ಪ್ಯಾನ್‌ಗಳನ್ನು ತೆಗೆದುಹಾಕುತ್ತಿರುವುದರಿಂದ ರ‍್ಯಾಂಪ್ ಮತ್ತು ಮುಖ್ಯ ಟ್ರ್ಯಾಕ್‌ಗೆ ಸಂಪರ್ಕ ಕಡಿತವಾಗಲಿದೆ. ಹೀಗಾಗಿ ಯಾವುದೇ ರೀತಿಯ ವಾಹನ ಸಂಚಾರ ಸಾಧ್ಯವಿರದ ಹಿನ್ನೆಲೆಯಲ್ಲಿ, ಕಾಮಗಾರಿ ಮುಕ್ತಾಯವಾಗುವವರೆಗೆ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಸಂಚಾರ ವಿಭಾಗದಿಂದ ಈ ಕೆಳಕಂಡ ಮಾರ್ಪಾಡುಗಳನ್ನು ಮಾಡಲಾಗಿದೆ.

ಇದನ್ನೂ ಓದಿ | Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಮೇ 14ರಿಂದ ಹೆಬ್ಬಾಳ ಫ್ಲೈ ಓವರ್‌ನ ಕೆ.ಆರ್. ಪುರಂ ಅಪ್ ರ‍್ಯಾಂಪ್ ಮುಚ್ಚುತ್ತಿರುವುದರಿಂದ ಕೆ.ಆರ್‌.ಪುರಂ., ನಾಗವಾರ ಕಡೆಯಿಂದ ಹೆಬ್ಬಾಳ ಮೇಲ್ಸೇತುವೆ ಕಡೆಗೆ ಬರುವ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ಮೇಲ್ಸೇತುವೆ ಮೇಲೆ ನಿರ್ಬಂಧಿಸಲಾಗಿದೆ.

ನಿರ್ಬಂಧಿಸಲಾದ ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

  1. ನಾಗವಾರ(ಔಟರ್‌ರಿಂಗ್ ರಸ್ತೆ) ಕಡೆಯಿಂದ ನಗರದ ಒಳಗೆ ಮೇಖ್ರಿ ಸರ್ಕಲ್ ಮುಖಾಂತರ ಸಂಚರಿಸುವ ವಾಹನಗಳು ಹೆಬ್ಬಾಳ ಸರ್ಕಲ್‌ನಲ್ಲಿ ಫ್ಲೈ ಓವರ್ ಕೆಳಗಿನಿಂದ ಬಲ ತಿರುವು ಪಡೆದು ಕೊಡಿಗೇಹಳ್ಳಿ ಜಂಕ್ಷನ್ ಬಳಿ ಯೂ ಟರ್ನ್ ಪಡೆದು ಸರ್ವಿಸ್ ರಸ್ತೆಯಿಂದ ಹೆಬ್ಬಾಳ ಫ್ಲೈ ಓವರ್‌ನ ರ‍್ಯಾಂಪ್ ಮುಖೇನ ನಗರದ ಕಡೆಗೆ ಚಲಿಸಬಹುದಾಗಿರುತ್ತದೆ.
  2. ಕೆ.ಆರ್. ಪುರಂ, ನಾಗವಾರ ಕಡೆಯಿಂದ ನಗರದ ಕಡೆಗೆ ಬರುವ ವಾಹನಗಳು ಈ ಕೆಳಕಂಡ ರಸ್ತೆಗಳ ಮೂಲಕ ನಗರ ಪ್ರವೇಶಿಸಬಹುದಾಗಿದೆ.
    ಐ.ಒ.ಸಿ. ಮುಕುಂದ ಥಿಯೇಟರ್ ರಸ್ತೆ,
    ಲಿಂಗರಾಜಪುರ ಮೇಲ್ಸೇತುವೆ ಮಾರ್ಗ,
    ನಾಗವಾರ ಟ್ಯಾನರಿ ರಸ್ತೆ ಮಾರ್ಗವಾಗಿ
  3. ಹೆಗಡೆನಗರ-ಥಣಿಸಂದ್ರ ಕಡೆಯಿಂದ ಬರುವ ವಾಹನಗಳು ಜಿ.ಕೆ.ವಿಕೆ-ಜಕ್ಕೂರು ರಸ್ತೆ ಮೂಲಕ ನಗರ ಪ್ರವೇಶಿಸಬಹುದಾಗಿದೆ.
  4. ಕೆ.ಆ‌ರ್.ಪುರಂ ಕಡೆಯಿಂದ ಹೆಬ್ಬಾಳ ಮಾರ್ಗವಾಗಿ ಯಶವಂತಪುರ ಕಡೆಗೆ ಚಲಿಸುವ ವಾಹನಗಳು ಹೆಬ್ಬಾಳ ಫ್ಲೈ ಓವರ್ ಕೆಳಗಡೆ ನೇರವಾಗಿ ಬಿ.ಇ.ಎಲ್. ಸರ್ಕಲ್ ತಲುಪಿ ಎಡತಿರುವು ಪಡೆದು ಸದಾಶಿವನಗರ ಜಂಕ್ಷನ್‌ನಲ್ಲಿ ಬಲತಿರುವು ಪಡೆದು ಐ.ಐ.ಎಸ್.ಸಿ. ಮುಖಾಂತರ ಚಲಿಸಬಹುದಾಗಿದೆ.
  5. ಕೆ.ಆ‌ರ್.ಪುರಂ, ಹೆಣ್ಣೂರು, ಎಚ್.ಆರ್.ಬಿ.ಆರ್. ಲೇಔಟ್, ಕೆ.ಜಿ.ಹಳ್ಳಿ, ಬಾಣಸವಾಡಿ ಕಡೆಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆ ಸಂಚರಿಸುವ ವಾಹನಗಳು ಹೆಣ್ಣೂರು-ಬಾಗಲೂರು ರಸ್ತೆಯ ಮುಖಾಂತರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಬಹುದಾಗಿದೆ.

Continue Reading

ರಾಜಕೀಯ

HD Kumaraswamy: ಎಚ್‌ಡಿಕೆ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಿಕೊಳ್ಳಲಿ: ಡಿಕೆ ಶಿವಕುಮಾರ್ ತಿರುಗೇಟು

HD Kumaraswamy: ಬೇರೆಯವರಿಂದ ಮಾತನಾಡಿಸುವ, ಪ್ರತಿಭಟನೆ ಮಾಡಿಸುವ, ಬೇರೆಯವರ ಮೇಲೆ ಅನಗತ್ಯ ಆರೋಪ ಮಾಡುವ ಅಗತ್ಯ ನನಗಿಲ್ಲ. ನಾನು ಚುನಾವಣಾ ಪ್ರಚಾರದಲ್ಲಿ ನಿರತನಾಗಿದ್ದೇನೆ. ನಾನು ರಾಜಕೀಯ ಪಕ್ಷದ ಅಧ್ಯಕ್ಷ. ಈ ಪ್ರಕರಣದಲ್ಲಿ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ. ಈಗ ಆ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ. ಕುಮಾರಸ್ವಾಮಿ ಅವರಿಗೆ ಯಾರನ್ನು ಹಿಡಿದು ಬಡಿದು ಒಳಗೆ ಹಾಕಬೇಕು ಅನ್ನಿಸುತ್ತದೋ ಅವರನ್ನು ಒಳಗೆ ಹಾಕಿಸಲಿ. ತಿಮಿಂಗಿಲಗಳನ್ನು ಅವರೇ ನುಂಗಿಕೊಳ್ಳಲಿ ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

VISTARANEWS.COM


on

DK Shivakumar hits back at HD Kumaraswamy
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜಕೀಯ ನಾಯಕರ ವಾಕ್ಸಮರ ಜೋರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಯ ಕಿಡ್ನ್ಯಾಪ್‌ ಆರೋಪದ ಮೇಲೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಬಂಧಿಸಿರುವುದು ರಾಜಕೀಯ ಪಿತೂರಿಯಿಂದ ಕೂಡಿದೆ. ಇದರ ಹಿಂದೆ ದೊಡ್ಡ ತಿಮಿಂಗಿಲವೇ ಇದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಡಿಕೆಶಿ ವಿರುದ್ಧ ಪರೋಕ್ಷ ಚಾಟಿ ಬೀಸಿದ್ದರು. ಇದಕ್ಕೆ ಈಗ ತಿರುಗೇಟು ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar), ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿಯಲಿ, ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ ಎಂದು ಹೇಳಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಕುಮಾರಸ್ವಾಮಿ ಅವರಿಗೆ ಯಾರನ್ನು ಹಿಡಿದು ಬಡಿದು ಒಳಗೆ ಹಾಕಬೇಕು ಅನ್ನಿಸುತ್ತದೋ ಅವರನ್ನು ಒಳಗೆ ಹಾಕಿಸಲಿ. ತಿಮಿಂಗಿಲಗಳನ್ನು ಅವರೇ ನುಂಗಿಕೊಳ್ಳಲಿ. ನಾನು ನಿರ್ದೇಶಕನೂ ಅಲ್ಲ, ನಿರ್ಮಾಪಕನೂ ಅಲ್ಲ. ನಾನು ಕೇವಲ ಪ್ರದರ್ಶಕ ಅಷ್ಟೇ ಎಂದು ಮಾರ್ಮಿಕವಾಗಿ ಹೇಳಿದರು.

ನನ್ನ ಹಸ್ತಕ್ಷೇಪವಿದ್ದರೆ ಬೆಲೆ ತೆರಲು ಸಿದ್ಧ

ಶಾಸಕರು, ಸಚಿವರಿಂದ ಮಾತನಾಡಿಸುತ್ತಿರುವವರು ಯಾರು ಎಂದು ಎಚ್‌.ಡಿ. ಕುಮಾರಸ್ವಾಮಿ ಅವರ ಪರೋಕ್ಷ ಆರೋಪದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಬೇರೆಯವರಿಂದ ಮಾತನಾಡಿಸುವ, ಪ್ರತಿಭಟನೆ ಮಾಡಿಸುವ, ಬೇರೆಯವರ ಮೇಲೆ ಅನಗತ್ಯ ಆರೋಪ ಮಾಡುವ ಅಗತ್ಯ ನನಗಿಲ್ಲ. ನಾನು ಚುನಾವಣಾ ಪ್ರಚಾರದಲ್ಲಿ ನಿರತನಾಗಿದ್ದೇನೆ. ನಾನು ರಾಜಕೀಯ ಪಕ್ಷದ ಅಧ್ಯಕ್ಷ. ಈ ಪ್ರಕರಣದಲ್ಲಿ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ. ಈಗ ಆ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದು ಹೇಳಿದರು.

ರೇವಣ್ಣ ಸ್ಥಿತಿ ನೋಡಿ ಬೇಸರವಾಗುತ್ತದೆ

ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ರೇವಣ್ಣ ಅವರನ್ನು ಬಂಧಿಸಲಾಗಿದೆ ಎಂಬ ಆರೋಪದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಎಚ್‌.ಡಿ. ರೇವಣ್ಣ ಅವರ ಪರಿಸ್ಥಿತಿ ನೋಡಿ ನನಗೂ ಬೇಸರವಾಗುತ್ತಿದೆ. ಅವರದು ದೊಡ್ಡ ಕುಟುಂಬ, ಈ ರೀತಿ ಆಗಬಾರದು ಎಂದು ಬಯಸುತ್ತೇನೆ. ಅವರು ನನಗೆ ಏನಾದರೂ ಬಯಸಲಿ. ಆದರೆ, ನಾನು ಮಾತ್ರ ಅವರಿಗೆ ಕೆಟ್ಟದ್ದು ಬಯಸುವುದಿಲ್ಲ. ನಾನು ಪ್ರಕೃತಿ ನಿಯಮ, ನ್ಯಾಯದ ಮೇಲೆ ನಂಬಿಕೆ ಇಟ್ಟವನು. ನಾನು ರಾಜಕೀಯ ಷಡ್ಯಂತ್ರಕ್ಕೆ ಗುರಿ ಆಗಿದ್ದವನೇ. ಜತೆಗೆ ಅದರ ನೋವು ಅನುಭವಿಸಿದವನೇ. ಆ ವೇಳೆಯಲ್ಲಿ ನಾನು ಎಷ್ಟು ಗಟ್ಟಿಯಾಗಿ, ಧೈರ್ಯವಾಗಿ, ಆತ್ಮವಿಶ್ವಾಸದಿಂದ ಇದ್ದೆ ಎಂಬುದು ನನಗೆ ಮಾತ್ರ ಗೊತ್ತಿದೆ. ದೇವರು ನನಗೆ ಎಲ್ಲ ರೀತಿಯ ರಕ್ಷಣೆ ನೀಡಿದ್ದು, ನಾನು ಬೇರೆಯವರಿಗೆ ಕೆಟ್ಟದು ಬಯಸುವುದಿಲ್ಲ. ಆದರೆ, ನನ್ನ ಬ್ರದರ್ ಕುಮಾರಣ್ಣನಿಗೆ ವಿಧಾನಸಭೆಯಲ್ಲಿ ಉತ್ತರ ನೀಡುತ್ತೇನೆ ಎಂದು ಹೇಳಿದರು.

ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ (HD Revanna Bail) ಅವರಿಗೆ ಜಾಮೀನು ಸಿಕ್ಕಿದೆ ನಿಜ. ಆದರೆ, ಇದಕ್ಕೆ ನಾನು ಸಂತೋಷ ಪಡಲಾರೆ. ಪಟಾಕಿ ಸಿಡಿಸಿ ಸಂಭ್ರಮಿಸುವ ಸಮಯವೂ ಇದಲ್ಲ ಎಂದು ಕಾರ್ಯಕರ್ತರಿಗೆ ಹೇಳಬಯಸುತ್ತೇನೆ. ತಪ್ಪಿತಸ್ಥರಿಗೆ ಶಿಕ್ಷೆ ಆದಾಗ ಸಂಭ್ರಮ ಪಡಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್‌.ಡಿ. ಕುಮಾರಸ್ವಾಮಿ, ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ವಿಡಿಯೊ ಲೀಕ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಸರಿಯಾದ ತನಿಖೆಯನ್ನು ನಡೆಸುತ್ತಿಲ್ಲ. ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ ಅವರು ಕೂಡ ಎಸ್‌ಐಟಿಯಿಂದ ಆರೋಪ ಎದುರಿಸಬೇಕಾಯಿತು. ಅವರಿಗೆ ನಿನ್ನೆ (ಸೋಮವಾರ – ಮೇ 13) ಜಾಮೀನು ಸಿಕ್ಕಿದೆ. ಅದಕ್ಕೆ ನಾನು ಸಂತೋಷವನ್ನು ಪಡುವುದಿಲ್ಲ. ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆದಾಗ ಸಂಭ್ರಮವನ್ನು ಪಡೋಣ. ಈಗ ನಡೆದಿರುವುದು ರಾಜ್ಯವೇ ತಲೆ ತಗ್ಗಿಸುವ ವಿಚಾರವಾಗಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಎಸ್‌ಐಟಿ ಅಧಿಕಾರಿಗಳ ಕಾರ್ಯವೈಖರಿ ಹೇಗಿದೆ? ಎಸ್‌ಐಟಿ ಅಧಿಕಾರಿಗಳೇ ನಿಮಗೂ ಅಕ್ಕ – ತಂಗಿ, ತಂದೆ – ತಾಯಿ ಇರುತ್ತಾರೆ. ಚುನಾವಣೆ ಹಿನ್ನೆಲೆಯಲ್ಲಿ ಯಾರು ಪೆನ್ ಡ್ರೈವ್ ಹಂಚಿದರೋ ಅವರನ್ನು ಇದುವರೆಗೂ ಮುಟ್ಟಿಲ್ಲ. ಹಾಸನ ಜಿಲ್ಲಾದ್ಯಂತ ಪೆನ್‌ ಡ್ರೈವ್‌ ಅನ್ನು ರಿಲೀಸ್‌ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್‌ನ ನವೀನ್‌ ಗೌಡ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕುತ್ತಾನೆ. ಆದರೆ, ಇಲ್ಲಿಯವರೆಗೆ ಆತನನ್ನು ಮುಟ್ಟಿಲ್ಲ. ಈ ಘಟನೆಗೆ ಕಾರಣವಾದ ವ್ಯಕ್ತಿಯನ್ನೂ ಹಿಡಿಯಲಿಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದರು.

ಸರ್ಕಾರದ ಜವಾಬ್ದಾರಿ ಅದು

ಬಿಜೆಪಿಯ ಮಾಜಿ ಶಾಸಕರೊಬ್ಬರ ಎಡಬಲಗಳನ್ನು ಹಿಡಿಯಲಾಗಿದೆ. ಇನ್ನೊಂದು ವಾರದಲ್ಲಿ ಮುಖ್ಯ ವಾದವರನ್ನು ಹಿಡಿಯಲಾಗುತ್ತೆ ಅಂದಿದ್ದಾರೆ. ಹಾಗಾದರೆ ಎಸ್ಐಟಿ ತನಿಖೆ ಹೇಗೆ ಸೋರಿಕೆ ಆಗ್ತಾ ಇದೆ? ಎಫ್‌ಐಆರ್ ಆಗಿರುವ ಒಬ್ಬ ವ್ಯಕ್ತಿಯನ್ನೂ ಹಿಡಿಯಲಿಲ್ಲ. ಖಾಸಗಿ ಚಾನಲ್‌ನಲ್ಲಿ ಒಂದೂವರೆ ಗಂಟೆಗಳ ಕಾಲ ಸಂದರ್ಶನ ಕೊಡುತ್ತಾರೆ. ನವೀನ್ ಗೌಡ ನಮ್ಮ ಪಕ್ಷದ ಶಾಸಕರಿಗೆ ಪೆನ್ ಡ್ರೈವ್ ಕೊಟ್ಟಿದ್ದೇನೆ ಎಂದು ಹೇಳುತ್ತಾನೆ. ಕೆಲವೇ ಕ್ಷಣಗಳಲ್ಲಿ ಪೆನ್ ಡ್ರೈವ್ ಬರುತ್ತದೆ ಅಂತಾ ಪೋಸ್ಟ್ ಮಾಡುತ್ತೇನೆ ಎಂದು ಹೇಳಿಕೆ ಕೊಟ್ಟಿದ್ದ ಆತನನ್ನು ಹಿಡಿದಿರಾ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ವಿಡಿಯೊದಲ್ಲಿ ಬಂದಂತಹ ಮಹಿಳೆಯರ ಕುಟುಂಬಗಳ ಬಗ್ಗೆ ಸರ್ಕಾರಕ್ಕೆ ಅನುಕಂಪ‌ ಇದೆಯಾ? ಇದರಲ್ಲಿ ಯಾವುದನ್ನೂ ವಹಿಸಿಕೊಳ್ಳುವ ಪ್ರಶ್ನೆ ಇಲ್ಲ. ಈಗಿನ ಮಾಹಿತಿ ತಂತ್ರಜ್ಞಾನದಲ್ಲಿ ಅಪರಾಧಿ, ನಿರಪರಾಧಿ ಆಗುತ್ತಾನೆ, ನಿರಪರಾಧಿ ಅಪರಾಧಿ ಆಗುತ್ತಾನೆ. ಸರ್ಕಾರಕ್ಕೆ ಬದ್ಧತೆ ಇದ್ದರೆ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸಲಿ. ನನ್ನ ಮೇಲೂ ಕಾಂಗ್ರೆಸ್‌ನವರು ಅಪಪ್ರಚಾರ ಮಾಡುತ್ತಿದ್ದಾರೆ. ಎಚ್.ಡಿ. ರೇವಣ್ಣ ಅವರ ಕುಟುಂಬವನ್ನು ಮುಗಿಸಲು ನಾನು ಪ್ರಯತ್ನ ಪಡುತ್ತಿರುವುದಾಗಿ ಸುಳ್ಳು ಹೇಳುತ್ತಿದ್ದಾರೆ.

ನಾನು ನ್ಯಾಯದ ಪರ, ಮಹಿಳೆಯರ ಪರ ಇದ್ದೇನೆ. ಈ ವಿಡಿಯೊದಲ್ಲಿ ಆ ವ್ಯಕ್ತಿಯ ಯಾವುದೇ ಚಿತ್ರಣ ಇಲ್ಲ ಅಂತ ಪತ್ರಿಕೆಯೊಂದು ಬರೆದಿದೆ. ಅಲ್ಲಿಗೆ ಈ ಪ್ರಕರಣ ಎಲ್ಲಿಗೆ ಹೋಗುತ್ತದೆ? ಎಂದು ಎಚ್.ಡಿ. ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.

ಹೆದರಿಸಿ ದೂರು ಪಡೆಯಲು ಯತ್ನ

ಎಚ್.ಡಿ. ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತವಾಗಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ಈ ರೀತಿ ಮಾಡಿದ್ದಾರೆ. ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಈಗ ಕೇಸ್ ಹಾಕಿ ಬಂಧನ ಮಾಡಿದ್ದು ಏಕೆ? ಒಂದು ತಿಂಗಳಿನಿಂದ ಏನೇನೆಲ್ಲ ಬೆಳವಣಿಗೆ ಆಯಿತು? ದೊಡ್ಡ ತಿಮಿಂಗಲದ ಆಡಿಯೊ ಬಿಟ್ಟರು ಎಂದು ದೇವರಾಜೇಗೌಡ ಅವರ ಬಂಧನ ಮಾಡಿದ್ದಾರಾ? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಪರೋಕ್ಷವಾಗಿ ಆಕ್ರೋಶವನ್ನು ಹೊರಹಾಕಿದರು. ಅಲ್ಲದೆ, ದೊಡ್ಡ ತಿಮಿಂಗಿಲವು ಸರ್ಕಾರದಲ್ಲಿದೆ. ಆ ದೊಡ್ಡ ತಿಮಿಂಗಲವನ್ನು ಹಿಡಿಯಲಾಗದೇ ಇದ್ದರೆ ಸಣ್ಣ ತಿಮಿಂಗಲಗಳನ್ನು ಹಿಡಿಯಲಾಗುತ್ತದೆಯೇ? ಈ ಸರ್ಕಾರದಲ್ಲಿ ಹಲವಾರು ತಪ್ಪುಗಳು ನಡೆದಿವೆ. ಎಚ್.ಡಿ. ರೇವಣ್ಣ ಪ್ರಕರಣದಲ್ಲಿ ನಮ್ಮ ಕುಟುಂಬವನ್ನು ಟಾರ್ಗೆಟ್‌ ಮಾಡಲಾಗಿದೆ ಎಂದು ಕಿಡಿಕಾರಿದರು.

ಸಂತ್ರಸ್ತೆಯರಿಗೆ ನ್ಯಾಯ ಸಿಗುವಂತೆ ಆಗಬೇಕು. ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಒಂದು ಮಹಿಳೆ ದೂರು ಕೊಟ್ಟಿದ್ದು, ಆ ಹೆಣ್ಣುಮಕ್ಕಳಿಗೆ ಹೆದರಿಸಿ‌ ದೂರು ಪಡೆಯಲು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಇದೆಲ್ಲ ಕೆಲವೇ ದಿನಗಳಲ್ಲಿ ಹೊರಗೆ ಬರಲಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಗೃಹ ಸಚಿವರಿಗೆ ನೇರ ಪ್ರಶ್ನೆ

ಈ ಪ್ರಕರಣದ ಬಗ್ಗೆ ಬೇಕಾಬಿಟ್ಟಿ ಹೇಳಿಕೆ ಕೊಟ್ಟರೆ ಅಂಥವರನ್ನು ವಿಚಾರಣೆಗೆ ಕರೆಸಬೇಕಾಗುತ್ತದೆ ಎಂಬ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ಗೆ ತಿರುಗೇಟು ನೀಡಿರುವ ಎಚ್.ಡಿ. ಕುಮಾರಸ್ವಾಮಿ, ಈ ಪ್ರಕರಣದ ಬಗ್ಗೆ, ವಿಡಿಯೊ ಬಗ್ಗೆ ಹೇಳಿಕೆ ನೀಡಿದ್ದ ನವೀನ್‌ ಗೌಡ ಸೇರಿ ಉಳಿದವರ ಮೇಲೆ ಯಾವ ಕ್ರಮವನ್ನು ತೆಗೆದುಕೊಂಡಿದ್ದೀರಿ? ವಿದೇಶಕ್ಕೆ ಹೋಗಿರುವ ಪ್ರಜ್ವಲ್ ಅವರನ್ನು ಏಕೆ ಕರೆಸಿಲ್ಲ? ಎಂದು ಪ್ರಶ್ನೆ ಮಾಡಿದರು.

ಪ್ರಜ್ವಲ್‌ ರೇವಣ್ಣ ನನಗೆ ಅಣ್ಣನ ಮಗನೇ ಇರಬಹುದು. ಆದರೆ, ಅವನು ಹೋಗುವಾಗ ನನ್ನನ್ನು ಕೇಳಿ ಹೋಗುತ್ತಿದ್ದನಾ? ಬೆಳೆದ ಮಕ್ಕಳು ನಮ್ಮನ್ನು ಕೇಳಿ ಹೋಗ್ತಾರಾ.? ಎಂದು ಎಚ್.ಡಿ. ಕುಮಾರಸ್ವಾಮಿ ಕೇಳಿದರು.

ಇದನ್ನೂ ಓದಿ: HD Revanna Bail: ರೇವಣ್ಣಗೆ ಜಾಮೀನು; ನಾಳೆ 11 ದಿನದ ವನವಾಸದಿಂದ ಮುಕ್ತಿ; ಬೇಲ್‌ ಸಿಗಲು ಕಾರಣವೇನು?

ಇನ್ನೆರಡು ದಿನದಲ್ಲಿ ಪರಿಷತ್‌ ಅಭ್ಯರ್ಥಿ ಆಯ್ಕೆ

ಪರಿಷತ್ ಚುನಾವಣೆಗೆ ಸಂಬಂಧಪಟ್ಟಂತೆ ಮೈತ್ರಿ ಒಪ್ಪಂದದ ಪ್ರಕಾರ ಜೆಡಿಎಸ್‌ಗೆ ಇನ್ನೊಂದು ಸೀಟ್‌ ಅನ್ನು ಬಿಟ್ಟುಕೊಡಲಾಗಿದೆ. ಅದಕ್ಕೆ ಸೂಕ್ತ ಅಭ್ಯರ್ಥಿಯ ಆಯ್ಕೆ ಆಗಬೇಕಿದೆ. ಇನ್ನೆರಡು ದಿನಗಳಲ್ಲಿ ಸಭೆ ಕರೆದು ಈ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

Continue Reading

ಪ್ರಮುಖ ಸುದ್ದಿ

PM Narendra Modi: ನಾಮಪತ್ರ ಸಲ್ಲಿಕೆ ವೇಳೆ ಪಿಎಂ ಮೋದಿ ಪಕ್ಕದಲ್ಲಿ ಕುಳಿತಿದ್ದ ಸಾಧು ಯಾರು?

PM Narendra Modi: ಗಣೇಶ್ವರ ಶಾಸ್ತ್ರಿ ಅವರ ಪೂರ್ವಜರು ಗಂಗಾನದಿಯ ದಡದ ಕಾಶಿಯ ರಾಮಘಾಟ್ ಪ್ರದೇಶದಲ್ಲಿ ನೆಲೆಸಿದ್ದಾರೆ. ಗಣೇಶ್ವರ ಶಾಸ್ತ್ರಿ ಹುಟ್ಟಿದ್ದು ಇಲ್ಲೇ. ಇವರ ಕುಟುಂಬ ದಕ್ಷಿಣ ಭಾರತದಿಂದ ಬಂದು ಕಾಶಿಯಲ್ಲಿ ನೆಲೆಸಿದೆ. ಅವರ ಹಿರಿಯ ಸಹೋದರ, ಗೌರವಾನ್ವಿತ ವಿದ್ವಾಂಸರಾದ ಪಂಡಿತ ವಿಶ್ವೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ವಾಸಿಸುತ್ತಿದ್ದಾರೆ. ಶೈಕ್ಷಣಿಕ ಶ್ರೇಷ್ಠತೆ ಈ ಕುಟುಂಬದ ಪರಂಪರೆಯಾಗಿದೆ.

VISTARANEWS.COM


on

pm narendra modi nomination 2
Koo

ವಾರಾಣಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಮಂಗಳವಾರ ವಾರಾಣಾಸಿ ಲೋಕಸಭೆ ಕ್ಷೇತ್ರದಿಂದ ನಾಮಪತ್ರ (Narendra Modi nomination) ಸಲ್ಲಿಸಿದರು. ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅವರ ಜೊತೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಸೇರಿದಂತೆ ಇನ್ನೂ ಹಲವರಿದ್ದರು. ಆದರೆ ಮುಖ್ಯವಾಗಿ ಒಂದು ಮುಖ ಎಲ್ಲರ ಗಮನ ಸೆಳೆಯಿತು. ಅದು ಮೋದಿಯವರ ಪಕ್ಕದಲ್ಲಿಯೇ ಕುಳಿತಿದ್ದ, ಗಡ್ಡಧಾರಿ ಸಾಧು. ಮೋದಿ ಹಾಗೂ ಈ ವ್ಯಕ್ತಿ ಆತ್ಮೀಯವಾಗಿ ಮಾತನಾಡಿಕೊಳ್ಳುತ್ತಿದ್ದುದು ಕ್ಯಾಮೆರಾದಲ್ಲಿ ಸೆರೆಯಾಯಿತು.

ಹಾಗಾದರೆ ಅವರು ಯಾರು? ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ಸಲ್ಲಿಸಿದ ನಾಮಪತ್ರವನ್ನು ಅನುಮೋದಿಸಿದ ನಾಲ್ವರಲ್ಲಿ ಈ ಸಾಧುವೂ ಒಬ್ಬರು. ಅವರ ಹೆಸರು ಪಂಡಿತ ಗಣೇಶ್ವರ ಶಾಸ್ತ್ರಿ (Pandit Ganeshwar Shastri). ಇತರ ಮೂವರೆಂದರೆ ಬೈಜನಾಥ್ ಪಟೇಲ್, ಲಾಲ್‌ಚಂದ್ ಕುಶ್ವಾಹಾ ಮತ್ತು ಸಂಜಯ್ ಸೋಂಕರ್.

ಯಾರು ಈ ಗಣೇಶ್ವರ ಶಾಸ್ತ್ರಿ? ಇವರು ಇತ್ತೀಚೆಗೆ ನಡೆದ ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪ್ರಮುಖ ಪಾತ್ರ ವಹಿಸಿದ ಪ್ರಸಿದ್ಧ ವಿದ್ವಾಂಸರು. ವಿದ್ವಾಂಸ ರಾಜೇಶ್ವರ ಶಾಸ್ತ್ರಿಯವರ ಎರಡನೇ ಮಗ. ವಿದ್ವಾನ್‌ ಗಣೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ನೆಲೆಸಿದ್ದು, ಧರ್ಮ ಪ್ರಚಾರ ಮತ್ತು ಬೋಧನೆಗೆ ಜೀವನವನ್ನು ಸಮರ್ಪಿಸಿಕೊಂಡಿದ್ದಾರೆ. ಅವರು ಸಾಂಗ್ವೇದ ವಿದ್ಯಾಲಯದಲ್ಲಿ ಗೀರ್ವಾಣವಾಗ್‌ವರ್ಧಿನಿ ಸಭೆಯ ನಿರ್ಧಾರಗಳನ್ನು ಶ್ರದ್ಧೆಯಿಂದ ಅನುಸರಿಸುತ್ತಾರೆ ಮತ್ತು ಜ್ಯೋತಿಷ್ಯ, ಆಯುರ್ವೇದ ಮತ್ತು ಆಚರಣೆಗಳಲ್ಲಿ ತಮ್ಮ ಪರಿಣತಿಯ ಮೂಲಕ ಜನರಿಗೆ ಸಹಾಯ ಮಾಡುತ್ತಿರುತ್ತಾರೆ.

ಜನವರಿ 22ರಂದು ನಡೆದ ಅಯೋಧ್ಯೆ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭವು ಪಂಡಿತ ಗಣೇಶ್ವರ ಶಾಸ್ತ್ರಿ ದ್ರಾವಿಡ ಅವರು ನಿರ್ಧರಿಸಿದ 84 ಸೆಕೆಂಡುಗಳ ಕಾಲ ಶುಭ ಮುಹೂರ್ತದಲ್ಲಿ ನಡೆದಿತ್ತು. ಈ ಸಮಯವನ್ನು ರಾಮ ಮಂದಿರದ ಅಡಿಪಾಯ ಹಾಕಲು ಸಹ ಬಳಸಲಾಗಿತ್ತು. ಇದು ಈ ಮಂದಿರ ಯೋಜನೆಯಲ್ಲಿ ಈ ವಿದ್ವಾಂಸರು ಎಷ್ಟು ಆಳವಾಗಿ ತೊಡಗಿಕೊಂಡಿದ್ದಾರೆ ಎಂಬುದನ್ನು ಎತ್ತಿ ತೋರಿಸುತ್ತದೆ.

ಗಣೇಶ್ವರ ಶಾಸ್ತ್ರಿ ಅವರ ಪೂರ್ವಜರು ಗಂಗಾನದಿಯ ದಡದ ಕಾಶಿಯ ರಾಮಘಾಟ್ ಪ್ರದೇಶದಲ್ಲಿ ನೆಲೆಸಿದ್ದಾರೆ. ಗಣೇಶ್ವರ ಶಾಸ್ತ್ರಿ ಹುಟ್ಟಿದ್ದು ಇಲ್ಲೇ. ಇವರ ಕುಟುಂಬ ದಕ್ಷಿಣ ಭಾರತದಿಂದ ಬಂದು ಕಾಶಿಯಲ್ಲಿ ನೆಲೆಸಿದೆ. ಅವರ ಹಿರಿಯ ಸಹೋದರ, ಗೌರವಾನ್ವಿತ ವಿದ್ವಾಂಸರಾದ ಪಂಡಿತ ವಿಶ್ವೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ವಾಸಿಸುತ್ತಿದ್ದಾರೆ. ಶೈಕ್ಷಣಿಕ ಶ್ರೇಷ್ಠತೆ ಈ ಕುಟುಂಬದ ಪರಂಪರೆಯಾಗಿದೆ.

ಮೋದಿ ನಾಮಪತ್ರ ಅನುಮೋದಿಸಿದ ಇನ್ನು ಮೂವರೆಂದರೆ ಬೈಜನಾಥ್ ಪಟೇಲ್, ಹಿರಿಯ RSS ಸ್ವಯಂಸೇವಕ, OBC ಸಮುದಾಯಕ್ಕೆ ಸೇರಿದವರು. ಲಾಲ್‌ಚಂದ್ ಕುಶ್ವಾಹಾ, ಇವರು ಕೂಡ ಒಬಿಸಿ ಸಮುದಾಯದವರು. ಸಂಜಯ್ ಸೋಂಕರ್, ಇವರು ದಲಿತ ಸಮುದಾಯದಿಂದ ಬಂದವರು.

ಪ್ರತಿಯೊಬ್ಬ ಚುನಾವಣಾ ಅಭ್ಯರ್ಥಿಯು ಅನುಮೋದಕರನ್ನು ಹೊಂದಿರಬೇಕು. ಚುನಾವಣಾ ಆಯೋಗದ ನಿಯಮಗಳ ಪ್ರಕಾರ, ಇವರು ಅಭ್ಯರ್ಥಿಯ ನಾಮನಿರ್ದೇಶನವನ್ನು ಅನುಮೋದಿಸುವ ಅಸೆಂಬ್ಲಿ ಅಥವಾ ಸಂಸದೀಯ ಕ್ಷೇತ್ರದ ನೋಂದಾಯಿತ ಮತದಾರರಾಗಿರಬೇಕು. ಅಭ್ಯರ್ಥಿಯ ನಾಮನಿರ್ದೇಶನ ಪತ್ರಗಳಿಗೆ ಪ್ರಸ್ತಾವನೆದಾರರು ಮತ್ತು ಅಭ್ಯರ್ಥಿ ಸಹಿ ಮಾಡಬೇಕು. ಜನತಾ ಪ್ರಾತಿನಿಧ್ಯ ಕಾಯಿದೆ, 1951ರ ಪ್ರಕಾರ, ಮಾನ್ಯತೆ ಪಡೆದ ರಾಜ್ಯ ಅಥವಾ ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗೆ ಒಬ್ಬ ಅನುಮೋದಕರ ಅಗತ್ಯವಿರುತ್ತದೆ. ಆದರೆ ಸ್ವತಂತ್ರ ಅಥವಾ ಗುರುತಿಸದ ಪಕ್ಷದ ಅಭ್ಯರ್ಥಿಗೆ 10 ಜನರ ಅಗತ್ಯವಿದೆ.

ಇದನ್ನೂ ಓದಿ: PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

Continue Reading

ಉದ್ಯೋಗ

Job News: ಅಟೆನ್ಷನ್‌ ಪ್ಲೀಸ್‌; ಸರ್ಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಇಂದು, ನಾಳೆ ಕೊನೆಯ ದಿನ

Job News: ರಾಜ್ಯ ಮತ್ತು ಕೇಂದ್ರ ಸರ್ಕಾರದ ಸುಮಾರು 6,740 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಗಮನಿಸಿ ಈ ಪೈಕಿ ಕೆಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನವಾಗಿದ್ದರೆ ಕೆಲವು ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ನಾಳೆಗೆ ಕೊನೆಗೊಳ್ಳುತ್ತದೆ. ಹೀಗಾಗಿ ಬೇಗ ಬೇಗ ಅಪ್ಲೈ ಮಾಡಿ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ವಿವರ ಇಲ್ಲಿದೆ.

VISTARANEWS.COM


on

Job News
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಪಡೆದುಕೊಳ್ಳಬೇಕು ಎನ್ನುವುದು ಬಹತೇಕರ ಕನಸು. ಅದಕ್ಕಾಗಿ ಅನೇಕರು ಹಲವು ವರ್ಷಗಳಿಂದ ಕಠಿಣ ತಯಾರಿಯಲ್ಲಿ ತೊಡಗಿರುತ್ತಾರೆ. ಇದೀಗ ಅಂತಹದ್ದೊಂದು ಸುವರ್ಣಾವಕಾಶ ಬಂದಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಸುಮಾರು 6,740 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಗಮನಿಸಿ ಈ ಪೈಕಿ ಕೆಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನವಾಗಿದ್ದರೆ ಕೆಲವು ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ನಾಳೆಗೆ ಕೊನೆಗೊಳ್ಳುತ್ತದೆ. ಹೀಗಾಗಿ ಬೇಗ ಬೇಗ ಅಪ್ಲೈ ಮಾಡಿ (Job News).

ಗ್ರೂಪ್‌ ಬಿ ಹುದ್ದೆಗಳು

ರಾಜ್ಯ ಸರ್ಕಾರದ 9 ಇಲಾಖೆಗಳ ಉಳಿಕೆ ಮೂಲ ವೃಂದ ಹಾಗೂ ಎಚ್‌ಕೆ ವೃಂದದ ವಿವಿಧ ಗ್ರೂಪ್‌ ಬಿ 327 ಹುದ್ದೆಗಳ ಅರ್ಜಿಗೆ ಇಂದೇ (14-05-2024) ಕೊನೆ ದಿನವಾಗಿದೆ. ಇಂದು ರಾತ್ರಿ 11.59 ಗಂಟೆಯೊಳಗೆ ಅರ್ಜಿ ಸಲ್ಲಿಸಲು ಸಮಯಾವಕಾಶ ಇದೆ. ತಾಂತ್ರಿಕ ಹಾಗೂ ತಾಂತ್ರಿಕೇತರ ಪದವಿ, ಸ್ನಾತಕೋತ್ತರ ಪದವಿ ಪಾಸ್‌ ಮಾಡಿದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಸಿಎಪಿಎಫ್‌ 506 ಹುದ್ದೆಗಳು

ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC)ನ ಗಡಿ ಭದ್ರತಾ ಪಡೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಕೇಂದ್ರ ಮೀಸಲು ಪೊಲೀಸ್‌ ಪಡೆ, ಇಂಡೊ-ಟೆಬೆಟನ್ ಗಡಿ ಪೊಲೀಸ್‌ ಮತ್ತು ಸಶಸ್ತ್ರ ಸೀಮಾ ಬಲ ಪಡೆಗಳಲ್ಲಿನ 506 ಹುದ್ದೆಗಳಿಗೆ ಅಪ್ಲೈ ಮಾಡಲು ಇಂದು ಕೊನೆಯ ದಿನ (ಸಂಜೆ 6 ಗಂಟೆ). ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನ 4,660 ಹುದ್ದೆಗಳು

ರೈಲ್ವೆ ನೇಮಕಾತಿ ಮಂಡಳಿಯು ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನಲ್ಲಿ ಖಾಲಿ ಇರುವ ಬರೋಬ್ಬರಿ 4,660 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಇಂದೇ ಕೊನೆಯ ದಿನ. ಕಾನ್‌ಸ್ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳು ಇದಾಗಿದ್ದು, ಎಸ್ಸೆಸ್ಸೆಲ್ಸಿ ತೆರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

247 ಪಿಡಿಒ ಹುದ್ದೆಗಳು

ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಪಿಡಿಇ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ (ಮೇ 15) ಕೊನೆಯ ದಿನ. ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. 150 ಆರ್‌ಪಿಸಿ ಮತ್ತು 97 ಎಚ್‌ಕೆ ಹುದ್ದೆಗಳು ಸೇರಿ ಒಟ್ಟು 247 ಪೋಸ್ಟ್‌ಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಮೇ 15ರ ರಾತ್ರಿ 11 ಗಂಟೆವರೆಗೆ ಅವಕಾಶ ಇದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು

ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಫೆ. 20ರಂದು ಅಧಿಸೂಚನೆ ಹೊರಡಿಸಿತ್ತು. ಅದರಂತೆ ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ. ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಲುಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಟೆಕ್ಸ್‌ಟೈಲ್ಸ್‌ ಕಮಿಟಿಯಿಂದ 40 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೂ ಇದೆ ಪೋಸ್ಟಿಂಗ್‌

Continue Reading
Advertisement
Hebbal Flyover
ಪ್ರಮುಖ ಸುದ್ದಿ5 mins ago

Hebbal flyover: ಬಿಡಿಎ ಕಾಮಗಾರಿ; ಹೆಬ್ಬಾಳ ಮೇಲ್ಸೇತುವೆಗೆ ಕೆ.ಆರ್.ಪುರಂನಿಂದ ಬರುವ ವಾಹನಗಳಿಗೆ ನಿರ್ಬಂಧ

DK Shivakumar hits back at HD Kumaraswamy
ರಾಜಕೀಯ23 mins ago

HD Kumaraswamy: ಎಚ್‌ಡಿಕೆ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಿಕೊಳ್ಳಲಿ: ಡಿಕೆ ಶಿವಕುಮಾರ್ ತಿರುಗೇಟು

theft case
ಬೆಂಗಳೂರು30 mins ago

Theft Case : ಪಕ್ಕದ ಮನೆಗೆ ಕನ್ನ ಹಾಕಿದ ಚೋರ್‌ ದಂಪತಿ; ಕೆಲಸ ಕೊಟ್ಟ ಮಾಲೀಕನನ್ನೇ ದೋಚಿದ

America
ವಿದೇಶ30 mins ago

America: ಶ್ವೇತಭವನದಲ್ಲಿ ಮೊಳಗಿದ ಸಾರೆ ಜಹಾನ್‌ ಸೇ ಅಚ್ಚಾ..ವಿಡಿಯೋ ನೋಡಿ

KL Rahul
ಕ್ರೀಡೆ48 mins ago

KL Rahul: ರಾಹುಲ್ ಆರ್​ಸಿಬಿಗೆ ಬರಲ್ಲ; ಔತಣ ಕೂಟಕ್ಕೆ ಕರೆದು ತಬ್ಬಿಕೊಂಡ ಸಂಜೀವ್ ಗೋಯೆಂಕಾ

Actor Dhanush
ಸಿನಿಮಾ51 mins ago

Actor Dhanush: ಧನುಷ್-ಐಶ್ವರ್ಯಾ ಪರಸ್ಪರ ಮೋಸ ಮಾಡಿಕೊಂಡಿದ್ದಾರೆ ಎಂದ ಖ್ಯಾತ ಗಾಯಕಿ

pm narendra modi nomination 2
ಪ್ರಮುಖ ಸುದ್ದಿ55 mins ago

PM Narendra Modi: ನಾಮಪತ್ರ ಸಲ್ಲಿಕೆ ವೇಳೆ ಪಿಎಂ ಮೋದಿ ಪಕ್ಕದಲ್ಲಿ ಕುಳಿತಿದ್ದ ಸಾಧು ಯಾರು?

HD Revanna released from jail Revanna Go straight to HD Deve Gowda house
ರಾಜಕೀಯ57 mins ago

HD Revanna Released: ತಬ್ಬಿಕೊಂಡ ಎಚ್‌ಡಿಕೆ; ಕುಟುಂಬಸ್ಥರ ಕಂಡು ಕಣ್ಣೀರಿಟ್ಟ ರೇವಣ್ಣ, ಇಷ್ಟಾದರೂ ಬಾರದ ಭವಾನಿ!

Patanjali case
ದೇಶ1 hour ago

Patanjali Case: ಪತಂಜಲಿ ಕೇಸ್‌- ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌; IMA ಅಧ್ಯಕ್ಷನಿಗೆ ಛೀಮಾರಿ

T20 World Cup 2024
ಕ್ರೀಡೆ1 hour ago

T20 World Cup 2024: 20 ತಂಡಗಳ ಪೈಕಿ 19 ತಂಡ ಪ್ರಕಟ; ಪಾಕಿಸ್ತಾನ ಮಾತ್ರ ಬಾಕಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ4 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು5 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ12 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ22 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ22 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ22 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ23 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ23 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಟ್ರೆಂಡಿಂಗ್‌