horoscope today read your daily horoscope predictions for july 01, 2023Horoscope Today : ಜುಲೈ ತಿಂಗಳ ಮೊದಲ ದಿನ ಈ ಎಲ್ಲ ರಾಶಿಯವರಿಗೆ ಶುಭ ಫಲ Horoscope Today : ಜುಲೈ ತಿಂಗಳ ಮೊದಲ ದಿನ ಈ ಎಲ್ಲ ರಾಶಿಯವರಿಗೆ ಶುಭ ಫಲ Vistara News

ಪ್ರಮುಖ ಸುದ್ದಿ

Horoscope Today : ಜುಲೈ ತಿಂಗಳ ಮೊದಲ ದಿನ ಈ ಎಲ್ಲ ರಾಶಿಯವರಿಗೆ ಶುಭ ಫಲ

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ ತ್ರಯೋದಶಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today dina bhavishya dina panchanga
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (01-07-2023)

ಶ್ರೀ ಶಕೇ 1945, ಶೋಭಕೃತ್‌ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ

ತಿಥಿ: ತ್ರಯೋದಶಿ 23:06 ವಾರ: ಶನಿವಾರ
ನಕ್ಷತ್ರ: ಅನುರಾಧ 15:02 ಯೋಗ: ಶುಭ 22:42
ಕರಣ: ಕೌಲವ 12:16
ಅಮೃತಕಾಲ: ಬೆಳಗ್ಗೆ 05 ಗಂಟೆ 09 ನಿಮಿಷದಿಂದ ಬೆಳಗ್ಗೆ 06 ಗಂಟೆ 40 ನಿಮಿಷದವರೆಗೆ.
ಇಂದಿನ ವಿಶೇಷ: ಶನಿ ಪ್ರದೋಷ, ರಾಷ್ಟ್ರೀಯ ವೈದ್ಯರ ದಿನ, ಚಾರ್ಟರ್ಡ್‌ ಅಕೌಂಟೆಂಟ್‌ ದಿನ.

ಸೂರ್ಯೋದಯ : 05:57 ಸೂರ್ಯಾಸ್ತ : 06:50

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.0
0

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ಆತ್ಮವಿಶ್ವಾಸದ ಕೊರತೆಯಿಂದಾಗಿ ಕಾರ್ಯದಲ್ಲಿ ಮಂದಗತಿ. ಆರೋಗ್ಯ ಸಂಬಂಧಿ ಖರ್ಚು ಸಾಧ್ಯತೆ. ಕುಟುಂಬದ ಸದಸ್ಯರ ಸಂಪೂರ್ಣ ಬೆಂಬಲ ಸಿಗಲಿದೆ. ಅಪರೂಪದ ವ್ಯಕ್ತಿಗಳ ಪರಿಚಯದಿಂದಾಗಿ ಅನೇಕ ವಿಚಾರಗಳು ಮನಸ್ಸಿನ ಆಳಕ್ಕೆ ಇಳಿಯುವವು. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಹೂಡಿಕೆಯಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಆರ್ಥಿಕವಾಗಿ ಸದೃಢತೆ. ಅನೇಕ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವುದು ಉತ್ತಮ. ಅನಾವಶ್ಯಕವಾಗಿ ಕಾಲ ಹರಣಮಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಇಂದು ಸಂತೃಪ್ತ ಜೀವನ. ಕಾರ್ಯದಲ್ಲಿ ಯಶಸ್ಸು ಸಿಗುವುದು. ಯಾರನ್ನೂ ನಂಬಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಆಪ್ತ ಸ್ನೇಹಿತರೊಂದಿಗೆ ಮಾತು. ದಿನದ ಕೊನೆಯ ಭಾಗದಲ್ಲಿ ಮಾನಸಿಕವಾಗಿ ದುರ್ಬಲವಾಗುವ ಸಾಧ್ಯತೆ. ಮಕ್ಕಳ ಮೇಲೆ ಸಿಟ್ಟು ಮಾಡಿಕೊಳ್ಳಬಹುದು. ಆರ್ಥಿಕವಾಗಿ ಸಾಧಾರಣ ಫಲ. ಗುರುಗಳ ಅನುಗ್ರಹ ಪಡೆಯಿರಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಬೇರೆಯವರನ್ನು ಟೀಕೆ ಮಾಡುವ ಭರದಲ್ಲಿ ನೀವು ಟೀಕೆಗೆ ಒಳಗಾಗುವುದು ಬೇಡ. ಆಪ್ತರೊಂದಿಗೆ ಅತಿಯಾದ ಸಲುಗೆ ಒಳ್ಳೆಯದಲ್ಲ. ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ. ದಿನದ ಮಟ್ಟಿಗೆ ಖರ್ಚು. ಆತುರದ ಮಾತುಗಳಿಗೆ ನಿಯಂತ್ರಣ ಇರಲಿ. ಉದ್ಯೋಗಿಗಳಿಗೆ ಯಶಸ್ಸು. ಅತಿಥಿಗಳ ಆಗಮನದಿಂದ ಕಾರ್ಯ ವಿಳಂಬ. ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ.
ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಒತ್ತಡದಿಂದ ಹೊರಬಂದು ಉತ್ಸಾಹದ ಚಿಲುಮೆ ನೀವಾಗುವಿರಿ. ದೈಹಿಕವಾಗಿ ಮಾನಸಿಕವಾಗಿ ಆರೋಗ್ಯ ಉತ್ತಮ. ಹಣಕಾಸು, ಹೂಡಿಕೆ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ದಿಢೀರ ಧನಾಗಮನವಾಗಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಕೀರ್ತಿ ಸಿಗಲಿದೆ. ಉದ್ಯೋಗಿಗಳಿಗೆ ಹೊಸ ಅವಕಾಶಗಳ ಸೂಚನೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಬಹಳ ದಿನಗಳಿಂದ ಬಾರದೇ ಇರುವ ನಿಮ್ಮ ಹಣ ಮರಳುವ ಸಾಧ್ಯತೆ. ಆರೋಗ್ಯದ ಬಗೆಗೆ ತುಂಬಾ ಕಾಳಜಿ ವಹಿಸಿ. ದಿನದ ಮಟ್ಟಿಗೆ ಪ್ರಯಾಣ ಬೆಳೆಸುವ ಸಾಧ್ಯತೆಗಳಿವೆ. ಕುಟುಂಬದಲ್ಲಿ ಸಾಮರಸ್ಯ ಮೂಡಲಿದೆ. ಆಪ್ತರೊಂದಿಗೆ ಮಾತುಕತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅನಿವಾರ್ಯ ಕಾರಣಗಳಿಂದ ನೀವು ಇತರರೊಂದಿಗೆ ಜಗಳಕ್ಕೆ ಇಳಿಯುವ ಸಾಧ್ಯತೆ. ಆದಷ್ಟು ಮಾತಿನ ಮೇಲೆ ನಿಯಂತ್ರಣ ಇರಲಿ. ಕುಟುಂಬದ ಆಪ್ತರು, ಸ್ನೇಹಿತರಿಂದ ಉಡುಗೊರೆ ಸಿಗುವ ಸಾಧ್ಯತೆ. ಆರ್ಥಿಕವಾಗಿ ಪ್ರಗತಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಇಂದು ಮನರಂಜನೆಗಾಗಿ ಹೆಚ್ಚು ಮಹತ್ವ ಕೊಡುವ ಸಾಧ್ಯತೆ. ಆಪ್ತರು ಹಾಗೂ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸುನ್ನು ತಂದು ಕೊಡಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಯಾವೆಲ್ಲಾ ರಾಶಿಯವರು ಎಚ್ಚರಿಕೆಯಿಂದಿರಬೇಕು ಎಂಬುದನ್ನು ತಿಳಿಯಲು ಈ ವಿಡಿಯೋ ನೋಡಿ.
Horoscope Today

ಧನಸ್ಸು: ಬಹಳ ದಿನಗಳ ಕನಸು ನನಸಾಗಲಿದೆ. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಇಂದು ಸಬಲತೆ ಹೊಂದುವಿರಿ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಸಂತೋಷದ ಜೊತೆ ಜೊತೆಗೆ ನಿಮ್ಮನ್ನು ಯಾರಾದರೂ ಟೀಕಿಸುವ ಸಾಧ್ಯತೆ. ದಿನದ ಕೊನೆಯಲ್ಲಿ ಕೌಟುಂಬಿಕ ತಾಪತ್ರಯ ನಿಮ್ಮನ್ನು ನಿರಾಸೆಗೊಳಿಸಬಹುದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮಕರ: ಆರೋಗ್ಯ ದಿನದ ಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ, ಆದಷ್ಟು ಎಚ್ಚರಿಕೆ ಇರಲಿ. ಕುಟುಂಬದ ಸದಸ್ಯರ ಬೆಂಬಲ ನಿಮಗೆ ಪುಷ್ಟಿ ನೀಡಲಿದೆ. ಆರ್ಥಿಕವಾಗಿ ಬಲಗೊಳ್ಳುವಿರಿ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಒಂಟಿತನ ನಿಮ್ಮನ್ನು ಕಾಡಬಹುದು. ಕುಟುಂಬದ ಸದಸ್ಯರ ಅನಾರೋಗ್ಯದ ಕಾರಣಗಳಿಂದ ಖರ್ಚು ಸಾಧ್ಯತೆ. ಬಾಕಿ ಇರುವ ಕೆಲಸ ಕಾರ್ಯಗಳನ್ನು ಮುಂದೂಡುವುದು ಬೇಡ. ಅತಿಯಾದ ಆಲಸ್ಯದಿಂದ ಹೊರ ಬಂದು ಮಾಡುವ ಕೆಲಸದಲ್ಲಿ ತೊಡಗಿಸಿಕೊಳ್ಳುವುದು ಉತ್ತಮ.
ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಇದನ್ನೂ ಓದಿ : Mars Transit 2023 : ಜು.1ಕ್ಕೆ ಸಿಂಹ ರಾಶಿಗೆ ಮಂಗಳನ ಸಂಚಾರ; ಈ ಐದು ರಾಶಿಯವರಿಗೆ ಅದೃಷ್ಟವೋ ಅದೃಷ್ಟ!

Horoscope Today

ಮೀನ: ಭರವಸೆಯ ಬದುಕು ರೂಪುಗೊಳ್ಳಲಿದೆ. ಆಪ್ತರು ನೀಡುವ ಶುಭ ಸಂದೇಶ ನಿಮ್ಮನ್ನು ಹರ್ಷಿತರನ್ನಾಗಿ ಮಾಡುವುದು. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಉದ್ಯೊಗದಲ್ಲಿ ಹೊಸ ಭರವಸೆ ಮೂಡಲಿದೆ. ಆರ್ಥಿಕವಾಗಿ ಬಲಿಷ್ಠರಾಗುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Pooja Gandhi: ಮಳೆ ಹುಡುಗಿಗೆ ಮಂತ್ರ ಮಾಂಗಲ್ಯ; ಹೊಸ ಬಾಳಿಗೆ ಕಾಲಿಟ್ಟ ಪೂಜಾ ಗಾಂಧಿ

Pooja Gandhi: ಬೆಂಗಳೂರಿನ ಉದ್ಯಮಿ ವಿಜಯ್ ಘೋರ್ಪಡೆ ಅವರೊಂದಿಗೆ ನಟಿ ಪೂಜಾ ಗಾಂಧಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಚಿತ್ರ ರಂಗದ ಗಣ್ಯರು, ಅಭಿಮಾನಿಗಳು ನವದಂಪತಿಗೆ ಶುಭ ಹಾರೈಸಿದ್ದಾರೆ.

VISTARANEWS.COM


on

Pooja Gandhi and Vijay Ghorpade
Koo

ಬೆಂಗಳೂರು: ನಟಿ ಪೂಜಾ ಗಾಂಧಿ (Pooja Gandhi) ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉದ್ಯಮಿ ಹಾಗೂ ಬಹುಕಾಲದ ಗೆಳೆಯ ವಿಜಯ್ ಘೋರ್ಪಡೆ ಅವರನ್ನು ಮಳೆ ಹುಡುಗಿ ಮದುವೆಯಾಗಿದ್ದು, ಮಂತ್ರ ಮಾಂಗಲ್ಯ ಪದ್ಧತಿಯಲ್ಲಿ ಬಂಧು-ಮಿತ್ರರು, ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಸರಳವಾಗಿ ಬುಧವಾರ ವಿವಾಹವಾಗಿದ್ದಾರೆ.

ವಿವಾಹ ಸಮಾರಂಭದಲ್ಲಿ ನಿರ್ದೇಶಕ ಯೋಗರಾಜ್ ಭಟ್, ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ. ಸುರೇಶ್, ಸಾಹಿತಿ ಜಯಂತ್ ಕಾಯ್ಕಿಣಿ, ನಟಿ ಸುಧಾರಣಿ, ಶುಭಾ ಪೂಂಜಾ, ನಿರ್ದೇಶಕಿ ಸುಮನಾ ಕಿತ್ತೂರು ಮತ್ತಿತರರು ಭಾಗವಹಿಸಿ, ನವ ದಂಪತಿಗೆ ಶುಭ ಕೋರಿದರು.

ಮೂಲತಃ ಉತ್ತರ ಪ್ರದೇಶದವರಾದ ಪೂಜಾ ಗಾಂಧಿ ಕನ್ನಡ ಚಿತ್ರಗಳಲ್ಲಿ ಅಭಿನಯಿಸುತ್ತ ಬೆಂಗಳೂರಿನಲ್ಲೇ ಕೆಲವು ಸಮಯದಿಂದ ನೆಲೆಸಿದ್ದಾರೆ. ತಮ್ಮ ಕನ್ನಡ ಪ್ರೀತಿಯಿಂದಲೇ ಕನ್ನಡಿಗರ ಮನಸ್ಸು ಗೆದ್ದಿದ್ದಾರೆ. ಕನ್ನಡ ಮಾತನಾಡಲು ಅಷ್ಟೇ ಅಲ್ಲ ಓದಲು ಮತ್ತು ಬರೆಯಲು ಅವರು ಕಲಿತಿದ್ದು, ಮೆಚ್ಚುಗೆ ವ್ಯಕ್ತವಾಗಿದೆ.

ವಿಜಯ್ ಅವರೇ ಪೂಜಾ ಗಾಂಧಿಯವರಿಗೆ ಕನ್ನಡ ಕಲಿಸಿರುವುದಾಗಿ ಮಾಹಿತಿ ಇದೆ. ಪೂಜಾ ಗಾಂಧಿ ಹಾಗೂ ವಿಜಯ್ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಯಲ್ಲಿದ್ದರು. ಕನ್ನಡ ಕಲಿತು ಕನ್ನಡಿಗನನ್ನು ಮದುವೆಯಾಗುವ ಮೂಲಕ ಇದೀಗ ಕರ್ನಾಟಕದ ಸೊಸೆಯಾಗಿದ್ದಾರೆ. ಪೂಜಾ ಗಾಂಧಿ ಕನ್ನಡ ಕಲಿತಿರುವುದು ಮಾತ್ರವಲ್ಲ ಅವರ ತಾಯಿಗೂ ಕನ್ನಡ ಹೇಳಿ ಕೊಟ್ಟಿದ್ದಾರೆ ಎನ್ನುವುದು ವಿಶೇಷ. 2012ರಲ್ಲಿ ಪೂಜಾ ಗಾಂಧಿ ಅವರಿಗೆ ಉದ್ಯಮಿ ಆನಂದ್ ಗೌಡ ಜತೆ ನಿಶ್ಚಿತಾರ್ಥವಾಗಿತ್ತು. ನಂತರ ಅದು ಮುರಿದು ಬಿದ್ದಿತ್ತು. ಈಗ ವಿಜಯ್ ಘೋರ್ಪಡೆ ಜತೆ ವಿವಾಹವಾಗಿದೆ.

ಇದನ್ನೂ ಓದಿ | Actress Ramya: ಹುಟ್ಟುಹಬ್ಬದಂದು ನಾಯಿಮರಿಗಳೊಂದಿಗೆ ಕಾಲಕಳೆದ ಮೋಹಕ ತಾರೆ ರಮ್ಯಾ

ಹಿಂದಿ, ಬಂಗಾಳಿ ಚಿತ್ರಗಳಲ್ಲಿ ನಟಿಸುತ್ತಿದ್ದ ಪೂಜಾ ಗಾಂಧಿ 2006ರಲ್ಲಿ ತೆರೆಕಂಡ ʼಮುಂಗಾರು ಮಳೆʼ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟರು. ಯೋಗರಾಜ್‌ ಭಟ್‌ ನಿರ್ದೇಶನದ ಈ ಚಿತ್ರ ಕನ್ನಡದಲ್ಲಿ ದಾಖಲೆಯ ಕಲೆಕ್ಷನ್‌ ಮಾಡಿತ್ತು. ಗೋಲ್ಡನ್‌ ಸ್ಟಾರ್‌ ಗಣೇಶ್‌ ಮತ್ತು ಪೂಜಾ ಗಾಂಧಿ ಈ ಚಿತ್ರದ ಮೂಲಕ ಸ್ಟಾರ್‌ ಆಗಿ ಹೊರ ಹೊಮ್ಮಿದ್ದರು. ಬಳಿಕ ಪೂಜಾ ಗಾಂಧಿ ಪುನೀತ್‌ ರಾಜ್‌ ಕುಮಾರ್‌, ಯಶ್‌, ಉಪೇಂದ್ರ ಮುಂತಾದವರ ಸಿನಿಮಾಗಳಲ್ಲಿ ನಟಿಸಿ ಜನಪ್ರಿಯರಾಗಿದ್ದಾರೆ. ಜತೆಗೆ ತಮಿಳು, ತೆಲುಗು, ಮಲೆಯಾಳಂ ಚಿತ್ರಗಳಲ್ಲಿಯೂ ಅಭಿನಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕೋರ್ಟ್

ಆರೈಕೆ ಮಾಡದ ಮಗನಿಗೆ ತಾಯಿಯ ಫ್ಲ್ಯಾಟ್ ಖಾಲಿ ಮಾಡಲು ಬಾಂಬೆ ಹೈಕೋರ್ಟ್ ಆದೇಶ

Bombay High court: ಬಾಂಬೆ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ತಾಯಿಯನ್ನು ಆರೈಕೆ ಮಾಡದ ಮಗನಿಗೆ ತಾಯಿಯ ಫ್ಲ್ಯಾಟ್ ಖಾಲಿ ಮಾಡುವಂತೆ ಸೂಚಿಸಿದೆ.

VISTARANEWS.COM


on

Bombay High court orders to son to vacate his mother flat
Koo

ಮುಂಬೈ: ತಾಯಿಯನ್ನು (Mother) ಆರೈಕೆ ಮಾಡದ ಪುತ್ರನಿಗೆ, ತಾಯಿಯ ಫ್ಲ್ಯಾಟ್‌ ಖಾಲಿ (Flat Vacate) ಮಾಡುವಂತೆ ಬಾಂಬೆ ಹೈಕೋರ್ಟ್ (Bombay High Court) ಆದೇಶ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ನಾಗರಿಕ ನ್ಯಾಯಮಂಡಳಿಯ (senior citizen tribunal) ಆದೇಶವನ್ನು ಎತ್ತಿ ಹಿಡಿದಿರುವ ಬಾಂಬೆ ಹೈಕೋರ್ಟ್, ಪರೇಲ್‌ನಲ್ಲಿನ (Mumbai Parel) ಬಹುಮಹಡಿಯಲ್ಲಿರುವ ತನ್ನ ತಾಯಿಯ ಫ್ಲ್ಯಾಟ್ ಅನ್ನು ತೆರವು ಮಾಡುವಂತೆ ಮಗನಿಗೆ (Son) ಸ್ಪಷ್ಟವಾಗಿ ಸೂಚಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ನಾಗರಿಕ ನ್ಯಾಯಮಂಡಳಿ ತೀರ್ಪು ನೀಡಿ, ಭೋಯಿವಾಡದ ಸಂಪದಾ ಹೈಟ್ಸ್‌ನಲ್ಲಿರುವ ತನ್ನ ತಾಯಿಯ ಫ್ಲಾಟ್ ಅನ್ನು ಖಾಲಿ ಮಾಡುವಂತೆ ಸೂಚಿಸಿತ್ತು. ನ್ಯಾಯಮಂಡಳಿಯ ತೀರ್ಪನ್ನು ಬಾಂಬ್ ಹೈಕೋರ್ಟ್‌ನಲ್ಲಿ ಪುತ್ರ ಪ್ರಶ್ನಿಸಿದ್ದರು. ಅಂತಿಮವಾಗಿ ನವೆಂಬರ್ 9ರಂದು ತೀರ್ಪು ನೀಡಿದ ಬಾಂಬೆ ಹೈಕೋರ್ಟ್‌ನ ಜಸ್ಟೀಸ್ ಸಂದೀಪ್ ಮಾರ್ನೆ ಅವರು, ನ್ಯಾಯಮಂಡಳಿ ಆದೇಶವನ್ನು ಎತ್ತಿ ಹಿಡಿದರು.

ನಿಸ್ಸಂದೇಹವಾಗಿ, ಅನಾರೋಗ್ಯ ಪೀಡಿತ ತಾಯಿಯು ಫ್ಲಾಟ್ ನಂ.1301ರ ಮಾಲೀಕರಾಗಿದ್ದಾರೆ. ಅವರಿಗೆ ಬೇರೆ ಯಾವುದೇ ವಾಸಸ್ಥಳ ಇಲ್ಲ. ಫ್ಲಾಟ್‌ನಲ್ಲಿ ತನ್ನೊಂದಿಗೆ ಯಾರು ಇರಬೇಕು ಎಂಬುದನ್ನು ನಿರ್ಧರಿಸುವ ಹಕ್ಕು ಮತ್ತು ಅರ್ಹತೆ ತಾಯಿಗೆ ಇದೆ ಎಂದು ನ್ಯಾಯಮೂರ್ತಿ ಮಾರ್ನೆ ಅವರು ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ.

ತನಗೆ ವಾಸಿಸಲು ಬೇರೆ ಮನೆ ಇಲ್ಲ. ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಮಕ್ಕಳಿದ್ದಾರೆ. ಹಾಗಾಗಿ, ಫ್ಲ್ಯಾಟ್‌ನಲ್ಲಿ ವಾಸಿಸಲು ಅವಕಾಶ ನೀಡಬೇಕು ಎಂದು ಪುತ್ರನ ಪರ ವಕೀಲರು ವಾದಿಸಿದರು. ಅಲ್ಲದೇ, ಅನಾರೋಗ್ಯ ಪೀಡಿತ ತಾಯಿಯನ್ನು ಆರೈಕೆ ಮಾಡುತ್ತಿದ್ದೇನೆ. ಮುಂದೆಯೇ ಕೂಡ ಮಾಡುತ್ತೇನೆ ಎಂದು ಪುತ್ರ ಮನವಿ ಮಾಡಿಕೊಂಡರು.

ಆದರೆ, ಪುತ್ರನ ಈ ವಾದವನ್ನು ತಿರಸ್ಕರಿಸಿದ ತಾಯಿಯ ಪರ ವಕೀಲರು, ಶಹಾಪುರದಲ್ಲಿ ಒಂದು ಬೆಡ್‌ರೂಮ್‌-ಹಾಲ್‌-ಕಿಚನ್‌ ಫ್ಲ್ಯಾಟ್‌ ಖರೀದಿಸಿದ್ದಾಗಿ ನ್ಯಾಯಾಧಿಕರಣದ ಮುಂದೆ ಒಪ್ಪಿಕೊಂಡಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಇದಲ್ಲದೆ, ನ್ಯಾಯಮಂಡಳಿ ತನ್ನ ಆದೇಶವನ್ನು ನೀಡುವಾಗ, ಮಗ ಮದ್ಯವ್ಯಸನಿಯಾಗಿದ್ದು, ಆತ ತಾಯಿಯೊಂದಿಗೆ ಕೆಟ್ಟದಾಗಿ ವರ್ತಿಸುತ್ತಿದ್ದ ಎಂಬುದನ್ನು ಗಣನೆಗೆ ತೆಗೆದುಕೊಂಡಿತ್ತು. ಈ ಸಂಗತಿಯನ್ನು ಗಮನಿಸಿದ ಹೈಕೋರ್ಟ್, ತನಗೆ ಉಳಿದುಕೊಳ್ಳಲು ಬೇರೆ ಸ್ಥಳವಿಲ್ಲ ಎಂದು ಹೇಳುವ ಮೂಲಕ ಮಗ ವಾಸ್ತವಿಕವಾಗಿ ತಪ್ಪು ಹೇಳಿಕೆ ನೀಡಿದ್ದಾನೆ ಎಂದು ಆರೋಪಿಸಿತು.

ಮದ್ಯವ್ಯಸನಿಯಾಗಿರುವ ಪುತ್ರ, ತನ್ನ ತಾಯಿಯ ಖಾತೆಗಳಿಂದ ಹಣವನ್ನು ಡ್ರಾ ಮಾಡುತ್ತಿದ್ದಾನೆ. ಅಲ್ಲದೇ, ಅನಾರೋಗ್ಯಪೀಡಿತ ತಾಯಿಯನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾನೆ. ಹಾಗಾಗಿ, ಮನೆ ಖಾಲಿ ಮಾಡುವಂತೆ ಸೂಚಿಸಬೇಕು ಎಂದು ವಕೀಲರು ವಾದ ಮಂಡಿಸಿದರು. ಅಂತಿಮವಾಗಿ, ಕೋರ್ಟ್ ವಾದ ಮತ್ತು ಪ್ರತಿವಾದವನ್ನು ಆಲಿಸಿ ನ್ಯಾಯಮಂಡಳಿ ನೀಡಿದ್ದ ಆದೇಶವನ್ನು ಎತ್ತಿ ಹಿಡಿಯುವ ಮೂಲಕ, ಪ್ರಮುಖ ತೀರ್ಪು ನೀಡಿತು.

ಈ ಸುದ್ದಿಯನ್ನೂ ಓದಿ: ಶಾರ್ಟ್ ಸ್ಕರ್ಟ್ ಧರಿಸಿ ಡ್ಯಾನ್ಸ್‌ ಮಾಡುವುದು ಅಶ್ಲೀಲವಲ್ಲ ಎಂದ ಬಾಂಬೆ ಹೈಕೋರ್ಟ್

Continue Reading

ಕರ್ನಾಟಕ

Mohandas Pai : ಐಟಿ ಸಿಟಿ ಗರಿ ಉದುರೀತು ಎಂದ ಮೋಹನ್‌ ದಾಸ್‌ ಪೈ, ಪ್ರಿಯಾಂಕ್‌ ತಿರುಗೇಟು

Mohandas Pai : ಐಟಿ ಕಂಪನಿಗಳು ಹೈದರಾಬಾದ್‌ ನತ್ತ ಹೋಗುತ್ತಿವೆ, ಇದು ಐಟಿ ಹಬ್‌ ಖ್ಯಾತಿಯ ಬೆಂಗಳೂರಿಗೆ ಎಚ್ಚರಿಕೆ ಎಂದಿದ್ದಾರೆ ಉದ್ಯಮಿ ಟಿ.ವಿ ಮೋಹನದಾಸ್‌ ಪೈಕಿ. ಇದಕ್ಕೆ ಐಟಿ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ.

VISTARANEWS.COM


on

TV Mohandas Pai Priyank Kharge
Koo

ಬೆಂಗಳೂರು: ರಾಜ್ಯ ಸರ್ಕಾರ (State Government) ಹೀಗೇ ನಿರ್ಲಕ್ಷ್ಯ ಮಾಡುತ್ತಾ ಹೋದರೆ ಬೆಂಗಳೂರಿಗೆ ಇರುವ ಐಟಿ ನಗರಿ (IT City feather) ಎಂಬ ಗರಿಮೆಗೆ ಕುತ್ತು ಬಂದೀತು ಎಂದು ಹಿರಿಯ ಉದ್ಯಮಿ ಟಿ.ವಿ. ಮೋಹನ್‌ ದಾಸ್‌ ಪೈ (TV Mohandas Pai) ಅವರು ಚಾಟಿ ಏಟು ನೀಡಿದ್ದಾರೆ. ಆದರೆ, ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಐಟಿ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಅವರು ʻಗಾಳಿಯಲ್ಲಿ ಗುಂಡು ಹೊಡೆಯಬೇಡಿʼʼ ಎಂದಿದ್ದಾರೆ.

analyticsindiamag.com ಎಂಬ ವೆಬ್‌ಸೈಟ್‌ ಪ್ರಕಟಿಸಿದ Will Hyderabad Dethrone Bangalore in the IT Hub Race? (ಐಟಿ ಹಬ್‌ ಪೈಪೋಟಿಯಲ್ಲಿ ಹೈದರಾಬಾದ್‌ ಬೆಂಗಳೂರನ್ನು ಅಗ್ರಪಟ್ಟದಿಂದ ಕಿತ್ತೆಸೆಯಬಹುದೇ?) ಎಂಬ ವರದಿಯನ್ನು ಮುಂದಿಟ್ಟುಕೊಂಡು ಟಿ.ವಿ. ಮೋಹನ್‌ದಾಸ್‌ ಪೈ ಅವರು ಟ್ವೀಟ್‌ ಒಂದನ್ನು ಮಾಡಿದ್ದಾರೆ. ವೆಬ್‌ಸೈಟ್‌ ವರದಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಟ್ಯಾಗ್‌ ಮಾಡಿದ ಟ್ವೀಟ್‌ನಲ್ಲಿ Will Hyderabad Dethrone Bangalore’s IT Status? continued neglect of Bengaluru by successive govts over last 10 years has led to this. Hope govt shows more energy to improve city ಎಂದು ಬರೆದಿದ್ದಾರೆ. ಅಂದರೆ, ಐಟಿ ಕ್ಷೇತ್ರದ ಅಗ್ರಗಣ್ಯ ಎಂಬ ಬೆಂಗಳೂರಿನ ಸ್ಥಾನಮಾನವನ್ನು ಹೈದರಾಬಾದ್‌ ಕಿತ್ತು ಹಾಕಬಹುದೇ? ಇದಕ್ಕೆ ಕಾರಣವಾಗಿರುವುದು ಕಳೆದ ಹತ್ತು ವರ್ಷಗಳಲ್ಲಿ ಅಧಿಕಾರ ನಡೆಸಿದ ಸರ್ಕಾರಗಳು ವಹಿಸಿದ ದಿವ್ಯ ನಿರ್ಲಕ್ಷ್ಯ. ಸರ್ಕಾರ ನಗರದ ಅಭಿವೃದ್ಧಿಗಾಗಿ ಹೆಚ್ಚು ಶಕ್ತಿಯನ್ನು ವಿನಿಯೋಗಿಸುತ್ತದೆ ಎಂದು ಭಾವಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಹಿರಿಯ ಉದ್ಯಮಿ ಆನಂದ ಮಹೇಂದ್ರ ಅವರು ಇತ್ತೀಚೆಗೆ ಒಂದು ಮಾತು ಹೇಳಿದ್ದರು: ಗೂಗಲ್‌ ಕಂಪನಿಯು ಹೈದರಾಬಾದ್‌ನಲ್ಲಿ ತನ್ನ ದೊಡ್ಡ ಕಚೇರಿಯನ್ನು ಸ್ಥಾಪಿಸಲಿದೆ. ಅಮೆರಿಕದ ಹೊರಗಡೆ ಅತಿ ದೊಡ್ಡ ಕಚೇರಿಯನ್ನು ನಿರ್ಮಿಸಲು ಮುಂದಾಗಿರುವುದು ಒಂದು ಗೂಗಲ್‌ ಭೌಗೋಳಿಕ ರಾಜಕೀಯ ಪ್ರಯತ್ನ. ಈ ಕ್ರಮವು ಭಾರತೀಯ ಟೆಕ್‌ ವಾತಾವರಣಕ್ಕೆ ಒಂದು ಗುಡ್‌ ನ್ಯೂಸ್‌. ಆದರೆ, ಗೂಗಲ್‌ ಸಿಲಿಕಾನ್‌ ವ್ಯಾಲಿ ಎಂದೇ ಹೆಸರಾಗಿರುವ ಭಾರತದ ನಿರ್ವಿವಾದಿತ ಐಟಿ ರಾಜಧಾನಿಯಾಗಿರುವ ಬೆಂಗಳೂರನ್ನು ಬಿಟ್ಟು ಹೈದರಾಬಾದ್‌ನ್ನು ಆಯ್ಕೆ ಮಾಡಿರುವುದು ಏನೋ ಅಸಂಬದ್ಧ ಅನಿಸುತ್ತದೆ.

ಈ ಅಂಶಗಳನ್ನು ಉಲ್ಲೇಖಿಸಿ ಮಾಡಿರುವ ವರದಿಗೆ ಹೈದರಾಬಾದ್‌ ಬೆಂಗಳೂರನ್ನು ಅಗ್ರ ಪಟ್ಟದಿಂದ ಕಿತ್ತು ಹಾಕಬಹುದೇ ಎಂಬ ಪ್ರಶ್ನಾರ್ಥಕ ಚಿಹ್ನೆಯೊಂದಿಗೆ ವರದಿ ಮಾಡಿದೆ.

ಟಿ.ವಿ. ಮೋಹನ್‌ ದಾಸ್‌ ಪೈ ಅವರು ಈ ಅಂಶವನ್ನು ಇಟ್ಟುಕೊಂಡು ಟ್ವೀಟ್‌ ಮಾಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಚಾಟಿ ಬೀಸುತ್ತಿರುವುದು ಇದು ಮೊದಲೇನಲ್ಲ. ಹಿಂದೆ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗಲೂ ಅವರು ಬೆಂಗಳೂರು ನಗರದ ರಸ್ತೆಗಳ ವಿಚಾರದಲ್ಲಿ ಆಕ್ಷೇಪ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಗಮನವನ್ನು ಸೆಳೆದಿದ್ದರು.

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯ ಸಂದರ್ಭದಲ್ಲಿ ಕೆಲವು ಐಟಿ ಕಂಪನಿಗೆ ನೀರು ನುಗ್ಗಿದಾಗಲೂ ಮೋಹನ್‌ ದಾಸ್‌ ಪೈ ಅವರು ಹೀಗೇ ಆದರೆ ಇಲ್ಲಿನ ಕಂಪನಿಗಳು ವಲಸೆ ಹೋಗುವ ಸಾಧ್ಯತೆಗಳಿವೆ ಎಂದಿದ್ದರು. ಈ ನಡುವೆ ಅವರ ಮಾತಿಗೆ ಪೂರಕವಾಗಿ ಬೆಂಗಳೂರಿನಲ್ಲಿ ಪ್ರಾರಂಭವಾಗಬೇಕಿದ್ದ ಕೆಲ ಐಟಿ ಕಂಪನಿ ಹೈದರಾಬಾದ್ ಗೆ ಶಿಫ್ಟ್ ಆಗುತ್ತಿವೆ ಎಂಬ ಮಾಹಿತಿಯೂ ಇದೆ. ಈ ಬಗ್ಗೆ ಐಟಿ ಕಂಪನಿಗಳು ಹಲವು ಬಾರಿ ಸರ್ಕಾರಕ್ಕೆ ಮಾಹಿತಿ ನೀಡಿವೆ ಎನ್ನಲಾಗಿದೆ. ಇದನ್ನು ಬಳಸಿಕೊಂಡು ಮೋಹನ್‌ ದಾಸ್‌ ಪೈ ಅವರು ಸರ್ಕಾರಕ್ಕೆ ಮಾರ್ಮಿಕವಾಗಿ ಕುಟುಕಿದ್ದಾರೆ.

ರಾಜ್ಯ ವಿರೋಧಿ ಹೇಳಿಕೆ ಸಲ್ಲ: ಮೋಹನ್‌ದಾಸ್‌ ಪೈಗೆ ಪ್ರಿಯಾಂಕ್‌ ತಿರುಗೇಟು

ಮೋಹನ್ ದಾಸ್ ಪೈ ಅವರು ಮಾಡಿರುವ ಟ್ವೀಟ್‌ಗೆ ಮಾಹಿತಿ ಮತ್ತು ತಂತ್ರಜ್ಞಾನ ಖಾತೆ ಸಚಿವ ಪ್ರಿಯಾಂಕ್‌ ಖರ್ಗೆ ಅವರು ತಿರುಗೇಟು ನೀಡಿದ್ದಾರೆ.

ʻʻಮೋಹನ್ ದಾಸ್ ಪೈ ಅವರಿಗೆ ಮಾಹಿತಿ ಕೊರತೆ ಇದೆ. ಒಂದೇ ಒಂದು ಸಿಂಗಲ್ ಕಂಪನಿ ಕರ್ನಾಟಕ ಬಿಟ್ಟು ಹೋಗಿಲ್ಲ. ಕೆಲವರಿಗೆ ಕರ್ನಾಟಕ ವಿರೋಧಿ ಹೇಳಿಕೆ ಕೊಡೋದು ಹ್ಯಾಬಿಟ್ ಆಗಿದೆ. ಇದನ್ನು ಪದೇಪದೆ ಮಾಡುವುದು ಸರಿಯಲ್ಲ. ಅವರು ಒಂದೇ ಒಂದು ಕಂಪನಿಯ ಉದಾಹರಣೆ ನೀಡಲಿ ನೋಡೋಣ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾಕುವುದು ಬೇಡʼʼ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ʻʻಇದೇ ಮೋಹನ್ ದಾಸ್ ಪೈ ಬೇರೆ ಬೇರೆ ರಾಜ್ಯಗಳ ಕಂಪನಿಗಳಿಗೆ ಬಂಡವಾಳ ಹಾಕುವುದಿಲ್ವಾ? ಅವರು ಡೈವರ್ಸಿಫಿಕೇಷನ್ ಮಾಡಿದ್ರೆ ಸರಿ, ಬೇರೆಯವರು ಮಾಡಿದ್ರೆ ತಪ್ಪಾ? ಅವರು ಕನ್ನಡಿಗರ ಪರವಾಗಿ ಮಾತನಾಡಬೇಕೇ ಹೊರತು ಈ ರೀತಿ ಮಾತನಾಡಬಾರದುʼʼ ಎಂದು ಹೇಳಿದ್ದಾರೆ ಪ್ರಿಯಾಂಕ್‌ ಖರ್ಗೆ.

ಇವರೇ ಅಲ್ವಾ ಎಲ್ಲ ವಿಷನ್ ಗ್ರೂಪ್‌ಗಳಲ್ಲಿ ಇದ್ದವರು? ಎಂದು ಕೇಳಿರುವ ಪ್ರಿಯಾಂಕ್‌ ಖರ್ಗೆ, ಫಿಲಿಪ್ಸ್ ಇನೊವೇಶನ್ ರಾಜ್ಯಕ್ಕೆ ಬಂದಾಗ ಇವರು ಬೆನ್ನು ತಟ್ಟಿದ್ರಾ ಎಂದು ಪ್ರಶ್ನೆ ಮಾಡಿದ್ದಾರೆ.

ʻʻಸಕಾರಾತ್ಮಕವಾಗಿ ಎಲ್ಲರ ಅಭಿಪ್ರಾಯ ಸಂಗ್ರಹ ಮಾಡ್ತೇವೆ. ಅವರ ಮಾತುಗಳಿಂದ ನಮಗೆ ರಾಜ್ಯಕ್ಕೆ ಬಂಡವಾಳ ಬರುತ್ತದೆ ಎಂದು ಭಾವಿಸುತ್ತೇವೆ. ಆದರೆ, ಪದೇಪದೆ ಯಾಕೆ ಹೀಗೆ ನೆಗೆಟಿವ್ ಆಗಿ ಮಾತನಾಡ್ತಾರೆ ಗೊತ್ತಿಲ್ಲʼʼ ಎಂದು ಹೇಳಿರುವ ಪ್ರಿಯಾಂಕ್‌ ಖರ್ಗೆ, ಯಾವ ಬಂಡವಾಳ ಕೂಡ ರಾಜ್ಯದಿಂದ ವಾಪಸ್ ಹೊರಗಡೆ ಹೋಗಿಲ್ಲ ಎಂದಿದ್ದಾರೆ.

ʻʻಸರ್ಕಾರಕ್ಕೆ ಬ್ಲ್ಯಾಕ್ ಮೇಲ್ ಮಾಡುವಂತ ವ್ಯಕ್ತಿ ಅವರಲ್ಲ. ಆದರೆ ಪದೇ ಪದೇ ಕರ್ನಾಟಕ ವಿರೋಧಿ ನಿಲುವು ತಾಳಬಾರದುʼʼ ಎಂದು ಎಚ್ಚರಿಕೆಯ ಧ್ವನಿಯಲ್ಲಿ ಹೇಳಿದ್ದಾರೆ.

ಮೂಲಸೌಕರ್ಯ ಕೊಡಲು ಸರ್ಕಾರ ವಿಫಲ ಎಂದ ಅಶ್ವತ್ಥನಾರಾಯಣ

ಈ ನಡುವೆ, ಮೋಹನ್ ದಾಸ್ ಪೈ ಟ್ವೀಟ್‌ ಅನ್ನು ಸಮರ್ಥಿಸಿ ಮಾತನಾಡಿರುವ ಮಾಜಿ ಐಟಿಬಿಟಿ ಸಚಿವ ಅಶ್ವಥ್ ನಾರಾಯಣ್ ಅವರು, ಎಲ್ಲಾ ಆವಿಷ್ಕಾರವಂತರು, ತಂತ್ರಜ್ಞಾನದವರು ಮತ್ತು ಉದ್ಯಮಶೀಲ ಇವರೆಲ್ಲರಿಗೂ ಬೆಂಗಳೂರು ಬೇಕು. ಆದರೆ, ಮೂಲಭೂತ ಸೌಕರ್ಯಗಳ ಕೊಡುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದರು.

ʻʻಭ್ರಷ್ಟಾಚಾರ ಹೆಚ್ಚುತ್ತಿದೆ. ಬಿಲ್ಡರ್ ಗಳು ಬಿಲ್ಡಿಂಗ್ ಕಟ್ಟಲು ತಯಾರಿಲ್ಲ. ಅವರಿಗೆ ಸಿಗುವ ಮಾರ್ಜಿನ್‌ ಹಣವನ್ನೂ ಸೇರಿಸಿ ಲಂಚ ಕೊಡುವ ಪರಿಸ್ಥಿತಿ ಇದೆ. ಹಾಗಾಗಿ ಎಲ್ಲರಿಗೂ ಹೈದರಾಬಾದ್ ಆಟ್ರಾಕ್ಷನ್ ಆಗುತ್ತದೆ. ಹೈದರಾಬಾದ್ ನಮ್ಮ ವ್ಯಾಪಾರಕ್ಕೆ ಉತ್ತಮವಾಗಿರುವ ಸ್ಥಳ ಎಂದು ಅವರಿಗೆ ಅನಿಸುತ್ತದೆʼʼ ಎಂದಿದ್ದಾರೆ ಅಶ್ವತ್ಥ್‌ ನಾರಾಯಣ್‌.

ʻʻಏನೂ ಮಾಡಲಿಲ್ಲ ಅಂದ್ರೂ ಬೆಂಗಳೂರಿಗೆ ಬರ್ತಾರೆ ಎಂಬ ಧೋರಣೆ ಬೆಂಗಳೂರಿಗೆ ಕಂಟಕವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ , ಅವರು ಸರ್ಕಾರ ಸಚಿವರು ಎಚ್ಚೆತ್ತುಕೊಳ್ಳಬೇಕಾಗಿದೆʼʼ ಎಂದು ಅವರು ಹೇಳಿದರು.

Continue Reading

ದೇಶ

Physical Abuse : ನೀಚ ಕೃತ್ಯ; ನರ್ಸರಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸ್ಕೂಲ್ ವ್ಯಾನ್ ಡ್ರೈವರ್​

ಮಂಗಳವಾರ ಶಾಲೆ ಮುಗಿಸಿ ವಿದ್ಯಾರ್ಥಿಗಳನ್ನು ಮನೆಗೆ ಡ್ರಾಪ್ ಮಾಡುತ್ತಿದ್ದಾಗ ಚಾಲಕ ದುಷ್ಕೃತ್ಯ ಎಸಗಿದ್ದಾನೆ.

VISTARANEWS.COM


on

physical abuse
Koo

ಪಟನಾ: ಬಿಹಾರದ ಬೇಗುಸರಾಯ್ನಲ್ಲಿ ನರ್ಸರಿ ತರಗತಿಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಶಾಲಾ ವ್ಯಾನ್ ಚಾಲಕ ಅತ್ಯಾಚಾರ ಎಸಗಿದ್ದಾನೆ. ಘಟನೆ ಬಳಿಕ ಉದ್ವಿಗ್ನಗೊಂಡ ಗ್ರಾಮಸ್ಥರು ಚಾಲಕನನ್ನು ಹಿಡಿದು ಥಳಿಸಿ ವ್ಯಾನ್​ಗೆ ಬೆಂಕಿ ಹಂಚಿ ಸುಟ್ಟು ಹಾಕಿದ್ದಾರೆ.

ಮಂಗಳವಾರ ಸಂಜೆ ಶಾಲೆ ಮುಗಿಸಿ ವಿದ್ಯಾರ್ಥಿಗಳನ್ನು ಮನೆಗೆ ಡ್ರಾಪ್ ಮಾಡುವ ವೇಳೆ ಚಾಲಕ ಈ ಕುಕೃತ್ಯ ಎಸಗಿದ್ದಾನೆ. ವ್ಯಾನ್ ನಲ್ಲಿ ಇಬ್ಬರು ನರ್ಸರಿ ವಿದ್ಯಾರ್ಥಿಗಳು ಮಾತ್ರ ಉಳಿದಿದ್ದಾಗ, ಆರೋಪಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಕ್ಕಳು ಮನೆಗೆ ತಲುಪಿದ ನಂತರ, ಕುಟುಂಬ ಸದಸ್ಯರು ಗ್ರಾಮಸ್ಥರ ಸಹಾಯದಿಂದ ಚಾಲಕನನ್ನು ಥಳಿಸಿ ಶಾಲಾ ವ್ಯಾನ್ ಗೆ ಬೆಂಕಿ ಹಚ್ಚಿದ್ದಾರೆ.

ಆರೋಪಿ ಚಾಲಕನನ್ನು ಬಂಧಿಸಲಾಗಿದ್ದು, ಪೊಲೀಸರು ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ ಮತ್ತು ಪುರಾವೆಗಳನ್ನು ಸಂಗ್ರಹಿಸಲು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಮಕ್ಕಳಿಗೆ ಬೇಗುಸರಾಯ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕ ಕಳೆದ ಮೂರು ವರ್ಷಗಳಿಂದ ಖಾಸಗಿ ಶಾಲೆಯ ವ್ಯಾನ್ ಓಡಿಸುತ್ತಿದ್ದ ಎನ್ನಲಾಗಿದೆ.

ಘಟನೆಯ ಬಗ್ಗೆ ವಿದ್ಯಾರ್ಥಿಗಳ ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರಲ್ಲಿ ಆಕ್ರೋಶವಿದೆ ಮತ್ತು ಅವರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ಬೆಗುಸರಾಯ್ ಡಿಎಸ್ಪಿ ಅಮಿತ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ : Escape Drama : ಮಕ್ಕಳನ್ನು ಬಿಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ನಾಟಕ ಆಡಿದ ಮಹಿಳೆ!

142 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಿನ್ಸಿಪಾಲ್‌ ವಜಾ, ಮಕ್ಕಳ ಹೋರಾಟ ಯಶಸ್ವಿ

ಪಾಪಿ ಪ್ರಿನ್ಸಿಪಾಲ್‌ (principal) ವಿರುದ್ಧ ವಿದ್ಯಾರ್ಥಿನಿಯರ ಹೋರಾಟ ಯಶಸ್ವಿಯಾಗಿದೆ. 142 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ (physical abuse, sexual harassment) ನೀಡಿದ ಕಿರಾತಕ ಪ್ರಾಂಶುಪಾಲನಿಗೆ ಕೆಲಸದಿಂದ ಗೇಟ್‌ಪಾಸ್‌ ನೀಡಲಾಗಿದೆ. ಈತನನ್ನು ಬಂಧಿಸಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುತ್ತಿದೆ.

ಹರಿಯಾಣದ ಜಿಂದ್ ಜಿಲ್ಲೆಯ ಬಾಲಕಿಯರ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯ ಪ್ರಾಂಶುಪಾಲ ಕರ್ತಾರ್ ಸಿಂಗ್ ಈ ಕೃತ್ಯ ಎಸಗಿದವನು. ಈತನನ್ನು ಸರ್ಕಾರ ಮಂಗಳವಾರ ಸೇವೆಯಿಂದ ವಜಾಗೊಳಿಸಿದೆ. ನವೆಂಬರ್ 4ರಂದು ಪೊಲೀಸರು ಆರೋಪಿ ಕರ್ತಾರ್ ಸಿಂಗ್‌ನನ್ನು ಬಂಧಿಸಿದ್ದು, ಅವನೀಗ ಜಿಂದ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಈತನ ಕೃತ್ಯಗಳ ಬಗ್ಗೆ ವಿದ್ಯಾರ್ಥಿನಿಯರೇ ಮೊದಲು ಸಂಘಟಿತರಾಗಿ ಹೋರಾಟಕ್ಕಿಳಿದು ಪೊಲೀಸರ, ರಾಷ್ಟ್ರಪತಿಗಳ ಗಮನಕ್ಕೆ ತಂದಿದ್ದರು.

ಉಚ್ಚಾನಾ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಗುಲ್ಜಾರ್ ಮಲಿಕ್ ನೇತೃತ್ವದ ಸಮಿತಿಯ ತನಿಖಾ ವರದಿಯ ಮೇಲೆ ಕಾರ್ಯನಿರ್ವಹಿಸಿದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು, ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲ ತಪ್ಪಿತಸ್ಥನೆಂದು ಕಂಡುಬಂದಿರುವುದರಿಂದ, ಆತನನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸಿದ್ದಾರೆ.

ಸಂವಿಧಾನದ 311 (2) (ಬಿ) ಅಡಿಯಲ್ಲಿ ವಜಾ ಆದೇಶ ನೀಡಲಾಗಿದೆ. ಇದು ಕೇಂದ್ರ ಅಥವಾ ರಾಜ್ಯ ಸರ್ಕಾರದ ಅಡಿಯಲ್ಲಿ ಸಿವಿಲ್ ಉದ್ಯೋಗದಲ್ಲಿರುವ ವ್ಯಕ್ತಿಗಳನ್ನು ಇಲಾಖಾ ವಿಚಾರಣೆ ನಡೆಸದೆ ವಜಾಗೊಳಿಸಲು, ತೆಗೆದುಹಾಕಲು ಅಥವಾ ಹಿಂಬಡ್ತಿ ನೀಡಲು ಸಕ್ಷಮ ಪ್ರಾಧಿಕಾರಕ್ಕೆ ಅಧಿಕಾರ ನೀಡುತ್ತದೆ.

ಉಚ್ಚಾನಾ ಮ್ಯಾಜಿಸ್ಟ್ರೇಟ್ ನೇತೃತ್ವದ ಪ್ರಕರಣದ ವಿಚಾರಣಾ ಸಮಿತಿಯು 390 ವಿದ್ಯಾರ್ಥಿಗಳೊಂದಿಗೆ ಮಾತನಾಡಿದ್ದು, ಅದರಲ್ಲಿ 142 ವಿದ್ಯಾರ್ಥಿನಿಯರು ಸಿಂಗ್ ವಿರುದ್ಧ ಸಾಕ್ಷ್ಯ ನುಡಿದಿದ್ದಾರೆ ಎಂದು ಜಿಂದ್ ಜಿಲ್ಲಾಧಿಕಾರಿ ಮೊಹಮ್ಮದ್ ಇಮ್ರಾನ್ ರಜಾ ಹೇಳಿದ್ದಾರೆ. ಮೊದಲಿಗೆ ಈತ 60 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಮಾತುಗಳು ಕೇಳಿಬಂದಿದ್ದವು. ತನಿಖೆಯ ವೇಳೆ ಆತ ಸುಮಾರು 142 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬುದು ಬಯಲಾಯಿತು. ಅವನಿಗೆ 56 ವರ್ಷ.

ಪ್ರಾಂಶುಪಾಲ ಲೈಂಗಿಕ ಕಿರುಕುಳ ನೀಡುತ್ತಿದ್ದು, ಆತನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಶಾಲೆಯ ವಿದ್ಯಾರ್ಥಿನಿಯರೇ ಹೋರಾಟ ಆರಂಭಿಸಿದ್ದರು. ಅವರು ಕಳೆದ ಆಗಸ್ಟ್‌ 31ರಂದು ಸಹಿ ಹಾಕಿರುವ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು, ಹರಿಯಾಣ ರಾಜ್ಯಪಾಲ, ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಕಳುಹಿಸಿದ್ದರು. ಇದಾದ ಬಳಿಕ ಶಾಲೆಯ ಪ್ರಾಂಶುಪಾಲನ ವಿರುದ್ಧ ಪ್ರಕರಣ ದಾಖಲಾಗಿತ್ತು. ಕೊನೆಗೆ ಆತನನ್ನು ಬಂಧಿಸಲಾಗಿದ್ದು, ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ವಿದ್ಯಾರ್ಥಿನಿಯರು, ಅವರ ಪೋಷಕರು ಆಗ್ರಹಿಸಿದ್ದಾರೆ.

Continue Reading
Advertisement
Task force committee meeting at Kottur
ವಿಜಯನಗರ3 mins ago

Vijayanagara News: ಮೂಲ ಸೌಕರ್ಯಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ: ಶಾಸಕ ನೇಮಿರಾಜ ನಾಯ್ಕ

Pooja Gandhi and Vijay Ghorpade
ಕರ್ನಾಟಕ7 mins ago

Pooja Gandhi: ಮಳೆ ಹುಡುಗಿಗೆ ಮಂತ್ರ ಮಾಂಗಲ್ಯ; ಹೊಸ ಬಾಳಿಗೆ ಕಾಲಿಟ್ಟ ಪೂಜಾ ಗಾಂಧಿ

Bombay High court orders to son to vacate his mother flat
ಕೋರ್ಟ್19 mins ago

ಆರೈಕೆ ಮಾಡದ ಮಗನಿಗೆ ತಾಯಿಯ ಫ್ಲ್ಯಾಟ್ ಖಾಲಿ ಮಾಡಲು ಬಾಂಬೆ ಹೈಕೋರ್ಟ್ ಆದೇಶ

TV Mohandas Pai Priyank Kharge
ಕರ್ನಾಟಕ28 mins ago

Mohandas Pai : ಐಟಿ ಸಿಟಿ ಗರಿ ಉದುರೀತು ಎಂದ ಮೋಹನ್‌ ದಾಸ್‌ ಪೈ, ಪ್ರಿಯಾಂಕ್‌ ತಿರುಗೇಟು

physical abuse
ದೇಶ46 mins ago

Physical Abuse : ನೀಚ ಕೃತ್ಯ; ನರ್ಸರಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸ್ಕೂಲ್ ವ್ಯಾನ್ ಡ್ರೈವರ್​

peace accord between Manipur oldest armed group UNLF and Government
ದೇಶ56 mins ago

ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಮಣಿಪುರದ ಹಳೆ ಬಂಡುಕೋರ ಗುಂಪು ಯುಎನ್ಎಲ್ಎಫ್!

Gauvarav Yatra
ದೇಶ1 hour ago

Indian Railways : ಭಾರತ ಗೌರವ ಯಾತ್ರಾ ರೈಲಿನಲ್ಲಿ ಕಲುಷಿತ ಆಹಾರ ಸೇವಿಸಿ 90 ಮಂದಿ ಅಸ್ವಸ್ಥ

Actress Ramya
ಕರ್ನಾಟಕ1 hour ago

Actress Ramya: ಹುಟ್ಟುಹಬ್ಬದಂದು ನಾಯಿಮರಿಗಳೊಂದಿಗೆ ಕಾಲಕಳೆದ ಮೋಹಕ ತಾರೆ ರಮ್ಯಾ

fight between Couple in air and Lufthansa flight was diverted to Delhi and Viral News
ದೇಶ1 hour ago

ಗಂಡ-ಹೆಂಡತಿ ಜಗಳ ವಿಮಾನ ಹತ್ತಿದ್ರೂ ಮುಗಿಲಿಲ್ಲ! ಆ ಮೇಲೆ ಏನಾಯ್ತು?

life certificate
ಉದ್ಯೋಗ2 hours ago

ಜೀವನ ಪ್ರಮಾಣ ಪತ್ರ ಇನ್ನೂ ಸಲ್ಲಿಸಿಲ್ಲವೇ? ನಾಳೆಯೇ ಕೊನೇ ದಿನ! ಇಲ್ದಿದ್ರೆ ಸಿಗಲ್ಲ ಪೆನ್ಶನ್

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ16 hours ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ2 days ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ2 days ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ3 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ3 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

ಟ್ರೆಂಡಿಂಗ್‌